Ind vs Aus : ಭಾರತ ತಂಡಕ್ಕೆ ಕೊನೇ ಪಂದ್ಯದಲ್ಲೂ ಜಯ, 4-1 ಅಂತರದಿಂದ ಸರಣಿ ಕೈವಶ - Vistara News

ಕ್ರಿಕೆಟ್

Ind vs Aus : ಭಾರತ ತಂಡಕ್ಕೆ ಕೊನೇ ಪಂದ್ಯದಲ್ಲೂ ಜಯ, 4-1 ಅಂತರದಿಂದ ಸರಣಿ ಕೈವಶ

ind vs aus : ಸರಣಿಯುದ್ದಕ್ಕೂ ಭಾರತ ತಂಡ ಅತ್ಯುತ್ತಮ ಪ್ರದರ್ಶನ ನೀಡಿತಲ್ಲದೆ, ಯುವ ಆಟಗಾರರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

VISTARANEWS.COM


on

indian cricket team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐದು ಪಂದ್ಯಗಳ ಟಿ20 ಸರಣಿಯ ಕೊನೇ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ (ind vs aus) ವಿರುದ್ಧ 6 ರನ್​ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಕೈವಶ ಮಾಡಿಕೊಂಡಿದೆ. ರಾಯ್ಪುರದಲ್ಲಿ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಭಾರತ ತಂಡ ಸರಣಿಯನ್ನು ಗೆದ್ದುಕೊಂಡಿತ್ತು. ಹೀಗಾಗಿ ಐದನೇ ಪಂದ್ಯಕ್ಕೆ ಹೆಚ್ಚಿನ ಮೌಲ್ಯ ಇರಲಿಲ್ಲ. ಆದಾಗ್ಯೂ ಭಾರತ ತಂಡ ಸರ್ವತೋಮುಖ ಪ್ರದರ್ಶನ ನೀಡುವ ಮೂಲಕ ವಿಜಯ ತನ್ನದಾಗಿಸಿಕೊಂಡಿತು. ವಿಶ್ವ ಕಪ್​ ಫೈನಲ್ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡದ ವಿರುದ್ಧವೇ ಸರಣಿ ಗೆಲ್ಲುವ ಮೂಲಕ ಭಾರತ ತಂಡ ಸಮಾಧಾನ ಮಾಡಿಕೊಂಡಿತು. ಇದೇ ವೇಳೆ ಒಟ್ಟು 136 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿರುವ ಏಕೈಕ ತಂಡ ಎಂಬ ಹೆಗ್ಗಳಿಕೆಯನ್ನೂ ಗಳಿಸಿತು.

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟ್​ ಮಾಡಿ ನಿಗದಿತ 20 ಓವರ್​ಗಳಿಗೆ 8 ವಿಕೆಟ್​ ಕಳೆದುಕೊಂಡು 160 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮ್ಯಾಥ್ಯೂ ವೇಡ್​ ನೇತೃತ್ವದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್​ಗಳು ಮುಕ್ತಾಯಗೊಂಡಾಗ 154 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಆಸ್ಟ್ರೇಲಿಯಾ ತಂಡದ ಗೆಲುವಿಗೆ ಕೊನೇ ಓವರ್​ನಲ್ಲಿ 10 ರನ್​ ಬೇಕಾಗಿತ್ತು. ಟಿ20ಯಲ್ಲಿ ಇದು ದೊಡ್ಡ ಮೊತ್ತವೇ ಆಗಿರಲಿಲ್ಲ. ಆದರೆ, ಅರ್ಶ್​ದೀಪ್​ ಸಿಂಗ್ ಒಂದು ವಿಕೆಟ್​ ಪಡೆಯುವ ಜತೆಗೆ ಕೇವಲ ನಾಲ್ಕು ರನ್​ ನೀಡಿ ತಂಡವನ್ನು ಗೆಲ್ಲಿಸಿದರು.

ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಆಸ್ಟ್ರೇಲಿಯಾ ತಂಡ ನಿಯಮಿತವಾಗಿ ವಿಕೆಟ್​ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಬೆನ್​ ಮೆಕ್​ಡರ್ಮಾಟ್​​ (54) ಅರ್ಧ ಶತಕ ಬಾರಿಸಿ ತಂಡವನ್ನು ಗೆಲುವಿನೆಡೆಗೆ ಸಾಗಿಸುವ ಯತ್ನ ಮಾಡಿದರು. ಆದರೆ, ಉಳಿದವರ ನೆರವು ದೊರಕದ ಕಾರಣ ತಂಡ ಸೋತಿತು. ಅದಕ್ಕಿಂತ ಮೊದಲು ಆರಂಭಿಕ ಬ್ಯಾಟರ್​​ ಟ್ರಾವಿಡ್​ ಹೆಡ್​​ 28 ರನ್ ಬಾರಿಸಿದರೆ ಕೊನೆಯಲ್ಲಿ ಮ್ಯಾಥ್ಯೂ ವೇಡ್​ 22 ರನ್​ ಬಾರಿಸಿದರೂ ತಂಡವನ್ನು ಗೆಲ್ಲಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಇದನ್ನೂ ಓದಿ : IND vs SA : ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಕುರಿತ ಪೂರ್ಣ ವಿವರ ಇಲ್ಲಿದೆ

ಭಾರತ ತಂಡ ಪರ ಬೌಲಿಂಗ್​ನಲ್ಲಿ ಮುಖೇಶ್ ಕುಮಾರ್​ 3 ವಿಕೆಟ್​ ಪಡೆದರೆ ರವಿ ಬಿಷ್ಣೋಯ್​ 2 ಹಾಗೂ ಅರ್ಶ್​ದೀಪ್ ಸಿಂಗ್ 2 ವಿಕೆಟ್ ತಮ್ಮದಾಗಿಸಿಕೊಂಡರು.

ಸಾಧಾರಣ ಬ್ಯಾಟಿಂಗ್​

ಬೆಂಗಳೂರಿನಲ್ಲಿ ಭಾರತ ತಂಡದ ಬ್ಯಾಟರ್​ಗಳು ಅಬ್ಬರಿಸಬಹುದು ಎಂಬ ನಿರೀಕ್ಷೆ ಈ ಪಂದ್ಯದಲ್ಲಿ ಸುಳ್ಳಾಯಿತು. ಉತ್ತಮ ಆರಂಭ ನೀಡಿತ ಹೊರತಾಗಿಯೂ ಯಶಸ್ವಿ ಜೈಸ್ವಾಲ್​ 15 ಎಸೆತಕ್ಕೆ 21 ರನ್ ಬಾರಿಸಿ ಔಟಾದರು. ಹೀಗಾಗಿ 33 ರನ್​ಗೆ ಭಾರತ ಮೊದಲ ವಿಕೆಟ್​ ಕಳೆದುಕೊಂಡಿತು. ಋತುರಾಜ್ ಗಾಯಕ್ವಾಡ್ ಕೂಡ 10 ರನ್​ಗೆ ಸೀಮಿತಗೊಂಡರು. ಸೂರ್ಯಕುಮಾರ್​ ಯಾದವ್​ ಮತ್ತೆ ಬ್ಯಾಟಿಂಗ್​ನಲ್ಲಿ ವೈಫಲ್ಯ ಎದುರಿಸಿ 5 ರನ್​ಗೆ ಸೀಮಿತಗೊಂಡರು. ಹಿಂದಿನ ನಾಲ್ಕ ಪಂದ್ಯಗಳಲ್ಲಿ ತಂಡ ಗೆಲುವಿಗೆ ಪ್ರಾಮಾಣಿಕ ಕೊಡುಗೆ ಕೊಟ್ಟಿದ್ದ ರಿಂಕು ಸಿಂಗ್​ ಇಲ್ಲಿ 6 ರನ್​ಗೆ ಸೀಮಿತಗೊಂಡರು. ಈ ಸರಣಿಯಲ್ಲಿ ಇದು ಅವರ ಮೊದಲ ಒಂದಂಕಿ ಮೊತ್ತವಾಗಿದೆ. ಹೀಗಾಗಿ ಭಾರತ 55 ರನ್​ಗಳಿಗೆ ಮೊದಲ ನಾಲ್ಕು ವಿಕೆಟ್​ ಕಳೆದುಕೊಂಡಿತು.

ಶ್ರೇಯಸ್ ಅರ್ಧ ಶತಕ

ಭಾರತ ತಂಡ ಸಂಕಷ್ಟದಲ್ಲಿದ್ದ ವೇಳೆ ನೆರವಿಗೆ ನಿಂತ ಶ್ರೇಯಸ್​​ ಅಯ್ಯರ್ ಅರ್ಧ ಶತಕ ಬಾರಿಸಿತು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಅವರು ಆರಂಭದಲ್ಲಿ ನಿಧಾನಕ್ಕೆ ಆಡಿ ಬಳಿಕ ರನ್​ ಗಳಿಕೆ ನೆರವಾದರು. 37 ಎಸೆತಗಳನ್ನು ಎದುರಿಸಿದ ಅವರು 5 ಫೊರ್ ಹಾಗೂ 2 ಸಿಕ್ಸರ್​ಗಳನ್ನ ಬಾರಿಸಿ ಮಿಂಚಿದರು. ಇವರು ವಿಕೆಟ್​ ಕೀಪರ್ ಜಿತೇಶ್​ ಶರ್ಮಾ ಅವರ ಜತೆ ಅಮೂಲ್ಯ ಜತೆಯಾಟವಾಡಿದರು. ಜಿತೇಶ್​ 16 ಎಸೆತಕ್ಕೆ 3 ಫೊರ್​ ಹಾಗೂ 1 ಸಿಕ್ಸರ್ ಬಾರಿಸಿದರು. ಕೊನೆಯಲ್ಲಿ ಅಕ್ಷರ್ ಪಟೇಲ್​ ಸಿಡಿದೆದ್ದರು. ಅವರು 21 ಎಸೆತಕ್ಕೆ 31 ರನ್​ ಗಳ ಕೊಡುಗೆ ಕೊಟ್ಟರು. ಹೀಗಾಗಿ ಭಾರತದ ಗಳಿಕೆ ಹೆಚ್ಚಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Crazy MS Dhoni fan: ಬಿಹಾರ ಮೂಲದ ಧೋನಿ ಅಭಿಮಾನಿಯೊಬ್ಬ (Crazy MS Dhoni fan) ತನ್ನ ನೆಚ್ಚಿನ ಆಟಗಾರನ ಆಟ ನೋಡಲೆಂದೇ ದಿಲ್ಲಿಯಿಂದ ಬರೋಬ್ಬರಿ 2100 ಕಿ.ಮೀ ದೂರ ಸೈಕಲ್​ ತುಳಿದು ಚೆನ್ನೈಗೆ ಬಂದು ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

VISTARANEWS.COM


on

Crazy MS Dhoni fan
Koo

ಚೆನ್ನೈ: ಕೆಲವು ದಿನಗಳ ಹಿಂದಷ್ಟೇ ಶತಾಯುಷಿ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಧೋನಿಯನ್ನು(MS Dhoni) ನೋಡಲು ಚೆನ್ನೈಯಿಂದ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಇದೀಗ ಧೋನಿಯ ಕ್ರೇಜಿ ಅಭಿಮಾನಿಯೊಬ್ಬ(Crazy MS Dhoni fan) ತನ್ನ ನೆಚ್ಚಿನ ಆಟಗಾರನ ಆಟ ನೋಡಲೆಂದೇ ಬರೋಬ್ಬರಿ 2100 ಕಿ.ಮೀ ದೂರ ಸೈಕಲ್​ ತುಳಿದು ಬಂದು ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

ಹೌದು, ಬಿಹಾರ ಮೂಲದ ಧೋನಿ ಅಭಿಮಾನಿಯಾಗಿರುವ ಈತ ಡೆಲ್ಲಿಯಲ್ಲಿ ನೆಲೆಸಿದ್ದಾನೆ. ಈ ಬಾರಿ ಧೋನಿ ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ. ಹೀಗಾಗಿ ತಮ್ಮ ನೆಚ್ಚಿನ ಆಟಗಾರನ ಕೊನೆಯ ಆಟವನ್ನು ಕಣ್ತುಂಬಿಕೊಳ್ಳಲು ಪ್ರತಿ ಪಂದ್ಯದಲ್ಲಿಯೂ ಕಾದು ಕುಳಿತಿರುತ್ತಾರೆ.

ಬಿಹಾರ ಮೂಲದ ಧೋನಿ ಅಭಿಮಾನಿ ಕೂಡ ಹೇಗಾದರೂ ಮಾಡಿ ಧೋನಿಯ ಆಟವನ್ನು ನೋಡಲೇಬೇಕೆಂದು ಆಸೆ ಪಟ್ಟಿದ್ದರು. ಆದರೆ, ಆರ್ಥಿಕ ಸಮಸ್ಯೆಯೂ ದೊಡ್ಡ ಸವಾಲಾಗಿ ಪರಿಣಮಿಸಿತು. ಇದೇ ವೇಳೆ ಸೈಕಲ್ ಆಯ್ಕೆ ಮಾಡಿಕೊಂಡು ದಿಲ್ಲಿಯಿಂದ 23 ದಿನಗಳಲ್ಲಿ ಚೆನ್ನೈಗೆ ತಲುಪಿದರು. ಈ ಪಯಣದ ವೇಳೆ ಅವರು ಬರೋಬ್ಬರಿ 2100 ಕಿ.ಮೀ ​ಸೈಕಲ್​ ತುಳಿದಿದ್ದಾರೆ. ಕೊನೆಗೂ ಅವರು ಚೆನ್ನೈ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ರೋಚಕ ಜರ್ನಿಯ ಕಥೆಯನ್ನು ಈ ಅಭಿಮಾನಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಇತ್ತೀಚೆಗೆ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿಕೊಂಡಿದ್ದ.

ಇದನ್ನೂ ಓದಿ MS Dhoni : ಧೋನಿಗೆ ದೇವಸ್ಥಾನ; ಸಿಎಸ್​​ಕೆ ತಂಡದ ಮಾಜಿ ಆಟಗಾರ ಅಭಿಮಾನದ ನುಡಿ

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಸಿಎಸ್‌ಕೆಗಾಗಿ ಧೋನಿ ಆಡುತ್ತಿದ್ದಾರೆ. ಅವರ ಈ ಪ್ರದರ್ಶನವನ್ನು ಪರಿಗಣಿಸಿ, ಚೆನ್ನೈಯಲ್ಲಿ ಧೋನಿಯ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಮೇ 18ರಂದು ನಡೆಯುವ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇ ಬೇಕು. ಒಂದೊಮ್ಮೆ ಚೆನ್ನೈ ಸೋತರೆ ಇದುವೇ ಧೋನಿಗೆ ವಿದಾಯ ಪಂದ್ಯವಾಗಲಿದೆ.

Continue Reading

ಕ್ರೀಡೆ

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

Rishabh Pant: ಲಕ್ನೋ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಪಂತ್​, ‘ಆರ್​ಸಿಬಿ ವಿರುದ್ಧ ನಾನು ಮೈದಾನದಲ್ಲಿದ್ದರೆ ನಿರ್ಣಾಯಕ ಪಂದ್ಯವನ್ನು ಗೆಲ್ಲುವ ಉತ್ತಮ ಅವಕಾಶವನ್ನು ಹೊಂದಿದ್ದೆವು ಎಂದು ಹೇಳಿದರು. ಲಕ್ನೋ ವಿರುದ್ಧ ಡೆಲ್ಲಿ ಗೆದ್ದರೂ ಕೂಡ ಪ್ಲೇ ಆಫ್​ ಗೇರಲು ಸಾಧ್ಯವಾಗಿಲ್ಲ. ಕಳೆದ ಆವೃತ್ತಿಗೆ ಹೋಲಿಸಿದರೆ ಈ ಬಾರಿ ಡೆಲ್ಲಿ(Delhi Capitals) ಪ್ರದರ್ಶನ ಉತ್ತಮವಾಗಿತ್ತು.

VISTARANEWS.COM


on

Rishabh Pant
Koo

ನವದೆಹಲಿ: ಮೂರನೇ ಬಾರಿಗೆ ನಿಧಾನಗತಿಯ ಓವರ್​ ಕಾಯ್ದುಕೊಂಡ ತಪ್ಪಿಗೆ ಒಂದು ಪಂದ್ಯದ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ರಿಷಭ್​ ಪಂತ್(Rishabh Pant)​ ಬಿಸಿಸಿಐ(BCCI) ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಆರ್​ಸಿಬಿ(RCB) ವಿರುದ್ಧ ನಾನು ಆಡುತ್ತಿದ್ದರೆ ಇಂದು ಪ್ಲೇ ಆಫ್​ ಟಿಕೆಟ್​ ಪಡೆಯುವ ಎಲ್ಲ ಸಾಧ್ಯತೆಯೂ ಇತ್ತು ಎಂದು ಹೇಳಿದ್ದಾರೆ.

ನಿನ್ನೆ(ಮಂಗಳವಾರ) ಲಕ್ನೋ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಪಂತ್​, ‘ಆರ್​ಸಿಬಿ ವಿರುದ್ಧ ನಾನು ಮೈದಾನದಲ್ಲಿದ್ದರೆ ನಿರ್ಣಾಯಕ ಪಂದ್ಯವನ್ನು ಗೆಲ್ಲುವ ಉತ್ತಮ ಅವಕಾಶವನ್ನು ಹೊಂದಿದ್ದೆವು ಎಂದು ಹೇಳಿದರು. ಲಕ್ನೋ ವಿರುದ್ಧ ಡೆಲ್ಲಿ ಗೆದ್ದರೂ ಕೂಡ ಪ್ಲೇ ಆಫ್​ ಗೇರಲು ಸಾಧ್ಯವಾಗಿಲ್ಲ. ಕಳೆದ ಆವೃತ್ತಿಗೆ ಹೋಲಿಸಿದರೆ ಈ ಬಾರಿ ಡೆಲ್ಲಿ(Delhi Capitals) ಪ್ರದರ್ಶನ ಉತ್ತಮವಾಗಿತ್ತು.

ಮೇ 07, 2024 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ತಂಡ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿತ್ತು. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್​​ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಡೆಲ್ಲಿ ತಂಡದ 3ನೇ ಅಪರಾಧವಾಗಿತ್ತು. ಹೀಗಾಗಿ ತಂಡದ ನಾಯಕ ಪಂತ್​ಗೆ 30 ಲಕ್ಷ ರೂ.ಗಳ ದಂಡ ಮತ್ತು ಒಂದು ಪಂದ್ಯದ ನಿಷೇಧ ಹೇರಲಾಗಿತ್ತು. ಜತೆಗೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ ಇಲೆವೆನ್ ನ ಉಳಿದ ಸದಸ್ಯರಿಗೆ ತಲಾ 12 ಲಕ್ಷ ರೂಪಾಯಿ ಅಥವಾ ಆಯಾ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಲಾಗಿತ್ತು.

ಇದನ್ನೂ ಓದಿ IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

ಲಕ್ನೋ ವಿರುದ್ಧ ಗೆಲುವು

ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಡೆಲ್ಲಿಯ ಪಿಚ್​ನಲ್ಲಿ ಲಕ್ನೊ ತಂಡಕ್ಕೆ ಇದು ದೊಡ್ಡ ಮೊತ್ತವಾಗಿರಲಿಲ್ಲ. ಆದರೆ, ಆ ತಂಡದ ಬ್ಯಾಟರ್​​ಗಳು ಗೆಲುವಿಗಾಗಿ ಹೆಚ್ಚಿನ ಉತ್ಸಾಹ ತೋರಲಿಲ್ಲ. ಇಶಾಂತ್ ಶರ್ಮಾ (34 ರನ್​ಗೆ 3 ವಿಕೆಟ್​​) ಮತ್ತು ಡೆಲ್ಲಿಯ ಬೌಲರ್​ಗಳ ಘಾತಕ ದಾಳಿಗೆ ಲಕ್ನೋ ಬ್ಯಾಟರ್​ಗಳು ಒಬ್ಬೊಬ್ಬರಾಗಿಯೇ ಪೆವಿಲಿಯನ್ ಹಾದಿ ಹಿಡಿದರು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್​​ ಪೂರನ್​ (27 ಎಸೆತಕ್ಕೆ 61 ರನ್​) ಹಾಗೂ ಅರ್ಶದ್​ ಖಾನ್​ (33 ಎಸೆತಕ್ಕೆ 58 ರನ್​) ಅವರ ಹೋರಾಟದಿಂದಾಗಿ ಗುರಿಯ ಸನಿಹಕ್ಕೆ ಬಂದು ಮರ್ಯಾದೆ ಉಳಿಸಿಕೊಂಡಿತು. ಕ್ವಿಂಟನ್ ಡಿ ಕಾಕ್​ (12), ಕೆ. ಎಲ್​ ರಾಹುಲ್​ (05), ಮಾರ್ಕಸ್​ ಸ್ಟೊಯಿನಿಸ್​​ (05), ದೀಪಕ್ ಹೂಡ (0) ಆಯುಷ್​ ಬದೋನಿ (06), ಅವರ ಅಸಮರ್ಥತೆ ತಂಡವನ್ನು ಸೋಲಿನ ಸುಳಿಗೆ ತಳ್ಳಿತು.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​139319 (+1.428)
ರಾಜಸ್ಥಾನ್​ ರಾಯಲ್ಸ್​​​128416 (+0.349)
ಚೆನ್ನೈ​​137614 (+0.528)
ಹೈದರಾಬಾದ್​127514 (+0.406)
ಡೆಲ್ಲಿ147714 (-0.377)
ಆರ್​ಸಿಬಿ136712 (+0.387)
ಲಕ್ನೋ136712 (-0.787)
ಗುಜರಾತ್​135711 (-1.063)
ಮುಂಬೈ13498 (-0.271)
ಪಂಜಾಬ್​​12488 (-0.423)
Continue Reading

ಕ್ರೀಡೆ

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

IPL 2024:ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್​(Lucknow Super Giants) ಸೋಲು ಕಂಡ ಪರಿಣಾಮ ರಾಜಸ್ಥಾನ್ ರಾಯಲ್ಸ್​(Rajasthan Royals) ಇನ್ನೆರಡು ಪಂದ್ಯಗಳು ಬಾಕಿ ಇರುವಂತೆಯೇ ಪ್ಲೇ ಆಫ್​ಗೆ ಅಧಿಕೃತ ಪ್ರವೇಶ ಪಡೆದಿದೆ. ಒಂದೊಮ್ಮೆ ಲಕ್ನೋ ಗೆಲುವು ಸಾಧಿಸುತ್ತಿದ್ದರೆ, ರಾಜಸ್ಥಾನ್​ ಇನ್ನೊಂದು ಗೆಲುವು ಸಾಧಿಸಬೇಕಿತ್ತು.

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​(IPL 2024) ಟೂರ್ನಿಯಲ್ಲಿ ಈಗಾಗಲೇ ಪಂಜಾಬ್​ ಕಿಂಗ್ಸ್​, ಮುಂಬೈ ಇಂಡಿಯನ್ಸ್​ ಮತ್ತು ಗುಜರಾತ್​ ಟೈಟಾನ್ಸ್​ ತಂಡಗಳು ಎಲಿಮಿನೇಟ್ ಆಗಿವೆ. ನಿನ್ನೆ (ಮಂಗಳವಾರ) ನಡೆದ ​ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್​(Lucknow Super Giants) ಸೋಲು ಕಂಡ ಪರಿಣಾಮ ರಾಜಸ್ಥಾನ್ ರಾಯಲ್ಸ್​(Rajasthan Royals) ಇನ್ನೆರಡು ಪಂದ್ಯಗಳು ಬಾಕಿ ಇರುವಂತೆಯೇ ಪ್ಲೇ ಆಫ್​ಗೆ ಅಧಿಕೃತ ಪ್ರವೇಶ ಪಡೆದಿದೆ. ಒಂದೊಮ್ಮೆ ಲಕ್ನೋ ಗೆಲುವು ಸಾಧಿಸುತ್ತಿದ್ದರೆ, ರಾಜಸ್ಥಾನ್​ ಇನ್ನೊಂದು ಗೆಲುವು ಸಾಧಿಸಬೇಕಿತ್ತು.

ರಾಜಸ್ಥಾನ್​ ಮತ್ತು ಕೆಕೆಆರ್​ ಪ್ಲೇ ಆಫ್​ ಟಿಕೆಟ್​ ಗಿಟ್ಟಿಸಿಕೊಂಡ ಕಾರಣ ಉಳಿದ 2 ಸ್ಥಾನಗಳಿಗೆ 5 ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಅಚ್ಚರಿ ಎಂದರೆ 7 ಪಂದ್ಯಗಳನ್ನು ಸೋತು ಕೊನೆಯ ಸ್ಥಾನಿಯಾಗಿದ್ದ ಆರ್​ಸಿಬಿ ಇನ್ನೇನು ಟೂರ್ನಿಯಿಂದ ಹೊರಬೀಳುತ್ತದೆ ಎನ್ನುವ ಸ್ಥಿತಿಯಿಂದ ಸತತ ಗೆಲುವಿನೊಂದಿಗೆ ಕಮ್​ಬ್ಯಾಕ್​ ಮಾಡಿ ಇದೀಗ 6ನೇ ಸ್ಥಾನಿಯಾಗಿದೆ. ಚೆನ್ನೈ ವಿರುದ್ಧ ಗೆದ್ದರೆ 4ನೇ ತಂಡವಾಗಿ ಪ್ಲೇ ಆಫ್ ಪ್ರವೇಶ ಪಡೆಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​139319 (+1.428)
ರಾಜಸ್ಥಾನ್​ ರಾಯಲ್ಸ್​​​128416 (+0.349)
ಚೆನ್ನೈ​​137614 (+0.528)
ಹೈದರಾಬಾದ್​127514 (+0.406)
ಡೆಲ್ಲಿ147714 (-0.377)
ಆರ್​ಸಿಬಿ136712 (+0.387)
ಲಕ್ನೋ136712 (-0.787)
ಗುಜರಾತ್​135711 (-1.063)
ಮುಂಬೈ13498 (-0.271)
ಪಂಜಾಬ್​​12488 (-0.423)

ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

ಡೆಲ್ಲಿಯ ಪಿಚ್​ನಲ್ಲಿ ಲಕ್ನೊ ತಂಡಕ್ಕೆ ಇದು ದೊಡ್ಡ ಮೊತ್ತವಾಗಿರಲಿಲ್ಲ. ಆದರೆ, ಆ ತಂಡದ ಬ್ಯಾಟರ್​​ಗಳು ಗೆಲುವಿಗಾಗಿ ಹೆಚ್ಚಿನ ಉತ್ಸಾಹ ತೋರಲಿಲ್ಲ. ಇಶಾಂತ್ ಶರ್ಮಾ (34 ರನ್​ಗೆ 3 ವಿಕೆಟ್​​) ಡೆಲ್ಲಿಯ ಬೌಲರ್​ಗಳ ಅಬ್ಬರಕ್ಕೆ ಒಬ್ಬೊಬ್ಬರಾಗಿಯೇ ಪೆವಿಲಿಯನ್ ಹಾದಿ ಹಿಡಿದರು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್​​ ಪೂರನ್​ (27 ಎಸೆತಕ್ಕೆ 61 ರನ್​) ಹಾಗೂ ಅರ್ಶದ್​ ಖಾನ್​ (33 ಎಸೆತಕ್ಕೆ 58 ರನ್​) ಅವರ ಹೋರಾಟದಿಂದಾಗಿ ಗುರಿಯ ಸನಿಹಕ್ಕೆ ಬಂದು ಮರ್ಯಾದೆ ಉಳಿಸಿಕೊಂಡಿತು. ಕ್ವಿಂಟನ್ ಡಿ ಕಾಕ್​ (12), ಕೆ. ಎಲ್​ ರಾಹುಲ್​ (05), ಮಾರ್ಕಸ್​ ಸ್ಟೊಯಿನಿಸ್​​ (05), ದೀಪಕ್ ಹೂಡ (0) ಆಯುಷ್​ ಬದೋನಿ (06), ಅವರ ಅಸಮರ್ಥತೆ ತಂಡವನ್ನು ಸೋಲಿನ ಸುಳಿಗೆ ತಳ್ಳಿತು.

Continue Reading

ಕ್ರಿಕೆಟ್

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

IPL 2024: ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ನವ ದೆಹಲಿ: ಸಂಘಟಿತ ಹೋರಾಟದ ಬಲದಿಂದ ಮಿಂಚಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ 17ನೇ (IPL 2024) ಅವೃತ್ತಿಯ ಐಪಿಎಲ್​ನ 64ನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ (Lucknow Super Giants) ವಿರುದ್ಧ 19 ರನ್​ಗಳ ಅಧೀಕಾರಯುತ ಗೆಲುವು ಸಾಧಿಸಿತು. ಇದು ಡೆಲ್ಲಿ ತಂಡಕ್ಕೆ ಹಾಲಿ ಆವೃತ್ತಿಯ ಲೀಗ್​ನ ಕೊನೇ ಪಂದ್ಯ. ಅದೇ ರೀತಿ ಐಪಿಎಲ್​​ನ ಕೊನೇ ಅಭಿಯಾನ ಕೂಡ. 14ರಲ್ಲಿ ಏಳು ಗೆಲುವು ಸಾಧಿಸಿರುವ ಡೆಲ್ಲಿ 14 ಅಂಕಗಳನ್ನು ಸಂಪಾದಿಸಿದೆ. ಆದರೆ, ಇನ್ನೂ ಐದನೇ ಸ್ಥಾನದಲ್ಲಿದೆ. ಈ ತಂಡ ನಾಲ್ಕರೊಳಗೆ ಪ್ರವೇಶ ಪಡೆಯುವ ಯಾವುದೇ ಸಾಧ್ಯತೆಗಳು ಇಲ್ಲದ ಕಾರಣ ಅವರ ಅಭಿಯಾನ ಕೊನೆಗೊಂಡಿದೆ. ಇದೇ ವೇಳೆ ಸತತ ಮೂರು ಸೋಲುಗಳಿಗೆ ಒಳಗಾದ ಲಕ್ನೊ ತಂಡ ನಿರಾಶಾದಾಯಕ ಅಭಿಯಾನ ಮುಂದುವರಿಸಿತು.

ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

ಡೆಲ್ಲಿಯ ಪಿಚ್​ನಲ್ಲಿ ಲಕ್ನೊ ತಂಡಕ್ಕೆ ಇದು ದೊಡ್ಡ ಮೊತ್ತವಾಗಿರಲಿಲ್ಲ. ಆದರೆ, ಆ ತಂಡದ ಬ್ಯಾಟರ್​​ಗಳು ಗೆಲುವಿಗಾಗಿ ಹೆಚ್ಚಿನ ಉತ್ಸಾಹ ತೋರಲಿಲ್ಲ. ಇಶಾಂತ್ ಶರ್ಮಾ (34 ರನ್​ಗೆ 3 ವಿಕೆಟ್​​) ಡೆಲ್ಲಿಯ ಬೌಲರ್​ಗಳ ಅಬ್ಬರಕ್ಕೆ ಒಬ್ಬೊಬ್ಬರಾಗಿಯೇ ಪೆವಿಲಿಯನ್ ಹಾದಿ ಹಿಡಿದರು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ನಿಕೋಸಲ್​ ಪೂರನ್​ (27 ಎಸೆತಕ್ಕೆ 61 ರನ್​) ಹಾಗೂ ಅರ್ಶದ್​ ಖಾನ್​ (33 ಎಸೆತಕ್ಕೆ 58 ರನ್​) ಅವರ ಹೋರಾಟದಿಂದಾಗಿ ಗುರಿಯ ಸನಿಹಕ್ಕೆ ಬಂದು ಮರ್ಯಾದೆ ಉಳಿಸಿಕೊಂಡಿತು. ಕ್ವಿಂಟನ್ ಡಿ ಕಾಕ್​ (12), ಕೆ. ಎಲ್​ ರಾಹುಲ್​ (05), ಮಾರ್ಕ್ ಸ್ಟೊಯ್ನಿಸ್​ (05), ದೀಪಕ್ ಹೂಡ (0) ಆಯುಷ್​ ಬದೋನಿ (06), ಅವರ ಅಸಮರ್ಥತೆ ತಂಡವನ್ನು ಸೋಲಿನ ಸುಳಿಗೆ ತಳ್ಳಿತು.

ಡೆಲ್ಲಿಯ ಭರ್ಜರಿ ಬ್ಯಾಟಿಂಗ್​

ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಫೇಸರ್ ಮೆಗ್​ ಕುರ್ಕ್ ಅವರ ಶೂನ್ಯ ಸಂಪಾದನೆ ಮೂಲಕ ಆಘಾತಕ್ಕೆ ಒಳಗಾಯಿತು. ಆದರೆ ಅಭಿಷೇಕ್ ಪೊರೆಲ್​ 58 ರನ್ ಬಾರಿಸಿ ತಂಡಕ್ಕೆ ನೆರವಾದರು. ಬಳಿಕ ಶಾಯ್​ ಹೋಪ್​ 38 ರನ್ ಬಾರಿಸಿದರೆ ರಿಷಭ್ ಪಂತ್​ 33 ರನ್ ಕೊಡುಗೆ ಕೊಟ್ಟರು. ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್​ 25 ಎಸೆತಕ್ಕೆ 57 ರನ್ ಬಾರಿಸಿ ದೊಡ್ಡ ಮೊತ್ತ ಪೇರಿಸಲು ನೆರವಾದರು. ಲಕ್ನೊ ಪರ ನವಿನ್ ಉಲ್ ಹಕ್ 5 ವಿಕೆಟ್​ ಪಡೆದರೂ 52 ರನ್ ಬಿಟ್ಟುಕೊಟ್ಟು ದುಬಾರಿ ಎನಿಸಿದರು.

Continue Reading
Advertisement
Google
ವಿದೇಶ12 mins ago

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Crazy MS Dhoni fan
ಕ್ರಿಕೆಟ್12 mins ago

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Money Guide
ಮನಿ-ಗೈಡ್13 mins ago

Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಬ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Prajwal Revanna Case Prajwal never boarded a flight from Germany
ಕ್ರೈಂ17 mins ago

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

B C Mylarappa
ಕರ್ನಾಟಕ19 mins ago

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Job Alert
ಉದ್ಯೋಗ20 mins ago

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

House of the Dragon season 2 new trailer hints at a bloody
ಸಿನಿಮಾ33 mins ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ34 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Seema Haider
ದೇಶ43 mins ago

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಾಚಾರಿಕೆಯೋ?

ICMR Dietary Guidelines
ಆರೋಗ್ಯ44 mins ago

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202424 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌