IND vs PAK : ಪಾಕಿಸ್ತಾನದ ಆಟಗಾರನಿಗೆ ಕಣ್ಣೀರು ಹಾಕಿಸಿದ ಭಾರತ ತಂಡ! - Vistara News

ಕ್ರೀಡೆ

IND vs PAK : ಪಾಕಿಸ್ತಾನದ ಆಟಗಾರನಿಗೆ ಕಣ್ಣೀರು ಹಾಕಿಸಿದ ಭಾರತ ತಂಡ!

IND vs PAK: ಭಾರತ ತಂಡ ಪಾಕಿಸ್ತಾನದ ಆಟಗಾರರಿಗೆ ಕಣ್ಣೀರು ಹಾಕಿಸುವುದು ಇದೇ ಮೊದಲಲ್ಲ. ಎರಡು ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳ ಪಂದ್ಯಗಳು ಅತ್ಯಂತ ರೋಚಕವಾಗಿಯೇ ಕೊನೆಗೊಳ್ಳುತ್ತದೆ. ಈ ಹಿಂದಿನ ಆವೃತ್ತಿಯಲ್ಲೂ ಇದೇ ಮುಂದುವರಿದಿತ್ತು. ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅಜೇಯ 2 ರನ್ ಬಾರಿಸಿ ಭಾರತವನ್ನು ಗೆಲ್ಲಿಸಿದ್ದರು. ಆ ವೇಳೆಯೂ ಕಣ್ಣೀರು ಹಾಕುವುದು ಪಾಕಿಸ್ತಾನ ತಂಡದ ಆಟಗಾರರ ಸರದಿಯಾಯಿತು.

VISTARANEWS.COM


on

IND vs PAK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವ ಕಪ್​ನ (T20 World Cup) ಭಾರತ ಮತ್ತು ಪಾಕಿಸ್ತಾನ (IND vs PAK) ನಡುವಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 6 ರನ್​​ಗಳಿಂದ ಸೋಲಿಸಿದೆ. ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಮ್​ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಏರುಪೇರಿನ ಬ್ಯಾಟಿಂಗ್ ಬಳಿಕ ಮೆನ್ ಇನ್ ಬ್ಲೂ ತಂಡವು 18.3 ಓವರ್​ಗಳಲ್ಲಿ ಎಲ್ಲ ವಿಕೆಟ್​ ಕಳೆದುಕೊಂಡು 120 ರನ್ ಗಳ ಗುರಿಯನ್ನು ನೀಡಿತು. ಪ್ರತಿಯಾಗಿ ಆಡಿದ ಪಾಕಿಸ್ತಾನ 20 ಓವರ್​ಗಳಲ್ಲಿ 113 ರನ್​ಗಳಿಗೆ ಸೀಮಿತಗೊಂಡಿತು.

ಸೋಲಿನ ನಂತರ ಪಾಕಿಸ್ತಾನದ ಸ್ಟಾರ್ ಬೌಲರ್ ನಸೀಮ್ ಶಾ ಅಳುತ್ತಿರುವುದು ಕಂಡುಬಂತು. ಅವರು 8 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದಿದ್ದರು. ಅವರು ತಂಡಕ್ಕೆ 4 ಎಸೆತಗಳಲ್ಲಿ 14 ರನ್​ಗಳ ಅಗತ್ಯವಿದ್ದಾಗ 2 ಬೌಂಡರಿಗಳನ್ನು ಹೊಡೆದರು. ಅಸಾಧ್ಯವಾದ ಗುರಿಯನ್ನು ಬೆನ್ನಟ್ಟುವಲ್ಲಿ ಧೈರ್ಯ ತೋರಿದ ಅವರಿಗೆ ಗೆಲುವು ಸಿಗದೇ ಹೋದಾಗ ಅಳು ಬಂತು. ಅವರು ಮೊದಲ ಇನ್ನಿಂಗ್ಸ್​​ನಲ್ಲಿ ಶಾ ತಮ್ಮ ನಾಲ್ಕು ಓವರ್​ಗಳಲ್ಲಿ 5.25 ಎಕಾನಮಿಯೊಂದಿಗೆ ಮೂರು ವಿಕೆಟ್​ಗಳನ್ನು ಪಡೆದಿದ್ದರು. ಹೀಗಾಗಿ ಅವರಿಗೆ ನಿರಾಸೆ ಎದುರಾಯಿತು. ಭಾರತ ವಿರುದ್ಧ ಸೋಲುವುದು ಅವಮಾನ ಎಂದುಕೊಂಡ ಅವರು ಮೈದಾನದಿಂದ ಮರಳುವ ವೇಳೆ ಕಣ್ಣೀರು ಸುರಿಸಿದರು.

ಭಾರತ ತಂಡ ಪಾಕಿಸ್ತಾನದ ಆಟಗಾರರಿಗೆ ಕಣ್ಣೀರು ಹಾಕಿಸುವುದು ಇದೇ ಮೊದಲಲ್ಲ. ಎರಡು ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳ ಪಂದ್ಯಗಳು ಅತ್ಯಂತ ರೋಚಕವಾಗಿಯೇ ಕೊನೆಗೊಳ್ಳುತ್ತದೆ. ಈ ಹಿಂದಿನ ಆವೃತ್ತಿಯಲ್ಲೂ ಇದೇ ಆಗಿತ್ತು. ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅಜೇಯ 82 ರನ್ ಬಾರಿಸಿ ಭಾರತವನ್ನು ಗೆಲ್ಲಿಸಿದ್ದರು. ಆ ವೇಳೆಯೂ ಕಣ್ಣೀರು ಹಾಕುವುದು ಪಾಕಿಸ್ತಾನ ತಂಡದ ಆಟಗಾರರ ಸರದಿಯಾಗಿತ್ತು.

ಪಾಕಿಸ್ತಾನ ವಿರುದ್ಧ ಬುಮ್ರಾ ಭರ್ಜರಿ ಪ್ರದರ್ಶನ

ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ರಕ್ಷಕನಂತೆ ಆಡಿದರು. ಅವರು ಕೆಲವು ನಿರ್ಣಾಯಕ ವಿಕೆಟ್​ಗಳನ್ನು ಗಳಿಸಿದರು. ಇನ್ನಿಂಗ್ಸ್​ನ 19 ನೇ ಓವರ್​ನಲ್ಲಿ ಒಂದು ವಿಕೆಟ್ ಪಡೆದರು. ಅವರು ತಂಡಕ್ಕೆ ಅಗತ್ಯವಿದ್ದಾಗ ನಿಖರವಾಗಿ ಪ್ರದರ್ಶನ ನೀಡಿದರು ಮತ್ತು ಪಾಕಿಸ್ತಾನ ವಿರುದ್ಧದ ಸೋಲಿನಿಂದ ಭಾರತವನ್ನು ಕಾಪಾಡಿದರು.

ಇದನ್ನೂ ಓದಿ: IND vs PAK : ‘ಗೆಲುವಿಗೆ ಮೊದಲೇ ಸಂಭ್ರಮಿಸಬೇಡಿ, ವಿಶ್ವ ಕಪ್​ನಲ್ಲಿ ನಮ್ದೇ ಹವಾ’; ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಭಾರತದ ಅಭಿಮಾನಿಗಳು

120 ರನ್​ಗಳ ಗುರಿ ಬೆನ್ನತ್ತಿದ ಪಾಕ್​​ ಹೀನಾಯ ಸೋಲಿಗೆ ಒಳಗಾಯಿತು. ಇದೇ ವೇಳೆ ಮೆನ್ ಇನ್ ಬ್ಲೂ ನಿಜವಾದ ವಿಜೇತರಂತೆ ಆಡಿತು. ಟಿ 20 ಐ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸ್ಕೋರ್ ಅನ್ನು ರಕ್ಷಿಸಿತು. ಜಸ್ಪ್ರೀತ್ ಬುಮ್ರಾ ನಿಗದಿತ 4 ಓವರ್ಗಳಲ್ಲಿ 3.50 ಎಕಾನಮಿಯೊಂದಿಗೆ 3 ವಿಕೆಟ್ ಪಡೆದರು. ಆರಂಭಿಕ ವೇಗಿ ಭಾರತ ತಂಡವನ್ನು ನಿರಾಶಾದಾಯಕ ಸೋಲಿನಿಂದ ರಕ್ಷಿಸಿದರು.

ಮೆನ್ ಇನ್ ಗ್ರೀನ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಾರ್ಕರ್ ಕಿಂಗ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಪಾಕಿಸ್ತಾನ ಎರಡನೇ ಇನ್ನಿಂಗ್ಸ್ ನಲ್ಲಿಯೂ ಕಠಿಣ ಆರಂಭ ನೀಡಿತು. ಆದರೆ ಭಾರತೀಯ ಬೌಲರ್​ಗಳು ಅವಕಾಶ ನೀಡಲಿಲ್ಲ.

ಟಾಸ್ ಗೆದ್ದ ಪಾಕಿಸ್ತಾನ ನಾಯಕ ಅಝಾಮ್ ಭಾರತವನ್ನು ಮೊದಲು ಬ್ಯಾಟಿಂಗ್​ಗೆ ಇಳಿಸಿದರು. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕ್ರಮವಾಗಿ 13 ಮತ್ತು 4 ರನ್​ಗಳಿಗೆ ಔಟ್ ಆದರು. ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್ 39 ರನ್ಗಳ ಜೊತೆಯಾಟದ ಮೂಲಕ ಭಾರತದ ಇನ್ನಿಂಗ್ಸ್ ಅನ್ನು ಸ್ಥಿರಗೊಳಿಸಿದರು. ನಾಸಿಮ್​ ಶಾ ಮತ್ತು ಹ್ಯಾರಿಸ್ ರವೂಫ್ ತಲಾ ಮೂರು ವಿಕೆಟ್ ಕಬಳಿಸುವ ಮೂಲಕ ಮಧ್ಯಮ ಮತ್ತು ಕೆಳ ಕ್ರಮಾಂಕ ಕುಸಿಯುವಂತೆ ಮಾಡಿದರು. ಆದರೆ ಪಂತ್​ 42 ರನ್ ಬಾರಿಸಿ ಸಹಾಯ ಮಾಡಿದರು. ಪ್ರತಿಯಾಗಿ ಆಡಿದ ಪಾ ಕಿಸ್ತಾನವು ಏಳು ಬ್ಯಾಟರ್​ಗಳನ್ನು ಕಳೆದುಕೊಂಡು ತಮ್ಮ ಸ್ಕೋರ್ ಕಾರ್ಡ್​ಗೆ ಕೇವಲ 113 ರನ್​​ ಸೇರಿಸಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Virat Kohli : ಆ ಸಮಯದಲ್ಲಿ ನಾನು ಹೇಳಿದ್ದು ಸರಿಯಾಗಿಯೇ ಇತ್ತು. ನೀವು ಇಡೀ ಸಂದರ್ಭವನ್ನು ನೋಡಿದರೆ ನಿಮಗೆ ತಿಳಿಯುತ್ತದೆ. ನನ್ನ ಪ್ರಕಾರ, ಯಾರೇ ಆಡುತ್ತಿದ್ದರೂ ನಿಮ್ಮ ಉದ್ದೇಶ, ನಿಮ್ಮ ಆಟದ ವಿಧಾನವು ಯಾವಾಗಲೂ ಪಂದ್ಯವನ್ನು ಗೆಲ್ಲುವತ್ತ ಇರಬೇಕು,” ಎಂದು ಹಫೀಜ್ ಹೇಳಿದ್ದಾರೆ.

VISTARANEWS.COM


on

Virat kohli
Koo

ನವದೆಹಲಿ: ಭಾರತ ತಂಡದ ಸ್ಟಾರ್ ಆಟಗಾರ ಹಾಗೂ ವಿಶ್ವ ಕಂಡ ಶ್ರೇಷ್ಠ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು (Virat kohli) ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಸ್ವಾರ್ಥಿ ಎಂದು ಕರೆದಿದ್ದಾರೆ. ಅವರು ತಂಡದ ಬದಲಿಗೆ ಸ್ವಾರ್ಥಕ್ಕಾಗಿ ಆಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ಪಾಕ್​ನ ಮಾಜಿ ಬ್ಯಾಟರ್​ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಅಂದಹಾಗೆ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಉದ್ದೇಶವನ್ನು ಹಫೀಜ್ ಪ್ರಶ್ನಿಸುತ್ತಿರುವುದು ಇದೇ ಮೊದಲಲ್ಲ. 2023ರಲ್ಲಿ ಭಾರತದಲ್ಲಿ ನಡೆದ ಏಕ ದಿನ ವಿಶ್ವ ಕಪ್ ಟೂರ್ನಿಯಲ್ಲಿ​ ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ, ಹಫೀಜ್ ಕೊಹ್ಲಿಯನ್ನು ತಮ್ಮ ತಂಡದ ಬದಲು ಶತಕಕ್ಕಾಗಿ ಆಡುತ್ತಿಲ್ಲ ಎಂದು ಟೀಕಿಸಿದ್ದರು.

ಏಕದಿನ ಕ್ರಿಕೆಟ್​​ನಲ್ಲಿ 49ನೇ ಶತಕ ಬಾರಿಸಿದ ಬಳಿಕ ಕೊಹ್ಲಿ ನಿಧಾನಗತಿಯಲ್ಲಿ ಆಡಿದ್ದರು ಎಂದು ಅವರು ಆರೋಪಿಸಿದ್ದಾರೆ. “ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್​ನಲ್ಲಿ ನಾನು ಸ್ವಾರ್ಥದ ಭಾವನೆ ನೋಡಿದೆ. ಇದು ಈ ವಿಶ್ವಕಪ್​​ನಲ್ಲಿ ಮೂರನೇ ಬಾರಿಗೆ ಸಂಭವಿಸಿದೆ. 49ನೇ ಓವರ್​ನಲ್ಲಿ ಅವರು ಶತಕ ತಲುಪಲು ಒಂದೇ ಒಂದು ರನ್​ಗಾಗಿ ಓಡಿದರು. ಅವರು ತಂಡಕ್ಕೆ ಮೊದಲ ಆದ್ಯತೆ ನೀಡಲಿಲ್ಲ” ಎಂದು ಹಫೀಜ್ 2023 ರ ವಿಶ್ವಕಪ್ ಅನ್ನು ವರದಿ ಮಾಡುತ್ತಿದ್ದ ಪಾಕಿಸ್ತಾನದ ಟಿವಿ ಕಾರ್ಯಕ್ರಮದಲ್ಲಿ ಹೇಳಿದ್ದರು.

ವಿರಾಟ್ ಕೊಹ್ಲಿಯ ಉದ್ದೇಶವನ್ನು ಮತ್ತೆ ಪ್ರಶ್ನಿಸಿದ ಮೊಹಮ್ಮದ್ ಹಫೀಜ್

ಆಡಮ್ ಗಿಲ್​ಕ್ರಿಸ್ಟ್​​ ಮತ್ತು ಮೈಕೆಲ್ ವಾನ್ ಕೂಡ ಭಾಗಿಯಾಗಿದ್ದ ಯೂಟ್ಯೂಬ್ ಶೋ ಕ್ಲಬ್ ಪ್ರೈರಿ ಫೈನರ್​ ಸಂವಾದದ ಸಮಯದಲ್ಲಿ, ಮೊಹಮ್ಮದ್ ಹಫೀಜ್ ತಮ್ಮ ಮಾತುಗಳಿಗೆ ಬದ್ಧರಾಗಿದ್ದರು. ಆ ಸಮಯದಲ್ಲಿ ಕೊಹ್ಲಿಯನ್ನು ಸ್ವಾರ್ಥಿ ಎಂದು ಕರೆಯುವ ಹಿಂದಿನ ಕಾರಣವನ್ನು ವಿವರಿಸಿದ್ದರು.

ಆ ಸಮಯದಲ್ಲಿ ನಾನು ಹೇಳಿದ್ದು ಸರಿಯಾಗಿಯೇ ಇತ್ತು. ನೀವು ಇಡೀ ಸಂದರ್ಭವನ್ನು ನೋಡಿದರೆ ನಿಮಗೆ ತಿಳಿಯುತ್ತದೆ. ನನ್ನ ಪ್ರಕಾರ, ಯಾರೇ ಆಡುತ್ತಿದ್ದರೂ ನಿಮ್ಮ ಉದ್ದೇಶ, ನಿಮ್ಮ ಆಟದ ವಿಧಾನವು ಯಾವಾಗಲೂ ಪಂದ್ಯವನ್ನು ಗೆಲ್ಲುವತ್ತ ಇರಬೇಕು,” ಎಂದು ಹಫೀಜ್ ಹೇಳಿದ್ದಾರೆ.

90 ರನ್​ ಮಾಡಿದ ಬಳಿಕ ದೊಡ್ಡ ಶಾಟ್ ಆಡುವುದನ್ನು ನಿಲ್ಲಿಸಿದರೆ ನಾನು ಒಪ್ಪಿಕೊಳ್ಳುವುದಿಲ್ಲ. ನಾನು ಅದನ್ನು ಎಂದಿಗೂ ಒಪ್ಪುವುದಿಲ್ಲ. 95 ರನ್ ಗಳಿಸಿ ಯಾರಾದರೂ ತಮ್ಮ 100 ರನ್ ಗಳಿಸಲು ಐದು ಎಸೆತಗಳನ್ನು ತೆಗೆದುಕೊಳ್ಳಬಾರದು. ಮೂರು ಅಥವಾ ನಾಲ್ಕು ಎಸೆತಗಳಲ್ಲಿ ನಾನು ಹೊಡೆಯಬಹುದೇ ಎಂದು ಯೋಚಿಸದಿದ್ದರೆ ತಪ್ಪು ಎಂದು ಹೇಳಿದರು.

100 ರನ್ ಗಳಿಸಿದ ನಂತರ ನನ್ನ ಉದ್ದೇಶಗಳು ಬದಲಾದರೆ, ನಾನು 95 ರನ್ ಗಳಿಸಿದ್ದಾಗ ಅದೇ ಶಾಟ್ ಅನ್ನು ಏಕೆ ಆಡಲು ಸಾಧ್ಯವಿಲ್ಲ? ಏಕೆಂದರೆ ನನ್ನ ಪ್ರಕಾರ ನಿಮ್ಮ ಉದ್ದೇಶ ಯಾವಾಗಲೂ ಒಂದೇ ಆಗಿರಬೇಕು. ನಿಮ್ಮ ತಂಡಕ್ಕೆ ಮೌಲ್ಯವನ್ನು ವೃದ್ಧಿಸಲು ಮತ್ತು ಅವರನ್ನು ಗೆಲುವಿನ ಸ್ಥಾನಕ್ಕೆ ತರಲು ಸಾಧ್ಯವಿರುವ ಎಲ್ಲವನ್ನೂ ಮಾಡಿ ಎಂದು ಹಫೀಜ್ ಹೇಳಿದರು. ಈ ಮೂಲಕ ಅವರು ಕೊಹ್ಲಿಯನ್ನು ಮತ್ತೊಮ್ಮೆ ಟೀಕಿಸಿದ್ದಾರೆ.

ವೈಯಕ್ತಿಕ ಮೈಲಿಗಲ್ಲುಗಳ ನಿರೀಕ್ಷೆ ಬೇಡ: ಮೊಹಮ್ಮದ್ ಹಫೀಜ್

ಯಾವುದೇ ದೊಡ್ಡ ಶಾಟ್​ಗಳನ್ನು ಆಡದೆ ಕೊಹ್ಲಿ ತಮ್ಮ ಶತಕ ತಲುಪಲು ಸಾಕಷ್ಟು ಎಸೆತಗಳನ್ನು ತೆಗೆದುಕೊಂಡರು. ಅದಕ್ಕಾಗಿ ಟೀಕಿಸಿದ್ದಾರೆ ಎಂದು ಹಫೀಜ್ ತಮ್ಮ ನಿಲುವು ವಿವರಿಸಿದರು.

ಇದನ್ನೂ ಓದಿ: BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

ಆ ಪಂದ್ಯದಲ್ಲಿ ವಿರಾಟ್ ತಮ್ಮ 100 ರನ್ ಗಳಿಸಲು ಸಾಕಷ್ಟು ಎಸೆತಗಳನ್ನು ತೆಗೆದುಕೊಂಡರು. ಅವರು ದೊಡ್ಡ ಶಾಟ್​ಗಳನ್ನು ಆಡುತ್ತಿಲ್ಲ ಎಂದು ನಾನು ಭಾವಿಸಿದೆ. ನೀವು ಅವರ ಶತಕವನ್ನು ಮತ್ತೆ ನೋಡಿದರೆ ನಾನು ಏನು ಹೇಳುತ್ತಿದ್ದೇನೆಂದು ನಿಮಗೆ ಅರ್ಥವಾಗಬಹುದು,” ಎಂದು ಪಾಕಿಸ್ತಾನದ ಮಾಜಿ ಆಲ್ರೌಂಡರ್ ವಿವರಿಸಿದರು.

“ನನ್ನ ಪ್ರಕಾರ, ವೈಯಕ್ತಿಕ ಮೈಲಿಗಲ್ಲುಗಳು ಕ್ರಿಕೆಟ್​ನಿಂದ ದೂರವಿರಬೇಕು. ನಿಮ್ಮ ಅಭಿಮಾನಿಯಾಗಿ ನಾವು ಕಷ್ಟಪಟ್ಟು ಶತಕ ಬಾರಿಸುವುದನ್ನು ಇಷ್ಟಪಡುವುದಿಲ್ಲ ಎಂದು ಹಫೀಜ್ ಹೇಳಿದ್ದಾರೆ. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 90 ನೇ ರನ್ ನಂತರ ಶತಕವನ್ನು ತಲುಪಲು ಒಂಬತ್ತು ಎಸೆತಗಳನ್ನು ತೆಗೆದುಕೊಂಡರು. ಅವರು 93 ರನ್ ಗಳಿಸಿದ್ದಾಗ ಬೌಂಡರಿ ಬಾರಿಸಿದರು ಮತ್ತು 119 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದರು.

ಕೊಹ್ಲಿ 121 ಎಸೆತಗಳಲ್ಲಿ ಅಜೇಯ 101 ರನ್ ಗಳಿಸಿದ್ದರಿಂದ ಭಾರತ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತ್ತು. ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸುವ ಮೂಲಕ ದಕ್ಷಿಣ ಆಫ್ರಿಕಾ 83 ರನ್​ಗಳಿಗೆ ಆಲೌಟ್ ಆಯಿತು. ಈ ಪಂದ್ಯವನ್ನು ಭಾರತ 243 ರನ್ ಗಳಿಂದ ಗೆದ್ದುಕೊಂಡಿತು.

Continue Reading

ಕ್ರೀಡೆ

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

BCCI: ಬಾಂಗ್ಲಾದೇಶದ ವಿರುದ್ಧ ಎರಡು ಪಂದ್ಯಗಳ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯೊಂದಿಗೆ ಭಾರತದ ತವರಿನ ಕ್ರಿಕೆಟ್​ ಸರಣಿ ಪ್ರಾರಂಭವಾಗಲಿದೆ.

VISTARANEWS.COM


on

BCCI
Koo

ಮುಂಬಯಿ: ಟೀಮ್​ ಇಂಡಿಯಾದ(Team India) 2024-25ನೇ ಸಾಲಿನ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ಅಂತಾರಾಷ್ಟ್ರೀಯ ಹೋಮ್(India’s International Home Season) ಸೀಸನ್ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಪಂದ್ಯಗಳ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗಲಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಮತ್ತು ಮೂರು ಪಂದ್ಯಗಳ ಟಿ20 ಸರಣಿಯ ಬಳಿಕ ನ್ಯೂಜಿಲ್ಯಾಂಡ್​ ವಿರುದ್ಧ ಮೂರು ಟೆಸ್ಟ್​ ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ 2025ರಲ್ಲಿ ಇಂಗ್ಲೆಂಡ್​ ವಿರುದ್ಧ 5 ಟಿ20 ಪಂದ್ಯ ಮತ್ತು 3 ಏಕದಿನ ಸರಣಿಯನ್ನಾಡಲಿದೆ.

ಬಾಂಗ್ಲಾ ಸರಣಿಯ ವೇಳಾಪಟ್ಟಿ


ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ

ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರ

ಅಕ್ಟೋಬರ್​-6 ಮೊದಲ ಟಿ20. ತಾಣ: ಧರ್ಮಶಾಲಾ

ಅಕ್ಟೋಬರ್​-9 ದ್ವಿತೀಯ ಟಿ20. ತಾಣ: ದೆಹಲಿ

ಅಕ್ಟೋಬರ್​-12 ಮೂರನೇ ಟಿ20. ತಾಣ: ಹೈದರಾಬಾದ್​

ನ್ಯೂಜಿಲ್ಯಾಂಡ್​ ಸರಣಿಯ ವೇಳಾಪಟ್ಟಿ


ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು

ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ

ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಇದನ್ನೂ ಓದಿ Team India Coach: ಇಂದು ಟೀಮ್​ ಇಂಡಿಯಾದ ನೂತನ ಕೋಚ್‌ ಹೆಸರು ಘೋಷಣೆ!

ಇಂಗ್ಲೆಂಡ್​ ವಿರುದ್ಧದ ಸರಣಿಯ ವೇಳಾಪಟ್ಟಿ


ಜನವರಿ-22 ಮೊದಲ ಟಿ20. ತಾಣ:ಚೆನ್ನೈ

ಜನವರಿ-25 ದ್ವಿತೀಯ ಟಿ20. ತಾಣ: ಕೋಲ್ಕತ್ತಾ

ಜನವರಿ-28 ಮೂರನೇ ಟಿ20. ತಾಣ: ರಾಜ್​ಕೋಟ್​

ಜನವರಿ-31 ನಾಲ್ಕನೇ ಟಿ20. ತಾಣ:ಪುಣೆ

ಫೆಬ್ರವರಿ-2 ಐದನೇ ಟಿ20. ತಾಣ: ಮುಂಬಯಿ

ಫೆಬ್ರವರಿ-6 ಮೊದಲ ಏಕದಿನ. ತಾಣ:ನಾಗ್ಪುರ

ಫೆಬ್ರವರಿ-9 ದ್ವಿತೀಯ ಏಕದಿನ. ತಾಣ: ಕಟಕ್​

ಫೆಬ್ರವರಿ-12 ಮೂರನೇ ಏಕದಿನ. ತಾಣ: ಅಹಮದಾಬಾದ್​

Continue Reading

ಪ್ರಮುಖ ಸುದ್ದಿ

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Citroen C3 Aircross: ಸಿ3 ಏರ್ ಕ್ರಾಸ್ ಧೋನಿ ಆವೃತ್ತಿಯ ಹೊರಭಾಗದಲ್ಲಿ ಧೋನಿಯ ಹೆಸರು ಮತ್ತು ಅವರ ಜೆರ್ಸಿ ಸಂಖ್ಯೆ 7 ನೊಂದಿಗೆ ಹೊಸ ಡೆಕಾಲ್ ನೀಡಲಾಗಿದೆ. ಒಳಭಾಗದಲ್ಲಿ ಲಿಮಿಟೆಡ್ ರನ್​ ಮಾಡೆಲ್ ಆಗಿದ್ದು. ಹೊಸ ಬಣ್ಣ-ಸಂಯೋಜಿತ ಸೀಟ್ ಕವರ್ ಗಳು ಮತ್ತು ಕುಶನ್ ಪಿಲ್ಲೊ, ಸೀಟ್ ಬೆಲ್ಟ್ ಕುಶನ್ ಗಳು, ಹೆಚ್ಚು ಪ್ರಕಾಶಮಾನವಾಗಿರವು ಡೋರ್ ಸಿಲ್ ಪ್ಲೇಟ್ ಗಳು ಮತ್ತು ಮುಂಭಾಗದ ಡ್ಯಾಶ್ ಕ್ಯಾಮ್ ನೀಡಲಾಗಿದೆ.

VISTARANEWS.COM


on

Citroen C3 Aircross
Koo

ಬೆಂಗಳೂರು: ಸಿಟ್ರೋಯನ್​ ತನ್ನ ಮಧ್ಯಮ ಗಾತ್ರದ ಎಸ್​ಯುವಿ ಕಾರಾಗಿರುವ ಸಿ3 ಏರ್ ಕ್ರಾಸ್ (Citroen C3 Aircross) ಧೋನಿ ಎಡಿಷನ್ ಹೊಸ ವಿಶೇಷ ಆವೃತ್ತಿ ಹೊರತಂದಿದೆ. 11.82 ಲಕ್ಷ ರೂ.ಗಳ ಬೆಲೆ ಹೊಂದಿರುವ ಧೋನಿ ಎಡಿಷನ್ ಅನೇಕ ರೂಪಾಂತರಗಳು 5 ಮತ್ತು 7 ಸೀಟರ್​ ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದೆ. ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ. ಈ ವಿಶೇಷ ಆವೃತ್ತಿಯ ಮಾದರಿಯು 100 ಯುನಿಟ್ ಗಳಿಗೆ ಸೀಮಿತವಾಗಿದೆ ಎಂಬುದೇ ವಿಶೇಷ. ಈ ಎಡಿಷನ್​ನಲ್ಲಿ ಸಿ3 ಏರ್ ಕ್ರಾಸ್ ಗಿಂತ ಸಣ್ಣ ಪ್ರಮಾಣದ ಇಂಟೀರಿಯರ್​ ಬದಲಾವಣೆ ಮಾಡಲಾಗಿದೆ.

ಸಿ3 ಏರ್ ಕ್ರಾಸ್ ಧೋನಿ ಆವೃತ್ತಿಯ ಹೊರಭಾಗದಲ್ಲಿ ಧೋನಿಯ ಹೆಸರು ಮತ್ತು ಅವರ ಜೆರ್ಸಿ ಸಂಖ್ಯೆ 7 ನೊಂದಿಗೆ ಹೊಸ ಡೆಕಾಲ್ ನೀಡಲಾಗಿದೆ. ಒಳಭಾಗದಲ್ಲಿ ಲಿಮಿಟೆಡ್ ರನ್​ ಮಾಡೆಲ್ ಆಗಿದ್ದು. ಹೊಸ ಬಣ್ಣ-ಸಂಯೋಜಿತ ಸೀಟ್ ಕವರ್ ಗಳು ಮತ್ತು ಕುಶನ್ ಪಿಲ್ಲೊ, ಸೀಟ್ ಬೆಲ್ಟ್ ಕುಶನ್ ಗಳು, ಹೆಚ್ಚು ಪ್ರಕಾಶಮಾನವಾಗಿರವು ಡೋರ್ ಸಿಲ್ ಪ್ಲೇಟ್ ಗಳು ಮತ್ತು ಮುಂಭಾಗದ ಡ್ಯಾಶ್ ಕ್ಯಾಮ್ ನೀಡಲಾಗಿದೆ.

ಪ್ರತಿ ಧೋನಿ ಎಡಿಷನ್​ ಕಾರಿನ ಗ್ಲೋವ್ ಬಾಕ್ಸ್​ನಲ್ಲಿ ವಿಶೇಷ ‘ಧೋನಿ ಗೂಡಿ’ ಒಳಗೊಂಡಿರುತ್ತದೆ ಎಂದು ಸಿಟ್ರನ್ ಹೇಳುತ್ತಾರೆ. ಅಂದರೆ ಅದೃಷ್ಟಶಾಲಿ ವಿಜೇತರು ಸ್ವತಃ ಧೋನಿಯಿಂದ ಸಹಿ ಮಾಡಿದ ಗ್ಲವ್ಸ್​​ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Bajaj CNG Bike: ವಿಶ್ವದ ಮೊದಲ ಸಿಎನ್‌ಜಿ ಬೈಕ್‌; ಬಜಾಜ್‌ನಿಂದ ಜುಲೈ 5ರಂದು ಬಿಡುಗಡೆ

ಉಳಿದಂತೆ ಧೋನಿ ಆವೃತ್ತಿಯು ಸ್ಟ್ಯಾಂಡರ್ಡ್ ಸಿ 3 ಏರ್ ಕ್ರಾಸ್ ನಂತೆಯೇ ಇದೆ. ಇದು 110 ಬಿಹೆಚ್ ಪಿ, 1.2-ಲೀಟರ್ ಮೂರು ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿದೆ. ಇದು 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ.

ಸಚಿನ್​ ಹೆಸರಿನ ಫಿಯೆಟ್​ ಕಾರು ಬಂದಿತ್ತು

ಖ್ಯಾತ ಕ್ರಿಕೆಟಿಗರೊಬ್ಬರು ಕಾರು ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿರುವುದು ಇದೇ ಮೊದಲಲ್ಲ. 2002 ರಲ್ಲಿ ಫಿಯೆಟ್ ತಂಡವು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಕೈಜೋಡಿಸಿ ಪಾಲಿಯೋ ಎಸ್ 10 ಅನ್ನು ಹೊರತಂದಿತ್ತು. ಈ ಸೀಮಿತ ರನ್ ಮಾದರಿಯನ್ನು (ಕೇವಲ 500 ಮಾತ್ರ ಉತ್ಪಾದಿಸಲಾಗಿತ್ತು. ಪ್ರತಿಯೊಂದೂ ಅದರ ಸರಣಿ ಸಂಖ್ಯೆಯನ್ನು ಸೂಚಿಸುವ ಅಲ್ಯೂಮಿನಿಯಂ ಫಲಕವನ್ನು ಪಡೆದುಕೊಂಡಿತ್ತು ) ಹೊರಗೆ ಹಲವಾರು ಕಾಸ್ಮೆಟಿಕ್ ನವೀಕರಣಗಳೊಂದಿಗೆ ಬಂದಿತ್ತಯ. ವಿಶೇಷ ಬಣ್ಣ ಮತ್ತು ಸಚಿನ್ ಅವರ ಆಟೋಗ್ರಾಫ್ ನಿಂದ ಹಿಡಿದು ಹಿಂಭಾಗದ ಸ್ಪಾಯ್ಲರ್ ಮತ್ತು ಹೊಸ ಅಲಾಯ್ ಚಕ್ರಗಳವರೆಗೆ ವಿಶೇಷತೆ ಇತ್ತು.

Continue Reading

ಕ್ರೀಡೆ

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Manish Pandey: 2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ(Ashrita Shetty) ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು

VISTARANEWS.COM


on

Manish Pandey
Koo

ಬೆಂಗಳೂರು: ಟೀಮ್​ ಇಂಡಿಯಾದ, ಕರ್ನಾಟಕ ಮೂಲದ ಕ್ರಿಕೆಟಿಗ ಮನೀಷ್​ ಪಾಂಡೆ(Manish Pandey) ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾಗಿರುವುದು ದಂಪತಿಗಳ ಇನ್​ಸ್ಟಾಗ್ರಾಮ್​ ಖಾತೆಯ ಪೋಸ್ಟ್​.

2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ(Ashrita Shetty) ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು. ಇದೀಗ ಈ ಜೋಡಿ ಸದ್ಯದಲ್ಲೇ ದೂರವಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿವೆ.

ಹೌದು, ಮನೀಶ್ ಪಾಂಡೆ ಮತ್ತು ಆಶ್ರಿತಾ ಶೆಟ್ಟಿ ತಮ್ಮ ತಮ್ಮ ಇನ್ ಸ್ಟಾಗ್ರಾಂ ಖಾತೆಗಳಲ್ಲಿ ಅಪ್ಲೋಡ್ ಮಾಡಿದ್ದ ಮದುವೆ(Manish Pandey-Ashrita Shetty Wedding Pics) ಮತ್ತು ಅವರಿಬ್ಬರ ಫೋಟೋಗಳನ್ನು ಇಬ್ಬರೂ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಇವರ ದಾಂಪತ್ಯದಲ್ಲಿ ಏರುಪೇರಾಗಿದ್ದು, ಇಬ್ಬರೂ ಪರಸ್ಪರ ಬೇರೆಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಮನೀಶ್ ಪಾಂಡೆ ಅವರು ಐಪಿಎಲ್ 2024ರ ಟೂರ್ನಿಯಲ್ಲಿ ತಾವು ಪ್ರತಿನಿಧಿಸಿದ್ದ ಕೆಕೆಆರ್ ತಂಡದ ಮತ್ತು ಟ್ರೋಫಿ ಜೊತೆಗಿರುವ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಅವರ ಫೋಟೋಗಳ ಲಿಸ್ಟ್ ನಲ್ಲಿ ಪತ್ನಿ ಆಶ್ರಿತಾ ಜತೆಗಿರುವ ಫೋಟೋ ಮಾಯವಾಗಿದೆ. ಇದು ಅಭಿಮಾನಿಗಳ ಶಂಕೆಗೆ ಕಾರಣವಾಗಿದ್ದು ಇಬ್ಬರೂ ಪರಸ್ಪರ ಬೇರೆ ಬೇರೆಯಾಗುತ್ತಿದ್ದಾರೆಯೇ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ ಈ ಬಗ್ಗೆ ಈ ಜೋಡಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದುವರೆಗೂ 171 ಐಪಿಎಲ್​ ಪಂದ್ಯಗಳನ್ನಾಡಿದ ಅವರು ಒಂದು ಶತಕ ಹಾಗೂ 22 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 3850 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 114 ರನ್‌ ಗರಿಷ್ಠ ಮೊತ್ತವಾಗಿದೆ. ಈ ಬಾರಿ ಕೆಕೆಆರ್​ ಪರ ಕೇವಲ 1 ಪಂದ್ಯ ಆಡಿ 42 ರನ್​ ಬಾರಿಸಿದ್ದರು.

ಇದನ್ನೂ ಓದಿ Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

2015ರಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನಾಡುವ ಮೂಲಕ ಟೀಮ್​ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ಮನೀಷ್‌, ಇದುವರೆಗೂ 29 ಏಕದಿನ ಮತ್ತು 39 ಟಿ20 ಕ್ರಿಕೆಟ್​ ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ 566 ರನ್​ ಮತ್ತು ಟಿ20ಯಲ್ಲಿ 709 ರನ್​ ಬಾರಿಸಿದ್ದಾರೆ. ಏಕದಿನದಲ್ಲಿ ಒಂದು ಶತಕ ಮತ್ತು 2 ಅರ್ಧಶತಕ ಒಳಗೊಂಡಿದೆ. 2021ರಲ್ಲಿ ಶ್ರೀಲಂಕಾ ವಿರುದ್ಧ ಕೊಪನೆಯ ಬಾರಿ ಏಕದಿನ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಫಾರ್ಮ್​ ಕಳೆದುಕೊಂಡು ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್​ ಜತೆಗೆ ಚುರುಕಿನ ಫೀಲ್ಡಿಂಗ್​ಗೆ ಇವರು ಹೆಸರುವಾಸಿ.

Continue Reading
Advertisement
CM Siddaramaiah
ಪ್ರಮುಖ ಸುದ್ದಿ7 mins ago

CM Siddaramaiah: ಕರ್ನಾಟಕದಲ್ಲಿ ವಾಸಿಸುತ್ತಿರುವ ಪರ ಭಾಷಿಕರು ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

Tumkur DC Shubha Kalyan inaugurated the Janaspandana programme in Koratagere
ತುಮಕೂರು18 mins ago

Koratagere News: ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ; ಡಿಸಿ ಶುಭ‌ ಕಲ್ಯಾಣ್

Power cut There will be power outage in various parts of Bengaluru on June 22
ಕರ್ನಾಟಕ20 mins ago

Power Cut: ಬೆಂಗಳೂರಿನ ವಿವಿಧ ಕಡೆ ಜೂ. 22ರಂದು ವಿದ್ಯುತ್‌ ವ್ಯತ್ಯಯ

Arvind Kejriwal
ದೇಶ20 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್;‌ ಕೊನೆಗೂ ಸಿಕ್ಕಿತು ಜಾಮೀನು

Vijayanagara DC MS Diwakar meeting with officials of various departments
ವಿಜಯನಗರ23 mins ago

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Action will be taken to ensure that the Anganwadi workers do not suffer in any way says Minister Lakshmi Hebbalkar
ಬೆಂಗಳೂರು27 mins ago

Lakshmi Hebbalkar: ಲಕ್ಷ್ಮೀ ಹೆಬ್ಬಾಳಕರ್ ಭರವಸೆ; ಅಂಗನವಾಡಿ ನೌಕರರ ಮುಷ್ಕರ ವಾಪಸ್‌

Mecca Heatwave Death
ಪ್ರಮುಖ ಸುದ್ದಿ52 mins ago

Mecca Heatwave Death : ಮೆಕ್ಕಾದಲ್ಲಿ ನಿಧನ ಹೊಂದಿದ ಹಜ್​ ಯಾತ್ರಿಗಳಿಗೆ ಅಲ್ಲೇ ಸಂಸ್ಕಾರ; ಹಜ್​ ಕಮಿಟಿ ಮಾಹಿತಿ

CM Siddaramaiah
ಕರ್ನಾಟಕ1 hour ago

CM Siddaramaiah: ಪೆಟ್ರೋಲ್‌ ಬೆಲೆ ಏರಿಸಿದ್ದು ಗ್ಯಾರಂಟಿಗೋ? ಅಭಿವೃದ್ಧಿಗೋ? ಸಿದ್ದರಾಮಯ್ಯ ಹೀಗಂತಾರೆ!

Virat kohli
ಪ್ರಮುಖ ಸುದ್ದಿ1 hour ago

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Darshan Arrested
ಕರ್ನಾಟಕ2 hours ago

Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌