Aimchess Rapid Tournament | ವಿಶ್ವ ನಂಬರ್‌ ಒನ್‌ ಆಟಗಾರನಿಗೆ ಸೋಲುಣಿಸಿದ ಭಾರತದ ಚೆಸ್‌ ಪಟು - Vistara News

ಕ್ರೀಡೆ

Aimchess Rapid Tournament | ವಿಶ್ವ ನಂಬರ್‌ ಒನ್‌ ಆಟಗಾರನಿಗೆ ಸೋಲುಣಿಸಿದ ಭಾರತದ ಚೆಸ್‌ ಪಟು

ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಅರ್ಜುನ್‌ ಎರಿಗೈಸಿ ಅವರು ಆನ್‌ಲೈನ್ ಚೆಸ್‌ ಟೂರ್ನಮಂಟ್‌ ಒಂದರಲ್ಲಿ ವಿಶ್ವದ ನಂಬರ್ ಒನ್‌ ಆಟಗಾರ ಮ್ಯಾಗ್ನಸ್‌ ಕಾರ್ಲ್‌ಸೆನ್‌ ಅವರನ್ನು ಮಣಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ವಿಶ್ವದ ನಂಬರ್‌ ಒನ್ ಚೆಸ್‌ ಪಟು ಮ್ಯಾಗ್ನೆಸ್‌ ಕಾರ್ಲ್‌ಸೆನ್‌ ಅವರನ್ನು ಭಾರತದ ಚೆಸ್‌ ಗ್ರಾಂಡ್‌ ಮಾಸ್ಟರ್‌ ಅರ್ಜುನ್‌ ಎರಿಗೈಸಿ ಸೋಲುಣಿಸಿದ್ದಾರೆ. ಏಮ್‌ಚೆಸ್‌ ರಾಪಿಡ್‌ ಅನ್‌ಲೈನ್‌ ಚೆಸ್‌ ಟೂರ್ನಮೆಂಟ್‌ನ ಏಳನೇ ಸುತ್ತಿನಲ್ಲಿ ಅವರು ನಾರ್ವೆಯ ಆಟಗಾರನನ್ನು ಮಣಿಸಿದ್ದಾರೆ. ಈ ಮೂಲಕ ಅವರು ವಿಶ್ವದ ನಂಬರ್‌ ಒನ್‌ ಆಟಗಾರನನ್ನು ಸೋಲಿಸಿದ ಭಾರತದ ಎರಡನೇ ಆಟಗಾರ ಎನಿಸಿಕೊಂಡರು. ಈ ಹಿಂದೆ ತಮಿಳುನಾಡಿನ ಪ್ರಜ್ಞಾನಂದ ಅವರು ನಾರ್ವೆಯ ಆಟಗಾರನನ್ನು ಸೋಲಿಸಿದ್ದರು.

೧೯ ವರ್ಷದ ಈ ಗ್ರ್ಯಾಂಡ್ ಮಾಸ್ಟರ್‌ ಎರಿಗೈಸಿ ಹಿಂದಿನ ಸುತ್ತಿನಲ್ಲಿ ಭಾರತದವರೇ ಆದ ವಿದಿತ್ ಸಂತೋಷ್‌ ಗುಜರಾತಿ ವಿರುದ್ಧ ಸೋತಿದ್ದರು. ಇದೀಗ ಎಂಟು ಸುತ್ತಿನ ಹಣಾಹಣಿಗಳ ಬಳಿಕ ಅವರು ಐದನೇ ಸ್ಥಾನದಲ್ಲಿದ್ದಾರೆ. ಅರ್ಜುನ್‌ ಅವರು ಉಜ್ಬೇಕಿಸ್ತಾನದ ನೊದಿರ್ಬೆಕ್‌, ಅಜೆರ್‌ಬೈಜಾನ್‌ನ ಶಕ್ರಿಯಾರ್‌ ಮಮೆಡೊಯಾರೊವ್‌ ವಿರುದ್ಧವೂ ಜಯ ಸಾಧಿಸಿದರು.

ಅರ್ಜುನ್‌ ಅವರು ಕಳೆದ ತಿಂಗಳು ನಡೆದಿದ್ದ ಜೂಲಿಯಸ್‌ ಬೆರ್‌ ಜನರೇಷನ್‌ ಕಪ್‌ ಆನ್‌ಲೈನ್‌ ಚೆಸ್ ಟೂರ್ನಮೆಂಟ್‌ನಲ್ಲಿ ಮ್ಯಾಗ್ನಸ್‌ ಕಾರ್ಲ್‌ಸೆನ್ ವಿರುದ್ಧ ಸೋಲು ಕಂಡಿದ್ದರು.

ಇದನ್ನೂ ಓದಿ | ರಜನಿಕಾಂತ್‌ ಭೇಟಿಯಾದ Grandmaster ಪ್ರಜ್ಞಾನಂದ; ರಾಘವೇಂದ್ರ ಸ್ವಾಮಿ ಫಟೊ ಗಿಫ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

Team India :

VISTARANEWS.COM


on

Team India
Koo

ಬೆಂಗಳೂರು: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನ ಭಾರತದ ಮಹಿಳೆಯರ ತಂಡ ದಾಖಲೆ ಬರೆದಿದೆ. ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್​ಗೆ 525 ರನ್ ಬಾರಿಸುವ ಮೂಲಕ ಈ ಸಾಧನೆ ಮಾಡಿದೆ. ಇದು ಟೆಸ್ಟ್​ ಪಂದ್ಯವೊಂದರಲ್ಲಿ ಮಹಿಳೆಯರ ತಂಡ ದಿನವೊಂದರಲ್ಲಿ ಬಾರಿಸಿದ ಗರಿಷ್ಠ ಸ್ಕೋರ್ ಆಗಿದೆ.

ಪಂದ್ಯದಲ್ಲಿ ಟಾಸ್​ ಗೆದ್ದ ನಾಯಕಿ ಹರ್ಮನ್ ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು . ಮೊದಲ ದಿನ ಭಾರತವು 98 ಓವರ್ ಆಡಿ ಬೃಹತ್ ಮೊತ್ತ ಪೇರಿಸಿತು. ಈ ಮೂಲಕ ನಾಯಕಿಯ ನಿರ್ಧಾರವು ಸಂಪೂರ್ಣವಾಗಿ ಸಮರ್ಥನೀಯವಾಗಿತ್ತು. ಯುವ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ದ್ವಿಶತಕ ಬಾರಿಸಿದರೆ, ಸ್ಮೃತಿ ಮಂಧಾನಾ ಶತಕ ಬಾರಿಸಿದರು.

ಬಲಗೈ ಬ್ಯಾಟರ್​ ಶಫಾಲಿ ಮಹಿಳೆಯರ ಟೆಸ್ಟ್​​ನಲ್ಲಿ ವೇಗವಾಗಿ ದ್ವಿಶತಕ ದಾಖಲಿಸಿದ ಸಾಧನೆಯೂ ಮಾಡಿದ್ದಾರೆ. ಅವರು ಕೇವಲ 198 ಎಸೆತಗಳಲ್ಲಿ ತಮ್ಮ ಮೊದಲ ಟೆಸ್ಟ್ ದ್ವಿಶತಕವನ್ನು ಗಳಿಸಿದರು. ಈ ವರ್ಷದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ಸ್ 248 ಎಸೆತಗಳಲ್ಲಿ ದ್ವಿಶತಕ ಬಾರಿಸಿ ಇದುವರೆಗೆ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದ್ದರು.

ಮಿಥಾಲಿ ರಾಜ್ ನಂತರ ಮಹಿಳಾ ಟೆಸ್ಟ್​ನಲ್ಲಿ ದ್ವಿಶತಕ ಬಾರಿಸಿದ ಎರಡನೇ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ವರ್ಮಾ 197 ಎಸೆತಗಳಲ್ಲಿ 23 ಬೌಂಡರಿ ಮತ್ತು 8 ಸಿಕ್ಸರ್ ಗಳ ಸಹಾಯದಿಂದ 205 ರನ್ ಗಳಿಸಿದ್ದಾರೆ. ವರ್ಮಾ ಅವರಲ್ಲದೆ, ಅವರ ಆರಂಭಿಕ ಪಾಲುದಾರೆ ಸ್ಮೃತಿ ಮಂದಾನ ಕೂಡ ಅದ್ಭುತ ಪ್ರದರ್ಶನ ನೀಡಿದ್ದಾರೆ . 52ನೇ ಓವರ್​​ನಲ್ಲಿ ಡೆಲ್ಮಿ ಟಕರ್ ಅವರನ್ನು ಔಟ್ ಮಾಡುವ ಮೊದಲು 149 ರನ್ ಗಳಿಸಿದ್ದರು. ಔಟಾಗುವ ಮೊದಲು, ಮಂದಾನಾ ಮೊದಲ ವಿಕೆಟ್​ಗೆ ವರ್ಮಾ ಅವರೊಂದಿಗೆ ರನ್​ಗಳ ದಾಖಲೆಯ ಜೊತೆಯಾಟ ಹಂಚಿಕೊಂಡಿದ್ದರು.. ಜೆಮಿಮಾ ರೋಡ್ರಿಗಸ್ ಕೂಡ ಅರ್ಧಶತಕ ಗಳಿಸಿ 55 ರನ್ ಗಳಿಸಿದ ನಂತರ ನಿರ್ಗಮಿಸಿದರು. ಕೌರ್ 42 ಮತ್ತು ರಿಚಾ ಘೋಷ್ 43 ರನ್ ಗಳಿಸಿ ಎರಡನೇ ದಿನಕ್ಕೆ ಆಟ ಕಾಯ್ದುಕೊಂಡಿದ್ದಾರೆ.

ಭಾರತಕ್ಕೆ ದಾಖಲೆಯ ದಿನ

ಅದ್ಭುತ ಬ್ಯಾಟಿಂಗ್ ಪ್ರದರ್ಶನವು ಭಾರತಕ್ಕೆ ಹಲವಾರು ಸ್ಮರಣೀಯ ದಾಖಲೆಗಳನ್ನು ಮುರಿಯಲು ಸಹಾಯ ಮಾಡಿತು. ಪುರುಷರ ಮತ್ತು ಮಹಿಳಾ ಕ್ರಿಕೆಟ್ನಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡದ ದಾಖಲೆ ಅವರು ಮುರಿದಿದ್ದಾರೆ. 2002ರಲ್ಲಿ ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 509 ರನ್ ಗಳಿಸಿತ್ತು.

ಇದನ್ನೂ ಓದಿ: GR vishwanath : ಬೆಂಗಳೂರು ನಗರ ವಿವಿಯಿಂದ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್​ಗೆ ಗೌರವ ಡಾಕ್ಟರೇಟ್

ಮಹಿಳಾ ಕ್ರಿಕೆಟ್​ನಲ್ಲಿ ಒಂದು ದಿನದಲ್ಲಿ 500 ರನ್ ಗಡಿ ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೂ ಭಾರತ ಪಾತ್ರವಾಗಿದೆ. 1935ರಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ 431 ರನ್ ಗಳಿಸಿದ್ದು ಮಹಿಳಾ ಕ್ರಿಕೆಟ್​​ನಲ್ಲಿ ತಂಡವೊಂದರ ಗರಿಷ್ಠ ಒಂದು ದಿನ ಸ್ಕೋರ್ ಆಗಿದೆ. ಈ ವರ್ಷ ಭಾರತ ಒಂದೇ ದಿನದಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿರುವುದು ಇದು ಎರಡನೇ ಬಾರಿ. ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ 7 ವಿಕೆಟ್ ನಷ್ಟಕ್ಕೆ 410 ರನ್ ಗಳಿಸಿತ್ತು.

ಮಹಿಳಾ ಟೆಸ್ಟ್ ನಲ್ಲಿ ಒಂದು ದಿನದ ಆಟದಲ್ಲಿ ಅತಿ ಹೆಚ್ಚು ರನ್ ಗಳು

  • 525 ರನ್​ : ಭಾರತ ಮಹಿಳಾ (98 ಓವರ್​ಗಳಲ್ಲಿ 525/4) ದಕ್ಷಿಣ ಆಫ್ರಿಕಾ, ವಿರುದ್ಧ 2024 – ಚೆನ್ನೈ
  • 475 ರನ್​: ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ, 1935 – ಕ್ರೈಸ್ಟ್ಚರ್ಚ್
  • 449 ರನ್​ : ಇಂಗ್ಲೆಂಡ್ ಮಹಿಳಾ (245-9), ಆಸ್ಟ್ರೇಲಿಯಾ ವಿರುದ್ಧ, 2022 – ಕ್ಯಾನ್ಬೆರಾ
  • 410 ರನ್​: ಭಾರತ ತಂಡ, ಇಂಗ್ಲೆಂಡ್ ವಿರುದ್ಧ , 2023 – ನವೀ ಮುಂಬೈ
Continue Reading

ಪ್ರಮುಖ ಸುದ್ದಿ

GR vishwanath : ಬೆಂಗಳೂರು ನಗರ ವಿವಿಯಿಂದ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್​ಗೆ ಗೌರವ ಡಾಕ್ಟರೇಟ್

GR vishwanath : ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ವಾರ್ಷಿಕ ಘಟಿಕೋತ್ಸವ ಜೂನ್ 29 ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ.

VISTARANEWS.COM


on

GR Vishwnath
Koo

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ಘಟಿಕೋತ್ಸವದಲ್ಲಿ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ ರಿಗೆ (GR vishwanath) ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದು ಕುಲಪತಿ ಲಿಂಗರಾಜ ಗಾಂಧಿ ತಿಳಿಸಿದರು. ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಂಭಾಂಗಣದ ಬೋರ್ಡ್ ರೂಮ್ ನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ಘಟಿಕೋತ್ಸವ ಜೂನ್ 29 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಇಬ್ಬರಿಗೆ ನೀಡಲಾಗುತ್ತಿದೆ. ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಸಾಧನೆ ಮಾಡಿರುವ ಗೋಕುಲ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಜಯರಾಮ್ ಒಬ್ಬರಾದರೆ ಮತ್ತೊಬ್ಬರು ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಜಿ.ಆರ್. ವಿಶ್ವನಾಥ್ ಆಗಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ವಾರ್ಷಿಕ ಘಟಿಕೋತ್ಸವ ಜೂನ್ 29 ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿ ಡಾ. ಎಂ. ಸಿ. ಸುಧಾಕರ್ ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್​ ಎಜುಕೇಶನ್ ಅಧ್ಯಕ್ಷ ಪ್ರೊ. ಟಿ. ಜಿ. ಸೀತಾರಾಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಯುನಿಫೈಡ್ ಯೂನಿವರ್ಸಿಟಿ ಕಾಲೇಜು ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶದ ಪ್ರಕಾರ ಸ್ನಾತಕ ಹಾಗೂ ಸ್ಟಾಂಡ್ ಅಲೋನ್ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಹಾಗೂ ಪರೀಕ್ಷಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ವಹಿಸಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡುತ್ತಿರುವ ರಾಜ್ಯ ಪ್ರಥಮ ವಿಶ್ವವಿದ್ಯಾನಿಲಯ ನಮ್ಮದಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

63 ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಈ ಘಟಿಕೋತ್ಸವದಲ್ಲಿ ಒಟ್ಟು 63 ವಿದ್ಯಾರ್ಥಿಗಳು ಪ್ರಥಮ ರಾಂಕ್ ಪ್ರಮಾಣ ಪತ್ರಗಳನ್ನು, ಚಿನ್ನದ ಪದಕ ಮತ್ತು ನಗದು ಬಹುಮಾನವನ್ನು ಸ್ವೀಕರಿಸಲಿದ್ದಾರೆ. ಈ ರ್ಯಾಂಕ್​ ವಿಜೇತರಲ್ಲಿ 40 ವಿದ್ಯಾರ್ಥಿಗಳು ಬೆಂಗಳೂರು ನಗರ ವಿಶ್ವವಿದ್ಯಾನಿಲಯದಿಂದ ಸ್ಥಾಪಿತ ಚಿನ್ನದ ಪದಕ ಮತ್ತು ನಗದು ಬಹುಮಾನಗಳನ್ನು ಸ್ವೀಕರಿಸಲಿದ್ದಾರೆ. ವಿವಿಧ ದಾನಿಗಳು ಸ್ಥಾಪಿಸಿರುವ ಒಟ್ಟು 15 ಚಿನ್ನದ ಪದಕಗಳನ್ನು ಸಹ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಸ್ವೀಕರಿಸಲಿದ್ದಾರೆ. ಬಿ.ಎ. ಮ್ಯೂಸಿಕ್, ಟೂರಿಸಂ ಮ್ಯಾನೇಜ್ಮೆಂಟ್ ವಿಭಾಗಗಳಲ್ಲಿ ಅರ್ಹ ವಿದ್ಯಾರ್ಥಿಗಳು ಇಲ್ಲದ ಕಾರಣ ಈ ವರ್ಷ ಎರಡು ಚಿನ್ನದ ಪದಕ ವಿತರಿಸಲಾಗುತ್ತಿಲ್ಲ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಸ್ಥಾಪಿಸಿದ 35 ಚಿನ್ನದ ಪದಕ ಮತ್ತು ನಗದು ಬಹುಮಾನಗಳನ್ನು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಬಿ.ಎ., ಬಿ.ಎಸ್ಸಿ, ಬಿ.ಕಾಂ., ಬಿ.ಬಿ.ಎ. ಬಿ.ಇಡಿ., ಕೋರ್ಸುಗಳಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ನೀಡಲಾಗುವುದು ಎಂದು ಲಿಂಗರಾಜ ಗಾಂಧಿ ಹೇಳಿದರು.

Continue Reading

ಕ್ರೀಡೆ

IND vs SA: ಗೆದ್ದು ಬಾ ಭಾರತ; ನಾಳೆ ಟಿ20 ವಿಶ್ವಕಪ್​ ಫೈನಲ್​

IND vs SA: ಪಂತ್​ ಪ್ರಯೋಗಾತ್ಮಕ ಶೈಲಿಯ ಬ್ಯಾಟಿಂಗ್​ ನಡೆಸುವ ಬದಲು ತಮ್ಮ ಮೂಲ ಸ್ವರೂಪದ ಶೈಲಿಯಲ್ಲೇ ಆಡಿದರೆ ಉತ್ತಮ. ಸೂರ್ಯಕುಮಾರ್​ ಮತ್ತು ಹಾರ್ದಿಕ್​ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗುತ್ತಿದ್ದರೆ.

VISTARANEWS.COM


on

Koo

ಬಾರ್ಬಡೋಸ್​: ಚುಟುಕು ಮಾದರಿಯ ಫೈನಲ್(South Africa vs India Final)​ ಕಾದಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ನಾಳೆ ನಡೆಯುವ ಫೈನಲ್(T20 World Cup 2024)​ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ(IND vs SA) ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಭಯಮುಕ್ತರಾಗಿ ಆಡಬೇಕು


ಭಾರತ ತಂಡದ ದೊಡ್ಡ ಸಮಸ್ಯೆ ಎಂದರೆ ಲೀಗ್, ಸೆಮಿಫೈನಲ್​ನಲ್ಲಿ ಎಷ್ಟೇ ಉತ್ತಮ ಪ್ರದರ್ಶನ ತೋರಿದರೂ ಕೂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಂಪೂರ್ಣ ನರ್ವಸ್​ ಆಗಿ ಆಡುವುದು. ಒಂದು ವಿಕೆಟ್​ ಬಿದ್ದರೆ ಸಾಕು ಬಳಿಕ ಕ್ರೀಸ್​ಗಿಳಿವ ಬ್ಯಾಟರ್​ಗಳು ಭಯದಿಂದಲೇ ಆಡಲು ಮುಂದಾಗಿ ಸತತವಾಗಿ ವಿಕೆಟ್​ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುತ್ತಾರೆ. ಕಳೆದ ಏಕದಿನ ವಿಶ್ವಕಪ್​ ಫೈನಲ್​, ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಇದಕ್ಕೆ ಉತ್ತಮ ನಿದರ್ಶನ. ಹೀಗಾಗಿ ನಾಳೆ ನಡೆಯುವ ಫೈನಲ್​ ಪಂದ್ಯದಲ್ಲಿ ಬ್ಯಾಟರ್​ಗಳು ಮತ್ತು ಬೌಲರ್​ಗಳು ವಿಚಲಿತರಾಗದೆ ಆಡಬೇಕು.

ವಿರಾಟ್​ ಕೊಹ್ಲಿ ಅವರು ಸತತವಾಗಿ ಬ್ಯಾಟಿಂಗ್​ ವೈಫಲ್ಯ ಕಂಡರೂ ಕೂಡ ಫೈನಲ್​ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್​ ನಡೆಸುತ್ತಾರೆ ಎಂದು ನಾಯಕ ರೋಹಿತ್​ ಶರ್ಮ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜತೆಗೆ ಕೋಚ್​ ದ್ರಾವಿಡ್​ ಕೂಡ ಕೊಹ್ಲಿಗೆ ವಿಶೇಷ ಸ್ಫೂರ್ತಿ ತುಂಬುವ ಮೂಲಕ ಫೈನಲ್ ಪಂದ್ಯಕ್ಕೆ ಸಿದ್ದಪಡಿಸಿದ್ದಾರೆ. ಶಿವಂ ದುಬೆ ಮಾತ್ರ ಬ್ಯಾಟಿಂಗ್​ ಸುಧಾರಣೆ ಕಾಣುವಂತೆ ತೋರುತ್ತಿಲ್ಲ. ಹೀಗಾಗಿ ಅವರನ್ನು ಕೈ ಬಿಟ್ಟು ಯಶಸ್ವಿ ಜೈಸ್ವಾಲ್​ ಅವರನ್ನು ಆಡಿಸಿದರೆ ಉತ್ತಮ.

ಒಂದು ಬದಲಾವಣೆ ಸಾಧ್ಯತೆ

ಆರಂಭಿಕ ಆಟಗಾರನಾಗಿರುವ ಜೈಸ್ವಾಲ್​ ಅವರು ರೋಹಿತ್ ಜತೆ ಇನಿಂಗ್ಸ್​ ಆರಂಭಿಸಿದರೆ ಕೊಹ್ಲಿ ತಮ್ಮ ಎಂದಿನ ವನ್​ಡೌನ್​ ಕ್ರಮಾಂಕದಲ್ಲಿ ಆಡಬಹುದು. ಬೌಲಿಂಗ್​ ವಿಭಾಗದಲ್ಲಿ ಯಾವುದೇ ಬದಲಾವಣೆ ಸಂಭವಿಸುವ ಸಾಧ್ಯತೆ ಇಲ್ಲ. ಮೂರು ಸ್ಪಿನ್ನರ್​ ಮತ್ತು 2 ವೇಗಿಗಳ ಕಾಂಬಿನೇಷನ್​ನಲ್ಲಿಯೇ ಆಡಬಹುದು. ಪಂತ್​ ಪ್ರಯೋಗಾತ್ಮಕ ಶೈಲಿಯ ಬ್ಯಾಟಿಂಗ್​ ನಡೆಸುವ ಬದಲು ತಮ್ಮ ಮೂಲ ಸ್ವರೂಪದ ಶೈಲಿಯಲ್ಲೇ ಆಡಿದರೆ ಉತ್ತಮ. ಸೂರ್ಯಕುಮಾರ್​ ಮತ್ತು ಹಾರ್ದಿಕ್​ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗುತ್ತಿದ್ದರೆ. ಫೈನಲ್​ನಲ್ಲಿಯೂ ಈ ಪ್ರದರ್ಶನ ಕಂಡುಬಂದರೆ ಉತ್ತಮ. ಅಕ್ಷರ್​ ಪಟೇಲ್ ತಮ್ಮ ಆಲ್​ರೌಂಡರ್​ ಸ್ಥಾನಕ್ಕೆ ತಕ್ಕ ಪ್ರದರ್ಶನ ತೋರುತ್ತಿದ್ದಾರೆ. ಫೀಲ್ಡಿಂಗ್​, ಬ್ಯಾಟಿಂಗ್​ ಮತ್ತು ಬೌಲಿಂಗ್​ ಎಲ್ಲ ವಿಭಾಗದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುತ್ತಿದ್ದಾರೆ.​

ಇದನ್ನೂ ಓದಿ IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

ದಕ್ಷಿಣ ಆಫ್ರಿಕಾ ಕೂಡ ಬಲಿಷ್ಠ


ದಕ್ಷಿಣ ಆಫ್ರಿಕಾ ಕೂಡ ಬ್ಯಾಟಿಂಗ್​, ಬೌಲಿಂಗ್​ ಮತ್ತು ಫೀಲ್ಡಿಂಗ್​ ವಿಭಾಗದಲ್ಲಿ ವೈವಿಧ್ಯಮಯವಾಗಿದೆ. ಆದರೆ, ಲಕ್​ ಕೈ ಹಿಡಿಯುತ್ತಾ ಎನ್ನುವುದು ಇಲ್ಲಿ ಮುಖ್ಯ. ಡಿ ಕಾಕ್​, ಮಾರ್ಕ್ರಮ್​, ಕ್ಲಾಸೆನ್​, ಮಿಲ್ಲರ್​ ಸಿಡಿದು ನಿಂತರೆ ಕಷ್ಟ. ಬೌಲಿಂಗ್​ನಲ್ಲಿ ಮಾರ್ಕೊ ಜಾನ್ಸೆನ್​, ಕಗಿಸೊ ರಬಾಡ, ಶಮ್ಸಿ ಉತ್ತಮ ಬೌಲಿಂಗ್​ ಲಯದಲ್ಲಿದ್ದಾರೆ.

ಸಂಭಾವ್ಯ ತಂಡ


ದಕ್ಷಿಣ ಆಫ್ರಿಕಾ:
ಕ್ವಿಂಟನ್ ಡಿ ಕಾಕ್ (ವಿಕೀ), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಮ್​ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಜೆ, ತಬ್ರೈಜ್ ಶಮ್ಸಿ

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ/ ಯಶಸ್ವಿ ಜೈಸ್ವಾಲ್​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

Continue Reading

ಕ್ರೀಡೆ

Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

Paris Olympics 2024 :ಜೆಎಸ್‌ಡಬ್ಲ್ಯೂ ಫೌಂಡೇಶನ್‌ ನ ಅಧ್ಯಕ್ಷೆ ಸಂಗೀತಾ ಜಿಂದಾಲ್ ಮತ್ತು ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ ಸಂಸ್ಥಾಪಕ ಪಾರ್ಥ್ ಜಿಂದಾಲ್, ಐಓಸಿ ಅಧ್ಯಕ್ಷ ಶ್ರೀ ಥಾಮಸ್ ಬಾಚ್, ಫ್ರಾನ್ಸ್ ನಲ್ಲಿರುವ ಭಾರತದ ರಾಯಭಾರಿ ಜಾವೇದ್ ಅಶ್ರಫ್ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.

VISTARANEWS.COM


on

Paris olympics 2024
Koo


ಬೆಂಗಳೂರು : ಒಲಿಂಪಿಕ್ ಆಂದೋಲನದ ಸಂಸ್ಥಾಪಕ ಪಿಯರೆ ಡಿ ಕೂಬರ್ಟಿನ್ ಅವರ ಬದುಕನ್ನು ಸಂಭ್ರಮಿಸುವ ಉದ್ದೇಶದಿಂದ ಮತ್ತು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ದೇಶದ 100 ವರ್ಷಗಳ ಭಾಗವಹಿಸುವಿಕೆಯನ್ನು ಸ್ಮರಿಸುವ ಸಲುವಾಗಿ ಈ ಬಾರಿಯ ಒಲಿಂಪಿಕ್ಸ್ (Paris Olympics 2024) ಆತಿಥೇಯ ನಗರವಾದ ಪ್ಯಾರಿಸ್ ನಲ್ಲಿ ಜೆಎಸ್‌ಡಬ್ಲ್ಯೂ ಗ್ರೂಪ್ ಪ್ರದರ್ಶನವನ್ನು ಆರಂಭಿಸಿದೆ. ಇದು ಒಲಿಂಪಿಕ್ಸ್ ಮುಕ್ತಾಯದ ತನಕ ನಡೆಯಲಿದ್ದು ಭಾರತದ ಒಲಿಂಪಿಕ್ಸ್ ಪರಂಪರೆಯ ನಾನಾ ಕ್ಷಣಗಳನ್ನು ವೀಕ್ಷಿಸಲು ಅವಕಾಶವಿದೆ.

ಜೆಎಸ್‌ಡಬ್ಲ್ಯೂ ಫೌಂಡೇಶನ್‌ ನ ಅಧ್ಯಕ್ಷೆ ಸಂಗೀತಾ ಜಿಂದಾಲ್ ಮತ್ತು ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ ಸಂಸ್ಥಾಪಕ ಪಾರ್ಥ್ ಜಿಂದಾಲ್, ಐಓಸಿ ಅಧ್ಯಕ್ಷ ಶ್ರೀ ಥಾಮಸ್ ಬಾಚ್, ಫ್ರಾನ್ಸ್ ನಲ್ಲಿರುವ ಭಾರತದ ರಾಯಭಾರಿ ಜಾವೇದ್ ಅಶ್ರಫ್ ಮತ್ತು ಪಿಯರೆ ಡಿ ಕೂಬರ್ಟಿನ್ ಫ್ಯಾಮಿಲಿ ಅಸೋಸಿಯೇಶನ್‌ ನ ಅಧ್ಯಕ್ಷರಾದ ಅಲೆಕ್ಸಾಂಡ್ರಾ ಡಿ ನವಸೆಲ್ಲೆ ಅವರು ಪ್ಯಾರಿಸ್‌ನ 7ನೇ ಅರೋಂಡಿಸ್ಮೆಂಟ್‌ನ ಟೌನ್ ಹಾಲ್‌ ನಲ್ಲಿ ಆಯೋಜಿಸಲಾಗಿರುವ ಎಕ್ಸಿಬಿಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಪ್ರದರ್ಶನವು ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಪ್ಯಾರಿಸ್ 2024ರ ಬೇಸಿಗೆ ಪ್ಯಾರಾಲಿಂಪಿಕ್ ಅಂತ್ಯದವರೆಗೆ ನಡೆಯಲಿದೆ.

ಜೆಎಸ್‌ಡಬ್ಲ್ಯೂ ಫೌಂಡೇಶನ್‌ನ ಅಧ್ಯಕ್ಷೆ ಶ್ರೀಮತಿ ಸಂಗೀತಾ ಜಿಂದಾಲ್, “ಪ್ಯಾರಿಸ್‌ ನಲ್ಲಿ ನಡೆಯುತ್ತಿರುವ ಜೀನಿಯಸ್ ಆಫ್ ಸ್ಪೋರ್ಟ್ ಎಕ್ಸಿಬಿಷನ್ ನಲ್ಲಿ ‘ ಭಾರತದ 100 ವರ್ಷಗಳ ಭಾಗವಹಿಸುವಿಕೆ”ಯನ್ನು ಸ್ಮರಿಸುವ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಲು ಗೆ ಸಂತೋಷವಾಗಿದೆ. ಈ ವಿಶಿಷ್ಟ ಪ್ರದರ್ಶನದ ಮೂಲಕ ನಾವು ಪಿಯರೆ ಡಿ ಕೂಬರ್ಟಿನ್ ಅವರ ಬದುಕು ಹಾಗೂ ಪರಂಪರೆಯನ್ನು ಮತ್ತು ಭಾರತದ ಗಮನಾರ್ಹವಾದ 100 ವರ್ಷಗಳ ಒಲಿಂಪಿಕ್ ಪ್ರಯಾಣವನ್ನು ಆಚರಿಸುತ್ತಿದ್ದೇವೆ. ಕ್ರೀಡೆಯು ಜಾಗತಿಕ ಎಲ್ಲಾ ಗಡಿಗಳನ್ನು ಮೀರಿ ಶಾಂತಿ ಹಾಗೂ ಸ್ನೇಹದ ಮೂಲಕ ಜನರನ್ನು ಒಟ್ಟುಗೂಡಿಸುವ ಸಾಮರ್ಥ್ಯವನ್ನು ಹೊಂದಿದೆ ಎಂಬ ಪಿಯರೆ ಡಿ ಕೂಬರ್ಟಿನ್ ಅವರ ದೂರದೃಷ್ಟಿ ಮತ್ತು ನಂಬಿಕೆಯನ್ನು ಗೌರವಿಸುತ್ತಿದ್ದೇವೆ. 2024ರ ಒಲಿಂಪಿಕ್ಸ್ ಕ್ರೀಡಾಕೂಟವು ಜೆಎಸ್‌ಡಬ್ಲ್ಯೂ ಗ್ರೂಪ್‌ ಗೆ ಬಹಳ ಪ್ರಮುಖ ಮೈಲಿಗಲ್ಲಾಗಿದೆ. ಈ ಪ್ರದರ್ಶನವನ್ನು ಆಯೋಜಿಸಲು ಮತ್ತು ಪ್ಯಾರಿಸ್‌ ನಲ್ಲಿ ಭಾರತದ ಅಥ್ಲೀಟ್​ಗಳ ನಿಯೋಗವನ್ನು ಬೆಂಬಲಿಸಲು ನಾವು ಹೆಮ್ಮೆಪಡುತ್ತೇವೆ. ನಾವು ಭಾರತದಲ್ಲಿ ಕ್ರೀಡಾ ಸಂಸ್ಕೃತಿ ಮತ್ತು ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ತೋರಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

ಪಿಯರೆ ಡಿ ಕೂಬರ್ಟಿನ್ ಫ್ಯಾಮಿಲಿ ಅಸೋಸಿಯೇಷನ್‌ ನ ಸಹಯೋಗದೊಂದಿಗೆ ನಡೆಯುತ್ತಿರುವ ಪ್ರದರ್ಶನವು ಕಳೆದ ಶತಮಾನದ ಭಾರತದ ಒಲಿಂಪಿಕ್ ಪ್ರಯಾಣದ ವಿವರಗಳನ್ನು ಒದಗಿಸುತ್ತದೆ. ಭಾರತವು ಒಲಿಂಪಿಕ್ಸ್ ನಲ್ಲಿ ಈ ಹಿಂದೆ ಅನುಭವಿಸಿದ ಯಶಸ್ಸು ಮತ್ತು ಭವಿಷ್ಯದ ಕುರಿತು ಹೊಂದಿರುವ ದೂರದೃಷ್ಟಿಯ ಚಿತ್ರಗಳನ್ನು ಈ ಎಕ್ಸಿಬಿಷನ್ ನಲ್ಲಿ ವೀಕ್ಷಿಸಬಹುದು

ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್‌ ನ ಸಂಸ್ಥಾಪಕ ಪಾರ್ಥ್ ಜಿಂದಾಲ್ ಮಾತನಾಡಿ “ ಒಲಿಂಪಿಕ್ಸ್​​ನಲ್ಲಿ ಭಾರತದ ಸಾಧನೆ ಕುರಿತು ವಿಶೇಷ ಪ್ರದರ್ಶನ ಆಯೋಜಿಸಲು ಪಿಯರೆ ಡಿ ಕೂಬರ್ಟಿನ್ ಕುಟುಂಬದೊಂದಿಗೆ ಸಹಯೋಗ ಮಾಡಿಕೊಂಡಿರುವುದಕ್ಕೆ ನಮಗೆ ಹೆಮ್ಮೆಯಿದೆ ನಾವು ವಿಶ್ವದ ಶ್ರೇಷ್ಠ ಕ್ರೀಡಾಕೂಟದ ಸನಿಹದಲ್ಲಿದ್ದೇವೆ ಮತ್ತು ಈ ಸಂದರ್ಭದಲ್ಲಿ ಒಲಿಂಪಿಕ್ಸ್ ನಡೆಯುವ ಪ್ಯಾರಿಸ್ ನಗರದಲ್ಲಿ ಗಮನ ಸೆಳೆಯುವಂಥದ್ದೇನೋ ಮಾಡಬೇಕೆಂಬುದು ಜೆಎಸ್‌ಡಬ್ಲ್ಯೂ ನಲ್ಲಿನ ನಮ್ಮ ಬಯಕೆಯಾಗಿತ್ತು” ಎಂದು ಹೇಳಿದರು.

ಐಒಸಿ ಅಧ್ಯಕ್ಷ ಶ್ರೀ ಥಾಮಸ್ ಬಾಕ್​ ಮಾತನಾಡಿ “ಈ ಪ್ರದರ್ಶನ ಆಯೋಜಿಸಿದ್ದಕ್ಕಾಗಿ ಧನ್ಯವಾದಗಳು. ಈ ಪ್ರದರ್ಶನದಿಂದ ಸಾರ್ವಜನಿಕರು ಬೆರಗುಗೊಳಿಸುವ ಮತ್ತು ಬಹುಮುಖಿ ವ್ಯಕ್ತಿತ್ವದ ವ್ಯಕ್ತಿಯ ಕುರಿತು ತಿಳಿಯಲು ಸಾಧ್ಯವಾಗುತ್ತದೆ. ಪಿಯರೆ ಡಿ ಕೂಬರ್ಟಿನ್ ಅವರಂತಹ ಅದ್ಭುತ ವ್ಯಕ್ತಿಯ ಬಗ್ಗೆ ಫ್ರೆಂಚ್ ಜನರು ಹೆಮ್ಮೆ ಪಡುತ್ತೇವೆ” ಎಂದು ಹೇಳಿದರು.

Continue Reading
Advertisement
Snake
ಪ್ರಮುಖ ಸುದ್ದಿ47 seconds ago

Snake: ಮಲಗಿದ್ದವನ ಚಡ್ಡಿಯೊಳಗೆ ನುಗ್ಗಿದ ನಾಗರಹಾವು; ಅದು ಹೊರಬರುವ ಮುನ್ನ ಮಾಡಿದ ಅನಾಹುತ ಏನು?

Team India
ಪ್ರಮುಖ ಸುದ್ದಿ8 mins ago

Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

Parliament Sessions
ದೇಶ14 mins ago

Parliament Sessions: ಅಧಿವೇಶನದ ವೇಳೆ ತಲೆಸುತ್ತಿ ಬಿದ್ದ ಸಂಸದೆ; ವಿಡಿಯೋ ಇದೆ

Breast Cancer Awareness
ಆರೋಗ್ಯ29 mins ago

What Is Stage 3 Breast Cancer: ಮೂರನೇ ಹಂತದ ಸ್ತನ ಕ್ಯಾನ್ಸರ್‌ ಎಂದರೇನು? ಇದರ ಲಕ್ಷಣಗಳೇನು?

Nita Ambani
ವಾಣಿಜ್ಯ36 mins ago

Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು?

Monsoon Footwear Fashion
ಫ್ಯಾಷನ್50 mins ago

Monsoon Footwear Fashion: ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌

Narayana Health City Performs 300 Robotic Knee Replacements in Six Months
ಬೆಂಗಳೂರು53 mins ago

Narayana Health: ನಾರಾಯಣ ಹೆಲ್ತ್ ಸಿಟಿಯಲ್ಲಿ 6 ತಿಂಗಳಲ್ಲಿ 300 ರೊಬೊಟಿಕ್ ಮೊಣಕಾಲಿನ ಶಸ್ತ್ರಚಿಕಿತ್ಸೆಗಳು

Post Office
ಪ್ರಮುಖ ಸುದ್ದಿ56 mins ago

Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ

Congress government
ಕರ್ನಾಟಕ1 hour ago

Congress government: ಕೈ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದ ಆರ್.ಅಶೋಕ್‌

BS Yediyurappa
ಪ್ರಮುಖ ಸುದ್ದಿ2 hours ago

BS Yediyurappa: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮಧ್ಯಂತರ ಜಾಮೀನು ವಿಸ್ತರಣೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌