IND VS NZ | ಭಾರತ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ತಾತ್ಕಾಲಿಕ ಸ್ಥಗಿತ - Vistara News

ಕ್ರೀಡೆ

IND VS NZ | ಭಾರತ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ತಾತ್ಕಾಲಿಕ ಸ್ಥಗಿತ

ಭಾರತ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯ ಮಳೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

VISTARANEWS.COM


on

Rain stops play
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹ್ಯಾಮಿಲ್ಟನ್: ಆತಿಥೇಯ ನ್ಯೂಜಿಲ್ಯಾಂಡ್​(IND VS NZ) ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದೆ. ಭಾರತದ ಬ್ಯಾಟಿಂಗ್ ವೇಳೆ ಮಳೆ ಸುರಿದ ಪರಿಣಾಮ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸದ್ಯ ಇಲ್ಲಿ ಭಾರಿ ಮಳೆಯಾಗುತ್ತಿದ್ದು ಪಂದ್ಯ ನಡೆಯುವುದು ಅನುಮಾನ ಎಂಬತ್ತಿದೆ.

ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಈ ಮುಖಾಮುಖಿಯಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್​ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಮಳೆ ಬಂದು ಪಂದ್ಯ ಸ್ಥಗಿತಗೊಂಡಾಗ 4.5 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 22 ರನ್ ಗಳಿಸಿದೆ.

ಟೀಮ್​ ಇಂಡಿಯಾ ಈ ಪಂದ್ಯಕ್ಕೆ ಎರಡು ಬದಲಾವಣೆ ಮಾಡಿತು. ಕಳೆದ ಪಂದ್ಯವನ್ನಾಡಿದ ಸಂಜು ಸ್ಯಾಮ್ಸನ್ ಮತ್ತು ಶಾರ್ದೂಲ್ ಠಾಕೂರ್ ಬದಲಿಗೆ ದೀಪಕ್ ಹೂಡಾ ಮತ್ತು ದೀಪಕ್ ಚಹಾರ್ ಅವರಿಗೆ ಅವಕಾಶ ನೀಡಿದೆ. ಇನ್ನು ಆತಿಥೇಯ ನ್ಯೂಜಿಲೆಂಡ್ ತಂಡವು ಒಂದು ಬದಲಾವಣೆ ಮಾಡಿದ್ದು, ಆಡಮ್ ಮಿಲ್ನೆ ಬದಲಿಗೆ ಮೈಕೆಲ್ ಬ್ರೇಸ್‌ವೆಲ್​ಗೆ ಅವಕಾಶ ನೀಡಿತು.

ಇದನ್ನೂ ಓದಿ | Team India | ಉಮ್ರಾನ್‌ ಮಲಿಕ್‌ ಮೊದಲ ಒಡಿಐ ವಿಕೆಟ್‌ ಪಡೆದಾಗ ಮನೆ ಮಂದಿಯ ಸಂಭ್ರಮ ಹೀಗಿತ್ತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Election Results 2024: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ ಪುತ್ರನಿಗೆ ಭರ್ಜರಿ ಜಯ

Election Results 2024: ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಿತ್ತು.

VISTARANEWS.COM


on

Election Results 2024
Koo

ನವದೆಹಲಿ: ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್‌ಭೂಷಣ್‌ ಶರಣ್​ ಸಿಂಗ್‌(Brij Bhushan) ಅವರ ಕಿರಿಯ ಪುತ್ರ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರು ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ ಕೈಸರ್‌ಗಂಜ್(Kaiserganj) ಲೋಕಸಭಾ ಕ್ಷೇತ್ರದಲ್ಲಿ 1.4 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ತಂದೆ ಬ್ರಿಜ್​ ಭೂಷಣ್(Brij Bhushan)​ 2019ರ ಲೋಕಸಭಾ ಚುನಾವಣೆಯಲ್ಲಿ, ಕೈಸರ್‌ಗಂಜ್‌ನಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. 

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ತಂದೆಯಂತೆ ಮಗನೂ ಕೂಡ ಭರ್ಜರಿ ಅಂತರದ ಗೆಲುವು ಸಾಧಿಸಿ ಕೈಸರ್‌ಗಂಜ್​ನಲ್ಲಿ ಪ್ರಾಬಲ್ಯ ಮೆರೆದಿದ್ದಾರೆ.

ಮಗನ ನಾಮನಿರ್ದೇಶನ ಮಾಡುವ ವೇಳೆ ಕೈಸರ್‌ಗಂಜ್‌ನಲ್ಲಿ ಬೃಹತ್​ ರ‍್ಯಾಲಿ ಮಾಡುವ ಮೂಲಕ ಬ್ರಿಜ್‌ಭೂಷಣ್‌ ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದರು. ಈ ರ‍್ಯಾಲಿಯಲ್ಲಿ 10,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದರಲ್ಲಿ ಶಾಸಕರು, ಎಂಎಲ್‌ಸಿಗಳು, ಜಿಲ್ಲಾ ಪಂಚಾಯತ್ ಮುಖ್ಯಸ್ಥರು, ಹತ್ತಿರದ ಜಿಲ್ಲೆಗಳ ಬಿಜೆಪಿಯ ಸ್ಥಳೀಯ ನಾಯಕರು, ಅಯೋಧ್ಯೆಯ ಪ್ರಮುಖ ಧಾರ್ಮಿಕ ಮುಖಂಡರು ಸೇರಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ.

ರಾಮ ಮಂದಿರ ನಿರ್ಮಿಸಿದರೂ ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು!


ಈ ವರ್ಷದ ಆರಂಭದಲ್ಲಿ ಭವ್ಯವಾದ ಶ್ರೀರಾಮ ಮಂದಿರದ (Ayodhya Ram Mandir) ಪ್ರಾಣಪ್ರತಿಷ್ಠೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya election results 2024) ಮಾಡಲಾಯಿತು. ಆದರೆ ಅಯೋಧ್ಯೆಯನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ (Faizabad Election Result) ಎಸ್‌ಪಿ (SP) ಅಭ್ಯರ್ಥಿಯ ಮುಂದೆ ಬಿಜೆಪಿ (BJP) ಅಭ್ಯರ್ಥಿ ಸೋತಿದ್ದಾರೆ.

ಇದನ್ನೂ ಓದಿ Election Results 2024 : ಮೋದಿಯ ಸೋಲು ಎಂದ ಖರ್ಗೆ, ಸಂವಿಧಾನ ಉಳಿಸಿದೆವು ಎಂದ ರಾಹುಲ್​ ಗಾಂಧಿ

ಜನವರಿಯಲ್ಲಿ ರಾಮ ಮಂದಿರದಲ್ಲಿ ನಡೆದ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ, ಇಡೀ ಭಾರತದಲ್ಲಿಯೇ ಬಿಜೆಪಿಯ ಪುನಃ ಪ್ರತಿಷ್ಠಾಪನೆಗೆ ಮೂಲವಾಗಲಿದೆ ಎಂದು ಭಾವಿಸಲಾಗಿತ್ತು. ಕಡೇ ಪಕ್ಷ ಉತ್ತರ ಪ್ರದೇಶದಲ್ಲಾದರೂ ಭಾರಿ ಮೆಜಾರಿಟಿಯಲ್ಲಿ ಬಿಜೆಪಿ ಬರಲಿದೆ ಎಂದು ತರ್ಕಿಸಲಾಗಿತ್ತು. ಆದರೆ ಅದು ಆಗಿಲ್ಲ. ಅಯೋಧ್ಯೆಯನ್ನು ಒಳಗೊಂಡ ಫೈಜಾಬಾದ್‌ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಅಭ್ಯರ್ಥಿ ಅವಧೇಶ್ ಪ್ರಸಾದ್ ಮುಂದೆ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸೋತಿದ್ದಾರೆ.

ಫೈಜಾಬಾದ್‌ನಿಂದ ಮೂರು ಬಾರಿ ಸಂಸದರಾಗಿರುವ ಸಿಂಗ್ ಅವರ ಈ ಸಲದ ಸೋಲು ಅಚ್ಚರಿದಾಯಕವಾಗಿದೆ. ಸಮಾಜವಾದಿ ಪಕ್ಷದ ಅಭ್ಯರ್ಥಿಗಿಂತ 10,000ಕ್ಕೂ ಅಧಿಕ ಮತಗಳ ಅಂತರದಿಂದ ಸಿಂಗ್‌ ಹಿಂದುಳಿದರು. ಫೈಜಾಬಾದ್ ಜಿಲ್ಲೆಯನ್ನು 2018ರಲ್ಲಿ ಅಧಿಕೃತವಾಗಿ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಯಿತು. ಆದಾಗ್ಯೂ, ಲೋಕಸಭಾ ಸ್ಥಾನವನ್ನು ಇನ್ನೂ ಫೈಜಾಬಾದ್ ಎಂದು ಕರೆಯಲಾಗುತ್ತದೆ.

ಉತ್ತರ ಪ್ರದೇಶದ 43 ಲೋಕಸಭಾ ಸ್ಥಾನಗಳಲ್ಲಿ ಇಂಡಿಯಾ ಬ್ಲಾಕ್ ಮುನ್ನಡೆ ಸಾಧಿಸಿದೆ. ಮಧ್ಯಾಹ್ನದ ಹೊತ್ತಿಗೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಕ್ರಮವಾಗಿ 34 ಮತ್ತು ಒಂಬತ್ತು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದವು. 2019ರಲ್ಲಿ 62 ಸ್ಥಾನ ಗಳಿಸಿದ್ದ ಬಿಜೆಪಿ, ಈ ಬಾರಿ 34 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಕ್ಷೇತ್ರದಲ್ಲಿ ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ. ಮತಗಳ ಅಂತರ ಕಳೆದ ಸಲಕ್ಕಿಂತ ಕಡಿಮೆಯಾಗಿದೆ. ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿ ಗೆಲುವು ಸಾಧಿಸಿದರೆ, ಸ್ಮೃತಿ ಇರಾನಿ ಅಮೇಠಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ವಿರುದ್ಧ ಸೋತಿದ್ದಾರೆ.

Continue Reading

ಕ್ರೀಡೆ

India vs Ireland: ರೋಹಿತ್​ ಜತೆ ಇನಿಂಗ್ಸ್​ ಆರಂಭಿಸುವುದು ಯಾರು? ರೇಸ್​ನಲ್ಲಿ ಕೊಹ್ಲಿ, ಜೈಸ್ವಾಲ್​!

India vs Ireland: ಮೂಲಗಳ ಪ್ರಕಾರ, ರೋಹಿತ್​ ಶರ್ಮ ಜತೆ ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರೇ ಇನಿಂಗ್ಸ್​ ಆರಂಭಿಸುವ ಸಾಧ್ಯತೆ ಅಧಿಕವಾಗಿದೆ. ವಿರಾಟ್​ ಕೊಹ್ಲಿ(Virat Kohli) ಐಪಿಎಲ್​ ಟೂರ್ನಿಯಲ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಗಳಲ್ಲಿ ಆರಂಭಿಕನಾಗಿ ಆಡುವುದು ಅನುಮಾನ

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಭಾರತ ತಂಡ ಟಿ20 ವಿಶ್ವಕಪ್​ನಲ್ಲಿ(T20 World Cup 2024) ಬುಧವಾರ ಐರ್ಲೆಂಡ್(India vs Ireland) ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ, ಈ ಪಂದ್ಯದಲ್ಲಿ ನಾಯಕ ರೋಹಿತ್​ ಶರ್ಮ(Rohit Sharma) ಜತೆ ಯಾರು ಇನಿಂಗ್ಸ್​ ಆರಂಭಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಮೂಡಿದೆ. ಕೋಚ್ ರಾಹುಲ್ ದ್ರಾವಿಡ್(Rahul Dravid) ಕೂಡ ನಮ್ಮ ತಂತ್ರದ ಬಗ್ಗೆ ನಾವು ಹೆಚ್ಚು ಹೇಳಲು ಬಯಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಈ ಪ್ರಶ್ನೆಗೆ ಉತ್ತರ ನಾಳಿನ ಪಂದ್ಯದ ವೇಳೆಯೇ ಸಿಗಬೇಕಿದೆ.

ಮೂಲಗಳ ಪ್ರಕಾರ, ರೋಹಿತ್​ ಶರ್ಮ ಜತೆ ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರೇ ಇನಿಂಗ್ಸ್​ ಆರಂಭಿಸುವ ಸಾಧ್ಯತೆ ಅಧಿಕವಾಗಿದೆ. ವಿರಾಟ್​ ಕೊಹ್ಲಿ(Virat Kohli) ಐಪಿಎಲ್​ ಟೂರ್ನಿಯಲ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಗಳಲ್ಲಿ ಆರಂಭಿಕನಾಗಿ ಆಡುವುದು ಅನುಮಾನ. ಎಂದಿನಿಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಲಿದ್ದಾರೆ ಎನ್ನಲಾಗಿದೆ. ಜೈಸ್ವಾಲ್​ ಆರಂಭಿ ಆಟಗಾರನಾಗಿದ್ದು ಜತೆಗೆ ಎಡಗೈ ಬ್ಯಾಟರ್​ ಆಗಿದ್ದಾರೆ. ಹೀಗಾಗಿ ಬಲ ಮತ್ತು ಎಡಗೈ ಬ್ಯಾಟರ್​ ಕಾಂಬಿನೇಶನ್​ ಉತ್ತಮವಾಗಿರುವ ಕಾರಣದಿಂದ ರೋಹಿತ್​-ಜೈಸ್ವಾಲ್​ ಆರಂಭಿಕನಾಗಿ ಆಡಬಹುದು.

ವಿರಾಟ್​ ಕೊಹ್ಲಿ ಅವರು ಆರಂಭಿಕನಾಗಿ ಕಣಕ್ಕಿಳಿದರೆ, ಒಂದೊಮ್ಮೆ ರೋಹಿತ್​ ಮತ್ತು ಕೊಹ್ಲಿ ಬೇಗನೇ ವಿಕೆಟ್​ ಕಳೆದುಕೊಂಡರೆ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾಗಬಲ್ಲ ಅನುಭವಿ ಆಟಗಾರನಿಲ್ಲ. ಹೀಗಾಗಿ ವಿರಾಟ್​ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸದರೆ ಉತ್ತಮ ಎನ್ನಲಡ್ಡಿಯಿಲ್ಲ. ಕಳೆದ ಬಾರಿಯ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಆಟಗಾರರೆಲ್ಲ ಸತತವಾಗಿ ವಿಕೆಟ್​ ಕಳೆದುಕೊಂಡಾಗ ತಂಡಕ್ಕೆ ಆಸರೆಯಾಗಿದ್ದು ವಿರಾಟ್​ ಕೊಹ್ಲಿ. ಏಕಾಂಗಿಯಾಗಿ ಹೋರಾಟ ನಡೆಸಿ ಸೋಲುವ ಪಂದ್ಯವನ್ನು ಗೆಲ್ಲಿಸಿ ಕೊಟ್ಟಿದ್ದರು.

ಇದನ್ನೂ ಓದಿ India vs Ireland: ಭಾರತ-ಐರ್ಲೆಂಡ್​ ಟಿ20 ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್​ ಯಾದವ್​, ರಿಷಭ್​ ಪಂತ್​, ಹಾರ್ದಿಕ್​ ಪಾಂಡ್ಯ ಅವರಂತ ಬ್ಯಾಟರ್​ಗಳಿದ್ದರೂ ಕೂಡ ಇವರ ಪ್ರದರ್ಶನದ ಮೇಲೆ ಹೆಚ್ಚಿನ ನಂಬಿಕೆ ಇಡುವಂತಿಲ್ಲ. ಬಡಬಡನೆ ಒಂದೆರಡು ಸಿಕ್ಸರ್​ ಮತ್ತು ಬೌಂಡರಿ ಬಾರಿಸಿದರೂ ತಂಡಕ್ಕೆ ಆಸರೆಯಾಗಬಲ್ಲ ಸಾಮರ್ಥ್ಯ ಇವರಿಗಿಲ್ಲ.

ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡುತ್ತಿದ್ದಾರೆ. ಇದಕ್ಕೆ ಸೋಮವಾರ ನಡೆದಿದ್ದ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಣ ಪಂದ್ಯವೇ ಉತ್ತಮ ನಿದರ್ಶನ. ಈ ಪಂದ್ಯದಲ್ಲಿ ದಾಖಲೆಯ 127 ಎಸೆತಗಳು ಡಾಟ್​ ದಾಖಲಾಗಿತ್ತು. ಅಲ್ಲದೆ ಬೌನ್ಸರ್​ ಎಸೆತಗಳನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗದೆ ಬ್ಯಾಟರ್​ಗಳು ಚೆಂಡಿನೇಟು ತಿಂದಿದ್ದರು. ಎಷ್ಟೇ ಟ್ರಿಕ್ಕಿ ಪಿಚ್​ನಲ್ಲಿಯೂ ಕೊಹ್ಲಿ ನಿಂತು ಆಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಮಧ್ಯಮ ಕ್ರಮಾಂಕದಲ್ಲೇ ಆಡಿದರೆ ಸೂಕ್ತ ಎನ್ನಬಹುದು.

Continue Reading

ಕ್ರೀಡೆ

Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

Election Results 2024: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಸಚಿವರ ಮಾತಿಗೆ ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ ಅಧೀರ್ ರಂಜನ್ ಚೌಧರಿ ಅವರನ್ನು ಸದನದಿಂದ ಸಸ್ಪೆಂಡ್ ಮಾಡಲಾಗಿತ್ತು.

VISTARANEWS.COM


on

Election Results 2024
Koo

ಕೋಲ್ಕತ್ತಾ: ಭಾರತ ಕ್ರಿಕೆಟ್​ ತಂಡದ ಮಾಜಿ ಕ್ರಿಕೆಟಿಗ, ವಿಶ್ವಕಪ್​ ತಂಡದ ಸದಸ್ಯ ಯೂಸುಫ್ ಪಠಾಣ್(Yusuf Pathan) ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದಾರೆ.

ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದರು. ಈ ಮೂಲಕ ಯೂಸುಫ್ ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದರು.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಸಚಿವರ ಮಾತಿಗೆ ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ ಅಧೀರ್ ರಂಜನ್ ಚೌಧರಿ ಅವರನ್ನು ಸದನದಿಂದ ಸಸ್ಪೆಂಡ್ ಮಾಡಲಾಗಿತ್ತು. ಕಾಂಗ್ರೆಸ್ ಸಂಸದೀಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸಸ್ಪೆಂಡ್ ಮಾಡುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಂಡಿಸಿದ್ದರು.

ಇದನ್ನೂ ಓದಿ Election Results 2024: ಎಕ್ಸಿಟ್‌ ಪೋಲ್‌ಗಳಿಗೆ ತೀವ್ರ ಮುಖಭಂಗ; ನಂಬಿದ ಹೂಡಿಕೆದಾರರಿಗೆ 40 ಲಕ್ಷ ಕೋಟಿ ರೂ. ನಷ್ಟ!

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಿತ್ತು. ಇದೀಗ ಮೊದಲ ಪ್ರಯತ್ನದಲ್ಲೇ ಅವರು ಗೆದ್ದು ಬೀಗಿದ್ದಾರೆ.

ವಿಶ್ವಕಪ್‌ ಹೀರೋ


ಪಠಾಣ್‌ ಸೋದರರಲ್ಲಿ ಹಿರಿಯರಾದ ಯೂಸುಫ್ ಪಠಾಣ್‌ ಹೊಡಿಬಡಿ ಆಟಕ್ಕೆ ಖ್ಯಾತರಾಗಿದ್ದರು. 2007ರ ಚೊಚ್ಚಲ ಟಿ20 ವಿಶ್ವಕಪ್‌, 2011ರ ವಿಶ್ವಕಪ್‌, ಕೆಕೆಆರ್‌ನ ಐಪಿಎಲ್‌ ಗೆಲುವಿನ ವೇಳೆ ತಂಡದ ಸ್ಟಾರ್‌ ಆಟಗಾರನಾಗಿ ಮಿಂಚಿದ್ದು ಯೂಸುಫ್ ಹೆಗ್ಗಳಿಕೆ. 2021ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ಪಠಾಣ್‌ ಸೋದರರಲ್ಲಿ ಹಿರಿಯರಾದ ಯೂಸುಫ್ ಪಠಾಣ್‌ ಹೊಡಿಬಡಿ ಆಟಕ್ಕೆ ಖ್ಯಾತರಾಗಿದ್ದರು. 2007ರ ಚೊಚ್ಚಲ ಟಿ20 ವಿಶ್ವಕಪ್‌, 2011ರ ವಿಶ್ವಕಪ್‌, ಕೆಕೆಆರ್‌ನ ಐಪಿಎಲ್‌ ಗೆಲುವಿನ ವೇಳೆ ತಂಡದ ಸ್ಟಾರ್‌ ಆಟಗಾರನಾಗಿ ಮಿಂಚಿದ್ದು ಯೂಸುಫ್ ಹೆಗ್ಗಳಿಕೆ. 2021ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಯೂಸುಫ್ ಪಠಾಣ್‌ 57 ಏಕದಿನ ಪಂದ್ಯಗಳಿಂದ 810 ರನ್‌ ಹೊಡೆದಿದ್ದಾರೆ. 2 ಶತಕ, 3 ಅರ್ಧ ಶತಕ ಇದರಲ್ಲಿ ಒಳಗೊಂಡಿದೆ. 22 ಟಿ20 ಪಂದ್ಯಗಳಿಂದ 236 ರನ್‌ ಬಾರಿಸಿದ್ದಾರೆ. 2012ರಲ್ಲಿ ಭಾರತವನ್ನು ಕೊನೆಯ ಸಲ ಪ್ರತಿನಿಧಿಸಿದ್ದರು.

Continue Reading

ಕ್ರೀಡೆ

Fazalhaq Farooqi: ಟಿ20 ವಿಶ್ವಕಪ್​ನಲ್ಲಿ ದಾಖಲೆ ಬರೆದ ಫಜಲ್ಹಕ್ ಫಾರೂಕಿ

Fazalhaq Farooqi: 5 ವಿಕೆಟ್​ ಕೀಳುವ ಮೂಲಕ ಫಜಲ್ಹಕ್ ಫಾರೂಕಿ ಟಿ20 ವಿಶ್ವಕಪ್​ ಟೂರ್ನಿಯ ಪಂದ್ಯವೊಂದರಲ್ಲಿ ಅತಿ ಕಡಿಮೆ ರನ್​ಗೆ ಅತ್ಯಧಿಕ ವಿಕೆಟ್​ ಕಿತ್ತ ಅಫಘಾನಿಸ್ತಾನ ಮೊದಲ ಬೌಲರ್​ ಎನಿಸಿಕೊಂಡರು.

VISTARANEWS.COM


on

Fazalhaq Farooqi
Koo

ನ್ಯೂಯಾರ್ಕ್​: ಅಫಘಾನಿಸ್ತಾನ(AFG vs UGA) ತಂಡದ ಎಡಗೈ ವೇಗಿ ಫಜಲ್ಹಕ್ ಫಾರೂಕಿ (Fazalhaq Farooqi) ಅವರು ಉಂಗಾಡ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್​ ಕಿತ್ತು ಹಲವು ದಾಖಲೆ ಬರೆದಿದ್ದಾರೆ. ಇಂದು(ಮಂಗಳವಾರ) ನಡೆದ ಪಂದ್ಯದಲ್ಲಿ ಘಾತಕ ಬೌಲಿಂಗ್​ ದಾಳಿ ನಡೆಸಿದ ಫಾರೂಕಿ ಕೇವಲ 9 ರನ್​ಗೆ 5 ವಿಕೆಟ್​ ಉಡಾಯಿಸಿ ಅಫಘಾನಿಸ್ತಾನಕ್ಕೆ ಅಮೋಘ ಗೆಲುವು ತಂದುಕೊಟ್ಟರು.

5 ವಿಕೆಟ್​ ಕೀಳುವ ಮೂಲಕ ಟಿ20 ವಿಶ್ವಕಪ್​ ಟೂರ್ನಿಯ ಪಂದ್ಯವೊಂದರಲ್ಲಿ ಅತಿ ಕಡಿಮೆ ರನ್​ಗೆ ಅತ್ಯಧಿಕ ವಿಕೆಟ್​ ಕಿತ್ತ ಅಫಘಾನಿಸ್ತಾನ ಮೊದಲ ಬೌಲರ್​ ಎನಿಸಿಕೊಂಡರು. ಒಟ್ಟಾರೆಯಾಗಿ 4ನೇ ಸ್ಥಾನ ಪಡೆದರು. ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಪಂದ್ಯವೊಂದರಲ್ಲಿ ಕಡಿಮೆ ರನ್​ಗೆ ಅತಿ ಹೆಚ್ಚು ವಿಕೆಟ್​ ಕಿತ್ತ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಅಜಂತಾ ಮೆಂಡೀಸ್​ ಹೆಸರಿನಲ್ಲಿದೆ. ಮೆಂಡೀಸ್ 8 ರನ್​ಗೆ 6 ವಿಕೆಟ್​ ಕಿತ್ತಿದ್ದರು.

ಟಿ20 ವಿಶ್ವಕಪ್​ನಲ್ಲಿ ಅತಿ ಕಡಿಮೆ ರನ್​ಗೆ ಹೆಚ್ಚು ವಿಕೆಟ್​ ಪಡೆದ ಬೌಲರ್​ಗಳು


ಅಜಂತಾ ಮೆಂಡೀಸ್- 8 ರನ್​ಗೆ 6 ವಿಕೆಟ್​ (2012)

ರಂಗನಾ ಹೆರಾತ್- 3 ರನ್​ಗೆ 5 ವಿಕೆಟ್​(2014)

ಉಮ್ಮರ್ ಗುಲ್​- 6ನ್​ಗೆ 5 ವಿಕೆಟ್​ (2009) ​

ಫಜಲ್ಹಕ್ ಫಾರೂಕಿ- 9 ರನ್​ಗೆ 5 ವಿಕೆಟ್​ (2024)

ಸ್ಯಾಮ್​ ಕರನ್​-10 ರನ್​ಗೆ 5 ವಿಕೆಟ್​ (2022)


ಇದು ಮಾತ್ರವಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅಫಘಾನಿಸ್ತಾನ ಪರ ಅತಿ ಕಡಿಮೆ ರನ್​ಗೆ 5 ವಿಕೆಟ್​ ಕಿತ್ತ ಎರಡನೇ ಬೌಲರ್​ ಎನಿಸಿಕೊಂಡರು. 3 ರನ್​ಗೆ 5 ವಿಕೆಟ್​ ಕಿತ್ತ ರಶೀದ್​ ಖಾನ್​ ಅಗ್ರಸ್ಥಾನದಲ್ಲಿದ್ದಾರೆ. 11 ರನ್​ಗೆ 5 ವಿಕೆಟ್​ ಕಿತ್ತ ಕರೀಂ ಜನ್ನತ್​ ಮೂರನೇ ಸ್ಥಾನಿಯಾಗಿದ್ದಾರೆ.

​ಅಫಘಾನಿಸ್ತಾನ ಪರ ಟಿ20ಯಲ್ಲಿ ಕಡಿಮೆ ರನ್​ಗೆ 5 ವಿಕೆಟ್​ ಕಿತ್ತ ಬೌಲರ್​ಗಳು


ರಶೀದ್​ ಖಾನ್​- 3ಕ್ಕೆ 5 ವಿಕೆಟ್​(2017)

ಫಜಲ್ಹಕ್ ಫಾರೂಕಿ- 9ಕ್ಕೆ 5 ವಿಕೆಟ್​ (2024)

ಕರೀಂ ಜನ್ನತ್​- 11ಕ್ಕೆ 5 ವಿಕೆಟ್​ (2011)

ಸಮೀವುಲ್ಲಾ ಶಿನ್ವಾರಿ- 13ಕ್ಕೆ 5 ವಿಕೆಟ್​ (2013)

ಮುಜೀಬ್‌ ಉರ್‌ ರೆಹಮಾನ್‌- 20ಕ್ಕೆ 5 ವಿಕೆಟ್​ (2021)

ಇದನ್ನೂ ಓದಿ IND vs IRE T20 World Cup: ಐರ್ಲೆಂಡ್​ ಸವಾಲಿಗೆ ಟೀಮ್​ ಇಂಡಿಯಾ ಸಿದ್ಧ; ವಿಶ್ವಕಪ್​ ಸಾಧನೆ ಹೇಗಿದೆ?

ಪಂದ್ಯ ಗೆದ್ದ ಅಫ್ಘಾನ್​


ಇಲ್ಲಿನ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಅಫಘಾನಿಸ್ತಾನ ಫುಲ್​ ಜೋಶ್​ನಲ್ಲಿಯೇ ಬ್ಯಾಟಿಂಗ್​ ನಡೆಸಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 183 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಉಂಗಾಡ 58 ರನ್​ಗೆ ಸರ್ವಪತನ ಕಂಡಿತು. ಅಫಘಾನಿಸ್ತಾನ 125 ರನ್​ಗಳ ಬೃಹತ್​ ಗೆಲುವು ಸಾಧಿಸಿತು.

Continue Reading
Advertisement
Narendra Modi Election Live
ದೇಶ6 mins ago

Narendra Modi Election Live: ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಮೋದಿ ಭಾಷಣ; ಲೈವ್‌ ಇಲ್ಲಿ ವೀಕ್ಷಿಸಿ

Karnataka weather Forecast
ಮಳೆ11 mins ago

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Narendra Modi Election
ದೇಶ24 mins ago

Narendra Modi Election: 3ನೇ ಸಲ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ; ರಿಸಲ್ಟ್ ಬಳಿಕ ಮೋದಿ ಭಾವುಕ ಪೋಸ್ಟ್

AP Election Results 2024
ದೇಶ38 mins ago

AP Election Results 2024: ಆಂಧ್ರದಲ್ಲಿ ಮತ್ತೊಮ್ಮೆ ಟಿಡಿಪಿ ಮ್ಯಾಜಿಕ್‌; ಆಡಳಿತ ವಿರೋಧಿ ಅಲೆಗೆ ಕೊಚ್ಚಿಹೋದ ಜಗನ್ ಮೋಹನ್ ರೆಡ್ಡಿ

Venu Swamy Wrong Prediction on Jagan in AP Polls
ಟಾಲಿವುಡ್40 mins ago

Venu Swamy: ನನ್ನ ಹೇಳಿಕೆ ಸುಳ್ಳಾಯ್ತು, ಟಿಡಿಪಿ ಪಕ್ಷ ಗೆದ್ದಿತು; ಇನ್ನೆಂದೂ ಭವಿಷ್ಯ ನುಡಿಯಲಾರೆ ಎಂದ ಖ್ಯಾತ ಜ್ಯೋತಿಷಿ!

Karnataka Election Results 2024
ಕರ್ನಾಟಕ40 mins ago

Karnataka Election Results 2024: ಮೋದಿ ಜನಪ್ರಿಯತೆ ಕಡಿಮೆ ಆಗಿದೆ, ಕಾಂಗ್ರೆಸ್‌ ವೋಟ್‌ ಶೇರ್ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

Train services
ಬೆಂಗಳೂರು41 mins ago

Train services: ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

BJP Vote Share
ಪ್ರಮುಖ ಸುದ್ದಿ42 mins ago

BJP Vote Share : ಬಿಜೆಪಿ ಶೇಕಡಾವಾರು ಮತ ಏರಿದರೂ 36 ಸೀಟುಗಳು ನಷ್ಟ !

Election Results 2024 NDA 400
ಪ್ರಮುಖ ಸುದ್ದಿ42 mins ago

Election Results 2024: 400 ಸೀಟ್‌ ಗಳಿಸುವ ಎನ್‌ಡಿಎ ಕನಸು ನುಚ್ಚು ನೂರಾದದ್ದು ಹೇಗೆ?

Election Results 2024
ಕ್ರೀಡೆ1 hour ago

Election Results 2024: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ ಪುತ್ರನಿಗೆ ಭರ್ಜರಿ ಜಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ13 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌