IND VS AUS: ಭಾರತದ ಬೌಲಿಂಗ್​ ದಾಳಿಗೆ ಕುಸಿದ ಆಸೀಸ್​; ​263 ರನ್​ಗೆ ಆಲೌಟ್​ Vistara News

ಕ್ರಿಕೆಟ್

IND VS AUS: ಭಾರತದ ಬೌಲಿಂಗ್​ ದಾಳಿಗೆ ಕುಸಿದ ಆಸೀಸ್​; ​263 ರನ್​ಗೆ ಆಲೌಟ್​

ಭಾರತ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡ 263 ರನ್​ಗೆ ಆಲೌಟಾಗಿದೆ.

VISTARANEWS.COM


on

IND VS AUS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮೊಹಮ್ಮದ್​ ಶಮಿ ಅವರ ಘಾತಕ ಬೌಲಿಂಗ್​ ದಾಳಿಗೆ ನಲುಗಿದ ಆಸ್ಟ್ರೇಲಿಯಾ(IND VS AUS) ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 263 ರನ್​ಗೆ ಆಲೌಟಾಗಿದೆ. ಮೊದಲ ಇನಿಂಗ್ಸ್​ ಆರಂಭಿಸಿದ ಭಾರತ ವಿಕೆಟ್​ ನಷ್ಟವಿಲ್ಲದೆ 21 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್​ ಕಾಯ್ದುಕೊಂಡಿದೆ.

ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶುಕ್ರವಾರ(ಫೆ.17) ಆರಂಭಗೊಂಡ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಆಸೀಸ್ ಉತ್ತಮ ಆರಂಭ ಪಡೆಯಿತು. ಡೇವಿಡ್ ವಾರ್ನರ್​ ಮತ್ತು ಉಸ್ಮಾನ್​ ಖವಾಜಾ ತಾಳ್ಮೆಯುತ ಬ್ಯಾಟಿಂಗ್​ ಮೂಲಕ ರನ್​ ಕಲೆಹಾಕುತ್ತಿದ್ದರು. ಆದರೆ ವಾರ್ನರ್​ ಅವರು 15 ರನ್​ ಗಳಿಸಿದ ವೇಳೆ ಮೊಹಮ್ಮದ್​ ಶಮಿಗೆ ವಿಕೆಟ್​ ಒಪ್ಟಿಸಿದರು. ಈ ಜೋಡಿ ಮೊದಲ ವಿಕೆಟ್​ಗೆ 50 ರನ್ ಕಲೆಹಾಕಿತು.

ಡೇವಿಡ್ ವಾರ್ನರ್ ವಿಕೆಟ್​ ಪತನದ ಬಳಿಕ ಆಡಲಿಳಿದ ಮಾರ್ನಸ್​ ಲಬುಶೇನ್ ಕೇವಲ 18 ರನ್​ಗೆ ಔಟಾದರು ಇದರ ಬೆನ್ನಲ್ಲೇ ಸ್ಟೀವನ್​ ಸ್ಮಿತ್​ ಶೂನ್ಯಕ್ಕೆ ಔಟಾದರು. ಆದರೆ ತಂಡಕ್ಕೆ ಆಸರೆಯಾದ ಖವಾಜಾ 125 ಎಸೆತದಲ್ಲಿ 12 ಬೌಂಡರಿ ಸಹಿತ 81 ರನ್ ಗಳಿಸಿ ಜಡೇಜಾ ಎಸೆತದಲ್ಲಿ ರಾಹುಲ್ ಹಿಡಿದ ಅದ್ಭುತ ಕ್ಯಾಚ್​ಗೆ ಬಲಿಯಾದರು.

ಇದನ್ನೂ ಓದಿ IND VS AUS: ಚಿರತೆ ವೇಗದಲ್ಲಿ ಜಿಗಿದು ಅದ್ಭುತ ಕ್ಯಾಚ್​ ಹಿಡಿದ ಕೆ. ಎಲ್​. ರಾಹುಲ್; ವಿಡಿಯೊ ವೈರಲ್

ಖವಾಜಾ ಔಟಾದ ಬಳಿಕ ಪೀಟರ್ ಹ್ಯಾಂಡ್ಸ್ ಕಾಂಬ್ ತಂಡಕ್ಕೆ ನೆರವಾಗಿ ಮೊತ್ತವನ್ನು 250ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ಅಜೇಯ 72 ರನ್ ಮಾಡಿದರು. ಉಳಿದಂತೆ ನಾಯಕ ಕಮಿನ್ಸ್ 33 ರನ್ ಕಾಣಿಕೆ ನೀಡಿದರು. ಭಾರತದ ಪರ ವೇಗಿ ಶಮಿ ನಾಲ್ಕು ವಿಕೆಟ್ ಕಿತ್ತರೆ, ಅಶ್ವಿನ್ ಮತ್ತು ಜಡೇಜಾ ತಲಾ ಮೂರು ವಿಕೆಟ್ ಉರುಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

ಪಾಕಿಸ್ತಾನ ಕ್ರಿಕೆಟ್​ ಕಂಡ ಅತ್ಯುತ್ತಮ ಬ್ಯಾಟರ್​ ಆಗುವ ಎಲ್ಲ ಸಾಮರ್ಥ್ಯ ಬಾಬರ್​ಗೆ ಇದೆ ಎಂದು ಗೌತಮ್​ ಗಂಭೀರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Gautam Gambhir
Koo

ನವದೆಹಲಿ: ಸದಾ ಭಾರತೀಯ ಆಟಗಾರರ ಮೇಲೆ ಕಿಡಿ ಕಾರಿ ದೇಶ ಪ್ರೇಮದ ಪಾಠ ಮಾಡುವ ಗೌತಮ್​ ಗಂಭೀರ್(Gautam Gambhir), ಪಾಕ್ಕಿಸ್ತಾನ ಆಟಗಾರ ಬಾಬರ್​ ಅಜಂ(Babar Azam) ಅವರ ಕ್ರಿಕೆಟ್​ ಭವಿಷ್ಯ ನುಡಿದಿದ್ದಾರೆ. ಪಾಕಿಸ್ತಾನ ಕ್ರಿಕೆಟ್​ ಕಂಡ ಅತ್ಯುತ್ತಮ ಬ್ಯಾಟರ್​ ಆಗುವ ಎಲ್ಲ ಸಾಮರ್ಥ್ಯ ಬಾಬರ್​ಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಾಬರ್​ ಕಮ್​ಬ್ಯಾಕ್​ ಗ್ಯಾರಂಟಿ

ಬಾಬರ್​ ಅಜಂ ಅವರು ನಾಯಕತ್ವ ವಹಿಸಿಕೊಳ್ಳುವ ಮುನ್ನ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದರು. ನಾಯಕತ್ವ ನೀಡಿದ ಬಳಿಕ ಅವರ ಮೇಲೆ ಹೆಚ್ಚಿನ ಒತ್ತಡವನ್ನು ಪಾಕ್​ ಕ್ರಿಕೆಟ್​ ಮಂಡಳಿ ಹಾಕಿದ ಪರಿಣಾಮ ಅವರಿಗೆ ಬ್ಯಾಟಿಂಗ್​ ಕಡೆ ಗಮನ ನೀಡಲು ಸಾಧ್ಯವಾಗಲಿಲ್ಲ. ಈಗ ಅವರು ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಜತೆಗೆ ಚಿಂತೆ ಮುಕ್ತರಾಗಿದ್ದಾರೆ. ಇನ್ನು ಅವರ ಅಸಲಿ ಆಟ ಪ್ರಾರಂಭವಾಗುತ್ತದೆ. ಮುಂದಿನ 10 ವರ್ಷಗಳ ಕಾಲ ಕ್ರಿಕೆಟ್​ನಲ್ಲಿ ಅವರ ಹೆಸರೇ ರಾರಾಜಿಸಲಿದೆ ಎಂದು ಗಂಭೀರ್​ ಹೇಳಿದ್ದಾರೆ.

ಇದನ್ನೂ ಓದಿ Gautam Gambhir : ಮೋದಿಯನ್ನು ಪನೌತಿ ಎಂದವರಿಗೆ ತಿರುಗೇಟು ಕೊಟ್ಟ ಗೌತಮ್​ ಗಂಭೀರ್​

ಸ್ಪೋರ್ಟ್ಸ್‌ಕೀಡಾ ಶೋನಲ್ಲಿ ಪಾಕಿಸ್ತಾನದ ಮಾಜಿ ಆಟಗಾರ ವಾಸಿಮ್ ಅಕ್ರಮ್ ಜತೆ ಮಾತನಾಡುವ ವೇಳೆ ಗಂಭೀರ್​ ಈ ವಿಚಾರವನ್ನು ಹೇಳಿದ್ದಾರೆ. “29 ವರ್ಷದ ಬಾಬರ್ ಇನ್ನು ಮೂರು ಮಾದರಿಯ ಕ್ರಿಕೆಟ್​ನಲ್ಲಿ ಸುನಾಮಿ ಸೃಷ್ಟಿಸಲಿದ್ದಾರೆ. ಜತೆಗೆ ಅನೇಕ ಆಟಗಾರರ ದಾಖಲೆಯನ್ನು ಮುರಿಯಲಿದ್ದಾರೆ. ಬಾಬರ್ ನೈಜ ಸಾಮರ್ಥ್ಯ ಇನ್ನು ಮುಂದೆ ತಿಳಿಯಲಿದೆ. ಆತ ಪಾಕಿಸ್ತಾನ ಕ್ರಿಕೆಟ್​ ಇದುವರೆಗೆ ಕಾಣದಂತಹ ಬ್ಯಾಟರ್ ಆಗಿ ಇತಿಹಾಸದ ಪುಟ ಸೇರಲಿದ್ದಾರೆ. ಮುಂದಿನ 10 ವರ್ಷಗಳ ಕಾಲ ಕ್ರಿಕೆಟ್​ ಲೋಕವನ್ನು ಆಳಲಿದ್ದಾರೆ” ಎಂದು ಹೇಳಿದರು.

ದೇಶ ವಿರೋಧಿ

ಏಷ್ಯಾ ಕಪ್​ನಲ್ಲಿ ವಿರಾಟ್​ ಕೊಹ್ಲಿ ಸೇರಿ ಕೆಲ ಭಾರತೀಯ ಆಟಗಾರರು ಪಾಕಿಸ್ತಾನ ಆಟಗಾರರ ಜತೆ ಮಾತನಾಡಿದ ವಿಚಾರವಾಗಿ ಗಂಭೀರ್​ ಕಿಡಿ ಕಾರಿದ್ದರು. ಬದ್ಧ ಎದುರಾಳಿ ಪಾಕ್​ ಆಟಗಾರರಲ್ಲಿ ಮಾತನಾಡುವುದು ಸರಿಯಲ್ಲ. ಇದೇನಿದ್ದರು ಮೈದಾನದ ಹೊರಗಡೆ ಇರಲಿ ಎಂದು ದೇಶ ಪ್ರೇಮದ ಪಾಠ ಮಾಡಿದ್ದ ಗಂಭೀರ್​ ತಾನು ಮಾತ್ರ ಪಾಕ್​ ಆಟಗಾರರನ್ನು ಒಲೈಕೆ ಮಾಡುತ್ತಿದ್ದಾರೆ. ಈ ಕ್ರಮವನ್ನು ನೆಟ್ಟಿಗರು ಪ್ರಶ್ನಿಸಿದ್ದು ಗಂಭೀರ್​ ಅವರನ್ನು ದೇಶ ವಿರೋಧಿ ಎಂದಿದ್ದಾರೆ.

2007ರ ಟಿ20 ವಿಶ್ವಕಪ್​ ಫೈನಲ್​ ಮತ್ತು 2011 ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಅಮೋಘ ಪ್ರದರ್ಶನ ತೋರಿದ ಗಂಭೀರ್​ ಭಾರತ ಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಪದೇಪದೆ ಭಾರತೀಯ ಆಟಗಾರ ಮತ್ತು ತಂಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ತಮ್ಮ ವರ್ಚಸ್ಸನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ.

ಶ್ರೀಶಾಂತ್​ ಜತೆ ಕಿರಿಕ್​

ಕೆಲ ದಿನಗಳ ಹಿಂದಷ್ಟೇ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ಮೈದಾನದಲ್ಲೇ ಗಂಭೀರ್​ ಅವರು ಎಸ್​.ಶ್ರೀಶಾಂತ್(S. Sreesanth)​ ಜತೆ ಕಿರಿಕ್ ಮಾಡಿಕೊಂಡಿದ್ದರು. ಶ್ರೀಶಾಂತ್ ಅವರನ್ನು ಫಿಕ್ಸರ್​ ಎಂದು ಪದೇಪದೆ ಹೇಳುವ ಮೂಲಕ ಹೀಯಾಳಿಸಿದ್ದರು. ಇದು ಭಾರಿ ಚರ್ಚೆಗೆ ಕಾರಣವಾಗಿತ್ತು.

Continue Reading

ಕ್ರಿಕೆಟ್

ಬಿಡ್ಡಿಂಗ್​ ಹಣದಲ್ಲಿ ತಂದೆ-ತಾಯಿಗೆ ವಿಶೇಷ ಉಡುಗೊರೆ ನೀಡಲು ಮುಂದಾದ ಕರ್ನಾಟಕದ ​ ವೃಂದಾ ದಿನೇಶ್​

1.30 ಕೋಟಿಗೆ ಯು.ಪಿ ವಾರಿಯರ್ಸ್‌ ಪಾಲಾಗಿದ ಕರ್ನಾಟಕದ ಯುವ ಬ್ಯಾಟರ್‌ ವೃಂದಾ ದಿನೇಶ್(Vrinda Dinesh) ಅವರು ತಮಗೆ ಸಿಕ್ಕ ಈ ಮೊತ್ತದಲ್ಲಿ ತಂದೆ ಮತ್ತು ತಾಯಿಗೆ ಕಾರನ್ನು ಉಡುಗೊರೆಯಾಗಿ ನೀಡಲು ಬಯಸಿದ್ದಾರೆ.

VISTARANEWS.COM


on

WPL 2024 Auction
Koo

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2024ರ(WPL 2024 Auction) ಮಿನಿ ಹರಾಜಿನಲ್ಲಿ 1.30 ಕೋಟಿಗೆ ಯು.ಪಿ ವಾರಿಯರ್ಸ್‌ ಪಾಲಾಗಿದ ಕರ್ನಾಟಕದ ಯುವ ಬ್ಯಾಟರ್‌ ವೃಂದಾ ದಿನೇಶ್(Vrinda Dinesh) ಅವರು ತಮಗೆ ಸಿಕ್ಕ ಈ ಮೊತ್ತದಲ್ಲಿ ತಂದೆ ಮತ್ತು ತಾಯಿಗೆ ಉಡುಗೊರೆಯೊಂದನ್ನು ನೀಡಲು ಬಯಸಿದ್ದಾರೆ.

ಬಿಡ್ಡಿಂಗ್​ ಬಳಿಕ ಮಾತನಾಡಿದ ವೃಂದಾ ದಿನೇಶ್, ‘ಇನ್ನೂ ರಾಷ್ಟ್ರೀಯ ತಂಡದ ಪರ ಆಡದ ನನಗೆ ಇಷ್ಟೊಂದು ಬೇಡಿಕೆಯ ಮೊತ್ತ ಸಿಗಬಹುದೆಂದು ಕನಸಿನಲ್ಲಿಯೂ ಎನಿಸಿಕೊಂಡಿರಲಿಲ್ಲ. ಆದರೆ ನಾನು ಯಾವುದಾದರು ಒಂದು ತಂಡಕ್ಕೆ ಸೇಲ್​ ಆಗಬಹುದೆಂದು ನಂಬಿಕೆ ಇತ್ತು. ನನಗೆ ಸಿಕ್ಕ ಈ ಮೊತ್ತದಲ್ಲಿ ನನ್ನ ಎಲ್ಲ ಏಳು- ಬೀಳಿನಲ್ಲಿ ಜತೆಗಿದ್ದ ನನ್ನ ತಂದೆ ಮತ್ತು ತಾಯಿಗೆ ಕಾರನ್ನು ಉಡುಗೊರೆಯಾಗಿ ನೀಡುತ್ತೇನೆ” ಎಂದು ವೃಂದಾ ದಿನೇಶ್ ಹೇಳಿದ್ದಾರೆ.

ತಾಯಿಗೆ ವಿಡಿಯೊ ಕಾಲ್​ ಮಾಡಿಲ್ಲ

ಬೆಂಗಳೂರಿನವರದಾದ ವೃಂದಾ ಅವರು ಬಿಡ್ಡಿಂಗ್​ನಲ್ಲಿ ಅತ್ಯಧಿಕ ಮೊತ್ತಕ್ಕೆ ಸೇಲ್​ ಆದ ವಿಚಾರವನ್ನು ತಮ್ಮ ತಾಯಿಗೆ ವಿಡಿಯೊ ಕಾಲ್​ ಮೂಲಕ ಹೇಳಲಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಕಾರಣನ್ನೂ ಕೂಡ ಅವರು ತಿಳಿಸಿದ್ದಾರೆ. “ನಾನು ಬಿಡ್ಡಿಂಗ್​ನಲ್ಲಿ ಕೋಟಿ ಮೊತ್ತಕ್ಕೆ ಸೇಲ್ ಆದೆ ಎಂಬ ವಿಚಾರವನ್ನು ನನ್ನ ತಾಯಿಗೆ ಹೇಳುವಾಗ ಅವರಲ್ಲಿ ಭಾವನೆ ತಡೆಯಲಾಗದೇ ಕಣ್ಣುತುಂಬಿ ಬರಬಹುದು ಎಂದೆನಿಸಿತು. ಅವರಿಗೆ ಭಾವನೆ ತಡೆಯಲಾಗದು ಎಂಬ ಒಂದೇ ಕಾರಣದಿಂದ ವಿಡಿಯೊ ಕಾಲ್‌ ಮಾಡಲಿಲ್ಲ. ಕೇವಲ ಮೊಬೈಲ್ ಕರೆಯಷ್ಟೇ ಮಾಡಿದೆ” ಎಂದು ವೃಂದಾ ಹೇಳಿದರು. ಈ ಎಲ್ಲ ವಿಚಾರವನ್ನು ಅವರು ಯುಪಿ ವಾರಿಯರ್ಸ್ ಏರ್ಪಡಿಸಿದ್ದ ಸಂವಾದದಲ್ಲಿ ಹೇಳಿಕೊಂಡರು.

1000 ವ್ಯಾಟ್‌ ನಗುವಿನ ಮೌಲ್ಯ

‘ಎಲ್ಲ ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ತ್ಯಾಗ ಮಾಡಿರುತ್ತಾರೆ. ಮಕ್ಕಳು ಇದನ್ನು ಸಾಧಿಸಿದಾಗ ಅವರ ಮೊಗದಲ್ಲಿ ಮೂಡುವ 1000 ವ್ಯಾಟ್‌ ನಗುವಿನ ಮೌಲ್ಯ ನೋಡುವುದೇ ಒಂದು ಸೌಭಾಗ್ಯ. ನನ್ನ ಸಾಧನೆಯನ್ನು ಕಂಡು ನನ್ನ ಪೋಷಕರಿಗೆ ತುಂಬಾ ಖುಷಿಯಾಗಿದೆ. ಅವರು ಕಂಡಿದ್ದ ಕನಸಿನ ಕಾರನ್ನು ನಾನು ಉಡುಗೊರೆಯಾಗಿ ನೀಡುತ್ತೇನೆ. ಜತೆಗೆ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿಗಾಗಿ ಶ್ರಮ ಪಡುತ್ತೇನೆ” ಎಂದರು.

ವೃಂದಾ ದಿನೇಸ್​ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿ. ಸೀನಿಯರ್ ಮಹಿಳಾ ಏಕದಿನ ಟ್ರೋಫಿಯಲ್ಲಿ ಕರ್ನಾಟಕದ ತಂಡವು ಫೈನಲ್ ತಲುಪುವಲ್ಲಿ ವೃಂದಾ ಪ್ರಮುಖ ಪಾತ್ರ ವಹಿಸಿದ್ದರು. 11 ಇನ್ನಿಂಗ್ಸ್‌ ಗಳಲ್ಲಿ 47.70 ರ ಸರಾಸರಿಯಲ್ಲಿ 477 ರನ್ ಗಳಿಸಿದ್ದರು. ವೃಂದಾ ಇತ್ತೀಚೆಗಷ್ಟೇ ಭಾರತ ‘ಎ’ ತಂಡವನ್ನು ಪ್ರತಿನಿಧಿಸಿದ್ದರು. ಆರಂಭಿಕ ಹಂತದಲ್ಲಿ ಕನ್ನಡತಿ ವೃಂದಾ ದಿನೇಶ್ ಅವರು ಡಬ್ಲ್ಯುಪಿಎಲ್​ನಲ್ಲಿ ಅತ್ಯಧಿಕ ಮೊತ್ತಕ್ಕೆ ಸೇಲ್​ ಆದ ಅನ್​ಕ್ಯಾಪ್ಡ್​ ಪ್ಲಯರ್​ ಎನ್ನುವ ಕೀರ್ತಿಗೆ ಪಾತ್ರವಾದರೂ ಈ ಸಂತಸ ಹಚ್ಚು ಕಾಲ ಉಳಿಯಲಿಲ್ಲ. ಕಶ್ವಿ ಗೌತಮ್ ಅವರು ಬರೋಬ್ಬರಿ 2 ಕೋಟಿ ರೂ. ಪಡೆದು ಈ ದಾಖಲೆಯನ್ನು ತಮ್ಮ ಹಸರಿಗೆ ಬರೆದರು.

Continue Reading

ಕ್ರಿಕೆಟ್

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

ಭಾನುವಾರ ನಡೆದ ಅಂಡರ್​-19 ಪುರುಷರ ಏಷ್ಯಾ ಕಪ್(U19 Asia Cup) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್​ಗಳ ಸೋಲಿಗೆ ತುತ್ತಾಗಿದೆ.

VISTARANEWS.COM


on

India U19 vs Pakistan U19
Koo

ದುಬೈ: ಎಸಿಸಿ ಅಂಡರ್​-19 ಪುರುಷರ ಏಷ್ಯಾ ಕಪ್(U19 Asia Cup) ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಬದ್ದ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ(India U19 vs Pakistan) ತಂಡ 8 ವಿಕೆಟ್​ಗಳ ಸೋಲು ಕಂಡಿದೆ. ಸತತ 2 ಗೆಲುವು ಸಾಧಿಸಿದ ಪಾಕಿಸ್ತಾನ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇಲ್ಲಿನ ಐಸಿಸಿ ಅಕಾಡೆಮಿ ಕ್ರಿಕೆಟ್​ ಮೈದಾನದಲ್ಲಿ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್​ನಷ್ಟಕ್ಕೆ 260 ರನ್‌ ಬಾರಿಸಿತು. ದಿಟ್ಟ ರೀತಿಯಲ್ಲಿ ಗುರಿ ಬೆನ್ನಟ್ಟಿದ ಪಾಕಿಸ್ತಾನ ಕೇವಲ 2 ವಿಕೆಟ್​ ಕಳೆದುಕೊಂಡು 47 ಓವರ್‌ಗಳಲ್ಲಿ 263 ರನ್​ ಬಾರಿಸಿ ಗೆಲುವು ದಾಖಲಿಸಿತು. ಪಾಕಿಸ್ತಾನದ ಪರ ಅಮೋಘ ಶತಕ ಗಳಿಸಿದ ಅಜಾನ್ ಅವೈಸ್ (105*) ಗೆಲುವಿನ ರೂವಾರಿ ಎನಿಸಿದರು. ಶಹಜೇಬ್ ಖಾನ್ (63) ರನ್​ ಬಾರಿಸಿ ಅವೈಸ್​ಗೆ ಉತ್ತಮ ಸಾಥ್​ ನೀಡಿದರು.

ಭಾರತ ತಂಡ ಮೊದಲ ಪಂದ್ಯದಲ್ಲಿ ಅಫಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ ಸೋಲು ಕಂಡಿದೆ. ಡಿಸೆಂಬರ್ 12ರಂದು ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನೇಪಾಳ ತಂಡದ ಸವಾಲನ್ನು ಎದುರಿಸಲಿದೆ. ಇಲ್ಲಿ ಗೆದ್ದರೆ ಮಾತ್ರ ಭಾರತ ತಂಡ ಮುಂದಿನ ಹಂತಕ್ಕೇರಲಿದೆ.

ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ಪರ ಆದರ್ಶ್ ಸಿಂಗ್ (62), ನಾಯಕ ಉದಯ್ ಸಹಾರನ್ (60) ಹಾಗೂ ಸಚಿನ್ ಧಾಸ್(58) ಆಕರ್ಷಕ ಅರ್ಧಶತಕಗಳನ್ನು ಗಳಿಸಿದರು. ಅರ್ಷಿನ್ ಕುಲಕರ್ಣಿ 24 ರನ್ ಗಳಿಸಿ ಉತ್ತಮ ರನ್​ ಕಲೆ ಹಾಕಿದರು. ಅದರಲ್ಲೂ 7ನೇ ಕ್ರಮಾಂಕದಲ್ಲಿ ಆಡಿದ ಸಚಿನ್ ಧಾಸ್ ಬಿರುಸಿನ ಬ್ಯಾಟಿಂಗ್​ ನಡೆಸಿ ಅರ್ಧಶತಕ ಬಾರಿಸಿದರು. ಅವರ ಈ ಅರ್ಧಶತಕ ಇನಿಂಗ್ಸ್​ನಲ್ಲಿ 3 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಯಿತು. ರುದ್ರ ಪಟೇಲ್ (1), ಮುಶೀರ್ ಖಾನ್ (2) ಬ್ಯಾಟಿಂಗ್ ವೈಫಲ್ಯ ಕಂಡರು. ಪಾಕ್​ ಪರ ಬೌಲಿಂಗ್​ನಲ್ಲಿ ಮೊಹಮ್ಮದ್ ಜೀಶಾನ್ ಕೇವಲ 46 ರನ್​ ನೀಡಿ 4 ವಿಕೆಟ್​ ಕಿತ್ತರು. ಉಳಿದಂತೆ ಆಮೀರ್​ ಹಸನ್​ ಮತ್ತು ಉಬೈದ್ ಶಾ ತಲಾ 2 ವಿಕೆಟ್​ ಉರುಳಿಸಿದರು.

ಶತಕ ಬಾರಿಸಿದ ಅಜಾನ್ ಅವೈಸ್

ಚೇಸಿಂಗ್​ ವೇಳೆ ಅಮೋಘ ಬ್ಯಾಟಿಂಗ್​ ಪ್ರದರ್ಶನ ತೋರಿದ ಅಜಾನ್ ಅವೈಸ್ 130 ಎಸೆತ ಎದುರಿಸಿ 10 ಆಕರ್ಷಕ ಬೌಂಡರಿ ನೆರವಿನಿಂದ ಅಜೇಯ 105 ರನ್​ ಬಾರಿಸಿದರು. ಪಾಕ್​ ಆರಂಭ ಉತ್ತಮವಾಗಿರದಿದ್ದರೂ ದ್ವಿತೀಯ ವಿಕೆಟ್​ಗೆ ಅವೈಸ್ ಮತ್ತು ಶಹಜೇಬ್ ಸೇರಿಕೊಂಡು 110 ರನ್​ಗಳ ಜತೆಯಾಟ ನಡೆಸಿದರು. ಶಹಜೇಬ್ 63 ರನ್​ ಬಾರಿಸಿ ಮುರುಗನ್​ಗೆ ವಿಕೆಟ್​ ಒಪ್ಪಿಸಿದರು.

ಮೂರನೇ ವಿಕೆಟ್​ಗೆ ಆಡಲಿಳಿದ ನಾಯಕ ಸಾದ್ ಬೇಗ್ (68*) ಅವರು ಅವೈಸ್ ಜತೆ ಸೇರಿಕೊಂಡು ಉಪಯುಕ್ತ ಇನಿಂಗ್ಸ್ ಕಟ್ಟಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಈ ಪೈಕಿ ಅಜಾನ್ ಹಾಗೂ ನಾಯಕ ಸಾದ್ ಮುರಿಯದ ಮೂರನೇ ವಿಕೆಟ್‌ಗೆ 125 ರನ್‌ಗಳ ಜೊತೆಯಾಟ ಕಟ್ಟಿದರು.

Continue Reading

ಕ್ರಿಕೆಟ್

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

ದಕ್ಷಿಣ ಆಫ್ರಿಕಾ(IND vs SA) ಮತ್ತು ಭಾರತ ನಡುವಣ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು ಟಾಸ್​ ಮತ್ತು ಪಂದ್ಯ ಆರಂಭ ವಿಳಂಬಗೊಳ್ಳಲಿದೆ.

VISTARANEWS.COM


on

South Africa vs India 1
Koo

ಡರ್ಬಾನ್​: ದಕ್ಷಿಣ ಆಫ್ರಿಕಾ(IND vs SA) ಮತ್ತು ಭಾರತ ನಡುವಣ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು ಟಾಸ್​(Toss delayed due to rain) ಮತ್ತು ಪಂದ್ಯ ಆರಂಭ ವಿಳಂಬಗೊಳ್ಳಲಿದೆ. ಸದ್ಯಕ್ಕೆ ಡರ್ಬಾನ್​ನಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ. ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್​ ಹಿನ್ನಲೆ ಇತ್ತಂಡಗಳಿಗೂ ಈ ಸರಣಿ ಪ್ರಮುಖವಾಗಿದೆ.

ಕವರ್​ನಿಂದ ಮುಚ್ಚಿದ ಮೈದಾನ

ಸದ್ಯ ಡರ್ಬಾನ್​ನ ಕಿಂಗ್ಸ್‌ಮೀಡ್ ಮೈದಾನವನ್ನು ಕವರ್​ನಿಂದ ಸಂಪೂರ್ಣವಾಗಿ ಮುಚ್ಚಲಾಗಿದೆ. ಆಟಗಾರರೆಲ್ಲ ಡ್ರೆಸಿಂಗ್​ ರೂಮ್​ನಲ್ಲಿ ಮಳೆ ಯಾವಾಗ ಬಿಡುತ್ತದೆ ಎಂದು ಕಾದು ಕುಳಿತಿದ್ದಾರೆ. ಇದು ಐಸಿಸಿ ಅಡಿಯಲ್ಲಿ ನಡೆಯುವ ಟೂರ್ನಿಯಾದ ಕಾರಣ ನಿಗದಿತ ಸಮಯಕ್ಕೆ ಮಳೆ ನಿಂತು ಆಟ ಪ್ರಾರಂಭವಾಗದಿದ್ದರೆ ಪಂದ್ಯವನ್ನು ರದ್ದು ಎಂದು ಘೋಷಿಸಲಾಗುತ್ತದೆ.

ಟಿ20 ಮುಖಾಮುಖಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 24 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಭಾರತವು 13 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ದಕ್ಷಿಣ ಆಫ್ರಿಕಾದಲ್ಲಿ, ‘ಮೆನ್ ಇನ್ ಬ್ಲೂ’ ಏಳು ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದಿದ್ದರೆ, ಆತಿಥೇಯರು ಎರಡರಲ್ಲಿ ಗೆದ್ದಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದೆ.

ಪಿಚ್​ ರಿಪೋರ್ಟ್

ಡರ್ಬಾನ್​ನ ಕಿಂಗ್ಸ್‌ಮೀಡ್ ಪಿಚ್ ಮೈದಾನದಲ್ಲಿ ಆಡಿದ 18 ಪಂದ್ಯಗಳಲ್ಲಿ, ವೇಗದ ಬೌಲರ್‌ಗಳು 23.84 ಸರಾಸರಿಯಲ್ಲಿ 162 ವಿಕೆಟ್‌ಗಳನ್ನು ಪಡೆದರೆ, ಸ್ಪಿನ್ನರ್‌ಗಳು 18 ಪಂದ್ಯಗಳಲ್ಲಿ 26.80 ಸರಾಸರಿಯಲ್ಲಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ ಒಂಬತ್ತು ಗೆಲುವು ಸಾಧಿಸಿದರೆ, ಎರಡನೇ ಬ್ಯಾಟಿಂಗ್ ನಡೆಸಿದ ತಂಡ ಎಂಟು ಗೆಲುವುಗಳನ್ನು ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಡರ್ಬನ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 143 ಆಗಿದೆ.

ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಮೊದಲ ಬಾರಿ ಆಡಿದ ತಂಡವೆಂದರೆ ಅದು ಭಾರತ ಮತ್ತು ದಕ್ಷಿಣ ಆಫ್ರಿಕಾ. 2007ರಲ್ಲಿ ನಡೆದ ಚೊಚ್ಚಲ ಅಂತಾರಾಷ್ಟೀಯ ಟಿ20 ಪಂದ್ಯದಲ್ಲಿ ವೀರೇಂದ್ರ ಸೆಹವಾಗ್​ ಸಾರಥ್ಯದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 82 ರನ್​ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ್ದ ಭಾರತ 6 ವಿಕೆಟ್​ಗೆ 169 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 87 ರನ್​ಗೆ ಸರ್ವಪತನ ಕಂಡಿತ್ತು.

ಸಿಕ್ಕ ಅವಕಾಶ ಬಳಿಸಿಕೊಳ್ಳಿ

ಈಗಾಗಲೇ ಬಿಸಿಸಿಐ ಆಯ್ಕೆ ಸಮಿತಿಯ ಇಬ್ಬರು ಅಧಿಕಾರಿಗಳನ್ನು ದಕ್ಷಿಣ ಆಫ್ರಿಕಾಗೆ ಕಳುಹಿಸಿದ್ದು ಆಟಗಾರರ ಎಲ್ಲ ಪ್ರದರ್ಶನದ ಬಗ್ಗೆ ಮಾಹಿತಿ ಸಂಗ್ರಹಿಸಲು ಸೂಚಿಸಿದೆ. ಹೀಗಾಗಿ ವಿಶ್ವಕಪ್​ನಲ್ಲಿ ಸ್ಥಾನ ಪಡೆಯಬೇಕಿದ್ದರೆ. ಯುವ ಆಟಗಾರರು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ವಿಶ್ವಕಪ್​ಗೂ ಮುನ್ನ ಐಪಿಎಲ್​ ಕೂಡ ನಡೆಯುದರಿಂದ ಇಲ್ಲಿಯೂ ಕೆಲ ಉದಯೋನ್ಮುಖ ಆಟಗಾರು ಬೆಳಕಿಗೆ ಬರುತ್ತಾರೆ. ಆದ್ದರಿಂದ ಈಗ ತಂಡದಲ್ಲಿ ಇದ್ದ ಆಟಗಾರರು ತಮ್ಮ ಶ್ರೇಷ್ಠ ಪ್ರದರ್ಶನ ತೋರಿ ಆಯ್ಕೆ ಸಮಿತಿಯ ಗಮನಸೆಳೆಯಬೇಕಿದೆ.

Continue Reading
Advertisement
Gautam Gambhir
ಕ್ರಿಕೆಟ್13 mins ago

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

Shakti Scheme
ಕರ್ನಾಟಕ24 mins ago

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Supreme Court verdict on Article 370 and Know about this article
ದೇಶ1 hour ago

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

WPL 2024 Auction
ಕ್ರಿಕೆಟ್1 hour ago

ಬಿಡ್ಡಿಂಗ್​ ಹಣದಲ್ಲಿ ತಂದೆ-ತಾಯಿಗೆ ವಿಶೇಷ ಉಡುಗೊರೆ ನೀಡಲು ಮುಂದಾದ ಕರ್ನಾಟಕದ ​ ವೃಂದಾ ದಿನೇಶ್​

Naveen Ammembala
ದಕ್ಷಿಣ ಕನ್ನಡ2 hours ago

ಹೈಪರ್ ಲೋಕಲ್ ಸುದ್ದಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧ: ನವೀನ್ ಅಮ್ಮೆಂಬಳ

Chhattisgarh to be CM Vishnu has two deputies and Raman Singh Speaker
ದೇಶ2 hours ago

ಛತ್ತೀಸ್‍‌ಗಢ ಸಿಎಂ ವಿಷ್ಣುಗೆ ಇಬ್ಬರು ಡೆಪ್ಯುಟಿಗಳು; ರಮಣ್ ಸಿಂಗ್ ಸ್ಪೀಕರ್

Rambhapuri seer and MB Patil
ಕರ್ನಾಟಕ2 hours ago

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

India U19 vs Pakistan U19
ಕ್ರಿಕೆಟ್2 hours ago

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

Reliance Retail launches beauty retail store 'Tira' in Bengaluru
ದೇಶ2 hours ago

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

South Africa vs India 1
ಕ್ರಿಕೆಟ್3 hours ago

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ6 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ9 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌