IPL 2023: ಆರೆಂಜ್​ ಕ್ಯಾಪ್​ ರೇಸ್​ನಲ್ಲಿ ಡು ಪ್ಲೆಸಿಸ್​ ಹಿಂದಿಕ್ಕಿ ಅಗ್ರಸ್ಥಾನ ಪಡೆದ ಗಿಲ್​ Vistara News
Connect with us

ಕ್ರಿಕೆಟ್

IPL 2023: ಆರೆಂಜ್​ ಕ್ಯಾಪ್​ ರೇಸ್​ನಲ್ಲಿ ಡು ಪ್ಲೆಸಿಸ್​ ಹಿಂದಿಕ್ಕಿ ಅಗ್ರಸ್ಥಾನ ಪಡೆದ ಗಿಲ್​

ಶುಭಮನ್​ ಗಿಲ್​ ಅವರು ಮುಂಬೈ ವಿರುದ್ಧ ಶತಕ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಮೂರನೇ ಶತಕವನ್ನು ದಾಖಲಿಸಿದರು.

VISTARANEWS.COM


on

Narendra Modi Stadium at Ahmedabad
Koo

ಅಹಮದಾಬಾದ್​: ಮುಂಬೈ ಇಂಡಿಯನ್ಸ್​ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಮಿಂಚಿದ ಶುಭಮನ್​ ಗಿಲ್​ ಅವರು ಈ ಬಾರಿಯ ಐಪಿಎಲ್​ನ​ ಆರೆಂಜ್​ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 730 ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದ ಡು ಪ್ಲೆಸಿಸ್ ಇದೀಗ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.

​ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಉಆಟಿಂಗ್​ ನಡೆಸಿದ ಗುಜರಾತ್​ ತಂಡ ಗಿಲ್​ ಅವರ ಶತಕದ ನೆರವಿನಿಂದ ಬೃಹತ್​ ಮೊತ್ತ ಕಲೆಹಾಕಿತು. ಈ ಪಂದ್ಯದಲ್ಲಿ 8 ರನ್​ ಗಳಿಸಿದ ವೇಳೆ ಗಿಲ್​ ಅವರು ಡು ಪ್ಲೆಸಿಸ್​ ಅವರನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ವಶಪಡಿಸಿಕೊಂಡರು. ಸದ್ಯ ಗಿಲ್​ ಅವರು 851 ರನ್​ ಬಾರಿಸಿದ್ದಾರೆ. ಆರ್​ಸಿಬಿ ತಂಡ ಸೋಲು ಹೊರ ಬಿದ್ದ ಕಾರಣ ಡು ಪ್ಲೆಸಿಸ್​ಗೆ ಇನ್ನು ಗಿಲ್​ ದಾಖಲೆ ಮುರಿಯುವ ಅವಕಾಶವಿಲ್ಲ. ಸದ್ಯ ಈ ರೇಸ್​ನಲ್ಲಿರುವ ಆಟಗಾರನೆಂದರೆ ಚೆನ್ನೈ ತಂಡದ ಡೆವೋನ್​ ಕಾನ್ವೆ. 15 ಪಂದ್ಯ ಆಡಿರುವ ಅವರು 625 ರನ್​ ಬಾರಿಸಿದ್ದಾರೆ. ಫೈನಲ್​ ಪಂದ್ಯ ಬಾಕಿ ಇದ್ದರೂ ಅವರಿಗೆ ಈ ಮೊತ್ತವನ್ನು ಗಳಿಸಲು ಅಸಾಧ್ಯ. ಹೀಗಾಗಿ ಈ ಬಾರಿಯ ಆರೆಂಜ್​ ಕ್ಯಾಪ್​ ಗಿಲ್​ ಅವರಿಗೆ ಸಿಗುವುದು 100 ಪ್ರತಿಶತವಾಗಿದೆ.

800 ರನ್​ಗಳ ಗಡಿ ದಾಡಿದ ವೇಳೆ ಗಿಲ್​ ಅವರು ಮತ್ತೊಂದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದರು. ಒಂದೇ ಆವೃತ್ತಿಯ ಐಪಿಎಲ್​ನಲ್ಲಿ 800 ರನ್​ ಬಾರಿಸಿದ ನಾಲ್ಕನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾದರು. ವಿರಾಟ್​ ಕೊಹ್ಲಿ, ಜಾಸ್​ ಬಟ್ಲರ್​ ಮತ್ತು ಡೇವಿಡ್​ ವಾರ್ನರ್​ ಈ ಸಾಧನೆ ಮಾಡಿದ ಮೊದಲಿಗರು.

ಇದನ್ನೂ ಓದಿ IPL 2023: ಗಿಲ್​ ಶತಕದ ಕಮಾಲ್​; ಮುಂಬೈಗೆ ಬೃಹತ್​ ಮೊತ್ತದ ಗುರಿ

31 ರನ್​ ಗಳಿಸಿದ್ದ ವೇಳೆ ಟಿಮ್​ ಡೇವಿಡ್​ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದ ಗಿಲ್​ ಇದರ ಸಂಪೂರ್ಣ ಲಾಭವೆತ್ತಿ ಶತಕ ಸಿಡಿಸಿ ಸಂಭ್ರಮಿಸಿದರು. 60 ಎಸೆತ ಎದುರಿಸಿದ ಗಿಲ್​ ಬರೊಬ್ಬರಿ 10 ಸಿಕ್ಸರ್​ ಮತ್ತು 7 ಬೌಂಡರಿ ನೆರವಿನಿಂದ 129 ರನ್​ ಗಳಿಸಿದರು.​ ಗಿಲ್​ ಅವರು ಬಾರಿಸಿದ ಮೂರನೇ ಐಪಿಎಲ್​ ಶತಕ ಇದಾಗಿದೆ. ಈ ಮೂರು ಶತಕಗಳು ಈ ಆವೃತ್ತಿಯಲ್ಲಿಯೇ ದಾಖಲಾಗಿದ್ದು ವಿಶೇಷ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

INDvsWI: ಭಾರತ-ವಿಂಡೀಸ್‌ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಜುಲೈ-ಆಗಸ್ಟ್‌ ತಿಂಗಳಲ್ಲಿ ನಡೆಯುವ ಭಾರತ ಮತ್ತು ವೆಸ್ಟ್​ ಇಂಡೀಸ್​ ವಿರುದ್ಧದ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿಯೊಂದು ಪ್ರಕಟಗೊಂಡಿದೆ.

VISTARANEWS.COM


on

Edited by

India vs West Indies Schedule
Koo

ಪೋರ್ಟ್‌ ಆಫ್ ಸ್ಪೇನ್‌: ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಮುಕ್ತಾಯದ ಬಳಿಕ ಟೀಮ್​ ಇಂಡಿಯಾ ವೆಸ್ಟ್‌ ಇಂಡೀಸ್‌ಗೆ ಪ್ರವಾಸ ಕೈಗೊಳ್ಳಲಿದೆ. ಜುಲೈ-ಆಗಸ್ಟ್‌ ತಿಂಗಳಲ್ಲಿ ನಡೆಯುವ ಉಭಯ ತಂಡಗಳ ಸರಣಿಯ ತಾತ್ಕಾಲಿಕ ವೇಳಾಪಟ್ಟಿಯೊಂದು ಪ್ರಕಟಗೊಂಡಿದೆ. ಸದ್ಯ ಬಿಸಿಸಿಐಯಿಂದ ಒಪ್ಪಿಗೆ ಸಿಗುವುದೊಂದೆ ಬಾಕಿ ಉಳಿದಿದೆ. ಅನಂತರ ವೇಳಾಪಟ್ಟಿ ಅಧಿಕೃತಗೊಳ್ಳಲಿದೆ.

ಇತ್ತಂಡಗಳ ಕ್ರಿಕೆಟ್​ ಸರಣಿಯಲ್ಲಿ 2 ಟೆಸ್ಟ್‌, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಾಗುವುದು. ಹೆಚ್ಚುರಿಯಾಗಿ 2 ಟಿ20 ಪಂದ್ಯಗಳನ್ನು ಅಮೆರಿಕದ ಫ್ಲೋರಿಡಾದಲ್ಲಿ ಆಡುವ ಸಾಧ್ಯತೆ ಇದೆ. ಆದರೆ ಇದು ಅಧಿಕೃತಗೊಂಡಿಲ್ಲ. ಪ್ರಸಕ್ತ ಸಾಗುತ್ತಿರುವ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ ಫೈನಲ್​ ವೇಳೆ ಬಿಸಿಸಿಐ ಮತ್ತು “ಕ್ರಿಕೆಟ್‌ ವೆಸ್ಟ್‌ ಇಂಡೀಸ್‌’ನ ವರಿಷ್ಠರು ಮಾತುಕತೆ ನಡೆಸಿ ವೇಳಾಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಇದೇ ಕಾರಣಕ್ಕೆ ವಿಂಡೀಸ್​ ಕ್ರಿಕೆಟ್​ ಮಂಡಳಿಯ ಸದಸ್ಯರು ಲಂಡನ್​ನ ಓವಲ್​ಗೆ ಆಗಮಿಸಿದ್ದಾರೆ.

ಸದ್ಯದ ವೇಳಾಪಟ್ಟಿಯ ಪ್ರಕಾರ ಟೆಸ್ಟ್‌ ಪಂದ್ಯಗಳು ಡೊಮಿನಿಕಾ (ಜು. 12-16) ಮತ್ತು ಟ್ರಿನಿಡಾಡ್‌ನ‌ಲ್ಲಿ (ಜು. 20-24) ನಡೆಯಲಿವೆ. ಏಕದಿನ ಪಂದ್ಯಗಳು ಬಾರ್ಬಡಾಸ್‌ (ಜು. 27, 29) ಮತ್ತು ಟ್ರಿನಿಡಾಡ್‌ (ಆ. 1). ಟಿ20 ಪಂದ್ಯಗಳನ್ನು ಟ್ರಿನಿಡಾಡ್‌ (ಆ. 4) ಮತ್ತು ಗಯಾನಾದಲ್ಲಿ (ಆ. 6, ಆ. 8) ಆಡಲಾಗುವುದು ಎಂದು ಹೇಳಲಾಗಿದೆ. ಆದರೆ ಅಂತಿಮ ವೇಳಾಪಟ್ಟಿ ಬಿಡುಗಡೆಗೊಂಡ ಬಳಿಕ ಇದರಲ್ಲಿ ಸಣ್ಣ ಪುಟ್ಟ ಬದಲಾವಣೆ ಕಂಡುಬರುವ ಸಾಧ್ಯೆತೆ ಇದೆ.

ಇದನ್ನೂ ಓದಿ WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವ ಕಪ್​ ದೃಷ್ಟಿಯಲ್ಲಿ ಭಾರತಕ್ಕೆ ಈ ಸರಣಿ ಮಹತ್ವದ್ದಾಗಿದೆ. ಏಕೆಂದರೆ ತಂಡ ಸಂಯೋಜನೆಗೆ ಇದು ಉತ್ತಮ ಅವಕಾಶವಾಗಿದೆ.

Continue Reading

ಕ್ರಿಕೆಟ್

WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

ಶಮಿಯ ಎಸೆತವನ್ನು ಗುರುತಿಸಲು ಸಾಧ್ಯವಾಗದೇ ಮರ್ನಸ್​ ಲಾಬುಶೇನ್​ ಕ್ಲೀನ್​ ಬೌಲ್ಡ್ ಆದರು.

VISTARANEWS.COM


on

Marnus Labuschagne
Koo

ಲಂಡನ್​: ವಿಶ್ವ ಟೆಸ್ಟ್​ ಚಾಂಪಿಯನ್​​ಷಿಪ್​ನ ಫೈನಲ್​ ಪಂದ್ಯದಲ್ಲಿ (WTC Final 2023) ಆಸ್ಟ್ರೇಲಿಯಾ ತಂಡದ ಪಾರಮ್ಯ ಮುಂದುವರಿದಿದೆ. ಟಾಸ್​ ಸೋತು ಮೊದಲು ಬ್ಯಾಟ್​ ಮಾಡಿದ ಆಸೀಸ್ ಬಳಗ ಟಿ ವಿರಾಮದ ವೇಳೆಗೆ ಮೂರು ವಿಕೆಟ್​ ಕಳೆದುಕೊಂಡು 171 ರನ್​ ಬಾರಿಸಿದೆ. ಭಾರತ ತಂಡ ಆರಂಭದಲ್ಲಿ ಮೂರು ವಿಕೆಟ್​ಗಳನ್ನು ಕಬಳಿಸಿದರೂ ಬಳಿಕ ಜತೆಯಾದ ಟ್ರಾವಿಸ್ ಹೆಡ್​ ಹಾಗೂ ಸ್ಟೀವ್​ ಸ್ಮಿತ್​ ಸ್ಥಿರ ಪ್ರದರ್ಶನ ನೀಡಿದರು. ಆದರೆ, ಭಾರತ ತಂಡಕ್ಕೆ ಮೂರನೇ ವಿಕೆಟ್​ ರೂಪದಲ್ಲಿ ದೊರಕಿದ ಮರ್ನಸ್​ ಲಾಬುಶೇನ್​ ವಿಕೆಟ್​ ಹೆಚ್ಚು ಆಕರ್ಷಕವಾಗಿತ್ತು. ಶಮಿ ಎಸೆತಕ್ಕೆ ಅವರು ಬೌಲ್ಡ್​ ಆದ ರೀತಿಯೂ ಕ್ರಿಕೆಟ್​ ಪ್ರೇಮಿಗಳ ಗಮನ ಸೆಳೆಯಿತು.

ಡಬ್ಲ್ಯುಟಿಸಿ ಫೈನಲ್​ ಪಂದ್ಯದ ಮೊದಲ ಸೆಷನ್​ನಲ್ಲಿ ಶಮಿ ತುಂಬಾ ಕಡಿಮೆ ಬೌಲಿಂಗ್ ಮಾಡಿದ್ದಕ್ಕಾಗಿ ಕ್ರಿಕೆಟ್​ ಅಭಿಮಾನಿಗಳಿಂದ ಹಾಗೂ ವೀಕ್ಷಕ ವಿವರಣೆಗಾರರಿಂದ ಟೀಕೆಗೆ ಒಳಗಾದರು. ಆದಾಗ್ಯೂ, ಭೋಜನ ವಿರಾಮದಿಂದ ಹಿಂದಿರುಗಿದ ಕೂಡಲೇ ಶಮಿ ಎಲ್ಲರಿಗೂ ಉತ್ತರ ಕೊಟ್ಟರು. ತಾವು ಭಾರತದ ಮೊದಲ ಆಯ್ಕೆಯ ವೇಗಿ ಎಂಬುದನ್ನು ಸಾಬೀತುಪಡಿಸಿದರು.

ಭೋಜನ ವಿರಾಮದ ನಂತರದ ಎರಡನೇ ಓವರ್​ನಲ್ಲಿ ಮತ್ತು ತಮ್ಮ ಎರಡನೇ ಸ್ಪೆಲ್​ನ ಮೊದಲ ಎಸೆತದಲ್ಲಿ ಮೊಹಮ್ಮದ್ ಶಮಿ ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟ್ಸ್​ಮನ್​ ಲಾಬುಶೇನ್​ ಅವರನ್ನು ಬೌಲ್ಡ್ ಮಾಡಿ ಪೆವಿಲಿಯನ್​​ಗೆ ಕಳುಹಿಸಿದರು.

ಅದಕ್ಕಿಂತ ಮೊದಲು ದಿನದಾಟದ ಮೊದಲ ಅವಧಿಯ ಯಶಸ್ಸನ್ನು ಎರಡೂ ತಂಡಗಳು ಹಂಚಿಕೊಂಡವು, ಭಾರತವು ಆಸೀಸ್ ಆರಂಭಿಕರನ್ನು ಪೆವಿಲಿಯನ್​ಗೆ ಕಳುಹಿಸಿದರೆ ಆಸ್ಟ್ರೇಲಿಯಾ 73 ರನ್ ಗಳಿಸುವ ಮೂಲಕ ಪ್ರತ್ಯುತ್ತರ ನೀಡಿತು. ಡೇವಿಡ್ ವಾರ್ನರ್ ಅದ್ಭುತ ಪ್ರದರ್ಶನ ನೀಡಿ ಎಂಟು ಬೌಂಡರಿಗಳನ್ನು ಗಳಿಸಿದರು. ಆದರೆ 7 ರನ್​​ಗಳಿಂದ ಅರ್ಧ ಶತಕ ವಂಚಿತರಾದರು.

ವಾರ್ನರ್ ವಿಕೆಟ್ ಪಡೆಯುವ ಹಿಂದಿನ ದೊಡ್ಡ ಕಾರಣ ಕೆ.ಎಸ್.ಭರತ್ ಅವರ ಉತ್ತಮ ಕೀಪಿಂಗ್​​. ಇಶಾನ್ ಕಿಶನ್ ಅವರನ್ನು ಹಿಂದಿಕ್ಕಿ ತಂಡಕ್ಕೆ ಆಯ್ಕೆಯಾಗಿದ್ದ ಅವರು ಈ ಕ್ಯಾಚ್ ಮೂಲಕ ಆಯ್ಕೆಯನ್ನು ಸಮರ್ಧಿಸಿಕೊಂಡರು. ಭರತ್​ ಇದಕ್ಕಿಂತ ಹಿಂದೆ ಎರಡು ಬಾರಿ ಇಂಗ್ಲೆಂಡ್​ ಪಿಚ್​ನಲ್ಲಿ ಆಡಿದ್ದಾರೆ. ಒಂದು ಅಭ್ಯಾಸ ಪಂದ್ಯ, ಮತ್ತೊಂದು ವೆಸ್ಟ್ ಇಂಡೀಸ್ ವಿರುದ್ಧದ ಭಾರತ ಎ ಪಂದ್ಯ.

Continue Reading

ಕ್ರಿಕೆಟ್

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

ಇಶಾನ್ ಕಿಶನ್ ಅವರನ್ನು ಕೈಬಿಟ್ಟು ಫೈನಲ್ ಪಂದ್ಯದಲ್ಲಿ ವಿಕೆಟ್​ಕೀಪಿಂಗ್ ಜವಾಬ್ದಾರಿಯನ್ನು ಕೆ. ಎಸ್ ಭರತ್​​ಗೆ ನೀಡಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್​ ಶರ್ಮಾ

VISTARANEWS.COM


on

KS Bharat
Koo

ಲಂಡನ್: ಲಂಡನ್​ನ ಕೆನ್ನಿಂಗ್ಟನ್ ಓವಲ್​​ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್​ ಫೈನಲ್​ ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಟಾಸ್​ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲ ದಿನದ ಟಿ ವಿರಾಮದ ವೇಳೆಗೆ ಆಸ್ಟ್ರೇಲಿಯಾ 3 ವಿಕೆಟ್​ ಕಳೆದುಕೊಂಡು 171 ರನ್ ಬಾರಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡ ನಿಧಾನವಾಗಿ ಮೇಲುಗೈ ಸಾಧಿಸಿದೆ.

ಲಂಚ್​ ಬ್ರೇಕ್​ಗಿಂತ ಮೊದಲು ಆಸ್ಟ್ರೇಲಿಯಾ 73 ರನ್​ ಗಳಿಸಿತ್ತು. ಈ ವೇಳೆ ಇಬ್ಬರೂ ಆರಂಭಿಕರನ್ನು ಆಸ್ಟ್ರೇಲಿಯಾ ತಂಡ ಕಳೆದುಕೊಂಡಿತು. ವಾರ್ನರ್ 8 ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮವಾಗಿ ಆಡಿದರು ಆದರೆ ಭೋಜನ ವಿರಾಮಕ್ಕೆ ಕೆಲವೇ ನಿಮಿಷಗಳ ಮೊದಲು ಶಾರ್ದೂಲ್ ಠಾಕೂರ್​​ಗೆ ವಿಕೆಟ್​ ಒಪ್ಪಿಸಿ 7 ರನ್​ಗಳಿಂದ ಅರ್ಧ ಶತಕವನ್ನು ಕಳೆದುಕೊಂಡರು. ಈ ವಿಕೆಟ್​ ಕಬಳಿಸಲು ವಿಕೆಟ್​ಕೀಪರ್​ ಕೆ. ಎಸ್​ ಭರತ್​ ನೆರವಾದರು. ಅವರು ಅದ್ಭುತವಾಗಿ ಕ್ಯಾಚ್​ ಹಿಡಿಯುವ ಮೂಲಕ ವಾರ್ನರ್​ ವಿಕೆಟ್​ ಉರುಳಿಸಿದರು.

ಇದನ್ನೂ ಓದಿ : WTC Final 2023: ಭಾರತ, ಆಸ್ಟ್ರೇಲಿಯಾ​ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ

ಪಂದ್ಯಕ್ಕೆ ಪೂರ್ವದಲ್ಲಿ ಕೀಪಿಂಗ್ ಜವಾಬ್ದಾರಿ ಯಾರಿಗೆ ನೀಡಬೇಕು ಎಂಬ ಗೊಂದಲ ಸೃಷ್ಟಿಯಾಗಿತ್ತು. ಆದರೆ, ಇಶಾನ್​ ಕಿಶನ್​ ಅವರನ್ನು ಹಿಂದಿಕ್ಕಿದ ಭರತ್ ಅವಕಾಶ ಗಿಟ್ಟಿಸಿದರು. ಟೆಸ್ಟ್ ಕ್ರಿಕೆಟ್​ನಲ್ಲಿ ಭರತ್ 5 ಪಂದ್ಯಗಳನ್ನು ಆಡಿದ್ದಾರೆ. ಅವರು ಖಾತೆಯಲ್ಲಿ 100ಕ್ಕೂ ಹೆಚ್ಚು ರನ್​ಗಳಿವೆ. ಇದೀಗ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​ನಲ್ಲೂ ಛಾಪು ಮೂಡಿಸಲಿದ್ದಾರೆ.

ಶಮಿಗೆ ಸಿಗದ ಅವಕಾಶ, ನೆಟ್ಟಿಗರ ಆಕ್ರೊಶ

ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆರ್​. ಅಶ್ವಿನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್​ ಶರ್ಮ ಅವರು ಅಶ್ವಿನ್​ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಲಂಡನ್​ನ ಓವಲ್​ ಮೈದಾನದಲ್ಲಿ ಬುಧವಾರ ಆರಂಭಗೊಂಡ ಈ ಪಂದ್ಯದಲ್ಲಿ ಟಾಸ್​ ವೇಳೆ ಪ್ರಕಟಗೊಂಡ ಭಾರತ ತಂಡದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬೌಲರ್ ಆಗಿರುವ ಆಫ್‌ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್ ಅವರನ್ನು ಆಡುವ 11ರ ಬಳಗದಿಂದ ಕೈಬಿಟ್ಟು ಅಚ್ಚರಿ ಮೂಡಿಸಿತು. ಇದೇ ವೇಳೆ ನೆಟ್ಟಿಗರು ಟೀಮ್​ ಮ್ಯಾನೆಜ್​ಮೆಂಟ್​ ವಿರುದ್ಧ ಟ್ವಿಟರ್​ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.

ಅಶ್ವಿನ್​ ಬದಲು ಮಧ್ಯಮ ವೇಗಿ ಹಾಗೂ ಆಲ್​ರೌಂಡರ್​ ಆಗಿರುವ ಶಾರ್ದೂಲ್​ ಠಾಕೂರ್​ ಅವರನ್ನು ಟೀಮ್ ಇಂಡಿಯಾ ಹೆಚ್ಚುವರಿ ವೇಗಿಯನ್ನಾಗಿ ಆಯ್ಕೆ ಮಾಡಿಕೊಂಡಿತು. ಇದೇ ವಿಚಾರವಾಗಿ ಮಾತನಾಡಿದ ರೋಹಿತ್​ ಅವರು “ಇಲ್ಲಿನ ಪರಿಸ್ಥಿತಿಗಳು ಬೌಲಿಂಗ್‌ಗೆ ಉತ್ತಮವಾಗಿದೆ. ಹೀಗಾಗಿ ನಾವು ಮೊದಲು ಬೌಲಿಂಗ್‌ ಮಾಡಲಿದ್ದೇವೆ. ಮೋಡ ಕವಿದ ವಾತಾವರಣವೂ ಇದೆ. ಈ ಪಿಚ್‌ನಲ್ಲಿ ಸ್ಪಿನ್​ ಹೆಚ್ಚು ಪರಿಣಾಮಕಾರಿಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ನಾವು 4 ವೇಗಿಗಳು ಮತ್ತು ಒಬ್ಬ ಸ್ಪಿನ್ನರ್‌ನ ಆಯ್ಕೆ ಮಾಡಿಕೊಂಡಿದ್ದೇವೆ. ಜಡೇಜಾ ಅವರನ್ನು ಏಕೈಕ ಸ್ಪಿನ್ನರ್‌ ಆಗಿ ಆಯ್ಕೆ ಮಾಡಿಕೊಂಡಿದ್ದೇವೆ. ಅಶ್ವಿನ್ ಅವರನ್ನು ಹೊರಗಿಡುವುದು ಕಠಿಣ ನಿರ್ಧಾರವಾಗಿದೆ. ಆದರೂ ತಂಡದ ಹಿತದೃಷ್ಟಿಯಿಂದ ಅವರನ್ನು ಅನಿವಾರ್ಯವಾಗಿ ಕೈಬಿಡಬೇಕಾಯಿತು” ಎಂದರು.

Continue Reading

ಕ್ರಿಕೆಟ್

WTC Final 2023: ಆಡುವ ಬಳಗದಿಂದ ಅಶ್ವಿನ್​ ಕೈ ಬಿಡಲು ಕಾರಣ ಇದಂತೆ

ಅಶ್ವಿನ್​ ಬದಲು ಮಧ್ಯಮ ವೇಗಿ ಹಾಗೂ ಆಲ್​ರೌಂಡರ್​ ಆಗಿರುವ ಶಾರ್ದೂಲ್​ ಠಾಕೂರ್​ಗೆ ಆಡುವ ಬಳಗದಲ್ಲಿ ಅವಕಾಶ ನೀಡಿದ್ದಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.

VISTARANEWS.COM


on

Edited by

ICC World Test Championship Final 2023
Koo

ಲಂಡನ್​: ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆರ್​. ಅಶ್ವಿನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್​ ಶರ್ಮ ಅವರು ಅಶ್ವಿನ್​ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಲಂಡನ್​ನ ಓವಲ್​ ಮೈದಾನದಲ್ಲಿ ಬುಧವಾರ ಆರಂಭಗೊಂಡ ಈ ಪಂದ್ಯದಲ್ಲಿ ಟಾಸ್​ ವೇಳೆ ಪ್ರಕಟಗೊಂಡ ಭಾರತ ತಂಡದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬೌಲರ್ ಆಗಿರುವ ಆಫ್‌ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್ ಅವರನ್ನು ಆಡುವ 11ರ ಬಳಗದಿಂದ ಕೈಬಿಟ್ಟು ಅಚ್ಚರಿ ಮೂಡಿಸಿತು. ಇದೇ ವೇಳೆ ನೆಟ್ಟಿಗರು ಟೀಮ್​ ಮ್ಯಾನೆಜ್​ಮೆಂಟ್​ ವಿರುದ್ಧ ಟ್ವಿಟರ್​ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.

ಅಶ್ವಿನ್​ ಬದಲು ಮಧ್ಯಮ ವೇಗಿ ಹಾಗೂ ಆಲ್​ರೌಂಡರ್​ ಆಗಿರುವ ಶಾರ್ದೂಲ್​ ಠಾಕೂರ್​ ಅವರನ್ನು ಟೀಮ್ ಇಂಡಿಯಾ ಹೆಚ್ಚುವರಿ ವೇಗಿಯನ್ನಾಗಿ ಆಯ್ಕೆ ಮಾಡಿಕೊಂಡಿತು. ಇದೇ ವಿಚಾರವಾಗಿ ಮಾತನಾಡಿದ ರೋಹಿತ್​ ಅವರು “ಇಲ್ಲಿನ ಪರಿಸ್ಥಿತಿಗಳು ಬೌಲಿಂಗ್‌ಗೆ ಉತ್ತಮವಾಗಿದೆ. ಹೀಗಾಗಿ ನಾವು ಮೊದಲು ಬೌಲಿಂಗ್‌ ಮಾಡಲಿದ್ದೇವೆ. ಮೋಡ ಕವಿದ ವಾತಾವರಣವೂ ಇದೆ. ಈ ಪಿಚ್‌ನಲ್ಲಿ ಸ್ಪಿನ್​ ಹೆಚ್ಚು ಪರಿಣಾಮಕಾರಿಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ನಾವು 4 ವೇಗಿಗಳು ಮತ್ತು ಒಬ್ಬ ಸ್ಪಿನ್ನರ್‌ನ ಆಯ್ಕೆ ಮಾಡಿಕೊಂಡಿದ್ದೇವೆ. ಜಡೇಜಾ ಅವರನ್ನು ಏಕೈಕ ಸ್ಪಿನ್ನರ್‌ ಆಗಿ ಆಯ್ಕೆ ಮಾಡಿಕೊಂಡಿದ್ದೇವೆ. ಅಶ್ವಿನ್ ಅವರನ್ನು ಹೊರಗಿಡುವುದು ಕಠಿಣ ನಿರ್ಧಾರವಾಗಿದೆ. ಆದರೂ ತಂಡದ ಹಿತದೃಷ್ಟಿಯಿಂದ ಅವರನ್ನು ಅನಿವಾರ್ಯವಾಗಿ ಕೈಬಿಡಬೇಕಾಯಿತು” ಎಂದರು.

ಇದನ್ನೂ ಓದಿ WTC Final 2023: ಭಾರತ, ಆಸ್ಟ್ರೇಲಿಯಾ​ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ

ಸದ್ಯ ಬ್ಯಾಟಿಂಗ್​ ನಡೆಸುತ್ತಿರುವ ಆಸ್ಟ್ರೇಲಿಯಾ ತಂಡ ಮೂರು ವಿಕೆಟ್​ ಕಳೆದುಕೊಂಡು 85 ರನ್​ ಗಳಿಸಿದೆ. ಉತ್ತಮ ರನ್​ ಕಲೆ ಹಾಕುತ್ತಿದ್ದ ಡೇವಿಡ್​ ವಾರ್ನರ್​ ಅವರನ್ನು ಔಟ್​ ಮಾಡುವ ಮೂಲಕ ಶಾರ್ದೂಲ್​ ಅವರು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು.

Continue Reading
Advertisement
India vs West Indies Schedule
ಕ್ರಿಕೆಟ್11 mins ago

INDvsWI: ಭಾರತ-ವಿಂಡೀಸ್‌ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Marnus Labuschagne
ಕ್ರಿಕೆಟ್25 mins ago

WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

wrestlers protest
ಕ್ರೀಡೆ1 hour ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

abhishek ambareesh wedding Reception
ಕರ್ನಾಟಕ1 hour ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

KS Bharat
ಕ್ರಿಕೆಟ್1 hour ago

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

for tenants also to wrestlers protest and more news
ಕರ್ನಾಟಕ1 hour ago

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

Anita Madhu Bangarappa was felicitated by Block Mahila Congress at soraba
ಕರ್ನಾಟಕ1 hour ago

Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ

MLA TB Jayachandra visited Shira Public Hospital
ಕರ್ನಾಟಕ2 hours ago

Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ

Farooq Abdullah meets HD Devegowda
ಕರ್ನಾಟಕ2 hours ago

Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

Good Train Accident
ದೇಶ2 hours ago

Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ16 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ1 hour ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ9 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ16 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!