IND VS AUS: ಮೊದಲ ಏಕದಿನ; ರಾಹುಲ್​ಗೆ ಅವಕಾಶ - Vistara News

ಕ್ರಿಕೆಟ್

IND VS AUS: ಮೊದಲ ಏಕದಿನ; ರಾಹುಲ್​ಗೆ ಅವಕಾಶ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೆ.ಎಲ್​. ರಾಹುಲ್​ಗೆ ಕೀಪಿಂಗ್​ ಜವಾಬ್ದಾರಿ ನೀಡಲಾಗಿದೆ.

VISTARANEWS.COM


on

IND VS AUS: First ODI; Opportunity for Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೆಸ್ಟ್​ ಸರಣಿಯಲ್ಲಿ ಕಳಪೆ ಬ್ಯಾಟಿಂಗ್​ ನಡೆಸಿ ಟೀಕೆಗೆ ಗುರಿಯಾಗಿದ್ದ ಕೆ.ಎಲ್​ ರಾಹುಲ್(KL Rahul)​ ಅವರಿಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿತ್ತು. ಆದರೆ ರಾಹುಲ್​ಗೆ ಈ ಪಂದ್ಯದಲ್ಲಿ ಅವಕಾಶ ಸಿಕ್ಕಿದೆ.

ಮುಂಬಯಿಯ ವಾಂಖೆಡೆ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ಟಾಸ್​ ಗೆದ್ದು ಮೊದಲು ಬೌಲಿಂಗ್​ ಆಯ್ದುಕೊಂಡಿದೆ. ಬ್ಯಾಟಿಂಗ್​ ಆಹ್ವಾನ ಪಡೆದ ಆಸ್ಟ್ರೇಲಿಯಾ 11 ರನ್​ಗೆ ಒಂದು ವಿಕೆಟ್ ​ಕಳೆದುಕೊಂಡು ಆಟ ಮುಂದುವರಿಸಿದೆ. ಈ ರಾಹುಲ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಲಿದ್ದಾರೆ. ಆರಂಭಿಕರಾಗಿ ಇಶಾನ್​ ಕಿಶನ್(Ishan Kishan)​ ಮತ್ತು ಶುಭಮನ್​ ಗಿಲ್(Shubman Gill)​ ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ.

ಇದನ್ನೂ ಓದಿ IND VS AUS: ಮುಂಬೈಯಲ್ಲಿ ಕಾವೇರಿಸಿಕೊಳ್ಳಲಿದೆ ಭಾರತ-ಆಸ್ಟ್ರೇಲಿಯಾ ಏಕದಿನ ಹೋರಾಟ

ರಾಹುಲ್​ ಮಧ್ಯಮ ಕ್ರಮಾಂಕದಲ್ಲಿ ಆಡುವ ಜತೆಗೆ ಕೀಪಿಂಗ್ ಕೂಡ ನಡೆಸಲಿದ್ದಾರೆ. ಈ ಹಿಂದೆಯೇ ರಾಹುಲ್​ ಅವರಿಗೆ ಕೀಪಿಂಗ್​ ನೀಡಲಾಗುವುದು ಎಂದು ಹೇಳಲಾಗಿತ್ತು. ನಿರೀಕ್ಷೆಯಂತೆ ರಾಹುಲ್​ಗೆ ಕೀಪಿಂಗ್​ ನೀಡಲಾಗಿದೆ. ಏಷ್ಯಾ ಕಪ್​ ವೇಳೆ ಗಾಯಗೊಂಡು ತಂಡದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ(Ravindra Jadeja) ಇದೇ ಮೊದಲ ಬಾರಿ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದ್ದಾರೆ. ಆದರೆ ಇದಕ್ಕೂ ಮುನ್ನ ನಡೆದ ಟೆಸ್ಟ್​ನಲ್ಲಿ ಅವರು ಆಡಿದ್ದರು.​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಮುಂಬೈ ಗೆದ್ದರೂ ಪಾಂಡ್ಯಗಿಲ್ಲ ಖುಷಿ; ನಿಧಾನಗತಿಯ ಓವರ್​ಗೆ ಬಿತ್ತು 12 ಲಕ್ಷ ದಂಡ

IPL 2024: ಪಾಂಡ್ಯ ಇದುವರೆಗೆ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಘೋರ ವೈಫಲ್ಯ ಕಂಡಿದ್ದಾರೆ. ಇದೇ ಪ್ರದರ್ಶನ ಮುಂದಿನ ಪಂದ್ಯದಲ್ಲಿಯೂ ಕಂಡುಬಂದರೆ ಅವರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಡ್ಡಿಯಿಲ್ಲ.

VISTARANEWS.COM


on

IPL 2024
Koo

ಮುಂಬಯಿ: ಗುರುವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​(PBKS vs MI) ವಿರುದ್ಧ ಮುಂಬೈ ಇಂಡಿಯನ್ಸ್​ 9 ರನ್​ಗಳ ರೋಚಕ ಗೆಲುವು ಸಾಧಿಸಿತು. ಆದರೆ, ಈ ಪಂದ್ಯದಲ್ಲಿ (IPL 2024) ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣಕ್ಕೆ ಮುಂಬೈ ನಾಯಕ ಹಾರ್ದಿಕ್​ ಪಾಂಡ್ಯ(Hardik Pandya)​ ಅವರಿಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

“ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಐಪಿಎಲ್​ನ ಕೋಡ್​ ಆಫ್​ ಕಂಡಕ್ಟ್​ನ ಮೊದಲ​ ಅಪರಾಧವಾದ ಕಾರಣ ಪಾಂಡ್ಯಗೆ 12 ಲಕ್ಷ ದಂಡ ವಿಧಿಸಲಾಗಿದೆ. ಇದೇ ತಪ್ಪು ಮತ್ತೆ ಮುಂದುವರಿದರೆ 24 ಲಕ್ಷ ದಂಡ ಬರೆ ಬೀಳಲಿದೆ. ಹೀಗಾಗಿ ಪಾಂಡ್ಯ ಮುಂದಿನ ಪಂದ್ಯದಲ್ಲಿ ಎಚ್ಚರಿಕೆಯಿಂದ ಆಡಬೇಲಿದೆ. ಬೆನ್ನು ನೋವಿನಿಂದ ಚೇತರಿಕೆಂಡು ಐಪಿಎಲ್​ ಆಡಲಿಳಿದ ಪಾಂಡ್ಯ ಇದುವರೆಗೆ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಘೋರ ವೈಫಲ್ಯ ಕಂಡಿದ್ದಾರೆ. ಇದೇ ಪ್ರದರ್ಶನ ಮುಂದಿನ ಪಂದ್ಯದಲ್ಲಿಯೂ ಕಂಡುಬಂದರೆ ಅವರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಡ್ಡಿಯಿಲ್ಲ.

ಇದನ್ನೂ ಓದಿ IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್​ ಶರ್ಮ

​ಸ್ಲೋ ಓವರ್​ ರೇಟ್​ ನಿಯಮದ ಪ್ರಕಾರ ಮೊದಲ ತಪ್ಪಿಗೆ ನಾಯಕನನ್ನು ದೋಷಿಯನ್ನಾಗಿ ಮಾಡಲಾಗುತ್ತದೆ. ಮೊದಲ ಬಾರಿಯ ತಪ್ಪಿಗೆ 12 ಲಕ್ಷ ರೂ. ದಂಡ ಹಾಕಲಾಗುತ್ತದೆ. ಇದು ಪುನರಾವರ್ತನೆಯಾದಲ್ಲಿ 24 ಲಕ್ಷ ರೂ. ದಂಡ ನಿಗದಿ ಮಾಡಲಾಗಿದೆ. ಅಲ್ಲದೆ ತಂಡದ ಇತರೆ ಆಟಗಾರರು ಪಂದ್ಯದ ಶುಲ್ಕದ ಶೇ.25 ರಷ್ಟು ಮೊತ್ತವನ್ನು ದಂಡವಾಗಿ ನೀಡಬೇಕು. ಒಂದೊಮ್ಮೆ ಮೂರನೇ ಬಾರಿ ಮತ್ತೆ ಇದೇ ತಪ್ಪು ಮರುಕಳಿಸಿದರೆ ಆಗ ನಾಯಕ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಲಿದ್ದಾರೆ.

ಪಂದ್ಯ ಗೆದ್ದ ಮುಂಬಯಿ


ಮಹಾರಾಜಾ ಯಾದವೀಂದ್ರ ಸಿಂಗ್​ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಕೇವಲ 9 ರನ್​ ಅಂತರದಿಂದ ಸೋಲೊಪ್ಪಿಕೊಂಡಿತು. ಗೆಲುವು ಸಾಧಿಸಿದ ಮುಂಬೈ ಅಂಕಪಟ್ಟಿಯಲ್ಲಿ(IPL 2024 Points Table) ಪ್ರಗತಿ ಸಾಧಿಸಿದೆ. ಈ ಪಂದ್ಯಕ್ಕೂ ಮುನ್ನ 9ನೇ ಸ್ಥಾನದಲ್ಲಿದ್ದ ಮುಂಬೈ ಈ ಗೆಲುವಿನೊಂದಿಗೆ 7ನೇ ಸ್ಥಾನಕ್ಕೇರಿದೆ. ಸೋಲು ಕಂಡ ಪಂಜಾಬ್​ 9ನೇ ಸ್ಥಾನಕ್ಕೆ ಕುಸಿದಿದೆ.

Continue Reading

ಕ್ರೀಡೆ

IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್​ ಶರ್ಮ

IPL 2024: ಇಂಪ್ಯಾಕ್ಟ್ ಪ್ಲೇಯರ್ ಸೇರ್ಪಡೆಯಿಂದ ಆಟಕ್ಕೆ ಹೊಸತನ ಬಂದಂತಾದರೂ ಈ ನಿಯಮವು ಕೆಲವು ಮಿತಿಗಳನ್ನು ಹೊಂದಿದೆ. 10 ಓವರ್‌ ಗಳಿಗಿಂತ ಕಡಿಮೆಯಿರುವ ಆಟದಲ್ಲಿ (ಮಳೆ ಸೇರಿದಂತೆ ಹಲವು ಕಾರಣದಿಂದ) ಈ ನಿಯಮ ಅನ್ವಯಿಸುವುದಿಲ್ಲ. ಅಲ್ಲದೆ, ಪ್ರತಿ ಪಂದ್ಯದಲ್ಲೂ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸಲೇ ಬೇಕು ಎಂಬ ಒತ್ತಾಯವಿಲ್ಲ.

VISTARANEWS.COM


on

IPL 2024
Koo

ಮುಂಬಯಿ: ಐಪಿಎಲ್​ನಲ್ಲಿ(IPL 2024) ಕಳೆದ ವರ್ಷ ಜಾರಿಗೆ ತಂದ ವಿನೂತನ ಇಂಪ್ಯಾಕ್ಟ್ ಪ್ಲೇಯರ್(Impact Player) ನಿಯಮದ ಬಗ್ಗೆ ಟೀಮ್​ ಇಂಡಿಯಾದ ನಾಯಕ, ಮುಂಬೈ ಇಂಡಿಯನ್ಸ್​ನ ಆಟಗಾರ ರೋಹಿತ್​ ಶರ್ಮ(Rohit Sharma) ಶರ್ಮ ​ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿಯಮದಿಂದ ಭಾರತೀಯ ಕ್ರಿಕೆಟ್‌ಗೆ ದೊಡ್ಡ ನಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ ರೋಹಿತ್​, ‘ಕ್ರಿಕೆಟ್ 11 ಜನ ಆಡುವ ಆಟ, 12 ಜನರಿಂದಲ್ಲ, ಇಂಪ್ಯಾಕ್ಟ್ ಆಟಗಾರ ನಿಯಮದಿಂದಾಗಿ ನೈಜ ಕ್ರಿಕೆಟ್​ಗೆ ಹಾನಿಯಾಗಿದೆ. ಇದು ಮನರಂಜನೆ ಒದಗಿಸಬಹುದೇ ಹೊರತು ಕ್ರಿಕೆಟ್​ ಬೆಳವಣಿಗೆಗೆ ಅಪಾಯಕಾರಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇಂಪ್ಯಾಕ್ಟ್ ನಿಯಮದಿಂದ ಓರ್ವ ಆಟಗಾರನಿಗೆ ತನ್ನ ಸಾಮರ್ಥ್ಯವನ್ನು ತೋರ್ಪಡಿಸುವ ಅವಕಾಶ ಸಿಗುತಿಲ್ಲ. ಉದಾಹರಣೆಗೆ ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಸೇರಿದಂತೆ ಅನೇಕ ಆಲ್ರೌಂಡರ್‌ಗಳಿಗೆ ಬ್ಯಾಟಿಂಗ್​ ಸಿಕ್ಕರೆ ಬೌಲಿಂಗ್​ ಸಿಗುತ್ತಿಲ್ಲ. ಬೌಲಿಂಗ್​ ಸಿಕ್ಕರೆ ಬ್ಯಾಟಿಂಗ್​ ಸಿಗುತ್ತಿಲ್ಲ ಎಂದು ರೋಹಿತ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

ಇಂಪ್ಯಾಕ್ಟ್ ನಿಯಮ ಎಂದರೇನು?

ಇಂಪ್ಯಾಕ್ಟ್ ಪ್ಲೇಯರ್ ನಿಯಮವು ಆಟದ ಸಮಯದಲ್ಲಿ ಯುದ್ಧತಂತ್ರದ ಬದಲಾವಣೆಯನ್ನು ಮಾಡಲು ತಂಡಕ್ಕೆ ಅವಕಾಶವನ್ನು ನೀಡುತ್ತದೆ. ಟಾಸ್ ಸಮಯದಲ್ಲಿ, ನಾಯಕನು ಆರಂಭಿಕ 11 ಆಟಗಾರರ ಜೊತೆಗೆ ನಾಲ್ಕು ಬದಲಿ ಆಟಗಾರರನ್ನು ಉಲ್ಲೇಖಿಸಬೆಕು. ಈ ಬದಲಿ ಆಟಗಾರನು (ಇಂಪ್ಯಾಕ್ಟ್ ಪ್ಲೇಯರ್) ಇನ್ನಿಂಗ್ಸ್‌ ನ 14 ನೇ ಓವರ್‌ ನ ಮುಕ್ತಾಯದ ಮೊದಲು ಯಾವುದೇ ನಿರ್ದಿಷ್ಟ ಹಂತದಲ್ಲಿ ಆರಂಭಿಕ 11 ನ ಸದಸ್ಯರನ್ನು ಬದಲಾಯಿಸಬಹುದು. ಆಟಗಾರನು ಬ್ಯಾಟಿಂಗ್ ಮಾಡಲು ಹಾಗೂ ತನ್ನ ಸಂಪೂರ್ಣ ಕೋಟಾದ (ನಾಲ್ಕು) ಓವರ್‌ಗಳನ್ನು ಪೂರ್ಣಗೊಳಿಸಲು ಅವಕಾಶವಿದೆ.

ಮತ್ತೊಂದು ವಿಶೇಷವೆಂದರೆ ಇಂಪ್ಯಾಕ್ಟ್ ಪ್ಲೇಯರ್ ಈಗಾಗಲೇ ಔಟ್ ಆಗಿರುವ ಆಟಗಾರನ ಬದಲಿಯಾಗಿ ಬಂದು ಮತ್ತೊಮ್ಮೆ ಬ್ಯಾಟಿಂಗ್ ಮಾಡಬಹುದು. ಆದರೆ ತಂಡದಲ್ಲಿ ಕೇವಲ 11 ಬ್ಯಾಟರ್‌ ಗಳಿಗೆ ಬ್ಯಾಟಿಂಗ್ ಗೆ ಅವಕಾಶವಿದೆ. ಮತ್ತೊಂದೆಡೆ, ಈಗಾಗಲೇ ಕೆಲವು ಓವರ್‌ ಗಳನ್ನು ಬೌಲ್ ಮಾಡಿದ ಬೌಲರ್ ಬದಲಿಗೆ ಬಂದು ನಾಲ್ಕು ಓವರ್‌ ಗಳ ಪೂರ್ಣ ಕೋಟಾ ಬೌಲ್ ಮಾಡಬಹುದು.

ಡಕ್​ವರ್ತ್​ ನಿಯದಲ್ಲಿ ಇದು ಅನ್ವಯವಾಗುದಿಲ್ಲ


ಇಂಪ್ಯಾಕ್ಟ್ ಪ್ಲೇಯರ್ ಸೇರ್ಪಡೆಯಿಂದ ಆಟಕ್ಕೆ ಹೊಸತನ ಬಂದಂತಾದರೂ ಈ ನಿಯಮವು ಕೆಲವು ಮಿತಿಗಳನ್ನು ಹೊಂದಿದೆ. 10 ಓವರ್‌ ಗಳಿಗಿಂತ ಕಡಿಮೆಯಿರುವ ಆಟದಲ್ಲಿ (ಮಳೆ ಸೇರಿದಂತೆ ಹಲವು ಕಾರಣದಿಂದ) ಈ ನಿಯಮ ಅನ್ವಯಿಸುವುದಿಲ್ಲ. ಅಲ್ಲದೆ, ಪ್ರತಿ ಪಂದ್ಯದಲ್ಲೂ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸಲೇ ಬೇಕು ಎಂಬ ಒತ್ತಾಯವಿಲ್ಲ. ಆದರೆ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸುವ ಮೊದಲು ನಾಯಕ ಅಥವಾ ಮುಖ್ಯ ಕೋಚ್ ಅಥವಾ ಮ್ಯಾನೇಜರ್ ಅದನ್ನು ಆನ್-ಫೀಲ್ಡ್ ಅಂಪೈರ್‌ ಗೆ ತಿಳಿಸಬೇಕು.

ಓವರ್​ ಮುಕ್ತಾಯದ ಬಳಿಕವೇ ಜಾರಿ

ಇಂಪ್ಯಾಕ್ಟ್ ಪ್ಲೇಯರ್ ಓವರ್‌ ನಡುವಿನಲ್ಲಿ ಬರುವಂತಿಲ್ಲ. ಓವರ್ ಮುಗಿದ ಬಳಿಕವಷ್ಟೇ ಆಟಕ್ಕೆ ಬರಬಹುದು. ಆದಾಗ್ಯೂ, ಕೆಲವು ವಿನಾಯಿತಿಗಳಿದ್ದು, ಬ್ಯಾಟಿಂಗ್ ತಂಡವು ವಿಕೆಟ್ ಪತನದ ಸಮಯದಲ್ಲಿ ಅದರ ಇಂಪ್ಯಾಕ್ಟ್ ಪ್ಲೇಯರ್ ಕಾರ್ಡ್ ಅನ್ನು ಓವರ್ ನಡುವೆ ಬಳಸಿಬಹುದು, ಫೀಲ್ಡಿಂಗ್ ತಂಡದಲ್ಲಿ ಗಾಯಗೊಂಡ ಫೀಲ್ಡರ್ ಬದಲು ಓವರ್ ನ ನಡುವೆ ಇಂಪ್ಯಾಕ್ಟ್ ಪ್ಲೇಯರ್‌ ನನ್ನು ಆಟಕ್ಕೆ ಕರೆಯಬಹುದು

Continue Reading

ಕ್ರೀಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Virat Kohli: ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡಿದ 7 ಪಂದ್ಯಗಳಲ್ಲಿ 361 ರನ್​ ಬಾರಿಸಿ ಸದ್ಯ ಟೂರ್ನಿಯಲ್ಲಿ ಅತ್ಯಧಿಕ ರನ್​ಗಳಿಸಿ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

VISTARANEWS.COM


on

virat kohli
Koo

ಜೈಪುರ: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿಗೆ(Virat Kohli) ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅದರಲ್ಲಿಯೂ ಕೊಹ್ಲಿಯನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಕೊಹ್ಲಿ ಮೇಲಿನ ಅಭಿಮಾನಕ್ಕೋಸ್ಕರ ಜೈಪುರದಲ್ಲಿ ಕೊಹ್ಲಿಯ ಮೇಣದ ಪ್ರತಿಮೆಯೊಂದನ್ನು(Virat Kohli wax statue) ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆ ಜೈಪುರದ ವ್ಯಾಕ್ಸ್‌ ಮ್ಯೂಸಿಯಂನಲ್ಲಿದೆ. ಗುರುವಾರ ಇದನ್ನು ಅನಾವರಣಗೊಳಿಸಲಾಗಿತ್ತು.

35 ಕೆ.ಜಿ. ತೂಕದ ಕೊಹ್ಲಿ ಅವರ ಪ್ರತಿಮೆಯನ್ನು ಸುಮಾರು ಎರಡು ತಿಂಗಳಲ್ಲಿ ಕೆತ್ತಲಾಗಿದೆ. ಈ ಮ್ಯೂಸಿಯಂನಲ್ಲಿ ಈಗಾಗಗಲೇ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಸಚಿನ್‌ ತೆಂಡೂಲ್ಕರ್‌ ಮತ್ತು ಎಂ.ಎಸ್‌. ಧೋನಿ ಸಹಿತ 44 ಮಂದಿಯ ಮೇಣದ ಪ್ರತಿಮೆಗಳಿವೆ. ಮಹಾತ್ಮಾ ಗಾಂಧಿ, ಜವಾಹರ್‌ಲಾರ್‌ ನೆಹರೂ, ಎಪಿಜೆ ಅಬ್ದುಲ್‌ ಕಲಾಂ, ಸುಭಾಷ್‌ಚಂದ್ರ ಬೋಸ್‌, ಭಗತ್‌ ಸಿಂಗ್‌, ಕಲ್ಪನಾ ಚಾವ್ಲಾ, ಅಮಿತಾಭ್‌ ಬಚ್ಚನ್‌ ಮತ್ತು ಮದರ್‌ ತೆರೇಸಾ ಅವರ ಪ್ರತಿಮೆಯಿದೆ. ಕೊಹ್ಲಿಯ ಪ್ರತಿಮೆಯನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಬರುತ್ತಿದ್ದಾರೆ ಎಂದು ಮ್ಯೂಸಿಯಂನ ಸಂಸ್ಥಾಪಕ ನಿರ್ದೇಶಕ ಅನೂಪ್‌ ಶ್ರೀವಾಸ್ತವ ಹೇಳಿದ್ದಾರೆ.

ಕಳೆದ ವರ್ಷ ದೆಹಲಿಯ ಮೇಡಮ್ ಟುಸ್ಸಾಡ್ಸ್‌ನಲ್ಲಿರುವ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಗೆ ಯುವತಿಯೊಬ್ಬಳು ಲಿಪ್ ಕಿಸ್ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಜತೆಗೆ ಮೇಣದ ಪ್ರತಿಮೆಯೊಂದಿಗೆ ಯುವತಿ ಪೋಸ್ ನೀಡಿರುವ ಫೋಟೋಗಳು ಕೂಡ ವೈರಲ್ ಆಗಿತ್ತು.

ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡಿದ 7 ಪಂದ್ಯಗಳಲ್ಲಿ 361 ರನ್​ ಬಾರಿಸಿ ಸದ್ಯ ಟೂರ್ನಿಯಲ್ಲಿ ಅತ್ಯಧಿಕ ರನ್​ಗಳಿಸಿ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ವಿರಾಟ್​ ಅವರು ರೋಹಿತ್​ ಜತೆ ಆರಂಭಿಕನಾಗಿ ಆಡಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

ಏಕದಿನ ವಿಶ್ವಕಪ್​ನಲ್ಲಿ ಹಲವು ದಾಖಲೆ


ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಬ್ಯಾಟಿಂಗ್​ ವಿರಾಟ ದರ್ಶನ ತೋರಿದ್ದ ಕೊಹ್ಲಿ ಟೂರ್ನಿಯ ಟಾಪ್‌ ಸ್ಕೋರರ್‌ ಆಗಿ ಹೊರಮೊಮ್ಮಿದ್ದರು. ಅಲ್ಲದೆ ತಮ್ಮ ಹೆಸರಿಗೆ ನಾನಾ ದಾಖಲೆಗಳನ್ನೂ ಬರೆದಿದ್ದರು. ಲೀಗ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 101 ರನ್‌ ಗಳಿಸಿ ಸಚಿನ್​ ಅವರ 49ನೇ ಶತಕವನ್ನು ಸರಿಗಟ್ಟಿದ್ದರು. ನ್ಯೂಜಿಲ್ಯಾಂಡ್‌ ವಿರುದ್ಧದ ಸೆಮಿಫೈನಲ್‌ನಲ್ಲಿ 117 ರನ್‌ ಗಳಿಸಿದ ಕೊಹ್ಲಿ, ಸಚಿನ್​ ಅವರ ದಾಖಲೆ ಮುರಿದು 50ನೇ ಸೆಂಚುರಿ ಬಾರಿಸಿ ದಾಖಲೆ ನಿರ್ಮಿಸಿದ್ದರು. ಒಟ್ಟಾರೆಯಾಗಿ ಟೂರ್ನಿಯಲ್ಲಿ ಆಡಿದ 11 ಪಂದ್ಯಗಳಲ್ಲಿ 765 ರನ್​ ಬಾರಿಸಿದ್ದರು.

Continue Reading

ಕ್ರೀಡೆ

IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

IPL 2024: ಈ ಬಾರಿಯ ಗ್ರೀನ್‌ ಜೆರ್ಸಿಯ ವಿನ್ಯಾಸದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಹಸಿರಿನ ಜತೆಗೆ ಕಡು ನೀಲಿ ಬಣ್ಣವನ್ನು ಸೇರಿಸಿಲಾಗಿದೆ. ಹಿಂದಿನ ಆವೃತ್ತಿಯಲ್ಲಿ ಹಸಿರು ಮತ್ತು ಕಪ್ಪು ಬಣ್ಣ ವಿಶ್ರಿತ ಜೆರ್ಸಿಯನ್ನು ಬಳಸಲಾಗಿತ್ತು.

VISTARANEWS.COM


on

IPL 2024
Koo

ಕೋಲ್ಕತ್ತಾ: ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತಂಡ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಆಡಿದ 7 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಸೋತು ಕೊನೆಯ ಸ್ಥಾನಿಯಾಗಿದೆ. ಮುಂದಿನ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್​ ಪ್ರವೇಶ ಪಡೆಯಬಹುದು. ಮುಂದಿನ ಪಂದ್ಯವನ್ನು ಕೆಕೆಆರ್(KKR)​ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೋ ಗ್ರೀನ್‌ ಅಭಿಯಾನದ ಭಾಗವಾಗಿ ಹಸಿರು(RCB Green Jersey) ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಎಂದು ಫ್ರಾಂಚೈಸಿ ಅಧಿಕೃತ ಮಾಹಿತಿ ನೀಡಿದೆ. ಈ ಮೂಲಕ ಈ ಐಪಿಎಲ್‌ನಲ್ಲೂ(IPL 2024) ಆರ್​ಸಿಬಿಯ ಗೋ ಗ್ರೀನ್‌ ಅಭಿಯಾನ ಮುಂದುವರಿಯಲಿದೆ. ಸ್ವಚ್ಛ ಹಾಗೂ ಹಸಿರು ಪರಿಸರವೇ ಈ ಬಾರಿಯ ಪ್ರಮುಖ ಉದ್ದೇಶ.

“ಬಣ್ಣಗಳ ಬದಲಾವಣೆಯು ಅದೃಷ್ಟದಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಭಾವಿಸುತ್ತೇವೆ!” ಎಂದು ಬರೆದಿಕೊಂಡು ಮುಂದಿನ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ತಂಡ ಕಣಕ್ಕಿಳಿಯಲಿದೆ ಎನ್ನುವ ವಿಚಾರವನ್ನು ಫ್ರಾಂಚೈಸಿ ತನ್ನ ಟ್ವಿಟರ್ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ. ಕೆಕೆಆರ್​ ಮತ್ತು ಆರ್​ಸಿಬಿ ನಡುವಣ ಪಂದ್ಯ ಏಪ್ರಿಲ್​ 21ರಂದು ನಡೆಯಲಿದೆ. ಈಡನ್​ ಗಾರ್ಡನ್ಸ್​ನಲ್ಲಿ ಪಂದ್ಯ ನಡೆಯಲಿದೆ. ಇದು ಹಗಲು ಪಂದ್ಯವಾಗಿದೆ.

​2011 ರಿಂದ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್​ಸಿಬಿ ತಮ್ಮ ‘ಗೋ ಗ್ರೀನ್’ ಅಭಿಯಾನದಲ್ಲಿ ತೊಡಗಿಕೊಂಡಿತ್ತು. ಇದೇ ಕಾರಣಕ್ಕೆ ಪ್ರತಿ ಆವೃತ್ತಿಯಲ್ಲಿಯೂ ಒಂದು ಪಂದ್ಯವನ್ನು ಹಸಿರು ಜೆರ್ಸಿಯಲ್ಲಿ ಆಡುತ್ತಿದೆ. ಆದರೆ 2021ರಲ್ಲಿ, ಹಸಿರು ಜರ್ಸಿಯಲ್ಲಿ ಆಡುವ ಬದಲು ತಂಡವು ಒಂದು ಪಂದ್ಯದಲ್ಲಿ ನೀಲಿ ಜರ್ಸಿಯಲ್ಲಿ ಆಡಿತ್ತು. ಇದಕ್ಕೆ ಕಾರಣ ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಂಚೂಣಿಯಲ್ಲಿರುವ ಕಾರ್ಮಿಕರಿಗೆ ಅವರ ತ್ಯಾಗ ಮತ್ತು ಕಠಿಣ ಪರಿಶ್ರಮಕ್ಕೆ ಗೌರವ ಸಲ್ಲಿಸಲು ಈ ನೀಲಿ ಜೆರ್ಸಿ ಧರಿಸಿ ಆಡಿತ್ತು.

ಇದನ್ನೂ ಓದಿ IPL 2024 Points Table: 3ನೇ ಗೆಲುವು ಸಾಧಿಸಿದ ಬಳಿಕ ಮುಂಬೈಗೆ ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ?

ಈ ಬಾರಿಯ ಗ್ರೀನ್‌ ಜೆರ್ಸಿಯ ವಿನ್ಯಾಸದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಹಸಿರಿನ ಜತೆಗೆ ಕಡು ನೀಲಿ ಬಣ್ಣವನ್ನು ಸೇರಿಸಿಲಾಗಿದೆ. ಹಿಂದಿನ ಆವೃತ್ತಿಯಲ್ಲಿ ಹಸಿರು ಮತ್ತು ಕಪ್ಪು ಬಣ್ಣ ವಿಶ್ರಿತ ಜೆರ್ಸಿಯನ್ನು ಬಳಸಲಾಗಿತ್ತು.

ಪ್ಲೇ ಆಫ್ ಆಸೆ ಜೀವಂತ

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಆರ್‌ಸಿಬಿ ಪ್ಲೇಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.

Continue Reading
Advertisement
India’s Russian oil imports hit record high in February
ಪ್ರಮುಖ ಸುದ್ದಿ22 seconds ago

Israel- Iran war: ಇರಾನ್‌ ವಾಯುನೆಲೆ ಮೇಲೆ ಇಸ್ರೇಲ್‌ ದಾಳಿ ಆರಂಭ; ಕಚ್ಚಾ ತೈಲ ಬೆಲೆ 4% ಏರಿಕೆ

Teja Sajja Hanuman Movie Feme Mirai announce
ಟಾಲಿವುಡ್11 mins ago

Teja Sajja: ಹೊಸ ಸಿನಿಮಾ ಅನೌನ್ಸ್‌ ಮಾಡಿದ ʻಹನುಮಾನ್ʼ ಹೀರೊ ತೇಜ್ ಸಜ್ಜಾ

Murder case Man stabbed to death 9 times for refusing to love
ಪ್ರಮುಖ ಸುದ್ದಿ19 mins ago

Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

Viral Video
ವೈರಲ್ ನ್ಯೂಸ್20 mins ago

Viral Video: ಶಾಲೆಯಲ್ಲಿ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ಪ್ರಿನ್ಸಿಪಾಲ್!

IPL 2024
ಕ್ರೀಡೆ20 mins ago

IPL 2024: ಮುಂಬೈ ಗೆದ್ದರೂ ಪಾಂಡ್ಯಗಿಲ್ಲ ಖುಷಿ; ನಿಧಾನಗತಿಯ ಓವರ್​ಗೆ ಬಿತ್ತು 12 ಲಕ್ಷ ದಂಡ

Murder Case
ಬೆಂಗಳೂರು45 mins ago

Murder case : ಬೆಂಗಳೂರಲ್ಲಿ ರಕ್ತದೋಕುಳಿ; ಪ್ರತ್ಯೇಕ ಕಡೆಗಳಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ

IPL 2024
ಕ್ರೀಡೆ52 mins ago

IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್​ ಶರ್ಮ

Lok Sabha Election 2024 Rajinikanth Kamal Haasan Dhanush Vijay Sethupathi vote in Chennai
ಕಾಲಿವುಡ್54 mins ago

Lok Sabha Election 2024: ಚೆನ್ನೈನಲ್ಲಿ ಮತ ಚಲಾಯಿಸಿದ ರಜನಿಕಾಂತ್​, ಧನುಷ್, ಕಮಲ್ ಹಾಸನ್, ವಿಜಯ್‌!

summer trip
ಪ್ರವಾಸ1 hour ago

Summer Tour: ಹಚ್ಚ ಹಸುರಿನ ಪ್ರಶಾಂತ ನಗರ ಶಿಲ್ಲಾಂಗ್; ಬೇಸಿಗೆ ಪ್ರವಾಸಕ್ಕೆ ಸೂಕ್ತ

Viral Video
ವೈರಲ್ ನ್ಯೂಸ್2 hours ago

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ7 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌