Site icon Vistara News

IND VS SL | ಟಾಸ್​ ಗೆದ್ದ ಶ್ರೀಲಂಕಾ ತಂಡದಿಂದ ಬ್ಯಾಟಿಂಗ್​ ಆಯ್ಕೆ, ಭಾರತಕ್ಕೆ ಬೌಲಿಂಗ್​ ಆಹ್ವಾನ

ind vs sl 2nd odi

ಕೋಲ್ಕೊತಾ: ಏಕ ದಿನ ಸರಣಿಯ (INDvsSL ODI) ದ್ವಿತೀಯ ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ತಂಡದ ನಾಯಕ ದಸುನ್​ ಶನಕ ಟಾಸ್​ ಗೆದ್ದು, ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಟೀಮ್​ ಇಂಡಿಯಾ ಮೊದಲು ಬೌಲಿಂಗ್​ ನಡೆಸಲಿದೆ.

ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮೊದಲ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಯಜುವೇಂದ್ರ ಚಹಲ್​ ಬದಲಿಗೆ ಕುಲ್​ದೀಪ್​ ಯಾದವ್​ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಲಂಕಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಪಾಥುಮ್ ನಿಸ್ಸಾಂಕ ಮತ್ತು ದಿಲ್ಶನ್​ ಮದುಶಂಕ ಬದಲಿಗೆ ನುವಾನಿಡು ಫೆರ್ನಾಂಡೋ ಮತ್ತು ಲಹಿರು ಕುಮಾರ ಸ್ಥಾನ ಪಡೆದಿದ್ದಾರೆ.

ಕೋಲ್ಕೊತಾದ ಈಡನ್‌ ಗಾರ್ಡನ್ಸ್‌ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಈ ಹಣಾಹಣಿ ನಡೆಯುತ್ತಿದೆ. ಈಗಾಗಲೇ ಗುವಾಹಟಿಯಲ್ಲಿ ನಡೆದ ಮೊದಲ ಪಂದ್ಯವನ್ನು ಗೆದ್ದಿರುವ ಭಾರತ ದ್ವಿತೀಯ ಏಕದಿನ ಪಂದ್ಯದಲ್ಲೂ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಳ್ಳುವ ಯೋಜನೆಯಲ್ಲಿದೆ.

ತಂಡಗಳು

ಭಾರತ: ರೋಹಿತ್​ ಶರ್ಮಾ(ನಾಯಕ), ಶುಭಮನ್​ ಗಿಲ್​, ವಿರಾಟ್​ ಕೊಹ್ಲಿ, ಶ್ರೇಯಸ್​ ಅಯ್ಯರ್​, ಕೆ.ಎಲ್​. ರಾಹುಲ್​, ಹಾರ್ದಿಕ್​ ಪಾಂಡ್ಯ, ಕುಲ್​ದೀಪ್​ ಯಾದವ್​ , ಮೊಹಮ್ಮದ್​ ಸಿರಾಜ್​, ಉಮ್ರಾನ್​ ಮಲಿಕ್​, ಮೊಹಮ್ಮದ್​ ಶಮಿ, ಅಕ್ಷರ್​ ಪಟೇಲ್

ಶ್ರೀಲಂಕಾ: ದಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್,ಆವಿಷ್ಕಾ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಗೆ, ಕಸುನ್​ ರಜಿತ, ಲಹಿರು ಕುಮಾರ.

ಇದನ್ನೂ ಓದಿ | IND VS SL | ಲಂಕಾ ವಿರುದ್ಧ ಶತಕ ಬಾರಿಸಿ ಸಚಿನ್​ ದಾಖಲೆ ಮುರಿಯಲಿದ್ದಾರಾ ವಿರಾಟ್​ ಕೊಹ್ಲಿ!

Exit mobile version