IND vs SL 2nd ODI: ಇಂದು ಭಾರತ-ಲಂಕಾ ದ್ವಿತೀಯ ಏಕದಿನ ಮುಖಾಮುಖಿ; ಪಂದ್ಯಕ್ಕೆ ಮಳೆ ಭೀತಿ - Vistara News

ಕ್ರೀಡೆ

IND vs SL 2nd ODI: ಇಂದು ಭಾರತ-ಲಂಕಾ ದ್ವಿತೀಯ ಏಕದಿನ ಮುಖಾಮುಖಿ; ಪಂದ್ಯಕ್ಕೆ ಮಳೆ ಭೀತಿ

IND vs SL 2nd ODI: ಕೊಲಂಬೊದಲ್ಲಿ(Colombo weather report) ಶನಿವಾರ ಸಂಜೆಯ ವೇಳೆ ಭಾರೀ ಮಳೆಯಾಗಿತ್ತು. ಹೀಗಾಗಿ ಭಾನುವಾರವೂ ಶೇ. 89 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

VISTARANEWS.COM


on

IND vs SL 2nd ODI:
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲಂಬೊ: ಅಪಾಯಕಾರಿ ಶ್ರೀಲಂಕಾ(Sri Lanka vs India) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನಂಚಿನವರೆಗೂ ಬಂದು ಪಂದ್ಯವನ್ನು ಟೈ ಮಾಡಿಕೊಂಡು ಸೋಲಿನಿಂದ ಪಾರಾದ ಭಾರತ ತಂಡ ಇದೀಗ ಮತ್ತೊಂದು ಪಂದ್ಯವನ್ನಾಡಲು ಸಜ್ಜಾಗಿದೆ. ಇಂದು ನಡೆಯುವ ದ್ವಿತೀಯ ಏಕದಿನಲ್ಲಿIND vs SL 2nd ODI) ಕಣಕ್ಕಿಳಿಯಲಿದೆ. ಆದರೆ ಪಂದ್ಯಕ್ಕೆ ಮಳೆ ಭೀತಿಯೂ ಎದುರಾಗಿದೆ.

ಹವಾಮಾನ ವರದಿ


ಕೊಲಂಬೊದಲ್ಲಿ(Colombo weather report) ಶನಿವಾರ ಸಂಜೆಯ ವೇಳೆ ಭಾರೀ ಮಳೆಯಾಗಿತ್ತು. ಹೀಗಾಗಿ ಭಾನುವಾರವೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಹಗಲು ರಾತ್ರಿಯ ಪಂದ್ಯವಾದ ಕಾರಣ ದ್ವಿತೀಯ ಇನಿಂಗ್ಸ್​ವೇಳೆ ಮಳೆಯಾಗುವ ಸಾಧ್ಯತೆ ಅಧಿಕ. ಶೇ. 89 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸ್ಪಿನ್​ ಟ್ರ್ಯಾಕ್​ನಲ್ಲಿ ಪರದಾಡಿದ ಭಾರತೀಯ ಬ್ಯಾಟರ್​ಗಳು ಈ ಪಂದ್ಯದಲ್ಲಿ ಮೈ ಚಳಿ ಬಿಟ್ಟು ಬ್ಯಾಟ್​ ಬೀಸಬೇಕಿದೆ. ನಾಯಕ ರೋಹಿತ್​ ಶರ್ಮ ಹೊರತುಪಡಿಸಿ ತಂಡದಲ್ಲಿರುವ ಉಳಿದ ಸ್ಟಾರ್​ ಆಟಗಾರರು ಕಳೆದ ಪಂದ್ಯದಲ್ಲಿ ಕ್ರಿಕೆಟ್ ಜೋಶ್​ ತೋರುವಲ್ಲಿ ವಿಫಲರಾಗಿದ್ದರು. ಶ್ರೀಲಂಕಾ ತಂಡದಲ್ಲಿ ಅನುಭವಿ ಆಟಗಾರರು ಇರದೇ ಇದ್ದರೂ ಕೂಡ ಯುವ ಆಟಗಾರರು ಯಾರು ಊಹಿಸದ ರೀತಿಯಲ್ಲಿ ಪ್ರದರ್ಶನ ತೋರುವ ಮೂಲಕ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಇವರ ಸವಾಲನ್ನು ಭಾರತ ಕಡೆಗಣಿಸಬಾರದು.

ಆರ್ ಪ್ರೇಮದಾಸ ಕ್ರೀಡಾಂಗಣದ ಪಿಚ್ ವರದಿ

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಈ ಸ್ಥಳದಲ್ಲಿ ಮೊದಲು ಬ್ಯಾಟಿಂಗ್ ಮಾಡುವುದು ಹೆಚ್ಚು ಅನುಕೂಲಕರ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡಗಳು ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ ಹೆಚ್ಚಿನದನ್ನು ನಿರೀಕ್ಷಿಸಲಾಗಿದೆ. ಪಂದ್ಯ ಮುಂದುವರಿದಂತೆ ಬ್ಯಾಟಿಂಗ್ ಕಠಿಣವಾಗುತ್ತದೆ. ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ಒಲವು ತೋರುತ್ತಾನೆ.

ಸಂಭಾವ್ಯ ತಂಡಗಳು


ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಜನಿತ್ ಲಿಯಾನಗೆ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಅಸಿತ ಫೆರ್ನಾಂಡೋ, ಮೊಹಮ್ಮದ್ ಶಿರಾಜ್.

ಇದನ್ನೂ ಓದಿ IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೀ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಂದ್ಯದ ವಿವರಗಳು

  • ಭಾರತ-ಶ್ರೀಲಂಕಾ 2ನೇ ಏಕದಿನ ಪಂದ್ಯ
  • ಸ್ಥಳ: ಆರ್ ಪ್ರೇಮದಾಸ ಕ್ರೀಡಾಂಗಣ, ಕೊಲಂಬೊ
  • ದಿನಾಂಕ ಮತ್ತು ಸಮಯ ಭಾನುವಾರ, ಆಗಸ್ಟ್ 4, ಮಧ್ಯಾಹ್ನ 2:30

ಮುಖಾಮುಖಿ ದಾಖಲೆಗಳು

  • ಪಂದ್ಯಗಳು- 169
  • ಶ್ರೀಲಂಕಾ ಗೆಲುವು- 57
  • ಭಾರತ ಗೆಲುವು- 99
  • ಸಮಬಲ 02
  • ಫಲಿತಾಂಶ ಇಲ್ಲ 11
  • ಮೊದಲ ಪಂದ್ಯ: ಜೂನ್ 16, 1979
  • ಇತ್ತೀಚಿನ ಪಂದ್ಯ- ಆಗಸ್ಟ್ 2, 2024

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SL: ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನ ಲಂಕಾ ತಂಡಕ್ಕೆ ಆಘಾತ; ಸರಣಿಯಿಂದ ಹೊರಬಿದ್ದ ಸ್ಟಾರ್​ ಆಟಗಾರ

IND vs SL:ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಸರಂಗ ಭಾರತ ವಿರುದ್ಧದ ಇನ್ನುಳಿದ 2 ಏಕದಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್​ ಮಂಡಳಿ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

VISTARANEWS.COM


on

IND vs SL
Koo

ಕೊಲಂಬೊ: ಈಗಾಗಲೇ ಹಲವು ಸ್ಟಾರ್​ ಆಟಗಾರರನ್ನು ಗಾಯದಿಂದಾಗಿ ಕಳೆದುಕೊಂಡಿರುವ ಶ್ರೀಲಂಕಾ(IND vs SL) ತಂಡಕ್ಕೆ ಮತ್ತೆ ಗಾಯದ ಮೇಲೆ ಬರೆ ಬಿದ್ದಿದೆ. ಅನುಭವಿ ಹಾಗೂ ಸ್ಟಾರ್​ ಸ್ಪಿನ್ ಆಲ್​ರೌಂಡರ್​ ವನಿಂದು ಹಸರಂಗ(wanindu hasaranga) ಗಾಯದಿಂದಾಗಿ ಇಂದು ನಡೆಯುವ ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನವೇ ಸರಣಿಯಿಂದ ಹೊರಬಿದ್ದಿದ್ದಾರೆ.

ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಸರಂಗ ಭಾರತ ವಿರುದ್ಧದ ಇನ್ನುಳಿದ 2 ಏಕದಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್​ ಮಂಡಳಿ ತನ್ನ ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಮೊದಲ ಪಂದ್ಯದಲ್ಲಿ ಹಸರಂಗ 24 ರನ್​ ಮತ್ತು 3 ವಿಕೆಟ್​ ಕಿತ್ತು ಪಂದ್ಯವನ್ನು ಸೋಲಿನ ಭೀತಿಯಿಂದ ಪಾರು ಮಾಡಿದವರಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಇದೀಗ ಗಾಯದಿಂದ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಇದಕ್ಕೂ ಮುನ್ನ ದಿಲ್ಶಾನ್ ಮಧುಶಂಕ, ಮಥೀಶ ಪತಿರಾಣ, ದುಷ್ಮಂತ ಚಮೀರ, ನುವಾನ್ ತುಷಾರ ಗಾಯದಿಂದಾಗಿ ಸರಣಿಗೆ ಅಲಭ್ಯರಾಗಿದ್ದರು. ಹಸರಂಗ ಸೇರಿ ಒಟ್ಟು 5 ಮಂದಿ ಸರಣಿಯಿಂದ ಹೊರಗುಳಿದರು.

ಪಂದ್ಯಕ್ಕೆ ಮಳೆ ಭೀತಿ


ಇಂದು ನಡೆಯುವ ಭಾರತ ಮತ್ತು ಶ್ರೀಲಂಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಭಾರೀ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ(Colombo weather report) ಶನಿವಾರ ಸಂಜೆಯ ವೇಳೆ ಭಾರೀ ಮಳೆಯಾಗಿತ್ತು. ಹೀಗಾಗಿ ಭಾನುವಾರವೂ ಶೇ. 89 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಗಲು ರಾತ್ರಿಯ ಪಂದ್ಯವಾದ ಕಾರಣ ದ್ವಿತೀಯ ಇನಿಂಗ್ಸ್​ ವೇಳೆ ಮಳೆಯಾಗುವ ಸಾಧ್ಯತೆ ಅಧಿಕ.

ಪಿಚ್ ರಿಪೋರ್ಟ್

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಹೆಚ್ಚು ಬಾರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ಮಾಡಿದ ತಂಡ ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಹೀಗಾಗಿ ಎರಡನೇ ಏಕದಿನ ಪಂದ್ಯದಲ್ಲಿಯೂ ಸ್ಪಿನ್​ ಬೌಲರ್​ಗಳು ಪ್ರಾಬಲ್ಯ ತೋರುವ ನಿರೀಕ್ಷೆ ಇದೆ. ಪಂದ್ಯ ಸಾಗಿದಂತೆ ಈ ಪಿಚ್​ ಅತ್ಯಂತ ತಿರುವ ಪಡೆದುಕೊಳ್ಳಲಿದೆ. ಬ್ಯಾಟಿಂಗ್​ ನಡೆಸುವುದೇ ಒಂದು ಸವಾಲಾಗಿರಲಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಳ್ಳಬಹುದು.

ಶ್ರೀಲಂಕಾ: ಅವಿಷ್ಕ ಫೆರ್ನಾಂಡೋ, ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಜೆಫ್ರಿ ವಾಂಡರ್ಸೆ, ಅಕಿಲ ದನಂಜಯ, ಮೊಹಮ್ಮದ್ ಶಿರಾಜ್/ಮಹೀಶ್ ತೀಕ್ಷಣ, ಅಸಿತ ಫೆರ್ನಾಂಡೋ.

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೀ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

Continue Reading

ಕ್ರೀಡೆ

Paris Olympics: ವಿಕ್ಟರ್‌ ವಿರುದ್ಧ ಲಕ್ಷ್ಯ ಸೇನ್​ಗೆ ಒಲಿಯಲಿ ಗ್ರೇಟ್​ ವಿಕ್ಟರಿ; ಇಂದು ಸೆಮಿ ಫೈನಲ್​

Paris Olympics: ಜಾಗತಿಕ ಮಟ್ಟದ ಸ್ಪರ್ಧೆಗಳಲ್ಲಿ ಈಗಾಗಲೇ ಹಲವು ಪದಕ ಗೆದ್ದಿರುವ, 2 ಬಾರಿಯ ಚಾಂಪಿಯನ್​ ಹಾಗೂ ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿರುವ ವಿಕ್ಟರ್‌ ಅಕ್ಸೆಲ್ಸೆನ್‌ ಮತ್ತು ಲಕ್ಷ್ಯ ಸೇನ್‌ ಇದುವರೆಗೂ ಒಟ್ಟು 8 ಬಾರಿ ವಿವಿಧ ಟೂರ್ನಿಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ಪೈಕಿ ಗರಿಷ್ಠ 7 ಪಂದ್ಯಗಳನ್ನು ಅಕ್ಸೆಲ್ಸೆನ್‌ ಗೆದ್ದು ಬೀಗಿದ್ದಾರೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಇದೇ ಮೊದಲ ಸಲ ಒಲಿಂಪಿಕ್ಸ್‌ನಲ್ಲಿ(Paris Olympics) ಸ್ಪರ್ಧಿಸುತ್ತಿರುವ ಲಕ್ಷ್ಯ ಸೇನ್‌(Lakshya Sen) ಅವರು ಇಂದು ನಡೆಯುವ ಪುರುಷರ ವಿಭಾಗದ ಬ್ಯಾಡ್ಮಿಂಟನ್‌ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಬ್ಯಾಡ್ಮಿಂಟನ್‌ನಲ್ಲಿ ಭಾರತದ ಕೊನೆಯ ಭರವಸೆಯಾಗಿ ಉಳಿದಿರುವ ಅವರು ಇಂದು ಖ್ಯಾತ ಡೆನ್ಮಾರ್ಕ್‌ನ ವಿಕ್ಟರ್‌ ಅಕ್ಸೆಲ್ಸೆನ್‌ ವಿರುದ್ಧ ಹೋರಾಟ ನಡೆಸಲಿದ್ದಾರೆ.

ಒಲಿಂಪಿಕ್ ಕೂಟದ ಬ್ಯಾಡ್ಮಿಂಟನ್‌ನಲ್ಲಿ ಪುರುಷರ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ ಭಾರತದ ಮೊದಲ ಶಟ್ಲರ್​ ಎನಿಸಿಕೊಂಡಿರುವ ಲಕ್ಷ್ಯ ಸೇನ್ ಅವರು ಈ ಬಾರಿ ಗೆದ್ದು ಬಂದ ಹಾದಿಯನ್ನು ಮತ್ತು ಅವರ ಉತ್ಕೃಷ್ಟಮಟ್ಟದ ಆಟವನ್ನು ನೋಡುವಾಗ ಈ ಪಂದ್ಯವನ್ನು ಗೆಲ್ಲುವ ನಿರೀಕ್ಷೆ ಮಾಡಬಹುದು. ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್​ ಪಡುಕೋಣೆ ಮತ್ತು ವಿಮಲ್‌ಕುಮಾರ್ ಗರಡಿಯಲ್ಲಿ ಪಳಗಿದ ಈ 22 ವರ್ಷದ ಲಕ್ಷ್ಯ ಸೇನ್​ ಕಳೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಚೈನೀಸ್‌ ತೈಪೆಯ ಚೌ ತೀನ್‌ ಚೆನ್‌ ಅವರೆದುರು ಮೊದಲ ಗೇಮ್‌ ಕಳೆದುಕೊಂಡೂ ಆ ಬಳಿಕ ಗೆದ್ದು ಬಂದ ರೀತಿ ಅಮೋಘವಾಗಿತ್ತು. ಇದೇ ರೀತಿ ಇಂದು ಕೂಡ ಗೆಲುವು ಸಾಧಿಸಿಲಿ ಎನ್ನುವುದು ಭಾರತೀಯ ಕ್ರೀಡಾಭಿಮಾನಿಗಳ ಹಾರೈಕೆ.

ಮುಖಾಮುಖಿ


ಜಾಗತಿಕ ಮಟ್ಟದ ಸ್ಪರ್ಧೆಗಳಲ್ಲಿ ಈಗಾಗಲೇ ಹಲವು ಪದಕ ಗೆದ್ದಿರುವ, 2 ಬಾರಿಯ ಚಾಂಪಿಯನ್​ ಹಾಗೂ ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿರುವ ವಿಕ್ಟರ್‌ ಅಕ್ಸೆಲ್ಸೆನ್‌ ಮತ್ತು ಲಕ್ಷ್ಯ ಸೇನ್‌ ಇದುವರೆಗೂ ಒಟ್ಟು 8 ಬಾರಿ ವಿವಿಧ ಟೂರ್ನಿಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ಪೈಕಿ ಗರಿಷ್ಠ 7 ಪಂದ್ಯಗಳನ್ನು ಅಕ್ಸೆಲ್ಸೆನ್‌ ಗೆದ್ದು ಬೀಗಿದ್ದಾರೆ. ಸೇನ್​ ಕೇವಲ ಒಂದು ಬಾರಿ ಮಾತ್ರ ಗೆಲುವು ಕಂಡಿದ್ದಾರೆ. ಈ ಗೆಲುವು 2022ರ ಜರ್ಮನ್‌ ಓಪನ್‌ ಪಂದ್ಯಾವಳಿಯಲ್ಲಿ ಒಲಿದಿತ್ತು. ಈ ಅಂಕಿ ಅಂಶಗಳನ್ನು ನೋಡುವಾಗ ಅಕ್ಸೆಲ್ಸೆನ್‌ ಅವರೇ ಗೆಲ್ಲುವ ಫೇವರಿಟ್​ ಆಗಿ ಗೋಚರಿಸಿದರೂ ಕೂಡ ಸೇನ್​ ಈ ಬಾರಿ ಅಷ್ಟು ಸುಲಭದಲ್ಲಿ ಶರಣಾಗುವ ಸಾಧ್ಯತೆ ಕಡಿಮೆ. ಒಟ್ಟಾರೆ ಈ ಪಂದ್ಯ ರೋಚಕವಾಗಿ ಸಾಗುವುದರಲ್ಲಿ ಯಾವುದೇ ಅನುಮಾನ ಬೇಡ. ಸೋತರೆ ಕಂಚಿನ ಪದಕಕ್ಕಾಗಿ ಪ್ಲೇ ಆಫ್ ಸ್ಪರ್ಧೆಯಲ್ಲಿ ಆಡಬೇಕು. ಗೆದ್ದರೆ ಬೆಳ್ಳಿ ಅಥವಾ ಚಿನ್ನ ಖಚಿತ.

ಗ್ರೇಟ್​ ಬ್ರಿಟನ್ ಮಣಿಸಿ ಸೆಮಿಫೈನಲ್​ ಪ್ರವೇಶಿಸಲಿ ಭಾರತ ಹಾಕಿ ತಂಡ


ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫುಲ್​ ಜೋಶ್​ನಲ್ಲಿರುವ ಭಾರತ(Hockey India) ಪುರುಷರ ಹಾಕಿ ತಂಡ ಇಂದು ನಡೆಯುವ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ(Paris Olympics) ಗ್ರೇಟ್​ ಬ್ರಿಟನ್(hockey india vs great britain)​ ವಿರುದ್ಧ ಆಡಲಿದೆ. ಈ ಪಂದ್ಯವನ್ನು ಕೂಡ ಗೆದ್ದು ಸೆಮಿಫೈನಲ್​ ಪ್ರವೇಶಿಸುವುದು ಹರ್ಮನ್‌ಪ್ರೀತ್ ಸಿಂಗ್ ಪಡೆಯ ಯೋಜನೆಯಾಗಿದೆ.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

ಸ್ಯಾರಸ್ಯವೆಂದರೆ ಕಳೆದ ಟೋಕಿಯೊ ಒಲಿಂಪಿಕ್ಸ್​ ಕ್ವಾರ್ಟರ್‌ ಫೈನಲ್​ನಲ್ಲೂ ಭಾರತ ಮತ್ತು ಇಂಗ್ಲೆಂಡ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಭಾರತ 3-1 ಗೋಲ್​ಗಳ ಅಂತರದಿಂದ ಗೆದ್ದು ಸೆಮಿಪೈನಲ್‌ ಪ್ರವೇಶಿಸಿತ್ತು. ಈ ಬಾರಿಯೂ ಇದೇ ರೀತಿಯ ಫಲಿತಾಂಶ ಮರುಕಳಿಸಿ ಭಾರತ ಸೆಮಿ ಟಿಕೆಟ್​ ಪಡೆಯಲಿ ಎನ್ನುವುದು ಭಾರತೀಯರ ಹಾರೈಕೆ.

ಭಾರತದ ಪ್ರದರ್ಶನ ನೋಡುವಾಗ ಈ ಬಾರಿಯೂ ಪದಕವೊಂದನ್ನು ಗೆಲ್ಲುವುದು ಖಚಿತ ಎನ್ನಬಹುದು. ಕೊನೆಯ ಒಲಿಂಪಿಕ್ಸ್​ ಆಡುತ್ತಿರುವ ಗೋಲ್​ ಕೀಪರ್​ ಪಿ.ಆರ್ ಶ್ರೀಜೇಶ್ ಅವರಂತು ತಮ್ಮ ಎಲ್ಲ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ತಡೆಗೋಡೆಯಂತೆ ನಿಂತು ಗೋಲ್​ಗಳನ್ನು ತಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಅದರಲ್ಲೂ 52 ವರ್ಷಗಳ ನಂತರ ಆಸ್ಟ್ರೇಲಿಯಾವನ್ನು ಮಣಿಸಿದ್ದು ಭಾರತಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದೆ. ಹರ್ಮನ್‌ಪ್ರೀತ್ ಸಿಕ್ಕ ಪೆನಾಲ್ಟಿ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಂಡರೆ ಉತ್ತಮ. ರಕ್ಷಣಾ ವಿಭಾಗದಲ್ಲಿ ಅಮಿತ್ ರೋಹಿದಾಸ್‌ ಮತ್ತು ಜರ್ಮನ್‌ಪ್ರೀತ್‌ ಉತ್ತಮ ಫಾರ್ಮ್​ನಲ್ಲಿದ್ದಾರೆ.

Continue Reading

ಕ್ರಿಕೆಟ್

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Rashid Khan: ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ.

VISTARANEWS.COM


on

Rashid Khan
Koo

ಲಂಡನ್​: ಮಹೇಂದ್ರ ಸಿಂಗ್​ ಧೋನಿ(MS Dhoni) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿ ಹಲವು ವರ್ಷ ಕಳೆದಿದ್ದರೂ ಕೂಡ ಅವರು ಪರಿಚಯಿಸಿದ ‘ಹೆಲಿಕಾಪ್ಟರ್ ಶಾಟ್’(MS Dhoni Helicopter shot) ಮಾತ್ರ ಆಗಾಗ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುತ್ತದೆ. ಈ ಶಾಟ್​ ಹೊಡೆಯಲು ಅನೇಕರು ಪ್ರಯತ್ನಿಸಿದರೂ ಸಫಲರಾಗಿದ್ದು ಮಾತ್ರ ಕೆಲವರಷ್ಟೇ. ಇದೀಗ ಅಫಘಾನಿಸ್ತಾನ ತಂಡದ ಸ್ಪಿನ್​​ ಆಲ್​ರೌಂಡರ್​ ರಶೀದ್​ ಖಾನ್​(Rashid Khan) ಧೋನಿಯ ನೆಚ್ಚಿನ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್​ ಬಾರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ. ರಶೀದ್​ ಸಿಕ್ಸರ್​ ಬಾರಿಸುತ್ತಿದ್ದಂತೆ ಕಾಮೆಂಟ್ರಿ ಮಾಡುತ್ತಿದ್ದವರು ಓ ಸೊಗಸಾದ ಹೆಲಿಕಾಪ್ಟರ್ ಶಾಟ್ ಎಂದು ವರ್ಣಿಸಿದ್ದಾರೆ. ಈ ಹೊಡೆತ ಧೋನಿಯಂತೆ ಪರಿಪೂರ್ಣವಾಗಿರದಿದ್ದತರೂ ಕೂಡ ಕೊಂಚ ಸಾಮ್ಯತೆ ಕಂಡುಬಂತು. ರಶೀದ್​ ಖಾನ್​ ಐಪಿಎಲ್​ನಲ್ಲಿಯೂ ಇದೇ ರೀತಿ ಹಲವು ಬಾರಿ ಹೆಲಿಕಾಪ್ಟರ್ ಶಾಟ್ ಬಾರಿಸಿದ್ದರು.

ಕೆಲ ದಿನಗಳ ಹಿಂದಷ್ಟೇ ರಶೀದ್ ಖಾನ್ ಅವರು ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದರು. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್’ ಕ್ರಿಕೆಟ್​ ಲೀಗ್​ನಲ್ಲಿ 2 ವಿಕೆಟ್ ಕಬಳಿಸುವುದರೊಂದಿಗೆ ರಶೀದ್ ಖಾನ್ ಎಲ್ಲ ಮಾದರಿಯ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್(Rashid khan 600 wickets)​ ಪೂರ್ತಿಗೊಳಿಸಿದ ವಿಶ್ವದ ಮೊದಲ ಸ್ಪಿನ್ನರ್ ಹಾಗೂ 2ನೇ ಬೌಲರ್​​ ಎನಿಸಿಕೊಂಡಿದ್ದರು.

ಇದನ್ನೂ ಓದಿ Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ್ದ ವಿಶ್ವ ದಾಖಲೆಯನ್ನು ಮೊದಲ ನಿರ್ಮಿಸಿದ್ದು ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ಡ್ವೇನ್ ಬ್ರಾವೊ. ಇದೀಗ ರಶೀದ್​ ಖಾನ್​ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಅತೀ ವೇಗವಾಗಿ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್ ಕಬಳಿಸಿದ ದಾಖಲೆ ರಶೀದ್ ಹೆಸರಿಗೆ ದಾಖಲಾಗಿದೆ. ಬ್ರಾವೊ 545 ಟಿ20 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರೆ, ರಶೀದ್​ ಖಾನ್​ ಕೇವಲ 441 ಪಂದ್ಯಗಳನ್ನಾಡಿ ಈ ಮೈಲುಗಲ್ಲು ನಿರ್ಮಿಸಿದ್ದಾರೆ.

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್​ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Continue Reading

ಕ್ರೀಡೆ

Paris Olympics: ಗ್ರೇಟ್​ ಬ್ರಿಟನ್ ಮಣಿಸಿ ಸೆಮಿಫೈನಲ್​ ಪ್ರವೇಶಿಸಲಿ ಭಾರತ ಹಾಕಿ ತಂಡ

Paris Olympics: ಸ್ಯಾರಸ್ಯವೆಂದರೆ ಕಳೆದ ಟೋಕಿಯೊ ಒಲಿಂಪಿಕ್ಸ್​ ಕ್ವಾರ್ಟರ್‌ ಫೈನಲ್​ನಲ್ಲೂ ಭಾರತ ಮತ್ತು ಇಂಗ್ಲೆಂಡ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಭಾರತ 3-1 ಗೋಲ್​ಗಳ ಅಂತರದಿಂದ ಗೆದ್ದು ಸೆಮಿಪೈನಲ್‌ ಪ್ರವೇಶಿಸಿತ್ತು.

VISTARANEWS.COM


on

Paris Olympics
Koo

ಪ್ಯಾರಿಸ್​: ಶುಕ್ರವಾರವಷ್ಟೇ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫುಲ್​ ಜೋಶ್​ನಲ್ಲಿರುವ ಭಾರತ(Hockey India) ಪುರುಷರ ಹಾಕಿ ತಂಡ ಇಂದು ನಡೆಯುವ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ(Paris Olympics) ಗ್ರೇಟ್​ ಬ್ರಿಟನ್(hockey india vs great britain)​ ವಿರುದ್ಧ ಆಡಲಿದೆ. ಈ ಪಂದ್ಯವನ್ನು ಕೂಡ ಗೆದ್ದು ಸೆಮಿಫೈನಲ್​ ಪ್ರವೇಶಿಸುವುದು ಹರ್ಮನ್‌ಪ್ರೀತ್ ಸಿಂಗ್ ಪಡೆಯ ಯೋಜನೆಯಾಗಿದೆ.

ಸ್ಯಾರಸ್ಯವೆಂದರೆ ಕಳೆದ ಟೋಕಿಯೊ ಒಲಿಂಪಿಕ್ಸ್​ ಕ್ವಾರ್ಟರ್‌ ಫೈನಲ್​ನಲ್ಲೂ ಭಾರತ ಮತ್ತು ಇಂಗ್ಲೆಂಡ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಭಾರತ 3-1 ಗೋಲ್​ಗಳ ಅಂತರದಿಂದ ಗೆದ್ದು ಸೆಮಿಪೈನಲ್‌ ಪ್ರವೇಶಿಸಿತ್ತು. ಈ ಬಾರಿಯೂ ಇದೇ ರೀತಿಯ ಫಲಿತಾಂಶ ಮರುಕಳಿಸಿ ಭಾರತ ಸೆಮಿ ಟಿಕೆಟ್​ ಪಡೆಯಲಿ ಎನ್ನುವುದು ಭಾರತೀಯರ ಹಾರೈಕೆ.

ಭಾರತದ ಪ್ರದರ್ಶನ ನೋಡುವಾಗ ಈ ಬಾರಿಯೂ ಪದಕವೊಂದನ್ನು ಗೆಲ್ಲುವುದು ಖಚಿತ ಎನ್ನಬಹುದು. ಕೊನೆಯ ಒಲಿಂಪಿಕ್ಸ್​ ಆಡುತ್ತಿರುವ ಗೋಲ್​ ಕೀಪರ್​ ಪಿ.ಆರ್ ಶ್ರೀಜೇಶ್ ಅವರಂತು ತಮ್ಮ ಎಲ್ಲ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ತಡೆಗೋಡೆಯಂತೆ ನಿಂತು ಗೋಲ್​ಗಳನ್ನು ತಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಅದರಲ್ಲೂ 52 ವರ್ಷಗಳ ನಂತರ ಆಸ್ಟ್ರೇಲಿಯಾವನ್ನು ಮಣಿಸಿದ್ದು ಭಾರತಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದೆ. ಹರ್ಮನ್‌ಪ್ರೀತ್ ಸಿಕ್ಕ ಪೆನಾಲ್ಟಿ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಂಡರೆ ಉತ್ತಮ. ರಕ್ಷಣಾ ವಿಭಾಗದಲ್ಲಿ ಅಮಿತ್ ರೋಹಿದಾಸ್‌ ಮತ್ತು ಜರ್ಮನ್‌ಪ್ರೀತ್‌ ಉತ್ತಮ ಫಾರ್ಮ್​ನಲ್ಲಿದ್ದಾರೆ.

ಪಂದ್ಯ ಸಮಯ: ಭಾರತ-ಗ್ರೇಟ್‌ ಬ್ರಿಟನ್‌ ಮಧ್ಯಾಹ್ನ 1.30

ಇಂದಿನ ಪ್ರಮುಖ ಪಂದ್ಯಗಳು

ಟೋಕಿಯೊ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ಭಾರತದ ನಾಲ್ಕನೇ ಪದಕವನ್ನು ಗಳಿಸಲು ಆಗಸ್ಟ್ 4ರಂದು ಕ್ವಾರ್ಟರ್ ಫೈನಲ್​​ನಲ್ಲಿ ಚೀನಾದ ಲಿ ಕಿಯಾನ್ ಅವರನ್ನು ಎದುರಿಸಲಿದ್ದಾರೆ. ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್​ನಲ್ಲಿ ಸೆಮಿಫೈನಲ್ ನಲ್ಲಿ ವಿಕ್ಟರ್ ಅಕ್ಸೆಲ್ಸೆನ್ ಅವರನ್ನು ಎದುರಿಸುವ ಮೂಲಕ ಪದಕ ಗಳಿಸುವ ಗುರಿ ಹೊಂದಿದ್ದಾರೆ ಭಾರತದ ಯಾವುದೇ ಪುರುಷ ಶಟ್ಲರ್ ಇದುವರೆಗೆ ಫೈನಲ್ ತಲುಪಿಲ್ಲ ಎಂಬುದು ಇಲ್ಲಿ ಗಮನಾರ್ಹ.

ಶೂಟಿಂಗ್​ನಲ್ಲಿ ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ ಅರ್ಹತಾ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಪುರುಷರ 25 ಮೀಟರ್ ರ್ಯಾಪಿಡ್​ ಫೈರ್ ಪಿಸ್ತೂಲ್​​ಗೆ ಅರ್ಹತೆ ಪಡೆಯಲು ಪ್ರಯತ್ನಿಸುತ್ತಾರೆ. ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ ಮಹಿಳಾ ಸ್ಕೀಟ್ ಅರ್ಹತಾ 2 ನೇ ದಿನಕ್ಕೆ ಮರಳಲಿದ್ದಾರೆ. ಅಥ್ಲೆಟಿಕ್ಸ್​​ನಲ್ಲಿ ಪಾರುಲ್ ಚೌಧರಿ ಮಹಿಳೆಯರ 3,000 ಮೀಟರ್ ಸ್ಟೀಪಲ್ಚೇಸ್ ರೌಂಡ್ 1 ರಲ್ಲಿ ಭಾಗವಹಿಸಿದರೆ, ಜೆಸ್ವಿನ್ ಆಲ್ಡ್ರಿನ್ ಪುರುಷರ ಲಾಂಗ್ ಜಂಪ್ ಅರ್ಹತೆಯಲ್ಲಿ ಸ್ಪರ್ಧಿಸಲಿದ್ದಾರೆ. ವಿಷ್ಣು ಸರವಣನ್ ಮತ್ತು ನೇತ್ರಾ ಕುಮನನ್ ತಮ್ಮ ತಮ್ಮ ಸೇಯ್ಲಿಂಗ್​ ಸ್ಪರ್ಧೆಗಳಲ್ಲಿ ಇನ್ನೂ ಎರಡು ರೇಸ್ ಗಳಿಗೆ ಮರಳಲಿದ್ದಾರೆ.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

ಭಾರತದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ


ಶೂಟಿಂಗ್: 25 ಮೀಟರ್ ರ್ಯಾಪಿಡ್ ಫೈರ್ ಪಿಸ್ತೂಲ್ ಪುರುಷರ ಅರ್ಹತಾ ಹಂತ 1: ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ – ಮಧ್ಯಾಹ್ನ 12.30ಕ್ಕೆ

25 ಮೀಟರ್ ರ್ಯಾಪಿಡ್ ಫೈರ್ ಪಿಸ್ತೂಲ್ ಪುರುಷರ ಅರ್ಹತಾ ಹಂತ 2: ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ – ಸಂಜೆ 4.30ಕ್ಕೆ

ಮಹಿಳಾ ಸ್ಕೀಟ್ ಅರ್ಹತಾ (ದಿನ 2): ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ – ಮಧ್ಯಾಹ್ನ 1 ಗಂಟೆಗೆ

ಮಹಿಳಾ ಸ್ಕೀಟ್ ಫೈನಲ್ (ಅರ್ಹತೆ ಪಡೆದರೆ): ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ – ಸಂಜೆ 7 ಗಂಟೆಗೆ

ಗಾಲ್ಫ್: ಪುರುಷರ ವೈಯಕ್ತಿಕ ಸ್ಟ್ರೋಕ್ ಪ್ಲೇ (ರೌಂಡ್ 4): ಶುಭಂಕರ್ ಶರ್ಮಾ ಮತ್ತು ಗಗನ್ಜೀತ್ ಭುಲ್ಲರ್ – ಮಧ್ಯಾಹ್ನ 12.30ಕ್ಕೆ

ಹಾಕಿ: ಪುರುಷರ ಕ್ವಾರ್ಟರ್ ಫೈನಲ್: ಭಾರತ ವಿರುದ್ಧ ಗ್ರೇಟ್ ಬ್ರಿಟನ್ – ಮಧ್ಯಾಹ್ನ 1:30ಕ್ಕೆ

ಅಥ್ಲೆಟಿಕ್ಸ್

ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ರೌಂಡ್ 1: ಪಾರುಲ್ ಚೌಧರಿ – ಮಧ್ಯಾಹ್ನ 1:35ಕ್ಕೆ

ಪುರುಷರ ಲಾಂಗ್ ಜಂಪ್ ಅರ್ಹತೆ: ಜೆಸ್ವಿನ್ ಆಲ್ಡ್ರಿನ್ – ಮಧ್ಯಾಹ್ನ 2:30ಕ್ಕೆ

ಬಾಕ್ಸಿಂಗ್: ಮಹಿಳೆಯರ 75 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್: ಚೀನಾ ಸ್ಪರ್ಧಿ ವಿರುದ್ಧ ಲೊವ್ಲಿನಾ ಬೊರ್ಗೊಹೈನ್ 3:02ಕ್ಕೆ

ಬ್ಯಾಡ್ಮಿಂಟನ್: ಪುರುಷರ ಸಿಂಗಲ್ಸ್ ಸೆಮಿಫೈನಲ್: ಲಕ್ಷ್ಯ ಸೇನ್ ವಿರುದ್ಧ ವಿಕ್ಟರ್ ಅಕ್ಸೆಲ್ಸನ್ (ಡೆನ್ಮಾರ್ಕ್) – ಮಧ್ಯಾಹ್ನ 3:30ಕ್ಕೆ

ಸೇಯ್ಲಿಂಗ್​: ಪುರುಷರ ಡಿಂಗಿ ರೇಸ್ 7 ಮತ್ತು 8: ವಿಷ್ಣು ಸರವಣನ್ – ಮಧ್ಯಾಹ್ನ 3:35ಕ್ಕೆ

ಮಹಿಳಾ ಡಿಂಗಿ ರೇಸ್ 7 ಮತ್ತು 8: ನೇತ್ರಾ ಕುಮನನ್ – ಸಂಜೆ 6:05.ಕ್ಕೆ

Continue Reading
Advertisement
IND vs SL
ಕ್ರೀಡೆ15 mins ago

IND vs SL: ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನ ಲಂಕಾ ತಂಡಕ್ಕೆ ಆಘಾತ; ಸರಣಿಯಿಂದ ಹೊರಬಿದ್ದ ಸ್ಟಾರ್​ ಆಟಗಾರ

BJP-JDS Padayatra
ರಾಜಕೀಯ21 mins ago

BJP-JDS Padayatra: ರಾಜ್ಯದ ಹಣ ಲೂಟಿ ಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ

Road Accident
ಬೆಂಗಳೂರು34 mins ago

Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

KEA
ಬೆಂಗಳೂರು57 mins ago

KEA : ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಪದ್ಮನಾಭ ಮೆನನ್‌ಗೆ ಮೊದಲ ಸ್ಥಾನ

Rashami Desai Homeless Rashami Desai lived in an Audi
ಕಿರುತೆರೆ58 mins ago

Rashami Desai: ಡಿವೋರ್ಸ್‌ ಬಳಿಕ ಮನೆ ಇಲ್ಲದೆ, ರೋಡ್‌ ಸೈಡ್‌ ಊಟ ತಿಂದು ಕಾರಿನಲ್ಲಿ ಮಲಗಿದ್ದರಂತೆ ʻಮುದ್ದು ಬಂಗಾರʼ ಖ್ಯಾತ ನಟಿ!

Paris Olympics
ಕ್ರೀಡೆ1 hour ago

Paris Olympics: ವಿಕ್ಟರ್‌ ವಿರುದ್ಧ ಲಕ್ಷ್ಯ ಸೇನ್​ಗೆ ಒಲಿಯಲಿ ಗ್ರೇಟ್​ ವಿಕ್ಟರಿ; ಇಂದು ಸೆಮಿ ಫೈನಲ್​

Gold Rate Today
ವಾಣಿಜ್ಯ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Murder Case
ಕ್ರೈಂ2 hours ago

Murder Case: ಜಮೀನು ವಿವಾದಕ್ಕೆ ಹರಿಯಿತು ನೆತ್ತರು: ತಂಗಿಯ ಗಂಡನಿಗೇ ಚಾಕು ಇರಿದು ಕೊಂದವನ ಅರೆಸ್ಟ್‌ 

Ram Gopal Varma calls The Kerala Story one of the best films
ಟಾಲಿವುಡ್2 hours ago

Ram Gopal Varma: ʻದಿ ಕೇರಳ ಸ್ಟೋರಿʼ ನಾನು ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದು ಎಂದ ರಾಮ್ ಗೋಪಾಲ್ ವರ್ಮಾ!

Rashid Khan
ಕ್ರಿಕೆಟ್2 hours ago

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ23 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌