ಭಾರತದಲ್ಲಿ ಜನಿಸುತ್ತಿದ್ದರೆ ಸಾವಿರ ವಿಕೆಟ್​ ಪಡೆಯುತ್ತಿದ್ದೆ; ಪಾಕ್​ ಆಟಗಾರನ ಅಳಲು - Vistara News

ಕ್ರಿಕೆಟ್

ಭಾರತದಲ್ಲಿ ಜನಿಸುತ್ತಿದ್ದರೆ ಸಾವಿರ ವಿಕೆಟ್​ ಪಡೆಯುತ್ತಿದ್ದೆ; ಪಾಕ್​ ಆಟಗಾರನ ಅಳಲು

ಭಾರತದಲ್ಲಿ ಜನಿಸಿ ಭಾರತ ಪರ ಆಡುತ್ತಿದ್ದರೆ ನನಗೆ ಈ ಸ್ಥಿತಿ ಬರುತ್ತಿರಲಿಲ್ಲ. ನಾನು 1 ಸಾವಿರ ವಿಕೆಟ್​ ಪಡೆಯುತ್ತಿದ್ದೆ ಎಂದು ಪಾಕ್​ ಮಾಜಿ ಸ್ಪಿನ್ನರ್‌ ಸಯೀದ್‌ ಅಜ್ಮಲ್‌ ಹೇಳಿದ್ದಾರೆ.

VISTARANEWS.COM


on

saeed ajmal former cricketer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಒಂದು ಕಾಲದಲ್ಲಿ ವಿಶ್ವದ ನಂ.1 ಬೌಲರ್​ ಪಟ್ಟ ಅಂಕರಿಸಿದ್ದ ಪಾಕಿಸ್ತಾನದ ಮ್ಯಾಚ್‌ ವಿನ್ನಿಂಗ್‌ ಬೌಲರ್‌, ಮಿಸ್ಟರಿ ಸ್ಪಿನ್ನರ್‌ ಸಯೀದ್‌ ಅಜ್ಮಲ್‌​(Saeed Ajmal) ಅವರು ತಮ್ಮ ವಿರುದ್ಧ ನಡೆಸಿದ ಷಡ್ಯಂತರದ ಬಗ್ಗೆ ಬೇಸರ ಹೊರಹಾಕಿದ್ದಾರೆ. ಭಾರತದಲ್ಲಿ ಜನಿಸುತ್ತಿದ್ದರೆ ಸಾವಿರ ವಿಕೆಟ್​ ಪಡೆಯುತ್ತಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ(pakistan cricket) ಕಂಡ ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿರುವ ಸಯೀದ್‌ ಅಜ್ಮಲ್‌, ಬೌಲಿಂಗ್‌ ಆ್ಯಕ್ಷನ್‌ ವಿವಾದದಲ್ಲಿ ಸಿಲುಕಿದ ಬಳಿಕ ನೈಜ ಚಾರ್ಮ್ ಕಳೆದುಕೊಂಡಿದ್ದರು. 2014ರಲ್ಲಿ ಅವರು ಮೊದಲ ಬಾರಿಗೆ ಆ್ಯಕ್ಷನ್‌ ಸುಳಿಗೆ ಸಿಲುಕಿದರು. ಬಳಿಕ ಪಾಕಿಸ್ತಾನದ ಖ್ಯಾತ ಸ್ಪಿನ್ನರ್‌ ಸಕ್ಲೇನ್‌ ಮುಷ್ತಾಕ್‌ ಮಾರ್ಗದರ್ಶನದಲ್ಲಿ ಬೌಲಿಂಗ್‌ ಶೈಲಿಯನ್ನು ಸರಿಪಡಿಸಿಕೊಂಡರೂ ಮೊದಲಿನಂತೆ ವಿಕೆಟ್‌ ಕೀಳಲು ಅವರಿಂದ ಸಾಧ್ಯವಾಗಲಿಲ್ಲ. ಇದಾದ ಬಳಿಕ ಅವರಿಗೆ ತಂಡದಲ್ಲಿ ಅಷ್ಟಾಗಿ ಅವಕಾಶವು ಲಭಿಸಿರಲಿಲ್ಲ. ಇದೇ ಬೇಸರದಲ್ಲಿ ಅವರು ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ತಮ್ಮ ವಿರುದ್ಧ ಕೆಲ ಪಾಕ್​ ಆಟಗಾರರು ನಡೆಸಿದ್ದ ಷಡ್ಯಂತರದ ವಿಚಾರವಾಗಿ ಮುಕ್ತವಾಗಿ ಮಾತನಾಡಿದ್ದಾರೆ. “ತಮ್ಮ ಬೌಲಿಂಗ್​ ಶೈಲಿಯಲ್ಲಿ ಲೋಪ ಇದೆ ಎಂದು ಹೇಳಿ ನನ್ನ ಕ್ರಿಕೆಟ್​ ಬದುಕನ್ನು ಮುಗಿಸಲು ಮುಂದಾಗಿದ್ದೇ ನಮ್ಮವರು. ನಾನು ಕ್ರಿಕೆಟ್​ನಲ್ಲಿ ನಂ.1 ಸ್ಥಾನದ ಜತೆಗೆ ಕ್ರಿಕೆಟ್​ನಲ್ಲಿ ಬೆಳೆಯುತ್ತಿರುವುದನ್ನು ಸಹಿಸಿಕೊಳ್ಳಲು ಆಗದೆ ಈ ರೀತಿ ಮಾಡಿದ್ದರು. ಏಕೆಂದರೆ ನಾನು ಅವರ ದಾಖಲೆಗಳನ್ನು ಮುರಿಯಬಲ್ಲೆ ಎಂಬ ಭಯ ಅವರಲ್ಲಿತ್ತು. ಒಂದೊಮ್ಮೆ ನಾನು ಭಾರತದಲ್ಲಿ ಜನಿಸಿ ಭಾರತ ಪರ ಆಡುತ್ತಿದ್ದರೆ ನನಗೆ ಈ ಸ್ಥಿತಿ ಬರುತ್ತಿರಲಿಲ್ಲ. ನಾನು 1 ಸಾವಿರ ವಿಕೆಟ್​ ಪಡೆಯುತ್ತಿದ್ದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ Majid Ali Suicide: ಆತ್ಮಹತ್ಯೆಗೆ ಶರಣಾದ ಪಾಕಿಸ್ತಾನದ ಸ್ಟಾರ್​ ಸ್ನೂಕರ್‌ ಮಜೀದ್ ಅಲಿ

35 ಟೆಸ್ಟ್‌ಗಳಿಂದ 178 ವಿಕೆಟ್‌, 113 ಏಕದಿನ ಪಂದ್ಯಗಳಿಂದ 184 ವಿಕೆಟ್‌ ಹಾಗೂ 64 ಟಿ20 ಪಂದ್ಯಗಳಿಂದ 85 ವಿಕೆಟ್‌ ಉರುಳಿಸಿದ್ದು ಸಯೀದ್‌ ಅಜ್ಮಲ್‌ ಸಾಧನೆ. 2014ರ ಆಗಸ್ಟ್‌ನಲ್ಲಿ ಕೊನೆಯ ಟೆಸ್ಟ್‌ ಆಡಿದ್ದ ಅಜ್ಮಲ್‌, 2015ರ ಎಪ್ರಿಲ್‌ನಲ್ಲಿ ಕೊನೆಯ ಸಲ ಏಕದಿನ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.

ವಿಶ್ವ ಕಪ್​ ವಿಚಾರದಲ್ಲಿ ಮುಗಿಯದ ಪಾಕ್​ ನಾಟಕ

2023ರ ಏಕದಿನ ವಿಶ್ವಕಪ್(ICC World Cup) ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡು ಯಾವ ದೇಶ ಯಾರ ವಿರುದ್ಧ ಆಡಲಿದೆ ಹೀಗೆ ಎಲ್ಲ ವಿಚಾರವು ಅಂತಿಮಗೊಂಡಿದೆ. ಆದರೆ ಪಾಕ್​ ಮಾತ್ರ ತನ್ನ ನಾಟಕವನ್ನು ನಿಲ್ಲಿಸುವಂತೆ ತೋರುತ್ತಿಲ್ಲ. ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಪಾಕ್​ ಸರ್ಕಾರಕ್ಕೆ ಪತ್ರ ಬರೆದಿದೆ. ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಆಂತರಿಕ ಮತ್ತು ವಿದೇಶಾಂಗ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ಪಿಸಿಬಿ ಐದು ಸ್ಥಳಗಳ ಬಗ್ಗೆ ಸರ್ಕಾರಕ್ಕೆ ಏನಾದರೂ ಆಕ್ಷೇಪವಿದೆಯೇ ಎಂದು ಕೇಳಿದೆ. ಬಾಬರ್ ಅಜಮ್ ಪಡೆ ಹೈದರಾಬಾದ್, ಚೆನ್ನೈ, ಬೆಂಗಳೂರು, ಕೋಲ್ಕತಾ ಮತ್ತು ಅಹಮದಾಬಾದ್ನಲ್ಲಿ ತನ್ನ ಪಂದ್ಯಗಳನ್ನು ಆಡಲಿದೆ. ಈ ಪಂದ್ಯದ ಸ್ಥಳಗಳನ್ನು ಅಂತಿಮಗೊಳಿಸುವಂತೆ ಹೇಳಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Paris Olympics 2024 : ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಭಾರತದ ಪುರುಷರ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ತನ್ನ ಮೊದಲ ಪಂದ್ಯದಲ್ಲಿ ರೋಚಕ ಗೆಲುವಿನೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಿದೆ. ಫ್ರೆಂಚ್ ರಾಜಧಾನಿಯ ಯೆವೆಸ್-ಡು-ಮನೋಯಿರ್ ಸ್ಟೇಡಿಯಂ 2 ರಲ್ಲಿ ಶನಿವಾರ (ಜುಲೈ 27) ನಡೆದ ಗುಂಪು ‘ಬಿ’ ಆರಂಭಿಕ ಪಂದ್ಯದಲ್ಲಿ ಹರ್ಮನ್​ಪ್ರೀತ್​ ಸಿಂಗ್ ಪಡೆ ಮೊದಲ ಕ್ವಾರ್ಟರ್​ನಲ್ಲಿ 0-1 ಅಂತರದ ಹಿನ್ನಡೆ ಎದುರಿಸಿದರೂ ಅಂತಿಮವಾಗಿ 3-2 ಅಂತರದಿಂದ ಗೆದ್ದುಕೊಂಡಿತು. ಮೊದಲ ಕ್ವಾರ್ಟರ್ನಲ್ಲಿ ಭಾರತ ತಂಡ ಹಿನ್ನಡೆ ಅನುಭವಿಸಿದರೂ, ಎರಡನೇ ಮತ್ತು ಮೂರನೇ ಕ್ವಾರ್ಟರ್​ನಲ್ಲಿ ಮನ್ದೀಪ್ ಸಿಂಗ್ ಮತ್ತು ವಿವೇಕ್ ಸಾಗರ್ ಪ್ರಸಾದ್ ಗಳಿಸಿದ ಗೋಲುಗಳ ನೆರವಿನಿಂದ ಭಾರತ ಮೇಲುಗೈ ಸಾಧಿಸಿತು.

ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

ಮುಂದಿನ ಪಂದ್ಯಗಳಲ್ಲಿ ಕಠಿಣ ಪರೀಕ್ಷೆಗಳನ್ನು ಎದುರಿಸಬೇಕಾಗಿರುವುದರಿಂದ ಪೂಲ್ ಬಿ ಯ ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ನಿರ್ಣಾಯಕ ಗೆಲುವಾಗಿದೆ. ಆಸ್ಟ್ರೇಲಿಯಾ, ಬೆಲ್ಜಿಯಂ, ಅರ್ಜೆಂಟೀನಾ ಮತ್ತು ಐರ್ಲೆಂಡ್ ತಂಡಗಳೊಂದಿಗೆ ಭಾರತ ‘ಪೂಲ್’ ನಲ್ಲಿ ಡ್ರಾ ಸಾಧಿಸಿದೆ. ಆರಂಭಿಕ ದಿನದ ಗೆಲುವಿನ ನಂತರ ಭಾರತವು ತಮ್ಮ ಪೂಲ್​ನಲ್ಲಿ ಎರಡನೇ ಸ್ಥಾನಕ್ಕೆ ಏರಿತು.

8ನೇ ನಿಮಿಷಕ್ಕೆ ಹಿನ್ನಡೆ

8ನೇ ನಿಮಿಷದ ಆರಂಭದಲ್ಲೇ ಭಾರತ 0-1ರ ಹಿನ್ನಡೆ ಅನುಭವಿಸಿತ್ತು. ಗ್ರೇಗ್ ಫುಲ್ಟನ್ ಅವರ ನೇತೃತ್ವದ ನ್ಯೂಜಿಲ್ಯಾಂಡ್​ ತಂಡ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು. ಆದರೆ ಅವರು ಗೋಲ್ ಪೋಸ್ಟ್​​ ಮುಂದೆ ಸ್ಥಿರತೆ ತೋರಲಿಲ್ಲ. ಅಭಿಷೇಕ್ ಭಾರತಕ್ಕೆ ಆರಂಭಿಕ ಮುನ್ನಡೆ ತರು ಭರವಸೆ ಕೊಟ್ಟರೂ ನ್ಯೂಜಿಲೆಂಡ್​ ಅನುಭವಿ ಗೋಲ್​ಕೀಪರ್​ ಡೊಮಿನಿಕ್ ಡಿಕ್ಸನ್ ತಡೆದರು. ಮೊದಲ ಕ್ವಾರ್ಟರ್​ನಲ್ಲಿ ಗುರ್ಜಂತ್ ಸಿಂಗ್​​ಗೆ ಗ್ರೀನ್ ಕಾರ್ಡ್ ಸಿಕ್ಕಿತು. ಇದು ಭಾರತದ ಸಮಬಲ ಸಾಧಿಸುವ ಅವಕಾಶಗಳಿಗೆ ಅಡ್ಡಿಯಾಯಿತು.

ಇದನ್ನೂ ಓದಿ: IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

ನಿಕ್ ವುಡ್ಸ್ ಹಳದಿ ಕಾರ್ಡ್ ನೊಂದಿಗೆ ಐದು ನಿಮಿಷಗಳ ಕಾಲ ಅಮಾನತುಗೊಂಡಿದ್ದರಿಂದ ನ್ಯೂಜಿಲೆಂಡ್ ಗೆ ಎರಡನೇ ಕ್ವಾರ್ಟರ್ ದೊಡ್ಡ ಹೊಡೆತವಾಯಿತು.

ಶೈಲಿಯಲ್ಲಿ ಪುಟಿದೇಳುವ ಭಾರತ!
ಹರ್ಮನ್ ಪ್ರೀತ್ ಸಿಂಗ್​ಗೆ ಎದುರಾಳಿ ತಂಡ ಪೆನಾಲ್ಟಿ ಕಾರ್ನರ್ ಅವಕಾಶ ನಿರಾಕರಿಸಿದ ಹೊರತಾಗಿಯೂ ನ್ಯೂಜಿಲೆಂಡ್ ನ ಬಲಿಷ್ಠ ಡಿಫೆನ್ಸ್ ವಿಭಾಗ ಕುಸಿಯಿತು. ಎರಡನೇ ಕ್ವಾರ್ಟರ್​ನಲ್ಲಿ ಭಾರತದ ನಾಯಕನಿಗೆ ಎರಡನೇ ಅವಕಾಶ ಸಿಕ್ಕಿತು. ಈ ವೇಳೆ ಗೋಲ್ ಪೋಸ್ಟ್​​ ಸಮೀಪದಲ್ಲಿದ್ದ ಮನ್ದೀಪ್ ಸಿಂಗ್ ಅವರು ಡಿಕ್ಸನ್ ಅವರನ್ನು ಹಿಂದಿಕ್ಕಿ ಭಾರತಕ್ಕೆ 1-1 ಅಂತರದ ಮುನ್ನಡೆ ತಂದುಕೊಟ್ಟರು. ಭಾರತವು ಮೂರನೇ ಕ್ವಾರ್ಟರ್ ಅನ್ನು ಹೊಸ ಆತ್ಮವಿಶ್ವಾಸದೊಂದಿಗೆ ಪ್ರಾರಂಭಿಸಿತು. ಮನ್ದೀಪ್ ಸಿಂಗ್ ಒಂದು ಗೋಲು ಬಾರಿಸಿದರು. ಆದರೆ, ಸ್ಕಾಟ್ ಬಾಯ್ಡೆ ಅವರ ಪ್ರಯತ್ನದ ಮೂಲಕ ನ್ಯೂಜಿಲೆಂಡ್ ತಿರುಗೇಟು ನೀಡಿತು. ಆದರೆ ಕೊನೆಯಲ್ಲಿ ಪೆನಾಲ್ಟಿ ಸ್ಟ್ರೋಕ್​ ಮೂಲಕ ನಾಯಕ ಹರ್ಮನ್​ ಪ್ರೀತ್ ಸಿಂಗ್ ಗೋಲ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟರು.

Continue Reading

ಪ್ರಮುಖ ಸುದ್ದಿ

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

IND vs SL: ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ ನಷ್ಟ ಮಾಡಿಕೊಂಡು 213 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆತಿಥೇಯ ಬಳಗ 19. 2 ಓವರ್​ಗಳಲ್ಲಿ 170 ರನ್​ಗಳಿಗೆ ಆಲ್​ಔಟ್ ಆಯಿತು.

VISTARANEWS.COM


on

IND vs SL
Koo

ಪಲ್ಲೆಕೆಲೆ: ನಾಯಕ ಸೂರ್ಯಕುಮಾರ್​ (58 ರನ್​) ಅರ್ಧ ಶತಕ ಹಾಗೂ ರಿಷಭ್​ ಪಂತ್​ (49 ರನ್​) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮಿಂಚಿದ ಭಾರತ ತಂಡ ಆತಿಥೇಯ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ (IND vs SL) ಮೊದಲ ಪಂದ್ಯದಲ್ಲಿ 43 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ. ಭಾರತ ತಂಡದ ಗೆಲುವಿನಲ್ಲಿ ಕೊನೇ ಹಂತದಲ್ಲಿ ಬೌಲರ್​ಗಳು ಕೂಡ ಪ್ರಮುಖ ಪಾತ್ರ ವಹಿಸಿದರು. ಇದರೊಂದಿಗೆ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಶುಭಾರಂಭ ಮಾಡಿದರೆ ಕೋಚ್ ಗೌತಮ್ ಗಂಭೀರ್ ಕೂಡ ಹೊಸ ಅಧ್ಯಾಯ ಆರಂಭಿಸಿದರು.

ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ ನಷ್ಟ ಮಾಡಿಕೊಂಡು 213 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆತಿಥೇಯ ಬಳಗ 19. 2 ಓವರ್​ಗಳಲ್ಲಿ 170 ರನ್​ಗಳಿಗೆ ಆಲ್​ಔಟ್ ಆಯಿತು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಆರಂಭಿಕರಾದ ಯಶಸ್ವಿ ಜೈಸ್ವಾಲ್​ (21 ಎಸೆತಕ್ಕೆ 40 ರನ್​), ಶುಭ್​ಮನ್​ ಗಿಲ್​ (16 ಎಸೆತಕ್ಕೆ 34 ರನ್​) ಉತ್ತಮ ಆರಂಭ ತಂದುಕೊಟ್ಟರು. ಈ ಜೋಡಿ ಮೊದಲ ವಿಕೆಟ್​ಗೆ 74 ರನ್ ಬಾರಿಸಿತು. ಬಳಿಕ ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ನಾಯಕ ಸೂರ್ಯಕುಮಾರ್ ಉತ್ತಮವಾಗಿ ಆಡಿದರು. ತಂಡದ ಪೂರ್ಣಾವಧಿ ನಾಯಕನಾಗಿ ನೇಮಕಗೊಂಡ ನಂತರ ತಮ್ಮ ಮೊದಲ ಪಂದ್ಯದಲ್ಲಿ ಮಿಂಚಿದರು. ಲಂಕಾ ಬೌಲರ್​ಗಳನ್ನು ಬಲವಾಗಿ ಹಿಮ್ಮೆಟ್ಟಿಸಿದರು. ಸೂರ್ಯಕುಮಾರ್ ಯಾದವ್ ತಮ್ಮ ಇನ್ನಿಂಗ್ಸ್​​ನಲ್ಲಿ ಕೆಲವು ಅಬ್ಬರದ ಶಾಟ್​ಗಳನ್ನು ಆಡಿದರು. ಅವರು ಎದುರಾಳಿ ತಂಡದ ಬೌಲರ್​​ಗಳ ನೈತಿಕತೆ ಕುಸಿಯುವಂತೆ ಮಾಡಿದರು. 26 ಎಸೆತಕ್ಕೆ ಬೌಂಡರಿ ಹಾಗೂ 2 ಸಿಕ್ಸರ್ ಸಮೇತ ಅವರು 58 ರನ್ ಬಾರಿಸಿತು.

ಇದನ್ನೂ ಓದಿ: Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

ರಿಷಭ್ ಉತ್ತಮ ಆಟ

ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು. ರಿಷಭ್ ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ ಅದ್ಭುತ ಶಾಟ್​ಗಳನ್ನು ಆಡಿದರು. ಔಟಾಗುವ ಮೊದಲು ಅವರು 33 ಎಸೆತಕ್ಕೆ 6 ಫೋರ್​, 1 ಸಿಕ್ಸರ್ ಸಮೇತ 49 ರನ್ ಬಾರಿಸಿದರು. ಆದರೆ, ಒಂದು ರನ್ ಕೊರತೆಯಿಂದ ಅರ್ಧ ಶತಕದ ಅವಕಾಶ ಕಳೆದುಕೊಂಡರು.

ಲಂಕಾ ಉತ್ತಮ ಆರಂಭ

ಭಾರತದ ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಲಂಕಾ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 84 ರನ್ ಬಾರಿಸಿತು. ಆರಂಭಿಕ ಬ್ಯಾಟರ್​ ಪಾತುಮ್ ನಿಸ್ಸಾಂಕ 4 ಎಸೆತಕ್ಕೆ 79 ರನ್ ಬಾರಿಸಿದರೆ ಕುಸಾಲ್ ಮೆಂಡಿಸ್​ 27 ಎಸೆತಕ್ಕೆ 45 ರನ್ ಗಳಿಸಿದರು. ಹೀಗಾಗಿ ಲಂಕಾ ಗೆಲುವಿನ ಸನಿಹ ಬರುವ ನಿರೀಕ್ಷೆ ಇತ್ತು. ಆದರೆ, ಕೊನೇ ಹಂತದಲ್ಲಿ ಅಕ್ಷರ್ ಪಟೇಲ್​ (3 ರನ್​ಗಳಿಗೆ 2 ವಿಕೆಟ್​), ಅರ್ಶ್​ದೀಪ್ ಸಿಂಗ್ (24 ಎಸೆತಕ್ಕೆ 2 ವಿಕೆಟ್​), ರಿಯಾನ್ ಪರಾಗ್​ 1.2 ಓವರ್​ಗಳಲ್ಲಿ 5 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹೀಗಾಗಿ ಲಂಕಾ ತಂಡಕ್ಕೆ ಯಾವುದೇ ಹಂತದಲ್ಲಿ ಚೇತರಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. 149 ರನ್​ಗಳಿಗೆ 3 ವಿಕೆಟ್ ಮಾತ್ರ ಕಳೆದುಕೊಂಡಿದ್ದ ಲಂಕಾ ಮುಂದಿನ 21 ರನ್ ಮಾಡುವಷ್ಟರಲ್ಲಿ ಉಳಿದ ಏಳು ವಿಕೆಟ್ ನಷ್ಟ ಮಾಡಿಕೊಂಡು ಸೋಲೊಪ್ಪಿಕೊಂಡಿತು.

Continue Reading

ಪ್ರಮುಖ ಸುದ್ದಿ

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Rishabh Pant : ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು.

VISTARANEWS.COM


on

Rishabh Pant
Koo

ಬೆಂಗಳೂರು: ಶ್ರೀಲಂಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟರ್​ ರಿಷಭ್ ಪಂತ್ (Rishabh Pant) ಬ್ಯಾಟಿಂಗ್​ನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯವು ಪಲ್ಲೆಕೆಲೆಯ ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ರಿಷಭ್ ಪಂತ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದರು. ಅವರು ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಉತ್ತಮ ಸಾಥ್ ಕೊಟ್ಟರು.

ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು.

ರಿಷಭ್ ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ ಅದ್ಭುತ ಶಾಟ್​ಗಳನ್ನು ಆಡಿದರು. ಆದರೆ ಗಮನ ಸೆಳೆದದ್ದು ಅಸಿತಾ ಫರ್ನಾಂಡೊ ವಿರುದ್ಧ ಆಡಿದ ಹೆಲಿಕಾಪ್ಟರ್ ಶಾಟ್. ಕೀಪರ್-ಬ್ಯಾಟರ್​ ಎಂಎಸ್ ಧೋನಿ ಅವರ ಸಿಗ್ನೇಚರ್ ಶಾಟ್ ಅನ್ನು ಪರಿಪೂರ್ಣವಾಗಿ ಪುನರಾವರ್ತಿಸಿ ಅದ್ಭುತ ಸಿಕ್ಸರ್ ಬಾರಿಸಿದರು.

16ನೇ ಓವರ್​ನ 4ನೇ ಎಸೆತದಲ್ಲಿ ಅಸಿತಾ ಫರ್ನಾಂಡೊ ಯಾರ್ಕರ್ ಎಸೆದರು. ರಿಷಭ್ ಪಂತ್ ತಮ್ಮ ಮಣಿಕಟ್ಟುಗಳನ್ನು ಬಳಸಿ ಆಡಿದರು. ನಂತರ ಹೆಲಿಕಾಪ್ಟರ್ ಶಾಟ್ ಅನ್ನು ಪರಿಪೂರ್ಣವಾಗಿ ಪೂರ್ತಿಗೊಳಿಸಿದರು. ಚೆಂಡು ಮಿಡ್​ ವಿಕೆಟ್​ ಮೂಲಕ ಆಕಾಶಕ್ಕೆ ಹಾರಿ ಬಿತ್ತು.

ಇದನ್ನೂ ಓದಿ: IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

ರಿಷಭ್ ಪಂತ್ ತಮ್ಮ ಇನಿಂಗ್ಸ್​​ನಲ್ಲಿ ಪ್ರಮುಖ ಪಾತ್ರ ವಹಿಸಿದರು. ಭಾರತ ಕ್ರಿಕೆಟ್ ತಂಡವು ಮಧ್ಯದಲ್ಲಿ ಕೆಲವು ತ್ವರಿತವಾಗಿ ವಿಕೆಟ್​ಗಲ್ನು ಕಳೆದುಕೊಂಡ ನಂತರ ನಿರ್ಣಾಯಕ ಸಮಯದಲ್ಲಿ ಅವರ ಶತಕ ಬಂತು. ಅವರು ಬಲವಾಗಿ ಬ್ಯಾಟಿಂಗ್ ಮಾಡುವ ಮೂಲಕ ತಮ್ಮ ತಂಡಕ್ಕೆ ಇನ್ನಿಂಗ್ಸ್ ಅನ್ನು ಉನ್ನತ ಮಟ್ಟದಲ್ಲಿ ಮುಗಿಸಲು ಸಹಾಯ ಮಾಡಿದರು.

ರಿಷಭ್ ಪಂತ್ 33 ಎಸೆತಗಳಲ್ಲಿ 49 ರನ್ ಸಿಡಿಸಿ ಔಟಾದರು. ಅವರು ಸುಮಾರು 130 ಸ್ಟ್ರೈಕ್​ರೇಟ್​ನೊಂದಿಗೆ ಆಡಿದರು ಮತ್ತು ಅವರ ಇನ್ನಿಂಗ್ಸ್​ನಲ್ಲಿ 6 ಬೌಂಡರಿಗಳು ಮತ್ತು 1 ಸಿಕ್ಸರ್ ಸೇರಿಕೋಂಡಿತ್ತು. ಅವರ ಅದ್ಭುತ ಪ್ರದರ್ಶನದ ಹಿನ್ನೆಲೆಯಲ್ಲಿ ಭಾರತವು 213 ರನ್​ಗಳನ್ನು ಬಾರಿಸಿತು.

ನಾಯಕನಾಗಿ ಸೂರ್ಯಕುಮಾರ್ ಯಾದವ್ ಭರ್ಜರಿ ಆಟ

ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ತಂಡದ ಪೂರ್ಣಾವಧಿ ನಾಯಕನಾಗಿ ನೇಮಕಗೊಂಡ ನಂತರ ತಮ್ಮ ಮೊದಲ ಪಂದ್ಯದಲ್ಲಿ ಮಿಂಚಿದರು. ಬಲಗೈ ಬ್ಯಾಟರ್​ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಹೋದರು. ಬೌಳರ್​ಗಳನ್ನು ಬಲವಾಗಿ ಹಿಮ್ಮೆಟ್ಟಿಸಿದರು.

ಸೂರ್ಯಕುಮಾರ್ ಯಾದವ್ ತಮ್ಮ ಇನ್ನಿಂಗ್ಸ್​​ನಲ್ಲಿ ಕೆಲವು ಅಬ್ಬರದ ಶಾಟ್​ಗಳನ್ನು ಆಡಿದರು ಮತ್ತು ಅವರು ಎದುರಾಳಿ ತಂಡದ ಬೌಲರ್​​ಗಳ ನೈತಿಕತೆ ಕುಸಿಯುವಂತೆ ಮಾಡಿದರು. ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (34) ಮತ್ತು ಯಶಸ್ವಿ ಜೈಸ್ವಾಲ್ (40) ನೀಡಿದ ಆರಂಭವನ್ನು ಬಲಗೈ ಬ್ಯಾಟರ್​ ಸದುಪಯೋಗಪಡಿಸಿಕೊಂಡರು.

Continue Reading

ಪ್ರಮುಖ ಸುದ್ದಿ

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

IND vs SL: ಭಾರತೀಯ ಆರಂಭಿಕರ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಫರ್ನಾಂಡೊ ಅವರ ಅದ್ಭುತ ಕ್ಯಾಚ್ ಹೊರತುಪಡಿಸಿ, ಎಲ್ಲರ ಗಮನ ಸೆಳೆದಿರುವುದು ಕಮಿಂಡು ಮೆಂಡಿಸ್ ಅವರ ಬೌಲಿಂಗ್. 2018ರಲ್ಲಿ ಅಂತಾರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ 25 ವರ್ಷದ ಆಟಗಾರ, ಎಲ್ಲ ಸ್ವರೂಪದಲ್ಲಿ ಭಾರತದ ವಿರುದ್ಧ ತಮ್ಮ ಮೊದಲ ಪಂದ್ಯ ಆಡಿದರು. ತಮ್ಮ ವಿಶೇಷ ಸಾಮರ್ಥ್ಯವನ್ನು ತೋರಿಸಿದರು.

VISTARANEWS.COM


on

ind vs sl
Koo

ಪಲ್ಲೆಕೆಲೆ: ಭಾರತ ಹಾಗೂ ಶ್ರೀಲಂಕಾ (IND vs SL) ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​ ಅಪರೂಪದ ದೃಶ್ಯವನ್ನು ಕ್ರಿಕೆಟ್​ ಪ್ರೇಮಿಗಳಿಗೆ ತೋರಿಸಿದ್ದಾರೆ. ಅವರು ಭಾರತ ಬ್ಯಾಟರ್​ಗಳಾದ ಸೂರ್ಯಕುಮಾರ್ ಯಾದವ್ ಹಾಗೂ ರಿಷಭ್ ಪಂತ್ ವಿರುದ್ಧ ಎಡ ಹಾಗೂ ಬಲಗೈಯಲ್ಲಿ ಬೌಲಿಂಗ್​ ಮಾಡಿದ್ದಾರೆ. ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಆತಿಥೇಯ ತಂಡದ ಬೌಲರ್​ಗಳು ತಮ್ಮ ತಂಡಕ್ಕೆ ಉತ್ತಮ ಆರಂಭವನ್ನು ನೀಡಲು ವಿಫಲವಾದರು. ಶುಬ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ 50 + ಜೊತೆಯಾಟ ಆಡಿದರು. ನಂತರ ಅಸಿತಾ ಫರ್ನಾಂಡೊ ಅವರ ಅದ್ಭುತ ಕ್ಯಾಚ್ ಶ್ರೀಲಂಕಾಕ್ಕೆ ಮೊದಲ ಪ್ರಗತಿಯನ್ನು ನೀಡಿತ್ತು.

ಭಾರತೀಯ ಆರಂಭಿಕರ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಫರ್ನಾಂಡೊ ಅವರ ಅದ್ಭುತ ಕ್ಯಾಚ್ ಹೊರತುಪಡಿಸಿ, ಎಲ್ಲರ ಗಮನ ಸೆಳೆದಿರುವುದು ಕಮಿಂಡು ಮೆಂಡಿಸ್ ಅವರ ಬೌಲಿಂಗ್. 2018ರಲ್ಲಿ ಅಂತಾರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ 25 ವರ್ಷದ ಆಟಗಾರ, ಎಲ್ಲ ಸ್ವರೂಪದಲ್ಲಿ ಭಾರತದ ವಿರುದ್ಧ ತಮ್ಮ ಮೊದಲ ಪಂದ್ಯ ಆಡಿದರು. ತಮ್ಮ ವಿಶೇಷ ಸಾಮರ್ಥ್ಯವನ್ನು ತೋರಿಸಿದರು.

ಅವರನ್ನು ಹತ್ತನೇ ಓವರ್​ಗೆ ಬೌಲಿಂಗ್ ಮಾಡಲು ಕರೆಯಲಾಯಿತು. ಅವರು ಸೂರ್ಯಕುಮಾರ್ ಯಾದವ್ ವಿರುದ್ಧ ತಮ್ಮ ಎಡಗೈಯಿಂದ ಬೌಲಿಂಗ್ ಮಾಡಿ ಸ್ಪೆಲ್ ಅನ್ನು ಪ್ರಾರಂಭಿಸಿದರು. ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದ ಸೂರ್ಯ, ಕಮಿಂಡು ಮೆಂಡಿಸ್​ಗೆ ಆಘಾತಕಾರಿ ಸ್ವಾಗತ ನೀಡಿದರು. ಎರಡನೇ ಎಸೆತದಲ್ಲಿ ಒಂದು ರನ್​ ಪಡೆದು ರಿಷಭ್ ಪಂತ್​ಗೆ ಸ್ಟ್ರೈಕ್ ಕೊಟ್ಟರು.

ಇದನ್ನೂ ಓದಿ: Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

ಭಾರತದ ಎಡಗೈ ವಿಕೆಟ್ ಕೀಪರ್-ಬ್ಯಾಟರ್​ ಸ್ಟ್ರೈಕ್ ತೆಗೆದುಕೊಂಡ ಕೂಡಲೇ, ಕಮಿಂಡು ಮೆಂಡಿಸ್ ತಮ್ಮ ಬಲಗೈಯಿಂದ ಆಫ್-ಬ್ರೇಕ್ ಎಸೆಯಲು ನಿರ್ಧರಿಸಿದರು. ಮೆಂಡಿಸ್ ತಮ್ಮ ಮೊದಲ ಓವರ್​ನಲ್ಲಿ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗದಿದ್ದರೂ, ಮೊದಲ ಎಸೆತದಲ್ಲಿ ಬೌಂಡರಿ ಬಿಟ್ಟುಕೊಟ್ಟ ನಂತರ ಅವರು ಯಾವುದೇ ಬೌಂಡರಿ ಹೊಡೆಸಿಕೊಳ್ಳಲಿಲ್ಲ.

Continue Reading
Advertisement
Paris Olympics 2024
ಕ್ರೀಡೆ1 min ago

Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

Pervez Musharraf
ದೇಶ10 mins ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ15 mins ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ43 mins ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ53 mins ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ1 hour ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ2 hours ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ2 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ2 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ2 hours ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ10 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ11 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌