IPL 2023: Bigg Boss winner Rupesh Shetty to enter IPL IPL 2023: ಐಪಿಎಲ್​ಗೆ ಎಂಟ್ರಿ ಕೊಡಲಿದ್ದಾರೆ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ - Vistara News IPL 2023: ಐಪಿಎಲ್​ಗೆ ಎಂಟ್ರಿ ಕೊಡಲಿದ್ದಾರೆ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

ಕ್ರಿಕೆಟ್

IPL 2023: ಐಪಿಎಲ್​ಗೆ ಎಂಟ್ರಿ ಕೊಡಲಿದ್ದಾರೆ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

ಬಹುನಿರೀಕ್ಷಿತ ಐಪಿಎಲ್​ 2023ರ ಟೂರ್ನಿಯಲ್ಲಿ ಕನ್ನಡದ ಬಿಗ್​ ಬಾಸ್​ ವಿಜೇತ ರೂಪೇಶ್ ಶೆಟ್ಟಿ ಅವರು ಕನ್ನಡ ಕಾಮೆಂಟರಿ ಪ್ಯಾನಲ್‌ನಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.

VISTARANEWS.COM


on

IPL 2023: Bigg Boss winner Rupesh Shetty to enter IPL
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡದ ಬಿಗ್​ ಬಾಸ್​(bigg boss kannada) ವಿನ್ನರ್​ ರೂಪೇಶ್ ಶೆಟ್ಟಿ(Roopesh Shetty) ಅವರು 16ನೇ ಆವೃತ್ತಿಯ ಐಪಿಎಲ್(IPL 2023)​ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರು ಸ್ಟಾರ್​ ಸ್ಪೋರ್ಟ್ಸ್​ ಕನ್ನಡ ವಾಹಿನಿಯಲ್ಲಿ ಕಾರ್ಯಕ್ರಮದ ನಿರೂಪಣೆ ಮೂಲಕ ಕ್ರಿಕೆಟ್​ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

ಮಾರ್ಚ್​ 31ರಿಂದ 16ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದೆ. ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ಟೈಟಾನ್ಸ್​ ಮತ್ತು ಎಂ.ಎಸ್​. ಧೋನಿ ಸಾರಥ್ಯದ ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿವೆ.​ ಈ ಲೀಗ್​ನ ಅಧಿಕೃತ ಟಿವಿ ಪ್ರಸಾರಕರಾಗಿರುವ​ ಸ್ಟಾರ್​ ಸ್ಪೋರ್ಟ್ಸ್, ಕಾಮೆಂಟರಿ ಪ್ಯಾನಲ್​​ಗಳನ್ನು ಘೋಷಣೆ ಮಾಡಿದೆ. ಇದರಲ್ಲಿ ರೂಪೇಶ್​ ಶೆಟ್ಟಿ ಕೂಡ ಸ್ಥಾನ ಪಡೆದಿದ್ದಾರೆ.

ಟಿ20 ವಿಶ್ವ ಕಪ್ ವಿಜೇತ ನಾಯಕರಾದ ಪಾಲ್ ಕಾಲಿಂಗ್‌ವುಡ್ ಮತ್ತು ಆರೋನ್ ಫಿಂಚ್​, ಕೆವಿನ್​ ಪೀಟರ್ಸನ್, ಡ್ಯಾನಿ ಮಾರಿಸನ್ ಸೇರಿ ಹಲವು ಮಾಜಿ ಕ್ರಿಕೆಟಿಗರು ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಸ್ಪಿನ್​ ಮಾಂತ್ರಿಕ ಇಮ್ರಾನ್​ ತಾಹಿರ್​ ಕೂಡ ತಮ್ಮ ಸ್ಪಿನ್​ ಅನುಭವಗಳ ಬಗ್ಗೆ ಇಲ್ಲಿ ಮಾಹಿತಿ ಹಂಚಿಕೊಳ್ಳಲಿದ್ದಾರೆ. ವಿಶೇಷವೆಂದರೆ ಭಾರತ ಮಹಿಳಾ ತಂಡ ಮಾಜಿ ಆಟಗಾರ್ತಿ ಮಿಥಾಲಿ ರಾಜ್ ಕೂಡ ಈ ಬಾರಿ ಕಾಮೆಂಟರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ IPL 2023: ಯುಗಾದಿ ಹಬ್ಬದ ಶುಭಾಶಯ ಕೋರಿದ ಆರ್​ಸಿಬಿ ಆಟಗಾರರು

ಕನ್ನಡ ಕಾಮೆಂಟರಿ ಪ್ಯಾನಲ್‌ನಲ್ಲಿ ಭಾರತದ ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್, ಶ್ರೀನಿವಾಸ ಮೂರ್ತಿ (ಜಾನಿ), ಕರ್ನಾಟಕದ ಮಾಜಿ ಕೋಚ್ ಜಿ.ಕೆ ಅನಿಲ್ ಕುಮಾರ್, ಬಾಲಚಂದ್ರ ಅಖಿಲ್, ಭರತ್ ಚಿಪ್ಲಿ ಮತ್ತು ಪವನ್ ದೇಶಪಾಂಡೆ ಜತೆಗೆ ಕರ್ನಾಟಕದ ದಂತಕಥೆ ಗುಂಡಪ್ಪ ವಿಶ್ವನಾಥ್ ಕಾಣಿಸಿಕೊಳ್ಳಲಿದ್ದಾರೆ. ಇವರ ಜತೆಗೆ ಬಿಗ್ ಬಾಸ್ ವಿಜೇತ ರೂಪೇಶ್ ಶೆಟ್ಟಿ ಅವರು ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ರೇಡಿಯೊ ಜಾಕಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಇರುವ ಕಾರಣ ರೂಪೇಶ್​ ಶೆಟ್ಟಿಗೆ ಇಲ್ಲಿ ಯಾವುದೇ ಗೊಂದಲದ ವಾತಾವರಣ ಸೃಷ್ಟಿಯಾಗದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

Rohit Sharma: ನಾಯಕತ್ವದ ಹೊರೆ ರೋಹಿತ್ ಶರ್ಮಾ ಅವರ ಹೆಗಲ ಮೇಲಿದ್ದ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟರ್​​ ಆಗಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯ ದೊಡ್ಡ ಹೊರೆಯನ್ನು ಅವರು ಹೊಂದಿದ್ದರು. ವಿಶೇಷವೆಂದರೆ, ರೋಹಿತ್ 5 ಐಪಿಎಲ್ ಚಾಂಪಿಯನ್​ಶಿಪ್​ ಗೆದ್ದಿದ್ದರಿಂದ ಮುಂಬೈ ಇಂಡಿಯನ್ಸ್ ಪರ ಅತ್ಯಂತ ಯಶಸ್ವಿ ನಾಯಕ ಕೂಡ ಔದು. ಆದರೆ ಇದೀಗ ಬ್ಯಾಟಿಂಗ್​ನಲ್ಲಿ ಅವರ ಪ್ರದರ್ಶನವು ಕಡಿಮೆಯಾಗಿದೆ.

VISTARANEWS.COM


on

Rohit Sharma
Koo

ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಮತ್ತೊಮ್ಮೆ ಬ್ಯಾಟಿಂಗ್​ನಲ್ಲಿ ವಿಫಲವಾದ ನಂತರ ಮುಂಬೈ ಇಂಡಿಯನ್ಸ್ (Mumbai Indians) ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಭಾವುಕರಾದ ಘಟನೆ ನಡೆಯಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪ್ಯಾಟ್ ಕಮಿನ್ಸ್ (Pat Cummins) ನೇತೃತ್ವದ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧದ ಪಂದ್ಯದ 55ನೇ ಪಂದ್ಯದಲ್ಲಿ ಅವರಿಗೆ ಉತ್ತಮವಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ಮುಂಬೈ ಇಂಡಿಯನ್ಸ್ (MI) ಅವರ ಬದಲಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿದ್ದರಿಂದ ರೋಹಿತ್ ಶರ್ಮಾ 2024 ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉತ್ತಮ ಬ್ಯಾಟಿಂಗ್ ಮಾಡಿಲ್ಲ.

ನಾಯಕತ್ವದ ಹೊರೆ ರೋಹಿತ್ ಶರ್ಮಾ ಅವರ ಹೆಗಲ ಮೇಲಿದ್ದ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟರ್​​ ಆಗಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯ ದೊಡ್ಡ ಹೊರೆಯನ್ನು ಅವರು ಹೊಂದಿದ್ದರು. ವಿಶೇಷವೆಂದರೆ, ರೋಹಿತ್ 5 ಐಪಿಎಲ್ ಚಾಂಪಿಯನ್​ಶಿಪ್​ ಗೆದ್ದಿದ್ದರಿಂದ ಮುಂಬೈ ಇಂಡಿಯನ್ಸ್ ಪರ ಅತ್ಯಂತ ಯಶಸ್ವಿ ನಾಯಕ ಕೂಡ ಔದು. ಆದರೆ ಇದೀಗ ಬ್ಯಾಟಿಂಗ್​ನಲ್ಲಿ ಅವರ ಪ್ರದರ್ಶನವು ಕಡಿಮೆಯಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಬಾರಿಸುವ ಮೂಲಕ ಟೂರ್ನಿಯಲ್ಲಿ ಉತ್ತಮ ಆರಂಭ ಕಂಡಿದದ್ದರು. ಮುಂಬೈ ಇಂಡಿಯನ್ಸ್ ಪರ ಮೊದಲ 7 ಪಂದ್ಯಗಳಲ್ಲಿ ರೋಹಿತ್ ಶರ್ಮಾ 49.5 ಸರಾಸರಿಯಲ್ಲಿ 297 ರನ್ ಗಳಿಸಿದ್ದಾರೆ. ಆದಾಗ್ಯೂ, ಅವರ ಫಾರ್ಮ್ ಯು-ಟರ್ನ್ ತೆಗೆದುಕೊಂಡಿತು ಮತ್ತು ಮುಂದಿನ 5 ಪಂದ್ಯಗಳಲ್ಲಿ ಅವರು ದಯನೀಯವಾಗಿ ವಿಫಲರಾಗಿದ್ದಾರೆ. 6.6 ಸರಾಸರಿ ಮತ್ತು 94.3 ಸ್ಟ್ರೈಕ್ ರೇಟ್​ನಲ್ಲಿ ಕೇವಲ 33 ರನ್ ಗಳಿಸಿದರು.

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 5 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿದ್ದರು. 4ನೇ ಓವರ್​ನ 2ನೇ ಎಸೆತದಲ್ಲಿ ಕಮಿನ್ಸ್ ಎಸೆತಕ್ಕೆ ಜೋರಾಗಿ ಬಾರಿಸಲು ಹೋಗಿ ಔಟಾದರು. ಹೆನ್ರಿಕ್ ಕ್ಲಾಸೆನ್ ಯಾವುದೇ ತಪ್ಪು ಮಾಡಲಿಲ್ಲ. ಶರ್ಮಾ ಅವರನ್ನು ಔಟ್ ಮಾಡಲು ಸರಳ ಕ್ಯಾಚ್ ಪೂರ್ಣಗೊಳಿಸಿದರು.

ಪ್ಯಾಟ್ ಕಮಿನ್ಸ್ ಟಿ 20 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಿದ್ದು ಇದು ನಾಲ್ಕನೇ ಬಾರಿ. ಒಟ್ಟಾರೆಯಾಗಿ, 9 ಇನ್ನಿಂಗ್ಸ್ ಗಳಲ್ಲಿ, ಅವರು ಕಮಿನ್ಸ್ ವಿರುದ್ಧ 41 ಎಸೆತಗಳಲ್ಲಿ 14.25 ಸರಾಸರಿಯಲ್ಲಿ 57 ರನ್ ಗಳಿಸಿದ್ದಾರೆ.

ಪಂದ್ಯದಲ್ಲಿ ಮುಂಬಯಿಗೆ ಭರ್ಜರಿ ವಿಜಯ

ಮುಂಬಯಿ: ಸೂರ್ಯಕುಮಾರ್ ಯಾದವ್ (Suryakumar Yadav) ಬಾರಿಸಿದ ಸ್ಫೋಟಕ ಶತಕ (102,51 ಎಸೆತ, 12 ಫೋರ್, 6 ಸಿಕ್ಸರ್​) ಹಾಗೂ ಬೌಲರ್​ಗಳ ಸಂಘಟಿತ ಹೋರಾಟದಿಂದ ಮಿಂಚಿದ ಮುಂಬೈ ಇಂಡಿಯನ್ಸ್​ (Mumbai Indians) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 55ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad)​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದೆ. ಈ ಮೂಲಕ ಸೂರ್ಯನ ಪ್ರತಾಪಕ್ಕೆ ಸನ್​​ ಮಂಕಾಗಿ ಹೋಯಿತು. ಇದು ಮುಂಬಯಿ ತಂಡಕ್ಕೆ ಹಾಲಿ ಆವೃತ್ತಿಯ 12 ಪಂದ್ಯಗಳಲ್ಲಿ 4ನೇ ಗೆಲುವಾಗಿದೆ. ಇದರೊಂದಿಗೆ 10ನೇ ಸ್ಥಾನದಿಂದ ಒಂದು ಸ್ಥಾನ ಮೇಲ್ಕಕೇರಿದೆ. ಇದೇ ವೇಳೆ ಕಳೆದ ಆವೃತ್ತಿಯ ರನ್ನರ್​ ಅಪ್​ ತಂಡ ಗುಜರಾತ್​ ಕೊನೇ ಸ್ಥಾನಕ್ಕೆ ಇಳಿದಿದೆ.

ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

Continue Reading

ಕ್ರೀಡೆ

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

IPL 2024: ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

VISTARANEWS.COM


on

IPL 2024
Koo

ಮುಂಬಯಿ: ಸೂರ್ಯಕುಮಾರ್ ಯಾದವ್ (Suryakumar Yadav) ಬಾರಿಸಿದ ಸ್ಫೋಟಕ ಶತಕ (102,51 ಎಸೆತ, 12 ಫೋರ್, 6 ಸಿಕ್ಸರ್​) ಹಾಗೂ ಬೌಲರ್​ಗಳ ಸಂಘಟಿತ ಹೋರಾಟದಿಂದ ಮಿಂಚಿದ ಮುಂಬೈ ಇಂಡಿಯನ್ಸ್​ (Mumbai Indians) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 55ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad)​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದೆ. ಈ ಮೂಲಕ ಸೂರ್ಯನ ಪ್ರತಾಪಕ್ಕೆ ಸನ್​​ ಮಂಕಾಗಿ ಹೋಯಿತು. ಇದು ಮುಂಬಯಿ ತಂಡಕ್ಕೆ ಹಾಲಿ ಆವೃತ್ತಿಯ 12 ಪಂದ್ಯಗಳಲ್ಲಿ 4ನೇ ಗೆಲುವಾಗಿದೆ. ಇದರೊಂದಿಗೆ 10ನೇ ಸ್ಥಾನದಿಂದ ಒಂದು ಸ್ಥಾನ ಮೇಲ್ಕಕೇರಿದೆ. ಇದೇ ವೇಳೆ ಕಳೆದ ಆವೃತ್ತಿಯ ರನ್ನರ್​ ಅಪ್​ ತಂಡ ಗುಜರಾತ್​ ಕೊನೇ ಸ್ಥಾನಕ್ಕೆ ಇಳಿದಿದೆ.

ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

ಇದನ್ನೂ ಓದಿ: T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

ಸೂರ್ಯನ ಆಧಾರ

ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡ ಆಘಾತಕಾರಿ ಆರಂಭ ಪಡೆಯಿತು. ಇಶಾನ್ ಕಿಶನ್ 9 ರನ್​ಗೆ ಔಟಾದರೆ ರೋಹಿತ್ ಶರ್ಮಾ 4 ರನ್​ಗೆ ಕ್ರೀಸ್ ತೊರೆಯಬೇಕಾಯಿತು. ನಮನ್ ಧಿರ್ ಶೂನ್ಯಕ್ಕೆ ಔಟಾಗುವ ಮೂಲಕ ಮತ್ತೆ ಸೋಲಿನ ಸುಳಿಗೆ ಸಿಲುಕಿತು. 31 ರನ್​ಗೆ 3 ವಿಕೆಟ್ ಕಳೆದುಕೊಂಡ ಮುಂಬೈ ಆತಂಕಕ್ಕೆ ಬಿತ್ತು. ಈ ವೇಳೆ ಕ್ರೀಸ್​ನಲ್ಲಿ ಗಟ್ಟಿಯಾಗಿ ನಿಂತ ಸೂರ್ಯಕುಮಾರ್​ ಎಸ್​ಆರ್​ಎಚ್​ ಬೌಲರ್​ಗಳನ್ನು ದಂಡಿಸಲು ಆರಂಭಿಸಿದರು. 30 ಎಸೆತಕ್ಕೆ ಅರ್ಧ ಶತಕ ಬಾರಿಸಿದ ಸೂರ್ಯ ನಂತರದ 21 ಎಸೆತದಲ್ಲಿ ಉಳಿದ ರನ್​ಗಳನ್ನು ಪೂರೈಸಿದರು. ಇವರಿಗೆ ಜತೆಯಾದ ತಿಲಕ್​ ವರ್ಮಾ 32 ಎಸೆತಕ್ಕೆ 37 ರನ್ ಬಾರಿಸಿದರು.

ಎಸ್​ಆರ್​ಎಚ್ ಬ್ಯಾಟರ್​ಗಳು ಫೇಲ್​

ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಎಚ್​ ಉತ್ತಮ ಆರಂಭ ಪಡೆದ ಬಳಿಕವೂ ಆಘಾತಕಾರಿ ಕುಸಿತ ಕಂಡಿತು. ಟ್ರಾವಿಸ್​ ಹೆಡ್​ 40 ರನ್​ ಬಾರಿಸಿದರೆ ಅಭಿಷೇಕ್ ಶರ್ಮಾ 11 ರನ್​ಗೆ ಮೀಸಲಾದರು. ಮತ್ತೆ ಅವಕಾಶ ಪಡೆದ ಮಯಾಂಕ್​ ಅಗರ್ವಾಲ್​ 5 ರನ್ ಬಾರಿಸಿದರೆ ನಿತಿಶ್​ ಕುಮಾರ್​ 20 ರನ್​ಗೆ ಔಟಾದರು. ಕೊನೆಯಲ್ಲಿ ನಾಯಕ ಪ್ಯಾಟ್​ ಕಮಿನ್ಸ್ 17 ಎಸೆತಕ್ಕೆ 35 ರನ್ ಬಾರಿಸಿ ತಂಡದ ಸ್ಪರ್ಧಾತ್ಮಕ ಮೊತ್ತಕ್ಕೆ ಕೊಡುಗೆ ಕೊಟ್ಟರು.

ಮುಂಬೈ ಪರ ಮಾರಕ ಬೌಲಿಂಗ್ ದಾಳಿ ಸಂಘಟಿಸಿದ ಪಿಯೂಶ್​ ಚಾವ್ಲಾ 33 ರನ್​ಗೆ 3 ವಿಕೆಟ್ ಪಡೆದರೆ ಹಾರ್ದಿಕ್ ಪಾಂಡ್ಯ 31 ರನ್​ಗೆ 3 ವಿಕೆಟ್ ಉರುಳಿಸಿದರು.

Continue Reading

ಕ್ರೀಡೆ

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

T20 World Cup 2024: ಎಂದಿನಂತೆ ಜೆರ್ಸಿಯು ನೀಲಿ ಬಣ್ಣದಿಂದ ಕೂಡಿದೆ. ಆದರೆ, ಕೇಸರಿಯ ರಂಗು ಹೆಚ್ಚಿದೆ. ತೋಳುಗಳು ಕೇಸರಿ ಬಣ್ಣದ್ದಾಗಿವೆ. ಭುಜದ ಮೇಲೆ ಸಾಂಪ್ರದಾಯಿಕ ಬಿಳಿ ಅಡಿಡಾಸ್ ಪಟ್ಟಿಗಳಿವೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​​ನಲ್ಲಿ ಭಾರತದ ಜರ್ಸಿಯಲ್ಲಿ ಭುಜದ ಮೇಲೆ ತ್ರಿವರ್ಣ ಪಟ್ಟೆಗಳಿದ್ದವು.

VISTARANEWS.COM


on

T20 World Cup 2024
Koo

ಬೆಂಗಳೂರು: 2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಗೆ (T20 World Cup 2024) ಟೀಂ ಇಂಡಿಯಾ ತನ್ನ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಜೂನ್ 1 ರಿಂದ 29 ರವರೆಗೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (USA) ಮತ್ತು ವೆಸ್ಟ್​ ಇಂಡೀಸ್​​ನಲ್ಲಿ ಈ ಟೂರ್ನಿ ನಡೆಯಲಿದೆ. ‘ಎ’ ಗುಂಪಿನಲ್ಲಿ ಭಾರತ, ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ, ಆತಿಥೇಯ ಅಮೆರಿಕ, ಐರ್ಲೆಂಡ್ ಮತ್ತು ಕೆನಡಾ ತಂಡಗಳಿವೆ. ಮೆನ್ ಇನ್ ಬ್ಲೂ (Men In Blue) ತಮ್ಮ ಎಲ್ಲಾ ಗುಂಪು ಪಂದ್ಯಗಳನ್ನು ಯುಎಸ್ಎಯಲ್ಲಿ ಆಡಲಿದೆ. ಅವರ ಮೊದಲ ಮೂರು ಪಂದ್ಯಗಳು ನ್ಯೂಯಾರ್ಕ್​​ನಲ್ಲಿ ನಡೆದರೆ, ಕೊನೆಯ ಗುಂಪು ಪಂದ್ಯವು ಲಾಡರ್​ಹಿಲ್​ನಲ್ಲಿ ನಡೆಯಲಿದೆ.

ಬಹುನಿರೀಕ್ಷಿತ ಟಿ 20 ವಿಶ್ವಕಪ್ 2024 ಪ್ರಾರಂಭವಾಗಲು ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ ಭಾರತವು ಆಕರ್ಷಕ ಜೆರ್ಸಿಯನ್ನು ಅನಾವರಣಗೊಳಿಸಿದೆ. ಎಂದಿನಂತೆ ಜೆರ್ಸಿಯು ನೀಲಿ ಬಣ್ಣದಿಂದ ಕೂಡಿದೆ. ಆದರೆ, ಕೇಸರಿಯ ರಂಗು ಹೆಚ್ಚಿದೆ. ತೋಳುಗಳು ಕೇಸರಿ ಬಣ್ಣದ್ದಾಗಿವೆ. ಭುಜದ ಮೇಲೆ ಸಾಂಪ್ರದಾಯಿಕ ಬಿಳಿ ಅಡಿಡಾಸ್ ಪಟ್ಟಿಗಳಿವೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​​ನಲ್ಲಿ ಭಾರತದ ಜರ್ಸಿಯಲ್ಲಿ ಭುಜದ ಮೇಲೆ ತ್ರಿವರ್ಣ ಪಟ್ಟೆಗಳಿದ್ದವು.

ಇದನ್ನೂ ಓದಿ: IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

ಭಾರತದ ಜೆರ್ಸಿಯ ಮುಂಭಾಗದಲ್ಲಿ ಪ್ರಾಯೋಜಕ ‘ಡ್ರೀಮ್ 11’ ಹೆಸರನ್ನು ಸಹ ಇರಬೇಕು. ಆದರೆ ಐಸಿಸಿ ಸ್ಪರ್ಧೆಯ ಸಮಯದಲ್ಲಿ ಜೆರ್ಸಿಯಲ್ಲಿ ಯಾವುದೇ ಪ್ರಾಯೋಜಕರ ಹೆಸರನ್ನು ಹಾಕಲು ಐಸಿಸಿ ನಿಯಮವು ತಂಡಗಳಿಗೆ ಅನುಮತಿಸುವುದಿಲ್ಲ. ಹೀಗಾಗಿ ವಿಶ್ವ ಕಪ್​ ನಲ್ಲಿ ಅದನ್ನು ತೆಗೆದು ಹಾಕಲಾಗಿದೆ.

ನಾಯಕ ರೋಹಿತ್ ಶರ್ಮಾ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಜರ್ಸಿ ಅನಾವರಣದ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ಧರ್ಮಶಾಲಾದ ಸುಂದರವಾದ ಎಚ್​​ಪಿಸಿಎ ಕ್ರೀಡಾಂಗಣದಲ್ಲಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ.

20 ವಿಶ್ವಕಪ್ ಗಾಗಿ ಭಾರತದ ತಂಡವನ್ನು ಕಳೆದ ವಾರ ಘೋಷಿಸಲಾಗಿತ್ತು. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದ್ದು, ಜೂನ್ 9ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಜೂನ್ 12ರಂದು ಅಮೆರಿಕ ವಿರುದ್ಧ ಸೆಣಸಲಿದ್ದು, ಜೂನ್ 15ರಂದು ಕೆನಡಾ ವಿರುದ್ಧ ಸೆಣಸಲಿದೆ.

ಭಾರತ ತಂಡ ಇ ರೀತಿ ಇದೆ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಶ್​ದೀಪ್​ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ. ಸಿರಾಜ್

Continue Reading

ಪ್ರಮುಖ ಸುದ್ದಿ

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

IPL 2024: ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್​ನ ಭಾಗವಾಗಿ, ಗ್ರೇಸ್ ಹೇಡನ್ ಮೇ 6 ರಂದು ಎಸ್​ಆರ್​ಎಚ್​​ ವಿರುದ್ಧದ ಮುಂಬೈ ಇಂಡಿಯನ್ಸ್ ತವರು ಪಂದ್ಯಕ್ಕಾಗಿ ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಹೋಗಿದ್ದರು. ಸ್ಟೇಡಿಯಮ್ ಹೊರಗೆ, ಅವರು ಹಲವಾರು ಸ್ಥಳೀಯ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಮತ್ತು ರೋಹಿತ್ ಶರ್ಮಾ ಉತ್ಸಾಹಿಗಳೊಂದಿಗೆ ಸಂವಹನ ನಡೆಸಿದರು.

VISTARANEWS.COM


on

IPL 2024
Koo

ಮುಂಬಯಿ: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಅವರ ಪುತ್ರಿ ಗ್ರೇಸ್ ಹೇಡನ್ (Grace Hayden) ಮೇ 6 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಮತ್ತು ಎಸ್​ಆರ್​ಎಚ್ ಐಪಿಎಲ್ (IPL 2024) ಪಂದ್ಯಕ್ಕೆ ಮೊದಲು ಮುಂಬೈ ಇಂಡಿಯನ್ಸ್ (ಎಂಐ) ಅಭಿಮಾನಿಗಳೊಂದಿಗೆ ನಡೆಸಿದ ಸಂವಾದ ವೈರಲ್ ಆಗಿದೆ. ಅವರು ಮುಂಬಯಿ ಇಂಡಿಯನ್ಸ್​ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರನ್ನು ‘ಮುಂಬೈ ಚಾ ರಾಜಾ ರೋಹಿತ್ ಶರ್ಮಾ’ ಎಂದು ಕೂಗಿರುವುದು ಅಭಿಮಾನಿಗಳ ಉತ್ಸಾಹಕ್ಕೆ ಕಿಚ್ಚು ಹಚ್ಚಿದೆ.

ಐಪಿಎಲ್ 2024 ಋತುವಿನ ಅಧಿಕೃತ ಪ್ರಸಾರಕ ಸ್ಟಾರ್​ ಸ್ಪೋರ್ಟ್ಸ್​​ ನಿರೂಪಕರಲ್ಲಿ ಒಬ್ಬರಾದ ಗ್ರೇಸ್, ಮುಂಬೈ ಇಂಡಿಯನ್ಸ್ ದಂತಕಥೆ ರೋಹಿತ್ ಶರ್ಮಾ ಅವರನ್ನು ಹೊಗಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾದರು. ಅವರು ಮೈದಾನದ ಹೊರಗೆ ನಿಂತು ಅಭಿಮಾನಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅಭಿಮಾನಿಗಳೇ ರೋಹಿತ್​ ಶರ್ಮಾ ಅವರನ್ನು ಹೇಗೆ ಕರೆಬೇಕು ಎಂದು ಗ್ರೇಸ್​ಗೆ ಹೇಳಿಕೊಟ್ಟರು. ಆಸ್ಟ್ರೇಲಿಯಾ ಮೂಲದ ಈ ನಿರೂಪಕಿ ಸಿಕ್ಕಿದ ಅವಕಾಶನವನ್ನು ಚೆನ್ನಾಗಿ ಬಳಸಿಕೊಂದು ಹಿಂದಿಯಲ್ಲಿ ಅವರನ್ನು ಹೊಗಳಿದರು.

ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್​ನ ಭಾಗವಾಗಿ, ಗ್ರೇಸ್ ಹೇಡನ್ ಮೇ 6 ರಂದು ಎಸ್​ಆರ್​ಎಚ್​​ ವಿರುದ್ಧದ ಮುಂಬೈ ಇಂಡಿಯನ್ಸ್ ತವರು ಪಂದ್ಯಕ್ಕಾಗಿ ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಹೋಗಿದ್ದರು. ಸ್ಟೇಡಿಯಮ್ ಹೊರಗೆ, ಅವರು ಹಲವಾರು ಸ್ಥಳೀಯ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಮತ್ತು ರೋಹಿತ್ ಶರ್ಮಾ ಉತ್ಸಾಹಿಗಳೊಂದಿಗೆ ಸಂವಹನ ನಡೆಸಿದರು. ಈ ವೇಳೆ ಅವರು ರೋಹಿತ್ ಶರ್ಮಾ ಅವರನ್ನು ಅಭಿಮಾನದಿಂದ ಕೂಗಿದರು.

ಇದನ್ನೂ ಓದಿ: IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

ಸ್ಟಾರ್ ಸ್ಪೋರ್ಟ್ಸ್ ಕ್ರೀಡಾಂಗಣದ ಹೊರಗೆ ಸರತಿ ಸಾಲಿನಲ್ಲಿ ಕಾಯುತ್ತಿರುವ ಅಭಿಮಾನಿಗಳೊಂದಿಗೆ ಬೆರೆಯುವ ಒಂದು ನಿಮಿಷದ ತುಣುಕನ್ನು ಸಹ ಹಂಚಿಕೊಂಡಿದೆ. ವೀಡಿಯೊದ ಒಂದು ಹಂತದಲ್ಲಿ, ಗ್ರೇಸ್ ಮುಂಬೈನ ಮಾಜಿ ನಾಯಕನ ಅಭಿಮಾನಿಗಳೊಂದಿಗೆ “ಮುಂಬೈ ಚಾ ರಾಜಾ ರೋಹಿತ್ ಶರ್ಮಾ” ಎಂಬ ಜನಪ್ರಿಯ ರೋಹಿತ್ ಪರ ಘೋಷಣೆಯನ್ನು ಕೂಗಿದ್ದಾರೆ. ಅವರ ಮಾತು ಅಭಿಮಾನಿಗಳ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿತ್ತು.

ಗ್ರೇಸ್ ಹೇಡನ್ ಕಳೆದ ಕೆಲವು ವಾರಗಳಿಂದ ಅಧಿಕೃತ ಪ್ರಸಾರಕರಿಗಾಗಿ ಐಪಿಎಲ್ 2024ರ ನಾನಾ ದೃಶ್ಯಗಳನ್ನು ಸಕ್ರಿಯವಾಗಿ ವರದಿ ಮಾಡುತ್ತಿದ್ದಾರೆ. ಅವರ ತಂದೆ ಮ್ಯಾಥ್ಯೂ ಹೇಡನ್ ಕೂಡ ಭಾರತದಲ್ಲಿದ್ದಾರೆ. ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​​ಕೆ ) ಆಟಗಾರರೊಂದಿಗೆ ಸಂವಹನ ನಡೆಸುತ್ತಿರುವುದು ಕಂಡುಬಂದಿದೆ.

ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗಾಗಿ ತಮ್ಮ ಅಭಿಯಾನ ಮುಂದುವರಿಸುತ್ತಿದ್ದಾರೆ. ಈ ಐಪಿಎಲ್ 2024 ಋತುವಿನಲ್ಲಿ ಇಲ್ಲಿಯವರೆಗೆ, ಡೈನಾಮಿಕ್ ಆರಂಭಿಕ ಬ್ಯಾಟರ್​ 11 ಇನ್ನಿಂಗ್ಸ್​ಗಳಿಂದ 32.60 ಸರಾಸರಿಯಲ್ಲಿ 326 ರನ್ ಗಳಿಸಿದ್ದಾರೆ. ಪಂದ್ಯಾವಳಿ ಪ್ರಾರಂಭವಾಗುವ ಕೆಲವು ತಿಂಗಳುಗಳ ಮೊದಲು ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿತ್ತು. ದಶಕದ ನಾಯಕತ್ವವನ್ನು ತೆಗೆದು ಹಾಕಿರುವುದು ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು.

Continue Reading
Advertisement
Bengaluru Rain
ಕರ್ನಾಟಕ3 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ3 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ3 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ4 hours ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ4 hours ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ4 hours ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ4 hours ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ4 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ4 hours ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ8 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ9 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ9 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ22 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌