IPL 2023: ಮುಂಬೈ ಗೆದ್ದರೂ ಪ್ಲೇ ಆಫ್​ ಭವಿಷ್ಯ ಗುಜರಾತ್​ ಕೈಯಲ್ಲಿ - Vistara News

ಕ್ರಿಕೆಟ್

IPL 2023: ಮುಂಬೈ ಗೆದ್ದರೂ ಪ್ಲೇ ಆಫ್​ ಭವಿಷ್ಯ ಗುಜರಾತ್​ ಕೈಯಲ್ಲಿ

ಪ್ಲೇ ಆಫ್​ ಪ್ರವೇಶಕ್ಕೆ ಗೆಲ್ಲಲೇ ಬೇಕಾದ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ಸನ್​ರೈಸರ್ಸ್​ ವಿರುದ್ಧ ಗೆದ್ದು ಬೀಗಿದೆ.

VISTARANEWS.COM


on

Wankhede Stadium, Mumbai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಪ್ಲೇ ಆಫ್​ ಪ್ರವೇಶಕ್ಕೆ ಗೆಲ್ಲಲೇ ಬೇಕಾದ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ಸನ್​ರೈಸರ್ಸ್​ ವಿರುದ್ಧ 8 ವಿಕೆಟ್​ಗಳಿಂದ ಗೆದ್ದು ಬೀಗಿದೆ. ಆದರೆ ತಂಡ ಪ್ಲೇ ಆಫ್​ ಪ್ರವೇಶ ಪಡೆಯಬೇಕಿದ್ದರೆ ಆರ್​ಸಿಬಿ ಮತ್ತು ಗುಜರಾತ್​ ನಡುವಣ ಪಂದ್ಯದ ಫಲಿತಾಂಶ ಬರಬೇಕಿದೆ. ಒಂದೊಮ್ಮೆ ಆರ್​ಸಿಬಿ ಗೆದ್ದರೆ ಮುಂಬೈ ತಂಡದ ಈ ಗೆಲುವು ವ್ಯರ್ಥವಾಗುತ್ತದೆ. ಸದ್ಯದ ಪ್ರಕಾರ ಅದೃಷ್ಟ ರೋಹಿತ್​ ಪಡೆಗೆ ಇರುವಂತೆ ಕಾಣುತ್ತಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಪಂದ್ಯ ರದ್ದಾದರೆ ಮುಂಬೈ ತಂಡ ಆರ್​ಸಿಬಿಗಿಂತ ಒಂದು ಅಂಕ ಮುನ್ನಡೆಯಲ್ಲಿ ನಾಲ್ಕನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆಯಿಡಲಿದೆ. ಆರ್​ಸಿಬಿಯ ಈ ಸಲ ಕಪ್​ ನಮ್ದೇ ಅಭಿಯಾನ ಮತ್ತೊಮ್ಮೆ ಕೊನೆಗೊಳ್ಳಲಿದೆ.

ಮುಂಬಯಿ ವಾಂಖೇಡೆ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಭಾನುವಾರದ ಮೊದಲ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಸನ್​ರೈಸರ್ಸ್​ ಹೈದರಾಬಾದ್​ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 200 ರನ್​ ಗಳಿಸಿತು. ಬೃಹತ್​ ಮೊತ್ತವನ್ನು ದಿಟ್ಟ ರೀತಿಯಲ್ಲಿ ಬೆನ್ನಟ್ಟಿದ ಮುಂಬೈ 18 ಓವರ್​ಗಳಲ್ಲಿ 2 ವಿಕೆಟ್​ ಕಳೆದುಕೊಂಡು 201 ರನ್​ ಬಾರಿಸಿ ಅಧಿಕಾರಯುತ ಗೆಲುವು ದಾಖಲಿಸಿತು. ಮುಂಬೈ ಪರ ಕ್ಯಾಮರೂನ್​ ಗ್ರೀನ್​(100*) ಅಜೇಯ ಶತಕ ಬಾರಿಸಿ ಮಿಂಚಿದರು.

ಆರ್ಭಟಿಸಿದ ಗ್ರೀನ್​-ರೋಹಿತ್

ಬ್ಯಾಟಿಂಗ್​ ಬರಗಾಲ ಎದುರಿಸುತ್ತಿದ್ದ ನಾಯಕ ರೋಹಿತ್​ ಶರ್ಮ ಮತ್ತು ದುಬಾರಿ ಬೆಲೆಯ ಕ್ಯಾಮರೂನ್​ ಗ್ರೀನ್​ ಮಹತ್ವದ ಪಂದ್ಯದಲ್ಲೇ ಬ್ಯಾಟಿಂಗ್​ ಫಾರ್ಮ್​ ಕಂಡುಕೊಂಡರು. ದ್ವಿತೀಯ ವಿಕೆಟ್​ಗೆ ಜತೆಯಾದ ಈ ಜೋಡಿ ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿ ತಂಡಕ್ಕೆ ಉತ್ತಮ ಅಡಿಪಾಯ ನಿರ್ಮಿಸಿಸಿದರು. ವಾಂಖೇಡೆ ಕ್ರಿಕೆಟ್​ ಸ್ಟೇಡಿಯಂನ ಮೂಲೆ ಮೂಲೆಗೂ ಸಿಕ್ಸರ್​ ಬೌಂಡರಿ ಬಾರಿಸಿ ಹೈದರಾಬಾದ್​ ಬೌಲರ್​ಗಳನ್ನು ಬೆಂಡೆತ್ತಿದರು. ಜತೆಗೆ ನೆರೆದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ರಂಜನೆ ನೀಡಿದರು.

ರೋಹಿತ್​ ಶರ್ಮ 37 ಎಸೆತಗಳಿಂದ 56 ರನ್​ ಗಳಿಸಿ ಔಟಾದರು. ಗ್ರೀನ್​ ಮತ್ತು ರೋಹಿತ್​ ದ್ವಿತೀಯ ವಿಕೆಟ್​ಗೆ 128 ರನ್​ಗಳ ಅಮೂಲ್ಯ ಜತೆಯಾಟ ನಡೆಸಿದರು. ರೋಹಿತ್​ ವಿಕೆಟ್​ ಪತನಗೊಂಡರೂ ಗ್ರೀನ್​ ಅವರ ಬ್ಯಾಟಿಂಗ್​ ಆರ್ಭಟಕ್ಕೆ ಯಾವುದೇ ಅಡ್ಡಿಯಾಗಿಲ್ಲ. ಅವರು ಬ್ಯಾಟ್​ ಬೀಸುತ್ತಲೇ ಸಾಗಿ ತಂಡಕ್ಕೆ ಗೆಲುವು ತಂದುಕೊಟ್ಟರು. ಅಂತಿಮ ಹಂತದವರೆಗೂ ಬ್ಯಾಟಿಂಗ್​ ನಡೆಸಿದ ಗ್ರೀನ್​ ಐಪಿಎಲ್​ನಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು. 47 ಎಸೆತಗಳಿಂದ ತಲಾ 8 ಸಿಕ್ಸರ್​ ಮತ್ತು 8 ಬೌಂಡರಿ ನೆರವಿನಿಂದ ಅಜೇಯ 100 ರನ್​ ಗಳಿಸಿದರು. ಸೂರ್ಯಕುಮಾರ್​ ಅಜೇಯ 25 ರನ್​ ಬಾರಿಸಿದರು.

ಅಗರ್ವಾಲ್​-ವಿವ್ರಾಂತ್ ಸ್ಫೋಟಕ ಬ್ಯಾಟಿಂಗ್​

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಹೈದರಾಬಾದ್​ ಪರ ವಿವ್ರಾಂತ್ ಶರ್ಮಾ ಮತ್ತು ಕನ್ನಡಿಗ ಮಯಾಂಕ್​ ಅಗರ್ವಾಲ್​ ಮೈ ಚಳಿ ಬಿಟ್ಟು ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಮುಂಬೈ ಬೌಲರ್​ಗಳನ್ನು ಬೆಂಡೆತ್ತಿದ ಉಭಯ ಆಟಗಾರರು ಅರ್ಧಶತಕ ಬಾರಿಸಿ ಮಿಂಚಿದರು.

ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿದ ಈ ಜೋಡಿ ಮೊದಲ ವಿಕೆಟ್​ಗೆ 140 ರನ್​ ಒಟ್ಟುಗೂಡಿಸಿದರು. ವಿವ್ರಾಂತ್ ಶರ್ಮಾ ಅವರು 47 ಎಸೆತ ಎದುರಿಸಿ 9 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 69 ರನ್​ ಬಾರಿಸಿದರು. ಅಭಿಷೇಕ್​ ಶರ್ಮ ಅವರ ಬದಲು ಆಡಲಿಳಿದ ಅವರು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು. ಈ ವಿಕೆಟ್​ ಪತನದ ಬಳಿಕ ಕ್ರೀಸ್​ಗೆ ಇಳಿದ ಕಳೆದ ಪಂದ್ಯದ ಶತಕ ವೀರ ಹೆನ್ರಿಚ್​ ಕ್ಲಾಸೆನ್​ 18 ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು.

ಇದನ್ನೂ ಓದಿ IPL 2023: ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ ಅಭಿಮಾನಿಗಳಿಗೆ ಆತಂಕ

ಈ ಸೀಸನ್​ನಲ್ಲಿ ಘೋರ ಬ್ಯಾಟಿಂಗ್​ ವೈಫಲ್ಯ ಕಂಡಿದ್ದ ಮಯಾಂಕ್​ ಅಗರ್ವಾಲ್​ ಅವರು ಕೊನೆಯ ಲೀಗ್​ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದರು. ಶತಕದತ್ತ ಮುನ್ನುಗುತ್ತಿದ್ದ ಅವರನ್ನು ಆಕಾಶ್ ಮಧ್ವಲ್ ಔಟ್​ ಮಾಡಿದರು. 83 ರನ್​ ಬಾರಿಸಿದ ಅಗರ್ವಾಲ್​ 8 ಬೌಂಡರಿ ಮತ್ತು 4 ಸೊಗಸಾದ ಸಿಕ್ಸರ್​ ಬಾರಿಸಿದರು. ಅಗರ್ವಾಲ್​ ಮತ್ತು ವಿವ್ರಾಂತ್ ವಿಕೆಟ್​ ಪತನದ ಬಳಿಕ ತಂಡದ ರನ್​ ವೇಗವೂ ಕುಂಠಿತಗೊಂಡಿತು. ಆರಂಭದಲ್ಲಿ ಉಭಯ ಆಟವನ್ನು ಕಂಡಾಗ ತಂಡ 220 ಗಡಿ ದಾಟಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಬಳಿಕ ಬಂದ ಆಟಗಾರರೆಲ್ಲ ವಿಕೆಟ್​ ಒಪ್ಪಿಸಿ ತಂಡದ ದೊಡ್ಡ ಮೊತ್ತಕ್ಕೆ ಹಿನ್ನಡೆ ಉಂಟು ಮಾಡಿದರು. ನ್ಯೂಜಿಲ್ಯಾಂಡ್​ ತಂಡದ ಸ್ಫೋಟಕ ಬ್ಯಾಟರ್​ ಗ್ಲೆನ್​ ಫಿಲಿಪ್ಸ್​ ಒಂದು ರನ್​ಗೆ ವಿಕೆಟ್​ ಒಪ್ಪಿಸಿದರು. ಅಂತಿಮ ಹಂತದಲ್ಲಿ ನಾಯಕ ಮಾರ್ಕ್​ರಮ್​ ಸಿಕ್ಸರ್​ ಬಾರಿಸಿ ತಂಡದ ಮೊತ್ತ 200ಕ್ಕೆ ಏರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

IPL 2024: ಈ ವರ್ಷದ ಆರಂಭದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫೈನಲ್ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವನ್ನು ಸೋಲಿಸುವ ಮೂಲಕ ಡಬ್ಲ್ಯುಪಿಎಲ್​​ನ ಎರಡನೇ ಆವೃತ್ತಿಯನ್ನು ಗೆದ್ದುಕೊಂಡಿತು.

VISTARANEWS.COM


on

IPL 2024
Koo

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL 2024) 2024 ಫೈನಲ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) 2024 ಫೈನಲ್ ನಡುವಿನ ಕೆಲವು ವಿಲಕ್ಷಣ ಹೋಲಿಕೆಗಳು ಕ್ರಿಕೆಟ್ ಪ್ರೇಮಿಗಳನ್ನು ಅಚ್ಚರಿಗೆ ಒಳಪಡಿಸಿವೆ. ಪ್ಯಾಟ್ ಕಮಿನ್ಸ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಕೋಲ್ಕತಾ ನೈಟ್ ರೈಡರ್ಸ್ (KKR) ಮೂರನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ವರ್ಷದ ಆರಂಭದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫೈನಲ್ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವನ್ನು ಸೋಲಿಸುವ ಮೂಲಕ ಡಬ್ಲ್ಯುಪಿಎಲ್​​ನ ಎರಡನೇ ಆವೃತ್ತಿಯನ್ನು ಗೆದ್ದುಕೊಂಡಿತು.

ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ 18.3 ಓವರ್​ಗಳಲ್ಲಿ ಸನ್​ರೈಸರ್ಸ್​​ ಹೈದರಾಬಾದ್ ತಂಡವನ್ನು 113 ರನ್​ ಗಳಿಗೆ ಆಲೌಟ್ ಮಾಡಿತ್ತು. ಏತನ್ಮಧ್ಯೆ, ಸ್ಮೃತಿ ಮಂದಾನ ನೇತೃತ್ವದ ಆರ್ಸಿಬಿ ಕೂಡ ಮಾರ್ಚ್ 17 ರಂದು ಅಷ್ಟೇ ಓವರ್​​ಗಳಲ್ಲಿ ಡೆಲ್ಲಿ ತಂಡವನ್ನು ಅದೇ ಮೊತ್ತಕ್ಕೆ ಕಟ್ಟಿಹಾಕಿತ್ತು. ಇದು ಎರಡು ಫೈನಲ್ ಗಳ ನಡುವಿನ ಪ್ರಮುಖ ಹೋಲಿಕೆಗಳಲ್ಲಿ ಒಂದಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಡಬ್ಲ್ಯುಪಿಎಲ್​ ಮತ್ತು ಐಪಿಎಲ್​ನಲ್ಲಿ ಸೋತ ಎಸ್ಆರ್​ಎಚ್​ ಮತ್ತು ಡಿಸಿ ತಂಡ ನಾಯಕರು ಆಸ್ಟ್ರೇಲಿಯಾದ ಕ್ರಿಕೆಟಿಗರು. ಅವರೆಂದರೆ ಎಸ್​ಆರ್​ಎಚ್​ ತಂಡ ಪ್ಯಾಟ್​ ಕಮಿನ್ಸ್ ಮತ್ತು ಡಿಸಿ ಮಹಿಳಾ ತಂಡ ಮೆಗ್​ ಲ್ಯಾನಿಂಗ್. ಮುಂದುವರಿಂತೆ ಈ ಇಬ್ಬರೂ ಅದಕ್ಕಿಂತ ಹಿಂದೆ ಐಸಿಸಿ ಟೂರ್ನಿಗಳಲ್ಲಿ (ವಿಶ್ವ ಕಪ್​, ಟೆಸ್ಟ್ ಚಾಂಪಿಯನ್​ಷಿಪ್​​) ಭಾರತ ತಂಡವನ್ನು ಸೋಲಿಸಿದ್ದರು. ಕಮಿನ್ಸ್ 2023 ರ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ (ಡಬ್ಲ್ಯುಟಿಸಿ) ಫೈನಲ್​​ನಲ್ಲಿ ಹಾಗೂ 2023 ರ ಏಕದಿನ ವಿಶ್ವಕಪ್ ಫೈನಲ್​​ನಲ್ಲಿ ಭಾರತ ತಂಡವನ್ನು ಸೋಲಿಸಿದ್ದರು. ಲ್ಯಾನಿಂಗ್ ಆಸ್ಟ್ರೇಲಿಯಾದ ಮಹಿಳಾ ತಂಡವನ್ನು 2022 ರ ಟಿ 20 ಮಹಿಳಾ ವಿಶ್ವಕಪ್ ಫೈನಲ್ ಪ್ರಶಸ್ತಿಗೆ ಕೊಂಡೊಯ್ದಿದ್ದರು. ಅಲ್ಲಿ ಭಾರತ ಸೋತಿತ್ತು . ಇದೀಗ ಭಾರತೀಯ ನಾಯಕರು ಆ ಆಸ್ಟ್ರೇಲಿಯನ್ ಆಟಗಾರರ ನಾಯಕತ್ವದ ತಂಡವನ್ನು ಮಣಿಸಿದ್ದಾರೆ. ಶ್ರೇಯಸ್​ ಅಯ್ಯರ್​ ಪ್ಯಾಟ್​ ಕಮಿನ್ಸ್ ನೇತೃತ್ವದ ಎಸ್​ಆರ್​ಎಚ್​ ತಂಡವನ್ನು ಸೋಲಿಸಿದರೆ, ಸ್ಮೃತಿ ಮಂಧಾನ ಅವರು ಆರ್​ಸಿಬಿ ಮೂಲಕ ಮೆಗ್​ ಲ್ಯಾನಿಂಗ್ ಅವರನ್ನು ಮಣಿಸಿದ್ದರು.

ಕೆಕೆಆರ್ ಬೌಲರ್​ಗಳಿಗೆ ಭರ್ಜರಿ ಖಷಿ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮಿಚೆಲ್ ಸ್ಟಾರ್ಕ್ ಮತ್ತು ವೈಭವ್ ಅರೋರಾ ಪವರ್​ಪ್ಲೇನಲ್ಲಿ ತಲಾ ಮೂರು ಓವರ್​ಗಳನ್ನು ಎಸೆದು ಎಸ್​ಆರ್​ಎಚ್ ತಂಡ ಮೂರು ವಿಕೆಟ್​ಗಳನ್ನು ಪಡೆದರು. ಆರೆಂಜ್ ಆರ್ಮಿ 18.3 ಓವರ್​ಗಳಲ್ಲಿ 113 ರನ್​ಗಳಿಗೆ ಆಲೌಟ್ ಆಯಿತು. ಆಸೀಸ್ ಪರ ಆ್ಯಂಡ್ರೆ ರಸೆಲ್ 3 ವಿಕೆಟ್ ಕಿತ್ತರೆ, ಸ್ಟಾರ್ಕ್ ಹಾಗೂ ಹರ್ಷಿತ್ ರಾಣಾ ತಲಾ 2 ವಿಕೆಟ್ ಪಡೆದರು.

ಇದನ್ನೂ ಓದಿ: Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

ಉತ್ತರವಾಗಿ ಆಡಿದ ಕೆಕೆಆರ್ ಪರ ಸುನಿಲ್ ನರೈನ್ ಬೇಗನೆ ನಿರ್ಗಮಿಸಿದರು. ಆದರೆ ವೆಂಕಟೇಶ್ ಅಯ್ಯರ್ (26 ಎಸೆತಗಳಲ್ಲಿ 52* ರನ್) ಮತ್ತು ರಹಮಾನುಲ್ಲಾ ಗುರ್ಬಾಜ್ (32 ಎಸೆತಗಳಲ್ಲಿ 39 ರನ್) 45 ಎಸೆತಗಳಲ್ಲಿ 91 ರನ್​ಗಳ ಜೊತೆಯಾಟವನ್ನು ನೀಡಿದರು. ನಂತರ, ಶ್ರೇಯಸ್ ಅಯ್ಯರ್ ಮಧ್ಯದಲ್ಲಿ ವೆಂಕಟೇಶ್ ಅವರೊಂದಿಗೆ ಸೇರಿಕೊಂಡರು ಪಂದ್ಯವನ್ನು ಪೂರ್ಣಗೊಳಿಸಿದರು. ಅಂತಿಮವಾಗಿ ಕೆಕೆಆರ್ 57 ಎಸೆತಗಳು ಬಾಕಿ ಇರುವಾಗಲೇ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

Continue Reading

ಪ್ರಮುಖ ಸುದ್ದಿ

Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

Virat kohli:

VISTARANEWS.COM


on

Virat kohli
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್​ 2024ನೇ ಆವೃತ್ತಿಯ (IPL 2024) ಎಲಿಮಿನೇಷನ್ ಹಂತ ದಾಟಲು ವಿಫಲವಾಗಿರಬಹುದು. ಆದರೆ ಆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್​ ಮೂಲಕ ಅತ್ಯಂತ ಪ್ರಕಾಶಮಾನವಾಗಿ ಮಿಂಚಿದರು. ಈ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕೊಹ್ಲಿ ಐಪಿಎಲ್ 2024 ರ ಆರೆಂಜ್ ಕ್ಯಾಪ್ ಗೆದ್ದಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2024 ರ ಫೈನಲ್​​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಸನ್​ರೈಸರ್ಸ್​ ಹೈದರಾಬಾದ್ (SRH) ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿದ ನಂತರ ಕೊಹ್ಲಿಗೆ ಆರೆಂಜ್ ಕ್ಯಾಪ್ ಟ್ರೋಫಿಯನ್ನು ನೀಡಲಾಯಿತು.

ಎರಡನೇ ಬಾರಿಗೆ ಆರೆಂಜ್ ಕ್ಯಾಪ್ ಟ್ರೋಫಿ ಗೆದ್ದ ವಿರಾಟ್ ಕೊಹ್ಲಿ

ಐಪಿಎಲ್ 2024 ವಿಜೇತ ನಾಯಕ ಶ್ರೇಯಸ್ ಅಯ್ಯರ್ ಅವರು ಕೊಹ್ಲಿ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು, ಏಕೆಂದರೆ ಮಾಜಿ ಆರ್​ಸಿಬಿ ನಾಯಕ ಚೆನ್ನೈನಲ್ಲಿ ಉಪಸ್ಥಿತರಿರಲಿಲ್ಲ. ರಾಜಸ್ಥಾನ್ ರಾಯಲ್ಸ್ (ಆರ್​ಆರ್​​) ವಿರುದ್ಧದ ಎಲಿಮಿನೇಟರ್ ಸೋಲಿನ ನಂತರ ಆರ್​​ಸಿಬಿ ಐಪಿಎಲ್ 2024 ರಿಂದ ಹೊರಬಿದ್ದ ನಂತರ ಅವರು ಪ್ರಸ್ತುತ ಆಟದಿಂದ ಸಣ್ಣ ವಿರಾಮದಲ್ಲಿದ್ದಾರೆ.

ಐಪಿಎಲ್ 2024 ರ ಋತುವಿನಲ್ಲಿ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ವಿಶ್ವದ ಅತಿದೊಡ್ಡ ಟಿ 20 ವೈಭವದಲ್ಲಿ ಪ್ರಮುಖ ಬ್ಯಾಟರ್​ಗಳಲ್ಲಿ ಒಬ್ಬರಾಗಿ ತಮ್ಮ ಸ್ಥಾನಮಾನವನ್ನು ಖಾತರಿಪಡಿಸಿದ್ದರು. ಬಲಗೈ ಬ್ಯಾಟ್ಸ್ಮನ್ 15 ಇನ್ನಿಂಗ್ಸ್​ಗಳಲ್ಲಿ 61.75 ಸರಾಸರಿ ಮತ್ತು 154.70 ಸ್ಟ್ರೈಕ್ ರೇಟ್​ನಲ್ಲಿ 741 ರನ್ ಗಳಿಸಿದ್ದು, ಈ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.

ಇದನ್ನೂ ಓದಿ: Mitchell Starc : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​

ಐಪಿಎಲ್ 2024 ರಲ್ಲಿ ಅಜೇಯ 113 ರನ್ ಗಳಿಸುವ ಮೂಲಕ ಆರ್​ಸಿಬಿಗೆ ಅಗ್ರ ಕ್ರಮಾಂಕದಲ್ಲಿ ಅವರ ಸ್ಥಿರತೆ ಗಮನಾರ್ಹವಾಗಿದೆ. ಇದರಲ್ಲಿ ಐದು ಅರ್ಧಶತಕಗಳು ಮತ್ತು ಒಂದು ಶತಕವನ್ನು ಒಳಗೊಂಡಿದೆ. ಅಗತ್ಯವಿದ್ದಾಗ ರನ್ ರೇಟ್ ಅನ್ನು ವೇಗಗೊಳಿಸುವ ಕೊಹ್ಲಿಯ ಸಾಮರ್ಥ್ಯವು ಈ ಋತುವಿನಲ್ಲಿ ಆರ್​ಸಿಬಿಯ ಪ್ಲೇಆಫ್ ಪ್ರವೇಶದಲ್ಲಿ ಜಾಹೀರಾಯಿತು.

ತಮ್ಮ ಆಕರ್ಷಕ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಹೊರತಾಗಿ ಕೊಹ್ಲಿ ಸವಾಲಿನ ಪಂದ್ಯಗಳ ಮೂಲಕ ಆರ್​ಸಿಬಿಯನ್ನು ಪ್ರೇರೇಪಿಸಿದರು. ಕಠಿಣ ಸಂದರ್ಭಗಳಲ್ಲಿ ತಮ್ಮ ತಂತ್ರಗಾರಿಕೆಯ ಜಾಣ್ಮೆಯನ್ನು ಒದಗಿಸಿದರು. ಹೆಚ್ಚುವರಿಯಾಗಿ, ಕೊಹ್ಲಿಯ ಶಕ್ತಿಯ ಮಟ್ಟವು ಋತುವಿನಾದ್ಯಂತ ಅಸಾಧಾರಣವಾಗಿತ್ತು. ಐಪಿಎಲ್ 2024 ರ ಪ್ಲೇಆಫ್​ನಲ್ಲಿ ಆರ್​ಸಿಬಿ ಸೋತರೂ, ಅವರ ಪ್ರದರ್ಶನವು ಎದ್ದು ಕಾಣುತ್ತಿತ್ತು.

ಆರೆಂಜ್ ಕ್ಯಾಪ್ ಸ್ವೀಕರಿಸಲು ತುಂಬಾ ಗೌರವವಿದೆ: ವಿರಾಟ್ ಕೊಹ್ಲಿ

ಐಪಿಎಲ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಎರಡನೇ ಬಾರಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಗೆದ್ದರು. 2016ರ ಐಪಿಎಲ್ ಟೂರ್ನಿಯಲ್ಲಿ 973 ರನ್ ಬಾರಿಸಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಿದ್ದರು. ಎರಡನೇ ಬಾರಿಗೆ ಆರೆಂಜ್ ಕ್ಯಾಪ್ ಟ್ರೋಫಿಯನ್ನು ಗೆದ್ದ ನಂತರ, ಕೊಹ್ಲಿ ಎಲ್ಲರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದರು.

ಈ ಗೌರವವನ್ನು ಸ್ವೀಕರಿಸಿದ ನಂತರ ಮಾತನಾಡಿದ ವಿರಾಟ್ ಕೊಹ್ಲಿ, “ಈ ಋತುವಿನಲ್ಲಿ ಆರೆಂಜ್ ಕ್ಯಾಪ್ ಸ್ವೀಕರಿಸಲು ತುಂಬಾ ಗೌರವವಿದೆ. ಇದು ಸವಾರಿಯ ರೋಲರ್-ಕೋಸ್ಟರ್ ಆಗಿತ್ತು, ಋತುವಿನಾದ್ಯಂತ ನನ್ನ ತಂಡಕ್ಕಾಗಿ ನಾನು ಪ್ರದರ್ಶನ ನೀಡಿದ ರೀತಿಯಿಂದ ನನಗೆ ನಿಜವಾಗಿಯೂ ಸಂತೋಷವಾಯಿತು. ಆದರೆ ಅದಕ್ಕಿಂತ ಮುಖ್ಯವಾಗಿ ದ್ವಿತೀಯಾರ್ಧದಲ್ಲಿ ಅರ್ಹತೆ ಪಡೆಯಲು ನಾವು ಪ್ರತಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಇದನ್ನು ಐಪಿಎಲ್​ನ 2025 ರ ಋತುವಿನಲ್ಲಿಯೂ ಪುನರಾವರ್ತಿಸಲು ನಾನು ಆಶಿಸುತ್ತೇನೆ. ನಿಮ್ಮ ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು.

ವಿಶೇಷವೆಂದರೆ, ಜೂನ್ 1 ರಿಂದ ಪ್ರಾರಂಭವಾಗುವ ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ಗಾಗಿ ಯುಎಸ್ಎಗೆ ತಡವಾಗಿ ಪ್ರಯಾಣಿಸಲಿರುವ ಕಾರಣ ಕೊಹ್ಲಿ ನ್ಯೂಯಾರ್ಕ್ಗೆ ಭಾರತೀಯ ಆಟಗಾರರ ಮೊದಲ ಗುಂಪಿನೊಂದಿಗೆ ವಿಮಾನವನ್ನು ತಪ್ಪಿಸಿಕೊಂಡರು. ಜೂನ್ 5 ರಂದು ಐರ್ಲೆಂಡ್ ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಿದ ಮೆಗಾ ಈವೆಂಟ್ಗೆ ಮುಂಚಿತವಾಗಿ ಬಿಸಿಸಿಐ ಅವರ ಮನವಿಯನ್ನು ಅನುಮೋದಿಸಿದೆ ಎಂದು ವರದಿಯಾಗಿದೆ.

Continue Reading

ಕ್ರೀಡೆ

Mitchell Starc : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​

Mitchell Strac :ಸ್ಟಾರ್ಕ್ ಅವರ ಪತ್ನಿ ಆಸ್ಟ್ರೇಲಿಯಾ ಮಹಿಳೆಯರ ತಂಡದ ವಿಕೆಟ್​ ಕೀಪರ್ ಬ್ಯಾಟರ್​ ಅಲಿಸ್ಸಾ ಹೀಲಿ ಕೂಡ ಪಂದ್ಯಗಳ ಸಮಯದಲ್ಲಿ ತಮ್ಮ ಪತಿಯನ್ನು ಹುರಿದುಂಬಿಸಲು ಆಗಮಿಸಿದ್ದರು. ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿಯೂ ಆಗಿರುವ ಹೀಲಿ, ವಾಂಖೆಡೆ ಕ್ರೀಡಾಂಗಣದಲ್ಲಿ ಹಾರ್ದಿಕ್ ಪಾಂಡ್ಯ ಅವರ ಮುಂಬೈ ಇಂಡಿಯನ್ಸ್ ವಿರುದ್ಧದ ಕೆಕೆಆರ್ ಪಂದ್ಯದ ವೇಳೆ ಮೊದಲ ಬಾರಿಗೆ ಕಾಣಿಸಿಕೊಂಡರು.

VISTARANEWS.COM


on

Mitchell Starc
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ (IPL 2024) ಪುನರಾಗಮನ ಮಾಡಲು ಸಹಾಯ ಮಾಡಿದ ಪತ್ನಿ ಅಲಿಸ್ಸಾ ಹೀಲಿ ಅವರನ್ನು ಮಿಚೆಲ್ ಸ್ಟಾರ್ಕ್ ಶ್ಲಾಘಿಸಿದ್ದಾರೆ. ಆಸ್ಟ್ರೇಲಿಯಾದ ಎಡಗೈ ವೇಗದ ಬೌಲರ್ 24.75 ಕೋಟಿ ರೂ.ಗೆ ಖರೀದಿಸಿದ ನಂತರ ಅವರ ಹೆಗಲ ಮೇಲೆ ಭಾರಿ ನಿರೀಕ್ಷೆಗಳಿದ್ದವು. ವಾಸ್ತವವಾಗಿ, ಅವರು ನಗದು ಶ್ರೀಮಂತ ಟಿ 20 ಲೀಗ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ. ಆದಾಗ್ಯೂ, ಅವರು ತಮ್ಮ ಮೊದಲ 2 ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆಯದೆ 12.50 ಎಕಾನಮಿ ದರದಲ್ಲಿ 100 ರನ್​ಗಳನ್ನು ಸೋರಿಕೆ ಮಾಡಿದ ನಂತರ ಅವರು ತಮ್ಮ ಕಷ್ಟದ ಸಮಯವನ್ನು ಎದುರಿಸದಿರು. ಲೀಗ್ ಹಂತದ ಕೊನೆಯ ಹಂತದಲ್ಲಿ ಫಾರ್ಮ್​ ಕಂಡುಕೊಳ್ಳುವ ಮೂಲಕ ಟೀಕಾಕಾರರಿಗೆ ಉತ್ತರ ನೀಡಿದರು.

ಸ್ಟಾರ್ಕ್ ಅವರ ಪತ್ನಿ ಆಸ್ಟ್ರೇಲಿಯಾ ಮಹಿಳೆಯರ ತಂಡದ ವಿಕೆಟ್​ ಕೀಪರ್ ಬ್ಯಾಟರ್​ ಅಲಿಸ್ಸಾ ಹೀಲಿ ಕೂಡ ಪಂದ್ಯಗಳ ಸಮಯದಲ್ಲಿ ತಮ್ಮ ಪತಿಯನ್ನು ಹುರಿದುಂಬಿಸಲು ಆಗಮಿಸಿದ್ದರು. ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿಯೂ ಆಗಿರುವ ಹೀಲಿ, ವಾಂಖೆಡೆ ಕ್ರೀಡಾಂಗಣದಲ್ಲಿ ಹಾರ್ದಿಕ್ ಪಾಂಡ್ಯ ಅವರ ಮುಂಬೈ ಇಂಡಿಯನ್ಸ್ ವಿರುದ್ಧದ ಕೆಕೆಆರ್ ಪಂದ್ಯದ ವೇಳೆ ಮೊದಲ ಬಾರಿಗೆ ಕಾಣಿಸಿಕೊಂಡರು. ಅಂದಿನಿಂದ ಸ್ಟಾರ್ಕ್ ಹಿಂತಿರುಗಿ ನೋಡಿಲ್ಲ. ಹೀಲಿಯ ಉಪಸ್ಥಿತಿಯು ತನ್ನ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಸ್ಟಾರ್ಕ್ ಹೇಳಿದರು.

“ಅಲಿಸ್ಸಾ ಬಂದ ನಂತರ ಎಲ್ಲವೂ ಉತ್ತಮವಾಗಿ ಸಾಗಿದೆ ” ಎಂದು ಸ್ಟಾರ್ಕ್ ಸ್ಟಾರ್ ಸ್ಪೋರ್ಟ್ಸ್​ಗೆ ತಿಳಿಸಿದ್ದಾರೆ.

ಸ್ಟಾರ್ಕ್ ಅತ್ಯುತ್ತಮ ಪ್ರದರ್ಶನ

ಪ್ಲೇಆಫ್ ಮತ್ತು ಫೈನಲ್​ನಲ್ಲಿ ಸ್ಟಾರ್ಕ್ ತಮ್ಮನ್ನು ತಾವು ಅತ್ಯುತ್ತಮ ಆಟಗಾರ ಎಂಬುದನ್ನು ಸಾಬೀತು ಮಾಡಿದರು. ಅಹಮದಾಬಾದ್​​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎಸ್​ಆರ್​ಎಚ್​​ ವಿರುದ್ಧದ ಕ್ವಾಲಿಫೈಯರ್ 1 ರಲ್ಲಿ, ನೈಟ್ ರೈಡರ್ಸ್ 8 ವಿಕೆಟ್​ಗಳಿಂದ ಗೆದ್ದ ನಂತರ ಸ್ಟಾರ್ಕ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ಸ್ಟಾರ್ಕ್ ಟ್ರಾವಿಸ್ ಹೆಡ್ ಅವರನ್ನು ಬೌಲ್ಡ್ ಮಾಡಿ ಮಿಂಚಿದ್ದರು. ಅ ಪಂದ್ಯದಲ್ಲಿ 4 ಓವರ್​ಗಳಲ್ಲಿ 34 ರನ್ ಬಿಟ್ಟುಕೊಟ್ಟು 3 ವಿಕೆಟ್​ ಪಡೆದುಕೊಂಡಿದ್ದರು.

ಇದನ್ನೂ ಓದಿ: Mitchell Strac : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​ 

ಫೈನಲ್​ನಲ್ಲಿ ಸ್ಟಾರ್ಕ್ ತಮ್ಮ ಫಾರ್ಮ್ ಅನ್ನು ಮುಂದುವರಿಸಿದರು. ಮತ್ತೆ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದರು. ಈ ಬಾರಿ, ಅವರು 3-0-14-2 ರ ಅತ್ಯುತ್ತಮ ಸ್ಪೆಲ್ ಎಸೆದರು, ನೈಟ್ ರೈಡರ್ಸ್ ಫೈನಲ್​ನಲ್ಲಿ 8 ವಿಕೆಟ್​ಗಳಿಂದ ಗೆದ್ದು ಮೂರನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದಿತು. 14 ಪಂದ್ಯಗಳನ್ನಾಡಿರುವ 34ರ ಹರೆಯದ ಸ್ಟಾರ್ಕ್ 10.61ರ ಎಕಾನಮಿ ರೇಟ್ನಲ್ಲಿ 17 ವಿಕೆಟ್​​ ಕಬಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Sunil Narine : ಐಪಿಎಲ್​ 2024ರ ‘ಮೌಲ್ಯಯುತ ಆಟಗಾರ ಪ್ರಶಸ್ತಿ’ ಗೆದ್ದು ಹೊಸ ದಾಖಲೆ ಬರೆದ ಸುನಿಲ್ ನರೈನ್​​

Sunil Narine : ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ನೈಟ್ ರೈಡರ್ಸ್ ಒಟ್ಟು ಮೂರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವನ್ನು ಏಕಪಕ್ಷೀಯ ಮುಖಾಮುಖಿಯಲ್ಲಿ ಸೋಲಿಸಿತು. 114 ರನ್​ಗಳ ಗುರಿ ಬೆನ್ನಟ್ಟಿದ ಕೆಕೆಆರ್​ 10.3 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

VISTARANEWS.COM


on

Sunil Narine
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧ ಗೆಲುವು ಸಾಧಿಸಿದ ನಂತರ ಕೋಲ್ಕತಾ ನೈಟ್ ರೈಡರ್ಸ್ (KKR) ಆಲ್​ರೌಂಡರ್​ ಸುನಿಲ್ ನರೈನ್ ಇತಿಹಾಸ ನಿರ್ಮಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಮೂರು ಬಾರಿ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಸುನಿಲ್ ನರೈನ್ ಪಾತ್ರರಾಗಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ನೈಟ್ ರೈಡರ್ಸ್ ಒಟ್ಟು ಮೂರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವನ್ನು ಏಕಪಕ್ಷೀಯ ಮುಖಾಮುಖಿಯಲ್ಲಿ ಸೋಲಿಸಿತು. 114 ರನ್​ಗಳ ಗುರಿ ಬೆನ್ನಟ್ಟಿದ ಕೆಕೆಆರ್​ 10.3 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಸುನಿಲ್ ನರೈನ್ ಸಾಧನೆ

ಕೋಲ್ಕತಾ ನೈಟ್ ರೈಡರ್ಸ್​ ತಂಡ ಮೂರು ಪ್ರಶಸ್ತಿ ವಿಜೇತ ಅಭಿಯಾನಗಳ ಭಾಗವಾಗಿರುವ ಏಕೈಕ ಆಟಗಾರ ಸುನಿಲ್ ನರೈನ್. ಸ್ಪಿನ್ ಬೌಲರ್ 2012 ರ ಋತುವಿನಿಂದಲೂ ನೈಟ್ ರೈಡರ್ಸ್ ಜೊತೆಗಿದ್ದಾರೆ. 36 ವರ್ಷದ ಕ್ರಿಕೆಟರ್ ಗೌತಮ್ ಗಂಭೀರ್ ನಾಯಕತ್ವದಲ್ಲಿ 2012 ಮತ್ತು 2014ರಲ್ಲಿ ಪ್ರಶಸ್ತಿ ಗೆಲ್ಲುವ ಅಭಿಯಾನದ ಭಾಗವಾಗಿದ್ದರು.

ಇತ್ತೀಚೆಗೆ ಮುಕ್ತಾಯಗೊಂಡ ಪಂದ್ಯಾವಳಿಯಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ನೀಡಿದ ಕೊಡುಗೆಗಳಿಗಾಗಿ ಸುನಿಲ್ ನರೈನ್ ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಚಪಡೆದರು. ಈ ಹಿಂದೆ 2012 ಮತ್ತು 2018ರಲ್ಲಿ ಪ್ರಶಸ್ತಿ ಗೆದ್ದಿದ್ದ ನರೈನ್​​ ಇದು ಐಪಿಎಲ್ ಇತಿಹಾಸದಲ್ಲಿ ಮೂರನೇ ಪ್ರಶಸ್ತಿಯಾಗಿದೆ. ಐಪಿಎಲ್ ಇತಿಹಾಸದಲ್ಲಿ ಮೂರು ಬಾರಿ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್​ ಯಶಸ್ಸಿನ ಖುಷಿ; ಪಿಚ್ ಸಿದ್ಧಪಡಿಸಿದವರಿಗೂ 25 ಲಕ್ಷ ರೂ. ಇನಾಮು ಕೊಟ್ಟ ಬಿಸಿಸಿಐ!

ಐಪಿಎಲ್ 2024 ರಲ್ಲಿ, ನರೈನ್ ಅವರನ್ನು ನೈಟ್ ರೈಡರ್ಸ್ ಪರ ಆರಂಭಿಕ ಸ್ಥಾನಕ್ಕೆ ಬಡ್ತಿ ನೀಡಲಾಯಿತು. ಪಂದ್ಯಾವಳಿಯಲ್ಲಿ ಫಿಲ್ ಸಾಲ್ಟ್ ಅವರೊಂದಿಗೆ ಆಕ್ರಮಣಕಾರಿ ಆರಂಭವನ್ನು ನೀಡಿದರು. ಎಡಗೈ ಬ್ಯಾಟ್ಸ್ಮನ್ 15 ಪಂದ್ಯಗಳಲ್ಲಿ 34.85 ಸರಾಸರಿಯಲ್ಲಿ 488 ರನ್ ಗಳಿಸಿದ್ದಾರೆ ಮತ್ತು 180.74 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಮೂರು ಅರ್ಧಶತಕಗಳು ಸೇರಿವೆ.

ಟ್ರಿನಿಡಾಡ್​ನ ಆಟಗಾರ 21.64ರ ಸರಾಸರಿಯಲ್ಲಿ 17 ವಿಕೆಟ್​​ ಕಬಳಿಸಿದ್ದಾರೆ. ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಮತ್ತು ಆಂಡ್ರೆ ರಸೆಲ್ ನಂತರ ನರೈನ್ ಕೆಕೆಆರ್ ಪರ ನಾಲ್ಕನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಅಂತಿಮ ಪಂದ್ಯದಲ್ಲಿ ಸ್ಪಿನ್ನರ್ ನಾಲ್ಕು ಓವರ್ ಗಳಲ್ಲಿ ಕೇವಲ 16 ರನ್ ಗಳಿಗೆ ಒಂದು ವಿಕೆಟ್ ಪಡೆದರು.

ಇದು 2012 ರಂತೆ ಭಾಸವಾಯಿತು – ಸುನಿಲ್ ನರೈನ್

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸುನಿಲ್ ನರೈನ್, ಪ್ರಶಸ್ತಿ ಗೆಲ್ಲಲು ಕೆಕೆಆರ್ ಆಟದ ಪ್ರತಿಯೊಂದು ಅಂಶದಲ್ಲೂ ಉತ್ತಮವಾಗಿ ಸಿದ್ಧವಾಗಿದೆ ಎಂದು ಹೇಳಿದರು. ಫೈನಲ್​ನಲ್ಲಿ ಫಿಲ್ ಸಾಲ್ಟ್ ಇಲ್ಲದಿರುವುದನ್ನು ಆಲ್​ರೌಂಡರ್​​ ಒಪ್ಪಿಕೊಂಡರು ಮತ್ತು ರಹಮಾನುಲ್ಲಾ ಗುರ್ಬಾಜ್ ಅವರ ಕೊಡುಗೆಯನ್ನು ಶ್ಲಾಘಿಸಿದರು.

ಇಂದು ಮೈದಾನಕ್ಕೆ ಬಂದಾಗ, ಇದು 2012 ರಂತೆ ಭಾಸವಾಯಿತು. ಭಾವನೆ ಮಿತಿ ಮೀರಿದೆ. ಇದಕ್ಕಿಂತ ಉತ್ತಮವಾದ ಹುಟ್ಟುಹಬ್ಬದ ಉಡುಗೊರೆಯನ್ನು ನಾನು ನಿರೀಕ್ಷಿಸಲು ಸಾಧ್ಯವಿಲ್ಲ. ನಾನು ಈ ಸಮಯದಲ್ಲಿ ನನ್ನ ಕ್ರಿಕೆಟ್ ಅನ್ನು ಆನಂದಿಸುತ್ತಿದ್ದೇನೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್. ತಂಡ ಗೆದ್ದಾಗ ಎಲ್ಲವೂ ಸಹಾಯವಾಗುತ್ತದೆ ಎಂದು ನರೈನ್ ಹೇಳಿದರು.

Continue Reading
Advertisement
Karan Johar announces Dhadak 2
ಬಾಲಿವುಡ್13 mins ago

Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

snake bite in chikkamagaluru
ಕ್ರೈಂ14 mins ago

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

PM Narendra Modi
ಕರ್ನಾಟಕ18 mins ago

PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

IPL 2024
ಪ್ರಮುಖ ಸುದ್ದಿ28 mins ago

IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

Prajwal revanna Case
ಕರ್ನಾಟಕ30 mins ago

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Munawar Faruqui gets married for second timeʼ Munawar Faruqui gets married for second timeʼ
ಬಾಲಿವುಡ್43 mins ago

Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

Congress Kutumba programme to strengthen organization at booth level says DCM DK Shivakumar
ಬೆಂಗಳೂರು51 mins ago

Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

Virat kohli
ಪ್ರಮುಖ ಸುದ್ದಿ54 mins ago

Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

Road Accident
ಚಿಕ್ಕಮಗಳೂರು57 mins ago

Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ಹಿಮಾಲಯ book cover page launch 2
ಪ್ರಮುಖ ಸುದ್ದಿ57 mins ago

ಗುರು ಸಕಲಮಾ ಆತ್ಮಕಥನ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳುʼ ಮುಖಪುಟ ಅನಾವರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು24 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌