IPL 2023: ಗುಜರಾತ್​-ಮುಂಬೈ ನಡುವೆ ಕ್ವಾಲಿಫೈಯರ್ ಪಂದ್ಯ; ಯಾರಿಗೆ ಒಲಿಯಲಿದೆ ಫೈನಲ್​ ಲಕ್​ Vistara News
Connect with us

ಕ್ರಿಕೆಟ್

IPL 2023: ಗುಜರಾತ್​-ಮುಂಬೈ ನಡುವೆ ಕ್ವಾಲಿಫೈಯರ್ ಪಂದ್ಯ; ಯಾರಿಗೆ ಒಲಿಯಲಿದೆ ಫೈನಲ್​ ಲಕ್​

ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್​ ಟೈಟನ್ಸ್​​ ತಂಡಗಳು ಮಹತ್ವದ ಕ್ವಾಲಿಫೈಯರ್​ ಪಂದ್ಯವನ್ನಾಡಲು ಸಜ್ಜಾಗಿದೆ. ಉಭಯ ತಂಡಗಳ ಈ ಪಂದ್ಯ ಶುಕ್ರವಾರ ಅಹಮದಾಬಾದ್​ನಲ್ಲಿ ನಡೆಯಲಿದೆ.

VISTARANEWS.COM


on

Ahmedabad
Koo

ಅಹಮದಾಬಾದ್​: ಲಕ್ನೋ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ತಂಡ ಮಹತ್ವದ ಕ್ವಾಲಿಫೈಯರ್​ ಪಂದ್ಯವನ್ನಾಡಲು ಸಜ್ಜಾಗಿದೆ. ಶುಕ್ರವಾರ ಅಹಮದಾಬಾದ್​ನಲ್ಲಿ ನಡೆಯುವ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ತಂಡದ ಸವಾಲು ಎದುರಿಸಲಿದೆ. ಉಭಯ ತಂಡಗಳು ಈ ವರೆಗೆ ಐಪಿಎಲ್​ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದು ಮುಂಬೈ ತಂಡ 2ರಲ್ಲಿ ಗೆದ್ದಿದೆ. ಆದರೆ ತವರಿನಲ್ಲಿ ಗುಜರಾತ್​ ತಂಡವನ್ನು ಮಣಿಸುವುದು ಅಷ್ಟು ಸುಲಭವಲ್ಲ.

ಮೇಲ್ನೋಟಕ್ಕೆ ಮುಂಬೈ ಮತ್ತು ಗುಜರಾತ್‌ ಸಮಬಲದ ತಂಡಗಳಾಗಿ ಗೋಚರಿಸುತ್ತಿವೆ. ಎರಡೂ ತಂಡಗಳ ನಾಯಕತ್ವ ಬಲಿಷ್ಠವಾಗಿದೆ. ಆಯ್ಕೆ ಪ್ರಕ್ರಿಯೆ ಸಮತೋಲನದಿಂದ ಕೂಡಿದೆ. ಕೊನೆಯ ನಿಮಿಷದ ತನಕ ಹೋರಾಡುವ ಕೆಚ್ಚು ಎರಡೂ ತಂಡಗಳ ವೈಶಿಷ್ಟ. ಹೀಗಾಗಿ ಸ್ಪರ್ಧೆ ಅತ್ಯಂತ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.

ಗುಜರಾತ್​ ತಂಡ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋತರೂ, ತವರಿನಲ್ಲಿ ಬಲಿಷ್ಠವಾಗಿದೆ. ಪಾಂಡ್ಯ ಪಡೆ ಇಲ್ಲಿ ಈವರೆಗೆ 8 ಪಂದ್ಯಗಳನ್ನು ಆಡಿದ್ದು 5 ರಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ತವರಿನ ಲಾಭ ಗುಜರಾತ್​ ತಂಡಕ್ಕಿರುವುದರಲ್ಲಿ ಯಾವುದೇ ಅನುಮಾನವಿಲ್ಲ. ಶುಭಮನ್​ ಗಿಲ್​ ಅವರು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಈ ಆವೃತ್ತಿಯಲ್ಲಿ ಅವರು ಸತತ ಶತಕ ಬಾರಿಸಿ ಸದ್ಯ 722 ರನ್​ ಗಳಿಸಿದ್ದಾರೆ. ಅವರು ಮುಂಬೈ ವಿರುದ್ಧ 8 ರನ್​ ಗಳಿಸಿದರೆ ಫಾಫ್​ ಡು ಪ್ಲೆಸಿಸ್​ ಅವರನ್ನು ಹಿಂದಿಕ್ಕಿ ಈ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ IPL 2023: ಮುಂಬೈ-ಗುಜರಾತ್​ ಪಂದ್ಯದ ಪಿಚ್​ ರಿಪೋರ್ಟ್​, ಸಂಭಾವ್ಯ ತಂಡಗಳ ಮಾಹಿತಿ

ಬೌಲಿಂಗ್‌ ವಿಭಾಗ ಕೂಡ ಬಲಿಷ್ಠವಾಗಿದೆ. ಹಿರಿಯ ಆಟಗಾರ ಮೊಹಮ್ಮದ್​ ಶಮಿ, ರಶೀದ್‌ ಖಾನ್‌ ಮತ್ತು ನೂರ್‌ ಅಹ್ಮದ್‌ ಅವರು ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ. ಶಮಿ ಮತ್ತು ರಶೀದ್‌ ಖಾನ್​ ಈಗಾಗಲೇ ಕ್ರಮವಾಗಿ 26 ಮತ್ತು 25 ವಿಕೆಟ್‌ ಬೇಟೆಯಾಡಿದ್ದಾರೆ. ಮೋಹಿತ್‌ ಶರ್ಮ ಕೂಡ ಇವರಿಗೆ ಉತ್ತಮ ಸಾಥ್​​ ನೀಡುತ್ತಿದ್ದಾರೆ.

ಆಕಾಶ್ ಮಧ್ವಾಲ್ ಘಾತಕ ಬೌಲಿಂಗ್​

ಮುಂಬೈ ತಂಡದ ಯುವ ಬೌಲರ್​ ಆಕಾಶ್ ಮಧ್ವಾಲ್ ಅವರು ಪಂದ್ಯದಿಂದ ಪಂದ್ಯಕ್ಕೆ ಘಾತಕ ಸ್ಪೆಲ್​ ನಡೆಸಿ ಗಮನ ಸೆಳೆಯುತ್ತಿದ್ದಾರೆ. ಲಕ್ನೋ ವಿರುದ್ಧದ ಪಂದ್ಯದಲ್ಲಂತು ಅವರು ಬೆಂಕಿಯ ಉಂಡೆಯಂತೆ ಬೌಲಿಂಗ್​ ದಾಳಿ ನಡೆಸಿದ್ದರು. 3.3 ಓವರ್​ ಮಾಡಿದ ಅವರು ಕೇವಲ 5 ರನ್​ ವೆಚ್ಚದಲ್ಲಿ 5 ವಿಕೆಟ್​ ಕಿತ್ತು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಅವರ ಬೌಲಿಂಗ್​ ಸಾಧನೆಗೆ ಜಸ್​ಪ್ರೀತ್​ ಬುಮ್ರಾ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್​ ಮಾಡಿದ್ದಾರೆ. ಜತೆಗೆ ತಂಡದ ನಾಯಕ ರೋಹಿತ್​ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಪಂದ್ಯದಲ್ಲಿಯೂ ಅವರ ಮೇಲೆ ತಂಡ ಹೆಚ್ಚಿನ ವಿಶ್ವಾಸವಿರಿಸಿದೆ. ಉಳಿದಂತೆ ಆಸ್ಟ್ರೇಲಿಯಾದ ಆಲ್‌ರೌಂಡರ್‌ ಕ್ಯಾಮರಾನ್‌ ಗ್ರೀನ್‌ ಅವರ ಕೊಡುಗೆಯನ್ನು ಮುಂಬೈ ಮರೆಯಲು ಸಾಧ್ಯವಿಲ್ಲ. ಕೊನೆಯ ಲೀಗ್‌ನಲ್ಲಿ ಮುಂಬೈ ತಂಡವು ಹೈದರಾಬಾದ್‌ ವಿರುದ್ಧ ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಎಲಿಮಿನೇಟರ್​ ಪಂದ್ಯದಲ್ಲಿಯೂ ಅವರು ಆಲ್​ರೌಂಡರ್​ ಪ್ರದರ್ಶನ ತೋರಿದ್ದರು. ಒಟ್ಟಾರೆ ಮುಂಬೈ ಕೂಡ ಗುಜರಾತ್​ ತಂಡದಂತೆ ಸಮರ್ಥವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

World Cup 2023 : ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಬಹುತೇಕ ಎಲ್ಲ ಮೆಟ್ರೋ ಸಿಟಿಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಹೇಳಿದ್ದಾರೆ.

VISTARANEWS.COM


on

BCCI MEETING
Koo

ಅಹಮದಾಬಾದ್​​: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ ಫೈನಲ್​​ನಲ್ಲಿ ಆಡಲು ಇಂಗ್ಲೆಂಡ್​ಗೆ ತೆರಳಲಿದೆ. ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಟೂರ್ನಿಯ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದಾದ ಬಳಿಕ ನಡೆಯಲಿರುವ ಐಸಿಸಿ ಟೂರ್ನಿಯೆಂದರೆ ಏಕ ದಿನ ವಿಶ್ವ ಕಪ್​. ಇದು ಭಾರತದ ಆತಿಥ್ಯದಲ್ಲಿ ಆಯೋಜನೆಗೊಂಡಿದೆ. ಅದಕ್ಕಾಗಿ ಬಿಸಿಸಿಐ ಸಜ್ಜಾಗುತ್ತಿದೆ. ವರ್ಷದ ಕೊನೆಯಲ್ಲಿ ನಡೆಯಲಿರುವ ಈ ಟೂರ್ನಿಯ ವೇಳಾಪಟ್ಟಿ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಉಂಟಾಗಿದೆ. ಜತೆಗೆ ಪಂದ್ಯದ ತಾಣಗಳು ಎಲ್ಲೆಲ್ಲಿ ಎಂದು ತಿಳಿಯುವ ಕುತೂಹಲವೂ ಸೃಷ್ಟಿಯಾಗಿದೆ. ಮಾಹಿತಿಯೊಂದರ ಪ್ರಕಾರ ಟೂರ್ನಿಯ ವೇಳಾಪಟ್ಟಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ನ ಫೈನಲ್​ ಪಂದ್ಯದ ಬಳಿಕ ನಡೆಯಲಿದೆ.

ಡಬ್ಲ್ಯುಟಿಸಿ ಫೈನಲ್ ಸಮೀಪಿಸುತ್ತಿರುವುದರಿಂದ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ಸಮಯದಲ್ಲಿ ಬಿಸಿಸಿಐ ವಿಶ್ವಕಪ್​ನ ಸ್ಥಳಗಳು ಮತ್ತು ವೇಳಾಪಟ್ಟಿಯನ್ನು ಅನಾವರಣ ಮಾಡಲಿದೆ ಎಂದು ಹಲವಾರು ವರದಿಗಳು ಹೇಳುತ್ತಿವೆ.

ಬಿಸಿಸಿಐನ ವಿಶೇಷ ಸಾಮಾನ್ಯ ಸಭೆ ಮೇ 27 ರಂದು ಅಹಮದಾಬಾದ್​​ನಲ್ಲಿ ನಡೆದಿದೆ. ಅಲ್ಲಿ ಕ್ರೀಡಾಂಗಣಗಳ ಗುಣಮಟ್ಟ ಹದಗೆಡುತ್ತಿರುವುದನ್ನು ಮಂಡಳಿಯು ಬೊಟ್ಟು ಮಾಡಿ ತೋರಿಸಿದೆ. ದೇಶಾದ್ಯಂತ ಅನೇಕ ಸ್ಟೇಡಿಯಮ್​ಗಳೂ ಇರುವುದರಿಂದ ಸೌಲಭ್ಯಗಳ ಗುಣಮಟ್ಟವನ್ನು ಸುಧಾರಿಸುವ ಜವಾಬ್ದಾರಿಯನ್ನು ಆಯಾಯ ಕ್ರಿಕೆಟ್​ ಸಂಸ್ಥೆಗಳು ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಹೇಳಲಾಗಿದೆ. ಮೂಲ ಸೌಕರ್ಯ ಹೆಚ್ಚಿಸಲು ಬೇಕಾದ ಅನುದಾನ ವಿತರಣೆಗೂ ವ್ಯವಸ್ಥೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ :IPL 2023: ಟಿ20 ವಿಶ್ವ ಕಪ್​ಗೆ ಹಾರ್ದಿಕ್​ ಪಾಂಡ್ಯ ಸೂಕ್ತ ನಾಯಕ; ರವಿಶಾಸ್ತ್ರಿ ವಿಶ್ವಾಸ

ಬಿಸಿಸಿಐ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಕ್ರೀಡಾಂಗಣಗಳ ಸಂಭಾವ್ಯ ನವೀಕರಣಗಳ ಬಗ್ಗೆ ಚರ್ಚಿಸಲಾಯಿತು. ಮೂಲಸೌಕರ್ಯ ಸುಧಾರಣೆಯು ಹೆಚ್ಚು ಚರ್ಚಿಸಲಾದ ವಿಷಯಗಳಲ್ಲಿ ಒಂದು. ಏಕದಿನ ವಿಶ್ವ ಕಪ್ ವೇಗವಾಗಿ ಸಮೀಪಿಸುತ್ತಿರುವುದರಿಂದ, ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸು ನಿರ್ಧಾರ ಕೈಗೊಳ್ಳಲಾಯಿತು. ವಿಶ್ವ ಕಪ್​ ಅಕ್ಟೋಬರ್ ಅಥವಾ ನವೆಂಬರ್​ನಲ್ಲಿ ನಡೆಯುವ ಕಾರಣ ಅದಕ್ಕಿಂತ ಮೊದಲು ಸಜ್ಜುಗೊಳಿಸುವಂತೆ ಸೂಚಿಸಲಾಯಿತು.

ವಿಶ್ವಕಪ್ನ ಸ್ಥಳಗಳ ಯೋಜನೆಯೊಂದಿಗೆ, ಪದಾಧಿಕಾರಿಗಳಿಗೆ ನಿರ್ದಿಷ್ಟ ಸ್ಥಳಗಳ ಉಸ್ತುವಾರಿ ನೀಡುವ ಯೋಜನೆ ರೂಪಿಸಲಾಯಿತು. ನಾವು ಎಲ್ಲಾ ಮಹಾನಗರಗಳನ್ನು ಪಂದ್ಯಗಳಿಗೆ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

Continue Reading

ಕ್ರಿಕೆಟ್

IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!

ಅಪ್ಪ, ಅಮ್ಮನ ಹೆಸರು, ಪತ್ನಿಯ ಮಾತಿನಂತೆ ಬಿಡಿಸಿದ ಟ್ಯಾಟೂಗಳು ದೇಹದ ಮೇಲಿವೆ ಎಂದು ಸೂರ್ಯಕುಮಾರ್ ಯಾದವ್ ವಿವರಿಸಿದ್ದಾರೆ.

VISTARANEWS.COM


on

Suryakumar Yadav Tattoo
Koo

ಮುಂಬಯಿ: ಮುಂಬಯಿ ಇಂಡಿಯನ್ಸ್​ ತಂಡ ಹಾಲಿ ಆವೃತ್ತಿಯ ಐಪಿಎಲ್​ ಪ್ರಶಸ್ತಿ ರೇಸ್​ನಿಂದ ಹೊರ ಬಿದ್ದಿದೆ. ಗುಜರಾತ್ ಜೈಂಟ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲುವ ಮೂಲಕ ಆರನೇ ಪ್ರಶಸ್ತಿ ಗಲ್ಲುವ ಅವಕಾಶದಿಂದ ವಂಚಿತವಾಗಿದೆ. ಏತನ್ಮಧ್ಯೆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅರ್ಧ ಶತಕ ಬಾರಿಸುವ ಮೂಲಕ ಮಿಂಚಿದ್ದರು. ಆದರೆ, ತಂಡಕ್ಕೆ ಗೆಲುವು ತಂದುಕೊಡಲಾಗದ ಬೇಸರಕ್ಕೂ ಒಳಗಾದರು. ಇದೀಗ ಅವರು ಬೇಸರದಿಂದ ಮುಕ್ತರಾಗಿದ್ದು ತಮ್ಮ ಕುರಿತು ಹಲವಾರು ವಿವರಣೆಗಳನ್ನು ನೀಡಿದ್ದಾರೆ. ಈ ವೇಳೆ ಅವರು ತಮ್ಮ ದೇಹದ ಮೇಲಿರುವ ಟ್ಯಾಟೂಗಳ ಬಗ್ಗೆಯೂ ಮಾತನಾಡಿಕೊಂಡಿದ್ದಾರೆ.

ಸೂರ್ಯಕುಮಾರ್ ಯಾದವ್ ತಮ್ಮ ದೇಹದ ಮೇಲೆ ತಾಯಿ, ತಂದೆ, ಪತ್ನಿ ಮತ್ತು ರಾಷ್ಟ್ರೀಯ ಕ್ಯಾಪ್ ಸಂಖ್ಯೆಗಳು (ಟೆಸ್ಟ್, ಏಕದಿನ ಮತ್ತು ಟಿ 20 ಐ) ಸೇರಿದಂತೆ ತಮ್ಮ ದೇಹದ ಮೇಲೆ ಅನೇಕ ಹಚ್ಚೆಗಳನ್ನು ಹೊಂದಿರುವುದಾಗಿ ಹೇಳಿದ್ದಾರೆ. ನಕಾರಾತ್ಮಕ ಶಕ್ತಿಯನ್ನು ದೂರವಿರಿಸಲು ತಮ್ಮ ಕೈಯಲ್ಲಿ ಹೊಂದಿರುವ ಸಿಂಹದ ಮುಖದ ಹಚ್ಚೆಯನ್ನೂ ಹಾಕಿಸಿಕೊಂಡಿದ್ದೇನೆ ಎಂಬುದಾಗಿ ಅವರು ಹೇಳಿದ್ದಾರೆ.

“ನನ್ನ ತಾಯಿ ಮತ್ತು ತಂದೆಯ ಹೆಸರಿನ ಹಚ್ಚೆ ನನ್ನ ಬಳಿ ಇದೆ. ಇದು ನನ್ನ ಮೊದಲ ಹಚ್ಚೆ, ಆದ್ದರಿಂದ ನಾನು ಉಳಿದವುಗಳಿಗೆ ಅನುಮತಿ ಪಡೆದುಕೊಂಡೆ. ನನ್ನ ಹೆಂಡತಿ ಈ ದೃಷ್ಟಿ ತಾಗದಂತಿರುವ ಹಾಕಿಸಿಕೊಳ್ಳುವಂತೆ ನನಗೆ ಹೇಳಿದಳು ಎಂದು ಸೂರ್ಯಕುಮಾರ್ ಜಿಯೋ ಸಿನೆಮಾದೊಂದಿಗೆ ಮಾತನಾಡುತ್ತಾ ಹೇಳಿದರು.

“ನನ್ನ ಭುಜದ ಮೇಲೆ ನನ್ನ ತಾಯಿ ಮತ್ತು ತಂದೆಯ ಭಾವಚಿತ್ರವಿದೆ, ಅದು 4-5 ವರ್ಷಗಳಷ್ಟು ಹಳೆಯದು. ಇದು ನನ್ನ ಅಚ್ಚುಮೆಚ್ಚಿನದು. ಇದು ಶಾಂತ ಸಿಂಹ. ನಾನು ಶಾಂತ ಸಿಂಹ ಎಂದು ಸ್ಫೋಟಕ ಬ್ಯಾಟರ್​ ಹೇಳಿದ್ದಾರೆ.

ವಿಶ್ವದ ನಂಬರ್​ ಒನ್​ ಟಿ20 ಬ್ಯಾಟರ್​ ತನ್ನ ಮೇಲಿನ ತೋಳಿನ ಮೇಲೆ ಬಾಣಗಳ ಹಚ್ಚೆಯನ್ನೂ ಹೊಂದಿದ್ದಾರೆ. ವ್ಯಕ್ತಿಯೊಬ್ಬ ಜೀವನದಲ್ಲಿ ಹಿಂದಕ್ಕೆ ಹೋದಷ್ಟು ಮುಂದಕ್ಕೆ ಹೋಗುತ್ತಾನೆ ಎಂಬುದನ್ನು ಸೂಚಿಸಲು ಈ ಹಚ್ಚೆ ಹಾಕಿಕೊಂಡಿದ್ದೇನೆ ಎಂದು ಅವರು ವಿವರಣೆ ನೀಡಿದರು. ನಾನು ಆಸ್ಟ್ರೇಲಿಯಾ ವಿರುದ್ಧ ಸತತವಾಗಿ ಮೂರು ಬಾರಿ ಶೂನ್ಯಕ್ಕೆ ಔಟಾಗಿ ಬಳಿಕ ಫಾರ್ಮ್​ಗೆ ಮರಳಿರುವುದೇ ಇದಕ್ಕೆ ಸೂಕ್ತ ಉದಾಹರಣೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ : ICC T20 Ranking: ನಂ.1 ಸ್ಥಾನ ಉಳಿಸಿಕೊಂಡ ಸೂರ್ಯಕುಮಾರ್​ ಯಾದವ್​

ವಿಶೇಷವೆಂದರೆ, ಮುಂಬೈ ಮೂಲದ ಕ್ರಿಕೆಟಿಗ ತನ್ನ ಮೇಲಿನ ತೋಳಿನ ಮೇಲೆ ವಿಶಿಷ್ಟ ಹಚ್ಚೆಯೊಂದನ್ನೂ ಹಾಕಿಸಿಕೊಂಡಿದ್ದಾರೆ. ಇದು ನ್ಯೂಜಿಲ್ಯಾಂಡ್​ನ ಮಾವೊರಿ ಬುಡಕಟ್ಟು ಸಂಪ್ರದಾಯಕ್ಕೆ ಸಂಬಂಧಿಸಿದ್ದು. ಈ ವಿನ್ಯಾಸದ ಬಗ್ಗೆ ಮಾತನಾಡಿದ ಸೂರ್ಯ, ಇದು ಅದೃಷ್ಟವನ್ನು ತರುತ್ತದೆ ಮತ್ತು ನನ್ನನ್ನು ಸದಾ ಶಾಂತವಾಗಿರಿಸುತ್ತದೆ ಎಂದು ವಿವರಿಸಿದ್ದಾರೆ.

“ನಾನು ನ್ಯೂಜಿಲೆಂಡ್ ಪ್ರವಾಸದಲ್ಲಿದ್ದಾಗ, ಮಾವೊರಿ ಬುಡಕಟ್ಟಿನ ಈ ವಿನ್ಯಾಸದ ಬಗ್ಗೆ ತಿಳಿದುಕೊಂಡೆ, ಈ ವಿನ್ಯಾಸವು ಅದೃಷ್ಟ ಮತ್ತು ಪ್ರೀತಿಯನ್ನು ತರುತ್ತದೆ ಮತ್ತು ನಿಮ್ಮನ್ನು ಶಾಂತವಾಗಿರಿಸುತ್ತದೆ ಎಂದು ಅಲ್ಲಿನ ವ್ಯಕ್ತಿಯೊಬ್ಬರು ಹೇಳಿದರು. ಅದನ್ನು ನಾನು ದೇಹದಲ್ಲಿ ಟ್ಯಾಟೂ ಮಾಡಿಸಿಕೊಂಡೆ ಎಂಬುದಾಗಿ ಅವರು ಹೇಳಿದರು.

Continue Reading

ಕ್ರಿಕೆಟ್

ಸೋಶಿಯಲ್​ ಮೀಡಿಯಾಗಳಲ್ಲಿ ಪರಸ್ಪರ ಅನ್​ಫಾಲೊ ಮಾಡಿಕೊಂಡ ಶುಭ್​​ಮನ್​, ಸಾರಾ! ಏನಾಯಿತು ಅವರಿಗೆ?

ಶುಭ್​ಮನ್​ ಮತ್ತು ಸಾರಾ ಅಲಿ ಖಾನ್​ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅನ್​ಫಾಲೊ ಮಾಡುವ ಮೂಲಕ ಬೇರ್ಪಟ್ಟಿದ್ದಾರೆ ಎಂಬುದಾಗಿ ವರದಿಗಳು ಹೇಳಿವೆ.

VISTARANEWS.COM


on

Sara ali khan
Koo

ಮುಂಬಯಿ: ಶುಭ್​ಮನ್​ ಗಿಲ್​ ಹಾಗೂ ಸಾರಾ ಅಲಿ ಖಾನ್ ನಡುವಿನ ಹೆಸರು ಕಳೆದ ಕೆಲವು ತಿಂಗಳಿಂದ ವದಂತಿಯ ವಿಷಯವಾಗಿದೆ. ಅವರು ಆಗಾಗ ಅಲ್ಲಿಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದೆ ಅದಕ್ಕೆ ಕಾರಣ. ಈ ಸುದ್ದಿ ಎಲ್ಲೆಡೆ ಹರಡುತ್ತಿದ್ದರೂ. ಅವರು ತಮ್ಮ ಸಂಬಧವನ್ನು ಎಂದೂ ಒಪ್ಪಿಕೊಂಡಿರಲಿಲ್ಲ. ಅಥವಾ ನಿರಾಕರಿಸಿರಲಿಲ್ಲ. ಅದೇನೇ ಇದ್ದರೂ, ಇತ್ತೀಚಿನ ವರದಿಗಳ ಪ್ರಕಾರ ಶುಬ್ಮನ್ ಮತ್ತು ಸಾರಾ ಪ್ರತ್ಯೇಕಗೊಂಡಿದ್ದಾರೆ. ಅದೇ ರೀತಿ ಅವರು ಸೋಶಿಯಲ್​ ಮೀಡಿಯಾಗಳಲ್ಲಿ ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ ಎಂಬುದಾಗಿಯೂ ಸುದ್ದಿಯಾಗಿದೆ.

ಅವರಿಬ್ಬರು ಯಾಕೆ ಅನ್​ಫಾಲೊ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ, ಊಹಾಪೋಹ ಸುದ್ದಿಗಳ ಪ್ರಕಾರ ಅವರಿಬ್ಬರೂ ಬ್ರೇಕ್​ಅಪ್​ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾರಾ ಎಂಬ ಹೆಸರು ಶುಭ್​ಮನ್​ ಗಿಲ್​ ಹೆಸರಿನ ಜತೆ ತಳುಕು ಹಾಕಿಕೊಂಡಿತತ್ತು. ಅವರು ಐಪಿಎಲ್​ ಪಂದ್ಯವಾಡುವ ವೇಳೆ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಿಗಾಗಿ ಮೈದಾನಕ್ಕೆ ಇಳಿಯುವ ಸಂದರ್ಭದಲ್ಲಿ ಪ್ರೆಕ್ಷಕರು ಸಾರಾ, ಸಾರ ಎಂದು ಕೂಗುವ ಮೂಲಕ ಹುರಿದುಂಬಿಸುತ್ತಿದ್ದರು.

ಸಾರಾ ಅಲಿಖಾನ್​ ಮತ್ತು ಗಿಲ್ ಎಂದಿಗೂ ಸಾಮಾಜಿಕ ಮಾಧ್ಯಮಗಳ ಮೂಲಕ ತಮಾಷೆಗಳಲ್ಲಿ ಭಾಗಿಯಾಗುವುದು ಅಥವಾ ಪ್ರತಿಕ್ರಿಯಿಸುವು ನಡೆದಿರಲಿಲ್ಲ. ಆದರೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅವರು ಪರಸ್ಪರ ಅನುಸರಿಸುತ್ತಿದ್ದರು. ಇದೀಗ ಅವರಿಬ್ಬರ ಪಾಯೋಯರ್​ಗಳ ಪಟ್ಟಿಯಲ್ಲಿ ಪರಸ್ಪರ ಹೆಸರುಗಳು ಕಾಣಿಸುತ್ತಿಲ್ಲ. ಹೀಗಾಗಿ ಇಬ್ಬರೂ ಬೇರ್ಪಟ್ಟಿದ್ದಾರೆ ಎಂಬುದಾಗಿ ಅಭಿಮಾನಿಗಳು ಊಹಿಸುತ್ತಿದ್ದಾರೆ.

ಸಾರಾ ಅಲಿ ಖಾಣ್​ ‘ಜರಾ ಹಟ್ಕೆ ಜರಾ ಬಚ್ಕೆ’ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶುಬ್ಮನ್ ಗಿಲ್ ಅಥವಾ ಬೇರೆ ಯಾರೊಂದಿಗಾದರೂ ತನ್ನ ಸಂಬಂಧದ ಕುರಿತು ನಟಿ ಎಂದಿಗೂ ಪ್ರತಿಕ್ರಿಯೆ ಕೊಟ್ಟಿಲ್ಲ. ಮತ್ತೊಂದೆಡೆ, ಗಿಲ್ ತಮ್ಮ ತಂಡ ಗುಜರಾತ್ ಟೈಟನ್ಸ್ ಪರ ಐಪಿಎಲ್ ಪಂದ್ಯಗಳಲ್ಲಿ ಒಂದರ ನಂತರ ಒಂದರಂತೆ ಶತಕಗಳನ್ನು ಬಾರಿಸುತ್ತಿದ್ದಾರೆ. ಈ ಮೂಲಕ ಅಭಿಮಾನಿಗ ಸಂಖ್ಯೆಗಳನ್ನು ಹೆಚ್ಚಿಸುತ್ತಿದ್ದಾರೆ.

ಸುಳಿವು ಕೊಟ್ಟಿದ್ದ ಗಿಲ್​

ಶುಭ್​ಮನ್​ ಗಿಲ್ ಈ ಹಿಂದೆ ಸಚಿನ್ ತೆಂಡೂಲ್ಕರ್ ಅವರ ಮಗಳು ಸಾರಾ ತೆಂಡೂಲ್ಕರ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳಿದ್ದವರು. ಬಳಿಕ ಅವರಿಬ್ಬರೂ ಬೇರ್ಪಟ್ಟಿದ್ದರು ಎನ್ನಲಾಗಿದೆ. ಇದಾದ ಬಳಿಕ ನಟಿ ಸಾರಾ ಅಲಿ ಖಾನ್ ಜತೆ ಡಿನ್ನರ್​ಗೆ ಶುಭ್​ಮನ್ ಹೋಗಿದ್ದು ಸುದ್ದಿಯಾಗಿತ್ತು. ಜತೆಗೆ ವಿಮಾನವೊಂದರಲ್ಲಿ ಜತೆಯಾಗಿ ಪ್ರಯಾಣ ಮಾಡಿದ್ದರ ವಿಡಿಯೊಗಳು ಬೆಳಕಿಗೆ ಬಂದಿದ್ದವು.

ಕೆಲವು ತಿಂಗಳ ಹಿಂದೆ, ಸೋನಮ್ ಬಜ್ವಾ ಅವರೊಂದಿಗಿನ ಸಂದರ್ಶನದ ಸಮಯದಲ್ಲಿ ಮಾತನಾಡಿದ ಗಿಲ್, ಸಾರಾ ಜತೆಗಿನ ಡೇಟಿಂಗ್ ಸತ್ಯವೂ ಇರಬಹುದು, ಇಲ್ಲದೆಯೂ ಇರಬಹುದು ಎಂದು ಹೇಳಿದ್ದರು. ಈ ಮೇಲೆ ಅಭಿಮಾನಿಗಳ ಅನುಮಾನ ಹೆಚ್ಚಾಗಿತ್ತು.

ಇದನ್ನೂ ಓದಿ : Shubhman Gill | ಶುಭ್​ಮನ್​ ಗೆಳತಿ ಯಾರು? ಸಾರಾ ಅಲಿಖಾನ್ ಅಥವಾ ಸಾರಾ ತೆಂಡೂಲ್ಕರ್​?

“ನೀವು ಸಾರಾ ಜೊತೆ ಡೇಟಿಂಗ್ ಮಾಡುತ್ತಿದ್ದೀರಾ?” ಸೋನಮ್ ಬಾಜ್ವಾ, ಶುಭ್​ಮನ್​ ಗಿಲ್ ಅವರನ್ನು ಕೇಳಿದ್ದರು. ಅದಕ್ಕೆ ಗಿಲ್​ ನಾಚಿಕೆಪಟ್ಟು “ಇರಬಹುದು, ಇಲ್ಲದಿರಬಹುದು” ಎಂದು ಉತ್ತರಿಸಿದ್ದರು.

ಆದರೆ ಸಾರಾ ಯಾರೆಂಬುದನ್ನು ಸ್ಪಷ್ಟಪಡಿಸಿರಲಿಲ್ಲ. ತೆಂಡೂಲ್ಕರ್ ಅವರ ಮಗಳು ಸಾರಾ ಅಥವಾ ಪಟೌಡಿ ರಾಜಕುಮಾರಿ ಸಾರಾ ಎಂಬುದಾಗಿ ಅವರು ಹೇಳಿರಲಿಲ್ಲ.

Continue Reading

ಕ್ರಿಕೆಟ್

Team India : ಶೂಗಳ ಚಿತ್ರ ಹಾಕಿ ಹೊಸ ಸಂದೇಶ ರವಾನಿಸಿದ ಬುಮ್ರಾ; ಏನಿದರ ಅರ್ಥ?

ಇನ್​ಸ್ಟಾಗ್ರಾಮ್​ನಲ್ಲಿ ಸ್ಪೈಕ್​ ಶೂಗಳ ಚಿತ್ರವನ್ನು ಹಾಕಿದ ಅವರ ಟೀಮ್​ ಇಂಡಿಯಾಗೆ (Team India) ಮರಳುವ ಸೂಚನೆ ಕೊಟ್ಟರು.

VISTARANEWS.COM


on

jasprit bumrah shoes
Koo

ಮುಂಬಯಿ: ಭಾರತ ತಂಡದ ವೇಗದ ಬೌಲರ್​ ಜಸ್​ಪ್ರಿತ್​ ಕಳೆದ 10 ತಿಂಗಳಿಂದ ಆಡುತ್ತಿಲ್ಲ. ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿರುವ ಅವರು ಎರಡು ಐಸಿಸಿ ಟೂರ್ನಿ, ತವರಿನ ಹಾಗೂ ವಿದೇಶದ ಪ್ರವಾಸದ ಸರಣಿಗಳನ್ನು ನಷ್ಟ ಮಾಡಿಕೊಂಡಿದ್ದಾರೆ. ಹಾಲಿ ಆವೃತ್ತಿಯ ಐಪಿಎಲ್​ನಲ್ಲಿ ಆಡಿಲ್ಲ. ಏತನ್ಮಧ್ಯೆ ಅವರಿಗೆ ಕಳೆದ ಮಾರ್ಚ್​ನಲ್ಲಿ ನ್ಯೂಜಿಲ್ಯಾಂಡ್​ನಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದೀಗ ಅವರು ಮತ್ತೆ ಆಟದ ಕಣಕ್ಕೆ ಇಳಿಯುವ ಸೂಚನೆ ಕೊಟ್ಟಿದ್ದಾರೆ. ಅವರು ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ತಮ್ಮ ಬೌಲಿಂಗ್ ಸ್ಪೈಕ್​ಗಳ ಚಿತ್ರಗಳನ್ನು ಹಾಕಿದ್ದಾರೆ. ಅದಕ್ಕವರು ಹಲೊ ಸ್ನೇಹಿತರೇ ಮತ್ತೆ ಭೇಟಿಯಾಗಲಿದ್ದೇವೆ ಎಂದು ಶೀರ್ಷಿಕೆ ಕೊಟ್ಟಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪತ್ರಿಕಾ ಪ್ರಕಟಣೆಯಲ್ಲಿ ಖಚಿತಪಡಿಸಿದಂತೆ 29 ವರ್ಷದ ಬೌಳರ್​​ ಕಳೆದ ಏಪ್ರಿಲ್​​ನಲ್ಲಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಕಾರ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್ 2023 ರಲ್ಲಿ ಭಾಗವಹಿಸಿರಲಿಲ್ಲ. ಇದೀಗ ಅವರು ಸಂಪೂರ್ಣ ಸುಧಾರಿಸಿಕೊಂಡಿರುವ ಸಾಧ್ಯತೆಗಳಿವೆ. ಹೀಗಾಗಿ ಚಿತ್ರವನ್ನು ಪೋಸ್ಟ್​ ಮಾಡುವ ಮೂಲಕ ತಂಡಕ್ಕೆ ಮರಳುವ ಸೂಚನೆ ಕೊಟ್ಟಿದ್ದಾರೆ. ಮುಂಬರುವ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ನ ಫೈನಲ್ ಪಂದ್ಯಕ್ಕೆ ಅವರು ಆಯ್ಕೆಯಾಗಿಲ್ಲ. ನಂತರದಲ್ಲಿ ಅವರು ತಂಡಕ್ಕೆ ಮರಳುವ ಸಾಧ್ಯತೆಗಳಿವೆ.

ಹಿನ್ನಡೆ ಅನುಭವಿಸಿದ್ದ ಮುಂಬೈ ಇಂಡಿಯನ್ಸ್

ಜಸ್​ಪ್ರಿತ್​ ಬುಮ್ರಾ ಅವರ ಅಲಭ್ಯತೆಯಿಂದಾಗಿ ಐದು ಬಾರಿಯ ಚಾಂಪಿಯನ್​ ಮುಂಬಯಿ ಇಂಡಿಯನ್ಸ್ ತಂಡ ಹಾಲಿ ಆವೃತ್ತಿಯ ಐಪಿಎಲ್​ನಲ್ಲಿ ಹೊಡ್ಡ ಮಟ್ಟದ ಹಿನ್ನಡೆ ಅನುಭವಿಸಿತ್ತು ಅವರ ಅನುಪಸ್ಥಿತಿಯು ಮುಂಬೈನ ಬೌಲಿಂಗ್ ದಾಳಿ ದುರ್ಬಲಗೊಂಡಿತ್ತು. ಇಂಗ್ಲೆಂಡ್​ನ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರ ಮೇಲೆ ಮುಂಬೈ ಭರವಸೆ ಇಟ್ಟಿತ್ತು. ಆದರೆ ಮೊಣಕೈ ಸಮಸ್ಯೆಯು ಪುನರಾವರ್ತನೆಗೊಂಡ ಕಾರಣ ಅವರ ಸೇವೆಯು ತಂಡಕ್ಕೆ ಲಭಿಸಲಿಲ್ಲ. ಹೀಗಾಗಿ ರೋಹಿತ್ ಶರ್ಮಾ ನೇತೃತ್ವದ ತಂಡದ ಬೌಲಿಂಗ್ ವಿಭಾಗ ಒತ್ತಡ ಎದುರಿಸಿತ್ತು.

ಆರ್ಚರ್ ಐಪಿಎಲ್​ 2023ರಲ್ಲಿ ಮುಂಬೈ ಪರ ಐದು ಬಾರಿ ಮೈದಾನಕ್ಕೆ ಇಳಿದಿದ್ದರೂ ಸಂಪೂರ್ಣ ವೈಫಲ್ಯ ಎದುರಿಸಿದ್ದರು. 9.5 ಎಕಾನಮಿಯಲ್ಲಿ ರನ್​ ನೀಡಿದ್ದ ಅವರು ಕೇವಲ ಎರಡು ಉರುಳಿಸಲು ಸಫಲಗೊಂಡಿದ್ದರು. ಹೀಗಾಗಿ 28 ವರ್ಷದ ವೇಗಿ ಕೊನೇ ಹಂತದಲ್ಲಿ ಆಡಿರಲಿಲ್ಲ. ಶಸ್ತ್ರಚಿಕಿತ್ಸೆಗೆ ಒಳಗಾಗಲು ಬೆಲ್ಜಿಯಂಗೆ ಹೋಗಿದ್ದಾರೆ ಎಂದು ವರದಿಯಾಗಿದ್ದವು.

ಮುಂಬಯಿ ತಂಡದಲ್ಲಿ ಉಂಟಾದ ಗಾಯದ ಸಮಸ್ಯೆ ಜೇಸನ್ ಬೆಹ್ರೆನ್ಡಾರ್ಫ್ ಮತ್ತು ಆಕಾಶ್ ಮಧ್ವಾಲ್ ಅವರಿಗೆ ಸುವರ್ಣಾವಕಾಶಗಳನ್ನು ನೀಡಿತು. ಇಬ್ಬರೂ ವೈಯಕ್ತಿಕ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದರು. ಆದರೆ, ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್​ ತಂಡವನ್ನು ಕಟ್ಟಿ ಹಾಕಲು ಈ ಬೌಲರ್​ಗಳಿಗೆ ಸಾಧ್ಯವಾಗಿರಲಿಲ್ಲ.

ರೋಹಿತ್ ಶರ್ಮಾ ನೇತೃತ್ವದ ತಂಡದಲ್ಲಿ ಬೆಹ್ರೆನ್ಡಾರ್ಫ್ 12 ಪಂದ್ಯಗಳಲ್ಲಿ 9.21 ಎಕಾನಮಿಯಂತೆ 14 ವಿಕೆಟ್​ಗಳನ್ನು ಉರುಳಿಸಿದ್ದಾರೆ. ಇನ್ನು ಮಧ್ವಾಲ್​ ಆಡಿದ ಎಂಟು ಪಂದ್ಯಗಳಲ್ಲಿ 8.59 ಎಕಾನಮಿಯಂತೆ 14 ವಿಕೆಟ್​ ಕಬಳಿಸಿದ್ದಾರೆ. ಇನ್ನು ಮೇ 24 ರಂದು ಕೃಣಾಲ್ ಪಾಂಡ್ಯ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಮಧ್ವಾಲ್ 3.3 ಓವರ್ಗಳಲ್ಲಿ 5 ರನ್​​ಗಳಿಗೆ 5 ವಿಕೆಟ್ ಉರುಳಿಸಿದ್ದರು.

Continue Reading
Advertisement
horoscope today
ಪ್ರಮುಖ ಸುದ್ದಿ1 hour ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Bengalurus CBSE class 12 topper SS Akanksh felicitated
ಕರ್ನಾಟಕ6 hours ago

CBSE Exam Results: ಸಿಬಿಎಸ್‌ಸಿಯಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಸಂಸ್ಥೆಯ ಅಮೋಘ ಸಾಧನೆ

Siddaramaiah
ಕರ್ನಾಟಕ6 hours ago

Karnataka Cabinet Expansion: ಸರ್ಕಾರ ಟೇಕಾಫ್‌ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು

Government employees with CM Siddaramaiah
ಕರ್ನಾಟಕ6 hours ago

DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ; ಸಿಎಂ ಸಿದ್ದರಾಮಯ್ಯಗೆ ಸರ್ಕಾರಿ ನೌಕರರ ಅಭಿನಂದನೆ

MLA N Ravikumar
ಕರ್ನಾಟಕ6 hours ago

New Parliament Building: ಸಂಸತ್ ಭವನ ಉದ್ಘಾಟನೆ ಬಹಿಷ್ಕಾರ ನಾಚಿಕೆಗೇಡಿನ ಸಂಗತಿ: ಎನ್. ರವಿಕುಮಾರ್‌

Nissan Magnite Geza Special Edition
ಆಟೋಮೊಬೈಲ್6 hours ago

Nissan Magnite : ನಿಸ್ಸಾನ್​ ಮ್ಯಾಗ್ನೈಟ್ ಗೆಜಾ ಬೆಲೆ 7.39 ಲಕ್ಷ ರೂ.ಗಳಿಂದ ಆರಂಭ

vistara kathaspardhe prize distribution1
ಕರ್ನಾಟಕ7 hours ago

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ: ನಾಗತಿಹಳ್ಳಿ‌ ಚಂದ್ರಶೇಖರ್

BCCI MEETING
ಕ್ರಿಕೆಟ್7 hours ago

World Cup 2023 : ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ

Narendra Modi Speech At NITI Aayog Meeting
ದೇಶ7 hours ago

NITI Aayog Meeting: ವಿಕಸಿತ ಭಾರತದ ಕನಸು ಬಿತ್ತಿದ ಮೋದಿ; 11 ಸಿಎಂಗಳು ಗೈರಾದರೂ ಪ್ರಧಾನಿ ಅಭಿವೃದ್ಧಿ ಮಂತ್ರ

New parliament Building
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ನೂತನ ಸಂಸತ್ ಕಟ್ಟಡ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

horoscope today
ಪ್ರಮುಖ ಸುದ್ದಿ1 hour ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ13 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ1 day ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ1 day ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

karnataka politics it takes time to implement guarantee schemes says minister priyank kharge
ಕರ್ನಾಟಕ4 days ago

Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

ಟ್ರೆಂಡಿಂಗ್‌

error: Content is protected !!