IPL 2023: ಕಾನ್ವೆ-ಗಾಯಕ್ವಾಡ್​ ಅರ್ಧಶತಕ; ಬೃಹತ್​ ಮೊತ್ತ ದಾಖಲಿಸಿದ ಚೆನ್ನೈ - Vistara News

ಕ್ರಿಕೆಟ್

IPL 2023: ಕಾನ್ವೆ-ಗಾಯಕ್ವಾಡ್​ ಅರ್ಧಶತಕ; ಬೃಹತ್​ ಮೊತ್ತ ದಾಖಲಿಸಿದ ಚೆನ್ನೈ

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ 223 ರನ್​ ಗಳಿಸಿ ಸವಾಲೊಡ್ಡಿದೆ.

VISTARANEWS.COM


on

Delhi Capitals vs Chennai Super Kings
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ಲೇ ಆಫ್​ ದೃಷ್ಟಿಯಿಂದ ಗೆಲ್ಲಲೇ ಬೇಕಾದ ಇರಾದೆಯಲ್ಲಿ ಆಡಲಿಳಿದ ಪಂದ್ಯದಲ್ಲಿ ಋತುರಾಜ್​ ಗಾಯಕ್ವಾಡ್(79)​ ಮತ್ತು ಡೆವೋನ್​ ಕಾನ್ವೆ(87) ಅವರ ಸೊಗಸಾದ ಅರ್ಧಶತಕದ ನೆರವಿಂದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಚೆನ್ನೈ ಸೂಪರ್​ ಕಿಂಗ್ಸ್​ ಬೃಹತ್​ ಮೊತ್ತ ದಾಖಲಿಸಿದೆ.

ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಸೂಪರ್​ ಕಿಂಗ್ಸ್ ತಂಡ ಡೆಲ್ಲಿ ಬೌಲರ್​ಗಳ ಮೇಲೆ ಸವಾರಿ ಮಾಡಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 223 ರನ್​ ಗಳಿಸಿದೆ. ಡೆಲ್ಲಿ ತಂಡ ಗೆಲುವಿಗೆ 224 ರನ್​ ಬಾರಿಸಬೇಕಿದೆ.

ಗಾಯಕ್ವಾಡ್​-ಕಾನ್ವೆ ಶತಕದ ಜತೆಯಾಟ

ಇನಿಂಗ್ಸ್​ ಆರಂಭಿಸಿದ ಡೆವೋನ್​ ಕಾನ್ವೆ ಮತ್ತು ಋತುರಾಜ್​ ಗಾಯಕ್ವಾಡ್​ ಸೇರಿಕೊಂಡು ಉತ್ತಮ ಆರಂಭ ಒದಗಿಸಿದರು. 12 ಓವರ್​ ಆಗುವಷ್ಟರಲ್ಲಿ ಅಜೇಯ ಶತಕದ ಜತೆಯಾಟವನ್ನು ತೋರ್ಪಡಿಸಿದರು. ಈ ಮೂಲಕ ನಾಯಕನ ಬ್ಯಾಟಿಂಗ್​ ಆಯ್ಕೆಯನ್ನು ಸಮರ್ಥಿಸಿಕೊಂಡರು. ಅದರಲ್ಲೂ ಗಾಯಕ್ವಾಡ್​ ಅವರು ಸೈಲೆಂಟ್​ ಕಿಲ್ಲರ್ ರೀತಿ ಸಿಕ್ಸರ್​ ಬಾರಿಸುತ್ತಲೇ ಸಾಗುತ್ತಿದ್ದರೂ. ಕುಲ್​ದೀಪ್​ ಯಾದವ್​ ಅವರ ಮೂರನೇ ಓವರ್​ನಲ್ಲಿ ಹ್ಯಾಟ್ರಿಕ್​ ಸಿಕ್ಸರ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು.

ಗಾಯಕ್ವಾಡ್​ ಅವರು ಅರ್ಧಶತಕ ಪೂರೈಸಿದ ವೇಳೆ ಚೆನ್ನೈ ತಂಡದ ಪರ ನೂತನ ದಾಖಲೆಯೊಂದನ್ನು ಬರೆದರು. ಚೆನ್ನೈ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದು ಅತಿ ಹೆಚ್ಚು ಬಾರಿ 50 ಪ್ಲಸ್​ ಮೊತ್ತ ದಾಖಲಿಸಿದ ದ್ವಿತೀಯ ಆಟಗಾರ ಎನಿಸಿಕೊಂಡರು. ಡು ಪ್ಲೆಸಿಸ್​ 16 ಬಾರಿ ಈ ಸಾಧನೆ ಮಾಡಿ ಅಗ್ರ ಸ್ಥಾನದಲ್ಲಿದ್ದಾರೆ. ಗಾಯಕ್ವಾಡ್​ 14 ಬಾರಿ ಚೆನ್ನೈ ಪರ 50 ಪ್ಲಸ್​ ಮೊತ್ತ ಪೇರಿಸಿದರು.

ಇದನ್ನೂ ಓದಿ IPL 2023: ಶೀಘ್ರದಲ್ಲೇ ರಿಂಕು ಸಿಂಗ್​ ಟೀಮ್​ ಇಂಡಿಯಾ ಸೇರಲಿದ್ದಾರೆ; ಹರ್ಭಜನ್​ ವಿಶ್ವಾಸ

ಮತ್ತೊಂದು ತುದಿಯಲ್ಲಿ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದ ಕಾನ್ವೆ ಕೂಡ ಗಾಯಕ್ವಾಡ್​ ಬೆನ್ನಿಗೆ ಅರ್ಧಶತಕ ಬಾರಿಸಿದರು. ಖಲೀಲ್​ ಅಹ್ಮದ್​ ಅವರ ಓವರ್​ನಲ್ಲಿ ಸಿಕ್ಸರ್​ ಬಾರಿಸುವ ಮೂಲಕ ಅರ್ಧಶತಕ ಪೂರ್ತಿಗೊಳಿಸಿದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಚೇತನ್​ ಸಕಾರಿಯಾ ಅವರು ಬೇರ್ಪಡಿಸುವಲ್ಲಿ ಯಶಸ್ವಿಯಾದರು. ಗಾಯಕ್ವಾಡ್​ ಅವರ ವಿಕೆಟ್​ ಕಿತ್ತು ಡೆಲ್ಲಿಗೆ ಆರಂಭಿಕ ಮುನ್ನಡೆ ತಂದುಕೊಟ್ಟರು. ಗಾಯಕ್ವಾಡ್​ 79 ರನ್​ ಗಳಿಸಿದರು. ಈ ಇನಿಂಗ್ಸ್​ನಲ್ಲಿ 7 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಸಿದರು. ಈ ಜೋಡಿ ಮೊದಲ ವಿಕೆಟ್​ಗೆ 141 ರನ್​ ರಾಶಿ ಹಾಕಿತು.

ಗಾಯಕ್ವಾಡ್​ ವಿಕೆಟ್​ ಪತನದ ಬಳಿಕ ಆಡಲಿಳಿದ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್​ ನಡೆಸಿ ತಂಡದ ಬೃಹತ್​ ಮೊತ್ತದಲ್ಲಿ ಪ್ರಮುಖ ಪಾತ್ರವಹಿಸಿದರು. ಕೇವಲ 9 ಎಸೆತಗಳಲ್ಲಿ ಮೂರು ಸಿಕ್ಸರ್​ ನೆರವಿನಿಂದ 22 ರನ್​ ಬಾರಿಸಿದರು. ಈ ವಿಕೆಟ್​ ಪತನದ ಬೆನ್ನಲೇ ಡೆವೋನ್​ ಕಾನ್ವೆ ಕೂಡ ವಿಕೆಟ್​ ಕೈಚೆಲ್ಲಿದರು. ಕಾನ್ವೆ 18 ಓವರ್​ ತನ ಕ ಬ್ಯಾಟಿಂಗ್​ ನಡೆಸಿ 87 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 11 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ಅಂತಿಮ ಹಂತದಲ್ಲಿ ಜಡೇಜಾ ಅವರು ಅಜೇಯ 20 ರನ್​​ಗಳ ಕೊಡುಗೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

SuryaKumar Yadav : ಮುಂಬೈ ತಂಡಕ್ಕೆ ಮತ್ತಷ್ಟು ಸಂಕಷ್ಟ; ಸೂರ್ಯಕುಮಾರ್​ ಸೇರ್ಪಡೆ ಅನುಮಾನ

SuryaKumar Yadav : ಸ್ಪೋರ್ಟ್ಸ್​ ಹರ್ನಿಯಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸಂಪೂರ್ಣ ಗುಣವಾಗಿಲ್ಲ. ಅವರ ಅಲಭ್ಯತೆಗೆ ಮುಂಬಯಿ ಇಂಡಿಯನ್ಸ್​ ತಂಡಕ್ಕೆ ಹಿನ್ನಡೆ ಉಂಟು ಮಾಡಿದೆ.

VISTARANEWS.COM


on

Suryakumar Yadav
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ರಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ತನ್ನ ಸ್ಟಾರ್ ಬ್ಯಾಟರ್​ ಸೂರ್ಯಕುಮಾರ್ ಯಾದವ್ (SuryaKumar Yadav) ಅವರ ಸೇವೆಗಳನ್ನು ಇನ್ನೂ ಕೆಲವು ಪಂದ್ಯಗಳಿಗೆ ಕಳೆದುಕೊಳ್ಳಬಹುದು. ಬಲಗೈ ಬ್ಯಾಟ್ಸ್ಮನ್ ಕಳೆದ ವರ್ಷ ಡಿಸೆಂಬರ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ಐ (T20 Cricket) ಶತಕ ಗಳಿಸಿದ ನಂತರ ಸ್ಪರ್ಧಾತ್ಮಕ ಪಂದ್ಯವನ್ನು ಆಡಿಲ್ಲ. ಅವರು ಸ್ಪೋರ್ಟ್ಸ್​ ಹರ್ನಿಯಾ (Sports Hernia) ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸಂಪೂರ್ಣ ಗುಣವಾಗಿಲ್ಲ. ಅವರ ಅಲಭ್ಯತೆಗೆ ಮುಂಬಯಿ ಇಂಡಿಯನ್ಸ್​ ತಂಡಕ್ಕೆ ಹಿನ್ನಡೆ ಉಂಟು ಮಾಡಿದೆ. ಆ ತಂಡ ಈಗಾಗಲೇ ಎರಡು ಪಂದ್ಯಗಳನ್ನು ಸೋತಿದೆ.

ಸೂರ್ಯ ಕುಮಾರ್​ ಕ್ರೀಡಾ ಹರ್ನಿಯಾ ಸಮಸ್ಯೆ ಒಳಗಾಗುವ ಮೊದಲು ಪಾದದ ಗಾಯದಿಂದ ಬಳಲುತ್ತಿದ್ದರು. ಎರಡೂ ಗಾಯಗಳಿಗೆ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಪಾದದ ಗಾಯದ ಶಸ್ತ್ರಚಿಕಿತ್ಸೆಯ ನಂತರ, ಅವರು ಜನವರಿಯಲ್ಲಿ ಮ್ಯೂನಿಚ್​ನಲ್ಲಿ ತಮ್ಮ ಸೊಂಟದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು.

ಸೂರ್ಯಕುಮಾರ್ ಯಾದವ್ ಕಳೆದ ತಿಂಗಳು ಡಿವೈ ಪಾಟೀಲ್ ಟಿ 20 ಕಪ್ ಮೂಲಕ ಆಡಲು ಯೋಜಿಸುತ್ತಿದ್ದರೂ ಬಿಸಿಸಿಐನ ವೈದ್ಯಕೀಯ ತಂಡದಿಂದ ಅವರಿಗೆ ಅನುಮತಿ ಸಿಗಲಿಲ್ಲ. ಐಪಿಎಲ್ 2024 ಪ್ರಾರಂಭವಾಗುವ ಮೊದಲು, ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್​​ಸಿಎ) ಫಿಟ್ನೆಸ್ ಪರೀಕ್ಷೆಗೆ ಒಳಗಾಗಿದ್ದರು. ಆದರೆ ಮತ್ತೊಮ್ಮೆ ಮರಳಲು ಅನುಮತಿ ಪಡೆಯಲು ವಿಫಲಗೊಂಡರು.

ಹೆಚ್ಚಿನ ಪಂದ್ಯಗಳಿಂದ ಹೊರಕ್ಕೆ

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಸೂರ್ಯಕುಮಾರ್ ಯಾದವ್ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಲಬೇಕಾಗಿರುವುದರಿಂದ ಇನ್ನೂ ಕೆಲವು ಐಪಿಎಲ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಅವರ ಪ್ರಗತಿಯನ್ನು ಪ್ರಸ್ತುತ ಎನ್​​ಸಿಎ ಮೇಲ್ವಿಚಾರಣೆ ಮಾಡುತ್ತಿದೆ. ಬ್ಯಾಟರ್​ನೊಂದಿಗೆ ಬಿಸಿಸಿಐನ ಎಚ್ಚರಿಕೆಯ ನೀತಿಯನ್ನು ಅನುರಿಸುತ್ತಿದೆ. ಕಾರಣವೆಂದರೆ ಮುಂಬರುವ ಟಿ 20 ವಿಶ್ವಕಪ್. ಸೂರ್ಯಕುಮಾರ್ ಯಾದವ್ ಟಿ 20 ಐ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರು. ಬಿಸಿಸಿಐ ಅವರ ಫಿಟ್ನೆಸ್ ಅನ್ನು ಅಪಾಯಕ್ಕೆ ತಳ್ಳಲು ಮುಂದಾಗಿಲ್ಲ.

ಇದನ್ನೂ ಓದಿ: Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

“ಸೂರ್ಯ ಉತ್ತಮ ಪ್ರಗತಿ ಸಾಧಿಸುತ್ತಿದ್ದಾರೆ. ಶೀಘ್ರದಲ್ಲೇ ಅವರು ಮುಂಬೈ ಇಂಡಿಯನ್ಸ್ ಪರ ಆಡಲು ಮರಳಲಿದ್ದಾರೆ. ಆದಾಗ್ಯೂ, ಮೊದಲ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿರುವ ಅವರು ಇನ್ನೂ ಕೆಲವು ಪಂದ್ಯಗಳಿಗೆ ಹೊರಗುಳಿಯಬೇಕಾಗಬಹುದು,” ಎಂದು ಬಿಸಿಸಿಐ ಮೂಲವೊಂದು ಸುದ್ದಿ ಸಂಸ್ಥೆಗೆ ತಿಳಿಸಿದೆ.

“ಬಿಸಿಸಿಐಗೆ ವಿಶ್ವ ಟಿ 20 ಗೆ ಹಾದಿಯಲ್ಲಿದ್ದಾರೆಯೇ ಎಂಬುದು ಮುಖ್ಯ ಕಾಳಜಿಯಾಗಿದೆ. ನಿಸ್ಸಂಶಯವಾಗಿ ಅವರು ಎಂಐ ಪರ ಆಡುತ್ತಾರೆ. ಆದರೆ ಕ್ರೀಡಾ ಹರ್ನಿಯಾ ಶಸ್ತ್ರಚಿಕಿತ್ಸೆಯ ನಂತರ, ಅವರನ್ನು ತರಾತುರಿಯಲ್ಲಿ ಮೈದಾನಕ್ಕೆ ಇಳಿದಿಲ್ಲ ಎನ್ನಲಾಗಿದೆ, “ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ವಿಶ್ವದ ಅಗ್ರ ಶ್ರೇಯಾಂಕದ ಟಿ 20 ಐ ಬ್ಯಾಟರ್​ ಸೂರ್ಯಕುಮಾರ್ ಯಾದವ್ ಐಪಿಎಲ್ 2024 ರಲ್ಲಿ ಮುಂಬೈನ ಎರಡೂ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಮುಂಬೈ ಎರಡೂ ಪಂದ್ಯಗಳನ್ನು ಸೋತಿದೆ. ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಭಾರತ ಮುಂದಿನ ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.

Continue Reading

ಕ್ರೀಡೆ

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

Hardik Pandya : ಹಾರ್ದಿಕ್ ಪಾಂಡ್ಯ ಅವರನ್ನು ಮುಂಬಯಿ ತಂಡದ ನಾಯಕನನ್ನಾಗಿ ಮಾಡಿದ ಬಳಿಕ ಕ್ರಿಕೆಟ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Hardik Pandya
Koo

ಹೈದರಾಬಾದ್​: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ (Hardik Pandya) 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (mumbai Indians) ಮತ್ತು ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad) ತಂಡಗಳು ಮುಖಾಮುಖಿಯಾಗಿದ್ದವು. ಬ್ಯಾಟಿಂಗ್ ಪರಾಕ್ರಮದ ರೋಮಾಂಚಕ ಪ್ರದರ್ಶನದ ಹೊರತಾಗಿಯೂ, ಮುಂಬೈ ಇಂಡಿಯನ್ಸ್ ಪ್ರಸ್ತುತ ನಡೆಯುತ್ತಿರುವ ಮೆಗಾ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಸೋಲನ್ನು ಅನುಭವಿಸಿತು. ಆದರೆ, ಸೋಲಿನ ಬೇಸರದ ಹೊರತಾಗಿಯೂ ಪ್ರೇಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದು ಹಾರ್ದಿಕ್ ಪಾಂಡ್ಯ. (Hardik Pandya)

ಕುತೂಹಲಕಾರಿ ಸಂಗತಿಯೆಂದರೆ, ಐಪಿಎಲ್ 2024 ಋತುವಿನ ಪ್ರಾರಂಭದಿಂದಲೂ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕ್ರೀಡಾಂಗಣದಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಕೆಟ್​ ಅಭಿಮಾನಿಗಳಿಂದ ಟೀಕೆಗಳು ಹಾಗೂ ಅಪಹಾಸ್ಯವನ್ನು ಎದುರಿಸುತ್ತಿದ್ದಾರೆ. ಅಂತೆಯೇ ಎಸ್​ಆರ್​​ಎಚ್​ ವಿರುದ್ಧದ ಪಂದ್ಯದಲ್ಲಿ, ಹಾರ್ದಿಕ್ 20 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದ ನಂತರ, ಅಭಿಮಾನಿಗಳು “ರೋಹಿತ್ ರೋಹಿತ್” ಎಂದು ಜಪಿಸಲು ಪ್ರಾರಂಭಿಸಿದ್ದರು. ಹಾರ್ದಿಕ್ ಡ್ರೆಸ್ಸಿಂಗ್ ರೂಮ್ಗೆ ಹಿಂದಿರುಗುತ್ತಿದ್ದಂತೆ ಅವರನ್ನು ಅಪಹಾಸ್ಯ ಮಾಡಿದ್ದರು. ಬಳಕೆದಾರರೊಬ್ಬರು ಈ ಘಟನೆಯ ವೀಡಿಯೊವನ್ನು ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದಾರೆ. ಇದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆದವು.

ಇದನ್ನೂ ಓದಿ : IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

277 ರನ್ ಗಳಿಸುವ ಸವಾಲನ್ನು ಗುರುತಿಸಿದ ಹಾರ್ದಿಕ್ ಪಾಂಡ್ಯ, ಎದುರಾಳಿ ತಂಡದ ಬ್ಯಾಟಿಂಗ್ ಅನ್ನು ಶ್ಲಾಘಿಸಿದರು ಮತ್ತು ಬ್ಯಾಟಿಂಗ್ ಸ್ನೇಹಿ ಪಿಚ್​ನಲ್ಲಿ ತಮ್ಮ ತಂಡದ ಬೌಲರ್​ಗಳು ಎದುರಿಸುತ್ತಿದ್ದ ಕಷ್ಟವನ್ನು ಒಪ್ಪಿಕೊಂಡರು. ಅವರು ತಮ್ಮ ಯುವ ಬೌಲಿಂಗ್ ದಾಳಿಯ ಸುಧಾರಿಸುವ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಪದಾರ್ಪಣೆ ಆಟಗಾರ್ತಿ ಕ್ವೆನಾ ಮಾಫಕಾ ಅವರ ಪ್ರದರ್ಶನವನ್ನು ಶ್ಲಾಘಿಸಿದರು.

” ಎಸ್​ಅರ್​​​ಎಚ್​​ 277 ರನ್ ಗಳಿಸುತ್ತದೆ ಎಂದೇ ಭಾವಿಸಲಾಗಿತ್ತು. ಪಿಚ್ ಬ್ಯಾಟಿಂಗ್​ಗೆ ಪೂರಕವಾಗಿತ್ತು. ವೇಳೆ ಎಷ್ಟೇ ಕೆಟ್ಟದಾಗಿರಲಿ ಅಥವಾ ಉತ್ತಮವಾಗಿರಲಿ, ಎದುರಾಳಿ ತಂಡವು ಅಷ್ಟು ಸ್ಕೋರ್ ಮಾಡಬೇಕಾದರೆ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಆ ತಂಡದ ಬೌಲರ್​ಗಳು ಉತ್ತಮವಾಗಿದ್ದರು. ಎರಡೂ ತಂಡಗಳು ಸುಮಾರು 500 ರನ್ ಬಾರಿಸಿದ್ದೇವೆ ಎಂದು ಪಾಂಡ್ಯ ಹೇಳಿಕೊಂಡಿದ್ದಾರೆ.

Continue Reading

ಕ್ರೀಡೆ

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

IPL 2024 : ಐಪಿಎಲ್​ನ 17 ನೇ ಸೀಸನ್ ಐಪಿಎಲ್ ಆರಂಭಿಕ ದಿನದಂದು ಅತಿ ಹೆಚ್ಚು ಟಿವಿ ವೀಕ್ಷಣೆಗೆ ಸಾಕ್ಷಿಯಾಯಿತು. ಡಿಸ್ನಿ ಸ್ಟಾರ್ ನೆಟ್ವರ್ಕ್​ನಲ್ಲಿ ಏಕಕಾಲದಲ್ಲಿ ಪ್ರಸಾರವನ್ನು 6.1 ಕೋಟಿ ವೀಕ್ಷಕರು ವೀಕ್ಷಿಸಿದರು.

VISTARANEWS.COM


on

IPL 2024-CSKRCB
Koo

ಮುಂಬೈ ಐಪಿಎಲ್ ನ 2024ರ (IPL 2024) ಅಧಿಕೃತ ಪ್ರಸಾರಕ ಡಿಸ್ನಿ ಸ್ಟಾರ್ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ದಾಖಲೆಯೊಂದಿಗೆ ಆರಂಭಿಸಿದೆ. ಐಪಿಎಲ್ 2024 ರ ಮೊದಲ ದಿನದಂದು 16.8 ಕೋಟಿ ವಿಶಿಷ್ಟ ವೀಕ್ಷಕರು 1276 ಕೋಟಿ ನಿಮಿಷಗಳ ವೀಕ್ಷಣೆಯ ಸಮಯವನ್ನು ದಾಖಲಿಸಿದೆ. ಐಪಿಎಲ್​ನ 17 ನೇ ಸೀಸನ್ ಐಪಿಎಲ್ ಆರಂಭಿಕ ದಿನದಂದು ಅತಿ ಹೆಚ್ಚು ಟಿವಿ ವೀಕ್ಷಣೆಗೆ (TV viewers) ಸಾಕ್ಷಿಯಾಯಿತು. ಡಿಸ್ನಿ ಸ್ಟಾರ್ ನೆಟ್ವರ್ಕ್​ನಲ್ಲಿ ಏಕಕಾಲದಲ್ಲಿ ಪ್ರಸಾರವನ್ನು 6.1 ಕೋಟಿ ವೀಕ್ಷಕರು ವೀಕ್ಷಿಸಿದರು.

ಸ್ಟಾರ್ ಸ್ಪೋರ್ಟ್ಸ್ ವಕ್ತಾರರು “ಇದು ಒಂದು ಸ್ಮರಣೀಯ ಸಾಧನೆಯಾಗಿದ್ದು, ಸ್ಟಾರ್ ಸ್ಪೋರ್ಟ್ಸ್ ಮೇಲಿನ ಅಭಿಮಾನಿಗಳ ಪ್ರೀತಿಯ ಪ್ರತಿಫಲನವಾಗಿದೆ. ಇದು ನೆಟ್ವರ್ಕ್​ ಅಚಲ ಬದ್ಧತೆಗೆ ಸಾಧ್ಯವಾಗಿದೆ. ಕ್ರಿಕೆಟ್ ಮತ್ತು ಐಪಿಎಲ್ ಅನ್ನು ಬೆಳೆಸಲು ಸ್ಟಾರ್ ಸ್ಪೋರ್ಟ್ಸ್ ನಿರಂತರವಾಗಿ ಕೈಗೊಂಡಿರುವ ವ್ಯಾಪಕ ಶ್ರೇಣಿಯ ಉಪಕ್ರಮಗಳಿಗೆ ಬೆಂಬಲ ನೀಡಿದ್ದಕ್ಕಾಗಿ ನಾವು ನಮ್ಮ ಎಲ್ಲಾ ಪಾಲುದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಮತ್ತು ಬಿಸಿಸಿಐಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ವೇಗವನ್ನು ಮುಂದುವರಿಸಲು ಮತ್ತು ಅಭೂತಪೂರ್ವ ವೀಕ್ಷಕರನ್ನು ತಲುಪಲು ನಾವು ವಿಶ್ವದ ಅತಿದೊಡ್ಡ ಕ್ರೀಡಾಕೂಟದಲ್ಲಿ ನಮ್ಮ ಸಾಮರ್ಥ್ಯವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ವೀಕ್ಷಕ ವಿವರಣೆ ತಂಡದಲ್ಲಿರುವ ಸ್ಟಾರ್​ಗಳು ಇವರು

ನವಜೋತ್ ಸಿಂಗ್ ಸಿಧು ಅವರು ಭಾರತದ ವಿಶ್ವ ಚಾಂಪಿಯನ್ ಹರ್ಭಜನ್ ಸಿಂಗ್, ಇರ್ಫಾನ್ ಪಠಾಣ್, ರವಿ ಶಾಸ್ತ್ರಿ, ಸುನಿಲ್ ಗವಾಸ್ಕರ್ ಮತ್ತು ಕ್ರಿಸ್ ಶ್ರೀಕಾಂತ್. ಸ್ಟೀವ್ ಸ್ಮಿತ್ ಮತ್ತು ಸ್ಟುವರ್ಟ್ ಬ್ರಾಡ್, ಬ್ರಿಯಾನ್ ಲಾರಾ, ಮ್ಯಾಥ್ಯೂ ಹೇಡನ್, ಕೆವಿನ್ ಪೀಟರ್ಸನ್, ಜಾಕ್ ಕಾಲಿಸ್ ಮತ್ತು ಡೇಲ್ ಸ್ಟೇನ್ ಅವರೊಂದಿಗೆ ಟಾಟಾ ಐಪಿಎಲ್ 2024 ಅನ್ನು ಪ್ರಸ್ತುತಪಡಿಸಿದರು. ಸಿಎಸ್ಕೆಯ ಮಾಜಿ ತಾರೆಗಳಾದ ಅಂಬಾಟಿ ರಾಯುಡು, ಮುರಳಿ ವಿಜಯ್, ಎಲ್ ಬಾಲಾಜಿ ಮತ್ತು ಸುಬ್ರಮಣ್ಯಂ ಬದ್ರಿನಾಥ್, ಐಪಿಎಲ್ ಚಾಂಪಿಯನ್​ಗಳಾದ ವಿನಯ್ ಕುಮಾರ್ ಮತ್ತು ವೇಣುಗೋಪಾಲ್ ರಾವ್ ಅವರು ಡಿಸ್ನಿ ಸ್ಟಾರ್​ನ 9 ಭಾಷೆಗಳಲ್ಲಿ ಪ್ರಾದೇಶಿಕ ಫೀಡ್​ನ ಮುಂಚೂಣಿಯಲ್ಲಿದ್ದರು.

ಜಿಯೊಗೆ 11.3 ಕೋಟಿ ವೀಕ್ಷಕರು

ಡಿಜಿಟಲ್​ನಲ್ಲಿ ಜಿಯೋ ಸಿನೆಮಾ ಐಪಿಎಲ್​ನ ಮೊದಲ ದಿನದಂದು 11.3 ಕೋಟಿ ವೀಕ್ಷಕರನ್ನು ಗಳಿಸಿದೆ. ಐಪಿಎಲ್ 2023 ರ ಮೊದಲ ದಿನಕ್ಕಿಂತ ಇದು 51% ಜಿಗಿತವನ್ನು ದಾಖಲಿಸಿದೆ ಎಂದು ಜಿಯೊ ಹೇಳಿಕೊಂಡಿದೆ. ಮೊದಲ ದಿನ ಜಿಯೋ ಸಿನೆಮಾದಲ್ಲಿ ಒಟ್ಟು ವೀಕ್ಷಣೆಯ ಸಮಯ 660 ಕೋಟಿ ನಿಮಿಷಗಳು.

ಇದನ್ನೂ ಓದಿ : IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

ಸ್ಟಾರ್ ಸ್ಪೋರ್ಟ್ಸ್ ಪ್ರಮುಖ ಡಿಟಿಎಚ್ ಪ್ಲಾಟ್ ಫಾರ್ಮ್ ಗಳಲ್ಲಿ ಅಟ್ಮೋಸ್ ಸೌಂಡ್ ನೊಂದಿಗೆ 4 ಕೆ ನಲ್ಲಿ ಐಪಿಎಲ್ ಪ್ರಸಾರ ಪ್ರಾರಂಭಿಸಿದೆ.

ಸ್ಟಾರ್ ಸ್ಪೋರ್ಟ್ಸ್ ವಿಶೇಷ ಚೇತನರಿಗಾಗಿ, ದೃಷ್ಟಿಹೀನರು, ಕಿವುಡರು ಅಥವಾ ಶ್ರವಣದೋಷವುಳ್ಳ ಅಭಿಮಾನಿಗಳಿಗಾಗಿ ಕಾಮೆಂಟರಿ ಮತ್ತು ಸಂಜ್ಞೆ ಭಾಷೆಯ ವಿಶೇಷ ಫೀಡ್ ಅನ್ನು ಪ್ರಾರಂಭಿಸಿದೆ. ಇದು ಈ ಐಪಿಎಲ್ ಅನ್ನು ನಿಜವಾಗಿಯೂ ಒಳಗೊಳ್ಳುವಂತೆ ಮಾಡುತ್ತದೆ. ವಿಶ್ವದ ಯಾವುದೇ ಪ್ರಮುಖ ಕ್ರೀಡಾಕೂಟವು ವಿಕಲಚೇತನರಿಗೆ ಲೈವ್ ಫೀಡ್ ಹೊಂದಿರುವುದು ಇದೇ ಮೊದಲು.

Continue Reading

ಪ್ರಮುಖ ಸುದ್ದಿ

IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

IPL 2024 : ಪಂದ್ಯದಲ್ಲಿ ಹೆನ್ರಿಚ್ ಕ್ಲಾಸೆನ್​ 34 ಎಸೆತಗಳಲ್ಲಿ 80 ರನ್ ಬಾರಿಸುವ ಮೂಲಕ ದೊಡ್ಡ ಮೊತ್ತ ಪೇರಿಸಲು ನೆರವಾಗಿದ್ದರು.

VISTARANEWS.COM


on

Henrich Klasen- IPL
Koo

ಹೈದರಾಬಾದ್​: ಬುಧವಾರ ನಡೆದ ಸನ್​ರೈಸರ್ಸ್​​ ಹೈದರಾಬಾದ್ (Sun Risers Hyderabad​​) ಮತ್ತು ಮುಂಬೈ ಇಂಡಿಯನ್ಸ್ (Mumbai Indians ) ನಡುವಿನ ಐಪಿಎಲ್ 2024 ರ 8 ನೇ ಪಂದ್ಯವು ಹಲವು ದಾಖಲೆಗಳಿಗೆ ಕಾರಣವಾಗಿದ್ದವು. ಇದು ಟಿ20 ಮಾದರಿಯಲ್ಲಿ ತಂಡವೊಂದರ ಗರಿಷ್ಠ ಸ್ಕೋರ್​, ಐಪಿಎಲ್​ನಲ್ಲಿ (IPL 2024) ಪಂದ್ಯವೊಂದರ ಒಟ್ಟು ಅತ್ಯಧಿಕ ಸ್ಕೋರ್ ಸೇರಿದಂತೆ ಹಲವು ದಾಖಲೆಗಳಿಗೆ ಕಾರಣವಾದರು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟರ್​ ಹೆನ್ರಿಚ್ ಕ್ಲಾಸೆನ್​ 34 ಎಸೆತಗಳಲ್ಲಿ 80 ರನ್​ ಬಾರಿಸಿದ್ದರು. ಆದಾಗ್ಯೂ, ಎಲ್ಲಾ ಕ್ರಿಕೆಟ್ ಚಟುವಟಿಕೆಗಳ ನಡುವೆ, ಕ್ಲಾಸೆನ್ ಅವರ 14 ತಿಂಗಳ ಪುತ್ರಿ ಲಯಾ ಸ್ಟ್ಯಾಂಡ್​ನಲ್ಲಿ ತಂದೆಯವನ್ನು ಬೆಂಬಲಿಸುವ ಅಪರೂಪದ ಕ್ಷಣ ವೈರಲ್ ಆಗಿದೆ.

ಎಸ್ಆರ್​ಎಚ್​ನ ಬ್ಯಾಟರ್​ಗಳು ಆರು ಹೊಡೆತಗಳ ಉತ್ಸಾಹದಲ್ಲಿದ್ದಾಗ ಕ್ಲಾಸೆನ್ ಕೇವಲ 34 ಎಸೆತಗಳಲ್ಲಿ ನಾಲ್ಕು ಬೌಂಡರಿಗಳು ಮತ್ತು ಏಳು ಅತ್ಯುನ್ನತ ಸಿಕ್ಸರ್​ಗಳನ್ನು ಒಳಗೊಂಡಂತೆ 80* ರನ್ ಗಳಿಸಿದ್ದರು. ಆದಾಗ್ಯೂ, ದಕ್ಷಿಣ ಆಫ್ರಿಕಾದ ಆಟಗಾರನನ್ನು ಸ್ಥಳೀಯ ಅಭಿಮಾನಿಗಳು ಹುರಿದುಂಬಿಸುವ ನಡುವೆ ಅವರ ಮಗಳು ಎಸ್​ಆರ್​ಎಚ್​ ಬಾವುಟ ಬೀಸಿ ಅವರಿಗೆ ಬೆಂಬಲ ನೀಡಿದರು.

ಎಸ್​ಆರ್​​ಎಚ್​ ಅಪರೂಪದ ದಾಖಲೆ

ಸನ್​ರೈಸರ್ಸ್​ ಹೈದರಾಬಾದ್​ ತಂಡ ಐಪಿಎಲ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದೆ. ಐಪಿಎಲ್​(IPL 2024) ಇತಿಹಾಸದಲ್ಲೇ ಅತ್ಯಧಿಕ ರನ್​ ಪೇರಿಸಿದ ಮೊದಲ ತಂಡ ಎನಿಸಿಕೊಂಡಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ ದಾಖಲೆಯನ್ನು ಮುರಿದಿದೆ.

ಇದನ್ನೂ ಓದಿ : IPL 2024 : ಕೊಹ್ಲಿ- ಗಂಭೀರ್ ಮುಖಾಮುಖಿಯಲ್ಲಿ ವಿಜಯ ಯಾರಿಗೆ?

ಇಲ್ಲಿನ ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್​ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 20 ಓವರ್​ಗಳಲ್ಲಿ 3 ವಿಕೆಟ್​ಗೆ 277 ರನ್​ ಬಾರಿಸಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದೆ. ಆರ್​ಸಿಬಿ 2013ರಲ್ಲಿ ಪುಣೆ ವಾರಿಯರ್ಸ್​ ವಿರುದ್ಧ 5 ವಿಕೆಟ್​ಗೆ 263 ರನ್​ ಬಾರಿಸಿತ್ತು. ಇದೀಗ ಈ ದಾಖಲೆಯನ್ನು ಹೈದರಾಬಾದ್​ 11 ವರ್ಷಗಳ ಬಳಿಕ ಮೀರಿ ನಿಂತಿದೆ.
10 ಓವರ್​ನಲ್ಲಿ ಗರಿಷ್ಠ ಮೊತ್ತ

ಹೈದರಾಬಾದ್​ ತಂಡ 10 ಓವರ್​ಗಳಲ್ಲಿ ಕೇವಲ 2 ವಿಕೆಟ್​ಗೆ 148 ರನ್​ ಬಾರಿಸುವ ಮೂಲಕ ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿಯೇ 10 ಓವರ್​ಗೆ ಅ್ಯಧಿಕ ಮೊತ್ತ ಗಳಿಸಿದ ಮೊದಲ ತಂಡ ಹೆಗ್ಗಳಿಕೆಗೆ ಪಾತ್ರವಾಯಿತು. ಇದುವರೆಗೂ ಈ ದಾಖಲೆ ಮುಂಬೈ ತಂಡದ ಪರವಾಗಿತ್ತು. ಮುಂಬೈ 2021 ರಲ್ಲಿ ಹೈದರಾಬಾದ್​ ವಿರುದ್ಧವೇ 131/3 ಬಾರಿಸಿತ್ತು. ಇದೀಗ ಹೈದರಾಬಾದ್​ ಈ ದಾಖಲೆಯನ್ನು ಮುಂಬೈ ವಿರುದ್ಧವೇ ಆಡಿ ಸೇಡು ತೀರಿಸಿಕೊಂಡಿದೆ.

ಅತಿ ಕಡಿಮೆ ಓವರ್​ನಲ್ಲಿ 100 ರನ್​​

7 ಓವರ್​ನಲ್ಲಿ 100 ರನ್​ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದ ಅತಿ ಕಡಿಮೆ ಓವರ್​ನಲ್ಲಿ 100 ರನ್​ ಬಾರಿಸಿದ ತಂಡಗಳ ದಾಖಲೆಪಟ್ಟಿಯಲ್ಲಿ ಹೈದರಾಬಾದ್​ 4ನೇ ಸ್ಥಾನ ಪಡೆದುಕೊಂಡಿತು. ದಾಖಲೆ ಮುಂಬೈ ತಂಡದ ಹೆಸರಿನಲ್ಲಿದೆ. 2014ರಲ್ಲಿ ಪಂಜಾಬ್​ ವಿರುದ್ಧ ಮುಂಬೈ ಕೇವಲ 6 ಓವರ್​ನಲ್ಲಿ ಈ ಸಾಧನೆ ಮಾಡಿತ್ತು. ಪವರ್​ ಪ್ಲೇಯಲ್ಲಿ ಅತ್ಯಧಿಕ ರನ್​ ಗಳಿಸಿದ ಮೊದಲ ತಂಡ ಎಂಬ ದಾಖಲೆ ಕೂಡ ಮುಂಬೈ ಪರವೇ ಇದೆ.

Continue Reading
Advertisement
Chikkaballapura lok sabha constituency congress ticket aspirants Sivasankar Reddy Veerappa Moily and Raksha Ramayya
Lok Sabha Election 202457 seconds ago

Lok Sabha Election 2024: ಕಾಂಗ್ರೆಸ್‌ಗೆ ಚಿಕ್ಕಬಳ್ಳಾಪುರ ಟೆನ್ಶನ್‌; ಟಿಕೆಟ್‌ ಸಿಗದಿದ್ದರೆ ಪಕ್ಷ ತೊರೆಯುವ ಎಚ್ಚರಿಕೆ ಕೊಟ್ಟ ಶಿವಶಂಕರ ರೆಡ್ಡಿ!

Karnataka Weather
ಮಳೆ2 mins ago

Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

Suryakumar Yadav
ಕ್ರೀಡೆ9 mins ago

SuryaKumar Yadav : ಮುಂಬೈ ತಂಡಕ್ಕೆ ಮತ್ತಷ್ಟು ಸಂಕಷ್ಟ; ಸೂರ್ಯಕುಮಾರ್​ ಸೇರ್ಪಡೆ ಅನುಮಾನ

modi
ದೇಶ18 mins ago

ಇತರರನ್ನು ಬೆದರಿಸುವುದು ಕಾಂಗ್ರೆಸ್‌ನ ಸಂಸ್ಕೃತಿ; ಮುಖ್ಯ ನ್ಯಾಯಮೂರ್ತಿಗೆ ಬರೆದ ವಕೀಲರ ಪತ್ರಕ್ಕೆ ಮೋದಿ ಪ್ರತಿಕ್ರಿಯೆ

Lok Sabha Election 202433 mins ago

Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Health Tips
ಬೆಂಗಳೂರು37 mins ago

Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

Anurag Thakur
ಕ್ರೀಡೆ41 mins ago

Anurag Thakur : 2036ರಲ್ಲಿ ಭಾರತದಲ್ಲಿ ಒಲಿಂಪಿಕ್ಸ್​​; ಅನುರಾಗ್ ಠಾಕೂರ್​

Side Effects Of Pillow
ಆರೋಗ್ಯ54 mins ago

Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

Naveen Polishetty
ಸಿನಿಮಾ58 mins ago

Naveen Polishetty: ಅಮೆರಿಕದಲ್ಲಿ ಬೈಕ್‌ ಅಪಘಾತ; ಅನುಷ್ಕಾ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ನಟನಿಗೆ ಗಾಯ

Hardik Pandya
ಕ್ರೀಡೆ1 hour ago

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20245 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20246 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ14 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌