IPL 2023: ಫೈನಲ್​ ಪಂದ್ಯದಲ್ಲಿ ಪಾಂಡ್ಯ ತೋರಿದ ವರ್ತನೆಗೆ ಸೆಹವಾಗ್​ ಆಕ್ರೋಶ - Vistara News

ಕ್ರಿಕೆಟ್

IPL 2023: ಫೈನಲ್​ ಪಂದ್ಯದಲ್ಲಿ ಪಾಂಡ್ಯ ತೋರಿದ ವರ್ತನೆಗೆ ಸೆಹವಾಗ್​ ಆಕ್ರೋಶ

ಫೈನಲ್​ನಲ್ಲಿ ಹಾರ್ದಿಕ್ ಪಾಂಡ್ಯ ಅವರು ಮೋಹಿತ್ ಜತೆಗೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದೇ ತಂಡದ ಸೋಲಿಗೆ ಕಾರಣ ಎಂದು ಸೆಹವಾಗ್​ ಹೇಳಿದ್ದಾರೆ

VISTARANEWS.COM


on

IPL 2023 final
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧದ ಫೈನಲ್​ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಅವರು ತೆಗೆದುಕೊಂಡ ನಿರ್ಧಾರವೊಂದನ್ನು ಟೀಮ್​ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹವಾಗ್ ಖಂಡಿಸಿದ್ದಾರೆ.

ಮೋಹಿತ್​ ಶರ್ಮ ಅವರ ಅಂತಿಮ ಓವರ್​ನಲ್ಲಿ ಚೆನ್ನೈ ತಂಡಕ್ಕೆ 13 ರನ್​ಗಳ ಅವಶ್ಯಕತೆ ಇತ್ತು. ಈ ಓವರಿನ ಮೊದಲ ನಾಲ್ಕು ಎಸೆತಗಳಲ್ಲಿ ಮೋಹಿತ್​ ಶರ್ಮ ಅವರು ಕೇವಲ ಮೂರು ರನ್‌ ಬಿಟ್ಟುಕೊಟ್ಟು ಚೆನ್ನೈ ತಂಡವನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದರು. ಇದರಿಂದಾಗಿ ಗುಜರಾತ್​ ಗೆಲ್ಲುವ ಆಸೆ ಬಲವಾಗಿತ್ತು. ಆದರೆ ಕೊನೆಯ ಎರಡು ಎಸೆತಗಳಲ್ಲಿ ಜಡೇಜಾ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ಚೆನ್ನೈಗೆ ಗೆಲುವು ತಂದು ಕೊಟ್ಟರು.

ಪಂದ್ಯದ ಅಂತಿಮ ಓವರ್ ಗುಜರಾತ್ ಟೈಟನ್ಸ್​ನ ಯೋಜನೆಯಂತೆ ನಡೆಯುತ್ತಿತ್ತು. ಆದರೆ ನಾಯಕ ಹಾರ್ದಿಕ್ ಪಾಂಡ್ಯ ಅವರು ಮೋಹಿತ್ ಜತೆಗೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದೇ ತಂಡದ ಸೋಲಿಗೆ ಕಾರಣ ಎಂದು ಸೆಹವಾಗ್​ ಹೇಳಿದ್ದಾರೆ. ಮೊದಲ 4 ಎಸೆತಗಳನ್ನು ಉತ್ತಮ ರೀತಿಯಲ್ಲಿ ನಡೆಸಿದ ಅವರಿಗೆ ಅಂತಿಮ ಎಡರು ಎಸೆತಗಳನ್ನು ಹೇಗೆ ಎಸೆಯಬೇಕೆಂದು ತಿಳಿದಿರುತ್ತದೆ. ಆದರೆ ಪಾಂಡ್ಯ ಅವರು ಮಧ್ಯ ಪ್ರವೇಶಿಸಿ ಅವರ ಯೋಜನೆಗೆ ಅಡ್ಡಗಾಲಿಟ್ಟರು ಎಂದು ಸೆಹವಾಗ್​ ಹೇಳಿದ್ದಾರೆ.

ಇದನ್ನೂ ಓದಿ IPL 2023 : ಐಪಿಎಲ್ ಟ್ರೋಫಿಗೆ ತಿರುಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಸ್​ಕೆ

“ಓರ್ವ ಬೌಲರ್ ಚೆನ್ನಾಗಿ ಬೌಲಿಂಗ್ ಮಾಡುವಾಗ ಹಾಗೂ ಯಾರ್ಕರ್‌ಗಳೊಂದಿಗೆ ಸತತ ಎಸೆತ ಎಸೆಯುತ್ತಿರುವಾಗ, ನೀವು ಯಾಕೆ ಹೋಗಿ ಅವರೊಂದಿಗೆ ಮಾತನಾಡುತ್ತೀರಿ? ಬ್ಯಾಟರ್‌ಗೆ 2 ಎಸೆತಗಳಲ್ಲಿ 10 ಬೇಕು ಹಾಗೂ ಆಗ ಯಾರ್ಕರ್ ನೊಂದಿಗೆ ದಾಳಿ ಮಾಡಬೇಕೆಂದು ಅವರಿಗೆ ತಿಳಿದಿದೆ. ಹಾಗಿರುವಾಗ ನೀವು ಅವರ ಸಮಯವನ್ನು ಏಕೆ ವ್ಯರ್ಥ ಮಾಡುತ್ತೀರಿ? ಮೋಹಿತ್ ಎದುರಾಳಿಗೆ ರನ್ ಬಿಟ್ಟುಕೊಡುತ್ತಿದ್ದರೆ ಆಗ ಅವರ ಬಳಿ ಹೋಗಿ ಮಾತನಾಡುವುದರಲ್ಲಿ ಒಂದು ಅರ್ಥವಿದೆ. ಆದರೆ ಇಲ್ಲಿ ಪರಿಸ್ಥಿತಿ ಹಾಗಿರಲಿಲ್ಲ ಆದರೂ ಪಾಂಡ್ಯ ಅವರು ಮೋಹಿತ್​ಗೆ ತಲೆ ತಿಂದಿದ್ದಾರೆ. ಇದರಿಂದ ಅವರ ಏಕಾಗ್ರತೆಗೆ ಅಡ್ಡಿಯಾಗಿದೆ ಹೀಗಾಗಿ ಪಂದ್ಯ ಸೋಲು ಕಂಡಿದೆ ಎಂದು ಪಾಂಡ್ಯ ವರ್ತನೆಗೆ ಸೆಹಾವಾಗ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಹವಾಗ್​ ಮಾತ್ರವಲ್ಲದೆ ಸುನಿಲ್ ಗವಾಸ್ಕರ್ ಪಾಂಡ್ಯ ವರ್ತನೆಗೆ ಕಿಡಿಕಾರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

MS Dhoni : ಸಿಎಸ್​ಕೆ ವಾರ್ಷಿಕೋತ್ಸವದಂದೇ 101 ಮೀಟರ್ ಸಿಕ್ಸರ್ ಬಾರಿಸಿದ ಧೋನಿ!

MS Dhoni: ಎಲ್ಎಸ್​ಜಿ ವಿರುದ್ಧದ ಪಂದ್ಯದಲ್ಲಿ ಧೋನಿ 9 ಎಸೆತಗಳಲ್ಲಿ 2 ಬೌಂಡರಿ ಮತ್ತು ಅಷ್ಟೇ ಸಿಕ್ಸರ್​ಗಳೊಂದಿಗೆ 28 ರನ್ ಗಳಿಸಿ ಔಟಾಗದೆ ಉಳಿದರು. ಸೂಪರ್ ಕಿಂಗ್ಸ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. 18 ನೇ ಓವರ್​ನಲ್ಲಿ ರವಿ ಬಿಷ್ಣೋಯ್ ಮೊಯಿನ್ ಅಲಿಯನ್ನು ಔಟ್ ಮಾಡಿದ ನಂತರ 8 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ 42 ವರ್ಷದ ಧೋನಿ ಪರಿಣಾಮ ಬೀರಿದರು. ಕೆಲವು ಶಕ್ತಿಯುತ ಸ್ಟ್ರೋಕ್​​ಗಳೊಂದಿಗೆ ಇನ್ನಿಂಗ್ಸ್​​ಗೆ ವೇಗ ನೀಡಿದರು.

VISTARANEWS.COM


on

MS Dhoni
Koo

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ಋತುರಾಜ್ ಗಾಯಕ್ವಾಡ್​ಗೆ ನಾಯಕತ್ವ ಹಸ್ತಾಂತರಿಸಿದಾಗಿನಿಂದ ಎಂಎಸ್ ಧೋನಿ (MS Dhoni) ಸ್ವಾತಂತ್ರ್ಯದಿಂದ ಬ್ಯಾಟಿಂಗ್ ಮಾಡುತ್ತಿದ್ದಾರೆ. ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಏಪ್ರಿಲ್ 19 ರ ಶುಕ್ರವಾರ ಕೆಎಲ್ ರಾಹುಲ್ ಅವರ ಎಲ್ಎಸ್​ಜಿ ವಿರುದ್ಧದ ಪಂದ್ಯದಲ್ಲಿ ಅವರು ಅದ್ಭುತ ಫಾರ್ಮ್​ನಲ್ಲಿದ್ದಂತೆ ಕಂಡರು. ಅವರು 101 ಮೀಟರ್ ಸಿಕ್ಸರ್ ಬಾರಿಸಿ ಪ್ರೇಕ್ಷಕರನ್ನು ರಂಜಿಸಿದರು.

ಇದು ಐಪಿಎಲ್​​ನಲ್ಲಿ ಸಿಎಸ್​ಕೆ ಮತ್ತು ಧೋನಿ ತಂಡದ 16 ನೇ ವಾರ್ಷಿಕೋತ್ಸವವೂ ಆಗಿತ್ತು. ಏಪ್ರಿಲ್ 19, 2008 ರಂದು ಮೊಹಾಲಿಯ ಪಿಸಿಎ ಕ್ರೀಡಾಂಗಣದಲ್ಲಿ ನಡೆದ ತನ್ನ ಮೊದಲ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಸೂಪರ್ ಕಿಂಗ್ಸ್ 33 ರನ್​​ಗಳಿಂ ಸೋಲಿಸಿತು. 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಧೋನಿ 2 ರನ್ ಗಳಿಸಿ ಜೇಮ್ಸ್ ಹೋಪ್ಸ್ ಅವರನ್ನು ಮುಂದೆ ಸಿಲುಕಿಸಿದರು.

ಎಲ್ಎಸ್​ಜಿ ವಿರುದ್ಧದ ಪಂದ್ಯದಲ್ಲಿ ಧೋನಿ 9 ಎಸೆತಗಳಲ್ಲಿ 2 ಬೌಂಡರಿ ಮತ್ತು ಅಷ್ಟೇ ಸಿಕ್ಸರ್​ಗಳೊಂದಿಗೆ 28 ರನ್ ಗಳಿಸಿ ಔಟಾಗದೆ ಉಳಿದರು. ಸೂಪರ್ ಕಿಂಗ್ಸ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. 18 ನೇ ಓವರ್​ನಲ್ಲಿ ರವಿ ಬಿಷ್ಣೋಯ್ ಮೊಯಿನ್ ಅಲಿಯನ್ನು ಔಟ್ ಮಾಡಿದ ನಂತರ 8 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ 42 ವರ್ಷದ ಧೋನಿ ಪರಿಣಾಮ ಬೀರಿದರು. ಕೆಲವು ಶಕ್ತಿಯುತ ಸ್ಟ್ರೋಕ್​​ಗಳೊಂದಿಗೆ ಇನ್ನಿಂಗ್ಸ್​​ಗೆ ವೇಗ ನೀಡಿದರು.

ಕೊನೆಯ ಓವರ್​ನಲ್ಲಿ ಧೋನಿ ಎಡಗೈ ವೇಗಿ ಮೊಹ್ಸಿನ್ ಖಾನ್ ಅವರ ಮೇಲೆ ದಾಳಿ ನಡೆಸಿದರು. ಡೀಪ್​ ಕವರ್ ಮೂಲಕ ನಾಲ್ಕು ರನ್ ಗಳಿಸಿದರು, ನಂತರ 101 ಮೀಟರ್ ಉದ್ದದ ಬೃಹತ್ ಸಿಕ್ಸರ್ ಬಾರಿಸಿದರು. ಕೊನೆಯ ಓವರ್​ನಲ್ಲಿ ಸಿಎಸ್​ಕೆಗೆ 19 ರನ್ ಗಳಿಸಲು ಅವರು ನೆರವಾದರು.

ಇದನ್ನೂ ಓದಿ: MS Dhoni : ಧೋನಿ ಆಡಲು ಇಳಿದಾಗ ಸ್ಟೇಡಿಯಮ್​ನಲ್ಲಿ ಶಬ್ದ ಮಾಲಿನ್ಯ; ಡಿಕಾಕ್ ಹೆಂಡತಿಯ ಪೋಸ್ಟ್​ ವೈರಲ್​

ಐಪಿಎಲ್​​ನ 20 ನೇ ಓವರ್​ನಲ್ಲಿ ಧೋನಿ ಇದುವರೆಗೆ 65 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇದು ಅವರು ಎಷ್ಟು ಪ್ರಾಬಲ್ಯ ಮತ್ತು ಕ್ರೂರವಾಗಿದ್ದಾರೆ ಎಂಬುದನ್ನು ತೋರಿಸುತ್ತದೆ. ಪ್ರಸ್ತುತ ನಡೆಯುತ್ತಿರುವ ಟಿ 20 ಲೀಗ್​ನಲ್ಲಿ ಧೋನಿ 5 ಇನ್ನಿಂಗ್ಸ್​​ಗಳಿಂದ 255.88 ಸ್ಟ್ರೈಕ್ ರೇಟ್​​ನಲ್ಲಿ 87 ರನ್ ಗಳಿಸಿದ್ದಾರೆ. ಐಪಿಎಲ್​ನಲ್ಲಿ ವಿಕೆಟ್ ಕೀಪರ್ ಆಗಿ 5000 ರನ್ ಪೂರೈಸಿದ್ದಾರೆ.

Continue Reading

ಪ್ರಮುಖ ಸುದ್ದಿ

MS Dhoni : ಧೋನಿ ಆಡಲು ಇಳಿದಾಗ ಸ್ಟೇಡಿಯಮ್​ನಲ್ಲಿ ಶಬ್ದ ಮಾಲಿನ್ಯ; ಡಿಕಾಕ್ ಹೆಂಡತಿಯ ಪೋಸ್ಟ್​ ವೈರಲ್​

MS Dhoni: ಸಶಾ ತನ್ನ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಮ್ಮ ವಾಚ್​​ನ ಚಿತ್ರವನ್ನು ಹಂಚಿಕೊಂಡಿದ್ದು, ತನ್ನ ಸ್ಮಾರ್ಟ್ ವಾಚ್​​ನಲ್ಲಿ ತೋರಿಸಿರುವಂತೆ ಧ್ವನಿ ಮಟ್ಟವು 95 ಡೆಸಿಬಲ್​​ಗಳನ್ನು ದಾಟಿತ್ತು ಎಂದು ಬಹಿರಂಗಪಡಿಸಿದೆ. ಆದಾಗ್ಯೂ, ನಂತರದ ಸಂದೇಶವು ಎಲ್ಲರ ಗಮನ ಸೆಳೆಯಿತು. ಈ ಶಬ್ದದ ಮಟ್ಟದಲ್ಲಿ ಕೇವಲ 10 ನಿಮಿಷಗಳು ಕಳೆದರೆ ತಾತ್ಕಾಲಿಕ ಶ್ರವಣ ದೋಷ ಉಂಟಾಗಬಹುದು ಎಂದು ಸ್ಮಾರ್ಟ್ ವಾಚ್ ಅಲರ್ಟ್​ ನೀಡಿತ್ತು.

VISTARANEWS.COM


on

MS Dhoni
Koo

ಲಖನೌ: ಲಕ್ನೊ ಸೂಪರ್​ ಜೈಂಟ್ಸ್​ ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ನಡುವಿನ ಪಂದ್ಯದ (IPL 2024) ವೇಳೆ ಎಂಎಸ್ ಧೋನಿ (MS Dhoni) ಬ್ಯಾಟಿಂಗ್​ಗೆ ಬಂದಾಗ ಲಕ್ನೋದ ಎಕಾನಾ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಅಬ್ಬರ ಏಕಾಏಕಿ ಜಾಸ್ತಿಯಾಗಿತ್ತು . ಅದು ಎಷ್ಟರ ಮಟ್ಟಿಗೆ ಎಂದರೆ ಆ್ಯಪಲ್​ ವಾಚ್​ ಶಬ್ದ ಮಾಲಿನ್ಯ ಮಿತಿಮೀರಿದೆ ಎಂದು ಅಲರ್ಟ್​ ಕೊಡುವ ತನಕ. ಈ ಮಾಹಿತಿಯನ್ನು ಲಕ್ನೊ ತಂಡದ ವಿಕೆಟ್​ ಕೀಪಿಂಗ್ ಬ್ಯಾಟರ್​ ಕ್ವಿಂಟನ್ ಡಿ ಕಾಕ್ ಅವರ ಪತ್ನಿ ಸಶಾ ಅವರು ಏಪ್ರಿಲ್ 19, ಶುಕ್ರವಾರ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪ್ರಕಟಿಸಿದ್ದಾರೆ. ಧೋನಿ ಸ್ಟೇಡಿಯಮ್​​ಗೆ ಬ್ಯಾಟಿಂಗ್​ಗಾಗಿ ನಡೆದಾಗ ಕ್ರೀಡಾಂಗಣದಲ್ಲಿದ್ದ ಧ್ವನಿ ಮಟ್ಟವನ್ನು ಬಹಿರಂಗಪಡಿಸಿದ್ದಾರೆ.

ಸಶಾ ತನ್ನ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಮ್ಮ ವಾಚ್​​ನ ಚಿತ್ರವನ್ನು ಹಂಚಿಕೊಂಡಿದ್ದು, ತನ್ನ ಸ್ಮಾರ್ಟ್ ವಾಚ್​​ನಲ್ಲಿ ತೋರಿಸಿರುವಂತೆ ಧ್ವನಿ ಮಟ್ಟವು 95 ಡೆಸಿಬಲ್​​ಗಳನ್ನು ದಾಟಿತ್ತು ಎಂದು ಬಹಿರಂಗಪಡಿಸಿದೆ. ಆದಾಗ್ಯೂ, ನಂತರದ ಸಂದೇಶವು ಎಲ್ಲರ ಗಮನ ಸೆಳೆಯಿತು. ಈ ಶಬ್ದದ ಮಟ್ಟದಲ್ಲಿ ಕೇವಲ 10 ನಿಮಿಷಗಳು ಕಳೆದರೆ ತಾತ್ಕಾಲಿಕ ಶ್ರವಣ ದೋಷ ಉಂಟಾಗಬಹುದು ಎಂದು ಸ್ಮಾರ್ಟ್ ವಾಚ್ ಅಲರ್ಟ್​ ನೀಡಿತ್ತು.

ಅಬ್ಬರದ ವಾತಾವರಣ. ಶಬ್ದ ಮಟ್ಟವು 95 ಡೆಸಿಬಲ್ ಗಳನ್ನು ದಾಟಿದೆ. ಈ ಮಟ್ಟದಲ್ಲಿ ಕೇವಲ 10 ನಿಮಿಷಗಳು ತಾತ್ಕಾಲಿಕ ಶ್ರವಣ ನಷ್ಟಕ್ಕೆ ಕಾರಣವಾಗಬಹುದು” ಎಂದು ಸಾಶಾ ಡಿ ಕಾಕ್ ತಮ್ಮ ಸ್ಮಾರ್ಟ್ ವಾಚ್ ನಲ್ಲಿನ ಅಲರ್ಟ್​ ಅನ್ನು ಬಹಿರಂಗ ಮಾಡಿದ್ದಾರ. ಧೋನಿ ಮತ್ತೊಂದು ಸುಂಟರಗಾಳಿ ಸಿಕ್ಸರ್​ಗಳೊಂದಿಗೆ ಏಕಾನಾ ಕ್ರೀಡಾಂಗಣದಲ್ಲಿ ಪ್ರೇಕ್ಷಕರನ್ನು ಸಂಪೂರ್ಣವಾಗಿ ರಂಜಿಸಿದರು.

ಎಲ್ಎಸ್​ಜಿ ಮತ್ತು ಸಿಎಸ್​​ಕೆ ಮುಖಾಮುಖಿಯಲ್ಲಿ ಧೋನಿಯ ಪ್ರದರ್ಶನ ಹೇಗಿತ್ತು?


ಸಿಎಸ್​ಕೆ 17.5 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತ್ತು. ಧೋನಿ ಕೇವಲ 9 ಎಸೆತಗಳಲ್ಲಿ 28 ರನ್ ಗಳಿಸಿ ಪ್ರೇಕ್ಷಕರನ್ನು ರೋಮಾಂಚನಗೊಳಿಸಿದರು. ಸಿಎಸ್​ಕೆ ತಂಡ 176 ರನ್​ ಗಳಿಸಲು ನೆರವಾದರು.

ಸಿಎಸ್​ಕೆ ಸ್ಟಾರ್ ಬೌಂಡರಿ ಮೂಲಕ ಇನಿಂಗ್ಸ್ ಆರಂಭಿಸಿದರು. ನಂತರ ಸಿಕ್ಸರ್ ಮೂಲಕ ರಂಜಿಸಿದರು. ಯಶ್ ಠಾಕೂರ್ ಅವರ ಅಂತಿಮ ಓವರ್​ನಲ್ಲಿ ಧೋನಿ ವಿಕೆಟ್​ಗಳ ನಡುವೆ ಓಡುವುದು ಸಹ ಸಂವೇದನಾಶೀಲವಾಗಿತ್ತು. ನಂತರ ಧೋನಿ 101 ಮೀಟರ್ ಸಿಕ್ಸರ್ ಬಾರಿಸಿ ಪ್ರೇಕ್ಷಕರನ್ನು ತಮ್ಮ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದರು. ಅವರು ತಮ್ಮ ದಿನದ ಕೆಲಸವನ್ನು ಮುಗಿಸಲು ಇನ್ನೂ ಒಂದೆರಡು ಬೌಂಡರಿಗಳನ್ನು ಹೊಡೆಯುತ್ತಿದ್ದರು.

Continue Reading

ಕ್ರೀಡೆ

Impact Player Rule : ಇಂಪ್ಯಾಕ್ಟ್​ ಪ್ಲೇಯರ್​​ ಸಿಕ್ಕಾಪಟ್ಟೆ ವಿರೋಧ; ಇದೀಗ ಋತುರಾಜ್​ ಸರದಿ

Impact Player Rule: ಪ್ರಾಮಾಣಿಕವಾಗಿ ಹೇಳುವುದಾದರೆ, ನಾನು ಇಂಪ್ಯಾಕ್ಟ್ ಪ್ಲೇಯರ್ ನಿಯಮದ ದೊಡ್ಡ ಅಭಿಮಾನಿಯಲ್ಲ. ಇದು ಆಲ್ರೌಂಡರ್​ಗಳನ್ನು ಹಾಳು ಮಾಡಲಿದೆ. ಶಿವಂ ದುಬೆ ಮತ್ತು ವಾಷಿಂಗ್ಟನ್ ಸುಂದರ್ ಅವರಂತಹ ಆಟಗಾರರು ಬೌಲಿಂಗ್ ಮಾಡಲು ಸಿಗುತ್ತಿಲ್ಲ. ಇದು ನಮಗೆ ಒಳ್ಳೆಯದಲ್ಲ. 12 ಆಟಗಾರರು ಇರುವುದರಿಂದ ಇದು ಮನರಂಜನೆಯಷ್ಟೇ ಎಂದು ರೋಹಿತ್ ಹೇಳಿದ್ದರು.

VISTARANEWS.COM


on

Impact Player Rule
Koo

ಲಖನೌ: ಐಪಿಎಲ್​​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮದ (Impact Player Rule) ಅಗತ್ಯವಿದೆಯೇ? ಈ ರೀತಿಯ ಚರ್ಚೆಯೊಂದು ಜೋರಾಗಿ ಹುಟ್ಟಿಕೊಂಡಿದೆ. ಅದಕ್ಕೆ ಹಾಲಿ ಆಟಗಾರರು ಧ್ವನಿಗೂಡಿಸಿದ್ದಾರೆ. ಪಂದ್ಯದ ಯಾವುದೇ ಹಂತದಲ್ಲಿ ಆಟಗಾರನನ್ನು ಬದಲಿ ಆಟಗಾರನನ್ನಾಗಿ ಮಾಡಲು ತಂಡಕ್ಕೆ ಅವಕಾಶ ನೀಡುವ ಹೊಸ ಆವಿಷ್ಕಾರವು ತೀವ್ರವಾಗಿ ಟೀಕೆಗೆ ಒಳಗಾಗಿದೆ. ಮೊದಲು ಅಭಿಮಾನಿಗಳು ಮತ್ತು ತಜ್ಞರು ಈಗಾಗಲೇ ಇದಕ್ಕೆ ವಿರುದ್ಧವಾಗಿದ್ದರು. ಇದೀಗ ಆಟಗಾರರು ಅದನ್ನು ತೀವ್ರವಾಗಿ ವಿರೋಧ ಮಾಡುತ್ತಿದ್ದಾರೆ. ಋತುರಾಜ್​ ಗಾಯಕ್ವಾಡ್​ ಆ ಬಗ್ಗೆ ಧ್ವನಿ ಎತ್ತಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ನಾಯಕ ಋತುರಾಜ್ ಗಾಯಕ್ವಾಡ್ ತಮ್ಮ ತಂಡಕ್ಕೆ ಆರಾಮದಾಯಕ ಸೋಲಿನ ನಂತರ ನಿಯಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ ವಿರುದ್ಧ ಕಠಿಣ ಪಿಚ್​​ನಲ್ಲಿ 176 ರನ್ ಗಳಿಸಿದರೂ, ಸಿಎಸ್​ಕೆ 8 ವಿಕೆಟ್​​ಗಳ ಹೀನಾಯ ಸೋಲನ್ನು ಅನುಭವಿಸಿತು. ಪಂದ್ಯದ ನಂತರ ನೀಡಿದ ಸಂದರ್ಶನದಲ್ಲಿ ರುತುರಾಜ್ ಹೀಗೆ ಹೇಳಿದ್ದಾರೆ:

ಅಷ್ಟೊಂದು ರನ್ ಬಾರಿಸಿದರೂ ಗೆಲುವು ಕಷ್ಟವಾಗುತ್ತಿದೆ. ಇಂಪ್ಯಾಕ್ಟ್ ಸಬ್ ರೂಲ್​ನೊಂದಿಗೆ 10-15 ಅಥವಾ 20 ರನ್​​ಗಳು ಹೆಚ್ಚುವರಿಯಾಗಿ ಬೇಕಾಗುತ್ತವೆ ಎಂದು ಹೇಳಿದ್ದಾರೆ.

ಆಲ್​ರೌಂಡರ್​ಗಳ ಬೆಳವಣಿಗೆಗೆ ಅಡ್ಡಿ

ಋತುರಾಜ್ ಗಾಯಕ್ವಾಡ್ ಕೂಡ ಇಂಪ್ಯಾಕ್ಟ್​ ಪ್ಲೇಯರ್​ನಿಂದ ಆಟದ ಬೆಳವಣಿಗೆಗೆ ಅಡ್ಡಿಯಾಗಿದೆ ಎಂದು ಹೇಳಿದ್ದಾರೆ. ಈ ನಿಯಮದಿಂದಾಗಿ ಆಲ್​ರೌಂಡರ್​ಗಳ ಬೆಳವಣಿಗೆಗೆ ಅಡ್ಡಿಯಾಗುತ್ತದೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಈ ಹಿಂದೆ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಿದ್ದಾರೆ.

ಪ್ರಾಮಾಣಿಕವಾಗಿ ಹೇಳುವುದಾದರೆ, ನಾನು ಇಂಪ್ಯಾಕ್ಟ್ ಪ್ಲೇಯರ್ ನಿಯಮದ ದೊಡ್ಡ ಅಭಿಮಾನಿಯಲ್ಲ. ಇದು ಆಲ್ರೌಂಡರ್​ಗಳನ್ನು ಹಾಳು ಮಾಡಲಿದೆ. ಶಿವಂ ದುಬೆ ಮತ್ತು ವಾಷಿಂಗ್ಟನ್ ಸುಂದರ್ ಅವರಂತಹ ಆಟಗಾರರು ಬೌಲಿಂಗ್ ಮಾಡಲು ಸಿಗುತ್ತಿಲ್ಲ. ಇದು ನಮಗೆ ಒಳ್ಳೆಯದಲ್ಲ. 12 ಆಟಗಾರರು ಇರುವುದರಿಂದ ಇದು ಮನರಂಜನೆಯಷ್ಟೇ ಎಂದು ರೋಹಿತ್ ಹೇಳಿದ್ದರು.

ಇದನ್ನೂ ಓದಿ: KL Rahul : ಐಪಿಎಲ್​ನಲ್ಲಿ ಧೋನಿಯ ದಾಖಲೆಯೊಂದನ್ನು ಮುರಿದ ಕೆ. ಎಲ್ ರಾಹುಲ್​

ವಿಶ್ವದ ಅತ್ಯುತ್ತಮ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ನಿಯಮದ ಬಗ್ಗೆ ಹೆಚ್ಚು ಸಂತೋಷವಾಗಿಲ್ಲ. ಬೌಲರ್ ಆಗಿ, ನಿಯಮವು ಬ್ಯಾಟರ್​​ಗಳಿಗೆ ಹೆಚ್ಚಿನ ನೆರವು ನೀಡುತ್ತದೆ ಎಂದು ಹೇಳಿದ್ದಾರೆ.

“ಸಮಯದ ನಿರ್ಬಂಧಗಳು ಮತ್ತು ಆಟಗಾರರ ನಿಯಮಗಳಿಂದಾಗಿ ಬೌಲರ್​ಗಳಿಗೆ ಕಷ್ಟವಾಗುತ್ತದೆ. ಇದು ಬೌಲರ್​​ಗಲ ಸಂಯಮ ಹಾಳು ಮಾಡಲು ಬ್ಯಾಟರ್​ಗಳಿಗೆ ನೆರವಾಗುತ್ತದೆ. ಈ ನಿಯಮದಿಂದಾಗಿ ಬೌಲರ್ ಶಕ್ತಿ ಅರ್ಧದಷ್ಟು ಇಳಿಯುತ್ತದೆ ಎಂದು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

KL Rahul : ಐಪಿಎಲ್​ನಲ್ಲಿ ಧೋನಿಯ ದಾಖಲೆಯೊಂದನ್ನು ಮುರಿದ ಕೆ. ಎಲ್ ರಾಹುಲ್​

KL Rahul: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವಿನ ನಗೆ ಬೀರಿತು. ಎಲ್ಎಸ್​ಜಿ ನಾಯಕ ಆಕ್ರಮಣಕಾರಿ ಇನ್ನಿಂಗ್ಸ್ ಪ್ರಾರಂಭಿಸಿದರು. ಅವರ 82 ರನ್ ಗಳು ಎಲ್​​ಎಸ್​​ಜಿ ಗೆಲುವಿನಲ್ಲಿ ಪ್ರಮುಖ ಅಂಶವಾಗಿದೆ. ರವೀಂದ್ರ ಜಡೇಜಾ ಅವರ ಅದ್ಭುತ ಕ್ಯಾಚ್​ನಿಂದಾಗಿ ಔಟ್ ಆಗುವ ಮೊದಲು ಅವರು 9 ಬೌಂಡರಿಗಳು ಮತ್ತು 3 ಸಿಕ್ಸರ್​ಗಳನ್ನು ಬಾರಿಸಿದ್ದರು.

VISTARANEWS.COM


on

KL Rahul
Koo

ಲಕ್ನೋ: ಇಲ್ಲಿನ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ. 176 ರನ್​ಗಳ ಗುರಿ ಬೆನ್ನತ್ತಿದ ಕೆ. ಎಲ್​ ರಾಹುಲ್ (KL Rahul) 53 ಎಸೆತಗಳಲ್ಲಿ 82 ರನ್ ಸಿಡಿಸಿ ಔಟಾದರು. ಈ ಮೂಲಕ ಐಪಿಎಲ್​ನಲ್ಲಿ ಹೊಸ ದಾಖಲೆ ಮಾಡಿದರು. ಅವರು ಅತಿ ಹೆಚ್ಚು 50+ ರನ್ ಗಳಿಸಿದ ವಿಕೆಟ್ ಕೀಪರ್ ಆಗಿ ಎಂಎಸ್ ಧೋನಿಯ (MS Dhoni) ದಾಖಲೆಯನ್ನು ಮುರಿದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವಿನ ನಗೆ ಬೀರಿತು. ಎಲ್ಎಸ್​ಜಿ ನಾಯಕ ಆಕ್ರಮಣಕಾರಿ ಇನ್ನಿಂಗ್ಸ್ ಪ್ರಾರಂಭಿಸಿದರು. ಅವರ 82 ರನ್ ಗಳು ಎಲ್​​ಎಸ್​​ಜಿ ಗೆಲುವಿನಲ್ಲಿ ಪ್ರಮುಖ ಅಂಶವಾಗಿದೆ. ರವೀಂದ್ರ ಜಡೇಜಾ ಅವರ ಅದ್ಭುತ ಕ್ಯಾಚ್​ನಿಂದಾಗಿ ಔಟ್ ಆಗುವ ಮೊದಲು ಅವರು 9 ಬೌಂಡರಿಗಳು ಮತ್ತು 3 ಸಿಕ್ಸರ್​ಗಳನ್ನು ಬಾರಿಸಿದ್ದರು.

ಧೋನಿ ಹಿಂದಿಕ್ಕಿದ ರಾಹುಲ್​

ಕೆಎಲ್ ರಾಹುಲ್ ಐಪಿಎಲ್​​ನಲ್ಲಿ ಹೆಚ್ಚು 50+ ಸ್ಕೋರ್​ಗಳನ್ನು ಗಳಿಸಿದ ವಿಕೆಟ್ ಕೀಪರ್ ಆಗಿ ಸಿಎಸ್​ಕೆ ಮಾಜಿ ನಾಯಕನನ್ನು ಹಿಂದಿಕ್ಕಿದರು. ಇದು ಕೆ.ಎಲ್.ರಾಹುಲ್ ಅವರ 25ನೇ ಅರ್ಧಶತಕ. ಧೋನಿ ಈವರೆಗೆ 24 ಅರ್ಧಶತಕಗಳನ್ನು ಬಾರಿಸಿದ್ದಾರೆ. ಕೆಎಲ್ ರಾಹುಲ್ ಅವರ ಆರಂಭಿಕ ಪಾಲುದಾರ ಕ್ವಿಂಟನ್ ಡಿ ಕಾಕ್ 23 50+ ಸ್ಕೋರ್​​ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಐಪಿಎಲ್​​ನಲ್ಲಿ ವಿಕೆಟ್ ಕೀಪರ್ ಆಗಿ ಅತಿ ಹೆಚ್ಚು 50+ ಸ್ಕೋರ್

  • 25- ಕೆಎಲ್ ರಾಹುಲ್
  • 24- ಧೋನಿ
  • 23 – ಡಿ ಕಾಕ್
  • 21 – ಡಿ ಕಾರ್ತಿಕ್
  • 18 – ಉತ್ತಪ್ಪ
  • 17- ರಿಷಭ್ ಪಂತ್
  • 17 – ಸ್ಯಾಮ್ಸನ್
  • 14 – ಸಹಾ
  • 13 – ಗಿಲ್ಕ್ರಿಸ್ಟ್
  • 13 – ಪಾರ್ಥಿವ್
  • 11 – ಇಶಾನ್
  • 10 – ಡಿವಿಲಿಯರ್ಸ್

ಪಂದ್ಯದಲ್ಲಿ ಏನಾಯಿತು?

ಲಖನೌ: ಕೆ. ಎಲ್​. ರಾಹುಲ್​ (82 ರನ್​, 53 ಎಸೆತ, 9 ಫೋರ್, 3 ಸಿಕ್ಸರ್​) ಹಾಗೂ ಕ್ವಿಂಟನ್ ಡಿ ಕಾಕ್​ (54 ರನ್​, 43 ಎಸೆತ, 5 ಫೋರ್​, 1 ಸಿಕ್ಸರ್​) ಜೋಡಿಯ ಅರ್ಧ ಶತಕಗಳ ನೆರವು ಪಡೆದ ಲಕ್ನೊ ಸೂಪರ್ ಜೈಂಟ್ಸ್​ ತಂಡ ಐಪಿಎಲ್​ನ 2024ನೇ (IPL 2024) ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 8 ವಿಕೆಟ್​ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ಸತತ ಎರಡು ಸೋಲುಗಳ ಬಳಿಕ ಗೆಲವಿನ ಟ್ರ್ಯಾಕ್​ಗೆ ಮರಳಿದೆ. ಲಕ್ನೊ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಆಡಿದ ಏಳು ಪಂದ್ಯಗಳಲ್ಲಿ ನಾಲ್ಕನೇ ಗೆಲುವಾಗಿದೆ. ಅತ್ತ ಚೆನ್ನೈ ತಂಡ ಆಡಿರುವ ಏಳರಲ್ಲಿ ಮೂರನೇ ಸೋಲಿಗೆ ಒಳಗಾಯಿತು.

ಇದನ್ನೂ ಓದಿ: IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

ಇಲ್ಲಿನ ಭಾರತ ರತ್ನ ಶ್ರೀ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಮಾಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ಆರಂಭಿಕ ವಿಕೆಟ್​ಗಳ ನಷ್ಟದ ಹೊರತಾಗಿಯೂ ಕೊನೇ ಹಂತದಲ್ಲಿ ಉತ್ತಮವಾಗಿ ಆಡಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 176 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಲಕ್ನೊ ತಂಡ 19 ಓವರ್​ಗಳಲ್ಲಿ 2ವಿಕೆಟ್ ನಷ್ಟಕ್ಕೆ 180 ರನ್​ ಬಾರಿಸಿ ಗೆಲುವು ಸಾಧಿಸಿತು.

ಇಲ್ಲಿನ ಭಾರತ ರತ್ನ ಶ್ರೀ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಮಾಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ಆರಂಭಿಕ ವಿಕೆಟ್​ಗಳ ನಷ್ಟದ ಹೊರತಾಗಿಯೂ ಕೊನೇ ಹಂತದಲ್ಲಿ ಉತ್ತಮವಾಗಿ ಆಡಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 176 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಲಕ್ನೊ ತಂಡ 19 ಓವರ್​ಗಳಲ್ಲಿ 2ವಿಕೆಟ್ ನಷ್ಟಕ್ಕೆ 180 ರನ್​ ಬಾರಿಸಿ ಗೆಲುವು ಸಾಧಿಸಿತು.

ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿತು. ಅಜಿಂಕ್ಯ ರಹಾನೆ 36 ರನ್ ಬಾರಿಸಿದ ಹೊರತಾಗಿಯೂ ರಚಿನ್ ರವಿಂದ್ರ ಶೂನ್ಯಕ್ಕೆ ನಿರ್ಗಮಿಸಿದರು. ನಾಯಕ ಋತುರಾಜ್​ 17 ರನ್​ಗೆ ಸೀಮಿತಗೊಂಡರು. ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ರವಿಂದ್ರ ಜಡೇಜಾ ನಿಧಾನವಾಗಿ ಇನಿಂಗ್ಸ್ ಕಟ್ಟಿದರು. ಅವರು 40 ಎಸೆತ ಬಳಸಿಕೊಂಡು 57 ರನ್ ಬಾರಿಸಿ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು. ಚೆನ್ನೈತಂಡದ ಆಪತ್ಬಾಂಧವ ಶಿವಂ ದುಬೆ 3 ರನ್​ಗೆ ಸೀಮಿತಗೊಂಡರೆ ರಿಜ್ವಿ ಕೇವಲ 1 ರನ್​ಗೆ ಔಟಾದರು. 90 ರನ್​ಗೆ 5 ವಿಕೆಟ್​ ಕಳೆದುಕೊಂಡ ಚೆನ್ನೈಗೆ ಕೊನೆಯಲ್ಲಿ ಮೊಯಿನ್ ಅಲಿ 30 ರನ್​ ಹಾಗೂ ಮಹೇಂದ್ರ ಸಿಂಗ್ ಧೋನಿ 28 ರನ್ ಬಾರಿಸಿದರು.

Continue Reading
Advertisement
Neha Murder Case
ಹುಬ್ಬಳ್ಳಿ26 mins ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Lok sabha election-2024
Latest38 mins ago

Lok sabha election-2024: ಶತಾಯುಷಿಗಳೇ ಚುನಾವಣೆಯ ಬ್ರಾಂಡ್​ ಅಂಬಾಸಿಡರ್​ಗಳು!

Viral Video
ದೇಶ41 mins ago

Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!

AC Helmet
ದೇಶ47 mins ago

AC Helmet: ಬೇಸಿಗೆ ಎಫೆಕ್ಟ್​​; ಟ್ರಾಫಿಕ್ ಪೊಲೀಸರ ಹೆಲ್ಮೆಟ್​ಗೆ ಎಸಿ!

Tarak Ponnappa out of udho udho sri renuka yellamma serial
ಕಿರುತೆರೆ50 mins ago

Tarak Ponnappa: ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ಧಾರಾವಾಹಿಗೆ ವಿದಾಯ ಹೇಳಿದ ʻಕೆಜಿಎಫ್‌ʼ ಖ್ಯಾತಿಯ ನಟ!

electoral Bond
ಪ್ರಮುಖ ಸುದ್ದಿ1 hour ago

Electoral Bond : ಎನ್​ಡಿಎ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್​ ವ್ಯವಸ್ಥೆ ಮರುಜಾರಿ; ನಿರ್ಮಲಾ ಸೀತಾರಾಮನ್​

boat capsizes in bhatkal
ಉತ್ತರ ಕನ್ನಡ1 hour ago

Boat Capsizes: ಭಾರೀ ಗಾಳಿ ಮಳೆಗೆ ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ, ನಾಲ್ವರ ರಕ್ಷಣೆ; ಇಲ್ಲಿದೆ ವಿಡಿಯೋ

Mahesh Babu SS Rajamouli return from Dubai
South Cinema2 hours ago

Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

MS Dhoni
ಪ್ರಮುಖ ಸುದ್ದಿ2 hours ago

MS Dhoni : ಸಿಎಸ್​ಕೆ ವಾರ್ಷಿಕೋತ್ಸವದಂದೇ 101 ಮೀಟರ್ ಸಿಕ್ಸರ್ ಬಾರಿಸಿದ ಧೋನಿ!

Modi In Karnataka
ಪ್ರಮುಖ ಸುದ್ದಿ2 hours ago

PM Narendra Modi: ಬೆಂಗಳೂರಿನಲ್ಲಿ ಇಂದು ಮೋದಿ; ಸಂಚಾರಕ್ಕೆ ಪರ್ಯಾಯ ರಸ್ತೆಗಳ ಸೂಚನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ26 mins ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ20 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

ಟ್ರೆಂಡಿಂಗ್‌