Site icon Vistara News

ICC World Cup 2023 : ಆಸ್ಟ್ರೇಲಿಯಾ ವಿರುದ್ಧ ಪರದಾಡಿದ ಭಾರತದ ಬ್ಯಾಟರ್​​ಗಳು

KL Rahul 1

ಅಹಮದಾಬಾದ್​​: ವಿಶ್ವ ಕಪ್​ ಫೈನಲ್​ನಲ್ಲಿ (ICC World Cup 2023) ಭಾರತ ತಂಡದ ಬ್ಯಾಟರ್​ಗಳು ಪರದಾಟ ನಡೆಸಿದ್ದಾರೆ. ಟಾಸ್​ ಸೋತು ಮೊದಲು ಬ್ಯಾಟ್​ ಮಾಡಲು ಆಹ್ವಾನ ಪಡೆದ ಭಾರತ ತಂಡದ ಆರಂಭದಲ್ಲಿ ವೇಗದ ರನ್​ ಗಳಿಕೆಗೆ ಯತ್ನಿಸಿದರೂ ಬಳಿಕ ಸತತವಾಗಿ ವಿಕೆಟ್​ ಕಳೆದುಕೊಂಡಿತು. ಹೀಗಾಗಿ ದೊಡ್ಡ ಮೊತ್ತದ ಗುರಿಯೊಂದಿಗೆ ಆಡಿದ ಭಾರತ ತಂಡಕ್ಕೆ ಹಿನ್ನಡೆ ಉಂಟಾಯಿತು.

ಭಾರತ ತಂಡ ಮೊದಲ 39 ಎಸೆತಗಳಿಗೆ 50 ರನ್ ಬಾರಿಸಿತ್ತು. ಹೀಗಾಗಿ ದೊಡ್ಡ ಮೊತ್ತ ಗ್ಯಾರಂಟಿ ಎಂದು ನಂಬಲಾಗಿತ್ತು. ಆದರೆ ಅದಕ್ಕಿಂತ ಮೊದಲೇ ಶುಭ್​ಮನ್​ ಗಿಲ್​ 4 ರನ್ ಬಾರಿಸಿ ಔಟಾಗಿದ್ದರು. ಈ ವೇಳೆ ವಿರಾಟ್ ಕೊಹ್ಲಿಯೂ ರನ್​ ಗತಿ ಇಳಿಕೆಯಾಗದಂತೆ ನೋಡಿಕೊಂಡಿತು. ಆದರೆ, ನಂತರ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಲು ಮುಂದಾದ ರೋಹಿತ್​ ಶರ್ಮಾ 47 ರನ್​ಗಳಿಗೆ ಔಟಾದರು. ಅವರು 31 ಎಸೆತಗಳಿಗೆ 47 ರನ್ ಬಾರಿಸಿದ್ದರು. ಆದರೆ, ಆ ಬಳಿಕ ಬ್ಯಾಟ್ ಮಾಡಲು ಬಂದ ಶ್ರೇಯಸ್​ ಅಯ್ಯರ್​​ 4 ರನ್​ ಗೆ ಔಟಾದರು. ಅವರು ಅದಕ್ಕಿಂತ ಮೊದಲು ಅವರು ಒಂದು ಫೋರ್ ಬಾರಿಸಿದ್ದರು.

ರಾಹುಲ್​- ಕೊಹ್ಲಿ ಮೇಲೆ ಒತ್ತಡ

ಮೊದಲ ಮೂರು ವಿಕೆಟ್​​ಗಳು 81 ರನ್​ಗೆ ಪತನಗೊಂಡ ಕಾರಣ ಭಾರತ ತಂಡದ ಮೇಲೆ ಒತ್ತಡ ಬಿತ್ತು. ಮಾಜಿ ನಾಯಕ ವಿರಾಟ್​ ಕೊಹ್ಲಿ ಹಾಗೂ ವಿಕೆಟ್​ ಕೀಪರ್​ ಕೆ. ಎಲ್ ರಾಹುಲ್ ಮೇಲೆ ಇನಿಂಗ್ಸ್ ಕಟ್ಟುವ ಜವಾಬ್ದಾರಿ ಬಿತ್ತು. ಬಲಿಕ ಅವರಿಬ್ಬರು 67 ರನ್​ಗಳ ಜತೆಯಾಟವಾಡಿದರು. ಈ ವೇಳೆ ಭಾರತ ತಂಡದ ರನ್ ಗಳಿಕೆ ಕುಸಿತಗೊಂಡಿತ್ತು. 11 ಓವರ್​ಗಳ ಒಳಗೆ ಮೂರು ವಿಕೆಟ್​ ನಷ್ಟ ಮಾಡಿಕೊಂಡಿದ್ದರಿಂದ ವಿಕೆಟ್​ ಕಾಪಾಡುವುದು ಈ ಬ್ಯಾಟರ್​​ಗಲಳ ಪಾಳಿಗೆ ದೊಡ್ಡ ಸವಾಲಾಯಿತು. ಇವರಿಬ್ಬರ ಜತೆಯಾಟದ ವೇಳೆ ಸಿಂಗಲ್ ರನ್​ಗಳೇ ಹೆಚ್ಚು ಗಳಿಕೆಯಾಯಿತು.

ಏತನ್ಮಧ್ಯೆ ವಿರಾಟ್​ ಕೊಹ್ಲಿಯ ವಿಕೆಟ್ ದುರದೃಷ್ಟಕರವಾಗಿ ನಷ್ಟವಾಯಿತು. ಆಸೀಸ್​ ನಾಯಕ ಪ್ಯಾಟ್​ ಕಮಿನ್ಸ್ ಅವರ ಎಸೆತವನ್ನು ರಕ್ಷಿಸಲು ಮುಂದಾದ ಅವರು ಇನ್​ಸೈಡ್ ಎಜ್​ ಆಗಿ ಬೌಲ್ಡ್ ಆದರು. ಈ ವೇಳೆ ತಂಡಕ್ಕೆ ಮತ್ತೊಂದು ಆಘಾತ ಎದುರಾಯಿತು. ಯಾಕೆಂದರೆ ಮುಂದೆ ಆಡಲು ಬಂದ ರವೀಂದ್ರ ಜಡೇಜಾ 9 ರನ್​ಗಳಿಗೆ ಔಟ್ ಆದರು.

ಈ ರನ್ ಸಾಕೇ?

ಎರಡನೇ ಇನಿಂಗ್ಸ್ ವೇಳೆ ಇಬ್ಬನಿ ಪರಿಣಾಮ ಇರುತ್ತದೆ. ಬೌಲಿಂಗ್ ಮಾಡಲು ಕಷ್ಟ ಎಂಬ ಕಾರಣಕ್ಕೆ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮೊದಲು ಫೀಲ್ಡಿಂಗ್ ಮಾಡಿದ್ದರು. ಹೀಗಾಗಿ 250 ರನ್​ಗಳಿಗಿಂತ ಕಡಿಮೆ ಮೊತ್ತ ಗೆಲುವಿಗೆ ಸಾಕಾಗಉತ್ತದೆಯೇ ಎಂಬ ಪ್ರಶ್ನೆ ಎದ್ದಿದೆ. ಭಾರತ ತಂಡ 270ಕ್ಕಿಂತ ಹೆಚ್ಚು ರನ್ ಮಾಡಿದರೆ ಗೆಲುವು ಪಡೆಯು ಸಾಧ್ಯತೆಗಳು ಇವೆ. ಕ್ರಿಕೆಟ್​ ಪಂಡಿತರ ವಿಶ್ಲೇಷಣೆ ಪ್ರಕಾರ ಪಿಚ್​ ಸ್ವಲ್ಪ ನಿಧಾನಗತಿಯಲ್ಲಿದೆ. ನಿರೀಕ್ಷಿತ ಮಟ್ಟದಲ್ಲಿ ಬೌಂಡರಿ ಸಿಕ್ಸರ್​ಗಳನ್ನು ಹೊಡೆಯಲು ಸಾಧ್ಯವಿಲ್ಲ. ಹಾಗಾದರೆ 250ಕ್ಕಿಂತ ಹೆಚ್ಚಿನ ರನ್​ ದಾಟುವುದು ಆಸೀಸ್​ ಪಾಲಿಗೆ ಸವಾಲಾಗಬಹುದು. ಆದರೆ ಭಾರತ ತಂಡ ಅಷ್ಟೊಂದು ದೊಡ್ಡ ಮೊತ್ತ ಪೇರಿಸುವುದೇ ಎಂಬುದು ಅಭಿಮಾನಿಗಳ ಪಾಲಿಗೆ ಕೌತುಕದ ವಿಷಯ.

Exit mobile version