IPL 2023: ಸ್ಟೋಯಿನಿಸ್​​, ಪೂರನ್​ ಬ್ಯಾಟಿಂಗ್​ ಆರ್ಭಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಾಯಕ ರಾಹುಲ್​ - Vistara News

ಕ್ರಿಕೆಟ್

IPL 2023: ಸ್ಟೋಯಿನಿಸ್​​, ಪೂರನ್​ ಬ್ಯಾಟಿಂಗ್​ ಆರ್ಭಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಾಯಕ ರಾಹುಲ್​

ಸೋಮವಾರ ರಾತ್ರಿ ನಡೆದ ಅತ್ಯಂತ ರೋಚಕ ಐಪಿಎಲ್​(IPL 2023) ಪಂದ್ಯದಲ್ಲಿ ರಾಯಲ್ಸ್​ ಚಾಲೆಂಜರ್ಸ್​ ಬೆಂಗಳೂರು ವಿರುದ್ಧ ಲಕ್ನೋ ಸೂಪರ್​ಜೈಂಟ್ಸ್​ ತಂಡ ಒಂದು ವಿಕೆಟ್​ ಅಂತರದಿಂದ ಗೆದ್ದು ಬೀಗಿದೆ

VISTARANEWS.COM


on

IPL 2023: Captain Rahul appreciates stoicism, Pooran's batting frenzy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಸೋಮವಾರ ರಾತ್ರಿ ನಡೆದ ಅತ್ಯಂತ ರೋಚಕ ಐಪಿಎಲ್​(IPL 2023) ಪಂದ್ಯದಲ್ಲಿ ರಾಯಲ್ಸ್​ ಚಾಲೆಂಜರ್ಸ್​ ಬೆಂಗಳೂರು ವಿರುದ್ಧ ಲಕ್ನೋ ಸೂಪರ್​ಜೈಂಟ್ಸ್​ ತಂಡ ಒಂದು ವಿಕೆಟ್​ ಅಂತರದಿಂದ ಗೆದ್ದು ಬೀಗಿದೆ. ಈ ಗೆಲುವಿನ ಶ್ರೇಯವನ್ನು ನಾಯಕ ರಾಹುಲ್​ ಅವರು ಸ್ಟೋಯಿನಿಸ್​ ಮತ್ತು ನಿಕೋಲಸ್​ ಪೂರಣ್​ಗೆ ಅರ್ಪಿಸಿದ್ದಾರೆ.

ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ಎರಡೇ ವಿಕೆಟಿಗೆ 212 ರನ್‌ ಬಾರಿಸಿತು. ಕೊಹ್ಲಿ, ಮ್ಯಾಕ್ಸ್​ವೆಲ್, ಫಾಫ್​ ಡು ಪ್ಲೆಸಿಸ್​ ಸೇರಿಕೊಂಡು ಲಕ್ನೋ ಬೌಲರ್​ಗಳ ಬೆವರಿಳಿಸಿದರು. ಅದಾಗಲೇ ಆರ್​ಸಿಬಿ ಅಭಿಮಾನಿಗಳು ಈ ಮೂವರು ಆಟಗಾರ ಮೊದಲ ಅಕ್ಷರವನ್ನು ಒಟ್ಟುಗೂಡಿಸಿ ಕೆಜಿಎಫ್​ ಅಬ್ಬರ ಎಂದು ಪಂದ್ಯವನ್ನು ಗೆದ್ದೇ ಬಿಟ್ಟಂತೆ ಸಂಭ್ರಮಿಸಲಾರಂಭಿಸಿದ್ದರು. ಆದರೆ ‘ಪಿಚ್ಚರ್​ ಅಭಿ ಬಾಕಿ ಹೈ’ ಎಂಬಂತೆ ಸಿಡಿದು ನಿಂತ ಮಾರ್ಕಸ್‌ ಸ್ಟೋಯಿನಿಸ್‌ ಮತ್ತು ನಿಕೋಲಸ್‌ ಪೂರಣ್‌ ಸೇರಿಕೊಂಡು ಲಕ್ನೋಗೆ ರೋಚಕ ಜಯ ತಂದುಕೊಟ್ಟರು. ಅಷ್ಟರ ವರೆಗೆ ಆರ್​ಸಿಬಿ…ಆರ್​ಸಿಬಿ ಎಂದು ಕೂಗುತ್ತಿದ್ದ ಅಭಿಮಾನಿಗಳು ಸಪ್ಪೆ ಮೋರೆ ಹಾಕಿಕೊಂಡು ಸ್ಟೇಡಿಯಂನಿಂದ ಹೊರನಡೆದರು.

ಪಂದ್ಯದ ಗೆಲುವಿನ ಬಳಿಕ ಮಾತನಾಡಿದ ನಾಯಕ ಕೆ.ಎಲ್​ ರಾಹುಲ್,​​ ನಾವು ಗೆದ್ದು ಎರಡು ಅಂಕ ಸಂಪಾದಿಸಿದ್ದೇವೆ ಎಂದರೆ, ಅದಕ್ಕೆ ಸ್ಟೋಯಿನಿಸ್​ ಮತ್ತು ಪೂರನ್ ಅವರ ಬ್ಯಾಟಿಂಗ್​ ಪ್ರದರ್ಶನವೇ ಕಾರಣ. ಗೆಲುವಿನ ಎಲ್ಲ ಶ್ರೇಯ ಅವರಿಗೆ ಸಲ್ಲಬೇಕು. ಆಯುಷ್ ಬದೋನಿ ಕೂಡ ಉತ್ತಮ ಬ್ಯಾಟಿಂಗ್​ ನಡೆಸಿದರು. ಆರಂಭದಲ್ಲಿ ವಿಕೆಟ್​ ಕಳೆದುಕೊಂಡಾಗ ನನಗೂ ಚಿಂತೆ ಕಾಡಿತ್ತು. ಆದರೆ ಕೊನೆಯಲ್ಲಿ ಪಂದ್ಯ ಗೆದ್ದಾಗ ಇದನ್ನು ನಂಬಲು ಕೂಡ ಸಾಧ್ಯವಾಗಲಿಲ್ಲ. ಇದು ಚಿನ್ನಸ್ವಾಮಿ ಕ್ರೀಡಾಂಗಣ, ಕೊನೆಯ ಬಾಲ್​ನಲ್ಲಿ ಪಂದ್ಯವನ್ನು ಫಿನಿಶ್‌ ಮಾಡಲು ಸಾಧ್ಯವಾಗುವ ಏಕೈಕ ಸ್ಥಳ ಎಂಬುದಕ್ಕೆ ಇದೇ ಪಂದ್ಯ ಸಾಕ್ಷಿ. ನಾನು ಈ ಪಂದ್ಯದಲ್ಲಿ ಉತ್ತಮವಾಗಿ ಆಡಿಲ್ಲ ನಿಜ. ಆದರೆ ಮುಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ರಾಹುಲ್​ ಹೇಳಿದರು.

ಇದನ್ನೂ ಓದಿ IPL 2023 : ಲಾಸ್ಟ್ ಬಾಲ್ ಥ್ರಿಲ್ಲರ್​ನಲ್ಲಿ ಆರ್​​ಸಿಬಿಗೆ ವೀರೋಚಿತ ಸೋಲು

ಬೃಹತ್‌ ಮೊತ್ತದ ಚೇಸಿಂಗ್‌ ವೇಳೆ ಲಕ್ನೋ ಆರಂಭದಲ್ಲೇ ಕೈಲ್‌ ಮೇಯರ್ ವಿಕೆಟ್‌ ಕಳೆದುಕೊಂಡಿತು. ಸಿರಾಜ್‌ ಈ ವಿಕೆಟ್​ ಕೆಡವಿ ಆರ್​ಸಿಬಿ ಮುನ್ನಡೆ ತಂದುಕೊಟ್ಟರು. ಇದರ ಬೆನಲ್ಲೇ ವೇಯ್ನ್​ ಪಾರ್ನೆಲ್‌ ಒಂದೇ ಓವರ್‌ನಲ್ಲಿ ದೀಪಕ್‌ ಹೂಡಾ ಮತ್ತು ಕೃಣಾಲ್‌ ಪಾಂಡ್ಯ ಅವರನ್ನು ಪೆವಿಲಿಯನ್ನಿಗೆ ಅಟ್ಟಿದರು. 23ಕ್ಕೆ 3 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಲಕ್ನೋಗೆ ಸ್ಟೋಯಿನಿಸ್‌ ಸ್ಫೋಟಕ ಬ್ಯಾಟಿಂಗ್​ ನಡೆಸಿ ಆಧರಿಸಿದರು. 30 ಎಸೆತಗಳಿಂದ 65 ರನ್‌ ಚಚ್ಚಿ ಗೆಲುವಿನ ವಿಶ್ವಾಸ ಮೂಡಿಸಿದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ ನಿಕೋಲಸ್‌ ಪೂರಣ್‌ ಕೇವಲ 15 ಎಸೆತಗಳಿಂದ ಅರ್ಧ ಶತಕ ಬಾರಿಸಿ ಸುಂಟರಗಾಳಿಯಾದರು. 19 ಎಸೆತಗಳಿಂದ 62 ರನ್‌ (4 ಬೌಂಡರಿ, 7 ಸಿಕ್ಸರ್‌) ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಬದೋನಿ 30ರನ್​ ಕೊಡುಗೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IPL 2024 : ಚೆನ್ನೈ ವಿರುದ್ಧ ಗುಜರಾತ್​ಗೆ 35 ರನ್ ವಿಜಯ, ಆರ್​​ಸಿಬಿ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು

IPL 2024: ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಗುಜರಾತ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 231 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​​ಗೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಅಹಮದಾಬಾದ್​: ಆರಂಭಿಕ ಜೋಡಿ ಸಾಯಿ ಸುದರ್ಶನ್​​ (103 ರನ್​, 5 ಫೋರ್​, 7 ಸಿಕ್ಸರ್​) ಶುಭ್​ಮನ್​ ಗಿಲ್​​ (104 ರನ್​, 9 ಪೋರ್​, 6 ಸಿಕ್ಸರ್​) ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಮಿಂಚಿದ ಗುಜರಾತ್ ಜೈಂಟ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 35 ರನ್​ಗಳ ಗೆಲುವು ಸಾಧಿಸಿದೆ. ಇದರೊಂದಿಗೆ ಆರ್​ಸಿಬಿಯ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಗುಜರಾತ್​ ಜೈಂಟ್ಸ್ ಕೂಡ 10 ಅಂಕಗಳನ್ನು ಪಡೆದಿದ್ದು ಆರ್​ಸಿಬಿಯ ಸಮಾನವಾಗಿ ನಿಂತಿದೆ. ಹೀಗಾಗಿ ಪ್ಲೇಆಫ್​ಗೆ ಪೈಪೋಟಿ ಅಧಿಕವಾಗಿದೆ. ಈ ಗೆಲುವಿನೊಂದಿಗೆ ಗುಜರಾತ್ ತಂಡ ಎರಡು ಸ್ಥಾನ ಮೇಲಕ್ಕೇರಿ 8ನೇ ಸ್ಥಾನಕ್ಕೆ ಬಂದಿದೆ. ಮುಂಬಯಿ 9 ರಲ್ಲಿ ಇದ್ದರೆ ಪಂಜಾಬ್​ 10ರಲ್ಲಿದೆ. ಚೆನ್ನೈ ನಾಲ್ಕನೇ ಸ್ಥಾನದಲ್ಲಿಯೇ ಇದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಗುಜರಾತ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 231 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​​ಗೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ ಅಬ್ಬರ ಪ್ರದರ್ಶನ ನೀಡಿತು. ಆರಂಭಿಕರಾದ ಸಾಯಿ ಸುದರ್ಶನ್​ ಹಾಗೂ ನಾಯಕ ಗಿಲ್ ಭರ್ಜರಿ ಪ್ರದರ್ಶ ನೀಡಿದರು. ಅವರಿಬ್ಬರೂ ಶತಕ ಬಾರಿಸುವ ಮೂಲಕ ಭರ್ಜರಿ ಪ್ರದರ್ಶನ ನೀಡಿದರು. ಗಿಲ್ ಹಾಗೂ ಸಾಯಿ ಸುದರ್ಶನ್​ ತಲಾ 50 ಎಸೆತಗಳಲ್ಲಿ ಶತಕ ಬಾರಿಸಿದರು. ಹೀಗಾಗಿ ಮೊದಲ ವಿಕೆಟ್​ಗೆ ಚೆನ್ನೈ ತಂಡ 210 ರನ್ ಬಾರಿಸಿತು. ಬಳಿಕ ಡೇವಿಲ್​ ಮಿಲ್ಲರ್ 16 ರನ್ ಬಾರಿಸಿದರೆ ಶಾರುಖ್ ಖಾನ್ 3 ರನ್ ಗಳಿಸಿದರು.

ಇದನ್ನೂ ಓದಿ: Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

ಬ್ಯಾಟಿಂಗ್ ವೈಫಲ್ಯ

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಚೆನ್ನೈ ತಂಡ ಆರಂಭದಲ್ಲೇ ಸತತವಾಗಿ ವಿಕೆಟ್​ಗಳನ್ನು ಕಳೆದುಕೊಂಡಿತು. ಅಜಿಂಕ್ಯ ರಹಾನೆ 1 ರನ್​ಗೆ ಔಟಾದರೆ, ರಚಿನ್ ರವೀಂದ್ರ ಕೂಡ ಅದೇ ಮೊತ್ತಕ್ಕೆ ಔಟಾದರು. ಅವರು ಡೇವಿಡ್​ ಮಿಲ್ಲರ್ ಮಾಡಿರುವ ಅಮೋಘ ರನ್​ಔಟ್​ಗೆ ಬಲಿಯಾದರು. ನಾಯ್ಕ ಋತುರಾಜ್ ಕೊಡುಗೆ ಕೂಡ ಶೂನ್ಯ. ಆದರೆ, ಮಧ್ಯಮ ಕ್ರಮಾಂಕದಲ್ಲಿ ಡ್ಯಾರಿಲ್​ ಮಿಚೆಲ್ (34 ಎಸೆತಕ್ಕೆ 63 ರನ್ ) ಅರ್ಧ ಶತಕ ಬಾರಿಸಿದರೆ ಮೊಯಿಲ್ ಅಲಿ ಕೂಡ 56 ರನ್ ಬಾರಿಸಿದರು. ಇವರಿಬ್ಬರೂ ನಾಲ್ಕನೇ ವಿಕೆಟ್​ಗೆ 109 ರನ್ ಬಾರಿಸಿದರು. ಆದರೆ ಇವರ ಜತೆಯಾಟ ಮುರಿದ ಬಳಿಕ ಒಂದೊಂದೆ ವಿಕೆಟ್​ಗಳು ಉರುಳಿದವು. ಶಿವಂ ದುಬೆ 21 ರನ್ ಹೊಡೆದರೆ, ರವೀಂದ್ರ ಜಡೇಜಾ 18 ರನ್​ಗೆ ಸೀಮಿತಗೊಂಡರು. ಕೊನೆಯಲ್ಲಿ ಧೋನಿ 11 ಎಸೆತಕ್ಕೆ 26 ರನ್ ಬಾರಿಸಿದರೂ ತಂಡಕ್ಕೆ ಅದರಿಂದ ಗೆಲವು ಪಡೆಯಲು ಸಾಧ್ಯವಾಗಲಿಲ್ಲ.

ಮೋಹಿತ್ ಶರ್ಮಾ 31 ರನ್​ ಗೆ 3 ವಿಕೆಟ್ ಪಡೆದರೆ ರಶೀದ್ ಖಾನ್​ 3 ರನ್ ನೀಡಿ 2 ವಿಕೆಟ್ ಪಡೆದರು.

Continue Reading

ಪ್ರಮುಖ ಸುದ್ದಿ

Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

Mr. & Mrs. Mahi: ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

VISTARANEWS.COM


on

Mr. & Mrs. Mahi'
Koo

ಬೆಂಗಳೂರು: ಕ್ರಿಕೆಟ್​ ಭಾರತದಲ್ಲಿ ಒಂದು ಧರ್ಮ. ಎಲ್ಲರೂ ಒಂದಾಗುವ ಅಪರೂಪದ ಕ್ರೀಡೆ. ಅಂತೆಯೇ ಕ್ರಿಕೆಟ್​ ಮತ್ತು ಸಿನಿಮಾ ಕ್ಷೇತ್ರಕ್ಕೆ ಬಿಡಿಸಲಾಗದ ನಟು. ಹೀಗಾಗಿ ಬಾಲಿವುಡ್​ ಸೇರಿದಂತೆ ನಾನಾ ಭಾಷೆಗಳ ಸಿನಿ ಇಂಡಸ್ಟ್ರಿಯಲ್ಲಿ ಕ್ರಿಕೆಟ್​ ಆಧಾರವಾಗಿಟ್ಟುಕೊಂಡು ಹಲವಾರು ಸಿನಿಮಾಗಳನ್ನು ತೆಗೆಯಲಾಗಿದೆ. ಅವುಗಳಲ್ಲಿ ಬಹುತೇಕ ಸಿನಿಮಾಗಳು ಸಕ್ಸೆಸ್​ ಆಗಿವೆ. ಅಂತೆಯೇ ಕ್ರಿಕೆಟ್ ಕತೆಯನ್ನೇ ಮೂಲವಾಗಿಟ್ಟುಕೊಂಡಿರುವ ‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ (Mr. & Mrs. Mahi) ಸಿನಿಮಾವೊಂದು ರೆಡಿಯಾಗುತ್ತಿದೆ. ಆ ಸಿನಿಮಾದಲ್ಲಿ ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ಹಾಗೂ ಪ್ರತಿಭಾವಂತ ನಟ ರಾಜ್​ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ ಎಂಬ ಶೀರ್ಷಿಕೆಯ ಈ ಚಲನಚಿತ್ರವು ಕ್ರಿಕೆಟ್ ಕ್ರೀಡೆಯ ಮೇಲಿನ ತಮ್ಮ ಪ್ರೀತಿಯನ್ನು ಅರಸುತ್ತಾ ಹಲವಾರು ಸವಾಲುಗಳು ಮತ್ತು ಅಡೆತಡೆಗಳ ಮೂಲಕ ಎದುರಿಸುವ ಸುಂದರ ಜೋಡಿಯೊಂದರ ಸುತ್ತ ಸುತ್ತುತ್ತದೆ.

ಚಿತ್ರದ ಟ್ರೈಲರ್ ಇನ್ನೂ ಬಿಡುಗಡೆಯಾಗದಿದ್ದರೂ, ಪ್ರಮುಖ ನಟಿ ಜಾಹ್ನವಿ ಕಪೂರ್ ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಚಿತ್ರದ ಬಿಡುಗಡೆಯ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ. ‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

ಈ ಯೋಜನೆಯ ಸುತ್ತ ತಿಂಗಳುಗಳ ಊಹಾಪೋಹಗಳಿವೆ. ಏತನ್ಮಧ್ಯೆ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ಅಭಿಮಾನಿಗಳು ಅಂತಿಮವಾಗಿ ದೊಡ್ಡ ಪರದೆಯ ಮೇಲೆ ಜಾಹ್ನವಿ ಕಪೂರ್ ಅಭಿನಯ ನೋಡಲು ಕಾತರರಾಗಿದ್ದಾರೆ. ಅವರೆಲ್ಲರೂ ಅದಕ್ಕಾಗಿ ಕಾಯುತ್ತಿದ್ದಾರೆ.

ಇತ್ತೀಚೆಗೆ, ಜಾಹ್ನವಿ ಕಪೂರ್ ತಮ್ಮ ಮುಂಬರುವ ಚಿತ್ರದ ಪ್ರಚಾರದ ಕಾರಣಕ್ಕಾಗಿ ಈ ತಿಂಗಳ ಆರಂಭದಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್​​ ಪಂದ್ಯವನ್ನು ವೀಕ್ಷಿಸಿದ್ದರು.

ಎಲ್ಲವೂ ಗುಟ್ಟು

ಅಂದ ಹಾಗೆ ಸಿನಿಮಾದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾ ಧೋನಿಯ ಕತೆಯನ್ನು ಆಧರಿಸಿದ್ದು ಎಂದು ಎಂದು ಹೇಳಲಾಗುತ್ತಿದೆ. ಹೆಸರನ್ನು ಹೇಳುವಾಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಕತೆ ಎಂದು ಹೇಳಲಾಗುತ್ತಿದೆ. ಆದರೆ, ಅದರ ಬಗ್ಗೆ ಖಚಿತತೆ ಇಲ್ಲ. ಆದರೆ, ಕ್ರಿಕೆಟ್​ ಆಧಾರಿತ ಸಿನಿಮಾ ಎಂಬುದು ಖಾತರಿ. ಹೀಗಾಗಿ ಸಿನಿ ಪ್ರೇಮಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳನ್ನು ಏಕಕಾಲಕ್ಕೆ ಸೆಳೆಯುವ ಉದ್ದೇಶವನ್ನು ನಿರ್ದೇಶಕರು ಹೊಂದಿದ್ದಾರೆ.

Continue Reading

ಕ್ರೀಡೆ

IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

VISTARANEWS.COM


on

IPL 2024
Koo

ಅಹಮದಾಬಾದ್​ : ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ವೇಗದಲ್ಲಿ 1000 ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಸಾಯಿ ಸುದರ್ಶನ್ ಶುಕ್ರವಾರ (ಮೇ 10) ಪಾತ್ರರಾಗಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್​ 2024 (IPL 2024) ಪಂದ್ಯದ ವೇಳೆ ಎಡಗೈ ಬ್ಯಾಟ್ಸ್ಮನ್ ಈ ಸಾಧನೆ ಮಾಡಿದ್ದಾರೆ. 11 ನೇ ಓವರ್​ನಲ್ಲಿ ಸಿಎಸ್​ಕೆ ವೇಗಿ ಸಿಮರ್ಜೀತ್ ಸಿಂಗ್ ಅವರಿಗೆ ಸತತ ಸಿಕ್ಸರ್ ಬಾರಿಸಿದಅಗ ಅವರು ಐಪಿಎಲ್​ನಲ್ಲಿ 1000 ರನ್​ಗಳ ಗಡಿ ದಾಟಿದರು. ಈ ವೇಳೆ 38 ಎಸೆತಗಳಲ್ಲಿ 71 ರನ್​ ಗಳಿಸಿದ್ದರು. ಪಂದ್ಯದಲ್ಲಿ ಅವರು 51 ಎಸೆತಕ್ಕೆ 104 (ಶತಕ) ಬಾರಿಸಿದ್ದಾರೆ.

ಸಾಯಿ ಸುದರ್ಶನ್ ಕೇವಲ 25 ಇನ್ನಿಂಗ್ಸ್​ಗಳಲ್ಲಿ 1000 ರನ್ ಪೂರೈಸಿದರು. ಈ ವೇಳೆ ಅವರು ಕ್ರಿಕೆಟ್​​ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ಋತುರಾಜ್ ಗಾಯಕ್ವಾಡ್ ಅವರ ದಾಖಲೆ ಮುರಿದರು. ಸಚಿನ್ ತೆಂಡೂಲ್ಕರ್ ಮತ್ತು ಗಾಯಕ್ವಾಡ್ ಇಬ್ಬರೂ 31 ಇನ್ನಿಂಗ್ಸ್​ಗಳಲ್ಲಿ 1000 ರನ್ ಪೂರೈಸಿದ್ದರು. ಸಚಿನ್ ತೆಂಡೂಲ್ಕರ್ 2022ರಲ್ಲಿ ಐಪಿಎಲ್​​ನಲ್ಲಿ 1000 ರನ್ ಪೂರೈಸಿದ್ದರೆ, ಗಾಯಕ್ವಾಡ್ 2022ರಲ್ಲಿ ಈ ಸಾಧನೆ ಮಾಡಿದ್ದರು.

ಇದನ್ನೂ ಓದಿ: IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

ಐಪಿಎಲ್​​ನಲ್ಲಿ 30 ಇನ್ನಿಂಗ್ಸ್​ಗಿಂತ ಕಡಿಮೆ ಅವಧಿಯಲ್ಲಿ 1000 ರನ್ ಪೂರೈಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಜಿಟಿ ಬ್ಯಾಟ್ಸ್ಮನ್ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾ ಮತ್ತು ಪಂಜಾಬ್ ಕಿಂಗ್ಸ್​​ನ ಮಾಜಿ ಬ್ಯಾಟರ್​ ಶಾನ್ ಮಾರ್ಷ್ 21 ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರೆ, ವೆಸ್ಟ್ ಇಂಡೀಸ್​್ನ ಮಾಜಿ ಬ್ಯಾಟರ್​ ಲೆಂಡ್ಲ್ ಸಿಮನ್ಸ್ 23 ಇನ್ನಿಂಗ್ಸ್​​ಗಳಲ್ಲಿ ಈ ಮೈಲಿಗಲ್ಲು ಸಾಧಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಸಾಯಿ ಸುದರ್ಶನ್ ಮತ್ತು ಮ್ಯಾಥ್ಯೂ ಹೇಡನ್ ಜಂಟಿಯಾಗಿ ಮೂರನೇ ಸ್ಥಾನದಲ್ಲಿದ್ದಾರೆ.

ಅತಿ ವೇಗದ 1000 ರನ್​ಗಳ ಸರದಾರರು ಇವರು

  • ಶಾನ್ ಮಾರ್ಷ್- 21 ಇನಿಂಗ್ಸ್​
  • ಲೆಂಡ್ಲ್ ಸಿಮನ್ಸ್ – 23 ಇನಿಂಗ್ಸ್​
  • ಮ್ಯಾಥ್ಯೂ ಹೇಡನ್- 25 ಇನಿಂಗ್ಸ್​
  • ಸಾಯಿ ಸುದರ್ಶನ್- 25ಇನಿಂಗ್ಸ್​
  • ಜಾನಿ ಬೈರ್​ಸ್ಟೋವ್​- 26 ಇನಿಂಗ್ಸ್​
  • ಕ್ರಿಸ್ ಗೇಲ್- ​ 27ಇನಿಂಗ್ಸ್​
  • ಕೇನ್ ವಿಲಿಯಮ್ಸನ್- 28 ಇನಿಂಗ್ಸ್​
  • ಮೈಕ್ ಹಸ್ಸಿ – 30 ಇನಿಂಗ್ಸ್​
  • ಸಚಿನ್ ತೆಂಡೂಲ್ಕರ್- 31 ಇನಿಂಗ್ಸ್​
  • ಋತುರಾಜ್ ಗಾಯಕ್ವಾಡ್- 31 ಇನಿಂಗ್ಸ್​

ಸಾಯಿ ಸುದರ್ಶನ್ ಅವರ ಐಪಿಎಲ್ ವೃತ್ತಿಜೀವನ ಹೀಗಿದೆ

ಸಾಯಿ ಸುದರ್ಶನ್ 2022 ರಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದರು. ಆ ವರ್ಷ ಐಪಿಎಲ್​​ಗೆ ಹೊಸ ತಂಡವಾಗಿ ಪ್ರವೇಶ ಮಾಡುತ್ತಿದ್ದ ಗುಜರಾತ್ ಟೈಟಾನ್ಸ್​​ ಪರ ಸಹಿ ಹಾಕಿದ್ದರು. ತಮ್ಮ ಮೊದಲ ಐಪಿಎಲ್ ಋತುವಿನಲ್ಲಿ, ತಮಿಳುನಾಡು ಸ್ಟಾರ್ ಬ್ಯಾಟರ್​ ಕೇವಲ 5 ಪಂದ್ಯಗಳನ್ನು ಆಡಿದ್ದರು. ಒಂದು ಅರ್ಧಶತಕದ ಸಹಾಯದಿಂದ 145 ರನ್ ಗಳಿಸಿದ್ದರು.

ಎರಡನೇ ಋತುವಿನಲ್ಲಿ, ಅವರು 8 ಪಂದ್ಯಗಳನ್ನು ಆಡಿದ್ದರಿಂದ ತಂಡದ ಪ್ರಮುಖ ಸದಸ್ಯರಾದರು. ಆ ಎಂಟು ಪಂದ್ಯಗಳಲ್ಲಿ, ಅವರು ಫೈನಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 96 ರನ್ ಸೇರಿದಂತೆ 362 ರನ್ ಗಳಿಸಿದರು. ದುರದೃಷ್ಟವಶಾತ್, ಸಿಎಸ್​ಕೆ ಪಂದ್ಯವನ್ನು ಗೆದ್ದಿದ್ದರಿಂದ ಅವರ ಪ್ರಯತ್ನ ವ್ಯರ್ಥವಾಯಿತು.

2024 ರ ಋತುವಿನಲ್ಲಿ, ಸಾಯಿ ಸುದರ್ಶನ್ ಜಿಟಿ ತಂಡದ ಅನಿವಾರ್ಯ ಭಾಗವಾಗಿದ್ದಾರೆ. ಸಿಎಸ್ಕೆ ವಿರುದ್ಧ ನಡೆಯುತ್ತಿರುವ ಪಂದ್ಯದ ಐಪಿಎಲ್ ಶತಕವನ್ನು ಗಳಿಸಿದರು. ಅವರು 51 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಏಳು ಸಿಕ್ಸರ್ ಗಳ ಸಹಾಯದಿಂದ 103 ರನ್ ಗಳಿಸಿದ್ದಾರೆ.

Continue Reading

ಕ್ರೀಡೆ

IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

IPL 2024: ಗೌತಮ್ ಗಂಭೀರ್ ಐಪಿಎಲ್​​ನ ಕಳೆದ ಎರಡು ಆವೃತ್ತಿಗಳಲ್ಲಿ ಎಲ್ಎಸ್​ಜಿ ಮಾರ್ಗದರ್ಶಕರಾಗಿ ತಮ್ಮ ಕೋಚಿಂಗ್​ ವೃತ್ತಿಯನ್ನು ಆರಂಭಿಸಿದ್ದರು. ಮಾರ್ಗದರ್ಶಕರಾಗಿದ್ದ ಸಮಯದಲ್ಲಿ, ಎಲ್ಎಸ್ಜಿ ಎರಡೂ ಋತುಗಳಲ್ಲಿ ಪ್ಲೇಆಫ್​​ಗೆ ಅರ್ಹತೆ ಪಡೆದಿತ್ತು. ಆದಾಗ್ಯೂ, ಗೌತಮ್ ಗಂಭೀರ್ ಆಶ್ಚರ್ಯಕರವಾಗಿ ಪ್ರಭಾವಶಾಲಿ ಅಭಿಯಾನದ ನಂತರವೂ ಫ್ರಾಂಚೈಸಿಯಿಂದ ಬೇರ್ಪಡಲು ನಿರ್ಧರಿಸಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ 2024ರ (IPL 2024) ಪಂದ್ಯದ ವೇಳೆ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಅವರು ಕೆಎಲ್ ರಾಹುಲ್​​ಗೆ ಮೈದಾನದಲ್ಲಿಯೇ ನಿಂದಿಸಿರುವ ವಿಚಾರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಆರಂಭದಲ್ಲಿ ನೆಟ್ಟಿಗರು ಎಲ್​ಎಸ್​ಜಿ ಮಾಲೀಕ ಸಂಜೀವ್​ ಗೋಯೆಂಕಾ ಅವರನ್ನು ತರಾಟೆಗೆ ತೆಗೆದುಕೊಂಡರೆ ಇದೀಗ ಹಿರಿಯ ಆಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಂತೆಯೇ ಆ ತಂಡದ ಪರವಾಗಿ ಎರಡು ವರ್ಷ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದ ಗೌತಮ್ ಗಂಭೀರ್ ಕೂಡ ರಾಹುಲ್ ಪರವಾಗಿ ನಿಂತಿದ್ದಾರೆ. ಪರೋಕ್ಷವಾಗಿ ಗೋಯೆಂಕಾಗೆ ಪಾಠ ಮಾಡಿದ್ದಾರೆ.

ಈ ವಾರದ ಆರಂಭದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಎಲ್ಎಸ್​ಜಿ 10 ವಿಕೆಟ್​ಗಳ ಭಾರಿ ಸೋಲಿನ ನಂತರ ರಾಹುಲ್ ಅವರೊಂದಿಗಿನ ಸಂಭಾಷಣೆ ನಡೆಸಿದ್ದ ಗೋಯೆಂಕಾ ಹಲವರ ಹುಬ್ಬೇರುವಂತೆ ಮಾಡಿದ್ದರು. ಎಸ್ಆರ್ಹೆಚ್ ಕೇವಲ 9.4 ಓವರ್​ಗಳಲ್ಲಿ 166 ರನ್​ಗಳನ್ನು ಬೆನ್ನಟ್ಟಿ ಎಲ್ಎಸ್​​ಜಿಯ ಪ್ಲೇಆಫ್ ಭರವಸೆಗಳಿಗೆ ಭಾರಿ ಹೊಡೆತ ನೀಡಿದ ನಂತರ, ಗೋಯೆಂಕಾ ಮೈದಾನದಲ್ಲಿ ರಾಹುಲ್ ಮತ್ತು ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಅವರನ್ನು ಬೈದಿದ್ದಾರೆ.

ಇದನ್ನೂ ಓದಿ: Colin Munro : ನ್ಯೂಜಿಲ್ಯಾಂಡ್​ ಟಿ20 ಸ್ಪೆಷಲಿಸ್ಟ್​ ಅಟಗಾರ ನಿವೃತ್ತಿ; ಈ ಆಟಗಾರನ ಸಾಧನೆಗಳ ವಿವರ ಇಲ್ಲಿದೆ

ಭಾರಿ ಸೋಲಿನಿಂದ ಗೋಯೆಂಕಾ ಅಸಮಾಧಾನಗೊಂಡಿದ್ದರು ಮತ್ತು ಅದರ ಬಗ್ಗೆ ತಮ್ಮ ಹತಾಶೆಯನ್ನು ಹೊರಹಾಕುತ್ತಿರುವುದು ಕಂಡುಬಂದಿದೆ. ಎಲ್ಎಸ್ಜಿ ಮಾಲೀಕರ ಕ್ರಮವು ಅನೇಕರಿಗೆ ಹಿಡಿಸಿಲ್ಲ. ಈ ಎಲ್ಲದರ ನಡುವೆ, ಗೌತಮ್ ಗಂಭೀರ್ ಅವರು ಶಾರುಖ್ ಖಾನ್ ಅವರನ್ನು ತಾವು ಕೆಲಸ ಮಾಡಿದ ಅತ್ಯುತ್ತಮ ಫ್ರ್ಯಾಂಚೈಸಿ ಮಾಲೀಕ ಎಂದು ಕರೆಯುವ ಮೂಲಕ ಪರೋಕ್ಷವಾಗಿ ಗೋಯೆಂಕಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಜೀವ್ ಗೋಯೆಂಕಾ ವಿರುದ್ಧ ಗಂಭೀರ್ ಗರಂ

ಗೌತಮ್ ಗಂಭೀರ್ ಐಪಿಎಲ್​​ನ ಕಳೆದ ಎರಡು ಆವೃತ್ತಿಗಳಲ್ಲಿ ಎಲ್ಎಸ್​ಜಿ ಮಾರ್ಗದರ್ಶಕರಾಗಿ ತಮ್ಮ ಕೋಚಿಂಗ್​ ವೃತ್ತಿಯನ್ನು ಆರಂಭಿಸಿದ್ದರು. ಮಾರ್ಗದರ್ಶಕರಾಗಿದ್ದ ಸಮಯದಲ್ಲಿ, ಎಲ್ಎಸ್ಜಿ ಎರಡೂ ಋತುಗಳಲ್ಲಿ ಪ್ಲೇಆಫ್​​ಗೆ ಅರ್ಹತೆ ಪಡೆದಿತ್ತು. ಆದಾಗ್ಯೂ, ಗೌತಮ್ ಗಂಭೀರ್ ಆಶ್ಚರ್ಯಕರವಾಗಿ ಪ್ರಭಾವಶಾಲಿ ಅಭಿಯಾನದ ನಂತರವೂ ಫ್ರಾಂಚೈಸಿಯಿಂದ ಬೇರ್ಪಡಲು ನಿರ್ಧರಿಸಿದ್ದರು. ಐಪಿಎಲ್ 2024 ಕ್ಕೆ ಮುಂಚಿತವಾಗಿ ಕೋಲ್ಕತಾ ನೈಟ್ ರೈಡರ್ಸ್​ಗೆ ಸೇರಿದರು.

ಗೋಯೆಂಕಾ ಮತ್ತು ಶಾರುಖ್ ಅವರೊಂದಿಗೆ ಕೆಲಸ ಮಾಡಿದ ನಂತರ, ಭಾರತದ ಮಾಜಿ ಬ್ಯಾಟ್ಸ್ಮನ್ ಅವರು ಗೋಯೆಂಕಾ ಮತ್ತು ಶಾರುಖ್ ಅವರೊಂದಿಗೆ ಕೆಲಸ ಮಾಡಿದ ಅತ್ಯುತ್ತಮ ಮಾಲೀಕ ಎಂದು ಕರೆದರು. ಕೋಲ್ಕತಾ ನೈಟ್ ರೈಡರ್ಸ್ ಮಾಜಿ ನಾಯಕ, ಶಾರುಖ್ ಎಂದಿಗೂ ಕ್ರಿಕೆಟ್ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಮತ್ತು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಬೆಂಬಲವನ್ನು ನೀಡುತ್ತಾರೆ ಎಂದು ಒತ್ತಿ ಹೇಳಿದರು.

ಕ್ರಿಕೆಟ್​ಗೆ ಹಸ್ತಕ್ಷೇಪ ಮಾಡುವುದಿಲ್ಲ

“ನಾನು ಅವರೊಂದಿಗೆ ಅದ್ಭುತ ಸಂಬಂಧ ಹೊಂದಿದ್ದೇನೆ. ನನಗೆ, ಅವರು ನಾನು ಕೆಲಸ ಮಾಡಿದ ಅತ್ಯುತ್ತಮ ಮಾಲೀಕರು. ಅವರು ವಿನಮ್ರರು ಮಾತ್ರವಲ್ಲ, ಅವರು ಸಾಕಷ್ಟು ಗೌರವ ಹೊಂದಿರುವವು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಅವರು ಎಂದಿಗೂ ಕ್ರಿಕೆಟ್ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಿಲ್ಲ. ಎಂದು ನಾನು ಭಾವಿಸುವುದಿಲ್ಲ. ನನ್ನಂತಹ ವ್ಯಕ್ತಿಗೆ ಇದು ಬಹಳ ದೊಡ್ಡ ವಿಷಯ. ಏಕೆಂದರೆ ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರ್ಯವನ್ನು ಪಡೆಯುವುದು ದೊಡ್ಡ ವಿಷಯ. ನಾನು ಯಾವುದೇ ನಿರ್ಧಾರ ತೆಗೆದುಕೊಂಡರೂ, ಅವರು ನನ್ನನ್ನು ಬೆಂಬಲಿಸುತ್ತಾರೆ ಎಂದು ನನಗೆ ತಿಳಿದಿದೆ ಎಂಬುದಾಗಿ ಗಂಭೀರ್​ ಹೇಳಿದರು.

ಇದು ನಮ್ಮ ನಡುವಿನ ನಂಬಿಕೆ. ಏಕೆಂದರೆ ಅವರು ಎಂದಿಗೂ ಕ್ರಿಕೆಟ್ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಿಲ್ಲ ಎಂದು ನನಗೆ ತಿಳಿದಿದೆ. ನಾನು ತೆಗೆದುಕೊಳ್ಳುವ ಯಾವುದೇ ನಿರ್ಧಾರವು ತಂಡದ ಹಿತಾಸಕ್ತಿಗಳಿಗೆ ಅನುಗುಣವಾಗಿರುತ್ತದೆ ಮತ್ತು ಎಂಬುದು ಅವರಿಗೆ ತಿಳಿದಿದೆ” ಎಂದು ಅವರು ಹೇಳಿದರು.

ಗಂಭೀರ್ 2011 ರಿಂದ 2017 ರವರೆಗೆ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ್ದರು ಮತ್ತು ನಾಯಕನಾಗಿ ಅತ್ಯಂತ ಯಶಸ್ವಿ ಅವಧಿಯನ್ನು ಅನುಭವಿಸಿದರು. ಅವರ ನಾಯಕತ್ವದಲ್ಲಿ ನೈಟ್ ರೈಡರ್ಸ್ 2012 ರಲ್ಲಿ ತಮ್ಮ ಮೊದಲ ಪ್ರಶಸ್ತಿಯನ್ನು ಗೆದ್ದಿತ್ತು. 2014 ರಲ್ಲಿಯೂ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಪ್ರಸಕ್ತ ಋತುವಿನಲ್ಲಿ, ಅವರು ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಪ್ರಸ್ತುತ 11 ಪಂದ್ಯಗಳಲ್ಲಿ ಎಂಟು ಗೆಲುವುಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Continue Reading
Advertisement
CAA
ದೇಶ5 mins ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Heavy Rain
ಕರ್ನಾಟಕ7 mins ago

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Dharwad News
ಕ್ರೈಂ40 mins ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

cyber crime
ದೇಶ54 mins ago

Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

Murder Case
ಕ್ರೈಂ1 hour ago

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

karnataka Weather Forecast
ಮಳೆ2 hours ago

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Joe Biden
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

Cotton Candy
ಆರೋಗ್ಯ3 hours ago

Cotton Candy: ಕಾಟನ್‌ ಕ್ಯಾಂಡಿ ಯಾಕೆ ಎಷ್ಟೊಂದು ಅಪಾಯಕಾರಿ ಗೊತ್ತೆ?

Vitamin Side Effects
ಆರೋಗ್ಯ4 hours ago

Vitamin Side Effects: ವಿಟಮಿನ್‌ ಮಾತ್ರೆಗಳನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ?

Dina Bhavishya
ಭವಿಷ್ಯ4 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ19 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ20 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ21 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌