IND vs SL: ಭಾರತ-ಲಂಕಾ ಏಕದಿನ ಪಂದ್ಯ ಟೈ ಆದರೂ ಸೂಪರ್​ ಓವರ್​ ಏಕೆ ಆಡಿಸಲಿಲ್ಲ?; ಇಲ್ಲಿದೆ ಉತ್ತರ - Vistara News

ಕ್ರೀಡೆ

IND vs SL: ಭಾರತ-ಲಂಕಾ ಏಕದಿನ ಪಂದ್ಯ ಟೈ ಆದರೂ ಸೂಪರ್​ ಓವರ್​ ಏಕೆ ಆಡಿಸಲಿಲ್ಲ?; ಇಲ್ಲಿದೆ ಉತ್ತರ

IND vs SL: ದ್ವಿಪಕ್ಷೀಯ ಏಕದಿನ ಪಂದ್ಯದಲ್ಲಿ ಸೂಪರ್​ ಓವರ್ ಆಡಿಸದಿದ್ದರೂ, ಐಸಿಸಿ ಟೂರ್ನಿಗಳು, ಏಷ್ಯಾ ಕಪ್, ತ್ರಿಕೋನ ಸರಣಿಯಂತಹ ಏಕದಿನ ಮಾದರಿ ಪಂದ್ಯಗಳಲ್ಲಿ ಟೈ ಆದರೆ ಸೂಪರ್​ ಓವರ್​ ನಡೆಸಲಾಗುತ್ತದೆ.

VISTARANEWS.COM


on

IND vs SL
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲಂಬೊ: ಶುಕ್ರವಾರ ನಡೆದಿದ್ದ ಭಾರತ ಮತ್ತು ಶ್ರೀಲಂಕಾ(IND vs SL) ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಟೈನಲ್ಲಿ ಅಂತ್ಯ ಕಂಡಿತ್ತು. ಪಂದ್ಯ ಟೈಗೊಂಡರೂ ಕೂಡ ಫಲಿತಾಂಶ ನಿರ್ಧರಿಸಲು ಸೂಪರ್ ಓವರ್ ಏಕೆ ಆಡಿಸಲಿಲ್ಲ ಎನ್ನುವ ಪ್ರಶ್ನೆ ಸಹಜವಾಗಿಯೇ ಅಭಿಮಾನಿಗಳಿಗೆ ಕಾಡಿದೆ. ಇದಕ್ಕೆ ಉತ್ತರ ಇಲ್ಲಿದೆ.

ಲಂಕಾ ಮತ್ತು ಭಾರತ ವಿರುದ್ಧದ ಅಂತಿಮ ಟಿ20 ಪಂದ್ಯ ಟೈ ಗೊಂಡಾಗ ಸೂಪರ್​ ಓವರ್​ ಆಡಿಸಲಾಗಿತ್ತು ಆದರೆ, ಏಕದಿನ ಪಂದ್ಯ ಟೈ ಆದಾಗ ಏಕೆ ಸೂಪರ್​ ಓಪರ್​ ಆಡಿಸಲಿಲ್ಲ ಎಂದು ಅನೇಕ ನೆಟ್ಟಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಸೂಪರ್​ ಓವರ್ ಆಡಿಸದೇ ಇರಲು ಕೂಡ ಒಂದು ಕಾರಣವಿದೆ.

ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ನಿಯಮಗಳ ಪ್ರಕಾರ ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಏಕದಿನ ಸರಣಿಯ ಪಂದ್ಯ ಟೈ ಆದರೆ ಇದನ್ನು ಟೈ ಎಂದು ಪರಿಗಣಿಸಲಾಗುತ್ತದೆ. ಇಲ್ಲಿ ಯಾವುದೇ ಸೂಪರ್ ಓವರ್​ ಆಡಿಸಲಾಗುವುದಿಲ್ಲ. ಆದರೆ, ಈ ನಿಯಮ ಟಿ20 ಕ್ರಿಕೆಟ್​ಗೆ ಅನ್ವಯವಾಗುವುದಿಲ್ಲ. ಇಲ್ಲಿ ಸೂಪರ್​ ಓವರ್​ ಆಡಿಸಲಾಗುತ್ತದೆ. ಸೂಪರ್​ ಓವರ್​ ಕೂಡ ಟೈಗೊಂಡರೆ ಮತ್ತೊಂದು ಸೂಪರ್​ ಓವರ್​ ಆಡಿಸಲಾಗುತ್ತದೆ. ಫಲಿತಾಂಶ ಬರುವ ತನಕವೂ ಸೂಪರ್ ಓವರ್​ ಆಡಿಸಲಾಗುತ್ತದೆ.​ ನಿನ್ನೆಯ ಪಂದ್ಯ ದ್ವಿಪಕ್ಷೀಯ ಸರಣಿಯ ಭಾಗವಾಗಿತ್ತು, ಆದ್ದರಿಂದ ಯಾವುದೇ ಸೂಪರ್ ಓವರ್ ಆಡಿಸಲಿಲ್ಲ. ಇನ್ನುಳಿದ ಎರಡು ಏಕದಿನ ಪಂದ್ಯಗಳಲ್ಲಿ ಗೆದ್ದವರು ಸರಣಿಯ ವಿಜೇತರಾಗಲಿದ್ದಾರೆ. ಒಂದೊಂದು ಪಂದ್ಯ ಗೆದ್ದರೆ ಸರಣಿ ಸಮಬಲವಾಗಲಿದೆ.

ಇದನ್ನೂ ಓದಿ IND vs SL ODI : ನಾಟಕೀಯ ತಿರುವು; ಲಂಕಾ ವಿರುದ್ಧದ ಮೊದಲ ಏಕ ದಿನ ಪಂದ್ಯ ಟೈ

ಐಸಿಸಿ ಟೂರ್ನಿಯಲ್ಲಿ ಸಾಧ್ಯ

ದ್ವಿಪಕ್ಷೀಯ ಏಕದಿನ ಪಂದ್ಯದಲ್ಲಿ ಸೂಪರ್​ ಓವರ್ ಆಡಿಸದಿದ್ದರೂ, ಐಸಿಸಿ ಟೂರ್ನಿಗಳು, ಏಷ್ಯಾ ಕಪ್, ತ್ರಿಕೋನ ಸರಣಿಯಂತಹ ಏಕದಿನ ಮಾದರಿ ಪಂದ್ಯಗಳಲ್ಲಿ ಟೈ ಆದರೆ ಸೂಪರ್​ ಓವರ್​ ನಡೆಸಲಾಗುತ್ತದೆ.

ರೋಚಕ ಪಂದ್ಯ

ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ರೋಚಕ ಹಣಾಹಣಿಗೆ ಸಾಕ್ಷಿಯಾಗಿ ಟೈ ನಲ್ಲಿ ಅಂತ್ಯಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 47.5 ಓವರ್ ಗಳಲ್ಲಿ 230 ರನ್ ಗಳಿಗೆ ಆಲೌಟಾಯಿತು. ಗೆಲುವಿಗೆ ಒಂದು ರನ್​ ಬೇಕಿದ್ದಾಗ ಶಿವಂ ದುಬೆ ಮತ್ತು ಅರ್ಶ್​ದೀಪ್​ ಸಿಂಗ್​ ಸತತವಾಗಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದು ವಿಕೆಟ್​ ಕೈಚೆಲ್ಲಿದರು. ಸೋಲುವ ಭೀತಿಯಲ್ಲಿದ್ದ ಲಂಕಾ ಅಸಾಮಾನ್ಯ ಪ್ರದರ್ಶನ ತೋರಿ ಪಂದ್ಯವನ್ನು ಟೈ ಗೊಳಿಸುವ ಮೂಲಕ ನಿಟ್ಟುಸಿರುಬಿಟ್ಟಿತು.

ಭಾರತ ಪರ ಚೇಸಿಂಗ್​ನಲ್ಲಿ ನಾಯಕ ರೋಹಿತ್​ ಶರ್ಮ 47 ಎಸೆತಗಳಿಂದ 58 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ಉಳಿದಂತೆ ಕೆ.ಎಲ್​ ರಾಹುಲ್​ 31, ಅಕ್ಷರ್​ ಪಟೇಲ್​ 33 ರನ್​ ಬಾರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

PV Sindhu: ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಅವಳಿ ಒಲಿಂಪಿಕ್​ ಪದಕ ವಿಜೇತೆ ಪಿ.ವಿ. ಸಿಂಧು

PV Sindhu: ಕಳೆದ ವರ್ಷ ಮೊಣಕಾಲಿನ ಗಾಯಕ್ಕಾಗಿ ವಿಶ್ರಾಂತಿ ಪಡೆದು, ಚೇತರಿಸಿಕೊಂಡ ಬಳಿಕ ಪಿ.ವಿ.ಸಿಂಧುಗೆ ಫಾರ್ಮ್‌ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

VISTARANEWS.COM


on

PV Sindhu
Koo

ಪ್ಯಾರಿಸ್‌: ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿಯೂ(paris olympics) ಪದಕ ನಿರೀಕ್ಷೆ ಮಾಡಿದ್ದ ಬ್ಯಾಡ್ಮಿಂಟನ್​ ಆಟಗಾರ್ತಿ ಪಿ.ವಿ.ಸಿಂಧು(PV Sindhu) ಪ್ರೀ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ನಿರ್ಗಮಿಸಿದ್ದರು. ಈ ಸೋಲಿನ ಬಳಿಕ ಅನೇಕರು ಸಿಂಧು ಒಲಿಂಪಿಕ್ಸ್​ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಹೇಳಿದ್ದರು. ಆದರೆ, ಈ ಬಗ್ಗೆ ಸ್ವತಃ ಸಿಂಧು ಸ್ಪಷ್ಟನೆ ನೀಡಿದ್ದಾರೆ. ವೃತ್ತಿ ಜೀವನದ ಅತೀ ಕಠಿಣ ಸೋಲು ಎದುರಿಸಿ ಬಂದಿರುವುದರಿಂದ ಸ್ವಲ್ಪ ವಿರಾಮ ಪಡೆದು ಮುಂದುವರಿಯುತ್ತೇನೆ ಎಂದಿದ್ದಾರೆ.

ಕಳೆದೊಂದು ವರ್ಷದಿಂದ ಫಿಟ್ನೆಸ್​ ಸಮಸ್ಯೆ ಎದುರಿಸಿದ್ದರೂ ಸಿಂಧು ಮೇಲೆ ಈ ಬಾರಿಯೂ ಪದಕ ನಿರೀಕ್ಷೆ ಮಾಡಲಾಗಿತ್ತು. ಪ್ರೀ ಕ್ವಾರ್ಟರ್​ ಫೈನಲ್​ ತನಕ ಅವರು ಗೆದ್ದು ಬಂದ ಹಾದಿಯನ್ನು ನೋಡುವಾಗ ಈ ಬಾರಿಯೂ ಪದಕ ಖಚಿತ ಎಂದು ನಂಬಲಾಗಿತ್ತು. ಆದರೆ, ಗುರುವಾರ ರಾತ್ರಿ ನಡೆದಿದ್ದ ಪ್ರೀ ಕ್ವಾರ್ಟರ್‌ ಫೈನಲ್​ನಲ್ಲಿ ಸಿಂಧು ಚೀನಾದ ಹಿ ಬಿಂಗ್‌ ಜಿಯಾವೊ ವಿರುದ್ಧ ಸೋಲು ಅನುಭವಿಸಿ ಒಲಿಂಪಿಕ್ಸ್​ ಅಭಿಯಾನ ಮುಗಿಸಿದ್ದರು.

‘ನನ್ನ ಭವಿಷ್ಯದ ಕುರಿತು ನಾನು ಸ್ಪಷ್ಟವಾಗಿದ್ದೇನೆ. ನಾನು ಸ್ವಲ್ಪ ವಿರಾಮ ಪಡೆದ ಮತ್ತೆ ಬ್ಯಾಡ್ಮಿಂಟನ್​ನಲ್ಲಿ ಮುಂದುವರಿಯುತ್ತೇನೆ. ನನ್ನ ದೇಹ ಮತ್ತು ಮನಸ್ಸಿಗೆ ವಿರಾಮ ಬೇಕು. ಮುಂದಿನ ಪ್ರಯಾಣವನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಲು ನಾನು ಯೋಜನೆ ರೂಪಿಸಿದ್ದೇನೆ’ ಎಂದು ಹೇಳುವ ಮೂಲಕ ತಮ್ಮ ನಿವೃತ್ತಿ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ PV Sindhu: ನೂತನ ಕೋಚ್​ ಮೊರೆ ಹೋದ ಪಿ.ವಿ. ಸಿಂಧು

ಕಳೆದ ವರ್ಷ ಮೊಣಕಾಲಿನ ಗಾಯಕ್ಕಾಗಿ ವಿಶ್ರಾಂತಿ ಪಡೆದು, ಚೇತರಿಸಿಕೊಂಡ ಬಳಿಕ ಅವರಿಗೆ ಫಾರ್ಮ್‌ ಕಂಡುಕೊಳ್ಳಲು ಸಾಧ್ಯವಾಗಿಲ್ಲ. 2 ವರ್ಷಗಳಿಂದೀಚೆಗೆ ಆಡಿದ ಎಲ್ಲ ಟೂರ್ನಿಯಲ್ಲಿ ಹೀನಾಯ ಸೋಲು ಕಂಡಿದ್ದರು. 2ನೇ ಸುತ್ತು ಪ್ರವೇಶಿಸಲು ಕೂಡ ಹೆಣಗಾಡುತ್ತಿದ್ದರು.

ಆಗಸ್ಟ್ 3ರ ಭಾರತದ ವೇಳಾಪಟ್ಟಿಯ ನೋಟ ಇಲ್ಲಿದೆ

ಮಧ್ಯಾಹ್ನ 12:30: ಶೂಟಿಂಗ್ – ಮಹಿಳಾ ಸ್ಕೀಟ್ ಅರ್ಹತಾ ಸುತ್ತಿನ ದಿನ ಮೊದಲ ದಿನ, ರೈಜಾ ಧಿಲ್ಲಾನ್ ಮತ್ತು ಮಹೇಶ್ವರಿ ಚೌಹಾಣ್.

ಮಧ್ಯಾಹ್ನ 1 ಗಂಟೆ: ಶೂಟಿಂಗ್; ಮಹಿಳೆಯರ 25 ಮೀಟರ್ ಪಿಸ್ತೂಲ್ ಫೈನಲ್​​ನಲ್ಲಿ ಮನು ಭಾಕರ್ (ಪದಕದ ಸ್ಪರ್ಧೆ)

ಮಧ್ಯಾಹ್ನ 1:52: ಆರ್ಚರಿ – ಮಹಿಳೆಯರ ವೈಯಕ್ತಿಕ 16ನೇ ಸುತ್ತಿನ ಪಂದ್ಯದಲ್ಲಿ ದೀಪಿಕಾ ಕುಮಾರಿ ಮತ್ತು ಜರ್ಮನಿಯ ಮಿಚೆಲ್ ಕ್ರೊಪೆನ್ ನಡುವೆ ಹಣಾಹಣಿ

ಇದನ್ನೂ ಓದಿ: IND vs SL ODI : ನಾಟಕೀಯ ತಿರುವು; ಲಂಕಾ ವಿರುದ್ಧದ ಮೊದಲ ಏಕ ದಿನ ಪಂದ್ಯ ಟೈ

ಮಧ್ಯಾಹ್ನ 2:05: ಆರ್ಚರಿ – ಮಹಿಳೆಯರ ವೈಯಕ್ತಿಕ 16ನೇ ಸುತ್ತಿನ ಪಂದ್ಯದಲ್ಲಿ ಭಜನ್ ಕೌರ್ ಮತ್ತು ಡಯಾನಂದಾ ಕೊಯಿರುನ್ನಿಸಾ.

ಮಧ್ಯಾಹ್ನ 3:45 ಸೇಯ್ಲಿಂಗ್​​- ಪುರುಷರ ಡಿಂಗ್ಲೇ ರೇಸ್ 5 ಮತ್ತು 6ರಲ್ಲಿ ವಿಷ್ಣು ಸರವಣನ್ ಸ್ಪರ್ಧಿಸಲಿದ್ದಾರೆ.

ಸಂಜೆ 5:55: ಸೇಯ್ಲಿಂಗ್; ಮಹಿಳೆಯರ ಡಿಂಗ್ಲೇ ರೇಸ್ 5 ಮತ್ತು 6 ರಲ್ಲಿ ನೇತ್ರಾ ಕುಮನನ್ ಭಾಗಿಯಾಗಲಿದ್ದಾರೆ.

ರಾತ್ರಿ 11:05: ಶಾಟ್ ಪುಟ್ ಫೈನಲ್ ; ತಜಿಂದರ್ಪಾಲ್ ಸಿಂಗ್ ತೂರ್ (ಅರ್ಹತೆ ಪಡೆದರೆ).

ರಾತ್ರಿ 12:02 : ಪುರುಷರ 71 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್​​ನಲ್ಲಿ ನಿಶಾಂತ್ ದೇವ್ ಮತ್ತು ಮೆಕ್ಸಿಕೊದ ಮಾರ್ಕೊ ವರ್ಡೆ.

Continue Reading

ಕ್ರೀಡೆ

IPL 2025: ಇನ್ನು ಮುಂದೆ ಹೀಗೆ ಮಾಡಿದರೆ ವಿದೇಶಿ ಆಟಗಾರರಿಗೆ ಐಪಿಎಲ್​ನಿಂದ 2 ವರ್ಷ ನಿಷೇಧ?

IPL 2025: ಗಾಯದ ಸಮಸ್ಯೆ ಅಥವಾ ಗಂಭೀರವಾದ ಕೆಲ ವೈಯಕ್ತಿಕ ಕಾರಣಗಳು ಇದ್ದ ವೇಳೆ ಈ ನಿಷೇಧ ಶಿಕ್ಷೆ ಅನ್ವಯ ಮಾಡಬಾರದು ಎಂದು ಫ್ರಾಂಚೈಸಿಗಳು ಒಪ್ಪಿಕೊಂಡಿದೆ. ಆದರೆ, ಕುಂಟು ನೆಪವೊಡ್ಡಿ ಟೂರ್ನಿಯಿಂದ ಕೊನೆ ಗಳಿಗೆಯಲ್ಲಿ ಹಿಂದೆ ಸರಿಯುವ ಆಟಗಾರರಿಗೆ ಈ ಶಿಕ್ಷೆ ವಿಧಿಸಬೇಕು ಎನ್ನುವುದು ಫ್ರಾಂಚೈಸಿಗಳ ವಾದ.

VISTARANEWS.COM


on

IPL 2025
Koo

ಮುಂಬಯಿ: ವಿಶ್ವದ ಅತ್ಯಂತ ಶ್ರೀಮಂತ ಹಾಗೂ ಜನಪ್ರಿಯ ಕ್ರಿಕೆಟ್​​ ಟೂರ್ನಿಯಾಗಿರುವ ಇಂಡಿಯನ್​ ಪ್ರೀಮಿಯರ್​ ಲೀಗ್​(ಐಪಿಎಲ್​)ನಲ್ಲಿ ಪಾಲ್ಗೊಳ್ಳುವ ವಿದೇಶಿ ಆಟಗಾರರಿಗೆ ಬಿಸಿಸಿಐ ಮತ್ತು ಐಪಿಎಲ್(IPL 2025)​ ಆಡಳಿತ ಮಂಡಳಿ ಕಠಿಣ ನಿಯವೊಂದನ್ನು ಜಾರಿಗೆ ತರಲು ಮುಂದಾಗಿದೆ.

18ನೇ ಆವೃತ್ತಿಯ ಮೆಗಾ ಹರಾಜಿನ ಕುರಿತು ನಡೆದ ಸಭೆಯಲ್ಲಿ ಕೆಲವು ಫ್ರಾಂಚೇಸಿಗಳು(IPL franchises) ಬಿಸಿಸಿಐಗೆ(BCCI) ವಿಶೇಷ ಬೇಡಿಕೆಗಳನ್ನು ಮುಂದಿರಿಸಿತ್ತು. ಇದೇ ವೇಳೆ ಹರಾಜಿನಲ್ಲಿ ಖರೀದಿಸಿದ ವಿದೇಶಿ ಆಟಗಾರ ಅನಗತ್ಯ ಕಾರಣ ನೀಡಿ ತಂಡದ ಪರ ಆಡದೇ ಅರ್ಧದಲ್ಲೇ ಕೈಕೊಟ್ಟರೆ ಇಂತಹ ವಿದೇಶೀ ಆಟಗಾರರಿಗೆ 2 ವರ್ಷ ನಿಷೇಧ ವಿಧಿಸುವಂತೆ ಬಿಸಿಸಿಐಗೆ ಒತ್ತಡ ಹೇರಿವೆ ಎಂದು ವರದಿಯಾಗಿದೆ. ಬಿಸಿಸಿಐ ಕೂಡ ಇದಕ್ಕೆ ಸಮ್ಮತಿ ಸೂಚಿಸಿದೆ ಎಂದು ತಿಳಿದುಬಂದಿದೆ. ಸದ್ಯ ಈ ನಿಯಮ ಅಧಿಕೃತವಾಗಿ ಇನ್ನೂ ಜಾರಿಗೆ ಬಂದಿಲ್ಲ.

ಹರಾಜಿನಲ್ಲಿ ಖರೀದಿಸಿದ ನಂತರ ವಿದೇಶಿ ಆಟಗಾರರು ವೈಯಕ್ತಿಕ ಕಾರಣವೊಡ್ಡಿ ಕೊನೆಯ ಗಳಿಗೆಯಲ್ಲಿ ಟೂರ್ನಿಯಿಂದ ಹಿಂದೆ ಸರಿದ ಹಲವು ನಿದರ್ಶನಗಳಿಗೆ. ದೊಡ್ಡ ಮೊತ್ತ ಪಡೆದ ಆಟಗಾರರೇ ಹೆಚ್ಚಾಗಿ ಈ ರೀತಿ ಕೈಕೊಡುವುದರಿಂದ ಖರೀದಿ ಮಾಡಿದ ತಂಡಕ್ಕೆ ಇದು ಭಾರೀ ಹಿನ್ನಡೆ ಉಂಟು ಮಾಡುತ್ತದೆ. ಈ ಆಟಗಾರಿಗೆ ವ್ಯಯಿಸಿದ ಹಣದಲ್ಲಿ ಕನಿಷ್ಠ 3 ಆಟಗಾರರನ್ನು ಖರೀದಿಸುವ ಅವಕಾಶ ತಂಡಕ್ಕೆ ಲಭಿಸುತ್ತದೆ. ವಿದೇಶಿ ಆಟಗಾರರ ನಿಷೇಧ ಕುರಿತ ವಾದಕ್ಕೆ ಎಲ್ಲಾ 10 ತಂಡಗಳು ಸಹಮತ ವ್ಯಕ್ತಪಡಿಸಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ IPL 2025: ಇಂದು ಐಪಿಎಲ್ ಮೆಗಾ ಹರಾಜು ಕುರಿತು ಸಭೆ; ಫ್ರಾಂಚೈಸಿಗಳಿಂದ ಹಲವು ಬೇಡಿಕೆ!

ಗಾಯದ ಸಮಸ್ಯೆ ಅಥವಾ ಗಂಭೀರವಾದ ಕೆಲ ವೈಯಕ್ತಿಕ ಕಾರಣಗಳು ಇದ್ದ ವೇಳೆ ಈ ನಿಷೇಧ ಶಿಕ್ಷೆ ಅನ್ವಯ ಮಾಡಬಾರದು ಎಂದು ಫ್ರಾಂಚೈಸಿಗಳು ಒಪ್ಪಿಕೊಂಡಿದೆ. ಆದರೆ, ಕುಂಟು ನೆಪವೊಡ್ಡಿ ಟೂರ್ನಿಯಿಂದ ಕೊನೆ ಗಳಿಗೆಯಲ್ಲಿ ಹಿಂದೆ ಸರಿಯುವ ಆಟಗಾರರಿಗೆ ಈ ಶಿಕ್ಷೆ ವಿಧಿಸಬೇಕು ಎನ್ನುವುದು ಫ್ರಾಂಚೈಸಿಗಳ ವಾದ.

ಸಭೆಯಲ್ಲಿ ಸನ್​ರೈಸರ್ಸ್​ ಹೈದರಾಬಾದ್​, ಚೆನ್ನೈ ಸೂಪರ್​ ಕಿಂಗ್ಸ್​, ಹಾಲಿ ಚಾಂಪಿಯನ್​ ಕೆಕೆಆರ್ ಫ್ರಾಂಚೈಸಿ ಮಾಲಿಕರು​ ಕನಿಷ್ಠ 7 ಆಟಗಾರರನ್ನಾದರೂ ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಬೇಕೆಂದು ಬೇಡಿಕೆ ಇರಿಸಿವೆ ಎಂದು ವರದಿಯಾಗಿದೆ. ಇದು ಮಾತ್ರವಲ್ಲದೆ ಮೆಗಾ ಹರಾಜಿನಲ್ಲಿ ಮತ್ತೊಮ್ಮೆ RTM(ರೈಟ್ ಟು ಮ್ಯಾಚ್ ಕಾರ್ಡ್ ಬಳಕೆ) ಕಾರ್ಡ್ ಬಳಸುವ ಬಗ್ಗೆಯೂ ಫ್ರಾಂಚೈಸಿ ಡಿಮ್ಯಾಂಡ್ ಮಾಡಲಿದೆ. 2018ರ ಮೆಗಾ ಹರಾಜಿನಲ್ಲಿ RTMಗೆ ಅವಕಾಶವಿತ್ತು. ಆದರೆ 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಇದನ್ನು ಕೈಬಿಡಲಾಗಿತ್ತು, ಇದೀಗ ಮತ್ತೆ ಈ ನಿಯವನ್ನು ಜಾರಿಗೆ ತರಲು ಫ್ರಾಂಚೈಸಿಗಳು ಒಳವು ತೋರಿದೆ ಎನ್ನಲಾಗಿದೆ.

5 ವರ್ಷಗಳಿಗೊಮ್ಮೆ ಮೆಗಾ ಹರಾಜು?

ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ

Continue Reading

ಕ್ರೀಡೆ

Neeraj Chopra: ನೀರಜ್​ ಚಿನ್ನ ಗೆದ್ದರೆ ನೀವು ಕೂಡ ಉಚಿತ ವಿದೇಶ ಪ್ರವಾಸ ಕೈಗೊಳ್ಳಬಹುದು; ಇದು ಹೇಗೆ ಸಾಧ್ಯ?

Neeraj Chopra: ನೀರಜ್​ ಚೋಪ್ರಾ ಚಿನ್ನ ಗೆದ್ದರೆ, ಎಲ್ಲರಿಗೂ ಉಚಿತ ವೀಸಾ(Free visa) ನೀಡುವುದಾಗಿ ಆನ್‌ಲೈನ್ ವೀಸಾ ಅಪ್ಲಿಕೇಶನ್ ಪ್ಲಾಟ್‌ಫಾರ್ಮ್ ಅಟ್ಲಿಸ್‌ನ (Atlys) ಸಂಸ್ಥಾಪಕ ಮತ್ತು ಸಿಇಒ ಮೊಹಕ್ ನಹ್ತಾ (Mohak Nahta) ಭರವಸೆ ನೀಡಿದ್ದಾರೆ.

VISTARANEWS.COM


on

Neeraj Chopra
Koo

ನವದೆಹಲಿ: ಟೋಕಿಯೊ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ, ಭಾರತದ ತಾರಾ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ಅವರು ಇದೀಗ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿಯೂ(paris olympics) ಚಿನ್ನದ ಪದಕ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಈಗಾಗಲೇ ಕಠಿಣ ತಯಾರಿಯನ್ನೂ ಕೂಡ ನಡೆಸಿ ಸಿದ್ಧರಾಗಿದ್ದಾರೆ. ಇದೀಗ ನೀರಜ್​ ಪ್ಯಾರಿಸ್​ನಲ್ಲಿಯೂ ಚಿನ್ನ ಗೆದ್ದರೆ ಸಾಮಾನ್ಯ ಜನರು ಕೂಡ ಒಂದು ಬಾರಿ ತಮ್ಮ ನೆಚ್ಚಿನ ದೇಶಕ್ಕೆ ಉಚಿತವಾಗಿ ವಿಮಾನ ಪ್ರಯಾಣ ಕೈಗೊಳ್ಳುವ ಆಫರ್​ ಒಂದು ಬಂದಿದೆ.

ಹೌದು, ನೀರಜ್​ ಚೋಪ್ರಾ ಚಿನ್ನ ಗೆದ್ದರೆ, ಎಲ್ಲರಿಗೂ ಉಚಿತ ವೀಸಾ(Free visa) ನೀಡುವುದಾಗಿ ಆನ್‌ಲೈನ್ ವೀಸಾ ಅಪ್ಲಿಕೇಶನ್ ಪ್ಲಾಟ್‌ಫಾರ್ಮ್ ಅಟ್ಲಿಸ್‌ನ (Atlys) ಸಂಸ್ಥಾಪಕ ಮತ್ತು ಸಿಇಒ ಮೊಹಕ್ ನಹ್ತಾ (Mohak Nahta) ಭರವಸೆ ನೀಡಿದ್ದಾರೆ. ಲಿಂಕ್ಡ್‌ಇನ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರೆ ನಾನು ಎಲ್ಲರಿಗೂ ಉಚಿತ ವೀಸಾವನ್ನು ಕಳುಹಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಮೋಹಕ್ ನಹ್ತಾ ಅವರು ಈ ಪೋಸ್ಟ್ ಕಂಡ ತಕ್ಷಣ ಅನೇಕ ನೆಟ್ಟಿಗರು ಇದು ಹೇಗೆ ಸಾಧ್ಯ? ಎಷ್ಟು ದಿನ ಈ ಆಫರ್ ಇರಲಿದೆ? ಹೀಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ನೆಟ್ಟಿಗರಿಂದ ಹಲವು ಪ್ರಶ್ನೆಗಳು ಎದುರಾದ ಕಾರಣ ಮೋಹಕ್ ನಹ್ತಾ ಎಲ್ಲ ಪ್ರಶ್ನೆಗಳಿಗೆ ಮತ್ತು ಗೊಂದಕ್ಕೆ ಮತ್ತೊಂದು ಪೋಸ್ಟ್​ ಮೂಲಕ ಉತ್ತರವನ್ನು ನೀಡಿದ್ದಾರೆ.

“ಆಗಸ್ಟ್​ 8ರಂದು ನಡೆಯುವ ಜಾವೆಲಿನ್ ಥ್ರೋ ಫೈನಲ್​ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆದ್ದರೆ, ನಮ್ಮ ಬಳಿ ಬರುವ ಎಲ್ಲ ಗ್ರಾಹಕರಿಗೆ ಒಂದು ದಿನಕ್ಕೆ ಸೀಮಿತವಾಗಿರುವ ಒಂದು ಉಚಿತ ವೀಸಾ ನೀಡುತ್ತೇವೆ. ಯಾವುದೇ ರೂಪದಲ್ಲೂ ಹಣ ಪಡೆಯುವುದಿಲ್ಲ, ಶೂನ್ಯ ಖರ್ಚಿನಲ್ಲಿ ಈ ವೀಸಾ ನೀಡಲಾಗುವುದು. ಯಾವುದೇ ನಿರ್ದಿಷ್ಟ ದೇಶಗಳಿಗೆ ಸೀಮಿತವಲ್ಲ, ನಿಮ್ಮಿಷ್ಟದ ದೇಶಗಳಿಗೆ ವೀಸಾ ನೀಡಲಾಗುವುದು. ಈ ಆಫರ್​ ಪಡೆಯಲು ನೀವು ಎಲ್ಲಿಗೆ ಪ್ರಯಾಣಿಸಲು ಬಯಸುತ್ತೀರೋ ಅದನ್ನು ನೀವೇ ಆಯ್ಕೆ ಮಾಡಿ, ಕಾಮೆಂಟ್‌ಗಳಲ್ಲಿ ನಿಮ್ಮ ಇಮೇಲ್ ನೀಡಿದರೆ ಉಚಿತ ವೀಸಾ ಕ್ರೆಡಿಟ್‌ನೊಂದಿಗೆ ನಾವು ನಿಮ್ಮ ಖಾತೆ ರಚಿಸುತ್ತೇವೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಯಾವ ಸ್ಪರ್ಧಿಗಳು ಕಣಕ್ಕೆ ಇಳಿಯಲಿದ್ದಾರೆ? ಎಲ್ಲ ಮಾಹಿತಿ ಇಲ್ಲಿದೆ

23 ವರ್ಷದ ನೀರಜ್ ಚೋಪ್ರಾ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಈ ಬಾರಿಯ ಒಲಿಂಪಿಕ್ಸ್​ನಲ್ಲಿ 90 ಮೀ. ದೂರ ಎಸೆಯುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಕಾಶಿನಾಥ್ ನಾಯ್ಕ್ ಅವರು ನೀರಜ್ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸದಿಂದ ಈ ಮಾತನ್ನು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿನಾಥ್, “ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದಾರೆ.

Continue Reading

ಕ್ರೀಡೆ

Rohit Sharma: ಲಂಕಾ ವಿರುದ್ಧ ಅರ್ಧಶತಕ ಬಾರಿಸಿ ಹಲವು ದಾಖಲೆ ಬರೆದ ರೋಹಿತ್​ ಶರ್ಮ

Rohit Sharma: ರೋಹಿತ್​ ತಮ್ಮ ಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೂರು ಸಿಕ್ಸರ್​​ ಬಾರಿಸುವ ಮೂಲಕ ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡರು.

VISTARANEWS.COM


on

Rohit Sharma
Koo

ಕೊಲಂಬೊ: ಶ್ರೀಲಂಕಾ(Sri Lanka vs India 1st ODI) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿ ಅರ್ಧಶತಕ ಬಾರಿಸಿದ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಹಕವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವರ ದಾಖಲೆಯ ಪಟ್ಟಿ ಹೀಗಿದೆ.

ಸಿಕ್ಸರ್​ ದಾಖಲೆ

47 ಎಸೆತಗಳಿಂದ 58 ರನ್​ ಬಾರಿಸಿದ ರೋಹಿತ್​ ತಮ್ಮ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್​ ಬಾರಿಸಿದರು. ಈ ಮೂರು ಸಿಕ್ಸರ್​​ ಬಾರಿಸಿದ ವೇಳೆ ರೋಹಿತ್​ ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್‌ ಮಾರ್ಗನ್​(233 ಸಿಕ್ಸರ್​) ಹೆಸರಿನಲ್ಲಿತ್ತು. ಇದೀಗ ರೋಹಿತ್(234 ಸಿಕ್ಸರ್​)​ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ. 211 ಸಿಕ್ಸರ್​ ಬಾರಿಸಿರುವ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ.

ನಾಯಕನಾಗಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಆಟಗಾರರು


ರೋಹಿತ್​ ಶರ್ಮ-234 ಸಿಕ್ಸರ್​

ಇಯಾನ್​ ಮಾರ್ಗನ್​-233 ಸಿಕ್ಸರ್

ಮಹೇಂದ್ರ ಸಿಂಗ್​ ಧೋನಿ-211 ಸಿಕ್ಸರ್​

ರಿಕಿ ಪಾಂಟಿಂಗ್​-171 ಸಿಕ್ಸರ್​

ಬ್ರೆಂಡನ್​ ಮೆಕಲಮ್​-170 ಸಿಕ್ಸರ್​ 

ಆರಂಭಿಕನಾಗಿ 15 ಸಾವಿರ ರನ್​

ರೋಹಿತ್​ ಶರ್ಮ 58 ರನ್​ ಬಾರಿಸುಮ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಅತೀ ವೇಗವಾಗಿ 15 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ, ಒಟ್ಟಾರೆಯಾಗಿ 10ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಡೇವಿಡ್ ವಾರ್ನರ್ 15 ಸಾವಿರ ರನ್ ಪೂರೈಸಲು 361 ಇನಿಂಗ್ಸ್​ಗಳನ್ನು ತೆಗೆದುಕೊಂಡಿದ್ದರು. ಈ ಮೂಲಕ ಅತೀ ವೇಗವಾಗಿ 15000 ರನ್ ಕಲೆಹಾಕಿದ ವಿಶ್ವದ 2ನೇ ಆರಂಭಿಕ ಆಟಗಾರ ಎನಿಸಿಕೊಂಡಿದ್ದರು. ಇದೀಗ ರೋಹಿತ್​ ಕೇವಲ 352 ಇನಿಂಗ್ಸ್​ಗಳ ಮೂಲಕ 15 ಸಾವಿರ ರನ್ ಕಲೆಹಾಕಿ ವಾರ್ನರ್​ ದಾಖಲೆ ಹಿಂದಿಕ್ಕಿದ್ದಾರೆ. ದಾಖಲೆ ಸಚಿನ್​ ತೆಂಡೂಲ್ಕರ್​ ಹೆಸರಿನಲ್ಲಿದೆ. ಸಚಿನ್​ ಆರಂಭಿಕನಾಗಿ 331 ಇನಿಂಗ್ಸ್​ಗಳ ಮೂಲಕ ಈ ದಾಖಲೆ ನಿರ್ಮಿಸಿದ್ದರು.

ಇದನ್ನೂ ಓದಿ Rohit Sharma : ಟಿ20 ನಿವೃತ್ತಿಯಲ್ಲ, ಅದು ವಿಶ್ರಾಂತಿ; ಕೌತುಕ ಮೂಡಿಸಿದ ರೋಹಿತ್ ಶರ್ಮಾ ಹೇಳಿಕೆ

ಪಂದ್ಯ ಟೈ


ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ರೋಚಕ ಹಣಾಹಣಿಗೆ ಸಾಕ್ಷಿಯಾಗಿ ಟೈ ನಲ್ಲಿ ಅಂತ್ಯಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 47.5 ಓವರ್ ಗಳಲ್ಲಿ 230 ರನ್ ಗಳಿಗೆ ಆಲೌಟಾಯಿತು. ಗೆಲುವಿಗೆ ಒಂದು ರನ್​ ಬೇಕಿದ್ದಾಗ ಶಿವಂ ದುಬೆ ಮತ್ತು ಅರ್ಶ್​ದೀಪ್​ ಸಿಂಗ್​ ಸತತವಾಗಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದು ವಿಕೆಟ್​ ಕೈಚೆಲ್ಲಿದರು. ಸೋಲುವ ಭೀತಿಯಲ್ಲಿದ್ದ ಲಂಕಾ ಅಸಾಮಾನ್ಯ ಪ್ರದರ್ಶನ ತೋರಿ ಪಂದ್ಯವನ್ನು ಟೈ ಗೊಳಿಸುವ ಮೂಲಕ ನಿಟ್ಟುಸಿರುಬಿಟ್ಟಿತು.

Continue Reading
Advertisement
Physical abuse
ದೇಶ8 mins ago

Physical Abuse: ಹಾಸಿಗೆ ಹಿಡಿದಿದ್ದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ

BJP-JDS Padayatra ST Somashekhar
ಪ್ರಮುಖ ಸುದ್ದಿ14 mins ago

BJP-JDS Padayatra: ಅಸಮಾಧಾನಗೊಂಡ ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಜನಾಂದೋಲನಕ್ಕೆ ಬೆಂಬಲ?

road Accident
ಚಿತ್ರದುರ್ಗ17 mins ago

Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

Gold Rate Today
ಚಿನ್ನದ ದರ21 mins ago

Gold Rate Today: ಕೊನೆಗೂ ಆಭರಣ ಪ್ರಿಯರಿಗೆ ಸಿಕ್ತು ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಳಿಕೆ

Akshay Kumar Bollywood folks send him condolence messages
ಬಾಲಿವುಡ್25 mins ago

Akshay Kumar: ನಾನು ಸತ್ತೇ ಹೋದೆ ಎಂಬ ರೀತಿಯಲ್ಲಿ ಸಂತಾಪದ ಸಂದೇಶ ಕಳಿಸುತ್ತಾರೆ ಎಂದು ಗರಂ ಆದ ಅಕ್ಷಯ್‌ ಕುಮಾರ್‌!

PV Sindhu
ಕ್ರೀಡೆ28 mins ago

PV Sindhu: ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಅವಳಿ ಒಲಿಂಪಿಕ್​ ಪದಕ ವಿಜೇತೆ ಪಿ.ವಿ. ಸಿಂಧು

Ramakrishna Ashram
ರಾಯಚೂರು43 mins ago

Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

IPL 2025
ಕ್ರೀಡೆ58 mins ago

IPL 2025: ಇನ್ನು ಮುಂದೆ ಹೀಗೆ ಮಾಡಿದರೆ ವಿದೇಶಿ ಆಟಗಾರರಿಗೆ ಐಪಿಎಲ್​ನಿಂದ 2 ವರ್ಷ ನಿಷೇಧ?

Wayanad Landslide
ದೇಶ1 hour ago

Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 344ಕ್ಕೆ ಏರಿಕೆ; ರಾಡಾರ್‌ಗೆ ಸಿಕ್ಕ ನಿಗೂಢ ಉಸಿರಾಟ ಯಾರದ್ದು?

meghashree DC Wayanad landslide 2
ಪ್ರಮುಖ ಸುದ್ದಿ1 hour ago

Wayanad Landslide: ವಯನಾಡ್‌ನಲ್ಲಿ ಕರ್ತವ್ಯಪರತೆ ಮೆರೆದ ಕನ್ನಡತಿ ಜಿಲ್ಲಾಧಿಕಾರಿ, ಭೂಕುಸಿತ ಸ್ಥಳದಲ್ಲೇ ಮೊಕ್ಕಾಂ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ6 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌