Site icon Vistara News

IPL 2023: ಟಾಸ್​ ಗೆದ್ದ ಮುಂಬೈ ತಂಡದಿಂದ ಬೌಲಿಂಗ್​ ಆಯ್ಕೆ

MI VS KKR

MI VS KKR

ಮುಂಬಯಿ: ಕೋಲ್ಕತಾ ನೈಟ್​ ರೇಡರ್ಸ್ ವಿರುದ್ಧ ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್​ ಮೊದಲು ಬೌಲಿಂಗ್​ ನಡೆಸುವ ನಿರ್ಧಾರ ಕೈಗೊಂಡಿದೆ. ಈ ಪಂದ್ಯದಲ್ಲಿ ಖಾಯಂ ನಾಯಕ ರೋಹಿತ್​ ಶರ್ಮ ಅವರು ಹೊರಗುಳಿದ ಕಾರಣ ಮುಂಬೈ ತಂಡವನ್ನು ಸೂರ್ಯಕುಮಾರ್​ ಯಾದವ್​ ಮುನ್ನಡೆಸಲಿದ್ದಾರೆ.

ಟೀಮ್​ ಇಂಡಿಯಾದ ಮಾಜಿ ದಿಗ್ಗಜ ಸಚಿನ್​ ತೆಂಡೂಲ್ಕರ್​ ಅವರ ಪುತ್ರ ಅರ್ಜುನ್​ ತೆಂಡೂಲ್ಕರ್​ ಅವರು ಈ ಪಂದ್ಯದ ಮೂಲಕ ಐಪಿಎಲ್​ಗೆ ಪದಾರ್ಪಣೆ ಮಾಡಿದರು.

ಮೊದಲೆರಡು ಪಂದ್ಯಗಳನ್ನು ಸೋತು, 3ನೇ ಪ್ರಯತ್ನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆಲುವು ಕಂಡಿರುವ ಮುಂಬೈ ಈ ಪಂದ್ಯದಲ್ಲಿಯೂ ಗೆಲ್ಲುವ ಯೋಜನೆ ಹಾಕಿಕೊಂಡಿದೆ. ಮುಂಬೈಗೆ ಇದು ತವರಿನ ಪಂದ್ಯವಾದ ಕಾರಣ ಇದರ ಲಾಭವೂ ಇರಲಿದೆ. ಆದರೆ ಚೆನ್ನೈ ವಿರುದ್ಧ ತವರಿನಲ್ಲಿಯೇ ನಡೆದ ಪಂದ್ಯದಲ್ಲಿ ರೋಹಿತ್​ ಪಡೆ ಸೋಲು ಕಂಡಿರುವುದನ್ನು ಮರೆಯುವಂತಿಲ್ಲ.

ಕೋಲ್ಕತಾ ನೈಟ್​ ರೇಡರ್ಸ್​ ಪ್ರಬಲವಾದ ಬ್ಯಾಟಿಂಗ್‌ ಸರದಿಯನ್ನು ಹೊಂದಿರುವ ತಂಡ. ಆದ್ದರಿಂದ ಈ ತಂಡವನ್ನು ಕಟ್ಟಿಹಾಕಲು ದೊಡ್ಡ ಮೊತ್ತವೇ ಬೇಕಿದೆ. ವೆಂಕಟೇಶ್‌ ಅಯ್ಯರ್‌, ನಿತೀಶ್‌ ರಾಣಾ, ರಿಂಕು ಸಿಂಗ್‌ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಅಪಾಯಕಾರಿ ಬ್ಯಾಟರ್​ಗಳಾಗಿದ್ದಾರೆ. ಬೌಲಿಂಗ್​ನಲ್ಲಿ ಸುನೀಲ್​ ನಾರಾಯಣ್​, ವರುಣ್ ಚಕ್ರವರ್ತಿ, ಸುಯಶ್ ಶರ್ಮಾ ಕೂಡ ಉತ್ತಮ ಲಯದಲ್ಲಿದ್ದಾರೆ.

ಪಿಚ್​ ರಿಪೋರ್ಟ್​

ಮುಂಬೈಯ ವಾಂಖೆಡೆ ಕ್ರೀಡಾಂಗಣವು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಇಲ್ಲಿ ನಡೆದ ಐಪಿಎಲ್​ನ ಬಹುತೇಕ ಪಂದ್ಯಗಳು ಹೈಸ್ಕೋರಿಂಗ್ ಆಗಿದೆ. 2017ರಲ್ಲಿ ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 235 ರನ್​ ಬಾರಿಸಿತ್ತು. ಇದು ಇಲ್ಲಿ ದಾಖಲಾದ ಅತ್ಯಧಿಕ ಮೊತ್ತವಾಗಿದೆ. ಇನ್ನು ಚೇಸಿಂಗ್​ ನಡೆಸಿದ ತಂಡಗಳೇ ಹೆಚ್ಚು ಬಾರಿ ಮೇಲುಗೈ ಸಾಧಿಸಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್​ ಅಯ್ಯರ್​, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆ್ಯಂಡ್ರೆ ರಸೆಲ್, ಸುನಿಲ್ ನಾರಾಯಣ್​, ಶಾರ್ದೂಲ್ ಠಾಕೂರ್, ಸುಯಶ್ ಶರ್ಮಾ, ಲಾಕಿ ಫ‌ರ್ಗ್ಯುಸನ್‌, ಉಮೇಶ್ ಯಾದವ್, ವರುಣ್ ಚಕ್ರವರ್ತಿ.

ಇದನ್ನೂ ಓದಿ IPL 2023: ಕಳೆದ ಬಾರಿಯ ಫೈನಲಿಸ್ಟ್​ಗಳ ಮಧ್ಯೆ ಹೈ ವೋಲ್ಟೇಜ್ ಪಂದ್ಯ

ಮಂಬೈ ಇಂಡಿಯನ್ಸ್​: ಇಶಾನ್ ಕಿಶನ್(ವಿಕೆಟ್​ ಕೀಪರ್​), ಸೂರ್ಯಕುಮಾರ್ ಯಾದವ್(ನಾಯಕ), ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಷದ್ ಖಾನ್. ಅರ್ಜುನ್​ ತೆಂಡೂಲ್ಕರ್​

Exit mobile version