ಕ್ರಿಕೆಟ್
IPL 2023: ಗಿಲ್ ಪ್ರಚಂಡ ಬ್ಯಾಟಿಂಗ್ಗೆ ಪಂತ್ ಸೇರಿ ಹಲವು ದಿಗ್ಗಜದಿಂದ ಮೆಚ್ಚುಗೆ
ಶುಭಮನ್ ಗಿಲ್ ಅವರ ಪ್ರಚಂಡ ಬ್ಯಾಟಿಂಗ್ ಪ್ರದರ್ಶನಕ್ಕೆ ಅನೇಕ ಹಾಲಿ ಮತ್ತು ಮಾಜಿ ಆಟಗಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಹಮದಾಬಾದ್: ನ್ಯೂ ಬ್ಯಾಟಿಂಗ್ ಸೆನ್ಸೇಷನಲ್ ಶುಭಮನ್ ಗಿಲ್ ಅವರ ಪ್ರಚಂಡ ಬ್ಯಾಟಿಂಗ್ ಪ್ರದರ್ಶನಕ್ಕೆ ಟೀಮ್ ಇಂಡಿಯಾ ಮಾತ್ರವಲ್ಲದೆ ವಿಶ್ವದ ಅನೇಕ ಹಾಲಿ ಮತ್ತು ಮಾಜಿ ಆಟಗಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಿಲ್ ಭವಿಷ್ಯದ ಕ್ರಿಕೆಟ್ ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮುಂಬೈ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಶುಭಮನ್ ಗಿಲ್ ಅವರು ಅಮೋಘ ಶತಕ ಬಾರಿಸಿ ಮಿಂಚಿದ್ದರು. 60 ಎಸೆತ ಎದುರಿಸಿದ ಗಿಲ್ ಬರೊಬ್ಬರಿ 10 ಸಿಕ್ಸರ್ ಮತ್ತು 7 ಬೌಂಡರಿ ನೆರವಿನಿಂದ 129 ರನ್ ಗಳಿಸಿದರು. ಇದು ಅವರ ಐಪಿಎಲ್ನ ಮೂರನೇ ಶತಕವಾಗಿದೆ. ಸದ್ಯ ಅವರು ಆಡಿದ 16 ಪಂದ್ಯಗಳಿಂದ 851 ರನ್ ಗಳಿಸಿದ್ದಾರೆ. ಈ ಸಾಧನೆ ಮಾಡಿದ ನಾಲ್ಕನೇ ಆಟಗಾರ ಎಂಬ ಹಿರಿಮೆಗೂ ಗಿಲ್ ಪಾತ್ರರಾದರು. ವಿರಾಟ್ ಕೊಹ್ಲಿ, ಜಾಸ್ ಬಟ್ಲರ್ ಮತ್ತು ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ ಮೊದಲಿಗರು.
23 ವರ್ಷಗದ ಗಿಲ್ ಅವರು ಈಗಾಗಲೇ ಹಲವು ದಾಖಲೆಗಳನ್ನು ಬರೆದು ಮುನ್ನುಗ್ಗುತ್ತಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿದ ಸಾಧನೆಯೂ ಅವರದ್ದಾಗಿದೆ. ಸದ್ಯ ಕ್ರಿಕೆಟ್ ಲೋಕದಲ್ಲಿ ಭವಿಷ್ಯದ ವಿರಾಟ್ ಕೊಹ್ಲಿ ಎಂದು ಸದ್ದು ಮಾಡುತ್ತಿರುವ ಇವರನ್ನು ಹಲವು ಮಾಜಿ ಮತ್ತು ಹಾಲಿ ಕ್ರಿಕೆಟ್ ದಿಗ್ಗಜರು ಹಾಡಿ ಹೊಗಳಿದ್ದಾರೆ. ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಕೆ ಕಾಣುತ್ತಿರುವ ರಿಷಭ್ ಪಂತ್ ಅವರು “ಕ್ಲಾಸ್ ಬಾಬಾ” ಸೊಗಸಾದ ಆಟ ಎಂದು ಹೊಗಳಿದ್ದಾರೆ.
ಇದನ್ನೂ ಓದಿ IPL 2023: ಶುಭಮನ್ ಗಿಲ್ ಹೊಗಳಿದ ರೋಹಿತ್ ಶರ್ಮ; ಕಾರಣ ಇದಂತೆ
𝙂𝙇𝙊𝙍𝙄𝙊𝙐𝙎 𝙂𝙄𝙇𝙇! @ShubmanGill put on a spectacle and left everyone mesmerised with his fabulous TON 💯#TATAIPL | #Qualifier2 | #GTvMI pic.twitter.com/o8ItwBEqRp
— IndianPremierLeague (@IPL) May 26, 2023
ವಿರಾಟ್ ಕೊಹ್ಲಿ ಅವರು ಗಿಲ್ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿಸಲು ಪದಗಳೆ ಸಾಲುತ್ತಿಲ್ಲ ಎಂದಿದ್ದಾರೆ. ಎಬಿಡಿ ವಿಲಿಯರ್ಸ್ ಅವರು “ಕ್ರಿಕೆಟ್ ಜಗತ್ತಿನಲ್ಲಿ ಸಾಧನೆ ಮಾಡಿದ ದಿಗ್ಗಜರ ಸಾಲಿನಲ್ಲಿ ನಿಮ್ಮ ಹೆಸರು ಕಾಣಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದಿದ್ದಾರೆ. ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವಿರೇಂದ್ರ ಸೆಹವಾಗ್ ಅವರು,” ಎಂತಹ ಅದ್ಭುತ ಆಟಗಾರ, ಶತಮಾನಗಳಿಗೊಮ್ಮೆ ಇಂತಹ ಆಟಗಾರರು ಕಾಣಿಸಿಕೊಳ್ಳುತ್ತಾರೆ” ಎಂದು ಹೇಳಿದ್ದಾರೆ. ಹೀಗೆ ಹಲವು ಕ್ರಿಕೆಟಿಗರು ಗಿಲ್ ಬ್ಯಾಟಿಂಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಚ್ಚರಿ ಎಂದರೆ ಪಾಕ್ ಕ್ರಿಕೆಟ್ ತಂಡದ ಕೆಲ ಆಟಗಾರರು ಗಿಲ್ ಅವರ ಬ್ಯಾಟಿಂಗ್ಗೆ ತಲೆಬಾಗಿದ್ದಾರೆ. ಕ್ರಿಕೆಟ್ನಲ್ಲಿ ಗಿಲ್ಗೆ ಉತ್ತಮ ಭವಿಷ್ಯವಿದೆ ಎಂದು ಹಾರೈಸಿದ್ದಾರೆ.
ಕ್ರಿಕೆಟ್
IPL 2023: ಗಿಲ್ ಕ್ರಿಕೆಟ್ ಭವಿಷ್ಯ ನುಡಿದ ಕಪಿಲ್ ದೇವ್
ಗಿಲ್ ಅವರು ಭಾರತ ಕಂಡ ದಿಗ್ಗಜ ಕ್ರಿಕೆಟ್ ಆಟಗಾರರ ಸಾಲಿಗೆ ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ ಕಪಿಲ್ ದೇವ್ ಅವರು ಭವಿಷ್ಯ ನುಡಿದಿದ್ದಾರೆ.
ಮುಂಬಯಿ: ಪ್ರಚಂಡ ಬ್ಯಾಟಿಂಗ್ ಫಾರ್ಮ್ನಲ್ಲಿರುವ ಶುಭಮನ್ ಗಿಲ್ ಅವರ ಪ್ರದರ್ಶನಕ್ಕೆ 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರ ಕ್ರಿಕೆಟ್ ಬಗೆಗಿನ ಭವಿಷ್ಯವನ್ನು ನುಡಿದಿದ್ದಾರೆ. ಗಿಲ್ ಅವರು ಭಾರತ ಕಂಡ ದಿಗ್ಗಜ ಕ್ರಿಕೆಟ್ ಆಟಗಾರರ ಸಾಲಿಗೆ ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದರುವ ಕಪಿಲ್, “ಸುನಿಲ್ ಗವಾಸ್ಕರ್ ಬಳಿಕ ಸಚಿನ್ ತೆಂಡೂಲ್ಕರ್ ಬಂದರು, ಅದಾದ ಬಳಿಕ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ವಿರಾಟ್ ಕೊಹ್ಲಿ ಹೀಗೆ ಹಲವು ಆಟಗಾರರು ಕಾಣಿಸಿಕೊಂಡರು. ಇದೀಗ ಶುಭಮನ್ ಗಿಲ್ ಅವರ ಉದಯವಾಗಿದೆ. ಈ ಯುವ ಆಟಗಾರ ಇನ್ನು ಕೆಲ ಕಾಲ ಭಾರತ ಕ್ರಿಕೆಟ್ ತಂಡವನ್ನು ಆಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಅವಕ ಕ್ರಿಕೆಟ್ ಕೌಶಲವನ್ನು ನೋಡುವಾಗ ಇದು ಅರಿವಿಗೆ ಬರುತ್ತದೆ” ಎಂದರು.
ವಿರಾಟ್ ಕೊಹ್ಲಿ ಟೀಮ್ ಇಂಡಿಯಾಕ್ಕೆ ಬಂದಾಗಲೂ ಇದೇ ರೀತಿಯ ಬ್ಯಾಟಿಂಗ್ ಫಾರ್ಮ್ನಲ್ಲಿದ್ದರು. ಮುಂದಿನದ್ದು ಇತಿಹಾಸ. ಇದೀಗ ಕೊಹ್ಲಿಯಂತೆಯೇ ಗಿಲ್ ಕೂಡ ಹಲವು ದಾಖಲೆಗಳನ್ನು ಬರೆಯುವ ಮೂಲಕ ವಿಶ್ವ ಕ್ರಿಕೆಟ್ನಲ್ಲಿ ವಿಶೇಷ ಸ್ಥಾನ ಪಡೆಯುವ ವಿಶ್ವಾಸ ನನ್ನಲ್ಲಿದೆ ಎಂದು ಕಪಿಲ್ ಅಭಿಪ್ರಾಯಪಟ್ಟರು. ಇದರ ಜತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ. ಆಟದ ಗಮನವನ್ನು ಯಾವತ್ತು ಕಳೆದುಕೊಳ್ಳಬಾರದು ಎಂದು ಹೇಳಿದ್ದಾರೆ.
ಇದನ್ನೂ ಓದಿ IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್ ಗಿಲ್?
ಶುಭಮನ್ ಗಿಲ್ ಅವರು ಈ ಬಾರಿಯ ಐಪಿಎಲ್ನಲ್ಲಿ ಮೂರು ಶತಕ ಬಾರಿಸಿ ಮಿಂಚಿದ್ದಾರೆ. ಸದ್ಯ ಇಂದು ನಡೆಯುವ ಚೆನ್ನೈ ವಿರುದ್ಧದ ಫೈನಲ್ ಪಂದ್ಯದಲ್ಲಿಯೂ ಅವರ ಬ್ಯಾಟಿಂಗ್ ಮೇಲೆ ಹಲವರು ಬೆಟ್ಟದಂತ ನಿರೀಕ್ಷೆ ಇರಿಸಿದ್ದಾರೆ. ಈಗಾಗಲೇ ಭಾರತ ತಂಡದ ಪರ ಏಕದಿನದಲ್ಲಿ ದ್ವಿಶತಕ ಬಾರಿಸಿದ ಸಾಧನೆಯನ್ನೂ ಮಾಡಿದ್ದಾರೆ. ಸದ್ಯಕ್ಕಂತು ಅವರನ್ನು ಭಾರತದ ನವ ಕ್ರಿಕೆಟ್ ತಾರೆ ಎಂದೇ ಬಣ್ಣಿಸಲಾಗಿದೆ.
ಕ್ರಿಕೆಟ್
IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್ ಗಿಲ್?
ಈಗಾಗಲೇ ಆರೆಂಜ್ ಕ್ಯಾಪ್ ಪಡೆದಿರುವ ಶುಭಮನ್ ಗಿಲ್ ಅವರು ವಿರಾಟ್ ಕೊಹ್ಲಿಯ ದಾಖಲೆಯೊಂದನ್ನು ಮುರಿಯಲು ಸಜ್ಜಾಗಿದ್ದಾರೆ.
ಅಹಮದಾಬಾದ್: ನ್ಯೂ ಬ್ಯಾಟಿಂಗ್ ಸೆನ್ಸೇಷನಲ್ ಶುಭಮನ್ ಗಿಲ್ ಅವರು ಇದೀಗ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿಯ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದಾರೆ. ಸದ್ಯ 851 ರನ್ ಗಳಿಸಿರುವ ಗಿಲ್ ಅವರು ಚೆನ್ನೈ ವಿರುದ್ಧದ ಪಂದ್ಯದಲ್ಲಿ 122ರನ್ ಗಳಿಸಿದರೆ ವಿರಾಟ್ ಅವರ ಹೆಸರಿನಲ್ಲಿದ್ದ ದಾಖಲೆ ಪತನಗೊಳ್ಳಲಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಮಿಂಚಿದ್ದ ಗಿಲ್ ಅವರು ಈ ಬಾರಿಯ ಐಪಿಎಲ್ನ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದರು. 730 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದ ಡು ಪ್ಲೆಸಿಸ್ ಇದೀಗ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ ಗಿಲ್ ಅವರು 851 ರನ್ ಬಾರಿಸಿದ್ದಾರೆ. ಆರ್ಸಿಬಿ ತಂಡ ಸೋತು ಹೊರ ಬಿದ್ದ ಕಾರಣ ಡು ಪ್ಲೆಸಿಸ್ಗೆ ಇನ್ನು ಗಿಲ್ ದಾಖಲೆ ಮುರಿಯುವ ಅವಕಾಶವಿಲ್ಲ.
ಕಳೆದ ನಾಲ್ಕು ಇನ್ನಿಂಗ್ಸ್ಗಳಲ್ಲಿ ಮೂರು ಶತಕ ಬಾರಿಸಿರುವ ಗಿಲ್ ಇದೀಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸನಿಹದಲ್ಲಿದ್ದಾರೆ. 2016ರಲ್ಲಿ ವಿರಾಟ್ ಕೊಹ್ಲಿ ಅವರು ಗಳಿಸಿದ್ದ 973ರನ್ ಗಳ ದಾಖಲೆಯನ್ನು ಮುರಿಯಲು ಮುಂದಾಗಿದ್ದಾರೆ. ಇದಕ್ಕೆ ಗಿಲ್ ಅವರಿಗೆ ಬೇಕಿರುವುದು 122ರನ್ಗಳ ಗುರಿ. ಫೈನಲ್ ಪಂದ್ಯದಲ್ಲಿ ಶತಕದೊಂದಿ ಈ ಮೊತ್ತ ಪೇರಿಸಿದಲ್ಲಿ ಗಿಲ್ ಅವರು ಐಪಿಎಲ್ನ ಇತಿಹಾಸದ ಪುಟ ಸೇರಲಿದ್ದಾರೆ.
ಫೈನಲ್ ಪಂದ್ಯಕ್ಕೆ ಉಭಯ ತಂಡಗಳು
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್/ ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ಯಶ್ ದಯಾಳ್, ನೂರ್ ಅಹ್ಮದ್/ ಜೋಶುವಾ ಲಿಟಲ್, ಮೋಹಿತ್ ಶರ್ಮಾ.
ಇದನ್ನೂ ಓದಿ IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು/ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾಣಾ, ಮಹೀಶ್ ತೀಕ್ಷಣ.
ಕ್ರಿಕೆಟ್
IPL 2023: ಫೈನಲ್ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಫೈನಲ್ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ಈ ಹೋರಾಟ ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಅಹಮದಾಬಾದ್: ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಫೈನಲ್ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ಈ ಪ್ರಶಸ್ತಿ ಸಮರಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಸರ್ವ ವಿಧದಲ್ಲೂ ಸಜ್ಜಾಗಿ ನಿಂತಿದೆ. ಈ ಪಂದ್ಯಕ್ಕೆ ಇತ್ತಂಡಗಳ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಮಾಹಿತಿ ಇಂತಿದೆ.
ಸಮಬಲದ ತಂಡಗಳು
ಎರಡೂ ತಂಡಗಳು ಸಮಬಲದಿಂದ ಕೂಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ದಾಳಿ ಸಂಘಟಿಸುವಲ್ಲಿ ಎರಡೂ ತಂಡಗಳು ಬಲಿಷ್ಠವಾಗಿದೆ. ಗುಜರಾತ್ ಪರ ಶುಭಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯ ಅತ್ಯಂತ ಅಪಾಯಕಾರಿಗಳು. ಚೆನ್ನೈ ಪರ ಋತುರಾಜ್ ಗಾಯಕ್ವಾಡ್, ಡೆವೋನ್ ಕಾನ್ವೆ, ರಹಾನೆ ಮತ್ತು ಶಿವಂ ದುಬೆ ಕೂಡ ಸಿಡಿಯಬಲ್ಲರು. ಆದರೆ ಮೊಯಿನ್ ಅಲಿ ಈ ಆವೃತ್ತಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ಅವರು ಮಹತ್ವದ ಪಂದ್ಯದಲ್ಲಿ ಆಡಬೇಕಾದ ಅನಿವಾರ್ಯತೆ ಇದೆ.
ಮುಖಾಮುಖಿ
ಚೆನ್ನೈ ಮತ್ತು ಗುಜರಾತ್ ತಂಡಗಳು ಇದುವರೆಗೆ ಐಪಿಎಲ್ನಲ್ಲಿ 4 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಗುಜರಾತ್ ಮೂರು ಬಾರಿ ಗೆದ್ದಿದೆ. ಚೆನ್ನೈ ತಂಡ ಒಂದು ಪಂದ್ಯ ಗೆದ್ದಿದೆ. ಈ ಗೆಲುವು ಇದೇ ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ದಾಖಲಾಗಿತ್ತು. ಅಹಮದಾಬಾದ್ನಲ್ಲೇ ನಡೆದ ಉದ್ಘಾಟನ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗುಜರಾತ್ ಗೆದ್ದು ತನ್ನ ಅಭಿಯಾನವನ್ನು ಆರಂಭಿಸಿತ್ತು. ಇದೀಗ ಅಂತಿಮ ಪಂದ್ಯದಲ್ಲಿಯೂ ಇತ್ತಂಡಗಳು ಮುಖಾಮುಖಿಯಾಗಿವೆ. ಇಲ್ಲಿ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಈ ಪಂದ್ಯದ ಕೌತುಕ.
ಸಂಭಾವ್ಯ ತಂಡಗಳು
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್/ ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ಯಶ್ ದಯಾಳ್, ನೂರ್ ಅಹ್ಮದ್/ ಜೋಶುವಾ ಲಿಟಲ್, ಮೋಹಿತ್ ಶರ್ಮಾ.
ಇದನ್ನೂ ಓದಿ IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು/ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾಣಾ, ಮಹೀಶ್ ತೀಕ್ಷಣ.
ಕ್ರಿಕೆಟ್
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
ಬಹುತೇಕ ಎಲ್ಲ ಮೆಟ್ರೋ ಸಿಟಿಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.
ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿ ಆಡಲು ಇಂಗ್ಲೆಂಡ್ಗೆ ತೆರಳಲಿದೆ. ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಟೂರ್ನಿಯ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದಾದ ಬಳಿಕ ನಡೆಯಲಿರುವ ಐಸಿಸಿ ಟೂರ್ನಿಯೆಂದರೆ ಏಕ ದಿನ ವಿಶ್ವ ಕಪ್. ಇದು ಭಾರತದ ಆತಿಥ್ಯದಲ್ಲಿ ಆಯೋಜನೆಗೊಂಡಿದೆ. ಅದಕ್ಕಾಗಿ ಬಿಸಿಸಿಐ ಸಜ್ಜಾಗುತ್ತಿದೆ. ವರ್ಷದ ಕೊನೆಯಲ್ಲಿ ನಡೆಯಲಿರುವ ಈ ಟೂರ್ನಿಯ ವೇಳಾಪಟ್ಟಿ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಉಂಟಾಗಿದೆ. ಜತೆಗೆ ಪಂದ್ಯದ ತಾಣಗಳು ಎಲ್ಲೆಲ್ಲಿ ಎಂದು ತಿಳಿಯುವ ಕುತೂಹಲವೂ ಸೃಷ್ಟಿಯಾಗಿದೆ. ಮಾಹಿತಿಯೊಂದರ ಪ್ರಕಾರ ಟೂರ್ನಿಯ ವೇಳಾಪಟ್ಟಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ ಫೈನಲ್ ಪಂದ್ಯದ ಬಳಿಕ ನಡೆಯಲಿದೆ.
ಡಬ್ಲ್ಯುಟಿಸಿ ಫೈನಲ್ ಸಮೀಪಿಸುತ್ತಿರುವುದರಿಂದ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ಸಮಯದಲ್ಲಿ ಬಿಸಿಸಿಐ ವಿಶ್ವಕಪ್ನ ಸ್ಥಳಗಳು ಮತ್ತು ವೇಳಾಪಟ್ಟಿಯನ್ನು ಅನಾವರಣ ಮಾಡಲಿದೆ ಎಂದು ಹಲವಾರು ವರದಿಗಳು ಹೇಳುತ್ತಿವೆ.
ಬಿಸಿಸಿಐನ ವಿಶೇಷ ಸಾಮಾನ್ಯ ಸಭೆ ಮೇ 27 ರಂದು ಅಹಮದಾಬಾದ್ನಲ್ಲಿ ನಡೆದಿದೆ. ಅಲ್ಲಿ ಕ್ರೀಡಾಂಗಣಗಳ ಗುಣಮಟ್ಟ ಹದಗೆಡುತ್ತಿರುವುದನ್ನು ಮಂಡಳಿಯು ಬೊಟ್ಟು ಮಾಡಿ ತೋರಿಸಿದೆ. ದೇಶಾದ್ಯಂತ ಅನೇಕ ಸ್ಟೇಡಿಯಮ್ಗಳೂ ಇರುವುದರಿಂದ ಸೌಲಭ್ಯಗಳ ಗುಣಮಟ್ಟವನ್ನು ಸುಧಾರಿಸುವ ಜವಾಬ್ದಾರಿಯನ್ನು ಆಯಾಯ ಕ್ರಿಕೆಟ್ ಸಂಸ್ಥೆಗಳು ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಹೇಳಲಾಗಿದೆ. ಮೂಲ ಸೌಕರ್ಯ ಹೆಚ್ಚಿಸಲು ಬೇಕಾದ ಅನುದಾನ ವಿತರಣೆಗೂ ವ್ಯವಸ್ಥೆ ಆಗಿದೆ ಎನ್ನಲಾಗಿದೆ.
ಇದನ್ನೂ ಓದಿ :IPL 2023: ಟಿ20 ವಿಶ್ವ ಕಪ್ಗೆ ಹಾರ್ದಿಕ್ ಪಾಂಡ್ಯ ಸೂಕ್ತ ನಾಯಕ; ರವಿಶಾಸ್ತ್ರಿ ವಿಶ್ವಾಸ
ಬಿಸಿಸಿಐ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಕ್ರೀಡಾಂಗಣಗಳ ಸಂಭಾವ್ಯ ನವೀಕರಣಗಳ ಬಗ್ಗೆ ಚರ್ಚಿಸಲಾಯಿತು. ಮೂಲಸೌಕರ್ಯ ಸುಧಾರಣೆಯು ಹೆಚ್ಚು ಚರ್ಚಿಸಲಾದ ವಿಷಯಗಳಲ್ಲಿ ಒಂದು. ಏಕದಿನ ವಿಶ್ವ ಕಪ್ ವೇಗವಾಗಿ ಸಮೀಪಿಸುತ್ತಿರುವುದರಿಂದ, ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸು ನಿರ್ಧಾರ ಕೈಗೊಳ್ಳಲಾಯಿತು. ವಿಶ್ವ ಕಪ್ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ನಡೆಯುವ ಕಾರಣ ಅದಕ್ಕಿಂತ ಮೊದಲು ಸಜ್ಜುಗೊಳಿಸುವಂತೆ ಸೂಚಿಸಲಾಯಿತು.
ವಿಶ್ವಕಪ್ನ ಸ್ಥಳಗಳ ಯೋಜನೆಯೊಂದಿಗೆ, ಪದಾಧಿಕಾರಿಗಳಿಗೆ ನಿರ್ದಿಷ್ಟ ಸ್ಥಳಗಳ ಉಸ್ತುವಾರಿ ನೀಡುವ ಯೋಜನೆ ರೂಪಿಸಲಾಯಿತು. ನಾವು ಎಲ್ಲಾ ಮಹಾನಗರಗಳನ್ನು ಪಂದ್ಯಗಳಿಗೆ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
-
ಕರ್ನಾಟಕ24 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ23 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ22 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ18 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕ್ರಿಕೆಟ್13 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ದೇಶ6 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ14 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER4 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?