IND VS AUS: ಟೆಸ್ಟ್​: ಜಡೇಜಾ, ಅಶ್ವಿನ್​ ಸ್ಪಿನ್​ ಮೋಡಿಗೆ ಕುಸಿದ ಆಸ್ಟ್ರೇಲಿಯಾ Vistara News

ಕ್ರಿಕೆಟ್

IND VS AUS: ಟೆಸ್ಟ್​: ಜಡೇಜಾ, ಅಶ್ವಿನ್​ ಸ್ಪಿನ್​ ಮೋಡಿಗೆ ಕುಸಿದ ಆಸ್ಟ್ರೇಲಿಯಾ

ಭಾರತ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ಕೇವಲ 177 ರನ್​ಗಳಿಗೆ ಸರ್ವಪತನ ಕಂಡಿದೆ

VISTARANEWS.COM


on

IND VS AUS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾಗ್ಪುರ: ಗಾಯದಿಂದ ಚೇತರಿಸಿಕೊಂಡು ಬಹುಕಾಲದ ಬಳಿಕ ಆಡಲಿಳಿದ ಆಲ್​ರೌಂಡರ್​ ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಅಮೋಘ ಬೌಲಿಂಗ್​ ದಾಳಿ ನಡೆಸಿದ್ದಾರೆ. ಅವರ ಸ್ಪಿನ್​ ದಾಳಿಗೆ ನಲುಗಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ ಕೇವಲ 177 ರನ್​ಗಳಿಗೆ ಸರ್ವಪತನ ಕಂಡಿದೆ.

ನಾಗ್ಪುರದ ವಿದರ್ಭ ಕ್ರಿಕೆಟ್​ ಸ್ಟೇಡಿಯಂನಲ್ಲಿ​ ಗುರುವಾರ ಆರಂಭವಾದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಆಸ್ಟ್ರೇಲಿಯಾ ಆರಂಭಿಕ ಆಘಾತ ಕಂಡಿತು. ತಂಡದ ಮೊತ್ತ 2 ರನ್​ ಆಗುವಷ್ಟರಲ್ಲಿ ಪ್ರಮುಖ 2 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಆರಂಭಿಕ ಆಘಾತದ ವೇಳೆ ಮೂರನೇ ವಿಕೆಟ್‌ಗೆ ಜತೆಯಾದ ಮಾರ್ನಸ್‌ ಲಬುಶೇನ್(Marnus Labuschagne) ಹಾಗೂ ಸ್ಟೀವನ್‌ ಸ್ಮಿತ್‌(Steven Smith) 74 ರನ್‌ ಜತೆಯಾಟವಾಡುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಆಸರೆಯಾಗುವ ಮೂಲಕ ದೊಡ್ಡ ಮೊತ್ತ ಪೇರಿಸುವ ಸೂಚನೆ ನೀಡಿದರು. ಆದರೆ ಭೋಜನ ವಿರಾಮದ ಬಳಿಕ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಯಿತು.

ಭೋಜನ ವಿರಾಮಕ್ಕೂ ಮುನ್ನ 47 ರನ್​ ಗಳಿಸಿದ್ದ ಲಬುಶೇನ್​ ಕೇವಲ 2 ರನ್​ ಸೇರಿಸಿದ ವೇಳೆ ಔಟಾದರು. ಇಲ್ಲಿಂದ ಭಾರತದ ಬೌಲರ್​ಗಳ ಕೈ ಮೇಲಾಯಿತು. ಅಷ್ಟರ ವರೆಗೆ ಸ್ಪಿನ್​ ಒಂದೂ ವಿಕೆಟ್​ ಬಿದ್ದಿರಲಿಲ್ಲ. ಆದರೆ ಭೋಜನ ಬಳಿಕ ಅಶ್ವಿನ್​ ಮತ್ತು ಜಡೇಜಾ ಆಸೀಸ್​ ಬ್ಯಾಟರ್​ಗಳ ಮೇಲೆ ಸವಾರಿ ನಡೆಸಿ ವಿಕೆಟ್​ ಬೇಟೆಯಾಡಿದರು. ಅದರಲ್ಲೂ ಸ್ವೀವನ್​ ಸ್ಮಿತ್​ ಅವರನ್ನು ಜಡೇಜಾ ಬೌಲ್ಡ್​ ಮಾಡಿದ್ದು ಈ ಪಂದ್ಯದ ಹೈಲೆಟ್​ ಆಗಿದೆ. ಬ್ಯಾಟ್​ ಮಧ್ಯೆ ಕೂದಲೆಳೆ ಅಂತರದಲ್ಲಿ ಚೆಂಡು ಸಾಗಿ ವಿಕೆಟ್​ಗೆ ಬಡಿಯಿತು. ಇದನ್ನು ಕಂಡ ಸ್ಮಿತ್​ ಒಂದು ಕ್ಷಣ ಅಚ್ಚರಿಗೊಳಗಾದರು.

ಜಡೇಜಾ ಕಳೆದ ವರ್ಷ ಏಷ್ಯಾ ಕಪ್​ ವೇಳೆ ಕಾಲಿನ ಗಾಯಕ್ಕೆ ತುತ್ತಾಗಿ ಬಳಿಕ ಪ್ರಮುಖ ಟೂರ್ನಿಗಳಿಂದ ಹೊರಗುಳಿದಿದ್ದರು. ಸರಿ ಸುಮಾರು 7-8 ತಿಂಗಳ ಬಳಿಕ ಭಾರತ ಪರ ಆಡಿದ ಅವರು ಭರ್ಜರಿ ಕಮ್​​ಬ್ಯಾಕ್​ ಮಾಡಿದರು. 22 ಓವರ್​ ಎಸೆದು 8 ಮೇಡನ್​ ಸಹಿತ 47 ರನ್​ ವೆಚ್ಚದಲ್ಲಿ 5 ವಿಕೆಟ್​ ಕಿತ್ತರು. ಉಳಿದಂತೆ ಆರ್​.ಅಶ್ವಿನ್ 42 ರನ್​ಗೆ 3 ವಿಕೆಟ್​ ಕಿತ್ತರು.

ಇದನ್ನೂ ಓದಿ Border Gavaskar Trophy: ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯ ಇತಿಹಾಸ, ರೋಚಕ ಸಂಗತಿಗಳ ಮಾಹಿತಿ

​ಸಂಕ್ಷಿಪ್ತ ಸ್ಕೋರ್​: ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ 177ಕ್ಕೆ ಆಲೌಟ್​(ಲಬುಶೇನ್​ 49, ಸ್ಟೀವನ್​ ಸ್ಮಿತ್​ 37, ಅಲೆಕ್ಸ್​ ಕ್ಯಾರಿ 36, ಜಡೇಜಾ 47ಕ್ಕೆ 5, ಆರ್​. ಅಶ್ವಿನ್​ 42ಕ್ಕೆ 3).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

ಶನಿವಾರ ಮುಂಬೈಯಲ್ಲಿ ನಡೆದಿದ್ದ ಮಹಿಳಾ ಪ್ರೀಮಿಯರ್​ ಲೀಗ್​ನ ಮಿನಿ ಹರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಯ್​ ಶಾ ಅವರು ಪುರುಷರ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.​

VISTARANEWS.COM


on

ipl fans
Koo

ಮುಂಬಯಿ: ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024)ರ ಆಟಗಾರರ ಮಿನಿ ಹರಾಜು(IPL Auction 2024) ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಆದರೆ ಟೂರ್ನಿ ಯಾವಾಗ ಆರಂಭವಾಗಲಿದೆ ಎನ್ನುವುದು ಕ್ರಿಕೆಟ್​ ಅಭಿಮಾನಗಳ ಚಿಂತೆಯಾಗಿತ್ತು. ಇದಕ್ಕೆ ಈ ಉತ್ತರ ಸಿಕ್ಕಿದೆ. ಟೂರ್ನಿ ಆರಂಭದ ಸುಳಿವನ್ನು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(jay shah) ಬಿಟ್ಟುಕೊಟ್ಟಿದ್ದಾರೆ.

ಹೌದು, ಶನಿವಾರ ಮುಂಬೈಯಲ್ಲಿ ನಡೆದಿದ್ದ ಮಹಿಳಾ ಪ್ರೀಮಿಯರ್​ ಲೀಗ್​ನ ಮಿನಿ ಹರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಯ್​ ಶಾ ಅವರು ಪುರುಷರ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.​

ಪ್ರತಿ ವರ್ಷ ಐಪಿಎಲ್​ ಆರಂಭವಾಗುವುದು ಮಾರ್ಚ್​ ಅಂತಿಮ ವಾರದಲ್ಲಿ. ಮೇ ತನಕ ಪಂದ್ಯಾವಳಿಗಳು ಸಾಗುತ್ತದೆ. ಆದರೆ ಈ ಬಾರಿ 2024 ಲೋಕಸಭಾ ಚುನಾವಣೆ ಇದೇ ಸಮಯದಲ್ಲಿ ಇರುವುದರಿಂದ ಟೂರ್ನಿಯನ್ನು ಭಾರತದಲ್ಲಿ ನಡೆಸುವುದು ಕಷ್ಟ. ಹೀಗಾಗಿ ಐಪಿಎಲ್​ ಅಭಿಮಾನಿಗಳಿಗೆ ಟೂರ್ನಿ ಆರಂಭದ ಬಗ್ಗೆ ಹಲವು ಗೊಂದಲ ಕಾಡಿತ್ತು. ಇದೀಗ ಜಯ್​ ಶಾ ಅವರು ಮಾರ್ಚ್ ಕೊನೆಯ ವಾರದಲ್ಲಿ ಐಪಿಎಲ್ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆದರೆ ದಿನಾಂಕ ಮತ್ತು ಈ ಟೂರ್ನಿಯನ್ನು ಎಲ್ಲಿ ನಡೆಸಲಾಗುವುದು ಎನ್ನುವ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ಈ ಹಿಂದೆಯೂ ವಿದೇಶದಲ್ಲಿ ನಡೆದಿತ್ತು ಟೂರ್ನಿ

2009ರಲ್ಲಿ ಮಹಾಚುನಾವಣೆಯ ಕಾರಣದಿಂದ ಇಡೀ ಕೂಟವನ್ನು ದಕ್ಷಿಣ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಹಾಗೆಯೇ 2014ರಲ್ಲಿಯೂ ಒಂದು ಹಂತದ ಪಂದ್ಯಗಳು ಯುಎಇಯಲ್ಲಿ ನಡೆದಿದ್ದವು. ಆದರೆ ಈ ಬಾರಿ ಬಿಸಿಸಿಐ ಸಂಪೂರ್ಣವಾಗಿ ಟೂರ್ನಿಯನ್ನು ವಿದೇಶದಲ್ಲಿ ನಡೆಸುವುದು ಕಷ್ಟ ಸಾಧ್ಯ. ಚುನಾವಣೆಯ ದಿನಾಂಕ ಘೋಷಣೆಯಾದ ಬಳಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಒಂದು ಹಂತದ ಪಂದ್ಯಗಳನ್ನು ವಿದೇಶದಲ್ಲಿ ನಡೆಸುವ ಸಾಧ್ಯತೆ ಇದೆ. ಆದರೆ ಈ ತಾಣ ಯಾವುದೆಂಬುದು ಕುತೂಹಲ. ಸದ್ಯದ ಪ್ರಕಾರ ಬಿಸಿಸಿಐ ಯುಎಇಯಲ್ಲಿ ನಡೆಸುವ ಸಾಧ್ಯತೆ ಅಧಿಕ. ಏಕೆಂದರೆ ಪ್ರಯಾಣದ ದೃಷ್ಟಿಯಲ್ಲಿ ಹತ್ತಿರವಿರುವುದರಿಂದ ಯುಎಇಯನ್ನು ಮೊದಲ ಆಧ್ಯತೆಯಾಗಿ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನೂ ಓದಿ IPL 2024 : ಹರಾಜಿನಲ್ಲಿ ಬೇಡಿಕೆ ಪಡೆಯಲಿರುವ ಆರ್​ಸಿಬಿಯ ಮೂವರು ಮಾಜಿ ಆಟಗಾರರು ಇವರು

1166 ಆಟಗಾರರು ಹೆಸರು ನೋಂದಣಿ

ಈ ಬಾರಿಯ ಐಪಿಎಲ್​ ಮಿನಿ ಹರಾಜಿಗೆ 1,166 ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ. ಈ ಪಟ್ಟಿಯಲ್ಲಿ 212 ಅಂತಾರಾಷ್ಟ್ರೀಯ ಪಂದ್ಯವಾಡಿದವರು , 909 ಅಂತಾರಾಷ್ಟ್ರೀಯ ಕ್ರಿಕೆಟ್ ಆಡದವರು ಮತ್ತು 45 ಅಸೋಸಿಯೇಟ್ ಆಟಗಾರರು ಇದ್ದಾರೆ. ಈ ಪೈಕಿ ವಿದೇಶಿ ಆಟಗಾರರ ಸಂಖ್ಯೆ 336 ಎಂದು ತಿಳಿದುಬಂದಿದೆ.

ಫ್ರಾಂಚೈಸಿಗಳಿಗೆ ಸೂಚನೆ

ಹರಾಜು ರಿಜಿಸ್ಟರ್​ನಲ್ಲಿ ಪಟ್ಟಿ ಮಾಡದ ಹೆಚ್ಚುವರಿ ಆಟಗಾರರ ವಿನಂತಿಗಳೊಂದಿಗೆ ಪ್ರತಿಕ್ರಿಯಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಫ್ರಾಂಚೈಸಿಗಳನ್ನು ವಿನಂತಿಸಿದೆ. ವಿನಂತಿಸಿದ ಆಟಗಾರರು ಅರ್ಹರಾಗಿದ್ದರೆ ಮತ್ತು ಆಸಕ್ತಿ ಹೊಂದಿದ್ದರೆ ಸ್ವಯಂಚಾಲಿತವಾಗಿ ಹರಾಜಿನಲ್ಲಿ ಸೇರಿಕೊಳ್ಳಲಿದ್ದಾರೆ. ಹರಾಜಿನಲ್ಲಿ ಸೇರಿಸಲು ಬಯಸುವ ಆಟಗಾರರ ಪಟ್ಟಿಯೊಂದಿಗೆ ಪ್ರತಿಕ್ರಿಯಿಸಲು ಫ್ರಾಂಚೈಸಿಗಳಿಗೆ ಸೂಚನೆ ನೀಡಲಾಗಿದೆ. ಕೇವಲ 77 ಸ್ಲಾಟ್​ಗಳನ್ನು ಮಾತ್ರ ಭರ್ತಿ ಮಾಡಬೇಕಾಗಿದೆ, ಅದರಲ್ಲಿ ಗರಿಷ್ಠ 30 ವಿದೇಶಿ ಆಟಗಾರರು ಇರಬಹುದು. ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 25 ಆಟಗಾರರಿಗೆ ಮಾತ್ರ ಅವಕಾಶ ಇರಲಿದೆ.

Continue Reading

ಕ್ರಿಕೆಟ್

Rohit Sharma: ಜಯ್​ ಶಾ ಕೈಯಲ್ಲಿದೆ ರೋಹಿತ್​ ಟಿ20 ವಿಶ್ವಕಪ್ ಭವಿಷ್ಯ!

ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮ ಅವರ ಸ್ಥಾನದ ಬಗ್ಗೆ ಈಗಲೇ ಭರವಸೆ ನೀಡಲಾಗುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಖಚಿತಪಡಿಸಿದ್ದಾರೆ.

VISTARANEWS.COM


on

rohit sharma jay shah
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಸೋಲು ಕಂಡ ಬಳಿಕ ಎಲ್ಲಡೆ ಚರ್ಚೆಯಾಗುತ್ತಿರುವ ವಿಚಾರವೆಂದರೆ, ವಿರಾಟ್​ ಕೊಹ್ಲಿ(virat kohli) ಮತ್ತು ರೋಹಿತ್​ ಶರ್ಮ(Rohit Sharma) ಅವರು 2024ರ ಟಿ20 ವಿಶ್ವಕಪ್​ನಲ್ಲಿ(T20 World Cup 2024) ಆಡಲಿದ್ದಾರಾ ಎನ್ನುವುದು. ಇದೀಗ ರೋಹಿತ್​ ಶರ್ಮ ಅವರ ಟಿ20 ಭವಿಷ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಹೇಳಿಕೆಯೊಂದನ್ನು ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಬಿಸಿಸಿಐ(BCCI) ಮುಂದಿನ ವಾರ ಕೊಹ್ಲಿ ಮತ್ತು ರೋಹಿತ್(Virat Kohli-Rohit Sharma)​ ಜತೆ ತಮ್ಮ ಟಿ20 ಕ್ರಿಕೆಟ್​ ಭವಿಷ್ಯದ ಬಗ್ಗೆ ಚರ್ಚಿಸಿ ಸ್ಪಷ್ಟ ನಿರ್ಧಾರವೊಂದನ್ನು ಕೈಗೊಳ್ಳಲಿದೆ ಎಂದು ವರದಿಯಾಗಿತ್ತು. ಆದರೆ ಇದೀಗ ಹೇಳಿಕೆ ನೀಡಿರುವ ಜಯ್​ ಶಾ, ‘ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮ ಅವರ ಸ್ಥಾನದ ಬಗ್ಗೆ ಈಗಲೇ ಭರವಸೆ ನೀಡಲಾಗುವುದಿಲ್ಲ’ ಎಂದು ಖಚಿತಪಡಿಸಿದ್ದಾರೆ. ಪಿಟಿಐ ಜತೆಗಿನ ಸಂದರ್ಶನದಲ್ಲಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ.

ಟಿ20 ವಿಶ್ವಕಪ್​ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎ ಆತಿಥ್ಯದಲ್ಲಿ ನಡೆಯಲಿದೆ. ಸದ್ಯದ ಪ್ರಕಾರ ಈ ಟೂರ್ನಿ ಜೂನ್​ನಲ್ಲಿ ನಡೆಯುವ ಸಾಧ್ಯತೆ ಇದೆ. “ಟಿ20 ವಿಶ್ವಕಪ್​ಗೂ ಮುನ್ನ ನಮ್ಮ ತಂಡ ಐಪಿಎಲ್ ಮತ್ತು ಅಫಘಾನಿಸ್ತಾನ ವಿರುದ್ಧ ಸರಣಿ ಟಿ20 ಸರಣಿಯನ್ನಾಡಲಿದೆ. ಹೀಗಾಗಿ ಇಲ್ಲಿ ಆಟಗಾರರು ನೀಡುವ ಪ್ರದರ್ಶನದ ಮೇಲೆ ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ” ಎಂದು ಹೇಳುವ ಮೂಲಕ ಜಯ್​ ಶಾ ಅವರು ಹಿರಿಯ ಆಟಗಾರರಿಗೆ ವಿಶ್ವಕಪ್​ ಆಯ್ಕೆಯ ಸ್ಪಷ್ಟ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ ದ್ರಾವಿಡ್​ ಕೋಚಿಂಗ್​ ನಿರ್ಧಾರದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಜಯ್ ಶಾ

ವಿಶ್ವಕಪ್​ ಬಳಿಕ ಟಿ20 ಆಡಿಲ್ಲ

2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೆಮಿಫೈನಲ್​ನಲ್ಲಿ ನಿರ್ಗಮಿಸಿತ್ತು. ರೋಹಿತ್​ ಶರ್ಮ ಸಾರಥ್ಯದಲ್ಲಿ ಭಾರತ ತಂಡ ಕಣಕ್ಕಿಳಿದಿತ್ತು. ಆದರೆ ಈ ಸೋಲಿನ ಬಳಿಕ ರೋಹಿತ್ ಇದುವರೆಗೂ ಒಂದೇ ಒಂದು ಟಿ20 ಪಂದ್ಯವನ್ನು ಕೂಡ ಆಡಿಲ್ಲ. ಅಂದಿನಿಂದಲೂ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಜತೆಗೆ ಯುವ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಮುಂದಿನ ಟಿ20 ವಿಶ್ವಕಪ್​ ಟೂರ್ನಿಯಲ್ಲೂ ರೋಹಿತ್ ಸೇರಿ ಕೆಲ ಹಿರಿಯ ಆಟಗಾರರು ಆಡುವುದು ಬಹುತೇಕ ಅನುಮಾನ ಎನ್ನಲಾಗಿದೆ.

ರೋಹಿತ್​ಗೂ ಮನಸ್ಸಿಲ್ಲ

ಇನ್ನೊಂದು ಮೂಲಗಳ ಪ್ರಕಾರ ರೋಹಿತ್​ ಶರ್ಮ ಮತ್ತು ವಿರಾಟ್​ ಕೊಹ್ಲಿ ಟಿ20 ಕ್ರಿಕೆಟ್​ನಿಂದ ಈಗಾಗಲೇ ದೂರ ಉಳಿಯಲು ನಿರ್ಧರಿಸಿದ್ದು ಕೇವಲ ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ಮಾತ್ರ ಗಮನ ನೀಡಲು ನಿರ್ಧರಿಸಿರುವುದಾಗಿ ವರದಿಯೊಂದು ತಿಳಿಸಿದೆ. ಏಕದಿನ ವಿಶ್ವಕಪ್​ ಸೋಲಿನ ಬಳಿಕವೇ ಉಭಯ ಆಟಗಾರರು ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಉಭಯ ಆಟಗಾರರು ಈ ವಿಚಾರವನ್ನು ಅಧಿಕೃತವಾಗಿ ಎಲ್ಲಿಯೂ ಇದುವರೆಗೆ ಹೇಳಿಲ್ಲ. ಕೆಲ ದಿನಗಳಲ್ಲಿ ಈ ನಿರ್ಧಾರ ಪ್ರಕಟಿಸಿದರೂ ಅಚ್ಚರಿಯಿಲ್ಲ.

Continue Reading

ಕ್ರಿಕೆಟ್

WI vs ENG: ಇಂಗ್ಲೆಂಡ್​ ವಿರುದ್ಧ 25 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ವೆಸ್ಟ್​ ಇಂಡೀಸ್​

ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ತಂಡ(WI vs ENG) ಪ್ರವಾಸಿ ಇಂಗ್ಲೆಂಡ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿ ಸರಣಿ ಗೆದ್ದ ಸಾಧನೆ ಮಾಡಿದೆ.

VISTARANEWS.COM


on

England vs West Indies, 3rd ODI
Koo

ಬಾರ್ಬಡೊಸ್: ತವರಿನಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ತಂಡ(WI vs ENG) ಪ್ರವಾಸಿ ಇಂಗ್ಲೆಂಡ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿ ಸರಣಿ ಗೆದ್ದ ಸಾಧನೆ ಮಾಡಿದೆ. ಈ ಮೂಲಕ 25 ವರ್ಷಗಳ ಸುದೀರ್ಘ ಅಂತರದ ಬಳಿಕ ವಿಂಡೀಸ್​ ತನ್ನ ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಸರಣಿ ಗೆದ್ದ ದಾಖಲೆ ಬರೆದಿದೆ.

ಸರಣಿಯಲ್ಲಿ ಮೊದಲ ಪಂದ್ಯ ಗೆದ್ದಿದ್ದ ವಿಂಡೀಸ್​ ದ್ವಿತೀಯ ಪಂದ್ಯದಲ್ಲಿ ಸೋಲು ಕಂಡಿತ್ತು. ಹೀಗಾಗಿ ಸರಣಿ 1-1 ಸಮಬಲಗೊಂಡಿತ್ತು. ಅಂತಿಮ ಮತ್ತು ಸರಣಿ ನಿರ್ಣಾಯಕ ಪಂದ್ಯದಲ್ಲಿ ವಿಂಡೀಸ್​ ಮತ್ತೆ ಗೆಲುವು ಸಾಧಿಸಿ ಸರಣಿಯನ್ನು ಗೆದ್ದು ಬೀಗಿದೆ.

ಶನಿವಾರ ರಾತ್ರಿ ನಡೆದ ಇತ್ತಂಡಗಳ ಈ ಪಂದ್ಯ ಮಳೆಯ ಕಾರಣದಿಂದ 40 ಓವರ್​ಗೆಗೆ ಇಳಿಸಲ್ಪಟ್ಟಿತು. ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಇಂಗ್ಲೆಂಡ್ 9 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು. ಜವಾಬಿತ್ತ ವೆಸ್ಟ್​ ವಿಂಡೀಸ್ 31.4 ಓವರ್​ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 191 ರನ್​ ಬಾರಿಸಿ ಜಯ ಸಾಧಿಸಿತು. ಕಳೆದ ಏಕದಿನ ವಿಶ್ವಕಪ್​ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಇಂಗ್ಲೆಂಡ್ ತಂಡ ವಿಂಡೀಸ್​ ವಿರುದ್ಧವೂ ಇದೇ ಪ್ರದರ್ಶನ ತೋರಿತು.

ಇಂಗ್ಲೆಂಡ್ ತಂಡದ ಪರ ಡಕ್ಕೆಟ್ 71 ರನ್ ಗಳಿಸಿದರೆ, ಲಿವಿಂಗ್​ಸ್ಟೋನ್ 45 ರನ್ ಮಾಡಿದರು. ನಾಯಕ ಜಾಸ್​ ಬಟ್ಲರ್ ಅವರ ವೈಫಲ್ಯತೆ ಇಲ್ಲಿಯೂ ಮುಂದುವರಿಯಿತು. ಅವರು ಗೋಲ್ಡನ್ ಡಕ್​ಗೆ ಬಲಿಯಾದರು. ವಿಂಡೀಸ್ ಪರ ಮ್ಯಾಥ್ಯೂ ಫೊರ್ಡೆ ಮತ್ತು ಅಲ್ಜಾರಿ ಜೋಸೆಫ್ ತಲಾ ಮೂರು ವಿಕೆಟ್ ಕಿತ್ತರೆ, ಶೆಫರ್ಡ್ ಎರಡು ವಿಕೆಟ್ ಪಡೆದರು.

ಚೇಸಿಂಗ್​ ವೇಳೆ ಮಳೆಯ ಕಾರಣದಿಂದ ವಿಂಡೀಸ್​ಗೆ 34 ಓವರ್ ಗಳಲ್ಲಿ 188 ರನ್ ಗುರಿ ನೀಡಲಾಯಿತು. ವಿಂಡೀಸ್ ಪರ ಅಥನಾಜೆ 45 ರನ್, ಕೀಸಿ ಕಾರ್ಟಿ 50 ರನ್ ಗಳಿಸಿದರು. ರೊಮಾರಿಯೊ ಶೆಫರ್ಡ್ ಅವರು ಅಜೇಯ 41 ರನ್ ಗಳಿಸಿದರು.

2 ವರ್ಷಗಳ ಬಳಿಕ ತಂಡ ಸೇರಿದ ರಸೆಲ್​

ಇಂಗ್ಲೆಂಡ್​ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಗೆದ್ದು ಬೀಗಿದ ವೆಸ್ಟ್​ ಇಂಡೀಸ್​ ಇನ್ನು ಟಿ20 ಸರಣಿಯನ್ನಾಡಲು ಸಜ್ಜಾಗಿದೆ. ಅಚ್ಚರಿ ಎಂದರೆ ವಿಸ್ಫೋಟಕ ಬ್ಯಾಟರ್​ ಆಂಡ್ರೆ ರಸೆಲ್ ಅವರು 2 ವರ್ಷಗಳ ಬಳಿಕ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಆಂಡ್ರೆ ರಸೆಲ್ ಅವರು 2021 ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್‌ ಪರ ಕೊನೆ ಪಂದ್ಯ ಆಡಿದ್ದರು. ಇದಾದ ಬಳಿಕ ಅವರು ತಂಡದಿಂದ ಹೊರಗುಳಿದ್ದರು. ಇದೀಗ ಮತ್ತೆ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇವರ ಜತೆ ಮ್ಯಾಥ್ಯೂ ಫೋರ್ಡ್ ಕೂಡ ಅವಕಾಶ ಪಡೆದಿದ್ದಾರೆ.

Continue Reading

ಕ್ರಿಕೆಟ್

IND vs SA: ಇಂದು ನಡೆಯುವ ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯದ ಸಮಯ ಬದಲಾವಣೆ

ಸರಣಿಯ ಮೂಲ ವೇಳಾಪಟ್ಟಿಯ ಪ್ರಕಾರ ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 9.30 ನಿಗದಿಯಾಗಿತ್ತು. ಇದೀಗ ಪರಿಷ್ಕೃತ ಸಮಯದ ಪ್ರಕಾರ ಈ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

VISTARANEWS.COM


on

South Africa vs India, 1st T20
Koo

ಡರ್ಬಾನ್: ಭಾರತ ಮತ್ತು ದಕ್ಷಿಣ ಆಫ್ರಿಕಾ(IND vs SA) ನಡುವಣ ಮೊದಲ ಟಿ20 ಪಂದ್ಯ ಇಂದು ಡರ್ಬಾನ್​ನಲ್ಲಿ ನಡೆಯಲಿದೆ. ಸರಣಿಯ ಮೂಲ ವೇಳಾಪಟ್ಟಿಯ ಪ್ರಕಾರ ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 9.30 ನಿಗದಿಯಾಗಿತ್ತು. ಇದೀಗ ಪರಿಷ್ಕೃತ ಸಮಯದ ಪ್ರಕಾರ ಈ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ದಕ್ಷಿಣ ಆಫ್ರಿಕಾದಲ್ಲಿ ಈ ಪಂದ್ಯಗಳು ನಡೆಯುವ ಕಾರಣ ಅಲ್ಲಿನ ಕಾಲಮಾನಕ್ಕೂ ಭಾರತದ ಕಾಲಮಾನಕ್ಕೂ ವ್ಯತ್ಯಾಸ ಇರುವ ಕಾರಣ ಭಾರತದಲ್ಲಿ ಪಂದ್ಯ 9.30ಕ್ಕೆ ಆರಂಭಗೊಳ್ಳುತ್ತದೆ. ಪಂದ್ಯ ಮುಗಿಯುವಾಗ ಮಧ್ಯರಾತ್ರಿ ಆಗಿರುವುದರಿಂದ ವೀಕ್ಷಕರ ಸಂಖ್ಯೆ ಕಡಿಮೆಯಾಗುತ್ತದೆ. ಇದೇ ಕಾರಣಕ್ಕೆ ಬಿಸಿಸಿಐ ಭಾರತೀಯ ಕ್ರಿಕೆಟ್​ ಅಭಿಮಾನಿಗಳ ಸಲುವಾಗಿ ಈ ಪಂದ್ಯವನ್ನು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭಿಸುವಂತೆ ಮಾಡಿದೆ. ದಕ್ಷಿಣ ಆಫ್ರಿಕಾದಲ್ಲಿ ಇದು ಹಗಲು-ರಾತ್ರಿ ಪಂದ್ಯವಾಗಲಿದೆ. ಹೆಚ್ಚಾಗಿ ಟಿ20 ಪಂದ್ಯಗಳು ರಾತ್ರಿಯ ವೇಳೆಯೇ ನಡೆಯುತ್ತದೆ. ದ್ವಿತೀಯ ಪಂದ್ಯ ಮೂರನೇ ಪಂದ್ಯ ರಾತ್ರಿ 8.30ಕ್ಕೆ ಆರಂಭಗೊಳ್ಳಲಿದೆ.

ಕಿಂಗ್ಸ್‌ಮೀಡ್ ಪಿಚ್ ರೆಕಾರ್ಡ್​ ಹೇಗಿದೆ?

ಡರ್ಬಾನ್​ನ ಕಿಂಗ್ಸ್‌ಮೀಡ್ ಪಿಚ್ ಮೈದಾನದಲ್ಲಿ ಆಡಿದ 18 ಪಂದ್ಯಗಳಲ್ಲಿ, ವೇಗದ ಬೌಲರ್‌ಗಳು 23.84 ಸರಾಸರಿಯಲ್ಲಿ 162 ವಿಕೆಟ್‌ಗಳನ್ನು ಪಡೆದರೆ, ಸ್ಪಿನ್ನರ್‌ಗಳು 18 ಪಂದ್ಯಗಳಲ್ಲಿ 26.80 ಸರಾಸರಿಯಲ್ಲಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ ಒಂಬತ್ತು ಗೆಲುವು ಸಾಧಿಸಿದರೆ, ಎರಡನೇ ಬ್ಯಾಟಿಂಗ್ ನಡೆಸಿದ ತಂಡ ಎಂಟು ಗೆಲುವುಗಳನ್ನು ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಡರ್ಬನ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 143 ಆಗಿದೆ.

ಟಿ20 ಮುಖಾಮುಖಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 24 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಭಾರತವು 13 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ದಕ್ಷಿಣ ಆಫ್ರಿಕಾದಲ್ಲಿ, ‘ಮೆನ್ ಇನ್ ಬ್ಲೂ’ ಏಳು ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದಿದ್ದರೆ, ಆತಿಥೇಯರು ಎರಡರಲ್ಲಿ ಗೆದ್ದಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದೆ.

ಇದನ್ನೂ ಓದಿ IND vs SA: ಬೌನ್ಸಿ ಪಿಚ್​ನಲ್ಲಿ ಹರಿಣಗಳ ಸವಾಲು ಮೆಟ್ಟಿ ನಿಂತಿತೇ ಯಂಗ್​ ಇಂಡಿಯಾ?

ಚೊಚ್ಚಲ ಟಿ20 ಪಂದ್ಯ ಆಡಿದ್ದೇ ಭಾರತ-ದಕ್ಷಿಣ ಆಫ್ರಿಕಾ

ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಮೊದಲ ಬಾರಿ ಆಡಿದ ತಂಡವೆಂದರೆ ಅದು ಭಾರತ ಮತ್ತು ದಕ್ಷಿಣ ಆಫ್ರಿಕಾ. 2007ರಲ್ಲಿ ನಡೆದ ಚೊಚ್ಚಲ ಅಂತಾರಾಷ್ಟೀಯ ಟಿ20 ಪಂದ್ಯದಲ್ಲಿ ವೀರೇಂದ್ರ ಸೆಹವಾಗ್​ ಸಾರಥ್ಯದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 82 ರನ್​ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ್ದ ಭಾರತ 6 ವಿಕೆಟ್​ಗೆ 169 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 87 ರನ್​ಗೆ ಸರ್ವಪತನ ಕಂಡಿತ್ತು.

Continue Reading
Advertisement
Winter Food Tips
ಆಹಾರ/ಅಡುಗೆ15 mins ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

ipl fans
ಕ್ರಿಕೆಟ್44 mins ago

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

Moral policing
ಕರ್ನಾಟಕ59 mins ago

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

Akash anand is BSP Leader mayawati's political heir
ದೇಶ1 hour ago

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Cloudy weather in Bengaluru for the entire day Rain Forecast
ಉಡುಪಿ1 hour ago

Karnataka weather: ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ

money guide
ಮನಿ-ಗೈಡ್1 hour ago

Money Guide: ನಿವೃತ್ತಿಯ ನಂತರವೂ ಆರ್ಥಿಕವಾಗಿ ಸದೃಢರಾಗಬೇಕೆ?; ಈ ಯೋಜನೆಗಳಲ್ಲಿ ಹೂಡಿಕೆ ಮಾಡಿ

rohit sharma jay shah
ಕ್ರಿಕೆಟ್1 hour ago

Rohit Sharma: ಜಯ್​ ಶಾ ಕೈಯಲ್ಲಿದೆ ರೋಹಿತ್​ ಟಿ20 ವಿಶ್ವಕಪ್ ಭವಿಷ್ಯ!

Model Fashion Life
ಫ್ಯಾಷನ್1 hour ago

Model Fashion Life: ರೆಟ್ರೊ ಫ್ಯಾಷನ್ ಪ್ರಿಯೆ ಮಾಡೆಲ್ ಲುಸಿ ಸರೆರಿಯಾ ಚಳಿಗಾಲದ ಟಿಪ್ಸ್‌ ಹೀಗಿದೆ

Retired clerk jagadish sexually abuses girl
ಕರ್ನಾಟಕ2 hours ago

Physical Abuse : 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ನಿವೃತ್ತ ಕ್ಲರ್ಕ್!

Masha And The Bear in banglore
ಸಿನಿಮಾ2 hours ago

Masha And The Bear: ಬೆಂಗಳೂರಿಗೆ ಬರ್ತಿದ್ದಾರೆ ʻಮಾಶಾ ಆ್ಯಂಡ್‌ ದಿ ಬೇರ್ʼ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ3 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ5 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ13 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌