IND vs ENG: ಉಳಿದ ಮೂರು ಟೆಸ್ಟ್ ಪಂದ್ಯಗಳಿಗೂ ಕೊಹ್ಲಿ, ಜಡೇಜಾ, ಶಮಿ ಅಲಭ್ಯ! - Vistara News

ಕ್ರೀಡೆ

IND vs ENG: ಉಳಿದ ಮೂರು ಟೆಸ್ಟ್ ಪಂದ್ಯಗಳಿಗೂ ಕೊಹ್ಲಿ, ಜಡೇಜಾ, ಶಮಿ ಅಲಭ್ಯ!

ಮೊಹಮ್ಮದ್​ ಶಮಿ(Mohammed Shami), ರವೀಂದ್ರ ಜಡೇಜಾ(Ravindra Jadeja) ಹಾಗೂ ವೈಯಕ್ತಿಕ ಕಾರಣ ನೀಡಿ ರಜೆಯಲ್ಲಿರುವ ವಿರಾಟ್​ ಕೊಹ್ಲಿ ಅವರು ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

VISTARANEWS.COM


on

virat and shami
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ(IND vs ENG) ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾದ ವಿರಾಟ್​ ಕೊಹ್ಲಿ(Virat Kohli) ಅವರು ಮುಂದಿನ ಟೆಸ್ಟ್​ ಪಂದ್ಯಗಳಿಗೆ ತಂಡ ಸೇರಲಿದ್ದಾರಾ ಎನ್ನುವ ಬಗ್ಗೆ ಬಿಸಿಸಿಐ(BCCI) ಇದುವರೆಗೆ ಯಾವುದೇ ಮಾಹಿತಿ ನೀಡಿಲ್ಲ. ಮೂಲಗಳ ಪ್ರಕಾರ ಅವರು ಈ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ ಎನ್ನಲಾಗಿದೆ.

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯ ಕೂಡ ಮುಕ್ತಾಯಕ ಹಂತಕ್ಕೆ ಬಂದು ನಿಂತಿದೆ. ಇನ್ನು ಕೇವಲ 2 ದಿನಗಳ ಆಟ ಮಾತ್ರ ಬಾಕಿ ಉಳಿದಿದೆ. ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ಆರಂಭಗೊಳ್ಳಲಿದೆ. ಹೀಗಿದ್ದರೂ ಬಿಸಿಸಿಐ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿಲ್ಲ. ಅಲ್ಲದೆ ರಾಹುಲ್​, ಜಡೇಜಾ ಗಾಯಗೊಂಡು ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದಾರೆ ಇವರ ಗಾಯದ ಬಗ್ಗೆಯೂ ಯಾವುದೇ ಅಪ್​ಡೆಟ್ಸ್​ ಇಲ್ಲವಾಗಿದೆ.

​ಮೂಲಗಳ ಪ್ರಕಾರ ಗಾಯದ ಸಮಸ್ಯೆ ಎದುರಿಸುತ್ತಿರುವ ಮೊಹಮ್ಮದ್​ ಶಮಿ(Mohammed Shami), ರವೀಂದ್ರ ಜಡೇಜಾ(Ravindra Jadeja) ಹಾಗೂ ವೈಯಕ್ತಿಕ ಕಾರಣ ನೀಡಿ ರಜೆಯಲ್ಲಿರುವ ವಿರಾಟ್​ ಕೊಹ್ಲಿ ಅವರು ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ IND vs ENG: ಸಹ ಆಟಗಾರನಿಗೆ ಅವಾಚ್ಯ ಪದಗಳಿಂದ ಬೈದ ರೋಹಿತ್​ ಶರ್ಮ

ಸ್ನಾಯು ಸೆಳೆತಕ್ಕೆ ಒಳಗಾಗಿ ದ್ವಿತೀಯ ಟೆಸ್ಟ್​ಗೆ ಅಲಭ್ಯರಾಗಿದ್ದ ಕನ್ನಡಿಗ ಕೆ.ಎಲ್​ ರಾಹುಲ್​ ಅವರು ಮೂರನೇ ಪಂದ್ಯಕ್ಕೆ ಮರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಒಂದೊಮ್ಮೆ ಕೊಹ್ಲಿ, ಜಡೇಜಾ ಮತ್ತು ಶಮಿ ಸರಣಿಯಿಂದ ಹೊರಗುಳಿದರೆ ಈಗ ತಂಡದಲ್ಲಿರುವ ಆಟಗಾರರೇ ಮುಂದಿನ ಪಂದ್ಯಕ್ಕೂ ಅವಕಾಶ ಪಡೆಯಬಹುದು.

2ನೇ ಮಗುವಿನ ನಿರೀಕ್ಷೆಯಲ್ಲಿ ಕೊಹ್ಲಿ-ಅನುಷ್ಕಾ


ವಿರಾಟ್ ಕೊಹ್ಲಿ ಅವರು ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಿಂದ ಹಿಂದೆ ಸರಿಯಲು ಕಾರಣ ಏನೆಂಬುದನ್ನು ಅವರ ಗೆಳೆಯ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿ ವಿಲಿಯರ್ಸ್​ ಅವರು ಶನಿವಾರ ಆನ್​ ಲೈನ್​ ಸಂದರ್ಶವೊಂದರಲ್ಲಿ ಬಹಿರಂಗಪಡಿಸಿದ್ದರು. ಕೊಹ್ಲಿ ಮತ್ತು ಅನುಷ್ಕಾ 2ನೇ ಮಗುವಿನ ನಿರೀಕ್ಷೆಯಲ್ಲಿರುವುದು ಖಚಿತ ಎಂದು ಹೇಳಿದ್ದರು.

ಆನ್​ಲೈನ್​ ಸಂದರ್ಶನದಲ್ಲಿ ಮಾತನಾಡಿದ ಡಿ ವಿಲಿಯರ್ಸ್​, ‘ನನಗೆ ತಿಳಿದಿರುವಂತೆ ವಿರಾಟ್ ಕೊಹ್ಲಿ ಕುಟುಂಬದ ಜತೆ ಸಮಯ ಕಳೆಯಲು ಬಯಸಿದ್ದಾರೆ. ವಿರುಷ್ಕಾ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದಕ್ಕಿಂತ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಕೊಹ್ಲಿಯ ನಿರ್ಧಾರವನ್ನು ಗೌರವಿಸಲೇ ಬೇಕು” ಎಂದು ಡಿ ವಿಲಿಯರ್ಸ್ ಹೇಳಿದ್ದರು.

“ಕುಟುಂಬಕ್ಕೆ ಸಮಯ ನೀಡುವುದು ಕೊಹ್ಲಿಗೆ ಬಿಟ್ಟ ವಿಚಾರ. ಈ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ. ತಂಡಕ್ಕಿಂತ ಕುಟುಂಬಕ್ಕೆ ಮೊದಲ ಆದ್ಯತೆ ನೀಡುತ್ತಾರೆ ಎಂದು ಅವರ ಬದ್ಧತೆ, ಕ್ರಿಕೆಟ್ ಕುರಿತು ಪ್ರಶ್ನಿಸುವುದು ಸರಿಯಲ್ಲ. ಕೊಹ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ” ಎಂದು ವಿಲಿಯರ್ಸ್ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

VISTARANEWS.COM


on

IPL 2024
Koo

ಲಖನೌ: ಸಂಜು ಸ್ಯಾಮ್ಸನ್ ಬಾರಿಸಿದ ಅಜೇಯ 71 ರನ್​ (ಅರ್ಧ ಶತಕ) ಹಾಗೂ ಧ್ರುವ್ ಜುರೆಲ್​ ಬಾರಿಸಿದ ಅಜೇಯ 52 ರನ್​ (ಅರ್ಧ ಶತಕ) ನೆರವಿನಿಂದ ಮಿಂಚಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್​ನ 44ನೇ ಪಂದ್ಯದಲ್ಲಿ (IPL 2024) ಲಕ್ನೊ ಸೂಪರ್​ ಜೈಂಟ್ಸ್ ವಿರುದ್ಧ 7 ವಿಕೆಟ್​ ಭರ್ಜರಿ ವಿಜಯ ದಾಖಲಿಸಿದೆ. ಈ ಮೂಲಕ ರಾಜಸ್ಥಾನ್ ತಂಡ ಹಾಲಿ ಆವೃತ್ತಿಯಲ್ಲಿ 8ನೇ ವಿಜಯವನ್ನು ತನ್ನದಾಗಿಸಿಕೊಂಡಿದೆ. ಒಟ್ಟು 16 ಅಂಕಗಳನ್ನು ಪಡೆದಿರುವ ರಾಜಸ್ಥಾನ್ ಬಳಗ ಬಹುತೇಕ ಪ್ಲೇ ಆಫ್ ಹಂತಕ್ಕೇರಿದೆ. ಆದರೆ, ಅದಿನ್ನೂ ಅಧಿಕೃತಗೊಂಡಿಲ್ಲ. ಅತ್ತ ಲಕ್ನೊ ತಂಡ ಸತತ ಎರಡು ಗೆಲುವಿನ ಬಳಿಕ ಸೋಲಿಗೆ ಸಿಲುಕಿದೆ. ಇದು ಆ ತಂಡಕ್ಕೆ ಒಟ್ಟು 9 ಪಂದ್ಯಗಳಲ್ಲಿ 4ನೇ ಸೋಲು. ಆದಾಗ್ಯೂ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಉಳಿದಿದೆ.

ಇಲ್ಲಿನ ಶ್ರೀ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಪಂದ್ಯ ನಡೆಯಿತು. ಟಾಸ್ ಗೆದ್ದ ರಾಜಸ್ಥಾನ್ ಆಯ್ಕೆ ಮಾಡಿಕೊಂಡರೆ ಮೊದಲು ಬ್ಯಾಟ್​ ಮಾಡಿದ ಲಕ್ನೊ ಬಳಗ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 196 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಉದ್ಘಾಟನಾ ಆವೃತ್ತಿಯ ಚಾಂಪಿಯನ್ ತಂಡ ಇನ್ನೂ 6 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್​ಗೆ 199 ರನ್ ಬಾರಿಸಿ ಭರ್ಜರಿಗೆ ಗೆಲವು ತನ್ನದಾಗಿಸಿಕೊಂಡಿತು.

ಇದನ್ನೂ ಓದಿ: KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಸಂಜು ಉತ್ತಮ ಬ್ಯಾಟಿಂಗ್​

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ರಾಜಸ್ಥಾನ್ ತಂಡ ರನ್ ಗಳಿಸುತ್ತಲೇ ಸಾಗಿತು. ಯಶಸ್ವಿ ಜೈಸ್ವಾಲ್​ 24 ರನ್ ಬಾರಿಸಿದರೆ ಜೋಸ್​ ಬಟ್ಲರ್​​ 34 ರನ್​ಗಳ ಕೊಡುಗೆ ಕೊಟ್ಟರು. ಆ ಬಳಿಕ ಬಂದ ಸಂಜು ಸ್ಯಾಮ್ಸನ್ ವಿಕೆಟ್​ ಉರುಳದಂತೆ ನೋಡಿಕೊಂಡ ಜತೆಗೆ 33 ಎಸೆತಗಳಲ್ಲಿ 71 ರನ್ ಬಾರಿಸಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್​ 14 ರನ್​ಗೆ ಸೀಮಿತಗೊಂಡರು. ಆದರೆ ಐದನೇ ಕ್ರಮಾಂಕದಲ್ಲಿ ಆಡಿದ ಧ್ರುವ್ ಜುರೆಲ್​ ಅಮೋಘ ಇನಿಂಗ್ಸ್ ಆಡಿದರು. ಅವರು 34 ಎಸೆತಕ್ಕೆ 52 ರನ್​ ಕೊಡುಗೆ ಕೊಟ್ಟರು. ಇದು ಹಾಲಿ ಅವೃತ್ತಿಯಲ್ಲಿ ಅವರ ಮೊದಲ ಅರ್ಧ ಶತಕವಾಗಿದೆ.

ಕಳಪೆ ಆರಂಭ

ಹಿಂದಿನ ಗೆಲುವಿನ ಉತ್ಸಾಹದೊಂದಿಗೆ ಬ್ಯಾಟಿಂಗ್ ಆರಂಭಿಸಿದ ಲಕ್ನೊ ತಂಡಕ್ಕೆ ಕ್ವಿಂಟನ್ ಡಿ ಕಾಕ್​ 8 ರನ್​ಗೆ ಔಟಾಗುವ ಮೂಲಕ ಹಿನ್ನಡೆ ಉಂಟಾಯಿತು. ಕೆ. ಎಲ್ ರಾಹುಲ್ 76 ರನ್​ ಬಾರಿಸುವ ಮೂಲಕ ತಂಡವನ್ನು ಕಾಪಾಡಿದರು. ಆದರೆ, ಹಿಂದಿನ ಪಂದ್ಯದ ಹೀರೊ ಮಾರ್ಕಸ್​ ಸ್ಟೊಯ್ನಿಸ್​ ಶೂನ್ಯಕ್ಕೆ ಔಟಾಗಿ ಹಿನ್ನಡೆ ಉಂಟು ಮಾಡಿದರು. ದೀಪಕ್ ಹೂಡ 50 ರನ್​ ಬಾರಿಸಿದರು. ಕೊನೆಯ ಬ್ಯಾಟರ್​ಗಳ ಸಣ್ಣ ಪುಟ್ಟ ರನ್​ಗಳ ಕೊಡುಗೆಗಳೊಂದಿಗೆ ಸ್ಪರ್ಧಾತ್ಮ ಮೊತ್ತ ಪೇರಿಸಿತು.

Continue Reading

ಕ್ರಿಕೆಟ್

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

KL Rahul: ರಾಹುಲ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಋತುವಿನಲ್ಲಿ ಎಲ್ಎಸ್​​ಜಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಏಕೆಂದರೆ ಅವರು ತಮ್ಮ ಫ್ರಾಂಚೈಸಿಗಾಗಿ ಅತಿ ಹೆಚ್ಚು ರನ್ ಗಳಿಸಿದವರು. ಕರ್ನಾಟಕದ ಬ್ಯಾಟರ್​ ಎಂಟು ಪಂದ್ಯಗಳಲ್ಲಿ 39.62 ಸರಾಸರಿಯಲ್ಲಿ 317* ರನ್ ಗಳಿಸಿದ್ದಾರೆ.

VISTARANEWS.COM


on

KL Rahul
Koo

ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಶನಿವಾರ ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ನಾಯಕ ಸ್ಥಿರ ಪ್ರದರ್ಶನ ಮುಂದವರಿಸಿದ್ದಾರೆ. ಅವರು ಆವೇಶ್​ ಖಾನ್ ಎಸೆತಕ್ಕೆ ಟ್ರೆಂಟ್ ಬೌಲ್ಟ್​ ಹಿಡಿದ ಕ್ಯಾಚ್​ಗೆ ಬಲಿಯಾಗುವ ಮೊದಲು ಪಂದ್ಯಾವಳಿಯಲ್ಲಿ ಆರಂಭಿಕನಾಗಿ 4000 ರನ್​ಗಳ ದಾಖಲೆ ಪೂರೈಸಿದ್ದಾರೆ. ಅವರು ಪಂದ್ಯದಲ್ಲಿ 76 ರನ್ ಗಳಿಸಿದ್ದಾರೆ.

ಲಕ್ನೊ ತಂಡ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್​ ಮಾರ್ಕಸ್ ಸ್ಟೊಯಿನಿಸ್ ಅವರನ್ನು ಬೇಗನೆ ಕಳೆದುಕೊಂಡರೂ ಎಲ್ಎಸ್ಜಿ ಪಂದ್ಯದಲ್ಲಿ ತನ್ನ ಹಿಡಿತವನ್ನು ಉಳಿಸಿಕೊಂಡಿತು. ರಾಹುಲ್​ 31 ಎಸೆತಗಳಲ್ಲಿ ಅರ್ಧಶತಕ ತಲುಪಿದರು. ಈ ವೇಳೆ ಅವರು ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಐದನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಸಾಧನೆಯನ್ನು ಸಾಧಿಸಲು ಅವರು 94 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡರು.

ಶಿಖರ್ ಧವನ್ (6362), ಡೇವಿಡ್ ವಾರ್ನರ್ (5909), ಕ್ರಿಸ್ ಗೇಲ್ (4480) ಮತ್ತು ವಿರಾಟ್ ಕೊಹ್ಲಿ (4041) ಎಲೈಟ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಾಕತಾಳೀಯವೆಂಬಂತೆ ರಾಹುಲ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಋತುವಿನಲ್ಲಿ ಎಲ್ಎಸ್​​ಜಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಏಕೆಂದರೆ ಅವರು ತಮ್ಮ ಫ್ರಾಂಚೈಸಿಗಾಗಿ ಅತಿ ಹೆಚ್ಚು ರನ್ ಗಳಿಸಿದವರು. ಕರ್ನಾಟಕದ ಬ್ಯಾಟರ್​ ಎಂಟು ಪಂದ್ಯಗಳಲ್ಲಿ 39.62 ಸರಾಸರಿಯಲ್ಲಿ 317* ರನ್ ಗಳಿಸಿದ್ದಾರೆ. ಪ್ರಸಕ್ತ ಋತುವಿನಲ್ಲಿ ಅವರು 137.82 ರ ಯೋಗ್ಯ ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಒಟ್ಟಾರೆಯಾಗಿ, ರಾಹುಲ್ 127 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ, 46.57 ಸರಾಸರಿಯಲ್ಲಿ 4517* ರನ್ ಗಳಿಸಿದ್ದಾರೆ. ಲಾಭದಾಯಕ ಪಂದ್ಯಾವಳಿಯಲ್ಲಿ ಅವರು ನಾಲ್ಕು ಶತಕಗಳು ಮತ್ತು 36 ಅರ್ಧಶತಕಗಳನ್ನು ಹೊಂದಿದ್ದಾರೆ.

ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

ಅಹಮದಾಬಾದ್: ಐಪಿಎಲ್ 2024ರ (IPL 2024) 43 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲಿಸಿದೆ. ಈ ಪಂದ್ಯ ಸಿಕ್ಕಾಪಟ್ಟೆ ಕುತೂಹಲಕಾರಿಯಾಗಿತ್ತು. ಅಂತೆಯೇ ಅರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ((Virat Kohli) ) ಏಪ್ರಿಲ್ 27ರಂದು ತಂಡದ ಹೋಟೆಲ್​ನಲ್ಲಿ ಇರುವಾಗಲೇ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ಗುಜರಾತ್ ಜೈಂಟ್ಸ್ ವಿರುದ್ಧದ ಆರ್​ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಕೊಹ್ಲಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅದರ ನಡುವೆಯೂ ಅವರು ಮೊಬೈಲ್​ನಲ್ಲಿ ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆರ್​ಸಿಬಿಯ ತರಬೇತಿ ಅವಧಿಗೆ ಮುಂಚಿತವಾಗಿ ಕ್ರಿಕೆಟಿಗ ಊಟ ಮಾಡುತ್ತಿದ್ದಾಗಲೂ ಆಟವನ್ನು ವೀಕ್ಷಿಸುತ್ತಿದ್ದರು. ಹೋಟೆಲ್​​ನಲ್ಲಿ ಹಾದು ಹೋಗಿರುವ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಿದ್ದಾರೆ. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್ (ಎಸ್​ಆರ್​​ಎಚ್​​) ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ವಿನ್ನಿಂಗ್ ಅರ್ಧಶತಕ ಬಾರಿಸಿದ್ದರು.

ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ

ಬೆಂಗಳೂರು: ಮುಂಬರುವ ಐಪಿಎಲ್ 2024 ರಲ್ಲಿ (IPL 2024) ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಇತರ ಆಟಗಾರರು ಅಹಮದಾಬಾದ್​ಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ಮುಖಾಮುಖಿಗೆ ಒಂದು ದಿನ ಮೊದಲು ಬಂದ ಆರ್​ಸಿಬಿ ಪಡೆಗಳಿಗೆ ತಂಡದ ಹೋಟೆಟ್​ನಲ್ಲಿ ಭವ್ಯ ಸ್ವಾಗತ ದೊರೆಯಿತು.

Continue Reading

ಬೆಂಗಳೂರು

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

TCS World 10K: ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

VISTARANEWS.COM


on

TCS World 10K
Koo

ಬೆಂಗಳೂರು: ಏಪ್ರಿಲ್ 28ರಂದು (ಭಾನುವಾರ) ಟಿಸಿಎಸ್ ವರ್ಲ್ಡ್ 10ಕೆ (TCS World 10K) ಬೆಂಗಳೂರು ಟೂರ್ನಿಯಲ್ಲಿ ಭಾರತದ ಸ್ಟಾರ್ ಅಥ್ಲೀಟ್​​ಗಳು ಓಟದ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರಿನ ಬೀದಿಗಳಲ್ಲಿ ಆಯೋಜಿಸಲಾದ ಈ ಓಟವು ಒಟ್ಟು 1.75 ಕೋಟಿ ರೂಪಾಯಿ (2,10000 ಯುಎಸ್ ಡಾಲರ್) ಬಹುಮಾನವನ್ನು ಹೊಂದಿದೆ. 67 ಅಥ್ಲೀಟ್​ಗಳನ್ನು ಒಳಗೊಂಡಿರುವ ಭಾರತೀಯ ಎಲೈಟ್ ಶ್ರೇಣಿಯಲ್ಲಿ ಪುರುಷರ ಮತ್ತು ಮಹಿಳಾ ವಿಜೇತರಿಗೆ ತಲಾ 2,75,000 ರೂ.ಗಳ ನಗದು ನಗದು ಬಹುಮಾನ ಮತ್ತು ಕೋರ್ಸ್ ದಾಖಲೆಯನ್ನು ಮುರಿದರೆ ಇನ್ನೂ 1,00,000 ರೂ.ಗಳ ಬೋನಸ್ ದೊರೆಯಲಿದೆ.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.

ರೇಸ್​ ಸಮಯ ಈ ರೀತಿ ಇದೆ

  • ಓಪನ್ 10K ಮತ್ತು ಪೊಲೀಸ್ ಕಪ್ – ಬೆಳಿಗ್ಗೆ 5:10
  • ವಿಶ್ವ 10K ಮಹಿಳೆಯರು – ಬೆಳಿಗ್ಗೆ 6:40
  • ವಿಶ್ವ 10K ಪುರುಷರು – ಬೆಳಿಗ್ಗೆ 7:30
  • ಮಜ್ಜಾ ರನ್ – ಬೆಳಿಗ್ಗೆ 8:15
  • ಚಾಂಪಿಯನ್ಸ್ ವಿತ್ ಡಿಸೆಬಿಲಿಟಿಸ್ ಮತ್ತು ಸಿಲ್ವರ್ ರನ್ – ಬೆಳಿಗ್ಗೆ 8:40

ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

ಹಾಲಿ ಚಾಂಪಿಯನ್ ತಮ್ಶಿ ಸಿಂಗ್ ಮತ್ತು ನ್ಯಾಷನಲ್ ಕೋರ್ಸ್ ರೆಕಾರ್ಡ್ ಹೋಲ್ಡರ್ ಸಂಜೀವಿನಿ ಜಾಧವ್ ಅವರು ಭಾರತದ ಮಹಿಳಾ ಓಟಗಾರರನ್ನು ಮುನ್ನಡೆಸಲಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಗೋಲ್ಡ್ ಲೇಬಲ್ ರೋಡ್ ರೇಸ್​​ ಮುಂಚಿತವಾಗಿ ಮಾತನಾಡಿದ ಸಂಜೀವಿನಿ ಜಾಧವ್, “ನನ್ನ ತರಬೇತಿ ಉತ್ತಮವಾಗಿ ನಡೆಯುತ್ತಿದೆ. ನಾನು ಭಾನುವಾರ ಸ್ಪರ್ಧೆಯನ್ನು ಎದುರು ನೋಡುತ್ತಿದ್ದೇನೆ. ನನ್ನ ಅತ್ಯುತ್ತಮ ಪ್ರದರ್ಶನ ನೀಡುವುದು ನನ್ನ ಗುರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

ಭಾರತೀಯ ಎಲೈಟ್​ ಮಹಿಳಾ ಓಟಗಾರರಲ್ಲಿ ಸಂಘಮಿತ್ರ ಮಹತಾ, ಪೂನಂ ದಿನಕರ್ ಸೋನುನೆ, ಏಕ್ತಾ ರಾವತ್, ಉಜಾಲಾ, ಪ್ರೀನು ಯಾದವ್, ಫೂಲನ್ ಪಾಲ್, ಭಾರತಿ ನೈನ್, ಚಾವಿ ಯಾದವ್ ಮತ್ತು ಸೀಮಾ ಕೂಡ ಮುಂಚೂಣಿಯಲ್ಲಿದ್ದಾರೆ.

ಪುರುಷರ ಸಾಲಿನಲ್ಲಿ ಯಾರ್ಯಾರು?

ಭಾರತೀಯ ಪುರುಷರ ಸಾಲಿನಲ್ಲಿ ಕಳೆದ ವರ್ಷದ ರನ್ನರ್ ಅಪ್ ಹರ್ಮನ್​ಜೋತ್​ ಸಿಂಗ್ 30:00 ನಿಮಿಷಗಳ ತಮ್ಮ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಈ ಬಾರಿ ಭರವಸೆ ಮೂಡಿಸಿದ್ದಾರೆ.

30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ

ಟಿಸಿಎಸ್ ವರ್ಲ್ಡ್ 10 ಕೆಯಲ್ಲಿ ಈ ಬಾರಿ ಬೆಂಗಳೂರಿನ ಗ್ರೌಂಡ್ ಮತ್ತು ವರ್ಚುವಲ್ ವಿಭಾಗಗಳಲ್ಲಿ 30,000 ಕ್ಕೂ ಹೆಚ್ಚು ಭಾಗವಹಿಸಲಿದ್ದಾರೆ. ಉತ್ತಮ್ ಚಂದ್, ನಿತೇಂದ್ರ ಸಿಂಗ್ ರಾವತ್, ಧರ್ಮೇಂದ್ರ, ವಿವೇಕ್ ಸಿಂಗ್ ಮೋರೆ, ಸಂದೀಪ್ ಸಿಂಗ್, ದಿನೇಶ್, ದೀಪಕ್ ಭಟ್, ಮೋಹನ್ ಸೈನಿ, ಅಮೃತ್ ಸಿಂಗ್ ಬೋಹ್ರಾ ಮತ್ತು ಸಂದೀಪ್ ದೇವ್ರಾರಿ ರೇಸ್ನಲ್ಲಿ ಸ್ಪರ್ಧಿಸುತ್ತಿರುವ ಇತರ ಭಾರತೀಯ ಪುರುಷ ಕ್ರೀಡಾಪಟುಗಳು.

Continue Reading

ಪ್ರಮುಖ ಸುದ್ದಿ

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

Virat kohli: ಗುಜರಾತ್ ಜೈಂಟ್ಸ್ ವಿರುದ್ಧದ ಆರ್​ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಕೊಹ್ಲಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅದರ ನಡುವೆಯೂ ಅವರು ಮೊಬೈಲ್​ನಲ್ಲಿ ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆರ್​ಸಿಬಿಯ ತರಬೇತಿ ಅವಧಿಗೆ ಮುಂಚಿತವಾಗಿ ಕ್ರಿಕೆಟಿಗ ಊಟ ಮಾಡುತ್ತಿದ್ದಾಗಲೂ ಆಟವನ್ನು ವೀಕ್ಷಿಸುತ್ತಿದ್ದರು. ಹೋಟೆಲ್​​ನಲ್ಲಿ ಹಾದು ಹೋಗಿರುವ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಿದ್ದಾರೆ.

VISTARANEWS.COM


on

virat kohli
Koo

ಅಹಮದಾಬಾದ್: ಐಪಿಎಲ್ 2024ರ (IPL 2024) 43 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲಿಸಿದೆ. ಈ ಪಂದ್ಯ ಸಿಕ್ಕಾಪಟ್ಟೆ ಕುತೂಹಲಕಾರಿಯಾಗಿತ್ತು. ಅಂತೆಯೇ ಅರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ((Virat Kohli) ) ಏಪ್ರಿಲ್ 27ರಂದು ತಂಡದ ಹೋಟೆಲ್​ನಲ್ಲಿ ಇರುವಾಗಲೇ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ಗುಜರಾತ್ ಜೈಂಟ್ಸ್ ವಿರುದ್ಧದ ಆರ್​ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಕೊಹ್ಲಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅದರ ನಡುವೆಯೂ ಅವರು ಮೊಬೈಲ್​ನಲ್ಲಿ ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆರ್​ಸಿಬಿಯ ತರಬೇತಿ ಅವಧಿಗೆ ಮುಂಚಿತವಾಗಿ ಕ್ರಿಕೆಟಿಗ ಊಟ ಮಾಡುತ್ತಿದ್ದಾಗಲೂ ಆಟವನ್ನು ವೀಕ್ಷಿಸುತ್ತಿದ್ದರು. ಹೋಟೆಲ್​​ನಲ್ಲಿ ಹಾದು ಹೋಗಿರುವ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಿದ್ದಾರೆ. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್ (ಎಸ್​ಆರ್​​ಎಚ್​​) ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ವಿನ್ನಿಂಗ್ ಅರ್ಧಶತಕ ಬಾರಿಸಿದ್ದರು.

ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ

ಬೆಂಗಳೂರು: ಮುಂಬರುವ ಐಪಿಎಲ್ 2024 ರಲ್ಲಿ (IPL 2024) ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಇತರ ಆಟಗಾರರು ಅಹಮದಾಬಾದ್​ಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ಮುಖಾಮುಖಿಗೆ ಒಂದು ದಿನ ಮೊದಲು ಬಂದ ಆರ್​ಸಿಬಿ ಪಡೆಗಳಿಗೆ ತಂಡದ ಹೋಟೆಟ್​ನಲ್ಲಿ ಭವ್ಯ ಸ್ವಾಗತ ದೊರೆಯಿತು.


ಹೋಟೆಲ್​ನಲ್ಲಿ ಸಿಕ್ಕಿರುತ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದವರಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ. ಅದರ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

ವಿರಾಟ್ ಕೊಹ್ಲಿ ಏಪ್ರಿಲ್ 28 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಗಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಸ್ಪರ್ಧೆಗೆ ಒಂದು ದಿನ ಮುಂಚಿತವಾಗಿ ಅವರು ಮತ್ತು ಅವರ ಉಳಿದ ಆಟಗಾರರ ಜತೆ ಹೋಟೆಲ್​ಗೆ ಆಗಮಿಸಿದರು. ಈ ಮೂಲಕ ಅವರು ಅಹಮದಾಬಾದ್​ನಲ್ಲಿ ತಮ್ಮ ಇರುವಿಕೆಯನ್ನು ಗುರುತಿಸಿಕೊಂಡರು.

ಐಪಿಎಲ್ 2024 ರ ಸ್ಟಾರ್ ಆಕರ್ಷಣೆಗಳಲ್ಲಿ ಒಬ್ಬರಾದ ಕೊಹ್ಲಿ ಏಪ್ರಿಲ್ 27 ರಂದು ತಂಡದ ಹೋಟೆಲ್​ಗೆ ಹೋಗುವ ವೇಳೆ ಭವ್ಯ ಸ್ವಾಗತ ಪಡೆದರು.

ಆರೆಂಜ್ ಕ್ಯಾಪ್ ವೀರ ಕೊಹ್ಲಿ

ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ 2024 ರ ಋತುವಿನಲ್ಲಿ ‘ಆರೆಂಜ್ ಕ್ಯಾಪ್’ ಹೊಂದಿದ್ದಾರೆ. ಕ್ರಿಕೆಟಿಗ ಈಗಾಗಲೇ ಕೇವಲ ಒಂಬತ್ತು ಇನಿಂಂಗ್ಸ್​​​ಗಳಲ್ಲಿ 61 ಕ್ಕೂ ಹೆಚ್ಚು ಸರಾಸರಿಯಲ್ಲಿ 430 ರನ್ ಗಳಿಸಿದ್ದಾರೆ/ ಎರಡನೇ ಸ್ಥಾನದಲ್ಲಿರುವ ಸುನಿಲ್ ನರೈನ್ ಅವರನ್ನು 73 ರನ್​ಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ.
ಕೊಹ್ಲಿ ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಎಸ್ಆರ್​​ಎಚ್​ ತಂಡದ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು. ಈ ಗೆಲುವು ಒಂದು ತಿಂಗಳಲ್ಲಿ ಆರ್​ಸಿಬಿಯ ಮೊದಲ ಗೆಲುವು ಮತ್ತು ಋತುವಿನ ಒಟ್ಟಾರೆ ಎರಡನೇ ಗೆಲುವು.

ಒಂಬತ್ತು ಲೀಗ್ ಪಂದ್ಯಗಳಲ್ಲಿ ಕೇವಲ ಎರಡು ಗೆಲುವುಗಳನ್ನು ಗಳಿಸಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್ಸಿಬಿ ಗುಂಪು ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. ಏಣಿಯನ್ನು ಏರುವ ಪ್ರಯತ್ನದಲ್ಲಿ ಅವರು ಪಂದ್ಯಾವಳಿಯ ಈ ಹಂತದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಬೇಕಾಗಿದೆ.

Continue Reading
Advertisement
Varalaxmi Sarathkumar negative comments on fiance
ಕಾಲಿವುಡ್1 min ago

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Viral Video
ವೈರಲ್ ನ್ಯೂಸ್6 mins ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Outdoor Exercise
ಆರೋಗ್ಯ10 mins ago

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Has Karnataka Congress government suggested PM Narendra Modi programme should not be success Kageri question to police
Lok Sabha Election 202413 mins ago

PM Narendra Modi: ಮೋದಿ ಕಾರ್ಯಕ್ರಮ ಯಶವಾಗದಿರಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

Congress MLA
ಪ್ರಮುಖ ಸುದ್ದಿ29 mins ago

Congress MLA : ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Lok Sabha Election 202444 mins ago

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ರಾಜಕೀಯ56 mins ago

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

777 Charlie
ಸ್ಯಾಂಡಲ್ ವುಡ್57 mins ago

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

Food Poisoning
ಪ್ರಮುಖ ಸುದ್ದಿ1 hour ago

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Manjummel Boys
ಮಾಲಿವುಡ್2 hours ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ3 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202419 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ24 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌