IPL 2023: ಐಪಿಎಲ್​ನಲ್ಲಿ ದಾಖಲೆ ಬರೆದ ರೋಹಿತ್​ ಶರ್ಮ; ಏನದು? - Vistara News

ಕ್ರಿಕೆಟ್

IPL 2023: ಐಪಿಎಲ್​ನಲ್ಲಿ ದಾಖಲೆ ಬರೆದ ರೋಹಿತ್​ ಶರ್ಮ; ಏನದು?

ರೋಹಿತ್ ಶರ್ಮಾ(Rohit Sharma) ಅವರು ಐಪಿಎಲ್​ನಲ್ಲಿ(IPL 2023) 6 ಸಾವಿರ ರನ್​ ಪೂರೈಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ.

VISTARANEWS.COM


on

Rohit Sharma creates unnecessary record by being dismissed for a duck
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ(Rohit Sharma) ಅವರು ಐಪಿಎಲ್​ನಲ್ಲಿ(IPL 2023) ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಐಪಿಎಲ್​ ಕ್ರಿಕೆಟ್​ನಲ್ಲಿ 6 ಸಾವಿರ ರನ್​ ಪೂರೈಸಿದ 4ನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ದ 14 ರನ್​ ಗಳಿಸುತ್ತಿದಂತೆ ರೋಹಿತ್ ಶರ್ಮಾ ಐಪಿಎಲ್​ನಲ್ಲಿ 6 ಸಾವಿರ ರನ್​ ಪೂರೈಸಿದರು. ಈ ಮೂಲಕ ವಿರಾಟ್ ಕೊಹ್ಲಿ, ಶಿಖರ್ ಧವನ್ ಹಾಗೂ ಡೇವಿಡ್ ವಾರ್ನರ್ ಬಳಿಕ ಐಪಿಎಲ್​ನಲ್ಲಿ 6000 ರನ್​ ಕಲೆಹಾಕಿದ ಬ್ಯಾಟರ್​ ಎನಿಸಿಕೊಂಡರು.

ಈ ಸಾಧನೆ ಮಾಡಿದ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಆಟಗಾರ ವಿರಾಟ್​ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಕೊಹ್ಲಿ 220 ಇನಿಂಗ್ಸ್​ ಮೂಲಕ ಒಟ್ಟು 6844 ರನ್​ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಶಿಖರ್ ಧವನ್ ಕಾಣಿಸಿಕೊಂಡಿದ್ದಾರೆ. ಧವನ್ 209 ಇನಿಂಗ್ಸ್​ಗಳ ಮೂಲಕ ಒಟ್ಟು 6477 ರನ್​ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಡೇವಿಡ್ ವಾರ್ನರ್ ಇದ್ದಾರೆ. ಅವರು 167 ಇನಿಂಗ್ಸ್​ಗಳ ಮೂಲಕ ವಾರ್ನರ್ 6109 ರನ್​ ಪೇರಿಸಿದ್ದಾರೆ.

ಅತ್ಯಂತ ಕಡಿಮೆ ಇನಿಂಗ್ಸ್​ ಮೂಲಕ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಸಾಧನೆ ಡೇವಿಡ್​ ವಾರ್ನರ್​ ಹೆಸರಿನಲ್ಲಿದೆ. ಅವರು 167 ಇನಿಂಗ್ಸ್​ಗಳಲ್ಲಿ ಈ ಮೈಲುಗಲ್ಲನ್ನು ತಲುಪಿದ್ದರು. ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ರೋಹಿತ್​ ಶರ್ಮ18 ಎಸೆತಗಳಿಂದ 28 ರನ್​ ಬಾರಿಸಿದ್ದರು. ಇದರಲ್ಲಿ 6 ಬೌಂಡರಿ ದಾಖಲಾಗಿತ್ತು.

ಇದನ್ನೂ ಓದಿ IPL 2023: ಮುಂಬೈಗೆ ಹ್ಯಾಟ್ರಿಕ್​ ಗೆಲುವು; ಐಪಿಎಲ್​ ಅಂಕ ಪಟ್ಟಿ ಹೇಗಿದೆ?

ಮುಂಬೈಗೆ ಗೆಲುವು

ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಮುಂಬೈ ಇಂಡಿಯನ್ಸ್​ ಕ್ಯಾಮರಾನ್‌ ಗ್ರೀನ್‌ ಮತ್ತು ತಿಲಕ್‌ ವರ್ಮ ಅವರ ಉತ್ತಮ ಆಟದಿಂದಾಗಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟಿಗೆ 192 ರನ್​ ಬಾರಿಸಿತು. ಇದಕ್ಕುತ್ತರವಾಗಿ ಬ್ಯಾಟಿಂಗ್‌ ನಡೆಸಿದ ಹೈದರಾಬಾದ್‌ ತಂಡವು 19.5 ಓವರ್‌ಗಳಲ್ಲಿ 178 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Abhishek Sharma : ಅಭಿಷೇಕ್ ಶರ್ಮಾ ದಾಖಲೆಯ ಶತಕ ಬಾರಿಸಿದ್ದು ಶುಭ್​​ಮನ್ ಗಿಲ್​ ಬ್ಯಾಟ್​ನಲ್ಲಿ!

Abhishek Sharma :

VISTARANEWS.COM


on

Abhishek Sharma
Koo

ಹರಾರೆ: ಜುಲೈ 7 ರಂದು ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ (ZIMvsIND) ಭಾರತದ ಆರಂಭಿಕ ಅಭಿಷೇಕ್ ಶರ್ಮಾ (Abhishek Sharma) ದಾಖಲೆಯ ಶತಕ ಬಾರಿಸಿದ್ದರು. ಇದು ಅವರ ಚೊಚ್ಚಲ ಅಂತಾರಾಷ್ಟ್ರೀಯ ಶತಕ. ಈ ಮೂಲಕ ಅವರು ತಮ್ಮ ಅಂತಾರಾಷ್ಟ್ರೀಯ ಎರಡನೇ ಇನಿಂಗ್ಸ್​​ನಲ್ಲೇ ಶತಕ ಬಾರಿಸಿ ಮಿಂಚಿದರು. ಜತೆಗೆ ಹಲವಾರು ದಾಖಲೆಗಳನ್ನು ಅವರು ಹಿಮ್ಮೆಟ್ಟಿಸಿದರು. ಅಂದ ಹಾಗೆ ಅವರು ಈ ಹೊಡೆಬಡಿಯ ಇನಿಂಗ್ಸ್ ಆಡಿದ್ದ ಸಹ ಆಟಗಾರ ಮತ್ತು ನಾಯಕ ಶುಭ್ಮನ್ ಗಿಲ್ ಅವರ ಬ್ಯಾಟ್ ನಲ್ಲಿ ಎಂಬುದು ವಿಶೇಷ. ಅಂದ ಹಾಗೆ ಇದು ಜಿಂಬಾಬ್ವೆ ವಿರುದ್ಧ ಭಾರತೀಯನೊಬ್ಬನ ಮೊದಲ ಸೆಂಚುರಿ.

ಅಭಿಷೇಕ್​ ಶರ್ಮಾ ಮೊದಲ ಎಸೆತಕ್ಕೆ ಸಿಕ್ಸರ್ ಬಾರಿಸುವುದು ಸೇರಿದಂತೆ ಸಿಕಂದರ್ ರಾಜಾ ನೇತೃತ್ವದ ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯ ಎರಡನೇ ಪಂದ್ಯದಲ್ಲಿ 47 ಎಸೆತಗಳಲ್ಲಿ 100 ರನ್ ಗಳಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜುಲೈ 6 ರಂದು ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ ಪಂದ್ಯದಲ್ಲಿ ಡಕ್ ಔಟ್ ಆದ ನಂತರ, ಅಭಿಷೇಕ್ ಅವರ ಸ್ಫೋಟಕ ಇನ್ನಿಂಗ್ಸ್ ಮೂಡಿ ಬಂತು. ಮೊದಲ ಪಂದ್ಯದಲ್ಲಿ ಸೊನ್ನೆ ಹಾಗೂ ಎರಡನೇ ಪಂದ್ಯದಲ್ಲಿ 100 ರನ್ ಬಾರಿಸಿದ ಖ್ಯಾತಿ ಅವರಿಗೆ ದೊರಕಿತು.

ನಾಯಕ ಶುಭ್​ಮನ್​ ಗಿಲ್​ ಬೇಗನೆ ಔಟ್ ಅದ ನಂತರ ಋತುರಾಜ್ ಅವರೊಂದಿಗೆ ಕ್ರೀಸ್​ನಲ್ಲಿ ಗಟ್ಟಿಯಾಗಿ ನಿಂತ ಅಭಿಷೇಕ್ ಭರ್ಜರಿ ಇನಿಂಗ್ಸ್ ಆಡಿದರು. ಅವರಿಬ್ಬರು 137 ರನ್​​ ಜೊತೆಯಾಟ ಆಡಿದರು. ಅಂತಿಮವಾಗಿ ಋತುರಾಜ್ 46 ಎಸೆತಗಳಲ್ಲಿ ಅಜೇಯ 77 ರನ್ ಮತ್ತು ರಿಂಕು ಸಿಂಗ್ 22 ಎಸೆತಗಳಲ್ಲಿ 48 ರನ್ ಗಳಿಸಿದರು. ಹೀಗಾಗಿ ಭಾರತ 234 ರನ್ ಬಾರಿಸಿತು.

ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ, ಅಭಿಷೇಕ್ ಅವರು ತಮ್ಮ ನಾಯಕನ ಬ್ಯಾಟ್ ಅನ್ನು ಬಳಸಿದ್ದೇನೆ ಎಂದು ಬಹಿರಂಗಪಡಿಸಿದರು.ತಾವು ಅದೇ ರೀತಿ ಮಾಡುತ್ತಿರುವುದು ಇದೇ ಮೊದಲಲ್ಲ ಎಂದೂ ವಿವರಿಸಿದರು. “ನಾನು ಇಂದು ಶುಭ್​​ಮನ್​​ ಬ್ಯಾಟ್​ನಲ್ಲಿ ಆಡಿದ್ದೇನೆ. ನಾನು ಅದನ್ನು ಈ ಹಿಂದೆಯೂ ಮಾಡಿದ್ದೇನೆ. ನನಗೆ ರನ್ ಬೇಕಾದಾಗಲೆಲ್ಲಾ ನಾನು ಅವರ ಬ್ಯಾಟ್ ಕೇಳುತ್ತೇನೆ ಎಂದು ಅಭಿಷೇಕ್ ಹೇಳಿದರು.

ಶುಬ್ಮನ್ ಮತ್ತು ಅಭಿಷೇಕ್ ಇಬ್ಬರೂ ಪಂಜಾಬ್​ನ ದೇಶೀಯ ಕ್ರಿಕೆಟ್ ತಂಡದಲ್ಲಿ ಜತೆಯಾಗಿ ಆಡಿದ್ದಾರೆ. ಹಲವು ವರ್ಷಗಳಿಂದ ಗೆಳೆತನ ಹೊಂದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಸಮಯದಲ್ಲಿಯೂ, ಅಭಿಷೇಕ್ ಗುಜರಾತ್​​ ವಿರುದ್ಧದ ಎಸ್ಆರ್​ಎಚ್​ ಪಂದ್ಯದ ವೇಳೆ ಶುಭ್​ಮನ್​​ಗೆ ತಮ್ಮ ಕುಟುಂಬವನ್ನು ಪರಿಚಯ ಮಾಡಿಸಿಕೊಟ್ಟಿದ್ದರು.

ಇದನ್ನೂ ಓದಿ: WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

ಭಾರತಕ್ಕೆ ಭರ್ಜರಿ ವಿಜಯ

ರವಿ ಬಿಷ್ಣೋಯ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಅವರಂತಹ ಅತ್ಯುತ್ತಮ ಬೌಲಿಂಗ್ ಪ್ರದರ್ಶನದೊಂದಿಗೆ ಭಾರತ ಗೆಲುವು 100 ರನ್​ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ 1-1 ಸಮಬಲದ ಸೃಷ್ಟಿಯಾಗಿದೆ. ಬೌಲಿಂಗ್​ನಲ್ಲಿ ಆವೇಶ್ ಅವರ 3/15, ಬಿಷ್ಣೋಯ್ ಅವರ 2/11 ಮತ್ತು ಮುಖೇಶ್ ಅವರ 3/37 ಸ್ಪೆಲ್​ಗಳು ಭಾರತಕ್ಕೆ ನೆರವಾಯಿತು. ಸಿಕಂದರ್​ ರಾಜಾ ಅವರ ಜಿಂಬಾಬ್ವೆ ತಂಡ ಕೇವಲ 134 ರನ್​ಗಳಿಗೆ ಆಲ್​ಔಟ್ ಆಯಿತು. ಬುಧವಾರ (ಜುಲೈ9ರಂದು) ಮೂರನೇ ಪಂದ್ಯ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

VISTARANEWS.COM


on

WCPL 2024
Koo

ಬೆಂಗಳೂರು: 2024ರ ಮಹಿಳಾ ಕೆರಿಬಿಯನ್ ಪ್ರೀಮಿಯರ್ ಲೀಗ್​​ನಲ್ಲಿ (WCPL 2024) ಟ್ರಿನ್​ಬ್ಯಾಗೊ ನೈಟ್ ರೈಡರ್ಸ್ ತಂಡವನ್ನು ಜೆಮಿಮಾ ರೊಡ್ರಿಗಸ್ ಹಾಗೂ ಶಿಖಾ ಪಾಂಡೆ ಸೇರಿಕೊಂಡಿದ್ದಾರೆ. ಈ ಋತುವಿನಲ್ಲಿ ನೈಟ್ ರೈಡರ್ಸ್ ಪರ ವಿದೇಶಿ ಆಟಗಾರರಾಗಿ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸೆನ್ ಸೇರಲಿದ್ದಾರೆ. 2024ರ ಸಿಪಿಎಲ್ ಆಗಸ್ಟ್ 21ರಿಂದ 29ರವರೆಗೆ ಟ್ರಿನಿಡಾಡ್​ನಲ್ಲಿ ನಡೆಯಲಿದ್ದು, ಎಲ್ಲಾ ಏಳು ಪಂದ್ಯಗಳು ಟ್ರಿನಿಡಾಡ್​​ನ ತರೂಬಾದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿವೆ.

ಇದೇ ಮೊದಲ ಬಾರಿಗೆ ನಾನು ಡಬ್ಲ್ಯುಸಿಪಿಎಲ್​​ಗೆ ಬರುತ್ತಿದ್ದೇನೆ. ನಾನು ಕೆರಿಬಿಯನ್​​ನಲ್ಲಿ ಭಾರತಕ್ಕಾಗಿ ಸಾಕಷ್ಟು ಆಡಿದ್ದೇನೆ, ಆದರೆ ನಾನು ಡಬ್ಲ್ಯುಸಿಪಿಎಲ್​​ನ ನೈಟ್ ರೈಡರ್ಸ್ ಅನ್ನು ಪ್ರತಿನಿಧಿಸಲಿದ್ದೇನೆ ಎಂದು ತಿಳಿದು ಉತ್ಸುಕನಾಗಿದ್ದೇನೆ,” ಎಂದು ರೋಡ್ರಿಗಸ್ ಹೇಳಿದ್ದಾರೆ.

ಪ್ರಪಂಚದಾದ್ಯಂತ ಅವರು ಹೊಂದಿರುವ ಪರಂಪರೆ ನಮಗೆಲ್ಲರಿಗೂ ತಿಳಿದಿದೆ. 2022ರ ಚಾಂಪಿಯನ್ ಟಿಕೆಆರ್ ಮಹಿಳಾ ತಂಡ ಕೂಡ ಹೆಮ್ಮೆಯ ತಂಡವಾಗಿದೆ. ಅಕ್ಟೋಬರ್​ನಲ್ಲಿ ನಡೆಯಲಿರುವ ಮಹಿಳಾ ವಿಶ್ವ ಟಿ20ಗೆ ಮುಂಚಿತವಾಗಿ ಈ ಪಂದ್ಯಾವಳಿಯು ನಮಗೆ ಉತ್ತಮ ಸಿದ್ಧತೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ನಾನು ನಂಬುತ್ತೇನೆ. ವಿಶ್ವದ ಕೆಲವು ಅತ್ಯುತ್ತಮ ಆಟಗಾರರು ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, “ಎಂದು ಅವರು ಹೇಳಿದರು.

ನೈಟ್ ರೈಡರ್ಸ್ 2023 ರ ಋತುವಿನಲ್ಲಿ ತಮ್ಮನ್ನು ಪ್ರತಿನಿಧಿಸಿದ ಐದು ಆಟಗಾರರನ್ನು ಉಳಿಸಿಕೊಂಡಿದೆ, ಡಿಯಾಂಡ್ರಾ ಡಾಟಿನ್, ಶಮಿಲಾ ಕಾನ್ನೆಲ್, ಕೈಸಿಯಾ ನೈಟ್, ಜೈದಾ ಜೇಮ್ಸ್ ಮತ್ತು ಸಮರಾ ರಾಮ್​​ನಾಥ್ ಮರಳಿದ್ದಾರೆ. ತಂಡದಲ್ಲಿ ಇನ್ನೂ ಆರು ಸ್ಥಾನಗಳು ಉಳಿದಿದ್ದು, ಜುಲೈನಲ್ಲಿ ನಡೆಯಲಿರುವ ಡಬ್ಲ್ಯುಸಿಪಿಎಲ್ ಡ್ರಾಫ್ಟ್​​ನಲ್ಲಿ ಈ ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

ನಮ್ಮ ಸ್ಥಳೀಯ ಕೆರಿಬಿಯನ್ ಆಟಗಾರರನ್ನು ಉಳಿಸಿಕೊಳ್ಳಲು ಮತ್ತು ಈ ವರ್ಷದ ಮಹಿಳಾ ಸಿಪಿಎಲ್​​ಗೆ ನಾಲ್ಕು ವಿಶ್ವಪ್ರಸಿದ್ಧ ವಿದೇಶಿ ಆಟಗಾರರೊಂದಿಗೆ ಸಹಿ ಮಾಡಲು ನಾವು ತುಂಬಾ ಉತ್ಸುಕರಾಗಿದ್ದೇವೆ” ಎಂದು ನೈಟ್ ರೈಡರ್ಸ್ ಗ್ರೂಪ್​​​ನ ಸಿಇಒ ವೆಂಕಿ ಮೈಸೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಡಿಯಾಂಡ್ರಾ ಡಾಟಿನ್ ಮತ್ತೊಮ್ಮೆ ತಂಡವನ್ನು ಮುನ್ನಡೆಸುತ್ತಿರುವುದು ಸಂತಸ ತಂದಿದೆ. ಉದ್ಘಾಟನಾ ವರ್ಷದಿಂದ ಅವರು ತಂಡದ ಅದ್ಭುತ ನಾಯಕಿಯಾಗಿದ್ದಾರೆ, 2022 ರಲ್ಲಿ ನಮ್ಮ ಪ್ರಶಸ್ತಿ ಗೆದ್ದಾಗಿನಿಂದ ನಾಯಕ ಮತ್ತು ಆಟಗಾರ್ತಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ “ಎಂದು ಅವರು ಹೇಳಿದರು.

ಜೆಮಿಮಾ ರೊಡ್ರಿಗಸ್ ಮತ್ತು ಶಿಖಾ ಪಾಂಡೆ ಪಂದ್ಯಾವಳಿಯ ಗುಣಮಟ್ಟ ಹೆಚ್ಚಿಸಲಿದ್ದಾರೆ. ಡಬ್ಲ್ಯುಸಿಪಿಎಲ್​​ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ನಾವು ಬಿಸಿಸಿಐಗೆ ತುಂಬಾ ಕೃತಜ್ಞರಾಗಿದ್ದೇವೆ. ಸೂಪರ್ ಸ್ಟಾರ್​ಗಳಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸೆನ್ ಅವರೊಂದಿಗೆ ಈ ಎರಡು ದೊಡ್ಡ ಭಾರತೀಯ ಹೆಸರುಗಳ ಸೇರ್ಪಡೆಯು ಕ್ರಿಕೆಟ್ ಗೆ ಕಳೆ ಹೆಚ್ಚಿಸಲಿದೆ, “ಎಂದು ಅವರು ಹೇಳಿದರು.

ಮಹಿಳಾ ತಂಡದ ಆಟಗಾರರು ಇವರು

ಡಿಯಾಂಡ್ರಾ ಡಾಟಿನ್, ಮೆಗ್ ಲ್ಯಾನಿಂಗ್, ಜೆಸ್ ಜೊನಾಸೆನ್, ಜೆಮಿಮಾ ರೊಡ್ರಿಗಸ್, ಶಿಖಾ ಪಾಂಡೆ, ಕೈಸಿಯಾ ನೈಟ್, ಶಮಿಲಾ ಕಾನ್ನೆಲ್, ಜೈದಾ ಜೇಮ್ಸ್, ಸಮರಾ ರಾಮನಾಥ್.

Continue Reading

ಕ್ರೀಡೆ

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

VISTARANEWS.COM


on

Abhishek Sharma
Koo

ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಯುವ ಬ್ಯಾಟರ್​ ಅಭಿಷೇಕ್ ಶರ್ಮಾ (Abhishek Sharma) ಚೊಚ್ಚಲ ಶತಕ ಬಾರಿಸಿದ್ದರು. ಅವರು 47 ಎಸೆತಗಳಲ್ಲಿ 100 ರನ್ ಗಳಿಸಲು ಸಹಾಯ ಮಾಡಿದರು. ಭಾರತ ತಂಡಕ್ಕೆ 2 ವಿಕೆಟ್​ಗೆ 232 ಬೃಹತ್ ಮೊತ್ತ ಗಳಿಸಲು ಸಹಾಯ ಮಾಡಿತು. ಎಡಗೈ ಬ್ಯಾಟರ್​ ಏಳು ಬೌಂಡರಿ ಮತ್ತು ಎಂಟು ಸಿಕ್ಸರ್ ಗಳನ್ನು ಬಾರಿಸಿದ್ದರು. ೨೦೦ ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ ಸ್ಕೋರ್ ಮಾಡಿದ್ದಾರೆ. ಈ ವೇಳೆ ಅವರು ಈ ಹಿಂದೆ ವಿಶ್ವ ಕ್ರಿಕೆಟ್​​ನಲ್ಲಿ ದಾಖಲಾಗಿದ್ದ ಕೆಲವು ಅತ್ಯುತ್ತಮ ಹಲವಾರು ದಾಖಲೆಗಳನ್ನು ಮುರಿದರು.

ಬಳಿಕ ಜಿಂಬಾಬ್ವೆಯನ್ನು 134 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ ಅಂತಿಮವಾಗಿ 100 ರನ್​ಗಳಿಂದ ಗೆದ್ದುಕೊಂಡಿತು. ಭಾರತದ ಪರ ಮುಕೇಶ್ ಕುಮಾರ್ 3, ಅವೇಶ್ ಖಾನ್ 3, ರವಿ ಬಿಷ್ಣೋಯ್ 2 ವಿಕೆಟ್ ಪಡೆದರು. ಎರಡನೇ ಟಿ 20 ಯಲ್ಲಿ ಭಾರತದ ಪ್ರದರ್ಶನವು ಮೊದಲ ಟಿ 20 ಐ ಸೋಲಿನ ಎಲ್ಲಾ ನೋವನ್ನು ಕಳೆಯಿತು. ಮೂರು ಪಂದ್ಯಗಳು ಬಾಕಿ ಇರುವಾಗ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಉಳಿದ ಮೂರು ಪಂದ್ಯಗಳು ಬುಧವಾರ, ಶನಿವಾರ ಮತ್ತು ಭಾನುವಾರ ನಡೆಯಲಿವೆ.

ಅಭಿಷೇಕ್ ಶರ್ಮಾ ಮುರಿದ ದಾಖಲೆಗಳು

ರೋಹಿತ್ ಶರ್ಮಾರನ್ನು ಹಿಂದಿಕ್ಕಿದ ಅಭಿಷೇಕ್ ಶರ್ಮಾ: ಯುವ ಆಟಗಾರ ಈ ಋತುವಿನ 47 ನೇ ಸಿಕ್ಸರ್ ಬಾರಿಸುವ ಮೂಲಕ 2024 ರಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿದ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು.

ಇದನ್ನೂ ಓದಿ: World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

ಸತತ ಮೂರು ಸಿಕ್ಸರ್ ಗಳೊಂದಿಗೆ ಶತಕ ಗಳಿಸಿದ ಮೊದಲ ಬ್ಯಾಟ್ಸ್ ಮನ್: ಯುವ ಆರಂಭಿಕ ಬ್ಯಾಟರ್​​ ಹ್ಯಾಟ್ರಿಕ್ ಸಿಕ್ಸರ್​ಗಳೊಂದಿಗೆ ತಮ್ಮ ಮೊದಲ ಟಿ 20 ಐ ಶತಕ ಪೂರ್ಣಗೊಳಿಸಿದರು. ಇದರೊಂದಿಗೆ ಅವರು ಅಂತಾ ರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಸತತ 3 ಸಿಕ್ಸರ್​ಗಳೊಂದಿಗೆ ಶತಕ ತಂದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಟಿ20ಐನಲ್ಲಿ ಅತಿ ವೇಗದ 50-100 ರನ್

  • 12 ಎಸೆತಗಳು – ಡೇವಿಡ್ ಮಿಲ್ಲರ್ ವಿರುದ್ಧ ಬ್ಯಾನ್, 2017
  • 12 ಎಸೆತಗಳು – ರೋಹಿತ್ ಶರ್ಮಾ ವಿರುದ್ಧ ಶ್ರೀಲಂಕಾ, 2017
  • 13 ಎಸೆತಗಳು – ಸಂದೀಪ್ ಜೋರಾ ವಿರುದ್ಧ ಪಿಎನ್ಜಿ, 2024
  • 13 ಎಸೆತಗಳು – ಅಭಿಷೇಕ್ ಶರ್ಮಾ ವಿರುದ್ಧ ಜಿಮ್, 2024

ಟಿ20ಐನಲ್ಲಿ ಸಿಕ್ಸರ್ ಸಿಡಿಸಿದ ಟೀಂ ಇಂಡಿಯಾ ಕ್ರಿಕೆಟಿಗರು

  • ಸೂರ್ಯಕುಮಾರ್ ಯಾದವ್ ವಿರುದ್ಧ ಇಂಗ್ಲೆಂಡ್, 2021
  • ತಿಲಕ್ ವರ್ಮಾ ವಿರುದ್ಧ ವಿಐ, 2024
  • ಅಭಿಷೇಕ್ ಶರ್ಮಾ ವಿರುದ್ಧ ಜಿಮ್, 2024

ಟಿ20ಐನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಭಾರತೀಯರು

  • 21 ವರ್ಷ 279 ದಿನ – ಯಶಸ್ವಿ ಜೈಸ್ವಾಲ್
  • 23 ವರ್ಷ 146 ದಿನ – ಶುಬ್ಮನ್ ಗಿಲ್
  • 23 ವರ್ಷ 156 ದಿನ – ಸುರೇಶ್ ರೈನಾ
  • 23 ವರ್ಷ 307 ದಿನ – ಅಭಿಷೇಕ್ ಶರ್ಮಾ

ಟಿ20ಐನಲ್ಲಿ ಸಿಕ್ಸರ್​ ಮೂಲಕ ಶತಕ ಬಾರಿಸಿದ ಭಾರತೀಯರು

ಸುರೇಶ್ ರೈನಾ -ದಕ್ಷಿಣ ಆಫ್ರಿಕಾ ವಿರುದ್ಧ
ರೋಹಿತ್ ಶರ್ಮಾ- ದಕ್ಷಿಣ ಆಫ್ರಿಕಾ ವಿರುದ್ಧ
ಕೆಎಲ್ ರಾಹುಲ್- ವಿಂಡೀಸ್ ವಿರುದ್ಧ
ವಿರಾಟ್ ಕೊಹ್ಲಿ – ಅಫಘಾನಿಸ್ತಾನ ವಿರುದ್ಧ
ಋತುರಾಜ್ ಗಾಯಕ್ವಾಡ್ – ಆಸ್ಟ್ರೇಲಿಯಾ ವಿರುದ್ಧ
ಅಭಿಷೇಕ್ ಶರ್ಮಾ- ಜಿಂಬಾಬ್ವೆ ವಿರುದ್ಧ

ಅತಿ ಕಡಿಮೆ ಇನಿಂಗ್ಸ್​ನಲ್ಲಿ ಶತಕ ಬಾರಿಸಿದವರು

  • 2- ಅಭಿಷೇಕ್ ಶರ್ಮಾ
  • 3 – ದೀಪಕ್ ಹೂಡಾ
  • 4- ಕೆಎಲ್ ರಾಹುಲ್
  • 6- ಯಶಸ್ವಿ ಜೈಸ್ವಾಲ್
  • 6- ಶುಬ್ಮನ್ ಗಿಲ್

ಸಂತಸ ವ್ಯಕ್ತಪಡಿಸಿದ ಅಭಿಷೇಕ್​

ಇದು ನನ್ನ ಉತ್ತಮ ಪ್ರದರ್ಶನ ಎಂದು ನಾನು ಭಾವಿಸುತ್ತೇನೆ. ನಿನ್ನೆ ನಾವು ಅನುಭವಿಸಿದ ಸೋಲು, ಅದು ನಮಗೆ ಸುಲಭವಾಗಿರಲಿಲ್ಲ. ಇಂದು ನನ್ನ ದಿನ ಎಂದು ನಾನು ಭಾವಿಸಿದೆ ಮತ್ತು ನಾನು ಅದನ್ನು ಲೆಕ್ಕಕ್ಕೆ ತೆಗೆದುಕೊಂಡೆ. ಟಿ 20 ಆವೇಗದ ಬಗ್ಗೆ ಎಂದು ನಾನು ಭಾವಿಸುತ್ತೇನೆ ಮತ್ತು ನಾನು ಅದನ್ನು ಕೊನೆಯವರೆಗೂ ಕೊಂಡೊಯ್ದಿದ್ದೇನೆ ಎಂದು ಶರ್ಮಾ ಹೇಳಿದರು.

Continue Reading

ಪ್ರಮುಖ ಸುದ್ದಿ

ZIM vs IND : ಭಾರತ ತಂಡಕ್ಕೆ 100 ರನ್​ ಭರ್ಜರಿ ಜಯ, ಜಿಂಬಾಬ್ವೆ ವಿರುದ್ಧ ಸರಣಿಯಲ್ಲಿ 1-1 ಸಮಬಲ ಸಾಧನೆ

VISTARANEWS.COM


on

ZIM vs IND
Koo

ಹರಾರೆ: ಬ್ಯಾಟಿಂಗ್​ನಲ್ಲಿ ಅಭಿಷೇಕ್​ ಶರ್ಮಾ (100 ರನ್​, 47 ಎಸೆತ, 7 ಫೋರ್, 8 ಸಿಕ್ಸರ್​) ಬಾರಿಸಿದ ಅಮೋಘ ಶತಕ ಹಾಗೂ ಬೌಲಿಂಗ್​ನಲ್ಲಿ ಮುಕೇಶ್​ ಕುಮಾರ್ ಹಾಗೂ ಅವೇಶ್​ ಖಾನ್​ ಅವರ ತಲಾ 3 ವಿಕೆಟ್​ ಸಾಧನೆಯಿಂದ ಮಿಂಚಿದ ಭಾರತ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ (ZIM vs IND) ಎರಡನೇ ಪಂದ್ಯದಲ್ಲಿ 100 ರನ್​ ಭರ್ಜರಿ ವಿಜಯ ದಾಖಲಿಸಿದೆ. ಈ ಮೂಲಕ ಭಾರತ ತಂಡ ಐದು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧನೆ ಮಾಡಿದೆ. ಮೊದಲ ಪಂದ್ಯದಲ್ಲಿ 13 ರನ್​ಗಳ ಹೀನಾಯ ಸೋಲಿಗೆ ಒಳಗಾಗಿ ಅವಮಾನಕ್ಕೆ ಈಡಾಗಿದ್ದ ವಿಶ್ವ ಚಾಂಪಿಯನ್​ ಮೆನ್​ ಇನ್ ಬ್ಲ್ಯೂ ಬಳಗ ಎರಡನೇ ಪಂದ್ಯದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿತು. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿತು.

ಇಲ್ಲಿನ ಹರಾರೆ ಸ್ಪೋರ್ಟ್ಸ್​​ ಕ್ಲಬ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 234 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಆತಿಥೇಯ ಜಿಂಬಾಬ್ವೆ ಬಳಗ 18. 4 ಓವರ್​ಗಳಲ್ಲಿ 134 ರನ್​ಗಳಿಗೆ ಆಲ್​ಔಟ್ ಆಯಿತು.

ಮಾರಕ ಬೌಲಿಂಗ್​

ಭಾರತದ ಬ್ಯಾಟರ್​ಗಳು ದೊಡ್ಡ ಮೊತ್ತವನ್ನು ಪೇರಿಸಿದ್ದ ಕಾರಣ ಬೌಲರ್​ಗಳಿಗೆ ತಮ್ಮ ಪ್ರತಾಪ ತೋರಿಸಲು ಅನುಕೂಲವಾಯಿತು. ಆರಂಭದಿಂದಲೇ ಆತಿಥೇಯ ತಂಡದ ವಿರುದ್ಧ ಪ್ರಾಬಲ್ಯ ಸಾಧಿಸಿದರು. ಇನ್ನೋಸೆಂಟ್​ ಕೈಯಾ 4 ರನ್ ಬಾರಿಸಿ ಮುಕೇಶ್ ಎಸೆತಕ್ಕೆ ಔಟಾದರು. ಆದರೆ, ಅ ಬಳಿಕ ವೆಸ್ಲಿ ಮಧೆವೆರೆ (43 ರನ್​) ಹಾಗೂ ಬ್ರಿಯಾನ್ ಬೆನೆಟ್ (26 ರನ್​) ಭಾರತದ ಬೌಲರ್​ಗಳನ್ನು ಸ್ವಲ್ಪ ಹೊತ್ತು ಕಾಡಿದರು. ಆದರೆ, ಬ್ರಿಯಾನ್ ಮುಕೇಶ್ ಎಸೆತಕ್ಕೆ ಔಟಾದ ಬಳಿಕ ಡಿಯಾನ್ ಮೈರ್ಸ್​ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ನಾಯಕ ಸಿಕಂದರ್​ ರಾಜಾ 4 ರನ್​ಗೆ ಔಟಾದರು. ಇವರಿಬ್ಬರೂ ಆವೇಶ್​ ಖಾನ್​ ಬೌಲಿಂಗ್​ಗೆ ಬಲಿಯಾದರು. ಇದಾದ ಬಳಿಕ ಜಿಂಬಾಬ್ವೆ ಆಟಗಾರರ ಪ್ರತಾಪ ಕಡಿಮೆಯಾಯಿತು. ಕ್ಯಾಂಪ್​ಬೆಲ್​ 10 ರನ್​, ಮಂಡಂಡೆ ಶೂನ್ಯಕ್ಕೆ ಹಾಗೂ ಮಸಕಡ್ಸಾ 1 ರನ್​ಗೆ ಔಟಾಗುವ ಮೂಲಕ ಭಾರತ ಸಂಪೂರ್ಣವಾಗಿ ಮೇಲುಗೈ ಸಾಧಿಸಿತು. ಲ್ಯೂಕ್​ ಲ್ಯಾಂಗ್​ವೇ ಕೊನೆಯಲ್ಲಿ 33 ರನ್ ಬಾರಿಸಿದರೂ ಭಾರತದ ರನ್​ ಮೊತ್ತವನ್ನು ಸಮೀಪಿಸಲೂ ಅವರಿಗೆ ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

ಅಭಿಷೇಕ್​ ಅಬ್ಬರ

ಮೊದಲು ಬ್ಯಾಟ್ ಮಾಡಿದ ಭಾರತ ಪರ ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಶುಭ್​ಮನ್ ಗಿಲ್​ 2 ರನ್​ಗೆ ಔಟಾದ ಹೊರತಾಗಿಯೂ ಅವರು ತಮ್ಮ ಹೊಡೆಬಡಿಯ ಬ್ಯಾಟಿಂಗ್ ಪ್ರದರ್ಶನ ನಿಲ್ಲಿಸಲಿಲ್ಲ. ತಾವೆದರುಸಿದ ಮೊದಲ ಎಸೆತಕ್ಕೆ ಸಿಕ್ಸರ್ ಬಾರಿಸಿ ರನ್ ಕದಿಯಲು ಆರಂಭಿಸಿದ ಅವರು 34 ಎಸೆತಕ್ಕೆ ಅರ್ಧ ಶತಕ ಹಾಗೂ ನಂತರ 13 ಎಸೆತಗಳಲ್ಲಿ 50 ರನ್ ಬಾರಿಸಿ ಚೊಚ್ಚಲ ಅಂತಾರಾಷ್ಟ್ರೀಯ ಶತಕ ಬಾರಿಸಿದರು. ಆದರೆ, ನಂತರದ ಎಸೆತದಲ್ಲಿಯೇ ಔಟಾದರು. ಅದಕ್ಕಿಂತ ಮೊದಲು ಅವರು ಎರಡನೇ ವಿಕೆಟ್​ಗೆ ಋತುರಾಜ್ ಗಾಯಕ್ವಾಡ್ ಜತೆಗೆ 137ರನ್​ಗಳ ಜತೆಯಾಟ ಆಡಿದರು. ಶರ್ಮಾ ಔಟಾದ ಬಳಿಕ ಆಡಲು ಬಂದ ರಿಂಕು ಸಿಂಗ್​ ಇನ್ನಷ್ಟು ಅಬ್ಬರಿಸಿದರು. ಅವರು 22 ಎಸೆತಕ್ಕೆ 48 ರನ್ ಬಾರಿಸಿ ಮಿಂಚಿದರು. ಅದಕ್ಕಿಂತ ಮೊದಲು ಸಾವಧಾನವಾಗಿ ಇನಿಂಗ್ಸ್ ಕಟ್ಟಿದ ಋತುರಾಜ್ ಗಾಯಕ್ವಾಡ್​ 47 ಎಸೆತಕ್ಕೆ 77 ರನ್ ಹೊಡೆದರು. ಅವರ ಇನಿಂಗ್ಸ್​​ನಲ್ಲಿ 11 ಫೋರ್ ಹಾಗೂ 1 ಸಿಕ್ಸರ್ ಇತ್ತು.

ಸರಣಿಯ ಮೂರನೇ ಪಂದ್ಯ ಬುಧವಾರ (ಜುಲೈ 10ರಂದು) ನಡೆಯಲಿದೆ.

Continue Reading
Advertisement
ATM Robbery case
ಕ್ರೈಂ12 mins ago

Robbery Case: ಬೆಂಗಳೂರಿನ ಎಟಿಎಂಗಳಲ್ಲಿ ಹರ್ಯಾಣದ ಗ್ಯಾಂಗ್‌ಗಳಿಂದ ದರೋಡೆ!

Abhishek Sharma
ಪ್ರಮುಖ ಸುದ್ದಿ16 mins ago

Abhishek Sharma : ಅಭಿಷೇಕ್ ಶರ್ಮಾ ದಾಖಲೆಯ ಶತಕ ಬಾರಿಸಿದ್ದು ಶುಭ್​​ಮನ್ ಗಿಲ್​ ಬ್ಯಾಟ್​ನಲ್ಲಿ!

Ghee benefits
ಲೈಫ್‌ಸ್ಟೈಲ್41 mins ago

How to spot fake ghee: ನಾವು ಖರೀದಿಸಿದ ತುಪ್ಪ ಶುದ್ಧವೋ ಕಲಬೆರಕೆಯೋ ಪರೀಕ್ಷಿಸುವುದು ಹೇಗೆ?

ರಾಜಮಾರ್ಗ ಅಂಕಣ bola akshta pujari
ಅಂಕಣ41 mins ago

ರಾಜಮಾರ್ಗ ಅಂಕಣ: ದಕ್ಷಿಣ ಆಫ್ರಿಕಾದಲ್ಲಿ ಚಿನ್ನದ ಪದಕ ಗೆದ್ದ ಕಾರ್ಕಳದ ಬೋಳ ಅಕ್ಷತಾ ಪೂಜಾರಿ

karnataka weather Forecast
ಮಳೆ1 hour ago

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ನೆಮ್ಮದಿ ನೆಲೆಸಬೇಕೆ? ಹಾಗಿದ್ದರೆ ಅಡುಗೆ ಒಲೆಯ ದಿಕ್ಕು ಸರಿಯಾಗಿರಲಿ!

dina Bhavishya
ಭವಿಷ್ಯ3 hours ago

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ಹೋದರೆ ಹೆಚ್ಚಾಗುತ್ತೆ ಈ ರಾಶಿಯವರ ಮಾನಸಿಕ ಒತ್ತಡ

School Principal
ದೇಶ7 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ8 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ8 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ12 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ14 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ15 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌