IPL 2023: ಪಂಜಾಬ್​ಗೆ ಬೃಹತ್​ ಮೊತ್ತದ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್​ - Vistara News

ಕ್ರಿಕೆಟ್

IPL 2023: ಪಂಜಾಬ್​ಗೆ ಬೃಹತ್​ ಮೊತ್ತದ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್​

ಪಂಜಾಬ್​ ಕಿಂಗ್ಸ್​ ವಿರುದ್ಧ ಮೊದಲು ಬ್ಯಾಟಿಂಗ್​ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್​ 213 ರನ್​ ಗಳಿಸಿ ಸವಾಲೊಡ್ಡಿದೆ.

VISTARANEWS.COM


on

Rilee Rossouw
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧರ್ಮಶಾಲಾ: ದಶಕದ ಬಳಿಕ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐಪಿಎಲ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಭರ್ಜರಿ ಬ್ಯಾಟಿಂಗ್​ ನಡೆಸಿ ಬೃಹತ್​ ಮೊತ್ತ ಕಲೆಹಾಕಿದೆ. ಆತಿಥೇಯ ಪಂಜಾಬ್​ ಗೆಲುವಿಗೆ 214 ರನ್​ ಬಾರಿಸಬೇಕಿದೆ.

ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಜೋಶ್​ನಿಂದಲೇ ಬ್ಯಾಟ್​ ಬೀಸಿ ನಿಗದಿತ 20 ಓವರ್​ಗಳಲ್ಲಿ 2 ವಿಕೆಟ್​ನಷ್ಟಕ್ಕೆ 213 ರನ್​ ಗಳಿಸಿದೆ. ಡೆಲ್ಲಿ ಪರ ರಿಲೀ ರೊಸೊ(82* ), ಪೃಥ್ವಿ ಶಾ(54) ಡೇವಿಡ್​ ವಾರ್ನರ್​(46) ರನ್ ​ಗಳಿಸಿ ಮಿಂಚಿದರು.

ಇನಿಂಗ್ಸ್​ ಆರಂಭಿಸಿದ ಡೆಲ್ಲಿ ಆರಂಭಿಕ ಎರಡು ಓವರ್​ನಲ್ಲಿ ರಕ್ಷಣಾತ್ಮಕ ಆಟವಾಡಿತು. 2 ಓವರ್​ಗೆ ಕೇವಲ 6 ರನ್​ ಮಾತ್ರ ಒಟ್ಟುಗೂಡಿತು. ಈ ರನ್​ ಗಮನಿಸುವಾಗ ಡೆಲ್ಲಿ ಈ ಪಂದ್ಯದಲ್ಲಿಯೂ ಅಲ್ಪ ಮೊತ್ತ ದಾಖಲಿಸಲಿದೆ ಎಂದು ಊಹಿಸಲಾಯಿತು. ಆದರೆ ಮುಂದಿನ ಓವರ್​ನಿಂದ ಜಿದ್ದಿಗೆ ಬಿದ್ದವರಂತೆ ಬಿರುಸಿನ ಬ್ಯಾಟಿಂಗ್​ ನಡೆಸಿದ ವಾರ್ನರ್​ ಮತ್ತು ಪೃಥ್ವಿ ಶಾ ಪಂಜಾಬ್​ ಬೌಲರ್​ಗಳಿಗೆ ಸತತ ಸಿಕ್ಸರ್​ ಮತ್ತು ಬೌಂಡರಿ ರುಚಿ ತೋರಿಸಲಾರಂಭಿಸಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟದಿಂದ ರನ್​ ವೇಗ ಹಠಾತ್​ 10ರ ಸರಾಸರಿಯಲ್ಲಿ ಸಾಗಿ 7 ಓವರ್​ಗೆ 70 ರನ್​ಗಳ ಗಡಿ ದಾಟಿತು.

ಬಿರುಸಿನ ಬ್ಯಾಟಿಂಗ್​ ನೆಡೆಸುತ್ತಿದ್ದ ವಾರ್ನರ್​ ಅವರು 41 ರನ್​ ಗಳಿಸಿದ್ದ ವೇಳೆ ರಾಹುಲ್​ ಚಹರ್​ ಅವರಿಂದ ಜೀವದಾನ ಪಡೆದರು. ಆದರೆ ಈ ಅವಕಾಶವನ್ನು ಅವರು ಹೆಚ್ಚು ಕಾಲ ಬಳಸಿಕೊಳ್ಳುವಲ್ಲಿ ವಿಫಲರಾದರು. ಮುಂದಿನ 5 ರನ್​ ಅಂತರದಲ್ಲಿ ಅವರು ವಿಕೆಟ್​ ಕೈ ಚೆಲ್ಲಿದರು. ಅಸಾಧ್ಯವಾದ ಕ್ಯಾಚ್​ ಒಂದನ್ನು ಚಿರತೆ ವೇಗದಲ್ಲಿ ಓಡಿ ಕ್ಯಾಚ್​ ಹಿಡಿಯುವ ಮೂಲಕ ಶಿಖರ್​ ಧವನ್​ ಅವರು ವಾರ್ನರ್​ ಅವರನ್ನು ಪೆವಿಲಿಯನ್​ಗೆ ಕಳುಹಿಸಿದರು. ವಾರ್ನರ್​ ಮತ್ತು ಪೃಥ್ವಿ ಶಾ ಮೊದಲ ವಿಕೆಟ್​ಗೆ 94 ರನ್​ ರಾಶಿ ಹಾಕಿದರು. ವಾರ್ನರ್​ ಗಳಿಕೆ 46 ರನ್​

ಅರ್ಧಶತಕ ಬಾರಿಸಿದ ಪೃಥ್ವಿ ಶಾ

ಆರಂಭಿಕ ಪಂದ್ಯಗಳಲ್ಲಿ ಸತತ ಸೊನ್ನೆ ಸುತ್ತಿ ಬಳಿಕ ಇಂಪ್ಯಾಕ್ಟ್​ ಪ್ಲೇಯರ್​ ಆಗಿ ಕಣಕ್ಕಿಳಿದರೂ ಬ್ಯಾಟಿಂಗ್​ ವೈಫಲ್ಯ ಕಂಡು ಬಾರಿ ಟೀಕೆಗೆ ಗುರಿಯಾಗಿದ್ದ ಪೃಥ್ವಿ ಶಾ, ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ತಮ್ಮ ಹಳೇಯ ಬ್ಯಾಟಿಂಗ್​ ಶೈಲಿಯಲ್ಲೇ ಬ್ಯಾಟ್​ ಬೀಸಿದ ಅವರು 7 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 54 ರನ್​ ಗಳಿಸಿದರು. ಇದರ ಮಧ್ಯೆ ಅವರು ಎರಡು ಬಾರಿ ಕೈ ಬೆರಳಿನ ಗಾಯಕ್ಕೂ ತುತ್ತಾದರು. ಇದು ಪೃಥ್ವಿ ಶಾ ಅವರು ಈ ಆವೃತ್ತಿಯ ಐಪಿಎಲ್​ನಲ್ಲಿ ಬಾರಿಸಿದ ಮೊದಲ ಅರ್ಧಶತಕ ಮತ್ತು ಗರಿಷ್ಠ ಮೊತ್ತವಾಗಿದೆ. ವಾರ್ನರ್​ ಜತೆ ಉತ್ತಮ ಇನಿಂಗ್ಸ್​ ಕಟ್ಟಿದ ಅವರು ಆ ಬಳಿಕ ದ್ವಿತೀಯ ವಿಕೆಟ್​ಗೆ ರೂಸೊ ಜತೆ ಸೇರಿ 54 ರನ್​ಗಳ ಅತ್ಯಮೂಲ್ಯ ಜತೆಯಾಟ ನಡೆಸಿದರು.

ವಾರ್ನರ್​ ವಿಕೆಟ್​ ಪತನದ ಬಳಿಕ ಬ್ಯಾಟ್​ ಹಿಡಿದು ಬಂದ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್​ ರಿಲೀ ರೂಸೊ ಅವರು ಸ್ಫೋಟಕ ಬ್ಯಾಟಿಂಗ್​ ನಡೆಸಿದರು. ಯುವರಾಜ್​ ಸಿಂಗ್​ ಶೈಲಿಯಲ್ಲಿ ಬ್ಯಾಟಿಂಗ್​ ನಡೆಸಿ ಸಿಕ್ಸರ್​ ಮತ್ತು ಬೌಂಡರಿಗಳ ಸುರಿಮಳೆಯನ್ನೇ ಸುರಿಸಿದರು. 26 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದರು. ಡೆಲ್ಲಿ ಆಟಗಾರರ ಆಟವನ್ನು ಗಮನಿಸುತ್ತಿದ್ದ ಕೋಚ್​ ರಿಕಿ ಪಾಂಟಿಂಗ್​ ಮತ್ತು ತಂಡದ ನಿರ್ದೇಶಕ ಸೌರವ್​ ಗಂಗೂಲಿ ಅವರು ಈ ಪ್ರದರ್ಶನವನ್ನು ಆರಂಭದಲ್ಲೇ ತೋರಿಸುತ್ತಿದ್ದರೆ ನಾವು ಕೂಡ ಪ್ಲೇ ಆಫ್​ ರೇಸ್​ನಲ್ಲಿರಬಹುದಿತ್ತು ಎನ್ನುವ ಅರ್ಥದಲ್ಲಿ ಸಂಭಾಷಣೆ ನಡೆಸುತ್ತಿರುವುದು ಕಂಡು ಬಂತು.

ಇದನ್ನೂ ಓದಿ IPL 2023: ಕೇಶವಿನ್ಯಾಸದಲ್ಲಿ ಅರಳಿದ ಆರ್​ಸಿಬಿ, ವಿರಾಟ್​ ಕೊಹ್ಲಿ ಚಿತ್ರ

ಒಟ್ಟು 37 ಎಸೆತ ಎದುರಿಸಿದ ರೂಸೊ ಅವರು ತಲಾ 6 ಸಿಕ್ಸರ್​ ಮತ್ತು ಬೌಂಡರಿ ಸಿಡಿಸಿ ಅಜೇಯ 82 ರನ್​ ಗಳಿಸಿದರು. ಅಂತಿಮ ಹಂತದಲ್ಲಿ ಫಿಲಿಪ್​ ಸಾಲ್ಟ್​ ಕೂಡ ಅಬ್ಬರ ಬ್ಯಾಟಿಂಗ್​ ನಡೆಸಿ 14 ಎಸೆತಗಳ ಮುಂದೆ ಅಜೇಯ 26 ರನ್​ ಬಾರಿಸಿದರು. ಪಂಜಾಬ್​ ಪರ ಸ್ಯಾಮ್​ ಕರನ್​ 2 ವಿಕೆಟ್​ ಕೆಡವಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

IPL 2024 Points Table: ಇಂದು ನಡೆಯುವ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ಮುಖಾಮುಖಿಯಾಗಲಿವೆ. ರಾಜಸ್ಥಾನ್ ಗೆದ್ದರೆ ಮೊದಲ ತಂಡವಾಗಿ ಪ್ಲೇ ಆಫ್​ಗೆ ಪ್ರವೇಶಿಸಲಿದೆ. ಸನ್​ರೈಸರ್ಸ್​ ಗೆದ್ದರೆ ಚೆನ್ನೈ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದೆ.

VISTARANEWS.COM


on

IPL 2024 Points Table
Koo

ಚೆನ್ನೈ: ಬುಧವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 7 ವಿಕೆಟ್​ ಅಂತರದ ಹೀನಾಯ ಸೋಲು ಕಂಡಿತು. ಗೆಲುವು ಸಾಧಿಸಿದ ಪಂಜಾಬ್​ ಅಂಕಪಟ್ಟಿಯಲ್ಲಿ(IPL 2024 Points Table) ಗುಜರಾತ್​ ಟೈಟಾನ್ಸ್​ ತಂಡವನ್ನು ಹಿಂದಿಕ್ಕಿ 7ನೇ ಸ್ಥಾನಕ್ಕೇರಿತು. ಜತೆಗೆ ಪ್ಲೇ ಆಫ್​ ಆಸೆಯನ್ನು ಇನ್ನೂ ಜೀವಂತವಿರಿಸಿತು. ಚೆನ್ನೈ ಸೋಲು ಕಂಡರೂ ಕೂಡ ಈ ಹಿಂದಿನಂತೆ 4ನೇ ಸ್ಥಾನದಲ್ಲೇ ಮುಂದುವರಿಯಿತು.

ಇಂದು ನಡೆಯುವ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ಮುಖಾಮುಖಿಯಾಗಲಿವೆ. ರಾಜಸ್ಥಾನ್ ಗೆದ್ದರೆ ಮೊದಲ ತಂಡವಾಗಿ ಪ್ಲೇ ಆಫ್​ಗೆ ಪ್ರವೇಶಿಸಲಿದೆ. ಸನ್​ರೈಸರ್ಸ್​ ಗೆದ್ದರೆ ಚೆನ್ನೈ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​96312 (+1.096)
ಲಕ್ನೋ​​106412 (+0.094)
ಚೆನ್ನೈ​105510 (+0.627)
ಹೈದರಾಬಾದ್​95410 (+0.075)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ10376 (-0.272)
ಆರ್​ಸಿಬಿ10376 (-0.415)

ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

​ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

Continue Reading

ಕ್ರೀಡೆ

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

CSK vs PBKS: ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು

VISTARANEWS.COM


on

CSK vs PBKS
Koo

ಚೆನ್ನೈ: ಪ್ಲೇ ಆಫ್​ ಆಸೆಯನ್ನು ಜೀವಂತವಿರಿಸಲು ಗೆಲ್ಲಲೇ ಬೇಕಾದ ಮಹತ್ವದ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(CSK vs PBKS)​ ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರದ್ದೇ ನೆಲದಲ್ಲಿ 7 ವಿಕೆಟ್​ಗಳಿಂದ ಮಗುಚಿ ಹಾಕಿದೆ. ಇದು ಈ ಆವೃತ್ತಿಯಲ್ಲಿ ಚೆನ್ನೈಗೆ ತವರಿನಲ್ಲಿ ಎದುರಾದ 2ನೇ ಸೋಲಾಗಿದೆ. ಇದಕ್ಕೂ ಮುನ್ನ ಲಕ್ನೋ ವಿರುದ್ಧ ಸೋಲು ಕಂಡಿತ್ತು. ಜಾನಿ ಬೇರ್​ಸ್ಟೋ(46 ರನ್​) ಮತ್ತು ರಾಹುಲ್​ ಚಹರ್​ (16ಕ್ಕೆ 2 ವಿಕೆಟ್​) ಪಂಜಾಬ್​ ಗೆಲುವಿನ ಪ್ರಮುಖ ರೂವಾರಿಗಳಾಗಿ ಮೂಡಿಬಂದರು.

ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು.

​ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

ಚೆನ್ನೈಗೆ ಗಾಯಕ್ವಾಡ್​ ಆಸರೆ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಉತ್ತಮ ಆರಂಭವೇನೊ ಪಡೆಯಿತು. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಅನುಭವಿ ಹಾಗೂ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಸೇರಿಕೊಂಡು ಮೊದಲ ವಿಕೆಟ್​ಗೆ 64 ರನ್​ ಒಟ್ಟುಗೂಡಿಸಿದರು. ರಹಾನೆ 29 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು. ಉತ್ತಮ ಸ್ಥಿತಿಯಲ್ಲಿದ್ದ ಚೆನ್ನೈ ರಹಾನೆ ವಿಕೆಟ್​ ಪತನದ ಬಳಿಕ ದಿಢೀರ್​ ಕುಸಿತ ಕಂಡಿತು. ಸತತವಾಗಿ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ಸಹ ಆಟಗಾರರ ವಿಕೆಟ್ ಬೀಳುತ್ತಿದ್ದರೂ ಕೂಡ ಮತ್ತೊಂದು ತುದಿಯಲ್ಲಿ ಕ್ರೀಸ್​ ಕಚ್ಚಿ ನಿಂತ ಗಾಯಕ್ವಾಡ್​ ತಮ್ಮ ಶಕ್ತಿ ಮೀರಿದ ಬ್ಯಾಟಿಂಗ್​ ಪ್ರದರ್ಶನದ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮುಂದುವರಿಸಿದರು. ಒಂದು ಹಂತದಲ್ಲಿ ಸಮೀರ್ ರಿಜ್ವಿ ಅವರಿಂದ ಸಣ್ಣ ಮಟ್ಟದ ಜತೆಯಾಟದ ಬೆಂಬಲ ಸಿಕ್ಕರೂ ಕೂಡ ಇದು ಹೆಚ್ಚು ಹೊತ್ತು ಸಾಗಲಿಲ್ಲ. 21 ರನ್​ ಗಳಿಸಿದ್ದ ವೇಳೆ ರಿಜ್ವಿ ಕೂಡ ಔಟಾದರು. ಗಾಯಕ್ವಾಡ್​ 48 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ್​ ಬಾರಿಸಿ 62 ರನ್​ ಗಳಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ದುಬೆ ಬ್ಯಾಟಿಂಗ್​ ವಿಫಲ


ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು. ಹರ್​ಪ್ರೀತ್​ ಬ್ರಾರ್​ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. ಮೊಯಿನ್​ ಅಲಿ ಕ್ಯಾಚ್​ನಿಂದ ಒಂದು ಜೀವದಾನ ಪಡೆದರೂ ಕೂಡ ಇದರ ಲಾಭವೆತ್ತಲು ವಿಫಲರಾದರು. 15 ರನ್​ ಗಳಿಸಿ ರಾಹುಲ್​ ಚಹರ್​ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆದರು. ಮಹೇಂದ್ರ ಸಿಂಗ್​ ಧೋನಿ 11 ಎಸೆತಗಳಿಂದ 14 ರನ್​ ಗಳಿಸಿ ರನೌಟ್​ ಆದರು.

ಇದುವರೆಗೆ ದ್ವಿತೀಯ ಕ್ರಮಾಂಕದಲ್ಲಿ ಆಡುತ್ತಿದ್ದ ಡೇರಿಯಲ್​ ಮಿಚೆಲ್​ ಅವರನ್ನು ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಆಡಿಸಲಾಯಿತು. ಈ ಪ್ರಯೋಗ ಚೆನ್ನೈಗೆ ಭಾರೀ ಹಿನ್ನಡೆ ಉಂಟುಮಾಡಿತು. ಅವರನ್ನು ಎಂದಿನಂತೆ 2ನೇ ಕ್ರಮಾಂಕದಲ್ಲಿ ಆಡಿಸುತ್ತಿದ್ದರೆ ದೊಡ್ಡ ಮೊತ್ತವನ್ನು ಕಲೆಹಾಕಬಹುದಾಗಿತ್ತು. ಪಂಜಾಬ್​ ಪರ ರಾಹುಲ್​ ಚಹರ್​ ಮತ್ತು ಹರ್​ಪ್ರೀತ್​ ಬ್ರಾರ್​ ತಲಾ 2 ವಿಕೆಟ್​ ಉರುಳಿಸಿದರು.

Continue Reading

ಕ್ರೀಡೆ

T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ; ಒಂದು ಸ್ಥಾನ ಏರಿಕೆ ಕಂಡ ಬಾಬರ್​

T20 Rankings: ಸರಿ ಸುಮಾರು ಒಂದು ವರ್ಷಕ್ಕಿಂತಲೂ ಅಧಿಕವಾಗಿ ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​ ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿಸಿದ್ದಾರೆ.

VISTARANEWS.COM


on

T20 Rankings
Koo

ದುಬೈ: ಐಸಿಸಿ ನೂತನ ಟಿ20(T20 Rankings) ಬ್ಯಾಟಿಂಗ್​ ಶ್ರೇಯಾಂಕ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(babar azam) ಒಂದು ಸ್ಥಾನಗಳ ಪ್ರಗತಿ ಸಾಧಿಸಿದ್ದಾರೆ. ಟೀಮ್​ ಇಂಡಿಯಾದ ಸೂರ್ಯಕುಮಾರ್​ ಯಾದವ್(861 ರೇಟಿಂಗ್​ ಅಂಕ)​ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಮತ್ತೊಮ್ಮೆ ಯಶಸ್ವಿಯಾಗಿದ್ದಾರೆ.

ಬಾಬರ್​ ನ್ಯೂಜಿಲ್ಯಾಂಡ್​ ವಿರುದ್ಧದ ತವರಿನ ಟಿ20 ಪಂದ್ಯದಲ್ಲಿ ಆಡಿದ ನಾಲ್ಕು ಇನಿಂಗ್ಸ್​ಗಳಿಂದ ಒಂದು ಅರ್ಧಶತಕ ಮತ್ತು ಒಳಗೊಂಡಂತೆ ಒಟ್ಟು 125 ರನ್​ ಬಾರಿಸಿದ್ದರು. ಇದು ಬ್ಯಾಟರ್‌ಗಳಿಗಾಗಿ ನವೀಕರಿಸಿದ ಟಿ20 ಶ್ರೇಯಾಂಕಗಳ ಪಟ್ಟಿಯಲ್ಲಿ ಬಾಬರ್ ಒಂದು ಸ್ಥಾನವನ್ನು ಸುಧಾರಿಸಲು ನೆರವಾಯಿತು. ಬಾಬರ್​ 10 ರೇಟಿಂಗ್​ ಅಂಗಳ ಪ್ರಗತಿಯೊಂದಿಗೆ ಸದ್ಯ 763 ರೇಟಿಂಗ್​ ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ಸರಿ ಸುಮಾರು ಒಂದು ವರ್ಷಕ್ಕಿಂತಲೂ ಅಧಿಕವಾಗಿ ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​(suryakumar yadav) ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿಸಿದ್ದಾರೆ. ಆಸೀಸ್​ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ ಅವರು ತಮ್ಮ ಚೊಚ್ಚಲ ನಾಯಕತ್ವದಲ್ಲ ಭಾರತಕ್ಕೆ ಟಿ20 ಸರಣಿಯನ್ನು ಗೆದ್ದು ಕೊಟ್ಟ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗಾಯಗೊಂಡು ಬಳಿಕ ಯಾವುದೇ ಸರಣಿ ಆಡಿಲ್ಲ. ಇದೇ ಜೂನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಕಪ್​ ಮೂಲಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಲಿದ್ದಾರೆ.

ಇಂಗ್ಲೆಂಡ್​ ತಂಡ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಫಿಲ್​ ಸಾಲ್ಟ್​(802) ಮತ್ತು ಪಾಕಿಸ್ತಾನದ ಮೊಹಮ್ಮದ್​ ರಿಜ್ವಾನ್​(784) ರೇಟಿಂಗ್​ ಅಂಕದೊಂದಿಗೆ ಕ್ರಮವಾಗಿ 2 ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಯುವ ಎಡಗೈ ಬ್ಯಾಟರ್​ ಯಶಸ್ವಿ ಜೈಸ್ವಾಲ್​(714) 6ನೇ ಸ್ಥಾನ ಪಡೆದಿದ್ದಾರೆ. ಒಟ್ಟಾರೆಯಾಗಿ ಟಾಪ್​ 10ನಲ್ಲಿ ಇಬ್ಬರು ಭಾರತೀಯ ಬ್ಯಾಟರ್​ಗಳು ಮಾತ್ರ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್​ ಮತ್ತು ದಕ್ಷಿಣ ಆಫ್ರಿಕಾದ ಮೂವರು ಬ್ಯಾಟರ್​ಗಳು ಅಗ್ರ 10ರೊಳಗೆ ಸ್ಥಾನ ಪಡೆದಿದ್ದಾರೆ.

ಟಾಪ್​ 5 ಬ್ಯಾಟರ್​ಗಳು


1. ಸೂರ್ಯಕುಮಾರ್​ ಯಾದವ್​ (861 ರೇಟಿಂಗ್​ ಅಂಕ)

2. ಫಿಲ್​ ಸಾಲ್ಟ್​(802 ರೇಟಿಂಗ್​ ಅಂಕ)

3. ಮೊಹಮ್ಮದ್​ ರಿಜ್ವಾನ್​ (784 ರೇಟಿಂಗ್​ ಅಂಕ)

4. ಬಾಬರ್​ ಅಜಂ(763 ರೇಟಿಂಗ್​ ಅಂಕ)

5. ಐಡೆನ್​ ಮಾರ್ಕ್ರಮ್​(755 ರೇಟಿಂಗ್​ ಅಂಕ)

Continue Reading

ಕ್ರಿಕೆಟ್

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

KL Rahul: “ದುರದೃಷ್ಟವಶಾತ್ ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದ್ದೇ ಅವರಿಗೆ ಮುಳುವಾಯಿತು. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ. ಒಂದೊಮ್ಮೆ ಏಕದಿನ ವಿಶ್ವಕಪ್​ನಂತೆ ಐಪಿಎಲ್​ನಲ್ಲಿಯೂ ಮಧ್ಯಮ ಕ್ರಮಾಂಕದಲ್ಲಿ ರಾಹುಲ್​ ಆಡುತ್ತಿದ್ದರೆ ಅವರಿಗೆ ಸ್ಥಾನ ಸಿಗುತ್ತಿತ್ತು” ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

VISTARANEWS.COM


on

KL Rahul
Koo

ಮುಂಬಯಿ: ಭಾರತದ ಮಾಜಿ ವೇಗದ ಬೌಲರ್ ಇರ್ಫಾನ್ ಪಠಾಣ್(Irfan Pathan) ಭಾರತದ ಟಿ20 ವಿಶ್ವಕಪ್(T20 World Cup) ತಂಡದಿಂದ ಕೆ.ಎಲ್​ ರಾಹುಲ್(KL Rahul) ಅವರನ್ನು ಕೈಬಿಡಲು ಕಾರಣ ಏನೆಂಬುದನ್ನು ವಿವರಿಸಿದ್ದಾರೆ. ಅಹಮದಾಬಾದ್‌ನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನಡೆಸಿದ ಸಭೆಯ ಬಳಿಕ 15 ಸದಸ್ಯರ ತಂಡವನ್ನು ಪ್ರಕಟಿಸಲಾಯಿತು. ರಿಷಭ್​ ಪಂತ್​(Rishabh Pant) ಮೊದಲ ಆಯ್ಕೆಯ ಕೀಪರ್​ ಆಗಿದ್ದರೂ ಕೂಡ ರಾಹುಲ್​ ಅವರಿಗೆ ಅವಕಾಶ ಸಿಗಬಹುದೆಂದು ಎಲ್ಲರು ನಿರೀಕ್ಷೆ ಮಾಡಿದ್ದರು. ಆದರೆ ತಂಡ ಪ್ರಕಟಗೊಂಡಾಗ ಅವರ ಬದಲು ಸಂಜು ಸ್ಯಾಮ್ಸನ್​ ಹೆಸರಿತ್ತು. ಇದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು.

“ದುರದೃಷ್ಟವಶಾತ್ ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದ್ದೇ ಅವರಿಗೆ ಮುಳುವಾಯಿತು. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ. ಒಂದೊಮ್ಮೆ ಏಕದಿನ ವಿಶ್ವಕಪ್​ನಂತೆ ಐಪಿಎಲ್​ನಲ್ಲಿಯೂ ಮಧ್ಯಮ ಕ್ರಮಾಂಕದಲ್ಲಿ ರಾಹುಲ್​ ಆಡುತ್ತಿದ್ದರೆ ಅವರಿಗೆ ಸ್ಥಾನ ಸಿಗುತ್ತಿತ್ತು” ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

ಆರಂಭಿಕ ಸ್ಥಾನಕ್ಕೆ ರೋಹಿತ್​ ಶರ್ಮ ಜತೆ ಶುಭಮನ್​ ಗಿಲ್​ ಮತ್ತು ಜೈಸ್ವಾಲ್​ ರೇಸ್​ನಲ್ಲಿದ್ದರು. ಹೀಗಾಗಿ ರಾಹುಲ್​ಗೆ ಈ ಸ್ಥಾನ ಸಿಗುವು ಅನುಮಾನ ಎನ್ನುವುದು ಮೊದಲೇ ತಿಳಿದಿತ್ತು. ಬಿಸಿಸಿಐ ಮತ್ತು ಆಯ್ಕೆ ಸಮಿತಿ ರಿಷಭ್​ ಪಂತ್​ ಫಿಟ್​ ಆಗದಿದ್ದರೆ ಅವರ ಸ್ಥಾನದಲ್ಲಿ ಕೀಪಿಂಗ್​ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಆಡುವ ಆಟಗಾರ ಹುಡುಕಾಟದಲ್ಲಿತ್ತು. ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದರೆ, ಸಂಜು ವಿಕೆಟ್​ ಕೀಪಿಂಗ್​ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್​ ಬೀಸುತ್ತಿದ್ದಾರೆ. ಇದೇ ಕಾರಣ ಸಂಜುಗೆ(Sanju Samson) ಅವಕಾಶ ಸಿಕ್ಕಿತು ಎಂದು ಇರ್ಫಾನ್​ ವಿವರಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

Continue Reading
Advertisement
Parineeti Chopra husband Raghav Chadha doing well after eye surgery
ಬಾಲಿವುಡ್8 mins ago

Parineeti Chopra: ಪರಿಣಿತಿ ಚೋಪ್ರಾ ಪತಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ: ವೈದ್ಯರು ಹೇಳೋದೇನು?

Rahul Gandhi
ಪ್ರಮುಖ ಸುದ್ದಿ15 mins ago

Rahul Gandhi: ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ; ಪ್ರಜ್ವಲ್‌ ರೇವಣ್ಣ ವಿಚಾರ ತೆಗೀತಾರಾ?

Job Alert
ಉದ್ಯೋಗ19 mins ago

Job Alert: ಗಮನಿಸಿ; ಹಟ್ಟಿ ಚಿನ್ನದ ಗಣಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

After SSLC career options
ಶಿಕ್ಷಣ23 mins ago

Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಯಾವುದು ಉತ್ತಮ ಆಯ್ಕೆ?

Thomas Cup 2024
ಬ್ಯಾಡ್ಮಿಂಟನ್24 mins ago

Thomas Cup 2024: ಅಂತಿಮ ಲೀಗ್​ ಪಂದ್ಯದಲ್ಲಿ ಇಂಡೊನೇಷ್ಯಾಕ್ಕೆ ಮಣಿದ ಭಾರತ

Aadhaar Crads For Dog
ಪ್ರಮುಖ ಸುದ್ದಿ28 mins ago

Aadhaar Crads For Dog: ದೆಹಲಿಯಲ್ಲಿ ನಾಯಿಗಳಿಗೂ ಬಂತು ಆಧಾರ್ ಕಾರ್ಡ್!

Pushpa 2 The Rule Title track out
ಟಾಲಿವುಡ್40 mins ago

Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

Congress Candidate List
Lok Sabha Election 202443 mins ago

Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Asaduddin Owaisi
ದೇಶ46 mins ago

Asaduddin Owaisi: ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

IPL 2024 Points Table
ಕ್ರೀಡೆ57 mins ago

IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌