ಕ್ರಿಕೆಟ್
IND vs WI: ಬಿಸಿಸಿಐ ವಿರುದ್ಧ ಅಸಮಾಧಾನ ಹೊರಹಾಕಿದ ಸುನೀಲ್ ಗವಾಸ್ಕರ್
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡದ ಕುರಿತು ಬಿಸಿಸಿಐ ವಿರುದ್ಧ ಸುನೀಲ್ ಗವಾಸ್ಕರ್(sunil gavaskar) ಅಸಮಾಧಾನ ಹೊರಹಾಕಿದ್ದಾರೆ.
ಮುಂಬಯಿ: ವೆಸ್ಟ್ ಇಂಡೀಸ್(IND vs WI) ವಿರುದ್ಧದ ಸರಣಿಯ ಮೂರು ಮಾದರಿಗೆ ಭಾರತ ತಂಡ ಪ್ರಕಟಗೊಂಡಿದೆ. ಆದರೆ ಟೆಸ್ಟ್ ಸರಣಿಗೆ ಪ್ರಕಟಮಾಡಲಾದ ತಂಡವನ್ನು ನೋಡಿ ಅನೇಕ ಮಾಜಿ ಆಟಗಾರರು ಬಿಸಿಸಿಐ ವಿದುದ್ಧ ಲೇವಡಿ ಮಾಡಿದ್ದಾರೆ. ಇದೀಗ ಈ ಸಾಲಿಗೆ ಸುನೀಲ್ ಗವಾಸ್ಕರ್(sunil gavaskar) ಕೂಡ ಸೇರ್ಪಡೆಯಾಗಿದ್ದಾರೆ. “ಉತ್ತಮ ಅವಕಾಶವೊಂದನ್ನು ಕಳೆದುಕೊಂಡಿದ್ದೀರ” ಎಂದು ಹೇಳುವ ಮೂಲಕ ಬಿಸಿಸಿಐ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಸೋತ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಇದಕ್ಕೆ ಬಿಸಿಸಿಐ ಕೂಡ ಸೊಪ್ಪುಹಾಕಿತ್ತು. ಯಂಗ್ ಇಂಡಿಯಾ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ ಎಂದು ಹೇಳಿತ್ತು. ಆದರೆ ಶುಕ್ರವಾರ ಪ್ರಕಟಗೊಂಡ ತಂಡವನ್ನು ನೋಡುವಾಗ ಅದೇ ಹಾಡು ಅದೇ ರಾಗ ಎಂಬಂತೆ ಹಿರಿಯ ಆಟಗಾರರೆಲ್ಲ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ತೋರಿಕೆಗಷ್ಟೇ ಚೇತೇಶ್ವರ್ ಪೂಜಾರ(Cheteshwar Pujara) ಮತ್ತು ಉಮೇಶ್ ಯಾದವ್(Umesh Yadav) ಅವರನ್ನು ಕೈ ಬಿಟ್ಟಂತಿದೆ.
ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್ ಅವರನ್ನು ತಂಡಕ್ಕೆ ಸೇರಿಸಲಾಗಿದ್ದರೂ, ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಮತ್ತು ಅಕ್ಷರ್ ಪಟೇಲ್ ಅವರನ್ನು ಮುಂದುವರಿಸಲಾಗಿದೆ. ಇದೇ ಕಾರಣಕ್ಕೆ ಗವಾಸ್ಕರ್ ಬಿಸಿಸಿಐ ವಿರುದ್ಧ ಗರಂ ಆಗಿದ್ದಾರೆ. ಇದೇ ವರ್ಷದಲ್ಲಿ ಏಕದಿನ ವಿಶ್ವಕಪ್ ನಡೆಯಲಿರುವ ಕಾರಣ ಸೀನಿಯರ್ ಆಟಗಾರರಿಗೆ ಟೆಸ್ಟ್ ನಿಂದ ವಿಶ್ರಾಂತಿ ನೀಡಬೇಕಿತ್ತು ಎಂದಿದ್ದಾರೆ.
ವಿಂಡೀಸ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲೇ ಏಷ್ಯಾ ಕಪ್ ನಡೆಯಲಿದೆ ಜತೆಗೆ ಅಕ್ಟೋಬರ್ ತಿಂಗಳಿನಲ್ಲಿ ಏಕದಿನ ವಿಶ್ವ ಕಪ್ ಕೂಡ ನಡೆಯಲಿದೆ. ಹೀಗಾಗಿ ಈ ಸರಣಿಗೆ ಮಹತ್ವ ನೀಡುವ ನಿಟ್ಟಿನಲ್ಲಿ ಟೆಸ್ಟ್ ಸರಣಿಗೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಬೇಕಿತ್ತು. ಅತಿಯಾದ ಕ್ರಿಕೆಟ್ನಿಂದ ಅನೇಕ ಹಿರಿಯ ಆಟಗಾರರು ದಣಿದಿದ್ದಾರೆ. ಈ ಎಲ್ಲ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ವಿಶ್ರಾಂತಿ ನೀಡಬೇಕಿತ್ತು. ಆದರೆ ಈ ಅದ್ಭುತ ಅವಕಾಶವೊಂದನ್ನು ಬಿಸಿಸಿಐ ಕೆಳೆದುಕೊಂಡಿದೆ ಎಂದು ಹೇಳಿದರು.
ಇದನ್ನೂ ಓದಿ INDvsWI : ಸರ್ಫರಾಜ್ ಖಾನ್ ಆಯ್ಕೆ ಮಾಡುವುದಿಲ್ಲ ಎಂದು ಘೋಷಿಸಲಿ; ಬಿಸಿಸಿಐಗೆ ಮಾಜಿ ಆಟಗಾರನ ಸವಾಲು
ಟೆಸ್ಟ್ ಕ್ರಿಕೆಟ್ ವಿಶ್ವ ಕಪ್ಗೆ ಇನ್ನೂ ಎರಡು ವರ್ಷಗಳಿವೆ. ಈಗ ಇರುವ ಅನೇಕ ಆಟಗಾರರು ಆ ವೇಳೆಗೆ ತಂಡದಲ್ಲಿ ಇರುವುದು ಅನುಮಾನ. ಏಕೆಂದರೆ ಈಗಾಗಲೇ ಕೊಹ್ಲಿ, ರಹಾನೆ, ರೋಹಿತ್ ಸೇರಿ ಅನೇಕರು 35ರ ಸನಿಹದಲ್ಲಿದ್ದಾರೆ. ಇವರನೆಲ್ಲ ತಂಡದಿಂದ ಕೈ ಬಿಟ್ಟು ಯುವ ಆಟಗಾರರಿಗೆ ಅವಕಾಶ ನೀಡಿದರೆ ಉತ್ತಮ ಎಂದು ಬಿಸಿಸಿಐಗೆ ಸಲಹೆಯನ್ನೂ ಕೂಡ ಗವಾಸ್ಕರ್ ನೀಡಿದ್ದಾರೆ.
ಕ್ರಿಕೆಟ್
Asian Games 2023 : ಏಷ್ಯನ್ ಗೇಮ್ಸ್ನಲ್ಲಿ ನೇಪಾಳ ತಂಡ ಸೃಷ್ಟಿಸಿದ ಮಾಡಿದ ದಾಖಲೆಗಳ ವಿವರ ಇಲ್ಲಿದೆ
ಏಷ್ಯನ್ ಗೇಮ್ಸ್ನಲ್ಲಿ (Asian Games 2023) ತನ್ನ ಮೊದಲ ಪಂದ್ಯದಲ್ಲಿಯೇ ನೇಪಾಳ ತಂಡ ಹಲವಾರು ದಾಖಲೆಗಳನ್ನು ಸೃಷ್ಟಿಸಿದೆ.
ನವದೆಹಲಿ: ಏಷ್ಯನ್ ಗೇಮ್ಸ್ 2023 ರ (Asian Games 2023) ಪುರುಷರ ಟಿ 20 ಐ ಕ್ರಿಕೆಟ್ ಪಂದ್ಯಾವಳಿಯ ಮೊದಲ ಮುಖಾಮುಖಿ ನೇಪಾಳ ಮತ್ತು ಮಂಗೋಲಿಯಾ ನಡುವೆ ಬುಧವಾರ ಚೀನಾದ ಹ್ಯಾಂಗ್ಝೌನಲ್ಲಿ ಏರ್ಪಟ್ಟಿತು. ಈ ಪಂದ್ಯ ಸಂಪೂರ್ಣವಾಗಿ ಏಕಮುಖವಾಗಿ ನಡೆಯಿತು. ನೇಪಾಳ ತಂಡ ದುರ್ಬಲವಾಗಿದ್ದರೂ ಮಂಗೋಲಿಯಾ ಕ್ರಿಕೆಟ್ ಶಿಶು. ಹೀಗಾಗಿ ನೇಪಾಳ ತಂಡ ಮಂಗೋಲಿಯಾವನ್ನು ಬಹುತೇಕ ಜರ್ಜರಿತಗೊಳಿಸಿತು. ಬೌಲಿಂಗ್ ಹಾಗೂ ಬ್ಯಾಟಿಂಗ್ ಮೂಲಕ ಮಿಂಚಿ ಹಲವಾರು ನೂತನ ದಾಖಲೆಗಳನ್ನು ಸೃಷ್ಟಿಸಿತು. ನೇಪಾಳ ತಂಡಕ್ಕೆ 273 ರನ್ಗಳ ದಾಖಲೆಯ ಜಯವೂ ದೊರೆಯಿತು.
Historic.
— Johns. (@CricCrazyJohns) September 27, 2023
Dipendra Singh smashed fifty from just 9 balls – fastest ever in International cricket…!!!!pic.twitter.com/2Z1GxItIDL
ಪಿಂಗ್ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ನಂತರ ಮಂಗೋಲಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಚೊಚ್ಚಲ ಏಷ್ಯಾಕಪ್ ಅಭಿಯಾನದಲ್ಲಿ ಹೊಸದಾಗಿ ಕಣಕ್ಕಿಳಿದ ನೇಪಾಳ, ಮೊದಲ ಐದು ಓವರ್ ಗಳಲ್ಲಿ ಆರಂಭಿಕ ಆಟಗಾರರು 42 ರನ್ ಸೇರಿಸುವ ಮೂಲಕ ಉತ್ತಮ ಆರಂಭ ಪಡೆಯಿತು. ಬಳಿಕ ಕುಶಾಲ್ ಮಲ್ಲಾ ಹಾಗೂ ನಾಯಕ ರೋಹಿತ್ ಪೌಡೆಲ್ ಕೇವಲ 65 ಎಸೆತಗಳಲ್ಲಿ 193 ರನ್ಗಳ ಜೊತೆಯಾಟವಾಡಿದರು.
ಈ ಪಂದ್ಯದಲ್ಲಿ ಸೃಷ್ಟಿಯಾದ ದಾಖಲೆಗಳು ಇಂತಿವೆ
- ಕುಶಾಲ್ ಮಲ್ಲಾ ಕೇವಲ 34 ಎಸೆತಗಳಲ್ಲಿ ಟಿ 20 ಐ ಕ್ರಿಕೆಟ್ನಲ್ಲಿ ವೇಗವಾಗಿ ಶತಕ ಬಾರಿಸಿದರು. ಈ ಹಿಂದೆ ರೋಹಿತ್ ಶರ್ಮಾ ಮತ್ತು ಡೇವಿಡ್ ಮಿಲ್ಲರ್ ತಲಾ 35 ಎಸೆತಗಳಲ್ಲಿ ಶತಕ ಬಾರಿಸಿದ್ದರು. 19ರ ಹರೆಯದ ಮಲ್ಲಾ 50 ಎಸೆತಗಳಲ್ಲಿ 8 ಬೌಂಡರಿ ಹಾಗೂ 12 ಸಿಕ್ಸರ್ ಬಾರಿಸಿ ಅಜೇಯ 137 ರನ್ ಬಾರಿಸಿದ್ದರು.
- ಈ ಪಂದ್ಯದಲ್ಲಿ ನೇಪಾಳ ಮುರಿದ ಅನೇಕ ದಾಖಲೆಗಳಲ್ಲಿ ಇದು ಒಂದಾಗಿದೆ. ನಾಯಕ ರೋಹಿತ್ ಪೌಡೆಲ್ 27 ಎಸೆತಗಳಲ್ಲಿ 61 ರನ್ ಗಳಿಸಿ ಔಟಾದ ನಂತರ ಆಲ್ ರೌಂಡರ್ ದೀಪೇಂದ್ರ ಸಿಂಗ್ ಐರಿ ಬಂದರು. 23ರ ಹರೆಯದ ಆಲ್ರೌಂಡರ್ ಟಿ20 ಕ್ರಿಕೆಟ್ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸುವ ಮೂಲಕ ಕ್ರಿಕೆಟ್ ಇತಿಹಾದಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ದೀಪೇಂದ್ರ ತಮ್ಮ ಅರ್ಧ ಶತಕವನ್ನು ತಲುಪಲು ಕೇವಲ ಒಂಬತ್ತು ಎಸೆತಗಳನ್ನು ತೆಗೆದುಕೊಂಡರು. 2007ರ ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಯುವರಾಜ್ ಸಿಂಗ್ ಅವರ 16 ವರ್ಷಗಳ ದಾಖಲೆಯನ್ನು ಮುರಿದರು. ಯುವ ಆಟಗಾರ 10 ಎಸೆತಗಳಲ್ಲಿ 52 ರನ್ ಗಳಿಸಿ ಅಜೇಯರಾಗಿ ಉಳಿದರು, ಮಲ್ಲಾ ಅವರೊಂದಿಗೆ 11 ಎಸೆತಗಳಲ್ಲಿ 55 ರನ್ಗಳ ಜೊತೆಯಾಟವನ್ನು ಆಡಿದರು.
- ಅಂತಿಮವಾಗಿ ನೇಪಾಳ 20 ಓವರ್ಗೆ 3 ವಿಕೆಟ್ ನಷ್ಟಕ್ಕೆ 314 ರನ್ ಕಲೆಹಾಕಿತು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 300ಕ್ಕೂ ಅಧಿಕ ರನ್ ಬಾರಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. 2019ರಲ್ಲಿ ಐರ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ 3 ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿತ್ತು. ರೋಹಿತ್ ಪೌಡೆ್ ಬಳಗ ತಮ್ಮ ಇನ್ನಿಂಗ್ಸ್ ನಲ್ಲಿ 26 ಸಿಕ್ಸರ್ ಗಳನ್ನು ಬಾರಿಸಿದರು. ಇದು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ಬಾರಿಸಿದ 22 ಸಿಕ್ಸರ್ಗಳ ದಾಖಲೆಯನ್ನು ಹಿಮ್ಮೆಟ್ಟಿಸಿತು. ಟಿ20 ಐ ಇನ್ನಿಂಗ್ಸ್ನಲ್ಲಿ ದಾಖಲಾದ ಅತಿ ಹೆಚ್ಚು ಸಿಕ್ಸರ್ಗಳ ದಾಖಲೆ ಎನಿಸಿಕೊಂಡಿತು.
- ಗುರಿ ಬೆನ್ನಟ್ಟಿದ ಮಂಗೋಲಿಯಾ 13.1 ಓವರ್ ಗಳಲ್ಲಿ ಕೇವಲ 41 ರನ್ ಗಳಿಗೆ ಆಲೌಟ್ ಆಯಿತು. 273 ರನ್ ಗಳ ಭರ್ಜರಿ ಜಯ ಸಾಧಿಸಿತು. ಇದು ಟಿ20ಐ ಕ್ರಿಕೆಟ್ನಲ್ಲಿ ರನ್ಗಳ ವಿಷಯದಲ್ಲಿ ಅತಿ ದೊಡ್ಡ ಅಂತರದ ಗೆಲುವು.
Live News
ind vs Aus : ಆಸ್ಟ್ರೇಲಿಯಾ ತಂಡದ ಮೊದಲ ವಿಕೆಟ್ ಪತನ, ಡೇವಿಡ್ ವಾರ್ನರ್ 56 ರನ್ಗೆ ಔಟ್
ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಸಾಧನೆ ಮಾಡುವ ಅವಕಾಶವಿದೆ.
ರಾಜ್ಕೋಟ್: ಇಲ್ಲಿನ ಎಸ್ಸಿ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಭಾರತ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ (ind vs Aus) ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಎರಡೂ ತಂಡಗಳು ತಲಾ ಐದು ಬದಲಾವಣೆಗಳನ್ನು ಮಾಡಿವೆ.
A look at our Playing XI for the final ODI 👌👌
— BCCI (@BCCI) September 27, 2023
Follow the Match ▶️ https://t.co/H0AW9UXI5Y#INDvAUS | @IDFCFIRSTBank pic.twitter.com/KpYibJpfSo
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಪುನರಾಗಮನ ಮಾಡಿದರೆ, ತನ್ವೀರ್ ಸಂಗಾ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ರೋಹಿತ್ ಶರ್ಮಾ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದಂತೆ ಭಾರತದಲ್ಲೂ ಬದಲಾವಣೆಗಳು ಸಾಕಷ್ಟಾಗಿವೆ. ನಾಯಕ ಮತ್ತು ವಿರಾಟ್ ಕೊಹ್ಲಿ ಮರಳಿದ್ದಾರೆ ಆದರೆ ಶುಭ್ಮನ್ ಗಿಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ಆಡಲಿದೆ. ಭಾರತವು ವಾಷಿಂಗ್ಟನ್ ಸುಂದರ್ ಅವರಿಗಾಗಿ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿದೆ. ರಾಜ್ಯದ ನಾಲ್ವರು ಸ್ಥಳೀಯ ಆಟಗಾರರಾದ ಧರ್ಮೇಂದ್ರ ಜಡೇಜಾ, ಪ್ರೇರಕ್ ಮಂಕಡ್, ವಿಶ್ವರಾಜ್ ಜಡೇಜಾ ಮತ್ತು ಹರ್ವಿಕ್ ದೇಸಾಯಿ ಪಂದ್ಯದುದ್ದಕ್ಕೂ ಡ್ರಿಂಕ್ಸ್ ಮತ್ತು ಫೀಲ್ಡಿಂಗ್ಗಾಗಿ ತಂಡದ ಜತೆಗೆ ಇರಲಿದ್ದಾರೆ.
ಕ್ರಿಕೆಟ್
World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್ ಗೆಲ್ತಾರೆ; ಪಾಕ್ ತಂಡ ಮಾಜಿ ಆಟಗಾರನ ಭವಿಷ್ಯ
ಹಾಲಿ ವಿಶ್ವ ಕಪ್ನಲ್ಲಿ (World Cup 2023) ಆಡುವ ತಂಡಗಳಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠವಾಗಿದೆ ಎಂಬುದಾಗಿ ಪಾಕಿಸ್ತಾನದ ಮಾಜಿ ಆರಂಭಿಕ ಬ್ಯಾಟರ್ ಅಭಿಪ್ರಾಯಪಟ್ಟಿದ್ದಾರೆ.
ನವ ದೆಹಲಿ: ಏಕದಿನ ವಿಶ್ವ ಕಪ್ 2023 ರ (World Cup 2023) ಆವೃತ್ತಿಯು ಎರಡು ವಾರಗಳಿಗಿಂತ ಕಡಿಮೆ ದೂರದಲ್ಲಿದೆ. ಕ್ರಿಕೆಟ್ ಅಭಿಮಾನಿಗಳ ಉತ್ಸಾಹದ ಮಟ್ಟವು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ತಜ್ಞರು ಅವಿಸ್ಮರಣಿಯ ಈವೆಂಟ್ನ ಫಲಿತಾಂಶವನ್ನು ಊಹಿಸುವಲ್ಲಿ ನಿರತರಾಗಿದ್ದರೆ, ಕೆಲವರು ತಮ್ಮ ನೆಚ್ಚಿನ ತಂಡಗಳನ್ನು ಹೆಸರಿಸುವಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಕೆಲವು ಕ್ರಿಕೆಟ್ ಪಂಡಿತರ ಎಲ್ಲ ತಂಡಗಳ ಬಲ ಮತ್ತು ದುರ್ಬಲ ಅಂಶಗಳನ್ನು ವಿಶ್ಲೇಷಿಸುವಲ್ಲಿ ನಿರತರಾಗಿದ್ದಾರೆ.
ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಇತ್ತೀಚೆಗೆ ಟ್ವೀಟ್ನಲ್ಲಿ ಆತಿಥೇಯ ಭಾರತವು ಪಂದ್ಯಾವಳಿಯಲ್ಲಿ ಗೆಲ್ಲುವ ತಂಡ ಎಂದು ಹೇಳಿದ್ದರು. ಅದನ್ನು ಹೊರತುಪಡಿಸಿದರೆ ‘ಮೆನ್ ಇನ್ ಬ್ಲೂ’ ಅನ್ನು ಸೋಲಿಸುವ ತಂಡವು ಪ್ರಶಸ್ತಿಯನ್ನು ಗೆಲ್ಲಬಹುದು ಎಂದು ಹೇಳಿದ್ದರು. ಈಗ, ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ವಾನ್ ಅವರ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಭಾರತವು ತಪ್ಪುಗಳನ್ನು ಮಾಡದಿದ್ದರೆ ಇತರ ತಂಡಗಳಿಗೆ ಅವರನ್ನು ಸೋಲಿಸುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.
ವಿಶ್ವ ಕ್ರಿಕೆಟ್ನಲ್ಲಿ ಎಲ್ಲ ರೀತಿಯಲ್ಲಿ ಸಮತೋಲನ ಹೊಂದಿರುವ ಏಕೈಕ ತಂಡ ಭಾರತ. ಮುಂಬರುವ ವಿಶ್ವಕಪ್ನಲ್ಲಿ ಗಮನಿಸಬೇಕಾದ ನಾಲ್ಕು ತಂಡಗಳ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆದಾಗ್ಯೂ, ಭಾರತವನ್ನು ಸೋಲಿಸುವ ತಂಡವು ವಿಶ್ವಕಪ್ ಗೆಲ್ಲುತ್ತದೆ ಎಂದು ನಾನು ನಂಬುತ್ತೇನೆ. ಭಾರತ ಅತ್ಯುತ್ತಮ ತಂಡ. ಅವರ ಬ್ಯಾಟಿಂಗ್ ಪರಿಪೂರ್ಣವಾಗಿದೆ ಅವರ ಬೌಲಿಂಗ್ ಅಲ್ಲಿನ ಪರಿಸ್ಥಿತಿಗಳಿಗೆ ಹೆಚ್ಚು ಸೂಕ್ತವಾಗಿದೆ. ಅವರು ಸ್ವಯಂ ತಪ್ಪುಗಳನ್ನು ಮಾಡದ ಹೊರತು, ಯಾವುದೇ ತಂಡವು ಅವರ ಹತ್ತಿರವೂ ಹೋಗುವುದು ಅಸಂಭವ ಎಂದು ಬಟ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿದ್ದಾರೆ.
ಉನ್ನತ ದರ್ಜೆಯ ಕ್ರಿಕೆಟ್
ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ಕ್ರಿಕೆಟ್ ವಾತಾವರಣವು ಗಣನೀಯವಾಗಿ ಸುಧಾರಿಸಿದೆ. ಆಟಗಾರರು ಫಿಟ್ನೆಸ್ಗೆ ಹೆಚ್ಚಿನ ಒತ್ತು ನೀಡುತ್ತಾರೆ. ಫೀಲ್ಡಿಂಗ್ ಗುಣಮಟ್ಟವನ್ನು ಹೆಚ್ಚಿಸುತ್ತಾರೆ ಎಂದು ಬಟ್ ಹೇಳಿದ್ದಾರೆ. ಭಾರತದ ಮೂಲಸೌಕರ್ಯ ಮತ್ತಿತರ ವ್ಯವಸ್ಥೆಗಳನ್ನು ಬಟ್ ಶ್ಲಾಘಿಸಿದರು.
ಇದನ್ನೂ ಓದಿ : Asian Games 2023 : ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ತಂಡ
“ಕಳೆದ ಕೆಲವು ವರ್ಷಗಳಲ್ಲಿ ಭಾರತವು ಗಮನಾರ್ಹವಾಗಿ ಸುಧಾರಿಸಿದೆ. ಈ ಆಟಗಾರರ ಫಿಟ್ನೆಸ್ ಮಟ್ಟವು ನಾವು 15 ವರ್ಷಗಳ ಹಿಂದೆ ಹೇಳಿದ್ದಕ್ಕಿಂತ ಉತ್ತಮವಾಗಿದೆ. ಅಂತೆಯೇ, ಫೀಲ್ಡಿಂಗ್ ಗುಣಮಟ್ಟವೂ ಸುಧಾರಿಸಿದೆ. ಮೂಲಸೌಕರ್ಯದಿಂದ ಹಿಡಿದು ವೀಕ್ಷಕವಿವರಣೆಗಾರರು, ತಜ್ಞರು ಸೇರಿದಂತೆ ಭಾರತದಲ್ಲಿ ಕ್ರಿಕೆಟ್ಗೆ ಸಂಬಂಧಿಸಿದ ಎಲ್ಲವೂ ಉನ್ನತ ದರ್ಜೆಯದ್ದಾಗಿದೆ, “ಎಂದು ಪಾಕಿಸ್ತಾನದ ಮಾಜಿ ನಾಯಕ ಹೇಳಿದರು.
ರೋಹಿತ್ ಶರ್ಮಾ ಮತ್ತು ತಂಡವು ಏಕದಿನ ವಿಶ್ವಕಪ್ನ ಎಲ್ಲಾ ಮೂರು ಸ್ವರೂಪಗಳಲ್ಲಿ ನಂ.1 ತಂಡವಾಗಿ ಪ್ರವೇಶಿಸಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ 10 ತಂಡಗಳ ಟೂರ್ನಿಯಲ್ಲಿ ಅವರ ಅಭಿಯಾನ ಪ್ರಾರಂಭವಾಗುತ್ತದೆ.
ಕ್ರಿಕೆಟ್
Cricket Record : T20ಯಲ್ಲಿ 314 ರನ್, 9 ಬಾಲ್ನಲ್ಲಿ ಫಿಫ್ಟಿ, 34 ಬಾಲ್ಗಳಲ್ಲಿ ಸೆಂಚುರಿ! ಯಾರ ದಾಖಲೆ ಇದು?
ಮಂಗೋಲಿಯಾ ವಿರುದ್ಧದ ಏಷ್ಯನ್ ಗೇಮ್ಸ್ ನ ತನ್ನ ಆರಂಭಿಕ ಪಂದ್ಯದಲ್ಲಿ ನೇಪಾಳವು ಅದ್ಭುತ ಪವರ್ ಹಿಟ್ಟಿಂಗ್ ಪ್ರದರ್ಶನದೊಂದಿಗೆ ಅನೇಕ ಕ್ರಿಕೆಟ್ ದಾಖಲೆಗಳನ್ನು (Cricket Record) ಮುರಿದಿದೆ.
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ (Asian Games 2023) ಕ್ರಿಕೆಟ್ ಸ್ಪರ್ಧೆಯ ಗ್ರೂಪ್ ಪಂದ್ಯದಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ಪುರುಷರ ತಂಡ ಇತಿಹಾಸ ಸೃಷ್ಟಿಸಿದೆ. ಪುರುಷರ ಟೂರ್ನಮೆಂಟ್ ಆರಂಭವಾಗುತ್ತಿದ್ದಂತೆ ಸರಣಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ದಾಖಲೆಗಳ (Cricket Record) ಮೇಲೆ ದಾಖಲೆಗಳು ಸೃಷ್ಟಿಯಾಗಿವೆ. ನೇಪಾಳ ತಂಡವು ಮಂಗೋಲಿಯಾ ವಿರುದ್ಧ 20 ಓವರ್ಗಳಲ್ಲಿ 314/3 ರ ನಂಬಲಸಾಧ್ಯವಾದ ಸ್ಕೋರ್ ದಾಖಲಿಸಿತು. ಕೇವಲ 120 ಎಸೆತಗಳಲ್ಲಿ 300 ರನ್ ದಾಖಲಿಸಿ ಅಚ್ಚರಿ ಮೂಡಿಸಿತು. ಕ್ರಿಕೆಟ್ ಆಟದ ಕಿರು ಸ್ವರೂಪದಲ್ಲಿ 300 ರನ್ಗಳ ಗಡಿಯನ್ನು ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು ನೇಪಾಳ. ಏಷ್ಯನ್ ಗೇಮ್ಸ್ ನಲ್ಲಿ ನಡೆಯುವ ಪಂದ್ಯಗಳಿಗೆ ಟ್ವೆಂಟಿ-20 ಸ್ಥಾನಮಾನ ನೀಡಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಈ ಹಿಂದೆ ದೃಢಪಡಿಸಿತ್ತು. ಹೀಗಾಗಿ ನೇಪಾಳ ಮಾಡಿದ್ದೆಲ್ಲವೂ ಕ್ರಿಕೆಟ್ ಇತಿಹಾಸದ ದಾಖಲೆ ಪುಸ್ತಕ ಸೇರಿಕೊಂಡವು.
2007ರ ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಯುವರಾಜ್ ಸಿಂಗ್ ಅವರ ದೀರ್ಘಕಾಲದ ದಾಖಲೆಯನ್ನು ನೇಪಾಳ ಬ್ಯಾಟರ್ ದೀಪೇಂದ್ರ ಸಿಂಗ್ ಐರಿ ಮುರಿದರು. ಅವರು 9 ಎಸೆತಗಳಲ್ಲಿ ಅರ್ಧ ಶತಕ ಬಾರಿಸಿ 10 ಎಸೆತಗಳಲ್ಲಿ ಅಜೇಯ 52 ರನ್ ಗಳಿಸಿದರು, ಅದರಲ್ಲಿ 48 ರನ್ಗಳು ಸಿಕ್ಸರ್ಗಳ ಮೂಲಕೇ ಬಂದಿದ್ದವು.
Records created by Nepal today in Asian Games in T20I history:
— Johns. (@CricCrazyJohns) September 27, 2023
– First team ever to score 300 runs.
– Kushal Malla scored the fastest ever T20I hundred: 34 balls.
– Dipendra Singh scored the fastest ever T20I fifty: 9 balls. pic.twitter.com/oV0rQYRh6R
ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೂ ಮುರಿಯಿತು. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಡೇವಿಡ್ ಮಿಲ್ಲರ್ ಅವರನ್ನು ಹಿಂದಿಕ್ಕಿದ ನೇಪಾಳ ಬ್ಯಾಟರ್ ಕುಶಾಲ್ ಮಲ್ಲಾ ಕೇವಲ 34 ಎಸೆತಗಳಲ್ಲಿ ಟಿ 20 ಐನಲ್ಲಿ ವೇಗವಾಗಿ ಶತಕ ಗಳಿಸಿದರು. ಇಬ್ಬರೂ ಬ್ಯಾಟರ್ಗಳಲ್ಲಿ 35 ಎಸೆತಗಳಲ್ಲಿ ಮೂರಂಕಿ ಮೊತ್ತ ದಾಟಿದ್ದರು. ಮಲ್ಲಾ 8 ಬೌಂಡರಿ ಮತ್ತು 12 ಸಿಕ್ಸರ್ಗಳನ್ನು ಬಾರಿಸಿ ಕೇವಲ 50 ಎಸೆತಗಳಲ್ಲಿ 137 ರನ್ ಗಳಿಸಿ ಅಜೇಯರಾಗಿ ಉಳಿದರು.
ಇತಿಹಾಸದಲ್ಲಿ ಅತಿ ಹೆಚ್ಚು ಟಿ 20 ಸ್ಕೋರ್ ಗಳ ಪಟ್ಟಿ ಇಲ್ಲಿದೆ
- ನೇಪಾಳ – ಮಂಗೋಲಿಯಾ ವಿರುದ್ಧ 314/4 (2023)
- ಅಫ್ಘಾನಿಸ್ತಾನ – ಐರ್ಲೆಂಡ್ ವಿರುದ್ಧ 278/3 (2019)
- ಜೆಕ್ ಗಣರಾಜ್ಯ – ಟರ್ಕಿ ವಿರುದ್ಧ 278/4 (2019)
- ಆಸ್ಟ್ರೇಲಿಯಾ – ಶ್ರೀಲಂಕಾ ವಿರುದ್ಧ 263/3 (2016)
- ಕೀನ್ಯಾ ವಿರುದ್ಧ ಶ್ರೀಲಂಕಾ 260/6 (2007)
ಕುತೂಹಲಕಾರಿ ಸಂಗತಿಯೆಂದರೆ, ಹ್ಯಾಂಗ್ಝೌನ ಝೆಜಿಯಾಂಗ್ ಯುನಿವರ್ಸಿಟಿ ಆಫ್ ಟೆಕ್ನಾಲಜಿ ಕ್ರಿಕೆಟ್ ಫೀಲ್ಡ್ನಲ್ಲಿ ನೇಪಾಳವು ತಮ್ಮ ಇನ್ನಿಂಗಗ್ಸ್ಗೆ ನಿಧಾನಗತಿಯ ಆರಂಭವನ್ನು ನೀಡಿತು, ಇಬ್ಬರೂ ಆರಂಭಿಕರು 100ಕ್ಕಿಂತ ಕಡಿಮೆ ಸ್ಟ್ರೈಕ್ ರೇಟ್ನಲ್ಲಿ ಆಡಿದ್ದರು. ಆದರೆ, ಬಳಿಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು ನೇಪಾಳ ಬ್ಯಾಟರ್ಗಳು.
ಒಂದೇ ಪಂದ್ಯದಲ್ಲಿ 26 ಸಿಕ್ಸರ್ಗಳು
ನೇಪಾಳದ ಬ್ಯಾಟರ್ಗಳು ಒಂದೇ ಇನ್ನಿಂಗ್ಸ್ನಲ್ಲಿ 26 ಸಿಕ್ಸರ್ಗಳನ್ನು ಬಾರಿಸುವ ಮೂಲಕ ತಮ್ಮ ಹಿಟ್ಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಗಮನಾರ್ಹ ಸಾಧನೆಯು ಈಗ ಟಿ 20 ಐ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್ನಲ್ಲಿ ಯಾವುದೇ ತಂಡವು ಅತಿ ಹೆಚ್ಚು ಸಿಕ್ಸರ್ಗಳ ದಾಖಲೆಯಾಗಿದೆ. ಇದು 2019 ರಲ್ಲಿ ಅಫ್ಘಾನಿಸ್ತಾನವು 278/3 ಸ್ಕೋರ್ ಮಾಡಿದಾಗ 22 ಸಿಕ್ಸರ್ಗಳ ದಾಖಲೆಯನ್ನೂ ಮುರಿದಿದೆ.
ಇದನ್ನೂ ಓದಿ :Asian Games 2023 : ಶೂಟಿಂಗ್ನಲ್ಲಿ ಭಾರತಕ್ಕೆ ಚಿನ್ನ, 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮಹಿಳೆಯರ ಸಾಧನೆ
ಭಾರತ ನೇರ ಕ್ವಾರ್ಟರ್ಫೈನಲ್ಸ್ಗೆ
ಏಷ್ಯನ್ ಗೇಮ್ಸ್ ನ ಪುರುಷರ ಕ್ರಿಕೆಟ್ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ತಲಾ ಮೂರು ತಂಡಗಳನ್ನು ಹೊಂದಿರುವ ಮೂರು ಗುಂಪುಗಳಿವೆ. ಪ್ರತಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ತಂಡಗಳು ಕ್ವಾರ್ಟರ್ ಫೈನಲ್ಗೆ ಅರ್ಹತೆ ಪಡೆಯುತ್ತವೆ. ಅಲ್ಲಿ ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಂತಹ ತಂಡಗಳು ಸೇರಿಕೊಳ್ಳುತ್ತವೆ.
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಭಾಗವಾಗಿದ್ದ ಋತುರಾಜ್ ಗಾಯಕ್ವಾಡ್ ಭಾರತವನ್ನು ಮುನ್ನಡೆಸಲಿದ್ದಾರೆ.
-
ದೇಶ14 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ22 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ15 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ15 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್21 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ22 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್18 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್