ind vs pak : ಸಾಂಪ್ರದಾಯಿಕ ಪ್ರತಿಸ್ಪರ್ಧಿ ಪಾಕ್​ ವಿರುದ್ಧ ಚಾರಿತ್ರಿಕ 228 ರನ್​ ಗೆಲುವು ಸಾಧಿಸಿದ ಭಾರತ - Vistara News

ಕ್ರಿಕೆಟ್

ind vs pak : ಸಾಂಪ್ರದಾಯಿಕ ಪ್ರತಿಸ್ಪರ್ಧಿ ಪಾಕ್​ ವಿರುದ್ಧ ಚಾರಿತ್ರಿಕ 228 ರನ್​ ಗೆಲುವು ಸಾಧಿಸಿದ ಭಾರತ

ಭಾರತ ತಂಡದ ಪಾಲಿಗೆ ಪಾಕ್​ ವಿರುದ್ಧ ಏಕ ದಿನ ಮಾದರಿಯಲ್ಲಿ ಲಭಿಸಿರುವ ದೊಡ್ಡ ಮೊತ್ತದ ವಿಜಯವಾಗಿದೆ. ಇದರೊಂದಿಗೆ ಏಷ್ಯಾ ಕಪ್​ ನ ಸೂಪರ್4 ಅಂತರದಲ್ಲಿ ಮುನ್ನಡೆ ಸಿಕ್ಕಿದೆ.

VISTARANEWS.COM


on

Team India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲೊಂಬೊ: ಮಳೆಯಿಂದ ಬಾಧಿತವಾದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ಪರಾಕ್ರಮ ಸಾಧಿಸಿದ ಭಾರತ ತಂಡ ಪಾಕಿಸ್ತಾನ (ind vs pak) ವಿರುದ್ಧದ ಏಷ್ಯಾಕಪ್​ ಸೂಪರ್​-4 (Asia Cup 2023) ಹಂತದ ಪಂದ್ಯದಲ್ಲಿ 228 ರನ್​ಗಳ ಭರ್ಜರಿ ವಿಜಯ ಸಾಧಿಸಿದೆ. ಭಾರತ ತಂಡದ ಪರ ವಿರಾಟ್ ಕೊಹ್ಲಿ ( ಅಜೇಯ 122 ರನ್​), ಕೆ. ಎಲ್​ ರಾಹುಲ್​ (ಅಜೇಯ 111 ರನ್​) ಅವರ ಸ್ಫೋಟಕ ಬ್ಯಾಟಿಂಗ್ ​ ನಡೆಸಿ ಮಿಂಚಿದರೆ. ಸ್ಪಿನ್ನರ್​ ಕುಲ್ದೀಪ್​ ಯಾದವ್​ (25 ರನ್​ಗಳಿಗೆ 5 ವಿಕೆಟ್​​) ಅವರ ಮಾರಕ ದಾಳಿ ನಡೆಸಿ ಬೌಲಿಂಗ್​ನಲ್ಲಿ ಮಿಂಚಿದರು. ಇದು ಭಾರತ ತಂಡಕ್ಕೆ ಏಕದಿನ ಮಾದರಿಯಲ್ಲಿ ಪಾಕಿಸ್ತಾನ ತಂಡದ ವಿರುದ್ದ ಲಭಿಸಿದ ದಾಖಲೆಯ ಅಂತರದ ವಿಜಯವಾಗಿದೆ.

ಇಲ್ಲಿನ ಪ್ರೇಮದಾಸ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋಲು ಮೊದಲು ಬ್ಯಾಟ್​ ಮಾಡಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 356 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಾಕಿಸ್ತಾನ 32 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 128 ರನ್​ ಬಾರಿಸಿತು. ಹ್ಯಾರಿಸ್ ರವೂಫ್ ಹಾಗೂ ನಾಸಿಮ್​ ಶಾ ಬ್ಯಾಟಿಂಗ್ ಮಾಡಿದ ಕಾರಣ ಪಾಕಿಸ್ತಾನ ತಂಡ ಆಲ್ಔಟ್​ ಎಂದು ಪರಿಗಣಿಸಿ ಭಾರತಕ್ಕೆ ಜಯ ನೀಡಲಾಯಿತು.

ಈ ಪಂದ್ಯ ಭಾನುವಾರ ಮಧ್ಯಾಹ್ನ ಆರಂಭಗೊಂಡಿತ್ತು. ಆದರೆ, ಭಾರತ ತಂಡದ ಇನಿಂಗ್ಸ್​ ವೇಳೆಯಲ್ಲಿ ಮಳೆ ಸುರಿದು ನಂತರದ ಆಟ ನಡೆಯಲಿಲ್ಲ. ಹೀಗಾಗಿ ಮೀಸಲು ದಿನವಾದ ಸೋಮವಾರಕ್ಕೆ ನಿಗದಿ ಮಾಡಲಾಯಿತು. ಸೋಮವಾರವೂ ಆಗಾಗ ಮಳೆಯ ಅಡಚಣೆ ಉಂಟಾಯಿತು. ಬಿಡುವಿನಲ್ಲಿ ಪಂಧ್ಯ ನಡೆದು ಅಂತಿಮವಾಗಿ ಭಾರತ ತಂಡ ಚಾರಿತ್ರಿಕ ಗೆಲವು ದಾಖಲಿಸಿತು.

ಕೊಹ್ಲಿ, ರಾಹುಲ್ ದಾಖಲೆಯ ಜತೆಯಾಟ

ಭಾರತ ತಂಡದ ಭಾನುವಾರ ಪಂದ್ಯ ಸ್ಥಗಿತಗೊಳ್ಳುವ ಮೊದಲು 24.1 ಓವರ್​ಗಳಲ್ಲಿ 147 ರನ್ ಬಾರಿಸಿತ್ತು. ಅಲ್ಲಿಂದ ಬ್ಯಾಟಿಂಗ್ ಆರಂಭಿಸಿದ ರಾಹುಲ್ ಹಾಗೂ ವಿರಾಟ್​ ಪಾಕಿಸ್ತಾನ ತಂಡದ ಪ್ರತಿಯೊಬ್ಬ ಬೌಲರ್​ಗಳನ್ನು ದಂಡಿಸುತ್ತಾ ರನ್​ ಗಳಿಸಿದರು. ಕೊನೇ ತನಕ ಆಡಿದ ಈ ಇಬ್ಬರೂ ಆಟಗಾರರು ಅಜೇಯರಾಗಿ ಉಳಿದು ದೊಡ್ಡ ಮೊತ್ತದ ಸ್ಕೋರ್ ಬಾರಿಸಲು ನೆರವಾದರು. ಇವರಿಬ್ಬರೂ ಏಕ ದಿನ ಏಷ್ಯಾ ಕಪ್​ನಲ್ಲಿ ಗರಿಷ್ಠ ಮೊತ್ತದ (223 ರನ್​) ಜತೆಯಾಟ ನೀಡಿದ ದಾಖಲೆಯನ್ನೂ ಮಾಡಿದರು.

ಭಾರತ ತಂಡ 25.5 ಓವರ್​ಗಳಲ್ಲಿ 209 ರನ್​ಗಳನ್ನು ಬಾರಿಸುವ ಮೂಲಕ ಪಾಕಿಸ್ತಾನ ತಂಡಕ್ಕೆ ದೊಡ್ಡ ಮೊತ್ತದ ಸವಾಲು ಒಡ್ಡಿತು. ಭಾರತದ ಇನಿಂಗ್ಸ್​​ನಲ್ಲಿ ಒಟ್ಟು 37 ಫೋರ್​ಗಳು ಹಾಗೂ 9 ಸಿಕ್ಸರ್​ಗಳು ಸೇರಿಕೊಂಡಿದ್ದವು. ಅದರಲ್ಲೂ ಅದರಲ್ಲಿ ವಿರಾಟ್ ಕೊಹ್ಲಿ 3 ಸಿಕ್ಸರ್ ಬಾರಿಸಿದರೆ, ರಾಹುಲ್ 2 ಸಿಕ್ಸರ್​ ಬಾರಿಸಿದರು. ರೋಹಿತ್ ಶರ್ಮಾ 4 ಸಿಕ್ಸರ್​ಗಳನ್ನು ಬಾರಿಸಿದ್ದರು.

ಇದನ್ನೂ ಓದಿ : KL Rahul : ಪತಿ ರಾಹುಲ್​ಗೆ ಭಾವನಾತ್ಮಕ ಸಂದೇಶ ಬರೆದ ಅಥಿಯಾ ಶೆಟ್ಟಿ

ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ತಮ್ಮ ಬ್ಯಾಟ್ ಮೂಲಕ ಪಾಕ್ ವಿರುದ್ಧ ಅಬ್ಬರಿಸಿದರು ಹಿಂದಿನ ಭಾರತ ಮತ್ತು ಪಾಕ್ ನಡುವಿನ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ವಿರುದ್ಧ ಎಡವಿದ ನಂತರ, ಕೊಹ್ಲಿ ತಮ್ಮ ಸಂಯಮವನ್ನು ಉಳಿಸಿಕೊಂಡರಲ್ಲದೆ ತಮ್ಮ 47 ನೇ ಏಕದಿನ ಶತಕವನ್ನು ಗಳಿಸಿದರು. ಕೊಹ್ಲಿ ತಮ್ಮ 77 ನೇ ಅಂತಾರಾಷ್ಟ್ರೀಯ ಶತಕ ಮತ್ತು ಕೊಲಂಬೊದಲ್ಲಿ ಸತತ 4 ನೇ ಶತಕವನ್ನು ಗಳಿಸಿದರು.

ಕೊಹ್ಲಿ ಕೊಲಂಬೊದಲ್ಲಿ ಮೋಡ ಕವಿದ ವಾತಾವರಣದಲ್ಲಿ ತಮ್ಮ ಬ್ಯಾಟಿಂಗ್ ಮಾಸ್ಟರ್ ಕ್ಲಾಸ್ ಅನ್ನು ಪ್ರದರ್ಶಿಸಿದರು. ಕೊಹ್ಲಿ ತಮ್ಮ ಅರ್ಧಶತಕವನ್ನು ತಲುಪಲು ಕೇವಲ 55 ಎಸೆತಗಳನ್ನು ತೆಗೆದುಕೊಂಡರು ಮತ್ತು ನಂತರ ಸಿಕ್ಸರ್ ಮತ್ತು ಬೌಂಡರಿ ಹೊಡೆಯಲು ಶುರು ಮಾಡಿ ದಾಖಲೆಗಳನ್ನು ಸೃಷ್ಟಿಸಿದರು. ಕೊಹ್ಲಿ 84 ಎಸೆತಗಳು, 6 ಬೌಂಡರಿಗಳು ಮತ್ತು 2 ಸಿಕ್ಸರ್ಗಳನ್ನು ಬಾರಿಸಿ ಮೂರು ಅಂಕಿಯ ಗಡಿಯನ್ನು ತಲುಪಿದರು.

ಏಕ ದಿನ ಮಾದರಿಯಲ್ಲಿ ಅತಿ ವೇಗದ 8000, 9000, 10000, 11000, 12000 ಮತ್ತು 13,000 ರನ್ ಗಳಿಸಿದ ಬ್ಯಾಟರ್​ ಎಂಬ ದಾಖಲೆಯೂ ಕೊಹ್ಲಿ ಪಾಲಾಯಿತು.

ರಾಹುಲ್ ಗ್ರ್ಯಾಂಡ್ ಎಂಟ್ರಿ

ಗಾಯದ ಸಮಸ್ಯೆಯಿಂದಾಗಿತಿಂಗಳಾನುಗಟ್ಟಲೆ ಮೈದಾನದಿಂದ ದೂರ ಉಳಿದಿದ್ದ ರಾಹುಲ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. 106 ಎಸೆತಗಳಲ್ಲಿ 111 ರನ್ ಬಾರಿಸಿದ ಅವರು ಮರು ಆಗಮನದಲ್ಲೇ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು.

ಕುಲ್ದೀಪ್ ಉರಿಚೆಂಡಿನ ದಾಳಿ

ಭಾರತದ ದೊಡ್ಡ ಮೊತ್ತದ ಗುರಿಯನ್ನು ಬೆನ್ನೆಟ್ಟಲು ಆರಂಭಿಸಿದ ಪಾಕಿಸ್ತಾನ ತಂಡ ಆರಂಭದಿಂದಲೇ ಸಂಕಷ್ಟಕ್ಕೆ ಬಿತ್ತು. 17 ರನ್​ಗಳಿಗೆ ಮೊದಲ ವಿಕೆಟ್​ ಕಳೆದುಕೊಂಡ ಪಾಕ್​ ನಂತರದಲ್ಲಿ ಸತತವಾಗಿ ವಿಕೆಟ್​ಗಳನ್ನು ಕಳೆದುಕೊಂಡಿತು. ನಾಯಕ ಬಾಬರ್​ ಅಜಮ್​ 10 ರನ್​ಗೆ ಔಟಾದರೆ, ಮೊಹಮ್ಮದ್ ರಿಜ್ವಾನ್​ 2 ರನ್​ಗಳಿಗೆ ವಿಕೆಟ್​ ಒಪ್ಪಿಸಿದರು. ಆರಂಭಿಕ ಬ್ಯಾಟರ್​ ಫಖರ್​ ಜಮಾನ್ 27 ರನ್​ಗೆ ಔಟಾದರು. ಅಘಾ ಸಲ್ಮಾನ್ 23 ರನ್ ಬಾರಿಸಿದರೆ ಇಫ್ತಿಕಾರ್ ಅಹಮದ್​ ಕೂಡ 23 ರನ್​ಗೆ ಆಟ ಕೊನೆಗೊಳಿಸಿದರು. ಉರಿಚೆಂಡಿನ ದಾಳಿ ನಡೆಸಿದ ಕುಲ್ದೀಪ್​ ಯಾದವ್​ 8 ಓವರ್​ಗಳಲ್ಲಿ 25 ರನ್​ ನೀಡಿ ಐದು ವಿಕೆಟ್ ಪಡೆದು ಪಂದ್ಯವನ್ನು ಸ್ಮರಣೀಯ ಮಾಡಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024 Prize Money: ದಾಖಲೆಯ ಬಹುಮಾನ ಮೊತ್ತ ಘೋಷಿಸಿದ ಐಸಿಸಿ

T20 World Cup 2024 Prize Money: ಕಳೆದ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ಇಂಗ್ಲೆಂಡ್‌ ತಂಡವು 13.84 ಕೋಟಿ ನಗದು ಬಹುಮಾನ ‍ಪಡೆದುಕೊಂಡಿತ್ತು. ರನ್ನರ್‌ ಅಪ್‌ ಪಾಕಿಸ್ತಾನ ತಂಡವು 7.4 ಕೋಟಿ ಪಡೆ‌ದಿತ್ತು. ಸೆಮಿಫೈನಲ್‌ನಲ್ಲಿ ಇಂ‌ಗ್ಲೆಂಡ್ ವಿರುದ್ಧ ಸೋಲನುಭವಿಸಿದ ಭಾರತ 4.5 ಕೋಟಿ ರೂ., ‌ಪಾಕಿಸ್ತಾನ ವಿರುದ್ಧ ಸೋತ ನ್ಯೂಜಿಲ್ಯಾಂಡ್​ 4.19 ಕೋಟಿ ರೂ. ಬಹುಮಾನ ಪಡೆದಿತ್ತು.

VISTARANEWS.COM


on

T20 World Cup 2024 Prize Money
Koo

ದುಬೈ: ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯ ಬಹುಮಾನ ಮೊತ್ತವನ್ನು ಐಸಿಸಿ ಸೋಮವಾರ ಪ್ರಕಟಿಸಿದೆ. ಗೆದ್ದ ತಂಡಕ್ಕೆ ಭರ್ಜರಿ ನಗುದು ಬಹುಮಾನ ಸಿಗಲಿದೆ. ಚಾಂಪಿಯನ್​ ತಂಡಕ್ಕೆ 20 ಕೋಟಿ ರೂ. ಸಿಗಲಿದೆ. ಇದು ಈ ವರೆಗಿನ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲೇ ಅತ್ಯಧಿಕ ಮೊತ್ತದ ಬಹುಮಾನವಾಗಿದೆ. ಒಟ್ಟು ನಗದು ಬಹುಮಾನ ಮೊತ್ತ 93.50 ಕೋಟಿ ರೂ. ಆಗಿದೆ.

ಈಗಾಗಲೇ ಟೂರ್ನಿಯಲ್ಲಿ ಮೂರು ಪಂದ್ಯಗಳು ನಡೆದಿವೆ. ಟೂರ್ನಿಯ ಜಂಟಿ ಆತಿಥ್ಯವಹಿಸಿಕೊಂಡಿರುವ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಆಡಿದ ಮೊದಲ ಪಂದ್ಯದಲ್ಲೇ ಗೆದ್ದು ಶುಭಾರಂಭ ಕಂಡಿದೆ. ಒಟ್ಟು ಈ ಬಾರಿ 20 ತಂಡಗಳು ಕಣಕ್ಕಿಳಿಯುತ್ತಿವೆ. ಇದೀಗ ಚಾಂಪಿಯನ್​ ತಂಡಕ್ಕೆ ಸಿಗುವ ಮೊತ್ತವನ್ನು ಐಸಿಸಿ ಪ್ರಕಟಿಸಿದೆ.

ಈ ಬಾರಿಯ ವಿಶ್ವಕಪ್ ಬಹುಮಾನದ ಗಾತ್ರ 11.25 ಮಿಲಿಯನ್ ಯುಎಸ್ ಡಾಲರ್ ಆಗಿದೆ. ಇದು ಭಾರತೀಯ ರೂಪಾರಿಯಲ್ಲಿ ಸುಮಾರು ರೂ 93.50 ಕೋಟಿ ರೂ. ಆಗಿದೆ. ಚಾಂಪಿಯನ್ ತಂಡಕ್ಕೆ 2.45 ಮಿಲಿಯನ್ ಡಾಲರ್ (ಸುಮಾರು 20 ಕೋಟಿ ರೂ.) ಬಹುಮಾನ ಸಿಗಲಿದೆ. 1.28 ಮಿಲಿಯನ್ ಡಾಲರ್ ಅಂದರೆ ಭಾರತೀಯ ರೂಪಾಯಿಯಲ್ಲಿ 10.64 ಕೋಟಿ ರೂ. ಬಹುಮಾನ ಸಿಗಲಿದೆ.

ಕಳೆದ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ಇಂಗ್ಲೆಂಡ್‌ ತಂಡವು 13.84 ಕೋಟಿ ನಗದು ಬಹುಮಾನ ‍ಪಡೆದುಕೊಂಡಿತ್ತು. ರನ್ನರ್‌ ಅಪ್‌ ಪಾಕಿಸ್ತಾನ ತಂಡವು 7.4 ಕೋಟಿ ಪಡೆ‌ದಿತ್ತು. ಸೆಮಿಫೈನಲ್‌ನಲ್ಲಿ ಇಂ‌ಗ್ಲೆಂಡ್ ವಿರುದ್ಧ ಸೋಲನುಭವಿಸಿದ ಭಾರತ 4.5 ಕೋಟಿ ರೂ., ‌ಪಾಕಿಸ್ತಾನ ವಿರುದ್ಧ ಸೋತ ನ್ಯೂಜಿಲ್ಯಾಂಡ್​ 4.19 ಕೋಟಿ ರೂ. ಬಹುಮಾನ ಪಡೆದಿತ್ತು.

ಇದನ್ನೂ ಓದಿ T20 World Cup 2024 : ಒಮಾನ್ ವಿರುದ್ಧ ಹೊಸ ದಾಖಲೆ ಬರೆದ ನಮೀಬಿಯಾ ತಂಡದ ರುಬೆನ್ ಟ್ರಂಪೆಲ್ಮನ್

ಸೋತ ತಂಡಗಳಿಗೂ ನಗದು ಬಹುಮಾನ

ಸೆಮಿಫೈನಲ್​ನಲ್ಲಿ ಸೋತ ತಂಡಗಳಿಗೂ ಈ ಬಾರಿ ಭರ್ಜರಿ ಬಹುಮಾನ ಸಿಗಲಿದೆ. ಅದರಂತೆ ಸೆಮಿಫೈನಲ್​ನಲ್ಲಿ ಸೋತ ತಂಡಗಳಿಗೆ ತಲಾ 6.55 ಕೋಟಿ ರೂ. ಸಿಗಲಿದೆ. ಸೂಪರ್ 8 ಹಂತದಲ್ಲಿ ಸೋತು ಲೀಗ್​ನಿಂದ ಹೊರಬಿಳುವ ಪ್ರತಿಯೊಂದು ತಂಡಗಳಿಗೆ 3.18 ಕೋಟಿ ರೂ., ಹಾಗೆಯೇ ಪ್ರತಿ ಗುಂಪಿನಲ್ಲಿ ಮೂರನೇ ಸ್ಥಾನ ಪಡೆಯುವ ತಂಡಗಳಿಗೆ 2.06 ಕೋಟಿ ರೂ., ಉಳಿದ ತಂಡಗಳಿಗೆ 1.87 ಕೋಟಿ ರೂ. ಪ್ರೋತ್ಸಾಹಕ ಬಹುಮಾನ ಸಿಗಲಿದೆ. ಇದು ಮಾತ್ರವಲ್ಲದೆ, ಸೂಪರ್ 8 ಹಂತದವರೆಗೆ ಪ್ರತಿ ಪಂದ್ಯವನ್ನು ಗೆಲ್ಲುವ ತಂಡಗಳಿಗೆ 25.9 ಲಕ್ಷ ರೂಗಳನ್ನು ಬಹುಮಾನ ಮೊತ್ತ ಸಿಗಲಿದೆ.

Continue Reading

ಕ್ರಿಕೆಟ್

IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

IND vs PAK: ಪಾಕಿಸ್ತಾನ ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ತೋರಿದೆ. 2009ರಲ್ಲಿ ಚಾಂಪಿಯನ್ ಆಗಿದ್ದ ತಂಡ, 2007 ಮತ್ತು 2022ರಲ್ಲಿ ರನ್ನರ್ ಅಪ್ ಆಗಿತ್ತು. ಒಟ್ಟು ಎಂಟು ಆವೃತ್ತಿಗಳಲ್ಲಿ ಆರು ಬಾರಿ ಸೆಮಿಫೈನಲ್ ತಲುಪಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಮಣಿದಿತ್ತು.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(t20 world cup 2024)​ ಪಂದ್ಯ ಭಾನುವಾರ(ಜೂನ್​ 9) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಪಾಕ್(pakistan cricket team)​ ತಂಡದ ನಾಯಕ ಬಾಬರ್​ ಅಜಂ(Babar Azam) ಅವರು ತಂಡದ ಸಹ ಆಟಗಾರರರಿಗೆ ಮಹತ್ವದ ಸಲೆಯೊಂದನ್ನು ನೀಡಿದ್ದಾರೆ. ಎಲ್ಲರು ಶಾಂತ ಚಿತ್ತರಾಗಿ ಆಡಬೇಕು ಎಂದಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಬಾಬರ್​, ಭಾರತ ಮತ್ತು ಪಾಕಿಸ್ತಾನ ಪಂದ್ಯಗಳಿಗೆ ಇರುವ ಅತಿಯಾದ ಪ್ರಚಾರ, ನಿರೀಕ್ಷೆ ಮತ್ತು ಒತ್ತಡಗಳು ಆಟಗಾರರಲ್ಲಿ ಸಹಜವಾಗಿಯೇ ಒತ್ತಡ ಉಂಟುಮಾಡುತ್ತದೆ. ತಮ್ಮ ತಂಡದ ಆಟಗಾರರು ಶಾಂತಚಿತ್ತರಾಗಿದ್ದುಕೊಂಡು, ಆಟದ ಮೂಲಭೂತ ಅಂಶಗಳ ಕಡೆಗಷ್ಟೇ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

2021ರಲ್ಲಿ ದುಬೈನಲ್ಲಿ ನಡೆದಿದ್ದ ವಿಶ್ವಕಪ್‌ ಟೂರ್ನಿಯಲ್ಲಿ ನಾವು ಭಾರತ ವಿರುದ್ಧ 10 ವಿಕೆಟ್​ಗಳಿಂದ ಗೆಲುವು ಸಾಧಿಸಿದ್ದೆವು. ಈ ಗೆಲುವಿನ ಮಂತ್ರ, ನಾವು ಭಾರತೀಯ ಆಟಗಾರರನ್ನು ಕೆಣಕದೆ ಶಾಂತ ರೀತಿಯಲ್ಲಿ ಆಡಿದ್ದು. ಗೆಲುವಿನ ಬಳಿಕವೂ ದೊಡ್ಡ ಸಂಭ್ರಮಾಚರಣೆ ಮಾಡಿಲ್ಲ. ಈ ಬಾರಿಯೂ ನಾವು ಎಷ್ಟು ತಾಳ್ಮೆಯಿಂದ ಕ್ರಿಕೆಟ್​ ಆಡುತ್ತೇವೊ ಅಷ್ಟು ಉತ್ತಮ. ಇದು ನಮ್ಮ ಗೆಲುವಿಗೆ ಸಹಾಯ ಮಾಡುತ್ತದೆ. ಹೀಗಾಗಿ ಎಲ್ಲ ಆಟಗಾರರು ಈ ವಿಚಾರವನ್ನು ಗಮನದಲ್ಲಿರಿಸಬೇಕು ಎಂದರು.

ಪಾಕಿಸ್ತಾನ ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ತೋರಿದೆ. 2009ರಲ್ಲಿ ಚಾಂಪಿಯನ್ ಆಗಿದ್ದ ತಂಡ, 2007 ಮತ್ತು 2022ರಲ್ಲಿ ರನ್ನರ್ ಅಪ್ ಆಗಿತ್ತು. ಒಟ್ಟು ಎಂಟು ಆವೃತ್ತಿಗಳಲ್ಲಿ ಆರು ಬಾರಿ ಸೆಮಿಫೈನಲ್ ತಲುಪಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಮಣಿದಿತ್ತು. ಭಾರತ ವಿರುದ್ಧ ಆಡುವಾಗ ಯಾವಾಗಲು ಕೂಡ ಆಟಗಾರರಲ್ಲಿ ಸಹಜವಾಗಿಯೇ ಒತ್ತಡವಿರುತ್ತದೆ. ಇದನ್ನು ಬದಿಗಿಟ್ಟು ಆಡಿದರೆ ಗೆಲುವು ಖಚಿತ ಎಂದು ಬಾಬರ್​ ಅಭಿಪ್ರಾಯಪಟ್ಟರು.

ಇದನ್ನೂ ಓದಿ IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸ್ಟೇಡಿಯಂಗೆ ಈಗಿಂದಲೇ ಭಾರೀ ಭದ್ರತೆ ಏರ್ಪಡಿಸಲಾಗಿದೆ. ನ್ಯೂಯಾರ್ಕ್​ನ(New York stadium) ವಿಶೇಷ ಮಿಲಿಟರಿ ಪಡೆ ಸ್ನೈಪರ್ ಗನ್ ಹಿಡಿದು ಕಣ್ಗಾವಲಿಟ್ಟಿದೆ. ಇದರ ಫೋಟೊಗಳು ವೈರಲ್​ ಆಗಿದೆ.

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಪಾಕಿಸ್ತಾನ ತಂಡ


ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್.

Continue Reading

ಕ್ರಿಕೆಟ್

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

IND vs PAK: ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಕ್ರಿಕೆಟ್​ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿರುವ, ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(T20 world cup 2024) ಪಂದ್ಯ​ ಜೂನ್​ 9ರಂದು ನಡೆಯಲಿದೆ. ಈ ಪಂದ್ಯಕ್ಕೆ ಉಗ್ರರ ದಾಳಿಯ ಭೀತಿ(india vs pak terror threat) ಎದುರಾಗಿರುವ ಕಾರಣ ಪಂದ್ಯ ನಡೆಯುವ ಸ್ಟೇಡಿಯಂಗೆ ಈಗಿಂದಲೇ ಭಾರೀ ಭದ್ರತೆ ಏರ್ಪಡಿಸಲಾಗಿದೆ. ನ್ಯೂಯಾರ್ಕ್​ನ(New York stadium) ವಿಶೇಷ ಮಿಲಿಟರಿ ಪಡೆ ಸ್ನೈಪರ್ ಗನ್ ಹಿಡಿದು ಕಣ್ಗಾವಲಿಟ್ಟಿದೆ. ಇದರ ಫೋಟೊಗಳು ವೈರಲ್​ ಆಗಿದೆ.


ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇದನ್ನು ಓದಿ IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

ಪಂದ್ಯದ ವೇಳೆ ಡ್ರೋನ್ ದಾಳಿ ನಡೆಸುವ ಸಾಧ್ಯತೆ ಕೂಡ ಕಂಡುಬಂದಿದೆ. ಹೀಗಾಗಿ ಪಂದ್ಯ ನಡೆಯುವ ಕ್ರೀಡಾಂಗಣದ ಸುತ್ತ ‘ನೊ-ಫ್ಲೈ ಝೋನ್’ ಎಂದು ಘೋಷಿಸುವಂತೆ ನ್ಯೂಯಾರ್ಕ್ ಪೊಲೀಸ್ ಯುಎಸ್​ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್‌ಗೆ ವಿನಂತಿಸಿದೆ. ಸದ್ಯ ಭಾರತ ಮತ್ತು ಪಾಕ್​ ತಂಡ ಆಟಗಾರರು ಮಿಲಿಟರಿ ರಕ್ಷಣೆಯಲ್ಲೇ ಓಡಾಡುತ್ತಿದ್ದಾರೆ. ಇದರ ವಿಡಿಯೊ ಕೂಡ ವೈರಲ್​ ಆಗಿದೆ.

“ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಪಂದ್ಯಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾನೂನು ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇನೆ” ಎಂದು ನ್ಯೂಯಾರ್ಕ್‌ನ ಗವರ್ನರ್‌ ಕ್ಯಾಥಿ ಹೊಚುಲ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರಂಭದಲ್ಲಿ ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್)ನಿಂದ ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಪಂದ್ಯಗಳಿಗೆ ದಾಳಿಯ ಬೆದರಿಕೆಯೊಂದು ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ  ವೆಸ್ಟ್​ ಇಂಡೀಸ್​ ಕ್ರಿಕೆಟ್​ ಮಂಡಳಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿತ್ತು.  ಕೆನ್ಸಿಂಗ್ಟನ್ ಓವಲ್(Kensington Oval Cricket Ground) ಕ್ರಿಕೆಟ್ ಮೈದಾನ, ಬಾರ್ಬಡೋಸ್​ನಲ್ಲಿ(Barbados) ಭದ್ರತಾ ಸಿಬ್ಬಂದಿಗಳು ಅಣುಕು ಪ್ರದರ್ಶನ ಮಾಡುತ್ತಿರುವ ಫೋಟೊ ಕೂಡ ವೈರಲ್​ ಆಗಿತ್ತು.

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರಿಕೆಟ್

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Rahul Dravid: ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಟೀಮ್​ ಇಂಡಿಯಾ ಮೂರು ಪಂದ್ಯಗಳನ್ನು ಆಡಲಿದೆ. ಈ ಮೈದಾನ ಕ್ರಿಕೆಟ್​ ಆಡಲು ಅಷ್ಟಾಗಿ ಸೂಕ್ತವಿಲ್ಲದ ಕಾರಣ ಕೋಚ್​ ದ್ರಾವಿಡ್ ಅವರು​ ತಂಡದ ಆಟಗಾರರು ಬಹಳ ಎಚ್ಚರಿಕೆಯಿಂದ ಆಡಬೇಕಿದೆ ಎಂದು ಸೂಚನೆ ನೀಡಿದ್ದಾರೆ

VISTARANEWS.COM


on

Rahul Dravid
Koo

ನ್ಯೂಯಾರ್ಕ್​: ಪ್ರಸಕ್ತ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಜೂನ್​ 5, ಬುಧವಾರ ಐರ್ಲೆಂಡ್​ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನವೇ ತಂಡದ ಪ್ರಧಾನ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರು ವಿರಾಟ್​ ಕೊಹ್ಲಿ(Virat Kohli), ರೋಹಿತ್​ ಶರ್ಮ(Rohit Sharma), ಸೂರ್ಯಕುಮಾರ್​ ಯಾದವ್(Suryakumar)​, ರಿಷಭ್​ ಪಂತ್​ ಸೇರಿ ಎಲ್ಲ ಆಟಗಾರರಿಗೂ ಖಡಕ್​ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಟೀಮ್​ ಇಂಡಿಯಾ ಮೂರು ಪಂದ್ಯಗಳನ್ನು ಆಡಲಿದೆ. ಈ ಮೈದಾನ ಕ್ರಿಕೆಟ್​ ಆಡಲು ಅಷ್ಟಾಗಿ ಸೂಕ್ತವಿಲ್ಲದ ಕಾರಣ ದ್ರಾವಿಡ್​ ತಂಡದ ಆಟಗಾರರು ಬಹಳ ಎಚ್ಚರಿಕೆಯಿಂದ ಆಡಬೇಕಿದೆ ಎಂದು ಸೂಚನೆ ನೀಡಿದ್ದಾರೆ. ಈಗಾಗಲೇ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ನಮ್ಮ ಆಟಗಾರರ ಸಂಪೂರ್ಣ ಪ್ರಾಬಲ್ಯ ಮೆರೆದಿದ್ದಾರೆ. ಪಿಚ್ ಹೇಗೆ ಬದಲಾಗುತ್ತದೆ ಎಂಬುದರ ಬಗ್ಗೆ ನಮಗೆ ಅರಿವು ಮೂಡಿದೆ. ಈ ಮೈದಾನದಲ್ಲಿ ಫೀಲ್ಡಿಂಗ್ ಮಾಡುವಾಗ ಆಟಗಾರರು ತುಂಬಾ ಜಾಗರೂಕರಾಗಿರಬೇಕು ಎಂದು ಆಟಗಾರರಿಗೆ ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ.


ಮೈದಾನದ ಬಗ್ಗೆ ಅಸಮಾಧಾನ ಹೊರಹಾಕಿದ ದ್ರಾವಿಡ್, ಕ್ರಿಕೆಟ್​ ಆಡುಲು ಈ ಮೈದಾನ ಅಷ್ಟಾಗಿ ಯೋಗ್ಯವಾಗಿಲ್ಲ. ಇಬ್ಬನಿಯ ಸಮಸ್ಯೆಯಿಂದ ಮೈದಾನ ಜಾರುತ್ತಿದೆ. ಖಂಡಿತಾ ಆಟಗಾರರಿಗೆ ಮಾಂಸಖಂಡ, ಸ್ನಾಯುಸೆಳೆತದ ಸಮಸ್ಯೆ ಎದುರಾಗುವುದು ಖಚಿತ. ಹೀಗಾಗಿ ನಾವು ಆಟಗಾರರ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ ಎಂದಿದ್ದಾರೆ.

ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಈ ನಸ್ಸೌ ಕೌಂಟಿ ಕ್ರೀಡಾಂಗಣವನ್ನು ಕೇವಲ ಮೂರು ತಿಂಗಳಲ್ಲಿ ನಿರ್ಮಾಣ ಮಾಡಲಾಗಿತ್ತು. ಭಾರತ ಮತ್ತು ಪಾಕ್​ ನಡುವಣ ಪಂದ್ಯಕ್ಕಾಗಿಯೇ ಈ ಸ್ಟೇಡಿಯಂ ನಿರ್ಮಾಣ ಮಾಡಿದ್ದಾಗಿ ಹೇಳಲಾಗಿದೆ. 34,000 ಆಸನ ಸಾಮರ್ಥ್ಯವುಳ್ಳ ಈ ಸ್ಟೇಡಿಯಂ ಅನ್ನು ಟಿ20 ವಿಶ್ವಕಪ್​ ಮುಗಿದ ಬಳಿಕ ಕೆಡವಲಾಗುತ್ತದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. 

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಬೇಡಿಕೆ ಕಳೆದುಕೊಂಡ ಭಾರತ-ಪಾಕ್​ ಪಂದ್ಯ?


ಭಾರತ ಮತ್ತು ಪಾಕ್​ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದ್ದು, ಇನ್ನೂ ಕೂಡ ಮಾರಾಟವಾಗದಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ.

ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಭಾರತ-ಪಾಕಿಸ್ತಾನ ಪಂದ್ಯದ ದೃಷ್ಟಿಯಿಂದ ಐಸಿಸಿ ಟಿಕೆಟ್ ಬೆಲೆಯನ್ನು ಇಷ್ಟು ದುಬಾರಿ ಇರಿಸಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹೆಚ್ಚಿನ ಟಿಕೆಟ್​ಗಳು ಖರೀದಿಯಾಗದಿದ್ದಲ್ಲಿ ಐಸಿಸಿ ಮತ್ತೆ ಪರಿಷ್ಕೃತ ಟಿಕೆಟ್​ ದರ ಹೊರಡಿಡುವ ಸಾಧ್ಯತೆ ಇದೆ.

Continue Reading
Advertisement
Lok Sabha Election Result 2024 Live
ದೇಶ23 mins ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Job Alert
ಉದ್ಯೋಗ31 mins ago

Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Viral News
ವೈರಲ್ ನ್ಯೂಸ್32 mins ago

Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

Grantha Lokarpane and award ceremony on June 5 in Bengaluru
ಬೆಂಗಳೂರು36 mins ago

Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

Valmiki Corporation Scam
ಕರ್ನಾಟಕ47 mins ago

Valmiki Corporation Scam: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಿಎಂ ಸಿದ್ದರಾಮಯಯ್ಯ ನೇರ ಹೊಣೆ ಎಂದ ಎಚ್‌ಡಿಕೆ

T20 World Cup 2024 Prize Money
ಕ್ರೀಡೆ1 hour ago

T20 World Cup 2024 Prize Money: ದಾಖಲೆಯ ಬಹುಮಾನ ಮೊತ್ತ ಘೋಷಿಸಿದ ಐಸಿಸಿ

Bagalkot Lok Sabha Constituency
ಪ್ರಮುಖ ಸುದ್ದಿ1 hour ago

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

karnataka weather Forecast Putur rain
ಮಳೆ2 hours ago

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

IND vs PAK
ಕ್ರಿಕೆಟ್2 hours ago

IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

Bangalore Rain
ಪ್ರಮುಖ ಸುದ್ದಿ2 hours ago

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌