IPL 2023: ಮುಂಬೈ,ಗುಜರಾತ್​ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಅಡ್ಡಿ; ಟಾಸ್​ ವಿಳಂಬ; ಪಂದ್ಯ ರದ್ದಾದರೆ ಯಾರು ಫೈನಲ್​ಗೆ? - Vistara News

ಕ್ರಿಕೆಟ್

IPL 2023: ಮುಂಬೈ,ಗುಜರಾತ್​ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಅಡ್ಡಿ; ಟಾಸ್​ ವಿಳಂಬ; ಪಂದ್ಯ ರದ್ದಾದರೆ ಯಾರು ಫೈನಲ್​ಗೆ?

ಅಹಮದಾಬಾದ್​ನಲ್ಲಿ ಮಳೆಯಾಗುತ್ತಿದ್ದು ಮುಂಬೈ ಇಂಡಿಯನ್ಸ್​ ಮತ್ತು ಗುಜರಾತ್​ ಟೈಟನ್ಸ್​ ವಿರುದ್ಧದ ಕ್ವಾಲಿಫೈಯರ್ ಪಂದ್ಯದ ಟಾಸ್​ ವಿಳಂಬಗೊಂಡಿದೆ.

VISTARANEWS.COM


on

Narendra Modi Stadium, Ahmedabad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಮುಂಬೈ ಇಂಡಿಯನ್ಸ್​ ಮತ್ತು ಗುಜರಾತ್​ ಟೈಟನ್ಸ್​ ವಿರುದ್ಧದ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು ಡಾಟ್​ ವಿಳಂಬಗೊಂಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ಸಂಪೂರ್ಣವಾಗಿ ರದ್ದಾದರೆ ಆಗ ಯಾವ ತಂಡ ಫೈನಲ್​ ಪ್ರವೇಶಿಸಲಿದೆ ಎಂಬ ಮಾಹಿತಿ ಇಲ್ಲಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಬೇಕಿರುವ ಉಭಯ ತಂಡಗಳ ಈ ಮಹತ್ವದ ಪಂದ್ಯ ಮಳೆಯಿಂದ ಸ್ಥಗಿತಗೊಂಡಿದೆ. ಸದ್ಯ ಮಳೆ ಸಂಪೂರ್ಣವಾಗಿ ನಿಂತಿದ್ದು, ಕೊಂಚ ಸಮಯದ ಬಳಿಕ ಆರಂಭವಾಗಲಿದೆ ಎಂದು ತಿಳಿದುಬಂದಿದೆ. ಒಂದೊಮ್ಮೆ ಪಂದ್ಯ ನಡೆಯುವ ಮಧ್ಯೆ ಮಳೆ ಬಂದರೆ ಓವರ್​ ಕಡಿ ಅಥವಾ ಸೂಪರ್​ ಓವರ್​ ಮೂಲಕ ಫಲಿತಾಂಶಕ್ಕಾಗಿ ಪಂದ್ಯ ನಡೆಸಲಾಗುತ್ತದೆ. ಆದರೆ ಮಳೆಯಿಂದ ಈ ಪಂದ್ಯ ಎರಡು ಇನಿಂಗ್ಸ್​ ನಡೆಯದೇ ಹೋದರೆ ಮೀಸಲು ದಿನ ಇಲ್ಲವಾದ ಕಾರಣ ಲೀಗ್​ನಲ್ಲಿ ಮುಂದಿರುವ ತಂಡ ನೇರವಾಗಿ ಫೈನಲ್​ ಪ್ರವೇಶ ಪಡೆಯಲಿದೆ.

ಇದನ್ನೂ ಓದಿ IPL 2023: ಟೂರ್ನಿಯಿಂದ ಹೊರಬಿದ್ದರೂ ವಿಶೇಷ ಅವತಾರದಲ್ಲಿ ಕಾಣಿಸಿಕೊಂಡ ಆರ್​ಸಿಬಿ ನಾಯಕ

ಮಳೆಯಿಂದ ಪಂದ್ಯ ರದ್ದಾದರೆ ಗುಜರಾತ್​ ಟೈಟನ್ಸ್​ ತಂಡ ನೇರವಾಗಿ ಫೈನಲ್​ಗೆ ಪ್ರವೇಶ ಪಡೆಯಲಿದೆ. ಏಕೆಂದರೆ ಲೀಗ್​ ಹಂತದಲ್ಲಿ ಗುಜರಾತ್​ ಅಗ್ರಸ್ಥಾನದಲ್ಲಿತ್ತು. ಮೇ 28ರಂದು ನಡೆಯುವ ಫೈನಲ್​ನಲ್ಲಿ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೆಣಸಾಟ ನಡೆಸಲಿದೆ. ಫೈನಲ್​ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ ಪಡಿಸಿದರೆ ಆಗ ಮೀಸಲು ದಿನ ಇರಲಿದೆ.

ಮೇಲ್ನೋಟಕ್ಕೆ ಮುಂಬೈ ಮತ್ತು ಗುಜರಾತ್‌ ಸಮಬಲದ ತಂಡಗಳಾಗಿ ಗೋಚರಿಸುತ್ತಿವೆ. ಎರಡೂ ತಂಡಗಳ ನಾಯಕತ್ವ ಬಲಿಷ್ಠವಾಗಿದೆ. ಆಯ್ಕೆ ಪ್ರಕ್ರಿಯೆ ಸಮತೋಲನದಿಂದ ಕೂಡಿದೆ. ಕೊನೆಯ ನಿಮಿಷದ ತನಕ ಹೋರಾಡುವ ಕೆಚ್ಚು ಎರಡೂ ತಂಡಗಳ ವೈಶಿಷ್ಟ. ಹೀಗಾಗಿ ಸ್ಪರ್ಧೆ ಅತ್ಯಂತ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.

ಗುಜರಾತ್​ ತಂಡ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋತರೂ, ತವರಿನಲ್ಲಿ ಬಲಿಷ್ಠವಾಗಿದೆ. ಪಾಂಡ್ಯ ಪಡೆ ಇಲ್ಲಿ ಈವರೆಗೆ 8 ಪಂದ್ಯಗಳನ್ನು ಆಡಿದ್ದು 5 ರಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ತವರಿನ ಲಾಭ ಗುಜರಾತ್​ ತಂಡಕ್ಕಿರುವುದರಲ್ಲಿ ಯಾವುದೇ ಅನುಮಾನವಿಲ್ಲ. ಶುಭಮನ್​ ಗಿಲ್​ ಅವರು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಈ ಆವೃತ್ತಿಯಲ್ಲಿ ಅವರು ಸತತ ಶತಕ ಬಾರಿಸಿ ಸದ್ಯ 722 ರನ್​ ಗಳಿಸಿದ್ದಾರೆ. ಅವರು ಮುಂಬೈ ವಿರುದ್ಧ 8 ರನ್​ ಗಳಿಸಿದರೆ ಫಾಫ್​ ಡು ಪ್ಲೆಸಿಸ್​ ಅವರನ್ನು ಹಿಂದಿಕ್ಕಿ ಈ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Riyan Parag: 3 ದಿನ ನೋವು ನಿವಾರಕ ಮಾತ್ರೆ ಸೇವಿಸಿ ಹಾಸಿಗೆಯಲ್ಲಿದ್ದೆ; ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ಭಾವುಕರಾದ ​ಪರಾಗ್

Riyan Parag: ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಪರಾಗ್​, ಕಳೆದ 3 ದಿನಗಳಿಂದ ನಾನು ನಿರಂತರವಾಗಿ ನೋವು ನಿವಾರಕ ಮಾತ್ರೆ ಸೇವಿಸುತ್ತಾ ಹಾಸಿಗೆಯಲ್ಲಿದ್ದೆ. ಆದರೆ ಇಂದು ನಾನು ನನ್ನ ತಂಡಕ್ಕೆ ನೀಡಿದ ಕೊಡುಗೆ ಖುಷಿ ಹೆಚ್ಚಿಸಿದೆ ಎಂದರು.

VISTARANEWS.COM


on

Riyan Parag
Koo

ಜೈಪುರ: ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ವಿರುದ್ಧದ ಪಂದ್ಯದಲ್ಲಿ ಅಸಾಮಾನ್ಯ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ರಾಜಸ್ಥಾನ್(Rajasthan Royals)​ ತಂಡದ ರಿಯಾನ್​ ಪರಾಗ್(Riyan Parag)​ ಅವರು ಈ ಬ್ಯಾಟಿಂಗ್​ ಪ್ರದರ್ಶನಕ್ಕೂ ಮುನ್ನ ತಾವು ಅನುಭವಿಸಿದ ನರಕಯಾತನೆಯನ್ನು ಬಹಿರಂಗಪಡಿಸಿದ್ದಾರೆ.

ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಪರಾಗ್​, ಕಳೆದ 3 ದಿನಗಳಿಂದ ನಾನು ನಿರಂತರವಾಗಿ ನೋವು ನಿವಾರಕ ಮಾತ್ರೆ ಸೇವಿಸುತ್ತಾ ಹಾಸಿಗೆಯಲ್ಲಿದ್ದೆ. ಆದರೆ ಇಂದು ನಾನು ನನ್ನ ತಂಡಕ್ಕೆ ನೀಡಿದ ಕೊಡುಗೆ ಖುಷಿ ಹೆಚ್ಚಿಸಿದೆ ಎಂದರು. ಆದರೆ ಮಾತ್ರೆ ಸೇವಿದ ಕಾರಣ ಏನೆಂಬುದನ್ನು ಮಾತ್ರ ಬಹಿರಂಗಪಡಿಸಿಲ್ಲ. ಅಸ್ಸಾಂ ಮೂಲದ 22 ವರ್ಷದ ಕ್ರಿಕೆಟಿಗನಾಗಿರುವ ಪರಾಗ್​ ಸೈಯ್ಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದರು. ಆಡಿದ 10 ಇನ್ನಿಂಗ್ಸ್‌ಗಳಲ್ಲಿ 510 ರನ್‌ ಸಿಡಿಸಿದ್ದರು. 56 ಐಪಿಎಲ್​ ಪಂದ್ಯವಾಡಿ 727 ರನ್​ ಬಾರಿಸಿದ್ದಾರೆ. 4 ವಿಕೆಟ್​ ಕೂಡ ಪಡೆದಿದ್ದಾರೆ. 2018ರ ಅಂಡರ್​-19 ವಿಶ್ವಕಪ್ ವಿಜೇತ ತಂಡದಲ್ಲಿ ಸ್ಥಾನ ಪಡೆದಿದ್ದ ಪರಾಗ್ ಅವರು 2022-23ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಐದನೇ ಅತಿ ಹೆಚ್ಚು ರನ್​ಗಳಿಸಿದ್ದ ಆಟಗಾರರಾಗಿದ್ದರು. 69 ಸರಾಸರಿಯೊಂದಿಗೆ 552 ರನ್​ಗಳನ್ನು ಗಳಿಸಿದ್ದ ಪರಾಗ್​ ಮೂರು ಶತಕ ಮತ್ತು ಒಂದು ಅರ್ಧಶತಕ ಸಿಡಿಸಿದ್ದರು.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ ನಡೆಸಿದ ಪರಾಗ್​ ಕೇವಲ 45 ಎಸೆತಗಳಿಂದ 84 ರನ್​ ಬಾರಿಸಿದ್ದರು. ಅವರ ಈ ಸೊಗಸಾದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಆಕರ್ಷಕ ಸಿಕ್ಸರ್​ ಮತ್ತು 7 ಬೌಂಡರಿ ದಾಖಲಾಯಿತು. ಅದರಲ್ಲೂ ಅನ್ರಿಚ್​ ನೋರ್ಜೆ ಅವರಿಗೆ ಸರಿಯಾಗಿ ದಂಡಿಸಿದರು.

ಇದನ್ನೂ ಓದಿ IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

ಕಿರಿಕ್​ ಮಾಡಿದ್ದ ಹರ್ಷಲ್​ ಪಟೇಲ್​


2022ರಲ್ಲಿ ಆರ್‌ಸಿಬಿ ಮತ್ತು ರಾಜಸ್ಥಾನ್‌ ನಡುವಿನ ಪಂದ್ಯದಲ್ಲಿ ಆರ್​ಸಿಬಿ ತಂಡದ ಆಟಗಾರನಾಗಿದ್ದ ಹರ್ಷಲ್​ ಪಡೇಲ್​ ಅವರು ಪರಾಗ್​ ಜತೆ ಕಿರಿಕ್​ ಮಾಡಿಕೊಂಡು ಸರಿಯಾಗಿಯೇ ದಂಡಿಸಿಕೊಂಡಿದ್ದರು. ರಾಜಸ್ಥಾನ್‌ ಇನ್ನಿಂಗ್ಸ್‌ ವೇಳೆ ಹರ್ಷಲ್‌ ಪಟೇಲ್‌ ಎಸೆದ ಕೊನೆಯ ಓವರ್‌ನಲ್ಲಿ ರಿಯಾನ್‌ ಪರಾಗ್‌ ಒಂದು ಬೌಂಡರಿ, 2 ಸಿಕ್ಸರ್‌ ಸೇರಿದಂತೆ 18 ರನ್‌ ಚಚ್ಚಿದ್ದರು. ಅಂತಿಮ ಎಸೆತ ಸಿಕ್ಸರ್‌ ಸಿಡಿದಾಗ ಹರ್ಷಲ್​ ಆಕ್ರೋಶಗೊಂಡು ಇನ್ನಿಂಗ್ಸ್‌ ಮುಗಿಸಿ ಡಗೌಟ್‌ನತ್ತ ಸಾಗುತ್ತಿದ್ದಾಗ ಪರಾಗ್‌ ಜತೆ ಜಗಳಕ್ಕಿಳಿದಿದ್ದರು. ಪರಾಗ್‌ ಕೂಡ ತಕ್ಕ ಜವಾಬು ನೀಡಿದ್ದರು. ಇನ್ನೇನು ಕೈ ಮಿಲಾಯಿಸುವ ಹಂತಕ್ಕೆ ಬಂದಾಗ ಸಹ ಆಟಗಾರರು ಇವರಿಬ್ಬರನ್ನು ಸಮಾಧಾನಗೊಳಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು.

ಇತ್ತಂಡಗಳ ಆಟಗಾರರು ಪಂದ್ಯದ ಬಳಿಕ ಪರಸ್ಪರ ಕೈ ಕುಲುಕುವ ವೇಳೆಯೂ ಸಿಟ್ಟಿನಲ್ಲಿದ್ದ ಹರ್ಷಲ್​ ಪಟೇಲ್‌, ಪರಾಗ್‌ ಅವರ ಕೈ ಕುಲುಕದೆ ತಮ್ಮ ಕೋಪವನ್ನು ಹೊರಹಾಕಿದ್ದರು. ಪರಾಗ್‌ ಶೇಕ್‌ಹ್ಯಾಂಡ್‌ ಮಾಡಲು ಬಂದರೂ ಪಟೇಲ್‌ ಇದಕ್ಕೆ ಸ್ಪಂದಿಸದೇ ಸಾಗಿದ್ದರು.

Continue Reading

ಕ್ರೀಡೆ

LSG vs PBKS: ಗೆಲುವಿನ ಖಾತೆ ತೆರೆದೀತೇ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ತಂಡ?

LSG vs PBKS: ಉಭಯ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದು ಲಕ್ನೋ ತಂಡ 2 ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಪಂಜಾಬ್​ ಒಂದು ಪಂದ್ಯ ಮಾತ್ರ ಗೆದ್ದಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಲಕ್ನೋ ಬಲಿಷ್ಠವಾಗಿ ಗೋಚರಿಸಿದೆ.

VISTARANEWS.COM


on

Kaptaan KL is keeping
Koo

ಲಕ್ನೋ: ರಾಜಸ್ಥಾನ್​ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಕೆ.ಎಲ್​ ರಾಹುಲ್(KL Rahul)​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ಶನಿವಾರದ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​​(LSG vs PBKS) ವಿರುದ್ಧ ಕಣಕ್ಕಿಳಿಯಲಿದೆ. ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಬೇಕಿದ್ದರೆ ತಂಡಕ್ಕೆ ಗೆಲುವು ಅತ್ಯಗತ್ಯ.

ಲಕ್ನೋ ತಂಡಕ್ಕೆ ಇದು ತವರಿನ ಮೊದಲ ಪಂದ್ಯವಾಗಿದೆ. ತಂಡ ಬಲಿಷ್ಠವಾಗಿದ್ದರೂ ಕೂಡ ಆಟಗಾರರ ಸಂಘಟಿತ ಪ್ರದರ್ಶನ ಮಾತ್ರ ಸಾಲದು. ಬೌಲಿಂಗ್​ ವಿಭಾಗದಲ್ಲಿ ನವೀನ್​ ಉಲ್​ ಹಕ್​ ಬದಲು ಗಬಾದಲ್ಲಿ ಆಸ್ಟ್ರೇಲಿಯಾದ ಹುಟ್ಟಡಗಿಸಿದ ವಿಂಡೀಸ್​ನ ಯುವ ಆಟಗಾರ ಶಮರ್​ ಜೋಸೆಪ್​ ಅವರನ್ನು ಆಡಿಸಿದರೆ ಉತ್ತಮ. ಬ್ಯಾಟಿಂಗ್​ನಲ್ಲಿಯೂ ಮಾರ್ಕಸ್​ ಸ್ಟೋಯಿಸ್​, ಕೃಣಾಲ್​ ಪಾಂಡ್ಯ, ಬದೋನಿ, ಪಡಿಕ್ಕಲ್​ ಮತ್ತು ಕ್ವಿಂಟನ್​ ಡಿ ಕಾಕ್​ ಸಿಡಿಯುವ ಅನಿವಾರ್ಯತೆ ಇದೆ.

ಕಳೆದ ಪಂದ್ಯದಲ್ಲಿ ರಾಹುಲ್​ ಮತ್ತು ಪೂರನ್​ ಮಾತ್ರ ತಂಡಕ್ಕೆ ಆಸರೆಯಾಗಿದ್ದರು. ಲಕ್ನೋ ಪರ ಚೊಚ್ಚಲ ಪಂದ್ಯವನ್ನಾಡಿದ ಪಡಿಕ್ಕಲ್​ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿ ಈ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ನಡೆಸಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳಬೇಕಿದೆ. ರವಿ ಬಿಷ್ಟೋಯಿ ಕೂಡ ತುರ್ತು ವೇಗದಲ್ಲಿ ಬೌಲಿಂಗ್​ ಲಯ ಕಂಡುಕೊಳ್ಳುವ ಅಗತ್ಯವಿದೆ. ರಾಜಸ್ಥಾನ್​ ವಿರುದ್ಧ ದುಬಾರಿಯಾಗಿ ಗೋಚರಿಸಿದ್ದರು.

ಪಂಜಾಬ್​ ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಸೋಲು ಕಂಡಿದೆ. ಇದು ತಂಡಕ್ಕೆ ಮೂರನೇ ಪಂದ್ಯವಾಗಿದೆ. ಶಿಖರ್​ ಧವನ್​, ಸ್ಯಾಮ್ ಕರನ್​, ಲಿಯಾಮ್​ ಲಿವಿಂಗ್ಸ್​ ಸ್ಟೋನ್​ ಬ್ಯಾಟಿಂಗ್​ ಬಲವಾದರೆ, ಬೌಲಿಂಗ್​ನಲ್ಲಿ ಅರ್ಶ್​ದೀಪ್​ ಸಿಂಗ್​, ಕಗಿಸೊ ರಬಾಡ, ರಾಹುಲ್​ ಚಹರ್​ ಮತ್ತು ಹರ್‌ಪ್ರೀತ್ ಬ್ರಾರ್ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ. ಒಟ್ಟಾರೆಯಾಗಿ ತಂಡ ಎಲ್ಲ ವಿಭಾಗದಲ್ಲಿ ಸಮರ್ಥವಾಗಿದೆ.

ಇದನ್ನೂ ಓದಿ IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

ಮುಖಾಮುಖಿ


ಉಭಯ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದು, ಲಕ್ನೋ ತಂಡ 2 ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಪಂಜಾಬ್​ ಒಂದು ಪಂದ್ಯ ಮಾತ್ರ ಗೆದ್ದಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಲಕ್ನೋ ಬಲಿಷ್ಠವಾಗಿ ಗೋಚರಿಸಿದೆ.

ಸಂಭಾವ್ಯ ತಂಡಗಳು


ಲಕ್ನೋ:
ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ದೇವದತ್ ಪಡಿಕ್ಕಲ್, ಆಯುಷ್ ಬದೋನಿ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಶಮರ್​ ಜೋಸೆಫ್​, ಯಶ್ ಠಾಕೂರ್.

ಪಂಜಾಬ್​ ಕಿಂಗ್ಸ್​: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರಾನ್​, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್.

Continue Reading

ಕ್ರೀಡೆ

RCB vs KKR: ಕೆಕೆಆರ್​ ಸವಾಲು ಸುಲಭದ್ದಲ್ಲ; ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ದಾಖಲೆ ಹೇಗಿದೆ?

RCB vs KKR: ಆರ್​ಸಿಬಿ ಮತ್ತು ಕೆಕೆಆರ್​ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಒಟ್ಟು 11 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ ಗೆದ್ದದ್ದು ಕೇವಲ 4 ಪಂದ್ಯಗಳು ಮಾತ್ರ. ಕೆಕೆಆರ್​ 7 ಪಂದ್ಯಗಳನ್ನು ಗೆದ್ದಿದೆ.

VISTARANEWS.COM


on

RCB
Koo

ಬೆಂಗಳೂರು: ಶುಕ್ರವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಕೆಕೆಆರ್​ ಮತ್ತು ಆರ್​ಸಿಬಿ(RCB vs KKR) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ವಿರಾಟ್​ ಕೊಹ್ಲಿ vs ಗೌತಮ್​ ಗಂಭೀರ್​ ಎಂದೇ ನಿರ್ಧರಿಸಲಾಗಿದೆ. ಇದಕ್ಕೆ ಕಾರಣ ಉಭಯ ಆಟಗಾರರ ನಡುವಣ ಹಾವು ಮುಂಗುಸಿಯಂತಹ ಕಚ್ಚಾಟ. ಹೀಗಾಗಿ ಈ ಪಂದ್ಯವನ್ನು ಹೈವೋಲ್ಟೇಜ್​ ಪಂದ್ಯ ಎಂದು ನಿರೀಕ್ಷಿಸಲಾಗಿದೆ. ಆದರೆ, ತವರಿನಲ್ಲಿ ಕೆಕೆಆರ್(RCB vs kkr chinnaswamy stadium records)​ ವಿರುದ್ಧ ಆರ್​ಸಿಬಿ ದಾಖಲೆ ಅಷ್ಟು ಉತ್ತಮವಾಗಿಲ್ಲ.

ಚಿನ್ನಸ್ವಾಮಿ ಮುಖಾಮುಖಿ ದಾಖಲೆ


ಆರ್​ಸಿಬಿ ಮತ್ತು ಕೆಕೆಆರ್​ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಒಟ್ಟು 11 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ ಗೆದ್ದದ್ದು ಕೇವಲ 4 ಪಂದ್ಯಗಳು ಮಾತ್ರ. ಕೆಕೆಆರ್​ 7 ಪಂದ್ಯಗಳನ್ನು ಗೆದ್ದಿದೆ. ಕಳೆದ 2016 ರಿಂದ ಚಿನ್ನಸ್ವಾಮಿಯಲ್ಲಿ ನಡೆದ 5 ಪಂದ್ಯಗಳಲ್ಲಿಯೂ ಕೆಕೆಆರ್​ ತಂಡವೇ ಗೆದ್ದು ಬೀಗಿದೆ. ಒಟ್ಟಾರೆಯಾಗಿ ಆರ್​ಸಿಬಿ ಈ ಸ್ಟೇಡಿಯಂನಲ್ಲಿ 94 ಪಂದ್ಯಗಳನ್ನು ಆಡಿ 45 ಗೆಲುವು ಮತ್ತು 44 ಸೋಲು ಕಂಡಿದೆ. ಕೆಕೆಆರ್​ ತಂಡ ಇಲ್ಲಿ 17 ಪಂದ್ಯಗಳನ್ನಾಡಿ 11ರಲ್ಲಿ ಜಯ ಸಾಧಿಸಿದೆ. ಆರ್​ಸಿಬಿಗೆ ಹೋಲಿಸಿದರೆ ಕೆಕೆಆರ್​ ತಂಡವೇ ಈ ಮೈದಾನದಲ್ಲಿ ಉತ್ತಮ ದಾಖಲೆ ಹೊಂದಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿಯೂ ಕೆಕೆಆರ್​ ತಂಡವೇ ಗೆಲ್ಲುವ ಫೇವರಿಟ್ ಆಗಿ ಗೋಚರಿಸಿದೆ.


ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ಮೈದಾನದಲ್ಲಿ ಎರಡು ಬಾರಿ ಜಗಳವಾಡಿದ್ದಾರೆ. ಎರಡೂ ಸಂದರ್ಭಗಳು ಐಪಿಎಲ್​ನಲ್ಲಾಗಿದ್ದವು. 2013 ರಲ್ಲಿ ಆಟಗಾರರಾಗಿ ಮತ್ತು ನಂತರ ಒಂದು ದಶಕದ ನಂತರ 2023 ರಲ್ಲಿ, ಆಯಾ ತಂಡಗಳ ಆಟಗಾರ ಮತ್ತು ತರಬೇತುದಾರರಾಗಿ ಅವರಿಬ್ಬರ ನಡುವೆ ವಾಗ್ವಾದ ನಡೆದಿತ್ತು. ಇದರ ಮುಂದುವರಿದ ಭಾಗ ಇಂದು ನಡೆಯುವ ಪಂದ್ಯದಲ್ಲಿ ಕಾಣಿಸಿಕೊಂಡರೂ ಅಚ್ಚರಿಯಿಲ್ಲ. ಕೊಹ್ಲಿ ಶಾಂತ ರೀತಿಯಿಂದ ವರ್ತಿಸಿದರೂ ಕೂಡ ಅವರ ಅಭಿಮಾನಿಗಳು ಗಂಭೀರ್​ ಅವರನ್ನು ಕೆಣಕುವುದಲ್ಲಿ ಅನುಮಾನವೇ ಬೇಡ. ಪಂದ್ಯಕ್ಕಾಗಿ ಕ್ರಿಕೆಟ್​ ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಇದನ್ನೂ ಓದಿ IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

ಸಂಭಾವ್ಯ ತಂಡಗಳು


ಆರ್​ಸಿಬಿ: ಫಾಫ್​ ಡು ಪ್ಲೆಸಿಸ್‌ (ನಾಯಕ), ವಿರಾಟ್​ ಕೊಹ್ಲಿ, ರಜತ್​ ಪಾಟಿದಾರ್‌, ಗ್ಲೆನ್​ ಮ್ಯಾಕ್ಸ್‌ವೆಲ್‌, ಕ್ಯಾಮರೂನ್​ ಗ್ರೀನ್‌, ದಿನೇಶ್​ ಕಾರ್ತಿಕ್‌, ಅನೂಜ್​ ರಾವತ್‌, ಮಯಾಂಕ್​ ಡಾಗರ್‌, ಅಲ್ಜಾರಿ ಜೋಸೆಫ್/ ರೀಸ್​ ಟಾಪ್ಲೆ, ಮೊಹಮ್ಮದ್​ ಸಿರಾಜ್‌, ಯಶ್​ ದಯಾಳ್‌.

ಕೆಕೆಆರ್​: ಫಿಲ್​ ಸಾಲ್ಟ್, ಸುನೀಲ್​ ನರೈನ್​, ವೆಂಕಟೇಶ್​ ಅಯ್ಯರ್‌, ಶ್ರೇಯಸ್‌ ಅಯ್ಯರ್​ (ನಾಯಕ), ನಿತೀಶ್‌ ರಾಣಾ , ರಮಣ್‌ದೀಪ್‌ ಸಿಂಗ್​, ರಿಂಕು ಸಿಂಗ್​, ಆ್ಯಂಡ್ರೆ ರಸೆಲ್‌, ಮಿಚೆಲ್​ ಸ್ಟಾರ್ಕ್‌, ಹರ್ಷಿತ್‌ ರಾಣಾ, ಮಿಥುನ್​ ಚಕ್ರವರ್ತಿ.

Continue Reading

ಕ್ರೀಡೆ

IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

IPL 2024: ಐಪಿಎಲ್​ ಟೂರ್ನಿ ಒಂದು ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿದೆ, ಅದೆಷ್ಟೋ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಲು ಉತ್ತಮ ವೇದಿಕೆಯಾಗಿದೆ. ಈ ಟೂರ್ನಿಯಿಂದ ಅನೇಕ ಪ್ರತಿಭಾನ್ವಿತ ಆಟಗಾರರು ಬೆಳಕಿಗೆ ಬಂದಿದ್ದಾರೆ. ಆದರೂ ಕೂಡ ಕೆಲವೊಮ್ಮೆ ನನಗೆ ಐಪಿಎಲ್‌ ಕ್ರಿಕೆಟ್‌ ಹೌದಾ ಎಂದು ಅನುಮಾನ ಮೂಡುತ್ತದೆ ಎಂದು ಅಶ್ವಿನ್​ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

VISTARANEWS.COM


on

R Ashwin
Koo

ಜೈಪುರ: ವಿಶ್ವದ ಕ್ಯಾಶ್‌ ರಿಚ್‌ ಕ್ರಿಕೆಟ್‌ ಲೀಗ್‌ ಆಗಿರುವ ಐಪಿಎಲ್(IPL 2024)​ ಬಗ್ಗೆ ಟೀಮ್​ ಇಂಡಿಯಾದ ಹಿರಿಯ ಹಾಗೂ ಅನುಭವಿ ಆಟಗಾರ ಆರ್​.ಅಶ್ವಿನ್(R Ashwin)​ ಅವರು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಐಪಿಎಲ್‌ ನಿಜಕ್ಕೂ ಕ್ರಿಕೆಟ್ಟಾ? ಎಂದು ಪ್ರಶ್ನೆ ಮಾಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ಪಂದ್ಯಕ್ಕೂ ಮುನ್ನ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ ರಾಜಸ್ಥಾನ್​ ರಾಯಲ್ಸ್​ ತಂಡದ ಆಟಗಾರನಾಗಿರುವ ಅಶ್ವಿನ್, ‘ಐಪಿಎಲ್​ ಟೂರ್ನಿ ಒಂದು ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿದೆ, ಅದೆಷ್ಟೋ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಲು ಉತ್ತಮ ವೇದಿಕೆಯಾಗಿದೆ. ಈ ಟೂರ್ನಿಯಿಂದ ಅನೇಕ ಪ್ರತಿಭಾನ್ವಿತ ಆಟಗಾರರು ಬೆಳಕಿಗೆ ಬಂದಿದ್ದಾರೆ. ಆದರೂ ಕೂಡ ಕೆಲವೊಮ್ಮೆ ನನಗೆ ಐಪಿಎಲ್‌ ಕ್ರಿಕೆಟ್‌ ಹೌದಾ ಎಂದು ಅನುಮಾನ ಮೂಡುತ್ತದೆ” ಎಂದು ಹೇಳಿದರು.

“ಯುವಕನಾಗಿ ಐಪಿಎಲ್​ ಟೂರ್ನಿಗೆ ಕಾಲಿಟ್ಟ ವೇಳೆ ಹಿರಿಯ ಆಟಗಾರರಿಂದ ಕಲಿಯಲು ಬಯಸುತ್ತಿದ್ದೆ. ಈಗ ನಾವು ಜಾಹೀರಾತು ಶೂಟಿಂಗ್‌ಗಾಗಿ ಅಭ್ಯಾಸ ಮಾಡುತ್ತ ನಮ್ಮ ಸಮಯವನ್ನು ಕಳೆದುಬಿಡುತ್ತೇವೆ. ಹೀಗಾಗಿ ಐಪಿಎಲ್‌ ಕ್ರಿಕೆಟ್‌ ಹೌದಾ ಎಂದು ಅಚ್ಚರಿಯಾಗುತ್ತದೆ” ಎಂದು ಆರ್‌.ಅಶ್ವಿ‌ನ್‌ ಹೇಳಿದ್ದಾರೆ. ಇತ್ತೀಚೆಗೆ ಭಾರತದಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅಶ್ವಿನ್​ ಅಮೋಘ ಬೌಲಿಂಗ್​ ಪ್ರದರ್ಶನದೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ 500 ವಿಕೆಟ್​ ಪೂರ್ತಿಗೊಳಿಸಿದ ಸಾಧನೆ ಮಾಡಿದ್ದರು.

ಇದನ್ನೂ ಓದಿ Rishabh Pant: ಕಮ್​ಬ್ಯಾಕ್​ ಪಂದ್ಯದಲ್ಲೇ ದಾಖಲೆ ಬರೆದ ರಿಷಭ್​ ಪಂತ್​

2009ರಲ್ಲಿ ಐಪಿಎಲ್​ಗೆ ಪದಾರ್ಪಣೆ ಮಾಡಿದ ಅಶ್ವಿನ್​ ಇದುವರೆಗೆ 199 ಪಂದ್ಯಗಳಲ್ಲಿ ಆಡಿದ್ದಾರೆ. 172 ವಿಕೆಟ್​ ಮತ್ತು 743 ರನ್​ ಬಾರಿಸಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ಪರ ಆರಂಭವಾದ ಇವರ ಐಪಿಎಲ್​ ಜರ್ನಿ ಬಳಿಕ ಡೆಲ್ಲಿ ಕ್ಯಾಪಿಟಲ್ಸ್​, ಪಂಜಾಬ್​ ಕಿಂಗ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ರಾಜಸ್ಥಾನ್​ ಪರ ಆಡುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ನಿನ್ನೆ(ಗುರುವಾರ) ನಡೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ನಡೆಸಿ ಗಮನಸೆಳೆದಿದ್ದರು. ಕೇವಲ 19 ಎಸೆತಗಳಿಂದ 3 ಸಿಕ್ಸರ್​ ಸಿಡಿಸಿ 29 ರನ್​ ಬಾರಿಸಿದ್ದರು. ಆದರೆ, ಬೌಲಿಂಗ್​ನಲ್ಲಿ ಯಶಸ್ಸು ಕಾಣಲಿಲ್ಲ. ಓವರ್​ಗೆ 10ರ ಸರಾಸರಿಯಲ್ಲಿ ರನ್​ ಬಿಟ್ಟು ಕೊಟ್ಟು ವಿಕೆಟ್​ ಲೆಸ್​ ಎನಿಸಿಕೊಂಡರು.

ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ


ಪ್ರಸಕ್ತ ಸಾಗುತ್ತಿರುವ ಐಪಿಎಲ್​ (IPL 2024) ಟೂರ್ನಿಯಲ್ಲಿ 9 ಪಂದ್ಯಗಳು ಮುಕ್ತಾಯಕಂಡಿದೆ. ಅಚ್ಚರಿ ಎಂದರೆ ಈ 9 ಪಂದ್ಯಗಳಲ್ಲಿಯೂ ತವರಿನ ತಂಡವೇ ಗೆಲುವು ಸಾಧಿಸಿದ್ದು. ಗುರುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​(Rajasthan Royals) ಸತತ 2 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ(IPL 2024 Points Table) ಮತ್ತೆ ಹಿಡಿತ ಸಾಧಿಸಿದೆ. ಡೆಲ್ಲಿ(Delhi Capitals) ಸತತ 2 ಸೋಲು ಕಂಡರೂ ಕೂಡ 8ನೇ ಸ್ಥಾನದಲ್ಲಿದೆ.

ನೂತನ ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
​ ಚೆನ್ನೈ ಸೂಪರ್​ ಕಿಂಗ್ಸ್​2204 (+1.979)
ರಾಜಸ್ಥಾನ್​ ರಾಯಲ್ಸ್2204 (+0.800)
ಸನ್​ರೈಸರ್ಸ್​ ಹೈದರಾಬಾದ್​2112 (+0.675)
ಕೋಲ್ಕೊತಾ ನೈಟ್‌ ರೈಡರ್ಸ್1102(+200)
ಪಂಜಾಬ್‌ ಕಿಂಗ್ಸ್2112‌ (+0.025)
ಆರ್‌ಸಿಬಿ2112 (-0.180)
ಗುಜರಾತ್‌ ಟೈಟಾನ್ಸ್2112 (-1.425)
ಡೆಲ್ಲಿ ಕ್ಯಾಪಿಟಲ್ಸ್2020 (–0.528)
ಮುಂಬೈ ಇಂಡಿಯನ್ಸ್2020 (-1000)
ಲಕ್ನೋ ಸೂಪರ್​ ಜೈಂಟ್ಸ್​1010 (-1.000)
Continue Reading
Advertisement
Lok Sabha Election 2024 BJP JDS coordination committee meeting successful Fight to win with the workers
Lok Sabha Election 20242 mins ago

Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

tcs jobs IT hiring
ಉದ್ಯೋಗ4 mins ago

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

Road Accident
ಬೆಂಗಳೂರು ಗ್ರಾಮಾಂತರ6 mins ago

Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

Sonarika Bhadoria
ಕಿರುತೆರೆ15 mins ago

Sonarika Bhadoria: ಹನಿಮೂನ್‌ನ ಹಾಟ್‌ ಫೋಟೊ ಶೇರ್‌ ಮಾಡಿದ ಹಿಂದಿ ಸೀರಿಯಲ್‌ ನಟಿ!

Riyan Parag
ಕ್ರೀಡೆ27 mins ago

Riyan Parag: 3 ದಿನ ನೋವು ನಿವಾರಕ ಮಾತ್ರೆ ಸೇವಿಸಿ ಹಾಸಿಗೆಯಲ್ಲಿದ್ದೆ; ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ಭಾವುಕರಾದ ​ಪರಾಗ್

Accident Case
ತುಮಕೂರು39 mins ago

Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

shani louk photo hamas terrorists
ವಿದೇಶ54 mins ago

Shani Louk Photo: ಹಮಾಸ್‌ ಒತ್ತೆಯಾಳು ಇಸ್ರೇಲಿ ಮಹಿಳೆಯ ನಗ್ನ ದೇಹದ ಫೋಟೋಗೆ ಪ್ರಶಸ್ತಿ; ಆಕ್ರೋಶ; ಉಗ್ರನೇ ತೆಗೆದ ಫೋಟೋನಾ?

Rahul Gandhi And Sonia Gandhi
ದೇಶ56 mins ago

Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

Karimani Malika Ninalla play by violinist Aneesh Vidyashankar
ವೈರಲ್ ನ್ಯೂಸ್1 hour ago

Karimani Malika Ninalla: ʻಕರಿಮಣಿ ಮಾಲೀಕʼ ರೀಲ್ಸ್‌ಗೆ ಇನ್ನಷ್ಟು ಮೆರುಗು ನೀಡಿದ ವಯೋಲಿನ್‌ ವಾದಕ!

Karnataka Weather
ಮಳೆ1 hour ago

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌