IPL 2023: ಆರೆಂಜ್​ ಕ್ಯಾಪ್​ ರೇಸ್​ನಲ್ಲಿ ಡು ಪ್ಲೆಸಿಸ್​ ಹಿಂದಿಕ್ಕಿ ಅಗ್ರಸ್ಥಾನ ಪಡೆದ ಗಿಲ್​ - Vistara News

ಕ್ರಿಕೆಟ್

IPL 2023: ಆರೆಂಜ್​ ಕ್ಯಾಪ್​ ರೇಸ್​ನಲ್ಲಿ ಡು ಪ್ಲೆಸಿಸ್​ ಹಿಂದಿಕ್ಕಿ ಅಗ್ರಸ್ಥಾನ ಪಡೆದ ಗಿಲ್​

ಶುಭಮನ್​ ಗಿಲ್​ ಅವರು ಮುಂಬೈ ವಿರುದ್ಧ ಶತಕ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಮೂರನೇ ಶತಕವನ್ನು ದಾಖಲಿಸಿದರು.

VISTARANEWS.COM


on

Narendra Modi Stadium at Ahmedabad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಮುಂಬೈ ಇಂಡಿಯನ್ಸ್​ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಮಿಂಚಿದ ಶುಭಮನ್​ ಗಿಲ್​ ಅವರು ಈ ಬಾರಿಯ ಐಪಿಎಲ್​ನ​ ಆರೆಂಜ್​ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 730 ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದ ಡು ಪ್ಲೆಸಿಸ್ ಇದೀಗ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.

​ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಉಆಟಿಂಗ್​ ನಡೆಸಿದ ಗುಜರಾತ್​ ತಂಡ ಗಿಲ್​ ಅವರ ಶತಕದ ನೆರವಿನಿಂದ ಬೃಹತ್​ ಮೊತ್ತ ಕಲೆಹಾಕಿತು. ಈ ಪಂದ್ಯದಲ್ಲಿ 8 ರನ್​ ಗಳಿಸಿದ ವೇಳೆ ಗಿಲ್​ ಅವರು ಡು ಪ್ಲೆಸಿಸ್​ ಅವರನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ವಶಪಡಿಸಿಕೊಂಡರು. ಸದ್ಯ ಗಿಲ್​ ಅವರು 851 ರನ್​ ಬಾರಿಸಿದ್ದಾರೆ. ಆರ್​ಸಿಬಿ ತಂಡ ಸೋಲು ಹೊರ ಬಿದ್ದ ಕಾರಣ ಡು ಪ್ಲೆಸಿಸ್​ಗೆ ಇನ್ನು ಗಿಲ್​ ದಾಖಲೆ ಮುರಿಯುವ ಅವಕಾಶವಿಲ್ಲ. ಸದ್ಯ ಈ ರೇಸ್​ನಲ್ಲಿರುವ ಆಟಗಾರನೆಂದರೆ ಚೆನ್ನೈ ತಂಡದ ಡೆವೋನ್​ ಕಾನ್ವೆ. 15 ಪಂದ್ಯ ಆಡಿರುವ ಅವರು 625 ರನ್​ ಬಾರಿಸಿದ್ದಾರೆ. ಫೈನಲ್​ ಪಂದ್ಯ ಬಾಕಿ ಇದ್ದರೂ ಅವರಿಗೆ ಈ ಮೊತ್ತವನ್ನು ಗಳಿಸಲು ಅಸಾಧ್ಯ. ಹೀಗಾಗಿ ಈ ಬಾರಿಯ ಆರೆಂಜ್​ ಕ್ಯಾಪ್​ ಗಿಲ್​ ಅವರಿಗೆ ಸಿಗುವುದು 100 ಪ್ರತಿಶತವಾಗಿದೆ.

800 ರನ್​ಗಳ ಗಡಿ ದಾಡಿದ ವೇಳೆ ಗಿಲ್​ ಅವರು ಮತ್ತೊಂದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದರು. ಒಂದೇ ಆವೃತ್ತಿಯ ಐಪಿಎಲ್​ನಲ್ಲಿ 800 ರನ್​ ಬಾರಿಸಿದ ನಾಲ್ಕನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾದರು. ವಿರಾಟ್​ ಕೊಹ್ಲಿ, ಜಾಸ್​ ಬಟ್ಲರ್​ ಮತ್ತು ಡೇವಿಡ್​ ವಾರ್ನರ್​ ಈ ಸಾಧನೆ ಮಾಡಿದ ಮೊದಲಿಗರು.

ಇದನ್ನೂ ಓದಿ IPL 2023: ಗಿಲ್​ ಶತಕದ ಕಮಾಲ್​; ಮುಂಬೈಗೆ ಬೃಹತ್​ ಮೊತ್ತದ ಗುರಿ

31 ರನ್​ ಗಳಿಸಿದ್ದ ವೇಳೆ ಟಿಮ್​ ಡೇವಿಡ್​ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದ ಗಿಲ್​ ಇದರ ಸಂಪೂರ್ಣ ಲಾಭವೆತ್ತಿ ಶತಕ ಸಿಡಿಸಿ ಸಂಭ್ರಮಿಸಿದರು. 60 ಎಸೆತ ಎದುರಿಸಿದ ಗಿಲ್​ ಬರೊಬ್ಬರಿ 10 ಸಿಕ್ಸರ್​ ಮತ್ತು 7 ಬೌಂಡರಿ ನೆರವಿನಿಂದ 129 ರನ್​ ಗಳಿಸಿದರು.​ ಗಿಲ್​ ಅವರು ಬಾರಿಸಿದ ಮೂರನೇ ಐಪಿಎಲ್​ ಶತಕ ಇದಾಗಿದೆ. ಈ ಮೂರು ಶತಕಗಳು ಈ ಆವೃತ್ತಿಯಲ್ಲಿಯೇ ದಾಖಲಾಗಿದ್ದು ವಿಶೇಷ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಐಪಿಎಲ್ 2024

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

IPL 2024: IPL 2024: ಹೈದರಾಬಾದ್‌ನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಇದರ ಮಧ್ಯೆಯೇ, ಹೈದರಾಬಾದ್‌ ಫ್ಯಾನ್ಸ್‌ಗೆ ಆರ್‌ಸಿಬಿ ಫ್ಯಾನ್ಸ್‌ ತಿರುಗೇಟು ನೀಡಿದ್ದಾರೆ.

VISTARANEWS.COM


on

IPL 2024
Koo

ಹೈದರಾಬಾದ್:‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2024) ಎಂದರೆ, ಅದು ಸ್ಟೇಡಿಯಂನಲ್ಲಿ ಕೇವಲ ಆಟಗಾರರ ನಡುವಿನ ಕಾಳಗ ಅಲ್ಲ. ಮೈದಾನದಲ್ಲಿ ಪಂದ್ಯ ಕುತೂಹಲ ಹಂತ ತಲುಪಿದಾಗ, ಯಾವುದೇ ತಂಡ ಸೋತಾಗ ಎದುರಾಳಿ ತಂಡದ ಅಭಿಮಾನಿಗಳು ಕೂಡ ತಿರುಗೇಟು ನೀಡುತ್ತಾರೆ. ಅದರಲ್ಲೂ, ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮೈದಾನದಲ್ಲೂ ಅಥವಾ ಹೊರಗೂ ಜೋರಾಗಿರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು (RCB Fans) ಎಸ್‌ಆರ್‌ಎಚ್‌ ಅಭಿಮಾನಿಗಳ (SRH Fans) ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡಿದ್ದಾರೆ.

ಹೌದು, ಪ್ರಸಕ್ತ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಎಸ್‌ಆರ್‌ಎಚ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋಲನುಭವಿಸಿದ್ದಾಗ ಎಸ್‌ಆರ್‌ಎಚ್‌ ಅಭಿಮಾನಿಗಳು ಸುಮ್ಮನಿರಿ, ಬಾಯಿಮುಚ್ಚಿ ಎಂಬ ರೀತಿಯಲ್ಲಿ ಸನ್ನೆ ಮಾಡಿದ್ದರು. ಇದು ಸಹಜವಾಗಿಯೇ ಆರ್‌ಸಿಬಿ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ, ಗುರುವಾರ (ಏಪ್ರಿಲ್‌ 25) ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಇದಾದ ಬಳಿಕ ಆರ್‌ಸಿಬಿ ಅಭಿಮಾನಿಗಳು ಕೂಡ ಗಪ್‌ ಚುಪ್‌ ಎಂಬ ಸನ್ನೆ ಮಾಡುವ ಮೂಲಕ ಎಸ್‌ಆರ್‌ಎಚ್‌ ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು. ಬೌಲಿಂಗ್‌ನಲ್ಲಿ ಪರಾಕ್ರಮ ತೋರಿದ ಆರ್‌ಸಿಬಿ ಬೌಲರ್‌ಗಳು ತಂಡಕ್ಕೆ 35 ರನ್‌ಗಳ ಗೆಲುವು ತಂದುಕೊಟ್ಟರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Continue Reading

ಪ್ರಮುಖ ಸುದ್ದಿ

IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

IPL 2024: ಇಲ್ಲಿನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು.

VISTARANEWS.COM


on

IPL 2024
Koo

ಹೈದರಾಬಾದ್​: ಆರ್​ಸಿಬಿ ತಂಡದ ದುರ್ಬಲ ಬೌಲಿಂಗ್ ವಿಭಾಗ ಕೊನೆಗೂ ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ತನ್ನ ಪ್ರತಾಪ ತೋರಿಸಿತು. ಹೀಗಾಗಿ ಬೆಂಗಳೂರು ಮೂಲದ ತಂಡ ಹಾಲಿ ಆವೃತ್ತಿಯ ಐಪಿಎಲ್​ನಲ್ಲಿ 2ನೇ ವಿಜಯಕ್ಕೆ ಪಾತ್ರವಾಯಿತು. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 35 ರನ್​ಗಳ ಭರ್ಜರಿ ಅಂತರದ ಗೆಲುವನ್ನು ತನ್ನದಾಗಿಸಿಕೊಂಡಿತು. ಇದು ಆರ್​ಸಿಬಿ ತಂಡಕ್ಕೆ ಸತತ ಆರು ಸೋಲುಗಳ ಬಳಿಕ ಸಿಕ್ಕ ಗೆಲುವಿನ ಓಯಸಿಸ್​. ಗೆದ್ದ ಆರ್​​ಸಿಬಿ ತಂಡದ ಆಟಗಾರರ ಮುಖದಲ್ಲಿ ನಗು ಮೂಡಿರಲಿಲ್ಲ. ಆದರೆ, ಆರ್​​ಸಿಬಿಯನ್ನೇ ನೆಚ್ಚಿನ ತಂಡವಾಗಿ ಆಯ್ಕೆ ಮಾಡಿಕೊಂಡಿದ್ದ ಲಕ್ಷಾಂತರ ಅಭಿಮಾನಿಗಳ ಮುಖಯದಲ್ಲಿ ಖುಷಿಯ ಛಾಯೆ ಕಂಡು ಬಂತು.

ಇಲ್ಲಿನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು. ಆದಾಗ್ಯೂ ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇನ್ನೂ 10ನೇ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಎಸ್​ಆರ್​ಎಚ್​ ಟೂರ್ನಿಯಲ್ಲಿ 3ನೇ ಸೋಲಿಗೆ ಒಳಗಾಯಿತು ಹಾಗೂ ಮೂರನೇ ಸ್ಥಾನದಲ್ಲಿ ಉಳಿಯಿತು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು.

ಇದನ್ನೂ ಓದಿ: World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

ಬ್ಯಾಟಿಂಗ್​ನಲ್ಲಿ ಭರ್ಜರಿ ಶಕ್ತಿ ಹೊಂದಿದ್ದ ಎಸ್​ಆರ್​ಎಚ್​ ತಂಡಕ್ಕೆ ಈ ಮೊತ್ತ ಸವಾಲು ಆಗಿರಲಿಲ್ಲ. ಆದಾಗ್ಯೂ ಆರಂಭದಲ್ಲಿಯೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಆರ್​ಸಿಬಿ ಬೌಲರ್​ಗಳಾದ ಸ್ವಪ್ನಿಲ್​ ಸಿಂಗ್​, ಕರಣ್​ ಶರ್ಮಾ ಹಾಗೂ ಕ್ಯಾಮೆರಾನ್​ ಗ್ರೀನ್​ ಅವರ ತಲಾ 2 ವಿಕೆಟ್​ಗಳ ಬಲದಿಂದಾಗಿ ಆರ್​​ಸಿಬಿ ಎದುರಾಳಿ ತಂಡದ ಬಲವನ್ನು ಕುಗ್ಗಿಸಿರು. ಶಹಬಾಜ್​ ಅಹಮದ್​ 40 ರನ್ ಬಾರಿಸಿ ಎಸ್ಆರ್​ಎಚ್​ ಪರ ಗರಿಷ್ಠ ಸ್ಕೋರರ್​​ ಎನಿಸಿಕೊಂಡರು.

Continue Reading

ಕ್ರೀಡೆ

World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

World Record: ರೋಹ್ಮಾಲಿಯಾ ರೋಮಾಲಿಯಾ ಅವರ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಐದನೇ ಟಿ 20 ಐ ಪಂದ್ಯದಲ್ಲಿ ಮಂಗೋಲಿಯಾ ವಿರುದ್ಧ ಇಂಡೋನೇಷ್ಯಾ ತಂಡಕ್ಕೆ ಗೆಲುವು ತಂದುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಡೋನೇಷ್ಯಾ 5 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತ್ತು. ನಿ ಪುಟು ಆಯು ನಂದಾ ಸಕಾರಿನಿ 44 ಎಸೆತಗಳಲ್ಲಿ 61 ರನ್ ಗಳಿಸಿದರು. ಉತ್ತರವಾಗಿ ಮಂಗೋಲಿಯಾ 16.2 ಓವರ್ ಗಳಲ್ಲಿ 24 ರನ್ ಗಳಿಗೆ ಆಲೌಟ್ ಆಯಿತು.

VISTARANEWS.COM


on

world record
Koo

ಬೆಂಗಳೂರು: ಇಂಡೋನೇಷ್ಯಾದ ಮಹಿಳಾ ಕ್ರಿಕೆಟ್ ತಂಡದ (Indonesian women’s cricket team) ಯುವ ಬೌಲರ್ ರೋಹ್ಮಾಲಿಯಾ ರೊಹ್ಮಾಲಿಯಾ ಟಿ 20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿಅಂಶಗಳನ್ನು ದಾಖಲಿಸುವ ಮೂಲಕ ಇತಿಹಾಸ (World Record) ಬರೆದಿದ್ದಾರೆ. ಮಂಗೋಲಿಯಾ ವಿರುದ್ಧದ ನಾಲ್ಕನೇ ಟಿ 20ಐ ಪಂದ್ಯದಲ್ಲಿ 17 ವರ್ಷದ ಆಫ್-ಸ್ಪಿನ್ನರ್ 3.2-3-0-7 ಅಂಕಿ ಅಂಶಗಳೊಂದಿಗೆ ದಾಖಲೆ ಮಾಡಿದ್ದಾರೆ. 2021ರಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಯುರೋಪ್ ರೀಜನ್ ಕ್ವಾಲಿಫೈಯರ್​ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ 4-2-3-7 ಬೌಲಿಂಗ್ ಸಾಧನೆ ಮಾಡಿದ್ದ ನೆದರ್ಲ್ಯಾಂಡ್ಸ್​​ನ ಫ್ರೆಡೆರಿಕ್ ಓವರಿಡ್ಜಿಕ್​ ಅವರ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. ಒಟ್ಟಾರೆಯಾಗಿ, ರೋಹ್ಮಾಲಿಯಾ ಟಿ 20 ಐ ಪಂದ್ಯದಲ್ಲಿ 7 ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅರ್ಜೆಂಟೀನಾದ ಅಲಿಸನ್ ಸ್ಟಾಕ್ಸ್, ಮಲೇಷ್ಯಾದ ಸಯಾಜ್ರುಲ್ ಎಜಾತ್ ಇಡ್ರಸ್ ಇತರ ಇಬ್ಬರು ಸಾಧಕರು.

2019 ರಲ್ಲಿ ಮಾಲ್ಡೀವ್ಸ್ ವಿರುದ್ಧ ನೇಪಾಳದ ಅಂಜಲಿ ಚಂದ್ ಅವರ 2.1-2-0-6 (ರನ್​ ನೀಡದೇ 6 ವಿಕೆಟ್ ಉರುಳಿಸಿದ್ದು) ಸಾಧನೆಯನ್ನು ರೋಹ್ಮಾಲಿಯಾ ಮೀರಿಸಿದ್ದಾರೆ.

ಟಿ 20 ಪಂದ್ಯಗಳಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿಅಂಶಗಳು (ಪುರುಷರು ಮತ್ತು ಮಹಿಳೆಯರು):

  • ರೋಹ್ಮಾಲಿಯಾ ರೊಹ್ಮಾಲಿಯಾ (ಇಂಡೋನೇಷ್ಯಾ ಮಹಿಳೆಯರ ತಂಡ): ಮಂಗೋಲಿಯಾ ವಿರುದ್ಧ 3.2-3-0-7 (2024ರಲ್ಲಿ)
  • ಫ್ರೆಡೆರಿಕ್ ಓವರ್ಡಿಜ್ಕ್ (ನೆದರ್ಲ್ಯಾಂಡ್ಸ್ ಮಹಿಳಾ ತಂಡ): ಫ್ರಾನ್ಸ್ ವಿರುದ್ಧ 4-2-3-7 (2021ರಲ್ಲಿ)
  • ಅಲಿಸನ್ ಸ್ಟಾಕ್ಸ್ (ಅರ್ಜೆಂಟೀನಾ ಮಹಿಳೆಯರ ರಂಡ): ಪೆರು ವಿರುದ್ಧ 3.4-0-3-7, (2022 ರಲ್ಲಿ)
  • ಸಯಾಜ್ರುಲ್ ಎಜಾತ್ ಇದ್ರಸ್ (ಮಲೇಷ್ಯಾ ಪುರುಷರು): ಚೀನಾ ವಿರುದ್ಧ 4-1-8-7, (2023ರಲ್ಲಿ)

ರೋಹ್ಮಾಲಿಯಾ ರೋಮಾಲಿಯಾ ಅವರ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಐದನೇ ಟಿ 20 ಐ ಪಂದ್ಯದಲ್ಲಿ ಮಂಗೋಲಿಯಾ ವಿರುದ್ಧ ಇಂಡೋನೇಷ್ಯಾ ತಂಡಕ್ಕೆ ಗೆಲುವು ತಂದುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಡೋನೇಷ್ಯಾ 5 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತ್ತು. ನಿ ಪುಟು ಆಯು ನಂದಾ ಸಕಾರಿನಿ 44 ಎಸೆತಗಳಲ್ಲಿ 61 ರನ್ ಗಳಿಸಿದರು. ಉತ್ತರವಾಗಿ ಮಂಗೋಲಿಯಾ 16.2 ಓವರ್ ಗಳಲ್ಲಿ 24 ರನ್ ಗಳಿಗೆ ಆಲೌಟ್ ಆಯಿತು.

ಇದನ್ನೂ ಓದಿ: Ranji Trophy : ರಣಜಿ ಟ್ರೋಫಿ ಆಡುವವರಿಗೆ ಇನ್ನು ಮುಂದೆ ಒಂದು ಕೋಟಿ ರೂ. ವೇತನ!

ಏಪ್ರಿಲ್ 27 ರಂದು ಕೀರ್ತಿಪುರದಲ್ಲಿ ಪ್ರಾರಂಭವಾಗುವ ಆತಿಥೇಯರ ವಿರುದ್ಧದ ಐದು ಪಂದ್ಯಗಳ ಟಿ 20 ಸರಣಿಗೆ ಮುಂಚಿತವಾಗಿ ವೆಸ್ಟ್ ಇಂಡೀಸ್ ‘ಎ’ ಕ್ರಿಕೆಟ್ ತಂಡ ಬುಧವಾರ ನೇಪಾಳಕ್ಕೆ ಆಗಮಿಸಿದೆ. ಆದಾಗ್ಯೂ, ಕಠ್ಮಂಡು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಆಟಗಾರರೇ ಲಗೇಜ್​ಗಳನ್ನು ವಿಲೋಡ್ ಮಾಡುವ ಪರಿಸ್ಥಿತಿ ಎದುರಾಯಿತು.

ವೈರಲ್ ಆಗಿರುವ ವೀಡಿಯೊದಲ್ಲಿ, ವೆಸ್ಟ್ ಇಂಡೀಸ್ ಆಟಗಾರರು ಕಿಟ್ ಬ್ಯಾಟ್​​ಗಳು ಮತ್ತು ಸೂಟ್​ಕೇಸ್​ಗಳನ್ನು ಒಂದರ ಮೇಲೊಂದರಂತೆ ರಾಶಿ ಹಾಕುತ್ತಿದ್ದ ದೃಶ್ಯ ಕಂಡು ಬಂತು.

Continue Reading

ಪ್ರಮುಖ ಸುದ್ದಿ

Ranji Trophy : ರಣಜಿ ಟ್ರೋಫಿ ಆಡುವವರಿಗೆ ಇನ್ನು ಮುಂದೆ ಒಂದು ಕೋಟಿ ರೂ. ವೇತನ!

VISTARANEWS.COM


on

Ranji Trophy
Koo

ಬೆಂಗಳೂರು: ದೇಶೀಯ ಕ್ರಿಕೆಟ್ ಅದರಲ್ಲೂ ರಣಜಿ ಕ್ರಿಕೆಟ್ (Ranji Trophy) ಟೂರ್ನಿಯನ್ನು ಕ್ರಿಕೆಟಿಗರಿಗೆ ಹೆಚ್ಚು ಆಕರ್ಷಕವಾಗಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗಿದೆ. ಆಟಗಾರರು ದೇಶೀಯ ಕ್ರಿಕೆಟ್​​ಗೆ ಸೂಕ್ತ ಪ್ರಾಮುಖ್ಯತೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ಮಂಡಳಿಯು ಇತ್ತೀಚಿನ ದಿನಗಳಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೀಗ ವೇತನ ಹೆಚ್ಚಳದ ದೊಡ್ಡ ಆಫರ್​ ಕೊಡಲಿದ್ದು, ದೇಶೀಯ ಕ್ರಿಕೆಟ್ ಆಡವ ಪ್ರತಿಯೊಬ್ಬರಿಗೆ ವರ್ಷಕ್ಕೆ 1 ಕೋಟಿ ವೇತನ ನೀಡುವ ಯೋಜನೆಯೊಂದು ಶುರುವಾಗಿದೆ.

ಈ ವರ್ಷದ ಆರಂಭದಲ್ಲಿ, ಬಿಸಿಸಿಐ ಆಟಗಾರರಿಗೆ ದೇಶಿಯ ಕ್ರಿಕೆಟ್​ನಲ್ಲಿ ಪಾಲ್ಗೊಳ್ಳಲೇ ಬೇಕು ಎಂದು ನಿರ್ದೇಶನ ನೀಡಿತು. ಜತೆಗೆ ಕ್ರಿಕೆಟಿಗರು ಟೀಮ್ ಇಂಡಿಯಾಕ್ಕಾಗಿ ಆಡದಿದ್ದಾಗ ತಮ್ಮ ರಾಜ್ಯ ತಂಡಗಳನ್ನು ಪ್ರತಿನಿಧಿಸುವುದನ್ನು ಕಡ್ಡಾಯಗೊಳಿಸಿತು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ತಮ್ಮನ್ನು ಫಿಟ್​ ಆಗಿರಿಸಿಕೊಳ್ಳುವ ಉದ್ದೇಶದಿಂದ ಹಲವಾರು ಆಟಗಾರರು ರಣಜಿ ಟ್ರೋಫಿಯಲ್ಲಿ ಆಡುವುದನ್ನು ತಪ್ಪಿಸಿಕೊಂಡ ನಂತರ ಮಂಡಳಿಯು ಈ ಕ್ರಮವನ್ನು ತೆಗೆದುಕೊಳ್ಳಬೇಕಾಯಿತು.

ಬಿಸಿಸಿಐ ಈಗ ದೇಶೀಯ ಆಟಗಾರರ ಸಂಭಾವನೆಯನ್ನು ಹೆಚ್ಚಿಸಲು ಯೋಚಿಸುತ್ತಿದೆ ಎಂದು ವರದಿಯಾಗಿದೆ. ಈ ವಿಷಯದ ಬಗ್ಗೆ ಮಂಡಳಿಯು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲವಾದರೂ, ಈ ಕಲ್ಪನೆಯನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡುವ ಜವಾಬ್ದಾರಿಯನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಗೆ ನೀಡಲಾಗಿದೆ.

ಕ್ರಿಕ್​ಬಜ್​ ವರದಿ ಪ್ರಕಾರ, ಪಂದ್ಯದ ಶುಲ್ಕ ಹೆಚ್ಚಳದ ಬಗ್ಗೆ ಬಿಸಿಸಿಐ ತಕ್ಷಣದ ಘೋಷಣೆ ಮಾಡುವ ಸಾಧ್ಯತೆಯಿಲ್ಲ. ಆದಾಗ್ಯೂ, ರಾಷ್ಟ್ರೀಯ ಆಯ್ಕೆ ಸಮಿತಿಯು ಈ ಪ್ರಸ್ತಾಪವನ್ನು ಚರ್ಚಿಸಿದೆ. ಸಂಭಾವನೆಯನ್ನು ಹೆಚ್ಚಿಸುವ ಮೂಲಕ, ಐಪಿಎಲ್ ಒಪ್ಪಂದಗಳನ್ನು ಹೊಂದಿರದ ದೇಶೀಯ ಆಟಗಾರರು ಆದಾಯದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಬಿಸಿಸಿಐ ಬಯಸಿದೆ.

ಕ್ರಿಕೆಟಿಗರ ವೇತನ ದುಪ್ಪಟ್ಟು ಮಾಡಲು ಬಿಸಿಸಿಐ ನಿರ್ಧಾರ

ಈ ವಿಷಯದ ಬಗ್ಗೆ ಬಿಸಿಸಿಐ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲವಾದರೂ, ದೇಶೀಯ ಕ್ರಿಕೆಟಿಗರ ಶುಲ್ಕವನ್ನು ದ್ವಿಗುಣಗೊಳಿಸಬೇಕು ಎಂದು ಸಂಬಂಧಪಟ್ಟ ಎಲ್ಲಾ ಪಾಲುದಾರರು ನಂಬಿದ್ದಾರೆ. ದೇಶೀಯ ಆಟಗಾರರು ಪ್ರತಿ ಋತುವಿನಲ್ಲಿ 10 ರಣಜಿ ಟ್ರೋಫಿ ಪಂದ್ಯಗಳನ್ನು ಆಡಿದರೆ ವಾರ್ಷಿಕವಾಗಿ 75 ಲಕ್ಷದಿಂದ 1 ಕೋಟಿ ರೂ.ಗಳವರೆಗೆ ಗಳಿಸಬೇಕು ಎಂಬ ಪ್ರಸ್ತಾಪವೂ ಇದೆ.

ಪ್ರಸ್ತುತ, ಒಬ್ಬ ಆಟಗಾರನು 40 ಕ್ಕಿಂತ ಹೆಚ್ಚು ರಣಜಿ ಪಂದ್ಯಗಳನ್ನು ಆಡಿದರೆ ದಿನಕ್ಕೆ 60,000 ರೂ., 21 ರಿಂದ 40 ಪಂದ್ಯಗಳನ್ನು ಆಡಿದವರಿಗೆ 50,000 ರೂ., 20 ಪಂದ್ಯಗಳಲ್ಲಿ ಕಾಣಿಸಿಕೊಂಡವರಿಗೆ 40,000 ರೂ. ಮತ್ತೊಂದೆಡೆ, ಮೀಸಲು ಆಟಗಾರರು ಆಯಾ ವಿಭಾಗಗಳಲ್ಲಿ 30,000, 25,000 ಮತ್ತು 20,000 ರೂ.ಗಳವರೆಗೆ ಪಡೆಯುತ್ತಾರೆ.

ಈಗಿರುವ ವೇತನ ಶ್ರೇಣಿಯ ಪ್ರಕಾರ, ಹಿರಿಯ ಆಟಗಾರನು ಫೈನಲ್ ತಲುಪಿದರೆ 25 ಲಕ್ಷ ರೂ.ಗಳವರೆಗೆ ಮತ್ತು ತಂಡದ ಇತರ ಆಟಗಾರರು 17 ಲಕ್ಷದಿಂದ 22 ಲಕ್ಷ ರೂ.ಗಳವರೆಗೆ ಗಳಿಸುತ್ತಾರೆ. ಮುಂಬರುವ ಋತುವಿನಿಂದ ದೇಶೀಯ ಆಟಗಾರರ ಗಳಿಕೆಯನ್ನು ಗಣನೀಯವಾಗಿ ಹೆಚ್ಚಿಸುವುದನ್ನು ಖಚಿತಪಡಿಸಿಕೊಳ್ಳಲು ಬಿಸಿಸಿಐ ಉತ್ಸುಕವಾಗಿದೆ.

ಆಟಗಾರರು ಕೆಂಪು ಚೆಂಡಿನ ಕ್ರಿಕೆಟ್ಗೆ ಆದ್ಯತೆ ನೀಡುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು ಬಿಸಿಸಿಐನ ಮುಖ್ಯ ಉದ್ದೇಶವಾಗಿದೆ. ಆಟಗಾರರ ಶುಲ್ಕವನ್ನು ಹೆಚ್ಚಿಸಲು ಹಲವಾರು ಭಾಗಗಳಿಂದ ಸಲಹೆಗಳು ಬಂದಿವೆ ಮತ್ತು ಮಂಡಳಿಯು ಅಂತಿಮವಾಗಿ ಅದರ ಮೇಲೆ ಕೆಲಸ ಮಾಡುತ್ತಿದೆ. ಕಳೆದ ತಿಂಗಳು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ನಿರ್ದಿಷ್ಟ ಋತುವಿನಲ್ಲಿ ನಿಗದಿತ ಟೆಸ್ಟ್ ಪಂದ್ಯಗಳಲ್ಲಿ 75% ಅಥವಾ ಅದಕ್ಕಿಂತ ಹೆಚ್ಚು ಆಡುವ ಆಟಗಾರರಿಗೆ ಪ್ರತಿ ಪಂದ್ಯಕ್ಕೆ 45 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು ಘೋಷಿಸಿದ್ದರು.

ಸುನಿಲ್ ಗವಾಸ್ಕರ್ ಸಲಹೆ ನೀಡಿದ್ದರು.

“ರಣಜಿ ಟ್ರೋಫಿ ಶುಲ್ಕವನ್ನು ದ್ವಿಗುಣಗೊಳಿಸಲು ಅಥವಾ ಮೂರು ಪಟ್ಟು ಹೆಚ್ಚಿಸಲು ಸಾಧ್ಯವಾದರೆ, ಖಂಡಿತವಾಗಿಯೂ ರಣಜಿ ಟ್ರೋಫಿ ಆಡುವ ಹೆಚ್ಚಿನ ಆಟಗಾರರು ಬರುತ್ತಾರೆ. ರಣಜಿ ಟ್ರೋಫಿಯಿಂದ ತಪ್ಪಿಸಿಕೊಳ್ಳುವುದಿಲ್ಲ ಏಕೆಂದರೆ ರಣಜಿ ಟ್ರೋಫಿ ಪಂದ್ಯವನ್ನು ಆಡುವ ಶುಲ್ಕವು ಉತ್ತಮ ಶುಲ್ಕವಾಗಿದ್ದರೆ, ವಿವಿಧ ಕಾರಣಗಳಿಗಾಗಿ ಆಟಗಾರರು ಹೊರಗುಳಿಯುತ್ತಾರೆ” ಎಂದು ಗವಾಸ್ಕರ್ ಹೇಳಿದ್ದರು.

Continue Reading
Advertisement
lok sabha election 2024
Lok Sabha Election 202431 mins ago

Lok Sabha Election 2024 : ಬೋಟ್‌ನಲ್ಲಿ ಬಂದು ವೋಟ್‌ ಮಾಡಿದ 150ಕ್ಕೂ ಮತದಾರರು

Congress election camapaign meeting in haliyala
ರಾಜಕೀಯ1 hour ago

Lok Sabha Election 2024: ಬಿಜೆಪಿಯವರಿಂದ ಹಿಂದೂ ಧರ್ಮಕ್ಕೆ ಅಪಾಯ ಎಂದ ಅಂಜಲಿ ನಿಂಬಾಳ್ಕರ್

Modi in Karnataka PM Modi to address rally in Bengaluru Here live video
ಪ್ರಮುಖ ಸುದ್ದಿ1 hour ago

PM Narendra Modi: “ಇವಿಎಂ ಅಪಪ್ರಚಾರ ಮಾಡುವವರಿಗೆ ಕಪಾಳಮೋಕ್ಷ…” ಸುಪ್ರೀಂ ಕೋರ್ಟ್‌ ತೀರ್ಪಿಗೆ ಪ್ರಧಾನಿ ಸ್ವಾಗತ

Palki Sharma
ದೇಶ2 hours ago

Palki Sharma: ಬ್ರಿಟನ್‌ನಲ್ಲಿ ಭಾರತದ ಏಳಿಗೆ ಬಿಚ್ಚಿಟ್ಟ ಪತ್ರಕರ್ತೆ ಪಾಲ್ಕಿ ಶರ್ಮಾಗೆ ಮೋದಿ ಮೆಚ್ಚುಗೆ!

Lok sabha Election 2024
Lok Sabha Election 20242 hours ago

Lok Sabha Election 2024: ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

Lok Sabha Election 2024 sandalwood celebrities reaction
Lok Sabha Election 20242 hours ago

Lok Sabha Election 2024: ಬುದ್ಧಿ ಇರೋರು ವೋಟ್‌ ಹಾಕ್ತಿದ್ದಾರೆ ಎಂದ ಕಿಚ್ಚ! ಉಳಿದ ತಾರೆಗಳು ಹೇಳಿದ್ದೇನು?

ಕರ್ನಾಟಕ2 hours ago

Lok sabha Election 2024: ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ನೇರವಾಗಿ ಮತಗಟ್ಟೆಗೆ ಬಂದ ನಾರಾಯಣ ಮೂರ್ತಿ

Lok Sabha Election 2024: Karnataka records 38.23% voter turnout; highest in Dakshina Kannda
ಕರ್ನಾಟಕ2 hours ago

Lok Sabha Election: ರಾಜ್ಯಾದ್ಯಂತ 1 ಗಂಟೆ ವೇಳೆಗೆ 38.23% ಮತದಾನ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?

Lok Sabha Election 2024 Kannada Celeb vote Pictures
ಸ್ಯಾಂಡಲ್ ವುಡ್2 hours ago

Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Lok Sabha Election 20243 hours ago

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ4 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20244 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20245 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ11 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ24 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ24 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌