IPL 2023: ಮೈದಾನ ಸಿಬ್ಬಂದಿಗೆ ನೆರವು ನೀಡಿದ ಧೋನಿ; ವಿಡಿಯೊ ವೈರಲ್​ Vistara News
Connect with us

ಕ್ರಿಕೆಟ್

IPL 2023: ಮೈದಾನ ಸಿಬ್ಬಂದಿಗೆ ನೆರವು ನೀಡಿದ ಧೋನಿ; ವಿಡಿಯೊ ವೈರಲ್​

ಚೆಪಾಕ್​ ಕ್ರೀಡಾಂಗಣದ ಸಿಬ್ಬಂದಿಗಳಿಗೆ ನಗದು ಮತ್ತು ಆಟೋಗ್ರಾಫ್​ ನೀಡಿ ಮಹೇಂದ್ರ ಸಿಂಗ್​ ಧೋನಿ ಅವರು ಔದಾರ್ಯ ಮೆರೆದಿದ್ದಾರೆ.

VISTARANEWS.COM


on

MS Dhoni Poses With Chepauk Ground Staff
Koo

ಚೆನ್ನೈ: ಮಹೇಂದ್ರ ಸಿಂಗ್​ ಧೋನಿ ಅವರು ಚೆನ್ನೈಯ ಚೆಪಾಕ್​ ಕ್ರೀಡಾಂಗಣದ ಸಿಬ್ಬಂದಿಗಳಿಗೆ ನಗದು ಮತ್ತು ಆಟೋಗ್ರಾಫ್​ ನೀಡಿ ಔದಾರ್ಯ ಮೆರೆದಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಧೋನಿ ಅಹಮದಾಬಾದ್​ನಲ್ಲಿ ಮೇ 28ಕ್ಕೆ ನಡೆಯುವ ಫೈನಲ್​ ಪಂದ್ಯಕ್ಕೆ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2019ರ ಬಳಿಕ ಈ ಬಾರಿಯ ಐಪಿಎಲ್​(IPL 2023) ಆವೃತ್ತಿಯಲ್ಲಿ ಚೆನ್ನೈ ತಂಡ ಮೊದಲ ಬಾರಿ ಚೆಪಾಕ್​ನಲ್ಲಿ ​ ಪಂದ್ಯಗಳನ್ನು ಆಡಿತ್ತು. ಒಟ್ಟು ಲೀಗ್​ನಲ್ಲಿ 7 ಪಂದ್ಯ ಮತ್ತು ಕ್ವಾಲಿಫೈಯರ್​ ಸೇರಿ 8 ಪಂದ್ಯಗಳಲ್ಲಿ ಚೆನ್ನೈ ತಂಡ ಇಲ್ಲಿ ಕಣಕ್ಕಿಳಿದಿತ್ತು. ಧೋನಿಯ ನೆಚ್ಚಿನ ಮೈದಾನ ಕೂಡ ಇದಾಗಿದೆ. ಕಳೆದ ಗುಜರಾತ್​ ವಿರುದ್ಧದ ಕ್ವಾಲಿಫೈಯರ್​ ಪಂದ್ಯ ಗೆದ್ದು ಚೆನ್ನೈ ಫೈನಲ್​ ತಲುಪಿದೆ. ಈ ಪಂದ್ಯ ಮುಗಿದ ಬಳಿಕ ತಂಡದ ನಾಯಕ ಧೋನಿ ಅವರು ಇಲ್ಲಿನ ಕ್ರೀಡಾಂಗಣದ ಒಟ್ಟು 20 ಮಂದಿ ಸಿಬ್ಬಂದಿಗೆ ಆಟೋಗ್ರಾಫ್‌ ನೀಡುವ ಜತೆಗೆ ನಗದು ನೀಡಿದ್ದಾರೆ. ಬಳಿಕ ಇವರೊಂದಿಗೆ ಗ್ರೂಪ್‌ ಫೋಟೊ ಕೂಡ ತೆಗೆಸಿಕೊಂಡಿದ್ದಾರೆ. ಈ ವಿಡಿಯೊ ಕಂಡ ಧೋನಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಧೋನಿ ಅವರು ಈ ಹಿಂದೆಯೂ ಇದೇ ರೀತಿ ಮೈದಾನ ಸಿಬ್ಬಂದಿಗಳಿಗೆ ನೆರವು ನೀಡಿದ್ದರು. ಭಾರತ ತಂಡದ ಪರ ಆಡುವ ವೇಳೆಯೂ ಧೋನಿ ಅವರು ಈ ರೀತಿಯ ಸಹಾಯ ಮಾಡಿದ್ದರು.

ಇದನ್ನೂ ಓದಿ IPL 2023 : ಧೋನಿ ಬಗ್ಗೆ ಹೊಗಳಿ ಬರೆದ ಲಂಕಾ ಬೌಲರ್ ಮತೀಶ್ ಪತಿರಾನಾ ಸಹೋದರಿ ವಿಶುಕಾ; ಕಾರಣವೇನು?

ಸದ್ಯಕ್ಕಿಲ್ಲ ನಿವೃತ್ತಿ

ಈ ಬಾರಿಯ ಐಪಿಎಲ್​ ಬಳಿಕ ಧೋನಿ ಅವರು ನಿವೃತ್ತಿ ನೀಡಲಿದ್ದಾರೆ ಎಂಬ ಟಾಕ್​ಗೆ ಧೋನಿಯೇ ಕಳೆದ ಪಂದ್ಯದಲ್ಲಿ ಉತ್ತರ ನೀಡಿದ್ದರು. “ನಿವೃತ್ತಿ ಬಗ್ಗೆ ನನಗೆ ಗೊತ್ತಿಲ್ಲ. ಇದರ ಬಗ್ಗೆ ನಾನು ಈಗ ಚಿಂತಿಸುವುದಿಲ್ಲ. ಸದ್ಯ ನನ್ನ ಮುಂದಿರುವ ಗುರಿ ಫೈನಲ್​ಗೆ ಬೇಕಾದ ತಯಾರಿ ಮತ್ತು ಕಪ್​ ಗೆಲ್ಲುವುದು. ನಿವೃತ್ತಿ ಬಗ್ಗೆ ಯೋಚಿಸಲು ನನಗೆ ಇನ್ನೂ 8 ರಿಂದ 9 ತಿಂಗಳು ಅವಕಾಶವಿದೆ. ಹೀಗಾಗಿ ಈಗ ಏಕೆ ನಾನು ಈ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು? ಆಟಗಾರನಾಗಿ ಅಥವಾ ಬೇರೆ ಜವಾಬ್ದಾರಿಯ ಮೂಲಕವಾದರೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಜತೆಗಿನ ನಂಟು ಯವಾಗಲೂ ಇದ್ದೇ ಇರುತ್ತದೆ” ಎಂದು ಧೋನಿ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

WTC Final 2023: ಭಾರತ ವಿರುದ್ಧ ವಿಶ್ವ ದಾಖಲೆ ಬರೆದ ಟ್ರಾವಿಸ್​ ಹೆಡ್​​

ಟ್ರಾವಿಸ್​ ಹೆಡ್ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ

VISTARANEWS.COM


on

Edited by

WTC Final 2023
Koo

ಲಂಡನ್​: ಭಾರತ ವಿರುದ್ಧ ಸಾಗುತ್ತಿರುವ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಟ್ರಾವಿಸ್​ ಹೆಡ್​​ ಅವರು ನೂತನ ವಿಶ್ವ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರನಾಗಿ ಮೂಡಿಬಂದಿದ್ದಾರೆ.

ಲಂಡನ್​ನ ಓವಲ್​ ಮೈದಾನದಲ್ಲಿ ಬುಧವಾರ ಆರಂಭಗೊಂಡ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ತಂಡ 3 ವಿಕೆಟ್​ಗೆ 300 ರನ್​ಗಳ ಗಡಿ ದಾಟಿ ಬೃಹತ್​ ಮೊತ್ತ ದಾಖಲಿಸುವ ಸೂಚನೆ ನೀಡಿದೆ.

ಮಾರ್ನಸ್​ ಲಬುಶೇನ್​ ವಿಕೆಟ್​ ಪತನದ ಬಳಿಕ ಕ್ರೀಸ್​ಗೆ ಇಳಿದ ಹೆಡ್​ ಏಕದಿನ ಕ್ರಿಕೆಟ್​ ಶೈಲಿಯಲ್ಲಿ ಬ್ಯಾಟಿಂಗ್​ ನಡೆಸಿ ಭಾರತಕ್ಕೆ ತಲೆನೋವಾಗಿ ಪರಿಣಮಿಸಿದರು. ಪ್ರತಿ ಎಸೆತವೊಂದಕ್ಕೆ ರನ್​ ಗಳಿಸಿದ ಅವರು 101 ಎಸೆತಗಳಲ್ಲಿ ಶತಕ ಪೂರ್ತಿಗೊಳಿಸಿದರು. ಈ ಮೂಲಕ ವಿಶ್ವ ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ಶತಕ ಬಾರಿಸಿದ ಆಟಗಾರ ಎಂಬ ವಿಶ್ವ ದಾಖಲೆ ಬರೆದರು. ಸದ್ಯ ಅವರು 1 ಸಿಕ್ಸರ್​ ಮತ್ತು 19 ಬೌಂಡರಿ ಬಾರಿಸಿ 129 ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ WTC Final 2023: ಲಂಡನ್​​ನಲ್ಲೇ ವಿಶ್ವ ಟೆಸ್ಟ್​ ಫೈನಲ್​ ನಡೆಯಲು ಕಾರಣವೇನು

ಇವರ ಜತೆಗಾರ ಸ್ಟೀವನ್​ ಸ್ಮಿತ್​ ಕೂಡ ಶತಕ ಬಾರಿಸಿವ ಸನಿಹದಲ್ಲಿದ್ದಾರೆ. ಒಂದೊಮ್ಮೆ ಅವರು ಕೂಡ ಶತಕ ಬಾರಿಸಿದರೆ ಇದು ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ದಾಖಲಾದ 2ನೇ ಶತಕವಾಗಲಿದೆ. ಹಾಗೇಯೇ ಈ ಸಾಧನೆ ಮಾಡಿದ ಎರಡನೇ ಆಟಗಾರ ಎಂಬ ಹಿರಿಮೆಗೆ ಸ್ಮಿತ್​ ಪಾತ್ರರಾಗಲಿದ್ದಾರೆ. ಹೆಡ್​ ಮೊದಲಿಗ.

Continue Reading

ಕ್ರಿಕೆಟ್

WTC Final 2023: ಲಂಡನ್​​ನಲ್ಲೇ ವಿಶ್ವ ಟೆಸ್ಟ್​ ಫೈನಲ್​ ನಡೆಯಲು ಕಾರಣವೇನು

ಕ್ರಿಕೆಟ್‌ ಜನಕರ ನಾಡು ಇಂಗ್ಲೆಂಡ್‌ನ ಜನತೆಗೆ ಟೆಸ್ಟ್​ ಎಂದರೆ ಅಚ್ಚುಮೆಚ್ಚು ಇದೇ ಕಾರಣಕ್ಕೆ ಐಸಿಸಿ ಮಹತ್ವದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ ಪಂದ್ಯವನ್ನು ಲಂಡನ್​ನಲ್ಲಿ ನಡೆಸುತ್ತಿದೆ.

VISTARANEWS.COM


on

Edited by

icc test championship trophy
Koo

ಲಂಡನ್​: ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ ಪಂದ್ಯ​ ಲಂಡನ್​ನಲ್ಲಿಯೇ ನಡೆಯುತ್ತಿರುವುದು ಏಕೆ ಎಂಬ ಕುತೂಹಲವೊಂದು ಕ್ರಿಕೆಟ್​ ಅಭಿಮಾನಿಗಳಲ್ಲಿ ಮೂಡಿದೆ. ಸದ್ಯ ಎರಡನೇ ಆವೃತ್ತಿಯ ಫೈನಲ್​ ಪಂದ್ಯ ಲಂಡನ್​ನ ಓವಲ್​ ಮೈದಾನದಲ್ಲಿ ನಡೆಯುತ್ತಿದೆ. ಇಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿವೆ. 2025ರಲ್ಲಿ ನಡೆಯುವ ಫೈನಲ್​ ಪಂದ್ಯವೂ ಲಂಡನ್​ನಲ್ಲೇ ನಡೆಯಲಿದೆ. ಇದಕ್ಕೆ ಪ್ರಮುಖ ಕಾರಣ ಏನೆಂಬುದನ್ನು ಇಲ್ಲಿ ವಿವರಿಸಲಾಗಿದೆ.

ಕ್ರಿಕೆಟ್‌ ಜನಕರ ನಾಡು ಇಂಗ್ಲೆಂಡ್‌ನ ಜನತೆಗೆ ಟೆಸ್ಟ್​ ಎಂದರೆ ಅಚ್ಚುಮೆಚ್ಚು. ಲಂಡನ್​ನಲ್ಲಿ ನಡೆಯುವ ಯಾವುದೇ ಟೆಸ್ಟ್​ ಪಂದ್ಯವಾದರೂ ಅಲ್ಲಿ ಕಿಕ್ಕಿರಿದು ಜನ ಸೇರುತ್ತಾರೆ. ಅದರಲ್ಲೂ ಇಂಗ್ಲೆಂಡ್​ ಕ್ರಿಕೆಟ್​ ಪ್ರಿಯರು ಈ ಆಟವನ್ನು ಬಹಳ ಶಿಸ್ತಿನಿಂದ ವೀಕ್ಷಣ ಮಾಡುತ್ತಾರೆ ಯಾವುದೇ ಬೊಬ್ಬೆ ಗದ್ದಲಗಳಿಲ್ಲದೆ ಸಿಕ್ಸರ್​, ಬೌಂಡರಿ ಸಿಡಿಸಿದಾಗ ಕೇವಲ ಚಪ್ಪಾಳೆಯ ಸದ್ದು ಮಾತ್ರ ಕೇಳಿಬರುತ್ತದೆ. ತಲೆಗೊಂದು ಹ್ಯಾಟ್​, ಕೈಯಲ್ಲೊಂದು ಬಿಯರ್​ ಹಿಡಿದು ಪಂದ್ಯ ವೀಕ್ಷಿಸುತ್ತಿರುತ್ತಾರೆ. ಆದ್ದರಿಂದ ಇಲ್ಲಿ ನಡೆಯುವ ಪಂದ್ಯಗಳಿಗೆ ವೀಕ್ಷಕರ ಕೊರತೆ ಎಂದಿಗೂ ಕಾಡಲಾರದು. ಹೀಗಾಗಿ ಐಸಿಸಿ ಮಹತ್ವದ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಕ್ಕೆ ಲಂಡನ್​ ತಾಣವನ್ನೇ ಆಯ್ಕೆ ಮಾಡಿದೆ.

ಬೇರೆ ದೇಶದಲ್ಲಾದರೆ ಟೆಸ್ಟ್​ ಪಂದ್ಯದಕ್ಕೆ ಹೆಚ್ಚು ಜನ ಪ್ರಾಶಸ್ತ್ಯ ನೀಡುವುದಿಲ್ಲ. ಆದರೆ ಇಂಗ್ಲೆಂಡಿನ ಕ್ರಿಕೆಟ್ ಪ್ರೇಮಿಗಳು ಟೆಸ್ಟ್ ಕ್ರಿಕೆಟ್ ಬಹಳ ಆನಂದಿಸುತ್ತಾರೆ. ಇದಕ್ಕೆ ಕಾರಣವೂ ಇದೆ ಏಕೆಂದರೆ ಇಂಗ್ಲೆಂಡ್​ನಲ್ಲಿ ಮೊದಲ ಬಾರಿಗೆ ನಡೆಯುತ್ತಿದ್ದದ್ದು ಟೆಸ್ಟ್​ ಕ್ರಿಕೆಟ್​ ಸರಣಿಯೇ ಆಗಿತ್ತು.

ಇದನ್ನೂ ಓದಿ WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

ಅದರಲ್ಲೂ ಈಗಿನ ಜಾಯಮಾನದ ಜನತೆಗೆ ತಾಳ್ಮೆ ಎಂಬುದು ಇಲ್ಲವೇ ಎಲ್ಲದಂತಾಗಿದೆ. ಟಿ20 ಮತ್ತು ಟಿ10 ಕ್ರಿಕೆಟ್​ ಪಂದ್ಯಗಳು ಆರಂಭವಾದ ಬಳಿಕ ಇದೀಗ ಏಕದಿನ ಕ್ರಿಕೆಟ್​ನಲ್ಲಿಯೂ ಕ್ರೇಜ್​ ಕಡಿಮೆಯಾಗಿದೆ. ಆದರೆ ಇಂಗ್ಲೆಂಡ್​ನಲ್ಲಿ ಮಾತ್ರ ಟೆಸ್ಟ್​ ಕ್ರಿಕೆಟ್​ ಕ್ರೇಜ್​ ಈಗಲೂ ಜೀವಂತವಾಗಿದೆ.

Continue Reading

ಕ್ರಿಕೆಟ್

INDvsWI: ಭಾರತ-ವಿಂಡೀಸ್‌ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಜುಲೈ-ಆಗಸ್ಟ್‌ ತಿಂಗಳಲ್ಲಿ ನಡೆಯುವ ಭಾರತ ಮತ್ತು ವೆಸ್ಟ್​ ಇಂಡೀಸ್​ ವಿರುದ್ಧದ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿಯೊಂದು ಪ್ರಕಟಗೊಂಡಿದೆ.

VISTARANEWS.COM


on

Edited by

India vs West Indies Schedule
Koo

ಪೋರ್ಟ್‌ ಆಫ್ ಸ್ಪೇನ್‌: ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಮುಕ್ತಾಯದ ಬಳಿಕ ಟೀಮ್​ ಇಂಡಿಯಾ ವೆಸ್ಟ್‌ ಇಂಡೀಸ್‌ಗೆ ಪ್ರವಾಸ ಕೈಗೊಳ್ಳಲಿದೆ. ಜುಲೈ-ಆಗಸ್ಟ್‌ ತಿಂಗಳಲ್ಲಿ ನಡೆಯುವ ಉಭಯ ತಂಡಗಳ ಸರಣಿಯ ತಾತ್ಕಾಲಿಕ ವೇಳಾಪಟ್ಟಿಯೊಂದು ಪ್ರಕಟಗೊಂಡಿದೆ. ಸದ್ಯ ಬಿಸಿಸಿಐಯಿಂದ ಒಪ್ಪಿಗೆ ಸಿಗುವುದೊಂದೆ ಬಾಕಿ ಉಳಿದಿದೆ. ಅನಂತರ ವೇಳಾಪಟ್ಟಿ ಅಧಿಕೃತಗೊಳ್ಳಲಿದೆ.

ಇತ್ತಂಡಗಳ ಕ್ರಿಕೆಟ್​ ಸರಣಿಯಲ್ಲಿ 2 ಟೆಸ್ಟ್‌, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಾಗುವುದು. ಹೆಚ್ಚುರಿಯಾಗಿ 2 ಟಿ20 ಪಂದ್ಯಗಳನ್ನು ಅಮೆರಿಕದ ಫ್ಲೋರಿಡಾದಲ್ಲಿ ಆಡುವ ಸಾಧ್ಯತೆ ಇದೆ. ಆದರೆ ಇದು ಅಧಿಕೃತಗೊಂಡಿಲ್ಲ. ಪ್ರಸಕ್ತ ಸಾಗುತ್ತಿರುವ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ ಫೈನಲ್​ ವೇಳೆ ಬಿಸಿಸಿಐ ಮತ್ತು “ಕ್ರಿಕೆಟ್‌ ವೆಸ್ಟ್‌ ಇಂಡೀಸ್‌’ನ ವರಿಷ್ಠರು ಮಾತುಕತೆ ನಡೆಸಿ ವೇಳಾಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಇದೇ ಕಾರಣಕ್ಕೆ ವಿಂಡೀಸ್​ ಕ್ರಿಕೆಟ್​ ಮಂಡಳಿಯ ಸದಸ್ಯರು ಲಂಡನ್​ನ ಓವಲ್​ಗೆ ಆಗಮಿಸಿದ್ದಾರೆ.

ಸದ್ಯದ ವೇಳಾಪಟ್ಟಿಯ ಪ್ರಕಾರ ಟೆಸ್ಟ್‌ ಪಂದ್ಯಗಳು ಡೊಮಿನಿಕಾ (ಜು. 12-16) ಮತ್ತು ಟ್ರಿನಿಡಾಡ್‌ನ‌ಲ್ಲಿ (ಜು. 20-24) ನಡೆಯಲಿವೆ. ಏಕದಿನ ಪಂದ್ಯಗಳು ಬಾರ್ಬಡಾಸ್‌ (ಜು. 27, 29) ಮತ್ತು ಟ್ರಿನಿಡಾಡ್‌ (ಆ. 1). ಟಿ20 ಪಂದ್ಯಗಳನ್ನು ಟ್ರಿನಿಡಾಡ್‌ (ಆ. 4) ಮತ್ತು ಗಯಾನಾದಲ್ಲಿ (ಆ. 6, ಆ. 8) ಆಡಲಾಗುವುದು ಎಂದು ಹೇಳಲಾಗಿದೆ. ಆದರೆ ಅಂತಿಮ ವೇಳಾಪಟ್ಟಿ ಬಿಡುಗಡೆಗೊಂಡ ಬಳಿಕ ಇದರಲ್ಲಿ ಸಣ್ಣ ಪುಟ್ಟ ಬದಲಾವಣೆ ಕಂಡುಬರುವ ಸಾಧ್ಯೆತೆ ಇದೆ.

ಇದನ್ನೂ ಓದಿ WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವ ಕಪ್​ ದೃಷ್ಟಿಯಲ್ಲಿ ಭಾರತಕ್ಕೆ ಈ ಸರಣಿ ಮಹತ್ವದ್ದಾಗಿದೆ. ಏಕೆಂದರೆ ತಂಡ ಸಂಯೋಜನೆಗೆ ಇದು ಉತ್ತಮ ಅವಕಾಶವಾಗಿದೆ.

Continue Reading

ಕ್ರಿಕೆಟ್

WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

ಶಮಿಯ ಎಸೆತವನ್ನು ಗುರುತಿಸಲು ಸಾಧ್ಯವಾಗದೇ ಮರ್ನಸ್​ ಲಾಬುಶೇನ್​ ಕ್ಲೀನ್​ ಬೌಲ್ಡ್ ಆದರು.

VISTARANEWS.COM


on

Marnus Labuschagne
Koo

ಲಂಡನ್​: ವಿಶ್ವ ಟೆಸ್ಟ್​ ಚಾಂಪಿಯನ್​​ಷಿಪ್​ನ ಫೈನಲ್​ ಪಂದ್ಯದಲ್ಲಿ (WTC Final 2023) ಆಸ್ಟ್ರೇಲಿಯಾ ತಂಡದ ಪಾರಮ್ಯ ಮುಂದುವರಿದಿದೆ. ಟಾಸ್​ ಸೋತು ಮೊದಲು ಬ್ಯಾಟ್​ ಮಾಡಿದ ಆಸೀಸ್ ಬಳಗ ಟಿ ವಿರಾಮದ ವೇಳೆಗೆ ಮೂರು ವಿಕೆಟ್​ ಕಳೆದುಕೊಂಡು 171 ರನ್​ ಬಾರಿಸಿದೆ. ಭಾರತ ತಂಡ ಆರಂಭದಲ್ಲಿ ಮೂರು ವಿಕೆಟ್​ಗಳನ್ನು ಕಬಳಿಸಿದರೂ ಬಳಿಕ ಜತೆಯಾದ ಟ್ರಾವಿಸ್ ಹೆಡ್​ ಹಾಗೂ ಸ್ಟೀವ್​ ಸ್ಮಿತ್​ ಸ್ಥಿರ ಪ್ರದರ್ಶನ ನೀಡಿದರು. ಆದರೆ, ಭಾರತ ತಂಡಕ್ಕೆ ಮೂರನೇ ವಿಕೆಟ್​ ರೂಪದಲ್ಲಿ ದೊರಕಿದ ಮರ್ನಸ್​ ಲಾಬುಶೇನ್​ ವಿಕೆಟ್​ ಹೆಚ್ಚು ಆಕರ್ಷಕವಾಗಿತ್ತು. ಶಮಿ ಎಸೆತಕ್ಕೆ ಅವರು ಬೌಲ್ಡ್​ ಆದ ರೀತಿಯೂ ಕ್ರಿಕೆಟ್​ ಪ್ರೇಮಿಗಳ ಗಮನ ಸೆಳೆಯಿತು.

ಡಬ್ಲ್ಯುಟಿಸಿ ಫೈನಲ್​ ಪಂದ್ಯದ ಮೊದಲ ಸೆಷನ್​ನಲ್ಲಿ ಶಮಿ ತುಂಬಾ ಕಡಿಮೆ ಬೌಲಿಂಗ್ ಮಾಡಿದ್ದಕ್ಕಾಗಿ ಕ್ರಿಕೆಟ್​ ಅಭಿಮಾನಿಗಳಿಂದ ಹಾಗೂ ವೀಕ್ಷಕ ವಿವರಣೆಗಾರರಿಂದ ಟೀಕೆಗೆ ಒಳಗಾದರು. ಆದಾಗ್ಯೂ, ಭೋಜನ ವಿರಾಮದಿಂದ ಹಿಂದಿರುಗಿದ ಕೂಡಲೇ ಶಮಿ ಎಲ್ಲರಿಗೂ ಉತ್ತರ ಕೊಟ್ಟರು. ತಾವು ಭಾರತದ ಮೊದಲ ಆಯ್ಕೆಯ ವೇಗಿ ಎಂಬುದನ್ನು ಸಾಬೀತುಪಡಿಸಿದರು.

ಭೋಜನ ವಿರಾಮದ ನಂತರದ ಎರಡನೇ ಓವರ್​ನಲ್ಲಿ ಮತ್ತು ತಮ್ಮ ಎರಡನೇ ಸ್ಪೆಲ್​ನ ಮೊದಲ ಎಸೆತದಲ್ಲಿ ಮೊಹಮ್ಮದ್ ಶಮಿ ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟ್ಸ್​ಮನ್​ ಲಾಬುಶೇನ್​ ಅವರನ್ನು ಬೌಲ್ಡ್ ಮಾಡಿ ಪೆವಿಲಿಯನ್​​ಗೆ ಕಳುಹಿಸಿದರು.

ಅದಕ್ಕಿಂತ ಮೊದಲು ದಿನದಾಟದ ಮೊದಲ ಅವಧಿಯ ಯಶಸ್ಸನ್ನು ಎರಡೂ ತಂಡಗಳು ಹಂಚಿಕೊಂಡವು, ಭಾರತವು ಆಸೀಸ್ ಆರಂಭಿಕರನ್ನು ಪೆವಿಲಿಯನ್​ಗೆ ಕಳುಹಿಸಿದರೆ ಆಸ್ಟ್ರೇಲಿಯಾ 73 ರನ್ ಗಳಿಸುವ ಮೂಲಕ ಪ್ರತ್ಯುತ್ತರ ನೀಡಿತು. ಡೇವಿಡ್ ವಾರ್ನರ್ ಅದ್ಭುತ ಪ್ರದರ್ಶನ ನೀಡಿ ಎಂಟು ಬೌಂಡರಿಗಳನ್ನು ಗಳಿಸಿದರು. ಆದರೆ 7 ರನ್​​ಗಳಿಂದ ಅರ್ಧ ಶತಕ ವಂಚಿತರಾದರು.

ವಾರ್ನರ್ ವಿಕೆಟ್ ಪಡೆಯುವ ಹಿಂದಿನ ದೊಡ್ಡ ಕಾರಣ ಕೆ.ಎಸ್.ಭರತ್ ಅವರ ಉತ್ತಮ ಕೀಪಿಂಗ್​​. ಇಶಾನ್ ಕಿಶನ್ ಅವರನ್ನು ಹಿಂದಿಕ್ಕಿ ತಂಡಕ್ಕೆ ಆಯ್ಕೆಯಾಗಿದ್ದ ಅವರು ಈ ಕ್ಯಾಚ್ ಮೂಲಕ ಆಯ್ಕೆಯನ್ನು ಸಮರ್ಧಿಸಿಕೊಂಡರು. ಭರತ್​ ಇದಕ್ಕಿಂತ ಹಿಂದೆ ಎರಡು ಬಾರಿ ಇಂಗ್ಲೆಂಡ್​ ಪಿಚ್​ನಲ್ಲಿ ಆಡಿದ್ದಾರೆ. ಒಂದು ಅಭ್ಯಾಸ ಪಂದ್ಯ, ಮತ್ತೊಂದು ವೆಸ್ಟ್ ಇಂಡೀಸ್ ವಿರುದ್ಧದ ಭಾರತ ಎ ಪಂದ್ಯ.

Continue Reading
Advertisement
WTC Final 2023
ಕ್ರಿಕೆಟ್1 min ago

WTC Final 2023: ಭಾರತ ವಿರುದ್ಧ ವಿಶ್ವ ದಾಖಲೆ ಬರೆದ ಟ್ರಾವಿಸ್​ ಹೆಡ್​​

V D Savarkar
ದೇಶ16 mins ago

VD Savarkar: ಇಕ್ಬಾಲ್​ ಪಠ್ಯ ಕೈಬಿಟ್ಟು ಸಾರ್ವಕರ್ ಪಾಠ ಸೇರ್ಪಡೆಗೆ ಗಣ್ಯರ ಬಳಗದ ಬೆಂಬಲ

icc test championship trophy
ಕ್ರಿಕೆಟ್22 mins ago

WTC Final 2023: ಲಂಡನ್​​ನಲ್ಲೇ ವಿಶ್ವ ಟೆಸ್ಟ್​ ಫೈನಲ್​ ನಡೆಯಲು ಕಾರಣವೇನು

Ex Minister V Somanna and MP GS Basavaraj
ಕರ್ನಾಟಕ43 mins ago

Lok Sabha Election 2024: ಸೋಮಣ್ಣಗೆ ತುಮಕೂರು ಲೋಕಸಭೆ ಟಿಕೆಟ್; ಗುಟ್ಟು ಬಿಚ್ಚಿಟ್ಟ ಹಾಲಿ ಸಂಸದ

successful brain surgery on a 5 year old boy at ballari vims
ಕರ್ನಾಟಕ50 mins ago

Ballari News : 5 ವರ್ಷದ ಬಾಲಕನಿಗೆ ಅತೀ ವಿರಳ ಯಶಸ್ವಿ ಮೆದುಳಿನ ಶಸ್ತ್ರ ಚಿಕಿತ್ಸೆ

Gitanjali Aiyar
ದೇಶ52 mins ago

News Anchor : ಭಾರತದ ಮೊಟ್ಟ ಮೊದಲ ಇಂಗ್ಲಿಷ್​ ನ್ಯೂಸ್ ಮಹಿಳಾ ಆ್ಯಂಕರ್​ ಇನ್ನಿಲ್ಲ

old pair dance
ವೈರಲ್ ನ್ಯೂಸ್54 mins ago

Viral Video : ವೇದಿಕೆ ಮೇಲೆ ಧೂಳೆಬ್ಬಿಸಿದ ಭಲೇ ಜೋಡಿ; ಸಕತ್‌ ಆಗಿದೆ ಈ ಸೆನೋರಿಟಾ ಡ್ಯಾನ್ಸ್‌

India vs West Indies Schedule
ಕ್ರಿಕೆಟ್1 hour ago

INDvsWI: ಭಾರತ-ವಿಂಡೀಸ್‌ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Marnus Labuschagne
ಕ್ರಿಕೆಟ್1 hour ago

WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

wrestlers protest
ಕ್ರೀಡೆ2 hours ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ17 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ2 hours ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ10 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ17 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!