U19 WOMEN'S T20 WORLD CUP : ನ್ಯೂಜಿಲ್ಯಾಂಡ್​ ಮಣಿಸಿ ಫೈನಲ್​ಗೇರಿದ ಭಾರತದ ವನಿತೆಯರು - Vistara News

ಕ್ರಿಕೆಟ್

U19 WOMEN’S T20 WORLD CUP : ನ್ಯೂಜಿಲ್ಯಾಂಡ್​ ಮಣಿಸಿ ಫೈನಲ್​ಗೇರಿದ ಭಾರತದ ವನಿತೆಯರು

ಭಾರತ 19ರ ವಯೋಮಿತಿಯ ತಂಡ ಉದ್ಘಾಟನಾ ಆವೃತ್ತಿಯ 19 ವಯೋಮಿತಿಯ ವಿಶ್ವ ಕಪ್​ನಲ್ಲಿ (U19 WOMEN’S T20 WORLD CUP) ಪ್ರಶಸ್ತಿ ಸುತ್ತಿಗೇರಿದೆ.

VISTARANEWS.COM


on

Newzeland cricket
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪೊಚೆಫ್​ಸ್ಟ್ರೂಮ್​ (ದಕ್ಷಿಣ ಆಫ್ರಿಕಾ): ಯುವ ಪ್ರತಿಭೆ ಶ್ವೇತಾ ಸೆಹ್ರಾವತ್​ (61) ಅಜೇಯ ಅರ್ಧ ಶತಕದ ನೆರವು ಪಡೆದ ಭಾರತ ತಂಡದ ಉದ್ಘಾಟನಾ ಆವೃತ್ತಿಯ 19ರ ವಯೋಮಿತಿಯ ವನಿತೆಯರ ಟಿ20 ವಿಶ್ವ ಕಪ್​ನಲ್ಲಿ (U19 WOMEN’S T20 WORLD CUP) ನ್ಯೂಜಿಲ್ಯಾಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಫೈನಲ್​ಗೇರಿದೆ. ಬೌಲಿಂಗ್​ ಹಾಗೂ ಬ್ಯಾಟಿಂಗ್​ನಲ್ಲಿ ಸಂಘಟಿತ ಪ್ರದರ್ಶನ ನೀಡಿದ ಭಾರತದ ಆಟಗಾರ್ತಿಯರು ಪ್ರಶಸ್ತಿ ಸನಿಹ ಬಂದು ನಿಂತರು.

ಸೆನ್ವೆಸ್ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್​ ಮಾಡಿದ ನ್ಯೂಜಿಲ್ಯಾಂಡ್​ ಬಳಗ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 107 ರನ್​ ಬಾರಿಸಿತು. ಗುರಿ ಬೆನ್ನಟ್ಟಿದ್ದ ಭಾರತ ತಂಡ ಇನ್ನೂ 34 ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್​ ಕಳೆದುಕೊಂಡು 110 ರನ್​ ಬಾರಿಸಿತು.

ಸಾಧಾರಣ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಭಾರತ ತಂಡ 33 ರನ್​ಗಳಿಗೆ ಮೊದಲ ವಿಕೆಟ್​ ಕಳೆದುಕೊಂಡಿತು. ಶಫಾಲಿ ವರ್ಮಾ 10 ರನ್​ಗಳಿಗೆ ವಿಕೆಟ್​ ಒಪ್ಪಿಸಿದರು. ಆದರೆ, ಶ್ವೇತಾ ಸೆಹ್ರಾವತ್​ ಸ್ಫೋಟಕ ಬ್ಯಾಟಿಂಗ್ ನಡೆಸಿ ಅರ್ಧ ಶತಕ ಬಾರಿಸಿದರು. ಬಳಿಕ ಸೌಮ್ಯ ತಿವಾರಿ 22 ರನ್​ ಕೊಡುಗೆ ಕೊಟ್ಟರೆ, ಗೊಂಗಾಡಿ ತ್ರಿಶಾ ಕೊನೆಯಲ್ಲಿ ಐದು ರನ್​ ಬಾರಿಸಿದರು.

ಇದನ್ನೂ ಓದಿ : IND vs NZ 1st T20: ಭಾರತ-ನ್ಯೂಜಿಲ್ಯಾಂಡ್​ ಮೊದಲ ಟಿ20 ಪಂದ್ಯದ ಪಿಚ್​ ರಿಪೋರ್ಟ್​, ಸಂಭಾವ್ಯ ತಂಡ

ಅದಕ್ಕಿಂತ ಮೊದಲು ಬ್ಯಾಟ್​ ಮಾಡಿದ ನ್ಯೂಜಿಲ್ಯಾಂಡ್ ಬಳಗ ಪಾರ್ಶವಿ ಚೋಪ್ರಾ (20 ರನ್​ಗಳಿಗೆ 3 ವಿಕೆಟ್​) ಅವರ ಮಾರಕ ದಾಳಿಗೆ ತತ್ತರಿಸಿತು. ಜಾರ್ಜಿಯಾ ಪಿಲ್ಮಾರ್​ (35) ನ್ಯೂಜಿಲ್ಯಾಂಡ್​ ತಂಡದ ಪರ ಗರಿಷ್ಠ ಸ್ಕೋರರ್​ ಎನಿಸಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Team India T20 World Cup: 2007ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಕಪ್​ ಗೆದ್ದ ಬಳಿಕ ಇದುವರೆಗೆ ಭಾರತ(Team India) ಕಪ್​ ಗೆದಿಲ್ಲ. 17 ವರ್ಷಗಳ ಬಳಿಕ ಮತ್ತೊಂದು ಕಪ್​ ಗೆಲ್ಲುವ ಇರಾದೆಯೊಂದಿಗೆ ಆಟಗಾರರು ಕಣಕ್ಕಿಳಿಯಲಿದ್ದಾರೆ. ಇದೀಗ ಡ್ರೀಮ್​ ಇಲೆವೆನ್​ನ(Dream11) ಜಾಹೀರಾತೊಂದು ಭಾರೀ ಸದ್ದು ಮಾಡುತ್ತಿದೆ.

VISTARANEWS.COM


on

Team India Dream 11
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಇನ್ನೆರಡು ದಿನಗಳಲ್ಲಿ ಕಾವೇರಲಿದೆ. ಭಾರತ(Team India T20 World Cup) ತನ್ನ ಮೊದಲ ಪಂದ್ಯವನ್ನು ಜೂನ್​ 5ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. 2007ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಕಪ್​ ಗೆದ್ದ ಬಳಿಕ ಇದುವರೆಗೆ ಭಾರತ(Team India) ಕಪ್​ ಗೆದಿಲ್ಲ. 17 ವರ್ಷಗಳ ಬಳಿಕ ಮತ್ತೊಂದು ಕಪ್​ ಗೆಲ್ಲುವ ಇರಾದೆಯೊಂದಿಗೆ ಆಟಗಾರರು ಕಣಕ್ಕಿಳಿಯಲಿದ್ದಾರೆ. ಇದೀಗ ಡ್ರೀಮ್​ ಇಲೆವೆನ್​ನ(Dream11) ಜಾಹೀರಾತೊಂದು ಭಾರೀ ಸದ್ದು ಮಾಡುತ್ತಿದೆ.

ಭಾರತ ತಂಡ ಉತ್ತಮವಾಗಿ ಆಡು ಕಪ್​ ಗೆಲ್ಲಲಿ ಎನ್ನುವ ಪ್ರಧಾನ ಗುರಿಯೊಂದಿಗೆ ಡ್ರೀಮ್​ ಇಲೆವೆನ್​ ಜಾಹೀರಾತೊಂದನ್ನು ಬಿಡುಗಡೆ ಮಾಡಿದೆ. ಇದಲ್ಲಿ ಪುಟ್ಟ ಮಗು ಭಾರತ ತಂಡ ಜೆರ್ಸಿ ತೊಟ್ಟು ತನ್ನ ತಾಯಿಯ ಬಳಿ ನನ್ನ ತಂದೆ, ಸಹೋದರ ಭಾರತ ತಂಡ ವಿಶ್ವಕಪ್​ ಗೆದ್ದಿರುವುದನ್ನು ನೋಡಿದ್ದಾರೆ. ಆದರೆ ನಾನು ಯಾವಾಗ ಈ ಸುಂದರ ಕ್ಷಣವನ್ನು ನೋಡಲು ಸಾಧ್ಯ. ಈ ಬಾರಿ ಖಂಡಿತವಾಗಿಯೂ ನೋಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡುತ್ತಾನೆ. ಈ ವಿಡಿಯೊವನ್ನು ತಾಯಿ ಟೀಮ್​ ಇಂಡಿಯಾದ ಆಟಗಾರರಿಗೆ ತೋರಿಸಿ ನೀವು ಏನು ಮಾಡುತ್ತೀರಾ ಎಂದು ನನಗೆ ತಿಳಿದಿಲ್ಲ ನನ್ನ ಮಗ ಚಿಂಟುವಿನ ಆಸೆಯನ್ನು ಈ ಬಾರಿ ಈಡೇರಿಸಲೇ ಬೇಕೆಂದು ಮಗುವಿನ ತಾಯಿ ಆಟಗಾರರಿಗೆ ಖಡಕ್​ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

ಈ ಬಾರಿಯ ಟೂರ್ನಿಗೆ ಸಿದ್ಧತೆ ಹೇಗಿದೆ ಎಂದು ಕೇಳಿದಾಗ ರೋಹಿತ್​ ನಾವು ಕಠಿಣ ತರಬೇತಿ ಪಡೆಯುತ್ತಿದ್ದೇವೆ ಎನ್ನುತ್ತಾರೆ. ಈ ವೇಳೆ ಚಿಂಟು ತಾಯಿ ನೋಡುತ್ತಿದ್ದೇನೆ ನಿಮ್ಮ ತಯಾರಿಯನ್ನು… ಹೀಗೆ ಅಭ್ಯಾಸ ನಡೆಸಿದರೆ ಕಪ್​ ಗೆಲ್ಲಲು ಸಾಧ್ಯವೇ ಎನ್ನುತ್ತಾರೆ. ಈ ವೇಳೆ ಉಪನಾಯಕ ಹಾರ್ದಿಕ್​ ಪಾಂಡ್ಯ ನೀವು ಆಶೀರ್ವಾದ ಮಾಡಿ ಸಾಕು ಉಳಿದದ್ದು ನಾವು ನೋಡಿಕೊಳ್ಳುತ್ತೇವೆ ಎನ್ನುತ್ತಾರೆ. ನಾವು ವಿಶ್ವದ ನಂ.1 ತಂಡ ಎಂದು ರೋಹಿತ್​ ಹೇಳುತ್ತಾರೆ. ಆಗ ಈ ತಾಯಿ ತಾನು ಈ ವಿಶ್ವದ ನಂ.1 ಮಮ್ಮಿ ಎಂದು ಹೇಳುತ್ತಾರೆ. ಈ ವೇಳೆ ಜಡೇಜಾ ಮಮ್ಮಿಜೀ ಇದು ಕ್ರಿಕೆಟ್​ ಎಂದು ಹೇಳುತ್ತಾರೆ. ಇದಕ್ಕೆ ಮಮ್ಮಿ ಹಾ… ಇದು ಕ್ರಿಕೆಟ್..​ ಬ್ಯಾಟ್​, ವಿಕೆಟ್​ ಮತ್ತು ಚೆಂಡು ತಂದು ಅಭ್ಯಾಸ ಆರಂಭಿಸಿ ಎಂದು ಹೇಳುವ ಮೂಲಕ ಕೋಚಿಂಗ್​ ಮಾಡುತ್ತಾರೆ.

ಈ ವಿಡಿಯೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡು, ವಿಶ್ವಕಪ್‌ಗಳು ಅಭಿಮಾನಿಗಳ ಶಕ್ತಿಯ ಜತೆಗೆ ಈ ಬಾರಿ ತಾಯಂದಿರ ಹರ್ಷೋದ್ಗಾರ ಜೋರಾಗಿರಲಿವೆ. ‘ಮಮ್ಮಿ ಕೆ ಮ್ಯಾಜಿಕ್ ಕೆ ಸಾಥ್'(ತಾಯಿಯ ವಿಶೇಷ ಬೆಂಬಲದೊಂದಿಗೆ) ಟೀಮ್​ ಇಂಡಿಯಾ ವಿಶ್ವಕಪ್​ ಗೆಲ್ಲಲು ಸಜ್ಜಾಗಿದೆ ಎಂದು ಬರೆದುಕೊಂಡಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರಿಕೆಟ್

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

T20 World Cup 2007: ಭಾರತ ಪರ ಬೌಲಿಂಗ್​ನಲ್ಲಿ ಇರ್ಫಾನ್​ ಪಠಾಣ್​ (16 ಕ್ಕೆ 3), ಆರ್​.ಪಿ ಸಿಂಗ್​(24ಕ್ಕೆ 3), ಜೋಗಿಂದರ್ ಶರ್ಮಾ(20ಕ್ಕೆ 2) ವಿಕೆಟ್​ ಕಿತ್ತು ಮಿಂಚಿದ್ದರು.

VISTARANEWS.COM


on

T20 World Cup 2007
Koo

ಬೆಂಗಳೂರು: ಟಿ20 ಎಂಬ ಚುಟುಕು ಮಾದರಿಯ ಮೊದಲ ವಿಶ್ವಕಪ್(ICC World T20 2007) ಗೆದ್ದ ದಾಖಲೆ ಭಾರತ ತಂಡದ ಹೆಸರಿನಲ್ಲಿದೆ. 2007 ಸೆ. 24ರಂದು(T20 World Cup 2007) ಮಹೇಂದ್ರ ಸಿಂಗ್ ಧೋನಿ(ms dhoni) ನೇತೃತ್ವದ ಯುವ ಭಾರತ ತಂಡ ವಿಶ್ವಕಪ್ ಗೆದ್ದು ಬೀಗಿತ್ತು. ದುರಾದೃಷ್ಟವೆಂದರೆ ಆ ಬಳಿಕ ಭಾರತ ಇದುವರೆಗೂ ಒಂದೂ ಟ್ರೋಫಿ ಗೆದ್ದಿಲ್ಲ. ಇದೀಗ 17 ವರ್ಷಗಳ ಬಳಿಕ ಭಾರತ ಕಪ್​ ಗೆದ್ದು ಬೀಗೀತೇ ಎಂದು ಕಾದು ನೋಡಬೇಕಿದೆ. ಚೊಚ್ಚಲ ಟಿ20 ವಿಶ್ವಕಪ್​ ಫೈನಲ್​ನ ಮೆಲುಕು ನೋಟ ಇಂತಿದೆ.

ಅದು, ವೆಸ್ಟ್‌ ಇಂಡೀಸ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡವು ಹೀನಾಯವಾಗಿ ಸೋಲು ಕಂಡ ವರ್ಷವಾಗಿತ್ತು. ಈ ಸೋಲಿನಿಂದ ಕಂಗೆಟ್ಟಿದ್ದ ಸಚಿನ್​ ತೆಂಡೂಲ್ಕರ್​, ರಾಹುಲ್​ ದ್ರಾವಿಡ್​, ಸೌರವ್​ ಗಂಗೂಲಿ ಸೇರಿ ಖ್ಯಾತನಾಮ ಆಟಗಾರರು ಈ ಟೂರ್ನಿಯಲ್ಲಿ ಆಡಲು ಹಿಂದೇಟು ಹಾಕಿದರು. ಎಲ್ಲರು ವಿಶ್ರಾಂತಿ ಬಯಸಿದರು. ದಿಕ್ಕು ತೋಚದೆ ಬಿಸಿಸಿಐ ಆಗಿದ್ದಾಗಲಿ ಎಂದು ವಿಕೆಟ್‌ಕೀಪರ್ ಧೋನಿಗೆ ನಾಯಕತ್ವ ನೀಡಿ ಯುವ ಪಡೆಯನ್ನು ಕಣಕ್ಕಿಳಿಸಿತು. ಧೋನಿ ನೇತೃತ್ವದ ಯುವಪಡೆ ತಮ್ಮ ಮೊದಲ ಪ್ರಯತ್ನದಲೇ ಕಪ್​ ಗೆದ್ದು ಇತಿಹಾಸ ಸೃಷ್ಟಿಸಿತ್ತು.

ಹಲವು ಅಚ್ಚರಿ


ಕೂಟದಲ್ಲಿ ಹಲವು ಅಚ್ಚರಿಗಳಿಗೆ ಕಾರಣವಾಗಿ ಭಾರತ ತಂಡ ಫೈನಲ್ ಪ್ರವೇಶ ಪಡೆದಿತ್ತು. ಲೀಗ್ ಹಂತದಲ್ಲಿ ಪಾಕಿಸ್ತಾನ ವಿರುದ್ಧ ಬಾಲ್ ಔಟ್ ಮುಖಾಂತರ ಜಯ ಸಾಧಿಸಿದ್ದ ಭಾರತ ಮತ್ತೊಂದು ಹೈ ವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿತ್ತು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 157 ರನ್ ಗಳಿಸಿತು. ಗೌತಮ್ ಗಂಭೀರ್ 75 ರನ್ ಗಳಿಸಿದ್ದರೆ, ರೋಹಿತ್ ಶರ್ಮಾ 30 ರನ್ ಕೊಡುಗೆ ನೀಡಿದ್ದರು. ಉಳಿದ ಯಾರಿಂದಲೂ ಹೇಳಿಕೊಳ್ಳುವ ಪ್ರದರ್ಶನ ತಂಡಕ್ಕೆ ಸಿಗಲಿಲ್ಲ. ಪಾಕ್ ಪರ ಉಮರ್ ಗುಲ್ ಮೂರು ವಿಕೆಟ್ ಕಿತ್ತಿದ್ದರು.

ಇದನ್ನೂ ಓದಿ T20 World Cup 2024: ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳು ಯಾರು?

ಸಾಧಾರಣ ಗುರಿ ಬೆನ್ನತ್ತಿದ್ದ ಪಾಕ್​ ಓಂದೆಡೆ ವಿಕೆಟ್ ಬೀಳುತ್ತಿದ್ದರೂ ಮಿಸ್ಬಾ ಉಲ್ ಹಕ್ ನಿಂತು ಆಡುತ್ತಿದ್ದರು. ಕೊನೆಯ ಓವರ್ ನಲ್ಲಿ 13 ರನ್ ಬೇಕಾಗಿತ್ತು. ಕೈಯಲ್ಲಿ ಇದ್ದಿದ್ದು ಒಂದು ವಿಕೆಟ್. ಜೋಗಿಂದರ್ ಶರ್ಮಾರ ಎರಡನೇ ಎಸೆತವನ್ನು ಸಿಕ್ಸರ್​ಗೆ ಅಟ್ಟಿದ ಮಿಸ್ಬಾ ಮೂರನೇ ಎಸೆತವನ್ನು ಫೈನ್ ಲೆಗ್​ಗೆ ಸ್ಕೂಪ್ ಮಾಡಿದ್ದರು. ಆದರೆ ಚೆಂಡು ಶ್ರೀಶಾಂತ್ ಕೈ ಸೇರಿತ್ತು. ಪಾಕಿಸ್ತಾನ ಆಲ್​ಔಟ್​ ಆಯಿತು. ಭಾರತ ಕೇವಲ 5 ರನ್​ ಅಂತರದಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು. ಇಲ್ಲಿದ ಧೋನಿ ಯುವ ಕೂಡ ಆರಂಭವಾಯಿತು. ಭಾರತ ಪರ ಬೌಲಿಂಗ್​ನಲ್ಲಿ ಇರ್ಫಾನ್​ ಪಠಾಣ್​ (16 ಕ್ಕೆ 3), ಆರ್​.ಪಿ ಸಿಂಗ್​(24ಕ್ಕೆ 3), ಜೋಗಿಂದರ್ ಶರ್ಮಾ(20ಕ್ಕೆ 2) ವಿಕೆಟ್​ ಕಿತ್ತು ಮಿಂಚಿದ್ದರು.

Continue Reading

ಕ್ರೀಡೆ

T20 World Cup 2024: ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳು ಯಾರು?

T20 World Cup 2024: ಈ ಬಾರಿಯ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಲೀಗ್​ ಪಂದ್ಯಗಳು ಜೂನ್​ 1ರಿಂದ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ. ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು 2 ದಿನ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಟೂರ್ನಿಯಲ್ಲಿ ದಾಖಲಾದ ಹಲವು ದಾಖಲೆಗಳನ್ನು ಮೆಲುಕು ಹಾಕಲಾಗಿದೆ. ಇದೀಗ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳು ಯಾರೆಂಬ ಮಾಹಿತಿ ಇಂತಿದೆ.

ವಿರಾಟ್​ ಕೊಹ್ಲಿ


ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. 2014ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಕೊಹ್ಲಿ 319 ರನ್​ ಬಾರಿಸಿದ್ದರು. 2022ರಲ್ಲಿಯೂ ಕೊಹ್ಲಿ 296 ರನ್​ ಬಾರಿಸಿದ್ದರು. 2 ಬಾರಿ ಟೂರ್ನಿಯೊಂದರಲ್ಲಿ ಗರಿಷ್ಠ ರನ್​ ಗಳಿಸಿದ ದಾಖಲೆಯೂ ಅವರ ಹೆಸರಿನಲ್ಲಿದೆ. ಸದ್ಯ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ಕೊಹ್ಲಿ ಈ ಬಾರಿಯೂ ಸ್ಫೋಟಕ ಬ್ಯಾಟಿಂಗ್​ ನಡೆಸುವ ಸಾಧ್ಯತೆ ಇದೆ. ಕೆಲವು ದಿನಗಳ ಹಿಂದೆ ಮುಕ್ತಾಯ ಕಂಡಿದ್ದ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಕೊಹ್ಲಿ 700 ರನ್​ಗಳ ಗಡಿ ದಾಟಿ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎಂದೆನಿಸಿದ್ದರು.

ತಿಲಕರತ್ನೆ ದಿಲ್ಶನ್


ಶ್ರೀಲಂಕಾ ಕ್ರಿಕೆಟ್​ ತಂಡದ ಮಾಜಿ ಆರಂಭಿಕ ಆಟಗಾರ ತಿಲಕರತ್ನೆ ದಿಲ್ಶನ್ ಅವರು ಟಿ20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳ ಯಾದಿಯಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ. 2009ರಲ್ಲಿ ತಿಲಕರತ್ನೆ ದಿಲ್ಶನ್ 317 ರನ್​ ಬಾರಿಸಿದ್ದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು ಯಾರು?


ಬಾಬರ್​ ಅಜಂ


ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ ಅವರು 2021ರಲ್ಲಿ ದುಬೈನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ 303 ರನ್​ ಬಾರಿಸಿದ್ದರು. ಟಿ20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದ್ದಾರೆ. ಪ್ರಸಕ್ತ ಟೂರ್ನಿಯಲ್ಲಿಯೂ ಆಡುತ್ತಿರುವ ಅವರಿಗೆ ಈ ದಾಖಲೆಯನ್ನು ಮತ್ತೆ ತಿದ್ದಿ ಬರೆಯುವ ಅವಕಾಶವಿದೆ.


ಮಹೇಲಾ ಜಯವರ್ಧನೆ


ಟಿ20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳ ಯಾದಿಯಲ್ಲಿ ಶ್ರೀಲಂಕಾ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಲಾ ಜಯವರ್ಧನೆ ನಾಲ್ಕನೇ ಸ್ಥಾನಿಯಾಗಿದ್ದಾರೆ. ಅವರು 2010ರಲ್ಲಿ ನಡೆದಿದ್ದ ಟೂರ್ನಿಯಲ್ಲಿ 302 ರನ್​ ಬಾರಿಸಿದ್ದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

ಈ ಬಾರಿಯ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಲೀಗ್​ ಪಂದ್ಯಗಳು ಜೂನ್​ 1ರಿಂದ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ. ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ.

Continue Reading

ಕ್ರೀಡೆ

IND vs PAK: ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ; ಭಾರತ-ಪಾಕ್​ ಪಂದ್ಯಕ್ಕೆ ಭಾರೀ ಭದ್ರತಾ ವ್ಯವಸ್ಥೆ

IND vs PAK: ಇತ್ತಂಡಗಳ ನಡುವೆ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ನಲ್ಲಿ ಪಂದ್ಯ ನಡೆಯಲಿದೆ. ಇದೇ ವೇಳೆ ಡ್ರೋನ್ ದಾಳಿ ನಡೆಸುವ ಸಾಧ್ಯತೆ ಕಂಡುಬಂದಿದೆ. ಹೀಗಾಗಿ ಪಂದ್ಯ ನಡೆಯುವ ಕ್ರೀಡಾಂಗಣದ ಸುತ್ತ ‘ನೊ-ಫ್ಲೈ ಝೋನ್’ ಎಂದು ಘೋಷಿಸುವಂತೆ ನ್ಯೂಯಾರ್ಕ್ ಪೊಲೀಸ್ ಯುಎಸ್​ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್‌ಗೆ ವಿನಂತಿಸಿದೆ

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಜೂನ್​ 9ರಂದು ನಡೆಯಲಿರುವ ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಪಂದ್ಯಕ್ಕೆ ಉಗ್ರರಿಂದ ದಾಳಿಯ ಬೆದರಿಕೆ ಬಂದಿರುವ ಕಾರಣ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳಲಾಗಿದೆ ಎಂದು ನ್ಯೂಯಾರ್ಕ್‌ನ ಗವರ್ನರ್‌ ಕ್ಯಾಥಿ ಹೊಚುಲ್‌(New York Governor Kathy Hochul) ತಿಳಿಸಿದ್ದಾರೆ.

ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಇತ್ತಂಡಗಳ ನಡುವೆ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ನಲ್ಲಿ ಪಂದ್ಯ ನಡೆಯಲಿದೆ. ಇದೇ ವೇಳೆ ಡ್ರೋನ್ ದಾಳಿ ನಡೆಸುವ ಸಾಧ್ಯತೆ ಕಂಡುಬಂದಿದೆ. ಹೀಗಾಗಿ ಪಂದ್ಯ ನಡೆಯುವ ಕ್ರೀಡಾಂಗಣದ ಸುತ್ತ ‘ನೊ-ಫ್ಲೈ ಝೋನ್’ ಎಂದು ಘೋಷಿಸುವಂತೆ ನ್ಯೂಯಾರ್ಕ್ ಪೊಲೀಸ್ ಯುಎಸ್​ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್‌ಗೆ ವಿನಂತಿಸಿದೆ. ಈ ಮೂಲಕ ಉಗ್ರರ ದಾಳಿ ಮೇಲೆ ಕಣ್ಣಿಡಲು ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್​ಗೆ ಮನವಿ ಮಾಡಲಾಗಿದೆ.

“ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಪಂದ್ಯಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾನೂನು ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇನೆ” ಎಂದು ನ್ಯೂಯಾರ್ಕ್‌ನ ಗವರ್ನರ್‌ ಕ್ಯಾಥಿ ಹೊಚುಲ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸುಧಾರಿತ ಕಣ್ಗಾವಲು ಮತ್ತು ಸಂಪೂರ್ಣ ಸ್ಕ್ರೀನಿಂಗ್ ಪ್ರಕ್ರಿಯೆಗಳು ಸೇರಿದಂತೆ ಉನ್ನತ ಭದ್ರತಾ ಕ್ರಮಗಳಲ್ಲಿ ತೊಡಗಿಸಿಕೊಳ್ಳಲು ನಾನು ನ್ಯೂಯಾರ್ಕ್ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೊಚುಲ್‌ ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್)ನಿಂದ ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಪಂದ್ಯಗಳಿಗೆ ದಾಳಿಯ ಬೆದರಿಕೆಯೊಂದು ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ  ವೆಸ್ಟ್​ ಇಂಡೀಸ್​ ಕ್ರಿಕೆಟ್​ ಮಂಡಳಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿತ್ತು.  ಕೆನ್ಸಿಂಗ್ಟನ್ ಓವಲ್(Kensington Oval Cricket Ground) ಕ್ರಿಕೆಟ್ ಮೈದಾನ, ಬಾರ್ಬಡೋಸ್​ನಲ್ಲಿ(Barbados) ಭದ್ರತಾ ಸಿಬ್ಬಂದಿಗಳು ಅಣುಕು ಪ್ರದರ್ಶನ ಮಾಡುತ್ತಿರುವ ಫೋಟೊ ಕೂಡ ವೈರಲ್​ ಆಗಿತ್ತು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading
Advertisement
Agnikul Cosmos
ತಂತ್ರಜ್ಞಾನ6 mins ago

Agnikul Cosmos: ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿದ ಸ್ಟಾರ್ಟ್ ಅಪ್ ಕಂಪನಿ ಅಗ್ನಿಕುಲ್ ಕಾಸ್ಮೋಸ್; ಮೋದಿ ಅಭಿನಂದನೆ

PM Modi
Lok Sabha Election 202410 mins ago

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

Love Case in vijayapura
ವಿಜಯಪುರ20 mins ago

Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

Kantara Movie Mollywood actor enters
ಸಿನಿಮಾ24 mins ago

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Singapore Open
ಕ್ರೀಡೆ25 mins ago

Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

prajwalrevanna case hassan protest
ಕ್ರೈಂ39 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧಿಸಲು ಆಗ್ರಹಿಸಿ ಹಾಸನದಲ್ಲಿ ಬೃಹತ್‌ ಪ್ರತಿಭಟನೆ

PM Narendra Modi
ದೇಶ43 mins ago

PM Narendra Modi: ಪ್ರಧಾನಿ ಮೋದಿ ಸ್ಪರ್ಧೆ ಅನರ್ಹತೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

Assault Case
ಧಾರವಾಡ2 hours ago

Assault Case : ಆಸ್ತಿ ವಿಚಾರಕ್ಕೆ ಕಿರಿಕ್‌; ನಡುರಸ್ತೆಯಲ್ಲಿ ಯುವತಿಯನ್ನು ಮನಸೋ ಇಚ್ಛೆ ಥಳಿಸಿದ ಗ್ರಾಪಂ ಸದಸ್ಯ

Assault Case in Shivamogga
ಕ್ರೈಂ2 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Team India Dream 11
ಕ್ರಿಕೆಟ್2 hours ago

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌