INDW vs BANW 3rd T20: ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಾಂಗ್ಲಾದೇಶ - Vistara News

ಕ್ರಿಕೆಟ್

INDW vs BANW 3rd T20: ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಾಂಗ್ಲಾದೇಶ

ಬಾಂಗ್ಲಾದೇಶ ಮಹಿಳಾ ತಂಡ ಪ್ರವಾಸಿ ಭಾರತ ವಿರುದ್ಧದ ಅಂತಿಮ ಟಿ20(INDW vs BANW 3rd T20) ಪಂದ್ಯದಲ್ಲಿ ನಾಲ್ಕು ವಿಕೆಟ್​ಗಳ ಗೆಲುವು ಸಾಧಿಸಿದೆ.

VISTARANEWS.COM


on

Bangladesh Women’s Cricket team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಿರ್ಪುರ್​: ಸಂಘಟಿತ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನ ತೋರಿದ ಬಾಂಗ್ಲಾದೇಶ ಮಹಿಳಾ ತಂಡ ಪ್ರವಾಸಿ ಭಾರತ ವಿರುದ್ಧದ ಅಂತಿಮ ಟಿ20(INDW vs BANW 3rd T20) ಪಂದ್ಯದಲ್ಲಿ ನಾಲ್ಕು ವಿಕೆಟ್​ಗಳ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಬಾಂಗ್ಲಾ ತವರಿನಲ್ಲಿ ಕ್ಲೀನ್‌ಸ್ವೀಪ್ ಅವಮಾನದಿಂದ ಪಾರಾಗಿದೆ. ಸರಣಿ 2-1 ಅಂತರದಿಂದ ಕೊನೆಗೊಂಡಿದೆ. ಜುಲೈ 16ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ.

ಮಿರ್ಪುರದ ಶೇರ್‌ ‘ಎ’ ಬಾಂಗ್ಲಾ ನ್ಯಾಶನಲ್‌ ಸ್ಟೇಡಿಯಂನಲ್ಲಿ ಗುರುವಾರ ನಡೆದ ಈ ಅಂತಿಮ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಭಾರತ ಬ್ಯಾಟಿಂಗ್​ ಮರೆತವರಂತೆ ಆಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ನಷ್ಟಕ್ಕೆ 102 ರನ್​ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ 18.2 ಓವರ್​ಗಳಲ್ಲಿ ಕೇವಲ 6 ವಿಕೆಟ್​ಗೆ 103 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ದ್ವಿತೀಯ ಪಂದ್ಯದಲ್ಲಿ 95ರಷ್ಟು ಕಡಿಮೆ ಸ್ಕೋರ್‌ ದಾಖಲಿಸಿಯೂ ಈ ಪಂದ್ಯವನ್ನು ಉಳಿಸಿಕೊಂಡ ಭಾರತದ ಅದೃಷ್ಟ ಇಲ್ಲಿ ಕೈ ಹಿಡಿಯಲಿಲ್ಲ. ಬಾಂಗ್ಲಾ ಆಟಗಾರ್ತಿಯರು ಭಾರತೀಯ ಬೌಲರ್​ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿ ಮೇಲುಗೈ ಸಾಧಿಸಿದರು.

ಈ ಪಂದ್ಯದಲ್ಲಿಯೂ ಭಾರತದ ಬ್ಯಾಟಿಂಗ್​ ತೀರಾ ಕಳಪೆ ಮಟ್ಟದದಿಂದ ಕೂಡಿತ್ತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ(Smriti Mandhana)(1), ಶಫಾಲಿ ವರ್ಮ(11) ಅಗ್ಗಕ್ಕೆ ಔಟಾಗಿ ಆರಂಭಿಕ ಆಘಾತ ನೀಡಿದರು. ನಾಯಕಿ ಹರ್ಮನ್​ ಪ್ರೀತ್​ ಕೌರ್​(Harmanpreet Kaur)(40) ಮತ್ತು ಜೆಮಿಮಾ ರೋಡ್ರಿಗಸ್​(28) ಅವರು ನಡೆಸಿದ ಜವಾಬ್ದಾರಿಯುವ ಬ್ಯಾಟಿಂಗ್​ ನರೆವಿನಿಂದ ತಂಡ ನೂರರ ಗಡಿ ದಾಟಿತು. ಉಳಿದಂತೆ ಯಾವ ಆಟಗಾರ್ತಿಯರು ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ತೋರ್ಪಡಿಸುವಲ್ಲಿ ಯಶಸ್ಸು ಕಾಣಲಿಲ್ಲ. ಬೌಲಿಂಗ್​ನಲ್ಲಿ ದೇವಿಕಾ ವೈದ್ಯ ಅವರು 4 ಓವರ್​ಗೆ 16 ರನ್ ಬಿಟ್ಟು ಕೊಟ್ಟು 2 ವಿಕೆಟ್​ ಪಡೆದರು.

ಇದನ್ನೂ ಓದಿ ಸೂರ್ಯಕುಮಾರ್​, ಹರ್ಮನ್​ಪ್ರೀತ್​ ಕೌರ್​ಗೆ ವಿಸ್ಡನ್ ಗೌರವ

ಸಣ್ಣ ಮೊತ್ತವನ್ನು ಬೆನ್ನಟ್ಟಿದ ಬಾಂಗ್ಲಾ ಕೂಡ 12 ರನ್​ಗೆ ಮೊದಲ ವಿಕೆಟ್​ ಕಳೆದುಕೊಂಡು ಸಂಕಷ್ಟ ಎದುರಿಸಿತು. ಆದರೆ ಶಮೀಮಾ ಸುಲ್ತಾನಾ(Shamima Sultana) ಅವರು ನಿಂತು ಆಡುವ ಮೂಲಕ ತಂಡಕ್ಕೆ ಆಸರೆಯಾದರು. 46 ಎಸೆತಗಳಿಂದ 42 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಬೌಲಿಂಗ್​ನಲ್ಲಿ ರಬೇಯಾ ಖಾನ್ ಕೇವಲ 16 ರನ್​ ನೀಡಿ 3 ವಿಕೆಟ್​ ಕಿತ್ತು ಭಾರತಕ್ಕೆ ಆಘಾತವಿಕ್ಕಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

MS Dhoni: ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

VISTARANEWS.COM


on

MS Dhoni
Koo

ಚೆನ್ನೈ: ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಾಗೂ ಮಹೇಂದ್ರ ಸಿಂಗ್​ ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕೆಲವು ದಿನಗಳ ಹಿಂದೆ ಎಸ್ ರಾಮದಾಸ್ ಅವರು ಮಗನ ಬಳಿ ಮಾತನಾಡುವ ವೇಳೆ, ಚೆನ್ನೈ ಸೂಪರ್ ಕಿಂಗ್ಸ್​ನ ಪಂದ್ಯ ಮತ್ತು ಧೋನಿಯನ್ನು ನೋಡಲು ರಾಜಧಾನಿ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಧೋನಿಯನ್ನು ಮತ್ತು ಚೆನ್ನೈ ಪಂದ್ಯವನ್ನು ನೋಡುವ ಅಪ್ಪನ ಈ ಬಯಕೆಯನ್ನು ಈಡೇರಿಸುವುದಾಗಿ ಮಗ ಮಾತು ಕೊಟ್ಟಿದ್ದರು. ಚೆನ್ನೈನಲ್ಲಿ ನಡೆಯುವ ಪಂದ್ಯದ ಟಿಕೆಟ್​ ಖರೀದಿಸಿ ಪಂದ್ಯ ತೋರಿಸುತ್ತೇನೆ ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಮಗ ಅಪ್ಪನಿಗೆ ಚೆಪಾಕ್​ನಲ್ಲಿ ನಡೆದ ಚೆನ್ನೈ ಮತ್ತು ಪಂಜಾಬ್​ ವಿರುದ್ಧದ ಪಂದ್ಯಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪಂದ್ಯ ಮುಕ್ತಾಯಕ ಬಳಿಕ ಈ ವಿಶೇಷ ಅಭಿಮಾನೊಯನ್ನು ಧೋನಿ ಡ್ರೆಸ್ಸಿಂಗ್​ ರೋಮ್​ನಲ್ಲಿ ಭೇಟಿಯಾಗಿದ್ದಾರೆ. ಧೋನಿ ತಮ್ಮ ಜೆರ್ಸಿಯಲ್ಲಿ “ನಿಮ್ಮ ಈ ಬೆಂಬಲಕ್ಕೆ ಧನ್ಯವಾದಗಳು ತಾತ” ಎಂದು ಬರೆದು ತಮ್ಮ ಹಸ್ತಾಕ್ಷರ ಹಾಕಿ ಜೆರ್ಸಿಯನ್ನು ರಾಮದಾಸ್​ಗೆ ನೀಡಿದ್ದಾರೆ. ಇದೇ ವೇಳೆ ರಾಮದಾಸ್ ನಿಮ್ಮನ್ನು ನೋಡಿ ತುಂಬಾ ಖಷಿಯಾಯಿತು. ನೀವೊಬ್ಬರು ಗ್ರೇಟ್​ ಕ್ರಿಕೆಟರ್​ ಎಂದು ಹಾರೈಸಿದರು. ರಾಮ್​ದಾಸ್​ ಜತೆ ಅರ ಪತ್ನಿಯೂ ಜತೆಗಿದ್ದರು. ಚೆನ್ನೈ ಫ್ರಾಂಚೈಸಿ ವತಿಯಿಂದ ರಾಮದಾಸ್ 103 ಎಂದು ಬರೆದ ಚೆನ್ನೈ ತಂಡದ ಜೆರ್ಸಿಯನ್ನು ವಿಶೇಷ ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಬ್ರಿಟಿಷ್ ಮಿಲಿಟರಿಯ ಸೈನ್ಯದ ಭಾಗವಾಗಿದ್ದ ರಾಮದಾಸ್ ಕ್ರಿಕೆಟ್ ಆಡಲು ಹೆದರುತ್ತಿದ್ದರಂತೆ. ಆದರೆ ಸಿಎಸ್‌ಕೆ ಜರ್ಸಿ ಧರಿಸಿ ಟಿವಿ ಮುಂದೆ ಕುಳಿತು ಐಪಿಎಲ್ ಆಟವನ್ನು ನೋಡಲು ಇಷ್ಟಪಡುತ್ತೇನೆ. ಒಮ್ಮೆಯಾದರೂ ಧೋನಿಯನ್ನು ಭೇಟಿಯಾಗಬೇಕು ಎಂದು ಹೇಳಿದ್ದ ವಿಡಿಯೊವನ್ನು ಕೂಡ ಚೆನ್ನೈ ಫ್ರಾಂಚೈಸಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿತ್ತು.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

Continue Reading

ಕ್ರೀಡೆ

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

Kavya Maran: ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

VISTARANEWS.COM


on

Kavya Maran
Koo

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ(IPL 2024) 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್(Bhuvneshwar Kumar)​ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್(Sunrisers Hyderabad)​ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿತು. ಈ ಗೆಲುವನ್ನು ತಂಡದ ಆಟಗಾರರಿಗಿಂತಲ್ಲೂ ಹೆಚ್ಚು ಸಂಭ್ರಮಿಸಿದ್ದು ತಂಡದ ಮಾಲಕಿ ಕಾವ್ಯಾ ಮಾರನ್​. ಗ್ಯಾಲರಿಯಲ್ಲಿದ್ದ ಕಾವ್ಯ ತಂಡ ಗೆಲ್ಲುತ್ತಿದ್ದಂತೆ ಫೂಲ್​ ಜೋಶ್​ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

31 ಹರೆಯದ ಕಾವ್ಯಾ ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಪಂದ್ಯ ಸೋತಾಗ ಮತ್ತು ಗೆದ್ದಾಗ ಅವರು ವಿಭಿನ್ನವಾಗಿ ಕಂಡುಬರುತ್ತಾರೆ. ಕ್ಯಾಮೆರಾ ಮೆನ್​ಗಳು ಕೂಡ ಪಂದ್ಯದ ವೇಳೆ ಇವರ ಮೇಲೆ ವಿಶೇಷ ನಿಗಾ ಇರಿಸಿರುತ್ತಾರೆ. ಪಂದ್ಯ ಸೋತಾಗ ಅತಿಯಾದ ಬೇಸರಿಂದ ಸಪ್ಪೆ ಮೋರೆ ಹಾಕಿ ಕುಳಿತಿದ್ದ ವಿಡಿಯೊ ಮತ್ತು ಫೋಟೊಗಳು ಕೂಡ ಹಲವು ಬಾರಿ ವೈರಲ್​ ಆಗಿತ್ತು.

ಖ್ಯಾತ ಸೂಪರ್​ ಸ್ಟಾರ್​ ನಟ ರಜನಿಕಾಂತ್ ಅವರು ಐಪಿಎಲ್​ ಆರಂಭಕ್ಕೂ ಮುನ್ನ ನಡೆದಿದ್ದ ಸಿನೆಮಾ ಕಾರ್ಯಕ್ರಮದ ಸಮಾರಂಭದ ವೇದಿಕೆಯಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಒಳ್ಳೆ ಆಟಗಾರರನ್ನು ಆಯ್ಕೆ ಮಾಡಿ ಏಕೆಂದರೆ ಈ ಪಂದ್ಯ ಸೋತಾಗ ಕಾವ್ಯಾ ಅವರು ನೋಡಲು ಸಾಧ್ಯವಾಗುದಿಲ್ಲ ಎಂದು ಹೇಳಿದ್ದರು.

ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

ಪಂದ್ಯ ಗೆದ್ದ ಹೈದರಾಬಾದ್​


ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

T20 World Cup 2024: ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಐಸಿಸಿ(ICC) ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಉಳಿದಿವೆ. ವಿಶ್ವಕಪ್​ ಪಂದ್ಯವಾವಳಿಗಳು ಜೂನ್​ 1ರಿಂದ ಆರಂಭವಾಗಿ ಜೂನ್​ 29ಕ್ಕೆ ಮುಕ್ತಾಯ ಕಾಣಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಐಸಿಸಿ ಪಂದ್ಯಾವಳಿಯ ಅಧಿಕೃತ ಗೀತೆಯನ್ನು ಅನಾವರಣಗೊಳಿಸಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಸೀನ್ ಪಾಲ್ ಮತ್ತು ಸೋಕಾ ಸೂಪರ್‌ಸ್ಟಾರ್ ಕೇಸ್ ಅವರು ‘ಔಟ್ ಆಫ್ ದಿಸ್ ವರ್ಲ್ಡ್’ ಎಂಬ ಶೀರ್ಷಿಕೆಯ ಗೀತೆಯನ್ನು ರಚಿಸಿದ್ದಾರೆ. ಇದು ಸಂಗೀತ ಮತ್ತು ಕ್ರೀಡೆಗಳೆರಡರಲ್ಲೂ ಕೆಲವು ಪ್ರಮುಖ ವ್ಯಕ್ತಿಗಳ ನಡುವಿನ ಸಹಯೋಗವನ್ನು ಇದು ಒಳಗೊಂಡಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. 

ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಬೀಚ್​ ಒಂದರಲ್ಲಿ ಟಿ20 ವಿಶ್ವಕಪ್​ ಎಂದು ಬರೆದಿರುವ ಚೆಂಡೊಂದು ಬಿದ್ದಿರುತ್ತದೆ. ಇದನ್ನು ಹೆಕ್ಕುವ ಮೂಲಕ ಗೀತೆ ಆರಂಭೊಂಡಿದೆ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಾಸ್​ ಬಟ್ಲರ್​, ಗ್ಲೆನ್​ ಮ್ಯಾಕ್ಸ್​ವೆಲ್ ಅವರ ಕ್ರಿಕೆಟ್​ ಶಾಟ್​ಗಳ ಶೈಲಿಯಲ್ಲಿ ನೃತ್ಯ ಮಾಡಿದ್ದು ಕೂಡ ಈ ದೃಶ್ಯದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

ಕ್ರಿಕೆಟ್ ಯಾವಾಗಲೂ ಕೆರಿಬಿಯನ್ ಸಂಸ್ಕೃತಿಯ ಪ್ರಮುಖ ಭಾಗವಾಗಿದೆ. ಆದ್ದರಿಂದ ಟಿ20 ವಿಶ್ವಕಪ್‌ಗಾಗಿ ಅಧಿಕೃತ ಗೀತೆಯನ್ನು ಬರೆಯಲು ಮತ್ತು ರೆಕಾರ್ಡ್ ಮಾಡಲು ನನಗೆ ಗೌರವವಿದೆ. ಈ ಗೀತೆಗೆ ಸ್ಫೂರ್ತಿ ನೀಡಿದ ಸೃಜನಾತ್ಮಕ ಇನ್‌ಪುಟ್‌ನ ಸಂಪೂರ್ಣ ಸಿಬ್ಬಂದಿಗೆ ಗೌರವವು ಸಲ್ಲುತ್ತದೆ ಎಂದು ಸೋಕಾ ಸೂಪರ್‌ಸ್ಟಾರ್ ಕೆಸ್ ಹೇಳಿದ್ದಾರೆ.

ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

T20 World Cup 2024: ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿದೆ. ಹೀಗಾಗಿ ಪಾಕ್​ ಇದೇ ದಿನ ತನ್ನ ತಂಡವನ್ನು ಪ್ರಕಟಿಸಲು ಯೋಜನೆಯೊಂದನ್ನು ಹಾಕಿಕೊಂಡಂತಿದೆ. ಆದರೆ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾದ ಕಾರಣ ಐಸಿಸಿ ಇದಕ್ಕೆ ಅನುಮತಿ ನೀಡಲಿದೆಯೇ ಎಂದು ಕಾದು ನೋಡಬೇಕಿದೆ.

VISTARANEWS.COM


on

T20 World Cup 2024
Koo

ಕರಾಚಿ: ಮುಂಬರುವ ಟಿ20 ವಿಶ್ವಕಪ್​ಗೆ(T20 World Cup 2024) ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್​, ನ್ಯೂಜಿಲ್ಯಾಂಡ್​ ಸೇರಿ ಹಲವು ದೇಶಗಳು ತಮ್ಮ ತಂಡವನ್ನು ಪ್ರಕಟಿಸಿದೆ. ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್​ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಇದಕ್ಕೆ ಕಾರಣ ಏನೆಂಬುದು ತಿಳಿದು ಬಂದಿದೆ. ಹೌದು, ಕೆಲವು ಪ್ರಮುಖ ಆಟಗಾರರು ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೇ 23 ಅಥವಾ 24ರ ವೇಳೆ ತಂಡವನ್ನು ಪ್ರಕಟಿಸುವುದು ಪಿಸಿಬಿ ಯೋಜನೆಯಾಗಿದೆ.

ಪ್ರಮುಖ ಟಿ20 ಆಟಗಾರರಾದ ಮೊಹಮ್ಮದ್‌ ರಿಜ್ವಾನ್‌, ಆಜಂ ಖಾನ್‌, ಇರ್ಫಾನ್‌ ಖಾನ್‌ ನಿಯಾಜಿ ಮತ್ತು ಹ್ಯಾರಿಸ್‌ ರೌಫ್ ಅವರು ಫಿಟ್‌ನೆಸ್‌ ಹೊಂದಿಲ್ಲ. ಹೀಗಾಗಿ ಇವರನ್ನು ಮುಂಬರುವ ಐರ್ಲೆಂಡ್‌, ಇಂಗ್ಲೆಂಡ್‌ ಸರಣಿಗಳಲ್ಲಿ ಆಡಿಸಿ ನೋಡುವುದು ಪಾಕ್​ನ ಉದ್ದೇಶವಾಗಿದೆ. ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿದೆ. ಹೀಗಾಗಿ ಪಾಕ್​ ಇದೇ ದಿನ ತನ್ನ ತಂಡವನ್ನು ಪ್ರಕಟಿಸಲು ಯೋಜನೆಯೊಂದನ್ನು ಹಾಕಿಕೊಂಡಂತಿದೆ. ಆದರೆ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾದ ಕಾರಣ ಐಸಿಸಿ ಇದಕ್ಕೆ ಅನುಮತಿ ನೀಡಲಿದೆಯೇ ಎಂದು ಕಾದು ನೋಡಬೇಕಿದೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್​ 9ರಂದು ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕಾಗಿ ಉಭಯ ದೇಶಗಳ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ತಲೆ ಎತ್ತಿದ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ನಲ್ಲಿ ಇತ್ತಂಡಗಳ ನಡುವಣ ಪಂದ್ಯ ನಡೆಯಲಿದೆ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ. ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

ನ್ಯೂಯಾರ್ಕ್ ಮತ್ತು ನವದೆಹಲಿ ನಡುವೆ 10.5 ಗಂಟೆಗಳ ಸಮಯದ ವ್ಯತ್ಯಾಸವಿರುವುದರಿಂದ, ಸಂಘಟಕರು ಕೆಲವು ಪಂದ್ಯಗಳನ್ನು, ವಿಶೇಷವಾಗಿ ಭಾರತವನ್ನು ಒಳಗೊಂಡ ಪಂದ್ಯಗಳನ್ನು ಬೆಳಗ್ಗೆ ಪ್ರಾರಂಭಿಸಲು ಒಪ್ಪಿಕೊಂಡಿದ್ದಾರೆ. ಇದು ಭಾರತೀಯ ದೂರದರ್ಶನ ಪ್ರೇಕ್ಷಕರಿಗೆ ತಮ್ಮ ಅನುಕೂಲದ ಸಮಯದಲ್ಲಿ ಪಂದ್ಯವನ್ನು ನೋಡಲು ಸಹಾಯ ಮಾಡಲಿದೆ. ಜೂನ್​ 9 ಕೂಡ ಭಾನುವಾರವಾಗಿದೆ. ಅಮೆರಿಕದಲ್ಲಿ ರಾತ್ರಿ ಪಂದ್ಯ ಆಯೋಜಿಸಿದರೆ, ಭಾರತದಲ್ಲಿ ಸೋಮವಾರ ಮುಂಜಾನೆ ಪಂದ್ಯ ಪ್ರಸಾರವಾಗುತ್ತದೆ. ಹೀಗಾಗಿ ಅಮೆರಿಕದಲ್ಲಿ ರಾತ್ರಿ ಪಂದ್ಯ ನಡೆಸುವುದಾದರೆ ಜೂನ್​ 8ರಂದೇ ನಡೆಯಲಿದೆ. ಆಗ ಭಾರತದಲ್ಲಿ ಭಾನುವಾರ ಬೆಳಗ್ಗೆ ಪಂದ್ಯ ಪ್ರಸಾರವಾಗಲಿದೆ.

Continue Reading
Advertisement
Ram Mandir
ದೇಶ2 mins ago

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

MS Dhoni
ಕ್ರೀಡೆ2 mins ago

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

Drowned in water
ಕೋಲಾರ13 mins ago

Drowned In water : ಈಜಲು ಕೃಷಿ ಹೊಂಡಕ್ಕೆ ಜಿಗಿದ; ಸಾವಿನ ಕೊನೆ ಕ್ಷಣವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ತಂಗಿ!

Triple Talaq
ದೇಶ27 mins ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Covishield vaccine Puneeth Rakumar
ಸ್ಯಾಂಡಲ್ ವುಡ್35 mins ago

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Kavya Maran
ಕ್ರೀಡೆ42 mins ago

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

murder case stabbing bengaluru
ಕ್ರೈಂ44 mins ago

Murder Case: ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

Elephant attack in Shivamogga
ಶಿವಮೊಗ್ಗ56 mins ago

Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

Lalu Prasad Yadav
ದೇಶ59 mins ago

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Kiccha Sudeep jailer fame kevin has composed stunt in max
ಸ್ಯಾಂಡಲ್ ವುಡ್1 hour ago

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ17 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌