Indian Cricket Team | ವರ್ಷಾಂತ್ಯದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಭಾರತ ಕ್ರಿಕೆಟ್​ ತಂಡ - Vistara News

ಕ್ರೀಡೆ

Indian Cricket Team | ವರ್ಷಾಂತ್ಯದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಭಾರತ ಕ್ರಿಕೆಟ್​ ತಂಡ

ಒಂದು ವರ್ಷದದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ದಾಖಲೆ ಟೀಮ್​ ಇಂಡಿಯಾದ (Indian Cricket Team) ಪಾಲಾಗಿದೆ.

VISTARANEWS.COM


on

team india
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : 2022ನೇ ವರ್ಷಾಂತ್ಯಕ್ಕೆ ಭಾರತ ಕ್ರಿಕೆಟ್​ ತಂಡ (Indian Cricket Team) ಕ್ರಿಕೆಟ್​ ಕ್ಷೇತ್ರದಲ್ಲಿ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. ಇದುವರೆಗೆ ಯಾವುದೇ ತಂಡದ ಮಾಡದ ಗೆಲುವಿನ ಸಾಧನೆ ಅದಾಗಿದ್ದು, ವಿಶ್ವದ ನಂಬರ್​ ಒನ್​ ತಂಡ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಸುಮಾರು ಏಳು ನಾಯಕರ ಮುಂದಾಳತ್ವದಲ್ಲಿ ಆಡಿರುವ ಭಾರತ ತಂಡ ಚರಿತ್ರೆ ಸೃಷ್ಟಿಸಿದೆ.

2022ರ ಅಂತ್ಯಕ್ಕೆ ಭಾರತ ತಂಡ ಎಲ್ಲ ಮಾದರಿಯ ಕ್ರಿಕೆಟ್​ ಸೇರಿ 46 ಪಂದ್ಯಗಳಲ್ಲಿ ಜಯ ಗಳಿಸಿದೆ. ರೋಹಿತ್​ ಶರ್ಮ ಕಾಯಂ ನಾಯಕತ್ವದ ಟೀಮ್ ಇಂಡಿಯಅ ವರ್ಷಾಂತ್ಯಕ್ಕೆ ಗರಿಷ್ಠ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ತನ್ನೆಸರಿಗೆ ಬರೆಸಿಕೊಂಡಿದೆ. ಇದರಲ್ಲಿ ತವರಿನ ಸರಣಿ, ವಿದೇಶಿ ಪ್ರವಾಸ, ಏಷ್ಯಾ ಕಪ್​ ಹಾಗೂ ಟಿ20 ವಿಶ್ವ ಕಪ್​ನ ಪಂದ್ಯಗಳು ಸೇರಿಕೊಂಡಿವೆ. ಒಟ್ಟಾರೆ ಭಾರತ ತಂಡ 71 ಪಂದ್ಯಗಳಲ್ಲಿ ಆಡಿದೆ.

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ ಎರಡನೇ ಸ್ಥಾನದಲ್ಲಿದೆ. 2003ರಲ್ಲಿ ಆಸ್ಟ್ರೇಲಿಯಾ ಬಳಗ ಒಟ್ಟು 38 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ರಿಕಿ ಪಾಂಟಿಂಗ್​ ನೇತೃತ್ವದಲ್ಲಿ ಆಸ್ಟ್ರೇಲಿಯಾ ತಂಡ ಈ ಸಾಧನೆ ಮಾಡಿತ್ತು. ಮೂರನೇ ಸ್ಥಾನವನ್ನು ಭಾರತವೇ ತನ್ನದಾಗಿಸಿಕೊಂಡಿದೆ. ವಿರಾಟ್​ ಕೊಹ್ಲಿಯ ನೇತೃತ್ವದಲ್ಲಿ ಆಡುತ್ತಿದ್ದ ಭಾರತ ಬಳಗ ಆ ವರ್ಷ 37 ಪಂದ್ಯಗಳಲ್ಲಿ ವಿಜಯ ಸಾಧಿಸಿತ್ತು.

ನಾಲ್ಕನೇ ಸ್ಥಾನ ಮತ್ತೆ ಆಸ್ಟ್ರೇಲಿಯಾಗೆ ಲಭಿಸಿದೆ. ಸ್ಟ್ರೀವ್​ ವಾ ಅವರ ನಾಯಕತ್ವದ ತಂಡ 35 ಪಂದ್ಯಗಳನ್ನು ಗೆದ್ದು ಸಾಧನೆ ಮಾಡಿದೆ. ಪಟ್ಟಿಯಲ್ಲಿ ಐದನೇ ಸ್ಥಾನ ಭಾರತಕ್ಕೆ ಲಭಿಸಿದೆ. ವಿರಾಟ್​ ಕೊಹ್ಲಿ ಮುಂದಾಳತ್ವದ ಭಾರತ ತಂಡ 2018ರಲ್ಲಿ 35 ಪಂದ್ಯಗಳಲ್ಲಿ ವಿಜಯ ಸಾಧಿಸಿತ್ತು. ಈ ರೀತಿಯಾಗಿ ಅಗ್ರ ಐದು ಸ್ಥಾನಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಲಾ 3 ಹಾಗೂ 2 ಸ್ಥಾನಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ | IND VS BAN | ಅಭ್ಯಾಸದ ವೇಳೆ ಕೆ.ಎಲ್​. ರಾಹುಲ್​ಗೆ ಗಾಯ; ಟೀಮ್ ಇಂಡಿಯಾದಲ್ಲಿ ಆತಂಕ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Haris Rauf: ʼದಿ ಹಂಡ್ರೆಡ್‌ʼ ಕ್ರಿಕೆಟ್‌ ಲೀಗ್‌ ಆಡುತ್ತಿದ್ದ ಪಾಕ್‌ ವೇಗಿ ರೌಫ್‌ಗೆ ಕೊಹ್ಲಿ ಬಾರಿಸಿದ ಸಿಕ್ಸರ್‌ ನೆನಪಿಸಿದ ಅಭಿಮಾನಿ; ವಿಡಿಯೊ ವೈರಲ್‌

Haris Rauf: ಅಂದು ನಡೆದಿದ್ದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರು ರೌಫ್‌ ಅವರು ಎಸೆದಿದ್ದ 19ನೇ ಓವರ್‌ನ ಕೊನೆಯ 2 ಎಸೆತಗಳನ್ನು ಅಸಾಮಾನ್ಯ ಬ್ಯಾಟಿಂಗ್‌ ಮೂಲಕ ಸತತವಾಗಿ ಸಿಕ್ಸರ್‌ಗೆ ಬಡಿದಿಟ್ಟಿದ್ದರು. ಇದು ಪಂದ್ಯಕ್ಕೆ ಮಹತ್ವದ ತಿರುವು ನೀಡಿತ್ತು.

VISTARANEWS.COM


on

Haris Rauf
Koo

ಲಂಡನ್‌: 2022ರಲ್ಲಿ ಆಸ್ಟ್ರೇಲಿಯಾದ ಮೆಲ್ಬರ್ನ್ ಮೈದಾನದಲ್ಲಿ ನಡೆದಿದ್ದ​ ಟಿ-20 ವಿಶ್ವಕಪ್‌(t20 world cup 2022) ಪಂದ್ಯದ ವೇಳೆ ಪಾಕಿಸ್ತಾನದ ವೇಗಿ ಹ್ಯಾರಿಸ್‌ ರೌಫ್‌(Haris Rauf) ಬೌಲಿಂಗ್‌ಗೆ ವಿರಾಟ್‌ ಕೊಹ್ಲಿ(Virat Kohli) ಲೀಲಾಜಾಲವಾಗಿ ಸಿಕ್ಸರ್‌ ಬಾರಿಸಿದ್ದನ್ನು ಯಾವ ಭಾರತೀಯನೂ ಮರೆತಿರಲಿಕ್ಕಿಲ್ಲ. ಕೊಹ್ಲಿ ಈ ಓವರ್​ನಲ್ಲಿ ಬಾರಿಸಿದ ಸಿಕ್ಸರ್​ನಿಂದಾಗಿ ಅಂದು ಭಾರತ(t20 world cup 2022 ind vs pak) ಪಂದ್ಯವನ್ನು ಗೆದ್ದು ಬೀಗಿತ್ತು. ಇದೀಗ ದಿ ಹಂಟ್ರೆಡ್​ ಕ್ರಿಕೆಟ್​ ಟೂರ್ನಿಯನ್ನಾಡುತ್ತಿದ್ದ ರೌಫ್​ ಅವರನ್ನು ಭಾರತೀಯ ಅಭಿಮಾನಿಯೊಬ್ಬ ಕೆಣಕ್ಕಿದ ವಿಡಿಯೊ ವೈರಲ್(viral video)​ ಆಗಿದೆ.

ಲಂಡನ್ ಸ್ಪಿರೀಟ್‌ ವಿರುದ್ಧದ ಪಂದ್ಯದಲ್ಲಿ ಹ್ಯಾರಿಸ್‌ ರೌಫ್‌ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್‌ ಮಾಡುತ್ತಿದ್ದಋು. ಈ ವೇಳೆ ಪ್ರೇಕ್ಷಕರ ಸ್ಟ್ಯಾಂಡ್‌ನಲ್ಲಿದ್ದ ಅಭಿಮಾನಿಯೊಬ್ಬ ಹಿಂದಿಯಲ್ಲಿ ರೌಫ್‌ ಭಾಯ್…ರೌಫ್‌ ಭಾಯ್ ಎಂದು ಕರೆದು ನೆನೆಪಿದೆಯಾ ಅಂದು ಮೆಲ್ಬರ್ನ್ ಮೈದಾನದಲ್ಲಿ ನಿಮ್ಮ ಓವರ್‌ನಲ್ಲಿ ವಿರಾಟ್‌ ಕೊಹ್ಲಿ ಸಿಕ್ಸರ್‌ ಬಾರಿಸಿದ್ದು ಎಂದು ಹೇಳುವ ಮೂಲಕ ಕೀಚಾಯಿಸಿದ್ದಾರೆ. ಈ ವೇಳೆ ರೌಫ್‌ ತಲೆಯಾಡಿಸುತ್ತಾ ಹಾ ನೆನಪಿದೆ ಎನ್ನುವಂತೆ ಸನ್ನೆ ಮಾಡಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

ಅಂದು ನಡೆದಿದ್ದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರು ರೌಫ್‌ ಅವರು ಎಸೆದಿದ್ದ 19ನೇ ಓವರ್‌ನ ಕೊನೆಯ 2 ಎಸೆತಗಳನ್ನು ಅಸಾಮಾನ್ಯ ಬ್ಯಾಟಿಂಗ್‌ ಮೂಲಕ ಸತತವಾಗಿ ಸಿಕ್ಸರ್‌ಗೆ ಬಡಿದಿಟ್ಟಿದ್ದರು. ಇದು ಪಂದ್ಯಕ್ಕೆ ಮಹತ್ವದ ತಿರುವು ನೀಡಿತ್ತು. ಕೊಹ್ಲಿ ಈ 2 ಸಿಕ್ಸರ್‌ ಬಾರಿಸದೇ ಹೋಗಿದ್ದರೆ ಪಾಕಿಸ್ತಾನ ಪಂದ್ಯವನ್ನು ಗೆಲ್ಲುತ್ತಿತ್ತು. ರೌಫ್‌ ಈ ಓವರ್‌ನಲ್ಲಿ 15 ರನ್‌ ಬಿಟ್ಟುಕೊಟ್ಟಿದ್ದರು. ಈ ಪಂದ್ಯದಲ್ಲಿ ಕೊಹ್ಲಿ ಅಜೇಯ 82 ರನ್‌ ಬಾರಿಸಿ ಭಾರತದ ಗೆಲುವಿನ ಹೀರೊ ಎನಿಸಿಕೊಂಡಿದ್ದರು.

ಇದನ್ನೂ ಓದಿ ಮ್ಯಾಚ್‌ ಫಿಕ್ಸಿಂಗ್‌ ಕಳಂಕಿತ ಅಂಪೈರ್‌ ಅಸದ್‌ ರೌಫ್‌ ಇನ್ನಿಲ್ಲ

ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ರೌಫ್​


ಈ ಬಾರಿಯ ಟ್ವಿ20 ವಿಶ್ವಕಪ್‌ ಟೂನಿಯ ವೇಳೆ ಹ್ಯಾರಿಸ್ ರೌಫ್ ಅಭಿಮಾನಿಯೊಬ್ಬರ ಮೇಲೆ ಹಲ್ಲೆಗೆ ಯತ್ನಿಸಿ ಭಾರೀ ಟೀಕೆಗೆ ಒಳಗಾಗಿದ್ದರು. ಫ್ಲೋರಿಡಾದಲ್ಲಿ ರೌಫ್​ ಅವರು ಪತ್ನಿ ಜತೆ ತಾವು ತಂಗಿದ್ದ ಹೋಟೆಲ್​ಗೆ ಹೋಗುತ್ತಿದ್ದಾಗ ವೇಳೆ ಅಭಿಮಾನಿಯೊಬ್ಬ ನಿಮ್ಮ ಜತೆಗೊಂದು ಫೋಟೊ ಬೇಕಿತ್ತು ಎಂದು ಕೇಳಿದ್ದ. ಈ ವೇಳೆ ರೌಫ್​, ನೀನು ಭಾರತೀಯನಾಗಿರಬೇಕು ಎಂದು ಹೇಳಿದ್ದರು. ಇದಕ್ಕೆ ಸಿಟ್ಟಿನಿಂದ ಉತ್ತರಿಸಿದ ಅಭಿಮಾನಿ ನಾನು ಕೂಡ ಪಾಕಿಸ್ತಾನ ಮೂಲದವನೇ ಎಂದು ಹೇಳಿ ಬಳಿಕ ಏನೋ ಕೆಟ್ಟ ಪದಗಳಿಂದ ನಿಂದಿಸಿದ್ದರು. ಇದು ರೌಫ್​ ಅವರ ಪಿತ್ತ ನೆತ್ತಿಗೇರುವಂತೆ ಮಾಡಿತ್ತು. ಏಕಾಏಕಿ ಓಡಿ ಬಂದು ಈತನ ಮೇಲೆ ರೌಫ್ ಹಲ್ಲೆಗೆ ಯತ್ನಿಸಿದ್ದರು. ಈ ವಿಡಿಯೊ ಭಾರೀ ವೈರಲ್‌ ಆಗಿತ್ತು.

ಪತ್ನಿ ರೌಫ್​ ಅವರನ್ನು ಹಿಡಿದು ನಿಲ್ಲಿಸುವ ಪ್ರಯತ್ನ ಪಟ್ಟರೂ ಕೂಡ ರೌಫ್​ ತಪ್ಪಿಸಿಕೊಂಡು ಹಲ್ಲೆಗೆ ಮುಂದಾದರು. ತಕ್ಷಣ ರೌಫ್​ ಅವರ ಮ್ಯಾನೇಜರ್​ ಹಾಗು ಕೆಲ ಸಿಬ್ಬಂದಿಗಳು ಅವರನ್ನು ತಡೆದು ನಿಲ್ಲಿಸಿದ್ದಾರೆ. ಪತ್ನಿ ಕೂಡ ಅವರ ಕೈಗಳನ್ನು ಹಿಡಿದು ಹಲ್ಲೆ ಮಾಡದಂತೆ ಮನವಿ ಮಾಡುತ್ತಲೇ ಅವರನ್ನು ಸಮಾಧಾನ ಪಡಿಸಿದ್ದರು. ಈ ಎಲ್ಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿತ್ತು.

 

Continue Reading

ಪ್ರಮುಖ ಸುದ್ದಿ

IND vs SL ODI : ಲಂಕಾ ವಿರುದ್ಧ ಪಂದ್ಯದ ವೇಳೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೈದಾನಕ್ಕೆ ಇಳಿದ ರೋಹಿತ್​ ಪಡೆ

IND vs SL ODI: ಅನ್ಶುಮಾನ್ ಗಾಯಕ್ವಾಡ್ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 2 ಶತಕ ಸಮೇತ 2254 ರನ್ ಗಳಿಸಿದ್ದಾರೆ. 1983 ರಲ್ಲಿ ಜಲಂಧರ್​ನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 201 ಗರಿಷ್ಠ ಸ್ಕೋರ್ ಗಳಿಸಿದ್ದಾರೆ. ಅವರು ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಅವರಂತಹ ಹಿರಿಯ ರಾಷ್ಟ್ರೀಯ ಪುರುಷರ ತಂಡಕ್ಕೆ ತರಬೇತುದಾರರಾಗಿದ್ದರು.

VISTARANEWS.COM


on

IND vs SL ODI
Koo

ಬೆಂಗಳೂರು: ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನದ ಹಿನ್ನೆಲೆಯಲ್ಲಿ ಕೊಲಂಬೊದಲ್ಲಿ ನಡೆದ ಶ್ರೀಲಂಕಾ (IND vs SL ODI) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ತೋಳಿನಲ್ಲಿ ಕಪ್ಪು ಪಟ್ಟಿ ಧರಿಸಿದ್ದರು. ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಜುಲೈ 31 ರಂದು ತಮ್ಮ 71 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು. ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ (ಆಗಸ್ಟ್ 2) ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಪ್ಪು ಪಟ್ಟಿ ಧರಿಸಿ ಆಡಿದರು.

“ಬುಧವಾರ ನಿಧನರಾದ ಭಾರತದ ಮಾಜಿ ಕ್ರಿಕೆಟಿಗ ಮತ್ತು ತರಬೇತುದಾರ ಅಂಶುಮಾನ್ ಗಾಯಕ್ವಾಡ್ ಅವರ ಸ್ಮರಣಾರ್ಥ ಟೀಮ್ ಇಂಡಿಯಾ ಇಂದು ಕಪ್ಪು ತೋಳುಗಳನ್ನು ಧರಿಸಿದೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಅನ್ಶುಮಾನ್ ಗಾಯಕ್ವಾಡ್ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 2 ಶತಕ ಸಮೇತ 2254 ರನ್ ಗಳಿಸಿದ್ದಾರೆ. 1983 ರಲ್ಲಿ ಜಲಂಧರ್​ನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 201 ಗರಿಷ್ಠ ಸ್ಕೋರ್ ಗಳಿಸಿದ್ದಾರೆ. ಅವರು ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಅವರಂತಹ ಹಿರಿಯ ರಾಷ್ಟ್ರೀಯ ಪುರುಷರ ತಂಡಕ್ಕೆ ತರಬೇತುದಾರರಾಗಿದ್ದರು. ಮಾಜಿ ಕ್ರಿಕೆಟಿಗ ಅನ್ಶುಮಾನ್ ತಮ್ಮ ಕೊನೆಯ ದಿನಗಳನ್ನು ಆಸ್ಪತ್ರೆಯಲ್ಲಿ ಕಳೆದಾಗ ಅವರ ಚಿಕಿತ್ಸೆಗೆ ಬಿಸಿಸಿಐ 1 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಿಸಿತ್ತು.

ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ ತಂಡ

ಶುಕ್ರವಾರ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಕೊಲಂಬೊದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಜತೆಗೂಡಿ ಗೆಲುವಿಗಾಗಿ ಯತ್ನಿಸಲಿದೆ. ಆರಂಭದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಆಡುವುದಿಲ್ಲ ಎಂದು ಹೇಳಲಾಗಿತ್ತು. ಅಂತಿಮವಾಗಿ ಭಾರತ ತಂಡಕ್ಕೆ ಅವರು ಸೇರಿಕೊಂಡಿದ್ದರು. ಭಾರತ ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ತನ್ನ ಸಿದ್ಧತೆ ಪ್ರಾರಂಭಿಸಿದೆ.

ಇದನ್ನೂ ಓದಿ: Swapnil Kusale : ಒಲಿಂಪಿಕ್ಸ್ ಪದಕ ಹೀರೋ ಸ್ವಪ್ನಿಲ್​ಗೆ ರೈಲ್ವೆಯ ಟಿಕೆಟ್ ಕಲೆಕ್ಟರ್​ ಹುದ್ದೆಯಿಂದ ಡಬಲ್​ ಪ್ರಮೋಷನ್​!

ಏಕದಿನ ಸರಣಿಯ ಭಾಗವಾಗದ ಹಾರ್ದಿಕ್ ಪಾಂಡ್ಯ ತಂಡದಲ್ಲಿ ಇಲ್ಲ. ಇದೇ ವೇಲೆ ರಿಷಭ್ ಪಂತ್ ಅವರನ್ನು ಕೈಬಿಟ್ಟು ಕೆಎಲ್ ರಾಹುಲ್ ಅವರನ್ನು ಭಾರತ ತನ್ನ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತವು ಶ್ರೀಲಂಕಾವನ್ನು ಟಿ 20 ಐ ಸರಣಿಯಲ್ಲಿ 3-0 ಅಂತರದಿಂದ ಸೋಲಿಸಿದ ನಂತರ ಏಕದಿನ ಸರಣಿಗೆ ಬಂದಿದೆ.

Continue Reading

ಕ್ರೀಡೆ

Swapnil Kusale : ಒಲಿಂಪಿಕ್ಸ್ ಪದಕ ಹೀರೋ ಸ್ವಪ್ನಿಲ್​ಗೆ ರೈಲ್ವೆಯ ಟಿಕೆಟ್ ಕಲೆಕ್ಟರ್​ ಹುದ್ದೆಯಿಂದ ಡಬಲ್​ ಪ್ರಮೋಷನ್​!

Swapnil Kusale : ಕುಸಾಲೆ 2015 ರಿಂದ ಕೇಂದ್ರ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಬಳಿಯ ಕಂಬಳ್ವಾಡಿ ಗ್ರಾಮದ 28 ವರ್ಷದ ಕುಸಾಸೆ 2012 ರಿಂದ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಆದರೆ ಪ್ಯಾರಿಸ್ ಕ್ರೀಡಾಕೂಟದಲ್ಲಿ ಒಲಿಂಪಿಕ್ಸ್​ನಲ್ಲಿ ಪಾದಾರ್ಪಣೆ ಮಾಡಲು ಅವರು ಇನ್ನೂ 12 ವರ್ಷ ಕಾಯಬೇಕಾಯಿತು. ಗುರುವಾರ ಅವರು ಗೆದ್ದ ನಂತರ ಡಬಲ್ ಬಡ್ತಿ ಸಿಕ್ಕಿದೆ ಎಂದು ಈಗ ದೃಢಪಡಿಸಲಾಗಿದೆ.

VISTARANEWS.COM


on

wapnil Kusale
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಐತಿಹಾಸಿಕ ಕಂಚಿನ ಪದಕ ಗೆದ್ದಿರುವ ಭಾರತದ ಶೂಟರ್​​ ಸ್ವಪ್ನಿಲ್ ಕುಸಾಲೆ (Swapnil Kusale ) ಅವರಿಗೆ ತಾವು ಕೆಲಸ ಮಾಡುತ್ತಿರುವ ರೈಲ್ವೆ ಇಲಾಖೆಯಲ್ಲಿ ಡಬಲ್ ಪ್ರಮೋಷನ್ ಸಿಕ್ಕಿದೆ. ಅವರು ಟಿಕೆಟ್ ಕಲೆಕ್ಟರ್​ (ಟಿಟಿಇ) ಹುದ್ದೆಯಿಂದ ಮುಂಬೈನ ಕ್ರೀಡಾ ಸೆಲ್​​ನ ವಿಶೇಷ ಕರ್ತವ್ಯ ಅಧಿಕಾರಿ (ಒಎಸ್​ಡಿ) ಆಗಿ ಬಡ್ತಿ ಪಡೆದುಕೊಂಡಿದ್ದಾರೆ. ಕುಸಾಲೆ 50 ಮೀಟರ್ ರೈಫಲ್ 3 ಪೊಸಿಷನ್ಸ್ ಸ್ಪರ್ಧೆಯಲ್ಲಿ ಐತಿಹಾಸಿಕ ಪದಕ ಗೆದ್ದು ಭಾರತಕ್ಕೆ ಮೂರನೇ ಪದಕ ಗೆದ್ದುಕೊಟ್ಟರು. ಇದು ಶೂಟಿಂಗ್​ನಲ್ಲಿ ಭಾರತಕ್ಕೆ ದೊರೆತ ಮೂರನೇ ಪದಕವಾಗಿದೆ.

ಕುಸಾಲೆ 2015 ರಿಂದ ಕೇಂದ್ರ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಬಳಿಯ ಕಂಬಳ್ವಾಡಿ ಗ್ರಾಮದ 28 ವರ್ಷದ ಕುಸಾಸೆ 2012 ರಿಂದ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಆದರೆ ಪ್ಯಾರಿಸ್ ಕ್ರೀಡಾಕೂಟದಲ್ಲಿ ಒಲಿಂಪಿಕ್ಸ್​ನಲ್ಲಿ ಪಾದಾರ್ಪಣೆ ಮಾಡಲು ಅವರು ಇನ್ನೂ 12 ವರ್ಷ ಕಾಯಬೇಕಾಯಿತು. ಗುರುವಾರ ಅವರು ಗೆದ್ದ ನಂತರ ಡಬಲ್ ಬಡ್ತಿ ಸಿಕ್ಕಿದೆ ಎಂದು ಈಗ ದೃಢಪಡಿಸಲಾಗಿದೆ.

1 ಕೋಟಿ ಬಹುಮಾನ ಪ್ರಕಟಿಸಿದ ಶಿಂಧೆ ಸರ್ಕಾರ

ಮುಂಬಯಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics 2024) ಗುರುವಾರ ನಡೆದಿದ್ದ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಶೂಟಿಂಗ್​ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್​ ಕುಸಾಲೆ(Swapnil Kusale) ಅವರ ಈ ಸಾಧನೆಯನ್ನು ಪರಿಗಣಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ(Eknath Shinde) 1 ಕೋಟಿ ಬಹುಮಾನ ಪ್ರಕಟಿಸಿದ್ದಾರೆ. ಕೊಲ್ಹಾಪುರ ಜಿಲ್ಲೆಯ ಕಂಬಲ ವಾಡಿಯವರಾದ ಸ್ವಪ್ನಿಲ್​, 2009ರಲ್ಲಿ ಮಹಾರಾಷ್ಟ್ರದ ಕ್ರೀಡಾ ಪ್ರಭೋದಿನಿ ಯೋಜನೆಯಡಿ ಕ್ರೀಡಾ ತರಬೇತಿಗೆ ಆಯ್ಕೆಯಾಗಿದ್ದರು.

ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಹಾಗೂ 3ನೇ ರೈಫಲ್​ ಶೂಟರ್​ ಎಂಬ ಇತಿಹಾಸ ಬರೆದಿದ್ದಾರೆ. ಗುರುವಾರ ನಡೆದ ಫೈನಲ್​ ಸ್ಪರ್ಧೆಯಲ್ಲಿ ಅವರು ಒಟ್ಟು 451.4 ಅಂಕ ಗಳಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಸ್ವಪ್ನಿಲ್​ ಕುಸಾಲೆಗೆ ಮಹರಾಷ್ಟ್ರ ಸರ್ಕಾರದ ಬಹುಮಾನ ಮೊತ್ತದ ಹೊರತಾಗಿಯೂ ಕೇಂದ್ರ ಸರ್ಕಾರದಿಂದ 30 ಲಕ್ಷ ರೂ. ಮತ್ತು ಭಾರತೀಯ ಒಲಿಂಪಿಕ್ಸ್​ ಸಂಸ್ಥೆಯಿಂದ 50 ಲಕ್ಷ ರೂ. ಬಹುಮಾನ ಸಿಗಲಿದೆ.

ಇದನ್ನೂ ಓದಿ: Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

ನೀತಾ ಅಂಬಾನಿ ಮೆಚ್ಚುಗೆ

ಒಲಿಂಪಿಕ್ಸ್​ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮತ್ತು ರಾಜ್ಯಕ್ಕೆ ಕೀರ್ತಿ ತಂದ ಸ್ವಪ್ನಿಲ್​ ಕುಸಾಲೆಗೆ ರಿಲಯನ್ಸ್ ಫೌಂಡೇಶನ್ (Reliance Foundation) ಸಂಸ್ಥಾಪಕಿ ಹಾಗೂ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ(IOC) ಸದಸ್ಯೆಯಾಗಿರುವ ನೀತಾ ಅಂಬಾನಿ(Nita Ambani) ಅಭಿನಂದನೆ ಸಲ್ಲಿಸಿದ್ದಾರೆ. “ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಸ್ವಪ್ನಿಲ್ ಕುಸಾಲೆಗೆ ನನ್ನ ಅಭಿನಂದನೆಗಳು. ನಿಮ್ಮ ಈ ಸಾಧನೆಯಿಂದ ದೇಶವೇ ಹೆಮ್ಮೆಪಡುವಂತಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಪ್ರತೀಕ ಈ ಗೆಲುವು. ಮುಂದೆಯೂ ಕೂಡ ದೇಶಕ್ಕಾಗಿ ಹಲವು ಪದಕ ಗೆಲ್ಲುವಂತಾಲಿ” ಎಂದು ನೀತಾ ಅಂಬಾನಿ ಹಾರೈಸಿದ್ದಾರೆ.

Continue Reading

ಕ್ರೀಡೆ

Paris Olympics: ಆರ್ಚರಿ ಪ್ರೀ ಕ್ವಾರ್ಟರ್‌ನಲ್ಲಿ ನಾಳೆ ಭಾರತದ ದೀಪಿಕಾ ಕುಮಾರಿ-ಭಜನ್ ಕೌರ್ ಕಣಕ್ಕೆ

Paris Olympics: ಭಾರತದ ಸ್ಟಾರ್‌ ಬಿಲ್ಗಾರ್ತಿಯರಾದ ದೀಪಿಕಾ ಕುಮಾರಿ(Deepika Kumari) ಮತ್ತು 18 ವರ್ಷದ ಭಜನ್ ಕೌರ್(bhajan kaur) ನಾಳೆ ನಡೆಯುವ ಮಹಿಳಾ ಸಿಂಗಲ್ಸ್​ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಪದಕದ ಆಸೆ ಜೀವಂತವಿರಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

Paris Olympics
Koo

ಬೆಂಗಳೂರು: ಈ ಬಾರಿಯ ಒಲಿಂಪಿಕ್ಸ್​ನಲ್ಲಿ(Paris Olympics) ಪದಕ ಗೆಲ್ಲುವ ಭರವಸೆ ಮೂಡಿಸಿರುವ ಭಾರತದ ಸ್ಟಾರ್‌ ಬಿಲ್ಗಾರ್ತಿಯರಾದ ದೀಪಿಕಾ ಕುಮಾರಿ(Deepika Kumari) ಮತ್ತು 18 ವರ್ಷದ ಭಜನ್ ಕೌರ್(bhajan kaur) ನಾಳೆ ನಡೆಯುವ ಮಹಿಳಾ ಸಿಂಗಲ್ಸ್​ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಪದಕದ ಆಸೆ ಜೀವಂತವಿರಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ದೀಪಿಕಾ ಕುಮಾರಿ ಜರ್ಮನಿಯ 13 ಶ್ರೇಯಾಂಕದ ಮೈಕಲ್‌ ಕ್ರೋಪೆನ್‌ ಸವಾಲು ಎದುರಿಸಿದರೆ,  ಭಜನ್ ಕೌರ್ ಇಂಡೋನೇಷ್ಯಾದ ಡಯಾನಂದ ಚೋರುನಿಸಾ ವಿರುದ್ಧ ಸೆಣಸಾಡಲಿದ್ದಾರೆ.

ಬುಧವಾರ ನಡೆದಿದ್ದ ಎಲಿಮಿನೇಷನ್‌ ಸುತ್ತಿನ ಮೊದಲ ಪಂದ್ಯದಲ್ಲಿ ದೀಪಿಕಾ ಅವರು ಎಸ್ಟೋನಿಯಾದ ರೀನಾ ಪರ್ನಾಟ್‌ ವಿರುದ್ಧ 6-5(29-28, 26-27, 27-27, 24-27, 30-27) ಅಂತರದಿಂದ ಗೆಲುವು ಸಾಧಿಸಿ ದ್ವಿತೀಯ ಸುತ್ತಿಗೆ ಪ್ರವೇಶ ಪಡೆದಿದ್ದರು. ಈ ಸುತ್ತಿನಲ್ಲಿ ನೆದರ್ಲ್ಯಾಂಡ್ಸ್​ನ ಕ್ವಿಂಟಿ ರೋಫೆನ್ ಅವರನ್ನು 6-2 ಅಂತರದಿಂದ ಹಿಮ್ಮೆಟ್ಟಿಸಿ ಪ್ರೀ ಕ್ವಾರ್ಟರ್​ಗೆ ಪ್ರವೇಶ ಪಡೆದಿದ್ದರು.

ಇದನ್ನೂ ಓದಿ Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ದೀಪಿಕಾ ಕುಮಾರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೊರಿಯಾದ ಆಟಗಾರ್ತಿಯ ವಿರುದ್ಧ ದೀಪಿಕಾ ಸೋಲನುಭವಿಸಿ ನಿರಾಸೆ ಎದುರಿಸಿದ್ದರು. 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ ಮೊದಲ ಸುತ್ತಿನಲ್ಲಿ, ರಿಯೋ ಒಲಿಂಪಿಕ್ಸ್​ನಲ್ಲಿ ಪ್ರಿ ಕ್ವಾರ್ಟರ್ ಫೈನಲ್​ನಲ್ಲಿ ಮುಗ್ಗರಿಸಿದ್ದರು. ಆದರೆ, ಈ ಬಾರಿ ಪದಕ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದಾರೆ.

ಭಜನ್ ಕೌರ್ ಅವರು ಮಂಗಳವಾರ ನಡೆದಿದ್ದ ರೀಕರ್ವ್ ವೈಯಕ್ತಿಕ ವಿಭಾಗದದಲ್ಲಿ 18 ವರ್ಷದ ಭಜನ್ ಕೌರ್ ಮೊದಲ ಸುತ್ತಿನಲ್ಲಿ ಇಂಡೋನೇಷ್ಯಾದ ಕಮಲ್ ಸೈಫಾ ವಿರುದ್ದ 7-3 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿ, ಆ ಬಳಿಕ ನಡೆದ 2ನೇ ಸುತ್ತಿನಲ್ಲಿ ಪೋಲೆಂಡ್‌ನ ಮೈಜೊರ್ ರನ್ನು 6-0ರಲ್ಲಿ ಮಣಿಸಿ ಪ್ರಿ ಕ್ವಾರ್ಟರ್‌ಗೆ ಲಗ್ಗೆಯಿಟ್ಟಿದ್ದರು.

ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ


ಉತ್ತಮ ಫಾರ್ಮ್ ನಲ್ಲಿರುವ ಧೀರಜ್‌ ಬೊಮ್ಮದೇವರ(Dhiraj Bommadevara) ಮತ್ತು ಅಂಕಿತಾ ಭಕತ್‌(Ankita Bhakat) ಅವರು ಪ್ಯಾರಿಸ್‌ ಒಲಿಂಪಿಕ್ಸ್‌ನ(Paris Olympics) ಆರ್ಚರಿ ಕ್ರೀಡೆಯ ಮಿಶ್ರ ತಂಡದ 16ನೇ ಸುತ್ತಿನ ಪಂದ್ಯದಲ್ಲಿ ಇಂಡೋನೇಷ್ಯಾವನ್ನು 5-1 (37-36, 38-38, 38-37) ಅಂತದಿಂದ ಮಣಿಸಿ ಕ್ವಾರ್ಟರ್​​ ಫೈನಲ್ ಪ್ರವೇಶಿಸಿದೆ. ಈ ಮೂಲಕ ಆರ್ಚರಿಯಲ್ಲಿ ಒಲಿಂಪಿಕ್‌ ಪದಕ ಗೆಲ್ಲುವ ವಿಶ್ವಾಸ ಮೂಡಿಸಿದೆ.

ಚೊಚ್ಚಲ ಒಲಿಂಪಿಕ್ಸ್‌ನಲ್ಲಿ ಭಾಗವಹಿ ಸುತ್ತಿರುವ ಧೀರಜ್‌ ಮತ್ತು ಅಂಕಿತಾ ಅವರ ಅಮೋಘ ನಿರ್ವಹಣೆಯಿಂದ ಭಾರತ ಕ್ವಾರ್ಟರ್‌ಫೈನಲಿಗೆ ಪ್ರವೇಶಿಸಿದೆ. 26ರ ಹರೆಯದ ಅಂಕಿತಾ ಅಮೋಘ ಪ್ರದಶನ ತೋರುವ ಮೂಲಕ ಹಲವು ಬಾರಿ 10 ಅಂಕ್ಕೆ ಗುರಿ ಇರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕ್ವಾರ್ಟರ್‌ ಫೈನಲ್‌ ಪಂದ್ಯ ಇಂದು ಸಂಜೆ 5.40ಕ್ಕೆ ನಡೆಯಲಿದೆ.

Continue Reading
Advertisement
Mangaluru Train Timings
Latest13 mins ago

Mangaluru Train Timings: ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲು; ಪ್ರಯಾಣಿಕರಿಗೆ ಏನು ಲಾಭ?

BSNL 5G Service
ಪ್ರಮುಖ ಸುದ್ದಿ21 mins ago

BSNL 5G Service : ಬಿಎಸ್​ಎನ್​​ಎಲ್​ 5ಜಿ ಸಿಮ್​ಕಾರ್ಡ್​ಗಳು ವಿತರಣೆಗೆ ರೆಡಿ​; ಬೆಂಗಳೂರಿನಲ್ಲಿಯೂ ಲಭ್ಯವೇ?

karnataka Rain
ಮಳೆ24 mins ago

Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

Haris Rauf
ಕ್ರೀಡೆ25 mins ago

Haris Rauf: ʼದಿ ಹಂಡ್ರೆಡ್‌ʼ ಕ್ರಿಕೆಟ್‌ ಲೀಗ್‌ ಆಡುತ್ತಿದ್ದ ಪಾಕ್‌ ವೇಗಿ ರೌಫ್‌ಗೆ ಕೊಹ್ಲಿ ಬಾರಿಸಿದ ಸಿಕ್ಸರ್‌ ನೆನಪಿಸಿದ ಅಭಿಮಾನಿ; ವಿಡಿಯೊ ವೈರಲ್‌

Wayanad Tragedy
Latest27 mins ago

Wayanad Tragedy: ತಬ್ಬಲಿ ಶಿಶುಗಳಿಗೆ ಎದೆಹಾಲು ನೀಡಿ ಪೋಷಿಸಿದ ʼಮಹಾತಾಯಿʼಗೆ ವ್ಯಾಪಕ ಪ್ರಶಂಸೆ

Western Ghats
ಕರ್ನಾಟಕ48 mins ago

Western Ghats: ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ‌, ರೆಸಾರ್ಟ್ ತೆರವಿಗೆ ಸರ್ಕಾರ ಸೂಚನೆ

Parliament Session
ರಾಜಕೀಯ51 mins ago

Parliament Session: ಪೈರಸಿಯಿಂದ ಚಿತ್ರೋದ್ಯಮಕ್ಕೆ 20,000 ಕೋಟಿ ರೂ. ನಷ್ಟ; ಸಂಸತ್‌ನಲ್ಲಿ ಕಳವಳ

Rajeev Chandrasekhar
ದೇಶ56 mins ago

Rajeev Chandrasekhar: 10 ವರ್ಷಗಳಲ್ಲಿ 80 ಕೋಟಿ ಮಂದಿ ಬಡತನದಿಂದ ಹೊರಗೆ; ವಿಶ್ವಸಂಸ್ಥೆಯಲ್ಲೇ ಮೋದಿ ಆಡಳಿತಕ್ಕೆ ಪ್ರಶಂಸೆ

Teacher Transfer Counselling
ಬೆಂಗಳೂರು1 hour ago

Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

Kapati Kannada movie Teaser released
ಕರ್ನಾಟಕ1 hour ago

Kannada New Movie: ಟೀಸರ್‌ನಲ್ಲೇ ಮೋಡಿ ಮಾಡಿದ ಕನ್ನಡ ಚಿತ್ರ ʼಕಪಟಿʼ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌