ind-vs-aus-india-australia-odi-will-be-held-in-mumbaiIND VS AUS: ಮುಂಬೈಯಲ್ಲಿ ಕಾವೇರಿಸಿಕೊಳ್ಳಲಿದೆ ಭಾರತ-ಆಸ್ಟ್ರೇಲಿಯಾ ಏಕದಿನ ಹೋರಾಟ Vistara News IND VS AUS: ಮುಂಬೈಯಲ್ಲಿ ಕಾವೇರಿಸಿಕೊಳ್ಳಲಿದೆ ಭಾರತ-ಆಸ್ಟ್ರೇಲಿಯಾ ಏಕದಿನ ಹೋರಾಟ
Connect with us

ಕ್ರಿಕೆಟ್

IND VS AUS: ಮುಂಬೈಯಲ್ಲಿ ಕಾವೇರಿಸಿಕೊಳ್ಳಲಿದೆ ಭಾರತ-ಆಸ್ಟ್ರೇಲಿಯಾ ಏಕದಿನ ಹೋರಾಟ

ಬಹುನಿರೀಕ್ಷಿತ ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ ಶುಕ್ರವಾರ(ಮಾರ್ಚ್​ 17) ಮುಂಬಯಿಯಲ್ಲಿ ನಡೆಯಲಿದೆ.

VISTARANEWS.COM


on

IND VS AUS India Australia ODI will be held in Mumbai
Koo

ಮುಂಬಯಿ: ಇಷ್ಟು ದಿನ ಟೆಸ್ಟ್​ ಕ್ರಿಕೆಟ್​ ಗುಂಗಿನಲ್ಲಿದ್ದ ಭಾರತ ಮತ್ತು ಆಸ್ಟ್ರೇಲಿಯಾ(IND VS AUS) ತಂಡದ ಆಟಗಾರರು ಇದೀಗ ಸೀಮಿತ ಓವರ್​ಗಳ ಕ್ರಿಕೆಟ್​ನತ್ತ ಮುಖಮಾಡಿದ್ದಾರೆ. ಉಭಯ ತಂಡಗಳ ಮೊದಲ ಏಕದಿನ ಪಂದ್ಯ ಶುಕ್ರವಾರ(ಮಾರ್ಚ್​ 17) ನಡೆಯಲಿದೆ. ಈ ಪಂದ್ಯಕ್ಕೆ ಮುಂಬಯಿಯ ವಾಂಖೆಡೆ ಕ್ರಿಕೆಟ್​ ಸ್ಟೇಡಿಯಂ ಅಣಿಯಾಗಲಿದೆ.

ಇದೇ ವರ್ಷ ಭಾರತದಲ್ಲಿ ನಡೆಯುವ ಏಕದಿನ ವಿಶ್ವ ಕಪ್​ ಟೂರ್ನಿಯ ಹಿನ್ನಲೆಯಲ್ಲಿ ಈ ಸರಣಿ ಇತ್ತಂಡಗಳಿಗೂ ಮಹತ್ವದಾಗಿದೆ. ತಂಡದ ಸಂಯೋಜನೆ ಸೇರಿ ಹಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಇದೊಂದು ಉತ್ತಮ ಅವಕಾಶ ಎನ್ನಬಹುದು.

ಭಾರತ ಟಿ20 ಕ್ರಿಕೆಟ್​ಗೆ ಮುಂದಿನ ನಾಯಕನೆಂದೆ ಗುರುತಿಸಿಕೊಂಡಿರುವ ಹಾರ್ದಿಕ್​ ಪಾಂಡ್ಯ ಅವರು ರೋಹಿತ್​ ಶರ್ಮಾ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಈ ಪಂದ್ಯದಲ್ಲಿ ಭಾರತ ಗೆದ್ದರೆ ಹಾರ್ದಿಕ್​ ಪಾಂಡ್ಯ ವರ್ಚಸ್ಸು ಕೂಡ ಹೆಚ್ಚಾಗಲಿದೆ. ಮುಂದಿನ ದಿನಗಳಲ್ಲಿ ಅವರು ಟೀಮ್​ ಇಂಡಿಯಾದ ಖಾಯಂ ನಾಯಕನಾಗಿ ಗುರುತಿಸಿಕೊಂಡರೂ ಅಚ್ಚರಿಯಿಲ್ಲ. ಹೀಗಾಗಿ ಪಾಂಡ್ಯ ಅವರಿಗೂ ಈ ಪಂದ್ಯ ವೈಯಕ್ತಿಕವಾಗಿ ಮಹತ್ವ ಎನಿಸಿದೆ.

ಪ್ಯಾಟ್​ ಕಮಿನ್ಸ್​ ಅವರ ಅನುಸ್ಥಿತಿಯಲ್ಲಿ ಮೂರನೇ ಟೆಸ್ಟ್​ ಪಂದ್ಯದಲ್ಲಿ ಆಸ್ಟ್ರೇಲಿಯಾದ ನಾಯಕತ್ವದ ಹೊಣೆ ಹೊತ್ತ ಸ್ಟೀವನ್​ ಸ್ಮಿತ್​ ಮೂರನೇ ಟೆಸ್ಟ್​ ಪಂದ್ಯದಲ್ಲಿ ಭಾರತಕ್ಕೆ 9 ವಿಕೆಟ್​ಗಳ ಸೋಲಿನ ರುಚಿ ತೋರಿಸಿದ್ದರು. ಅಂತಿಮ ಪಂದ್ಯವನ್ನು ಡ್ರಾ ಗೊಳ್ಳುವಂತೆ ನೋಡಿಕೊಂಡರು. ಇದೀಗ ಏಕದಿನದಲ್ಲಿಯೂ ಅವರು ಕಮಾಲ್​ ಮಾಡಲಿದ್ದಾರ ಎನ್ನುವುದು ಈ ಪಂದ್ಯದ ಕೌತುಕ.

ಇದನ್ನೂ ಓದಿ IND VS AUS: ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ಪಿಚ್​ ರಿಪೋರ್ಟ್​

ರಾಹುಲ್​ ಕೀಪರ್​!

ಟೆಸ್ಟ್​ ಸರಣಿಯಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಕೆಗೆ ಗುರಿಯಾಗಿ ಅಂತಿಮ ಎರಡು ಪಂದ್ಯಗಳಿಂದ ಹೊರ ಬಿದ್ದ ಕೆ.ಎಲ್​ ರಾಹುಲ್​ ಅವರು ಈ ಪಂದ್ಯದಲ್ಲಿ ಆಡುವುದು ಖಚಿತ. ಶುಭಮನ್​ ಗಿಲ್​ ಜತೆ ಇಶಾನ್​ ಕಿಶನ್​ ಇನಿಂಗ್ಸ್​ ಆರಂಭಿಸಿದರೂ ರಾಹುಲ್​ ಮಧ್ಯಮ ಕ್ರಮಾಂಕದಲ್ಲಿ ಆಡುವ ಜತೆಗೆ ಕೀಪಿಂಗ್​ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಈಗಾಗಲೇ ಟೀಮ್​ ಮ್ಯಾನೆಜ್​ಮೆಂಟ್​ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನೊಂಡೆದೆ ರಾಹುಲ್​ ಬ್ಯಾಟಿಂಗ್​ ಜತೆಗೆ ಕೀಪಿಂಗ್​ ಅಭ್ಯಾಸವನ್ನೂ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IPL 2023: ಒತ್ತಡ ನಿವಾರಣೆಗಾಗಿ ಕೆಲ ಐಪಿಎಲ್​ ಪಂದ್ಯಗಳಿಗೆ ರೋಹಿತ್​ ಅಲಭ್ಯ ಸಾಧ್ಯತೆ

ಕೆಲಸದ ಒತ್ತಡ ನಿವಾರಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಬಾರಿಯ ಈಪಿಎಲ್​ ಟೂರ್ನಿಯಲ್ಲಿ ರೋಹಿತ್​ ಶರ್ಮಾ ಅವರು ಸೀಮಿತ ಪಂದ್ಯಗಳಲ್ಲಿ ಮಾತ್ರ ಆಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Edited by

IPL 2023 Rohit likely to be unavailable for some IPL matches to relieve stress
Koo

ಮುಂಬಯಿ: 16ನೇ ಆವೃತ್ತಿಯ ಐಪಿಎಲ್​(IPL 2023) ಟೂರ್ನಿಗೆ ಅಖಾಡ ರೆಡಿಯಾಗಿದೆ. ಒನ್ನೊಂದು ದಿನ ಕಳೆದರೆ ಟೂರ್ನಿಗೆ ಅಧಿಕೃತ ಚಾಲನೆ ದೊರೆಯಲಿದೆ. ಬಳಿಕ ಸರಮಾರು 2 ತಿಂಗಳುಗಳ ಕಾಲ ಎಲ್ಲ ಕ್ರಿಕೆಟ್​ ಅಭಿಮಾನಿಗಳು ಐಪಿಎಲ್​ ಗುಂಗಿನಲ್ಲಿರುತ್ತಾರೆ. 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್(Mumbai Indians)​​ ತಂಡದ ನಾಯಕ ರೋಹಿತ್​ ಶರ್ಮಾ(Rohit Sharma) ಅವರು ಈ ಬಾರಿಯ ಐಪಿಎಲ್​ನಲ್ಲಿ ಕೇಲವ ಸೀಮಿತ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಮುಂಬೈ ಅಭಿಮಾನಿಗಳಲ್ಲಿ ಆತಂಕ ಮೂಡಿದೆ.

ಜೂನ್​ನಲ್ಲಿ ನಡೆಯುವ ಪ್ರತಿಷ್ಠಿತ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌, ಪಾಕಿಸ್ತಾನ​ ಆತಿಥ್ಯದಲ್ಲಿ ನಡೆಯಲಿರುವ ಏಷ್ಯಾ ಕಪ್‌ ಹಾಗೂ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಹಿನ್ನೆಲೆಯಲ್ಲಿ ಕೆಲಸದ ಒತ್ತಡವನ್ನು ಕಡಿಮೆ ಮಾಡುವ ಸಲುವಾಗಿ ರೋಹಿತ್‌ ಶರ್ಮಾ ಅವರನ್ನು ಐಪಿಎಲ್ ಟೂರ್ನಿಯ ಹಲವು ಪಂದ್ಯಗಳಿಂದ ದೂರ ಇಡಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ರೋಹಿತ್‌ ಶರ್ಮಾ ಹೊರಗುಳಿಯಲಿರುವ ಪಂದ್ಯಗಳಲ್ಲಿ ಸೂರ್ಯಕುಮಾರ್‌ ಯಾದವ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಐಪಿಎಲ್​ನ ಕೆಲ ಪಂದ್ಯಗಳಿಂದ ಹೊರಗುಳಿಯುವ ನಿರ್ಧಾರವನ್ನು ರೋಹಿತ್​ ಅವರೇ ಕೈಗೊಂಡಿರುವುದಾಗಿ ಮುಂಬೈ ಇಂಡಿನ್ಸ್​ ತಂಡದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ IPL 2023: ಕೋವಿಡ್​ ಮಾರ್ಗಸೂಚಿ ಪಾಲನೆ ಕಡ್ಡಾಯ; ಐಪಿಎಲ್​ ಫ್ರಾಂಚೈಸಿಗಳಿಗೆ ಬಿಸಿಸಿಐ ಆದೇಶ

2020ರಲ್ಲಿ ರೋಹಿತ್ ಶರ್ಮಾ ಐಪಿಎಲ್ ಟೂರ್ನಿಯ ಕೆಲ ಪಂದ್ಯಕ್ಕೆ ಅಲಭ್ಯರಾಗಿದ್ದರು. ಈ ವೇಳೆ ಕೀರನ್ ಪೋಲಾರ್ಡ್ ತಂಡ ಮುನ್ನಡೆಸಿದ್ದರು. ಆದರೆ ಪೋಲಾರ್ಡ್ ಈ ಬಾರಿ ಐಪಿಎಲ್​ಗೆ ನಿವೃತ್ತಿ ಹೇಳಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್‌ಗೆ ನಾಯಕತ್ವ ನೀಡಲು ಮುಂಬೈ ಮುಂದಾಗಿದೆ.

ಇದನ್ನೂ ಓದಿ IPL 2023: ಆರ್​ಸಿಬಿ ಬಗ್ಗೆ ಭಾವನಾತ್ಮಕ ಸಂದೇಶ ಬರೆದ ಎಬಿ ಡಿ ವಿಲಿಯರ್ಸ್​

ಈಗಾಗಲೇ ಜಸ್​ಪ್ರೀತ್​ ಬುಮ್ರಾ, ಶ್ರೇಯಸ್​ ಅಯ್ಯರ್​ ಅವರು ಗಾಯಗೊಂಡು ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಉಭಯ ಆಟಗಾರರು ಸದ್ಯಕ್ಕೆ ಮುಂದಿನ 5ರಿಂದ 6 ತಿಂಗಳುಗಳ ಕಾಲ ಭಾರತ ತಂಡಕ್ಕೆ ವಾಪಾಸ್​ ಆಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಮಹತ್ವದ ಟೂರ್ನಿಗೆ ಕೆಲವೇ ದಿನಗಳಿರುವಾಗ ಲಭ್ಯವಿರುವ ಸ್ಟಾರ್​ ಆಟಗಾರರು ಕೂಡ ಗಾಯಕ್ಕೆ ತುತ್ತಾದರೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಲಿದೆ. ಈ ಎಲ್ಲ ಮುನ್ನೆಚ್ಚರಿಕೆಯ ಕ್ರಮಾವಾಗಿ ಕೆಲ ಆಟಗಾರರಿಗೆ ಬಿಸಿಸಿಐ ಈ ಬಾರಿಯ ಐಪಿಎಲ್​ನಲ್ಲಿ ಸೀಮಿತ ಪಂದ್ಯಗಳಲ್ಲಿ ಆಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

Continue Reading

ಕ್ರಿಕೆಟ್

IPL 2023: ಆರ್​ಸಿಬಿ ಬಗ್ಗೆ ಭಾವನಾತ್ಮಕ ಸಂದೇಶ ಬರೆದ ಎಬಿ ಡಿ ವಿಲಿಯರ್ಸ್​

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಮ್ಮ ಡ್ರೆಸ್ಸಿಂಗ್​ ರೂಮಿನ ಬಾಲ್ಕನಿಯತ್ತ ಹೆಜ್ಜೆ ಹಾಕಿದಾಗ ನನ್ನ ಕಣ್ಣಂಚಿನಲ್ಲಿ ನೀರು ಜಿನುಗಿತು ಎಂದು ಎಬಿ ಡಿ ವಿಲಿಯರ್ಸ್​ ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.

VISTARANEWS.COM


on

Edited by

IPL 2023 AB de Villiers wrote an emotional message about RCB
Koo

ಬೆಂಗಳೂರು: ಐಪಿಎಲ್​ನ(IPL 2023) ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ಆಟಗಾರ, ಮಿಸ್ಟರ್​ 360 ಡಿಗ್ರಿ ಖ್ಯಾತಿಯ ಎಬಿ ಡಿ ವಿಲಿಯರ್ಸ್(AB de Villiers)​ ಅವರು ಆರ್​ಸಿಬಿ ಅಭಿಮಾನಿಗಳಿಗಾಗಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.​ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಮ್ಮ ಡ್ರೆಸ್ಸಿಂಗ್​ ರೂಮಿನ ಬಾಲ್ಕನಿಯತ್ತ ಹೆಜ್ಜೆ ಹಾಕಿದಾಗ ನನ್ನ ಕಣ್ಣಂಚಿನಲ್ಲಿ ನೀರು ಜಿನುಗಿತು. ಪ್ರತಿ ಸಲ ಎಬಿಡಿ, ಎಬಿಡಿ ಎಂಬ ಅಭಿಮಾನಿಗಳ ಕೂಗು ನಮ್ಮನ್ನು ಗೆಲುವಿಗಾಗಿ ಹುರಿದುಂಬಿಸುತ್ತಿತ್ತು. ಆದರೆ ಈ ಬಾರಿಯ ಕೂಗಿನಲ್ಲಿ ಬೇರೆಯದ್ದೇ ಭಾವನೆ ಇತ್ತು. ನನಗೆ ಸಹಕಾರ ನೀಡಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ ಭಾನುವಾರ(ಮಾರ್ಚ್​ 26)ದಂದು ಆರ್​ಸಿಬಿ ಪ್ರಾಂಚೈಸಿಯು “ಅನ್​ಬಾಕ್ಸ್​ ಆರ್‌ಸಿಬಿ” ಎಂಬ ಕಾರ್ಯಕ್ರಮ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಆರ್​ಸಿಬಿಯ ಮಾಜಿ ಆಟಗಾರಾದ ವೆಸ್ಟ್ ಇಂಡೀಸ್ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್​ಗೆ ಹಾಲ್ ಆಫ್ ಫೇಮ್‌ ಗೌರವ ಸೂಚಿಸಲಾಗಿತ್ತು. ಉಭಯ ಆಟಗಾರರು ಆರ್​ಸಿಬಿ ತಂಡಕ್ಕೆ ನೀಡಿದ ಕೊಡುಗೆಗೆ ಗೌರವವಾಗಿ ಆರ್​ಸಿಬಿ ಫ್ರಾಂಚೈಸಿಯು ಡಿ ವಿಲಿಯರ್ಸ್ ಅವರ ಜೆರ್ಸಿ ಸಂಖ್ಯೆ 17 ಮತ್ತು ಕ್ರಿಸ್​ ಗೇಲ್ ಅವರ ಜೆರ್ಸಿ ಸಂಖ್ಯೆ 333ರನ್ನು ಹಾಲ್ ಆಫ್ ಫೇಮ್‌(Hall of Fame) ಸೇರ್ಪಡೆಗೊಳಿಸಿ ನಿವೃತ್ತಿ ಘೋಷಿಸಿತ್ತು.

ಹಾಲ್ ಆಫ್ ಫೇಮ್‌ ಸೇರ್ಪಡೆಗೊಂಡ ಬಳಿಕ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಎಬಿಡಿ ಪೋಸ್ಟ್ ಮಾಡಿದ್ದಾರೆ. ಈ ಸಂದೇಶದಲ್ಲಿ ಆರ್​ಸಿಬಿ ತಂಡ ಮತ್ತು ತಮ್ಮ ಜರ್ಸಿ ಸಂಖ್ಯೆಯನ್ನು ನಿವೃತ್ತಿಗೊಳಿಸಿದ್ದಕ್ಕಾಗಿ ಫ್ರಾಂಚೈಸಿಗೆ ಧನ್ಯವಾದ ಅರ್ಪಿಸಿದ್ದಾರೆ. ಜತೆಗೆ ಅವರು ಆರ್​ಸಿಬಿಯಲ್ಲಿ ಕಳೆದ ದಿನಗಳ ಬಗ್ಗೆಯೂ ತಿಳಿಸಿದ್ದಾರೆ.

ಇದನ್ನೂ ಓದಿ IPL 2023: ಕೋವಿಡ್​ ಮಾರ್ಗಸೂಚಿ ಪಾಲನೆ ಕಡ್ಡಾಯ; ಐಪಿಎಲ್​ ಫ್ರಾಂಚೈಸಿಗಳಿಗೆ ಬಿಸಿಸಿಐ ಆದೇಶ

“ಆರ್​ಸಿಬಿ ಹಾಲ್‌ ಆಫ್‌ ಫೇಮ್‌ಗೆ ಸೇರ್ಪಡೆಗೊಂಡಾಗ ನನ್ನ ಹೃದಯ ತುಂಬಿ ಬಂದಿತು. ನಾನು ಮತ್ತು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಆರ್​ಸಿಬಿ ವೇದಿಕೆ​ಯ ಮೆಟ್ಟಿಲುಗಳ ಮೇಲೆ ಈ ಬಾರಿ ನಡೆದಾಗ ಬೇರೆಯೇ ಅನುಭವವಾಯಿತು. 2003 ರಿಂದ ನಾನು ಭಾರತದಲ್ಲಿ ಕಳೆದ ದಿನಗಳ ಕುರಿತು ಯೋಚಿಸುತ್ತಿದ್ದಾಗ ಹಲವು ಮರೆಯಲಾರದ ನೆನಪುಗಳು ಕಣ್ಣಮುಂದೆ ಹಾದುಹೋದವು. ನಾನು ಈ ದೇಶ ಮತ್ತು ಜನರೊಂದಿಗೆ ಆಳವಾದ ಸಂಪರ್ಕ, ಸಂಬಂಧ ಹೊಂದಿದ್ದೇನೆ. ಇದಕ್ಕಾಗಿ ತಂಡದ ಸಹ ಆಟಗಾರರಿಗೆ ಹಾಗೂ ವಿಶೇಷವಾಗಿ ವಿರಾಟ್(Virat Kohli), ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಎಬಿಡಿ ಭಾವನಾತ್ಮಕ ಸಂದೇಶವನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Continue Reading

ಕ್ರಿಕೆಟ್

ICC Rankings: ಏಕದಿನ ಶ್ರೇಯಾಂಕದಲ್ಲಿ ಬಡ್ತಿ ಪಡೆದ ರೋಹಿತ್​ ಶರ್ಮ, ಹಾರ್ದಿಕ್​ ಪಾಂಡ್ಯ

ಐಸಿಸಿ ನೂತನ ಏಕದಿನ ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮಾ ಎಂಟನೇ ಸ್ಥಾನ ಪಡೆದಿದ್ದಾರೆ.

VISTARANEWS.COM


on

Edited by

ICC Rankings Rohit Sharma Hardik Pandya promoted in ODI rankings
Koo

ದುಬೈ: ಐಸಿಸಿ ನೂತನ ಏಕದಿನ ಶ್ರೇಯಾಂಕ(ICC Rankings) ಪಟ್ಟಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಮತ್ತು ಹಾರ್ದಿಕ್​ ಪಾಂಡ್ಯ(Hardik Pandya) ಉತ್ತಮ ಪ್ರಗತಿ ಸಾಧಿಸಿದ್ದಾರೆ. ಬ್ಯಾಟರ್​ಗಳ ಶ್ರೇಯಾಂಕದಲ್ಲಿ ರೋಹಿತ್​ ಒಂದು ಸ್ಥಾನ ಏರಿಕೆ ಕಂಡು ಎಂಟನೇ ಸ್ಥಾನದಲ್ಲಿದ್ದರೆ, ಪಾಂಡ್ಯ ಬೌಲಿಂಗ್​ ಶ್ರೇಯಾಂಕದಲ್ಲಿ 10 ಸ್ಥಾನಗಳ ಜಿಗಿತ ಕಂಡು 76ನೇ ಸ್ಥಾನ ಪಡೆದಿದ್ದಾರೆ.

ಬುಧವಾರ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪಾಕಿಸ್ತಾನದ ನಾಯಕ ಬಾಬರ್​ ಅಜಂ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ. ದಕ್ಷಿಣ ಆಫ್ರಿಕಾದ ರಸ್ಸಿ ವಾನ್ ​ಡರ್​ ಡಸ್ಸೆನ್ 2ನೇ, ಪಾಕ್​ನ ಇಮಾಮ್-ಉಲ್-ಹಕ್ 3ನೇ ಮತ್ತು ಭಾರತದ ಶುಭಮನ್ ಗಿಲ್ 5ನೇ ಸ್ಥಾನ ಪಡೆದಿದ್ದಾರೆ. ಉಳಿದಂತೆ ವಿರಾಟ್ ಕೊಹ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಕೆ.ಎಲ್. ರಾಹುಲ್ 38ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಬೌಲಿಂಗ್​ ಶ್ರೇಯಾಂಕದಲ್ಲಿ ಸಿರಾಜ್​ ನಂ.3

ಬೌಲಿಂಗ್​ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್​ವುಡ್ ಅವರು ನಂ.1 ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ.​ ನ್ಯೂಜಿಲ್ಯಾಂಡ್​ನ ಹಿರಿಯ ವೇಗಿ ಟ್ರೆಂಟ್ ಬೌಲ್ಟ್ ದ್ವಿತೀಯ ಸ್ಥಾನದಲ್ಲಿದರೆ, ಟೀಮ್​ ಇಂಡಿಯಾದ ಮೊಹಮ್ಮದ್ ಸಿರಾಜ್ ಮೂರನೇ ಸ್ಥಾನದಲ್ಲಿದ್ದಾರೆ. ಮಿಚೆಲ್​ ಸ್ಟಾರ್ಕ್​ ಸ್ಟಾರ್ಕ್ 4 ಮತ್ತು ಅಫ್ಘಾನಿಸ್ಥಾನದ ರಶೀದ್ ಖಾನ್ 5ನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಮುಕ್ತಾಯ ಕಾಣುವ ಮೊದಲು ಮೊಹಮ್ಮದ್​ ಸಿರಾಜ್​ ನಂ.1 ಸ್ಥಾನದಲ್ಲಿದ್ದರು. ಆದರೆ ಆಸೀಸ್​ ವಿರುದ್ಧದ ಸರಣಿಯಲ್ಲಿ ಕಳಪೆ ಬೌಲಿಂಗ್​ ಪ್ರದರ್ಶನ ತೋರಿದ ಕಾರಣ ಅವರು ಹಠಾತ್​ 2 ಸ್ಥಾನಗಳ ಕುಸಿತ ಕಂಡು ಮೂರನೇ ಸ್ಥಾನ ಪಡೆದರು. ಸದ್ಯ ಅವರು ಇದೇ ಸ್ಥಾನದಲ್ಲಿ ಮುಂದುವರಿಸಿದ್ದಾರೆ. ಉಳಿದಂತೆ ಕುಲ್​ದೀಪ್ ಯಾದವ್ (23), ಬುಮ್ರಾ (26), ಮೊಹಮ್ಮದ್ ಶಮಿ (32), ರವೀಂದ್ರ ಜಡೇಜಾ (78) ಸ್ಥಾನದಲ್ಲಿದ್ದಾರೆ.

ಉಪನಾಯಕ ಹಾರ್ದಿಕ್ ಪಾಂಡ್ಯ ಆಲ್​ರೌಂಡರ್​ಗಳ ಪಟ್ಟಿಯಲ್ಲಿ 13 ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಬಾಂಗ್ಲಾದೇಶದ ಹಿರಿಯ ಆಟಗಾರ ಶಕೀಬ್ ಅಲ್ ಹಸನ್ ಕಾಣಿಸಿಕೊಂಡಿದ್ದಾರೆ. ದ್ವಿತೀಯ ಸ್ಥಾನ ಅಫಘಾನಿಸ್ತಾನದ ಮೊಹಮ್ಮದ್ ನಬಿ ಪಾಲಾಗಿದೆ.

Continue Reading

ಕ್ರಿಕೆಟ್

Virushka: ವಿರಾಟ್​ ಕೊಹ್ಲಿಯ ಮೂರು ಪೆಗ್ಗಿನ ರಹಸ್ಯ ಬಿಚ್ಚಿಟ್ಟ ಅನುಷ್ಕಾ ಶರ್ಮಾ

ಟೀಮ್​ ಇಂಡಿಯಾದ ಆಟಗಾರ ವಿರಾಟ್​ ಕೊಹ್ಲಿ ಅವರು ಮೂರು ಪೆಗ್ಗಿಗಿಂತ ಹೆಚ್ಚು ಕುಡಿದರೆ ಅವರ ನೃತ್ಯವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಅವರ ಪತ್ನಿ ಅನುಷ್ಕಾ ಶರ್ಮಾ ಹೇಳಿದ್ದಾರೆ.

VISTARANEWS.COM


on

Edited by

Virushka Anushka Sharma revealed the secret of Virat Kohlis three pegs
Koo

ಮುಂಬಯಿ: ಭಾರತೀಯ ಕ್ರಿಕೆಟ್‌ ತಂಡದ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಮತ್ತು ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ(anushka sharma) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅನುಷ್ಕಾ ಶರ್ಮಾ ಅವರು ವಿರಾಟ್​ ಕೊಹ್ಲಿಯ ಕುಡಿತದ ಚಟದ ಬಗ್ಗೆ ರೋಚಕ ಸಂಗತಿಯೊಂದನ್ನು ತಿಳಿಸಿದ್ದಾರೆ.

ಸಾಮಾನ್ಯವಾಗಿ ನೀವಿಬ್ಬರು ಪಾರ್ಟಿಗಳಿಗೆ ಹೋದಾಗ ಯಾರನ್ನು ಹೆಚ್ಚಾಗಿ ಜನ ಗುರುತಿಸುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ ಶರ್ಮಾ, ಅದು ವಿರಾಟ್ ಕೊಹ್ಲಿ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವನ್ನು ಅವರು ತಿಳಿಸಿದ್ದಾರೆ. ಕೊಹ್ಲಿ ಮೂರು ಪೆಗ್​ ಹಾಕಿದ ಬಳಿಕ ಡ್ಯಾನ್ಸ್ ಮಾಡಲು ಆರಂಭಿಸುತ್ತಾರೆ. ಹೀಗಾಗಿ ಅಲ್ಲಿದ್ದವರು ಕೊಹ್ಲಿಯ ಕಡೆ ಹೆಚ್ಚು ಗಮನ ಕೊಡುತ್ತಾರೆ. ಒಮ್ಮೆ ಅವರು ನೃತ್ಯ ಆರಂಭಿಸಿದರೆ ಇದನ್ನು ಯಾರಿಂದಲೂ ತಡೆಯಲು ಅಸಾಧ್ಯ ಎಂದು ಹೇಳಿದರು.

ಪತ್ನಿಯ ಈ ಮಾತನ್ನು ನಗುತ್ತಲೇ ಒಪ್ಪಿಕೊಂಡ ವಿರಾಟ್​, ಇದು ನಿಜ. ನಾನು ಎರಡು ಪೆಗ್​ಗಳಿಗಿಂತಲೂ ಹೆಚ್ಚು ಕುಡಿದೆನೆಂದರೆ ಡ್ಯಾನ್ಸ್ ಮಾಡಲು ಆರಂಭಿಸುತ್ತೇನೆ. ಆ ಬಳಿಕ ನಾನು ಏನು ಮಾಡುತ್ತೇನೆ ಎಂಬ ಅರಿವೇ ನನಗಿರುವುದಿಲ್ಲ. ಆದರೆ ಈ ವರ್ತನೆಯನ್ನು ಈಗ ನೆನಪಿಸಿಕೊಂಡರೆ ನನಗೆ ನಾಚಿಕೆಯಾಗುತ್ತದೆ. ಈಗ ನಾನು ಕುಡಿತದಿಂದ ಮುಕ್ತವಾಗಿದ್ದೇನೆ. ಇದಕ್ಕೆ ಒಂದು ರೀತಿಯಲ್ಲಿ ಪತ್ನಿ ಅನುಷ್ಕಾ ಕೂಡ ಕಾರಣ. ಅವಳು ನನ್ನ ಬದುಕಿನಲ್ಲಿ ಬಂದ ಬಳಿಕ ಹಲವು ವಿಚಾರದಲ್ಲಿ ನಾನು ಸುಧಾರಿಸಿಕೊಂಡಿದ್ದೇನೆ ಎಂದು ಕೊಹ್ಲಿ ಹೇಳಿದರು.

ಅನುಷ್ಕಾಳೇ ನನ್ನ ಸ್ಫೂರ್ತಿ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವಿರಾಟ್‌ ಕೊಹ್ಲಿ ಅವರು ತಮ್ಮ ಪತ್ನಿಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

ಇದನ್ನೂ ಓದಿ IPL 2023: ಕೋವಿಡ್​ ಮಾರ್ಗಸೂಚಿ ಪಾಲನೆ ಕಡ್ಡಾಯ; ಐಪಿಎಲ್​ ಫ್ರಾಂಚೈಸಿಗಳಿಗೆ ಬಿಸಿಸಿಐ ಆದೇಶ

“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು. ಸದ್ಯ ವಿರಾಟ್​ ಕೊಹ್ಲಿ 16ನೇ ಆವೃತ್ತಿಯ ಐಪಿಎಲ್​ಗಾಗಿ ಅಭ್ಯಾಸ ನಡೆಸುತ್ತಿದ್ದಾರೆ.

Continue Reading
Advertisement
Establishment of Backward Classes Category-I Pinjara, Nadaf and 13 Other Castes Development Corporation
ಕರ್ನಾಟಕ1 hour ago

Reservation: ಒಬಿಸಿ ಮೀಸಲಾತಿ ಪುನರ್‌ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ; 2ಸಿ ಪ್ರವರ್ಗಕ್ಕೆ ಶೇ.6, 2ಡಿ ಪ್ರವರ್ಗಕ್ಕೆ ಶೇ.7 ಮೀಸಲಾತಿ

World’s first 7.2-metre high-rise train set on trial on Delhi-Jaipur route, video out
ದೇಶ2 hours ago

Viral Video: ಭಾರತದಲ್ಲಿ ವಿಶ್ವದಲ್ಲೇ ಎತ್ತರದ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ, ಇಲ್ಲಿದೆ ವಿಡಿಯೊ

Road Accident
ಕರ್ನಾಟಕ2 hours ago

Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು

High way robbery
ಕರ್ನಾಟಕ2 hours ago

Highway robbery : ಯುವಕ-ಯುವತಿಯನ್ನು ಅಡ್ಡಗಟ್ಟಿ ಬೈಕ್‌, ಐಫೋನ್‌ ಕಿತ್ತುಕೊಂಡು ಹೋದ ಮೂವರು ಸುಲಿಗೆಕೋರರು ಅರೆಸ್ಟ್‌

Restrictions on entry to Dharwad, Supreme Court dismisses Vinay Kulkarni's plea seeking exemption
ಕರ್ನಾಟಕ3 hours ago

Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

Ram Navami 2023
ಧಾರ್ಮಿಕ3 hours ago

Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ? 

IPL 2023: Rohit likely to be unavailable for some IPL matches to relieve stress
ಕ್ರಿಕೆಟ್4 hours ago

IPL 2023: ಒತ್ತಡ ನಿವಾರಣೆಗಾಗಿ ಕೆಲ ಐಪಿಎಲ್​ ಪಂದ್ಯಗಳಿಗೆ ರೋಹಿತ್​ ಅಲಭ್ಯ ಸಾಧ್ಯತೆ

Karnataka Elections 2023
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ

Aam Aadmi Party announces 300 units of free electricity, Rs 3,000. unemployment allowance, Implementation of OPS guarantee scheme
ಕರ್ನಾಟಕ4 hours ago

Karnataka Election: ಎಎಪಿಯಿಂದ 300 ಯೂನಿಟ್‌ ವಿದ್ಯುತ್‌ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್‌ ಜಾರಿ ಗ್ಯಾರಂಟಿ

Indian govt let go of Rs 7 lakh in GST to save a baby girl’s life
ದೇಶ4 hours ago

ಬಾಲಕಿಯ ಪ್ರಾಣ ಉಳಿಸಲು 7 ಲಕ್ಷ ರೂ. ಜಿಎಸ್‌ಟಿ ಬಿಟ್ಟ ಕೇಂದ್ರ, ಮಾನವೀಯತೆ ಮೆರೆದ ಶಶಿ ತರೂರ್‌

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Paid leave for govt employees involved in the strike
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

amit shah convoy
ಕರ್ನಾಟಕ3 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ3 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 week ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 week ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ1 week ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ1 week ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ1 week ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

ಟ್ರೆಂಡಿಂಗ್‌

error: Content is protected !!