Site icon Vistara News

IPL 2023: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ಟೈಟಾನ್ಸ್​

IPL 2023: Defending champions Gujarat Titans eyeing a hat-trick win

IPL 2023: Defending champions Gujarat Titans eyeing a hat-trick win

ಅಹಮದಾಬಾದ್​: ಈಗಾಗಲೇ ಆಡಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಜೇಯ ಓಟ ಕಾಯ್ದುಕೊಂಡಿರುವ ಹಾಲಿ ಚಾಂಪಿಯನ್ ಗುಜರಾತ್​ ಟೈಟಾನ್ಸ್​(Gujarat Titans) ಇದೀಗ ಮತ್ತೊಂದು ಪಂದ್ಯವನ್ನಾಡಲು ಸಜ್ಜಾಗಿದೆ. ಇಂದು(ಭಾನುವಾರ ಏಪ್ರಿಲ್​ 9) ನಡೆಯುವ ಐಪಿಎಲ್​ನ(IPL 2023)​ ಡಬಲ್​ ಹೆಡರ್​ನ ಮೊದಲ ಪಂದ್ಯದಲ್ಲಿ ಕೆಕೆಆರ್(Kolkata Knight Riders)​ ತಂಡದ ಸವಾಲು ಎದುರಿಸಲಿದೆ. ಈ ಪಂದ್ಯದಲ್ಲಿಯೂ ಮೇಲಗೈ ಸಾಧಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸುವುದು ಪಾಂಡ್ಯ ಪಡೆಯ ಯೋಜನೆಯಾಗಿದೆ. ಅತ್ತ ಆರ್​ಸಿಬಿ ವಿರುದ್ಧ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕೆಕೆಆರ್​ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ಸಾಧ್ಯತೆ ಇದೆ.

ಮಿಂಚಬೇಕಿದೆ ನಾಯಕ ಹಾರ್ದಿಕ್​ ಪಾಂಡ್ಯ

ತಂಡದ ಆಟಗಾರರೆಲ್ಲ ಉತ್ತಮ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದರೂ ನಾಯಕ ಹಾರ್ದಿಕ್​ ಪಾಂಡ್ಯ ಮಾತ್ರ ಇನ್ನೂ ಬ್ಯಾಟಿಂಗ್​ ಲಯ ಕಂಡುಕೊಂಡಿಲ್ಲ. ಆಡಿದ ಎರಡೂ ಪಂದ್ಯಗಳಲ್ಲಿ ಇವರ ಗಳಿಕೆ ಬರೀ 8 ರನ್‌. ಆದ್ದರಿಂದ ಈ ಪಂದ್ಯದಲ್ಲಿ ಅವರು ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ನಡೆಸಿ ತಂಡದ ಆತ್ಮವಿಶ್ವಾಸವನ್ನು ಇನ್ನೂ ಹೆಚ್ಚಿಸಬೇಕಿದೆ. ಶುಭಮನ್​ ಗಿಲ್​ ಮತ್ತು ವೃದ್ಧಿಮಾನ್​ ಸಾಹಾ ಆರಂಭಿಕ ಮುನ್ನಡೆ ತಂದುಕೊಡುವಲ್ಲಿ ಸಮರ್ಥರಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಕೂಡ​ ಉತ್ತಮ ಲಯದಲ್ಲಿ ಕಂಡು ಬಂದಿದ್ದಾರೆ. ಡೇವಿಡ್​ ಮಿಲ್ಲರ್​ ಫಿನಿಶರ್​ ಸ್ಥಾನವನ್ನು ಅಚ್ಚು ಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಸದ್ಯ ಗುಜರಾತ್​ ತಂಡ ಸಮತೋಲನವಾಗಿ ಗೋಚರಿಸಿದೆ. ಬೌಲಿಂಗ್​ನಲ್ಲಿ ಅನುಭವಿ ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್ ರಶೀದ್ ಖಾನ್ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಇದನ್ನೂ ಓದಿ IPL 2023: ಶನಿವಾರದ ಡಬಲ್​ ಹೆಡರ್​ ಪಂದ್ಯದ ಬಳಿಕ ಅಂಕಪಟ್ಟಿ ಹೇಗಿದೆ?

ಆತ್ಮವಿಶ್ವಾಸದಲ್ಲಿ ಕೆಕೆಆರ್​

ಪಂಜಾಬ್​ ಕಿಂಗ್ಸ್​ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಮಳೆಯ ಕಾಟದಿಂದ ಸೋಲು ಕಂಡಿದ್ದ ಕೆಕೆಆರ್​, ದ್ವಿತೀಯ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಭರ್ಜರಿ ಜಯ ಸಾಧಿಸಿ ಗೆಲುವಿನ ಟ್ರ್ಯಾಕ್​ಗೆ ಮರಳಿದೆ. ಇದೇ ಆತ್ಮವಿಶ್ವಾಸದಲ್ಲಿರು ನಿತೀಶ್​ ರಾಣಾ ಪಡೆ ಹಾರ್ದಿಕ್​ ಪಡೆಗೆ ಮೊದಲ ಸೋಲಿನೇಟು ನೀಡುವು ವಿಶ್ವಾಸದಲ್ಲಿದೆ. ಕಳೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ತಂಡ ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ಸಿಡಲಬ್ಬರದ ಬ್ಯಾಟಿಂಗ್​ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದ ಶಾರ್ದೂಲ್​ ಠಾಕೂರ್​ ಬ್ಯಾಟಿಂಗ್​ ಮೇಲೆ ಈ ಪಂದ್ಯದಲ್ಲಿಯೂ ತಂಡ ಹೆಚ್ಚಿನ ಭರವಸೆ ಇರಿಸಿದೆ. ರಿಂಕು ಸಿಂಗ್‌ ಕೂಡ ಉತ್ತಮ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಆದರೆ ಅಗ್ರ ಕ್ರಮಾಂಕದ ಬ್ಯಾಟರ್​ಗಳಾದ ವೆಂಕಟೇಶ್​ ಅಯ್ಯರ್​, ನಾಯಕ ನಿತೀಶ್​ ರಾಣಾ ಈ ವರೆಗೆ ದೊಡ್ಡ ಇನಿಂಗ್ಸ್​ ಆಡಿಲ್ಲ. ಕೆಕೆಆರ್​ ಬೌಲಿಂಗ್​ ಅತ್ಯಂತ ಘಾತಕವಾಗಿದೆ. ವರುಣ್‌ ಚಕ್ರವರ್ತಿ, ಸುನೀಲ್‌ ನಾರಾಯಣ್‌, ಸುಯಶ್‌ ಶರ್ಮ ಭರ್ಜರಿ ಲಯದಲ್ಲಿದ್ದಾರೆ.

Exit mobile version