INDW vs BANW 1st ODI: ಬಾಂಗ್ಲಾ ವಿರುದ್ಧ ಹೀನಾಯ ಸೋಲು ಕಂಡ ಭಾರತ ಮಹಿಳಾ ತಂಡ - Vistara News

ಕ್ರಿಕೆಟ್

INDW vs BANW 1st ODI: ಬಾಂಗ್ಲಾ ವಿರುದ್ಧ ಹೀನಾಯ ಸೋಲು ಕಂಡ ಭಾರತ ಮಹಿಳಾ ತಂಡ

ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್​ ತಂಡ 40 ರನ್​ ಅಂತರದಿಂದ ಸೋಲು ಕಂಡಿದೆ.

VISTARANEWS.COM


on

Bangladesh women's cricket Team at Shere Bangla National Stadium, Dhaka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಿರ್ಪುರ್​: ಟಿ20 ಸರಣಿ ಗೆದ್ದು ಬೀಗಿದ್ದ ಭಾರತ ಮಹಿಳಾ ಕ್ರಿಕೆಟ್​ ತಂಡಕ್ಕೆ ಏಕದಿನ(INDW vs BANW 1st ODI) ಸರಣಿಯ ಮೊದಲ ಪಂದ್ಯದಲ್ಲೇ ಬಾಂಗ್ಲಾದೇಶದ ತಿರುಗೇಟು ನೀಡಿದೆ. ಮಳೆಯಿಂದ ಅಣಚಣೆಯಾದ ಈ ಪಂದ್ಯದಲ್ಲಿ ಬಾಂಗ್ಲಾ ಮಹಿಳೆಯರು 40 ರನ್​ಗಳ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮಿರ್ಪುರದ “ಶೇರ್‌ ಎ ಬಾಂಗ್ಲಾ” ನ್ಯಾಶನಲ್‌ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆಯಿತು. ಆದರೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯವನ್ನು 44 ಓವರ್​ಗೆ ಸೀಮಿತಗೊಳಿಸಲಾಯಿತು. ಮಳೆ ನಿಂತ ಬಳಿಕ ಬ್ಯಾಟಿಂಗ್​ ನಡೆಸಿದ ಬಾಂಗ್ಲಾ 43 ಓವರ್​ಗಳಲ್ಲಿ 152ರನ್​ಗೆ ಆಲೌಟಾಯಿತು. ಸುಲಭ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡದ ಆಟಗಾರ್ತಿಯರು ಪೆವಿಲಿಯನ್​ ಪರೇಡ್​ ನಡೆಸಿ 35.5 ಓವರ್​ಗಳಲ್ಲಿ ಕೇವಲ 113 ರನ್​ಗಳಿಸಲಷ್ಟೇ ಶಕ್ತವಾಗಿ ಹೀನಾಯ ಸೋಲು ಕಂಡಿತು.

ಸ್ಟಾರ್​ ಆಟಗಾರ್ತಿ ಸ್ಮೃತಿ ಮಂಧಾನ(Smriti Mandhana) ಅವರು ಟಿ20 ಸರಣಿಯಲ್ಲಿ ಅನುಭವಿಸಿದ ಘೋರ ಬ್ಯಾಟಿಂಗ್​ ವೈಫಲ್ಯ ಈ ಪಂದ್ಯದಲ್ಲಿಯೂ ಮುಂದುವರಿಯಿತು. ಕೇವಲ 11 ರನ್​ಗೆ ಸೀಮಿತರಾದರು. ಈ ಮೊತ್ತಕ್ಕೆ 12 ಎಸೆತ ತೆಗೆದುಕೊಂಡರು. ಯಾಸ್ತಿಕಾ ಭಾಟಿಯಾ ಕೂಡ 15 ರನ್​ ಗಳಿಸಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲರಾದರು. 2 ವರ್ಷಗಳ ಬಳಿಕ ಆಡಲಿಳಿದ ಪ್ರಿಯಾ ಪೂನಿಯಾ(Priya Punia) ಕೂಡ ಬ್ಯಾಟಿಂಗ್​ ಪ್ರದರ್ಶನ ತೋರ್ಪಡಿಸುವಲ್ಲಿ ಎಡವಿದರು. ಅವರ ಗಳಿಕೆ 10 ರನ್​ಗೆ ಕೊನೆಗೊಂಡಿತು.

ಹರ್ಮನ್​ಪ್ರೀತ್​ ಕೌರ್(Harmanpreet Kaur)​ ಕೂಡ 5 ರನ್​ಗೆ ವಿಕೆಟ್​ ಕೈಚೆಲ್ಲುವ ಮೂಲಕ ನಾಯಕಿಯ ಆಟವಾಡುವಲ್ಲಿ ವಿಫಲರಾದರು. ದೀಪ್ತಿ ಶರ್ಮ ಅವರು 20 ರನ್​ ಬಾರಿಸಿದ ಪರಿಣಾಮ ತಂಡ 100ರ ಗಡಿ ದಾಟಿತು. ಬಾಂಗ್ಲಾ ಪರ ನಿಗಾರ್‌ ಸುಲ್ತಾನಾ(39) ಮತ್ತು ಫ‌ರ್ಗಾನಾ ಹಕ್‌(27) ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಬೌಲಿಂಗ್​ನಲ್ಲಿ ಮೌರುಘಾ ಅಖ್ತರ್(4) ಹಾಗೂ ರೆಬಿಯಾ ಖಾನ್​(3) ವಿಕೆಟ್​ ಕಿತ್ತು ಭಾರತೀಯ ಆಟಗಾರ್ತಿಯನ್ನು ಕಟ್ಟಿಹಾಕಿದರು.

ಇದನ್ನೂ ಓದಿ ಸೂರ್ಯಕುಮಾರ್​, ಹರ್ಮನ್​ಪ್ರೀತ್​ ಕೌರ್​ಗೆ ವಿಸ್ಡನ್ ಗೌರವ

ಉಭಯ ತಂಡಗಳ ನಡುವಣ ದ್ವಿತೀಯ ಏಕದಿನ ಪಂದ್ಯ ಜುಲೈ 19ರಂದು ಇದೇ ಸ್ಟೇಡಿಯಂನಲ್ಲಿ ನಡೆಯಲಿದೆ. ಸರಣಿ ಜೀವಂತವಾಗಿಡಬೇಕಿದ್ದರೆ ಹರ್ಮನ್​ಪ್ರೀತ್​ ಕೌರ್​ ಬಳಗಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

T20 World Cup 2024: ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿದೆ. ಹೀಗಾಗಿ ಪಾಕ್​ ಇದೇ ದಿನ ತನ್ನ ತಂಡವನ್ನು ಪ್ರಕಟಿಸಲು ಯೋಜನೆಯೊಂದನ್ನು ಹಾಕಿಕೊಂಡಂತಿದೆ. ಆದರೆ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾದ ಕಾರಣ ಐಸಿಸಿ ಇದಕ್ಕೆ ಅನುಮತಿ ನೀಡಲಿದೆಯೇ ಎಂದು ಕಾದು ನೋಡಬೇಕಿದೆ.

VISTARANEWS.COM


on

T20 World Cup 2024
Koo

ಕರಾಚಿ: ಮುಂಬರುವ ಟಿ20 ವಿಶ್ವಕಪ್​ಗೆ(T20 World Cup 2024) ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್​, ನ್ಯೂಜಿಲ್ಯಾಂಡ್​ ಸೇರಿ ಹಲವು ದೇಶಗಳು ತಮ್ಮ ತಂಡವನ್ನು ಪ್ರಕಟಿಸಿದೆ. ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್​ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಇದಕ್ಕೆ ಕಾರಣ ಏನೆಂಬುದು ತಿಳಿದು ಬಂದಿದೆ. ಹೌದು, ಕೆಲವು ಪ್ರಮುಖ ಆಟಗಾರರು ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೇ 23 ಅಥವಾ 24ರ ವೇಳೆ ತಂಡವನ್ನು ಪ್ರಕಟಿಸುವುದು ಪಿಸಿಬಿ ಯೋಜನೆಯಾಗಿದೆ.

ಪ್ರಮುಖ ಟಿ20 ಆಟಗಾರರಾದ ಮೊಹಮ್ಮದ್‌ ರಿಜ್ವಾನ್‌, ಆಜಂ ಖಾನ್‌, ಇರ್ಫಾನ್‌ ಖಾನ್‌ ನಿಯಾಜಿ ಮತ್ತು ಹ್ಯಾರಿಸ್‌ ರೌಫ್ ಅವರು ಫಿಟ್‌ನೆಸ್‌ ಹೊಂದಿಲ್ಲ. ಹೀಗಾಗಿ ಇವರನ್ನು ಮುಂಬರುವ ಐರ್ಲೆಂಡ್‌, ಇಂಗ್ಲೆಂಡ್‌ ಸರಣಿಗಳಲ್ಲಿ ಆಡಿಸಿ ನೋಡುವುದು ಪಾಕ್​ನ ಉದ್ದೇಶವಾಗಿದೆ. ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿದೆ. ಹೀಗಾಗಿ ಪಾಕ್​ ಇದೇ ದಿನ ತನ್ನ ತಂಡವನ್ನು ಪ್ರಕಟಿಸಲು ಯೋಜನೆಯೊಂದನ್ನು ಹಾಕಿಕೊಂಡಂತಿದೆ. ಆದರೆ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾದ ಕಾರಣ ಐಸಿಸಿ ಇದಕ್ಕೆ ಅನುಮತಿ ನೀಡಲಿದೆಯೇ ಎಂದು ಕಾದು ನೋಡಬೇಕಿದೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್​ 9ರಂದು ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕಾಗಿ ಉಭಯ ದೇಶಗಳ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ತಲೆ ಎತ್ತಿದ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ನಲ್ಲಿ ಇತ್ತಂಡಗಳ ನಡುವಣ ಪಂದ್ಯ ನಡೆಯಲಿದೆ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ. ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

ನ್ಯೂಯಾರ್ಕ್ ಮತ್ತು ನವದೆಹಲಿ ನಡುವೆ 10.5 ಗಂಟೆಗಳ ಸಮಯದ ವ್ಯತ್ಯಾಸವಿರುವುದರಿಂದ, ಸಂಘಟಕರು ಕೆಲವು ಪಂದ್ಯಗಳನ್ನು, ವಿಶೇಷವಾಗಿ ಭಾರತವನ್ನು ಒಳಗೊಂಡ ಪಂದ್ಯಗಳನ್ನು ಬೆಳಗ್ಗೆ ಪ್ರಾರಂಭಿಸಲು ಒಪ್ಪಿಕೊಂಡಿದ್ದಾರೆ. ಇದು ಭಾರತೀಯ ದೂರದರ್ಶನ ಪ್ರೇಕ್ಷಕರಿಗೆ ತಮ್ಮ ಅನುಕೂಲದ ಸಮಯದಲ್ಲಿ ಪಂದ್ಯವನ್ನು ನೋಡಲು ಸಹಾಯ ಮಾಡಲಿದೆ. ಜೂನ್​ 9 ಕೂಡ ಭಾನುವಾರವಾಗಿದೆ. ಅಮೆರಿಕದಲ್ಲಿ ರಾತ್ರಿ ಪಂದ್ಯ ಆಯೋಜಿಸಿದರೆ, ಭಾರತದಲ್ಲಿ ಸೋಮವಾರ ಮುಂಜಾನೆ ಪಂದ್ಯ ಪ್ರಸಾರವಾಗುತ್ತದೆ. ಹೀಗಾಗಿ ಅಮೆರಿಕದಲ್ಲಿ ರಾತ್ರಿ ಪಂದ್ಯ ನಡೆಸುವುದಾದರೆ ಜೂನ್​ 8ರಂದೇ ನಡೆಯಲಿದೆ. ಆಗ ಭಾರತದಲ್ಲಿ ಭಾನುವಾರ ಬೆಳಗ್ಗೆ ಪಂದ್ಯ ಪ್ರಸಾರವಾಗಲಿದೆ.

Continue Reading

ಕ್ರೀಡೆ

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

IPL 2024 Points Table: ಹೈದರಾಬಾದ್​ ಗೆಲುವಿನಿಂದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ 1 ಸ್ಥಾನಗಳ ಕುಸಿತ ಕಂಡಿತು. ಇಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಮತ್ತು ಕೆಕೆಆರ್​ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಸೋತರೆ ಟೂರ್ನಿಯಿಂದ ಹೊರಬೀಳಲಿದೆ.

VISTARANEWS.COM


on

IPL 2024 Points Table
Koo

ಹೈದರಾಬಾದ್​: ಅತ್ಯಂತ ರೋಚಕವಾಗಿ ಸಾಗಿದ, ಕ್ರಿಕೆಟ್​ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುವಂತೆ ಮಾಡಿದ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ನಡುವಿನ ಪಂದ್ಯದಲ್ಲಿ ಕೊನೆಗೂ ಹೈದರಾಬಾದ್​ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿ ಮೆರೆದಾಡಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ(IPL 2024 Points Table) 4ನೇ ಸ್ಥಾನಕ್ಕೇರಿತು.

ಹೈದರಾಬಾದ್​ ಗೆಲುವಿನಿಂದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ 1 ಸ್ಥಾನಗಳ ಕುಸಿತ ಕಂಡಿತು. ಇಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಮತ್ತು ಕೆಕೆಆರ್​ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಕೆಕೆಆರ್​ ಗೆದ್ದರೆ 14 ಅಂಕದೊಂದಿಗೆ 2ನೇ ಸ್ಥಾನದಲ್ಲೇ ಮುಂದುವರಿಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​96312 (+1.096)
ಲಕ್ನೋ​​106412 (+0.094)
ಹೈದರಾಬಾದ್​106512 (+0.072)
ಚೆನ್ನೈ​105510 (+0.627)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ10376 (-0.272)
ಆರ್​ಸಿಬಿ10376 (-0.415)

ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ಇದನ್ನೂ ಓದಿ IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

ಮೊದಲು ಬ್ಯಾಟಿಂಗ್​ ನಡೆಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

Continue Reading

ಪ್ರಮುಖ ಸುದ್ದಿ

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

IPL 2024: ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಹೈದರಾಬಾದ್​​: ಕೊನೇ ಓವರ್​ನ ಕೊನೇ ಎಸೆತದ ತನಕವೂ ಕುತೂಹಲ ಮೂಡಿಸಿದ್ದ ರಾಜಸ್ಥಾನ್​ ರಾಯಲ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಪಂದ್ಯದಲ್ಲಿ ರೋಚಕ ಒಂದು ರನ್ ಗೆಲುವಿನ ಫಲಿತಾಂಶ ಮೂಡಿ ಬಂತು. ಇದರೊಂದಿಗೆ ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ಸತತ ಎರಡು ಸೋಲುಗಳ ಮೂಲಕ ನಿರಾಸೆ ಎದುರಿಸಿದ್ದ ಹೈದರಾಬಾದ್ ತಂಡ ಗೆಲುವಿನ ಹಾದಿಗೆ ಮರಳಿತು. ಅತ್ತ ರಾಜಸ್ಥಾನ್​ ​ ತಂಡ ಎರಡನೇ ಸೋಲಿಗೆ ಒಳಗಾಯಿತು. ಕೊನೇ ಎಸೆತದಲ್ಲಿ ರಾಯಲ್ಸ್ ತಂಡದ ಗೆಲುವಿಗೆ ಎರಡು ರನ್​ ಬೇಕಾಗಿದ್ದವು. ಆದರೆ, ಭುವನೇಶ್ವರ್ ಕುಮಾರ್​ ರಾಯಲ್ಸ್​ ಬ್ಯಾಟರ್​ ಪೊವೆಲ್​ ರೊವ್ಮನ್​ ಪೊವೆಲ್​ ಅವರನ್ನು ಎಲ್​ಬಿಡಬ್ಲ್ಯು ಮಾಡಿ ತವರು ತಂಡಕ್ಕೆ ಗೆಲುವು ತಂದುಕೊಟ್ಟರು.

ಇಲ್ಲಿನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ನಿತೀಶ್ ಅರ್ಧ ಶತಕ

ಬ್ಯಾಟಿಂಗ್ ಆರಂಭಿಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

ಇದನ್ನೂ ಓದಿ: M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

ದೊಡ್ಡ ಗುರಿ ಬೆನ್ನಟ್ಟಲು ಅರಂಭಿಸಿದ ಎಸ್​ಆರ್​​ಎಚ್​ 1 ರನ್​ಗೆ 2 ವಿಕೆಟ್ ಕಳೆದುಕೊಂಡಿತು. ಜೋಸ್ ಬಟ್ಲರ್​ ಹಾಗೂ ನಾಯಕ ಸಂಜು ಸ್ಯಾಮ್ಸನ್​ ಶೂನ್ಯಕ್ಕೆ ಔಟಾಗಿದ್ದರು. ಆದರೆ, ಆರಂಭಿಕ ಬ್ಯಾಟರ್​ ಜೈಸ್ವಾಲ್ 67 ರನ್ ಬಾರಿಸಿ ವಿಕೆಟ್​ ಬೀಳದಂತೆ ನೋಡಿಕೊಂಡರು. ರಿಯಾನ್ ಪರಾಗ್​ 77 ರನ್ ಬಾರಿಸಿ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ಆದರೆ, ಆ ಬಳಿಕ ಸತತವಾಗಿ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ಭುವನೇಶ್ವರ್ ಕುಮಾರ್​ 3 ವಿಕೆಟ್​ ಪಡೆದು ಮಿಂಚಿದರು.

Continue Reading

ಪ್ರಮುಖ ಸುದ್ದಿ

M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

M S Dhoni: ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ (ಮೇ 1) ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಋತುವಿನಲ್ಲಿ ಪಂಜಾಟ್​​ನ ನಾಲ್ಕನೇ ಗೆಲುವಿನ ವೇಳೆ ಜಿತೇಶ್ ಶರ್ಮಾಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಆದಾಗ್ಯೂ, ಸಿಎಸ್​ಕೆ ಬ್ಯಾಟಿಂಗ್ ಸಮಯದಲ್ಲಿ ಧೋನಿಯನ್ನು ರನ್ ಔಟ್ ಮಾಡಿದ್ದರು. ಇದು ಧೋನಿಯ ಅಭಿಮಾನಿಗಳಿಗೆ ಕೋಪ ತರಿಸಿತ್ತು.

VISTARANEWS.COM


on

M S Dhoni
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ನಂತರ ಪಂಜಾಬ್ ಕಿಂಗ್ಸ್ (PBKS) ವಿಕೆಟ್ ಕೀಪರ್ ಬ್ಯಾಟರ್​​ ಜಿತೇಶ್ ಶರ್ಮಾ ಸೋಶಿಯಲ್ ಮೀಡಿಯಾಗಳ ಮೂಲಕ ಬೈಗುಳಗಳನ್ನು ಕೇಳಬೇಕಾಯಿತು. ಅದಕ್ಕೆ ಕಾರಣ ಅವರು ಮಹೇಂದ್ರ ಸಿಂಗ್ ಧೋನಿಯನ್ನು (MS Dhoni) ರನ್​ಔಟ್ ಮಾಡಿರುವುದು. ಜತೇಶ್​ ಅವರ ಇನ್​ಸ್ಟಾಗ್ರಾಮ್​ ಖಾತೆ ಮೂಲಕ ಹಲವಾರು ನಿಂದನಾತ್ಮಕ ಕಾಮೆಂಟ್​ಗಳನ್ನು ಪೋಸ್ಟ್ ಮಾಡಿದ್ದಾರೆ.

ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ (ಮೇ 1) ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಋತುವಿನಲ್ಲಿ ಪಂಜಾಟ್​​ನ ನಾಲ್ಕನೇ ಗೆಲುವಿನ ವೇಳೆ ಜಿತೇಶ್ ಶರ್ಮಾಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಆದಾಗ್ಯೂ, ಸಿಎಸ್​ಕೆ ಬ್ಯಾಟಿಂಗ್ ಸಮಯದಲ್ಲಿ ಧೋನಿಯನ್ನು ರನ್ ಔಟ್ ಮಾಡಿದ್ದರು. ಇದು ಧೋನಿಯ ಅಭಿಮಾನಿಗಳಿಗೆ ಕೋಪ ತರಿಸಿತ್ತು.

ಜಿತೇಶ್ ಶರ್ಮಾಗೆ ಧೋನಿ ಅಭಿಮಾನಿಗಳಿಂದ ಟಾರ್ಗೆಟ್

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಎಂಎಸ್ ಧೋನಿ ತಮ್ಮ ವಿಕೆಟ್ ಕಳೆದುಕೊಳ್ಳದ ಗಮನಾರ್ಹ ಸಾಧನೆಯನ್ನು ಪಂಜಾಬ್ ವಿರುದ್ಧ ಕಳೆದುಕೊಂಡರು. ಚೆಂಡು ಥರ್ಡ್​ ಮ್ಯಾನ್​​ ಕಡೆಗೆ ಹೋದ ನಂತರ ಧೋನಿ ಅಪಾಯಕಾರಿ ಎರಡನೇ ರನ್ ಗಳಿಸಲು ಪ್ರಯತ್ನಿಸಿದರು. ಹರ್ಷಲ್ ಪಟೇಲ್ ಆರಂಭದಲ್ಲಿ ತಪ್ಪಾಗಿ ಫೀಲ್ಡಿಂಗ್ ಮಾಡಿದರು. ಆದರೆ ಬೇಗನೆ ಚೇತರಿಸಿಕೊಂಡರು ಮತ್ತು ಚೆಂಡನ್ನು ಬ್ಯಾಟ್ಸ್ ಮನ್ ನ ತುದಿಗೆ ಎಸೆದರು. ಚೆನ್ನೈ ವಿಕೆಟ್ ಕೀಪರ್ ಧೋನಿ ಕ್ರೀಸ್​ ತಲುಪುವ ಮೊದಲೇ ಜಿತೇಶ್​ ಬೇಲ್ಸ್ ಎಗರಿಸಿದರು. ಸಿಎಸ್​ಕೆ ಮಾಜಿ ನಾಯಕ 11 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದಂತೆ 14 ರನ್ ಗಳಿಸಿ ಔಟಾದರು. ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು 20 ಓವರ್ ಗಳಲ್ಲಿ 162 ರನ್ ಗಳಿಸಲು ಮಾತ್ರ ಯಶಸ್ವಿಯಾಯಿತು.

ಧೋನಿ ರನೌಟ್ ಅವರ ನಿಷ್ಠಾವಂತ ಅಭಿಮಾನಿಗಳಲ್ಲಿ ನಿರಾಶೆಯನ್ನು ಹುಟ್ಟುಹಾಕಿತು. ಕೆಲವರು ಹತಾಶೆಯನ್ನು ವ್ಯಕ್ತಪಡಿಸಿದರೆ, ಇತರರು ಜಿತೇಶ್ ಶರ್ಮಾ ಅವರ ಪಾತ್ರಕ್ಕಾಗಿ ಟ್ರೋಲ್ ಮಾಡಿದರು. ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಧೋನಿಯನ್ನು ಔಟ್ ಮಾಡುವುದನ್ನು ನೋಡಿದ ಅಭಿಮಾನಿಗಳು ನಾನಾ ರೀತಿ ಪ್ರತಿಕ್ರಿಯಿಸಿದರು.

“ನೀವು ವಿಶ್ವಕಪ್​ಗೆ ಆಯ್ಕೆಯಾಗದಿರುವುದು ಒಳ್ಳೆಯದು, ನೀವು ತಲಾ ಅವರನ್ನು ರನ್ ಔಟ್ ಮಾಡಿದ್ದೀರಿ, ಒಂದು ರನ್ ಏನು ವ್ಯತ್ಯಾಸವನ್ನುಂಟು ಮಾಡುತ್ತದೆ?” ಎಂದು ಬಳಕೆದಾರರೊಬ್ಬರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

“ಗೆಳೆಯ, ಜನರು ಅವನಿಗಾಗಿ ಪಂದ್ಯಗಳನ್ನು ನೋಡುತ್ತಾರೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ನಾವು ಎಷ್ಟು ಕೆಟ್ಟದಾಗಿ ಭಾವಿಸಬೇಕು, ನೀವು ಅವನನ್ನು ರನ್ ಔಟ್ ಮಾಡಿದ್ದೀರಿ. ಇದಲ್ಲದೆ, ಅವನ ಕಾಲಿಗೆ ಗಾಯವಾಗಿದೆ. ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ, ಗೆಳೆಯ” ಎಂದು ಮತ್ತೊಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

163 ರನ್​ಗಳ ಗುರಿ ಬೆನ್ನತ್ತಿದ ಸ್ಯಾಮ್ ಕರ್ರನ್ ಪಡೆ 17.5 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಜಾನಿ ಬೈರ್​ಸ್ಟೋವ್​ 30 ಎಸೆತಗಳಲ್ಲಿ 46 ರನ್ ಗಳಿಸಿದರೆ, ರಿಲೀ ರೊಸ್ಸೌ 23 ಎಸೆತಗಳಲ್ಲಿ 43 ರನ್ ಗಳಿಸಿದರು. ಈ ಗೆಲುವಿನೊಂದಿಗೆ ಪಿಬಿಕೆಎಸ್ ಎಂಟು ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​​ನಲ್ಲಿ ಏಳನೇ ಸ್ಥಾನಕ್ಕೆ ಏರಿದರೆ, ಸಿಎಸ್ಕೆ 10 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ನಾವು ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾಗಿದೆ: ಸ್ಯಾಮ್ ಕರ್ರನ್


ಪಿಬಿಕೆಎಸ್ ಸ್ಟ್ಯಾಂಡ್-ಇನ್ ನಾಯಕ ಸ್ಯಾಮ್ ಕರ್ರನ್ ಚೆನ್ನೈನ ಗೆಲುವಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಐಪಿಎಲ್ 2024 ರಲ್ಲಿ ಪ್ಲೇಆಫ್ ಸ್ಥಾನ ಪಡೆಯಲು ತಂಡವು ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆಲುವುಗಳನ್ನು ಪಡೆಯಲು ಬಯಸುತ್ತದೆ ಎಂದು ಅವರು ಒತ್ತಿ ಹೇಳಿದರು.

ತುಂಬಾ ಸಂತೋಷವಾಗಿದೆ. ಪ್ರತಿ ಬಾರಿ ನೀವು ಚೆನ್ನೈಗೆ ಬಂದು ಎರಡು ಗೆಲುವುಗಳನ್ನು ಪಡೆದಾಗ ಯಾವಾಗಲೂ ವಿಶೇಷ ಭಾವನೆ ಬರುತ್ತದೆ. ಕಳೆದ ವರ್ಷದಂತೆ, ನಾವು ನಮ್ಮ ತವರು ಪಂದ್ಯಗಳಲ್ಲಿ ಬಹಳಷ್ಟು ಸೋತಿದ್ದೇವೆ ಮತ್ತು ಆ ಮೇಲೆ ಗೆದ್ದಿದ್ದೇವೆ ಎಂದು ಹೇಳಿದ್ದಾರೆ.

Continue Reading
Advertisement
West Bengal Governor
ದೇಶ3 mins ago

West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

T20 World Cup 2024
ಕ್ರೀಡೆ19 mins ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

Actor Darshan React about Kaatera 2
ಸ್ಯಾಂಡಲ್ ವುಡ್21 mins ago

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

KSET Exam 2023 provisional score list
ಪ್ರಮುಖ ಸುದ್ದಿ40 mins ago

KSET Exam 2023: ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Amith Shah
Lok Sabha Election 202444 mins ago

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

IPL 2024 Points Table
ಕ್ರೀಡೆ45 mins ago

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

Lok sabha Election 2024
ದೇಶ47 mins ago

Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

Kaatera  Movie Rockline Venkatesh Gifts Car To Jadesh K Hampi Maasthi And Suraj
ಸ್ಯಾಂಡಲ್ ವುಡ್50 mins ago

Kaatera  Movie:  ಕಾಟೇರ ಗೆಲುವು: ಮೂವರಿಗೆ ಉಡುಗೊರೆಯಾಗಿ ಸಿಕ್ತು ಕಾರುಗಳು!

Lok sabha Election
ದೇಶ1 hour ago

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

prajwal revanna case arrest
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ14 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌