ind vs wi : ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ ತಂಡ - Vistara News

ಕ್ರಿಕೆಟ್

ind vs wi : ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ ತಂಡ

ಭಾರತ ತಂಡ ಗೆಲ್ಲುವು ಸಾಧಿಸುವ ಮೂಲಕ ಸರಣಿಯಲ್ಲಿ 1-2 ಅಂತರದ ಫಲಿತಾಂಶ ಮೂಡಿತು. ಇನ್ನೆರಡು ಪಂದ್ಯಗಳಲ್ಲಿ ಸರಣಿಯ ಭವಿಷ್ಯ ಹೇಳಲಿದೆ.

VISTARANEWS.COM


on

Suryakuamr Yadav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಯಾನ: ವೆಸ್ಟ್​ ಇಂಡೀಸ್ ಪ್ರವಾಸದಲ್ಲಿನ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ಸುಲಭ ಜಯ ದಾಖಲಿಸಿದೆ. ಐದು ಪಂದ್ಯಗಳ ಸರಣಿಯನ್ನು ಜೀವಂತವಾಗಿರಿಸಲು ಗೆಲ್ಲಲೇಬೇಕಾದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಳಗ ವಿಜಯ ಸಾಧಿಸಿತು. ಈ ಮೂಲಕ ಸರಣಿಯಲ್ಲಿ ಭಾರತ 1-2ರ ಅಂತರ ದಾಖಲಿಸಿಕೊಂಡಿತು. ಸೂರ್ಯಕುಮಾರ್ ಯಾದವ್​ 44 ಎಸೆತಗಳಲ್ಲಿ 83 ರನ್ ಬಾರಿಸುವ ಮೂಲಕ ಭಾರತ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು. ತಿಲಕ್​ ವರ್ಮಾ ಮತ್ತೊಂದು ಬಾರಿ ಮಿಂಚಿದರಲ್ಲದೆ 37 ಎಸೆತಗಳಲ್ಲಿ 49 ರನ್ ಬಾರಿಸಿ ಮಿಂಚಿದರು.

ಇಲ್ಲಿನ ಪ್ರಾವಿಡೆನ್ಸ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ವೆಸ್ಟ್​ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 159 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ತಂಡ ಇನ್ನೂ 13 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್​ ಕಳೆದಕೊಂಡು 164 ರನ್ ಬಾರಿಸಿತು.

ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಲು ಹೊರಟ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಇಶಾನ್ ಕಿಶನ್ ಬದಲಿಗೆ ಅವಕಾಶ ಪಡೆದು ಟಿ20 ಮಾದರಿಗೆ ಪದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್​ 1 ರನ್​ಗೆ ಔಟಾಗುವ ಮೂಲಕ ನಿರಾಸೆ ಎದುರಿಸಿದರು. ಶುಭ್​ಮನ್​ ಗಿಲ್ ಮತ್ತೆ ಬ್ಯಾಟಿಂಗ್ ವೈಫಲ್ಯ ಎದುರಿಸಿ 6 ರನ್​ಗೆ ಔಟಾದರು. ಅದಕ್ಕೂ ಅವರು 11 ಎಸೆತವನ್ನು ತೆಗೆದುಕೊಳ್ಳುವ ಮೂಲಕ ನಿರುತ್ಸಾಹ ಮೂಡಿಸಿದರು. ಈ ವೇಳೆ ಭಾರತ ತಂಡ 34 ರನ್​ಗಳಿಗೆ 2 ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು.

ಸೂರ್ಯಕುಮಾರ್​ ಸ್ಫೋಟಕ ಬ್ಯಾಟಿಂಗ್​

ಈ ವೇಳೆ ಜತೆಯಾದ ಸೂರ್ಯಕುಮಾರ್ ಯಾದವ್​ ಹಾಗೂ ತಿಲಕ್ ವರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ವೆಸ್ಟ್​ ಇಂಡೀಸ್ ಬೌಲರ್​ಗಳನ್ನು ಸತತವಾಗಿ ದಂಡಿಸಿದ ಈ ಆಟಗಾರರು ಭಾರತದ ಗೆಲುವಿಗೆ ಮುನ್ನುಡಿ ಬರೆದರು. ಸೂರ್ಯಕುಮಾರ್ ಅವರು ತಮ್ಮ ವಿರಾಟ್​ ದರ್ಶನ ಮಾಡಿದರಲ್ಲದೆ 10 ಫೋರ್ ಹಾಗೂ 4 ಸಿಕ್ಸರ್ ಸಮೇತ 83 ರನ್ ಬಾರಿಸಿದರು. ಕೊನೆಯಲ್ಲಿ ಸೂರ್ಯಕುಮಾರ್ ಔಟಾದ ಬಳಿಕವೂ ತಿಲಕ್​ ವರ್ಮಾ ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಿದರು. ಆದರೆ, ನಾಯಕ ಹಾರ್ದಿಕ್ ಪಾಂಡ್ಯ ವಿನ್ನಿಂಗ್ ಸಿಕ್ಸರ್​ ಬಾರಿಸಿದ ಕಾರಣ ಅವರಿಗೆ ಅರ್ಧ ಶತಕ ಬಾರಿಸಲು ಅವಕಾಶ ಸಿಗಲಿಲ್ಲ.

ಇದನ್ನೂ ಓದಿ : the 6ixty: ಹೊಸ ಮಾದರಿಯ ಕ್ರಿಕೆಟ್‌ ಲೀಗ್‌ ಜಾರಿಗೆ ತಂದ ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ

ವಿಂಡೀಸ್​ ಉತ್ತಮ ಆರಂಭ

ಅದಕ್ಕಿಂತ ಮೊದಲು ಬ್ಯಾಟ್​ ಮಾಡಿದ ವೆಸ್ಟ್​ ಇಂಡೀಸ್ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಮೊದಲ ವಿಕೆಟ್​ಗೆ 55 ರನ್ ಬಾರಿಸಿ ದೊಡ್ಡ ಮೊತ್ತ ಬಾರಿಸುವ ಸೂಚನೆ ನೀಡಿತು. ಆರಂಭಿಕ ಬ್ಯಾಟರ್​ ಬ್ರೆಂಡನ್ ಕಿಂಗ್​ 42 ರನ್ ಬಾರಿಸಿ ಮಿಂಚಿದರು. ಕೈಲ್​ ಮೇಯರ್ಸ್​ 25 ರನ್ ಬಾರಿಸಿದರೆ ಜೇಸನ್​ ಚಾರ್ಲ್ಸ್​​ 12 ರನ್​ ಬಾರಿಸಿದರು. ನಿಕೋಲಸ್ ಪೂರನ್ ಅಬ್ಬರಿಸುವ ಸೂಚನೆ ಕೊಟ್ಟರೂ ಸ್ಟಂಪ್​ ಔಟ್​ ಆಗಿ ನಿರ್ಗಮಿಸಿದರು. ನಾಯಕ ರೋವ್ಮನ್​ ಪೊವೆಲ್​ ಅಜೇಯ 40 ರನ್ ಬಾರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni: ಧೋನಿಗೆ ವಿಶೇಷ ಉಡುಗೊರೆ ನೀಡಿದ ಅಭಿಮಾನಿ; ವಿಡಿಯೊ ವೈರಲ್​

MS Dhoni: ಯಶ್​ ಎನ್ನುವ ಧೋನಿಯ ಅಪ್ಪಟ ಅಭಿಮಾನಿ ತಾನು ಬಿಡಿಸಿದ ಧೋನಿಯ ಚಿತ್ರವನ್ನು ಅವರಿಗೆ ಸ್ಮರಣಿಕೆಯಾಗಿ ನೀಡಿದ್ದಾನೆ. ಇದರ ವಿಡಿಯೊ ವೈರಲ್(Viral Video)​ ಆಗಿದೆ.

VISTARANEWS.COM


on

MS Dhoni
Koo

ಚೆನ್ನೈ: ಟೀಮ್​ ಇಂಡಿಯಾದ ಮಾಜಿ ಆಟಗಾರ ಮಹೇಂದ್ರ ಸಿಂಗ್​ ಧೋನಿ(MS Dhoni) ಯಾವಾಗಲೂ ತಮ್ಮ ವ್ಯಕ್ತಿತ್ವದಿಂದ ಅವರ ಅಭಿಮಾನಿಗಳ ಹೃದಯವನ್ನು ಗೆಲ್ಲುತ್ತಾರೆ. ಹೀಗಾಗಿ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು(MS Dhoni Fan) ಹೊಂದಿದ್ದಾರೆ. ಅವರ ಭೇಟಿಗಾಗಿ ಅಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಾರೆ. ಕೆಲ ಅಭಿಮಾನಿಗಳು ಧೋನಿಯನ್ನು ಭೇಟಿಯಾಗಿ ಅವರಿಗೆ ವಿಶೇಷ ಉಡುಗೊರೆಯನ್ನು ನೀಡುತ್ತಾರೆ. ಇದೀಗ ಚೆನ್ನೈಯಲ್ಲಿ ಧೋನಿಯ ಅಪ್ಪಟ ಅಭಿಮಾನಿಯೊಬ್ಬ ತಾನು ಬಿಡಿಸಿದ ಧೋನಿಯ ಚಿತ್ರವನ್ನು ಅವರಿಗೆ ಸ್ಮರಣಿಕೆಯಾಗಿ ನೀಡಿದ್ದಾನೆ. ಇದರ ವಿಡಿಯೊ ವೈರಲ್(Viral Video)​ ಆಗಿದೆ.

ಯಶ್​ ಎನ್ನುವ ಈ ಅಭಿಮಾನಿ ಧೋನಿ ಕೆಲ ವರ್ಷಗಳ ಹಿಂದೆ ಭಾರತ ತಂಡ ಪರ ಆಡುತ್ತಿದ್ದಾಗ ಮತ್ತು ಈಗ ಇರುವ ಅವರ ಸ್ಟ್ರೈಲ್​ನ 2 ಚಿತ್ರಗಳನ್ನು ಬಿಡಿಸಿ ಇದರಲ್ಲೊಂದು ಚಿತ್ರಕಲೆಯನ್ನು ಧೋನಿಗೆ ನೀಡಿದ್ದಾನೆ. ಇದರಲ್ಲಿ ಆತನ ಹಸ್ತಾಕ್ಷರ ಕೂಡ ಹಾಕಲಾಗಿದೆ. ಇನ್ನೊಂದು ಚಿತ್ರವನ್ನು ಧೋನಿಯಿಂದ ಆಟೋಗ್ರಾಫ್​ ಹಾಕಿಸಿ ತನ್ನ ಬಳಿಯೆ ಇರಿಸಿಕೊಂಡಿದ್ದಾನೆ.

ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ಕೆಳವು ವರ್ಷಗಳಾಗಿವೆ. ಕೇವಲ ಐಪಿಎಲ್​ ಟೂರ್ನಿಯಲ್ಲಿ(IPL 2024) ಮಾತ್ರ ಆಡುತ್ತಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ.

ಇದನ್ನೂ ಓದಿ MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

ಈ ಬಾರಿಯ ಐಪಿಎಲ್​ ಆರಂಭದ ವೇಳೆಯೂ ಅಭಿಮಾನಿಯೊಬ್ಬ ಧೋನಿಯನ್ನು ಭೇಟಿಯಾಗಿ ವಿಷ್ಣುವಿನ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದ್ದ. ಧೋನಿ ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ಐಪಿಎಲ್​ ಸಿದ್ಧತೆಯದ್ದ ವೇಳೆ ಅಭಿಮಾನಿಯೊಬ್ಬರು ಭೇಟಿ ಮಾಡಿ ಸಾಲು ಹೊದಿಸಿ ಸನ್ಮಾನಿಸಿದ್ದ. ಜತೆಗೆ ಶ್ರೀ ವಿಷ್ಣುವಿನ ಮೂರ್ತಿಯನ್ನು ನೀಡಿದ್ದ. ಇದನ್ನು ಧೋನಿ ಸಂತಸದಿಂದಲೇ ಸ್ವೀಕರಿಸಿದ್ದರು.

ಧೋನಿ ಸ್ನಾಯು(Dhoni Muscle Tear) ನೋವಿನಿಂದ ಬಳಲುತ್ತಿದ್ದರೂ ಕೂಡ ತಂಡಕ್ಕೆ ಹಿನ್ನಡೆಯಾಗಬಾರದೆಂದು ವೈದ್ಯರ ಸಲಹೆಯನ್ನು ಲೆಕ್ಕಿಸದೇ ಈ ಬಾರಿಯ ಐಪಿಎಲ್​ ಆಡುತ್ತಿದ್ದಾರೆ ಎಂದು ತಂಡದ ಮೂಲಗಳು ಮಾಹಿತಿ ನೀಡಿದೆ. “ಧೋನಿ ತನ್ನ ಗಾಯವನ್ನು ಮರೆಮಾಚಿ ಆಡುತ್ತಿದ್ದಾರೆ. ಈ ವಿಚಾರ ಯಾರಿಗೂ ತಿಳಿದಿಲ್ಲ. ಅವರನ್ನು ಟೀಕಿಸುವವರಿಗೆ ಅವರು ಈ ತಂಡಕ್ಕಾಗಿ ಮಾಡುತ್ತಿರುವ ತ್ಯಾಗದ ಬಗ್ಗೆ ತಿಳಿದಿಲ್ಲ ”ಎಂದು ಸಿಎಸ್‌ಕೆ ಮೂಲಗಳು ತಿಳಿಸಿತ್ತು.

Continue Reading

ಕ್ರಿಕೆಟ್

Virender Sehwag: ಏಕದಿನ ವಿಶ್ವಕಪ್​ ಸೋಲಿಗೆ ಕೊಹ್ಲಿ, ರಾಹುಲ್​ ನೇರ ಕಾರಣ ಎಂದ ಮಾಜಿ ಆಟಗಾರ

Virender Sehwag: ಸಂದರ್ಶನವೊಂದರಲ್ಲಿ ಮಾತನಾಡಿದ ಸೆಹವಾಗ್​, ಆಸ್ಟ್ರೇಲಿಯಾ ವಿರುದ್ಧ ಬ್ಯಾಟಿಂಗ್ ಮಾಡುವಾಗ 11ನೇ ಓವರ್ ಮತ್ತು 40ನೇ ಓವರ್ ನಡುವೆ ನಿರ್ಭೀತವಾಗಿ ಬ್ಯಾಟ್​ ಬೀಸದೇ ಇದದ್ದು ಭಾರತದ ಸೋಲಿಗೆ ಪ್ರಮುಖ ಕಾರಣ ಎಂದು ಸೆಹವಾಗ್​​ ಹೇಳಿದ್ದಾರೆ.

VISTARANEWS.COM


on

Virender Sehwag
Koo

ನವದೆಹಲಿ: ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ(ODI World Cup 2023 Loss) ಒಂದೇ ಒಂದು ಪಂದ್ಯ ಸೋಲದೆ ಫೈನಲ್​ ಪ್ರವೇಶಿಸಿದ್ದ ಟೀಮ್​ ಇಂಡಿಯಾ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಕಪ್​ ಗೆಲ್ಲುವಲ್ಲಿ ವಿಫಲವಾಗಿತ್ತು. ಈ ಸೋಲಿನ ಆಘಾತ ಈಗಲೂ ಕೂಡ ಭಾರತೀಯ ಕ್ರಿಕೆಟ್​ ಅಭಿಮಾನಿಗಳಲ್ಲಿ ಕಾಡುತ್ತಲೇ ಇದೆ. ಅಂದಿನ ಭಾರತದ ಸೋಲಿಗೆ ಕಾರಣ ಏನೆಂಬುದನ್ನು ಮಾಜಿ ಡ್ಯಾಶಿಂಗ್​ ಬ್ಯಾಟರ್​ ವೀರೇಂದ್ರ ಸೆಹವಾಗ್(Virender Sehwag) ವಿವರಿಸಿದ್ದಾರೆ.​

ಸಂದರ್ಶನವೊಂದರಲ್ಲಿ ಮಾತನಾಡಿದ ಸೆಹವಾಗ್​, ಆಸ್ಟ್ರೇಲಿಯಾ ವಿರುದ್ಧ ಬ್ಯಾಟಿಂಗ್ ಮಾಡುವಾಗ 11ನೇ ಓವರ್ ಮತ್ತು 40ನೇ ಓವರ್ ನಡುವೆ ನಿರ್ಭೀತವಾಗಿ ಬ್ಯಾಟ್​ ಬೀಸದೇ ಇದದ್ದು ಭಾರತದ ಸೋಲಿಗೆ ಪ್ರಮುಖ ಕಾರಣ ಎಂದು ಸೆಹವಾಗ್​​ ಹೇಳಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಕೆ.ಎಲ್. ರಾಹುಲ್ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದೇ ತಂಡದ ಹಿನ್ನಡೆಗೆ ಕಾರಣ ಎಂದು ಸೆಹವಾಗ್​ ಪರೋಕ್ಷವಾಗಿ ಟೀಕಿಸಿದ್ದಾರೆ. 2007 ಮತ್ತು 2011ರ ನಡುವೆ ನಾವು ಪ್ರತಿ ಪಂದ್ಯವನ್ನು ನಾಕೌಟ್ ಪಂದ್ಯವಾಗಿ ಆಡಿದೆವು. ಹೀಗಾಗಿಯೇ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದೆವು ಎಂದು ಹೇಳಿದರು. ಸೆಹವಾಗ್ ಹೇಳಿಕೆಯ ವಿಡಿಯೊ ಇದೀಗ ವೈರಲ್​ ಆಗಿದೆ.

ಫೈನಲ್​ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್​ 137 ರನ್​ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್​ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.

ಇದನ್ನೂ ಓದಿ World Cup 2023 : ದ್ರಾವಿಡ್​, ರೋಹಿತ್ ಮೇಲೆ ವಿಶ್ವ ಕಪ್​ ಫೈನಲ್ ಪಂದ್ಯದ ಪಿಚ್​ ತಿರುಚಿದ ಆರೋಪ!

ಟ್ರಾವಿಸ್​ ಹೆಡ್​​ ಅವರು ಫೈನಲ್​ ಪಂದ್ಯದಲ್ಲಿ ಭಾರತೀಯ ಬೌಲರ್​ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು 15 ಮನಮೋಹಕ ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 120 ಎಸೆತಗಳಲ್ಲಿ 137 ರನ್ ಬಾರಿಸಿ ಆಸೀಸ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2ನೇ ಬಾರಿಯೂ ವಿಫಲ

ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಟೀಮ್​ ಇಂಡಿಯಾದ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಏಕ ದಿನ ವಿಶ್ವ ಕಪ್​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್​ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್​ಗಳಿಂದ ಸೋಲು ಕಂಡಿತ್ತು.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

T20 World Cup 2024: ಟಿ20 ವಿಶ್ವಕಪ್​ ಟೂರ್ನಿ(T20 World Cup 2024)ಯಲ್ಲಿ ಪಾಲ್ಗೊಳ್ಳುವ 20 ದೇಶಗಳ ಪೈಕಿ ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ,ನಮೀಬಿಯಾ ಮತ್ತು ನೆದರ್ಲ್ಯಾಂಡ್ಸ್ ಇನ್ನಷ್ಟೇ ತಂಡ ಪ್ರಕಟಿಸಬೇಕಿದೆ. ಸಂಭಾವ್ಯ ತಂಡ ಪ್ರಕಟಕ್ಕೆ ಮೇ 1 ಅಂತಿಮ ದಿನವಾಗಿತ್ತಾದರೂ ಕೂಡ ಈ ದೇಶಗಳು ಇನ್ನೂ ತಂಡ ಪ್ರಕಟಿಸಲು ತಡವರಿಸಿದ್ದು ಯಾಕೆ ಎನ್ನುವುದು ಅಚ್ಚರಿಯ ಸಂಗತಿ.

VISTARANEWS.COM


on

T20 World Cup 2024
Koo

ದುಬೈ: ಮುಂಬರುವ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಐರ್ಲೆಂಡ್(Ireland T20 World Cup squad) ಮತ್ತು ಪಪುವಾ ನ್ಯೂಗಿನಿಯಾ(Papua New Guinea T20 World Cup squad) 15 ಸದಸ್ಯರ ಸಂಭಾವ್ಯ ತಂಡಗಳನ್ನು ಪ್ರಕಟಿಸಿದೆ. ಅನುಭವಿ ಆರಂಭಿಕ ಆಟಗಾರ ಪಾಲ್‌ ಸ್ಟರ್ಲಿಂಗ್ ಐರ್ಲೆಂಡ್ ತಂಡವನ್ನು ಮುನ್ನಡೆಸಿದರೆ, ಪಪುವಾ ನ್ಯೂಗಿನಿಯಾ ತಂಡವನ್ನು ಅಸ್ಸಾದ್ ವಾಲಾ ಮುನ್ನಡೆಸಲಿದ್ದಾರೆ. ಐರ್ಲೆಂಡ್ ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ‘ಎ’ ಗುಂಪಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಪ್ರಾರಂಭಿಸಲಿದೆ. ಭಾರತಕ್ಕೂ ಇದು ಮೊದಲ ಪಂದ್ಯವಾಗಿದೆ.

ಐರ್ಲೆಂಡ್ ತಂಡ

ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

ಇದನ್ನೂ ಓದಿ T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

ಪಪುವಾ ನ್ಯೂಗಿನಿಯಾ ತಂಡ


ಅಸ್ಸಾದ್ ವಾಲಾ(ನಾಯಕ),ಸಿಜೆ ಅಮಿನಿ(ಉಪನಾಯಕ),ಅಲೆಯ್ ನಾವೊ, ಚಾಡ್ ಸೋಪರ್, ಹಿಲಾ ವರೇ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೋರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ, ಟೋನಿ ಉರಾ.

ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ,ನಮೀಬಿಯಾ ಮತ್ತು ನೆದರ್ಲ್ಯಾಂಡ್ಸ್ ಇನ್ನಷ್ಟೇ ತಂಡ ಪ್ರಕಟಿಸಬೇಕಿರುವ ದೇಶಗಳು. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

ಮೊದಲ ಸುತ್ತಿನ ಇತರ ಪಂದ್ಯಗಳು

ದಿನಾಂಕಪಂದ್ಯಸ್ಥಳ
ಜೂನ್ 3ಶ್ರೀಲಂಕಾ-ದಕ್ಷಿಣ ಆಫ್ರಿಕಾನ್ಯೂಯಾರ್ಕ್
ಜೂನ್​ 7ನ್ಯೂಜಿಲ್ಯಾಂಡ್​-ಅಫಘಾನಿಸ್ತಾನಗಯಾನ
ಜೂನ್​ 7 ಶ್ರೀಲಂಕಾ-ಬಾಂಗ್ಲಾದೇಶಡಲ್ಲಾಸ್
ಜೂನ್​ 8ಆಸ್ಟ್ರೇಲಿಯಾ-ಇಂಗ್ಲೆಂಡ್ಬಾರ್ಬಡೋಸ್​
ಜೂನ್​ 10ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶನ್ಯೂಯಾರ್ಕ್
ಜೂನ್​ 12ವೆಸ್ಟ್​ ಇಂಡೀಸ್​-ನ್ಯೂಜಿಲ್ಯಾಂಡ್ನ್ಯೂಯಾರ್ಕ್
ಜೂನ್​ 15ಆಸ್ಟ್ರೇಲಿಯಾ-ಸ್ಕಾಟ್ಲೆಂಡ್ಸೇಂಟ್​ ಲೂಸಿಯಾ
ಜೂನ್​ 17ವೆಸ್ಟ್​ ಇಂಡೀಸ್​-ಅಫಘಾನಿಸ್ತಾನಸೇಂಟ್​ ಲೂಸಿಯಾ


ನಾಕೌಟ್​ ಪಂದ್ಯಗಳ ವೇಳಾಪಟ್ಟಿ

ದಿನಾಂಕಪಂದ್ಯಸ್ಥಳ
ಜೂನ್​ 26 ಮೊದಲ ಸೆಮಿಫೈನಲ್ಗಯಾನ
ಜೂನ್​ 27ದ್ವಿತೀಯ ಸೆಮಿಫೈನಲ್ಟ್ರಿನಿಡಾಡ್
ಜೂನ್​ 29ಫೈನಲ್ಬಾರ್ಬಡೋಸ್
Continue Reading

ಕ್ರೀಡೆ

Andre Russell: ಸ್ಟಾರ್​​ ನಟಿಯೊಂದಿಗೆ ಕೇಸರಿ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ಆಂಡ್ರೆ ರಸೆಲ್

Andre Russell: ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚಿದ್ದಾರೆ ಮತ್ತು ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಈ ಜೋಡಿಯ ಡ್ಯಾನ್ಸ್ ಕಂಡ ಅಭಿಮಾನಿಗಳು ಫಿದಾ ಆಗಿದ್ದಾರೆ.

VISTARANEWS.COM


on

Andre Russell
Koo

ಮುಂಬಯಿ: ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​, ಕೆಕೆಆರ್(KKR)​ ತಂಡದ ಆಂಡ್ರೆ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ್ದಾರೆ. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಇಂದು(ಮೇ 9 ಗುರುವಾರ) ಬಿಡುಗಡೆಯಾಗಿದ್ದು, ಎಲ್ಲಡೆ ಸಂಚಲನ ಮೂಡಿಸಿದೆ.

ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚಿದ್ದಾರೆ ಮತ್ತು ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಈ ಜೋಡಿಯ ಡ್ಯಾನ್ಸ್ ಕಂಡು ಅಭಿಮಾನಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ವಿಂಡೀಸ್​ ಆಟಗಾರರು ಕ್ರಿಕೆಟ್​ ಜತೆ ನಟನೆ, ಸಂಗೀತ, ಡ್ಯಾನ್ಸ್​ನಲ್ಲಿ ಅಪಾರ ಕ್ರೇಜ್​ ಹೊಂದಿರುತ್ತಾರೆ. ಈಗಾಗಲೇ ಯೂನಿವರ್ಸಲ್​ ಬಾಸ್ ಖ್ಯಾತಿಯ​ ಕ್ರಿಸ್ ಗೇಲ್ ಮತ್ತು ಡ್ವೇನ್ ಬ್ರಾವೋ ಹಲವು ಆಲ್ಬಮ್​ ಸಾಂಗ್​ ಮಾಡಿ ಖ್ಯಾತಿಗಳಿಸಿದ್ದಾರೆ. ಇದೀಗ ಈ ಸಾಲಿಗೆ ರಸೆಲ್​ ಕೂಡ ಸೇರಿದ್ದಾರೆ.


ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ಈ ಬಾರಿಯ ಐಪಿಎಲ್‌ನಲ್ಲಿ ರಸೆಲ್​ ಕೆಕೆಆರ್​ ಪರ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುವ ಮೂಲಕ ಗಮನಸೆಳೆಯುತ್ತಿದ್ದಾರೆ. 11 ಪಂದ್ಯಗಳಲ್ಲಿ 198 ರನ್ ಗಳಿಸಿರುವ ರಸೆಲ್, ಬೌಲಿಂಗ್‌ನಲ್ಲೂ ಮಿಂಚಿ 13 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸದ್ಯ ಕೆಕೆಆರ್​ 16 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನೊಂದು ಪಂದ್ಯ ಗೆದ್ದರೆ ಪ್ಲೇ ಆಫ್​ ಟಿಕೆಟ್​ ಅಧಿಕೃತಗೊಳ್ಳಲಿದೆ.

ಇದನ್ನೂ ಓದಿ PBKS vs RCB: ಮಳೆಯ ಕೈಯಲ್ಲಿದೆ ಆರ್​ಸಿಬಿ-ಪಂಜಾಬ್​ ಪ್ಲೇ ಆಫ್​ ಭವಿಷ್ಯ

ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ


ಬುಧವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ ವಿರುದ್ಧ 10 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಜತೆಗೆ ಅಂಕಪಟ್ಟಿಯಲ್ಲಿಯೂ(IPL 2024 Points Table) ಪ್ರಗತಿ ಸಾಧಿಸಿ ಮೂರನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಈ ಹಿಂದೆ ಮೂರನೇ ಸ್ಥಾನಿಯಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಸದ್ಯ ಚೆನ್ನೈ, ಲಕ್ನೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು 12 ಅಂಕಗಳಿಸಿವೆ. ಹೀಗಾಗಿ ಈ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಬಹುತೇಕ ಪ್ಲೇ ಆಫ್​ ಪ್ರವೇಶಿಸುವುದು ಖಚಿತ. ಹೈದರಾಬಾದ್​ಗೆ ಇನ್ನೊಂದು ಪಂದ್ಯ ಗೆದ್ದರೂ ಸಾಕು. ಇಂದು ನಡೆಯುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ಮುಖಾಮುಖಿಯಾಗಲಿವೆ. ಪ್ಲೇ ಆಫ್​ ಕ್ಷೀಣ ಅವಕಾಶ ಹೊಂದಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.

Continue Reading
Advertisement
Akshaya Tritiya Fashion
ಫ್ಯಾಷನ್26 mins ago

Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

SSLC Result 2024
ಶಿಕ್ಷಣ33 mins ago

SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

MS Dhoni
ಕ್ರೀಡೆ33 mins ago

MS Dhoni: ಧೋನಿಗೆ ವಿಶೇಷ ಉಡುಗೊರೆ ನೀಡಿದ ಅಭಿಮಾನಿ; ವಿಡಿಯೊ ವೈರಲ್​

Janhvi Kapoor Wears Cricket-Themed Dress
ಬಾಲಿವುಡ್40 mins ago

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Job Alert
ಉದ್ಯೋಗ1 hour ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Kannada Serials TRP Puttakkana makkalu TOP one
ಕಿರುತೆರೆ1 hour ago

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Self Harming Man commits suicide after falling from PG in Bengaluru
ಬೆಂಗಳೂರು1 hour ago

Self Harming: ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

Atrocity on women
ದೇಶ1 hour ago

Atrocity on women: ಟಿಎಂಸಿ ಮುಖಂಡರ ವಿರುದ್ಧ ಅತ್ಯಾಚಾರ ಕೇಸ್‌; ಯೂ ಟರ್ನ್‌ ಹೊಡೆದ ದೂರುದಾರೆ

Money Guide
ಮನಿ-ಗೈಡ್1 hour ago

Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Virender Sehwag
ಕ್ರಿಕೆಟ್2 hours ago

Virender Sehwag: ಏಕದಿನ ವಿಶ್ವಕಪ್​ ಸೋಲಿಗೆ ಕೊಹ್ಲಿ, ರಾಹುಲ್​ ನೇರ ಕಾರಣ ಎಂದ ಮಾಜಿ ಆಟಗಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ4 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ4 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ4 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌