IPL 2023: ನಾಯಕನಾಗಿ ಐಪಿಎಲ್​ನಲ್ಲಿ ನೂತನ ದಾಖಲೆ ಬರೆದ ಡೇವಿಡ್​ ವಾರ್ನರ್​ - Vistara News

ಕ್ರಿಕೆಟ್

IPL 2023: ನಾಯಕನಾಗಿ ಐಪಿಎಲ್​ನಲ್ಲಿ ನೂತನ ದಾಖಲೆ ಬರೆದ ಡೇವಿಡ್​ ವಾರ್ನರ್​

ಇತ್ತೀಚೆಗಷ್ಟೇ ಸನ್‌ರೈಸರ್ಸ್‌ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ವಾರ್ನರ್​ ಐಪಿಎಲ್​ ಟೂರ್ನಿಯಲ್ಲಿ ಅತಿ ಕಡಿಮೆ ಇನಿಂಗ್ಸ್​ನಲ್ಲಿ 6000 ರನ್‌ ಪೂರೈಸಿದ ಮೊದಲ ಬ್ಯಾಟರ್‌ ಎಂಬ ಸಾಧನೆ ಮಾಡಿದ್ದರು. ಇದೀಗ ಮತ್ತೊಂದು ಸಾಧನೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ.

VISTARANEWS.COM


on

IPL 2023: David Warner has written a new record in IPL as a captain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮುಂಬೈ ಇಂಡಿಯನ್ಸ್​(Mumbai Indians) ವಿರುದ್ಧ ಮಂಗಳವಾರ ನಡೆದ ಐಪಿಎಲ್(IPL 2023)​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​(Delhi Capitals) ತಂಡದ ನಾಯಕ ಡೇವಿಡ್​ ವಾರ್ನರ್​(David Warner) ನೂತನ ಮೈಲುಗಲ್ಲೊಂದನ್ನು ತಲುಪಿದ್ದಾರೆ. ಐಪಿಎಲ್‌ ವೃತ್ತಿಬದುಕಿನಲ್ಲಿ ನಾಯಕನಾಗಿ ಮೂರು ಸಾವಿರ ರನ್‌ಗಳನ್ನು ಪೂರೈಸಿದ ಸಾಧನೆ ಮಾಡಿದ್ದಾರೆ.

ಇತ್ತೀಚೆಗಷ್ಟೇ ಸನ್‌ರೈಸರ್ಸ್‌ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ವಾರ್ನರ್​ ಐಪಿಎಲ್​ ಟೂರ್ನಿಯಲ್ಲಿ ಅತಿ ಕಡಿಮೆ ಇನಿಂಗ್ಸ್​ನಲ್ಲಿ 6000 ರನ್‌ ಪೂರೈಸಿದ ಮೊದಲ ಬ್ಯಾಟರ್‌ ಎಂಬ ಸಾಧನೆ ಮಾಡಿದ್ದರು. ಇದೀಗ ಮತ್ತೊಂದು ಸಾಧನೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ 3 ಸಾವಿರಕ್ಕೂ ಹೆಚ್ಚು ರನ್‌ ಗಳಿಸಿದ ನಾಯಕರ ಪಟ್ಟಿಗೆ ಸೇರಿದ್ದಾರೆ. ವಿರಾಟ್‌ ಕೊಹ್ಲಿ, ಎಂ.ಎಸ್‌ ಧೋನಿ ಹಾಗೂ ರೋಹಿತ್‌ ಶರ್ಮಾ ವಾರ್ನರ್‌ ಅವರಿಗಿಂತಲೂ ಮುನ್ನ ಈ ಸಾಧನೆ ಮಾಡಿದ್ದಾರೆ. ವಾರ್ನರ್​ ಮುಂಬೈ ವಿರುದ್ಧ 47 ಎಸೆತಗಳಲ್ಲಿ 6 ಫೋರ್‌ಗಳ ನೆರವಿನೊಂದಿಗೆ 51 ರನ್‌ ಬಾರಿಸಿದ್ದರು.

ನಾಯಕನಾಗಿ ಅತಿ ಹೆಚ್ಚು ಐಪಿಎಲ್‌ ರನ್​ಗಳಿಸಿದ ದಾಖಲೆ ವಿರಾಟ್‌ ಕೊಹ್ಲಿ ಅವರ ಹೆಸರಲ್ಲಿದೆ. ಕೊಹ್ಲಿ ಆರ್‌ಸಿಬಿ ಪರ ನಾಯಕನಾಗಿ 4,881 ರನ್‌ಗಳನ್ನು ಬಾರಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಎಂ.ಎಸ್‌ ಧೋನಿ ಕಾಣಿಸಿಕೊಂಡಿದ್ದಾರೆ. ಅವರು ಸಿಎಸ್‌ಕೆ ಮತ್ತು ರೈಸಿಂಗ್‌ ಪುಣೆ ಸೂಪರ್‌ ಜೈಂಟ್ಸ್​ ತಂಡದ ನಾಯಕನಾಗಿ ಒಟ್ಟಾರೆ 4.582 ರನ್‌ಗಳನ್ನು ಬಾರಿಸಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್​ನಲ್ಲಿಯೂ ಅವರು ಸಿಎಸ್​ಕೆ ತಂಡದ ನಾಯಕ್ವ ಮಾಡುತ್ತಿದ್ದಾರೆ. ಆದರೆ ಕೊಹ್ಲಿ ಅವರು ಆರ್​ಸಿಬಿ ಪರ ಆಡುತ್ತಿದ್ದರೂ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

ಇದನ್ನೂ ಓದಿ IPL 2023: ಯುವಕರ ಸವಾಲು ಮೆಟ್ಟಿ ನಿಂತಿತೇ ಚೆನ್ನೈ

ಗೆಲುವಿನ ಖಾತೆ ತರೆದ ಮುಂಬೈ

ಅರುಣ್​ ಜೇಟ್ಲಿ ಕ್ರಿಕೆಟ್​ ಮೈದಾನದಲ್ಲಿ ಮಂಗಳವಾರ ನಡೆದ ಐಪಿಎಲ್ನ 15ನೇ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ 19.4 ಓವರ್‌ಗಳಲ್ಲಿ 172 ರನ್‌ ಗಳಿಸಿತು ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 4 ವಿಕೆಟಿಗೆ 173 ರನ್‌ ಬಾರಿಸಿತು. ಅಂತಿಮ ಎಸೆತದಲ್ಲಿ ಮುಂಬೈ ಗೆಲುವಿಗೆ ಅಗತ್ಯವಿದ್ದ 2 ರನ್‌ ಹೊಡೆಯಿತು. ಇದು ವಾರ್ನರ್‌ ಪಡೆಗೆ ಎದುರಾದ ಸತತ 4ನೇ ಸೋಲು. ಮುಂಬೈಗೆ ಮೊದಲ ಗೆಲುವು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup: ರೋಹಿತ್​, ಅಗರ್ಕರ್​ ಜಂಟಿ ಸುದ್ದಿಗೋಷ್ಠಿಗೆ ಕ್ಷಣಗಣನೆ

T20 World Cup: ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಹಾರ್ದಿಕ್​ ಪಾಂಡ್ಯಗೆ ಅವಕಾಶ ನೀಡಿದ್ದು ಮಾತ್ರವಲ್ಲದೆ ಉಪನಾಯಕನ ಸ್ಥಾನ ನೀಡಿದ್ದರ ಬಗ್ಗೆ ಈಗಾಗಲೇ ಅನೇಕ ಮಾಜಿ ಆಟಗಾರರಿಂದ ಟೀಕೆಗಳು ವ್ಯಕ್ತವಾಗಿದೆ. ಗುಜರಾತಿ ಲಾಬಿ ಎಂದು ಕೆಲವರು ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

T20 World Cup
Koo

ಮುಂಬೈ: ಅಮೆರಿಕ ಮತ್ತು ವೆಸ್ಟ್​ ಇಂಡಿಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ(T20 World Cup) ಭಾರತ ತಂಡ (Team India) ಆಯ್ಕೆ ಮಾಡಿದ ಬೆನ್ನಲ್ಲೇ ಇಂದು(ಗುರುವಾರ) ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್(Ajit Agarkar) ಮತ್ತು ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಮುಂಬೈಯ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಮಂಗಳವಾರ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಮತ್ತು ಅಜಿತ್​ ಅಗರ್ಕರ್​ ಅಹಮದಾಬಾದ್​ನಲ್ಲಿ ಔಪಚಾರಿಕ ಸಭೆ ನಡೆಸಿ ಟ್ವೀಟರ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ತಂಡವನ್ನು ಪ್ರಟಿಸಿದ್ದರು. ಇದೀಗ ನಾಯಕ ರೋಹಿತ್​ ಮತ್ತು ಅಗರ್ಕರ್​ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ಆಟಗಾರರ ಆಯ್ಕೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕೆಲ ಆಟಗಾರರಿಗೆ ಅವಕಾಶ ನೀಡದ ಬಗ್ಗೆಯೂ ಈ ಸುದ್ದಿಗೋಷ್ಠಿಯಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ. ಅದರಲ್ಲಿಯೂ ಅನುಭವಿ ಆಟಗಾರ ಕೆಎಲ್ ರಾಹುಲ್​ಗೆ ಮತ್ತು ರಿಂಕು ಸಿಂಗ್​ಗೆ ಅವಕಾಶ ನೀಡದ್ದರ ಕುರಿತು ಹಲವು ಪ್ರಶ್ನೆಗಳು ಎದುರಾಗಬಹುದು.

ಇದನ್ನೂ ಓದಿ T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಹಾರ್ದಿಕ್​ ಪಾಂಡ್ಯಗೆ ಅವಕಾಶ ನೀಡಿದ್ದು ಮಾತ್ರವಲ್ಲದೆ ಉಪನಾಯಕನ ಸ್ಥಾನ ನೀಡಿದ್ದರ ಬಗ್ಗೆ ಈಗಾಗಲೇ ಅನೇಕ ಮಾಜಿ ಆಟಗಾರರಿಂದ ಟೀಕೆಗಳು ವ್ಯಕ್ತವಾಗಿದೆ. ಗುಜರಾತಿ ಲಾಬಿ ಎಂದು ಕೆಲವರು ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಾಂಡ್ಯ ಆಯ್ಕೆಯ ಬಗ್ಗೆಯೂ ರೋಹಿತ್​ಗೆ ಪ್ರಶ್ನೆಗಳ ಸುರಿಮಳೆ ಬರುವ ಸಾಧ್ಯತೆಯೂ ಕಂಡುಬಂದಿದೆ. ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ.

ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ. ದ್ವಿತೀಯ ಪಂದ್ಯವನ್ನು ಜೂನ್‌ 9 ರಂದು ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕ್​ ವಿರುದ್ಧ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

Continue Reading

ಪ್ರಮುಖ ಸುದ್ದಿ

Deepak Chahar : ಸಹೋದರನನ್ನು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ದೀಪಕ್ ಚಾಹರ್​ ಸಹೋದರಿ!

Deepak Chahar :ಎರಡನೇ ಎಸೆತದ ನಂತರ, ಅವರು ತಮ್ಮ ತೊಡೆ ಸ್ನಾಯುವಿನ ಸೆಳತಕ್ಕೆ ಒಳಗಾದರು. ನಾಯಕ ಋತುರಾಜ್ ಗಾಯಕ್ವಾಡ್ ಅವರೊಂದಿಗೆ ದೀರ್ಘ ಮಾತುಕತೆಯ ನಂತರ ಚಹರ್ ಮೈದಾನದಿಂದ ಹೊರನಡೆಯಲು ನಿರ್ಧರಿಸಿದರು. ಸ್ಟ್ರೈಕ್ ಬೌಲರ್ ಅನುಪಸ್ಥಿತಿಯು ಸಿಎಸ್​ಕೆಯು ಪಂದ್ಯವನ್ನು ಕಳೆದುಕೊಂಡಿತು. ದೀಪಕ್ ಚಹರ್ ನಿರಂತರವಾಗಿ ಗಾಯಗಳಿಗೆ ಒಳಗಾಗುತ್ತಿರುವುದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಅನೇಕರು ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟ್ರೋಲ್ ಮಾಡಿದರು.

VISTARANEWS.COM


on

Deepak Chahar
Koo

ಚೆನ್ನೈ: ಸಿಎಸ್​ಕೆ ತಂಡದ ಪ್ರತಿಭಾನ್ವಿತ ವೇಗದ ಬೌಲರ್ ದೀಪಕ್ ಚಹರ್ (Deepak Chahar) ಇತ್ತೀಚೆಗೆ ಪಂಜಾಬ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಆಡಿರಲಿಲ್ಲ. ಅವರು ಗಾಯಗೊಂಡ ಕಾರಣ ಆಡುವ 11ರ ಬಳಗದಲ್ಲಿ ಅವಕಾಶ ಗಿಟ್ಟಿಸಿಲ್ಲ. ಹೀಗಾಗಿ ಅವರು ಟ್ರೋಲ್​ಗೆ ಒಳಗಾಗಿದ್ದಾರೆ. ಪದೇ ಪದೇ ಗಾಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಚುಚ್ಚು ಮಾತುಗಳನ್ನು ಕ್ರಿಕೆಟ್ ಅಭಿಮಾನಿಗಳು ಆಡುತ್ತಿದ್ದಾರೆ. ಇದರಿಂದ ಬೇಸತ್ತ ಅವರ ಸಹೋದರಿ ಮಾಲತಿ ಚಾಹರ್​ ಟ್ರೋಲ್​ ಮಾಡಿದವರಿಗೆ ಸಿಕ್ಕಾಪಟ್ಟೆ ಬೈದಿದ್ದಾರೆ. ನಿಮಗೆ ಸ್ವಲ್ಪವೂ ಸಂವೇದನೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಐಪಿಎಲ್ 2024 ರ ಮುಖಾಮುಖಿಯಲ್ಲಿ ಸಿಎಸ್​ಕೆ ವಿರುದ್ಧ ಪಂಜಾಬ್ ತಂಡ ಗೆದ್ದಿದೆ. ಅದಕ್ಕೆ ಕಾರಣ ಆಟಗಾರರ ಅಲಭ್ಯತೆ. ಹೀಗಾಗಿ ಚಾಹರ್ ಟ್ರೋಲ್​ಗೆ ಒಳಗಾಗಿದ್ದಾರೆ ಸ್ಟ್ರೈಕ್ ವೇಗಿ ದೀಪಕ್ ಚಾಹರ್ ಕೇವಲ 2 ಎಸೆತಗಳನ್ನು ಎಸೆದ ನಂತರ ಮೈದಾನದಿಂದ ನಿರ್ಗಮಿಸಿದರು.

ಎರಡನೇ ಎಸೆತದ ನಂತರ, ಅವರು ತಮ್ಮ ತೊಡೆ ಸ್ನಾಯುವಿನ ಸೆಳತಕ್ಕೆ ಒಳಗಾದರು. ನಾಯಕ ಋತುರಾಜ್ ಗಾಯಕ್ವಾಡ್ ಅವರೊಂದಿಗೆ ದೀರ್ಘ ಮಾತುಕತೆಯ ನಂತರ ಚಹರ್ ಮೈದಾನದಿಂದ ಹೊರನಡೆಯಲು ನಿರ್ಧರಿಸಿದರು. ಸ್ಟ್ರೈಕ್ ಬೌಲರ್ ಅನುಪಸ್ಥಿತಿಯು ಸಿಎಸ್​ಕೆಯು ಪಂದ್ಯವನ್ನು ಕಳೆದುಕೊಂಡಿತು. ದೀಪಕ್ ಚಹರ್ ನಿರಂತರವಾಗಿ ಗಾಯಗಳಿಗೆ ಒಳಗಾಗುತ್ತಿರುವುದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಅನೇಕರು ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟ್ರೋಲ್ ಮಾಡಿದರು. ಇದು ಅವರ ಸಹೋದರಿ ಮಾಲತಿ ಚಹರ್ ಅವರ ಕೋಪಕ್ಕೆ ಕಾರಣವಾಗಿದೆ.

ವೃತ್ತಿಯಲ್ಲಿ ನಟಿಯಾಗಿರುವ ಮಾಲತಿ ಚಹರ್ ತಮ್ಮ ಎಕ್ಸ್ ಖಾತೆಯಲ್ಲಿ (ಟ್ವಿಟರ್) ತಮ್ಮ ಸಹೋದರನ ಬಗ್ಗೆ ಸಂವೇದನಾರಹಿತವಾಗಿ ವರ್ತಿಸಿದ್ದಕ್ಕಾಗಿ ಅಭಿಮಾನಿಗಳನ್ನು ದೂಷಿಸಿದ್ದಾರೆ. ಯಾವುದೇ ಕ್ರೀಡಾಪಟು ಗಾಯಗೊಳ್ಳುವುದನ್ನು ಎಂದಿಗೂ ಸಂಭ್ರಮಿಸುವುದಿಲ್ಲ. ದೀಪಕ್ ಚಹರ್ ಕೂಡ ಇದಕ್ಕೆ ಹೊರತಾಗಿಲ್ಲ ಎಂದು ಅವರು ಹೇಳಿದರು. ಅವರು ಚೇತರಿಸಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾನೆ ಎಂದು ಹೇಳಿದ ಮಾಲತಿ, ತನ್ನ ಸಹೋದರನ ಪುಟಿದೇಳುವ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: T20 World Cup : ಈ ದಿನದಂದು ವಿಶ್ವ ಕಪ್​ಗಾಗಿ ಯುಎಸ್​ಎಗೆ ಹೊರಡಲಿದೆ ಟೀಮ್ ಇಂಡಿಯಾ

ಸಿಎಸ್​ಕೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರು ಚಹರ್ ಅವರ ಗಾಯದ ಬಗ್ಗೆ ಉತ್ತಮ ಭಾವನೆ ಹೊಂದಿಲ್ಲ ಎಂದು ಬಹಿರಂಗಪಡಿಸಿದ್ದಾರೆ. ಅದು ಮೇಲ್ನೋಟಕ್ಕೆ ಪ್ರೋತ್ಸಾಹದಾಯಕವಾಗಿಲ್ಲ. ಆದ್ದರಿಂದ, ಫಿಸಿಯೋಗಳು ಮತ್ತು ವೈದ್ಯರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರನ್​ ಗಾಗಿ ​ ಓಡದೆ ಸ್ವಾರ್ಥ ತೋರಿದ ಧೋನಿ; ನೆಟ್ಟಿಗರಿಂದ ಭಾರೀ ಟೀಕೆ

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಮಾಜಿ ನಾಯಕ​ ಮಹೇಂದ್ರ ಸಿಂಗ್ ಧೋನಿ(MS Dhoni) ಬುಧವಾರ ನಡೆದ ಪಂಜಾಬ್​ ಲಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ತೋರಿದ ವರ್ತನೆಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದು ಮಾಡುತ್ತಿದೆ. ಹಲವು ನೆಟ್ಟಿಗರು ಧೋನಿ ಇಷ್ಟೊಂದು ಸ್ವಾರ್ಥಿಯಾಗಬಾರದೆಂದು ಟೀಕಿಸಿದ್ದಾರೆ.

ಯಾವುದೇ ವಿವಾದಗಳಿಗೆ ಒಳಗಾಗದೆ ಶಾಂತ ಸ್ವಭಾವದಿಂದ ಆಡುವ ಧೋನಿ ಹಲವು ಬಾರಿ ಸಹ ಆಟಗಾರರ ಶತಕ ಮತ್ತು ಅರ್ಧಶತಕಕ್ಕೋಸ್ಕರ ರನ್​ ಗಳಿಸದೆ ಅವಕಾಶ ಒದಗಿಸಿಕೊಟ್ಟಿದ್ದಾರೆ. ಧೋನಿಯ ಈ ನಡೆಯ ಬಗ್ಗೆ ಅನೇಕರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು. ಆದರೆ, ಪಂಬಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನಡೆಸುವ ಸಲುವಾಗಿ ಸ್ವಾರ್ಥಿಯಾಗಿ ಕಂಡು ಬಂದರು.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ ಅಂತಿಮ ಓವರ್​ನಲ್ಲಿ ಅರ್ಷದೀಪ್​ ಎಸೆದ ಈ ಓವರ್​ನ ಮೂರನೇ ಎಸೆತವನ್ನು ಧೋನಿ ಬಲವಾಗಿ ಹೊಡೆದರು. ಚೆಂಡು ಬೌಂಡರಿ ಲೈನ್​ ಬಳಿ ಹೋದರೂ ಕೂಡ ಧೋನಿ ರನ್​ ಓಡದೆ ಸ್ವಾರ್ಥ ತೋರಿದರು. ನಾನ್​ಸ್ಟ್ರೈಕ್​ನಲ್ಲಿದ್ದ ಡೇರಿಯಲ್​ ಮಿಚೆಲ್​ ಅವರು ರನ್​ಗಾಗಿ ಓಡಿ ಕ್ರೀಸ್​ ಬಳಿ ಬಂದರು. ಈ ವೇಳೆ ಧೋನಿ ಅವೇಶದಲ್ಲಿಯೇ ಮಿಚೆಲ್​ಗೆ ಹಿಂದೆ ಹೋಗುವಂತೆ ತಿಳಿಸಿದರು. ಸ್ಟ್ರೈಕ್​ ತನಕ ಓಡಿದ್ದ ಮಿಚೆಲ್​ ಮತ್ತೆ ನಾನ್​ಸ್ಟ್ರೈಕರ್​ ಬಳಿಗೆ ಓಡಿ ಬಂದರು. ಮುಂದಿನ ಎಸೆತವನ್ನು ಧೋನಿ ಬೀಟ್​ ಮಾಡಿದರು. 5ನೇ ಎಸೆತದಲ್ಲಿ ಸಿಕ್ಸರ್​ ಬಾರಿಸಿ ಅಂತಿಮ ಎಸೆತದಲ್ಲಿ ರನೌಟ್​ ಆದರು.

Continue Reading

ಕ್ರೀಡೆ

Rinku Singh: ಟಿ20 ವಿಶ್ವಕಪ್​ಗೆ ರಿಂಕು ಆಯ್ಕೆಯಾಗಬಹುದೆಂದು ಪಟಾಕಿ, ಸಿಹಿ ತಂದಿಟ್ಟಿದ್ದ ತಂದೆಗೆ ನಿರಾಸೆ

Rinku Singh: ರಿಂಕು ಸಿಂಗ್​ ಭಾರತ ಪರ 15 ಟಿ20 ಪಂದ್ಯಗಳನ್ನು ಆಡಿ 11 ಇನಿಂಗ್ಸ್​ನಿಂದ 356 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಅರ್ಧಶತಕ ಕೂಡ ಒಳಗೊಂಡಿದೆ. 31 ಬೌಂಡರಿ ಮತ್ತು 20 ಸಿಕ್ಸರ್​ ಬಾರಿಸಿದ್ದಾರೆ.

VISTARANEWS.COM


on

Rinku Singh
Koo

ಉತ್ತರ ಪ್ರದೇಶ: ಇದೇ ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ(T20 world cup 2024) ಮಂಗಳವಾರ ಭಾರತ ತಂಡ ಪ್ರಕಟಗೊಂಡಿತ್ತು. ಆದರೆ ಈ ತಂಡದಲ್ಲಿ ರಿಂಕು ಸಿಂಗ್​ಗೆ(Rinku Singh) ಅವಕಾಶ ಸಿಗಲಿಲ್ಲ. ಎಲ್ಲರು ಕೂಡ ರಿಂಕುಗೆ ಸ್ಥಾನ ಸಿಗಬಹುದೆಂದು ನಿರೀಕ್ಷೆ ಮಾಡಿದ್ದರು. ಎಲ್ಲರಿಗಿಂತ ಹೆಚ್ಚಿನ ನಿರೀಕ್ಷೆ ಇರಿಸಿದ್ದು ರಿಂಕು ಅವರ ತಂದೆ. ತನ್ನ ಮಗನಿಗೆ ವಿಶ್ವಕಪ್​ ಆಡುವ ಅವಕಾಶ ಸಿಗಬಹುದೆಂದು ಖಾನ್ಚಂದ್ರ ಸಿಂಗ್ ಮುಂಚಿತವಾಗಿಯೇ ಪಟಾಕಿ ಮತ್ತು ಸಿಹಿ ತಿನಿಸುಗಳನ್ನು ತಂದಿಟ್ಟಿದ್ದರು. ಆದರೆ ಮಗನಿಗೆ ಅವಕಾಶ ಸಿಗದೇ ಇದ್ದದ್ದು ಬೇಸರ ತಂದಿದೆ ಎಂದು ಖಾನ್ಚಂದ್ರ ಸಿಂಗ್ ಹೇಳಿದ್ದಾರೆ.

ತೀರಾ ಬಡತನದಲ್ಲಿ ಬೆಳೆದು ಬಂದ ರಿಂಕು ಸಿಂಗ್ ಕಳೆದ ವರ್ಷದ ಐಪಿಎಲ್ ಮೂಲಕ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿ ಆಡುವ ರಿಂಕು ಸಿಂಗ್ ತಮ್ಮ ಬಿರುಸಿನ ಬ್ಯಾಟಿಂಗ್​ ಮೂಲಕ​ ಅಸಾಮಾನ್ಯ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಹಲವು ಗೆಲುವು ತಂದುಕೊಟ್ಟಿದ್ದರು. ಭಾರತ ಪರೂ ಆಡಿದ ಎಲ್ಲ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಕೂಡ ಈ ಹಿಂದೆ ರಿಂಕು ಅತ್ಯತ್ತುಮ ಪ್ರತಿಭೆ ಟಿ20ಯಲ್ಲಿ ಸ್ಥಾನ ಸಿಗಬಹುದು ಎಂದು ಹೇಳಿದ್ದರು. ಇದೇ ಕಾರಣದಿಂದ ಅವರ ತಂದೆ ಖಾನ್ಚಂದ್ರ ಸಿಂಗ್​ಗೆ ಮಗ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ಬಲವಾಗಿ ನಂಬಿದ್ದರು. ಹೀಗಾಗಿ ಅವರು ಮನೆಗೆ ಮೊದಲೇ ಸಿಹಿ ತಿನಿಸು, ಪಟಾಕಿ ತಂದಿಟ್ಟಿದ್ದರು. ಆದರೆ ತಂಡ ಪ್ರಕಟಗೊಂಡಾಗ ಮಾತ್ರ ಇವರ ಹೆಸರು ಕಾಣಿಸಲಿಲ್ಲ.​ ಇದರಿಂದ ರಿಂಕು ಮನೆಯವರೆಲ್ಲ ಬೇಸರಗೊಂಡರು.

ಇದನ್ನೂ ಓದಿ IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

“ಮಗ ಆಯ್ಕೆಯಾದ ಸುದ್ದಿ ಹೊರಬೀಳುತ್ತಲೇ ಪಟಾಕಿ ಹಚ್ಚಿ, ಸಿಹಿ ತಿನಿಸು ಹಂಚಿ ಸಂಭ್ರಮಿಸಲು ತಯಾರಿ ಮಾಡಿಕೊಂಡಿದ್ದೆ. ಆದರೆ 15 ಸದಸ್ಯರ ಪಟ್ಟಿಯಲ್ಲಿ ಮಗನ ಹೆಸರೇ ಇರಲಿಲ್ಲ. ಇದರಿಂದ ತೀರಾ ಬೇಸರವಾಗಿದೆ” ಎಂದು ಹೇಳುವ ಮೂಲಕ ಖಾನ್ಚಂದ್ರ ಸಿಂಗ್ ಭಾವುಕರಾದರು. ರಿಂಕು ಸಿಂಗ್​ ಭಾರತ ಪರ 15 ಟಿ20 ಪಂದ್ಯಗಳನ್ನು ಆಡಿ 11 ಇನಿಂಗ್ಸ್​ನಿಂದ 356 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಅರ್ಧಶತಕ ಕೂಡ ಒಳಗೊಂಡಿದೆ. 31 ಬೌಂಡರಿ ಮತ್ತು 20 ಸಿಕ್ಸರ್​ ಬಾರಿಸಿದ್ದಾರೆ. ರಿಂಕು ಸದ್ಯ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಒಂದೊಮ್ಮೆ 15 ಮಂದಿ ಆಟಗಾರರ ಪೈಕಿ ಯಾರಾದರು ಗಾಯಗೊಂಡರೆ ರಿಂಕುಗೆ ಪ್ರಧಾನ ತಂಡಕ್ಕೆ ಅವಕಾಶ ಸಿಗಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

Continue Reading

ಕ್ರೀಡೆ

IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

IPL 2024: ಪರ್ಪಲ್​ ಕ್ಯಾಪ್​ಗಾಗಿ ಮೂರು ಬೌಲರ್​ಗಳ ಮಧ್ಯೆ ಭಾರೀ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಜಸ್​ಪ್ರೀತ್​ ಬುಮ್ರಾ, ಮುಸ್ತಫಿಜುರ್​ ರೆಹಮಾನ್​, ಹರ್ಷಲ್​ ಪಟೇಲ್​ ತಲಾ 14 ವಿಕೆಟ್​ ಕಿತ್ತು ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​(IPL 2024) ಟೂರ್ನಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಬೆರಳೆಣಿಕೆಯ ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಎಲ್ಲ ತಂಡಗಳು ಪ್ಲೇ ಆಫ್​ ಪ್ರವೇಶಿಸಲು ಹರಸಾಹಸ ಪಡುತ್ತಿವೆ. ಜತೆಗೆ ಕೆಲವು ಆಟಗಾರರ ಮಧ್ಯೆ ಆರೆಂಜ್​ ಕ್ಯಾಚ್(Orange Cap)​ ಮತ್ತು ಪರ್ಪಲ್​ ಕ್ಯಾಪ್​ಗಾಗಿ(purple cap)​ ತೀವ್ರ ಪೈಪೋಟಿ ಏರ್ಪಟ್ಟಿದೆ.

ಈ ಆವೃತ್ತಿಯಲ್ಲಿ 48 ಪಂದ್ಯದ ಮುಕ್ತಾಯದ ವರೆಗೆ ರನ್​ಗಳಿಕೆಯಲ್ಲಿ ಅಗ್ರಸ್ಥಾನ ಪಡೆದು ಆರೆಂಜ್​ ಕ್ಯಾಪ್​ ಧರಿಸಿದ್ದ ವಿರಾಟ್​ ಕೊಹ್ಲಿ(500 ರನ್​​)ಯನ್ನು ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಋತುರಾಜ್​ ಗಾಯಕ್ವಾಡ್(509 ರನ್​)​ ಹಿಂದಿಕ್ಕಿದ್ದಾರೆ. ನಿನ್ನೆ(ಬುಧವಾರ) ನಡೆದ ಪಂಜಾಬ್​ ಕಿಂಗ್ಸ್​ ಎದುರಿನ ಪಂದ್ಯದಲ್ಲಿ 62 ರನ್​ ಬಾರಿಸುವ ಮೂಲಕ ಗಾಯಕ್ವಾಡ್(Ruturaj Gaikwad)​​ ಈ ಸಾಧನೆ ಮಾಡಿದರು. ಸದ್ಯ ಉಭಯ ಆಟಗಾರರ ಮಧ್ಯೆ ಆರೆಂಜ್​ ಕ್ಯಾಪ್​ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಟೂರ್ನಿಯ ಅಂತ್ಯದಲ್ಲಿ ಯಾರು ಅತ್ಯಧಿಕ ರನ್​ ಗಳಿಸಿರುತ್ತಾರೋ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿ ಟಾಟಾ ಕಂಪೆನಿಯ ಎಲೆಕ್ಟ್ರಿಕ್​ ಕಾರ್​ ಸಿಗಲಿದೆ.

ಆರೆಂಜ್ ಕ್ಯಾಪ್​​ ರೇಸ್​ನಲ್ಲಿರುವ ಟಾಪ್​ 5 ಬ್ಯಾಟರ್​ಗಳು


ಋತುರಾಜ್​ ಗಾಯಕ್ವಾಡ್​-509 ರನ್​(10 ಇನಿಂಗ್ಸ್​)

ವಿರಾಟ್​ ಕೊಹ್ಕಿ-500 ರನ್​(10 ಇನಿಂಗ್ಸ್​)

ಸಾಯಿ ಸುದರ್ಶನ್​- 418 ರನ್​( 10 ಇನಿಂಗ್ಸ್​)

ಕೆ.ಎಲ್​ ರಾಹುಲ್​-406 ರನ್​( 10 ಇನಿಂಗ್ಸ್​)

ರಿಷಭ್​ ಪಂತ್​-398 ರನ್​(11 ಇನಿಂಗ್ಸ್​)

ಇದನ್ನೂ ಓದಿ Virat kohli : ಕಾಮೆಂಟ್ರಿ ಬಾಕ್ಸ್​​ನಲ್ಲಿ ಕುಳಿತು ವಿಮರ್ಶೆ ಮಾಡುವುದು ಸುಲಭ; ಕೊಹ್ಲಿ ತಿರುಗೇಟು ಕೊಟ್ಟಿದ್ದು ಯಾರಿಗೆ?

ಪರ್ಪಲ್​ ಕ್ಯಾಕ್​ಗೆ ಮೂರು ಮಂದಿಯ ಮಧ್ಯೆ ಫೈಟ್​


ಅತ್ಯಧಿಕ ವಿಕೆಟ್​ ಪಡೆದ ಬೌಲರ್​ಗೆ ನೀಡುವ ಪರ್ಪಲ್​ ಕ್ಯಾಪ್​ಗಾಗಿ ಮೂರು ಬೌಲರ್​ಗಳ ಮಧ್ಯೆ ಭಾರೀ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಜಸ್​ಪ್ರೀತ್​ ಬುಮ್ರಾ, ಮುಸ್ತಫಿಜುರ್​ ರೆಹಮಾನ್​, ಹರ್ಷಲ್​ ಪಟೇಲ್​ ತಲಾ 14 ವಿಕೆಟ್​ ಕಿತ್ತು ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತಮ ಬೌಲಿಂಗ್​ ಇಕಾನಮಿ ಹೊಂದಿರುವ ಕಾರಣ ಸದ್ಯ ಈ ಕ್ಯಾಪ್​ ಬುಮ್ರಾ ಬಳಿ ಇದೆ. ಇನ್ನುಳಿದಂತೆ ಆರು ಮಂದಿ ಬೌಲರ್​ಗಳು ತಲಾ 13 ವಿಕೆಟ್​ ಕಿತ್ತಿದ್ದಾರೆ. ಇವರಿಗೂ ಕೂಡ ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ವಿಕೆಟ್​ ಕಿತ್ತರೆ ಪರ್ಪಲ್​ ಕ್ಯಾಪ್​ ಪಡೆಯುವ ಅವಕಾಶವಿದೆ.

ಪರ್ಪಲ್​ ಕ್ಯಾಪ್​​ ರೇಸ್​ನಲ್ಲಿರುವ ಟಾಪ್​ 5 ಬೌಲರ್​ಗಳು


ಜಸ್​ಪ್ರೀತ್​ ಬುಮ್ರಾ-14 ವಿಕೆಟ್​(10 ಪಂದ್ಯ)

ಮುಸ್ತಫಿಜುರ್​ ರೆಹಮಾನ್​-14 ವಿಕೆಟ್​(9 ಪಂದ್ಯ​)

ಹರ್ಷಲ್​ ಪಟೇಲ್​-14 ವಿಕೆಟ್​(10 ಪಂದ್ಯ​)

ಮತೀಶ ಪತಿರಾಣ-13 ವಿಕೆಟ್​(6 ಪಂದ್ಯ)

ಟಿ ನಟರಾಜನ್​-13 ವಿಕೆಟ್​(7 ಪಂದ್ಯ)

Continue Reading
Advertisement
Prajwal Revanna Case Minister Zameer Ahmed close aide makes Prajwal obscene video pen drive viral
ರಾಜಕೀಯ4 mins ago

Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

T20 World Cup
ಕ್ರೀಡೆ9 mins ago

T20 World Cup: ರೋಹಿತ್​, ಅಗರ್ಕರ್​ ಜಂಟಿ ಸುದ್ದಿಗೋಷ್ಠಿಗೆ ಕ್ಷಣಗಣನೆ

Deepak Chahar
ಪ್ರಮುಖ ಸುದ್ದಿ10 mins ago

Deepak Chahar : ಸಹೋದರನನ್ನು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ದೀಪಕ್ ಚಾಹರ್​ ಸಹೋದರಿ!

Viral video
ವೈರಲ್ ನ್ಯೂಸ್13 mins ago

Viral Video:ಶಾಕಿಂಗ್‌ ವಿಡಿಯೋ! ಮಗನನ್ನು ಟ್ರೆಡ್‌ಮಿಲ್‌ನಲ್ಲಿ ಓಡಿಸಿ ಪ್ರಾಣವನ್ನೇ ತೆಗೆದ ಪಾಪಿ ತಂದೆ

assault case in Bengaluru
ಬೆಂಗಳೂರು21 mins ago

Assault Case : ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

Vote Jihad
ದೇಶ34 mins ago

Vote Jihad: ವೋಟ್‌ ಜಿಹಾದ್‌ಗೆ ಕರೆ ನೀಡಿದ್ದು ಇಂಡಿಯಾ ಒಕ್ಕೂಟದ ಮನಸ್ಥಿತಿಗೆ ಕನ್ನಡಿ ಎಂದ ಮೋದಿ

Prajwal Revanna Case PM Modi defends MP accused of rape says Rahul Gandhi
Lok Sabha Election 202439 mins ago

Prajwal Revanna Case: ಮಹಾನ್‌ ರೇಪಿಸ್ಟ್‌ಗೆ ಮೋದಿಯಿಂದ ರಕ್ಷಣೆ; ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಗುಡುಗು

Rinku Singh
ಕ್ರೀಡೆ47 mins ago

Rinku Singh: ಟಿ20 ವಿಶ್ವಕಪ್​ಗೆ ರಿಂಕು ಆಯ್ಕೆಯಾಗಬಹುದೆಂದು ಪಟಾಕಿ, ಸಿಹಿ ತಂದಿಟ್ಟಿದ್ದ ತಂದೆಗೆ ನಿರಾಸೆ

Crime News
ಕ್ರೈಂ48 mins ago

Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Samsung
ತಂತ್ರಜ್ಞಾನ1 hour ago

ಸ್ಯಾಮ್‌ಸಂಗ್‌ನ ‘ಫ್ಯಾಬ್ ಗ್ರಾಬ್ ಫೆಸ್ಟ್’: ಸ್ಮಾರ್ಟ್‌ಫೋನ್‌, ಟಿವಿ, ಲ್ಯಾಪ್‌ಟಾಪ್‌, ಡಿಜಿಟಲ್ ಉಪಕರಣಗಳ ಮೇಲೆ ಅದ್ಭುತ ಆಫರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌