INDvsWI: ಭಾರತ-ವಿಂಡೀಸ್‌ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ - Vistara News

ಕ್ರಿಕೆಟ್

INDvsWI: ಭಾರತ-ವಿಂಡೀಸ್‌ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಜುಲೈ-ಆಗಸ್ಟ್‌ ತಿಂಗಳಲ್ಲಿ ನಡೆಯುವ ಭಾರತ ಮತ್ತು ವೆಸ್ಟ್​ ಇಂಡೀಸ್​ ವಿರುದ್ಧದ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿಯೊಂದು ಪ್ರಕಟಗೊಂಡಿದೆ.

VISTARANEWS.COM


on

India vs West Indies Schedule
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪೋರ್ಟ್‌ ಆಫ್ ಸ್ಪೇನ್‌: ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಮುಕ್ತಾಯದ ಬಳಿಕ ಟೀಮ್​ ಇಂಡಿಯಾ ವೆಸ್ಟ್‌ ಇಂಡೀಸ್‌ಗೆ ಪ್ರವಾಸ ಕೈಗೊಳ್ಳಲಿದೆ. ಜುಲೈ-ಆಗಸ್ಟ್‌ ತಿಂಗಳಲ್ಲಿ ನಡೆಯುವ ಉಭಯ ತಂಡಗಳ ಸರಣಿಯ ತಾತ್ಕಾಲಿಕ ವೇಳಾಪಟ್ಟಿಯೊಂದು ಪ್ರಕಟಗೊಂಡಿದೆ. ಸದ್ಯ ಬಿಸಿಸಿಐಯಿಂದ ಒಪ್ಪಿಗೆ ಸಿಗುವುದೊಂದೆ ಬಾಕಿ ಉಳಿದಿದೆ. ಅನಂತರ ವೇಳಾಪಟ್ಟಿ ಅಧಿಕೃತಗೊಳ್ಳಲಿದೆ.

ಇತ್ತಂಡಗಳ ಕ್ರಿಕೆಟ್​ ಸರಣಿಯಲ್ಲಿ 2 ಟೆಸ್ಟ್‌, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಾಗುವುದು. ಹೆಚ್ಚುರಿಯಾಗಿ 2 ಟಿ20 ಪಂದ್ಯಗಳನ್ನು ಅಮೆರಿಕದ ಫ್ಲೋರಿಡಾದಲ್ಲಿ ಆಡುವ ಸಾಧ್ಯತೆ ಇದೆ. ಆದರೆ ಇದು ಅಧಿಕೃತಗೊಂಡಿಲ್ಲ. ಪ್ರಸಕ್ತ ಸಾಗುತ್ತಿರುವ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ ಫೈನಲ್​ ವೇಳೆ ಬಿಸಿಸಿಐ ಮತ್ತು “ಕ್ರಿಕೆಟ್‌ ವೆಸ್ಟ್‌ ಇಂಡೀಸ್‌’ನ ವರಿಷ್ಠರು ಮಾತುಕತೆ ನಡೆಸಿ ವೇಳಾಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಇದೇ ಕಾರಣಕ್ಕೆ ವಿಂಡೀಸ್​ ಕ್ರಿಕೆಟ್​ ಮಂಡಳಿಯ ಸದಸ್ಯರು ಲಂಡನ್​ನ ಓವಲ್​ಗೆ ಆಗಮಿಸಿದ್ದಾರೆ.

ಸದ್ಯದ ವೇಳಾಪಟ್ಟಿಯ ಪ್ರಕಾರ ಟೆಸ್ಟ್‌ ಪಂದ್ಯಗಳು ಡೊಮಿನಿಕಾ (ಜು. 12-16) ಮತ್ತು ಟ್ರಿನಿಡಾಡ್‌ನ‌ಲ್ಲಿ (ಜು. 20-24) ನಡೆಯಲಿವೆ. ಏಕದಿನ ಪಂದ್ಯಗಳು ಬಾರ್ಬಡಾಸ್‌ (ಜು. 27, 29) ಮತ್ತು ಟ್ರಿನಿಡಾಡ್‌ (ಆ. 1). ಟಿ20 ಪಂದ್ಯಗಳನ್ನು ಟ್ರಿನಿಡಾಡ್‌ (ಆ. 4) ಮತ್ತು ಗಯಾನಾದಲ್ಲಿ (ಆ. 6, ಆ. 8) ಆಡಲಾಗುವುದು ಎಂದು ಹೇಳಲಾಗಿದೆ. ಆದರೆ ಅಂತಿಮ ವೇಳಾಪಟ್ಟಿ ಬಿಡುಗಡೆಗೊಂಡ ಬಳಿಕ ಇದರಲ್ಲಿ ಸಣ್ಣ ಪುಟ್ಟ ಬದಲಾವಣೆ ಕಂಡುಬರುವ ಸಾಧ್ಯೆತೆ ಇದೆ.

ಇದನ್ನೂ ಓದಿ WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವ ಕಪ್​ ದೃಷ್ಟಿಯಲ್ಲಿ ಭಾರತಕ್ಕೆ ಈ ಸರಣಿ ಮಹತ್ವದ್ದಾಗಿದೆ. ಏಕೆಂದರೆ ತಂಡ ಸಂಯೋಜನೆಗೆ ಇದು ಉತ್ತಮ ಅವಕಾಶವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ಕಳೆದ ಗುಜರಾತ್(Gujarat Titans)​ ನಡುವಣ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಚಹಲ್​ ಅವರು ಐಪಿಎಲ್​ನಲ್ಲಿ 150 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದರು. ಇದುವರೆಗೆ 151 ಐಪಿಎಲ್​ ಪಂದ್ಯಗಳನ್ನಾಡಿರುವ ಚಹಲ್​ 198 ವಿಕೆಟ್​ ಕಿತ್ತು ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎಂದ ದಾಖಲೆ ಬರೆದಿದ್ದಾರೆ.

VISTARANEWS.COM


on

Koo

ಕೋಲ್ಕತ್ತಾ: ಟೀಮ್​ ಇಂಡಿಯಾದ ಆಟಗಾರ ಯಜುವೇಂದ್ರ ಚಹಲ್(Yuzvendra Chahal)​ ಅವರು ಮೈದಾನದಲ್ಲಿ ಆಗಾಗ ಚೇಷ್ಟೆ ಮಾಡುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುತ್ತದೆ. ಅಂಪೈರ್​, ಎದುರಾಳಿ ಆಟಗಾರನ್ನು ತಮ್ಮ ಕುಚೇಷ್ಟೆ(yuzvendra chahal funny videos) ಮೂಲಕ ನಗಿಸುತ್ತಿರುತ್ತಾರೆ. ಇದೀಗ(IPL 2024) ವಿಮಾನದಲ್ಲಿ ಪೈಲೆಟ್​ಗಳ ಜತೆ ಮಾಡಿದ ಚೇಷ್ಟೆಯೊಂದರ ವಿಡಿಯೊ ವೈರಲ್(viral video)​ ಆಗಿದೆ.

ಐಪಿಎಲ್​ನಲ್ಲಿ ಇಂದು ರಾಜಸ್ಥಾನ್(Rajasthan Royals) ತಂಡ ಕೆಕೆಆರ್​ ವಿರುದ್ಧ ಆಡಲಿಳಿದೆ. ಈ ಪಂದ್ಯ ಐತಿಹಾಸಿಕ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಈ ಪಂದ್ಯವನ್ನಾಡಲು ಆಟಗಾರರೊಂದಿಗೆ ಕೋಲ್ಕತ್ತಾಕ್ಕೆ ತೆರಳುವ ವೇಳೆ ಚಹಲ್​ ಅವರು ಪೈಲೆಟ್​ಗಳ ಕೊಠಡಿಗೆ ತೆರಳಿ ಅವರಿಗೆ ಚಮಕ್​ ನೀಡಿದ್ದಾರೆ. ಇಂದು ನನ್ನ ಇಬ್ಬರು ಸಹೋದರ ಪೈಲೆಟ್​ಗಳು ವಿಮಾನ ಚಲಾಯಿಸಲಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಪೈಲೆಟ್​ಗಳು ಕೂಡ ಯೋ ಯೋ ಕೈ ಬೆರಳಿನ ಮೂಲಕ ಚಿಯರ್​ ಅಪ್​ ಮಾಡಿದ್ದಾರೆ. ಈ ವಿಡಿಯೊವನ್ನು ರಾಜಸ್ಥಾನ್​ ರಾಯಲ್ಸ್​ ತನ್ನ ಅಧಿಕೃತ ಟ್ವಿಟರ್​ನಲ್ಲಿ ಹಂಚಿಕೊಂಡು ‘ಇದು ನಿಮ್ಮ ಕ್ಯಾಪ್ಟನ್ ಹಾಡುಗಾರಿಕೆ’ ಎಂದು ಬರೆದುಕೊಂಡು ಹಿಂದಿ ಸಿನೆಮಾದ ಹಾಡೊಂದನ್ನು ಹಾಕಿದೆ. ಜತೆಗೆ ಚಹಲ್​ ಅವರ ಮುಖದ ಚಿತ್ರವನ್ನು ಎಡಿಟ್​ ಮಾಡಿ ವಿಮಾನ ಚಲಾಯಿಸಿದಂತೆ ತೋರಿಸಿದೆ. ಈ ವಿಡಿಯೊ ವೈರಲ್​ ಆಗಿದೆ.

ಕಳೆದ ಆವೃತ್ತಿಯಲ್ಲಿ ಜೋ ರೂಟ್​ ಅವರ ಟ್ರಾಲಿ ಬ್ಯಾಗ್​ನಲ್ಲಿ ಕುಳಿತು ಜಾಲಿ ರೈಡ್​ ಮಾಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಕಳೆದ ಗುಜರಾತ್(Gujarat Titans)​ ನಡುವಣ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಚಹಲ್​ ಅವರು ಐಪಿಎಲ್​ನಲ್ಲಿ 150 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದರು. ಇದುವರೆಗೆ 151 ಐಪಿಎಲ್​ ಪಂದ್ಯಗಳನ್ನಾಡಿರುವ ಚಹಲ್​ 198 ವಿಕೆಟ್​ ಕಿತ್ತು ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎಂದ ದಾಖಲೆ ಬರೆದಿದ್ದಾರೆ. ಇನ್ನೆರಡು ವಿಕೆಟ್​ ಕಿತ್ತರೆ 200 ವಿಕೆಟ್​ ಪೂರ್ತಿಗೊಳಿಸಲಿದ್ದಾರೆ. ಇಂದಿನ ಪಂದ್ಯದಲ್ಲಿ ಈ ಮೈಲಿಗಲ್ಲು ನಿರ್ಮಿಸಲು ಅವಕಾಶವಿದೆ.

ಇದನ್ನೂ ಓದಿ IPL 2024: ದಯವಿಟ್ಟು ಆರ್​ಸಿಬಿ ತಂಡವನ್ನು ಮಾರಿಬಿಡಿ; ಅಳಲು ತೋಡಿಕೊಂಡ ಟೆನಿಸ್​ ದಿಗ್ಗಜ

ಪ್ರಸಕ್ತ ಆವೃತ್ತಿಯಲ್ಲಿ ಉತ್ತಮ ಬೌಲಿಂಗ್​ ಪ್ರದರ್ಶನ ತೋರುತ್ತಿರುವ ಚಹಲ್​ಗೆ ಇದೇ ಜೂನ್​ನಲ್ಲಿ ನಡೆಎಯುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಆಡುವ ಅವಕಾಶ ಸಿಗಲಿದೆ ಎಂಬ ಮಾತು ಕೂಡ ಕೇಳಿ ಬಂದಿದೆ. ಚಹಲ್​ ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಐಪಿಎಲ್​ನಲ್ಲಿ 195* ವಿಕೆಟ್​ ಪಡೆದಿದ್ದಾರೆ. ಇದುವರೆಗೂ ಟೆಸ್ಟ್​ ಕ್ರಿಕೆಟ್​ ಆಡಿಲ್ಲ.

ರಾಜಸ್ಥಾನ್​ ರಾಯಲ್ಸ್(RR vs KKR)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಯಾರೇ ಗೆದ್ದರು ಅಗ್ರಸ್ಥಾನ ಪಡೆಯಲಿದ್ದಾರೆ. ಉಭಯ ತಂಡಗಳು ಕೂಡ ಬಲಿಷ್ಠವಾಗಿರುವ ಕಾರಣ ಈ ಪಂದ್ಯವನ್ನು ಹೈವೋಲ್ಟೇಜ್​ ಪಂದ್ಯ ಎಂದು ನಿರೀಕ್ಷೆ ಮಾಡಲಾಗಿದೆ. ರಾಜಸ್ಥಾನ(Rajasthan Royals) ಸದ್ಯ 6 ಪಂದ್ಯಗಳಲ್ಲಿ 5 ಗೆದ್ದಿದ್ದು ಅಗ್ರಸ್ಥಾನದಲ್ಲಿದೆ. ಕೋಲ್ಕತಾ 5ರಲ್ಲಿ 4 ಪಂದ್ಯಗಳಲ್ಲಿ ಜಯಿಸಿ ದ್ವಿತೀಯ ಸ್ಥಾನದಲ್ಲಿದೆ.

Continue Reading

ಕ್ರೀಡೆ

RR vs KKR: ಅಗ್ರಸ್ಥಾನಕ್ಕೆ ಇಂದು ಕೆಕೆಆರ್​-ರಾಜಸ್ಥಾನ್ ಮಧ್ಯೆ ಹೈವೋಲ್ಟೇಜ್ ಕದನ

RR vs KKR: ಉಭಯ ತಂಡಗಳು ಇದುವರೆಗೆ ಒಟ್ಟು 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ರಾಜಸ್ಥಾನ ರಾಯಲ್ಸ್​ 13 ಪಂದ್ಯ ಗೆದ್ದರೆ, ಕೋಲ್ಕತಾ ನೈಟ್​ ರೈಡರ್ಸ್​ 14 ಪಂದ್ಯ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಆವೃತ್ತಿಯಲ್ಲಿ ಒಂದೇ ಪಂದ್ಯ ಆಡಿ, ಈ ಪಂದ್ಯವನ್ನು ರಾಜಸ್ಥಾನ್​ 9 ವಿಕೆಟ್​ ಅಂತರದಿಂದ ಗೆದ್ದು ಬೀಗಿತ್ತು.

VISTARANEWS.COM


on

RR vs KKR
Koo

ಕೋಲ್ಕತ್ತಾ: ಈ ಬಾರಿಯ ಐಪಿಎಲ್‌ನಲ್ಲಿ(IPL 2024) ಸದ್ಯ ಅಗ್ರ 2 ಸ್ಥಾನಗಳನ್ನು ಪಡೆದಿರುವ ರಾಜಸ್ಥಾನ್​ ರಾಯಲ್ಸ್(RR vs KKR)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಯಾರೇ ಗೆದ್ದರು ಅಗ್ರಸ್ಥಾನ ಪಡೆಯಲಿದ್ದಾರೆ. ಉಭಯ ತಂಡಗಳು ಕೂಡ ಬಲಿಷ್ಠವಾಗಿರುವ ಕಾರಣ ಈ ಪಂದ್ಯವನ್ನು ಹೈವೋಲ್ಟೇಜ್​ ಪಂದ್ಯ ಎಂದು ನಿರೀಕ್ಷೆ ಮಾಡಲಾಗಿದೆ. ರಾಜಸ್ಥಾನ(Rajasthan Royals) ಸದ್ಯ 6 ಪಂದ್ಯಗಳಲ್ಲಿ 5 ಗೆದ್ದಿದ್ದು ಅಗ್ರಸ್ಥಾನದಲ್ಲಿದೆ. ಕೋಲ್ಕತಾ 5ರಲ್ಲಿ 4 ಪಂದ್ಯಗಳಲ್ಲಿ ಜಯಿಸಿ ದ್ವಿತೀಯ ಸ್ಥಾನದಲ್ಲಿದೆ.

ಕೆಕೆಆರ್​ ತಂಡಕ್ಕೆ ದೊಡ್ಡ ಲಾಭವೆಂದರೆ ಸುನೀಲ್​ ನರೈನ್​ ಅವರ ಪ್ರಚಂಡ ಬ್ಯಾಟಿಂಗ್​ ಫಾರ್ಮ್ ಪಂದ್ಯದಿಂದ ಪಂದ್ಯಕ್ಕೆ ಅವರು ಸಿಡಿಯುತ್ತಲೇ ಇದ್ದಾರೆ. ಬೌಲರ್​ ಆಗಿರುವ ಅವರು ಆರಂಭಿಕಾಗಿ ಕಣಕ್ಕಿಳಿದು ಕಡಿಮೆ ಎಸೆತಗಳಿಂದ ದೊಡ್ಡ ಮೊತ್ತ ಪೇರಿಸುತ್ತಾರೆ. ಇದು ತಂಡಕ್ಕೆ ಬೋನಸ್​ ಆಗಿದೆ. ತಂಡಕ್ಕೆ ಹೆಚ್ಚುವರಿ ಬ್ಯಾಟರ್​ ಆಯ್ಕೆಯೂ ಸಿಕ್ಕಂತಾಗುತ್ತದೆ. 18 ವರ್ಷದ ಆಂಗ್ಕ್ರಿಶ್ ರಘುವಂಶಿ ಕೂಡ ಬಿರುಸಿನ ಬ್ಯಾಟಿಂಗ್​ ಮೂಲಕ ಗಮನಸೆಳೆದಿದ್ದರು. ಈ ಪಂದ್ಯದಲ್ಲೂ ತಂಡ ಇವರ ಮೇಲೆ ಹೆಚ್ಚಿನ ಬರವಸೆ ಇರಿಸಿದೆ. ರಸೆಲ್ ಅವರಂತೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡರಲ್ಲೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಫಿಲ್​ ಸಾಲ್ಟ್​​ ಫಾರ್ಮ್​ಗೆ ಮರಳಿರುವುದು ತಂಡಕ್ಕೆ ಇನ್ನೂ ಹೆಚ್ಚಿನ ಬಲ ಬಂದಂತಾಗಿದೆ. ಕಳೆದ ಲಕ್ನೋ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿದ್ದರು.

ಫಾರ್ಮ್​ ಕಳೆದುಕೊಂಡ ಜೈಸ್ವಾಲ್


ಟೀಮ್​ ಇಂಡಿಯಾದ ಭವಿಷ್ಯದ ಆಟಗಾರ ಎಂದೇ ಗುರುತಿಸಲ್ಪಟ್ಟಿದ್ದ ಯುವ ಬ್ಯಾಟರ್​ ಯಶಸ್ವಿ ಜೈಸ್ವಾಲ್​ ಈ ಬಾರಿ ಐಪಿಎಲ್​ನಲ್ಲಿ ಸಂಪೂರ್ಣ ಮಂಕಾಗಿದ್ದಾರೆ. ಆಡಿದ ಪ್ರತಿ ಪಂದ್ಯದಲ್ಲಿಯೂ ವೈಫಲ್ಯ ಕಂಡಿದ್ದಾರೆ. ಟಿ20 ವಿಶ್ವಕಪ್​ಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಾಗ ಫಾರ್ಮ್​ ಕಳೆದುಕೊಂಡಿರುವುದು ಅವರಿಗೆ ಹಿನ್ನಡೆಯಾಗಿ ಪರಿಣಮಿಸಿದೆ. ಮುಂದಿನ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಮತ್ತೆ ವಿಫಲವಾದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾವುದು ಅನುಮಾನವಾಗಿದೆ. ರಾಜಸ್ಥಾನ್(Rajasthan Royals) ತಂಡ ಕೂಡ ಬ್ಯಾಟಿಂಗ್​ ಮತ್ತು ಬೌಲಿಂಗ್​ ವಿಭಾಗದಲ್ಲಿ ಉತ್ತಮವಾಗಿದೆ. ಆದರೂ ಕೂಡ ಈ ತಂಡದ ಪ್ರದರ್ಶನದ ಮೇಲೆ ಹೆಚ್ಚು ನಂಬಿಕೆ ಇಡುವಂತಿಲ್ಲ. ಕಾರಣ ಪ್ರತಿ ಆವೃತ್ತಿಯಲ್ಲಿಯೂ ಆರಂಭಿಕ ಹಂತದಲ್ಲಿ ಸತತ ಗೆಲುವು ಸಾಧಿಸಿ ಆ ಬಳಿಕ ಸತತ ಸೋಲು ಕಂಡು ಪಾತಾಳಕ್ಕೆ ಕುಸಿದ ಹಲವು ನಿದರ್ಶನಗಳಿವೆ.

ಇದನ್ನೂ ಓದಿ IPL 2024: ಸ್ಟ್ರೈಕ್ ರೇಟ್​ ಮೂಲಕ ನೂತನ ದಾಖಲೆ ಬರೆದ ಅಬ್ದುಲ್​ ಸಮದ್

ಮುಖಾಮುಖಿ


ಉಭಯ ತಂಡಗಳು ಇದುವರೆಗೆ ಒಟ್ಟು 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ರಾಜಸ್ಥಾನ ರಾಯಲ್ಸ್​ 13 ಪಂದ್ಯ ಗೆದ್ದರೆ, ಕೋಲ್ಕತಾ ನೈಟ್​ ರೈಡರ್ಸ್​ 14 ಪಂದ್ಯ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಆವೃತ್ತಿಯಲ್ಲಿ ಒಂದೇ ಪಂದ್ಯ ಆಡಿ, ಈ ಪಂದ್ಯವನ್ನು ರಾಜಸ್ಥಾನ್​ 9 ವಿಕೆಟ್​ ಅಂತರದಿಂದ ಗೆದ್ದು ಬೀಗಿತ್ತು. ಈ ಸೋಲಿಗೆ ಕೆಕೆಆರ್​ ಈ ಬಾರಿ ತವರಿನಲ್ಲಿ ಸೇಡು ತೀರಿಸುವ ತವಕದಲ್ಲಿದೆ.

ಸಂಭಾವ್ಯ ಆಟಗಾರರ ಪಟ್ಟಿ


ರಾಜಸ್ಥಾನ್​: ಯಶಸ್ವಿ ಜೈಸ್ವಾಲ್‌, ಜೋಸ್ ಬಟ್ಲರ್‌, ಸಂಜು ಸ್ಯಾಮ್ಸನ್‌(ನಾಯಕ), ರಿಯಾನ್‌ ಪರಾಗ್, ಧೃವ್ ಜುರೆಲ್‌, ಶಿಮ್ರೊನ್ ಹೆಟ್ಮೇಯರ್‌, ರವಿಚಂದ್ರನ್ ಅಶ್ವಿನ್‌, ಕೇಶವ್‌ ಮಹರಾಜ್, ಟ್ರೆಂಟ್ ಬೌಲ್ಟ್‌, ಆವೇಶ್‌ ಖಾನ್, ಯುಜುವೇಂದ್ರ ಚಹಲ್‌.

ಕೋಲ್ಕತಾ: ಫಿಲ್ ಸಾಲ್ಟ್‌, ಸುನಿಲ್ ನರೈನ್‌, ವೆಂಕಟೇಶ್‌ ಅಯ್ಯರ್, ಶ್ರೇಯಸ್‌ ಅಯ್ಯರ್(ನಾಯಕ),ಅಂಗಕೃಷ್ ರಘುವಂಶಿ, ಆಂಡ್ರೆ ರಸೆಲ್‌, ರಮನ್‌ದೀಪ್‌ ಸಿಂಗ್, ಮಿಚೆಲ್ ಸ್ಟಾರ್ಕ್‌, ಹರ್ಷಿತ್ ರಾಣಾ, ವೈಭವ್‌ ಅರೋರ, ವರುಣ್‌ ಚಕ್ರವರ್ತಿ.

ಪಂದ್ಯ: ಸಂಜೆ 7.30ಕ್ಕೆ. ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಜಿಯೋ ಸಿನಿಮಾ.

Continue Reading

ಕ್ರೀಡೆ

Dinesh Karthik: ಕಾರ್ತಿಕ್​ಗೆ ಟಿ20 ವಿಶ್ವಕಪ್​ನಲ್ಲಿ ಅವಕಾಶ ನೀಡಿ; ದಿಗ್ಗಜ ಕ್ರಿಕೆಟಿಗರ ಒತ್ತಾಯ

Dinesh Karthik: ಐಪಿಎಲ್​ ಟೂರ್ನಿಯಲ್ಲಿ 249* ಪಂದ್ಯಗಳನ್ನು ಆಡಿರುವ ದಿನೇಶ್​ ಕಾರ್ತಿಕ್​, ಅತ್ಯಧಿಕ ಐಪಿಎಲ್​ ಪಂದ್ಯಗಳ್ನಾಡಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್​ನಲ್ಲಿ 4742 ರನ್​ ಬಾರಿಸಿದ್ದಾರೆ. 2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪದಾರ್ಪಣೆ ಮಾಡಿದ ಕಾರ್ತಿಕ್​ ಭಾರತ ಪರ 26 ಟೆಸ್ಟ್‌ಗಳನ್ನು ಆಡಿ 1025 ರನ್ ಗಳಿಸಿದ್ದಾರೆ. 57 ಕ್ಯಾಚ್‌ಗಳು ಮತ್ತು 6 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ.

VISTARANEWS.COM


on

Dinesh Karthik
Koo

ಬೆಂಗಳೂರು: ಪಂದ್ಯದಿಂದ ಪಂದ್ಯಕ್ಕೆ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಸಂಚಲನ ಮೂಡಿಸುತ್ತಿರುವ ಆರ್​ಸಿಬಿ ತಂಡದ ಹಿರಿಯ ಆಟಗಾರ ದಿನೇಶ್​ ಕಾರ್ತಿಕ್(Dinesh Karthik) ಅವರನ್ನು ಟಿ20 ವಿಶ್ವಕಪ್​(T20 World Cup) ತಂಡಕ್ಕೆ ಪರಿಗಣಿಸುವಂತೆ ಹಲವರು ಒತ್ತಾಯಿಸಿದ್ದಾರೆ. ಟಿ20 ವಿಶ್ವಕಪ್​ ಟೂರ್ನಿ ಇದೇ ವರ್ಷದ ಜೂನ್​ 1 ರಿಂದ ಆರಂಭಗೊಳ್ಳಲಿದೆ. ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿದೆ.

ಕಳೆದ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ ದಿನೇಶ್​ ಕಾರ್ತಿಕ್​ಗೆ ಟೀಮ್​ ಇಂಡಿಯಾದ ನಾಯಕನಾಗಿರುವ ರೋಹಿತ್​ ಶರ್ಮ ಅವರು ಮೈದಾನದಲ್ಲೇ ಇದೇ ರೀತಿ ಆಡಿದರೆ ವಿಶ್ವಕಪ್​ನಲ್ಲಿ ಆಡಬಹುದು ಎಂದು ಬಿಗ್​ ಆಫರ್​ ನೀಡಿದ್ದರು. ಈ ಆಫರ್​ ಕೇಳಿದ ಕಾರ್ತಿಕ್​ ಹೈದರಾಬಾದ್​ ವಿರುದ್ಧ ನಿನ್ನ(ಸೋಮವಾರ) ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಕೇವಲ 35 ಎಸೆತಗಳಿಂದ 83 ರನ್​ ಚಚ್ಚಿದ್ದರು.

ಕಾರ್ತಿಕ್​ ಅವರ ಅಸಾಮಾನ್ಯ ಬ್ಯಾಟಿಂಗ್​ ಕಂಡ ಕ್ರಿಕೆಟ್​ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದ್ದು ನಿಂತು ಪ್ರಶಂಸೆ ವ್ಯಕ್ತಪಡಿಸಿದ್ದರು. ವರ್ಷವಿಡಿ ಕ್ರಿಕೆಟ್​ ಆಡುವ ಆಟಗಾರರು ಕೂಡ ಇವರಂತಹ ಪ್ರದರ್ಶನ ನೀಡುತ್ತಿಲ್ಲ. ಹೀಗಿರುವಾಗ ವರ್ಷಕ್ಕೊಮ್ಮೆ ಐಪಿಎಲ್​ ಮೂಲಕ ಕ್ರಿಕೆಟ್​ ಆಡುತ್ತಿರುವ ಇವರ ಈ ಸಾಹಸಕ್ಕೆ ಇಂದು ಅನೇಕ ಕ್ರಿಕೆಟ್​ ದಿಗ್ಗಜರು ಕೂಡ ಸಲಾಂ ಹೇಳಿದ್ದಾರೆ. ಜತೆಗೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅವರಿಗೆ ಭಾರತ ತಂಡದ ಪರ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಾರಿಯ ಟೂರ್ನಿಯಲ್ಲಿ ಕಾರ್ತಿಕ್​ 7 ಪಂದ್ಯಗಳನ್ನಾಡಿ 226 ರನ್​ ಬಾರಿಸಿದ್ದಾರೆ. ಇದರಲ್ಲಿ 16 ಬೌಂಡರಿ ಮತ್ತು 18 ಸಿಕ್ಸರ್​ ದಾಖಲಾಗಿದೆ. 2022ರ ಹರಾಜಿನಲ್ಲಿ ಕಾರ್ತಿಕ್​ ಅವರು ಬರೋಬ್ಬರಿ 5.5 ಕೋಟಿ ರೂ. ಪಡೆದು ಆರ್​ಸಿಬಿ ಕ್ಯಾಂಪ್ ಸೇರಿದ್ದರು. ಆ ಆವೃತ್ತಿಯಲ್ಲಿ ಕಾರ್ತಿಕ್ 14 ಇನ್ನಿಂಗ್ಸ್ ಗಳಲ್ಲಿ 287 ರನ್ ಬಾರಿಸಿದ್ದರು. ಜತೆಗೆ ತಂಡದಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸಿದ್ದರು. ಇದೇ ಪ್ರದರ್ಶನ ಕಂಡು ಆಸ್ಟ್ರೇಲಿಯಾದಲ್ಲಿ ನಡೆದ ಕಂಡು ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಆಡಿಸಲಾಗಿತ್ತು. ಆದರೆ ಇಲ್ಲಿ ಕಾರ್ತಿಕ್​ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. ಇದೀಗ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ಅವರು ಈ ಬಾರಿಯ ಟಿ20 ವಿಶ್ವಕಪ್​ ತಂಡಕ್ಕೆ ಆಯ್ಕೆಯಾದರೂ ಕೂಡ ಅಚ್ಚರಿಯಿಲ್ಲ.

ಐಪಿಎಲ್​ ಟೂರ್ನಿಯಲ್ಲಿ 249* ಪಂದ್ಯಗಳನ್ನು ಆಡಿರುವ ದಿನೇಶ್​ ಕಾರ್ತಿಕ್​, ಅತ್ಯಧಿಕ ಐಪಿಎಲ್​ ಪಂದ್ಯಗಳ್ನಾಡಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್​ನಲ್ಲಿ 4742 ರನ್​ ಬಾರಿಸಿದ್ದಾರೆ. 2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪದಾರ್ಪಣೆ ಮಾಡಿದ ಕಾರ್ತಿಕ್​ ಭಾರತ ಪರ 26 ಟೆಸ್ಟ್‌ಗಳನ್ನು ಆಡಿ 1025 ರನ್ ಗಳಿಸಿದ್ದಾರೆ. 57 ಕ್ಯಾಚ್‌ಗಳು ಮತ್ತು 6 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಅವರು ತಮ್ಮ ಕೊನೆಯ ಟೆಸ್ಟ್ ಆಡಿದ್ದು 2018 ರಲ್ಲಿ. ಏಕದಿನದಲ್ಲಿ 94 ಪಂದ್ಯಗಳನ್ನು ಆಡಿ 1752 ರನ್ ಗಳಿಸಿದ್ದಾರೆ. 64 ಕ್ಯಾಚ್‌ಗಳು ಮತ್ತು 7 ಸ್ಟಂಪಿಂಗ್‌ಗಳನ್ನು ನಿರ್ವಹಿಸಿದ್ದಾರೆ. 60 ಟಿ20 ಪಂದ್ಯಗಳಿಂದ 686 ರನ್ ಗಳಿಸಿ, 30 ಕ್ಯಾಚ್‌ಗಳು ಮತ್ತು 8 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ.

Continue Reading

ಕ್ರೀಡೆ

IPL 2024: ಸ್ಟ್ರೈಕ್ ರೇಟ್​ ಮೂಲಕ ನೂತನ ದಾಖಲೆ ಬರೆದ ಅಬ್ದುಲ್​ ಸಮದ್

IPL 2024: ಆರ್​ಸಿಬಿ ವಿರುದ್ಧ 287 ರನ್ ಬಾರಿಸುವ ಮೂಲಕ ಇದೇ ಆವೃತ್ತಿಯಲ್ಲಿ ಮುಂಬೈ ವಿರುದ್ಧ 277 ರನ್​ ಬಾರಿಸಿ ದಾಖಲೆ ಬರೆದಿದ್ದ ಹೈದರಾಬಾದ್​ ತನ್ನ ಈ ದಾಖಲೆಯನ್ನು ಮತ್ತೆ ತಿದ್ದಿ ಬರೆಯಿತು. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಉಭಯ ತಂಡಗಳು ಸೇರಿ 549 ರನ್ ಬಾರಿಸಿತು.​

VISTARANEWS.COM


on

IPL 2024
Koo

ಬೆಂಗಳೂರು: ಆರ್​ಸಿಬಿ(Royal Challengers Bengaluru) ವಿರುದ್ಧ ಸೋಮವಾರ ನಡೆದ ಐಪಿಎಲ್(IPL 2024)​ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡದ ಆಟಗಾರ ಅಬ್ದುಲ್​ ಸಮದ್(Abdul Samad)​ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಸರ್ಫರಾಜ್​ ಖಾನ್​ ದಾಖಲೆಯನ್ನು ಮುರಿದಿದ್ದಾರೆ.

ಹೌದು, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕೇವಲ 10 ಎಸೆತಗಳಿಂದ ಅಜೇಯ 37 ರನ್​ ಬಾರಿಸಿದ ಅಬ್ದುಲ್​ ಸಮದ್(370 ಸ್ಟ್ರೈಕ್​ ರೇಟ್) ಅವರು ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಸ್ಟ್ರೈಕ್​ ರೇಟ್​(10 ಎಸೆತಗಳಲ್ಲಿ) ಪಡೆದ ಆಟಗಾರ ಎನ್ನುವ ದಾಖಲೆ ಬರೆದರು. ಇದಕ್ಕೂ ಮುನ್ನ ಈ ದಾಖಲೆ ಸರ್ಫರಾಜ್​ ಖಾನ್​(350 ಸ್ಟ್ರೈಕ್​ ರೇಟ್) ಹೆಸರಿನಲ್ಲಿತ್ತು. ಸರ್ಫರಾಜ್ 2016ರಲ್ಲಿ ಆರ್​ಸಿಬಿ ಪರ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆ ಪತನಗೊಂಡಿದೆ. ಈ ಬಾರಿ ಐಪಿಎಲ್​ನಲ್ಲಿ ಸರ್ಫರಾಜ್​ ಬಿಡ್ಡಿಂಗ್​ ಆಗದೆ ಆಡುವ ಅವಕಾಶ ಕಳೆದುಕೊಂಡರು.

ಅತ್ಯಧಿಕ ಸ್ಟ್ರೈಕ್​ ರೇಟ್(10 ಎಸೆತಗಳಲ್ಲಿ) ಪಡೆದ ಬ್ಯಾಟರ್​ಗಳು


ಅಬ್ದುಲ್​ ಸಮದ್-370

ಸರ್ಫರಾಜ್​ ಖಾನ್​-350

ಸುರೇಶ್​ ರೈನಾ-348

ಯೂಸುಫ್​ ಪಠಾಣ್​-327

ಅಭಿಷೇಕ್​ ಪೋರೆಲ್​-320

ಇದನ್ನೂ ಓದಿ IPL 2024: ದಯವಿಟ್ಟು ಆರ್​ಸಿಬಿ ತಂಡವನ್ನು ಮಾರಿಬಿಡಿ; ಅಳಲು ತೋಡಿಕೊಂಡ ಟೆನಿಸ್​ ದಿಗ್ಗಜ


ಅಬ್ದುಲ್​ ಸಮದ್​ ಅವರು ಆರ್​ಸಿಬಿ ಬೌಲರ್​ ಟೋಪ್ಲಿ ಓವರ್​ನಲ್ಲಿ ಸತತ 2 ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ಮಿಂಚಿದರು. ಅವರ ಈ ವಿಸ್ಫೋಟಕ ಬ್ಯಾಟಿಂಗ್​ ನರೆವಿನಿಂದ ತಂಡ 280ರ ಗಡಿ ದಾಟುವಲ್ಲಿ ಪ್ರಮುಖ ಪಾತ್ರವಹಿಸಿತು. ಒಂದೊಮ್ಮೆ ಅವರು ಈ ಬಿರುಸಿನ ಆಟವಾಡದೇ ಹೋಗಿದ್ದರೆ ಆರ್​ಸಿಬಿಗೆ ಗೆಲ್ಲುವ ಅವಕಾಶವಿತ್ತು. ಏಕೆಂದರೆ ಸೋಲಿನ ಅಂತರದ ಕೇವಲ 25 ರನ್​.

ಆರ್​ಸಿಬಿ ವಿರುದ್ಧ 287 ರನ್ ಬಾರಿಸುವ ಮೂಲಕ ಇದೇ ಆವೃತ್ತಿಯಲ್ಲಿ ಮುಂಬೈ ವಿರುದ್ಧ 277 ರನ್​ ಬಾರಿಸಿ ದಾಖಲೆ ಬರೆದಿದ್ದ ಹೈದರಾಬಾದ್​ ತನ್ನ ಈ ದಾಖಲೆಯನ್ನು ಮತ್ತೆ ತಿದ್ದಿ ಬರೆಯಿತು. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಉಭಯ ತಂಡಗಳು ಸೇರಿ 549 ರನ್ ಬಾರಿಸಿತು.​ ಇದು ಕೂಡ ವಿಶ್ವ ದಾಖಲೆಯಾಗಿದೆ. ಟಿ20 ಕ್ರಿಕೆಟ್​ನಲ್ಲಿ ದಾಖಲಾದ ಅತ್ಯಧಿಕ ಗರಿಷ್ಠ ಮೊತ್ತವಾಗಿದೆ.

ಪಂದ್ಯ ಗೆದ್ದ ಹೈದರಾಬಾದ್​


ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಹೈದರಾಬಾದ್​ ತಂಡ 25 ರನ್​ಗಳ ಗೆಲುವು ಕಂಡಿತು. ಟಾಸ್​ ಗೆದ್ದ ಆತಿಥೇಯ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಎಸ್​ಆರ್​ಎಚ್​ ತಂಡ ವಿಶ್ವ ದಾಖಲೆಯ 287 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆರ್​ಸಿಬಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 262 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಆರ್​ಸಿಬಿ ಪರ ಒನ್​ ಮ್ಯಾನ್ ಆರ್ಮಿ ರೀತಿ ಹೋರಾಟ ಸಂಘಟಿಸಿದ ವಿಕೆಟ್​ ಕೀಪರ್ ಬ್ಯಾಟರ್​ ದಿನೇಶ್ ಕಾರ್ತಿಕ್​ 35 ಎಸೆತಗಳಲ್ಲಿ 83 ರನ್ ಬಾರಿಸಿದರು.

Continue Reading
Advertisement
actor dwarakish
ಪ್ರಮುಖ ಸುದ್ದಿ3 mins ago

Actor Dwarakish: ಕನ್ನಡ ಸಿನಿಮಾದ ʼಪ್ರಚಂಡ ಕುಳ್ಳʼ ದ್ವಾರಕೀಶ್ ಬಗ್ಗೆ ನೀವರಿಯದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ

ಕ್ರೀಡೆ3 mins ago

IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

Actor Dwarakish
ಕರ್ನಾಟಕ8 mins ago

Actor Dwarakish: ಅಣ್ಣಾವ್ರಿಗೆ ಆಪ್ತ, ವಿಷ್ಣುವರ್ಧನ್‌ಗೆ ಆಪ್ತಮಿತ್ರ ದ್ವಾರಕೀಶ್;‌ ಇವರ ನಂಟು ಹೇಗಿತ್ತು?

Lok Sabha Election 2024 What is the reason for DK Shivakumar and HD Kumaraswamy personal fight
Lok Sabha Election 202412 mins ago

Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

Rama Navami
ಪ್ರಮುಖ ಸುದ್ದಿ18 mins ago

Ram Navami 2024: ರಾಮ ನವಮಿಯನ್ನು ವಿಶೇಷವಾಗಿ ಆಚರಿಸುವ ಟಾಪ್‌ 5 ಸ್ಥಳಗಳಿವು

RR vs KKR
ಕ್ರೀಡೆ39 mins ago

RR vs KKR: ಅಗ್ರಸ್ಥಾನಕ್ಕೆ ಇಂದು ಕೆಕೆಆರ್​-ರಾಜಸ್ಥಾನ್ ಮಧ್ಯೆ ಹೈವೋಲ್ಟೇಜ್ ಕದನ

Toyota Kirloskar Motor Launches New Innova Hicross Petrol GX (O) Grade
ದೇಶ42 mins ago

Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

Lok Sabha Election 2024 IT companies to remain closed in Bengaluru on April 26 BBMP order
Lok Sabha Election 202453 mins ago

Lok Sabha Election 2024: ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ; ತುಷಾರ್ ಗಿರಿನಾಥ್ ಆದೇಶ

NEET PG-2024
ಶಿಕ್ಷಣ1 hour ago

NEET PG-2024: ನೀಟ್‌ ಪಿಜಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ; ಇಲ್ಲಿದೆ ನೋಂದಣಿ ಮಾಹಿತಿ

Auto Fare in Bengaluru
ಬೆಂಗಳೂರು1 hour ago

Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ8 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌