IND VS PAK | ಬಾಂಗ್ಲಾ ಎದುರು ಭಾರತಕ್ಕೆ ​ ಗೆಲುವು; ಅಂಪೈರ್​ ಎರಾಸ್ಮಸ್ ವಿರುದ್ಧ ಪಾಕ್​ ಆಕ್ರೋಶ - Vistara News

Latest

IND VS PAK | ಬಾಂಗ್ಲಾ ಎದುರು ಭಾರತಕ್ಕೆ ​ ಗೆಲುವು; ಅಂಪೈರ್​ ಎರಾಸ್ಮಸ್ ವಿರುದ್ಧ ಪಾಕ್​ ಆಕ್ರೋಶ

ಟಿ20 ವಿಶ್ವ ಕಪ್​ನ ಸೂಪರ್​-12 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ದ ಗೆಲುವು ಸಾಧಿಸಿದಕ್ಕೆ ಅಂಪೈರ್​ ಮಾರಿಸ್​ ಎರಾಸ್ಮಸ್​ ಮೇಲೆ ಪಾಕ್(IND VS PAK )​ ಕ್ರಿಕೆಟ್​ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್​: ಐಸಿಸಿ ಟಿ20 ವಿಶ್ವ ಕಪ್​ನ ಸೂಪರ್​-12 ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಟೀಮ್​ ಇಂಡಿಯಾ ರೋಚಕ 5 ರನ್​ ಅಂತರದ ಗೆಲುವು ಸಾಧಿಸಿದೆ. ಆದರೆ ಭಾರತದ ಗೆಲುವಿಗೆ ದಕ್ಷಿಣ ಆಫ್ರಿಕಾದ ಅಂಪೈರ್​ ಮಾರಿಸ್​ ಎರಾಸ್ಮಸ್​ ವಿರುದ್ಧ ಪಾಕಿಸ್ತಾನ(IND VS PAK ) ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರಾಟ್​ ಕೊಹ್ಲಿಗೆ ನೋಬಾಲ್​ ನೀಡಿದ್ದೇ ಪಾಕಿಸ್ತಾನ ಅಭಿಮಾನಿಗಳು ಮಾರಿಸ್​ ಎರಾಸ್ಮಸ್​ ಮೇಲೆ ಕೋಪ ಮಾಡಿಕೊಳ್ಳಲು ಕಾರಣವಾಗಿದೆ. ಕಳೆದ ಭಾರತ ಮತ್ತು ಪಾಕ್​ ಪಂದ್ಯದ ವೇಳೆಯೂ ವಿರಾಟ್​ ಕೊಹ್ಲಿಗೆ ನೋಬಾಲ್​ ನೀಡಿದ್ದು ಪಂದ್ಯದ ಗತಿಯನ್ನೇ ಬದಲಿಸಿತ್ತು. ಇದೀಗ ಬಾಂಗ್ಲಾ ವಿರುದ್ಧವು ವಿರಾಟ್​ ಕೊಹ್ಲಿಗೆ ನೋಬಾಲ್​ ನೀಡಿದ್ದೇ ಬಾಂಗ್ಲಾ ಸೋಲಿಗೆ ಪ್ರಮುಖ ಕಾರಣ ಎಂದು ಪಾಕ್​ ಅಭಿಮಾನಿಗಳು ಹೇಳಿದ್ದಾರೆ.

ಟ್ವಿಟರ್​ನಲ್ಲಿ ಈ ಕುರಿತು ಪಾಕಿಸ್ತಾನ ಅಭಿಮಾನಿಗಳು ಸರಣಿ ಟ್ವೀಟ್​ ಮಾಡಿದ್ದು, ಭಾರತ ತಂಡ ಸೆಮಿಫೈನಲ್‌ಗೇರಬೇಕೆಂದೇ ಮಾರಿಸ್​ ಎರಾಸ್ಮಸ್​ ನೋಬಾಲ್​ ನೀಡಿದ್ದಾರೆ. ಪಾಕಿಸ್ತಾನ ತಂಡಕ್ಕೆ ಮಾಡಿದ ಮೋಸ ಇದಾಗಿದೆ. ಒಂದೊಮ್ಮೆ ಭಾರತ ಸೋತಿದ್ದರೆ ಪಾಕಿಸ್ತಾನ ಸೆಮಿಫೈನಲ್​ ಆಸೆ ಜೀವಂತವಿರುತ್ತಿತ್ತು. ಇದೀಗ ಭಾರತ ತಂಡ ಗೆದ್ದ ಕಾರಣ ಪಾಕಿಸ್ತಾನ ಬಹುತೇಕ ಈ ಬಾರಿಯ ಟಿ20 ವಿಶ್ವ ಕಪ್​ನಿಂದ ಹೊರಬಿದ್ದಂತಾಗಿದೆ. ಈ ಕೋಪಕ್ಕೆ ಮಾರಿಸ್​ ಎರಾಸ್ಮಸ್ ಮೇಲೆ ಪಾಕಿಸ್ತಾನಿಗಳು ಗೂಬೆ ಕೂರಿಸಿದ್ದಾರೆ.

ಇದನ್ನೂ ಓದಿ | Virat Kohli | ಕಿಂಗ್ ಕೊಹ್ಲಿ ಈಗ ಟಿ20 ವಿಶ್ವ ಕಪ್ ಟಾನ್ ರನ್ ಸರದಾರ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Deep Fakes Report: ಲೋಕಸಭಾ ಚುನಾವಣೆ, ಇಂಡಿಯನ್ ಪ್ರೀಮಿಯರ್ ಲೀಗ್ ನಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವವರು ಹೆಚ್ಚಾಗಿ ಡೀಪ್‌ಫೇಕ್‌ಗಳಿಗೆ ಒಳಗಾಗಿದ್ದಾರೆ. ಇದರ ನೈಜ್ಯ ಅಂಕಿ ಅಂಶಗಳು ಮತ್ತಷ್ಟು ಹೆಚ್ಚಿರಬಹುದು ಎಂದು ಕಂಪ್ಯೂಟರ್ ಭದ್ರತಾ ಕಂಪೆನಿ ಮ್ಯಾಕ್‌ಅಫೀ ತಿಳಿಸಿದೆ.

VISTARANEWS.COM


on

By

deepfake
Koo

ನವದೆಹಲಿ: ಭಾರತೀಯರಲ್ಲಿ (indian’s) ಶೇ. 75ರಷ್ಟು ಮಂದಿ ಡೀಪ್‌ಫೇಕ್‌ (Deep Fakes) ಪಿಡುಗಿಗೆ ಒಳಗಾಗಿದ್ದು, ಶೇಕಡಾ 22ರಷ್ಟು ಮಂದಿಗೆ ಮಾತ್ರ ಇದು ಗಮನಕ್ಕೆ ಬಂದಿದೆ. ತಮ್ಮ ಡೀಪ್ ಫೇಕ್ ಮಾಡಿರುವ ವಿಡಿಯೋ, ಚಿತ್ರ ಅಥವಾ ರೆಕಾರ್ಡಿಂಗ್ ಅನ್ನು ಕೆಲವರು ಮಾತ್ರ ನೋಡಿ ಅದರ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಕಂಪ್ಯೂಟರ್ ಭದ್ರತಾ ಕಂಪನಿ (Computer security company) ಮ್ಯಾಕ್‌ಅಫೀಯ (McAfee) ಸಂಶೋಧನೆಗಳು ತಿಳಿಸಿದೆ.

ಲೋಕಸಭಾ ಚುನಾವಣೆ (lok sabha election), ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವವರು ಹೆಚ್ಚಾಗಿ ಡೀಪ್‌ಫೇಕ್‌ಗಳಿಗೆ ಒಳಗಾಗಿದ್ದಾರೆ. ಇವರ ನೈಜ್ಯ ಪ್ರಮಾಣ ಮತ್ತಷ್ಟು ಹೆಚ್ಚಾಗಿರಬಹುದು. ಅನೇಕ ಭಾರತೀಯರಿಗೆ ನಿಜ ಮತ್ತು ನಕಲಿ ಏನೆಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಗಳ ಬಗ್ಗೆ ಹೆಚ್ಚಿನವರಿಗೆ ಅರಿವಿಲ್ಲ. ಹೀಗಾಗಿ ಈ ರೀತಿ ಆಗಿದೆ ಎನ್ನಲಾಗಿದೆ.

ಶೇ. 22ರಷ್ಟು ಮಾತ್ರ ಬಹಿರಂಗ

ಕೃತಕ ಬುದ್ಧಿಮತ್ತೆಯ ಪ್ರಭಾವ ಮತ್ತು ಗ್ರಾಹಕರ ದೈನಂದಿನ ಜೀವನದಲ್ಲಿ ಡೀಪ್‌ಫೇಕ್‌ಗಳ ಹೆಚ್ಚಳವನ್ನು ಕಂಡುಹಿಡಿಯಲು 2024 ರ ಆರಂಭದಲ್ಲಿ ಸಂಶೋಧನೆಯನ್ನು ನಡೆಸಲಾಯಿತು. ಈ ಸಮೀಕ್ಷೆಯ ಸಮಯದಲ್ಲಿ, ಸುಮಾರು 1ರಲ್ಲಿ 4 ಭಾರತೀಯರು ಅಂದರೆ ಸರಿಸುಮಾರು ಶೇ. 22ರಷ್ಟು ಮಂದಿ ಇತ್ತೀಚೆಗೆ ನಕಲಿ ಎಂದು ಕಂಡುಹಿಡಿದ ವಿಡಿಯೋಗಳನ್ನು ನೋಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?


ವರ್ಷದಿಂದ ಹೆಚ್ಚಾಗಿದೆ ಕಾಳಜಿ

ಒಂದು ವರ್ಷದಲ್ಲಿ 10ರಲ್ಲಿ 8 ಮಂದಿ, ಅಂದರೆ ಸರಿ ಸುಮಾರು ಶೇ. 80ರಷ್ಟು ಮಂದಿ ಇದ್ದಕ್ಕಿಂತ ಡೀಪ್‌ಫೇಕ್‌ಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ಅರ್ಧಕ್ಕಿಂತ ಹೆಚ್ಚು ಜನರಲ್ಲಿ ಶೇ. 64ರಷ್ಟು ಮಂದಿಗೆ ಕೃತಕ ಬುದ್ಧಿಮತ್ತೆಯ ಆನ್‌ಲೈನ್ ಸ್ಕ್ಯಾಮ್‌ಗಳನ್ನು ಗುರುತಿಸಲು ಕಷ್ಟಕರವಾಗಿದೆ ಎಂದು ಹೇಳುತ್ತಾರೆ. ಆದರೆ ಸುಮಾರು ಶೇ. 30ರಷ್ಟು ಮಂದಿ ಕೃತಕ ಬುದ್ಧಿಮತ್ತೆಯೊಂದಿಗೆ ರಚಿಸಲಾದ ಧ್ವನಿ ಮೇಲ್ ಅಥವಾ ಧ್ವನಿ ಟಿಪ್ಪಣಿಯನ್ನು ಹಂಚಿಕೊಂಡರೆ ಮಾತ್ರ ನಕಲಿ ಎಂದು ಗುರುತಿಸಬಹುದು ಎಂದು ಹೇಳಿದ್ದಾರೆ.


ಶೇ. 75ರಷ್ಟು ಮಂದಿಗೆ ಗೊತ್ತಾಗಿದೆ

ಮ್ಯಾಕ್‌ಅಫೀಯ ಪ್ರಕಾರ ಕಳೆದ 12 ತಿಂಗಳುಗಳಲ್ಲಿ ಶೇ. 75ರಷ್ಟು ಮಂದಿ ತಾವು ಡೀಪ್‌ಫೇಕ್ ವಿಷಯವನ್ನು ನೋಡಿದ್ದೇವೆ ಎಂದು ಹೇಳುತ್ತಾರೆ. ಶೇ. 38ರಷ್ಟು ಮಂದಿ ಡೀಪ್‌ಫೇಕ್ ಹಗರಣವನ್ನು ಎದುರಿಸಿದ್ದಾರೆ.

ಶೇ. 57ರಷ್ಟು ಸೆಲೆಬ್ರಿಟಿಗಳು

ಡೀಪ್‌ಫೇಕ್ ವಂಚನೆಗೆ ಒಳಗಾದವರಲ್ಲಿ 57 ಪ್ರತಿಶತದಷ್ಟು ಸೆಲೆಬ್ರಿಟಿಗಳಾಗಿದ್ದಾರೆ. ವಿಡಿಯೋ ಚಿತ್ರ ಅಥವಾ ಆಡಿಯೋವನ್ನು ನೋಡಿ ಅದು ನಿಜವೆಂದು ಭಾವಿಸಿ ಶೇ. 31 ರಷ್ಟು ಮಂದಿ ಹಣವನ್ನು ಕಳೆದುಕೊಂಡಿದ್ದಾರೆ. ಶೇ. 40ರಷ್ಟು ಮಂದಿ ಜನರು ತಮ್ಮ ಧ್ವನಿಯನ್ನು ಕಾಪಿ ಮಾಡಲಾಗಿದೆ. ವೈಯಕ್ತಿಕ ಮಾಹಿತಿ ಅಥವಾ ಹಣದ ಲೆಕ್ಕವನ್ನು ಬಹಿರಂಗಪಡಿಸಲು ತಮಗೆ ತಿಳಿದಿರುವ ಯಾರನ್ನಾದರೂ ದಾರಿತಪ್ಪಿಸಲು ಬಳಸುತ್ತಾರೆ ಎಂದು ಕಂಡುಹಿಡಿಯಲಾಗಿದೆ. ಶೇ. 39ರಷ್ಟು ಜನರು ಕರೆ, ಧ್ವನಿಮೇಲ್ ಅಥವಾ ಧ್ವನಿ ಟಿಪ್ಪಣಿಯನ್ನು ಸ್ವೀಕರಿಸಿದ್ದಾರೆಂದು ವರದಿ ಮಾಡಿದ್ದಾರೆ.

ಡೀಪ್‌ಫೇಕ್‌ ಅಪಾಯ

ಡೀಪ್‌ಫೇಕ್‌ ನಿಂದಾಗುವ ಅಪಾಯಗಳ ಬಗ್ಗೆ ಕೇಳಿದಾಗ ಶೇ. 55ರಷ್ಟು ಮಂದಿ ಸೈಬರ್‌ ವಂಚನೆಗೆ ಒಳಗಾಗುತ್ತಾರೆ ಎಂದು ಹೇಳಿದರು. ಶೇ. 52ರಷ್ಟು ಮಂದಿ ನಕಲಿ ಅಶ್ಲೀಲ ವಿಷಯವನ್ನು ರಚಿಸುತ್ತಿರುವುದಾಗಿ ಹೇಳಿದರು. ಶೇ. 37 ರಷ್ಟು ಮಂದಿ ಮಾಧ್ಯಮದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ದುರ್ಬಲಗೊಳಿಸಿರುವುದಾಗಿ ತಿಳಿಸಿದ್ದಾರೆ. ಶೇ.31ರಷ್ಟು ಮಂದಿ ಚುನಾವಣೆಯ ಮೇಲೆ ಪ್ರಭಾವ ಬೀರುವುದಾಗಿ ಹೇಳಿದ್ದು, ಶೇ.27ರಷ್ಟು ಮಂದಿ ಐತಿಹಾಸಿಕ ಸತ್ಯಗಳನ್ನು ತಿರುಚುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಪರಿಸರ

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

Chocolate industry: ಪಶ್ಚಿಮ ಆಫ್ರಿಕಾದ ಕೋಕೋ ಮರಗಳಲ್ಲಿ ವೈರಸ್ ಹರಡುತ್ತಿದ್ದು, ಇದು ಚಾಕೊಲೇಟ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೀಲಿಬಗ್‌ ವೈರಸ್ ಗಳಿಂದ ಚಿಗುರು ಊದಿಕೊಂಡಿದ್ದು, ಒಂದರಿಂದ ಇನ್ನೊಂದಕ್ಕೆ ವೇಗವಾಗಿ ಹರಡುತ್ತಿದೆ.

VISTARANEWS.COM


on

By

Chocolate industry
Koo

ನವದೆಹಲಿ: ಚಾಕೊಲೇಟ್‌ನಲ್ಲಿ ಬಳಸುವ ಪ್ರಮುಖ ಸಾಮಗ್ರಿಯಾದ ಕೋಕೋ (cacao) ಮರಗಳಲ್ಲಿ ವೈರಸ್ (virus) ಕಾಣಿಸಿಕೊಂಡಿದ್ದು, ಇದು ಚಾಕೊಲೇಟ್ ಉತ್ಪಾದನೆ ಮೇಲೆ ಬಹುದೊಡ್ದ ಹೊಡೆತ ಬೀಳುವ ಸಾಧ್ಯತೆ ಇದೆ. ಇದರಿಂದ ಚಾಕೊಲೇಟ್‌ಗಳು ಮತ್ತಷ್ಟು ದುಬಾರಿಯಾಗಬಹುದು.

ಪ್ರಸ್ತುತ ಪಶ್ಚಿಮ ಆಫ್ರಿಕಾದ (West Africa) ಕೋಕೋ ಮರಗಳಲ್ಲಿ ವೈರಸ್ ಹರಡುತ್ತಿದ್ದು, ಇದು ಚಾಕೊಲೇಟ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೀಲಿಬಗ್‌ (mealybugs) ವೈರಸ್ ಗಳಿಂದ ಚಿಗುರು ಊದಿಕೊಂಡಿದ್ದು, ಒಂದರಿಂದ ಇನ್ನೊಂದಕ್ಕೆ ವೇಗವಾಗಿ ಹರಡುತ್ತಿದೆ. ಇದು ಬಿಸಿ ವಾತಾವರಣದಲ್ಲಿ ಹೆಚ್ಚು ತೀವ್ರವಾಗಿ ಬೆಳೆಯುತ್ತಿದೆ.

ಈ ವೈರಸ್ ಭೂಮಿಯ ಮೇಲಿರುವ ಪರಿಸರ ವಿನಾಶಕಾರಿ ಜೀವಿ ಎನ್ನಲಾಗುತ್ತದೆ. ಇದು ಘಾನಾದಲ್ಲಿ 50,000 ಹೆಕ್ಟೇರ್ ಕೋಕೋ ಫಾರ್ಮ್‌ಗಳನ್ನು ನಾಶಪಡಿಸಿದೆ. ಇದು ವಿಶ್ವದ ಎರಡನೇ ಅತಿದೊಡ್ಡ ಚಾಕೊಲೇಟ್ ಉತ್ಪಾದಕ ದೇಶ. ಇದು ಜಾಗತಿಕ ಚಾಕೊಲೇಟ್ ಪೂರೈಕೆಯ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಯುಎಸ್ ಮತ್ತು ಘಾನಾದ ವಿಶ್ವವಿದ್ಯಾನಿಲಯಗಳ ವಿಜ್ಞಾನಿಗಳು ವೈರಸ್ ಹರಡುವುದನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರಪಂಚದ ಚಾಕೊಲೇಟ್‌ಗಳನ್ನು ಉಳಿಸಲು ಹೊಸ ಮಾರ್ಗವನ್ನು ಈಗಾಗಲೇ ಕಂಡುಹಿಡಿದಿದ್ದರೂ ಇದು ಚಾಕೊಲೇಟ್ ನ ಜಾಗತಿಕ ಪೂರೈಕೆ ಸರಪಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ.


ಚಾಕೊಲೇಟ್ ಪೂರೈಕೆ ಮೇಲೆ ಪರಿಣಾಮ

ಪ್ರಪಂಚದ ಶೇ. 50ರಷ್ಟು ಚಾಕೊಲೇಟ್‌ಗಳು ಘಾನಾ ಮತ್ತು ಐವರಿ ಕೋಸ್ಟ್‌ನಿಂದ ಬರುತ್ತವೆ. ಈ ಪ್ರದೇಶಗಳಲ್ಲಿನ ಕೋಕೋ ಮರಗಳ ಚಿಗುರು ವೈರಸ್ ನಿಂದ ನಾಶವಾಗಿವೆ. ಕೊಲಂಬಿಯಾದಲ್ಲಿ ರೈತರು ಒಡೆದು ಸಿಪ್ಪೆ ಸುಲಿದಿದ್ದರೂ ಕೋಕೋ ಮರಗಳ ಎಲೆ, ಮೊಗ್ಗು ಮತ್ತು ಹೂವುಗಳನ್ನು ತಿನ್ನುವ ಮೀಲಿಬಗ್ಸ್ ಎಂದು ಕರೆಯಲ್ಪಡುವ ಸಣ್ಣ ಕೀಟಗಳಿಂದ ವೈರಸ್ ಹರಡುತ್ತದೆ. ಘಾನಾವು 254 ಮಿಲಿಯನ್ ಮರಗಳನ್ನು ಹೊಂದಿದೆ ಮತ್ತು ಐವರಿ ಕೋಸ್ಟ್‌ನಲ್ಲಿ ಶೇ. 20ರಷ್ಟು ಬೆಳೆ ಸೋಂಕಿಗೆ ಒಳಗಾಗಿದೆ.

ಚಾಕೊಲೇಟ್‌ ಹೇಗೆ ತಯಾರಿಸಲಾಗುತ್ತದೆ?

ಉಷ್ಣವಲಯದ ಹವಾಮಾನದಲ್ಲಿ ಬೆಳೆಯುವ ಕೋಕೋ ಬೀನ್ಸ್‌ನಿಂದ ಚಾಕೊಲೇಟ್‌ಗಳನ್ನು ತಯಾರಿಸಲಾಗುತ್ತದೆ. ಅವುಗಳನ್ನು ಹುದುಗಿಸಿ, ಒಣಗಿಸಿ ಮತ್ತು ಹುರಿದು ಮಾಡಿದ ಪುಡಿಯನ್ನು ಹಾಲು ಮತ್ತು ಸಕ್ಕರೆಯೊಂದಿಗೆ ಬೆರೆಸಿ ಚಾಕೊಲೇಟ್ ತಯಾರಿಸಲಾಗುತ್ತದೆ.

2022ರಲ್ಲಿ ಐವರಿ ಕೋಸ್ಟ್ 2.2 ಮಿಲಿಯನ್ ಟನ್ ಕೋಕೋವನ್ನು ಉತ್ಪಾದಿಸಿತು ಮತ್ತು ಘಾನಾ 1.1 ಮಿಲಿಯನ್ ಉತ್ಪಾದಿಸಿತು. ಪ್ರಪಂಚದ ಅತಿದೊಡ್ಡ ಉತ್ಪಾದಕ ಇಂಡೋನೇಷ್ಯಾವು 2022 ರಲ್ಲಿ 6,67,000 ಟನ್‌ಗಳನ್ನು ಉತ್ಪಾದಿಸಿದೆ.

ಬೆಚ್ಚಗಿನ ತಾಪಮಾನವು ಮೀಲಿಬಗ್ ಗೆ ಹೆಚ್ಚು ಪೂರಕವಾಗಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ. ಆರ್ಲಿಂಗ್ಟನ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾನಿಲಯದ ತಜ್ಞರ ಪ್ರಕಾರ, ಈ ವೈರಸ್ ಪ್ರಪಂಚದ ಚಾಕೊಲೇಟ್ ಪೂರೈಕೆಗೆ ಅಪಾಯವನ್ನುಂಟು ಮಾಡುತ್ತದೆ.

ವೈರಸ್ ಅನ್ನು ನಿಲ್ಲಿಸಬಹುದೇ?

ಕೀಟನಾಶಕಗಳಿಂದ ಮೀಲಿಬಗ್‌ಗಳ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಸೋಂಕಿತ ಮರಗಳನ್ನು ಕಡಿಯುವುದು ಮತ್ತು ನಿರೋಧಕ ಮರಗಳನ್ನು ನೆಡುವುದು ಸುಲಭ ಮತ್ತು ಅಗ್ಗದ ಮಾರ್ಗವಾಗಿದೆ. ರೈತರು ಮರಗಳಿಗೆ ಲಸಿಕೆಯನ್ನೂ ನೀಡಬಹುದು. ಆದರೆ ಇದು ದುಬಾರಿಯಾಗಿರುವುದರಿಂದ ಇದು ಮರಗಳಿಂದ ಉತ್ಪತ್ತಿಯಾಗುವ ಕೋಕೋ ಮೇಲೆ ಪರಿಣಾಮವನ್ನು ಬೀರುತ್ತದೆ.

ದೂರದೂರ ಮರಗಳನ್ನು ನೆಡುವುದರಿಂದ ವೈರಸ್ ಹರಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ ಸಂಶೋಧಕರು. ಆದರೆ ಇದು ಇನ್ನೂ ಪ್ರಯೋಗ ಹಂತದಲ್ಲಿದೆ. ಇದು ರೈತರಿಗೆ ತಮ್ಮ ಬೆಳೆಯನ್ನು ರಕ್ಷಿಸಲು ಸಹಾಯ ಮಾಡುವ ಸಾಧ್ಯತೆಯಿದೆ.


ಮೀಲಿಬಗ್‌ನಿಂದ ಮಾತ್ರ ತೊಂದರೆಯೇ?

ಈ ಹಿಂದೆ ಕಪ್ಪು ಪಾಡ್ ರೋಗವು ಚಾಕೊಲೇಟ್ ಉತ್ಪನ್ನಗಳ ಮೇಲೆ ಪರಿಣಾಮ ಬೀರಿತ್ತು. ಈ ರೋಗವು ಕೋಕೋ ಬೀಜಗಳನ್ನು ಕಪ್ಪು ಅಥವಾ ಕಂದು ಬಣ್ಣಕ್ಕೆ ತಿರುಗಿಸುತ್ತದೆ. ಇದು 2022 ರಲ್ಲಿ ವಿಶ್ವದ ವಾರ್ಷಿಕ ಕೋಕೋ ಬೆಳೆಗಳಲ್ಲಿ ಶೇ. 30ರಷ್ಟನ್ನು ನಾಶಪಡಿಸಿತು. ಈ ಪ್ರದೇಶದಲ್ಲಿ ಉಂಟಾದ ಭಾರೀ ಮಳೆಯಿಂದಾಗಿ ರೋಗವನ್ನು ಮತ್ತಷ್ಟು ಉಲ್ಬಣವಾಗಿತ್ತು. ಏಕೆಂದರೆ ಸೋಂಕು ತೇವಾಂಶವುಳ್ಳ ಸ್ಥಿತಿಯಲ್ಲಿ ಹೆಚ್ಚು ವೇಗವಾಗಿ ಬೆಳೆಯುತ್ತದೆ ಮತ್ತು ಹರಡುತ್ತದೆ.

Continue Reading

ವೈರಲ್ ನ್ಯೂಸ್

Viral Video: ಮಕ್ಕಳ ಮುಗ್ಧ ನಗುವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಶಿಕ್ಷಕಿ ಏನು ಮಾಡಿದ್ದಾರೆ ನೋಡಿ…

Viral Video: ಮಕ್ಕಳ ಮುಗ್ದ ನಗು ಯಾರಿಗೆ ಇಷ್ಟವಾಗಲ್ಲ ಹೇಳಿ. ಆ ನಗುವನ್ನು ಮೊಬೈಲ್ ಕೆಮರಾದಲ್ಲಿ ಸೆರೆ ಹಿಡಿಯಲು ತಮಿಳುನಾಡಿನ ಶಿಕ್ಷಕಿಯೊಬ್ಬರು ಮಾಡಿದ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಹಾಗಿದ್ದರೆ ಆ ಟೀಚರ್ ಏನು ಮಾಡಿದ್ದಾರೆ ಎಂಬುದನ್ನು ನೀವು ನೋಡಿ.

VISTARANEWS.COM


on

By

Viral Video
Koo

ಸೇಲಂ: ಮಕ್ಕಳ ಮುಗ್ಧ ನಗುವನ್ನು ಸೆರೆ ಹಿಡಿಯಲು ಶಿಕ್ಷಕಿಯೊಬ್ಬರು (Teacher’s) ಮಾಡಿದ ಪ್ರಯತ್ನದ ವಿಡಿಯೊವೊಂದು (Viral Video) ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್ ಆಗಿದೆ. ಶಿಕ್ಷಕಿಯ ಕಾರ್ಯಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ಕೇಳಿ ಬಂದಿದೆ. ತಮಿಳುನಾಡಿನ (Tamilnadu) ಮಾಂಟೆಸ್ಸರಿ ಶಾಲೆಯ (Montessori school) ಶಿಕ್ಷಕಿಯೊಬ್ಬರು ತಮ್ಮ ತರಗತಿಯ ಮಕ್ಕಳ ವಿಡಿಯೊವನ್ನು ವಿಶಿಷ್ಟ ರೀತಿಯಲ್ಲಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸರಳ ಮತ್ತು ಸ್ಪರ್ಶದ ಶೀರ್ಷಿಕೆಯೊಂದಿಗೆ ಹಂಚಿಕೊಂಡಿರುವ ವಿಡಿಯೊದಲ್ಲಿ “ಈ ಮುದ್ದಾದ ಸ್ಮೈಲ್‌ಗಳಿಗಾಗಿ ಮಾತ್ರ” ಎಂದು ಹೇಳಲಾಗಿದೆ. ವಿಡಿಯೊದಲ್ಲಿ ಸಣ್ಣ ಮೆಟ್ಟಿಲುಗಳ ಮೇಲೆ ಪುಟ್ಟಪುಟ್ಟ ಮಕ್ಕಳು ಮತ್ತು ಶಿಕ್ಷಕರು ಕುಳಿತುಕೊಂಡಿರುತ್ತಾರೆ. ಈ ಅಮೂಲ್ಯ ಕ್ಷಣವನ್ನು ಸೆರೆಹಿಡಿಯಲು ಮತ್ತೊಬ್ಬ ಶಿಕ್ಷಕಿ ಬಳಸಿದ ಚತುರ ವಿಧಾನವೇ ಈ ವಿಡಿಯೊವನ್ನು ಮತ್ತಷ್ಟು ವಿಶೇಷಗೊಳಿಸಿದೆ.

ಸಾಂಪ್ರದಾಯಿಕ ವಿಧಾನದ ಬದಲಿಗೆ ಶಿಕ್ಷಕಿ ನೆಲದ ಮೇಲೆ ಮಲಗುತ್ತಾರೆ. ಇನ್ನೊಬ್ಬ ಶಿಕ್ಷಕಿ ಅವರನ್ನು ಎಳೆಯುತ್ತಾರೆ. ಇದನ್ನು ನೋಡಿ ಮಕ್ಕಳು ಸಂತೋಷದಿಂದ ನಗುತ್ತಾರೆ. ಮಕ್ಕಳ ಮುಗ್ದ ನಗುವನ್ನು ಸೆರೆ ಹಿಡಿಯಲು ಶಿಕ್ಷಕಿ ಸ್ವತಃ ಕ್ಯಾಮೆರಾ ಮೆನ್‌ನ ಕೆಲಸ ಮಾಡಿರುವುದು ಭಾರೀ ಶ್ಲಾಘನೆಗೆ ಕಾರಣವಾಗಿದೆ.

ಇದನ್ನೂ ಓದಿ: Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

ಕೆಲವು ದಿನಗಳ ಹಿಂದೆ ಈ ವಿಡಿಯೊವನ್ನು ಪೋಸ್ಟ್ ಮಾಡಿದ್ದು, ಅಂದಿನಿಂದ ಸುಮಾರು 19.2 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಸಾಕಷ್ಟು ಮಂದಿ ಪ್ರೀತಿ ತುಂಬಿದ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾರೆ.

ನೆಟ್ಟಿಗರೊಬ್ಬರು, ಶಿಕ್ಷಕರಿಗೆ ಹ್ಯಾಟ್ಸ್ ಆಫ್. ಮಕ್ಕಳ ನಗುವಿಗಾಗಿ ಮಾಡಿರುವ ಒಂದು ಸೆಕೆಂಡಿನ ಈ ವಿಡಿಯೊ ತುಂಬಾ ಸುಂದರವಾಗಿದೆ. ಶಿಕ್ಷಕರನ್ನು ನೋಡಿದ ಮಕ್ಕಳ ನಗು ಈ ವಿಡಿಯೊವನ್ನು ಮತ್ತಷ್ಟು ಸುಂದರಗೊಳಿಸಿದೆ ಎಂದು ಹೇಳಿದ್ದಾರೆ.


ಶೂಟಿಂಗ್ ಮಾಡುತ್ತಿರುವ ಮಹಿಳೆ ನಿಜವಾಗಿಯೂ ಶಿಕ್ಷಕಿಯೇ? ಹೌದಾದರೆ ನೀವೊಬ್ಬ ಸ್ವೀಟ್ ಟೀಚರ್ ಎಂದು ಮತ್ತೊಬ್ಬರು ಹೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಶಿಕ್ಷಕಿ, ಹೌದು, ನಾನೇ. ತುಂಬಾ ಧನ್ಯವಾದಗಳು ಎಂದು ಹೇಳಿದ್ದಾರೆ.
ಮತ್ತೊಬ್ಬರು ಕಾಮೆಂಟ್ ಮಾಡಿ, ನಾನು ಅಂತಹ ಶಿಕ್ಷಕರನ್ನು ಎಲ್ಲಿ ಪಡೆಯಬಹುದು ಎಂದು ಹೇಳಿದ್ದಾರೆ. ವರ್ಷದ ಅತ್ಯುತ್ತಮ ಶಿಕ್ಷಕ ಎಂದು ಇನ್ನೊಬ್ಬರು ಹೇಳಿದ್ದಾರೆ.

ಶಿಕ್ಷಕಿ ತಮಿಳುನಾಡಿನ ಸೇಲಂ ಮೂಲದವರಾಗಿದ್ದು, ವೃಕ್ಷ ಮಾಂಟೆಸ್ಸರಿ ಇಂಟರ್‌ನ್ಯಾಶನಲ್‌ನಲ್ಲಿ ಬೋಧಿಸುತ್ತಿದ್ದಾರೆ. ಅವರು ನಿಯಮಿತವಾಗಿ ತಮ್ಮ ವೈಯಕ್ತಿಕ ಇನ್ ಸ್ಟಾ ಗ್ರಾಮ್ ಮತ್ತು ಫೇಸ್ ಬುಕ್ ಪುಟಗಳಲ್ಲಿ ವಿವಿಧ ಮೆಹೆಂದಿ ವಿನ್ಯಾಸಗಳನ್ನು ಚಿತ್ರಿಸುತ್ತಿರುವ ವಿಡಿಯೊಗಳನ್ನು ಹಂಚಿಕೊಳ್ಳುತ್ತಾರೆ.

Continue Reading

Lok Sabha Election 2024

Voting Tips: ಮತದಾನಕ್ಕೆ ಮೊದಲು ಏನು ಮಾಡಬೇಕು, ಏನು ಮಾಡಬಾರದು?

Voting Tips: ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 89 ಕ್ಷೇತ್ರಗಳಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ- 2024ರ ಎರಡನೇ ಹಂತದ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಮತಗಟ್ಟೆ ಆವರಣದಲ್ಲಿ ಮತದಾರರು ಮಾಡಬಹುದಾದ, ಮಾಡಬಾರದ ಕೆಲಸಗಳ ಪಟ್ಟಿ ಇಲ್ಲಿದೆ. ಮತ ಚಲಾವಣೆಯ ನಿಯಮಗಳನ್ನು ತಪ್ಪದೇ ಪಾಲಿಸಿ.

VISTARANEWS.COM


on

By

Lok Sabha Election-2024
Koo

ಬೆಂಗಳೂರು: ಲೋಕಸಭಾ (Voting Tips) ಚುನಾವಣೆ 2024ರ (Lok Sabha Election 2024) ಎರಡನೇ ಹಂತದ (second phase) ಮತದಾನ (voting) ಕರ್ನಾಟಕದಲ್ಲಿ (karnataka) ಮೊದಲ ಹಂತದ ಮತದಾನ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಲಿದೆ. ಮತದಾನ ಪ್ರಕ್ರಿಯೆಗೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು, ಮತದಾರರೂ ತಮ್ಮ ಹಕ್ಕು ಚಲಾವಣೆಗೆ ಕಾತರರಾಗಿದ್ದಾರೆ.

ಎರಡನೇ ಹಂತದ ಚುನಾವಣಾ ಪ್ರಚಾರವು ಏಪ್ರಿಲ್ 24ರಂದು ಕೊನೆಯಾಗಿದ್ದು, ಮತದಾನವು ಶುಕ್ರವಾರ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 89 ಕ್ಷೇತ್ರಗಳಲ್ಲಿ ನಡೆಯಲಿದೆ.

ಎರಡನೇ ಹಂತದಲ್ಲಿ ಕೇರಳದ 20 ಸ್ಥಾನಗಳು, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದ 13 ಸ್ಥಾನಗಳು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8 ಸ್ಥಾನಗಳು, ಮಧ್ಯಪ್ರದೇಶದ ಏಳು ಸ್ಥಾನಗಳು, ಅಸ್ಸಾಂನಲ್ಲಿ ತಲಾ 5 ಸ್ಥಾನಗಳಿಗೆ ಮತದಾನ ನಡೆಯಲಿದೆ. ಬಿಹಾರ, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಮೂರು ಸ್ಥಾನಗಳು ಮತ್ತು ಮಣಿಪುರ, ತ್ರಿಪುರಾ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಂದು ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯಲಿದೆ.

ಇದನ್ನೂ ಓದಿ: Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

ಮತದಾನ ಮಾಡಲಿರುವ ಮತದಾರರಿಗೆ ಕೆಲವೊಂದು ಜವಾಬ್ದಾರಿಗಳಿವೆ. ಮತದಾನದ ವೇಳೆ ಮತದಾರ ಮಾಡಬೇಕಾದ ಮತ್ತು ಮಾಡಬಾರದ ನಿಯಮಗಳು ಇಂತಿವೆ.


ಮತದಾನದಕ್ಕೂ ಮೊದಲು ಹೀಗೆ ಮಾಡಿ…

1. ಮತದಾನಕ್ಕೆ ಹೋಗುವ ಮುನ್ನ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಮತ್ತು ಮತಗಟ್ಟೆಯನ್ನು ದೃಢೀಕರಿಸಿ.

2. ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಇದನ್ನು ಮಾಡಬಹುದು.

3. ನಿರ್ಣಾಯಕ ಲೋಕಸಭಾ ಚುನಾವಣೆ 2024ಕ್ಕೆ ನಿಮ್ಮ ಮತವನ್ನು ಚಲಾಯಿಸುವ ಮೊದಲು ನಿಮ್ಮ ಆಯಾ ಮತಗಟ್ಟೆಯಲ್ಲಿ ಮತದಾನದ ಸಮಯವನ್ನು ಪರಿಶೀಲಿಸಿ.

4. ಮತದಾರರು ತಮ್ಮ ಗುರುತು ಚೀಟಿ, ಆಧಾರ್, ಡ್ರೈವಿಂಗ್ ಲೈಸೆನ್ಸ್‌ನಂತಹ ಇತರ ಹೆಚ್ಚುವರಿ ಗುರುತಿನ ಚೀಟಿಗಳನ್ನು ತೆಗೆದುಕೊಂಡು ಹೋಗಿ.

5. ಮತ ಚಲಾಯಿಸಲು ಹೊರಡುವ ಮೊದಲು ಸರಿಯಾದ ಆಯ್ಕೆ ಮಾಡಲು ನಿಮ್ಮ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಬಗ್ಗೆ ತಿಳಿದುಕೊಳ್ಳಿ.

6. ನಿಮ್ಮ ಮತವನ್ನು ಚಲಾಯಿಸಿದ ಅನಂತರ EVMಗೆ ಲಿಂಕ್ ಮಾಡಲಾದ VVPAT ಯಂತ್ರದ ಔಟ್‌ಪುಟ್ ಅನ್ನು ಪರಿಶೀಲಿಸಿ. ಯಾವುದೇ ಸಂಶಯ ಕಂಡು ಬಂದರೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿ.

ಮತ ಹಾಕಲು ಹೋದಾಗ ಹೀಗೆ ಮಾಡಬೇಡಿ:

1. ಮತಗಟ್ಟೆಯಲ್ಲಿ ಮೊಬೈಲ್ ಬಳಸಬೇಡಿ.

2. ನಿಮ್ಮ ಮತವನ್ನು ಚಲಾಯಿಸುವಾಗ ಚಿತ್ರ ಅಥವಾ ಸೆಲ್ಫಿಗಳನ್ನು ತೆಗೆದುಕೊಳ್ಳಬೇಡಿ.

3. ಮತ್ತೊಬ್ಬ ಮತದಾರರ ಹೆಸರಿನಲ್ಲಿ ಹೋಗಿ ಮತ ಹಾಕುವುದು ಗಂಭೀರ ಅಪರಾಧವಾಗಿದ್ದು, ಬೇರೆಯವರ ಹೆಸರಿನಲ್ಲಿ ಮತ ಚಲಾಯಿಸಬಾರದು.

4. ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯ ಚಿಹ್ನೆಯನ್ನು ಉತ್ತೇಜಿಸುವ ಯಾವುದನ್ನೂ ಮತಗಟ್ಟೆಗೆ ತರಬೇಡಿ.
ಮತದಾನ ಮಾಡುವಾಗ ಒಂದಕ್ಕಿಂತ ಹೆಚ್ಚು ಬಟನ್‌ಗಳನ್ನು ಒತ್ತಬೇಡಿ.

5. ಒಬ್ಬ ಮತದಾರರಾಗಿ ನೀವು ಯಾರ ಪರವಾಗಿ ಮತ ಹಾಕಿದ್ದೀರಿ ಎಂಬುದನ್ನು ಒಬ್ಬ ಅಭ್ಯರ್ಥಿ/ ಪಕ್ಷವನ್ನು ಬಹಿರಂಗಪಡಿಸಬಾರದು.

Continue Reading
Advertisement
lok sabha election
ಪ್ರಮುಖ ಸುದ್ದಿ11 mins ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ28 mins ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

IPL 2024
ಪ್ರಮುಖ ಸುದ್ದಿ30 mins ago

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

Bike Accident
ಕರ್ನಾಟಕ1 hour ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 20241 hour ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ2 hours ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ2 hours ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಕರ್ನಾಟಕ2 hours ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Mohammad Shami
ಪ್ರಮುಖ ಸುದ್ದಿ3 hours ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ3 hours ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ12 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202413 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202413 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ19 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌