IOC Sessions : 40 ವರ್ಷಗಳ ಬಳಿಕ ಭಾರತಕ್ಕೆ ಮರಳಿದ ಐಒಸಿ ಅಧಿವೇಶನ - Vistara News

ಕ್ರೀಡೆ

IOC Sessions : 40 ವರ್ಷಗಳ ಬಳಿಕ ಭಾರತಕ್ಕೆ ಮರಳಿದ ಐಒಸಿ ಅಧಿವೇಶನ

2023ರ ಅಕ್ಟೋಬರ್ 15ರಿಂದ 17ರವರೆಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) 141ನೇ ಅಧಿವೇಶನಕ್ಕೆ (IOC Sessions ) ಮುಂಬೈ ಆತಿಥ್ಯ ವಹಿಸಲಿದೆ .

VISTARANEWS.COM


on

IOC Sesion in india
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬೀಜಿಂಗ್​​ನಲ್ಲಿ ಒಲಿಂಪಿಕ್ಸ್​ ವೇಳೆ ಭಾರತದಲ್ಲಿ ಐಒಸಿ ಅಧಿವೇಶನ ನಡೆಸಬಹುದೇ ಎಂದು ಮತಕ್ಕೆ ಹಾಕಲಾಗಿತ್ತು. ರಿಲಯನ್ಸ್​ ಪೌಂಡೇಷನ್​ನ ಮುಖ್ಯಸ್ಥರಾದ ನೀತಾ ಅಂಬಾನಿ ಬಿಡ್ ಮಾಡಿದ್ದರು ಭಾರತದ ಪರವಾಗಿ ಒಟ್ಟು 76 ಮತಗಳಲ್ಲಿ 75 ಮತಗಳು ಲಭಿಸಿದ್ದರು. ಅಂತೆಯೇ 2023ರ ಅಕ್ಟೋಬರ್ 15ರಿಂದ 17ರವರೆಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) 141ನೇ ಅಧಿವೇಶನಕ್ಕೆ (IOC Sessions ) ಮುಂಬೈ ಆತಿಥ್ಯ ವಹಿಸಲಿದೆ. ಒಲಿಂಪಿಕ್ ಕ್ರೀಡಾಕೂಟವನ್ನು ಭಾರತಕ್ಕೆ ತರುವ ಪ್ರಯತ್ನದಲ್ಲಿ ಇದು ಪ್ರಮುಖವಾದ ಹೆಜ್ಜೆಯಾಗಿದೆ.

ಐಒಸಿ ಅಧಿವೇಶನ ಭಾರತಕ್ಕೆ ಲಗ್ಗೆಯಿಟ್ಟರೂ ಒಲಿಂಪಿಕ್ ಕ್ರೀಡಾಕೂಟವೂ ಭಾರತಕ್ಕೆ ಬರುತ್ತದೆಯೇ ಎಂಬುದು ಪ್ರಶ್ನೆ ಇನ್ನೂ ಇದೆ. ಐಒಸಿ ಅಧಿವೇಶನದ ಆತಿಥ್ಯ ವಹಿಸುವ ಬಗ್ಗೆ ಮಾತನಾಡಿದ ನೀತಾ ಅಂಬಾನಿ, “ಕ್ರೀಡೆ ಯಾವಾಗಲೂ ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಭರವಸೆ ಮತ್ತು ಸ್ಫೂರ್ತಿಯ ಸಂಕೇತವಾಗಿದೆ. ಕ್ರೀಡೆಯ ವಿಚಾರಕ್ಕೆ ಬಂದಾಗ ನಾವು ಇಂದು ವಿಶ್ವದ ಅತ್ಯಂತ ಸಣ್ಣ ದೇಶಗಳ ಪೈಕಿ ಒಂದಾಗಿದ್ದೇವೆ. ಹೀಗಾಗಿ ಭಾರತದ ಯುವಕರಿಗೆ ಒಲಿಂಪಿಕ್ಸ್ ನ ಸಂಭ್ರಮವನ್ನು ಪರಿಚಯಿಸಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವುದು ನಮ್ಮ ಕನಸು” ಎಂದು ಹೇಳಿದ್ದಾರೆ.

ಇಲ್ಲೇ ನಿರ್ಧಾರ

ನೀತಾ ಅಂಬಾನಿ ಒಲಿಂಪಿಕ್ಸ್ ಅನ್ನು ಭಾರತಕ್ಕೆ ತರುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಐಒಸಿ ಅಧಿವೇಶನಗಳು ನಡೆಯುವುದು ಈ ನಿಟ್ಟಿನಲ್ಲಿ ಪ್ರಾಮುಖ್ಯವಾಗಿದೆ. ಐಒಸಿ ಅಧಿವೇಶನವು ಒಲಿಂಪಿಕ್ ಕ್ರೀಡಾಕೂಟದ ಬಗ್ಗೆ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾಗಿದೆ. ಒಲಿಂಪಿಕ್ ಚಾರ್ಟರ್ ಅನ್ನು ಅಂಗೀಕರಿಸುವುದು ಅಥವಾ ತಿದ್ದುಪಡಿ ಮಾಡುವುದು, ಐಒಸಿ ಸದಸ್ಯರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡುವುದು ಮತ್ತು ಒಲಿಂಪಿಕ್ಸ್​​ಗೆ ಆತಿಥ್ಯ ವಹಿಸುವ ನಗರವನ್ನು ಆಯ್ಕೆ ಮಾಡುವುದು ಈ ಸಭೆಯಲ್ಲಿ ಚರ್ಚೆಯಾಗುತ್ತದೆ. ಉದಾಹರಣೆಗೆ, ಒಲಿಂಪಿಕ್ಸ್​​ನಲ್ಲಿ ಕ್ರಿಕೆಟ್ ಸೇರ್ಪಡೆಯ ಬಗ್ಗೆ ಚರ್ಚೆ ಭರದಿಂದ ಸಾಗಿದೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡಾಕೂಟಕ್ಕೆ ಸೇರಿಸಲು ನಿರ್ಧರಿಸಿದರೆ, ಮುಂಬೈನಲ್ಲಿ ನಡೆಯಲಿರುವ ಐಒಸಿ ಅಧಿವೇಶನದಲ್ಲಿ ಪ್ರಕಟಿಸಲಾಗುತ್ತದೆ.

ಭಾರತಕ್ಕೆ ಗಣ್ಯರ ಭೇಟಿ

ಐಒಸಿ ಅಧಿವೇಶನಕ್ಕಾಗಿ ಭಾರತಕ್ಕೆ ಭೇಟಿ ನೀಡುವ ವಿಶ್ವಪ್ರಸಿದ್ಧ ಕ್ರೀಡಾ ವ್ಯಕ್ತಿಗಳ ದೊಡ್ಡ ಪಟ್ಟಿಯೇ ಇದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಾಕ್​, ಫಿಫಾ ಅಧ್ಯಕ್ಷ ಗಿಯಾನಿ ಇನ್ಫಾಂಟಿನೊ, ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಫೆಡರೇಶನ್ ಅಧ್ಯಕ್ಷ ಸೆಬಾಸ್ಟಿಯನ್ ಕೋ, ಮೊನಾಕೊದ ಪ್ರಿನ್ಸ್ ಆಲ್ಬರ್ಟ್ 2 ಮತ್ತು ಪೋಲ್ ವಾಲ್ಟ್ ಚಾಂಪಿಯನ್ ಜೆಲೆನಾ ಇಸಿನ್ಬಯೇವಾ ಈ ಪಟ್ಟಿಯಲ್ಲಿದ್ದಾರೆ.

ಇದನ್ನೂ ಓದಿ : Cricket News : ಕ್ರಿಕೆಟ್​ ಪ್ರೇಮಿಗಳಿಗೆ ಖುಷಿ ಸುದ್ದಿ; ಅಮೆರಿಕದ ಒಲಿಂಪಿಕ್ಸ್​ ಸ್ಪರ್ಧೆಗಳ ಪಟ್ಟಿಗೆ ಕ್ರಿಕೆಟ್​​!

ನಲವತ್ತು ವರ್ಷಗಳ ಹಿಂದೆ, 1983ರಲ್ಲಿ ನವದೆಹಲಿ ಐಒಸಿ ಅಧಿವೇಶನದ 86ನೇ ಆವೃತ್ತಿಗೆ ಆತಿಥ್ಯ ವಹಿಸಿತ್ತು. ಅಂದಿನಿಂದ, ಭಾರತವು ಒಲಿಂಪಿಕ್ಸ್ ಅನ್ನು ಬಿಡಿ, ಐಒಸಿ ಅಧಿವೇಶನದ ಆತಿಥ್ಯ ವಹಿಸಲು ಹಾತೊರೆಯುತ್ತಿತ್ತು. ಒಲಿಂಪಿಕ್ಸ್ ಭಾರತಕ್ಕೆ ಬರುತ್ತದೆ ಎಂಬ ಭರವಸೆಯಲ್ಲಿ ಅನೇಕ ತಲೆಮಾರುಗಳ ಆಟಗಾರರು ಕಾಯುತ್ತಿದ್ದರು, ಆದರೆ ಒಲಿಂಪಿಕ್ಸ್ ಭಾರತದಲ್ಲಿ ನಡೆಸಲು ಸಾಧ್ಯವಾಗಲಿಲ್ಲ. ಒಲಿಂಪಿಕ್ ಸಮಿತಿಯಲ್ಲಿ ಭಾರತದ ಪರವಾಗಿ ಧ್ವನಿ ಎತ್ತಲು ಯಾವುದೇ ಖಾಸಗಿ ಸದಸ್ಯರು ಇರಲಿಲ್ಲ ಎಂಬುದು ಇದಕ್ಕೆ ಮೂಲ ಕಾರಣ. ಆರು ವರ್ಷಗಳ ಹಿಂದೆ, ನೀತಾ ಅಂಬಾನಿ ಐಒಸಿಯ ಮೊದಲ ಭಾರತೀಯ ಖಾಸಗಿ ಮಹಿಳಾ ಸದಸ್ಯತ್ವ ಪಡೆದರು. ಅವರ ಕಠಿಣ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, 141 ನೇ ಐಒಸಿ ಅಧಿವೇಶನದ ಆತಿಥ್ಯವನ್ನು ಭಾರತಕ್ಕೆ ಹಸ್ತಾಂತರಿಸಲಾಯಿತು.

ನೀತಾ ಅಂಬಾನಿ ಪರಿಶ್ರಮ

ನೀತಾ ಅಂಬಾನಿ ಕೇವಲ ಐಒಸಿಯ ಸದಸ್ಯರಾಗಿರುವುದು ಮಾತ್ರವಲ್ಲ, ಭಾರತದ ಕ್ರೀಡಾ ಪ್ರಪಂಚದ ಚಿತ್ರಣವನ್ನೇ ಬದಲಾಯಿಸುತ್ತಿದ್ದಾರೆ. ಇಂದು, 2 ಕೋಟಿ 15 ಲಕ್ಷಕ್ಕೂ ಹೆಚ್ಚು ಯುವ ಆಟಗಾರರು ಅವರ ಕ್ರೀಡಾ ಯೋಜನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ. ಕ್ರೀಡಾ ಜಗತ್ತಿನಲ್ಲಿ ಅವರ ವಿಶೇಷ ಉಪಕ್ರಮದ ಪ್ರಯೋಜನಗಳನ್ನು ಏಷ್ಯನ್ ಕ್ರೀಡಾಕೂಟದಲ್ಲಿ ಪ್ರತಿಫಲನಗೊಂಡಿತು. ಏಷ್ಯನ್ ಗೇಮ್ಸ್​​ನ ಪದಕ ವಿಜೇತರಲ್ಲಿ ಶೇಕಡಾ 10 ಕ್ಕಿಂತ ಹೆಚ್ಚು ಜನರು ರಿಲಯನ್ಸ್ ಫೌಂಡೇಶನ್​​ನೊಂದಿಗೆ ಸಂಬಂಧ ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

DP Manu: ಡೋಪಿಂಗ್ ಸುಳಿಯಲ್ಲಿ ಸಿಲುಕಿದ ಜಾವೆಲಿನ್‌ ತಾರೆ ಮನು; ಒಲಿಂಪಿಕ್ಸ್​ಗೆ ಹಿನ್ನಡೆ

DP Manu: 24 ವರ್ಷ ವರ್ಷದ ಮನು ಅವರು ವಿಶ್ವ ರ‍್ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿತ್ತು. ಆದರೆ ಅವರ ವಿರುದ್ಧ ಉದ್ದೀಪನ ಮದ್ದು ಸೇವನೆ ಆರೋಪ ಕೇಳಿ ಬಂದಿರುವ ಕಾರಣ ಅವರಿಗೆ ‘ಪ್ಯಾರಿಸ್‌ ಟಿಕೆಟ್‌’ ಕೈತಪ್ಪುವ ಆತಂಕ ಎದುರಾಗಿದೆ.

VISTARANEWS.COM


on

DP Manu
Koo

ಬೆಂಗಳೂರು: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ವಿಶ್ವಾಸದಲ್ಲಿದ, ಕನ್ನಡಿಗ, ಜಾವೆಲಿನ್‌ ಥ್ರೊ ಸ್ಪರ್ಧಿ ಡಿ.ಪಿ. ಮನು(DP Manu) ಅವರಿಗೆ ಆಘಾತವೊಂದು ಎದುರಾಗಿದೆ. ಅವರು ಉದ್ದೀಪನ ಮದ್ದು ಸೇವನೆ ಬಲೆಯಲ್ಲಿ ಸಿಲುಕಿರುವ ಸಾಧ್ಯತೆಯೊಂದು ಕಂಡುಬಂದಿದೆ. ರಾಷ್ಟ್ರೀಯ ಉದ್ದೀಪನ ಮದ್ದುಸೇವನೆ ತಡೆ ಘಟಕ (National Anti-Doping Agency) ಸೂಚನೆಯ ಮೇರೆಗೆ ಮನು ಅವರಿಗೆ ಸ್ಪರ್ಧೆಗಳಿಂದ ದೂರ ಉಳಿಯುವಂತೆ ಅಥ್ಲೆಟಿಕ್ಸ್‌ ಫೆಡರೇಷನ್ ಆಫ್‌ ಇಂಡಿಯಾ (ಎಎಫ್‌ಐ) ಹೇಳಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ವಿಶ್ವಾಸದಲ್ಲಿದ್ದ

ಕಳೆದ ವರ್ಷ ಏಷ್ಯನ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ, ಮತ್ತು ಕಳೆದ ತಿಂಗಳು ಭುವನೇಶ್ವರದಲ್ಲಿ ನಡೆದ ಫೆಡರೇಷನ್‌ ಕಪ್‌ ಕೂಟದಲ್ಲಿ ನೀರಜ್​ ಚೋಪ್ರಾಗೆ ಭಾರೀ ಪೈಪೋಟಿ ನೀಡಿ ಬೆಳ್ಳಿ ಗೆದ್ದಿದ್ದ 24 ವರ್ಷ ವರ್ಷದ ಮನು ಅವರು ವಿಶ್ವ ರ‍್ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿತ್ತು. ಆದರೆ ಅವರ ವಿರುದ್ಧ ಉದ್ದೀಪನ ಮದ್ದು ಸೇವನೆ ಆರೋಪ ಕೇಳಿ ಬಂದಿರುವ ಕಾರಣ ಅವರಿಗೆ ‘ಪ್ಯಾರಿಸ್‌ ಟಿಕೆಟ್‌’ ಕೈತಪ್ಪುವ ಆತಂಕ ಎದುರಾಗಿದೆ.

ಹರಿಯಾಣದ ಪಂಚಕುಲಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ-ರಾಜ್ಯ ಚಾಂಪಿಯನ್‌ಷಿಪ್ಸ್‌ನ ಪ್ರಾಥಮಿಕ ಪಟ್ಟಿಯಲ್ಲಿ ಮನು ಹೆಸರು ಹೆಸರು ಇತ್ತು. ಆದರೆ ನಾಡಾ(NADA) ಸೂಚನೆಯ ಮೇರೆಗೆ ಪರಿಷ್ಕೃತ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿದೆ. ಸ್ಪರ್ಧಾಕೂಟಗಳಲ್ಲಿ ಭಾಗವಹಿಸದಂತೆ ಮನು ಅವರನ್ನು ತಡೆಯುವಂತೆ ‘ನಾಡಾ’, ಫೆಡರೇಷನ್‌ಗೆ ಸೂಚನೆ ನೀಡಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಎಎಫ್‌ಐ ಅಧ್ಯಕ್ಷ ಅದಿಲ್‌ ಸುಮರಿವಾಲಾ, ನಾಡಾ ಸೂಚನೆಯಂತೆ ಅವರನ್ನು ಯಾವುದೇ ಸ್ಪರ್ಧೆಯಲ್ಲಿ ಪಾಲ್ಗೊಳ್ಳದಂತೆ ಹೇಳಲಾಗಿದೆ. ಆದರೆ ಅವರು ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ದೋಷಿಯಾಗಿದ್ದಾರೆಯೇ ಎಂಬುದು ಖಚಿತವಾಗಿಲ್ಲ ಎಂದು ಪಿಟಿಐಗೆ ಹೇಳಿದ್ದಾರೆ.

ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ತಂದೆ ಪ್ರಕಾಶ ಹಾಗೂ ತಾಯಿ ಸುಜಾತಾ. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇದೇ ವೇಳೆ ಮನು ಅವರು ಅಂತಾರಾಜ್ಯ, ಜೂನಿಯರ್‌ ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡರು. ಆಳ್ವಾಸ್‌ ಕಾಲೇಜಿನಲ್ಲಿ ಅವರು ಪಡೆದ ತರಬೇತಿ, ನೀಡಿದ ಪ್ರದರ್ಶನವು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

ಕಾಶಿನಾಥ ನಾಯ್ಕ್ ಗರಡಿಯಲ್ಲಿ ಬೆಳೆದ ಪ್ರತಿಭೆ


ಮನು ಅವರು ಕಾಶಿನಾಥ ನಾಯ್ಕ್​ ಅವರ ಗರಡಿಯಲ್ಲಿ ಬೆಳೆದು ಬಂದ ಪ್ರತಿಭೆ. 2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಅವರ ಪರಿಚಯವಾಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು. ಇದೀಗ ವಿಶ್ವ ಚಾಂಪಿಯನ್​ ನೀರಜ್​ಗೆ ತೀವ್ರ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾರೆ. ನೀರಜ್​ ಕೂಡ ಕಾಶಿನಾಥ ನಾಯ್ಕ್ ಮಾರ್ಗದರ್ಶನದಲ್ಲೇ ಬೆಳೆದು ಬಂದ ಪ್ರತಿಭೆಯಾಗಿದ್ದಾರೆ. ಒಟ್ಟಿನಲ್ಲಿ ಕನ್ನಡಿಗರೊಬ್ಬರು ಜಾವೆಲಿನ್‌ ಥ್ರೋ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಹೆಮ್ಮೆಯ ಸಂಗತಿ.

Continue Reading

ಕ್ರೀಡೆ

IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

IND vs SA Final: ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಇರುವ ಭಾರತ ತಂಡವನ್ನು ಬಲಿಷ್ಠ ಎನ್ನಲೇಬೇಕು. ಆದರೆ, ಭಾರತ ಪೂರ್ಣ ಎಚ್ಚರದಿಂದಲೇ ಫೈನಲ್​ ಆಡಬೇಕು.

VISTARANEWS.COM


on

IND vs SA Final
Koo

ಬಾರ್ಬಡೋಸ್​: 10 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಲ್ಲಿ ಫೈನಲ್​(IND vs SA Final) ಪ್ರವೇಶಿಸಿರುವ ಭಾರತ ತಂಡ ಫೈನಲ್​ ಪಂದ್ಯ ಆಡಲು ಸಜ್ಜಾಗಿ ನಿಂತಿದೆ. ಬ್ರಿಜ್‌ಟೌನ್‌ನ(Bridgetown) “ಕೆನ್ಸಿಂಗ್ಟನ್‌ ಓವಲ್‌’(Kensington Oval) ಮೈದಾನದಲ್ಲಿ ಇಂದು ನಡೆಯುವ ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ(South Africa vs India Final) ಸವಾಲು ಎದುರಿಸಲಿದೆ. ರೋಹಿತ್ ಶರ್ಮ ಮತ್ತು ವಿರಾಟ್​ ಕೊಹ್ಲಿಗೆ ಇದು ಬಹುತೇಕ ಕೊನೆಯ ಟಿ20 ವಿಶ್ವಕಪ್​ ಟೂರ್ನಿಯಾಗಿದೆ. ತಮ್ಮ ಅಂತಿಮ ಪ್ರಯತ್ನದಲ್ಲಾದರೂ ಕಪ್​ ಗೆದ್ದು ಸ್ಮರಣೀಯ ವಿದಾಯ ಸಿಗುವಂತಾಗಲಿ ಎಂದು ಉಭಯ ಆಟಗಾರರ ಅಭಿಮಾನಿಗಳ ಹಾರೈಕೆಯಾಗಿದೆ.

ರನ್‌ ಮಷಿನ್‌ ಖ್ಯಾತಿಯ ವಿರಾಟ್​ ಕೊಹ್ಲಿ ಈ ಬಾರಿಯ ವಿಶ್ವಕಪ್​ನಲ್ಲಿ ನಿರೀಕ್ಷಿತ ಪ್ರದರ್ಶನ ತೋರಿಲ್ಲ. ಆಡಿದ 7 ಪಂದ್ಯಗಳಲ್ಲಿ ವಿರಾಟ್‌ ಗಳಿಸಿರುವುದು ಕೇವಲ 75 ರನ್‌. ಪ್ರತಿ ಐಸಿಸಿ ಟೂರ್ನಿಯಲ್ಲಿ ಅಬ್ಬರಿಸುವ ಕೊಹ್ಲಿ ಇಷ್ಟೊಂದು ಕಳಪೆ ಪ್ರದರ್ಶನ ತೋರಿದ್ದು ಇದೇ ಮೊದಲು. ಸ್ವತಃ ಕೊಹ್ಲಿ ಕೂಡ ತಮ್ಮ ಬ್ಯಾಟಿಂಗ್​ ಬಗ್ಗೆ ಚಿಂತಿಸಿ ಕಣ್ಣೀರು ಕೂಡ ಹಾಕಿದ್ದಾರೆ. 35 ವರ್ಷದ ವಿರಾಟ್ ಕೊಹ್ಲಿ ಮತ್ತು 36 ವರ್ಷದ ರೋಹಿತ್​ ಶರ್ಮ ಪಾಲಿಗೆ ಬಹುತೇಕ ಇದೇ ಕೊನೆಯ ಟಿ20 ವಿಶ್ವಕಪ್ ಆಗುವ ಸಾಧ್ಯತೆಯಿದೆ. ಹೀಗಾಗಿ ವಿರಾಟ್ ಮತ್ತು ರೋಹಿತ್​ ತಮ್ಮ ಪಾಲಿನ ಬಹುತೇಕ ಕೊನೆಯ ವಿಶ್ವಕಪ್ ಫೈನಲ್‌ನಲ್ಲಿ ಸ್ಮರಣೀಯ ಇನಿಂಗ್ಸ್ ಆಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಬೇಕಿದೆ.

ದ್ರಾವಿಡ್​ಗೆ ಸಿಗಲಿ ಸ್ಮರಣೀಯ ಉಡುಗೊರೆ

ರಾಹುಲ್​ ದ್ರಾವಿಡ್​ ಅವರಿಗೆ ಕೋಚ್​ ಆಗಿ ಇದು ಕೊನೆಯ ಟೂರ್ನಿಯಾಗಿದೆ. ಈ ಟೂರ್ನಿ ಮುಕ್ತಾಯದ ಬಳಿಕ ಅವರು ಕೋಚಿಂಗ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ರಾಹುಲ್​ ದ್ರಾವಿಡ್​ಗೆ ಕೋಚ್​ ಆಗಿ ಮೊದಲ ಸವಾಲಾಗಿತ್ತು. ಇಲ್ಲಿ ಕಪ್​ ಗೆಲ್ಲಲು ತಂಡ ವಿಫಲವಾಗಿತ್ತು. ಬಳಿಕ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ನಲ್ಲಿಯೂ ಭಾರತ ಫೈನಲ್​ನಲ್ಲಿ ಸೋಲು ಕಂಡಿತ್ತು. ಇದೀಗ ನಿರ್ಗಮನದ ಹಂತದಲ್ಲಿರುವ ದ್ರಾವಿಡ್​ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಭಾರತ ತಂಡ ಕಪ್​ ಗೆದ್ದರೆ ಅವರಿಗೂ ಕೂಡ ವಿಶ್ವಕಪ್​ ಗೆದ್ದ ಸಂತಸವಿರುತ್ತದೆ. ಜತೆಗೆ ಸ್ಮರಣೀಯ ಉಡುಗೊರೆಯೊಂದು ಲಭಿಸಲಿದೆ. ಇದು ನೆರವೇರಲಿ ಎನ್ನುವುದು ಕೊಟ್ಯಂತರ ಅಭಿಮಾನಿಗಳ ಹಾರೈಕೆಯಾಗಿದೆ.

ಇದನ್ನೂ ಓದಿ IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

ಭಾರತ ಬಲಿಷ್ಠ ಆದರೆ ಎಚ್ಚರ ಅಗತ್ಯ


ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಇರುವ ಭಾರತ ತಂಡವನ್ನು ಬಲಿಷ್ಠ ಎನ್ನಲೇಬೇಕು. ಆದರೆ, ಭಾರತ ಪೂರ್ಣ ಎಚ್ಚರದಿಂದಲೇ ಫೈನಲ್​ ಆಡಬೇಕು. ಎದುರಾಳಿಯನ್ನು ಒಮ್ಮೆಯೂ ಕಡೆಗಣಿಸುವುದು ಸಾಧ್ಯವೇ ಇಲ್ಲ. ಯಾರು ಯಾರನ್ನು ಕೆಡವಿ ಬೀಳಿಸುತ್ತಾರೆ ಎಂಬುದು ಟಿ20 ಮಾದರಿಯಲ್ಲಿ ಅಂದಾಜಿಸುವುದಕ್ಕೆ ಕಷ್ಟ ಸಾಧ್ಯ. ಕೆಲವೇ ಓವರ್‌ಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಗುವುದು ಟಿ20 ಪಂದ್ಯಗಳ ಶಕ್ತಿ.

Continue Reading

ಕ್ರಿಕೆಟ್

IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

IND vs SA Final: 2014ರಲ್ಲಿ ಭಾರತ ಟಿ20 ಫೈನಲ್​ ಪ್ರವೇಶಿಸಿತ್ತು. ಆದರೆ ಲಂಕಾ ವಿರುದ್ಧ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದೀಗ 10 ವರ್ಷಗಳ ಬಳಿಕ ಈ ಕೂಟದಲ್ಲಿ ಭಾರತ ಫೈನಲ್​ ಪಂದ್ಯ ಆಡುತ್ತಿದೆ. ಎದುರಾಳಿ ದಕ್ಷಿಣ ಆಫ್ರಿಕಾಕ್ಕೆ ಇದು ಚೊಚ್ಚಲ ಫೈನಲ್​ ಪಂದ್ಯವಾಗಿದೆ.

VISTARANEWS.COM


on

IND vs SA Final
Koo

ಉತ್ತರ ಪ್ರದೇಶ: 2023ರ ಏಕದಿನ ವಿಶ್ವಕಪ್‌ ಗೆಲ್ಲುವ ಸುವರ್ಣಾವಕಾಶ ಕಳೆದುಕೊಂಡ ಭಾರತದ ಮುಂದೆ ಇದೀಗ ಟಿ20 ವಿಶ್ವಕಪ್(T20 World Cup 2024)​ ಗೆಲ್ಲುವ ಅವಕಾಶವೊಂದು ಬಂದು ನಿಂತಿದೆ. ಇಂದು(ಶನಿವಾರ) ನಡೆಯುವ ಫೈನಲ್(IND vs SA Final)​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ. ಟಿ20 ವಿಶ್ವಕಪ್‌ ಭಾರತಕ್ಕೆ ಒಲಿಯಲಿ ಎಂಬುದು ಕೋಟ್ಯಂತರ ಕ್ರಿಕೆಟ್‌ ಪ್ರೇಮಿಗಳ ಹಾರೈಕೆ. ಭಾರತ ತಂಡದ ಯಶಸ್ಸಿಗಾಗಿ ಅಭಿಮಾನಿಗಳು ಮತ್ತು ಕೆಲ ಸಾಧು ಸಂತರು ಉತ್ತರಪ್ರದೇಶದ ಪ್ರಯಾಗ್ ರಾಜ್​ನಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

2013ರ ಬಳಿಕ ಭಾರತ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಈ ಬಾರಿಯಾದರೂ ಫೈನಲ್​ನಲ್ಲಿ ಗೆದ್ದು ಭಾರತದ ಪ್ರಶಸ್ತಿ ಬರ ನೀಗಲಿ ಎನ್ನುವ ನಿಟ್ಟಿನಲ್ಲಿ ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳು ಟೀಮ್​ ಇಂಡಿಯಾ ಆಟಗಾರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ತಂಡದ ಆಟಗಾರರ ಫೋಟೊವನ್ನು ಇರಿಸಿ ಪೂಜೆ, ಭಜನೆ ಮತ್ತು ಗಂಗಾ ಪೂಜೆ ನೆರವೇರಿಸಿ ಯಶಸ್ಸಿಗೆ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

2014ರಲ್ಲಿ ಭಾರತ ಟಿ20 ಫೈನಲ್​ ಪ್ರವೇಶಿಸಿತ್ತು. ಆದರೆ ಲಂಕಾ ವಿರುದ್ಧ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದೀಗ 10 ವರ್ಷಗಳ ಬಳಿಕ ಈ ಕೂಟದಲ್ಲಿ ಭಾರತ ಫೈನಲ್​ ಪಂದ್ಯ ಆಡುತ್ತಿದೆ. ಎದುರಾಳಿ ದಕ್ಷಿಣ ಆಫ್ರಿಕಾಕ್ಕೆ ಇದು ಚೊಚ್ಚಲ ಫೈನಲ್​ ಪಂದ್ಯವಾಗಿದೆ. ಇತ್ತಂಡಗಳು ಕೂಡ ಟೂರ್ನಿಯ ಅಜೇಯ ತಂಡಗಳಾಗಿ ಫೈನಲ್​ ಪ್ರವೇಶಿಸಿರುವ ಕಾರಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಪಿಚ್​ ರಿಪೋರ್ಟ್


ಬ್ರಿಜ್‌ಟೌನ್‌ನಲ್ಲಿ ಈವರೆಗೆ 50 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಾಗಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ತಂಡ 31ರಲ್ಲಿ ಗೆಲುವು ಕಂಡಿದೆ. ಈ ಟೂರ್ನಿಯಲ್ಲಿ ಭಾರತ ಬ್ರಿಜ್‌ಟೌನ್‌ನಲ್ಲಿ ಒಂದು ಪಂದ್ಯ ಆಡಿ ಗೆಲುವು ಕಂಡಿದೆ. ದಕ್ಷಿಣ ಆಫ್ರಿಕಾ ಇಲ್ಲಿ ಇನ್ನೂ ಆಡಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಂಡರೆ ಉತ್ತಮ.

ಭಾರತ ತಂಡದ ದೊಡ್ಡ ಸಮಸ್ಯೆ ಎಂದರೆ ಲೀಗ್, ಸೆಮಿಫೈನಲ್​ನಲ್ಲಿ ಎಷ್ಟೇ ಉತ್ತಮ ಪ್ರದರ್ಶನ ತೋರಿದರೂ ಕೂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಂಪೂರ್ಣ ನರ್ವಸ್​ ಆಗಿ ಆಡುವುದು. ಒಂದು ವಿಕೆಟ್​ ಬಿದ್ದರೆ ಸಾಕು ಬಳಿಕ ಕ್ರೀಸ್​ಗಿಳಿವ ಬ್ಯಾಟರ್​ಗಳು ಭಯದಿಂದಲೇ ಆಡಲು ಮುಂದಾಗಿ ಸತತವಾಗಿ ವಿಕೆಟ್​ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುತ್ತಾರೆ. ಕಳೆದ ಏಕದಿನ ವಿಶ್ವಕಪ್​ ಫೈನಲ್​, ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಇದಕ್ಕೆ ಉತ್ತಮ ನಿದರ್ಶನ. ಹೀಗಾಗಿ ನಾಳೆ ನಡೆಯುವ ಫೈನಲ್​ ಪಂದ್ಯದಲ್ಲಿ ಬ್ಯಾಟರ್​ಗಳು ಮತ್ತು ಬೌಲರ್​ಗಳು ವಿಚಲಿತರಾಗದೆ ಆಡಬೇಕು.

Continue Reading

ಕ್ರೀಡೆ

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

IND vs SA Final: ಬ್ರಿಜ್‌ಟೌನ್‌ನ “ಕೆನ್ಸಿಂಗ್ಟನ್‌ ಓವಲ್‌’ ಮೈದಾನದಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ಭಾರತದ ಪಾಲಿಗೆ ಐರನ್ ಲೆಗ್ ಎಂದು ಕರೆಯಲ್ಪಡುವ ರಿಚರ್ಡ್‌ ಕೆಟಲ್‌ಬರೋ(Richard Kettleborough) ಈ ಪಂದ್ಯಕ್ಕೆ ಥರ್ಡ್‌ ಅಂಪೈರ್​ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

VISTARANEWS.COM


on

IND vs SA Final
Koo

ಬಾರ್ಬಡೋಸ್​: ದ್ವಿತೀಯ ಟಿ20 ವಿಶ್ವಕಪ್‌(T20 World Cup 2024) ಕಿರೀಟ ಎತ್ತಿಹಿಡಿಯಲು ಕಾದು ಕುಳಿತಿರುವ ಭಾರತ, ಇಂದು ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಆದರೆ, ಈ ಪಂದ್ಯಕ್ಕೂ ಮುನ್ನವೇ ಭಾರತ(IND vs SA Final) ತಂಡಕ್ಕೆ ನಡುಕವೊಂದು ಶುರುವಾಗಿದೆ. ಇದಕ್ಕೆ ಕಾರಣ ಈ ಪಂದ್ಯಕ್ಕೆ ಕಾರ್ಯನಿರ್ವಹಿಸುತ್ತಿರುವ ಅಂಪೈರ್​.

ಬ್ರಿಜ್‌ಟೌನ್‌ನ “ಕೆನ್ಸಿಂಗ್ಟನ್‌ ಓವಲ್‌’ ಮೈದಾನದಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ಭಾರತದ ಪಾಲಿಗೆ ಐರನ್ ಲೆಗ್ ಎಂದು ಕರೆಯಲ್ಪಡುವ ರಿಚರ್ಡ್‌ ಕೆಟಲ್‌ಬರೋ(Richard Kettleborough) ಈ ಪಂದ್ಯಕ್ಕೆ ಥರ್ಡ್‌ ಅಂಪೈರ್​ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯಕ್ಕೆ ಕೆಟಲ್‌ಬರೋ ಅಂಪೈರ್​ ಎಂದು ತಿಳಿದಾಗಲೇ ಎಲ್ಲ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕೂಡ ಈ ಬಾರಿ ಭಾರತಕ್ಕೆ ಸೋಲು ಖಚಿತ ಎಂದೇ ಹೇಳಿದ್ದರು. ಅದರಂತೆ ಈ ಭವಿಷ್ಯ ಕೂಡ ನಿಜವಾಗಿತ್ತು. ಸದ್ಯ ಈ ಬಾರಿ ಫೀಲ್ಡ್​ ಅಂಪೈರ್​ ಆಗಿ ಕರ್ತವ್ಯ ನಿರ್ವಹಿಸುವ ಬದಲು ಮೂರನೇ ಅಂಪೈರ್​ ಆಗಿ ಕಾರ್ಯನಿರ್ವಹಿಸುವ ಕಾರಣ ಕೊಂಚ ಅದೃಷ್ಟ ಭಾರತದ ಪಾಲಿಗೆ ಇರಬಹುದೆಂಬುದು ಈ ಬಾರಿ ಅಭಿಮಾನಿಗಳ ನಂಬಿಕೆ.

ರಿಚರ್ಡ್‌ ಕೆಟಲ್‌ಬರೋ ಕಾರ್ಯನಿರ್ವಹಿಸಿದ ಎಲ್ಲ ಮಹತ್ವದ ಪಂದ್ಯದಲ್ಲಿಯೂ ಭಾರತ ತಂಡ ಸೋಲುಕಂಡಿತ್ತು. ಕಳೆದ ಬಾರಿಯ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಅವರು ಅಂಪೈರ್​ ಆದಾಗ ಅಭಿಮಾನಿಗಳು ಭಾರತಕ್ಕೆ ಸೋಲು ಖಚಿತ ಎಂದು ಹೇಳಿದ್ದರು. ಈ ಭವಿಷ್ಯ ಕೂಡ ನಿಜವಾಗಿತ್ತು. ಭಾರತ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಲೀಗ್​ನಿಂದ ಸೆಮಿಫೈನಲ್​ ತನಕ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಭಾರತ ಸಾಧಿಸಿದ ಗೆಲುವು ಫೈನಲ್​ನಲ್ಲಿ ಸೋಲು ಕಾಣುವ ಮೂಲಕ ನೀರಲ್ಲಿ ಹೋಮವಾಗಿತ್ತು. ಇದೀಗ ಮತ್ತೆ ಭಾರದ ಪಾಲಿಗೆ ಈ ಅಂಪೈರ್​ ಅಡ್ಡಗಾಲಿಕ್ಕಲಿದ್ದಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

ಎಲ್ಲ ಪಂದ್ಯದಲ್ಲಿಯೂ ಸೋಲು


2014 ರಿಂದ ರಿಚರ್ಡ್‌ ಕೆಟಲ್‌ಬರೋ ಅಂಪೈರಿಂಗ್‌ ಮಾಡಿದ ಎಲ್ಲ ಪ್ರಮುಖ ಪಂದ್ಯಗಳಲ್ಲಿಯೂ ಟೀಮ್‌ ಇಂಡಿಯಾ ಸೋಲು ಕಂಡಿದೆ. 2014ರ ಟಿ20 ವಿಶ್ವ ಕಪ್ ಫೈನಲ್, 2015ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2016ರ ಟಿ20 ವಿಶ್ವ ಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2021ರ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್, 2023ರ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಭಾರತ ಸೋತಿತ್ತು.

ಅಂಪೈರ್​ಗಳ ಪಟ್ಟಿ​


ಅಂಪೈರ್​: ಕ್ರಿಸ್‌ ಗಫಾನಿ, ರಿಚರ್ಡ್‌ ಇಲ್ಲಿಂಗ್‌ವರ್ತ್‌

ರೆಫ್ರಿ: ರಿಚೀ ರಿಚರ್ಡ್‌ಸನ್‌

ಥರ್ಡ್‌ ಅಂಪಾಯರ್‌: ರಿಚರ್ಡ್‌ ಕೆಟಲ್‌ಬರೊ

ಫೋರ್ತ್‌ ಅಂಪಾಯರ್‌: ರಾಡ್‌ ಟ್ಯುಕರ್‌

Continue Reading
Advertisement
5 Soldiers Killed
ದೇಶ2 mins ago

5 Soldiers Killed: ಲಡಾಕ್‌ನ ನದಿಯಲ್ಲಿ ಸೇನಾ ವಾಹನ ಮಗುಚಿ ಭೀಕರ ದುರಂತ; ಐವರು ಯೋಧರು ಹುತಾತ್ಮ

DK Shivakumar
ಕರ್ನಾಟಕ13 mins ago

DK Shivakumar: ಸಿಎಂ, ಡಿಸಿಎಂ ಚರ್ಚೆ ಇಲ್ಲ, ಬಾಯಿಗೆ ಬೀಗ ಹಾಕಿಕೊಂಡಿರಿ; ಡಿಕೆಶಿ ಖಡಕ್‌ ಎಚ್ಚರಿಕೆ

Actor Darshan Suffering From Sade Sati
ಸ್ಯಾಂಡಲ್ ವುಡ್23 mins ago

Actor Darshan: 2024 ಡೇಂಜರಸ್ ಇಯರ್ ಫಾರ್ ಮಿ ಅನ್ನೋದು `ಡೆವಿಲ್‌’ಗೆ ಮೊದಲೇ ಗೊತ್ತಿತ್ತಾ?

deepika padukone
Latest23 mins ago

Deepika Padukone: ‘ಕಲ್ಕಿ 2898 ಎಡಿ’ ಚಿತ್ರದ ದೀಪಿಕಾ ಪಡುಕೋಣೆ ನಗ್ನ ಚಿತ್ರ ಸೋರಿಕೆ; ನೆಟ್ಟಿಗರು ಹೇಳಿದ್ದೇನು?

attika babu
ಬೆಂಗಳೂರು ಗ್ರಾಮಾಂತರ24 mins ago

Attica Babu: ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಬಂಧನ

Shah Rukh Khan
ಪ್ರಮುಖ ಸುದ್ದಿ25 mins ago

Shah Rukh Khan: ನಟ ಶಾರುಖ್ ಖಾನ್ ಬಗ್ಗೆ ಶಾಕಿಂಗ್ ಸುದ್ದಿ ಕೊಟ್ಟ ನಟ ಗೋವಿಂದ್ ನಾಮದೇವ್

Ram Path
ದೇಶ42 mins ago

Ram Path: ಅಯೋಧ್ಯೆ ರಾಮ ಪಥ ಕಾಮಗಾರಿಯಲ್ಲಿ ನಿರ್ಲಕ್ಷ್ಯ; 6 ಅಧಿಕಾರಿಗಳ ತಲೆದಂಡ

DP Manu
ಕ್ರೀಡೆ44 mins ago

DP Manu: ಡೋಪಿಂಗ್ ಸುಳಿಯಲ್ಲಿ ಸಿಲುಕಿದ ಜಾವೆಲಿನ್‌ ತಾರೆ ಮನು; ಒಲಿಂಪಿಕ್ಸ್​ಗೆ ಹಿನ್ನಡೆ

Love Failure
ರಾಯಚೂರು52 mins ago

Love Failure : ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ

Gold Rate Today
ಪ್ರಮುಖ ಸುದ್ದಿ1 hour ago

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ18 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌