Asia Cup 2023 : ಭಾರತ ತಂಡವನ್ನು ನರಕಕ್ಕೆ ಹೋಗಲಿ ಎಂದು ಹೇಳಿಲ್ಲ; ಜಾವೆದ್​ ಮಿಯಾಂದಾದ್​ ಯೂಟರ್ನ್​ - Vistara News

ಕ್ರಿಕೆಟ್

Asia Cup 2023 : ಭಾರತ ತಂಡವನ್ನು ನರಕಕ್ಕೆ ಹೋಗಲಿ ಎಂದು ಹೇಳಿಲ್ಲ; ಜಾವೆದ್​ ಮಿಯಾಂದಾದ್​ ಯೂಟರ್ನ್​

ಭಾರತ ತಂಡ ನರಕಕ್ಕೆ ಹೋಗಲಿ ಎಂದು ನಾನು ಹೇಳಿಲ್ಲ. ನನ್ನ ಮಾತನ್ನು ತಿರುಚಲಾಗಿದೆ ಎಂದು ಪಾಕಿಸ್ತಾನದ ಮಾಜಿ ನಾಯಕ ಜಾವೆದ್​ ಮಿಯಾಂದಾದ್ ಹೇಳಿದ್ದಾರೆ.

VISTARANEWS.COM


on

javed miandad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ತಮ್ಮ ಹೇಳಿಕೆ ವಿವಾದದ ರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ತಂಡದ ಮಾಜಿ ನಾಯಕ ಜಾವೆದ್​ ಮಿಯಾಂದಾದ್ (Asia Cup 2023) ಅವರು, ಭಾರತ ತಂಡ ನರಕಕ್ಕೆ ಹೋಗಲಿ ಎಂದ ಹೇಳಿಯೇ ಇಲ್ಲ ಎಂದು ನುಡಿದಿದ್ದಾರೆ. ಈ ಮೂಲಕ ಕೆಲವೇ ದಿನಗಳಲ್ಲಿ ಅವರು ಯೂಟರ್ನ್​ ಹೊಡೆದು ವಿವಾದದಿಂದ ಪಾರಾಗಲು ಯತ್ನಿಸಿದ್ದಾರೆ. ಭಾರತ ತಂಡದ ಏಷ್ಯಾ ಕಪ್​ ಆಡುವುದಕ್ಕೆ ಪಾಕಿಸ್ತಾನಕ್ಕೆ ಹೋಗುವುದಿಲ್ಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದ ಮಿಯಾಂದಾದ್​ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಏಷ್ಯಾ ಕಪ್​ 2023 ಟೂರ್ನಿಯನ್ನು ಪಾಕಿಸ್ತಾನದಿಂದ ಹೊರಗೆ ನಡೆಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್​ ಯೋಜನೆ ರೂಪಿಸುತ್ತಿದೆ. ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಹಿಂದೇಟು ಹಾಕಿರುವುದೇ ಅದಕ್ಕೆ ಕಾರಣ. ಆದರೆ, ನಮ್ಮ ಆತಿಥ್ಯದ ಟೂರ್ನಿ ನಮ್ಮ ನೆಲದಲ್ಲೇ ನಡೆಯಬೇಕು ಎಂದು ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಪಟ್ಟು ಹಿಡಿದಿದೆ. ಈ ವಿಚಾರವಾಗಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಪ್ರಮುಖ ವಾದ ಮಂಡಿಸುತ್ತಿದ್ದಾರೆ. ಈ ಭರದಲ್ಲಿ ಮಿಯಾಂದಾದ್​, ಪಾಕಿಸ್ತಾನಕ್ಕೆ ಬರದ ಭಾರತ ತಂಡ ನರಕಕ್ಕೆ ಹೋಗಲಿ ಎಂಬರ್ಥದ ಹೇಳಿಕೆ ಕೊಟ್ಟಿದ್ದರು. ನನ್ನ ಮಾತಿನ ಅರ್ಥ ಅದಲ್ಲ. ಹೇಳಿಕೆಯನ್ನೇ ತಿರುಚಲಾಗಿದೆ ಎಂಬುದಾಗಿ ಅವರೀಗ ಹೇಳಿದ್ದಾರೆ.

ಇದನ್ನೂ ಓದಿ : Asia Cup 2023 : ಭಾರತ ತಂಡಕ್ಕೆ ಸೋಲಿನ ಭಯ, ಅದಕ್ಕೆ ಪಾಕ್​ಗೆ ಬರುವುದಿಲ್ಲ ಎಂದ ಮಾಜಿ ನಾಯಕ ಮಿಯಾಂದಾದ್​

ನಾನು ಈಗಲೂ ಅದೇ ಮಾತನ್ನು ಹೇಳುತ್ತೇನೆ. ಭಾರತ ತಂಡ ಪಾಕಿಸ್ತಾನಕ್ಕೆ ಬರದೇ ಹೋದರೆ ನಮಗೇನೂ ನಷ್ಟವಿಲ್ಲ. ಇದು ಎರಡೂ ದೇಶಗಳ ಕ್ರಿಕೆಟ್​ ತಂಡಗಳ ನಡುವಿನ ಸಮರ. ರಾಜಕೀಯ ಗಲಾಟೆಯಲ್ಲ. ಅವರು ಬರದೇ ಹೋದರೆ ನಾವು ಕಳೆದುಕೊಳ್ಳುವುದೇನೂ ಇಲ್ಲ. ಇಂಥದ್ದನ್ನೆಲ್ಲ ಐಸಿಸಿ ನಿಯಂತ್ರಣ ಮಾಡಬೇಕು. ಹಾಗೆಂದು ಭಾರತ ತಂಡ ನರಕಕ್ಕೆ ಹೋಗಲಿ ಎಂದು ನಾನು ಹೇಳಿಲ್ಲ. ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನೇ ತಿರುಚಲಾಗಿದೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

R Ashwin: ಅಶ್ವಿನ್ ನಮ್ಮ ಫ್ರಾಂಚೈಸಿಗೆ ಮರಳುತ್ತಿರುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಅವರು ಸೂಪರ್‌ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ. ಅವರ ಬದ್ಧತೆ ಮತ್ತು ಅತ್ಯುತ್ತಮ ಆಟವು ಭಾರತ, ತಮಿಳುನಾಡು ತಂಡಕ್ಕೆ ತಿಳಿದಿದೆ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.

VISTARANEWS.COM


on

R Ashwin
Koo

ಚೆನ್ನೈ: ಮುಂಬರುವ ಐಪಿಎಲ್​ 2025(IPL 2025) ಆಟಗಾರರ ಮೆಗಾ ಹರಾಜಿಗೆ(IPL 2025 Auction) ಮುನ್ನವೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜಸ್ಥಾನ್​​ ರಾಯಲ್ಸ್​ ತಂಡದ ಆರ್​. ಅಶ್ವಿನ್​(R Ashwin) ಮರಳಿ ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿಗೆ(CSK) ಮರಳಿದ್ದಾರೆ. 2008 ರಿಂದ 2015 ರವರೆಗೆ ಅಶ್ವಿನ್​ ಚೆನ್ನೈ ತಂಡದ ಪರ ಆಡಿದ್ದರು. ಇದೀಗ ಅವರಿಗೆ ಫ್ರಾಂಚೈಸಿ ಹೊಸ ಜವಾಬ್ದಾರಿ ನೀಡಿದೆ. ಆಟಗಾರನಾಗಿ ಅಲ್ಲ. ಬದಲಾಗಿ ಸಿಎಸ್‌ಕೆಯ ಹೈ-ಪರ್ಫಾರ್ಮೆನ್ಸ್ ಸೆಂಟರ್‌ ಕೇಂದ್ರದಲ್ಲಿ ಆಟಗಾರರ ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಸುಧಾರಣೆಯ ಮಾಡುವ ಜವಾಬ್ದಾರಿ ನೀಡಿದೆ.

‘ಕ್ರಿಕೆಟ್ ಅನ್ನು ಬೆಳೆಸುವುದು ಮತ್ತು ಕ್ರಿಕೆಟ್ ಬಳಗಕ್ಕೆ ಕೊಡುಗೆ ನೀಡುವುದು ನನ್ನ ಮುಖ್ಯ ಗುರಿಯಾಗಿದೆ. ತಮ್ಮ ಕ್ರಿಕೆಟ್ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ಮಹತ್ವದ ಪಾತ್ರವನ್ನು ವಹಿಸಿದ ಸಂಸ್ಥೆಗೆ ಇದೀಗ ಮರಳಿರುವುದು ಸಂತೋಷವಾಗಿದೆ.’ ಎಂದು ಅಶ್ವಿನ್ ಹೇಳಿದ್ದಾರೆ.

‘ಅಶ್ವಿನ್ ನಮ್ಮ ಫ್ರಾಂಚೈಸಿಗೆ ಮರಳುತ್ತಿರುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಅವರು ಸೂಪರ್‌ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ. ಅವರ ಬದ್ಧತೆ ಮತ್ತು ಅತ್ಯುತ್ತಮ ಆಟವು ಭಾರತ, ತಮಿಳುನಾಡು ತಂಡಕ್ಕೆ ತಿಳಿದಿದೆ’ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಹೇಳಿದರು.

ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ ಟೂರ್ನಿಗೆ(IPL 2025 Mega Auction) ಇದೇ ವರ್ಷಾಂತ್ಯದಲ್ಲಿ ಆಟಗಾರರ ಮಿನಿ ಹರಾಜು ನಡೆಯಲಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಎಲ್ಲ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ ಎಂದು ವರದಿಯಾಗಿದೆ. ಜತೆಗೆ ಹರಾಜಿನಲ್ಲಿ ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ Ravichandran Ashwin : ಪಂದ್ಯದ ನಡುವೆ ಪತಿ ಎದುರಿಸಿದ ಕಷ್ಟಗಳನ್ನು ವಿವರಿಸಿದ ಆರ್​. ಅಶ್ವಿನ್ ಪತ್ನಿ

ಏನಿದು ಆರ್​ಟಿಎಂ ಕಾರ್ಡ್​?


ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!


ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

Continue Reading

ಕ್ರೀಡೆ

India vs Ireland: ರೋಹಿತ್​ ಜತೆ ವಿರಾಟ್​ ಕೊಹ್ಲಿ ಇನಿಂಗ್ಸ್​ ಆರಂಭ?

India vs Ireland: ಒಂದು ವೇಳೆ ಕೊಹ್ಲಿ ಓಪನಿಂಗ್‌ ಬಂದರೆ ಜೈಸ್ವಾಲ್‌ ವನ್‌ಡೌನ್‌ನಲ್ಲಿ ಬರಬಹುದು. ಜೈಸ್ವಾಲ್​ ಆರಂಭಿಕ ಆಟಗಾರನಾಗಿರುವ ಕಾರಣ ಅವರು ಮಧ್ಯಮ ಕ್ರಮಾಂಕಕ್ಕೆ ಒಗ್ಗಿಕೊಳ್ಳುವರೇ ಎನ್ನುವ ಪ್ರಶ್ನೆಯೂ ಇಲ್ಲಿ ಸಹಜವಾಗಿಯೇ ಮೂಡಿದೆ

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಭಾರತ(India vs Ireland) ತಂಡ ತನ್ನ ಟಿ20 ವಿಶ್ವಕಪ್(​T20 World Cup 2024) ಅಭಿಯಾನವನ್ನು ಇಂದು(ಬುಧವಾರ) ಆರಂಭಿಸಲಿದೆ. ಎದುರಾಳಿ ಐರ್ಲೆಂಡ್​. ಆದರೆ, ಪಂದ್ಯಕ್ಕೂ ಮುನ್ನವೇ ಅಭಿಮಾನಿಗಳಲ್ಲಿ ದೊಡ್ಡ ಕುತೂಹಲವೊಂದು ಮೂಡಿದೆ. ಇದೆಂದರೆ ರೋಹಿತ್​ ಶರ್ಮ(Rohit Sharma) ಜತೆ ಇಂದು ಭಾರತದ ಇನಿಂಗ್ಸ್​ ಆರಂಭಿಸುವುದು ಯಾರು ಎನ್ನುವುದು.

ಸದ್ಯದ ಮಾಹಿತಿ ಪ್ರಕಾರ ಮತ್ತು ಕೋಚ್​ ರಾಹುಲ್​ ದ್ರಾವಿಡ್​ ಅವರ ಹೇಳಿಕೆ ಗಮನಿಸುವಾಗ ರೋಹಿತ್ ಶರ್ಮ ಮತ್ತು ವಿರಾಟ್​ ಕೊಹ್ಲಿ ಇನಿಂಗ್ಸ್​ ಆರಂಭಿಸುವ ಸಾಧ್ಯತೆ ಕಂಡುಬಂದಿದೆ. ಒಂದು ವೇಳೆ ಕೊಹ್ಲಿ ಓಪನಿಂಗ್‌ ಬಂದರೆ ಜೈಸ್ವಾಲ್‌ ವನ್‌ಡೌನ್‌ನಲ್ಲಿ ಬರಬಹುದು. ಜೈಸ್ವಾಲ್​ ಆರಂಭಿಕ ಆಟಗಾರನಾಗಿರುವ ಕಾರಣ ಅವರು ಮಧ್ಯಮ ಕ್ರಮಾಂಕಕ್ಕೆ ಒಗ್ಗಿಕೊಳ್ಳುವರೇ ಎನ್ನುವ ಪ್ರಶ್ನೆಯೂ ಇಲ್ಲಿ ಸಹಜವಾಗಿಯೇ ಮೂಡಿದೆ. ಉಳಿದ ಕ್ರಮಾಂಕದಲ್ಲಿ ಯಾವುದೇ ಗೊಂದಲ ಇಲ್ಲ.

ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡುತ್ತಿದ್ದಾರೆ. ಹೀಗಿರುವಾಗ ರೋಹಿತ್​ ಮತ್ತು ವಿರಾಟ್​ ಆರಂಭಿಕರಾಗಿ ಕಣಕ್ಕಿಳಿದು ಉಭಯ ಆಟಗಾರರು ಬೇಗನೆ ವಿಕೆಟ್​ ಕಳೆದುಕೊಂಡರೆ ಆ ಬಳಿಕ ತಂಡಕ್ಕೆ ಯಾರು ಆಸರೆಯಾಗಬಲ್ಲರು ಎನ್ನು ಪ್ರಶ್ನೆ ಕೂಡ ಹುಟ್ಟಿಕೊಳ್ಳಲಿದೆ. ಕ್ರಿಕೆಟ್​ ಪಂಡಿತರ ಪ್ರಕಾರ ರೋಹಿತ್​ ಜತೆ ಜೈಸ್ವಾಲ್​ ಅವರೇ ಆಡಿದರೆ ಉತ್ತಮ ಎನ್ನುವ ಸಲಹೆ ನೀಡಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್​ ಯಾದವ್​, ರಿಷಭ್​ ಪಂತ್​, ಹಾರ್ದಿಕ್​ ಪಾಂಡ್ಯ ಅವರಂತ ಹೊಡಿ ಬಡಿ ಬ್ಯಾಟರ್​ಗಳಿದ್ದರೂ ಕೂಡ ಇವರ ಪ್ರದರ್ಶನದ ಮೇಲೆ ಹೆಚ್ಚಿನ ನಂಬಿಕೆ ಇಡುವಂತಿಲ್ಲ. ಬಡಬಡನೆ ಒಂದೆರಡು ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ವಿಕೆಟ್​ ಕಳೆದುಕೊಳ್ಳುತ್ತಾರೆ. ನಿಂತು ಆಡುವ ಕಲೆ ಇವರಿಗೆ ಅಷ್ಟಾಗಿ ತಿಳಿದಿಲ್ಲ. ಬೌಲಿಂಗ್​ ಬಗ್ಗೆ ತಂಡಕ್ಕೆ ಯಾವುದೇ ಚಿಂತೆಯಿಲ್ಲ. ಜಸ್​ಪ್ರೀತ್​ ಬುಮ್ರಾ, ಕುಲ್​ದೀಪ್​ ಯಾದವ್​, ಚಹಲ್​, ಸಿರಾಜ್​ ಮತ್ತು ಜಡೇಜಾ ಈ ಪಿಚ್​ನಲ್ಲಿ ಉತ್ತಮ ಪ್ರದರ್ಶನ ತೋರುವ ನಿರೀಕ್ಷೆ ಇದೆ.

ಇದನ್ನೂ ಓದಿ India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಪಂತ್​-ಸ್ಯಾಮ್ಸನ್​ ಮಧ್ಯೆ ಯಾರಿಗೆ ಅವಕಾಶ?


ವಿಕೆಟ್​ ಕೀಪರ್​ಗಳಾಗಿರುವ ರಿಷಭ್​ ಪಂತ್​ ಮತ್ತು ಸಂಜು ಸ್ಯಾಮ್ಸನ್​ ಮಧ್ಯೆಯೂ ತೀವ್ರ ಪೈಪೋಟಿ ಏರ್ಪಟ್ಟಿದೆ. ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಂತ್​ ಅರ್ಧಶತಕ ಬಾರಿಸಿದರೂ ಕೂಡ ಮೂಲಗಳ ಪ್ರಕಾರ ಸಂಜು ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಕೆಂದರೆ ಅನೇಕ ಮಾಜಿ ಹಿರಿಯ ಆಟಗಾರರು ಪಂತ್​ಗೆ ಅವಕಾಶ ನೀಡಿದರೆ ಸೂಕ್ತ ಎನ್ನುತ್ತಿದ್ದಾರೆ. ಇದನ್ನು ಗಮನಿಸುವಾಗ ಪಂತ್​ ಮೊದಲ ಆಯ್ಕೆ ಕೀಪರ್ ಅಲ್ಲ ಎಂದು ಭಾಸವಾಗುತ್ತಿದೆ.

Continue Reading

ಕ್ರೀಡೆ

SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

SCO vs ENG: ಮಳೆಯಿಂದ ಪಂದ್ಯ ರದ್ದುಗೊಂಡ(T20 World Cup 2024) ಕಾರಣ ಇಂಗ್ಲೆಂಡ್​ ಮತ್ತು ಸ್ಕಾಟ್ಲೆಂಡ್ ತಂಡಕ್ಕೆ ತಲಾ 1 ಅಂಕ ನೀಡಲಾಯಿತು.

VISTARANEWS.COM


on

SCO vs ENG
Koo

ಬಾರ್ಬಡೋಸ್‌: ಮಂಗಳವಾರ ರಾತ್ರಿ ನಡೆಯಬೇಕಿದ್ದ ಇಂಗ್ಲೆಂಡ್​ ಮತ್ತು ಸ್ಕಾಟ್ಲೆಂಡ್(SCO vs ENG)​ ನಡುವಿನ ಪಂದ್ಯ ಮಳೆಯಿಂದ ರದ್ದು ಗೊಂಡರೆ, ದಿನದ ಮತ್ತೊಂದು ಪಂದ್ಯದಲ್ಲಿ ನೇಪಾಳ(Netherlands vs Nepal) ವಿರುದ್ಧ ನೆದರ್ಲೆಂಡ್ಸ್​​ 6 ವಿಕೆಟ್​ಗಳ ಗೆಲುವು ಸಾಧಿಸಿತು. ಮಳೆಯಿಂದ ಪಂದ್ಯ ರದ್ದುಗೊಂಡ(T20 World Cup 2024) ಕಾರಣ ಇಂಗ್ಲೆಂಡ್​ ಮತ್ತು ಸ್ಕಾಟ್ಲೆಂಡ್ ತಂಡಕ್ಕೆ ತಲಾ 1 ಅಂಕ ನೀಡಲಾಯಿತು.

ಟಾಸ್​ ಬಳಿಕ ಜೋರಾಗಿ ಮಳೆ ಸುರಿದು ಪಂದ್ಯ ನಿಗದಿತ ಸಮಯಕ್ಕೆ ಆರಂಭವಾಗಲಿಲ್ಲ. ಆದರೆ ಕೆಲ ಕಾಲದ ಬಳಿಕ ಪಂದ್ಯ ಆರಂಭಗೊಂಡಿತು. ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್ 10 ಓವರ್​ಗೆ ವಿಕೆಟ್​ ನಷ್ಟವಿಲ್ಲದೆ 90 ರನ್​ ಬಾರಿಸಿತು. ಈ ವೇಳೆ ಮಳೆ ಮತ್ತೆ ಆರಂಭಗೊಂಡ ಕಾರಣ ಪಂದ್ಯವನ್ನು ಇಲ್ಲಿಗೆ ನಿಲ್ಲಿಸಿ ಡಕ್​ವರ್ತ್​ ಲೂಯಿಸ್​ ನಿಯಮದ ಪ್ರಕಾರ ಇಂಗ್ಲೆಂಡ್​ಗೆ 10 ಓವರ್ ಗಳಲ್ಲಿ 109 ರನ್ ಗೆಲುವಿನ ಗುರಿ ನೀಡಲಾಯಿತು.

ಇಂಗ್ಲೆಂಡ್​ ಇನ್ನೇನು ಬ್ಯಾಟಿಂಗ್ ನಡೆಸಬೇಕು ಎನ್ನುವಷ್ಟರಲ್ಲಿ ಮತ್ತೆ ಜೋರಾಗಿ ಮಳೆ ಸುರಿಯಿತು. ಬಿಡುವು ನೀಡಲೇ ಇಲ್ಲ. ಅಂತಿಮವಾಗಿ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಿ ಪಂದ್ಯವನ್ನು ರದ್ದು ಎಂದು ಘೋಷಿಸಲಾಯಿತು. ಸ್ಕಾಟ್ಲೆಂಡ್ ಪರ ಮೈಕೆಲ್ ಜೋನ್ಸ್(45*) ಮತ್ತು ಜಾರ್ಜ್ ಮುನ್ಸಿ(41*) ರನ್​ ಬಾರಿಸಿದರು.

ಇದನ್ನೂ ಓದಿ India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ನೆದರ್ಲೆಂಡ್ಸ್​ಗೆ 6 ವಿಕೆಟ್​ ಜಯ


ದಿನದ ಮತ್ತೊಂದು ಪಂದ್ಯದಲ್ಲಿ ನೆದರ್ಲೆಂಡ್ಸ್​ ತಂಡ ನೇಪಾಳ ವಿರುದ್ಧ 6 ವಿಕೆಟ್​ಗಳ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಸಣ್ಣ ಮೊತ್ತದ ಈ ಹೋರಾಟದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ನೇಪಾಳ 19.2 ಓವರ್​ಗೆ 106 ರನ್​ ಬಾರಿಸಿ ಆಲೌಟ್​ ಆಯಿತು. ಅಲ್ಪ ಮೊತ್ತದ ಈ ಸವಾಲನ್ನು ಬೆನ್ನಟ್ಟಿದ ನೆದರ್ಲೆಂಡ್ಸ್​ 4 ವಿಕೆಟ್​ ಕಳೆದುಕೊಂಡು 109 ರನ್​ ಬಾರಿಸಿ ಗೆಲುವು ಸಾಧಿಸಿತು.

ಚೇಸಿಂಗ್​ ವೇಳೆ ಮ್ಯಾಕ್ಸ್ ಒ’ಡೌಡ್ 4 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ ಅಜೇಯ 54 ರನ್​ ಬಾರಿಸಿ ಅರ್ಧಶತಕದ ಆಟವಾಡಿದರು. ವಿಕ್ರಮಜಿತ್ ಸಿಂಗ್ 22 ರನ್​ ಗಳಿಸಿದರು. ಬೌಲಿಂಗ್​ನಲ್ಲಿ ಟಿಮ್ ಪ್ರಿಂಗಲ್ ಮತ್ತು ವ್ಯಾನ್ ಬೀಕ್ ತಲಾ ಮೂರು ವಿಕೆಟ್​ ಕಿತ್ತು ಮಿಂಚಿದರು. ಉಳಿದಂತೆ ವ್ಯಾನ್ ಮೀಕೆರೆನ್(2) ಮತ್ತು ಬಾಸ್ ಡಿ ಲೀಡೆ(2) ವಿಕೆಟ್​ ಪಡೆದರು. ನೇಪಾಳ ಪರ ನಿರೀಕ್ಷಿತ ಪ್ರದರ್ಶನ ತೋರಿದವರೆಂದರೆ ನಾಯಕ ರೋಹಿತ್ ಪೌಡೆಲ್ ಮಾತ್ರ. ಅವರು 5 ಬೌಂಡರಿ ಸಹಾಯದಿಂದ 35 ರನ್​ ಬಾರಿಸಿದರು. ಇವರ ಈ ಸಣ್ಣ ಮಟ್ಟದ ಬ್ಯಾಟಿಂಗ್​ ಹೋರಾಟದ ಫಲವಾಗಿ ತಂಡ ಕನಿಷ್ಠ 100ರ ಗಡಿ ದಾಟುವಂತಾಯಿತು.

Continue Reading

ಕ್ರೀಡೆ

India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

India vs Ireland: ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆಯುವ ಕಾರಣ ಭಾಗಶಃ ಬಿಸಿಲಿನ ವಾತಾವರಣ ಇರಲಿದೆ. ಬೆಳಗ್ಗಿನ ಜಾವ ಕೊಂಚ ಮೋಡ ಕವಿದ ವಾತಾವರಣ ಕಂಡು ಬಂದರೂ ಕೂಡ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಇಂಗ್ಲೆಂಡ್​ ಮತ್ತು ಸ್ಕಾಟ್ಲೆಂಡ್​ ನಡುವೆ ನಿನ್ನೆ(ಮಂಗಳವಾರ) ನಡೆಯಬೇಕಿದ್ದ ಪಂದ್ಯ ಮಳೆಯಿಂದ ಫಲಿತಾಂಶ ಕಾಣದೆ ರದ್ದು ಗೊಂಡಿತ್ತು. ಹೀಗಾಗಿ ಇಂದು(ಬುಧವಾರ) ನಡೆಯುವ ಭಾರತ ಮತ್ತು ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯಕ್ಕೂ ಮಳೆ ಭೀತಿ(New York Weather Forecast) ಇದೆಯೇ ಎಂದು ಅಭಿಮಾನಿಗಳಿಗೆ ಆತಂಕವೊಂದು(T20 World Cup) ಶುರುವಾಗಿದೆ. ಪಂದ್ಯದ ಹವಾಮಾನ ವರದಿ ಹೀಗಿದೆ.

ಹವಾಮಾನ ವರದಿ

ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆಯುವ ಕಾರಣ ಭಾಗಶಃ ಬಿಸಿಲಿನ ವಾತಾವರಣ ಇರಲಿದೆ. ಬೆಳಗ್ಗಿನ ಜಾವ ಕೊಂಚ ಮೋಡ ಕವಿದ ವಾತಾವರಣ ಕಂಡು ಬಂದರೂ ಕೂಡ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಂದ್ಯವು ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆಯವ ಕಾರಣ ಇಬ್ಬನಿಯ ಸಮಸ್ಯೆ ಕೂಡ ಕಾಣಸಿಗದು. ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ.

ಪಿಚ್​ ರಿಪೋರ್ಟ್​


ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡುತ್ತಿದ್ದಾರೆ. ಇದಕ್ಕೆ ಸೋಮವಾರ ನಡೆದಿದ್ದ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಣ ಪಂದ್ಯವೇ ಉತ್ತಮ ನಿದರ್ಶನ. ಈ ಪಂದ್ಯದಲ್ಲಿ ದಾಖಲೆಯ 127 ಎಸೆತಗಳು ಡಾಟ್​ ದಾಖಲಾಗಿತ್ತು. ಅಲ್ಲದೆ ಬೌನ್ಸರ್​ ಎಸೆತಗಳನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗದೆ ಬ್ಯಾಟರ್​ಗಳು ಚೆಂಡಿನೇಟು ತಿಂದಿದ್ದರು. ಔಟ್​ ಫೀಲ್ಡ್​ ಕೂಡ ಫೀಲ್ಡಿಂಗ್​ಗೆ ಅಷ್ಟು ಯೋಗ್ಯವಾಗಿಲ್ಲ. ಈ ಬಗ್ಗೆ ಕೋಚ್​ ರಾಹುಲ್​ ದ್ರಾವಿಡ್​ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಪೂರ್ಣವಾಗಿ ಜಾರುತ್ತಿದ್ದು ಆಟಗಾರರು ಗಾಯಗಳಾಗುವ ಸಾಧ್ಯತೆ ಅಧಿಕವಾಗಿ ಎಂದು ದ್ರಾವಿಡ್​ ಹೇಳಿದ್ದರು. ಬೌಲರ್​ಗಳಿಗೆ ಇದು ನೆಚ್ಚಿನ ತಾಣವಾಗಿದೆ.

ಇದನ್ನೂ ಓದಿ IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

ಟಿ20 ಮುಖಾಮುಖಿ


ಉಭಯ ತಂಡಗಳು ಇದುವೆರೆಗೆ ಟಿ20 ಕ್ರಿಕೆಟ್​ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತ ಗೆದ್ದಿದೆ. ಇದರಲ್ಲೊಂದು ಟಿ20 ವಿಶ್ವಕಪ್​ ಪಂದ್ಯವಾಗಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿ ಗೋಚರಿಸಿದರೂ ಕೂಡ ಐರ್ಲೆಂಡ್​ ಸವಾಲನ್ನು ಹಗುರವಾಗಿ ಕಾಣುವಂತಿಲ್ಲ. ಏಕೆಂದರೆ ಬಲಿಷ್ಠ ತಂಡಗಳು ಕೂಡ ದುರ್ಬಲ ತಂಡದ ವಿರುದ್ಧ ಸೋತ ಹಲವು ನಿದರ್ಶನಗಳಿವೆ. ಹೀಗಾಗಿ ಪ್ರತಿ ಹೆಚ್ಚುಗೂ ಎಚ್ಚರಿಕೆಯಿಂದ ಆಡಬೇಕು.

ಪಂದ್ಯದ ಪ್ರಸಾರ


ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆದರೂ ಕೂಡ ಭಾರತದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಪ್ರಸಾರಗೊಳ್ಳಲಿದೆ. ಸ್ಟಾರ್​ ಸ್ಪೋರ್ಟ್ಸ್​ ಮತ್ತು ಡಿಡಿ ದೂರದರ್ಶನದಲ್ಲಿ ಪಂದ್ಯಗಳು ನೇರಪ್ರಸಾರ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಉಭಯ ತಂಡಗಳು


ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್.

ಐರ್ಲೆಂಡ್​: ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

Continue Reading
Advertisement
self harming
ಕರ್ನಾಟಕ5 mins ago

Self Harming: ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ

R Ashwin
ಕ್ರೀಡೆ11 mins ago

R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

Arvind Kejriwal
ದೇಶ35 mins ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ವಜಾ-ನ್ಯಾಯಾಂಗ ಬಂಧನ ವಿಸ್ತರಣೆ

Election Results 2024
ಪ್ರಮುಖ ಸುದ್ದಿ48 mins ago

Bangalore Central Election Result 2024 : ಪಿ.ಸಿ ಮೋಹನ್​ ಮರ್ಯಾದೆ ಉಳಿಸಿದ ಮಹದೇವರಪುರ ಕ್ಷೇತ್ರ!

India vs Ireland
ಕ್ರೀಡೆ48 mins ago

India vs Ireland: ರೋಹಿತ್​ ಜತೆ ವಿರಾಟ್​ ಕೊಹ್ಲಿ ಇನಿಂಗ್ಸ್​ ಆರಂಭ?

J Shantha
Lok Sabha Election 202452 mins ago

J Shantha: ಅಣ್ಣ-ತಂಗಿಗೆ ಕಹಿ; ಕರ್ನಾಟಕದಲ್ಲಿ ಶ್ರೀರಾಮುಲು, ಆಂಧ್ರದಲ್ಲಿ ಜೆ. ಶಾಂತಾಗೆ ಸೋಲು!

Nitish Kumar
Lok Sabha Election 20241 hour ago

Nitish Kumar: ಎನ್‌ಡಿಎ ಸರ್ಕಾರಕ್ಕೆ ಜೆಡಿಯು, ಟಿಡಿಪಿ ಬೆಂಬಲ; ಸ್ಪೀಕರ್‌ ಹುದ್ದೆಗೆ ಎರಡೂ ಪಕ್ಷಗಳಿಂದ ಬೇಡಿಕೆ?

Kumar Bangarappa
ಪ್ರಮುಖ ಸುದ್ದಿ1 hour ago

Kumar Bangarappa: ಶಿವರಾಜ್ ಕುಮಾರ್ ನಮ್ಮೂರಿನ ಜಾತ್ರೆಯಲ್ಲಿ ಕುಣಿಯಲು ಅರ್ಜಿ ಹಾಕಲಿ! ಗೀತಾ ಸೋತ ಹಿನ್ನೆಲೆಯಲ್ಲಿ ಕುಮಾರ್ ಬಂಗಾರಪ್ಪ ಗೇಲಿ

Devendra Fadnavis
ದೇಶ1 hour ago

Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್

SCO vs ENG
ಕ್ರೀಡೆ2 hours ago

SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌