IND vs WI ODI: ಭಾರತ-ವಿಂಡೀಸ್​ ಏಕದಿನ ಪಂದ್ಯದ ಪಿಚ್​ ರಿಪೋರ್ಟ್​,ಹವಾಮಾನ ವರದಿ, ಸಂಭಾವ್ಯ ತಂಡ - Vistara News

ಕ್ರಿಕೆಟ್

IND vs WI ODI: ಭಾರತ-ವಿಂಡೀಸ್​ ಏಕದಿನ ಪಂದ್ಯದ ಪಿಚ್​ ರಿಪೋರ್ಟ್​,ಹವಾಮಾನ ವರದಿ, ಸಂಭಾವ್ಯ ತಂಡ

ಭಾರತ ಮತ್ತು ವಿಂಡೀಸ್ ನಡುವಿನ ಮೂರು ಏಕದಿನ ಸರಣಿಯ ಮೊದಲ ಪಂದ್ಯ ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಅಂಗಳದಲ್ಲಿ ನಡೆಯಲಿದೆ.

VISTARANEWS.COM


on

Kensington Oval, Bridgetown, Barbados
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾರ್ಬಡೋಸ್​: ಟೆಸ್ಟ್​ ಮುಗಿದ ಬೆನ್ನಲ್ಲೇ ಭಾರತ ಮತ್ತು ವಿಂಡೀಸ್(IND vs WI ODI)​ ಸೀಮಿತ ಓವರ್​ಗಳ ಕ್ರಿಕೆಟ್​ ಸರಣಿಯತ್ತ ಮುನ್ನಡೆದಿದೆ. ಉಭಯ ತಂಡಗಳ ನಡುವಿನ ಮೂರು ಏಕದಿನ ಸರಣಿಯ ಮೊದಲ ಪಂದ್ಯ ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಅಂಗಳದಲ್ಲಿ ನಡೆಯಲಿದೆ. ಈ ಪಂದ್ಯದ ಪಿಚ್​ ರಿಪೋರ್ಟ್​, ಹವಾಮಾನ ವರದಿ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಇಂತಿದೆ.

ಪಿಚ್​ ರಿಪೋರ್ಟ್​

ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್​ ಸ್ಟೇಡಿಯಂನ(Kensington Oval, Bridgetown, Barbados) ಪಿಚ್​ ವೇಗಿಗಳಿಗೆ ಹೆಚ್ಚಿನ ನೆರವು ನೀಡುತ್ತದೆ. ಇದು ಬೌನ್ಸಿ ಪಿಚ್​ ಆಗಿದ್ದು ಇಲ್ಲಿ ದೊಡ್ಡ ಮೊತ್ತ ದಾಖಲಿಸುವುದು ಕಷ್ಟಕರ. ಅದರಲ್ಲೂ ಮೊದಲು ಬ್ಯಾಟಿಂಗ್​ ನಡೆಸುವ ತಂಡಕ್ಕೆ ಇಲ್ಲಿ ರನ್​ಗಳಿಸುವುದು ಅಷ್ಟು ಸುಲಭವಲ್ಲ. ಇಲ್ಲಿ ಇದುವರೆಗೆ 49 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ 25 ಬಾರಿ ಚೇಸಿಂಗ್​ ನಡೆಸಿದ ತಂಡ ಮೇಲುಗೈ ಸಾಧಿಸಿದೆ. 364 ರನ್​ ಇಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿದೆ. ಇಂಗ್ಲೆಂಡ್​ ತಂಡ ಈ ಮೊತ್ತವನ್ನು ಬಾರಿಸಿತ್ತು. ಇಲ್ಲಿನ ಎವರೇಜ್​ ರನ್​ ಗಳಿಕೆ 229. ಟಾಸ್​ ಗೆದ್ದ ತಂಡ ಬೌಲಿಂಗ್​ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಬೌನ್ಸಿ ಪಿಚ್​ ಆದ ಕಾರಣ ಉಭಯ ತಂಡಗಳಲ್ಲಿಯೂ ಸ್ಪಿನ್​ ಬದಲು ಹೆಚ್ಚುವರಿಯಾಗಿ ವೇಗಿಗಳು ಕಾಣಿಸಿಕೊಂಡರು ಅಚ್ಚರಿಯಿಲ್ಲ.

ಹವಾಮಾನ ವರದಿ

ವೆಸ್ಟ್​ ಇಂಡೀಸ್​ನ ಕೆಲ ಭಾಗದಲ್ಲಿ ಮಾನ್ಸೂನ್​ ಆರಂಭವಾಗಿದೆ. ಪೋರ್ಟ್​ ಆಫ್​ ಸ್ಪೇನ್​ನಲ್ಲಿ ನಡೆದ ಅಂತಿಮ ಟೆಸ್ಟ್​ ಪಂದ್ಯದ ನಾಲ್ಕನೇ ಮತ್ತು ಕೊನೆಯ ದಿನ ಮಳೆ ಅಡ್ಡಿಪಡಿಸಿತ್ತು. ಅದರಲ್ಲೂ 5ನೇ ಮಳೆ ಆಟಕ್ಕೆ ಅನುವು ಮಾಡಿ ಕೊಡಲೇ ಇಲ್ಲ. ಹೀಗಾಗಿ ಪಂದ್ಯವನ್ನು ಡ್ರಾದಲ್ಲಿ ಮುಗಿಸಲಾಗಿತ್ತು. ಇದೀಗ ಗುರುವಾರ ನಡೆಯುವ ಏಕದಿನ ಪಂದ್ಯಕ್ಕೂ ಶೇ.7 ರಷ್ಟು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಭಾವ್ಯ ತಂಡಗಳು

ವೆಸ್ಟ್​ ಇಂಡೀಸ್​: ಶೈ ಹೋಪ್‌ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ),ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಿಮ್ರಾನ್‌ ಹೆಟ್‌ಮೇರ್‌, ಅಲ್ಜಾರಿ ಜೋಸೆಫ್, ರೊಮಾರಿಯೋ ಶೆಫರ್ಡ್, ಕೆವಿನ್​ ಸಿಂಕ್ಲರ್​, ಒಶಾನೆ ಥೋಮಸ್, ಬ್ರ್ಯಾಂಡನ್ ಕಿಂಗ್.

ಇದನ್ನೂ ಓದಿ Ind vs wi : ಟೆಸ್ಟ್​ ಸರಣಿಯಲ್ಲಿ ಮ್ಯಾನ್​ ಆಫ್​ ದಿ ಸೀರಿಸ್ ಪ್ರಶಸ್ತಿಯೇ ಕೊಟ್ಟಿಲ್ಲ!

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ,ಯಜುವೇಂದ್ರ ಚಾಹಲ್ ಜೈದೇವ್​ ಉನಾದ್ಕತ್​. ಮೊಹಮ್ಮದ್​ ಸಿರಾಜ್, ಉಮ್ರಾನ್ ಮಲಿಕ್/ಶಾರ್ದೂಲ್ ಠಾಕೂರ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs CAN: ಕೆನಡಾ ಪಂದ್ಯಕ್ಕೆ ಕೊಹ್ಲಿ,ಜಡೇಜಾ, ಅಕ್ಷರ್​ಗೆ ರೆಸ್ಟ್​​!​

IND vs CAN: ಈಗಾಗಲೇ ಭಾರತ(Team India) ಆಡಿದ ಎಲ್ಲ ಮೂರು ಪಂದ್ಯಗಳನ್ನು ಗೆದ್ದು ಸೂಪರ್​-8ಗೆ ಅರ್ಹತೆ ಪಡೆದಿದೆ. ಹೀಗಾಗಿ ಕೊಹ್ಲಿ ಅವರಿಗೆ ಅಂತಿಮ ಪಂದ್ಯದಲ್ಲಿ ಬಿಸಿಸಿಐ ವಿಶ್ರಾಂತಿ ನೀಡಲು ಬಯಸಿದೆ ಎಂದು ತಿಳಿದುಬಂದಿದೆ.

VISTARANEWS.COM


on

IND vs CAN
Koo

ನ್ಯೂಯಾರ್ಕ್​: ಕಳೆದ ಮೂರು ಪಂದ್ಯಗಳಲ್ಲಿ ಸತತವಾಗಿ ಬ್ಯಾಟಿಂಗ್​ ವೈಫಲ್ಯ ಕಂಡು ಒಂದಂಕಿಗೆ ಸೀಮಿತರಾದ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಅವರನ್ನು ಕೆನಡಾ(IND vs CAN) ವಿರುದ್ಧದ ಪಂದ್ಯದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ತಂಡದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಈಗಾಗಲೇ ಭಾರತ(Team India) ಆಡಿದ ಎಲ್ಲ ಮೂರು ಪಂದ್ಯಗಳನ್ನು ಗೆದ್ದು ಸೂಪರ್​-8ಗೆ ಅರ್ಹತೆ ಪಡೆದಿದೆ. ಹೀಗಾಗಿ ಕೊಹ್ಲಿ ಅವರಿಗೆ ಅಂತಿಮ ಪಂದ್ಯದಲ್ಲಿ ಬಿಸಿಸಿಐ ವಿಶ್ರಾಂತಿ ನೀಡಲು ಬಯಸಿದೆ ಎಂದು ತಿಳಿದುಬಂದಿದೆ. ಕೊಹ್ಲಿ ಮಾತ್ರವಲ್ಲದೆ ಅಕ್ಷರ್​ ಪಟೇಲ್, ರವೀಂದ್ರ ಜಡೇಜಾ ಅವರಿಗೂ ವಿಶ್ರಾಂತಿ ನೀಡಿ ಅವರ ಸ್ಥಾನದಲ್ಲಿ ಕುಲ್​ದೀಪ್​ ಮತ್ತು ಯಜುವೇಂದ್ರ ಚಹಲ್​ ಅವರನ್ನು ಆಡಿಸುವ ಸಾಧ್ಯತೆ ಕಂಡುಬಂದಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ ಕೊಹ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಆದರೆ, ಈ ಯಶಸ್ಸು ಕೊಹ್ಲಿಗೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕೈ ಹಿಡಿಯಲಿಲ್ಲ. 1, 4,0 ಇದು ಕೊಹ್ಲಿಯ ಈ ಬಾರಿಯ ಸ್ಕೋರ್​ ಆಗಿದೆ.

ಇದನ್ನೂ ಓದಿ IND vs USA: ಕೊಹ್ಲಿಯ ವಿಕೆಟ್​ ಪತನ ಕಂಡು ದಂಗಾದ ರೋಹಿತ್​ ಶರ್ಮ; ವಿಡಿಯೊ ವೈರಲ್​

ಕೊಹ್ಲಿ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಅಥವಾ ಸಂಜು ಸ್ಯಾಮ್ಸನ್ ಆಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿವೆ. ಕೆನಡಾ ವಿರುದ್ಧದ ಪಂದ್ಯ ನಡೆಯುವುದು ಕೂಡ ಅನುಮಾನ ಎನ್ನುವಂತಿದೆ. ಪಂದ್ಯ ನಡೆಯುವ ಫ್ಲೊರಿಡಾದಲ್ಲಿ ಈಗಾಗಲೇ ಭಾರೀ ಮಳೆ ಸುರಿದು ರಸ್ತೆಗಳೆಲ್ಲ ಹೊಳೆಯಂತಾಗಿದೆ. ಸೂಪರ್ 8ರಲ್ಲಿ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಭಾರತಕ್ಕೆ ಎದುರಾಗುವ ಸಾಧ್ಯತೆ ಕಂಡು ಬಂದಿದೆ.

ಕೆನಡಾ ವಿರುದ್ಧದ ಪಂದ್ಯ ಮುಕ್ತಾಯಗೊಂಡ ತಕ್ಷಣ ಶುಭಮನ್​ ಗಿಲ್(Shubman Gill)​ ಮತ್ತು ಅವೇಶ್​ ಖಾನ್(Avesh Khan)​ ತವರಿಗೆ ಮರಳಲಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಜೂನ್​ 15ರಂದು ಉಭಯ ಆಟಗಾರರು ಭಾರತಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿಸಿದೆ. ಶುಭಮನ್ ಗಿಲ್ ಮತ್ತು ಅವೇಶ್ ಖಾನ್ ತಂಡದಲ್ಲಿ ಪ್ರಯಾಣ ಮೀಸಲು ಭಾಗವಾಗಿ ಸ್ಥಾನ ಪಡೆದಿದ್ದರು.

ಕೊಹ್ಲಿ ವೈಫಲ್ಯಕ್ಕೆ ನಿಧಾನಗತಿ ಪಿಚ್ ಕಾರಣ!


ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೂಕ್ತ ಎನ್ನುವಂತಿದೆ.

Continue Reading

ಕ್ರೀಡೆ

Yusuf Pathan: ಜಮೀನು ಒತ್ತುವರಿ ಆರೋಪ; ನೂತನ ಸಂಸದ ಯೂಸುಫ್ ಪಠಾಣ್​ಗೆ ನೋಟಿಸ್

Yusuf Pathan: ಜೂನ್‌ 6ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಿ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹೇಳಲಾಗಿದೆ. ಜತೆಗೆ ಒಂದೆರಡು ವಾರಗಳ ಕಾಲಾವಕಾಶ ನೀಡಲಾಗಿದೆ ಎಂದು ವಿಎಂಸಿಯ ಸ್ಥಾಯಿ ಸಮಿತಿ ಅಧ್ಯಕ್ಷ ಶೀತಲ್‌ ಮಿಸ್ತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Yusuf Pathan
Koo

ವಡೋದರಾ: ಮೊನೆಯಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಹರಂಪುರ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್‌‍ (ಟಿಎಂಸಿ) ಪಕ್ಷದಿಂದ ಸ್ಪರ್ಧಿಸಿ ಸಂಸದರಾದ ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್‌ ಪಠಾಣ್‌(Yusuf Pathan) ಸಂಕಷ್ಟವೊಂದರಲ್ಲಿ ಸಿಲುಕಿದ್ದಾರೆ. ನಾಗರಿಕರ ಜಮೀನನ್ನು ಒತ್ತುವರಿ ಮಾಡಿದ ಆರೋಪದ ಮೇಲೆ ವಡೋದರಾ ಮುನ್ಸಿಪಲ್‌ ಕಾರ್ಪೊರೇಷನ್‌ (ವಿಎಂಸಿ) ಯೂಸುಫ್‌ ಅವರಿಗೆ ನೋಟಿಸ್‌‍ ಜಾರಿಗೊಳಿಸಿದೆ. ಜೂನ್‌ 6 ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿಯ ಮಾಜಿ ಕಾರ್ಪೊರೇಟರ್‌ ವಿಜಯ್‌ ಪವಾರ್‌ ಅವರು ಯೂಸುಫ್‌ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ್ದರು. 2012ರಲ್ಲಿ ಪಠಾಣ್‌ಗೆ ನಿವೇಶನ ಮಾರಾಟ ಮಾಡುವ ವಿಎಂಸಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದರೂ, ಹೊಸದಾಗಿ ಆಯ್ಕೆಯಾದ ಸಂಸದರು ಕಾಂಪೌಂಡ್‌ ಗೋಡೆ ನಿರ್ಮಿಸಿ ನಿವೇಶನವನ್ನು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಯೂಸುಫ್‌ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಟಿಪಿ 22ರ ಅಡಿಯಲ್ಲಿ ತನದಲ್ಜಾ ಪ್ರದೇಶದಲ್ಲಿನ ಪ್ಲಾಟ್‌ ವಿಎಂಸಿ ಒಡೆತನದ ವಸತಿ ಪ್ಲಾಟ್‌ ಆಗಿದೆ. 2012 ರಲ್ಲಿ ಪಠಾಣ್‌ ಅವರು ವಿಎಂಸಿಯಿಂದ ಈ ನಿವೇಶನವನ್ನು ಕೇಳಿದ್ದರು. ಆ ಸಮಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಅವರ ಮನೆ, ಆ ಪ್ಲಾಟ್‌ನ ಪಕ್ಕದಲ್ಲಿ ಇತ್ತು. ಪಠಾಣ್‌ ಅವರು ನಿವೇಶನವನ್ನು ಒತ್ತುವರಿ ಮಾಡಿಕೊಂಡು ಸುತ್ತಲೂ ಕಾಂಪೌಂಡ್‌ ಗೋಡೆ ನಿರ್ಮಿಸಿದ್ದರು. ಹೀಗಾಗಿ ನಗರಸಭೆಗೆ ತನಿಖೆ ನಡೆಸುವಂತೆ ಕೋರಿದ್ದೇನೆ ಎಂದು ಪವಾರ್‌ ಹೇಳಿದ್ದಾರೆ.

ಅತಿಕ್ರಮಣಕ್ಕಾಗಿ ಅವರಿಗೆ ನೋಟಿಸ್‌‍ ನೀಡಲಾಗಿದೆ ಎಂದು ವಿಎಂಸಿಯ ಸ್ಥಾಯಿ ಸಮಿತಿ ಅಧ್ಯಕ್ಷ ಶೀತಲ್‌ ಮಿಸ್ತ್ರಿ ಹೇಳಿದ್ದಾರೆ. ಇತ್ತೀಚೆಗೆ, ಪಠಾಣ್​ ಕಾಂಪೌಂಡ್‌ ಗೋಡೆಯನ್ನು ನಿರ್ಮಿಸಿದ ಬಗ್ಗೆ ನಮಗೆ ಕೆಲವು ದೂರುಗಳು ಬಂದವು. ಹೀಗಾಗಿ ಜೂನ್‌ 6ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಿ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹೇಳಿದ್ದೆವೆ. ನಾವು ಒಂದೆರಡು ವಾರಗಳ ಕಾಲ ಕಾಯುತ್ತೇವೆ ಮತ್ತು ನಂತರ ನಾವು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ. ಈ ಭೂಮಿ ವಿಎಂಸಿಗೆ ಸೇರಿದ್ದು, ಅದನ್ನು ವಾಪಸ್‌‍ ಪಡೆಯುತ್ತೇವೆ ಎಂದು ಮಿಸ್ತ್ರಿ ಹೇಳಿದ್ದಾರೆ.

ಇದನ್ನೂ ಓದಿ Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದಿದ್ದರು. ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಲಾಗಿತ್ತು.

Continue Reading

ಕ್ರೀಡೆ

Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ

Shakib Al Hasan: ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಶಕೀಬ್​ ಅವರು ಅಜೇಯ 64 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಮ್ಯಾಚ್​ ವಿನ್ನಿಂಗ್​ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.

VISTARANEWS.COM


on

Shakib Al Hasan
Koo

ನ್ಯೂಯಾರ್ಕ್​: ಕಳೆದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಬಾಂಗ್ಲಾದೇಶ ತಂಡದ ನಾಯಕ ಶಕೀಬ್​ ಅಲ್​ ಹಸನ್(Shakib Al Hasan)​ ಅವರನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಕೈಬಿಟ್ಟರೆ ಉತ್ತಮ ಎಂದು ಹೇಳಿದ್ದ ಟೀಮ್​ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹವಾಗ್​ಗೆ(Virender Sehwag) ಶಕೀಬ್​ ತಿರಿಗೇಟು ನೀಡಿದ್ದಾರೆ.

ಗುರುವಾರ ನಡೆದಿದ್ದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೆದರ್ಲೆಂಡ್ಸ್(Bangladesh vs Netherlands)​ ವಿರುದ್ಧ 25 ರನ್​ ಅಂತರದ ಗೆಲುವು ಸಾಧಿಸಿ ಸೂಪರ್​-8 ಪ್ರವೇಶವನ್ನು ಜೀವಂತವಾಗಿ ಇರಿಸಿದೆ. ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಶಕೀಬ್​, ಯಾವುದೇ ತಂಡದ ಆಟಗಾರರು ಮೂರನೇ ವ್ಯಕ್ತಿಯ ಪ್ರಶ್ನೆಗಳಿಗೆ ಉತ್ತರಿಸಲು ಆಡುತ್ತಿಲ್ಲ. ತಮ್ಮ ತಂಡಕ್ಕೆ ಹೆಚ್ಚಿನ ಕೊಡುಗೆ ನೀಡುವ ಜವಾಬ್ದಾರಿಯಿಂದ ಅಷ್ಟೇ. ಅದು ಒಬ್ಬ ಬ್ಯಾಟ್ಸ್​ಮನ್​, ಬೌಲರ್ ಅಥವಾ ಫೀಲ್ಡರ್​ ಆಗಿಯೂ ಇರಬಹುದು. ಕೊಡುಗೆ ನೀಡುವಲ್ಲಿ ವಿಫಲರಾದರೆ, ತಮ್ಮ ಫಾರ್ಮ್​ ಬಗ್ಗೆ ಇಂತಹ ಟೀಕೆಗಳು ಕೇಳಿಬರುವುದು ಸಾಮಾನ್ಯ ಎಂದು ಹೇಳುವ ಮೂಲಕ ಸೆಹವಾಗ್​ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸೆಹವಾಗ್​ ಹೇಳಿದ್ದೇನು?


ನನ್ನ ಪ್ರಕಾರ, ಶಕೀಬ್ ಅಲ್​ ಹಸನ್​ ಕ್ರಿಕೆಟ್​ನಿಂದ ನಿವೃತ್ತಿ ಪಡೆಯುವುದೇ ಉತ್ತಮ. ಶಕೀಬ್​ ಅವರನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಅಂದೇ ಕೈಬಿಡಬೇಕಿತ್ತು. ಅವರನ್ನು ಆಡಿಸುವ ಅವಶ್ಯಕತೆಯೇ ಇರಲಿಲ್ಲ ಎಂದು ಸೆಹವಾಗ್​ ಲೇವಡಿ ಮಾಡಿದ್ದರು. ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಶಕೀಬ್​ ಅವರು ಅಜೇಯ 64 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಮ್ಯಾಚ್​ ವಿನ್ನಿಂಗ್​ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.


ಬಾಂಗ್ಲಾದೇಶ ತಂಡ ‘ಸಿ’ ಗುಂಪಿನಲ್ಲಿ ಸದ್ಯ 4 ಅಂಕದೊಂದಿಗೆ 2ನೇ ಸ್ಥಾನಿಯಾಗಿದೆ. ಸೂಪರ್​ 8 ಹಂತಕ್ಕೇರಲು ನೆಪಾಳ ವಿರುದ್ಧ ನಡೆಯುವ ಅಂತಿಮ ಲೀಗ್​ ಪಂದ್ಯದಲ್ಲಿ ಗೆಲ್ಲಲೇ ಬೇಕು. ಒಂದು ವೇಳೆ ಬಾಂಗ್ಲಾದೇಶ ಈ ಪಂದ್ಯದಲ್ಲಿ ಸೋತು, ಶ್ರೀಲಂಕಾ ವಿರುದ್ಧ ನೆದರ್ಲೆಂಡ್ ಸೋತರೆ ಬಾಂಗ್ಲಾ ತಂಡವೇ ಸೂಪರ್​ 8ಗೆ ಪ್ರವೇಶಿಸುತ್ತದೆ.

ಇದನ್ನೂ ಓದಿ T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​


ಶುಕ್ರವಾರ ನಡೆದ ಟಿ20 ವಿಶ್ವಕಪ್​ನ ‘ಸಿ’ ವಿಭಾಗದ ಪಂದ್ಯದಲ್ಲಿ ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದಿತು.

ಇಲ್ಲಿನ ಟರೂಬದಲ್ಲಿರುವ ಬ್ರಿಯಾನ್‌ ಲಾರಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ತಂಡ ಫಜಲ್ಹಕ್ ಫಾರೂಕಿ ಮತ್ತು ನವೀನ್​ ಉಲ್​ ಹಕ್​ ಅವರ ಘಾತಕ ದಾಳಿಗೆ ನಲುಗಿ 95 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಅಫಘಾನಿಸ್ತಾನ 15.1 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 101 ರನ್​ ಬಾರಿಸಿ ಗೆಲುವು ದಾಖಲಿಸಿತು. ಅತ್ತ ಏಕದಿನ ಸೇರಿದಂತೆ ಕಳೆದ ಆರೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ನ್ಯೂಜಿಲ್ಯಾಂಡ್‌ ಈ ಬಾರಿ ಲೀಗ್​ನಿಂದಲೇ ಹೊರಬಿದ್ದ ಅವಮಾನಕ್ಕೆ ಸಿಲುಕಿತು.

Continue Reading

ಕ್ರೀಡೆ

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

T20 World Cup 2024: ಭಾರತವು ಅಮೆರಿಕದಲ್ಲಿ ಇನ್ನೂ ಒಂದು ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಶುಭಮನ್​ ಗಿಲ್(Shubman Gill)​ ಮತ್ತು ಅವೇಶ್​ ಖಾನ್(Avesh Khan)​ ತವರಿಗೆ ಮರಳಲಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಜೂನ್​ 15ರಂದು ಉಭಯ ಆಟಗಾರರು ಭಾರತಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿಸಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ಭಾರತ ಕ್ರಿಕೆಟ್ ತಂಡವು ಈಗಾಗಲೇ 2024 ರ ಟಿ20 ವಿಶ್ವಕಪ್‌(T20 World Cup 2024) ಟೂರ್ನಿಯಲ್ಲಿ ಸೂಪರ್ 8 ಹಂತಕೇರಿದೆ. ಸೂಪರ್ 8 ಮತ್ತು ನಾಕೌಟ್ ಹಂತಕ್ಕಾಗಿ ವೆಸ್ಟ್ ಇಂಡೀಸ್‌ಗೆ ತೆರಳುವ ಮೊದಲು ಭಾರತವು ಅಮೆರಿಕದಲ್ಲಿ ಇನ್ನೂ ಒಂದು ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಶುಭಮನ್​ ಗಿಲ್(Shubman Gill)​ ಮತ್ತು ಅವೇಶ್​ ಖಾನ್(Avesh Khan)​ ತವರಿಗೆ ಮರಳಲಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಜೂನ್​ 15ರಂದು ಉಭಯ ಆಟಗಾರರು ಭಾರತಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿಸಿದೆ.

ಶುಭಮನ್ ಗಿಲ್ ಮತ್ತು ಅವೇಶ್ ಖಾನ್ ತಂಡದಲ್ಲಿ ಪ್ರಯಾಣ ಮೀಸಲು ಭಾಗವಾಗಿ ಸ್ಥಾನ ಪಡೆದಿದ್ದರು. ಇವರ ಜತೆ ಸ್ಥಾನ ಪಡೆದಿದ್ದ ರಿಂಕು ಸಿಂಗ್(Rinku Singh) ಮತ್ತು ಖಲೀಲ್ ಅಹ್ಮದ್(Khaleel Ahmed) ತಂಡದ ಜತೆಗೆ ಇರಲಿದ್ದಾರೆ ಎನ್ನಲಾಗಿದೆ. ಗಿಲ್​ ಮತ್ತು ಅವೇಶ್​ ತವರಿಗೆ ಮರಳಲು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ. ಉಭಯ ಆಟಗಾರರು ತಂಡದೊಂದಿಗೆ ಇದ್ದರೂ ಕೂಡ ಇವರಿಗೆ ಆಡುವ ಅವಕಾಶವಿಲ್ಲ. ಏಕೆಂದರೆ ಇವರು ಪ್ರಧಾನ 15 ಸದಸ್ಯರ ತಂಡದಲ್ಲಿ ಅವಕಾಶ ಪಡೆದಿಲ್ಲ.

ಭಾರತ ತನ್ನ ಕೊನೆಯ ಲೀಗ್​ ಪಂದ್ಯವನ್ನು ಜೂನ್​ 15ರಂದು ಕೆನಡಾ ವಿರುದ್ಧ ಆಡಲಿದೆ. ಆದರೆ ಈ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಈ ಪಂದ್ಯಕ್ಕೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಪಂದ್ಯ ರದ್ದಾದರೂ ಕೂಡ ಭಾರತಕ್ಕೆ ಯಾವುದೇ ನಷ್ಟ ಸಂಭವಿಸದು. ಏಕೆಂದರೆ ಭಾರತ ಈಗಾಗಲೇ ಸೂಪರ್​-8 ಪ್ರವೇಶ ಪಡೆದಾಗಿದೆ. ಹೀಗಾಗಿ ಈ ಪಂದ್ಯ ಭಾರತದ ಪಾಲಿಗೆ ಔಪಚಾರಿಕ ಪಂದ್ಯವಿದ್ದಂತೆ.

ಇದನ್ನೂ ಓದಿ PNG vs AFG: ಆಫ್ಘಾನ್​ಗೆ ಗೆಲುವು; ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​

ನ್ಯೂಯಾರ್ಕ್‌ ಪಿಚ್‌ನಲ್ಲಿ ಆಡುವುದು ಸುಲಭವಲ್ಲ: ರೋಹಿತ್​


ಸತತ ಮೂರು ಗೆಲುವು ಸಾಧಿಸಿ ಸೂಪರ್​-8 ಪ್ರವೇಶ ಪಡೆದಿದ್ದರೂ ಕೂಡ ಟೀಮ್​ ಇಂಡಿಯಾದ(Team India) ನಾಯಕ ರೋಹಿತ್​ ಶರ್ಮ(Rohit Sharma) ಅವರು ನ್ಯೂಯಾರ್ಕ್​ನಲ್ಲಿ ಆಡಿದ್ದು ನಿಜಕ್ಕೂ ಸವಾಲಿನಿಂದ ಕೂಡಿತ್ತು ಎಂದು ಹೇಳಿದ್ದಾರೆ.

‘ನಾವು ಮೂರು ಪಂದ್ಯಗಳನ್ನು ಗೆದ್ದಿರಬಹುದು. ಆದರೆ, ಈ ಪಂದ್ಯ ಗೆಲ್ಲಲು ನಾವು ಪಟ್ಟ ಕಷ್ಟ ನಮ್ಮ ತಂಡದ ಆಟಗಾರರಿಗೆ ಮಾತ್ರ ಗೊತ್ತು. ಇಲ್ಲಿ ಯಾವ ತಂಡ ಗೆಲ್ಲಬಹುದು ಎನ್ನುವುದನ್ನು ಊಹಿಸಲು ಕೂಡ ಅಸಾಧ್ಯ. ನಮ್ಮ ತಂಡದ ಗೆಲುವು ಅಷ್ಟು ಸುಲಭವಾಗಿರಲಿಲ್ಲ” ಎಂದು ಹೇಳಿದ್ದಾರೆ.

ರೋಹಿತ್​ ಅವರು ಈ ಹಿಂದೆಯೇ ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ಪಿಚ್​ ಮತ್ತು ಮೈದಾನ ಕ್ರಿಕೆಟ್​ ಆಡಲು ಸೂಕ್ತವಾಗಿಲ್ಲ. ಆಟಗಾರರು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ ಎಂದು ಹೇಳಿದ್ದರು. ಭಾರತ ಸೂಪರ್​-8 ಹಂತದಲ್ಲಿ ಭಾರತಕ್ಕೆ ಮೊದಲ ಪಂದ್ಯದಲ್ಲಿ ಆಸ್ಟ್ರೇಯಾ ತಂಡದ ಸವಾಲು ಎದುರಾಗುವ ಸಾಧ್ಯತೆ ಇದೆ.

Continue Reading
Advertisement
Bus Accident
ಗದಗ21 mins ago

Bus Accident : ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

Alia Bhatt Fans A Deepfake Video Goes Viral Again
ಬಾಲಿವುಡ್22 mins ago

Alia Bhatt: ಆಲಿಯಾ ಭಟ್ ಮತ್ತೊಂದು ಡೀಪ್‌ಫೇಕ್ ವೀಡಿಯೊ ವೈರಲ್‌; ಫ್ಯಾನ್ಸ್‌ ಕೆಂಡಾಮಂಡಲ!

IND vs CAN
ಕ್ರೀಡೆ28 mins ago

IND vs CAN: ಕೆನಡಾ ಪಂದ್ಯಕ್ಕೆ ಕೊಹ್ಲಿ,ಜಡೇಜಾ, ಅಕ್ಷರ್​ಗೆ ರೆಸ್ಟ್​​!​

Baby Death
ಪ್ರಮುಖ ಸುದ್ದಿ37 mins ago

Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

Train Accident
ಕ್ರೈಂ42 mins ago

Train Accident : ಹಳಿ ದಾಟುವಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

Job Alert
ಉದ್ಯೋಗ43 mins ago

Job Alert: ಕಾಟನ್‌ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

CM Siddaramaiah
ಕರ್ನಾಟಕ52 mins ago

CM Siddaramaiah: ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಆದ್ಯತೆ ನೀಡಲು ಸಿದ್ದರಾಮಯ್ಯ ಸೂಚನೆ

Lok Sabha Election
ಪ್ರಮುಖ ಸುದ್ದಿ53 mins ago

Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

Tata Motors Panch EV Nexon EV 5 star rating by Bharat NCAP
ಕರ್ನಾಟಕ56 mins ago

Tata Motors: ಪಂಚ್. ಇವಿ, ನೆಕ್ಸಾನ್.ಇವಿಗೆ ಭಾರತ್-ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್

Nari Samman 2024 award ceremony on June 15 in Bengaluru
ಕರ್ನಾಟಕ1 hour ago

Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌