INDW vs PAKW: ನಾಳೆಯಿಂದ ಮಹಿಳಾ ಏಷ್ಯಾ ಕಪ್​; ಭಾರತಕ್ಕೆ ಪಾಕ್​ ಎದುರಾಳಿ - Vistara News

ಕ್ರೀಡೆ

INDW vs PAKW: ನಾಳೆಯಿಂದ ಮಹಿಳಾ ಏಷ್ಯಾ ಕಪ್​; ಭಾರತಕ್ಕೆ ಪಾಕ್​ ಎದುರಾಳಿ

INDW vs PAKW: 7 ಬಾರಿ ಟೂರ್ನಿಯಲ್ಲಿ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸ್ಥಾಪಿಸಿರುವ ಭಾರತ ಈ ಬಾರಿಯೂ ಕಪ್​ ಗೆಲ್ಲುವ ಫೇವರಿಟ್​ ಆಗಿದೆ.

VISTARANEWS.COM


on

INDW vs PAKW
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲಂಬೊ: 9ನೇ ಆವೃತ್ತಿಯ ಮಹಿಳೆಯರ ಏಷ್ಯಾ ಕಪ್‌ ಕ್ರಿಕೆಟ್‌(Womens Asia Cup T20 2024) ಪಂದ್ಯಾವಳಿಗೆ ಕ್ಷಣಗಣನೆ ಮೊದಲ್ಗೊಂಡಿದೆ. ನಾಳೆ(ಶುಕ್ರವಾರ) ನಡೆಯುವ ಉದ್ಘಾಟನ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ವಿದ್ಯುಕ್ತ ಚಾಲನೆ ಸಿಗಲಿದೆ. ಇದೇ ದಿನ ರಾತ್ರಿ ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಭಾರತ(India Women) ತಂಡ ಬದ್ಧ ಎದುರಾಳಿ ಪಾಕಿಸ್ತಾನದ(INDW vs PAKW) ವಿರುದ್ಧ ಸೆಣಸಾಡಲಿದೆ. ಶ್ರೀಲಂಕಾದ ಡಂಬುಲದಲ್ಲಿ ಪಂದ್ಯಾವಳಿ ನಡೆಯಲಿದೆ.

7 ಬಾರಿ ಟೂರ್ನಿಯಲ್ಲಿ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸ್ಥಾಪಿಸಿರುವ ಭಾರತ ಈ ಬಾರಿಯೂ ಕಪ್​ ಗೆಲ್ಲುವ ಫೇವರಿಟ್​ ಆಗಿದೆ. ಅದರಲ್ಲೂ ಮೊದಲ ಪಂದ್ಯದಲ್ಲಿಯೇ ಪಾಕ್​ ವಿರುದ್ಧ ಆಡುತ್ತಿರುವುದು ಆಟಗಾರ್ತಿಯರ ಜೋಶ್​ ಇನ್ನಷ್ಟು ಹೆಚ್ಚುವಂತೆ ಮಾಡಿದೆ. ಭಾರತ ಟೂರ್ನಿಯಲ್ಲಿ ಕಪ್​ ಗೆಲ್ಲದ್ದು ಒಂದು ಬಾರಿ ಮಾತ್ರ.

2018ರಲ್ಲಿ ಮಲೇಷ್ಯಾದಲ್ಲಿ ನಡೆದಿದ್ದ 7ನೇ ಆವೃತ್ತಿಯ ಫೈನಲ್​ನಲ್ಲಿ ಭಾರತಕ್ಕೆ ಬಾಂಗ್ಲಾದೇಶದ 3 ವಿಕೆಟ್​ ಅಂತರದ ಆಘಾತಕಾರಿ ಸೋಲುಣಿಸಿ ಚೊಚ್ಚಲ ಏಷ್ಯಾ ಕಪ್​ ಗೆದ್ದು ಸಂಭ್ರಮಿಸಿತ್ತು. ಈ ಒಂದು ಆವೃತ್ತಿ ಬಿಟ್ಟರೆ ಉಳಿದೆಲ್ಲ ಆವೃತ್ತಿಯಲ್ಲಿಯೂ ಭಾರತವೇ ಕಪ್​ ಗೆದ್ದು ಪಾರುಪತ್ಯ ಸಾಧಿಸಿದೆ. ಮಹಿಳಾ ಏಷ್ಯಾ ಕಪ್​ ಮೊದಲು ಆರಂಭಗೊಂಡಿದ್ದು 2004ರಲ್ಲಿ ಮಿಥಾಲಿ ಸಾರಥ್ಯದಲ್ಲಿ ಭಾರತ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಭಾರತ ಮತ್ತು ಆತಿಥೇಯ ಶ್ರೀಲಂಕಾ ಮಾತ್ರ ಈ ಆವೃತ್ತಿಯಲ್ಲಿ ಆಡಿತ್ತು. ಇತ್ತಂಡಗಳು 5 ಪಂದ್ಯಗಳ ಸರಣಿಯನ್ನಾಡಿದವು. ಭಾರತ ಎಲ್ಲ 5 ಪಂದ್ಯಗಳನ್ನು ಜಯಿಸಿ ಚಾಂಪಿಯನ್‌ ಎನಿಸಿತ್ತು.

ಮುಖಾಮುಖಿ


ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡ ಇದುವರೆಗೆ 13 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 10 ಪಂದ್ಯ ಗೆದ್ದು ಪ್ರಾಬಲ್ಯ ಸಾಧಿಸಿದೆ. ಪಾಕಿಸ್ತಾನ ಕೇಲವ 3 ಪಂದ್ಯ ಗೆದ್ದಿದೆ. ಇತ್ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದು 2022ರಲ್ಲಿ. ಈ ಪಂದ್ಯವನ್ನು ಭಾರತ 107 ರನ್​ಗಳಿಂದ ಗೆದ್ದು ಬೀಗಿತ್ತು.

ಭಾರತ ಬಲಿಷ್ಠ


ಇತ್ತೀಚಿಗೆ ಭಾರತ ತಂಡದ ಪ್ರದರ್ಶನವನ್ನು ನೋಡುವಾಗ ಭಾರತ ಬಲಿಷ್ಠ ಎನ್ನಲಡ್ಡಿಯಿಲ್ಲ. ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ, ಶಫಾಲಿ ವರ್ಮ, ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೋಡ್ರಿಗಸ್​, ದೀಪ್ತಿ ಶರ್ಮ ಮತ್ತು ರಿಚಾ ಘೋಷ್​ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ನಾಳೆ(ಶುಕ್ರವಾರ) ನಡೆಯುವ ಪಾಕ್​ ವಿರುದ್ಧದ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ತಂಡ ಬೆಟ್ಟದಷ್ಟು ನಿರೀಕ್ಷೆ ಇರಿಸಿದೆ.

ಇದನ್ನೂ ಓದಿ Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ಉಭಯ ತಂಡಗಳು


ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.

ಪಾಕಿಸ್ತಾನ: ನಿದಾ ದಾರ್ (ನಾಯಕಿ), ಇರಾಮ್ ಜಾವೇದ್, ಸಾದಿಯಾ ಇಕ್ಬಾಲ್, ಅಲಿಯಾ ರಿಯಾಜ್, ಡಯಾನಾ ಬೇಗ್, ಫಾತಿಮಾ ಸನಾ, ಗುಲ್ ಫಿರೋಜಾ, ಮುನೀಬಾ ಅಲಿ, ಸಿದ್ರಾ ಅಮೀನ್, ನಜಿಹಾ ಅಲ್ವಿ, ಸೈಯದಾ ಅರೂಬ್ ಶಾ, ನಶ್ರಾ ಸುಂಧು, ತಸ್ಮಿಯಾ ರುಬಾಬ್, ಒಮೈಮಾ ಸೊಹೈಲ್, ತುಬಾ ಹಸನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಈ ಹಿಂದೆ ಮಗಳು ವಮಿಕಾಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದಕ್ಕೆ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮ ತೀವ್ರ ಅಸಮಾಧಾನಗೊಂಡಿದ್ದರು. ದಯವಿಟ್ಟು ಮಗಳ ಫೋಟೊ ವೈರಲ್‌ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದರು.

VISTARANEWS.COM


on

Virat Kohli
Koo

ಲಂಡನ್​: ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(Virat Kohli) ಲಂಡನ್‌ನ(London) ಬೀದಿಯೊಂದರಲ್ಲಿ ಮಗ ಅಕಾಯ್(Akaay) ಜತೆ ಕಾಣಿಸಿಕೊಂಡಿರುವ ವಿಡಿಯೊವೊಂದು ವೈರಲ್​ ಆಗಿದೆ. ಹೂವಿನ ಮಾರ್ಕೆಟ್​ ಒಂದರಲ್ಲಿ ಕೊಹ್ಲಿ ಅಕಾಯ್​ನನ್ನು ಎತ್ತಿಕೊಂಡು ಹೂವನ್ನು ತೋರಿಸುತ್ತಿರುವುದನ್ನು ಈ ವಿಡಿಯೊದಲ್ಲಿ ನೋಡಬಹುದಾಗಿದೆ. ಪತ್ನಿ ಅನುಷ್ಕಾ ಶರ್ಮ(Anushka Sharma) ಕೂಡ ಈ ವೇಳೆ ಜತೆಗಿದ್ದರು.

​ಕೊಹ್ಲಿ ತಮ್ಮ ಮಗನೊಂದಿಗೆ ಇರುವ ವಿಡಿಯೊವನ್ನು ವಿರಾಟ್​ ಕೊಹ್ಲಿ ಫ್ಯಾನ್ಸ್​ ಕ್ಲಬ್​ ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಈ ವಿಡಿಯೊ ವೈರಲ್​ ಆಗಿದೆ. ಅಕಾಯ್ ಜನಿಸಿದ 6 ತಿಂಗಳ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಇದೇ ಮೊದಲು.

ಈ ಹಿಂದೆ ಮಗಳು ವಮಿಕಾಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದಕ್ಕೆ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮ ತೀವ್ರ ಅಸಮಾಧಾನಗೊಂಡಿದ್ದರು. ದಯವಿಟ್ಟು ಮಗಳ ಫೋಟೊ ವೈರಲ್‌ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದರು. ಇದೀಗ ಮಗನ ಜತೆಗಿನ ವಿಡಿಯೊ ಹಂಚಿಕೊಂಡಿರುವ ವಿಚಾರ ಕೊಹ್ಲಿಗೆ ತಿಳಿದರೆ ಮತ್ತೆ ಸಿಟ್ಟಿಗೇಳುವುದು ಖಚಿತ.

ಲಂಡನ್​ಗೆ ಶಿಫ್ಟ್​ ಆಗಲಿದ್ದಾರಾ ಕೊಹ್ಲಿ?


ವಿರಾಟ್​ ಕೊಹ್ಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಭಾರತ ತೊರೆದು ಕುಟುಂಬ ಸಮೇತರಾಗಿ ಲಂಡನ್​ನಲ್ಲಿ ನೆಲೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ. ಟಿ20 ವಿಶ್ವಕಪ್​ ಗೆದ್ದು ಭಾರತಕ್ಕೆ ಬಂದ ದಿನವೇ ಕೊಹ್ಲಿ ಮುಂಬೈನಲ್ಲಿ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಮುಗಿಸಿ ರಾತ್ರೋರಾತ್ರಿ ಲಂಡನ್​ಗೆ ವಿಮಾನ ಏರಿದ್ದರು. ಹೀಗಾಗಿ ಕೆಲ ನೆಟ್ಟಿಗರುವ ಕೊಹ್ಲಿ ಇನ್ನು ಮುಂದೆ ಲಂಡನ್​ನಲ್ಲಿಯೇ ವಾಸಿಸುವ ಸಾಧ್ಯತೆ ಇದೆ ಎಂದಿದ್ದರು. ಬಾಲಿವುಡ್ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಿಂದಲೂ ಅನುಷ್ಕಾ ಶರ್ಮಾ ದೂರ ಉಳಿದಿರುವುದು ಕೂಡ ಊಹಾಪೋಹಗಳಿಗೆ ಕಾರಣವಾಗಿದೆ.

ಇದನ್ನೂ ಓದಿ Virat Kohli : ವಿರಾಟ್​ ಕೊಹ್ಲಿಯನ್ನು ಅವಮಾನಿಸಿದ ಅಮಿತ್​ ಮಿಶ್ರಾ ಬೆಂಡೆತ್ತಿದ ಯಶ್​ ದಯಾಳ್​

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಫೈನಲ್​ ಪಂದ್ಯದಲ್ಲಿ 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದ್ದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದಿದ್ದರು. ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದರು.

Continue Reading

ಕ್ರೀಡೆ

Babar Azam: 18 ವರ್ಷದ ನೆಟ್​ ಬೌಲರ್​ ಮುಂದೆ ಪರದಾಡಿದ ಪಾಕ್​ ನಾಯಕ ಬಾಬರ್​ ಅಜಂ; ವಿಡಿಯೊ ವೈರಲ್​

Babar Azam: ಬಾಬರ್​ ಅಜಂ ಮತ್ತು ಪಾಕ್​ನ ಕೆಲ ಬ್ಯಾಟರ್​ಗಳು ಈ 18 ವರ್ಷದ ನೆಟ್​ ಬೌಲರ್​ನ ಎಸೆತವನ್ನು ಡಿಫೆನ್ಸ್​ ಮಾಡಲು ಕೂಡ ಪರದಾಟ ನಡೆಸಿದ್ದಾರೆ. ಈ ವಿಡಿಯೊ ವೈರಲ್(Viral Video)​ ಆಗಿದೆ.

VISTARANEWS.COM


on

Babar Azam
Koo

ಕರಾಚಿ: ಪಾಕಿಸ್ತಾನ ತಂಡ ಮುಂದಿನ ತಿಂಗಳು ಟೆಸ್ಟ್​ ಸರಣಿಯನ್ನಾಡಲು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಗೆ ಈಗಿಂದಲೇ ಪಾಕ್​ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಪಾಕ್​ ನಾಯಕ ಬಾಬರ್​ ಅಜಂ(Babar Azam) ಅವರು ನೆಟ್ಸ್​ನಲ್ಲಿ 18 ವರ್ಷದ ವೇಗಿಯ ಎಸೆತವನ್ನು ಎದುರಿಸಲು ಪರದಾಟ ನಡೆಸಿದ್ದಾರೆ. ಈ ವಿಡಿಯೊ ವೈರಲ್(Viral Video)​ ಆಗಿದೆ.

ಬಾಬರ್​ ಅಜಂ ಮತ್ತು ಪಾಕ್​ನ ಕೆಲ ಬ್ಯಾಟರ್​ಗಳು ಈ 18 ವರ್ಷದ ನೆಟ್​ ಬೌಲರ್​ನ ಎಸೆತವನ್ನು ಡಿಫೆನ್ಸ್​ ಮಾಡಲು ಕೂಡ ಪರದಾಟ ನಡೆಸಿದ್ದಾರೆ. ಮಾಜಿ ವೇಗಿ ಅಖ್ತರ್​ ಅವರಂತೆ ಬೆಂಕಿ ಚೆಂಡೆಸೆಯುವ ಈ 18 ವರ್ಷದ ವೇಗಿ ಪಾಕ್​ ತಂಡದ ವೇಗಿ ನಸೀಮ್ ಶಾ ಅವರ ಕಿರಿಯ ಸಹೋದರ. ಇವರ ಹೆಸರು ಉಬೈದ್ ಶಾ(Ubaid Shah). ನಸೀಮ್​ ಕೂಡ ಘಾತಕ ಬೌಲಿಂಗ್​ಗೆ ಹೆಸರುವಾಸಿಯಾಗಿದ್ದು, ಇದೀಗ ತಮ್ಮ ಕೂಡ ಅಣ್ಣನಂತೆ ಬೌಲಿಂಗ್​ ನಡೆಸಲು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಪಾಕ್​ ತಂಡಕ್ಕೆ ಸೇರ್ಪಡೆಯಾದರೂ ಅಚ್ಚರಿಯಿಲ್ಲ.

ಇತ್ತೀಚೆಗೆ ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಕ್ರಿಕೆಟ್​ ಶಿಶು ಅಮೆರಿಕ ವಿರುದ್ಧವೂ ಸೋಲಿನ ಅಪಮಾನ ಎದುರಿಸಿತ್ತು. ಲೀಗ್​ ಹಂತದಲ್ಲೇ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಪಾಕ್​ ತಂಡದ ಹೀನಾಯ ಪ್ರದರ್ಶನಕ್ಕೆ ಮಾಜಿ ನಾಯಕ ಶಾಹಿದ್ ಅಫ್ರಿದಿ ಬಾಬರ್ ಅವರನ್ನು ತೀವ್ರವಾಗಿ ಟೀಕಿಸಿದ್ದರು.

“ಪಾಕಿಸ್ತಾನವನ್ನು ಮುನ್ನಡೆಸಲು ಬಾಬರ್‌ಗೆ ಸಂಪೂರ್ಣವಾಗಿ ಮುಕ್ತ ಅವಕಾಶ ಸಿಕ್ಕಿದ್ದರೂ ಕೂಡ ಇದನ್ನು ಅವರು ಉಪಯೋಗ ಮಾಡಿಕೊಂಡಿಲ್ಲ. ಅವರು ಫೀಲ್ಡ್​ನಲ್ಲಿ ತೆಗೆದುಕೊಳ್ಳುವ ನಿರ್ಧಾರವೇ ಗೊಂದಲಮಯವಾಗಿದೆ” ಎಂದು ಅಫ್ರಿದಿ ಹೇಳಿದ್ದರು.

ಇದನ್ನೂ ಓದಿ Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

ಕಳೆದ ವರ್ಷ(2023) ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಬಾಬರ್​ ಸಾರಥ್ಯದಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರಿತ್ತು. ಆಡಿದ 9 ಪಂದ್ಯಗಳ ಪೈಕಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ ಲೀಗ್​ ಹಂತದಲ್ಲೇ ಹೊರಬಿದ್ದಿತ್ತು. ಹೀಗಾಗಿ ಬಾಬರ್​ ವಿರುದ್ಧ ಪಾಕ್​ ತಂಡದ ಮಾಜಿ ಆಟಗಾರರು ಸೇರಿ ಅಂದಿನ ಪಿಬಿ ಅಧ್ಯಕ್ಷ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಾಬರ್ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದಿದ್ದರು. ಬಾಬರ್ ಕೆಳಗಿಳಿದ ಬಳಿಕ ಶಾನ್ ಮಸೂದ್ ಅವರನ್ನು ಟೆಸ್ಟ್ ನಾಯಕರನ್ನಾಗಿ ನೇಮಿಸಿದರೆ, ಶಾಹೀನ್ ಅಫ್ರಿದಿಗೆ ಟಿ20 ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಯಿತು. ಆದರೆ ಇವರ ನಾಯಕತ್ವದಲ್ಲಿ ಪಾಕಿಸ್ತಾನ ಹಿಂದೆಂದು ಕಾಣದ ವೈಫಲ್ಯ ಕಂಡಿತ್ತು. ಆಡಿದ ಹಲವು ಸರಣಿಗಳಲ್ಲಿ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಅಫ್ರೀದಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಮತ್ತೆ ಬಾಬರ್​ಗೆ ನಾಯಕತ್ವದ ಪಟ್ಟ ನೀಡಲಾಗಿತ್ತು. ಆದರೆ ಇವರ ನಾಯಕತ್ವದಲ್ಲಿಯೂ ಪಾಕ್​ ಕಳಪೆ ಪ್ರದರ್ಶನ ತೋರಿದೆ.

Continue Reading

ಕ್ರೀಡೆ

Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

Paris Olympics: ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಡ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ.

VISTARANEWS.COM


on

Paris Olympics
Koo

ಬೆಂಗಳೂರು: ಸಾವಿರಾರು(Olympic Games History) ವರ್ಷಗಳ ಇತಿಹಾಸ ಹೊಂದಿರುವ ಪ್ರತಿಷ್ಠಿತ ಒಲಿಂಪಿಕ್ಸ್​ ಕ್ರೀಡಾಕೂಟವನ್ನು ಯಾವ ದೇಶ ಅತ್ಯಧಿಕ ಬಾರಿ ಆತಿಥ್ಯ ವಹಿಸಿದೆ ಎನ್ನುವ ಕುತೂಹಲಕಾರಿ ವಿವರ ಇಲ್ಲಿದೆ. ಇದುವರೆಗೂ ಅತಿ ಹೆಚ್ಚು ಒಲಿಂಪಿಕ್ಸ್​ ಸಂಘಟಿಸಿದ ದಾಖಲೆ ಲಂಡನ್‌ ಹೆಸರಿನಲ್ಲಿತ್ತು. ಇದೀಗ ಈ ದಾಖಲೆಯನ್ನು ಪ್ಯಾರಿಸ್(Paris Olympics)​ ಸರಿಗಟ್ಟಿದೆ.

ಹೌದು, ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಡ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ.

ಲಂಡನ್‌ ಒಟ್ಟು 3 ಬಾರಿ ಒಲಿಂಪಿಕ್‌ ಕ್ರೀಡಾಕೂಟವನ್ನು ನಡೆಸಿಕೊಟ್ಟ ಹೆಗ್ಗಳಿಕೆ ಹೊಂದಿದೆ. 1908, 1948 ಮತ್ತು 2012ರಲ್ಲಿ ಲಂಡನ್​ ಒಲಿಂಪಿಕ್ಸ್‌ ಆತಿಥ್ಯ ವಹಿಸಿಕೊಂಡಿತ್ತು. ಲಂಡನ್​ ಮತ್ತು ಪ್ಯಾರಿಸ್​ ಮೂರು ಒಲಿಂಪಿಕ್ಸ್​ ನಡೆಸಿದ ಖ್ಯಾತಿ ಗಳಿಸಲಿದೆ. ಮುಂದಿನ ಸಲ ಅಮೆರಿಕದ ಲಾಸ್‌ ಏಂಜಲೀಸ್‌ ಕೂಡ ಈ ಸಾಲಿಗೆ ಸೇರಲಿದೆ. ಇಲ್ಲಿ 1932 ಮತ್ತು 1984ರ ಒಲಿಂಪಿಕ್ಸ್‌ ನಡೆದಿತ್ತು.

ಇದನ್ನೂ ಓದಿ Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಒಲಿಂಪಿಕ್ಸ್​ ಆತಿಥ್ಯ ವಹಿಸಿಕೊಂಡ ದೇಶ


1. ಲಂಡನ್​- 3 ಬಾರಿ (1908,1948,2012)

2. ಪ್ಯಾರಿಸ್​- 3 ಬಾರಿ (1900,1924,2024)

3. ಲಾಸ್‌ ಏಂಜಲೀಸ್‌-2 ಬಾರಿ (1932,1984)

4. ಟೋಕಿಯೊ- 2 ಬಾರಿ (1964,2021)

5. ಅಥೆನ್ಸ್-2 ಬಾರಿ (1986,2004)

ಇದನ್ನೂ ಓದಿ The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

ಚೊಚ್ಚಲ ಒಲಿಂಪಿಕ್​ ಸಂಘಟಿಸಿದ ಹೆಗ್ಗಳಿಕೆ ಗ್ರೀಸ್​ ದೇಶಕ್ಕೆ ಸಲ್ಲುತ್ತದೆ. ಸುಮಾರು ಕ್ರಿ.ಪೂ. 776ರಲ್ಲಿ ಗ್ರೀಸ್‌ನ ಒಲಿಂಪಿಯಾದಲ್ಲಿ ಮೊದಲ ಬಾರಿಗೆ ಒಲಿಂಪಿಕ್‌ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮೂರ್ನಾಲ್ಕು ಶತಮಾನದವರೆಗೆ ಈ ಕೂಟವನ್ನು ಆಯೋಜಿಸಲಾಗುತ್ತಿತ್ತು. ಬಳಿಕ ಕ್ರಮೇಣ ನಿಂತುಹೋದ ಒಲಿಂಪಿಕ್‌ಗೆ ಚಾಲನೆ ಸಿಕ್ಕಿದ್ದು 1859ರಲ್ಲಿ. ಇವಾಂಜೆಲಾಸ್‌ ಝಪ್ಪಾಸ್‌ ಎಂಬಾತ ಪ್ರಪ್ರಥಮ ಅಂತಾರಾಷ್ಟ್ರೀಯ ಒಲಿಂಪಿಕ್‌ ಕ್ರೀಡಾಕೂಟವನ್ನು ಪ್ರಾಯೋಜಿಸಿದನು. ಬಳಿಕ 1894ರಲ್ಲಿ ಫ್ರಾನ್ಸ್‌ನ ಪಿಯರೆ ಡಿ ಕ್ಯುಬರ್ತಿನ್‌ ಎಂಬುವವನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯನ್ನು ಹುಟ್ಟುಹಾಕಿ, 1896ರಲ್ಲಿ ಪ್ರಥಮ ಬಾರಿಗೆ ಗ್ರೀಸ್‌ನ ಈಗಿನ ರಾಜಧಾನಿ ಅಥೆನ್ಸ್‌ ನಗರದಲ್ಲಿ ಬೇಸಿಗೆ ಒಲಿಂಪಿಕ್‌ ಕ್ರೀಡಾಕೂಟ ಆಯೋಜಿಸಲಾಯಿತು. ಇದು ಮೊದಲ ಆಧುನಿಕ ಒಲಿಂಪಿಕ್‌ ಕ್ರೀಡಾಕೂಟ.

ಇದನ್ನೂ ಓದಿ Paris Olympics 2024: ಮೊಟ್ಟಮೊದಲ ಒಲಿಂಪಿಕ್ಸ್ ಕ್ರೀಡಾಕೂಟದ 10 ಕುತೂಹಲಕರ ಸಂಗತಿಗಳಿವು

ಮೊದಲ ಒಲಿಂಪಿಕ್​ ಸಂಘಟಿಸಿದ ಕಾರಣ ಪ್ರತಿ ಬಾರಿಯ ಉದ್ಘಾಟನ ಸಮಾರಂಭದಲ್ಲಿ ಕ್ರೀಡಾಪಟುಗಳ ಪಥಸಂಚಲನ ನಡೆಯುವಾಗ ಗ್ರೀಸ್​ ತಂಡವೇ ಮುಂಚೂಣಿಯಲ್ಲಿರುತ್ತದೆ. ಬಳಿಕ ಆತಿಥೇಯ ದೇಶದ ಭಾಷೆಯ ಅಲ್ಪಾಬೆಟಿಕ್‌ ಅಕ್ಷರಮಾಲೆಯನ್ನು ಅನುಸರಿಸಿ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತವೆ. ಆತಿಥೇಯ ತಂಡ ಯಾವಾಗಲೂ ಕೊನೆಯ ಸ್ಥಾನದಲ್ಲಿರುತ್ತದೆ.

Continue Reading

ಕ್ರೀಡೆ

India Squad Announcement: ಶ್ರೀಲಂಕಾ ಸರಣಿಗೆ ಮರಳಿದ ಹಿಟ್​ಮ್ಯಾನ್​ ರೋಹಿತ್​!

India Squad Announcement: ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡ ಇಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಆಯ್ಕೆ ಸಮಿತಿಯ ಅಧ್ಯಕ್ಷ ಅಜೀತ್​ ಅಗರ್ಕರ್​ ಮತ್ತು ಕೋಚ್​ ಗಂಭೀರ್​ ಸಭೆ ನಡೆಸಿ ಬಳಿಕ ತಂಡ ಪ್ರಕಟಿಸಲಿದ್ದಾರೆ.

VISTARANEWS.COM


on

India Squad Announcement
Koo

ಮುಂಬಯಿ: ಟಿ20 ವಿಶ್ವಕಪ್​ ಗೆಲುವಿನ ಬಳಿಕ ವಿಶ್ರಾಂತಿಯಲ್ಲಿರುವ ಟೀಮ್​ ಇಂಡಿಯಾ(Team India) ನಾಯಕ ರೋಹಿತ್‌ ಶರ್ಮಾ(Rohit Sharma) ಅವರು ಶ್ರೀಲಂಕಾ(India Squad Announcement) ವಿರುದ್ಧದ ಏಕದಿನ ಸರಣಿಯನ್ನಾಡಲಿದ್ದಾರೆ ಎಂದು ವರದಿಯಾಗಿದೆ. ನೂತನ ಕೋಚ್​ ಗೌತಮ್​ ಗಂಭೀರ್(Gautam Gambhir)​ ಅವರು ವಿಶ್ರಾಂತಿ ಪಡೆದಿರುವ ವಿರಾಟ್​ ಕೊಹ್ಲಿ, ರೋಹಿತ್​ ಲಂಕಾ ಸರಣಿಯಲ್ಲಿ ಆಡಬೇಕು ಎಂದು ಬಿಸಿಸಿಐಗೆ(BCCI) ಮನವಿ ಮಾಡಿದ್ದರು. ಇದೀಗ ರೋಹಿತ್​ ಆಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೂ ಮೊದಲು ಭಾರತ ತಂಡ ಕೆಲವೇ ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದೆ. ಹೆಚ್ಚಾಗಿ ಟಿ20 ಸರಣಿ ಮಾತ್ರ ಆಡಲಿದೆ. ಕಡಿಮೆ ಏಕದಿನ ಪಂದ್ಯ ಇರುವ ಕಾರಣ ಅನುಭವಿ ಆಟಗಾರರು ಈ ಪ್ರವಾಸದಲ್ಲಿ ಪಾಲ್ಗೊಳ್ಳಬೇಕು ಎಂದು ಗೌತಮ್ ಗಂಭೀರ್‌ ಅಭಿಪ್ರಾಯಪಟ್ಟಿದ್ದರು. ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವನ್ನು ರೋಹಿತ್‌ ಮುನ್ನಡೆಸುವುದನ್ನು ಈಗಾಗಲೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಖಾತ್ರಿ ಪಡಿಸಿದ್ದಾರೆ. ವಿರಾಟ್​ ಕೊಹ್ಲಿ ಲಂಕಾ ಏಕದಿನ ಸರಣಿ ಆಡುವ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡ ಇಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಆಯ್ಕೆ ಸಮಿತಿಯ ಅಧ್ಯಕ್ಷ ಅಜೀತ್​ ಅಗರ್ಕರ್​ ಮತ್ತು ಕೋಚ್​ ಗಂಭೀರ್​ ಸಭೆ ನಡೆಸಿ ಬಳಿಕ ತಂಡ ಪ್ರಕಟಿಸಲಿದ್ದಾರೆ. ಈ ಹಿಂದೆ ರೋಹಿತ್​ ವಿಶ್ರಾಂತಿ ಪಡೆಯುವ ಕಾರಣ ಹಂಗಾಮಿ ನಾಯಕನಾಗಿ ಕನ್ನಡಿಗ ಕೆ.ಎಲ್ ರಾಹುಲ್​ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ, ರೋಹಿತ್​ ತಂಡಕ್ಕೆ ಲಭ್ಯರಿದ್ದರೆ, ರಾಹುಲ್​ಗೆ ಉಪನಾಯಕ ಸ್ಥಾನ ನೀಡುವ ಸಾಧ್ಯತೆ ಇದೆ. ಟಿ20ಗೆ ಸೂರ್ಯಕುಮಾರ್​ ಯಾದವ್​ ನಾಯಕನಾಗುವುದು ಬಹುತೇಖ ಖಚಿತ ಎನ್ನುವಂತಿದೆ.

ಇದನ್ನೂ ಓದಿ Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

ರಣಜಿ ಆಡಲು ನಿರಾಕರಿಸಿ ಅಶಿಸ್ತು ತೋರಿದ ಕಾರಣದಿಂದ ಬಿಸಿಸಿಐ(BCCI) ವಾರ್ಷಿಕ ಗುತ್ತಿಗೆಯಿಂದ ಹೊರಬಿದ್ದಿರುವ ಶ್ರೇಯಸ್ ಅಯ್ಯರ್(Shreyas Iyer) ಅವರು ಶ್ರೀಲಂಕಾ(IND vs SL) ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಕೋಚ್ ಗೌತಮ್ ಗಂಭೀರ್ ಅವರ ಉಸ್ತುವಾರಿಯಲ್ಲಿ ಭಾರತ ತಂಡ ಆಡುವ ಮೊದಲ ಸರಣಿ ಇದಾಗಲಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇರಲಿದೆ. 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ.

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

Continue Reading
Advertisement
Karnataka Rain
ಮಳೆ5 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Virat Kohli
ಕ್ರೀಡೆ7 mins ago

Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Golden Designer Fashion Wears Trendy Golden Designer Wedding Fashion
ಫ್ಯಾಷನ್11 mins ago

Golden Designer Fashion Wears: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಶೈಲಿಯ ಗೋಲ್ಡನ್‌ ಡಿಸೈನರ್‌ವೇರ್ಸ್!

NEET-UG 2024
ದೇಶ15 mins ago

NEET UG 2024: “ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದೇ ನೀಟ್‌ ಫಲಿತಾಂಶ ಪ್ರಕಟಿಸಿ”-NTAಗೆ ಸುಪ್ರೀಂ ಸೂಚನೆ; ವಿಚಾರಣೆ ಮುಂದೂಡಿಕೆ

Money Guide
ಮನಿ-ಗೈಡ್22 mins ago

Money Guide: ಇಎಂಐ ಮೂಲಕ ಮೊಬೈಲ್‌ ಖರೀದಿಸುವ ಯೋಚನೆಯಲ್ಲಿದ್ದೀರಾ? ಈ ಅಂಶ ನಿಮಗೆ ತಿಳಿದಿರಲೇ ಬೇಕು

Babar Azam
ಕ್ರೀಡೆ33 mins ago

Babar Azam: 18 ವರ್ಷದ ನೆಟ್​ ಬೌಲರ್​ ಮುಂದೆ ಪರದಾಡಿದ ಪಾಕ್​ ನಾಯಕ ಬಾಬರ್​ ಅಜಂ; ವಿಡಿಯೊ ವೈರಲ್​

Train Accident
ಪ್ರಮುಖ ಸುದ್ದಿ54 mins ago

Train Accident : ಎಕ್ಸ್​ಪ್ರೆಸ್​ ರೈಲು ಅಪಘಾತ; ನಾಲ್ವರ ಸಾವು, ಹಲವರಿಗೆ ಗಾಯ

Uttar pradesh Politics
ದೇಶ56 mins ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಯಾದಗಿರಿ1 hour ago

Murder case : ಪತ್ನಿ, ಅತ್ತೆ ಹಾಗೂ ಮಾವನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಚಾಕುವಿನಿಂದ ಇರಿದು ಕೊಂದ

b nagendra valmiki corporation scam 2
ಕ್ರೈಂ2 hours ago

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌