india-has-the-lions-share-of-tigers-in-the-world Tiger Census : ವಿಶ್ವದ ಹುಲಿಗಳ ಸಂಖ್ಯೆಯಲ್ಲಿ ಭಾರತದ್ದೇ ಸಿಂಹಪಾಲು! - Vistara News

ಕ್ರಿಕೆಟ್

Tiger Census : ವಿಶ್ವದ ಹುಲಿಗಳ ಸಂಖ್ಯೆಯಲ್ಲಿ ಭಾರತದ್ದೇ ಸಿಂಹಪಾಲು!

VISTARANEWS.COM


on

india-has-the-lions-share-of-tigers-in-the-world
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ಹುಲಿಗಳ ತವರೂರು. ನಮ್ಮ ದೇಶದಲ್ಲಿದ್ದಷ್ಟು ಹುಲಿಗಳ ವಿಶ್ವದ ಯಾವ ದೇಶದಲ್ಲೂ ಇಲ್ಲ. ಒಟ್ಟು ಸಂಖ್ಯೆಯಲ್ಲಿ ಕನಿಷ್ಠ ಪಕ್ಷ ಭಾರತದ ಸನಿಹ ಕೂಡ ಬಂದಿಲ್ಲ. ಹೀಗಾಗಿ ಹುಲಿಗಳ ಆವಾಸದ ವಿಚಾರಕ್ಕೆ ಬಂದಾಗ ಭಾರತದ್ದೇ ಸಿಂಹಪಾಲು. ಅದೇ ಕಾರಣಕ್ಕೆ ಹುಲಿ ಭಾರತದ ರಾಷ್ಟ್ರೀಯ ಪ್ರಾಣಿ ಎನಿಸಿಕೊಂಡಿರುವುದು. 2018ರ ವರದಿ ಪ್ರಕಾರ 2,967 ಹುಲಿಗಳು ಭಾರತದಲ್ಲಿವೆ. ಅಂದರೆ ವಿಶ್ವದ ಒಟ್ಟು ಹುಲಿಗಳ ಸಂಖ್ಯೆಯ ಶೇಕಡಾ 70. 2023ರ ವರ್ಷಾರಂಭದಲ್ಲಿ ಕೇಂದ್ರ ಸರಕಾರ ಸುಪ್ರೀಮ್​ ಕೋರ್ಟ್​ಗೆ ಸಲ್ಲಿಸಿರುವ ಈ ಪಟ್ಟಿಯಲ್ಲಿ (Tiger Census) ಈ ಮಾಹಿತಿ ಬಹಿರಂಗಗೊಂಡಿದೆ. ಅಲ್ಲದೆ, ಒಟ್ಟು 53 ಹುಲಿ ಸಂರಕ್ಷಣಾ ಪ್ರದೇಶಗಳಿವೆ ಎಂಬುದಾಗಿಯೂ ವಿವರಣೆ ನೀಡಲಾಗಿದೆ.

1973ರಲ್ಲಿ ಆಗಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಪ್ರಾಜೆಕ್ಟ್​ ಟೈಗರ್​ಗೆ ಚಾಲನೆ ಕೊಟ್ಟಿದ್ದರು. ಆ ಬಳಿಕ ವರ್ಷದಿಂದ ವರ್ಷಕ್ಕೆ ಹುಲಿಗಳ ಸಂಖ್ಯೆ ಹೆಚ್ಚಳವಾಗಲು ಆರಂಭಗೊಂಡಿತು. 2018ರ ಗಣತಿ ವೇಳೆಗೆ 3000ದ ಸನಿಹ ಬಂದಿದ್ದು, ಭಾರತದ ವಿಶ್ವದಲ್ಲಿಯೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪ್ರಾಜೆಕ್ಟ್​ ಟೈಗರ್​ ಹಾಗೂ ಹುಲಿ ಗಣತಿ ಕುರಿತು ಸುಪ್ರೀಮ್​ ಕೋರ್ಟ್​ಗೆ ಮಾಹಿತಿ ನೀಡುವ ವೇಳೆ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಐಶ್ವರ್ಯ ಭಾಟಿ ಅವರು ಅಂಕಿ- ಅಂಶಗಳ ಮೂಲಕ ಭಾರತದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ವರದಿಯಂತೆ, 2020ರ ವೇಳೆಗೆ ನಾಲ್ಕೇ ಹಂತದ ಹುಲಿ ಗಣತಿಯನ್ನು ಮಾಡಲಾಗಿದೆ. 2014ರ ಗಣತಿ ವೇಳೆಗೆ 2,226 ಹುಲಿಗಳಿದ್ದವು. 2010ರಲ್ಲಿ 1,706 ಹಾಗೂ 2006ರಲ್ಲಿ 1411 ಹುಲಿಗಳಿದ್ದವು. ಈ ಲೆಕ್ಕಾಚಾರದ ಪ್ರಕಾರ 12 ವರ್ಷಗಳ ಅವಧಿಯಲ್ಲಿ ಹುಲಿಗಳ ಸಂಖ್ಯೆ ದ್ವಿಗುಣಗೊಂಡಿವೆ. ಅದೇ ರೀತಿ ವಾರ್ಷಿಕವಾಗಿ ಹುಲಿಗಳ ಸಂಖ್ಯೆ ಶೇಕಡಾ 6ರಷ್ಟು ಏರಿಕೆಯಾಗಿದೆ.

ಚಿರತೆ ಸಂಖ್ಯೆಯಲ್ಲೂ ಗಣನೀಯ ಏರಿಕೆ?

ಕೋರ್ಟ್​​ಗೆ ಮಾಹಿತಿ ಸಲ್ಲಿಸುವಾಗ ಭಾರತದಲ್ಲಿರುವ ಚಿರತೆಯ ಸಂಖ್ಯೆಯ ವಿವರವನ್ನೂ ನೀಡಲಾಗಿದೆ. ಭಾರತದಲ್ಲಿ ಒಟ್ಟು 12, 528 ಚಿರತೆಗಳಿದ್ದು, 2014ರ ಗಣತಿಗೆ ಹೋಲಿಕೆ ಮಾಡಿದಾಗ ಶೇಕಡಾ 60ರಷ್ಟು ಏರಿಕೆಯಾಗಿದೆ.

ಏಪ್ರಿಲ್​ 9ರಂದು ಹುಲಿಗಣತಿ ಬಿಡುಗಡೆ

ಬಹನಿರೀಕ್ಷಿತ ಹುಲಿ ಗಣತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್​ 9ರಂದು ಮೈಸೂರಿನಲ್ಲಿ ಅನಾವರಣ ಮಾಡಲಿದ್ದಾರೆ. ಪ್ರಾಜೆಕ್ಟ್ ಟೈಗರ್​ನ ಸುವರ್ಣ ಮಹೋತ್ಸವದ (50 ವರ್ಷ) ಹಿನ್ನೆಲೆಯಲ್ಲಿ ಗಣತಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಬಾರಿಯ ಗಣತಿಯಲ್ಲಿ ಅತಿ ಹೆಚ್ಚು ಸಂಖ್ಯೆಯ ಹುಲಿಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವೇ ನಂಬರ್​ ಸ್ಥಾನ ಪಡೆಯಲಿದೆ ಎನ್ನಲಾಗಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್​ಟಿಸಿಎ) ಪ್ರಕಾರ ಈ ಬಾರಿ ಹುಲಿ ಗಣತಿಯಲ್ಲಿ ಮೊದಲ ಸ್ಥಾನ ಪಡೆಯಲು ಕರ್ನಾಟಕ ಮತ್ತು ಮಧ್ಯ ಪ್ರದೇಶದ ನಡುವೆ ಪೈಪೋಟಿಯಿದೆ. ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಜಾಸ್ತಿಯಾಗಿದೆ. ಹೊಸ ಪ್ರದೇಶಗಳಲ್ಲಿ ಹುಲಿಗಳು ಕಾಣಿಸಿಕೊಂಡಿವೆ. ಅದರಲ್ಲೂ ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು 550ರಿಂದ 600 ಹುಲಿಗಳು ಇರುವ ಸಾಧ್ಯತೆಗಳಿವೆ ಎಂದು ಎನ್​ಟಿಸಿಎ ಮೂಲಗಳು ತಿಳಿಸಿವೆ.

ಏನಿದು ಪ್ರಾಜೆಕ್ಟ್​ ಟೈಗರ್​?

ಪ್ರಾಜೆಕ್ಟ್​ ಟೈಗರ್​ 1973ರಲ್ಲಿ ಆರಂಭಗೊಂಡಿತ್ತು. ಆಗಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ 1973ರಲ್ಲಿ ಈ ಯೋಜನೆಗೆ ಚಾಲನೆ ಕೊಟ್ಟಿದ್ದರು. ಹುಲಿ ಬೇಟೆಯ ಪ್ರಕರಣಗಳು ಹೆಚ್ಚಾದ ಕಾರಣ ಹುಲಿಗಳ ಸಂಖ್ಯೆ ಭಾರತದಲ್ಲಿ ಗಣನೀಯವಾಗಿ ಕಡಿಮೆಯಾಗಿತ್ತು. ಹೀಗಾಗಿ ಪ್ರಾಜೆಕ್ಟ್​ ಟೈಗರ್​ ಮೂಲಕ ಹುಲಿ ಸಂರಕ್ಷಣೆ ಆರಂಭಿಸಲಾಯಿತು. ವನ್ಯ ಜೀವಿ ಸಂರಕ್ಷಣಾ ಕಾಯ್ಕೆ 1972ರ ಅಡಿ ಗರಿಷ್ಠ ರಕ್ಷಣೆ ನೀಡಲಾಯಿತು.

ಕರ್ನಾಟಕ ಹೇಗೆ ನಂಬರ್​ ಒನ್​?

ಈ ಬಾರಿ ಗಣತಿಯಲ್ಲಿ ಕರ್ನಾಟಕ ನಂಬರ್ ಒನ್​ ಸ್ಥಾನ ಪಡೆಯುವುದಕ್ಕೆ ಹಲವು ಕಾರಣಗಳಿವೆ. 2018ರ ಜನಗಣತಿಯಲ್ಲಿ ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ 524 ಹುಲಿಗಳಿದ್ದರೆ, 526 ಹುಲಿಗಳೊಂದಿಗೆ ಮಧ್ಯಪ್ರದೇಶ ಮೊದಲ ಸ್ಥಾನ ಪಡೆದುಕೊಂಡಿತ್ತು. ಆದರೆ, ಇತ್ತೀಚಿನ ವರದಿ ಪ್ರಕಾರ ಮಧ್ಯಪ್ರದೇಶದಲ್ಲಿ ಹೆಚ್ಚು ಹುಲಿಗಳು ಸತ್ತಿವೆ. 2023ರಲ್ಲಿಯೇ ಮಧ್ಯಪ್ರದೇಶದಲ್ಲಿ 9 ಹುಲಿಗಳು ಸತ್ತಿದ್ದರೆ ಕರ್ನಾಟಕದಲ್ಲಿ ಕೇವಲ 2 ಹುಲಿಗಳು ಮೃತಪಟ್ಟಿದ್ದವು. ಮಹಾರಾಷ್ಟ್ರದಲ್ಲಿ 7, ರಾಜಸ್ಥಾನದಲ್ಲಿ 3 ಹಾಗೂ ಉತ್ತರಾಖಂಡದಲ್ಲಿ 3 ಹಾಗೂ ಕೇರಳ ಹಾಗೂ ಅಸ್ಸಾಮ್​ನಲ್ಲಿ ತಲಾ ಒಂದು ಹುಲಿ ಸತ್ತಿದ್ದವು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

Inzamam Ul Haq: ಪಾಕ್​ ತಂಡ ಈ ಬಾರಿ ಆಡಿದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಕ್ರಿಕೆಟ್​ ಶಿಶು ಅಮೆರಿಕ ವಿರುದ್ಧವೂ ಹೀನಶಯವಾಗಿ ಸೋಲು ಕಂಡಿತ್ತು. ಆಡಿದ 4 ಪಂದ್ಯಗಳಲ್ಲಿ ಕೇವ 2 ಪಂದ್ಯ ಮಾತ್ರ ಗೆದ್ದು ಲೀಗ್​ ಹಂತದಿಂದಲೇ ನಿರ್ಗಮನ ಕಂಡಿತ್ತು. ಈ ಸೋಲು ಪಾಕ್​ನ ಮಾಜಿ ಆಟಗಾರರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

VISTARANEWS.COM


on

Inzamam Ul Haq
Koo

ಕರಾಚಿ: ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಮಾತಿನಂತೆ ಪಾಕಿಸ್ತಾನದ ತಕರಾರು ಮುಗಿದಂತೆ ಕಾಣುತ್ತಿಲ್ಲ. ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಿಂದ ಹೊರಬಿದ್ದಿರುವುದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತೋರುತ್ತಿದೆ. ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಇಂಜಮಾಮ್ ಉಲ್ ಹಕ್(Inzamam Ul Haq) ಅವರು ಭಾರತದ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ವಿಶ್ಲೇಷಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ಇಂಜಮಾಮ್ ಉಲ್ ಹಕ್ ಈ ಆರೋಪ ಮಾಡಿದ್ದಾರೆ. ಇದೇ ಕಾರ್ಯಕ್ರಮದಲ್ಲಿದ್ದ ಸಲೀಂ ಮಲಿಕ್ ಅವರು ವೇಗಿ ಅರ್ಶ್​ದೀಪ್ ಸಿಂಗ್(Arshdeep Singh) ಅವರ ರಿವರ್ಸ್ ಸ್ವಿಂಗ್ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಆದರೆ, ಇಂಜಮಾಮ್ ಅವರು ಅರ್ಶ್​ದೀಪ್ ರಿವರ್ಸ್ ಸ್ವಿಂಗ್ ಬಗ್ಗೆ ಅನುಮಾನವಿದೆ ಎಂದು ಹೇಳಿದರು.

“15ನೇ ಓವರ್​ನಲ್ಲಿ ಅರ್ಶದೀಪ್​ ಸಿಂಗ್​ ಬೌಲಿಂಗ್​ ನಡೆಸುವ ವೇಳೆ ಚೆಂಡು ಹೆಚ್ಚು ಸ್ವಿಂಗ್​ ಆಗುತ್ತಿತ್ತು. ನಾನು ಗಮನಿಸಿದ ಹಾಗೆ ಈ ರೀತಿ ಚೆಂಡು ಏಕಾಏಕಿ ಸ್ವಿಂಗ್​ ಆಗಲು ಸಾಧ್ಯವಿಲ್ಲ. ನನ್ನ ಪ್ರಕಾರ ಭಾರತೀಯ ಆಟಗಾರರು 12 ಅಥವಾ 13ನೇ ಓವರ್​ನಲ್ಲಿ ಚೆಂಡಿಗೆ ಶೈನಿಂಗ್​ ಹಚ್ಚಿದಂತೆ ಕಾಣುತ್ತಿದೆ. ಅಂಪೈರ್​ಗಳು ಇದನ್ನು ಸೂಕ್ಷವಾಗಿ ಪರಿಗಣಿಸಬೇಕು. ಇಲ್ಲಿ ಯಾವುದೋ ಮೋಸದಾಟ ನಡೆದಂತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ ಪಾಕ್​ ತಂಡದ ಸರಣಿ ಸೋಲಿನ ರಹಸ್ಯ ಬಯಲು ಮಾಡಿದ ಮಾಜಿ ನಾಯಕ

ಇಂಜಮಾಮ್ ಅವರ ಈ ಆರೋಪಕ್ಕೆ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸರಿಯಾದ ತಿಇರುಗೇಟು ನೀಡಿದ್ದಾರೆ. ನೀವು ಮಾಡುತ್ತಿರುವ ಈ ಆರೋಪ ಯಾವ ಕಾರಣಕ್ಕೆ ಎಂದು ಭಾರತೀಯರಿಗೆ ಮಾತ್ರವಲ್ಲ ಬೇರೆ ದೇಶದ ಕ್ರಿಕೆಟಿಗರಿಗು ತಿಳಿದಿದೆ. ಟೂರ್ನಿಯಿಂದ ಹೊರ ಬಿದ್ದರೂ ಕೂಡ ಕೊಂಕು ಬಯಸುವ ನಿಮ್ಮ ಈ ನರಿ ಬುದ್ದಿಯನ್ನು ಮೊದಲು ಬಿಟ್ಟು ಬಿಡಿ ಎಂದಿದ್ದಾರೆ.

ಪಾಕ್​ ತಂಡ ಈ ಬಾರಿ ಆಡಿದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಕ್ರಿಕೆಟ್​ ಶಿಶು ಅಮೆರಿಕ ವಿರುದ್ಧವೂ ಹೀನಶಯವಾಗಿ ಸೋಲು ಕಂಡಿತ್ತು. ಆಡಿದ 4 ಪಂದ್ಯಗಳಲ್ಲಿ ಕೇವ 2 ಪಂದ್ಯ ಮಾತ್ರ ಗೆದ್ದು ಲೀಗ್​ ಹಂತದಿಂದಲೇ ನಿರ್ಗಮನ ಕಂಡಿತ್ತು. ಈ ಸೋಲು ಪಾಕ್​ನ ಮಾಜಿ ಆಟಗಾರರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಭಾರತದ ಬಿರುದ್ಧ ಇಲ್ಲ ಸಲ್ಲದ ಆರೋಪ ಮಾಡಲಾರಂಭಿಸಿದ್ದಾರೆ.

ಪಾಕಿಸ್ತಾನದ ಮಾಜಿ ಆಟಗಾರರು ಭಾರತೀಯ ಆಟಗಾರರ ಮೇಲೆ ಈ ರೀತಿಯ ಆರೋಪಗಳು ಮಾಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯ ವೇಳೆಯೂ ಇಂತಹ ಹಲವು ಆರೋಪಗಳನ್ನು ಮಾಡಿದ್ದರು. ಭಾರತೀಯ ಆಟಗಾರರು ಬೌಲಿಂಗ್​ ಮತ್ತು ಬ್ಯಾಟಿಂಗ್​ ನಡೆಸುವ ವೇಳೆ ಬೇರೆ ಬೆಂಡನ್ನು ಬಳಸುತ್ತಾರೆ, ಐಸಿಸಿ ಕೂಡ ಭಾರತಕ್ಕೆ ಬೆಂಬಲ ನೀಡುತ್ತಿದೆ ಎಂದು ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದರು.

Continue Reading

ಕ್ರೀಡೆ

IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

IND vs ENG: ಭಾರತ-ಇಂಗ್ಲೆಂಡ್​ ನಡುವಿನ 2ನೇ ಸೆಮಿಫೈನಲ್​ ಪಂದ್ಯಕ್ಕೆ ಮೀಸಲು ದಿನವಿಲ್ಲ. ಹೀಗಾಗಿ ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ.

VISTARANEWS.COM


on

IND vs ENG
Koo

ಗಯಾನಾ: ಹಾಲಿ ಆವೃತ್ತಿಯ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಲ್ಲಿ ಅಜೇಯ ಗೆಲುವಿನೋಟ ಮುಂದುವರಿಸಿರುವ ಟೀಮ್​ ಇಂಡಿಯಾ ನಾಳೆ(ಗುರುವಾರ) ಪ್ರಾವಿಡೆನ್ಸ್​ ಸ್ಟೇಡಿಯಂನಲ್ಲಿ ನಡೆಯಲಿರುವ 2ನೇ ಸೆಮಿಫೈನಲ್(India vs England semi-final)​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್(IND vs ENG)​ ತಂಡದ ಸವಾಲು ಎದುರಿಸಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡಚಣೆ ತರುವ ಭೀತಿ ಎದುರಾಗಿದೆ.

ಹವಾಮಾನ ವರದಿಗಳ ಪ್ರಕಾರ ಭಾರಿ ಮಳೆಯಿಂದಾಗಿ ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ಎಚ್ಚರಿಕೆ ನೀಡಿದೆ. ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೆ ವಿಜೇತರನ್ನು ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಅಭಿಮಾನಿಗಳಲ್ಲಿ ಈ ಪ್ರಶ್ನೆ ಕಾಡಲೂ ಕೂಡ ಒಂದು ಕಾರಣವಿದೆ. ದಕ್ಷಿಣ ಆಫ್ರಿಕಾ-ಅಫಘಾನಿಸ್ತಾನ ನಡುವಿನ ಮೊದಲ ಸೆಮಿಫೈನಲ್​ ಪಂದ್ಯಕ್ಕೆ ಮೀಸಲು ದಿನವಿದ್ದರೂ, ಭಾರತ-ಇಂಗ್ಲೆಂಡ್​ ನಡುವಿನ 2ನೇ ಸೆಮಿಫೈನಲ್​ ಪಂದ್ಯಕ್ಕೆ ಮೀಸಲು ದಿನವಿಲ್ಲ. ಹೀಗಾಗಿ ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ. ಇಂಗ್ಲೆಂಡ್​ ಸೂಪರ್​-8 ಅಂಕಪಟ್ಟಿಯಲ್ಲಿ 2ನೇ ಸ್ಥಾನ ಗಳಿಸಿತ್ತು. ಹೀಗಾಗಿ ಈ ಲಾಭ ಭಾರತಕ್ಕೆ ಲಭಿಸಲಿದೆ.

ಶೇ. 88 ರಷ್ಟು ಮಳೆ


ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಪಂದ್ಯದ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ. 88ರಷ್ಟಿದೆ. ಫೈನಲ್​ ಪಂದ್ಯ ಶನಿವಾರವೇ ನಡೆಯಲಿರುವುದರಿಂದ, 2ನೇ ಸೆಮೀಸ್​ಗೆ ಮೀಸಲು ದಿನವಿಲ್ಲ ಎಂದು ಐಸಿಸಿ ಈ ಮೊದಲೇ ಸ್ಪಷ್ಟಪಡಿಸಿತ್ತು. ಈ ಪಂದ್ಯಕ್ಕೆ ಮೀಸಲು ದಿನ ಇರದಿದ್ದರೂ ಕೂಡ ಪಂದ್ಯ ಮುಗಿಸಲು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಐಸಿಸಿ ನೀಡಿದೆ. ಜತೆಗೆ ಸೆಮಿಫೈನಲ್​ನಲ್ಲಿ ಸ್ಪಷ್ಟ ಫಲಿತಾಂಶ ಬರಬೇಕಾದರೆ ಉಭಯ ತಂಡಗಳು ಕನಿಷ್ಠ 10 ಓವರ್​ಗಳ ಪಂದ್ಯ ಆಡಬೇಕಾಗಿದೆ. ಲೀಗ್​, ಸೂಪರ್​-8ನಲ್ಲಿ ಫಲಿತಾಂಶಕ್ಕೆ ಕನಿಷ್ಠ 5 ಓವರ್​ಗಳ ಪಂದ್ಯ ಸಾಕಾಗಿತ್ತು.

ಇದನ್ನೂ ಓದಿ IND vs AUS : ಟಿ20 ವಿಶ್ವ ಕಪ್​ 2024ರಲ್ಲಿ ಗರಿಷ್ಠ ಸ್ಕೋರ್ ಬಾರಿಸಿದ ಭಾರತ ತಂಡ; 5 ವಿಕೆಟ್​ಗೆ 205

ಫೈನಲ್​ಗಿದೆ ಮೀಸಲು ದಿನ


ಮೊದಲ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಕ್ಕೆ ಮೀಸಲು ದಿನ ಇದೆ. ಜೂನ್​ 29ಕ್ಕೆ ಬ್ರಿಜ್​ಟೌನ್​ನಲ್ಲಿ ಫೈನಲ್​ ಪಂದ್ಯ ನಡೆಯಲಿದೆ. ನಿಗದಿತ ದಿನದಂದು ಪಂದ್ಯ ಪೂರ್ಣಗೊಳ್ಳಲಿದ್ದರೆ. ಪಂದ್ಯ ಎಲ್ಲಿಗೆ ನಿಂತಿರುತ್ತದೆಯೇ ಅಲ್ಲಿಂದಲೇ ಮೀಸಲು ದಿನ ಅಂದರೆ ಜೂನ್​ 30 (ಭಾನುವಾರ) ನಡೆಯಲಿದೆ. ಫೈನಲ್​ನಲ್ಲೂ ಫಲಿತಾಂಶ ನಿರ್ಧಾರಕ್ಕೆ ಉಭಯ ತಂಡಗಳು ಕನಿಷ್ಠ 10 ಓವರ್​ ಆಡಬೇಕು. ಮೀಸಲು ದಿನವೂ ಮಳೆ ಅಡ್ಡಿಪಡಿಸಿದರೆ, ಫೈನಲ್​ಗೇರಿದ ಎರಡೂ ತಂಡಗಳನ್ನು ಜಂಟಿ ಚಾಂಪಿಯನ್​ ಎಂದು ಐಸಿಸಿ ಘೋಷಿಸಲಿದೆ.

Continue Reading

ಪ್ರಮುಖ ಸುದ್ದಿ

David Warner : ವಿಶ್ವ ಕಪ್​ನಿಂದ ಹೊರಬಿದ್ದ ಬೇಸರ; ಬಿಯರ್ ಕುಡಿತಾ ಕುಳಿತ ಆಸ್ಟ್ರೇಲಿಯಾದ ಆಟಗಾರರು

David Warner : ಆಸ್ಟ್ರೇಲಿಯಾ ತಂಡ ಮಿಚೆಲ್ ಮಾರ್ಷ್​ ನೇತೃತ್ವದಲ್ಲಿ ವಿಶ್ವಾಸದಿಂದಲೇ ವೆಸ್ಟ್​ ಇಂಡೀಸ್​ಗೆ ತೆರಳಿತ್ತು. ಆದರೆ, ಅಪಘಾನಿಸ್ತಾನ ವಿರುದ್ಧ ಸೂಪರ್​ ಪಂದ್ಯವನ್ನು ಸೋತ ಬಳಿಕ ನಡುಗಿತು. ಬಳಿಕ ಭಾರತ ವಿರುದ್ಧವೂ ಹೀನಾಯವಾಗಿ ಪರಾಭವಗೊಂಡಿತು.

VISTARANEWS.COM


on

David Warner
Koo

ಬೆಂಗಳೂರು: ದುರಂಹಕಾರಿ ಆಸ್ಟ್ರೇಲಿಯಾ ತಂಡ ವಿಶ್ವ ಕಪ್​ನ ಸೂಪರ್ 8 ಹಂತದಿಂದ ಹೊರಕ್ಕೆ ಬಿದ್ದಿದೆ. ಹೀಗಾಗಿ ಆ ತಂಡಕ್ಕೆ ಆಘಾತವಾಗಿದೆ. 2021ರ ಆವೃತ್ತಿಯ ಚಾಂಪಿಯನ್ ಹಾಗೂ 2023ರ ಏಕ ದಿನ ವಿಶ್ವ ಕಪ್ ಚಾಂಪಿಯನ್ ತಂಡಕ್ಕೆ ಇದು ನಿಜವಾಗಿಯೂ ದುಃಖದ ವಿಚಾರ. ಹೀಗಾಗಿ ಸೋಲಿನ ಬಳಿಕ ಆಟಗಾರರು ಬಿಯರ್​ ಕುಡಿತಾ ಬೇಸರ ಹೊರಹಾಕಿದ್ದಾರೆ ಎಂಬುದಾಗಿ ವರದಿಯಾಗಿದೆ. ಬಿಯರ್ ಅಲ್ಲಿ ಸಾಮಾನ್ಯ ಸಂಸ್ಕೃತಿಯಾಗಿರುವ ಕಾರಣ ಅದು ಎಷ್ಟು ಸತ್ಯ ಎಂಬುದು ಗೊತ್ತಿಲ್ಲ. ಆದರೆ, ಜೇಕ್ ಫ್ರೇಸರ್ ಮೆಗ್​ಕುರ್ಕ್​ ಹಾಗೂ ಡೇವಿಡ್​ ವಾರ್ನರ್ (David Warner ) ಬಿಯರ್​ ಕುಡಿತಾ ಕುಳಿತಿರುವ ಫೋಟೊಗಳನ್ನು ಹಾಕಿಕೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡ ಮಿಚೆಲ್ ಮಾರ್ಷ್​ ನೇತೃತ್ವದಲ್ಲಿ ವಿಶ್ವಾಸದಿಂದಲೇ ವೆಸ್ಟ್​ ಇಂಡೀಸ್​ಗೆ ತೆರಳಿತ್ತು. ಆದರೆ, ಅಪಘಾನಿಸ್ತಾನ ವಿರುದ್ಧ ಸೂಪರ್​ ಪಂದ್ಯವನ್ನು ಸೋತ ಬಳಿಕ ನಡುಗಿತು. ಬಳಿಕ ಭಾರತ ವಿರುದ್ಧವೂ ಹೀನಾಯವಾಗಿ ಪರಾಭವಗೊಂಡಿತು. ಗೆದ್ದೇ ಗೆಲ್ಲುತ್ತೇವೆ ಎಂಬ ಅತ್ಯುತ್ಸಾಹದಲ್ಲಿ ಸಾಗುವ ಕಾಂಗಾರೂ ಪಡೆಗಳಿಗೆ ಇದು ಸಂಪೂರ್ಣ ನಿರಾಸೆಯ ಸಂಗತಿಯಾಗಿದೆ. ಹೀಗಾಗಿ ಬಿಯರ್​ ಕುಡಿಯದೇ ವಿಧಿಯಿಲ್ಲ

ಮೆಗ್​ಕುರ್ಕ್​ ವಿಶ್ವ ಕಪ್​​ ಆಸ್ಟ್ರೇಲಿಯಾ ತಂಡದ ಪರ ಬ್ಯಾಟಿಂಗ್ ಮಾಡುವ ಮೂಲಕ ಅದ್ಭುತ ಪ್ರದರ್ಶನ ನೀಡಿದ್ದಾರೆ. ಯುವ ಬ್ಯಾಟ್ಸ್ಮನ್ ಅನ್ನು ಆಸ್ಟ್ರೇಲಿಯಾ ತಂಡದ ಮುಂದಿನ ಸಂಭಾವ್ಯ ಆರಂಭಿಕ ಆಟಗಾರ ಎಂದು ಪರಿಗಣಿಸಲಾಗಿದೆ. ಆಸ್ಟ್ರೇಲಿಯಾದ ಮಾಜಿ ಆರಂಭಿಕ ಬ್ಯಾಟರ್​​ ಡೇವಿಡ್ ವಾರ್ನರ್ ಈ ಯುವ ಆಟಗಾರನಿಗೆ ಪ್ರೇರಣೆ.

ವಿಶೇಷವೆಂದರೆ, ಇಬ್ಬರೂ ಕ್ರಿಕೆಟಿಗರು ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಡ್ರೆಸ್ಸಿಂಗ್ ಕೊಠಡಿಯನ್ನು ಹಂಚಿಕೊಂಡಿದ್ದಾರೆ. 2024 ರ ಟಿ 20 ವಿಶ್ವ ಕಪ್​ನಿಂದ ಆಸೀಸ್​ ಬಳಗ ಹೊರಬಿದ್ದ ನಂತರ ಅವರಿಬ್ಬರೂ ಮೈದಾನದಿಂದ ದೂರವಿದ್ದರು. ಅವರಿಬ್ಬರೂ ಜತೆಯಾಗಿ ಬಿಯರ್​ ಕುಡಿದಿದ್ದಾರೆ.

ಮೆಗ್​ಕುರ್ಕ್​ ಒಂದೇ ಒಂದು ಪಂದ್ಯವನ್ನು ಆಡಲು ಸಾಧ್ಯವಾಗದಿದ್ದರೂ ಆಸೀಸ್​ ತಂಡದ ಟ್ರೋಫಿಗೆ ಸವಾಲೊಡ್ಡುವ ವಾತಾವರಣಕ್ಕೆ ಅವರು ತೆರೆದುಕೊಂಡರು. ಡೇವಿಡ್ ವಾರ್ನರ್ ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಮೆಗ್​ಕುರ್ಕ್​ ಅವರೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ತಮ್ಮ ಕೆರಿಬಿಯನ್ ವಾಸ್ತವ್ಯದ ಮುಕ್ತಾಯದ ನಂತರ ಬಿಯರ್ ಕುಡಿತಾ ಕುಳಿತಿದ್ದರು.

ಮೆಗ್​ಕುರ್ಕ್​ ಪ್ರಶ್ನೆಗಳನ್ನು ಕೇಳುತ್ತಾರೆ : ವಾರ್ನರ್

ಆಸ್ಟ್ರೇಲಿಯಾ ತಂಡದಲ್ಲಿ ಜೇಕ್ ಫ್ರೇಸರ್ ಮೆಕ್ಗುರ್ಕ್ ಅವರ ಸಂಭಾವ್ಯ ಸ್ಥಾನದ ಬಗ್ಗೆ ವಾರ್ನರ್ ಮಾತನಾಡಿದ್ದಾರೆ. ಜಾಗತಿಕ ಟೂರ್ನಿಯಿಂದ ದುರದೃಷ್ಟವಶಾತ್ ನಿರ್ಗಮಿಸಿದ ನಂತರ ಆಸ್ಟ್ರೇಲಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ ಮತ್ತು ಮೆಕ್ಗುರ್ಕ್ ಸ್ಥಾನ ಪಡೆಯುವ ವಿಶ್ವಾಸವನ್ನು ಅವರು ತೋರಿಸಿದ್ದಾರೆ. ಮೆಕ್ಗುರ್ಕ್, ವಿಶೇಷವಾಗಿ, ಡೆಲ್ಲಿ ಕ್ಯಾಪಿಟಲ್ಸ್​ ತಂಡ ಪರವಾಗಿ ಅಸಾಧಾರಣ ಪ್ರದರ್ಶನ ನೀಡಿದ್ದರು. ಅವರನ್ನು ಪಂದ್ಯಾವಳಿಯ ಫೈನಲ್​ ಸ್ಟ್ರೈಕರ್ ಎಂದು ಕರೆಯಲಾಗಿತ್ತು. ಅವರ ಸ್ಟ್ರೈಕ್ ರೇಟ್ 200 ರ ಗಡಿಯನ್ನು ಮೀರಿತ್ತು.

ಇದನ್ನೂ ಓದಿ: Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

” ಮೆಗ್​ಕುರ್ಕ್​ ಅವರ ಅನುಭವವು ಉತ್ತಮವಾಗಿರುತ್ತದೆ. ಅವರು ಆಗಸ್ಟ್ ಅಂತ್ಯದಲ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಹೋಗುತ್ತಾರೆ ಎಂದು ನಾನು ಭಾವಿಸುತ್ತೇನೆ. ಚಿಕ್ಕ ಮಗುವಾಗಿ, ಆಟದ ಬಗ್ಗೆ, ತಂಡದ ಆಟಗಾರನಾಗಿ ಗುಂಪಿನ ಸುತ್ತಲೂ ಇರುವುದು ಹೇಗೆ ಎಂಬುದನ್ನು ಅವರು ಅರ್ಥಮಾಡಿಕೊಂಡಿದ್ದಾರೆ. ಅವರು ಸಾಕಷ್ಟು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ಅವರು ಆಟವನ್ನು ಪ್ರೀತಿಸುತ್ತಾರೆ” ಎಂದು ವಾರ್ನರ್ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

Women’s Asia Cup 2024 : ಏಷ್ಯಾದ ಅಗ್ರ 8 ಮಹಿಳಾ ಕ್ರಿಕೆಟ್ ತಂಡಗಳನ್ನು ಒಳಗೊಂಡ ಪಂದ್ಯಾವಳಿಗೆ ನಿಮ್ಮನ್ನು ಸಜ್ಜುಗೊಳಿಸಿಕೊಳ್ಳಿ. ನಿಮ್ಮ ಕ್ಯಾಲೆಂಡರ್​ನಲ್ಲಿ ದಿನಾಂಕಗಳನ್ನು ಮಾರ್ಕ್ ಮಾಡಿ. ಏಕೆಂದರೆ ಇದು ಜುಲೈ 19, 2024 ರಂದು ಶ್ರೀಲಂಕಾದ ಡಂಬುಲ್ಲಾದಲ್ಲಿ ಟೂರ್ನಿ ಪ್ರಾರಂಭವಾಗಲಿದೆ, ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯಾಗಿರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ತನ್ನ ‘ಎಕ್ಸ್’ ಹ್ಯಾಂಡಲ್​ನಲ್ಲಿ ಬರೆದುಕೊಂಡಿದೆ.

VISTARANEWS.COM


on

Women's Asia Cup
Koo

ಬೆಂಗಳೂರು : ಇತ್ತೀಚೆಗೆ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 3-0 ಸರಣಿ ಗೆಲುವಿನೊಂದಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಉತ್ಸಾಹದಲ್ಲಿದೆ. ಇದೀಗ ಮತ್ತೊಂದು ಪ್ರಮುಖ ಪಂದ್ಯಾವಳಿಗಾಗಿ ಶೀಘ್ರದಲ್ಲೇ ಸಿದ್ಧಗೊಳ್ಳಬೇಕಾಗಿದೆ. ಅದುವೇ ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ (Women’s Asia Cup 2024 )​. ಅಲ್ಲಿ ಏಷ್ಯಾದ ಅಗ್ರ ತಂಡಗಳು ಖಂಡಾಂತರ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ಮುಂಬರುವ ಮಹಿಳಾ ಏಷ್ಯಾ ಕಪ್ 2024 ಖಂಡದ ಅಗ್ರ ಎಂಟು ತಂಡಗಳು ಭಾಗವಹಿಸಲಿವೆ. ಜುಲೈ 19ರಿಂದ ಆರಂಭವಾಗಲಿರುವ ಈ ರೋಚಕ ಕ್ರಿಕೆಟ್ ಪಂದ್ಯ ಜುಲೈ 28ರಂದು ಮುಕ್ತಾಯಗೊಳ್ಳಲಿದೆ. ಶ್ರೀಲಂಕಾ ಟೂರ್ನಿಗೆ ಆತಿಥ್ಯ ವಹಿಸಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕ್ರಿಕೆಟ್ ಅಭಿಮಾನಿಗಳಿಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಏಷ್ಯಾದ ಅಗ್ರ 8 ಮಹಿಳಾ ಕ್ರಿಕೆಟ್ ತಂಡಗಳನ್ನು ಒಳಗೊಂಡ ಪಂದ್ಯಾವಳಿಗೆ ನಿಮ್ಮನ್ನು ಸಜ್ಜುಗೊಳಿಸಿಕೊಳ್ಳಿ. ನಿಮ್ಮ ಕ್ಯಾಲೆಂಡರ್​ನಲ್ಲಿ ದಿನಾಂಕಗಳನ್ನು ಮಾರ್ಕ್ ಮಾಡಿ. ಏಕೆಂದರೆ ಇದು ಜುಲೈ 19, 2024 ರಂದು ಶ್ರೀಲಂಕಾದ ಡಂಬುಲ್ಲಾದಲ್ಲಿ ಟೂರ್ನಿ ಪ್ರಾರಂಭವಾಗಲಿದೆ, ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯಾಗಿರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ತನ್ನ ‘ಎಕ್ಸ್’ ಹ್ಯಾಂಡಲ್ನಲ್ಲಿ ಬರೆದುಕೊಂಡಿದೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಮಹಿಳಾ ಏಷ್ಯಾ ಕಪ್ 2024 ರ ವೇಳಾಪಟ್ಟಿಯ ಬಗ್ಗೆ ಮಾತನಾಡುವುದಾದರೆ, ಜುಲೈ 21 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮಹಿಳಾ ವಿರುದ್ಧ ಭಾರತ ಮಹಿಳಾ ತಂಡವನ್ನು ಆಡಲು ನಿರ್ಧರಿಸಲಾಗಿತ್ತು. ಆದಾಗ್ಯೂ, ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಎಸಿಸಿ ಆಟವನ್ನು ಜುಲೈ 19 ಕ್ಕೆ ನಿಗದಿ ಮಾಡಿದೆ. ವಿಶೇಷವೆಂದರೆ, ಅಪೇಕ್ಷಿತ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಕೇಂದ್ರ ಸ್ಥಾನವನ್ನು ಪಡೆಯುತ್ತಿರುವುದು ಇದೇ ಮೊದಲು. ಕಾಂಟಿನೆಂಟಲ್ ಈವೆಂಟ್​​ನಲ್ಲಿ ಇಲ್ಲಿಯವರೆಗೆ ಕೇವಲ ಏಳು ತಂಡಗಳು ಆಡಿದ್ದವು.

ಇದನ್ನೂ ಓದಿ: T20 World Cup : ಅಫಘಾನಿಸ್ತಾನ ತಂಡದ ನಾಯಕ ರಶೀದ್​ ಗೆ ಕರೆ ಮಾಡಿ ಶುಭಾಶಯ ತಿಳಿಸಿದ ತಾಲಿಬಾನ್ ನಾಯಕ

ಏಷ್ಯನ್ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಆಯಾ ಗುಂಪುಗಳ ಅಗ್ರ ಎರಡು ತಂಡಗಳು ಜುಲೈ 26 ರಂದು ನಡೆಯಲಿರುವ ಸೆಮಿಫೈನಲ್​ಗೆ ಅರ್ಹತೆ ಪಡೆಯುತ್ತವೆ. ಫೈನಲ್ ಪಂದ್ಯ ಜುಲೈ 28ರಂದು ನಡೆಯಲಿದೆ. ಇದಲ್ಲದೆ, ಸಾಂಪ್ರದಾಯಿಕ ಎದುರಾಳಿಗಳ ಜೊತೆಗೆ ನೇಪಾಳ ಮತ್ತು ಯುಎಇ ತಂಡಗಳನ್ನು ಟೀಮ್ ಇಂಡಿಯಾದೊಂದಿಗೆ ಗುಂಪು ಮಾಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಥಾಯ್ಲೆಂಡ್ ಮತ್ತು ಮಲೇಷ್ಯಾ ತಂಡಗಳು ‘ಬಿ’ ಗುಂಪಿನಲ್ಲಿವೆ.

ಮಹಿಳಾ ಏಷ್ಯಾ ಕಪ್ ಅನ್ನು ಕೊನೆಯ ಬಾರಿಗೆ 2022 ರಲ್ಲಿ ಬಾಂಗ್ಲಾದೇಶದಲ್ಲಿ ಆಡಿಸಲಾಗಿತ್ತು. ಅಲ್ಲಿ ಫೈನಲ್​​ನಲ್ಲಿ ಶ್ರೀಲಂಕಾ ಮಹಿಳೆಯರನ್ನು ಎಂಟು ವಿಕೆಟ್​ಗಳಿಂ ಸೋಲಿಸಿದ ಭಾರತ ಮಹಿಳೆಯರು ಏಳನೇ ಪ್ರಶಸ್ತಿ ಗೆದ್ದುಕೊಂಡಿದ್ದರು ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಏಷ್ಯಾ ಕಪ್ ಅನ್ನು ಎರಡು ವರ್ಷಗಳ ಕಾಲ ಮುಂದೂಡಲಾಗಿತ್ತು.

Continue Reading
Advertisement
Vinay Gowda acted darshan devil Movie and says Futture cant be predict
ಸ್ಯಾಂಡಲ್ ವುಡ್6 mins ago

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Mass Shooting
ವಿದೇಶ25 mins ago

Mass Shooting: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ; ನಾಲ್ವರನ್ನು ಕೊಂದು ಆತ್ಮಹತ್ಯೆಗೆ ಶರಣಾದ ದುಷ್ಕರ್ಮಿ

Inzamam Ul Haq
ಕ್ರೀಡೆ32 mins ago

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

rain news wall collapse 4 death
ಕ್ರೈಂ33 mins ago

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Sanjith Hegde Nange Allava song Out
ಸ್ಯಾಂಡಲ್ ವುಡ್56 mins ago

Sanjith Hegde: ಸಂಜನಾ ದಾಸ್‌ಗೆ ʻನೀ ನಂಗೆ ಅಲ್ಲವಾʼ ಎಂದ ಸಂಜಿತ್ ಹೆಗಡೆ!

suraj revanna case 1
ಕ್ರೈಂ1 hour ago

Suraj Revanna Case: ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ

Lok Sabha Speaker Election
ದೇಶ1 hour ago

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Albania vs Spain
ಕ್ರೀಡೆ1 hour ago

Albania vs Spain: ಯುರೋ ಕಪ್​ನಲ್ಲಿ ನಾಕೌಟ್‌ ಹಂತಕ್ಕೇರಿದ ಸ್ಪೇನ್‌

Parliament Session 2024
ದೇಶ1 hour ago

Parliament Session 2024: ಇಂದು ಐತಿಹಾಸಿಕ ಲೋಕಸಭಾ ಸ್ಪೀಕರ್‌ ಚುನಾವಣೆ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Pavithra Gowda Cried After In Jail darshan case
ಕ್ರೈಂ1 hour ago

Pavithra Gowda: ನನ್ನನ್ನು ನೋಡಲು ಯಾರೂ ಬರೋದಿಲ್ಲ ಎಂದು ಪವಿತ್ರಾ ಕಣ್ಣೀರು; ʻದಚ್ಚುʼ ನಿರಾಳ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌