IND VS AUS: ದ್ವಿತೀಯ ಟೆಸ್ಟ್​ಗೆ ಶ್ರೇಯಸ್​ ಅಯ್ಯರ್​; ಸೂರ್ಯಕುಮಾರ್ ಯಾದವ್​​ ಡೌಟ್​? - Vistara News

ಕ್ರಿಕೆಟ್

IND VS AUS: ದ್ವಿತೀಯ ಟೆಸ್ಟ್​ಗೆ ಶ್ರೇಯಸ್​ ಅಯ್ಯರ್​; ಸೂರ್ಯಕುಮಾರ್ ಯಾದವ್​​ ಡೌಟ್​?

ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್​ ಅಯ್ಯರ್​ ಆಡುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ.

VISTARANEWS.COM


on

Shreyas Iyer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಆಸ್ಟ್ರೇಲಿಯಾ(IND VS AUS) ವಿರುದ್ಧದ ಬಾರ್ಡರ್​-ಗವಾಸ್ಕರ್(border gavaskar trophy)​ ಟೆಸ್ಟ್​ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್​ ಅಯ್ಯರ್(shreyas iyer)​ ಅವರು ಕಣಕ್ಕಿಳಿಯುವುದು ಬಹುತೇಖ ಖಚಿತ ಎಂದು ತಿಳಿದುಬಂದಿದೆ.

ಬೆನ್ನು ನೋವಿನಿಂದಾಗಿ ಮೊದಲ ಟೆಸ್ಟ್​ ಪಂದ್ಯಕ್ಕೆ ಅಲಭ್ಯರಾಗಿದ್ದ ಶ್ರೇಯಸ್​ ಅಯ್ಯರ್​ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು ತಂಡ ಸೇರಿದ್ದಾರೆ. ಮಂಗಳವಾರ ತಂಡ ಸೇರಿದ್ದ ಅಯ್ಯರ್​ ಬುಧವಾರ ಸಹ ಆಟಗಾರರೊಂದಿಗೆ ಅಭ್ಯಾಸ ನಡೆಸಿದ್ದಾರೆ. ಗುರುವಾರವೂ ಕೋಚ್​ ರಾಹುಲ್​ ದ್ರಾವಿಡ್​ ಮಾರ್ಗದರ್ಶನದಲ್ಲಿ ಅಯ್ಯರ್​ ಬ್ಯಾಟಿಂಗ್​ ಅಭ್ಯಾಸ ನಡೆಸಿದ್ದಾರೆ.

ಇದನ್ನೂ ಓದಿ IND VS AUS: ಹೆಚ್ಚುವರಿ ಬ್ಯಾಟಿಂಗ್​ ಅಭ್ಯಾಸ ನಡೆಸಿದ ವಿರಾಟ್ ಕೊಹ್ಲಿ​

ನೆಟ್ಸ್​ನಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೊವನ್ನು ಶ್ರೇಯಸ್​ ಅಯ್ಯರ್​ ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೀಗಾಗಿ ಅವರು ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವುದು ಪಕ್ಕಾ ಎಂಬಂತಿದೆ. ಟೀಮ್​ ಮ್ಯಾನೆಜ್​ಮೆಂಟ್​ ಕೂಡ ಮಧ್ಯಮ ಕ್ರಮಾಂಕದಲ್ಲಿರುವ ಬ್ಯಾಟಿಂಗ್​ ಕೊರತೆಯನ್ನು ನಿಭಾಯಿಸಲು ಅಯ್ಯರ್​ ಸೂಕ್ತ ಎಂದು ಹೇಳಿದೆ. ಅಯ್ಯರ್​ ಈ ಪಂದ್ಯದಲ್ಲಿ ಆಡಿದರೆ ಕಳೆದ ಪಂದ್ಯದಲ್ಲಿ ಟೆಸ್ಟ್​ ಪದಾರ್ಪಣೆ ಮಾಡಿದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​ ಅವರು ಹೊರಗುಳಿಯಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

GT vs SRH: ಇಂದು ಲ್ಯಾವೆಂಡರ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಗುಜರಾತ್​ ತಂಡ; ಇದರ ಉದ್ದೇಶವೇನು?

GT vs SRH:”ಲ್ಯಾವೆಂಡರ್ ಜರ್ಸಿಗಳನ್ನು ಧರಿಸುವುದರಿಂದ ಕ್ಯಾನ್ಸರ್ ಹೋರಾಟಗಾರರೊಂದಿಗೆ ನಮ್ಮನ್ನು ಒಂದುಗೂಡಿಸುತ್ತದೆ ಮತ್ತು ಅವರ ಧೈರ್ಯವನ್ನು ಗೌರವಿಸುತ್ತದೆ. ತಮ್ಮ ಈ ಅಭಿಯಾನದಿಂದ ಪ್ರತಿಯೊಬ್ಬರಲ್ಲಿ ಕ್ಯಾನ್ಸರ್ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುತ್ತದೆ ಎಂದು ಭಾವಿಸುತ್ತೇವೆ” ಎಂದು ಗುಜರಾತ್​ ಫ್ರಾಂಚೈಸಿ ತಿಳಿಸಿದೆ.

VISTARANEWS.COM


on

GT vs SRH
Koo

ಹೈದರಾಬಾದ್​: ಇಂದು ನಡೆಯುವ ಸನ್​ರೈಸರ್ಸ್​ ಹೈದರಾಬಾದ್(GT vs SRH)​ ವಿರುದ್ಧದ ಪಂದ್ಯದಲ್ಲಿ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ಟೈಟಾನ್ಸ್(Gujarat Titans)​ ತಂಡ ಕ್ಯಾನ್ಸರ್ ಜಾಗೃತಿಗಾಗಿ ಲ್ಯಾವೆಂಡರ್ ಜೆರ್ಸಿ(gujarat titans lavender jersey) ಧರಿಸಿ ಕಣಕ್ಕಿಳಿಯಲಿದೆ. ಕೆಕೆಆರ್​ ವಿರುದ್ಧದ ಪಂದ್ಯದಲ್ಲಿಯೇ ಗುಜರಾತ್​ ಈ ಜೆರ್ಸಿಯಲ್ಲಿ ಆಡಬೇಕಿತ್ತು. ಆದರೆ ಈ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ಇದು ಸಾಧ್ಯವಾಗಿರಲಿಲ್ಲ. ಕಳೆದ ವರ್ಷವೂ ಕೂಡ ಗುಜರಾತ್​ ಈ ಜೆರ್ಸಿಯಲ್ಲಿ ಆಡಿತ್ತು. ಕ್ಯಾನ್ಸರ್ ರೋಗಿಗಳೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸುವುದು ಮತ್ತು ಜಾಗೃತಿ ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

“ಲ್ಯಾವೆಂಡರ್ ಜರ್ಸಿಗಳನ್ನು ಧರಿಸುವುದರಿಂದ ಕ್ಯಾನ್ಸರ್ ಹೋರಾಟಗಾರರೊಂದಿಗೆ ನಮ್ಮನ್ನು ಒಂದುಗೂಡಿಸುತ್ತದೆ ಮತ್ತು ಅವರ ಧೈರ್ಯವನ್ನು ಗೌರವಿಸುತ್ತದೆ. ತಮ್ಮ ಈ ಅಭಿಯಾನದಿಂದ ಪ್ರತಿಯೊಬ್ಬರಲ್ಲಿ ಕ್ಯಾನ್ಸರ್ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುತ್ತದೆ ಎಂದು ಭಾವಿಸುತ್ತೇವೆ” ಎಂದು ಗುಜರಾತ್​ ಫ್ರಾಂಚೈಸಿ ತಿಳಿಸಿದೆ.

2040ರ ವೇಳೆಗೆ ಭಾರತದಲ್ಲಿನ ಕ್ಯಾನ್ಸರ್‌ ಪ್ರಮಾಣ ದ್ವಿಗುಣಗೊಳ್ಳುವ ಸಾಧ್ಯತೆ ಇದೆ. ನೋಯ್ಡಾದ ರಾಷ್ಟ್ರೀಯ ಕ್ಯಾನ್ಸರ್‌ ತಡೆ ಮತ್ತು ಸಂಶೋಧನ ಸಂಸ್ಥೆಯ ಅಧ್ಯಯನದ ಪ್ರಕಾರ ಭಾರತದಲ್ಲಿ 2.25 ದಶಲಕ್ಷ ಮಂದಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು 2040ರ ವೇಳೆಗೆ ಇದು ದ್ವಿಗುಣಗೊಳ್ಳಲಿದೆ ಎಂದಿದೆ. ಪ್ರತೀ ವರ್ಷಕ್ಕೆ 1 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆೆ ಎಂದು ಕ್ಯಾನ್ಸರ್‌ ಇಂಡಿಯಾ.ಆರ್ಗ್‌ ವರದಿ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಶೇ. 30-50ರಷ್ಟು ಕ್ಯಾನ್ಸರ್‌ ರೋಗಗಳನ್ನು ತಡೆಯಬಹುದಾಗಿದೆ. ಇದ ಕ್ಕಾಗಿ ತಂಬಾಕು ಮತ್ತು ಯುವಿ ಕಿರಣಗಳಿಂದ ಅಂತರ ಕಾಯ್ದುಕೊಳ್ಳುವುದು ಅಗತ್ಯ. ಒಂದು ಸಿಗರೇಟ್‌ನಲ್ಲಿ ಸುಮಾರು 7,000 ರಾಸಾಯನಿಕಗಳಿವೆ ಎನ್ನಲಾಗುತ್ತಿದ್ದು, ಅವುಗಳಲ್ಲಿ 50 ರಾಸಾಯನಿಕಗಳು ಕ್ಯಾನ್ಸರ್‌ಗೆ ಕಾರಣವಾಗುತ್ತವೆ ಎಂದೂ ಅದು ಹೇಳಿದೆ.

ಕೆಕೆಆರ್ ವಿರುದ್ಧದ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ಗುಜರಾತ್​ ತಂಡದ ಪ್ಲೇ ಆಫ್ ಗೇರುವ ಆಸೆ ಕಮರಿ ಹೋಗಿತ್ತು. ಟೂರ್ನಿಯಿಂದ ಹೊರಬಿದ್ದಿರುವ ಗಿಲ್​ ಪಡೆಗೆ ಇಂದಿನ ಪಂದ್ಯ ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು. ಮೊದಲೆರಡು ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಗುಜರಾತ್‌ ಟೈಟಾನ್ಸ್‌ ಈ ಬಾರಿ ತೀರಾ ನಿರಾಶಾದಾಯಕ ಪ್ರದರ್ಶನ ತೋರಿದೆ. ಮೊಹಮ್ಮದ್‌ ಶಮಿ ಗೈರು ಮತ್ತು ಪಾಂಡ್ಯ ಮುಂಬೈ ತಂಡಕ್ಕೆ ಹೋದದ್ದು ತಂಡಕ್ಕೆ ಭಾರೀ ಹೊಡೆತ ನೀಡಿತ್ತು.​

ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಸನ್​ರೈಸರ್ಸ್​ ಹೈದರಾಬಾದ್​ಗೆ ಇದು ಮಹತ್ವದ ಪಂದ್ಯ. ಸದ್ಯ 14 ಅಂಕ ಗಳಿಸಿ ಮೂರನೇ ಸ್ಥಾನಿಯಾಗಿದ್ದರೂ ಪ್ಲೇ ಆಫ್​ ಟಿಕೆಟ್​ ಇನ್ನೂ ಅಧಿಕೃತಗೊಂಡಿಲ್ಲ. ಇಂದು ಗೆದ್ದರೆ ಅಧಿಕೃತವಾಗಲಿದೆ. 25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ, ಟ್ರಾವಿಸ್​ ಹೆಡ್​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್​ ಕ್ಲಾಸೆನ್​, ಐಡೆನ್​ ಮಾರ್ಕ್ರಮ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಬೌಲಿಂಗ್​ನಲ್ಲಿ ನಾಯಕ ಪ್ಯಾಟ್​ ಕಮಿನ್ಸ್​, ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

Continue Reading

ಕ್ರೀಡೆ

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

KMF Nandini Logo: ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

VISTARANEWS.COM


on

T20 World Cup 2024
Koo

ಬೆಂಗಳೂರು: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ನಾಟಕ ಹಾಲು ಮಹಾ ಮಂಡಳಿ(KMF) ಈಗಾಗಲೇ 2 ತಂಡಗಳಾದ ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಮೂಲಕ ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಇದೀಗ ನಂದಿನಿ ಲೋಗೋ(KMF Nandini Logo) ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿದೆ.

ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದನ್ನೂ ಓದಿ T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಕ್ರೀಡೆ

IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

IPL 2024 Points Table: ಇಂದು ನಡೆಯುವ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ಗುಜರಾತ್​ ಟೈಟಾನ್ಸ್​ ಮುಖಾಮುಖಿಯಾಗಲಿದೆ. ಹೈದರಾಬಾದ್​ ಗೆಲುವು ಸಾಧಿಸಿದರೆ ಅಧಿಕೃತವಾಗಿ ಪ್ಲೇ ಆಫ್​ಗೆ ಪ್ರವೇಶ ಪಡೆಯಲಿದೆ.

VISTARANEWS.COM


on

IPL 2024 Points Table
Koo

ಗುವಾಹಟಿ: ಬುಧವಾರ ನಡೆದ ಐಪಿಎಲ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ 5 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಪಂಜಾಬ್​ ಗೆಲುವಿನಿಂದ ಮುಂಬೈ ಇಂಡಿಯನ್ಸ್​ ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನಕ್ಕೆ ಕುಸಿದಿದೆ. ಪಂಜಾಬ್​ 10 ಅಂಕದೊಂದಿಗೆ 9ನೇ ಸ್ಥಾನಿಯಾಗಿದೆ.

ಇಂದು ನಡೆಯುವ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ಗುಜರಾತ್​ ಟೈಟಾನ್ಸ್​ ಮುಖಾಮುಖಿಯಾಗಲಿದೆ. ಹೈದರಾಬಾದ್​ ಗೆಲುವು ಸಾಧಿಸಿದರೆ ಅಧಿಕೃತವಾಗಿ ಪ್ಲೇ ಆಫ್​ಗೆ ಪ್ರವೇಶ ಪಡೆಯಲಿದೆ. ಗುಜರಾತ್​ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ಇದು ಔಪಚಾರಿಕ ಪಂದ್ಯವಾಗಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​139319 (+1.428)
ರಾಜಸ್ಥಾನ್​ ರಾಯಲ್ಸ್​​​128416 (+0.349)
ಚೆನ್ನೈ​​137614 (+0.528)
ಹೈದರಾಬಾದ್​127514 (+0.406)
ಆರ್​ಸಿಬಿ136712 (+0.387)
ಡೆಲ್ಲಿ136712 (-0.482)
ಲಕ್ನೋ126612 (-0.769)
ಗುಜರಾತ್​135711 (-1.063)
ಪಂಜಾಬ್​​135810 (-0.347)
ಮುಂಬೈ​​13498 (-0.271)

ಗುವಾಹಟಿಯ ಬರ್ಸಾಪರಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 65ನೇ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ರಾಜಸ್ಥಾನ್​ ರಾಯಲ್ಸ್ ಬ್ಯಾಟಿಂಗ್​ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು ಕೇವಲ 144 ರನ್​ ಗಳಿಸಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್(Punjab Kings)​ ಕೂಡ ಒಂದು ಹಂತದಲ್ಲಿ ಆಘಾತ ಎದುರಿಸಿ ಬಳಿಕ ಚೇತರಿಕೆ ಹಾದಿ ಹಿಡಿದು 18.5 ಓವರ್​ನಲ್ಲಿ 5 ವಿಕೆಟ್​ ನಷ್ಟಕ್ಕೆ 145 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಇದನ್ನೂ ಓದಿ IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

ಚೇಸಿಂಗ್​ ವೇಳೆ ಪಂಜಾಬ್​ ಕೂಡ ಅಗ್ರ ಕ್ರಮಾಂಕದ ಆಟಗಾರರನ್ನು ಅಗ್ಗಕ್ಕೆ ಕಳೆದುಕೊಂಡು ರಾಜಸ್ಥಾನ್​ ತಂಡದ ಹಾಗೆ ಆರಂಭಿಕ ಆಘಾತಕ್ಕೆ ಸಿಲುಕಿತು. ಪ್ರಭಾಸಿಮ್ರಾನ್ ಸಿಂಗ್(6) ಮತ್ತು ಜಾನಿ ಬೇರ್​ಸ್ಟೋ(14) ರನ್​ ಗಳಿಸಿ ಪೆವಿಲಿಯನ್​ ಸೇರಿದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ, ಈ ಬಾರಿಯ ಐಪಿಎಲ್​ನಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಸಂಚಲನ ಸೃಷ್ಟಿಸಿದ್ದ ಶಶಾಂಕ್​ ಸಿಂಗ್​ ಶೂನ್ಯಕ್ಕೆ ವಿಕೆಟ್​ ಕಳೆದುಕೊಂಡರು. 36 ರನ್​ಗೆ 3 ವಿಕೆಟ್​ ಕಳೆದುಕೊಂಡ ಪಂಜಾಬ್​, ಚೇತರಿಕೆ ಕಾಣುವಷ್ಟರಲ್ಲಿ ಉತ್ತಮವಾಗಿ ಆಡುತ್ತಿದ್ದ ರೀಲಿ ರೋಸೊ(22) ವಿಕೆಟ್ ಕೂಡ​ ಕಳೆದುಕೊಂಡಿತು. ತಂಡದ ಮೊತ್ತ 50 ಗಡಿ ದಾಟುವ ಮುನ್ನ 4 ವಿಕೆಟ್​ ಕಳೆದುಕೊಂಡು ಮತ್ತಷ್ಟು ತೀವ್ರ ಸಂಕಟಕ್ಕೆ ಒಳಗಾಯಿತು.

ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ನೆರವಾದದ್ದು ನಾಯಕ ಸ್ಯಾಮ್​ ಕರನ್​ ಮತ್ತು ಜಿತೇಶ್​ ಶರ್ಮ. ಉಭಯ ಆಟಗಾರರು ತಾಳ್ಮೆಯುತ ಬ್ಯಾಟಿಂಗ್​ ನಡೆಸಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದರು. 5ನೇ ವಿಕೆಟ್​ಗೆ 63 ರನ್​ ಒಟ್ಟುಗೂಡಿಸಿದರು. ಈ ಉಪಯುಕ್ತ ಜತೆಯಾಟದ ಸಹಾಯದಿಂದ ಪಂಜಾಬ್​ ಗೆಲುವಿನ ದಡ ಸೇರಿತು. ಜಿತೇಶ್​ ಶರ್ಮ 20 ಎಸೆತಗಳಿಂದ 22 ರನ್​ ಬಾರಿಸಿ ಪರಾಗ್​ಗೆ ವಿಕೆಟ್​ ಒಪ್ಪಿಸಿದರು. ಕರನ್ ಅಜೇಯರಾಗಿ ಉಳಿದು ಅರ್ಧಶತಕ ಬಾರಿಸಿದರು. ಇದು ಅವರ ಈ ಆವೃತ್ತಿಯ 2ನೇ ಅರ್ಧಶತಕವಾಗಿದೆ. ಒಟ್ಟು 41 ಎಸೆತ ಎದುರಿಸಿದ ಕರನ್​ 63* ರನ್​ ಬಾರಿಸಿದರು. ಈ ವೇಳೆ ಇವರ ಬ್ಯಾಟ್​ನಿಂದ 5 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ​

Continue Reading

ಕ್ರೀಡೆ

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

PBKS vs RR: ಪ್ಲೇ ಆಫ್​ ರೇಸ್​ನಿಂದ ಈಗಾಗಲೇ ಹೊರಬಿದ್ದಿರುವ ಕಾರಣ ಪಂಜಾಬ್​ಗೆ ಈ ಗೆಲುವು ಕೇವಲ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರುವಲ್ಲಿ ಮಾತ್ರ ಸಹಾಯ ಮಾಡಿತು. ಹಾಲಿ ಚಾಂಪಿಯನ್​ ಕೊನೆಯ ಸ್ಥಾನಕ್ಕೆ ಕುಸಿಯಿತು. ಸದ್ಯ ಪಂಜಾಬ್​​ 9ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ

VISTARANEWS.COM


on

PBKS vs RR
Koo

ಗುವಾಹಟಿ: ಬುಧವಾರದ ಸಣ್ಣ ಮೊತ್ತದ ಐಪಿಎಲ್(IPL 2024)​ ಮೇಲಾಟದಲ್ಲಿ ಪಂಜಾಬ್​ ಕಿಂಗ್ಸ್​(PBKS vs RR) ತಂಡ ರಾಜಸ್ಥಾನ್​ ರಾಯಲ್ಸ್​(Rajasthan Royals) ವಿರುದ್ಧ 5 ವಿಕೆಟ್​ ಅಂತರದ ಗೆಲುವು ಸಾಧಿಸಿದೆ. ಲಕ್ನೋ ಸೋಲಿನಿಂದ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಸಂಜು ಪಡೆಗೆ ಈ ಸೋಲು ಯಾವುದೇ ಪರಿಣಾಮ ಬೀರಲಿಲ್ಲ. ಒಂದೊಮ್ಮೆ ಡೆಲ್ಲಿ ವಿರುದ್ಧ ಲಕ್ನೋ ಮಂಗಳವಾರದ ಪಂದ್ಯದಲ್ಲಿ ಗೆಲುವು ಸಾಧಿಸುತ್ತಿದ್ದರೆ, ಈ ಸೋಲು ರಾಜಸ್ಥಾನ್​ಗೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿತ್ತು.

ರಾಜಸ್ಥಾನ್​ ತಂಡಕ್ಕೆ​ 2ನೇ ತವರಾದ ಗುವಾಹಟಿಯ ಬರ್ಸಾಪರಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 65ನೇ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ರಾಜಸ್ಥಾನ್​ ರಾಯಲ್ಸ್ ಬ್ಯಾಟಿಂಗ್​ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು ಕೇವಲ 144 ರನ್​ ಗಳಿಸಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್(Punjab Kings)​ ಕೂಡ ಒಂದು ಹಂತದಲ್ಲಿ ಆಘಾತ ಎದುರಿಸಿ ಬಳಿಕ ಚೇತರಿಕೆ ಹಾದಿ ಹಿಡಿದು 18.5 ಓವರ್​ನಲ್ಲಿ 5 ವಿಕೆಟ್​ ನಷ್ಟಕ್ಕೆ 145 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಪ್ಲೇ ಆಫ್​ ರೇಸ್​ನಿಂದ ಈಗಾಗಲೇ ಹೊರಬಿದ್ದಿರುವ ಕಾರಣ ಪಂಜಾಬ್​ಗೆ ಈ ಗೆಲುವು ಕೇವಲ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರುವಲ್ಲಿ ಮಾತ್ರ ಸಹಾಯ ಮಾಡಿತು. ಹಾಲಿ ಚಾಂಪಿಯನ್​ ಕೊನೆಯ ಸ್ಥಾನಕ್ಕೆ ಕುಸಿಯಿತು. ಸದ್ಯ ಪಂಜಾಬ್​​ 9ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ತನ್ನ ಅಂತಿಮ ಲೀಗ್​ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧ ಆಡಲಿದೆ. ಈ ಪಂದ್ಯ ಮೇ 19ರಂದು ನಡೆಯಲಿದೆ.

ಚೇಸಿಂಗ್​ ವೇಳೆ ಪಂಜಾಬ್​ ಕೂಡ ಅಗ್ರ ಕ್ರಮಾಂಕದ ಆಟಗಾರರನ್ನು ಅಗ್ಗಕ್ಕೆ ಕಳೆದುಕೊಂಡು ರಾಜಸ್ಥಾನ್​ ತಂಡದ ಹಾಗೆ ಆರಂಭಿಕ ಆಘಾತಕ್ಕೆ ಸಿಲುಕಿತು. ಪ್ರಭಾಸಿಮ್ರಾನ್ ಸಿಂಗ್(6) ಮತ್ತು ಜಾನಿ ಬೇರ್​ಸ್ಟೋ(14) ರನ್​ ಗಳಿಸಿ ಪೆವಿಲಿಯನ್​ ಸೇರಿದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ, ಈ ಬಾರಿಯ ಐಪಿಎಲ್​ನಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಸಂಚಲನ ಸೃಷ್ಟಿಸಿದ್ದ ಶಶಾಂಕ್​ ಸಿಂಗ್​ ಶೂನ್ಯಕ್ಕೆ ವಿಕೆಟ್​ ಕಳೆದುಕೊಂಡರು. 36 ರನ್​ಗೆ 3 ವಿಕೆಟ್​ ಕಳೆದುಕೊಂಡ ಪಂಜಾಬ್​, ಚೇತರಿಕೆ ಕಾಣುವಷ್ಟರಲ್ಲಿ ಉತ್ತಮವಾಗಿ ಆಡುತ್ತಿದ್ದ ರೀಲಿ ರೋಸೊ(22) ವಿಕೆಟ್ ಕೂಡ​ ಕಳೆದುಕೊಂಡಿತು. ತಂಡದ ಮೊತ್ತ 50 ಗಡಿ ದಾಟುವ ಮುನ್ನ 4 ವಿಕೆಟ್​ ಕಳೆದುಕೊಂಡು ಮತ್ತಷ್ಟು ತೀವ್ರ ಸಂಕಟಕ್ಕೆ ಒಳಗಾಯಿತು.

ಇದನ್ನೂ ಓದಿ IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

ಅರ್ಧಶತಕ ಬಾರಿಸಿದ ಕರನ್​

ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ನೆರವಾದದ್ದು ನಾಯಕ ಸ್ಯಾಮ್​ ಕರನ್​ ಮತ್ತು ಜಿತೇಶ್​ ಶರ್ಮ. ಉಭಯ ಆಟಗಾರರು ತಾಳ್ಮೆಯುತ ಬ್ಯಾಟಿಂಗ್​ ನಡೆಸಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದರು. 5ನೇ ವಿಕೆಟ್​ಗೆ 63 ರನ್​ ಒಟ್ಟುಗೂಡಿಸಿದರು. ಈ ಉಪಯುಕ್ತ ಜತೆಯಾಟದ ಸಹಾಯದಿಂದ ಪಂಜಾಬ್​ ಗೆಲುವಿನ ದಡ ಸೇರಿತು. ಜಿತೇಶ್​ ಶರ್ಮ 20 ಎಸೆತಗಳಿಂದ 22 ರನ್​ ಬಾರಿಸಿ ಪರಾಗ್​ಗೆ ವಿಕೆಟ್​ ಒಪ್ಪಿಸಿದರು. ಕರನ್ ಅಜೇಯರಾಗಿ ಉಳಿದು ಅರ್ಧಶತಕ ಬಾರಿಸಿದರು. ಇದು ಅವರ ಈ ಆವೃತ್ತಿಯ 2ನೇ ಅರ್ಧಶತಕವಾಗಿದೆ. ಒಟ್ಟು 41 ಎಸೆತ ಎದುರಿಸಿದ ಕರನ್​ 63* ರನ್​ ಬಾರಿಸಿದರು. ಈ ವೇಳೆ ಇವರ ಬ್ಯಾಟ್​ನಿಂದ 5 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ​

ರಾಜಸ್ಥಾನ್​ಗೆ ಆಸರೆಯಾದ ಪರಾಗ್-ಅಶ್ವಿನ್​

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ರಾಜಸ್ಥಾನ್​ ಪರ ಯಶಸ್ವಿ ಜೈಸ್ವಾಲ್​(4) ಜಾಸ್​ ಬಟ್ಲರ್​ ಅನುಪಸ್ಥಿತಿಯಲ್ಲಿ ಆಡಲಿಳಿದ ಕೊಹ್ಲರ್-ಕಾಡ್ಮೋರ್(18), ನಾಯಕ ಸಂಜು ಸ್ಯಾಮ್ಸನ್​(18), ಧೃವ್​ ಜುರೇಲ್​(0), ರೋಮನ್​ ಪೋವೆಲ್(4) ಬ್ಯಾಟಿಂಗ್​ ವೈಫಲ್ಯ ಕಂಡು ಪೆವಿಲಿಯನ್​ ಪರೇಡ್​ ನಡೆಸಿದರು. ರಿಯಾನ್​ ಪರಾಗ್​(48) ಮತ್ತು ಆರ್​.ಅಶ್ವಿನ್​(28) ಅವರ ಅಸಾಮಾನ್ಯ ಬ್ಯಾಟಿಂಗ್​ನಿಂದಾಗಿ ತಂಡ 100 ಗಡಿ ದಾಟಿ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿ ಯಶಸ್ಸು ಕಂಡಿತು. ಪಂಜಾಬ್​ ಪರ 2 ವಿಕೆಟ್​ ಪಡೆದ ಹರ್ಷಲ್​ ಪಟೇಲ್​ ಪರ್ಪಲ್​ ಕ್ಯಾಪ್​ ರೇಸ್​ನಲ್ಲಿ ಅಗ್ರಸ್ಥಾನ ಪಡೆದರು. ಉಳಿದಂತೆ ಕರನ್​, ಮತ್ತು ರಾಹುಲ್​ ಚಹರ್​ ತಲಾ 2 ವಿಕೆಟ್​ ಉರುಳಿಸಿದರು.

Continue Reading
Advertisement
hunsur road accident
ಕ್ರೈಂ6 mins ago

Road Accident: ಸರಣಿ ಅಪಘಾತ, ಬೈಕ್ ಸವಾರ ಸಾವು; ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

A Movie Re-ReleaseActress Chandni relives memories
ಸ್ಯಾಂಡಲ್ ವುಡ್14 mins ago

A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

Sunil Chhetri
ಕ್ರೀಡೆ30 mins ago

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Aishwarya Rai Injured heads to Cannes Film Festival with daughter
ಬಾಲಿವುಡ್38 mins ago

Cannes 2024: ಐಶ್ವರ್ಯಾ ರೈ ಕೈಗೆ ಪೆಟ್ಟು: ಮಗಳ ಜತೆ ಕಾನ್ ಫಿಲ್ಮ್ ಫೆಸ್ಟಿವಲ್‌ನತ್ತ ಹೊರಟ ನಟಿ!

Robert Fico
ವಿದೇಶ40 mins ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ ನಡೆಸಿದ್ದು ಓರ್ವ ಕವಿ; ಯಾಕೀ ದ್ವೇಷ?

self harming gym trainer
ಕ್ರೈಂ45 mins ago

Self Harming: ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್‌ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ

GT vs SRH
ಕ್ರೀಡೆ55 mins ago

GT vs SRH: ಇಂದು ಲ್ಯಾವೆಂಡರ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಗುಜರಾತ್​ ತಂಡ; ಇದರ ಉದ್ದೇಶವೇನು?

mlc election congress candidate gift boxes
ಬೆಂಗಳೂರು1 hour ago

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

Pakistan
ವಿದೇಶ1 hour ago

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Kangana Ranaut's Emergency gets postponed again
ಬಾಲಿವುಡ್2 hours ago

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌