RCB's fast bowler is unavailable for the first seven matches; What happened to them? World Cup : ಬಿಸಿಸಿಐ ಪಾಕಿಸ್ತಾನ ಕ್ರಿಕೆಟ್​ಗೆ ಹಾನಿ ಮಾಡುತ್ತಿದೆ ಎಂದು ದೂರಿದ ಇಮ್ರಾನ್​ ಖಾನ್​ - Vistara News

ಕ್ರಿಕೆಟ್

World Cup : ಬಿಸಿಸಿಐ ಪಾಕಿಸ್ತಾನ ಕ್ರಿಕೆಟ್​ಗೆ ಹಾನಿ ಮಾಡುತ್ತಿದೆ ಎಂದು ದೂರಿದ ಇಮ್ರಾನ್​ ಖಾನ್​

ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಮೂಲೆಗುಂಪು ಮಾಡಿ ದರ್ಪ ತೋರಿಸುತ್ತಿದೆ ಬಿಸಿಸಿಐ ಎಂದು ದೂರಿದ್ದಾರೆ ಪಾಕ್​ ಮಾಜಿ ಪ್ರಧಾನಿ ಇಮ್ರಾನ್​ ಖಾನ್​.

VISTARANEWS.COM


on

RCB's fast bowler is unavailable for the first seven matches; What happened to them?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆಯುವ ವಿಶ್ವ ಕಪ್​ ಹಾಗೂ ಏಷ್ಯಾ ಕಪ್​ ಕ್ರಿಕೆಟ್​ ಟೂರ್ನಿ ಚರ್ಚೆಯ ವಿಷಯವಾಗಿದೆ. ಪಾಕಿಸ್ತಾನಕ್ಕೆ ಬಂದು ನಾವು ಆಡುವುದಿಲ್ಲ ಎಂದು ಬಿಸಿಸಿಐ ಹೇಳುತ್ತಿದೆ. ಹಾಗಾದರೆ ನಾವು ಭಾರತಕ್ಕೆ ಹೋಗಿ ವಿಶ್ವ ಕಪ್​ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಹೇಳುತ್ತಿದೆ. ಆದರೆ, ಇದರೆಲ್ಲರ ಒಟ್ಟು ಪರಿಣಾಮ ತಟ್ಟುವುದು ಪಾಕಿಸ್ತಾನಕ್ಕೆ. ಭಾರತ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಅವರು ಭಾರತಕ್ಕೆ ಬರದೇ ಹೋದರೆ ಅಲ್ಲಿನ ಕ್ರಿಕೆಟ್​ಗೆ ಹಾನಿಯಾಗಲಿದೆ. ಅಲ್ಲಿನ ಕ್ರಿಕೆಟ್​ ತಂಡ ಬಹುತೇಕ ಮೂಲೆಗುಂಪು ಆಗಲಿದೆ. ಈ ವಿಷಯದ ಅರಿವಿರುವ ಪಾಕಿಸ್ತಾನ ತಂಡದ ಮಾಜಿ ಆಟಗಾರರು ತರೇಹವಾರಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂತೆಯೇ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಕ್ರಿಕೆಟ್​ ತಂಡದ ಮಾಜಿ ನಾಯಕ ಇಮ್ರಾನ್​ ಖಾನ್​ ಕೂಡ ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಿಸಿಸಿಐ ಅಹಂಕಾರ ಪ್ರದರ್ಶನ ಮಾಡುವ ಜತೆಗೆ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಮೂಲೆಗುಂಪು ಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಭಾರತದಲ್ಲೇ ನಡೆಯಲಿದೆ ಏಷ್ಯಾ ಕಪ್​

1992ರ ವಿಶ್ವ ಕಪ್​ ಗೆದ್ದಿರುವ ಪಾಕಿಸ್ತಾನ ತಂಡದ ನಾಯಕರಾದ ಇಮ್ರಾನ್​ ಖಾನ್​, ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಕ್ರಿಕೆಟ್​ ಸಂಬಂಧ ಒಂದು ದುಃಖದ ಕತೆ. ಬಿಸಿಸಿಐ ತಾನು ದೊಡ್ಡ ಸೂಪರ್​ ಪವರ್​ ಎಂಬ ರೀತಿಯಲ್ಲಿ ವರ್ತಿಸುತ್ತದೆ. ತನ್ನ ವಿರುದ್ಧ ಯಾರು ಆಡಬೇಕು ಎಂಬುದನ್ನು ಬಿಸಿಸಿಐ ನಿರ್ಧರಿಸುತ್ತದೆ. ಯಾಕೆಂದರೆ ಅದಕ್ಕೆ ಬೇಕಾದ ದುಡ್ಡು ಸಂಗ್ರಹಿಸುವ ಸಾಮರ್ಥ್ಯ ಅವರಿಗೆ ಇದೆ. ಹೀಗಾಗಿ ದುರ್ವರ್ತನೆ ತೋರುತ್ತಿದೆ ಎಂದು ಅವರು ಹೇಳಿದ್ದಾರೆ.

ಬಿಸಿಸಿಐ ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಸಂಚು ರೂಪಿಸುತ್ತಿದೆ. ಆದರೆ, ಪಾಕಿಸ್ತಾನ ಕ್ರಿಕೆಟ್​ ಪಿಎಸ್​ಎಲ್​ ಮೂಲಕ ತನ್ನದೇ ಆದ ಘನತೆಯನ್ನು ಸೃಷ್ಟಿಸಿಕೊಂಡಿದೆ. ವಿದೇಶಿ ಆಟಗಾರರು ಅದರಲ್ಲೂ ಪಾಲ್ಗೊಳ್ಳುತ್ತಿದ್ದಾರೆ. ಪಾಕಿಸ್ತಾನದ ಆಟಗಾರರಿಗೆ ಭಾರತ ಐಪಿಎಲ್​ನಲ್ಲಿ ಆಡುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದಾದರೆ ಪಾಕಿಸ್ತಾನ ತನ್ನದೇ ಆದ ಗುಣಮಟ್ಟ ಹೊಂದಿದೆ ಎಂದರ್ಥ ಎಂದು ಅವರು ಹೇಳಿದರು.

ಭಾರತದ ಆತಿಥ್ಯದಲ್ಲಿ ಇದೇ ವರ್ಷ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ(ICC World Cup 2023) ಪಾಕಿಸ್ತಾನ ತಂಡವು ತನ್ನ ಪಾಲಿನ ಪಂದ್ಯಗಳನ್ನು ಬಾಂಗ್ಲಾದೇಶದಲ್ಲಿ ಆಡುತ್ತದೆ ಎಂದು ವರದಿಯಾಗಿತ್ತು. ಇದೀಗ ಈ ಬಗ್ಗೆ ಐಸಿಸಿ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಐಸಿಸಿ(ICC) ಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಲ್ಲ ಪಂದ್ಯಗಳು ಭಾರತದಲ್ಲಿಯೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.

ಏಷ್ಯಾ ಕಪ್​ಗಾಗಿ ಪಾಕಿಸ್ತಾನಕ್ಕೆ ಭಾರತ ತಂಡ ಬರಲು ಒಪ್ಪದ ಕಾರಣ ಪಾಕ್ ಕೂಡ ಭದ್ರತಾ ಕೊರತೆಯ ನೆಪವೊಡ್ಡಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವ ಕಪ್​ ಟೂರ್ನಿಯಲ್ಲಿ ನಾವು ಪಾಲ್ಗೊಳ್ಳಲು ಹಿಂದೇಟು ಹಾಕಿದೆ. ಇದೇ ಕಾರಣಕ್ಕೆ ಪಾಕಿಸ್ತಾನದ ಪಂದ್ಯಗಳು ತಟಸ್ಥ ತಾಣವಾದ ಬಾಂಗ್ಲಾದೇಶದಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಇದೀಗ ಐಸಿಸಿ ಇದು ಸುಳ್ಳು ಸುದ್ದಿ ಎಂದು ತಿಳಿಸಿದೆ.

ಈ ಬಾರಿಯ ಏಷ್ಯಾ ಕಪ್​ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿದೆ. ಆದರೆ ಪಾಕಿಸ್ತಾನದಲ್ಲಿ ಪಂದ್ಯಗಳು ನಡೆದರೆ ಭಾರತ ಈ ಟೂರ್ನಿಯಲ್ಲಿ ಆಡುವುದಿಲ್ಲ ಎಂದು ಬಿಸಿಸಿ ಹೇಳಿತ್ತು. ಇದೇ ವಿಚಾರವಾಗಿ ಪಾಕ್​ ಕ್ರಿಕೆಟ್​ ಮಂಡಳಿ ಮತ್ತು ಬಿಸಿಸಿಐ(BCCI) ಮಧ್ಯೆ ಕಿತ್ತಾಟ ನಡೆಯುತ್ತಲೇ ಇತ್ತು. ಇದೇ ವಿಚಾರವಾಗಿ ಕಳೆದ ವಾರ ದುಬೈಯಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ ಸಭೆಯಲ್ಲಿ ಈ ಬಾರಿ ಪಾಕಿಸ್ತಾನದ ಆತಿಥ್ಯದಲ್ಲೇ ಏಷ್ಯಾ ಕಪ್​ ನಡೆಸುವಂತೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಭಾರತದ ಪಂದ್ಯಗಳು ಮಾತ್ರ ಸಾಗರೋತ್ತರ ತಟಸ್ಥ ಸ್ಥಳದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು.

ಇದೇ ಸಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವ ಟೂರ್ನಿಯಲ್ಲಿ ಪಾಕಿಸ್ತಾನದ ಪಂದ್ಯಗಳು ಬಾಂಗ್ಲಾದೇಶನಲ್ಲಿ ನಡೆಸುವಂತೆ ಮನವಿ ಮಾಡಿದೆ ಎಂದು ವರದಿಯಾಗಿತ್ತು. ಇನ್ನು ಕೆಲ ವರದಿಗಳ ಪ್ರಕಾರ ಪಾಕ್​ ಪಂದ್ಯಗಳು ಬಾಂಗ್ಲಾದಲ್ಲಿ ನಡೆಯಲಿದೆ ಎಂದು ಖಚಿತ ಪಡಿಸಿತ್ತು. ಆದರೆ ಈ ಎಲ್ಲ ಅನುಮಾನಗಳಿಗೆ ಐಸಿಸಿ ತೆರೆ ಎಳೆದಿದೆ.

ಇದನ್ನೂ ಓದಿ IND VS PAK: ಏಕದಿನ ವಿಶ್ವಕಪ್​; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!

‘ಪಿಸಿಬಿ ಮುಖ್ಯಸ್ಥ ನಜಾಮ್ ಸೇಥಿ ಮತ್ತು ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ನಜ್ಮುಲ್ ಹಸನ್ ಪಪೊನ್ ಅವರಿಬ್ಬರು ಭೇಟಿಯಾಗಿ ದ್ವಿಪಕ್ಷೀಯ ಕ್ರಿಕೆಟ್ ಸರಣಿಯ​ ವಿಚಾರವಾಗಿ ಮಾತನಾಡಿದ್ದಾರೆ. ಆದರೆ ಇಲ್ಲಿ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವ ಕಪ್​ ಕುರಿತು ಯಾವುದೇ ಚರ್ಚೆ ನಡೆದಿಲ್ಲ’ ಎಂದು ಐಸಿಸಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ Asia Cup 2023 : ಪಾಕ್​​ನಲ್ಲೇ ಏಷ್ಯಾ ಕಪ್​; ಭಾರತ, ಪಾಕಿಸ್ತಾನ ಪಂದ್ಯ ತಟಸ್ಥ ತಾಣದಲ್ಲಿ

‘ವಿಶ್ವಕಪ್ ಟೂರ್ನಿಯಲ್ಲಿ ಆಡಲು ಭಾರತಕ್ಕೆ ಪ್ರವಾಸ ಮಾಡುವ ಎಲ್ಲ ತಂಡಗಳಿಗೂ ಬಿಸಿಸಿಐ ಈಗಾಗಲೇ ವೀಸಾ ವ್ಯವಸ್ಥೆ ಮಾಡಿದೆ. ಹೀಗಿರುವಾಗ ಪಾಕಿಸ್ತಾನ ಅಂತಿಮ ಹಂತದಲ್ಲಿ ಈ ರೀತಿಯ ಗೊಂದಲದ ಹೇಳಿಹೆ ನೀಡುವುದು ಅಸಂಬದ್ಧವಾಗಲಿದೆ’ ಎಂದು ಐಸಿಸಿ ಮಂಡಳಿಯ ಸದಸ್ಯರೊಬ್ಬರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Mohammad Shami: ಮೊಹಮ್ಮದ್ ಶಮಿ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಯುನೈಟೆಡ್ ಕಿಂಗ್​ಡಮ್​​​ಗೆ ಕಳುಹಿಸಲಾಗಿತ್ತು. ಇದೀಗ ಹೆಚ್ಚಿನ ಪುನಶ್ಚೇತನಕ್ಕಾಗಿ ಶಮಿ ಭಾರತಕ್ಕೆ ಮರಳಿದ್ದಾರೆ. ವಿಶೇಷವೆಂದರೆ, ಗಾಯವು ಸರಿಯಾಗಿ ಗುಣವಾಗಲು ಕನಿಷ್ಠ 4-5 ತಿಂಗಳುಗಳು ಬೇಕಾಗುವುದರಿಂದ ವೇಗಿ ಮುಂಬರುವ ಟಿ 20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

VISTARANEWS.COM


on

Mohammad Shami
Koo

ಲಖನೌ: ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ (Mohammad Shami) ಶುಕ್ರವಾರ (ಏಪ್ರಿಲ್​ 26ರಂದು) ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಮತ ಚಲಾಯಿಸಿದರು. 2023 ರ ಐಸಿಸಿ ಏಕದಿನ ವಿಶ್ವಕಪ್​​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಮೊಹಮ್ಮದ್ ಶಮಿ, ಪಂದ್ಯಾವಳಿಯ ಸಮಯದಲ್ಲಿ ಹಿಮ್ಮಡಿ ಗಾಯದಿಂದ ಬಳಲುತ್ತಿದ್ದರು. ಇದೀಗ ಸರ್ಜರಿಗೆ ಒಳಗಾಗಿದ್ದು ಅದರ ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ಅವರು ಮತದಾನ ಮಾಡಿದ್ದಾರೆ.

ಮೊಹಮ್ಮದ್ ಶಮಿ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಯುನೈಟೆಡ್ ಕಿಂಗ್​ಡಮ್​​​ಗೆ ಕಳುಹಿಸಲಾಗಿತ್ತು. ಇದೀಗ ಹೆಚ್ಚಿನ ಪುನಶ್ಚೇತನಕ್ಕಾಗಿ ಶಮಿ ಭಾರತಕ್ಕೆ ಮರಳಿದ್ದಾರೆ. ವಿಶೇಷವೆಂದರೆ, ಗಾಯವು ಸರಿಯಾಗಿ ಗುಣವಾಗಲು ಕನಿಷ್ಠ 4-5 ತಿಂಗಳುಗಳು ಬೇಕಾಗುವುದರಿಂದ ವೇಗಿ ಮುಂಬರುವ ಟಿ 20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

ಮೊಹಮ್ಮದ್ ಶಮಿ ಮೈದಾನದಿಂದ ಹೊರಗಿರುವುದರಿಂದ ಅವರು ಭಾರತೀಯ ಪ್ರಜೆಯಾಗಿ ತಮ್ಮ ಕರ್ತವ್ಯವನ್ನು ಪೂರೈಸಲು ಮರೆಯಲಿಲ್ಲ. ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತ ಚಲಾಯಿಸಲು ಮತಗಟ್ಟೆಗೆ ಬಂದಿದ್ದರು.

ಇದನ್ನೂ ಓದಿ: IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

ಶಮಿ ಅವರ ಕ್ಷೇತ್ರವಾದ ಅಮ್ರೋಹಾ ಸೇರಿದಂತೆ ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಿತು. , ಅವರು ಗಾಯದ ಹಿನ್ನಡೆಯಿಂದ ಬಳಲುತ್ತಿದ್ದರೂ ಮತ ಚಲಾಯಿಸಲು ಬಂದರು. ಪ್ರತಿಯೊಬ್ಬ ಭಾರತೀಯ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಬಳಸಿಕೊಳ್ಳಬೇಕು ಮತ್ತು ತಮ್ಮ ಆಯ್ಕೆಯ ಸರ್ಕಾರವನ್ನು ಆಯ್ಕೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಹೊರಬರಬೇಕು ಎಂದು ಮೊಹಮ್ಮದ್ ಶಮಿ ಅಭಿಪ್ರಾಯಪಟ್ಟರು.

ವಿಶೇಷವೆಂದರೆ, ಸೆಪ್ಟೆಂಬರ್​ನಲ್ಲಿ ಬಾಂಗ್ಲಾದೇಶ ವಿರುದ್ಧ ನಿಗದಿಯಾಗಿರುವ ತವರು ಸರಣಿಯ ಸಮಯದಲ್ಲಿ ಶಮಿ ಈ ವರ್ಷದ ಕೊನೆಯಲ್ಲಿ ಮೈದಾನಕ್ಕೆ ಮರಳುವ ನಿರೀಕ್ಷೆಯಿಲ್ಲ. ಅವರ ಅನುಪಸ್ಥಿತಿಯು ಮುಂಬರುವ ಟಿ 20 ವಿಶ್ವಕಪ್​​ಗೆ ಭಾರತೀಯ ಸಂಯೋಜನೆಗೆ ಖಂಡಿತವಾಗಿಯೂ ಹಾನಿ ಮಾಡುತ್ತದೆ. ಏಕೆಂದರೆ ಆಯ್ಕೆದಾರರು ವೇಗದ ಬೌಲಿಂಗ್ ಆಯ್ಕೆಗಳ ಕೊರತೆಯನ್ನು ಹೊಂದಿದ್ದಾರೆ.

ಜಸ್ಪ್ರೀತ್ ಬುಮ್ರಾ ಬೌಲಿಂಗ್ ದಾಳಿಯನ್ನು ಮುನ್ನಡೆಸುವ ನಿರೀಕ್ಷೆಯಿದ್ದರೆ, ಅವರ ಉಳಿದ ಪಡೆಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ.

Continue Reading

ಕ್ರೀಡೆ

IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

IPL 2024: ರಾಜಸ್ಥಾನ್ ರಾಯಲ್ಸ್ ಅತ್ಯಂತ ವಿನಾಶಕಾರಿ ಬ್ಯಾಟಿಂಗ್ ಲೈನ್ಅಪ್ ಹೊಂದಿರುವುದರಿಂದ ಕೆಎಲ್ ರಾಹುಲ್​​ಗೆ ತಮ್ಮ ಬೌಲರ್​ಗಳಿಂದ ಬಲವಾದ ನೆರವು ಬೇಕಾಗಿದೆ. ರವಿ ಬಿಷ್ಣೋಯ್ ಮತ್ತು ಕೃಣಾಲ್ ಪಾಂಡ್ಯ ಪಿಚ್​ನ ನಿಧಾನಗತಿಯ ಸ್ವರೂಪವನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳಬೇಕು.

VISTARANEWS.COM


on

IPL 2024
Koo

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) 44 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (Lacknow super Gaints) ಮತ್ತು ರಾಜಸ್ಥಾನ್ ರಾಯಲ್ಸ್ (Rajastan Royals) ತಂಡಗಳು ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಅತ್ಯುತ್ತಮ ಫಾರ್ಮ್ ನಲ್ಲಿದ್ದು, ಪಂದ್ಯವು ರೋಚಕ ಫಲಿತಾಂಶನೀ ಭರವಸೆ ನೀಡುತ್ತಿದೆ. ಸೂಪರ್ ಜೈಂಟ್ಸ್ ತನ್ನ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು. ಹೀಗಾಗಿ ಆತ್ಮವಿಶ್ವಾಸದಿಂದ ಸಾಗಲಿದೆ. ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ಆಡಿದ ಎಂಟು ಪಂದ್ಯಗಳಲ್ಲಿ ಏಳರಲ್ಲಿ ಗೆದ್ದಿದೆ ಮತ್ತು ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ.

ರಾಜಸ್ಥಾನ್ ತಮ್ಮ ಖಾತೆಗೆ ಮತ್ತೊಂದು ಗೆಲುವನ್ನು ಸೇರಿಸುವ ಮೂಲಕ ಮುಂಚೂಣಿ ಸ್ಥಾನ ಉಳಿಸಿಕೊಳ್ಳಲು ನೋಡಲಿದೆ. ಈ ಋತುವಿನ ಆರಂಭದಲ್ಲಿ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿರುವ ರಾಯಲ್ಸ್ ಆತ್ಮವಿಶ್ವಾಸದಲ್ಲಿದೆ. ಆದಾಗ್ಯೂ, ಲಕ್ನೋ ತವರಿನ ಅನುಕೂಲ ಹೊಂದಿರುತ್ತದೆ ಮತ್ತು ಪಾಯಿಂಟ್ಸ್ ಟೇಬಲ್​ನಲ್ಲಿ ತಮ್ಮ ಶ್ರೇಯಾಂಕ ಸುಧಾರಿಸಲು ಪ್ರಯತ್ನಿಸುತ್ತದೆ. ಎರಡೂ ಶಿಬಿರಗಳಲ್ಲಿನ ಬ್ಯಾಟರ್​ಗಳು ಉತ್ತಮ ಫಾರ್ಮ್​ನಲ್ಲಿರುವುದರಿಂದ ಇಲ್ಲಿ ಏಕಪಕ್ಷೀಯ ಫಲಿತಾಂಶದ ನಿರೀಕ್ಷೆ ಕಡಿಮೆ.

ಕಳೆದ ಪಂದ್ಯದಲ್ಲಿ, ಲಕ್ನೊ ತಂಡವು ದೊಡ್ಡ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು ಹಾಗೂ ಆರು ವಿಕೆಟ್​​ಗಳಿಂದ ಗೆದ್ದಿತು. ಬ್ಯಾಟಿಂಗ್ ಲೈನ್ಅಪ್ ಉತ್ತಮ ಸ್ಥಿತಿಯಲ್ಲಿರುವಂತೆ ತೋರುತ್ತಿದ್ದರೂ ರಾಜಸ್ಥಾನ್ ರಾಯಲ್ಸ್ ಅತ್ಯಂತ ವಿನಾಶಕಾರಿ ಬ್ಯಾಟಿಂಗ್ ಲೈನ್ಅಪ್ ಹೊಂದಿರುವುದರಿಂದ ಕೆಎಲ್ ರಾಹುಲ್​​ಗೆ ತಮ್ಮ ಬೌಲರ್​ಗಳಿಂದ ಬಲವಾದ ನೆರವು ಬೇಕಾಗಿದೆ. ರವಿ ಬಿಷ್ಣೋಯ್ ಮತ್ತು ಕೃಣಾಲ್ ಪಾಂಡ್ಯ ಪಿಚ್​ನ ನಿಧಾನಗತಿಯ ಸ್ವರೂಪವನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳಬೇಕು.

ಇದನ್ನೂ ಓದಿ: IPL 2024 : ಡೆಲ್ಲಿ ಕ್ಯಾಪಿಟಲ್ಸ್​ ತಂಡ ಸೇರಿದ ಅಫಘಾನಿಸ್ತಾನ ತಂಡದ ಆಟಗಾರ

ರಾಜಸ್ಥಾನ್​ ತಂಡ ಬ್ಯಾಟಿಂಗ್ ಪ್ರದರ್ಶನವು ಎದುರಾಳಿಗಳ ಮೇಲೆ ಪ್ರಾಬಲ್ಯ ಸಾಧಿಸಲು ಸಹಾಯ ಮಾಡಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಹಿಂದಿನ ಪಂದ್ಯವನ್ನು ಒಂಬತ್ತು ವಿಕೆಟ್​​ಗಳಿಂದ ಗೆದ್ದಿದ್ದ ಅವರು ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮುಂದಿನ ಸುತ್ತಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಅವರಿಗೆ ಇನ್ನೂ ಒಂದು ಜಯದ ಅಗತ್ಯವಿದೆ. ಸ್ಯಾಮ್ಸನ್ ಬಳಗವು ತಮ್ಮ ಗೆಲುವಿನ ಓಟ ಮುಂದುವರಿಸಬಹುದು. ಮುಂಬರುವ ಪಂದ್ಯದಲ್ಲೂ ಅವರು ತಮ್ಮ ಎದುರಾಳಿಗಳನ್ನು ಸೋಲಿಸುವ ಗುರಿ ಹೊಂದಿದ್ದಾರೆ.

ಎಕಾನಾ ಕ್ರಿಕೆಟ್ ಕ್ರೀಡಾಂಗಣ ಪಿಚ್ ವರದಿ

ತಮ್ಮ ಉತ್ತಮ ಸ್ಟ್ರೋಕ್​ಗಳನ್ನು ಆಯ್ಕೆ ಮಾಡುವ ಬ್ಯಾಟ್ಸ್ ಮನ್ ಗಳಿಗೆ ಪಿಚ್​ ಸೂಕ್ತವಾಗಿದೆ. ವಿಕೆಟ್ ಬ್ಯಾಟಿಂಗ್​ ಆರಂಭಕ್ಕೆ ಪ್ರಾರಂಭಿಸಲು ಕಠಿಣವಾಗಿರಬಹುದು. ಆದರೆ ಆಟವು ಮುಂದುವರಿದಂತೆ ಬ್ಯಾಟಿಂಗ್ ಪರಿಸ್ಥಿತಿಗಳು ಸುಧಾರಿಸುತ್ತವೆ. ಕೆಲವೊಮ್ಮೆ, ಚೆಂಡು ಬ್ಯಾಟರ್​ಗಳ ನಿರೀಕ್ಷೆಗಿಂತ ವೇಗದಲ್ಲಿ ಪುಟಿದೇಳುತ್ತದೆ. ಸ್ಪಿನ್ನರ್​ಗಳು ಈ ಸ್ಥಳದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ನೇರ ಬೌಂಡರಿಗಳು ದೂರವಿರುವುದರಿಂದ, ಬ್ಯಾಟರ್​ಗಳು ತಮ್ಮ ಶಾಟ್​​ಗಳನ್ನು ಸರಿಯಾಗಿ ನಿರ್ಧರಿಬೇಕಾಗುತ್ತದೆ. ಲಕ್ನೋದಲ್ಲಿ ಮಳೆ ಸೂಚನೆ ಇಲ್ಲ. ಇದು ಸಂಪೂರ್ಣ ಮತ್ತು ನ್ಯಾಯಯುತ ಸ್ಪರ್ಧೆಗೆ ಪರಿಸ್ಥಿತಿಗಳನ್ನು ಸೂಕ್ತವಾಗಿಸುತ್ತದೆ.

ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.

ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಶಿಮ್ರಾನ್ ಹೆಟ್ಮೇಯರ್, ರೋವ್ಮನ್ ಪೊವೆಲ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಯಜುವೇಂದ್ರ ಚಾಹಲ್.

ಮುಖಾಮುಖಿ ದಾಖಲೆಗಳು

ಆಡಿದ ಪಂದ್ಯಗಳು- 4

  • ಲಕ್ನೋ ಸೂಪರ್ ಜೈಂಟ್ಸ್ ಗೆ ಜಯ- 1
  • ರಾಜಸ್ಥಾನ್ ರಾಯಲ್ಸ್ ಗೆಲುವು- 3

ಪಂದ್ಯದ ವಿವರ

  • ದಿನಾಂಕ ಶನಿವಾರ, ಏಪ್ರಿಲ್ 27, ಪಂದ್ಯ 44
  • ಸಮಯ: ಸಂಜೆ 7:30
  • ಪ್ರಸಾರ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಜಿಯೋ ಸಿನೆಮಾ ಅಪ್ಲಿಕೇಶನ್ ಮತ್ತು ವೆಬ್​ಸೈಟ್​
Continue Reading

ಕ್ರೀಡೆ

Rinku Singh : ಹಠ ಹಿಡಿದು ಕೊಹ್ಲಿಯಿಂದ ಮತ್ತೊಂದು ಬ್ಯಾಟ್ ಪಡೆದುಕೊಂಡ ರಿಂಕು ಸಿಂಗ್​​

Rinku Singh: ಏಪ್ರಿಲ್ 21ರಂದು ರಿವರ್ಸ್ ಪಂದ್ಯಕ್ಕೆ ಮುಂಚಿತವಾಗಿ ರಿಂಕು ಅವರು ಕೊಹ್ಲಿ ಕೊಟ್ಟಿರುವ ಬ್ಯಾಟ್ ಮುರಿದು ಹೋಯಿತು ಎಂದು ಬಹಿರಂಗಪಡಿಸಿದ್ದರು. ಅವರು ಆರ್​ಸಿಬಿಯ ಸ್ಟಾರ್ ಆಟಗಾರನ ಬಳಿ ಮತ್ತೊಂದು ಬ್ಯಾಟ್​​ ಕಳುಹಿಸುವಂತೆ ವಿನಯದಿಂದ ಕೇಳಿದ್ದರು.

VISTARANEWS.COM


on

Rinku Singh
Koo

ಬೆಂಗಳೂರು: ಕೋಲ್ಕತಾ ನೈಟ್ ರೈಡರ್ಸ್ (KKR) ತಂಡದ ಸ್ಟಾರ್ ಬ್ಯಾಟರ್​ ರಿಂಕು ಸಿಂಗ್ (Rinku Singh) ಅಂತಿಮವಾಗಿ ವಿರಾಟ್ ಕೊಹ್ಲಿಯಿಂದ ಎರಡನೇ ಬಾರಿಗೆ ಬ್ಯಾಟ್ ಪಡೆದುಕೊಂಡಿದ್ದಾರೆ. ಮಾರ್ಚ್ 29 ರಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ 2024 (IPL 2024) ಋತುವಿನಲ್ಲಿ ಕೆಕೆಆರ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪಂದ್ಯದ ನಂತರ ರಿಂಕುಕೊಹ್ಲಿ ಯಿಂದ ಪ್ರೀತಿಯ ಸಂಕೇತವಾಗಿ ಅವರಿಗೆ ಬ್ಯಾಟ್ ಪಡೆದುಕೊಂಡಿದ್ದರು.

ಏಪ್ರಿಲ್ 21ರಂದು ರಿವರ್ಸ್ ಪಂದ್ಯಕ್ಕೆ ಮುಂಚಿತವಾಗಿ ರಿಂಕು ಅವರು ಕೊಹ್ಲಿ ಕೊಟ್ಟಿರುವ ಬ್ಯಾಟ್ ಮುರಿದು ಹೋಯಿತು ಎಂದು ಬಹಿರಂಗಪಡಿಸಿದ್ದರು. ಅವರು ಆರ್​ಸಿಬಿಯ ಸ್ಟಾರ್ ಆಟಗಾರನ ಬಳಿ ಮತ್ತೊಂದು ಬ್ಯಾಟ್​​ ಕಳುಹಿಸುವಂತೆ ವಿನಯದಿಂದ ಕೇಳಿದ್ದರು.

ಕೆಕೆಆರ್ ಇತ್ತೀಚೆಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ರಿಂಕು ಕೊಹ್ಲಿ ಉಡುಗೊರೆಯಾಗಿ ನೀಡಿದ ಮತ್ತೊಂದು ಬ್ಯಾಟ್ ಅನ್ನು ಹಿಡಿದಿರುವುದು ಕಂಡುಬಂದಿದೆ. ‘ರಿಂಕು ಭಾಯ್, ಬ್ಯಾಟ್ ಮಿಲಾ?’ ಎಂದು ಅಭಿಮಾನಿಯೊಬ್ಬರು ರಿಂಕು ಅವರನ್ನು ಕೇಳಿದ್ದಾರೆ. ರಿಂಕು ಬ್ಯಾಟ್ ತೋರಿಸಿ ‘ಮಿಲ್ ಗಯಾ’ ಎಂದು ಹೇಳಿದ್ದಾರೆ.

ಕೆಕೆಆರ್​ ತಂಡದ ಭರ್ಜರಿ ಅಭಿಯಾನ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಗಮನಾರ್ಹ ಪ್ರದರ್ಶನ ನೀಡುತ್ತಿದೆ. ರಾಜಸ್ಥಾನ್ ರಾಯಲ್ಸ್ ಆಡಿರುವ 7 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಭಾರತ, ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಈ ಋತುವಿನಲ್ಲಿ ಕೆಕೆಆರ್ ಮತ್ತು ಆರ್​​ಸಿಬಿ ಎರಡು ಬಾರಿ ಮುಖಾಮುಖಿಯಾದಾಗ ಎರಡು ಬಾರಿಯ ಚಾಂಪಿಯನ್ಸ್ ಎರಡೂ ಸಂದರ್ಭಗಳಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿದರು.

ಇದನ್ನೂ ಓದಿ: IPL 2024 : ಡೆಲ್ಲಿ ಕ್ಯಾಪಿಟಲ್ಸ್​ ತಂಡ ಸೇರಿದ ಅಫಘಾನಿಸ್ತಾನ ತಂಡದ ಆಟಗಾರ

ಆರ್​ಸಿಬಿ ನಿರಾಶಾದಾಯಕ ಅಭಿಯಾನ ಮುಂದುವರಿಸಿದೆ. ಆದಾಗ್ಯೂ ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡವು ಪ್ರಸ್ತುತ 9 ಪಂದ್ಯಗಳಲ್ಲಿ 2 ಜಯಗಳೊಂದಿಗೆ ಹತ್ತು ತಂಡಗಳ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಹೈದರಾಬಾದ್​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ಗೆದ್ದು ಸ್ವಲ್ಯ ಚೈತನ್ಯ ಪಡೆದುಕೊಂಡಿದೆ.

ಕೋಲ್ಕತಾದ ಈಡನ್ ಗಾರ್ಡನ್ಸ್​​ನಲ್ಲಿ ಈ ಋತುವಿನಲ್ಲಿ ಕೆಕೆಆರ್ ಮತ್ತು ಆರ್​ಸಿಬಿ ಎರಡನೇ ಬಾರಿಗೆ ಮುಖಾಮುಖಿಯಾದಾಗ ಅದು ರೋಚಕ ಮುಖಾಮುಖಿಯಾಗಿತ್ತು. ಫಿಲ್ ಸಾಲ್ಟ್ ಅವರ 48 ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ ಕೆಕೆಆರ್ ಮೊದಲ ಇನ್ನಿಂಗ್ಸ್ ನಲ್ಲಿ 223 ರನ್ ಗಳ ಕಠಿಣ ಗುರಿಯನ್ನು ನಿಗದಿಪಡಿಸಿತು. ಆರ್​ಸಿಬಿ ಬ್ಯಾಟರ್​ಗಳ ದಿಟ್ಟ ಪ್ರಯತ್ನದ ಹೊರತಾಗಿಯೂ ಒಂದು ರನ್​ನಿಂದ ಬೆಂಗಳೂರು ಮೂಲದ ತಂಡ ಸೋತಿತು.

Continue Reading

ಪ್ರಮುಖ ಸುದ್ದಿ

IPL 2024 : ಡೆಲ್ಲಿ ಕ್ಯಾಪಿಟಲ್ಸ್​ ತಂಡ ಸೇರಿದ ಅಫಘಾನಿಸ್ತಾನ ತಂಡದ ಆಟಗಾರ

IPL 2024: ನೈಬ್ ಅವರ ಮೂಲ ಬೆಲೆ 50 ಲಕ್ಷ ರೂ.ಗೆ ಸಹಿ ಹಾಕಿದ್ದಾರೆ. ನಗದು ಸಮೃದ್ಧ ಲೀಗ್ನಲ್ಲಿ ಫ್ರಾಂಚೈಸಿಯನ್ನು ಪ್ರತಿನಿಧಿಸಲು ಅವರು ಆಯ್ಕೆಯಾಗಿರುವುದು ಇದೇ ಮೊದಲು. ರಶೀದ್ ಖಾನ್, ಮೊಹಮ್ಮದ್ ನಬಿ ಮತ್ತು ಇನ್ನೂ ಅನೇಕ ಸ್ಟಾರ್​​ಗಳು ಸೇರಿದಂತೆ 10 ತಂಡಗಳ ಪಂದ್ಯಾವಳಿ ಸೇರಿದ ಇತರ ಅಫ್ಘಾನಿಸ್ತಾನ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಅಫ್ಘಾನಿಸ್ತಾನದ ಮಾಜಿ ನಾಯಕ ಗುಲ್ಬಾದಿನ್ ನೈಬ್ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಸೇರಿಕೊಂಡಿದ್ದಾರೆ. ಗಾಯಗೊಂಡಿರುವ ಮಿಚೆಲ್ ಮಾರ್ಷ್ ಬದಲಿಗೆ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ 2024 ರ (IPL 2024) ಉಳಿದ ಭಾಗಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದೆ. ಆಸ್ಟ್ರೇಲಿಯಾದ ಆಲ್​ರೌಂಡರ್​​ ಮಾರ್ಷ್ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಭಾಗವಹಿಸುವುದಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಸೋಮವಾರ ಖಚಿತಪಡಿಸಿದ್ದಾರೆ. ಅನುಭವಿ ಆಟಗಾರ ಕ್ಯಾಪಿಟಲ್ಸ್ ಪರ ಕೇವಲ 4 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಆದರೆ ಹೆಚ್ಚು ಪ್ರಭಾವ ಬೀರದೇ ಕೇವಲ 61 ರನ್ ಗಳಿಸಿದ್ದಾರೆ. ಮೂರು ಇನ್ನಿಂಗ್ಸ್​​ಗಳಲ್ಲಿ ಅವರು ಏಕೈಕ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಹಿಂದೆ ಅಫ್ಘಾನಿಸ್ತಾನದ ವೈಟ್-ಬಾಲ್ ತಂಡಗಳನ್ನು ಮುನ್ನಡೆಸಿದ ಅನುಭವ ಹೊಂದಿರುವ ಮತ್ತೊಬ್ಬ ಸೀಮ್ ಬೌಲಿಂಗ್ ಆಲ್ರೌಂಡರ್ ನೈಬ್ ಈಗ ಮಾರ್ಷ್ ಅವರ ಸ್ಥಾನ ತುಂಬಲಿದ್ದಾರೆ. ನೈಬ್ ಬ್ಲೂ ಟೈಗರ್ಸ್ ಪರ 82 ಏಕದಿನ ಮತ್ತು 64 ಟಿ 20 ಪಂದ್ಯಗಳನ್ನು ಆಡಿದ್ದಾರೆ. ತಮ್ಮ ಟಿ20 ವೃತ್ತಿಜೀವನದಲ್ಲಿ, 32 ವರ್ಷದ ಧೋನಿ 21.68 ಸರಾಸರಿಯಲ್ಲಿ 802 ರನ್ ಗಳಿಸಿದ್ದಾರೆ ಮತ್ತು 127.30 ಸ್ಟ್ರೈಕ್ ರೇಟ್ ಹೊಂದಿದ್ದಾರೆ. 31.27ರ ಸರಾಸರಿಯಲ್ಲಿ 8.20ರ ಎಕಾನಮಿ ರೇಟ್​​ನಲ್ಲಿ 26 ವಿಕೆಟ್​​ಗಳನ್ನು ಪಡೆದಿದ್ದಾರೆ. ಐಪಿಎಲ್ 2024 ಕ್ಕೆ ಮುಂಚಿತವಾಗಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ 20 ಐ ಸರಣಿಯಲ್ಲಿ ಅವರು ಸಾಕಷ್ಟು ಪ್ರಭಾವಶಾಲಿಯಾಗಿದ್ದರು. ಲೋಗರ್ ಮೂಲದ ಆಟಗಾರ ಮೂರು ಪಂದ್ಯಗಳಿಂದ 112 ರನ್ ಗಳಿಸಿದ್ದಾರೆ ಮತ್ತು ಎರಡು ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಸರಣಿಯಲ್ಲಿ ಅವರು 193 .10 ರ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿದ್ದರು.

ನೈಬ್ ಅವರ ಮೂಲ ಬೆಲೆ 50 ಲಕ್ಷ ರೂ.ಗೆ ಸಹಿ ಹಾಕಿದ್ದಾರೆ. ನಗದು ಸಮೃದ್ಧ ಲೀಗ್ನಲ್ಲಿ ಫ್ರಾಂಚೈಸಿಯನ್ನು ಪ್ರತಿನಿಧಿಸಲು ಅವರು ಆಯ್ಕೆಯಾಗಿರುವುದು ಇದೇ ಮೊದಲು. ರಶೀದ್ ಖಾನ್, ಮೊಹಮ್ಮದ್ ನಬಿ ಮತ್ತು ಇನ್ನೂ ಅನೇಕ ಸ್ಟಾರ್​​ಗಳು ಸೇರಿದಂತೆ 10 ತಂಡಗಳ ಪಂದ್ಯಾವಳಿ ಸೇರಿದ ಇತರ ಅಫ್ಘಾನಿಸ್ತಾನ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

ಇದನ್ನೂ ಓದಿ: Virat Kohli : ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್​ ಬಗ್ಗೆ ಬೇಸರ ವ್ಯಕ್ತಪಡಿಸಿದ ಗವಾಸ್ಕರ್; ಏನಂದ್ರು ಅವರು?

ಪ್ರಸಕ್ತ ಋತುವಿನಲ್ಲಿ ಕಳಪೆ ಆರಂಭದ ನಂತರ, ರಿಷಭ್ ಪಂತ್ ನೇತೃತ್ವದ ತಂಡವು ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಗೆದ್ದು ಬಲವಾಗಿ ಪುಟಿದೆದ್ದಿದೆ. ಆಡಿರುವ 9 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿರುವ ಡೆಲ್ಲಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 27 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

IPL 2024 : ಐಪಿಎಲ್ ವಿಕ್ಷಣೆಯಲ್ಲಿ ಹೊಸ ದಾಖಲೆ ಬರೆದ ಡಿಸ್ನಿ ಹಾಟ್​​ಸ್ಟಾರ್​

ಮುಂಬೈ: ಐಪಿಎಲ್ 2024ರ (IPL 2024 ) ಆವೃತ್ತಿಯು ತನ್ನ ಅರ್ಧದ ಗಡಿ ದಾಟುತ್ತಿದೆ. 41 ಪಂದ್ಯ ಮುಗಿದಿರುವ ನಡುವೆ ಪಂದ್ಯಾವಳಿಯ ಅಧಿಕೃತ ಪ್ರಸಾರಕ ಡಿಸ್ನಿ ಸ್ಟಾರ್ ವೀಕ್ಷಕರ ಸಂಖ್ಯೆಯಲ್ಲಿ ಹೊಸ ದಾಖಲೆ ಮಾಡಿದೆ. ಟಿವಿ ಪ್ರಸಾರದ ವಿಚಾರದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ. ಬಾರ್ಕ್ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ಡಿಸ್ನಿ ಸ್ಟಾರ್ 47.5 ಕೋಟಿ ವೀಕ್ಷಕರನ್ನು ತಲುಪಿದೆ. ಒಟ್ಟು ವೀಕ್ಷಣೆಯ ಸಮಯವು ಆಶ್ಚರ್ಯಕರ ರೀತಿಯಲ್ಲಿ 24,500 ಕೋಟಿ ನಿಮಿಷಗಳನ್ನು ಸಾಧಿಸಿದೆ. ಇದು ಹಿಂದಿನ ಆವೃತ್ತಿಗೆ ಹೋಲಿಸಿದರೆ ಬಳಕೆಯಲ್ಲಿ 18% ಹೆಚ್ಚಳವಾಗಿದೆ. 2019 ರಲ್ಲಿ ದಾಖಲಾದ ಹಿಂದಿನ ಗರಿಷ್ಠಕ್ಕೆ ಹೋಲಿಸಿದರೆ ಪ್ರಸಾರಕರು ಲೈವ್ ಬ್ರಾಡ್ಕಾಸ್ಟ್ಗಾಗಿ ಟಿವಿ ವ್ಯಾಪ್ತಿಯಲ್ಲಿ 5% ಬೆಳವಣಿಗೆ ದಾಖಲಿಸಿದೆ. ಹಿಂದಿನ ಆವೃತ್ತಿಗೆ ಹೋಲಿಸಿದರೆ ಡಿಸ್ನಿ ಸ್ಟಾರ್ ಮೊದಲ 34 ಪಂದ್ಯಗಳಲ್ಲಿ ಟಿವಿಆರ್​ನಲ್ಲಿ 19% ಬೆಳವಣಿಗೆಯನ್ನು ಕಂಡಿದೆ.

ವಾರದಲ್ಲಿ ನಡೆದ ಮುಂಬಯಿ ಮತ್ತು ಸಿಎಸ್​ಕೆ ನಡುವಿನ ರೋಚಕ ಮುಖಾಮುಖಿಯು ಪಂದ್ಯಾವಳಿಯ ಅತಿದೊಡ್ಡ ಹೋರಾಟಗಳಲ್ಲಿ ಒಂದಾಗಿದೆ. ವಾಂಖೆಡೆಯಲ್ಲಿ ಸಿಎಸ್​​ಕೆ ಗೆದ್ದ ಪಂದ್ಯವು ಎಂಎಸ್ ಧೋನಿ ಅವರ ಅದ್ಭುತ ಬ್ಲಿಟ್ಜ್ (4 ಎಸೆತಗಳಲ್ಲಿ 20 ರನ್) ಸಮಯದಲ್ಲಿ ಟಿವಿಯಲ್ಲಿ 6.3 ಕೋಟಿ ಮಂದಿ ಏಕಕಾಲಕ್ಕೆ ವಿಕ್ಷಿಸಿದ್ದಾರೆ. ಇದು ಪ್ರಸ್ತುತ ಮತ್ತು ಹಿಂದಿನ ಋತುವಿನಲ್ಲಿ ಯಾವುದೇ ಲೀಗ್ ಪಂದ್ಯದಲ್ಲಿ ಅತಿ ದೊಡ್ಡ ದಾಖಲೆಯಾಗಿದೆ. ಎಂಐ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ಸಮಯದಲ್ಲಿ ಸ್ಟಾರ್ ಸ್ಪೋರ್ಟ್ಸ್ ಶೋರ್ ಮೀಟರ್ ಕ್ರೀಡಾಂಗಣದಲ್ಲಿ 131 ಡೆಸಿಬಲ್​ಗೆ ಏರಿತ್ತು. ಇದು ಈ ಋತುವಿನಲ್ಲಿ ನಡೆದ ಪಂದ್ಯಗಳಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಲೀಗ್ ಪಂದ್ಯವಾಗಿದೆ. ಈ ಪಂದ್ಯವು 2024 ರ ಏಪ್ರಿಲ್ 14 ರಂದು 1540 ಕೋಟಿ ನಿಮಿಷಗಳ ವೀಕ್ಷಣೆಯ ಸಮಯದೊಂದಿಗೆ ಟಿವಿಯಲ್ಲಿ 17.4 ಕೋಟಿ ವೀಕ್ಷಕರನ್ನು ಆಕರ್ಷಿಸಿತ್ತು.

Continue Reading
Advertisement
ಕರ್ನಾಟಕ6 mins ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Mohammad Shami
ಪ್ರಮುಖ ಸುದ್ದಿ54 mins ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ1 hour ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Udupi Sri Krishna Temple
ಕರ್ನಾಟಕ2 hours ago

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

IPL 2024
ಕ್ರೀಡೆ2 hours ago

IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

Lok Sabha Election 2024 2 villagers who boycotted voting cast their votes in evening
ಕರ್ನಾಟಕ2 hours ago

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Modi in Karnataka stay in Belagavi tomorrow and Huge gatherings at five places
Lok Sabha Election 20243 hours ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ3 hours ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

deepfake
ತಂತ್ರಜ್ಞಾನ3 hours ago

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Lok Sabha Election 2024 Bjp workers clash in Chikmagalur
Lok Sabha Election 20243 hours ago

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ10 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202411 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202411 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ17 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌