Site icon Vistara News

IND VS AUS: ಆಸ್ಟ್ರೇಲಿಯಾ ವಿರುದ್ಧದ ಮುಂದಿನ 2 ಟೆಸ್ಟ್ ಪಂದ್ಯ​ ಮತ್ತು ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ

IND VS AUS

#image_title

ಮುಂಬಯಿ: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯ ಮುಕ್ತಾಯ ಕಂಡ ಬೆನ್ನಲ್ಲೇ ಬಿಸಿಸಿಐ ಮುಂದಿನ ಎರಡು ಟೆಸ್ಟ್​ ಮತ್ತು ಏಕದಿನ ಸರಣಿಗೆ ಟೀಮ್​ ಇಂಡಿಯಾವನ್ನು ಪ್ರಕಟಿಸಿದೆ.

ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮುಂದಿನ 2 ಪಂದ್ಯಗಳಿಗೆ ತಂಡದಲ್ಲಿ ಭಾರಿ ಬದಲಾವಣೆ ಸಂಭವಿಸಿಲ್ಲ. ಈ ಮೊದಲು ಟೆಸ್ಟ್​ ಸರಣಿಯಲ್ಲಿ ತಂಡದಲ್ಲಿ ಅವಕಾಶ ಪಡೆದಿದ್ದ ಜೈದೇವ್​​ ಉನಾದ್ಕತ್​ ಅವರನ್ನು ಮತ್ತೆ ತಂಡಕ್ಕೆ ಸೇರಿಸಲಾಗಿದೆ. ರಣಜಿ ಫೈನಲ್​ ಪಂದ್ಯದ ನಿಮಿತ್ತ ಅವರನ್ನು ದ್ವಿತೀಯ ಟೆಸ್ಟ್​ ಪಂದ್ಯದಿಂದ ಕೈ ಬಿಡಲಾಗಿತ್ತು. ಆದರೆ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ರೋಹಿತ್​ ಶರ್ಮಾ ಕುಟುಂಬ ಕಾರ್ಯಕ್ರಮದ ನಿಮಿತ್ತ ಗೈರಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಹಾರ್ದಿಕ್​ ಪಾಂಡ್ಯ ಮೊದಲ ಪಂದ್ಯದಲ್ಲಿ ತಂಡದ ನಾಯಕತ್ವ ವಹಿಸಲಿದ್ದಾರೆ.

ದ್ವಿತೀಯ ಏಕದಿನ ಪಂದ್ಯದ ವೇಳೆ ರೋಹಿತ್​ ತಂಡಕ್ಕೆ ಮತ್ತೆ ಮರಳಿ ನಾಯಕತ್ವ ವಹಿಸಲಿದ್ದಾರೆ. ಪ್ರಸಕ್ತ ಸಾಲಿನ ರಣಜಿ ವಿಜೇತ ಸೌರಾಷ್ಟ್ರ ತಂಡದ ನಾಯಕ ಜೈದೇವ್​ ಉನಾದ್ಕತ್​ ಅಚ್ಚರಿ ಎಂಬಂತೆ ಏಕ ದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬೆನ್ನು ನೋವಿನಿಂದ ಚೇತರಿಕೆ ಕಾಣುತ್ತಿರುವ ಜಸ್​ಪ್ರೀತ್​ ಬುಮ್ರಾ ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದರೂ ಅವರು ಏಕದಿನ ಸರಣಿಯಲ್ಲಿ ತಂಡಕ್ಕೆ ಮರಳುವ ನಿರೀಕ್ಷೆ ಇತ್ತು. ಆದರೆ ಇದು ಹುಸಿಗೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಗೆ ಪ್ರಕಟಗೊಂಡ ತಂಡದಲ್ಲಿ ಅವರು ಅವಕಾಶ ಪಡೆದಿಲ್ಲ. ಇನ್ನೊಂದೆಡೆ ರವೀಂದ್ರ ಜಡೇಜಾ ಕೂಡ ಏಕದಿನ ತಂಡಕ್ಕೆ ಮರಳಿದ್ದಾರೆ.

ಆಸೀಸ್​ ವಿರುದ್ಧದ ಮುಂದಿನ ಎರಡು ಟೆಸ್ಟ್​ ಪಂದ್ಯಕ್ಕೆ ಭಾರತ ತಂಡ

ಭಾರತ: ರೋಹಿತ್​ ಶರ್ಮಾ(ನಾಯಕ), ಚೇತೇಶ್ವರ ಪೂಜಾರ, ವಿರಾಟ್​ ಕೊಹ್ಲಿ, ಕೆ.ಎಲ್​. ರಾಹುಲ್, ಸೂರ್ಯಕುಮಾರ್​ ಯಾದವ್, ಶ್ರೇಯಸ್​ ಅಯ್ಯರ್​, ಅಕ್ಷರ್​ ಪಟೇಲ್​, ಕೆ.ಎಸ್​ ಭರತ್​, ರವೀಂದ್ರ ಜಡೇಜಾ, ಆರ್​. ಅಶ್ವಿನ್​, ಮೊಹಮ್ಮದ್​ ಸಿರಾಜ್​, ಮೊಹಮ್ಮದ್​ ಶಮಿ, ಕುಲ್​ದೀಪ್​ ಯಾದವ್​, ಉಮೇಶ್​ ಯಾದವ್​, ಜೈದೇವ್​ ಉನಾದ್ಕತ್​, ಇಶಾನ್​ ಕಿಶನ್​.

ಇದನ್ನೂ ಓದಿ IND VS AUS: 100ನೇ ಟೆಸ್ಟ್​ ಪಂದ್ಯವನ್ನಾಡಿದ ಪೂಜಾರಗೆ ವಿಶೇಷ ಉಡುಗೊರೆ ನೀಡಿದ ಆಸೀಸ್​ ತಂಡ

ಆಸೀಸ್​ ವಿರುದ್ಧದ ಏಕದಿನ ಸರಣಿಗೆ​ ಭಾರತ ತಂಡ

ರೋಹಿತ್​ ಶರ್ಮಾ(ನಾಯಕ), ಶುಭಮನ್​ ಗಿಲ್​, ವಿರಾಟ್​ ಕೊಹ್ಲಿ, ಕೆ.ಎಲ್​. ರಾಹುಲ್, ಸೂರ್ಯಕುಮಾರ್​ ಯಾದವ್, ಶ್ರೇಯಸ್​ ಅಯ್ಯರ್​, ಅಕ್ಷರ್​ ಪಟೇಲ್​, ರವೀಂದ್ರ ಜಡೇಜಾ, ಮೊಹಮ್ಮದ್​ ಸಿರಾಜ್​, ಮೊಹಮ್ಮದ್​ ಶಮಿ, ಕುಲ್​ದೀಪ್​ ಯಾದವ್​, ಉಮ್ರಾನ್​ ಮಲಿಕ್​​, ಜೈದೇವ್​ ಉನಾದ್ಕತ್​. ಇಶಾನ್​ ಕಿಶನ್​, ಶಾರ್ದೂಲ್ ಠಾಕೂರ್​, ಯಜುವೇಂದ್ರ ಚಹಲ್, ವಾಷಿಂಗ್ಟನ್​ ಸುಂದರ್​. (ಮೊದಲ ಪಂದ್ಯಕ್ಕೆ ರೋಹಿತ್​ ಅಲಭ್ಯ)

Exit mobile version