India still need 280 runs to win, world test championship final WTC Final : ಭಾರತದ ಗೆಲುವಿಗೆ ಇನ್ನೂ ಬೇಕು 280 ರನ್​, ಕೌತುಕದಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​ - Vistara News

ಕ್ರಿಕೆಟ್

WTC Final : ಭಾರತದ ಗೆಲುವಿಗೆ ಇನ್ನೂ ಬೇಕು 280 ರನ್​, ಕೌತುಕದಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​

ಭಾರತ ತಂಡದ ಬಳಿ ಏಳು ವಿಕೆಟ್​ಗಳು ಉಳಿದಿದ್ದು, ಕೊನೇ ದಿನದ 90 ಓವರ್​​ಗಳಲ್ಲಿ ವಿಕೆಟ್​ ಉಳಿಸಿಕೊಂಡು ಗೆಲುವು ಸಾಧಿಸಬೇಕಾಗಿದೆ.

VISTARANEWS.COM


on

Viat kohli WTC Final 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್​ನ ಫೈನಲ್​ ಪಂದ್ಯ ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಪಂದ್ಯದ ನಾಲ್ಕನೇ ದಿನದ ಅಂತ್ಯಕ್ಕೆ ಎರಡನೇ ಇನಿಂಗ್ಸ್​ನಲ್ಲಿ ಬ್ಯಾಟ್​ ಮಾಡುತ್ತಿರುವ ಭಾರತ ತಂಡ 3 ವಿಕೆಟ್​ ಕಳೆದಕೊಂಡು 164 ರನ್​ ಬಾರಿಸಿದೆ. ಸ್ಪೆಷಲಿಸ್ಟ್​ ಬ್ಯಾಟರ್​​ಗಳಾದ ವಿರಾಟ್​ ಕೊಹ್ಲಿ (44) ಹಾಗೂ ಅಜಿಂಕ್ಯ ರಹಾನೆ (20 ರನ್​) ಕ್ರೀಸ್​ನಲ್ಲಿ ಉಳಿದುಕೊಂಡಿದ್ದಾರೆ. ಭಾರತ ತಂಡದ ಗೆಲುವಿಗೆ 280 ರನ್​ ಬೇಕಾಗಿದ್ದು ಕೊನೇ ದಿನ 90 ಓವರ್​​ಗಳು ಬಾಕಿ ಉಳಿದಿವೆ. ಅತ್ತ ಆಸ್ಟ್ರೇಲಿಯಾ ತಂಡವು ಭಾರತದ ಇನ್ನುಳಿದ ಏಳು ವಿಕೆಟ್​​ಗಳನ್ನು ಉರುಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿಕೊಂಡಿದೆ.

ಇಲ್ಲಿನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಎರಡನೇ ಇನಿಂಗ್ಸ್ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 8 ವಿಕೆಟ್​ ನಷ್ಟಕ್ಕೆ 270 ರನ್​ ಬಾರಿಸಿ ಡಿಕ್ಲೇರ್​ ಮಾಡಿಕೊಂಡಿತು. 444 ರನ್​​ಗಳ ಗುರಿಯೊಂದಿಗೆ ಬ್ಯಾಟ್​ ಮಾಡಿದ ಭಾರತ ತಂಡ ಮೊದಲ ವಿಕೆಟ್​ಗೆ 41 ರನ್ ಬಾರಿಸಿತು. ರೋಹಿತ್​ ಶರ್ಮಾ (43) ಹಾಗೂ ಶುಭಮನ್​ ಗಿಲ್​ (18) ಭರವಸೆ ಮೂಡಿಸಿದರು. ಆದರೆ, ಮೂರನೇ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿನ ಬಳಿಕ ಶುಭ್​ಮನ್​ ಗಿಲ್​ ನಿರಾಸೆಯಿಂದ ಪೆವಿಲಿಯನ್​ಗೆ ಮರಳಬೇಕಾಯಿತು. ಬೋಲ್ಯಾಂಡ್ ಅವರ ಎಸೆತಕ್ಕೆ ಗ್ರೀನ್​ಗೆ ಕ್ಯಾಚ್ ನೀಡಿದ ಅವರು ಬೇಸರದಿಂದ ಹೊರಕ್ಕೆ ನಡೆದರು.

ನಂತರ ರೋಹಿತ್ ಮತ್ತು ಚೇತೇಶ್ವರ್​ ಪೂಜಾರ (27) 77 ಎಸೆತಗಳಲ್ಲಿ 51 ರನ್ ಗಳಿಸಿದರು. ನಂತರ ಇಬ್ಬರೂ ಬ್ಯಾಟ್ಸಮನ್​ಗಳು ಕೆಲವೇ ನಿಮಿಷಗಳಲ್ಲಿ ಔಟಾಗಿದ್ದಿಂದ ಭಾರತದ ಪ್ರಗತಿಗೆ ಅಡ್ಡಿಯಾಯಿತು. ರೋಹಿತ್​ ಸ್ವೀಪ್​ ಮಾಡಲು ಹೋಗಿ ನೇಥನ್​ ಲಯಾನ್​ ಎಸೆತಕ್ಕೆ ಎಲ್​ಬಿಡಬ್ಲ್ಯು ಆಡದರೆ, ಕಮಿನ್ಸ್ ಎಸೆತಕ್ಕೆ ಅನಗತ್ಯ ರನ್​ ಬಾರಿಸಲು ಮುಂದಾದ ಪೂಜಾರ ವಿಕೆಟ್​ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಾಲ್ಕನೇ ವಿಕೆಟ್​ಗೆ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಆಗಿರುವ ಉಂಟಾದ ಹಾನಿಯನ್ನು ಸರಿಪಡಿಸಿದ್ದಾರೆ. ಜೊತೆಯಾಟವು 50 ರನ್​ಗಳ ಗಡಿ ದಾಟಿದೆ. ಇದೀಗ ಡಬ್ಲ್ಯುಟಿಸಿ ಫೈನಲ್ ಪಂದ್ಯವನ್ನು ಗೆಲ್ಲಲು ಭಾರತವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ಮಾಡಿದ ದಾಖಲೆಯನ್ನು ಮುರಿಯಬೇಕಾಗಿದೆ.

ಇದನ್ನೂ ಓದಿ: WTC Final 2023 : ಲೆಜೆಂಡ್​ ಸಚಿನ್​ ತೆಂಡೂಲ್ಕರ್​ ದಾಖಲೆ ಮುರಿದ ರೋಹಿತ್​ ಶರ್ಮಾ

ಅಲೆಕ್ಸ್ ಕ್ಯೇರಿ ಅರ್ಧ ಶತಕ

ಮೂರನೇ ದಿನದಾಟದ ಅಂತ್ಯಕ್ಕೆ 123 ರನ್​ಗಳಿಗೆ 4 ವಿಕೆಟ್​ ಕಳೆದುಕೊಂಡಿದ್ದ ಆಸ್ಟ್ರೇಲಿಯಾ, ನಾಲ್ಕನೇ ದಿನದ ಮೊದಲ ಸೆಶನ್​ನಲ್ಲಿ ವಿಕೆಟ್​ಗಳನ್ನು ಕಳೆದುಕೊಂಡಿತು. ಮರ್ನಸ್​ ಲಾಬುಶೇನ್​ ಆರಂಭದಲ್ಲಿಯೇ ವಿಕೆಟ್​ ಒಪ್ಪಿಸಿದರು. ಆದರೆ ಏಳನೆ ವಿಕೆಟ್​ಗೆ ಅಲೆಕ್ಸ್​ ಕ್ಯೇರಿ (ಅಜೇಯ 66) ಹಾಗೂ ಮಿಚೆಲ್ ಸ್ಟಾರ್ಕ್​ (41) 93 ರನ್ ಜತೆಯಾಟ ನೀಡುವ ಮೂಲಕ ಭಾರತ ತಂಡಕ್ಕೆ ದೊಡ್ಡ ಗುರಿಯನ್ನು ಒಡ್ಡಲು ನೆರವಾದರು. ಅದಕ್ಕಿಂತ ಮೊದಲು ಸ್ಮಿತ್ (34) ಹಾಗೂ ಟ್ರಾವಿಡ್​ ಹೆಡ್​ (18) ಆಸ್ಟ್ರೇಲಿಯಾ ತಂಡಕ್ಕೆ ಸಣ್ಣ ಕೊಡುಗೆ ಕೊಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಕಾನ್ವೆ ಬದಲಿಗೆ ಚೆನ್ನೈ ತಂಡ ಸೇರ್ಪಡೆಗೊಂಡ ರಿಚರ್ಡ್ ಗ್ಲೀಸನ್

IPL 2024: ಬಾಂಗ್ಲಾ ವೇಗಿ ಮುಸ್ತಫಿಜುರ್ ರೆಹಮಾನ್ ಅವರು ಮೇ 1 ರ ನಂತರ ಐಪಿಎಲ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ. ಮೇ 3 ರಿಂದ ಬಾಂಗ್ಲಾದೇಶ ತಂಡ ತನ್ನ ತವರಿನಲ್ಲಿ ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯನ್ನಾಡಲು ಅವರು ತವರಿಗೆ ಮರಳಲಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ಅವರು ಚೆನ್ನೈ ತಂಡದಿಂದ ಹೊರಗುಳಿದರೆ ಅವರ ಸ್ಥಾನದಲ್ಲಿ ಗ್ಲೀಸನ್ ಆಡುವ ಅವಕಾಶ ಪಡೆಯಬಹುದು.

VISTARANEWS.COM


on

IPL 2024
Koo

ಚೆನ್ನೈ: ನ್ಯೂಜಿಲ್ಯಾಂಡ್​ನ ಆರಂಭಿಕ ಬ್ಯಾಟರ್​, ಚೆನ್ನೈ ತಂಡದ ಆಟಗಾರನಾಗಿದ್ದ ಡೆವೊನ್ ಕಾನ್ವೆ(Devon Conway) ಅವರು ಸಂಪೂರ್ಣವಾಗಿ ಗಾಯದಿಂದ ಚೇತರಿಕೆ ಕಾಣದೆ ಐಪಿಎಲ್​ನಿಂದ(IPL 2024) ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಇಂಗ್ಲೆಂಡ್ ವೇಗಿ ರಿಚರ್ಡ್ ಗ್ಲೀಸನ್(Richard Gleeson) ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಅವರನ್ನು ಮೂಲ ಬೆಲೆ 50 ಲಕ್ಷಕ್ಕೆ ತಂಡಕ್ಕೆ ಸೇರಿಸಲಾಗಿದೆ ಎಂದು ಚೆನ್ನೈ ಫ್ರಾಂಚೈಸಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಟೂರ್ನಿ ಆರಂಭಕ್ಕೂ ಮುನ್ನವೇ ಕಾನ್ವೆ ಹೆಬ್ಬೆರಳಿನ ಗಾಯಕ್ಕೀಡಾಗಿದ್ದರು. ಮೊದಲ ಹಂತದ ವೇಳಾಪಟ್ಟಿಯ ಬಳಿಕ ತಂಡ ಸೇರುವ ನಿರೀಕ್ಷೆಯಲ್ಲಿದ್ದರು. ಹೀಗಾಗಿ ಇಷ್ಟು ದಿನ ಚೆನ್ನೈ ಕಾದು ನೋಡುವ ತಂತ್ರ ಮಾಡಿತ್ತು. ಆದರೆ ಅವರು ಗಾಯದಿಂದ ಚೇತರಿಕೆ ಕಾಣುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅವರನ್ನು ತಂಡದಿಂದ ಈ ಆವೃತ್ತಿಗೆ ಕೈಬಿಡಲಾಗಿದೆ. ಕಳೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ವೇಳೆ ಕಾನ್ವೆ ಹೆಬ್ಬೆರಳಿನ ಗಾಯಕ್ಕೀಡಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಗ್ಲೀಸನ್ ಇಂಗ್ಲೆಂಡ್​ ಪರ 6 ಟಿ20 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. 9 ವಿಕೆಟ್​ ಕೂಡ ಪಡೆದಿದ್ದಾರೆ.

ಕಾನ್ವೆ ವಿಡಿಯೊ ಮೂಲಕ ತಮ್ಮ ಅಲಭ್ಯತೆಯನ್ನು ಸ್ಪಷ್ಟಪಡಿಸಿದ್ದು, ಚೆನ್ನೈ ತಂಡದ ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿದ್ದಾರೆ. ಈ ಬಾರಿಯೂ ತಂಡ ಕಪ್​ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿದೆ ಎಂದು ಆತ್ಮವಿಶ್ವಾಸದ ನುಡಿಗಳನ್ನಾಡಿದ್ದಾರೆ. ಚೆನ್ನೈ ತಂಡ ಈಗಾಗಲೇ 6 ಪಂದ್ಯಗಳಿಂದ ನಾಲ್ಕು ಪಂದ್ಯಗಳನ್ನು ಗೆದ್ದು 8 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

ಬಾಂಗ್ಲಾ ವೇಗಿ ಮುಸ್ತಫಿಜುರ್ ರೆಹಮಾನ್ ಅವರು ಮೇ 1 ರ ನಂತರ ಐಪಿಎಲ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ. ಮೇ 3 ರಿಂದ ಬಾಂಗ್ಲಾದೇಶ ತಂಡ ತನ್ನ ತವರಿನಲ್ಲಿ ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯನ್ನಾಡಲು ಅವರು ತವರಿಗೆ ಮರಳಲಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ಅವರು ಚೆನ್ನೈ ತಂಡದಿಂದ ಹೊರಗುಳಿದರೆ ಅವರ ಸ್ಥಾನದಲ್ಲಿ ಗ್ಲೀಸನ್ ಆಡುವ ಅವಕಾಶ ಪಡೆಯಬಹುದು.

ನಾಳೆ(ಶುಕ್ರವಾರ) ನಡೆಯುವ ಐಪಿಎಲ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​(hennai Super Kings) ತಂಡ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಆಡಲಿದೆ. ಲಕ್ನೋಗೆ(Lucknow Super Giants) ತವರಿನ ಪಂದ್ಯವಾಗಿದೆ. ಪ್ಲೇ ಆಫ್​​ ಪ್ರವೇಶದ ಹಿನ್ನೆಲೆ ಉಭಯ ತಂಡಗಳಿಗೂ ಇದು ಮಹತ್ವದ ಪಂದ್ಯ.

Continue Reading

ಕ್ರೀಡೆ

LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

LSG vs CSK: ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ಇದುವರೆಗೆ ಐಪಿಎಲ್​ನಲ್ಲಿ ಮೂರು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ತಲಾ ಒಂದು ಪಂದ್ಯಗಳಲ್ಲಿ ಉಭಯ ತಮಡಗಳು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.​

VISTARANEWS.COM


on

LSG vs CSK
Koo

ಲಕ್ನೋ: ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಲಕ್ನೋ ಸೂಪರ್​ ಜೈಂಟ್ಸ್(LSG vs CSK)​ ಗೆಲುವಿನಿ ಹಳಿ ಏರುವ ವಿಶ್ವಾಸದಲ್ಲಿ ನಾಳೆ(ಶುಕ್ರವಾರ) ನಡೆಯುವ ಐಪಿಎಲ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​(hennai Super Kings) ವಿರುದ್ಧ ಆಡಲಿಳಿಯಲಿದೆ. ಈ ಪಂದ್ಯ ಲಕ್ನೋಗೆ(Lucknow Super Giants) ತವರಿನ ಪಂದ್ಯವಾಗಿದೆ. 6ನೇ ಸ್ಥಾನಿಯಾಗಿರುವ ಲಕ್ನೋಗೆ ಪ್ಲೇ ಆಫ್​​ ಪ್ರವೇಶದ ಹಿನ್ನೆಲೆ ಲಕ್ನೋಗೆ ಇದು ಮಹತ್ವದ ಪಂದ್ಯ.

ಪಿಚ್​ ರಿಪೋರ್ಟ್​


ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಮೈದಾನದ ಔಟ್​ ಫೀಲ್ಡ್​ ದೊಡ್ಡದಾಗಿರುವ ಕಾರಣ ಇಲ್ಲಿ ಸಿಕ್ಸರ್​ ಮತ್ತು ಬೌಂಡರಿ ಬಾರಿಸುವುದು ಅಷ್ಟು ಸುಲಭವಲ್ಲ. ಪಿಚ್​ ಕೂಡ ಬ್ಯಾಟಿಂಗ್​ಗೆ ಅಷ್ಟು ಯೋಗ್ಯವಾಗಿಲ್ಲ. 160 ರನ್​ ಬಾರಿಸಿದರೂ ಇದನ್ನು ಹಿಡಿದು ನಿಲ್ಲಸಬಹುದು. ವೇಗಿಗಳಿಗೆ ಇದು ಹೇಳಿ ಮಾಡಿಸಿದ ಪಿಚ್​. ಇಲ್ಲಿ ನಡೆದ ಹಲವು ಪಂದ್ಯಗಳು ಲೋ ಸ್ಕೋರ್​ ಪಂದ್ಯಗಳಾಗಿವೆ. ಹೀಗಾಗಿ ಈ ಪಂದ್ಯವನ್ನು ಸಣ್ಣ ಮೊತ್ತದ ಹೋರಾಟ ಎಂದು ನಿರೀಕ್ಷಿಸಬಹುದು.

ಮುಖಾಮುಖಿ


ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ಇದುವರೆಗೆ ಐಪಿಎಲ್​ನಲ್ಲಿ ಮೂರು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ತಲಾ ಒಂದು ಪಂದ್ಯಗಳಲ್ಲಿ ಉಭಯ ತಮಡಗಳು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.​

ಮಯಾಂಕ್​ ಆಗಮನ


ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಮಾಯಾಂಕ್‌ ಯಾದವ್‌ ಗಾಯಾಳಾಗಿ ಕಳೆದ 3 ಪಂದ್ಯಗಳಲ್ಲಿ ಆಡಿರಲಿಲ್ಲ. ಈ ಪಂದ್ಯದಲ್ಲಿ ಆಡುವ ಸಾಧ್ಯತೆ ಅಧಿಕವಾಗಿದೆ ಎಂದು ತಂಡದ ಕೋಚ್​ ಮಾಹಿತಿ ನೀಡಿದ್ದಾರೆ. ಆಡಿದ 6 ಪಂದ್ಯಗಳಲ್ಲಿ ಒಂದಂಕಿ ಗಡಿ ದಾಟದ ದೇವತ್ತ ಪಡಿಕ್ಕಲ್​ ಈ ಪಂದ್ಯದಿಂದ ಹೊರಗುಳಿಯುವುದು ಖಚಿತ. ಡಿ ಕಾಕ್​ ಬದಲು ಕೈಲ್​ ಮೇಯರ್ಸ್​, ಮಾರ್ಕಸ್​ ಸ್ಟೋಯಿನಿಸ್​ ಬದಲಿಗೆ ಮ್ಯಾಟ್​ ಹೆನ್ರಿ ಕಣಕ್ಕಿಳಿಯಬಹುದು. ಕೃಣಾಲ್​ ಪಾಂಡ್ಯ ಸ್ಥಾನದಲ್ಲಿ ಕನ್ನಡಿಗ ಕೃಷ್ಣಪ್ಪ ಗೌತಮ್​ಗೆ ಅವಕಾಶ ಸಿಗಬಹುದು. ನಾಯಕ ರಾಹುಲ್ ಅತಿಯಾದ ರಕ್ಷಣಾತ್ಮಕ ಆಟದಿಂದ ಹೊರಬಂದು ಬಿರುಸಿನ ಬ್ಯಾಟಿಂಗ್​ ನಡೆಸುವ ಅನಿವಾರ್ಯತೆ ಇದೆ.

ಇದನ್ನೂ ಓದಿ IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

ಇದನ್ನೂ ಓದಿ IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

ಚೆನ್ನೈ ತಂಡ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಬಲಿಷ್ಠವಾಗಿದೆ. ಇಂಪ್ಯಾಕ್ಟ್​ ಪ್ಲೇಯರ್​ ಶಿವಂ ದುಬೆ ಮಧ್ಯಮ ಕ್ರಮಾಂಕದಲ್ಲಿ ಸಿಡಿದು ನಿಂತು ತಂಡದ ಬೃಹತ್​ ಮೊತ್ತಕ್ಕೆ ಕಾರಣರಾಗುತ್ತಿದ್ದಾರೆ. ಡೇರಿಯಲ್​ ಮಿಚೆಲ್​, ರಚೀನ್​ ರವೀಂದ್ರ, ನಾಯಕ ಗಾಯಕ್ವಾಡ್​ ಮತ್ತು ಅಜಿಂಕ್ಯಾ ರಹಾನೆ, ರವೀಂದ್ರ ಜಡೇಜಾ ತಂಡದ ಬ್ಯಾಟಿಂಗ್​ ಬಲವಾಗಿದ್ದಾರೆ. ವಯಸ್ಸು 40 ದಾಡಿದರೂ ಧೋನಿಯ ಬ್ಯಾಟಿಂಗ್​ ಫಾರ್ಮ್​ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಹಿಂದೆ ಆಡುತ್ತಿದ್ದ ರೀತಿಯಲ್ಲೇ ಬ್ಯಾಟಿಂಗ್​ ನಡೆಸುತ್ತಿದ್ದಾರೆ. ಇದಕ್ಕೆ ಕಳೆದ ಮುಂಬೈ ವಿರುದ್ಧದ ಪಂದ್ಯವೇ ಸಾಕ್ಷಿ. ಪಾಂಡ್ಯ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್​ ಬಾರಿಸಿದ್ದರು.

​ಸಂಭಾವ್ಯ ತಂಡ

ಚೆನ್ನೈ ಸೂಪರ್​ ಕಿಂಗ್ಸ್​: ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್​ ಕೀಪರ್​), ಶಾರ್ದೂಲ್ ಠಾಕೂರ್, ಮುಸ್ತಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.

ಲಕ್ನೋ: ಕೈಲ್​ ಮೇಯರ್ಸ್, ಕೆಎಲ್ ರಾಹುಲ್ (ನಾಯಕ), ದೀಪಕ್​ ಹೂಡಾ, ಮ್ಯಾಟ್​ ಹೆನ್ರಿ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೆ. ಗೌತಮ್​, ರವಿ ಬಿಷ್ಣೋಯ್, ಶಮರ್​ ಜೋಸೆಫ್​, ಯಶ್ ಠಾಕೂರ್, ಮಯಾಂಕ್​ ಯಾದವ್​.

Continue Reading

ಕ್ರಿಕೆಟ್

IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

IPL 2024: ಕಳೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ 100ನೇ ಟೆಸ್ಟ್ ಪಂದ್ಯವನ್ನಾಡಿದ ಆರ್​.ಅಶ್ವಿನ್​ ಅವರ ಬಗ್ಗೆಯೂ ಶಿವರಾಮಕೃಷ್ಣನ್ ಗಂಭೀರ ಆರೋಪ ಮಾಡಿದ್ದರು. ಅಶ್ವಿನ್​ ಹಿರಿಯ ಆಟಗಾರರಿಗೆ ಗೌರವ ನೀಡುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಕೂಡ ಮಾಡಿದ್ದರು.

VISTARANEWS.COM


on

IPL 2024
Koo

ಚೆನ್ನೈ: ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಮತ್ತು ತಮಿಳುನಾಡು ಮೂಲದ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್(Laxman Sivaramakrishnan) ಅವರು ಕ್ರಿಕೆಟ್ ವೀಕ್ಷಕ ವಿವರಣೆಗಾರ ಮತ್ತು ವಿಶ್ಲೇಷಕ ಹರ್ಷ ಭೋಗ್ಲೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಕಾರಣ ಹರ್ಷ ಭೋಗ್ಲೆ(Harsha Bhogle) ಅವರು ಚೆನ್ನೈ ಸೂಪರ್​ ಸಿಂಗ್ಸ್ ತಂಡದ(IPL 2024)​ ವಿರುದ್ಧ ಮಾಡಿದ ಒಂದು ಟ್ವೀಟ್​.

ಭಾನುವಾರ ಚೆನ್ನೈ ಮತ್ತು ಮುಂಬೈ(MI vs CSK) ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ 6 ವಿಕೆಟ್​ಗೆ 206 ರನ್​ ಬಾರಿಸಿತು. ಈ ವೇಳೆ ಟ್ವೀಟ್​ ಮಾಡಿದ ಭೋಗ್ಲೆ, “206 ಉತ್ತಮ ಸ್ಕೋರ್. ಆದರೆ, ಈ ಸ್ಟೇಡಿಯಂನಲ್ಲಿ ಸ್ವಲ್ಪ ಇಬ್ಬನಿ ಸಮಸ್ಯೆಯಿದೆ. ಚೆನ್ನೈ ತಂಡದಲ್ಲಿ ಹೆಚ್ಚಿನ ಬೌಲಿಂಗ್ ಆಯ್ಕೆಗಳಿಲ್ಲದಿರುವುದರಿಂದ ತಂಡಕ್ಕೆ ಇನ್ನೂ 20ರನ್​ಗಳ ಅಗತ್ಯವಿತ್ತು ಎಂದು ಭಾವಿಸುತ್ತದೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.


ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಣ್ ಶಿವರಾಮಕೃಷ್ಣನ್, ನೀವು ಚೆನ್ನೈ ಆಟಗಾರರನ್ನು ಯಾವಾಗಲೂ ಕಡೆಗಣಿಸುತ್ತೀರಿ. ಭಾರತೀಯ ಕ್ರಿಕೆಟ್‌ಗೆ ನಿಮ್ಮ ಕೊಡುಗೆ ಏನು ಎಂದು ನಿಜವಾಗಿಯೂ ಆಶ್ಚರ್ಯವಾಗುತ್ತದೆ” ಎಂದು ಖಾರವಾಗಿಯೇ ಉತ್ತರಿಸಿದ್ದಾರೆ. ಈ ಟ್ವೀಟ್​ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಶಿವರಾಮಕೃಷ್ಣನ್ ಅವರು ಇದನ್ನು ಡಿಲಿಟ್​ ಮಾಡಿದ್ದಾರೆ. ಆದರೂ ಕೆಲವು ಸ್ಕ್ರೀನ್​ ಶಾಟ್​ಗಳು ಈಗ ವೈರಲ್​ ಆಗುತ್ತಿದೆ.

ಕಳೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ 100ನೇ ಟೆಸ್ಟ್ ಪಂದ್ಯವನ್ನಾಡಿದ ಆರ್​.ಅಶ್ವಿನ್​ ಅವರ ಬಗ್ಗೆಯೂ ಶಿವರಾಮಕೃಷ್ಣನ್ ಗಂಭೀರ ಆರೋಪ ಮಾಡಿದ್ದರು. ಅಶ್ವಿನ್​ ಹಿರಿಯ ಆಟಗಾರರಿಗೆ ಗೌರವ ನೀಡುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಕೂಡ ಮಾಡಿದ್ದರು.

“100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಅಶ್ವಿನ್​ಗೆ ಶುಭ ಕೋರಲು ನಾನು ಹಲವು ಕರೆಗಳನ್ನು ಮಾಡಿದೆ. ಆದರೆ ಅವರು ಈ ಕರೆಗಳನ್ನು ಸ್ವೀಕರಿಸಿಲ್ಲ. ನ್ನನ ಕರೆಗಳನ್ನು ಕಟ್​ ಮಾಡುವ ಮೂಲಕ ಅಗೌರವ ತೋರಿದ್ದಾರೆ ಎಂದು ಲಕ್ಷ್ಮಣ್ ಶಿವರಾಮಕೃಷ್ಣನ್ ಆರೋಪಿಸಿದ್ದಾರೆ. “ನನ್ನ ಕರೆಯನ್ನು ಕಟ್ ಮಾಡಿದ ಬಳಿಕ ನಾನು ಆತನಿಗೆ ಸಂದೇಶ ಕಳುಹಿಸಿದೆ, ಅದಕ್ಕೂ ಯಾವುದೇ ಉತ್ತರವಿಲ್ಲ. ಇದು ನಮ್ಮಂತಹ ಮಾಜಿ ಕ್ರಿಕೆಟಿಗರು ಪಡೆಯುತ್ತಿರುವ ಗೌರವ” ಎಂದು ಪೋಸ್ಟ್​ನಲ್ಲಿ ಬರೆದಿದ್ದರು.

ಇದನ್ನೂ ಓದಿ IPL 2024: ಕೆಕೆಆರ್ ಸೋಲು ಕಂಡು ಕಣ್ಣೀರು ಸುರಿಸಿದ ನಟ ಶಾರೂಖ್ ಖಾನ್‌; ಫೋಟೊ ವೈರಲ್​

ಲಕ್ಷ್ಮಣ್ ಶಿವರಾಮಕೃಷ್ಣನ್ ಅವರು ಭಾರತ ಪರ 9 ಟೆಸ್ಟ್ ಮತ್ತು 16 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್​ನಲ್ಲಿ 130, ಏಕದಿನದಲ್ಲಿ ಕೇವಲ 5 ರನ್​ ಗಳಿಸಿದ್ದಾರೆ. ಬೌಲಿಂಗ್​ನಲ್ಲಿ ಒಟ್ಟು 41 ವಿಕೆಟ್​ ಉರುಳಿಸಿದ್ದಾರೆ. ಹೆಚ್ಚಾಗಿ ವಿವಾದಾತ್ಮಕ ಹೇಳಿಕೆಯಿಂದಲೇ ಇವರು ಗುರುತಿಸಿಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ಕಾಮೆಂಟರಿಯಲ್ಲಿ ಹರ್ಷ ಭೋಗ್ಲೆ ಚಿರಪರಿಚಿತ ಹೆಸರು. ಕಂಚಿನ ಕಂಠದ ಮೂಲಕ ವಿಶ್ಲೇಷಣೆ ಮಾಡುವ ಚಾಕಚಕ್ಯತೆ, ಭಾಷೆಯ ಮೇಲಿನ ಹಿಡಿತ ಅತ್ಯದ್ಭುತ. ಇವರ ಧ್ವನಿಯನ್ನು ಹೈವೋಲ್ಟೇಜ್​ ಪಂದ್ಯಗಳಲ್ಲಿ ಕೇಳುವುದೇ ಒಂದು ಸೌಭಾಗ್ಯ ಎಂದರೂ ತಪ್ಪಾಗಲಾರದು. ಮೂಲತಃ ಹೈದರಾಬಾದ್ ನವರಾದ ಹರ್ಷ ಭೋಗ್ಲೆ ತನ್ನ 19ನೇ ವಯಸ್ಸಿನಲ್ಲೇ ಕ್ರಿಕೆಟ್ ಕಾಮೆಂಟರಿ ಆರಂಭಿಸಿದ್ದರು. ಅಂದು ಆಲ್ ಇಂಡಿಯಾ ರೇಡಿಯೋದಲ್ಲಿ ವೀಕ್ಷಕ ವಿವರಣೆ ನೀಡುತ್ತಿದ್ದ ಹರ್ಷ ಆ ಬಳಿಕ ಟಿವಿ ವೀಕ್ಷಕ ವಿವರಣೆಯಲ್ಲಿ ದೊಡ್ಡ ಹೆಸರು ಮಾಡಿದರು.

Continue Reading

ಕ್ರೀಡೆ

Rohit Sharma: ಸ್ಮರಣೀಯ ಪಂದ್ಯವನ್ನಾಡಲು ಸಜ್ಜಾದ ರೋಹಿತ್​ ಶರ್ಮ

Rohit Sharma: ಪಂಜಾಬ್​ ವಿರುದ್ಧ ಕಣಕ್ಕಿಳಿಯುವ ಮೂಲಕ ರೋಹಿತ್ ಐಪಿಎಲ್​ನಲ್ಲಿ​ 250ನೇ ಪಂದ್ಯವನ್ನಾಡಿದ 2ನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ.

VISTARANEWS.COM


on

Rohit sharma
Koo

ಚಂಡೀಗಢ:​ ಮುಂಬೈ ಇಂಡಿಯನ್ಸ್(Mumbai Indians) ತಂಡ ಇಂದು ನಡೆಯುವ ಐಪಿಎಲ್​(IPL 2024) ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(Punjab Kings)​​ ವಿರುದ್ಧ ಆಡಲಿದೆ. ಈ ಪಂದ್ಯ ರೋಹಿತ್​ ಶರ್ಮ(Rohit Sharma) ಅವರಿಗೆ ಸ್ಮರಣೀಯ ಪಂದ್ಯವಾಗಿದೆ. ಪಂಜಾಬ್​ ವಿರುದ್ಧ ಕಣಕ್ಕಿಳಿಯುವ ಮೂಲಕ ರೋಹಿತ್ ಐಪಿಎಲ್​ನಲ್ಲಿ​ 250ನೇ ಪಂದ್ಯವನ್ನಾಡಿದ 2ನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರು ಅತ್ಯಧಿಕ ಐಪಿಎಲ್​ ಪಂದ್ಯಗಳನ್ನಾಡಿದ ಆಟಗಾರ. ಧೋನಿ ಇದುವರೆಗೆ 256* ಐಪಿಎಲ್​ ಪಂದ್ಯಗಳನ್ನಾಡಿದ್ದಾರೆ. ಆರ್​ಸಿಬಿ ತಂಡದ ದಿನೇಶ್ ಕಾರ್ತಿಕ್​ 249 ಪಂದ್ಯ ಆಡಿ ಮೂರನೇ ಸ್ಥಾನದಲ್ಲಿದ್ದಾರೆ. ಮುಂದಿನ ಪಂದ್ಯ ಅವರಿಗೂ 250ನೇ ಪಂದ್ಯವಾಗಲಿದೆ. ವಿರಾಟ್​ ಕೊಹ್ಲಿ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕೊಹ್ಲಿ ಒಟ್ಟು 244 ಪಂದ್ಯಗಳನ್ನಾಡಿದ್ದಾರೆ. ಇನ್ನು 6 ಪಂದ್ಯ ಆಡಿದರೆ ಅವರು ಕೂಡ 250 ಪಂದ್ಯಗಳ ಕ್ಲಬ್​ಗೆ ಸೇರ್ಪಡೆಗೊಳ್ಳಲಿದ್ದಾರೆ.

ರೋಹಿತ್​ ಅವರು ಡೆಕ್ಕನ್​ ಚಾರ್ಜಸ್​ ಪರ ಆಡುವ ಮೂಲಕ ಐಪಿಎಲ್​ ಪದಾರ್ಪಣೆ ಮಾಡಿದರು. ಈ ತಂಡ ತೊರೆದ ವಳಿಕ ಇದುವರೆಗೂ ಮುಂಬೈ ಇಂಡಿಯನ್ಸ್​ ಪರವೇ ಆಡುತ್ತಿದ್ದಾರೆ. ಇವರ ನಾಯಕತ್ವದಲ್ಲಿ ಮುಂಬೈ ಒಟ್ಟು 5 ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಒಟ್ಟು 6 ಐಪಿಎಲ್ ಟ್ರೋಫಿ​ ಗೆದ್ದ ಆಟಗಾರನಾಗಿದ್ದಾರೆ. ಡೆಕ್ಕನ್​ ಪರವೂ ಆಟಗಾರನಾಗಿ ಒಂದು ಕಪ್​ ಗೆದ್ದಿದ್ದಾರೆ. 249 ಐಪಿಎಲ್​ ಪಂದ್ಯಗಳಲ್ಲಿ 6472 ರನ್​, 15 ವಿಕೆಟ್​ ಕಡೆವಿದ್ದಾರೆ. ಒಂದು ಬಾರಿ ಹ್ಯಾಟ್ರಿಕ್​ ವಿಕೆಟ್​ ಕೂಡ ಪಡೆದಿದ್ದಾರೆ. 2 ಶತಕ ಹಾಗೂ 42 ಅರ್ಧಶತಕ ಕೂಡ ಬಾರಿಸಿದ್ದಾರೆ.

ಇದನ್ನೂ ಓದಿ IPL 2024 POINTS TABLE: ಗುಜರಾತ್​​ ಮಣಿಸಿ ಅಂಕಪಟ್ಟಿಯಲ್ಲಿ 3 ಸ್ಥಾನ ಜಿಗಿತ ಕಂಡ ಡೆಲ್ಲಿ

ಪಂಜಾಬ್​ vs ಮುಂಬೈ


ಇಲ್ಲಿನ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Maharaja Yadavindra Singh International Cricket Stadium) ಮುಲ್ಲನ್ಪುರ್​ನಲ್ಲಿ(Mullanpur) ಇಂದು ಮುಂಬೈ ಮತ್ತು ಪಂಜಾಬ್​ ಮುಖಾಮುಖಿಯಾಗಲಿವೆ. ಅದೃಷ್ಟದ ವಿಚಾರದಲ್ಲಿ ಉಭಯ ತಂಡಗಳು ಒಂದೇ ದೋಣಿಯ ಪಯಣಿಗರು. ಪಂಜಾಬ್​ 7 ನೇ ಸ್ಥಾನದಲ್ಲಿದ್ದರೆ, ಮುಂಬೈ 8 ನೇ ಸ್ಥಾನದಲ್ಲಿದೆ. ಉಭಯ ತಂಡಗಳು 6 ಪಂದ್ಯಗಳನ್ನು ಆಡಿದ್ದು, 2ರಲ್ಲಿ ಗೆದ್ದು 4ರಲ್ಲಿ ಸೋಲು ಕಂಡಿವೆ. ಎರಡೂ ತಂಡಗಳು ತಲಾ 4 ಅಂಕಗಳನ್ನು ಹೊಂದಿದೆ. ನಿವ್ವಳ ರನ್ ರೇಟ್ ಆಧಾರದಲ್ಲಿ ಮುಂದಿರುವ ಕಾರಣ ಪಂಜಾಬ್​ ತಂಡ ಮುಂಬೈಗಿಂತ ಒಂದು ಸ್ಥಾನ ಮೇಲಿದೆ. ಅಂಕಪಟ್ಟಿಯಲ್ಲಿ ಮೇಲೇರಬೇಕಾದರೆ ನಾಳಿನ ಪಂದ್ಯದಲ್ಲಿ ದೊಡ್ಡ ಗೆಲುವು ಅತ್ಯಗತ್ಯ. ದೊಡ್ಡ ಅಂತರದಿಂದ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆರುವ ಅವಕಾಶವಿದೆ.

ಎರಡೂ ತಂಡಗಳು ತಮ್ಮ ಹಿಂದಿನ ಪಂದ್ಯಗಳಲ್ಲಿ ತಮ್ಮ ತವರು ಅಂಗಳದಲ್ಲಿ ಸೋತಿದ್ದವು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದಲ್ಲಿ ಹಾರ್ದಿಕ್​ ಪಡೆ ತನ್ನ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ರನ್‌ಗಳಿಂದ ಸೋತಿತ್ತು. ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ್​ ವಿರುದ್ಧ ಥ್ರಿಲ್ಲರ್ ಪಂದ್ಯದಲ್ಲಿ 3 ವಿಕೆಟ್‌ಗಳಿಂದ ಸೋತಿತ್ತು.

Continue Reading
Advertisement
Paris Olympics 2024
ಕ್ರೀಡೆ7 mins ago

Paris Olympics 2024: ಒಲಿಂಪಿಕ್ಸ್​ಗಾಗಿ ಸರ್ಕಾರಿ ಕಟ್ಟಡದಿಂದ ನೂರಾರು ವಲಸಿಗರ ತೆರವು

Fraud Case
ಬೆಂಗಳೂರು20 mins ago

Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

Food poisoning 45 people fall ill after consuming drink buttermilk
ತುಮಕೂರು46 mins ago

Food poisoning: ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥ

Unblock A Kitchen Sink
ಲೈಫ್‌ಸ್ಟೈಲ್47 mins ago

Unblock A Kitchen Sink: ನಿಮ್ಮ ಅಡುಗೆ ಮನೆಯ ಸಿಂಕ್‌ ಆಗಾಗ ಬ್ಲಾಕ್ ಆಗುತ್ತದೆಯೆ? ಇಲ್ಲಿದೆ ಸರಳ ಉಪಾಯ

Mahua Moitra
ದೇಶ47 mins ago

Mahua Moitra: ‘ಸೆಕ್ಸ್’‌ ನನ್ನ ಸಾಮರ್ಥ್ಯದ ಗುಟ್ಟು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ!

Best Airport
ಪ್ರಮುಖ ಸುದ್ದಿ47 mins ago

Best Airport: ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳ ಪಟ್ಟಿ; ಸಿಂಗಾಪುರದ ಚಾಂಗಿಯನ್ನು ಹಿಂದಿಕ್ಕಿದ ದೋಹಾದ ಹಮದ್

IPL 2024
ಕ್ರೀಡೆ50 mins ago

IPL 2024: ಕಾನ್ವೆ ಬದಲಿಗೆ ಚೆನ್ನೈ ತಂಡ ಸೇರ್ಪಡೆಗೊಂಡ ರಿಚರ್ಡ್ ಗ್ಲೀಸನ್

Viral News
ವೈರಲ್ ನ್ಯೂಸ್55 mins ago

Viral News: ಬಿಕಿನಿ ಧರಿಸಿ ಬಸ್‌ ಏರಿದ ಮಹಿಳೆಯಿಂದ ಅಸಭ್ಯ ವರ್ತನೆ: ಬೆಚ್ಚಿಬಿದ್ದ ಪ್ರಯಾಣಿಕರು; ಇಲ್ಲಿದೆ ವಿಡಿಯೊ

Lok sabha election 2024
ದೇಶ2 hours ago

Lok sabha election: 2019ರ ಅವಲೋಕನ; ಗರಿಷ್ಠ- ಕನಿಷ್ಠ ಮತಗಳ ಅಂತರದಿಂದ ಗೆದ್ದವರು

Student Death in Bengaluru
ಬೆಂಗಳೂರು2 hours ago

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌