Indian Paralympic Team: ಪದಕ ಬೇಟೆಗೆ ಹೊರಟ ಭಾರತೀಯ ಪ್ಯಾರಾಲಿಂಪಿಕ್ಸ್‌ ತಂಡಕ್ಕೆ ಬೀಳ್ಕೊಡುಗೆ - Vistara News

ಕ್ರೀಡೆ

Indian Paralympic Team: ಪದಕ ಬೇಟೆಗೆ ಹೊರಟ ಭಾರತೀಯ ಪ್ಯಾರಾಲಿಂಪಿಕ್ಸ್‌ ತಂಡಕ್ಕೆ ಬೀಳ್ಕೊಡುಗೆ

Indian Paralympic Team: ಭಾರತದ ಸ್ಪರ್ಧಿಗಳು– ಆರ್ಚರಿ, ಅಥ್ಲೆಟಿಕ್ಸ್‌, ಬ್ಯಾಡ್ಮಿಂಟನ್‌, ಕೆನೊಯಿಂಗ್‌, ಸೈಕ್ಲಿಂಗ್‌, ಅಂಧರ ಜುಡೊ, ಪವರ್‌ಲಿಫ್ಟಿಂಗ್‌, ರೋಯಿಂಗ್‌, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೊ ಕ್ರೀಡೆಗಳಲ್ಲಿ ಸ್ಪರ್ಧಿಸಲಿದ್ದಾರೆ.

VISTARANEWS.COM


on

Indian Paralympic Team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ಯಾರಿಸ್​ನಲ್ಲಿ ಇದೇ ತಿಂಗಳ 28ರಿಂದ ಸೆಪ್ಟೆಂಬರ್‌ 8ರವರೆಗೆ ನಡೆಯಲಿರುವ ಪ್ಯಾರಾಲಿಂಪಿಕ್ಸ್‌ (Paralympic) ಕೂಟದಲ್ಲಿ ಪದಕ ಬೇಟೆಗೆ ಹೊರಟಿರುವ ಭಾರತ ಪ್ಯಾರಾಲಿಂಪಿಕ್ಸ್‌ ತಂಡಕ್ಕೆ(Indian Paralympic Team) ಶುಕ್ರವಾರ ಬೀಳ್ಕೊಡುಗೆ ನೀಡಲಾಯಿತು. ಭಾರತ ಪ್ಯಾರಾಲಿಂಪಿಕ್‌ ಸಮಿತಿ (ಪಿಸಿಐ) ಮತ್ತು ಭಾರತ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಈ ಸಮಾರಂಭ ಆಯೋಜಿಸಿತ್ತು.

ಕಳೆದ ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ 19 ಪದಕ ಗೆದ್ದ ಭಾರತ, ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಪ್ಯಾರಿಸ್​ಗೆ ಪ್ರಯಾಣ ಬೆಳೆಸಿದೆ. ಈ ಬಾರಿ ದಾಖಲೆಯ 84 ಮಂದಿ ಪ್ಯಾರಾ ಕ್ರೀಡಾಪಟುಗಳು ವಿವಿಧ 12 ಕ್ರೀಡೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಕಳೆದ ಬಾರಿ 24 ಮಂದಿ ಸ್ಪರ್ಧಿಸಿದ್ದರು.

“ನಮ್ಮ ಪ್ಯಾರಾ ಅಥ್ಲೀಟ್‌ಗಳು ಅಡೆತಡೆಗಳನ್ನು ಜಯಿಸಲು ಮತ್ತು ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸುವ ಗಮನಾರ್ಹ ಸಾಮರ್ಥ್ಯವನ್ನು ಹೊಂದಿದ್ದಾರೆ. ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ಗಾಗಿ ತಮ್ಮ ತಯಾರಿಯಲ್ಲಿ ಗಮನಾರ್ಹ ದೃಢತೆ ಮತ್ತು ಪರಿಶ್ರಮವನ್ನು ತೋರಿಸಿದ್ದಾರೆ” ಎಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ(Mansukh Mandaviya) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾಗ್ಯಶ್ರೀ ಜಾಧವ್ ಮತ್ತು ಸುಮಿತ್ ಆಂಟಿಲ್ ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ಗಾಗಿ ಭಾರತದ ಧ್ವಜಧಾರಿಗಳಾಗಿ ಹೆಸರಿಸಲ್ಪಟ್ಟಿದ್ದಾರೆ.

ಇದನ್ನೂ ಓದಿ Paralympics 2024: ಪ್ಯಾರಾಲಿಂಪಿಕ್ಸ್​ನಲ್ಲಿ ಭಾಗ್ಯಶ್ರೀ, ಸುಮಿತ್ ತ್ರಿವರ್ಣ ಧ್ವಜಧಾರಿಗಳು

“ಖೇಲೋ ಇಂಡಿಯಾ ಉಪಕ್ರಮದಿಂದ ಅನೇಕ ಕ್ರೀಡಾಪಟುಗಳು ಪ್ರಯೋಜನ ಪಡೆದಿದ್ದಾರೆ ಮತ್ತು ಅಲ್ಲಿಂದ ಗಮನಾರ್ಹ ಸಂಖ್ಯೆಯ ಜನರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ಗೆ ಹೋಗುತ್ತಾರೆ. ಅವರಿಗೆ ಉನ್ನತ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಸಂಪನ್ಮೂಲಗಳು ಮತ್ತು ಬೆಂಬಲವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಭಾರತದ ಸ್ಪರ್ಧಿಗಳು– ಆರ್ಚರಿ, ಅಥ್ಲೆಟಿಕ್ಸ್‌, ಬ್ಯಾಡ್ಮಿಂಟನ್‌, ಕೆನೊಯಿಂಗ್‌, ಸೈಕ್ಲಿಂಗ್‌, ಅಂಧರ ಜುಡೊ, ಪವರ್‌ಲಿಫ್ಟಿಂಗ್‌, ರೋಯಿಂಗ್‌, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೊ ಕ್ರೀಡೆಗಳಲ್ಲಿ ಸ್ಪರ್ಧಿಸಲಿದ್ದಾರೆ. ದೇಶದ ಅಥ್ಲೀಟ್​ಗಳು ಈ ಬಾರಿಯೂ ಉತ್ತಮ ಪ್ರದರ್ಶನ ನೀಡುವ ಮೂಲಕ ದೇಶದ ಕೀರ್ತಿ ಪತಾಕೆಯನ್ನು ಹಾರಿಸುವ ವಿಶ್ವಾಸ ನನಗಿದೆ ಎಂದು ಭಾರತ ಪ್ಯಾರಾಲಿಂಪಿಕ್ ಸಮಿತಿ ಅಧ್ಯಕ್ಷ ದೇವೇಂದ್ರ ಝಜಾರಿಯಾ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ವರ್ಷ ಹಾಂಗ್‌ಝೌನ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲೂ ಭಾರತದ ಪ್ಯಾರಾಲಿಂಪಿಕ್ಸ್‌ ತಂಡ 111 ಪದಕಗಳನ್ನು ಜಯಿಸಿ, ಉತ್ತಮ ಸಾಧನೆ ಮೆರೆದಿತ್ತು. ಹೀಗಾಗಿ ಈ ಬಾರಿ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್‌ ಆತಿಥ್ಯಕ್ಕೆ ಮುಂದಾದ ಜಿಂಬಾಬ್ವೆ

ICC Women’s T20 World Cup: ಕ್ರಿಕ್ ​ಇನ್ಫೋ ವರದಿಯ ಪ್ರಕಾರ ಜಿಂಬಾಬ್ವೆ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯ ಆತಿಥ್ಯವಹಿಸಿಕೊಳ್ಳಲು ಆಸಕ್ತಿ ಹೊಂದಿದೆ ಎಂದು ತಿಳಿಸಿದೆ.

VISTARANEWS.COM


on

ICC Women's T20 World Cup
Koo

ಮುಂಬಯಿ: ಬಾಂಗ್ಲಾದೇಶದಲ್ಲಿ(bangladesh violence)  ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳಿಂದ ಸಂಭವಿಸಿರುವ ಬಿಕ್ಕಟ್ಟಿನಿಂದಾಗಿ ಮುಂಬರುವ ಮಹಿಳಾ ಟಿ20 ವಿಶ್ವಕಪ್‌(ICC Women’s T20 World Cup) ಪಂದ್ಯಾವಳಿಯನ್ನು ಆಯೋಜಿಸಲು ಐಸಿಸಿ ಪರ್ಯಾಯ ಸ್ಥಳವನ್ನು ಹುಡುಕುತ್ತಿದ್ದ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಈ ಪಂದ್ಯಾವಳಿಗೆ ಭಾರತ ಆತಿಥ್ಯ ವಹಿಸುವುದಿಲ್ಲ ಎಂದು ಹೇಳಿದ್ದರು. ಇದೀಗ ಜಿಂಬಾಬ್ವೆ ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲು ಸಿದ್ಧವಾಗಿದೆ ಎಂದು ವರದಿಯಾಗಿದೆ.

ಕ್ರಿಕ್ ​ಇನ್ಫೋ ವರದಿಯ ಪ್ರಕಾರ ಜಿಂಬಾಬ್ವೆ ಟೂರ್ನಿಯ ಆತಿಥ್ಯವಹಿಸಿಕೊಳ್ಳಲು ತಮ್ಮ ಆಸಕ್ತಿಯನ್ನು ಐಸಿಸಿಗೆ ವ್ಯಕ್ತಪಡಿಸಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಗುರುವಾರವಷ್ಟೇ ಮಾಧ್ಯಮವೊಂದರ ಜತೆ ಮಾತನಾಡಿದ್ದ ಜಯ್‌ ಶಾ, “ಮಹಿಳಾ ಟಿ20 ವಿಶ್ವಕಪ್‌ ಆಯೋಜನೆಗೆ ಐಸಿಸಿ ನಮ್ಮನ್ನು ಸಂಪರ್ಕಿಸಬಹುದು. ಆದರೆ ನಾನು ಇದನ್ನು ನಿರಾಕರಿಸುತ್ತೇನೆ ಎಂದಿದ್ದರು. 

ಕೆಲ ದಿನಗಳ ಹಿಂದೆ ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿ ಸೇನಾ ಮುಖ್ಯಸ್ಥ ಜನರಲ್‌ ವಕಾರ್‌ ಜಮಾನ್‌ ಅವರಿಗೆ ಪತ್ರ ಬರೆದು, ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ನಡೆಸಿಕೊಡಲು ಸಹಾಯ ಮಾಡಬೇಕು ಎಂದು ಕೋರಿತ್ತು. ಸದ್ಯಕ್ಕೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸುವಂತೆ ಕಾಣುತ್ತಿಲ್ಲ ಹೀಗಾಗಿ ಐಸಿಸಿ ಪರ್ಯಾಯ ಸ್ಥಳದ ಹುಡುಕಾಟ ನಡೆಸುತ್ತಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಅಕ್ಟೋಬರ್‌ನಲ್ಲಿ ಆರಂಭಗೊಳ್ಳಬೇಕು.

ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ ಬಳಿಕ ನಡೆದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 45 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎನ್ನಲಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥ ಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

Continue Reading

ಕ್ರೀಡೆ

Viral News: ಮಾವ ಎಮ್ಮೆ ಬದಲು ಆ ಗಿಫ್ಟ್​ ಕೊಡುತ್ತಿದ್ದರೆ ಸಂತಸವಾಗುತ್ತಿತ್ತು ಎಂದ ಒಲಿಂಪಿಕ್ಸ್ ಚಿನ್ನ​ ವಿಜೇತ ಅರ್ಷದ್​ ನದೀಮ್

Viral News: ಯುನೈಟೈಡ್ ನೇಷನ್ ಪಟ್ಟಿಯಲ್ಲಿ ಮೋಸ್ಟ್ ವಾಟೆಂಡ್​ ಉಗ್ರ ಎಂದು ಗುರುತಿಸಲ್ಪಟ್ಟ ಲಷ್ಕರ್ ಇ ತೊಯ್ಬಾದ ಹರೀಸ್ ಧಾರ್ ಜತೆ ಅರ್ಷದ್ ನದೀಮ್ ಕಾಣಿಸಿಕೊಂಡದ್ದು ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು

VISTARANEWS.COM


on

Viral News
Koo

ಕರಾಚಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್​ ಎಸೆತಗಾರ ಅರ್ಷದ್​ ನದೀಮ್​ಗೆ(Arshad Nadeem) ಅವರ ಮಾವ(ಪತ್ನಿಯ ತಂದೆ) ಉಡುಗೊರೆಯಾಗಿ ಎಮ್ಮೆಯೊಂದನ್ನು ನೀಡಿದ್ದರು. ಇದೀಗ ಮಾವ ನೀಡಿದ ಈ ಉಡುಗೊರೆಯ ಬಗ್ಗೆ ಅರ್ಷದ್ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಈ ವಿಡಿಯೊ ವೈರಲ್(Viral News) ಆಗಿದೆ.

ಪಾಕಿಸ್ತಾನಿ ಮಾಧ್ಯಮ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ವೇಳೆ ನದೀಮ್​ಗೆ ಸಂದರ್ಶಕ, ಮಾವ ಎಮ್ಮೆಯನ್ನು ಉಡುಗೊರೆಯಾಗಿ ನೀಡಿದ್ದ ಬಗ್ಗೆ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಈ ವೇಳೆ ನಗುತ್ತಲೇ ಉತ್ತರಿಸಿದ ನದೀಮ್​ ಮಾವ ಎಮ್ಮೆಯನ್ನು ನೀಡುವ ಬದಲು 6 ರಿಂದ 6 ಎಕ್ರೆ ಜಮೀನ್​ ನೀಡುತ್ತಿದ್ದರೆ ಉತ್ತಮವಾಗಿರುತ್ತಿತ್ತು. ನನ್ನ ಮಾವ ತುಂಬಾ ಶ್ರೀಮಂತ ಹಾಗಾಗಿ ಎಮ್ಮೆ ನೀಡಿದ್ದಾರೆ ಎಂದು ಹೇಳಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ನದೀಮ್​ ಪ್ರತಿಕ್ರಿಯೆ ಕೇಳಿ ಸಂದರ್ಶಕ ಕೂಡ ಜೋರಾಗಿ ನಕ್ಕಿದ್ದಾನೆ. ನದೀಮ್​ ಮಾವನ ಬಗ್ಗೆ ಹಾಸ್ಯ ಮಾಡುವ ವೇಳೆ ಪತ್ನಿಯೂ ಜತೆಗಿದ್ದರು.

ಒಲಿಂಪಿಕ್ಸ್​ ಸಾಧನೆಗಾಗಿ ಅರ್ಷದ್​ಗೆ ಅವರ ಪತ್ನಿಯ ತಂದೆ(ಮಾವ) ಮಹಮ್ಮದ್​ ನವಾಜ್​ ಅವರು ಎಮ್ಮೆಯನ್ನು ಅಳಿಯನಿಗೆ ಉಡುಗೊರೆಯಾಗಿ ನೀಡಿದ್ದರು. ಈ ಬಗ್ಗೆ ಮಾತನಾಡಿದ್ದ ಮಹಮ್ಮದ್​ ನವಾಜ್​, “ನಮ್ಮ ಗ್ರಾಮದಲ್ಲಿ ಎಮ್ಮೆಯನ್ನು ಉಡುಗೊರೆಯಾಗಿ ನೀಡುವುದು ಶ್ರೇಷ್ಠ ಗೌರವವಾಗಿದೆ” ಎಂದು ಹೇಳಿದ್ದರು.

ಚಿನ್ನ ಗೆದ್ದ ನದೀಮ್​ಗೆ ಪಾಕಿಸ್ತಾನ ಪ್ರಾಂತ್ಯದ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ 10 ಕೋಟಿ ರೂ., ಸಿಂಧ್ ಸರ್ಕಾರ ಐದು ಕೋಟಿ ರೂ., ವಿಶ್ವ ಅಥ್ಲೀಟ್ ಫೆಡರೇಶನ್ ಒಂದು ಕೋಟಿ 40 ಲಕ್ಷ ಬಹುಮಾನ ಘೋಷಿಸಿದ್ದು, ಸಿಂಧ್ ಗವರ್ನರ್ ಕಮ್ರಾನ್ ತೆಸ್ಸೋರಿ, ಕ್ರಿಕೆಟಿಗ ಅಹ್ಮದ್ ಶೆಹಜಾದ್ ಮತ್ತು ಓರ್ಷ ಗಾಯಕ 30 ಲಕ್ಷಗಳನ್ನು ನೀಡಿದ್ದಾರೆ.

ಇದನ್ನೂ ಓದಿ Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

ಪಾಕಿಸ್ತಾನದ ಪಂಜಾಬ್‌ನಲ್ಲಿರುವ ಮಿಯಾನ್‌ ಚಾನುವಿನಲ್ಲಿನ ಬಡ ಪಂಜಾಬಿ ಕುಟುಂಬದಲ್ಲಿ ಜನಿಸಿದ ಅರ್ಷದ್‌ ನದೀಮ್‌, ಇಂದು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಬೇಕಾದರೆ ಅವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ತಂದೆ ಮುಹಮ್ಮದ್‌ ಅಶ್ರಫ್‌ ಗಾರೆ ಮೇಸ್ತ್ರಿ ಆಗಿದ್ದ ಕಾರಣ, ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಅರ್ಷದ್‌ ನದೀಮ್‌ ಕೂಡ ತಂದೆಯ ಜತೆ ಗಾರೆ ಕೆಲಸವನ್ನು ಮಾಡಿದ್ದರು. ಇದರೆ ಜತೆಗೆ ಕ್ರೀಡೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಯುನೈಟೈಡ್ ನೇಷನ್ ಪಟ್ಟಿಯಲ್ಲಿ ಮೋಸ್ಟ್ ವಾಟೆಂಡ್​ ಉಗ್ರ ಎಂದು ಗುರುತಿಸಲ್ಪಟ್ಟ ಲಷ್ಕರ್ ಇ ತೊಯ್ಬಾದ ಹರೀಸ್ ಧಾರ್ ಜತೆ ಅರ್ಷದ್ ನದೀಮ್ ಕಾಣಿಸಿಕೊಂಡದ್ದು ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ಯಾರಿಸ್​​ನಿಂದ ಲಾಹೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ನದೀಮ್ ಅವರಿಗೆ ಭವ್ಯ ಸ್ವಾಗತ ದೊರಕಿತ್ತು. ಅಲ್ಲಿನ ಸರ್ಕಾರವು ಅವರಿಗೆ ವಿಜಯ ಮೆರವಣಿಗೆಯನ್ನು ಸಹ ಆಯೋಜಿಸಿತ್ತು. ಇದಲ್ಲದೆ, ನದೀಮ್ ಅವರು ಪಾಕಿಸ್ತಾನದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಯನ್ನೂ ಪಡೆದಿದ್ದರು. ಇದರ ಬೆನ್ನಲ್ಲೇ ಲಷ್ಕರ್​ ನಾಯಕನೊಂದಿಗೆ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿತ್ತು.

Continue Reading

ಕ್ರಿಕೆಟ್

MS Dhoni Fans: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಹಳೆಯ ಐಪಿಎಲ್​ ನಿಯಮ ಜಾರಿಗೆ ಮುಂದಾದ ಬಿಸಿಸಿಐ

MS Dhoni Fans: ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು

VISTARANEWS.COM


on

MS Dhoni Fans
Koo

ಮುಂಬಯಿ: 18ನೇ ಆವೃತ್ತಿಯ ಐಪಿಎಲ್(Indian Premier League)​ ವಿಚಾರದಲ್ಲಿ ದಿನಕ್ಕೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿವೆ. ಇದೀಗ ಈ ಪಟ್ಟಿಗೆ ಹೊಸದೊಂದು ವಿಚಾರ ಸೇರ್ಪಡೆಗೊಂಡಿದೆ. ವರದಿಯೊಂದರ ಪ್ರಕಾರ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ.

ಮೊದಲ ಸೀಸನ್‌ನಿಂದ ಜಾರಿಯಲ್ಲಿದ್ದ ಈ ನಿಯಮವನ್ನು 2021ರಲ್ಲಿ ರದ್ದುಗೊಳಿಸಲಾಗಿತ್ತು. ಕಳೆದ ತಿಂಗಳು ಮುಂಬೈಯಲ್ಲಿ ನಡೆದಿದ್ದ ಐಪಿಎಲ್ ಫ್ರಾಂಚೈಸಿಗಳ ಮಾಲೀಕರು ಮತ್ತು ಬಿಸಿಸಿಐ ನಡುವಿನ ಸಭೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಆಡಳಿತವು ಈ ನಿಯಮವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತ್ತು. ಇದೀಗ ಬಿಸಿಸಿಐ ಮತ್ತೆ ಈ ನಿಯಮವನ್ನು ಜಾರಿಗೊಳಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾದರೆ ಧೋನಿ(MS Dhoni) ಮುಂದಿನ ಬಾರಿಯೂ ಐಪಿಎಲ್​ ಆಡುವುದು ಖಚಿತ ಎನ್ನಲಾಗಿದೆ. ಅಲ್ಲದೆ ಈ ನಿಯಮ ಜಾರಿಗೊಳ್ಳಲಿದೆ ಎನ್ನುವಾಗಲೇ ಧೋನಿ ಅಭಿಮಾನಿಗಳು(MS Dhoni Fans) ಸಂತಸಗೊಂಡಿದ್ದಾರೆ.

ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು. 2022ರ ಮೆಗಾ ಹರಾಜಿನ ಮೊದಲು, ಚೆನ್ನೈ 12 ಕೋಟಿಗೆ ಧೋನಿಯನ್ನು ತಂಡದಲ್ಲಿ ಉಳಿಸಿಕೊಂಡಿತ್ತು. “ಧೋನಿ ಅನ್‌ಕ್ಯಾಪ್ಡ್ ಆಟಗಾರನಾಗಿ ಆಡುತ್ತಾರಾ? ಇದೊಂದು ದೊಡ್ಡ ಪ್ರಶ್ನಾರ್ಥಕ ಚಿಹ್ನೆ” ಎಂದು ಆರ್​.ಅಶ್ವಿನ್​ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ Rohit Sharma : ಧೋನಿಯ ನಾಯಕತ್ವದ ದಾಖಲೆಯೊಂದನ್ನು ಮುರಿದ ರೋಹಿತ್ ಶರ್ಮಾ

ಈ ಬಾರಿ ರೈಟ್​ ಟು ಮ್ಯಾಚ್​(ಆರ್​ಟಿಎಂ) ಕಾರ್ಡ್​ ಪದ್ಧತಿಯನ್ನೂ ಮತ್ತೆ ತರಲಾಗುವುದು ಎಂದು ವರದಿಯಾಗಿದೆ. ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ

Continue Reading

ಬೆಂಗಳೂರು

Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Government Employees Sports: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಆ. 17ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024” ಆಯೋಜಿಸಲಾಗಿದೆ.

VISTARANEWS.COM


on

Government Employees Sports
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಆ. 17ರಂದು ಶನಿವಾರ ಸಂಜೆ 5 ಗಂಟೆಗೆ ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024” (Government Employees Sports) ಆಯೋಜಿಸಲಾಗಿದೆ.

ಇದನ್ನೂ ಓದಿ: Kannada New Movie: ತೆರೆಯ‌ ಮೇಲೆ‌ ಚಿತ್ರವಾಗಿ ಬರಲಿದೆ ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ; ಮೊದಲ ಹಾಡು ರಿಲೀಸ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟವನ್ನು ಉದ್ಘಾಟಿಸುವರು. ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿರುವರು. ಡಿಸಿಎಂ ಡಿ.ಕೆ. ಶಿವಕುಮಾರ್ ಧ್ವಜಾರೋಹಣ ಮತ್ತು ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿರುವರು.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.17ರಂದು ಪವರ್‌ ಕಟ್‌!

ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡುವರು.

Continue Reading
Advertisement
Kannada New Movie
ಬೆಂಗಳೂರು2 hours ago

Kannada New Movie: ‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ; ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ-ಪ್ರೇಮ್ ಸಾಥ್

Pralhad Joshi
ದೇಶ2 hours ago

Pralhad Joshi: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಕುರಿತು ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

PM Narendra Modi
ದೇಶ2 hours ago

PM Narendra Modi: ರಾಜತಾಂತ್ರಿಕ ಮಾತುಕತೆಯೇ ಸಂಘರ್ಷಕ್ಕೆ ಪರಿಹಾರ..ದೂರವಾಣಿ ಮೂಲಕ ಮೋದಿ- ನೆತನ್ಯಾಹು ಸಂಭಾಷಣೆ

Bureaucratic Reshuffle
ದೇಶ2 hours ago

Bureaucratic Reshuffle: ಆಡಳಿತಾತ್ಮಕ ಸುಧಾರಣೆಗೆ ಮೋದಿ ಗೇಮ್‌ ಪ್ಲಾನ್‌; ಉನ್ನತ ಮಟ್ಟದ ಅಧಿಕಾರಿಗಳ ಬದಲಾವಣೆ

Indian Paralympic Team
ಕ್ರೀಡೆ3 hours ago

Indian Paralympic Team: ಪದಕ ಬೇಟೆಗೆ ಹೊರಟ ಭಾರತೀಯ ಪ್ಯಾರಾಲಿಂಪಿಕ್ಸ್‌ ತಂಡಕ್ಕೆ ಬೀಳ್ಕೊಡುಗೆ

ICC Women's T20 World Cup
ಕ್ರೀಡೆ3 hours ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್‌ ಆತಿಥ್ಯಕ್ಕೆ ಮುಂದಾದ ಜಿಂಬಾಬ್ವೆ

Union Cabinet meeting
ದೇಶ3 hours ago

Union Cabinet Meeting: 2 ಏರ್‌ಪೋರ್ಟ್‌ ಅಭಿವೃದ್ಧಿ, 3 ಮೆಟ್ರೋ ರೈಲು ಯೋಜನೆಗಳಿಗೆ ಕೇಂದ್ರ ಅಸ್ತು

Money Guide
ಮನಿ-ಗೈಡ್4 hours ago

Money Guide: ಎಸ್‌ಐಪಿ-ಪಿಪಿಎಫ್; ಹಣ ಹೂಡಿಕೆಗೆ ಯಾವುದು ಬೆಸ್ಟ್?

CM Siddaramaiah
ಬೆಂಗಳೂರು4 hours ago

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Shivamogga News
ಕರ್ನಾಟಕ4 hours ago

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌