IPL 2023: ಗುಜರಾತ್​ ಬೌಲಿಂಗ್​ ದಾಳಿಗೆ ಪರದಾಡಿದ ಪಂಜಾಬ್ - Vistara News

ಕ್ರಿಕೆಟ್

IPL 2023: ಗುಜರಾತ್​ ಬೌಲಿಂಗ್​ ದಾಳಿಗೆ ಪರದಾಡಿದ ಪಂಜಾಬ್

ಗುರುವಾರದ ಐಪಿಎಲ್​ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ವಿರುದ್ಧ ಮೊದಲು ಬ್ಯಾಟಿಂಗ್​ ನಡೆಸಿದ ಪಂಜಾಬ್​ ಕಿಂಗ್ಸ್​ 153 ರನ್​ ಗಳಿಸಿ ಸವಾಲೊಡ್ಡಿದೆ.

VISTARANEWS.COM


on

Harbhajan Singh, who named the team that will make it to the playoffs, said, "Is THERE RCB?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊಹಾಲಿ: ಗುಜರಾತ್​ ಟೈಟನ್ಸ್​ ತಂಡದ ಬೌಲರ್​ಗಳ ಸಂಘಟಿತ ಬೌಲಿಂಗ್​ ದಾಳಿಗೆ ರನ್​ ಗಳಿಸಲು ಪರದಾಡಿದ ಪಂಜಾಬ್​​ ಕಿಂಗ್ಸ್​ 153 ರನ್​ ಗಳಿಸಿ ಸವಾಲೊಡ್ಡಿದೆ. ಪಂಜಾಬ್​ ಪರ ಮ್ಯಾಥ್ಯೂ ಶಾರ್ಟ್‌ 36 ರನ್​ ಬಾರಿಸಿದರು. ಉಳಿದ ಯಾವ ಬ್ಯಾಟರ್​ಗಳಿಂದಲೂ ನಿರೀಕ್ಷಿತ ಪ್ರದರ್ಶನ ಕಂಡು ಬರಲಿಲ್ಲ.

ಮೊಹಾಲಿಯ ಐ.ಎಸ್‌.ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಪಂಜಾಬ್​ ಕಿಂಗ್ಸ್​ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 153 ರನ್​ ಬಾರಿಸಿತು. ಎದುರಾಳಿ ಗುಜರಾತ್​ ಗೆಲುವಿಗೆ 154 ರನ್​ ಬಾರಿಸಬೇಕಿದೆ.

ಟಾಸ್​ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡ ನಾಯಕನ ನಿರ್ಧಾರವನ್ನು ಗುಜರಾತ್​ ಬೌಲರ್​ಗಳು ಸಮರ್ಥಿಸಿಕೊಂಡರು. ಆರಂಭದಲ್ಲೇ ಮೊಹಮ್ಮದ್​ ಶಮಿ ಖಾತೆ ತೆರೆಯುವ ಮೊದಲೇ ಪ್ರಭ್​ಶಿಮ್ರಾನ್​ ಸಿಂಗ್​ ವಿಕೆಟ್​ ಬೇಟೆಯಾಡಿ ತಂಡಕ್ಕೆ ಮುನ್ನಡೆ ತಂದುಕೊಟ್ಟರು. ಜಾನಿ ಬೇರ್​ಸ್ಟೋ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದ ಕಾರಣ ತಂಡ ಸೇರ್ಪಡೆಗೊಂಡಿದ್ದ ಮ್ಯಾಥ್ಯೂ ಶಾರ್ಟ್‌ ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ಕ್ರೀಸ್​ಗೆ ಬಂದ ಆರಂಭದಲ್ಲೇ ಮೊಹಮ್ಮದ್​ ಶಮಿ ಓವರ್​ನಲ್ಲಿ ಅವರು ಬಡಬಡನೆ 2 ಬೌಂಡರಿ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು.

ಬಿರುಸಿನಿಂದಲೇ ಬ್ಯಾಟ್​ ಬೀಸುತ್ತಿದ್ದ ಅವರನ್ನು ಕಳೆದ ಪಂದ್ಯದ ಹ್ಯಾಟ್ರಿಕ್​​ ವಿಕೆಟ್​ ವೀರ ರಶೀದ್​ ಖಾನ್​ ಕ್ಲೀನ್​ ಬೌಲ್ಡ್​ ಮಾಡುವ ಮೂಲಕ ಅವರ ಬ್ಯಾಟಿಂಗ್​ ಅಬ್ಬರಕ್ಕೆ ಬ್ರೇಕ್​ ಹಾಕಿದರು. ಒಟ್ಟು 24 ಎಸೆತ ಎದುರಿಸಿದ ಅವರು 36 ರನ್​ ಬಾರಿಸಿದರು. 6 ಬೌಂಡರಿ ಮತ್ತು ಒಂದು ಸಿಕ್ಸರ್​ ಒಳಗೊಂಡಿತ್ತು. ಕಳೆದ ಮೂರು ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್​ ಮೂಲಕ ತಂಡಕ್ಕೆ ಆಸರೆಯಾಗಿದ್ದ ನಾಯಕ ಶಿಖರ್​ ಧವನ್​ ಅವರು ಈ ಪಂದ್ಯದಲ್ಲಿ ಕೇವಲ 8 ರನ್​ಗೆ ಔಟಾದರು.

ಇದನ್ನೂ ಓದಿ IPL 2023: ತಂದೆಯ ಕ್ರಿಕೆಟ್​ ಪ್ರದರ್ಶನವನ್ನು ಟಿವಿಯಲ್ಲಿ ಕಂಡು ಖುಷಿಪಟ್ಟ ಅಂಬೆಗಾಲಿನ ಮಗು; ವಿಡಿಯೊ ವೈರಲ್​

ಮ್ಯಾಥ್ಯೂ ಶಾರ್ಟ್‌ ವಿಕೆಟ್​ ಪತನದ ಬಳಿಕ ತಂಡದ ಮೊತ್ತವೂ ಕುಂಡಿತವಾಗಿ ಸಾಗಿತು. ಜಿತೇಶ್​ 25 ರನ್​ ಗಳಿಸಿ ಮೋಹಿತ್​ ಶರ್ಮ ಅವರಿಗೆ ವಿಕೆಟ್​ ಒಪ್ಪಿಸಿದರು. ಮೋಹಿತ್ ಶರ್ಮ ಅವರು ಮೂರು ವರ್ಷಗಳ ಬಳಿಕ ಐಪಿಎಲ್​ ಟೂರ್ನಿಯಲ್ಲಿ ಆಡಲಿಳಿದರು. ಅವರು 2020ರಲ್ಲಿ ಪಂಜಾಬ್​ ತಂಡದ ಪರ ಕೊನೆಯ ಬಾರಿ ಐಪಿಎಲ್​ ಪಂದ್ಯವನ್ನಾಡಿದ್ದರು. ಮೂರು ವರ್ಷಗಳ ಬಳಿಕ ಆಡಿದರೂ ಉತ್ತಮ ಪ್ರದರ್ಶನ ತೋರಿದರು. 4 ಓವರ್​ ಎಸೆದು ಕೇವಲ 18 ರನ್​ ನೀಡಿ 2 ವಿಕೆಟ್​ ಕಿತ್ತರು. ಆಲ್​ರೌಂಡರ್​ ಸ್ಯಾಮ್​ ಕರನ್​ 22, ಭನುಕಾ ರಾಜಪಕ್ಸೆ 20 ರನ್​ ಬಾರಿಸಿದರು. ಅಂತಿಮ ಹಂತದಲ್ಲಿ ಶಾರುಖ್​ ಖಾನ್​ ಅವರು ಸಿಡಿದು ನಿಂತ ಪರಿಣಾಮ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸಿತು. ಅವರು 9 ಎಸೆತಕ್ಕೆ 22 ರನ್​ ಗಳಿಸಿ ರನೌಟ್​ ಸಂಕಟಕ್ಕೆ ಸಿಲುಕಿದರು.

ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಅಸೌಖ್ಯದ ಕಾರಣ ಪಂದ್ಯದಿಂದ ಹೊರಗುಳಿದಿದ್ದ ತಂಡದ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮತ್ತೆ ನಾಯಕ್ವ ವಹಿಸಿಕೊಂಡರು. ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ರಶೀದ್​ ಖಾನ್​ ತಂಡವನ್ನು ಮುನ್ನಡೆಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

ICC T20 Rankings: ಭಾರತ ಇದುವರೆಗೆ 49 ಪಂದ್ಯ ಆಡಿ 265 ರೇಟಿಂಗ್​ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 259 ರೇಟಿಂಗ್​ ಅಂದೊಂದಿಗೆ ದ್ವಿತೀಯ ಸ್ಥಾನಿಯಾಗಿದೆ. ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನಿಯಾಗಿದೆ. 7ನೇ ಸ್ಥಾನಿಯಾಗಿರುವ ಪಾಕ್​ 241 ರೇಟಿಂಗ್​ ಅಂಕ ಹೊಂದಿದೆ.

VISTARANEWS.COM


on

ICC T20 Rankings
Koo

ದುಬೈ: ನೂತನ ಟಿ20 ಶ್ರೇಯಾಂಕದಲ್ಲಿ(ICC T20 Rankings) ಭಾರತ ತಂಡ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಆದರೆ, ಭಾರತದ ಬದ್ಧ ಎದುರಾಳಿ ಪಾಕಿಸ್ತಾನ 7ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಇಂಗ್ಲೆಂಡ್​ ವಿರುದ್ಧದ ಟಿ20 ಸರಣಿ ಸೋಲು ಮತ್ತು ಪ್ರಸ್ತುತ ಸಾಗುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದೇ ಪಾಕ್​ ತಂಡದ ಶ್ರೇಯಾಂಕ ಕುಸಿತಕ್ಕೆ ಕಾರಣ.

ಭಾರತ ಇದುವರೆಗೆ 49 ಪಂದ್ಯ ಆಡಿ 265 ರೇಟಿಂಗ್​ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 259 ರೇಟಿಂಗ್​ ಅಂದೊಂದಿಗೆ ದ್ವಿತೀಯ ಸ್ಥಾನಿಯಾಗಿದೆ. ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನಿಯಾಗಿದೆ. 7ನೇ ಸ್ಥಾನಿಯಾಗಿರುವ ಪಾಕ್​ 241 ರೇಟಿಂಗ್​ ಅಂಕ ಹೊಂದಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಕ್​ ಆಡಿದ ಮೂರು ಪಂದ್ಯಗಳಲ್ಲಿ ಕೇವಲ 2 ಪಂದ್ಯ ಮಾತ್ರ ಗೆದ್ದಿದೆ. ಅಮೆರಿಕ ಮತ್ತು ಭಾರತ ಇನ್ನುಳಿದ ಪಂದ್ಯದಲ್ಲಿ ಗೆದ್ದರೆ ಪಾಕ್​ ಟೂರ್ನಿಯಿಂದ ಹೊರಬೀಳಲಿದೆ. ಟೂರ್ನಿಗೂ ಮುನ್ನ ಮಿಲಿಟರಿ ಪಡೆಯೊಂದಿಗೆ ಫಿಟ್​ನೆಸ್​ ತರಬೇತಿ ಪಡೆದು ಬಂದರೂ ಕೂಡ ಪಾಕ್​ ತಂಡದ ಕಳಪೆ ಪ್ರದರ್ಶನ ಮಾತ್ರ ಬದಲಾಗಲಿಲ್ಲ.

ಅಗ್ರ ಶ್ರೇಯಾಂಕ ಪಟ್ಟಿಯ 10 ತಂಡಗಳು

ತಂಡರೇಟಿಂಗ್​ ಅಂಕ
ಭಾರತ265
ಆಸ್ಟ್ರೇಲಿಯಾ258
ಇಂಗ್ಲೆಂಡ್​254
ವೆಸ್ಟ್​ ಇಂಡೀಸ್​253
ನ್ಯೂಜಿಲ್ಯಾಂಡ್​248
ದಕ್ಷಿಣ ಆಫ್ರಿಕಾ247
ಪಾಕಿಸ್ತಾನ241
ಶ್ರೀಲಂಕಾ230
ಬಾಂಗ್ಲಾದೇಶ226
ಅಫಘಾನಿಸ್ತಾನ220

ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಸೂರ್ಯಕುಮಾರ್​ ಯಾದವ್​ 837 ರೇಟಿಂಗ್​ ಅಂಕದೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್​ನ ಫಿಲ್​ ಸಾಲ್ಟ್​(800) 2ನೇ ಸ್ಥಾನಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿ ಬಾಬರ್​ ಅಜಂ(756) ಮತ್ತು 4ನೇ ಸ್ಥಾನಿಯಾಗಿ ಮೊಹಮ್ಮದ್​ ರಿಜ್ವಾನ್​(752) ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್

ಮುಂಬಯಿ: ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್(Kamran Akmal) ವಿರುದ್ಧ ಹರ್ಭಜನ್​ ಸಿಂಗ್(Harbhajan Singh) ಮತ್ತೆ ಕಿಡಿ ಕಾರಿದ್ದಾರೆ. ನಿನೋಬ್ಬ ನಾಲಾಯಕ್(Nalaayak)​ ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

ಇದಕ್ಕೂ ಮುನ್ನ ಹರ್ಭಜನ್​ ಸಿಂಗ್​ ಅವರು ಟ್ವೀಟ್​ ಮಾಡಿ ಅಕ್ಮಲ್​ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದರು.

Continue Reading

ಕ್ರೀಡೆ

IPL 2025: ಐಪಿಎಲ್​ ತಂಡಗಳ ಬ್ರಾಂಡ್​ ಮೌಲ್ಯ ಏರಿಕೆ; ಕಪ್​ ಗೆಲ್ಲದಿದ್ದರೂ ಆರ್​ಸಿಬಿ ಪ್ರಾಬಲ್ಯ

IPL 2025: ಕನ್ನಡಿಗ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ತಂಡ 760 ಕೋಟಿ ರೂ. ಬ್ರಾಂಡ್​ ಮೌಲ್ಯದೊಂದಿಗೆ ಕೊನೆಯ ಸ್ಥಾನಿಯಾಗಿದೆ. ಮುಂದಿನ ಆವೃತ್ತಿಯಲ್ಲಿ ರಾಹುಲ್​ ಅವರು ಆರ್​ಸಿಬಿ ತಂಡದ ಪರ ಆಡಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬಂದಿದೆ.

VISTARANEWS.COM


on

IPL 2025
Koo

ಮುಂಬಯಿ: ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ಗೆ(IPL 2025) ಈಗಾಗಲೇ ಸಿದ್ಧತೆಗಳು ಆರಂಭವಾಗಿದೆ. ಆಟಗಾರರ ಮೆಗಾ ಹರಾಜು ಡಿಸೆಂಬರ್​ನಲ್ಲಿ ನಡೆಯುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಐಪಿಎಲ್​ನ ಬ್ರಾಂಡ್​ ಮೌಲ್ಯದ(IPL brand value) ವರದಿ ಹೊರಬಿದ್ದಿದೆ. ಈ ಬಾರಿ ಎಲ್ಲ ತಂಡಗಳ ಬ್ರಾಂಡ್ ಮೌಲ್ಯದಲ್ಲಿ(IPL teams brand valuation) ಭಾರಿ ಏರಿಕೆ ಕಂಡಿದೆ.

ಐಪಿಎಲ್​ನ ಯಶಸ್ವಿ ತಂಡಗಳಲ್ಲಿ ಒಂದಾದ ಐದು ಬಾರಿಯ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​​(CSK) ಗರಿಷ್ಠ ಮೌಲ್ಯ ಹೊಂದಿರುವ ತಂಡವಾಗಿ ಕಾಣಿಸಿಕೊಂಡಿದೆ. 1,930 ಕೋಟಿ ರೂ. ಬ್ರಾಂಡ್​ ಮೌಲ್ಯ ಹೊಂದಿದೆ. ಇದಕ್ಕೂ ಮುನ್ನ 675 ಕೋಟಿ ರೂ. (81 ದಶಲಕ್ಷ ಡಾಲರ್​) ಬ್ರಾಂಡ್​ ಮೌಲ್ಯದೊಂದಿಗೆ ದ್ವಿತೀಯ ಸ್ಥಾನಿಯಾಗಿತ್ತು. ಮುಂಬೈ ಇಂಡಿಯನ್ಸ್​ ತಂಡ 725 ಕೋಟಿ ರೂ.ಬ್ರಾಂಡ್​ ಮೌಲ್ಯದೊಂದಿಗೆ ಅಗ್ರಸ್ಥಾನ ಪಡೆದಿತ್ತು. ಪ್ರಸ್ತುತ 1,704 ಕೋಟಿ ರೂ. ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಆರ್​ಸಿಬಿಗೆ 2ನೇ ಸ್ಥಾನ

ಕನ್ನಡಿಗರ ನೆಚ್ಚಿನ ತಂಡವಾದ, ಅತ್ಯಧಿಕ ಅಭಿಮಾನಿ ಬಳಗವನ್ನು ಹೊಂದಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತಂಡ ಇದುವರೆ ಕಪ್​ ಗೆಲ್ಲದಿದ್ದರೂ ಬ್ರಾಂಡ್​ ಮೌಲ್ಯದಲ್ಲಿ ತನ್ನ ಖ್ಯಾತಿಯನ್ನು ಬಿಟ್ಟುಕೊಟ್ಟಿಲ್ಲ. ಆರ್​ಸಿಬಿ ತಂಡ ಕಳೆದ ಬಾರಿ 582 ಕೋಟಿ ರೂ. (69.8 ದಶಲಕ್ಷ ಡಾಲರ್​) ಬ್ರಾಂಡ್​ ಮೌಲ್ಯದೊಂದಿಗೆ 4ನೇ ಸ್ಥಾನದಲ್ಲಿತ್ತು. ಇದೀಗ ನೂತನ ಪಟ್ಟಿಯಲ್ಲಿ 1,896 ಕೋಟಿ ರೂ. ಮೌಲ್ಯದೊಂದಿಗೆ 2ನೇ ಸ್ಥಾನಿಯಾಗಿದೆ. ಈ ಬಾರಿ ತಂಡ ಎಲಿಮಿನೇಟರ್​ ಹಂತದ ತನಕ ಆಡಿತ್ತು.

ಇದನ್ನೂ ಓದಿ IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

ಹಾಲಿ ಚಾಂಪಿಯನ್​ ಕೆಕೆಆರ್​ ತಂಡ ಈ ಪಟ್ಟಿಯಲ್ಲಿ ಮೂರನೇ ಸ್ಥಾನಿಯಾಗಿದೆ. ತಂಡದ ಬ್ರಾಂಡ್​ ಮೌಲ್ಯ 1,805 ಕೋಟಿ ರೂ. ಆಗಿದೆ. ಇದಕ್ಕೂ ಮುನ್ನ 655 ಕೋಟಿ ರೂ.ಗಳೊಂದಿಗೆ ಮೂರನೇ ಸ್ಥಾನದಲ್ಲೇ ಕಾಣಿಸಿಕೊಂಡಿತ್ತು. ಕನ್ನಡಿಗ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ತಂಡ 760 ಕೋಟಿ ರೂ. ಬ್ರಾಂಡ್​ ಮೌಲ್ಯದೊಂದಿಗೆ ಕೊನೆಯ ಸ್ಥಾನಿಯಾಗಿದೆ. ಮುಂದಿನ ಆವೃತ್ತಿಯಲ್ಲಿ ರಾಹುಲ್​ ಅವರು ಆರ್​ಸಿಬಿ ತಂಡದ ಪರ ಆಡಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬಂದಿದೆ. ಕೆಲ ಮೂಲಗಳ ಪ್ರಕಾರ ರಾಹುಲ್​ಗೆ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ತಂಡ ಸೇರುವಂತೆ ಆಫರ್​ ಕೂಡ ಕೊಟ್ಟಿದೆ ಎಂದು ವರದಿಯಾಗಿದೆ. ಅದು ಕೂಡ ನಾಯಕನಾಗಿ ಎನ್ನಲಾಗಿದೆ.

ಐಪಿಎಲ್​ ತಂಡಗಳ ಬ್ರಾಂಡ್​ ಮೌಲ್ಯ


ಚೆನ್ನೈ ಸೂಪರ್​ಕಿಂಗ್ಸ್​: 1,930 ಕೋಟಿ ರೂ.

ರಾಯಲ್​ ಚಾಲೆಂಜರ್ಸ್​​ ಬೆಂಗಳೂರು: 1,896 ಕೋಟಿ ರೂ.

ಕೋಲ್ಕತಾ ನೈಟ್​ರೈಡರ್ಸ್​: 1,805 ಕೋಟಿ ರೂ.

ಮುಂಬೈ ಇಂಡಿಯನ್ಸ್​: 1,704 ಕೋಟಿ ರೂ.

ರಾಜಸ್ಥಾನ್​ ರಾಯಲ್ಸ್​: 1,111 ಕೋಟಿ ರೂ.

ಸನ್​ರೈಸರ್ಸ್​ ಹೈದರಾಬಾದ್​: 1,103 ಕೋಟಿ ರೂ.

ಡೆಲ್ಲಿ ಕ್ಯಾಪಿಟಲ್ಸ್​: 1,094 ಕೋಟಿ ರೂ.

ಗುಜರಾತ್​ ಟೈಟಾನ್ಸ್​: 1,036 ಕೋಟಿ ರೂ.

ಪಂಜಾಬ್​ ಕಿಂಗ್ಸ್​: 844 ಕೋಟಿ ರೂ.

ಲಕ್ನೋ ಸೂಪರ್​ಜೈಂಟ್ಸ್​: 760 ಕೋಟಿ ರೂ.

Continue Reading

ಕ್ರೀಡೆ

Virat Kohli: ಅಮೆರಿಕ ವಿರುದ್ಧವಾದರೂ ವಿಶ್ವ ದಾಖಲೆ ನಿರ್ಮಿಸಲಿದ್ದಾರಾ ಕಿಂಗ್​ ಕೊಹ್ಲಿ?

Virat Kohli: ಸತತವಾಗಿ 2 ಪಂದ್ಯಗಳಲ್ಲಿ ಬ್ಯಾಟಿಂಗ್​ ವೈಫಲ್ಯ ಕಂಡ ಬೆನ್ನಲ್ಲೇ ವಿರಾಟ್​ ಕೊಹ್ಲಿ ಅವರು ನ್ಯೂಯಾರ್ಕ್​ನಲ್ಲಿರುವ ಸಚಿನ್​ ತೆಂಡೂಲ್ಕರ್​ ಅವರನ್ನು ಭೇಟಿಯಾಗಿದ್ದಾರೆ. ಉಭಯ ಆಟಗಾರರ ಭೇಟಿಯ ಫೋಟೊ ವೈರಲ್​ ಆಗಿದೆ. ಮೂಲಗಳ ಪ್ರಕಾರ ಬ್ಯಾಟಿಂಗ್​ ಸಲಹೆ ಪಡೆಯಲೆಂದೇ ಕೊಹ್ಲಿ ಸಚಿನ್​ ಭೇಟಿಯಾಗಿದ್ದು ಎನ್ನಲಾಗಿದೆ.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಕಳೆದ ಎರಡು ಪಂದ್ಯಗಳಲ್ಲಿ ಒಂದಂಕಿಗೆ ಸೀಮಿತರಾಗಿ ಘೋರ ಬ್ಯಾಟಿಂಗ್​ ವೈಫಲ್ಯ ಕಂಡಿದ್ದ ಟೀಮ್​ ಇಂಡಿಯಾದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(Virat Kohli) ಅಮೆರಿಕ(United States vs India) ವಿರುದ್ಧ ಇಂದು(ಬುಧವಾರ) ನಡೆಯುವ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶನ ತೋರುವ ಆತ್ಮವಿಶ್ವಾಸದಲ್ಲಿದ್ದಾರೆ. ಜತೆಗೆ ವಿಶ್ವ ದಾಖಲೆಯೊಂದನ್ನು ನಿರ್ಮಿಸುವ ಅವಕಾಶವೂ ಅವರ ಮುಂದಿದೆ.

ಹೌದು, ವಿರಾಟ್​ ಕೊಹ್ಲಿ ಅವರು ಇಂದಿನ ಪಂದ್ಯದಲ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಮೊದಲ ಆಟಗಾರ ಎನ್ನುವ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಲಿದ್ದಾರೆ. ಸದ್ಯ ಈ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ಹೆಸರಿನಲ್ಲಿದೆ. ಜಯವರ್ಧನೆ 111 ಬೌಂಡರಿ ಬಾರಿಸಿದ್ದರೆ, ಕೊಹ್ಲಿ ಸದ್ಯ 103* ಬೌಂಡರಿ ಬಾರಿಸಿದ್ದಾರೆ. 

ಕಳೆದ ಐರ್ಲೆಂಡ್​ ಮತ್ತು ಪಾಕ್​ ವಿರುದ್ಧದ ಪಂದ್ಯದಲ್ಲಿಯೇ ಕೊಹ್ಲಿಗೆ ಈ ದಾಖಲೆ ನಿರ್ಮಿಸುವ ಅವಕಾಶವಿತ್ತು. ಆದರೆ ಕೊಹ್ಲಿ ಪಾಕ್​ ವಿರುದ್ಧ ಒಂದು ಬೌಂಡರಿ ಮಾತ್ರ ಬಾರಿಸಿದ್ದರು. ಇದೀಗ ಈ ಪಂದ್ಯದಲ್ಲಾದರೂ ಅವರು ಉತ್ತಮ ಬ್ಯಾಟಿಂಗ್​ ನಡೆಸಿ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಲಿದ್ದಾರಾ? ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IND vs USA: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ; ಯಾರಿಗೆ ಕೊಕ್​?

ಜೈಸ್ವಾಲ್​ ಓಪನಿಂಗ್​?


ಈಗಾಗಲೇ ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದಕ್ಕೆ ಹಲವು ಮಾಜಿ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ದ್ವಿತೀಯ ಕ್ರಮಾಂಕದಲ್ಲಿ ಆಡಿದರೇ ಸೂಕ್ತ ಎಂದಿದ್ದಾರೆ. ಇಂದಿನ ಪಂದ್ಯದಲ್ಲಿ ಜೈಸ್ವಾಲ್​ಗೆ ಅವಕಾಶ ನೀಡಿದ್ದೇ ಆದರೆ, ರೋಹಿತ್​ ಜತೆ ಜೈಸ್ವಾಲ್​ ಇನಿಂಗ್ಸ್​ ಆರಂಭಿಸಬಹುದು.

ಟ20 ವಿಶ್ವಕಪ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್ ಕೊಹ್ಲಿಭಾರತ29104*
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಡೇವಿಡ್​ ವಾರ್ನರ್ಆಸ್ಟ್ರೇಲಿಯಾ3797*
ರೋಹಿತ್​ ಶರ್ಮ​ಭಾರತ3896*
ಕ್ರಿಸ್​ ಗೇಲ್​ವೆಸ್ಟ್​ ಇಂಡೀಸ್​3178
ಜಾಸ್​ ಬಟ್ಲರ್​ಇಂಗ್ಲೆಂಡ್​2974*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್​2669*
ಬ್ರೆಂಡನ್ ಮೆಕಲಮ್ನ್ಯೂಜಿಲ್ಯಾಂಡ್2567
ಕುಮಾರ್ ಸಂಗಕ್ಕಾರಶ್ರೀಲಂಕಾ3163

ಸಚಿನ್​ ಭೇಟಿಯಾದ ಕೊಹ್ಲಿ


ಸತತವಾಗಿ 2 ಪಂದ್ಯಗಳಲ್ಲಿ ಬ್ಯಾಟಿಂಗ್​ ವೈಫಲ್ಯ ಕಂಡ ಬೆನ್ನಲ್ಲೇ ವಿರಾಟ್​ ಕೊಹ್ಲಿ ಅವರು ನ್ಯೂಯಾರ್ಕ್​ನಲ್ಲಿರುವ ಸಚಿನ್​ ತೆಂಡೂಲ್ಕರ್​ ಅವರನ್ನು ಭೇಟಿಯಾಗಿದ್ದಾರೆ. ಉಭಯ ಆಟಗಾರರ ಭೇಟಿಯ ಫೋಟೊ ವೈರಲ್​ ಆಗಿದೆ. ಮೂಲಗಳ ಪ್ರಕಾರ ಬ್ಯಾಟಿಂಗ್​ ಸಲಹೆ ಪಡೆಯಲೆಂದೇ ಕೊಹ್ಲಿ ಸಚಿನ್​ ಭೇಟಿಯಾಗಿದ್ದು ಎನ್ನಲಾಗಿದೆ.

2 ಬದಲಾವಣೆ


ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾ ತನ್ನ ಆಡುವ ಬಳಗಲ್ಲಿ 2 ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆಲ್​ರೌಂಡರ್​ಗಳಾದ ಶಿವಂ ದುಬೆ(Shivam Dube) ಮತ್ತು ರವೀಂದ್ರ ಜಡೇಜಾ(Ravindra Jadeja) ಅವರನ್ನು ಕೈಬಿಡಲಾಗುವುದು ಎಂಬ ಮಾತುಗಳು ಕೇಳಿಬಂದಿವೆ.

​ಶಿವಂ ದುಬೆ ಆಲ್​ರೌಂಡರ್​ ಕೋಟದಲ್ಲಿ ಕಳೆದ 2 ಪಂದ್ಯಗಳಲ್ಲಿ ಆಡಿದ್ದರೂ ಕೂಡ ಬೌಲಿಂಗ್​ ನಡೆಸಿರಲಿಲ್ಲ. ಅಲ್ಲದೆ ಪಾಕ್​ ವಿರುದ್ಧ ಬ್ಯಾಟಿಂಗ್​ ಅವಕಾಶ ಸಿಕ್ಕರೂ ಇದನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಕೇವಲ 3 ರನ್​ ಗಳಿಸಿದ್ದರು. ಜತೆಗೆ ಕಳಪೆ ಫೀಲ್ಡಿಂಗ್​ ಮೂಲಕ ಕ್ಯಾಚ್​ ಒಂದನ್ನು ಕೂಡ ಕೈಚೆಲ್ಲಿದ್ದರು. ಜಡೇಜಾ ಕೂಡ ಆಡಿದ 2 ಪಂದ್ಯಗಳಲ್ಲಿಯೂ ವಿಕೆಟ್​ ಲೆಸ್​ ಎನಿಸಿಕೊಂಡಿದ್ದಾರೆ. ಹೀಗಾಗಿ ಉಭಯ ಆಟಗಾರರನ್ನು ಕೈ ಬಿಟ್ಟು ಇವರ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್​ ಮತ್ತು ಕುಲ್​ದೀಪ್​ ಯಾದವ್​ ಅವರನ್ನು ಆಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Continue Reading

ಕ್ರೀಡೆ

Harbhajan Singh: ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್

Harbhajan Singh: ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

VISTARANEWS.COM


on

Harbhajan Singh
Koo

ಮುಂಬಯಿ: ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್(Kamran Akmal) ವಿರುದ್ಧ ಹರ್ಭಜನ್​ ಸಿಂಗ್(Harbhajan Singh) ಮತ್ತೆ ಕಿಡಿ ಕಾರಿದ್ದಾರೆ. ನಿನೋಬ್ಬ ನಾಲಾಯಕ್(Nalaayak)​ ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

ಇದಕ್ಕೂ ಮುನ್ನ ಹರ್ಭಜನ್​ ಸಿಂಗ್​ ಅವರು ಟ್ವೀಟ್​ ಮಾಡಿ ಅಕ್ಮಲ್​ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ IND vs USA: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ; ಯಾರಿಗೆ ಕೊಕ್​?

ಕ್ಷಮೆ ಕೇಳಿದ್ದ ಅಕ್ಮಲ್​


ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್​ ಅಕ್ಮಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದರು. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ. ನಿಜವಾಗಿಯೂ ಕ್ಷಮೆ ಯಾಚಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದರು.

ಏನಿದು ಪ್ರಕರಣ?


ಭಾನುವಾರ ಪಾಕ್​ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಭಾರತ ತಂಡದ ವೇಗಿ ಅರ್ಶ್​ದೀಪ್ ಅವರು ಪಂದ್ಯದ ಕೊನೆಯ ಓವರ್ ಬೌಲಿಂಗ್ ಮಾಡುತ್ತಿದ್ದ ವೇಳೆ ಅಕ್ಮಲ್​ “ಕುಚ್ ಭೀ ಹೋ ಸಕ್ತಾ ಹೈ.. 12 ಬಜ್ ಗಯೇ ಹೈ (ಏನು ಬೇಕಾದರೂ ಸಂಭವಿಸಬಹುದು. 12 ರ ನಂತರ ಯಾವುದೇ ಸಿಖ್ಖರನ್ನು ನೀಡಲಾಗುವುದಿಲ್ಲ) ಎಂದು ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಭಾನುವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ಪಾಕ್​ ಬೌಲರ್​ಗಳ ನಿಖರ ದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ ಕೇವಲ 119 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಪಾಕ್ ಕೂಡ ಭಾರತದ ಬೌಲಿಂಗ್ ದಾಳಿಗೆ ನಲುಗಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲು ಕಂಡಿತು. ಮೊಹಮ್ಮದ್ ರಿಜ್ವಾನ್(31) ಒಂದು ಹಂತದ ವರೆಗೆ ಭಾರತೀಯ ಬೌಲರ್​ಗಳನ್ನು ಕಾಡಿದರೂ ಕೂಡ ಬುಮ್ರಾ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಇಲ್ಲಿಂದ ಪಾಕ್​ ಕುಸಿತ ಕೂಡ ಆರಂಭವಾಯಿತು. ಭಾರತ ಪಂದ್ಯವನ್ನು ಗೆದ್ದು ಬೀಗುವಲ್ಲಿ ಯಶಸ್ಸು ಕಂಡಿತ್ತು.

Continue Reading
Advertisement
ICC T20 Rankings
ಕ್ರೀಡೆ2 mins ago

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

Rain News
ಪ್ರಮುಖ ಸುದ್ದಿ13 mins ago

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Chellagurki Shri Yerrithathanavara Maharathotsava in Ballari
ಧಾರ್ಮಿಕ18 mins ago

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Narendra Modi
ದೇಶ24 mins ago

Narendra Modi: ಆಂಧ್ರದಲ್ಲಿ ಮೆಗಾ ಸ್ಟಾರ್‌, ಪವರ್‌ ಸ್ಟಾರ್‌ ಜತೆ ‘ಪೊಲಿಟಿಕಲ್‌ ಸ್ಟಾರ್’‌ ಮೋದಿ; Video ನೋಡಿ

Terror attack
ದೇಶ30 mins ago

Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

Uttara Kannada MP Vishweshwara hegde kageri spoke in Thanksgiving ceremony for bjp party workers in banavasi
ಉತ್ತರ ಕನ್ನಡ38 mins ago

Uttara Kannada News: ಉ.ಕ ಜಿಲ್ಲೆ ಬಿಜೆಪಿ ಕಾರ್ಯಕರ್ತರ ಕ್ಷೇತ್ರ ಎಂಬುದು ಮತ್ತೊಮ್ಮೆ ಸಾಬೀತು: ಕಾಗೇರಿ

chandrababu naidu takes oath as andhra chief minister mlc TA Sharavana Congratulated
ಬೆಂಗಳೂರು40 mins ago

TA Sharavana: ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ

Hindu Jana Jagruti Samiti demands immediate ban on Maharaj movie
ದೇಶ42 mins ago

Maharaj Movie: `ಮಹಾರಾಜ್’ ಚಲನಚಿತ್ರ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Minister Dr.Sharanaprakash patil spoke in World Homeopathy Day Celebration and Seminar Programme in Bengaluru
ಕರ್ನಾಟಕ45 mins ago

Bengaluru News: ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ: ಶರಣಪ್ರಕಾಶ್‌ ಪಾಟೀಲ್‌

Opposition party leader r ashok visit mangalore hospital
ಕರ್ನಾಟಕ47 mins ago

R Ashok: ಗೂಂಡಾಗಳ ಕೈಗೆ ರಾಜ್ಯ ನೀಡಿದ ಕಾಂಗ್ರೆಸ್‌ ಸರ್ಕಾರ: ಆರ್‌. ಅಶೋಕ್‌ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌